ಮಹಿಳೆ

ಮಹಿಳೆ

ನಾನು ಹೆಣ್ಣೆಂಬ ಹೆಮ್ಮೆ ನನಗಿದೆ! ಐಶ್ವರ್ಯ .ಎಲ್ ನಾನೊಂದು ಹೆಣ್ಣಾಗಿ ಈ ವಿಷಯದ ಬಗ್ಗೆ ಬರೆಯೋಕೆ ನನಗ್ಯಾವ ಮುಜುಗರವಾಗ್ಲಿ, ಅವಮಾನವಾಗ್ಲಿ‌ ಇಲ್ಲ. ಬದಲಾಗಿ ನಾನೊಬ್ಬ ಹೆಣ್ಣೆಂಬ ಹೆಮ್ಮೆ ನನಗಿದೆ. ನೀವೆಲ್ಲ ಅನ್ಕೊಬಹುದು ಇದೇನು ಜಗಜ್ಜಾಹೀರು ಮಾಡೊ ವಿಷಯಾನ ಅಂತ ಆದ್ರೆ ಜಗತ್ತಿನ ಅದೆಷ್ಟೊ ಜೀವಗಳಿಗೆ ಗೊತ್ತಿಲ್ಲ ಹೆಣ್ತನದ ನಿಗೂಢತೆ, ನೋವುಗಳ ಬಗ್ಗೆ. ಕಂಬಳಿ ಹುಳುವದು ರೆಕ್ಕೆ ಕಟ್ಟುವ ಕಾಲದಂತೆ ಮೊಣಕಾಲಿನವರೆಗೂ ಲಂಗವೆತ್ತಿ ಕುಂಟೆಬಿಲ್ಲೆ ಆಡುತ್ತಿದ್ದವಳಿಗೆ ಹಿಂದೆಂದೂ ಆಗದಂತ ಕಿಬ್ಬೊಟ್ಟೆಯ ಬಾಧ, ಅಲ್ಲಿಂದಲೇ ಶುರುವಾಯ್ತೆನೋ ಹೆಣ್ಣೊಬ್ಬಳ ದೈಹಿಕ ಹೋರಾಟ, […]

ಮಕ್ಕಳ ಸಾಹಿತ್ಯ

ಆಯ್ಕೆ ಅವ್ಯಕ್ತ ನನ್ನಹೆಚ್ಚಿನ ಸಮಯವನ್ನು ನಾನು ಮಕ್ಕಳೊಂದಿಗೆ ಕಳೆಯುತ್ತಿರುವುದು.ಅವರೊಂದಿಗೆ ಆದ ಅನುಭವಗಳನ್ನು ಸಣ್ಣ ಸಣ್ಣ ಕಥೆಗಳ ಮೂಲಕ ಬರೆಯುತ್ತೇನೆ. ಅಂತ ಕಥೆಗಳಲ್ಲಿ ಇದೂ ಒಂದು) ಆಯ್ಕೆ ಒಳಗೆ ತಲೆಯಾಡಿಸುತ್ತಾ ನಡೆದು ಬಂದ್ಲು. ನಾನು ನೋಡಿ ಮುಗುಳ್ನಗೆ ಬೀರಿದೆ. ಜ್ವಾಲಾಮುಖಿ ಬಚ್ಚಿಟ್ಟಿದ್ದಂತೆ“ನಾನು ಅವರನ್ನೆಲ್ಲ ದ್ವೇಷಿಸುತ್ತೇನೆ”, “ಇನ್ಯಾವತ್ತೂ ಅವರೊಂದಿಗೆ ಮಾತಾಡೋದಿಲ್ಲ”. ನಾನು ತಾಳ್ಮೆಯಿಂದ “ಏನಾಯ್ತೆ ನನ್ ರಾಣಿ?”. ಅಂತ ಕೇಳ್ದೆ. ನನ್ನ ಪ್ರಶ್ನೆಗೆ ಕಾಯ್ತಿದ್ಲೆನೋಅನ್ನೋ ಹಾಗೆ“ನನಗೆ ನೋವಾಗಿದೆ, ನನ್ನ ಆಡ್ಕೋತಾರೆ,ನನ್ನ ನೋಡಿ ನಗ್ತಾರೆ,ನಾನು…. ನನ್ನ…. ನನಗೆ…”ನಿಲ್ಲೋಮಾತೇ ಇಲ್ಲ ! ನಾನುಸ್ವರ […]

ಕಾಡುವ ಹಾಡು!

ಒಲವೇ ಜೀವನ ಸಾಕ್ಷಾತ್ಕಾರ ಸುಜಾತ ರವೀಶ್ ಒಲವೇ ಜೀವನ ಸಾಕ್ಷಾತ್ಕಾರ ಒಲವೇ ಮರೆಯದ ಮಮಕಾರ ಚಿತ್ರ ಸಾಕ್ಷಾತ್ಕಾರ (೧೯೭೧) ಅಭಿನಯ ರಾಜಕುಮಾರ್ ಜಮುನಾ ಪೃಥ್ವಿರಾಜ್ ಕಪೂರ್ ಸಾಹಿತ್ಯ ಕೆ ಪ್ರಭಾಕರ ಶಾಸ್ತ್ರಿ ಸಂಗೀತ ಎಂ ರಂಗರಾವ್ . ಚಿತ್ರದ ನಾಯಕ ನಾಯಕಿ ಇನ್ನೇನು ಮದುವೆಯಾಗಲಿರುವವರು. ಅವರ ಮನದ ತುಂಬಾ ಪ್ರೀತಿಯ ಕನಸು ತುಂಬಿರುತ್ತದೆ. ಕಂಡದ್ದೆಲ್ಲ ಪ್ರೇಮದ ಪ್ರತಿರೂಪ ಆಗಿರುತ್ತದೆ .ಅಂತಹ ಸಂದರ್ಭದಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡು ಕನ್ನಡದ ಚಿತ್ರ ರಸಿಕರ ಮನಸೂರೆಗೊಂಡಿದ್ದು ಆಶ್ಚರ್ಯವಲ್ಲ. ಪ್ರೇಮಿಗಳ ಪಾಲಿನ ಅಮರ […]

ಕಾವ್ಯಯಾನ

ಬದುಕೆಂಬ ವಂಚಕ! ಸೌಜನ್ಯ ದತ್ತರಾಜ ಪರಿಚಿತರಾಗುತ್ತಾ ಆಗುತ್ತಾ ಪರಕೀಯತೆಯ ಭಾವವೇ ಹೆಚ್ಚಾಗಿ ಆಗೀಗ ಪೆಚ್ಚಾಗಿ ಕಾಡುತಿದೆ ಹತ್ತಿರವಾದಷ್ಟೂ ಒಬ್ಬರನೊಬ್ಬರು ದೂರುತ್ತಲೇ ದೂರವಾಗುತ್ತಿರುವ ವಿಪರ್ಯಾಸ ವಿಚಲಿತರನ್ನಾಗಿಸುತಿದೆ ಏಕೆ…. ಏನಾಯ್ತು……ಹೇಗಾಯ್ತು ಪ್ರಶ್ನಿಸಿಕೊಳ್ಳಲೇ ಭಯವಾಗುತ್ತಿದೆ ಅನುಮಾನದ ಹೆಡೆಯೊಂದು ಸದ್ದಿಲ್ಲದೆ ಆಗಾಗ ತಲೆಯೆತ್ತುತಿದೆ ಆಡಬಾರದ ಹೇಳಬಾರದ ಮಾತುಗಳನೆಲ್ಲಾ ಆಡುವ ಬಾಯಿ ಇತ್ತೀಚೆಗೆ ಇಬ್ಬದಿಯಲೂ ಬಿಗಿಯುವ ಇಕ್ಕಳದಂತಾಗಿದೆ ಇರಿಯುತ್ತಲಿದೆ ಮನದಲೊಂದು ಮುಗಿಯದ ಭಾವ ಹೊಂದಾಣಿಕೆ ಆಗದ ಸ್ವಭಾವ ಒಗ್ಗಿಕೊಳ್ಳಲಾರದೆ ಒದ್ದಾಡುತಿರುವ ಜೀವ ಪ್ರೀತಿ ಸ್ನೇಹಗಳ ಹೆಸರಲ್ಲಿ ಪ್ರತಿದಿನವೂ ನಡೆಯುತಿವೆ ಹೊಸ ಹೊಸ ನಾಟಕ ಗೆಲ್ಲುವುದು […]

ಕಾವ್ಯಯಾನ

ನಮ್ಮಳಗೊಬ್ಬ ಸಂತೆಬೆನ್ನೂರು ಫೈಜ್ನಟ್ರಾಜ್ ಮನಸಲ್ಲಿ ಕೋಟಿ ಕೋಟಿ ಯುದ್ಧ  ಸಾಮಗ್ರಿಗಳನ್ನು ಹೊತ್ತು ಕಡಲ ದಡದಿ ನೆಮ್ಮದಿ ಹುಡುಕ್ತಿದ್ದ! * ಎದುರಿಗೇ ಎಲ್ಲಾ ಐತೆ ಏನೋ ಮಿಸ್ಸಾಗಿದೆ ಅಂತ ಎದ್ದು ನಡೆದ ಇದ್ದುದನ್ನ ಬಿಟ್ಟು! * ಕಣ್ಣೆದುರು ಇದ್ರೆ ಕಣ್ ಕೆಂಪು..ಉರಿ ಉರಿ ಮರೆಯಾದ್ರೆ ಕಳ್ಕಂಡೋರ ತರ ಅಂಡ್ ಸುಟ್ ಬೆಕ್ಕು! * ಹಾಡ್ತಾನೆ,ಕುಣಿತಾನೆ,ನಗ್ತಾನೆ,ಅಳ್ತನೆ ಎಲ್ಲಾ ಸರಿ ಮತ್ ಎದುರಿರೋ ಬಳಿ ಏನೈತ್ರಿ ಈ ಬಾಳ್ನಾಗೆ….ರಾಗ * ನಾಯಿ ಬಾಲ ನೇರ ಮಾಡಬಹುದಂತೆ ಹೆಂಗೋ ನಮ್ಮೊಳಗಿದ್ದಾನಲ್ಲಾ ಅವನ್ನ ಊಹ್ಞುಂ….ಗುಂಡ್ಕಲ್ಲದು!!

ಶಾನಿಯ ಡೆಸ್ಕಿನಿಂದ…….

ನನ್ನ ಬಾಲ್ಯದ ದೀಪಾವಳಿ ಚಂದ್ರಾವತಿ ಬಡ್ಡಡ್ಕ ನನ್ನ ಪ್ರೀತಿಯ ನಿಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಶುಭ ಆಶಯಗಳು. ತಮ್ಮೆಲ್ಲರ ಬದುಕಲ್ಲಿ ನೆಮ್ಮದಿ, ಸುಖ-ಸಂತೋಷ ಸಮೃದ್ಧಿಗಳು ದೀಪಗಳ ಆವಳಿಯಂತೆ ಬೆಳಗಲಿ.) ಒಂದು ತಿಂಗಳ ಮುಂಚಿತವಾಗಿ ಬಾಳೆ ರೆಂಬೆಗಳನ್ನು ಒಣಹಾಕುವಲ್ಲಿಂದ ಆರಂಭವಾಗುತ್ತಿತ್ತು ದೀಪಾವಳಿ ತಯ್ಯಾರಿ. ಅದಾದ ಬಳಿಕ ಕಾಡುಮೇಡು ಅಲೆದು ಎಲ್ಲಿ ಯಾವ ಹೂವು ಅರಳಿದೆ, ಹೂವಿನಂದದ ಬಳ್ಳಿ ಹೊರಳಿದೆ ಎಂಬ ಹುಡುಕಾಟ. ಇವೆಲ್ಲವನ್ನು ಮನಸ್ಸಿನಲ್ಲೇ ಗಟ್ಟಿ ಮಾಡಿಕೊಂಡು ಬಲಿಯೇಂದ್ರನನ್ನು ಹೇಗೆ ಸಿಂಗಾರಮಾಡಬೇಕು ಎಂಬ ವಾದ-ವಿವಾದ, ವಾಗ್ವಾದೊಂದಿಗೆ ಆಗಿನ ನಮ್ಮ ಬಹುದೊಡ್ಡ […]

ಭಾಷೆ

ಕನ್ನಡದ ಕಲಿಸುವಿಕೆಯ ಒಂದು ಅನುಭವ ದಾಕ್ಷಾಯಣಿ ನಾಗರಾಜ್            ಭಾಷೆಯೂ ಮಾನವನಿಗೆ ಒದಗಿಬಂದ ಅತ್ಯಾದ್ಭುತವಾದ ಶಕ್ತಿಯಾಗಿದೆ.ಅದನ್ನು ಬಳಸಿ ರೂಢಿಸಿಕೊಂಡು ಸಿದ್ದಿಸಿದರೆ ಅದು ಮಾಂತ್ರಿಕ ಶಕ್ತಿಯಾಗಿ ಪರಿವರ್ತಿನೆಯಾಗಿ ಅವನಿಗೆ ಜೀವಂತಿಕೆಯನ್ನು ತಂದುಕೊಡುತ್ತದೆ. ಭಾಷಾ ಕಲಿಕೆಯನ್ನು ಕಲಿಸುವ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಶಿಕ್ಷಕನು ಮಹತ್ವದ ಪಾತ್ರ ನಿರ್ವಹಿಸಬೇಕಾಗುತ್ತದೆ.          ಮಗುವಿನ ಸರ್ವತೋಮುಖ ಬೆಳೆವಣಿಗೆಯಲ್ಲಿ ಮಾತೃಭಾಷೆಯ ಪಾತ್ರ ಮುಖ್ಯವಾಗಿದೆ. ಆದ್ದರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡಬೇಕು.            ಮಗು,ಮನೆ ,ಪರಿಸರ ,ಕೌಟುಂಬಿಕ ಸದಸ್ಯರು, ಸಹಪಾಠಿಗಳು ಸಮಾಜದ ಇತರರೊಂದಿಗೆ ಎಳವೆಯಿಂದಲೇ ಹಲವಾರು ಭಾಷಿಕ ಸಾಮರ್ಥಗಳನ್ನು […]

ಪಸ್ತಕ ಲೋಕ

ಕೃತಿ: ಹಾಣಾದಿ(ಕಾದಂಬರಿ ಲೇಖಕರು: ಕಪಿಲ ಪಿ.ಹುಮನಾಬಾದ್ ದೀಪಾಜಿ “ಹಾಣಾದಿ‌‌‌‌” ಕಾದಂಬರಿ ಒಬ್ಬ ಅದ್ಭುತ ಕಲಾಕಾರನ ಕೈಚಳಕದ ಪ್ರತೀಕದಂತಿದೆ. ಹಾಣಾದಿಯ ಹಾದಿಯಲ್ಲಿ ನಡೆಯುವ ಪ್ರತಿ ಸಂಗತಿಯು ಇಲ್ಲೆ ಓದುಗನೆದುರಲ್ಲೆ ಜರುಗುತ್ತಿರುವಂತೆ ಗೋಚರಿಸುತ್ತವೆ. ಅದಕ್ಕೆ ಕಾರಣ ಕಥೆಗಾರನ ತೂಕದ ಶಬ್ಧಗಳು ಹಾಗೂ ಆ ಶಬ್ದಗಳನ್ನು ಹಂದರದಂತೆ ಅಚ್ಚುಕಟ್ಟಾಗಿ ಹೊಂದಿಸಿದ ಕಲ್ಪಾನಾ ಶಕ್ತಿ. ಜೊತೆಗೆ ಉತ್ತರ ಕರ್ನಾಟಕದ ಕಿರೀಟ‌ ಬೀದರದ ಮೆದು ಹೃದಯದ ಗಂಡು ಭಾಷೆ.     ಕಥೆ ಓದುತ್ತ ಹೋದಂತೆ ಉಪಮೇಯಗಳು ಎದುರಾಗುತ್ತವೆ . “ಚಂದ್ರನಿಗೆ ಒದ್ದು ಸೂರ್ಯ ಹುಟ್ಟಲೇಬಾರದು […]

ಕಾವ್ಯಯಾನ

ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ ಕೊಡಲು ಕಲಿಸಿದೆಕೇಳಿ ನಗುವಿನ ಆಮಂತ್ರಣಸಪ್ಪೆಯಾದರೂ ನಟಿಸಿದೆನಿರಾಳವಾಗಲು ನಿನ್ನ ಮೈಮನ ಹೇಳಿ ಹೋಗದ್ದಿದರೆಚೆಂದವಿತ್ತು ಏನೋ ಕಾರಣತಿಳಿ ಹೇಳಿ ರಮಿಸಿದ ಪರಿಬಿಗಿಗೊಳಿಸಿತು ಭಾವ ಬಂಧನ ಬಿಟ್ಟು ಕೊಡದ ಪ್ರೀತಿಪಡೆಯಲಾಗದ ಬದುಕುಧಿಕ್ಕಾರ ಕಿರುಚಲು ನನ್ನೊಳಗೆನನಗೆ ನಿರಂತರ ಕುಟುಕು ಇಡಿ ಸಾಗರದ ಉಪ್ಪುತೆವಳಿಯೇ ಹಿಂದಿಕ್ಕುತ್ತೆ ನೋವಿನಾಳದಲ್ಲಿತಡೆತಡೆದು ಬಿಕ್ಕಿ ಜಾರುವಹನಿ ಹನಿ ನೀರಲ್ಲಿ ಬಿಟ್ಟು ಹೋಗುವ ಮುನ್ನಪ್ರೇಮದ ನಿನಾದಗರಿಗೆದರಿ ತಬ್ಬಿ ಅಲವತ್ತಿತುನೆನೆದು ತವಕಿಸಿ […]

ಕಾವ್ಯಯಾನ

ಸೊಡರು ಚಂದ್ರಪ್ರಭ .ಬಿ. ಚೆಂಗುಲಾಬಿ ಮೊಗದವಳೆ ದಾಸವಾಳದ ವರ್ಣದಲಿ ಅದ್ದಿ ಬಂದವಳೆ…ಸಖಿ ಅನುಪಮ..ಅಪಾರ ನಿನ್ನ ಮಮತೆ..ಹೃದಯವಂತಿಕೆ..! ಹಲವು ಮೈಲುಗಲ್ಲುಗಳಿಗೆ ಸಾಕ್ಷಿ ನಿನ್ನ ನಿರ್ಗಮನ ಅಂಚಿನತ್ತ ದೌಡಾಯಿಸುತ್ತಿರುವ ವೃತ್ತಿ ಮೈಕೊಡವಿ ಮೇಲೇಳುತ್ತಿರುವ ಪ್ರವೃತ್ತಿ ಏನೆಲ್ಲಕೆ ತೆರೆದುಕೊಳುವಾಸೆಗೆ ಬಲಿತ ರೆಕ್ಕೆ ನೀ ಹೊತ್ತು ತರುತ್ತಿದ್ದ ವೇದನೆ ಈಗ ಕಾಡುತ್ತಿದೆ ಮಧುರ ನೆನಪಾಗಿ! ಅಜ್ಜಿ ಅವ್ವನ ಕಾಲದಲಿ ಅರವತ್ತರ ವರೆಗೂ ಜತೆಯಾದವಳು ನೀ ಅವರ ಹಿಂದೆ ಹಿಂದೆ ನಾ… ನನ್ನ ಹಿಂದಿನವರಿಗೆ ನಲವತ್ತಕ್ಕೇ ಕೈ ಬೀಸಿ ವಿದಾಯ ಹೇಳುತಿರುವೆಯಲ್ಲೇ? ಮೂವ್ವತ್ತರ ಬಳಿಕ […]

Back To Top