ಪುಸ್ತಕ ಪರಿಚಯ

ಪುಸ್ತಕ ಪರಿಚಯ

ಅಮೇರಿಕಾ ಬೊಗಸೆಯಲ್ಲಿ ಕಂಡಷ್ಟು ನೆನಪಿನಲ್ಲಿ ಉಳಿದಷ್ಟು ಪುಸ್ತಕದ ಹೆಸರು – ಅಮೇರಿಕಾ – ಬೊಗಸೆಯಲ್ಲಿ ಕಂಡಷ್ಟು ನೆನಪಿನಲ್ಲಿ ಉಳಿದಷ್ಟು ಪುಸ್ತಕದ ಬೆಲೆ ನೂರು ರೂಪಾಯಿ. ಹತ್ತು ಪರ್ಸೆಂಟ್ ರಿಯಾಯಿತಿಯಲ್ಲಿ ತೊಂಭತ್ತು ರೂಪಾಯಿಗಳು. ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ನಲ್ಲಿ ಕಳಿಸುವುದಕ್ಕೆ ಸರಿಸುಮಾರು ಮೂವತ್ತೈದು ರೂಪಾಯಿಗೂ ಮೇಲ್ಪಟ್ಟು ಆಗುತ್ತದೆ. ಹಾಗಾಗಿ ಒಟ್ಟು 90+35 ನೂರಾ ಇಪ್ಪತ್ತೈದು ಆಗುತ್ತದೆ. ಬ್ಯಾಂಕ್ ಟ್ರಾನ್ಸ್ಫರ್ ಮಾಡುವುದಾದರೆ ಎಸ್. ಬಿ. ಐ. ಖಾತೆ ಸಂಖ್ಯೆ 10386457906. ಜಯನಗರ ಎರಡನೇ ಬ್ಲಾಕ್ ಶಾಖೆ IFSC Code […]

ಮೂಕ ಸಾಕ್ಷಿ

ಕವಿತೆ ಮೂಕ ಸಾಕ್ಷಿ ಸರೋಜಾ ಶ್ರೀಕಾಂತ್ ಇತ್ತೀಚೆಗೆ ಸುಣ್ಣವಿರದ ಗೋಡೆಯೂ ಸನಿಹ ಬರಗೊಡದುಬಣ್ಣಿಸುವ ಕಿವಿಯಾಗುವುದು ಬಿಟ್ಟು ವರ್ಷಗಳೇ ಆದವೇನು!? ನೆಪಕ್ಕಾದರೂ ಸಾಂತ್ವನದ ನುಡಿಗಳಾರೂ ಆಡಲಿಲ್ಲದಿನಂಪ್ರತಿ ಸಾಯೋರಿಗೆ ಅಳುವರಾರು ಅಂದರೆಲ್ಲ ಈಗೀಗ ಜೋತು ಬಿದ್ದ ಸೂರಿನ ಜಂತಿಗೂ ಜಿಗುಪ್ಸೆಸಂಕಷ್ಟದ ಮಾಳಿಗೆ ಬಿಟ್ಟು ಕಾಲನಡಿ ಅಡಗಿ ಮಾಯವಾಗುವುದೇ ಇಷ್ಟವಂತೆ ಇಲಿ ಬಿಡಿ,ಇರುವೆ ಜಿರಳೆಗಳ ಹಾವಳಿಯಾವುದೂ ಇಲ್ಲಿಲ್ಲಬರಿದಾದ ಡಬರಿಗೆ ಯಾವ ಸಪ್ಪಳದ ಖಬರಿಲ್ಲ….! ನಿದ್ರೆ ಇರದ ರಾತ್ರಿಗಳಲ್ಲೆಲ್ಲಾ ಹರಕು ಹಾಸಿಗೆಯಿಂದ ಹೊರ ಬರುತ್ತಲೇ ಇರುವ ಕಾಲುಗಳುಸುಳ್ಳಾಗಿಸುತ್ತವೆ ಗಾದೆ ಮಾತನ್ನು ನಿತ್ಯ ಒಂದಿಷ್ಟು […]

ಗೆಲುವಿಗೆ ಶತ್ರುಗಳಿವೆ. . . . ಎಚ್ಚರಿಕೆ‼

ಗೆಲುವಿಗೆ ಶತ್ರುಗಳಿವೆ. . . . ಎಚ್ಚರಿಕೆ‼     ನನ್ನಲ್ಲಿರುವ ಚೂರು ಪಾರು ಆತ್ಮವಿಶ್ವಾಸವನ್ನು ಒಗ್ಗೂಡಿಸಿ ಏನನ್ನೇ ಮಾಡಲು ಹೊರಟರೂ ಉತ್ಸಾಹಕ್ಕೆ ತಣ್ಣೀರೆರುಚುವವರು ಸುತ್ತಲೂ ಸುತ್ತುವರೆದಂತೆ ಇರುತ್ತಾರೆ. ಅಷ್ಟೇ ಅಲ್ಲ ಮನದಲ್ಲಿ ಉಕ್ಕುತ್ತಿರುವ ಹಂಬಲವನ್ನು ಚಿವುಟಿ ಚಿಂದಿ ಮಾಡುತ್ತಾರೆ. ಎಷ್ಟೋ ಸಲ ನನ್ನಿಂದ ಏನೂ ಆಗುವುದಿಲ್ಲ ಅನ್ನುವ ಭಾವವನ್ನು ಮೂಡಿಸುವವರೂ ಇದ್ದಾರೆ. ಅವರಿವರ ಇಂಥ ಗಿರಕಿಯೊಳಗೆ ಸಿಕ್ಕಿ ಬಿದ್ದರೆ ನನ್ನ ಕಥೆ ಮುಗಿದೇ ಹೋಗುತ್ತದೆ ಅಂತ ಅನ್ನಿಸಿದರೂ ಅದರಿಂದಾಚೆ ಬರಲು ಆಗುತ್ತಿಲ್ಲ. ‘ಏನಾದರೂ ಆಗಲಿ ಮುನ್ನುಗ್ಗು ಎಂಥ […]

ಏನೂ ಸಾಧ್ಯವಿಲ್ಲವೆಂಬ ಕಾಲಘಟ್ಟದಲ್ಲಿ ಪ್ರತಿರೋಧಗಳು ಬಂದಿವೆ ಬಿ.ಶ್ರೀನಿವಾಸ ಬಂಡ್ರಿ ಗೆಳೆಯ ಬಿ.ಶ್ರೀನಿವಾಸ ಕಡುಬಡತನದ, ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದರು. ೦೧-೦೬-೧೯೭೦ ಅವರ ಜನ್ಮದಿನ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ತಂದೆ ಬಂಡ್ರಿ ನರಸಪ್ಪ, ತಾಯಿ ಓಬವ್ವರಿಗೆ ಹನ್ನೊಂದು ಮಕ್ಕಳ ಪೈಕಿ, ಬದುಕುಳಿದ ಏಳು ಮಕ್ಕಳಲ್ಲಿ ಶ್ರೀನಿವಾಸ ಸಹ ಒಬ್ಬರು.ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಜೋಗಿಕಲ್ಲು ಗುಡ್ಡದಿಂದ ಬದುಕನ್ನರಸಿ ಕೂಡ್ಲಿಗಿಯಲ್ಲಿ ನೆಲೆನಿಂತರು. ಪ್ರಾಥಮಿಕ,ಪ್ರೌಢಶಾಲಾ ವಿದ್ಯಾಭ್ಯಾಸವನ್ನೆಲ್ಲ ಕೂಡ್ಲಿಗಿಯಲ್ಲಿ ಪೂರೈಸಿದ ನಂತರ,ಕೊಟ್ಟೂರು,ಹೂವಿನಹಡಗಲಿ,ಹೊಸಪೇಟೆಯಲ್ಲಿ ಬಿ.ಎಸ್.ಸಿ ಪದವಿ ನಂತರ ಕಲಬುರಗಿಯಲ್ಲಿ ನ್ಯೂಕ್ಲಿಯರ್ ಭೌತಶಾಸ್ತ್ರದಲ್ಲಿ ಎಮ್.ಎಸ್.ಸಿ.ಸ್ನಾತಕೋತ್ತರ ಪದವಿ ಪಡೆದರು.ಪ್ರಜಾವಾಣಿ […]

ಮಕ್ಕಳಿಗೆ ಬದುಕಿನ ಪಾಠ

ಲೇಖನ ಮಕ್ಕಳಿಗೆ ಬದುಕಿನ ಪಾಠ ನಿಖಿಲ ಎಸ್. ಮಕ್ಕಳಿಗೆ ಬೇಕು ಶಿಕ್ಷಣದ ಜೊತೆಗೆ ಜೀವನದ ಪಾಠ.ಒಬ್ಬ ತಂದೆ ತಾನು ಅನುಭವಿಸಿದ ನೋವು ನನ್ನ ಮಕ್ಕಳಿಗೆ ಬರಬಾರದು ಎನ್ನುವಷ್ಟು ಚೆನ್ನಾಗಿ ಓದಿಸಿ,ಒಂದು ಒಳ್ಳೆಯ ನೌಕರಿ ಸೇರಿಸಬೇಕು, ಎಂಬ ಭಾವನೆ ಹೆಚ್ಚಿನ ಪೋಷಕರದ್ದಾಗಿರುತ್ತದೆ. ಇದು ಸಹಜ ಹಾಗೆಯೇ ಇದು ತಪ್ಪಲ್ಲ. ಆದರೆ ಮಕ್ಕಳಿಗೆ ಕಷ್ಟವೇ ಇರಬಾರದು ಎಂದು ಮುದ್ದಿನಿಂದ ಬೆಳೆಸುವುದರಿಂದ ಜೀವನದ ಶಿಕ್ಷಣ ಪಾಠ ಕಲಿಸದೆ ಕೇಳಿದೆಲ್ಲವನ್ನು ತಕ್ಷಣವೇ ಅವರ ಕೈಗೆಟಕುವಂತೆ ನೀಡುವುದರಿಂದ ಮಕ್ಕಳು ಹಣವನ್ನು ಗೆಲ್ಲುತ್ತಾರೆ ವಿನಹ ಜೀವನವನ್ನಲ್ಲ.“ಮಕ್ಕಳಿಗೆ […]

ಗುಟ್ಟು

ಕವಿತೆ ಗುಟ್ಟು ಎಸ್ ನಾಗಶ್ರೀ ಸಣ್ಣ ಊರಿನ ಪ್ರೇಮಿಗಳಪಾಡು ಹೇಳಬಾರದುರಂಗೋಲಿ ಗೆರೆಯಲ್ಲಿನಸಣ್ಣ ಮಾರ್ಪಾಡುಮೂಲೆಯಂಗಡಿಯ ಕಾಯಿನ್ನುಬೂತಿನನಿಮಿಷಗಳ ಲೆಕ್ಕಕಾಲೇಜು ಬಿಟ್ಟ ಕರಾರುವಕ್ಕುನಿಮಿಷ ಸೆಕೆಂಡುಯಾವ ಬಸ್ಸಿನ ದಾರಿಯಲಿಅಡ್ಡ ನಿಂತಳು ಪೋರಿಯಾರ ಮನೆಯ ಚಿತ್ರಾನ್ನತಿಂದುಂಡ ಕೈ ಘಮನಾಯಿಗೇಕೆ ಅಲ್ಲೇ ನಡೆದಾಟಕೆನ್ನೆಗುಳಿ ಹೆಚ್ಚು ಹೊತ್ತುಯಾರ ಮುಂದಿತ್ತುಬೆಳಿಗ್ಗೆ ಮುಡಿಯದ ಹೂಸಂಜೆ ಹೆರಳಿಗೆ ಬಂದದ್ದು ಹೇಗೆಂಬಸೂಕ್ಷ್ಮಗಳು ಇಲ್ಲಿನಗೋಡೆ, ಗಿಡ, ಮರ, ಬೇಲಿಗಳಿಗೆ ಸಲೀಸುಕಣ್ಣಲ್ಲೇ ತೂಕದ ಬಟ್ಟು ಹೊತ್ತುತಿರುಗುವ ತಕ್ಕಡಿಗಳುರಸ್ತೆಬದಿಗೆ ನಿರಪಾಯ ನಿಂತುಮನೆ ಹಿರಿಯರಿಗೆಸಂದೇಶ ಕಳಿಸಿಮಜಾ ನೋಡುತ್ತವೆ ಸಣ್ಣ ಊರಿನ ಹೆಂಗೆಳೆಯರಬುದ್ಧಿ ಬ್ರಹ್ಮಾಂಡ ಬೆಳೆಯುವುದು ಹೀಗೆಪ್ರೀತಿಸಿದಾಗ ಬುದ್ಧಿ ಕಳೆಯದೆಜೋಪಾನ […]

ಅನುವಾದ ಸಂಗಾತಿ

ಕಲ್ಲೆದೆ ಬಿರಿದಾಗ ಮಿಥ್ಯಾಪವಾದಕ್ಕೆಸಂಶಯದ ಶನಿಗೆಸೋತು ಸತ್ತಿದೆ ಪ್ರೀತಿ || ಯಾವ ಕಿಟಕಿಗಳು ಕಣ್ತೆರೆಯಲಿಲ್ಲಬಾಗಿಲುಗಳು ಬಾಯ್ಬಿಡಲಿಲ್ಲಗೋಡೆಗಳು ಉಸಿರಲೇಯಿಲ್ಲ || ಹೆಪ್ಪುಗಟ್ಟಿದ ಮೇಲೆಕಾವು ಕೊಡದಿರು ಗೆಳೆಯಎಂದಿಗೂ ಸವಿಹಾಲಾಗದು || ಸುಳ್ಳಿನ ಮಹಲಿನ ಮೇಲೆಪ್ರೇಮ ಗೋಪುರವೇ ?ನಂಬಿಕೆಯೇ ಮರಗುವುದು || ಮನದ ಮಡುವಲ್ಲಿ ನಿಂತ ನೀರಾಗಿದೆಗೆಳೆತನ, ಹೊಸ ಸುಗಂಧಸಿಂಚನಕೆ ಯತ್ನ ಬೇಡವೇ ಬೇಡ || ನೆನ್ನೆಗಳ ಗಾಯಕ್ಕೆಇಂದು ಉಪಚಾರವೇ ?ನಾನಿತ್ತ ಉಸಿರು ಮರಳಿಸು || ಅಂದು ಕಟ್ಟಿದ ಕನಸುಗಳುಹೂಮನೆ ಸೊಗಸುಗಳುಕಮರಿ ಗೋರಿ ಏರಿವೆ || ಎದೆಯುಕ್ಕಿದರೆ ಕಡಲುಹೊತ್ತಿ ಉರಿದರೆ ಬೆಂಕಿಬತ್ತಿ ಬಿರಿದರದು […]

ಸಾವು ಮಾತಾದಾಗ

ಕವಿತೆ ಸಾವು ಮಾತಾದಾಗ ವಿಶಾಲಾ ಆರಾಧ್ಯ ಭಯವೆನ್ನದಿರು ಕೊನೆಯೆನ್ನದಿರುಮೈಲಿಗೆ ಎನ್ನದಿರು ನನ್ನನುಹಗುರಾಗುವಿ ಮೃದುವಾಗುವಿಕೂಡಿದ ಕ್ಷಣದೊಳು ನನ್ನನು ಭವದೊಳು ಮಾಡಿದ ಪಾಪವತೊಳೆಯುವ ಹೊನಲು ನಾನುತರತರ ಮುಖವಾಡ ಹೊತ್ತವರಿಗೆಹೊಸ/ಕಳೆಯನು ಕೊಡುವೆ ನಾನು ಬಂಧು ಬಳಗವೇ ಹಿರಿದೆನ್ನದಿರುಎನಗಿಂ ಹಿರಿಯರ ನಾ ಕಾಣೆಸತಿ ಪತಿ ಸಂಸಾರ ಜೊತೆ ಮಮಕಾರನಾ ಬಂದರೆ ಅಲ್ಲಿಯೆ ಮಾಯೇ ಅಮ್ಮ ಅಪ್ಪ ಅಣ್ಣಾ ಅಕ್ಕಾಎನ್ನುವುದೆಲ್ಲಾ ಮೋಹಕೆಬಂದೊಡನೆಯೆ ನಾ ಕ್ಷಣಕರೆವರು ಹೆಣವೆಂದಾ ದೇಹಕೆ ————-

ಪುಸ್ತಕ ಪರಿಚಯ

ತಥಾಗತನಿಗೊಂದು ಪದ್ಮ ಪತ್ರ ಭಾವಜೀವಿಯ ಭಾಷಾ ಚಮತ್ಕಾರಿಕ ಕವಿತೆಗಳು ತಥಾಗತನಿಗೊಂದು ಪದ್ಮ ಪತ್ರಕವನ ಸಂಕಲನಡಾ. ಆನಂದ ಋಗ್ವೇದಿಸಾಧನ ಪಬ್ಲಿಕೇಷನ್ ವೃತ್ತಿಯಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ, ಚಿಟಗೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆನಂದ ಋಗ್ವೇದಿ ಅವರು ಪ್ರವೃತ್ತಿಯಿಂದ ಕವಿ.ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ಡಾ. ಪಾಟೀಲ ಪುಟ್ಟಪ್ಪ ಕಥಾ ಪುರಸ್ಕಾರ, ಡಾ. ಜೋಳದರಾಶಿ ದೊಡ್ಡನಗೌಡ ನಾಟಕ ಪ್ರಶಸ್ತಿ, ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗಳು ಲಭಿಸಿವೆ. […]

ಗಝಲ್

ಗಝಲ್ ರೇಷ್ಮಾ ಕಂದಕೂರ. ಮುಗ್ದ ಮನಸುಗಳು ನಾವು ಚಿವುಟದಿರಿ ನಮ್ಮನ್ನಕಂಡ ಕನಸುಗಳು ನನಸಾಗ ಬೇಕಿದೆ ಇನ್ನ ನೋವುಗಳ ಸಹಿಸದ ಹಸುಳೆಗಳು ನಾವುಕ್ರೌರ್ಯದ ದಾಳಿಗೆ ಸಿಲುಕಿಸದಿರಿ ತನುವನ್ನ ಭರವಸೆಗಳ ಬೆಳಕಿನಡಿ ಸಾಗಬೇಕಿದೆ ಜೀವನಎಸೆಯ ಬೇಡಿ ಮೃದುಲತೆಗೆ ಮೋಹದ ಜಾಲವನ್ನ ಜ್ಞಾನದ ಹಂಬಲಕೆ ಕೈ ಚಾಚಿದೆ ಕರೆದಿದೆ ಮನವುವಿವಾಹ ಕೂಪಕೆ ವಶಪಡಿಸದಿರಿ ಕುಸುಮವನ್ನ ನಿರ್ಮಲತೆಯ ನಾಜೂಕು ನನ್ನೊಡನಾಟಹೊಸಕಿ ಹಾಕದಿರಿ ನಾಜೂಕು ರೇಷಿಮೆಯನ್ನ

Back To Top