ಅಮ್ಮನ ದಿನಕ್ಕೊಂದು ಕವಿತೆ

ಅಮ್ಮನ ದಿನಕ್ಕೊಂದು ಕವಿತೆ

ಅಮ್ಮನ ದಿನಕ್ಕೊಂದು ಕವಿತೆ ವಿಜಯಲಕ್ಷ್ಮಿ ಕೊಟಗಿ ಮುಸ್ಸಂಜೆ ಹೊತ್ತಿನ್ಯಾಗ ದೀಗಿ ಮುಡಿಸಿ ಒಲೆಯೊಳ್ಗ ಬೆಂಕಿ ಹೊತ್ಸಿಕೈ ಚಾಚಾಳ ಅವ್ವ ಮೈ ಚಾಚಾಳಹಡ್ದು ಬ್ಯಾನಿ ಅಪ್ಪನ ಗ್ಯಾನಅದೆಲ್ಲಿ ಕುಡಿದು ಬಿದ್ದಾನೋ?ಗಳಿಗಳಿಗೀ ನಿಟ್ಟುಸಿರಿಗೆಬೂದ್ಯಾಗಿನ ಕೆಂಡ ನಿಗಿನಿಗಿಆಕಿ ಮನಸಿನ ತುಂಬಾ ದಟ್ಟ ಹೊಗಿ,ಬಡವ್ರಿಗೆ ಹೊಟ್ಟಿ ಯಾಕ ಕೊಟ್ಟಾನೋ ಶಿವ?ಹಸ್ದು ತೆಕ್ಕಿ ಬಡ್ದು ಅಳಾಮಕ್ಕಳ್ನ ರಮ್ಸಿಹೊಟ್ಟಿ ಸಂಕ್ಟಾನ ಹೊಟ್ಯಾಗ ಒತ್ತಿಮಜಾಕಟಾ ತೋರಿಸ್ತೀನಂತಸ್ವಾರಾಗ ನೀರು ತುಂಬಿಚಂದ್ರಮನ ಬಿಂಬ ತೋರಿಸಿದ್ರಯವ್ವಾ! ನೀರಿನ್ಯಾಗ ರೊಟ್ಟಿ ನಂದಿತಬೇಅಂತ ಆಸೆಗಣ್ಣಿಲೇ ನೋಡಕತ್ಯಾವುಕರುಳಿಗೆ ಕಳ್ಳಿ ಬಡ್ದುದೊಡ್ಡ ದೊಡ್ಡ ಗುಳ್ಳಿಯಾಗೆವುಹಿರೇಮಗಳು ಮೈನೆರ್ತಾಳಸಾಣದು ಮಲಿ […]

ಅಮ್ಮ….

ಅಮ್ಮಂದಿರ ದಿನದ ವಿಶೇಷ ಕವಿತೆ ಅಕ್ಷತಾ ಜಗದೀಶ ನೋವಿನಲ್ಲು ನಗುವ ಚೆಲ್ಲುವವಳು..ತಾನು ಹಸಿದು ಕೈ ತುತ್ತು‌ ನೀಡುವವಳುಎಷ್ಟೇ ಕಷ್ಟಗಳಿದ್ದರು,ಎಷ್ಟೇ ದು:ಖವಿದ್ದರುತನ್ನ ಮಗುವಿಗಾಗಿ ಕೇವಲಸುಖವನ್ನೇ ಬಯಸಿದವಳು… ತನ್ನ ನೋವಿನ ದಿನಗಳನುತನ್ನಲ್ಲಿಯೇ ಕೊನೆಗಾಣಿಸಿತನ್ನ ಕರುಳಿನ ಕುಡಿಗಾಗಿಹೂವಿನ ಹಾಸಿಗೆ ನಿರ್ಮಿಸಿದವಳು..ಮುಳ್ಳುಗಳೇ ಕಾಲಿಗೆ ಚುಚ್ಚಿದರುಕಣ್ಣಿರ ಹನಿ ಮಗುವಿಗೆ ತಾಗದಂತೆಎಚ್ಚರಿಕೆ ವಹಿಸಿದವಳು.. ಮಗುವಿನ ಅಳುವಿನಲ್ಲಿ ತಾ ಅತ್ತಳುಕಂದನ ನಗುವಿನಲ್ಲಿ ತಾ ನಲಿಡಾಡಿದಳುಅಮ್ಮ ಎಂಬ ಒಂದು ನುಡಿಯ ಕೇಳಿತನ್ನೇಲ್ಲ ನೋವನ್ನು ಮರೆತಳು.. ವಿಶಾಲವಾದ ಕಡಲಿನ ಹಾಗೆ ಅಮ್ಮನಿನ್ನ ಮಮತೆ….ಅಮ್ಮ ಎಂಬ ಪದಕ್ಕೆ ಅಮ್ಮನೇ ಸಾಟಿನಮನ ನಿನ್ನ […]

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-9 ಮಡ್ ವೊಲ್ಕೆನೊ, ಭೂಮಿಯ ಅಡಿಯಲ್ಲಿ ಕೆಲವು ರಾಸಾಯನಿಕಗಳು ಕೊಳೆತು ಉಂಟಾದ ಗ್ಯಾಸ್ ನಿಂದಾಗಿ ಭೂಮಿಯನ್ನು ಬಿರಿದು ಕೆಸರು ಮೇಲಕ್ಕೆ ಚಿಮ್ಮುತ್ತದೆ. ಭೂಮಿಯ ತಳದಿಂದ ಕಲ್ಲಿನ ಚೂರುಗಳು, ಮರಳುಗಲ್ಲುಗಳು, ಸಮುದ್ರದ ಕೆಸರು, ಕೆಂಪು ಮತ್ತು ಹಸಿರು ಬಣ್ಣದ ಕಲ್ಲುಗಳು ಚಿಮ್ಮಿ ಮೇಲೆ ಬಂದು ಹರಿಯುತ್ತವೆ. ಬಿಸಿಯಾದ ಕೆಸರು ಹರಿದು ಬಂದು ನೋಡಲು ಸಿಮೆಂಟಿನಂತ ರಾಡಿಯಾಗಿ ನಿಂತಿತ್ತು. ಕೆಸರಿನ ಬುದ್ಬುದಗಳು, ನೀರ್ಗುಳ್ಳೆಗಳು […]

ಕನಸ ಬಿತ್ತಿರಿ..

ಕವಿತೆ ಕನಸ ಬಿತ್ತಿರಿ.. ಚೈತ್ರ ತಿಪ್ಪೇಸ್ವಾಮಿ ಮಕ್ಕಳಲ್ಲಿ ರೈತನಾಗಬೇಕೆಂಬ ಕನಸ ಬಿತ್ತಿರಿ….ರೈತನಿಂದ ದೇಶದ ಪ್ರಗತಿ ಎಂದುಅಚ್ಚೊತ್ತಿರಿಆಧುನಿಕ ತಂತ್ರಜ್ಞಾನದ ಕೃಷಿ ಮಾಡಲು ಮಕ್ಕಳ ಪ್ರೇರೇಪಿಸಿರಿ…. ಇರುವ ಜಾಗದಲ್ಲಿ ಹೂವು ಹಣ್ಣು ಕಾಯಿ ಪಲ್ಯ ಬೆಳೆಯುವುದಾ ಕಲಿಸಿರಿ..ರಾಸಾಯನಿಕ ತ್ಯಜಿಸಿ ಸಾವಯವ ಬಳಸಿಮಾದರಿ ರೈತನಾಗಲು ಅವಕಾಶ ಕೊಡಿ.. ಬರಿ ಡಾಕ್ಟರ್ ಇಂಜಿನಿಯರ್ ಒತ್ತಾಯ ಬಿಡಿಕೃಷಿ ಕೈಗೊಳ್ಳಲು ಒತ್ತಾಸೆ ನೀಡಿಕೆಲಸಕ್ಕಾಗಿ ನಗರದ ವಲಸೆ ತಡೆಯಿರಿಇಲ್ಲೆ ಇದೆ ಕೃಷಿ ಕಾಯಕ ತೋರಿಸಿರಿ ಸೂಟು-ಬೂಟು ಕೊಟ್ಟರಷ್ಟೇ ಬದುಕೇ?ಪಂಚೆಯುಟ್ಟು ನೇಗಿಲು ಹಿಡಿದು ಉತ್ತಿ ಬಿತ್ತಿಬೆಳೆಯುವ ಸಂಸ್ಕೃತಿ ನಮ್ಮದಲ್ಲವೇ? […]

ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23

ಆತ್ಮಾನುಸಂಧಾನ

ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ…

ಧರೆ ಹತ್ತಿ ಉರಿದೊಡೆ

ಲೇಖನ ಧರೆ ಹತ್ತಿ ಉರಿದೊಡೆ ಜಯಶ್ರೀ.ಜೆ.ಅಬ್ಬಿಗೇರಿ ರಾತ್ರಿ ಹನ್ನೆರಡು ಹೊಡೆದರೂ ಹಾಡು ಹಗಲಿನಂತೆ ಕಿಕ್ಕಿರಿದು ಜನ ತುಂಬಿರುತ್ತಿದ್ದ ಬೀದಿಗಳೆಲ್ಲ ಬಿಕೋ ಎನ್ನುತ್ತಿವೆ. ಸಂಖ್ಯೆಗೆ ಸಿಗದಷ್ಟು ದೇಹಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಉರಿದು ಹೋಗುತ್ತಿವೆ.ಇದೊಂಥರ  ಮರದಲ್ಲಿನ ಹಣ್ಣು ಉದುರಿ ಬೀಳುವಂತೆ ಬೀಳುತ್ತಿವೆ. ಅಳಿದುಳಿದ ಕಾಯಿಗಳ ಹಣ್ಣುಗಳ ದುಃಖ ಅರಣ್ಯರೋಧನವಾಗಿದೆ. ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ.ಇಂಥದ್ದೊಂದು ದಿನ ಬರುತ್ತದೆ ಅಂತ ಯಾರೂ ಊಹಿಸಿರಲಿಲ್ಲ. ಜೀವನ ಹಿಡಿತಕ್ಕೆ ಸಿಗದಂತಾಗಿದೆ. ಬಿರುಗಾಳಿಗೆ ಸಿಕ್ಕ ಹಡಗಿನಂತಾಗಿದೆ.ಬದುಕನ್ನು ಯಾವ ಕಡೆಯಿಂದ ನಿಯಂತ್ರಿಸಿದರೆ ಹಿಡಿತಕ್ಕೆ ಸಿಗಬಹುದು ಎಂಬುದು ಯಕ್ಷ […]

ನಾನು ನಾನೆಂದು ಬೀಗಿ

ಕವಿತೆ ನಾನು ನಾನೆಂದು ಬೀಗಿ ಅಭಿಜ್ಞಾ ಪಿ ಎಮ್ ಗೌಡ ಎಲ್ಲೆಲ್ಲೂ ಚಿತಾಗಾರಸ್ಮಶಾನಗಳ ದರ್ಬಾರುಬಲುಜೋರು ಜೋರು.!ಬೀದಿ ಬೀದಿಗಳಲ್ಲಿಸಾಲುಸಾಲು ಶವಗಳ ದಿಬ್ಬಣಚಿತಾಭಸ್ಮದ ಕಾಯಕಲ್ಪಕೆಮುಖಮಾಡಿ ನಿಂತಿವೆ…. ವಿಧಿಯಿಲ್ಲದೆಮುಷ್ಕರ ಹೂಡಲುಹೆಣಗಳ ರಾಶಿಗಳುಸ್ಮಶಾನದವಿಳಾಸಕಾಗಿ ಅರ್ಜಿ ಹಾಕುತಿವೆ…ಅಹಿಂಸೆಯ ಅಹವಾಲುದೇವರ ಅವಗಾಹನೆಗೆಕೊಡಲು ತಾ ಮುಂದು ನಾ ಮುಂದೆಂದು… ಅವಕ್ಕಾದಭಂಡಗೇಡಿ ರಣಹದ್ದುಗಳುಬಾಯ್ಬಿಡದ ಗಿಡುಗಗಳ ಮಾಂತ್ರಿಕತೆಚಾಟಿ ಏಟಿನ ಮಾತಿಗೆಪುದುರುಗುಟ್ಟಿವಿಲವಿಲಗುಟ್ಟಿರಲು… ಒಡ್ದೋಲಗದಮಾರ್ಯಾದೆ ಹರಾಜಾಗುತಿದೆಸಣ್ಬುದ್ಧಿ ಸ್ವಾರ್ಥದೊಳುರಕ್ತ ಬೀಜಾಸುರರ ಸಾಮ್ರಾಜ್ಯಕಂಪಿಸುತಿದೆಎಂಟದೆಯ ಭಂಟನಂತಿರುವಭೂಪನಿಂದ… ರುಜುವಾತು ಮಾಡುತಿದೆಉಚ್ಛಿಷ್ಠಕಾಗಿ ಕೈಚಾಚಿದಪುಂಡತನದ ವಕೌಸಗಳ!ಆಸೆಬುರುಕಕೀಚಕಗಳನು ಚಂಡಾಡಿಹುರುಳಿಸಲು ಸಜ್ಞಾಗುತಿದೆ…. ನಾನು ನಾನೆಂದು ಮರೆದದುಷ್ಟ ನೀಚನಹಂಕಾರಮಣ್ಣುಮುಕ್ಕುತಿದೆ….ಗಹಗಹಿಸುತಿವೆ ಕಾಷ್ಠಗಳುಶಪಿಸುತಿದೆ ಧರಣಿ.!ವಹ್ನಿಯೊಂದಿಗೆ ಸಲಿಲವುಸಾಥು ಕೊಟ್ಟು ನಗುತಿರಲುಅವನಳಿವಿನಂಚು […]

ದಾರಾವಾಹಿ ಅದ್ಯಾಯ-15 ಏಕನಾಥರ ಪತ್ನಿ ನೀಡಿದ ಬೆಲ್ಲದ ಕಾಫಿ ಕುಡಿದ ಶಂಕರನಿಗೆ ಕಥೆ ಹೇಳುವ ಹುಮ್ಮಸ್ಸು ಇನ್ನಷ್ಟು ಹೆಚ್ಚಿದ್ದರಿಂದ ಮತ್ತೇನೋ ನೆನಪಾಯಿತು. ‘ಅಂದಹಾಗೆ ಗುರೂಜೀ, ಪುರಂದರಣ್ಣನಿಗೆ ಆ ಕಾಡು ಜನರು ಎಲ್ಲಿ ಸಿಕ್ಕಿದರು ಅಂತ ಕೇಳಿದಿರಿಲ್ಲಾ, ಹೇಳುತ್ತೇನೆ ಕೇಳಿ. ಇಲ್ಲೆ ಸಮೀಪದ ನೆರ್ಗಿಹಿತ್ತಲು ಗ್ರಾಮದ ತಮ್ಮ ಮೂಲದ ಮನೆಯಲ್ಲಿ ಪುರಂದರಣ್ಣನಿಗೆ ಎಕರೆಗಟ್ಟಲೆ ಪಿತ್ರಾರ್ಜಿತ ಆಸ್ತಿ ಉಂಟಲ್ಲವಾ. ಆ ಹೊಲಗದ್ದೆಗಳಲ್ಲಿ ಅವರೇ ನಿಂತು ಬೇಸಾಯ ಮಾಡಿಸುತ್ತಾರೆ. ಆ ಭೂಮಿಯ ಸುತ್ತಮುತ್ತ ದಟ್ಟ ಹಾಡಿಗಳಿವೆ. ಅವುಗಳಲ್ಲಿರುವ ನೂರಾರು ಕಾಡುಹಂದಿಗಳು ಯಾವಾಗಲೂ […]

Back To Top