ಕಾವ್ಯಯಾನ

ಕಾವ್ಯಯಾನ

ಗ್ರಹಣಕ್ಕೆ ಮುನ್ನ ಪ್ರಮಿಳಾ ಎಸ್.ಪಿ ಗ್ರಹಣಕ್ಕೆ ಮುನ್ನ ಕೋಣೆ ಕಿಟಕಿಯ ಸರಳುಗಳ ನಡುವೆ ಚಂದ್ರಮನ ಚಿತ್ರ ಮನದಲ್ಲಿ ಆತುರದ ಕಾವು… ಗ್ರಹಣ ಪ್ರಾರಂಭ ಆಗುವುದಕ್ಕೆ ಮುನ್ನ ಮನೆ ಮಂದಿಗೆಲ್ಲಾ ಊಟ ಬಡಿಸಬೇಕಿದೆ.. ಎದೆಯೊಳಗಿನ ನೋವುಗಳ ಬಚ್ಚಿಟ್ಟು…ಪರದೆ ಮುಂದೆ ಕುಳಿತು ಪುಂಗಿ ಮಾತು ಆಲಿಸಿ ಆಕಳಿಸುವ ಅರಮನೆಯ ಮನಸ್ಸುಗಳ ನಡುವೆ ಆತುರಕ್ಕೆ ಆಟ ವಾಡ ಬೇಕಿದೆ ನಾನು… ಬಳಲಿದ ಕಾಲುಗಳ… ಮೇಲೆ ನಿಂತು ನಿಟ್ಟುಸಿರು ಸೆರಗು ಸುತ್ತಿ ಪ್ರತಿ ಕ್ಷಣಕ್ಕೂ ಬೇಡುತಿದ್ದೇನೆ ಹೊರಗೆ ಹೋದವರು ಹುಷಾರಾಗಿ ವಪಸ್ಸಾಗಲಿ.. ಪರದೆಯಲ್ಲಿ […]

ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ […]

ಕಾವ್ಯಯಾನ

ನಭದ ಕೌತುಕದ ಕಡೆಗೆ ನಾರಾಯಣಸ್ವಾಮಿ ವಿ ನಭದ ಕೌತುಕದ ಕಡೆಗೆ ಮನವ್ಯಾಕೋ ಯೋಚನಲಹರಿಯ ಕಡೆಗೆ ತಿರುಗುತಿದೆ, ಅಜ್ಞಾನದಿಂದ ವಿಜ್ಞಾನದ ಕಡೆ ಸಾಗಿದ ಮನುಜ ಮತ್ತೆಕೊ ಮರಳಿ ಅಜ್ಞಾನದ ಗೂಡಿನ ಸುತ್ತ ಸುಳಿಯುತಿರುವನೆಂದು…….. ಪ್ರಕೃತಿಯ ವಿಸ್ಮಯಕ್ಕೆ ಹೆದರಿ ದೇಗುಲ-ಗೃಹಗಳ ಕದವನೆ ಮುಚ್ಚಿ,ದೂರದರ್ಶನದ ಪರದೆಯೊಳಗೆ ನಭದ ಕೌತುಕವನು ವೀಕ್ಷಣೆ ಮಾಡುತಿಹನು……. ಆಗಸದಲಿ ಘಟಿಸುವ ಸೂರ್ಯಚಂದ್ರರ ವಿಸ್ಮಯ ರೂಪವನು ಕನ್ನಡಿಯೊಳಗಿಂದ ನೋಡಬಹುದೆಂದು,ವಿಜ್ಞಾನಿಗಳು ಸಾರಿ ಸಾರಿ ಹೇಳಿದರೂ ನಂಬಲೇ ಇಲ್ಲ ವಿಜ್ಞಾನವನು…… ಟಿವಿ ಪರದೆಯೊಳಗೆ ಕುಳಿತು ಕಟ್ಟುಕಥೆ ಸಾರುವ ಮಾತಿನಮಲ್ಲರ ಭಾಷಣವು ಹುಟ್ಟಿಸಿತು […]

ಕಾವ್ಯಯಾನ

ಸ್ತ್ರೀ ಹೆಜ್ಜೆ ಕವಿತಾ ಸಾರಂಗಮಠ ಸ್ತ್ರೀ ಹೆಜ್ಜೆ ಲಂಗ ದಾವಣಿ ತೊಟ್ಟ ಬಾಲೆಯರು ವಿರಳ.. ಹಿಡಿದಿದೆ ಫ್ಯಾಶನ್ನಿನ ಮರುಳ.. ಮಾಯವಾಗಿವೆ ಉದ್ದ ಜಡೆ ಮೊಗ್ಗುಗಳ.. ಕೇಶ ಕತ್ತರಿಸಿ ನಡೆಯುವರು ಸರಳ..! ಅನುಕರಣೆ ಹೆಸರಲಿ ನಡೆದಿದೆ ಅಂಧರ ಆಟ.. ತೋರುತಿದೆ ತೆಳು ಧಿರಿಸಿನಲಿ ಅವಳ ಮೈಮಾಟ.‌. ಹಗಲಿರುಳೂ ಅವಳ ಪೀಡಿಸುತ್ತಿದೆ ಕಾಮುಕರ ಕೂಟ..! ಮಾಧ್ಯಮಗಳಲ್ಲಿ ಜಾಹಿರಾತುಗಳ ದರಬಾರು.. ಮಹಿಳೆಯರ ಮನೆ-ಮನಗಳಲ್ಲಿ ಅವುಗಳದ್ದೇ ಸಂಚಾರು.. ಹೋಗುತಿರುವ ಅವಳದೇ ಮಾನಕೆ ಇಲ್ಲವೇ ಇಲ್ಲ ಕೊಂಚ ವಿಚಾರ..! *********

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ […]

ಕಾವ್ಯಯಾನ

ಸೀರೆಯ ಸಹವಾಸ ತ್ರಿವೇಣಿ ಜಿ.ಹೆಚ್ ಸೀರೆಯ ಸಹ ವಾಸ. ಸೆರಗು ನಿರಿಗೆಗಳ ಸಮೀಕರಿಸಿ ಉಬ್ಬಿದೆದೆ ಕಂಡೂ ಕಾಣಿಸದಂತೆ ಮಣಿಸಿ ನಡುವೆ ‌”ನಡು”ವಿನ ಆಕಾರವ ಅಂದಗಾಣಿಸಿದರೂ ಜಗ್ಗುವ ಬೊಜ್ಜು. ಒಂದೊಂದು ಸೀರೆ ಉಟ್ಟಾಗಲೂ ಮತ್ತೆಷ್ಟೋ ನೆನಪುಗಳ ಕದ ಬಡಿದು ಅಳಿಸಲಾಗದವನ್ನಲ್ಲೇ ಮುಚ್ಚಿಟ್ಟು… ಕಣ್ಣ ಕನಸುಗಳನ್ನೂ ಬೆಚ್ಚಗಿಟ್ಟು… ಜರಿ ಅಂಚಿನ ಸೀರೆ, ಅಲ್ಲಲ್ಲಿ ಸಣ್ಣ ಹೂಬಳ್ಳಿಯಂಚು, ನವಿರು ಭಾವ ಒಲವ ಮೆಲುಕು. ಚಿತ್ತಾಕರ್ಷಕ ಚಿತ್ತಾರ. ಉಟ್ಟು ತೊಟ್ಟು ಸಂಭ್ರಮಿಸಿದ ಆ ಘಳಿಗೆ. ಅಷ್ಟೊಂದು ಸುಲಭವಲ್ಲ ಸೆರಗ ತುದಿಯಲ್ಲಿ ಕನಸು ಕಟ್ಟಿಕೊಂಡೇ […]

ಪುಸ್ತಕ ವಿಮರ್ಶೆ

ವಲಸೆ, ಸಂಘರ್ಷ ಮತ್ತು ಸಮನ್ವಯ ಪುಸ್ತಕ ವಿಮರ್ಶೆ ಪುಸ್ತಕದ ಹೆಸರು: ವಲಸೆ ಸಂಘರ್ಷ ಸಮನ್ವಯ ಲೇಖಕರು: ಪುರುಷೋತ್ತಮ ಬಿಳಿಮಲೆ ಪ್ರಕಟನ ವರ್ಷ: 2019 ಬೆಲೆ: 400 ರೂಪಾಯಿ  ಪ್ರಕಾಶಕರು: ಅಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಲೋಕೇಶ ಕುಂಚಡ್ಕ ಡಾ. ಪುರುಷೋತ್ತಮ ಬಿಳಿಮಲೆಯವರ 400 ಪುಟಗಳ ಈ ಕೃತಿಗೆ 1985ರಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ಪ್ರಸ್ತುತ ಸಂಶೋಧನ ಕೃತಿಯು ಇದೀಗ ಪ್ರಕಟವಾಗಿದೆ. ಒಮ್ಮೆ ಬರೆದಾದ ಸಂಶೋಧನ ಪ್ರಬಂಧವನ್ನು ಪರಿಷ್ಕರಣೆ ಮಾಡುವುದು ಸುಲಭದ ಕೆಲಸವಲ್ಲ, ಇನ್ನೊಂದು ಪ್ರಬಂಧವನ್ನು ಬರೆದ ಹಾಗೆ […]

ಕಾವ್ಯಯಾನ

ಗಾಳಿಯ ಉತ್ಸವ ಪ್ರೇಮಶೇಖರ ಗಕ್ಕನೆ ಹಾರಿ ಗಬಕ್ಕನೆ ಹಿಡಿದು ನುಂಗೇಬಿಟ್ಟಿತು ನಮ್ಮೂರ ಕೆರೆಯ ಮೀನೊಂದನು ಸಾವಿರ ಸಾವಿರ ಮೈಲು ದೂರದ ಸೈಬೀರಿಯಾ ದಿಂದ ಹಾರಿ ಬಂದು ಬೆಳ್ಳಂಬೆಳಿಗ್ಗೆ ಕೆರೆ ಏರಿ ಮೇಲಿನ ಅರಳೀಮರದ ಕೊಂಬೆಯೇರಿ ಕೂತ ಸ್ವಾಲೋ ಹಕ್ಕಿಯೊಂದು. ಇಂದು ನವೆಂಬರ್ ಒಂದು. ತುರ್ತಾಗಿ ಹೋಗ ಬೇಕಿದೆ ನಾನೀಗ ರಾಜ್ಯೋತ್ಸವದಾಚರಣೆಗೆ, ನನಗಾಗಿ ಕಾದು ನಿಂತಿದೆ ಕಾರ್ಯಕರ್ತನ ಬೈಕು, ಕೂಗಿ ಕರೆಯುತ್ತಲೂ ಇದೆ ಮೈಕು. ಭದ್ರವಾಗಿದೆ ನನ್ನ ಜೇಬಿನಲಿ ಭಾಷಣದ ಹಾಳೆ, ಸಿಕ್ಕಿನಿಂತಿದೆ ನನ್ನ ಗಂಟಲಲಿ ಸ್ವಾಲೋ ನುಂಗಿದ […]

ಕಾವ್ಯಯಾನ

ಕ್ಷಮಿಸದಿರಿ ಸಂಕಟಗಳನ್ನು ಕವಿತೆ ಮಾಡುವುದು ಕ್ರೂರ ಅನ್ನಿಸಿ ಎಷ್ಟೋ ಸಲ ಸುಮ್ಮನಾಗುತ್ತೇನೆ.. ಇದು ಕವಿತೆಯಲ್ಲ; ಒಡಲ ಉರಿ. ವಿಜಯಶ್ರಿ ಹಾಲಾಡಿ ಆಸ್ಟ್ರೇಲಿಯಾದ ಕಾಳ್ಗಿಚ್ಚಿಗೆಬೆಂದ ನರಳಿದ ನೊಂದಅಳಿಲುಗಳೇ ಮೊಲಗಳೇಜಿಂಕೆಗಳೇ ನವಿಲುಗಳೇಹುಲಿ ಚಿರತೆ ಹಾವುಗಳೇಕ್ರಿಮಿ ಕೀಟ ಜೀವಾದಿಗಳೇಮರ ಗಿಡ ಪಕ್ಷಿಗಳೇಕೆಲಸಕ್ಕೆ ಬಾರದ’ ಕವಿತೆ’ಹಿಡಿದು ನಿಮ್ಮೆದುರುಮಂಡಿಯೂರಿದ್ದೇನೆಕ್ಷಮಿಸದಿರಿ ನನ್ನನ್ನುಮತ್ತುಇಡೀ ಮನುಕುಲವನ್ನು ಹಸಿರು ಹೂವು ಚಿಗುರೆಂದುಈ ನೆಲವನ್ನು ವರ್ಣಿಸುತ್ತಲೇಕಡಿದು ಕೊಚ್ಚಿ ಮುಕ್ಕಿಸರ್ವನಾಶ ಮಾಡಿದ್ದೇವೆಇಷ್ಟಾದರೂಹನಿ ಕಣ್ಣೀರಿಗೂ ಬರಬಂದಿದೆನಮ್ಮ ನಮ್ಮ ಲೋಕಗಳುಮಹಲುಗಳನ್ನು ನಾವಿನ್ನೂಇಳಿದಿಲ್ಲ ಇಳಿಯುವುದೂ ಇಲ್ಲಕ್ಷಮಿಸಲೇಬೇಡಿ ಕೊನೆಗೊಂದು ಅರಿಕೆಪ್ರಾಣಿಪಕ್ಷಿಗಳೇಮತ್ತೊಂದು ಜನ್ಮವಿದ್ದರೆ ನನಗೆದಯಮಾಡಿ ನಿಮ್ಮ ಸಂಕುಲಕ್ಕೆಕರೆದುಕೊಳ್ಳಿ- ಇಲ್ಲವೆಂದಾದರೆನಿಮ್ಮ ಪಾದ […]

ಅನುವಾದ ಸಂಗಾತಿ

ಜಾನ್ ಆಶ್ಬರಿ ಅಮೇರಿಕಾ ಕವಿ ಕನ್ನಡಕ್ಕೆ: ಕಮಲಾಕರ ಕಡವೆ “ಒಳ ಬರುವ ಮಳೆ” ಅಟ್ಟದಲ್ಲಿ ಹಸನು ಉದ್ದಿಟ್ಟ ಬ್ಲಾಕ್ ಬೋರ್ಡು. ತಾರೆಗಳ ಬೆಳಕನ್ನು ಈಗ ಗಟ್ಟಿಯಾಗಿಸಿದೆ ಗಾಳಿ. ಯಾರಿಗಾದರೂ ಕಾಣಸಿಗುತ್ತೆ. ಯಾರಿಗಾದರೂ ಗೊತ್ತಾಗುತ್ತೆ. ಈ ಮಹಾನ್ ಗ್ರಹದ ಮೇಲೆಲ್ಲಾದರೂ ಸತ್ಯವ ಕಂಡುಕೊಂಡರೆ – ಒಂದು ತುಂಡು, ಬಿಸಿಲಲ್ಲಿ ಒಣಗಿಸಿದ್ದು – ತನ್ನದೇ ಅಪಖ್ಯಾತಿ ಮತ್ತು ದೈನ್ಯತೆಯಲ್ಲಿ ಅದು ಹುಲ್ಲು ಕಡ್ಡಿಯ ಆಧಾರದಲ್ಲಿ ಇರುತ್ತೆ. ಯಾರೂ ಉದ್ದಾರವಾಗಲಾರರು, ಆದರೂ ಪರಿಸ್ಥಿತಿ ಇನ್ನೂ ಎಷ್ಟು ಹದಗೆಡಲು ಸಾಧ್ಯ? ಮುಂದುವರಿಯಲಿ ಆಟ, […]

Back To Top