ಆ ನಿಸ್ತೇಜ ಕಣ್ಣುಗಳಲ್ಲಿ ಬಿರಿದ ನೆಲ, ಕಮರಿದ ಫಸಲು
ನಿನ್ನ ಹೆಣದ ಮೇಲೆ ಚದುರಂಗ ಆಡುತ್ತಾರೆ ಎಲ್ಲರೂ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ […]

ಕೋಟಿ ವಿದ್ಯೆಯ ಬಿಟ್ಟು ಮೇಟಿ ಹಿಡಿಯಲು ಬಂದ ಮಗನ ಭವಿಷ್ಯ ಗಾಳಿಗಿಟ್ಟ ಹಣತೆ
ಮನೆ ಮಂದಿಯಲ್ಲ ಬೆವರು ಬಸಿದರೂ ಹಸಿರಾಗದ ಅಕ್ಕಡಿ ಸಾಲು ಈಟಿಯಾಗಿ ತಿವಿದಿದೆ

ರೈತಗಜಲ್ ಹಸಿರುಸಿರಿನ ಸಿರಿ ನೀನು ಧರಣಿ ಮೇಲೆ ದಯೆಬಾರದೆ ಮಳೆರಾಯಾಹರಸುವ ಹೆಸರೇ ನೀರು ಸುರಿಯುತ್ತ ಇಳೆಯ ಬೆರೆಯಬಾರದೆ ಮಳೆರಾಯಾ ನೇಗಿಲು ಕಾಯಕವಿಲ್ಲದೆ ಕುಳಿತಿದೆ ಸುಣ್ಣವಿರದ ಗೋಡೆಯನ್ನು ಅಂಟಿಕೊಂಡುರೈತನ ಹೊಲ ಉಳುವ ಜೋಡೆತ್ತನ್ನಾದರೂ ಬದುಕಿಸಬಾರದೆ ಮಳೆರಾಯಾ ಅಟ್ಟ ಬಿಟ್ಟು ಹಸಿದ ಹೊಟ್ಟೆ ಸೇರಿವೆ ಬೀಜಕ್ಕಿಟ್ಟ ಕಾಳೆಂಬುದನ್ನೂ ಮರೆತುಗುಟ್ಟಾಗುಳಿಯದ ಸಾಲಕ್ಕಾದರೂ ಬಡ್ಡಿಯಾಗಬಾರದೆ ಮಳೆರಾಯಾ ಮಣ್ಣ ಮಕ್ಕಳೆಲ್ಲ ನೊಂದು ಬೆಂದು ಕಣ್ಣೀರು ಹಾಕುತ್ತಿಹರುನಿನ್ನಿರುವಿಕೆಯ ಸಣ್ಣ ಸುಳಿವೊಂದು ತೋರಬಾರದೆ ಮಳೆರಾಯಾ ಬವಣೆಗೆಲ್ಲ ಪ್ರೀತಿಯುಣಿಸಿ ಧರೆಯೊಡಲಿಗೆ ವರವಾಗಿ ಬಾಸಕಲಕ್ಕಾಧಾರವೇ ಜಲವೆನ್ನುವ ‘ಸರೋಜ’ಳ ಮನವಿ ಸ್ವೀಕರಿಸಬಾರದೆ […]

ದಾರಾವಾಹಿ ಅಧ್ಯಾಯ: 14 ಶಂಕರನ ರೋಚಕ ಪ್ರಹಸನವನ್ನು ಏಕನಾಥರು ತಮ್ಮ ಕಣ್ಣು ಕಿವಿಗಳೆರಡನ್ನೂ ಒಂದು ಮಾಡಿ ಅರೆಬಾಯಿ ಬಿಟ್ಟುಕೊಂಡು ಕೇಳುತ್ತಿದ್ದರೆ ಅತ್ತ ದೇವಕಿ ಒಳಕೋಣೆಯ ದಾರಂದಕ್ಕೊರಗಿ ಕುತೂಹಲದಿಂದ ಆಲಿಸುತ್ತಿದ್ದಳು. ಆದರೆ ಅವಳನ್ನು ಗಮನಿಸಿದ ಮೇಲೆಯೇ ಶಂಕರನ ಕಥೆಯಲ್ಲಿ ದುಪ್ಪಟ್ಟು ನವರಸಗಳು ತುಂಬಿ ತುಳುಕತೊಡಗಿದವು ಎಂಬುದು ಏಕನಾಥರಿಗೆ ತಿಳಿಯಲಿಲ್ಲ. ಆದ್ದರಿಂದ ಕಥೆ ಕೇಳುವ ಆತುರದಲ್ಲಿದ್ದ ಅವರು, ‘ಮತ್ತೇನಾಯಿತು ಮಾರಾಯಾ…? ಆ ಹಂದಿ ನಿನ್ನ ಪುರಂದರಣ್ಣನ ಕುಂಡೆಗೆ ತಿವಿದೇ ಬಿಟ್ಟಿತಾ ಹೇಗೇ…!’ ಎಂದು ಹಾಸ್ಯ ಮಾಡಿ ನಕ್ಕರು. ಆಗ ಶಂಕರ […]

2017 ರಲ್ಲಿ ಸೃಷ್ಟಿಯಾದ ಸಂಪತ್ತಿನ ಶೇ.73 ರಷ್ಟು ಪಾಲು ಶೇ.1 ರಷ್ಟು ಸಿರಿವಂತರು ಹಂಚಿಕೊಂಡಿದ್ದರೆ, ಭಾರತದ ಅತಿಬಡತನದಲ್ಲಿರುವ ಶೇ.50 ರಷ್ಟು ಜನಸಂಖ್ಯೆ (67 ಕೋಟಿ ಭಾರತೀಯರು) ಕೇವಲ ಶೇ.1ರಷ್ಟು ಸಂಪತ್ತು ಹೆಚ್ಚಳವನ್ನು ಕಂಡಿದ್ದಾರೆಂದು ವರದಿಯಾಗಿದೆ.

ಅಸ್ಪೃಶ್ಯರಾಗಿದ್ದೇವೆ!

ನಾವೆಲ್ಲರೂ ಈಗ ಸಮಾನರಾಗಿದ್ದೇವೆ
ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿದ್ದೇವೆ
ನಮ್ಮ ತಪ್ಪಿಲ್ಲದೆಯೂ, ಬೇರೊಬ್ಬರ ತಪ್ಪಿಗೆ ಶಿಕ್ಷೆಯನ್ನು ಅನುಭವಿಸುವ ಬಲಿಪಶುಗಳಾಗಿದ್ದೇವೆ

ಕೆಸರುಂಡ ಕೈಗಳಿವು ಮೊಸರಿನ ಸಂಗವ ತೊರೆದಿವೆ
ನಿಟ್ಟುಸಿರ ತಾಪ ಕೊನರುತ್ತಿದೆ ಬಿರುಕು ಬಿಟ್ಟ ಪಾದದಲಿ

ಬೆಳೆದ ಬೆಳೆಗೆ ಈಗಲಾದರೂ ಬೆಲೆ ಬರುವುದೆಂದು ಕಾದಿದ್ದೇನೆ
ಕಷ್ಟ ಕೋಟಲೆ ಆಗಲಾದರೂ ಕಳೆವುದೆಂದು ನಿರೀಕ್ಷಿಸಿದ್ದೇನೆ

Back To Top