ಬಣ್ಣ-ರೇಖೆಗಳ ಜೊತೆಯಾಟ ಪಕ್ಷಾತೀತ ಕಲಾವಿದ ಅನಾಥ ಶಿಶುವಿನಂತೆ’ ಎಂ.ಎಲ್.ಸೋಮವರದ ಎಂ.ಎಲ್.ಸೋಮವರದ ದೇಶ ಕಂಡ ಉತ್ತಮ ಕಲಾವಿದರಲ್ಲಿ ಒಬ್ಬರು. ಮಂಡ್ಯದ ವಿ.ವಿ.ನಗರದ ಕಲ್ಲಹಳ್ಳಿ ನಿವಾಸಿ. ತುಂಬಾ ನಿಷ್ಠುರ ವ್ಯಕ್ತಿತ್ವದ ಸೋಮವರದ , ಜೀವನದಲ್ಲಿ ಕಷ್ಟಗಳನ್ನೇ ಹೆಚ್ಚು ಹೊದ್ದವರು. ನ್ಯಾಯ, ನೈತಿಕ ಮತ್ತು ವೈಚಾರಿಕ ನಿಲುವಿನ ಕಲಾವಿದ. ವೈಚಾರಿಕ ಮನೋಭಾವದಿಂದ ಅನೇಕ ಅವಕಾಶಗಳನ್ನು ಕಳೆದುಕೊಂಡವರು. ಎಂ.ಎಲ್.ಸೋಮವರದ ಬೆಂಗಳೂರಿನ ಕೆನ್ ಕಲಾ ಶಾಲೆಯಿಂದ 1987ರಲ್ಲಿ ಡಿ.ಎಂ.ಸಿ. ಪದವಿ ಪಡೆದವರು. 2008 ರಲ್ಲೇ ಮೈಸೂರು ಮುಕ್ತ ವಿ.ವಿ.ಯಿಂದ ಬಿ.ಎಫ್.ಎ. ಅಧ್ಯಯನ ಮಾಡಿದರು. ಮಂಡ್ಯ, […]

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಕೊರೆಯುವ ಚಳಿಯಲ್ಲೂ ವಹ್ನಿಯೊಡಲು ದಹಿಸುತ್ತಿದೆ ಸಾಕಿಬಹಿರಂಗದ ತೊಗಲು ಅಂತರಂಗದ ಜ್ವಾಲೆಯಲ್ಲಿ ಮೈ ಕಾಯಿಸುತ್ತಿದೆ ಸಾಕಿ ಹೆಪ್ಪುಗಟ್ಟಿದ್ದ ಹೃದಯ ರಂಧ್ರ ಮುಚ್ಚಿದ್ದ ಕಾಯದ ಬಾಯಿ ತೆರೆದುನರನಾಡಿಯಲ್ಲೂ ಶರವೇಗದಿ ಕಾವು ಮಿಂಚಂತೆ ಸಂಚರಿಸುತ್ತಿದೆ ಸಾಕಿ ರೆಕ್ಕೆ ಮೂಡದ ಹಕ್ಕಿಯ ಕನಸೊಳಗೆ ಮೌನದ ನೀರವತೆ ಮಡುಗಟ್ಟಿದೆಹನಿವ ಮಳೆಯೊಡನೆ ಹರಿವಕಂಬನಿ ಧರೆಯಲಿ ಲೀನವಾಗುತ್ತಿದೆ ಸಾಕಿ ಸಲಿಲದಿಂದ ಬೇರ್ಪಟ್ಟ ಮತ್ಸ್ಯದ ಒದ್ದಾಟದ ಚಡಪಡಿಕೆಯಲಿಜಾತಕಪಕ್ಷಿ ಜೀವಸೆಲೆಗಾಗಿ ಕಾತರಿಸಿ ಜವವ ಕಾಯುತ್ತಿದೆ ಸಾಕಿ ಇರುಳ ತಿಂಗಳ ತೇಜಸ್ಸನ್ನು ಭ್ರಮಿಸಿ ಸ್ಮೃತಿಪಟಲದ ಅಕ್ಷಿಗಳಲ್ಲಿಜಾರಿದ ಅಶ್ರುಬಿಂದುಗಳ […]

ಕಾವ್ಯಯಾನ

ಸಮುದ್ರ ಸಂಗೀತ ಫಾಲ್ಗುಣ ಗೌಡ ಅಚವೆ. ದೂರ ದಿಗಂತದಿಂದ ಓಡಿ ಬರುವಅಲೆಗಳು ದಂಡೆಗೆ ಅಪ್ಪಳಿಸುತ್ತಿವೆನಿರಾಳವಾಗುತ್ತಿವೆ.ಗುರಿಯ ಸಾಫಲ್ಯತೆಪ್ರಯತ್ನದ ಫಲವತ್ತತೆಸಾರುತ್ತಿದೆ ಕಡಲುಹಾಗೆ ಒಳಗೆ ಇಣುಕಿದರೆದಂಡೆಯ ಮೌನ ಸಂಗೀತಕೇಳುವುದು. ಸತ್ತ ಮೀನು ಸೌದೆ ಕೋಲುಎಲ್ಲವನ್ನೂ ದಂಡೆಗೆಸೆವತಾನು ಶುಭ್ರಗೊಳ್ಳುವ ಪರಿಅಚ್ಚರಿ!ಒಂದು ಕ್ಷಣ ಮನದಲ್ಲಿಣುಕಿದರೆನಿನ್ನೊಳಗಿನ ದ್ವೇಷ, ಅಸೂಯೆಕೋಪ ಸಣ್ಣತನಗಳ ಇದೇದಂಡೆಯಲ್ಲಿ ಬಿಟ್ಟು ಹೊರಡುವೆನಿಶ್ಕಲ್ಮಶ ಮನಸ ಹೊತ್ತು. ಶರಧಿಯೋಳಗಿನ ಆಳ ವಿಸ್ತಾರಭೋರ್ಗರೆತ,ಭರತ ಇಳಿತಗಳುಲಾಗಾಯ್ತಿನಿಂದಿಲ್ಲಿವರೆಗೆಸೇರುವ ಹೊಳೆಹಳ್ಳ,ನದಿಗಳುಕೂಡುತ್ತಲೇ ಇವೆ.ಎಲ್ಲ ಇದ್ದು ಇಲ್ಲದಂತಿರುವಸಮುದ್ರ ಸಮತೋಲನದ ಪಯಣನಿನ್ನೊಳಗೆ ಬಿಂದು ಸಿಂಧುವಾಗಲಿ. ಆಗಾಗ್ಗೆ ಅಥವಾ ಸಂಜೆಯಲ್ಲಿಸಣ್ಣಗೆ ಅಲೆವ ಅಲೆ ತನ್ನೊಳಗಿನಸುಪ್ತ ಸಂಗೀತ ಸೃಷ್ಟಿಸುವುದುನಿನ್ನೊಳಗಿನ […]

ಪ್ರಸ್ತುತ

ಕೊರೊನಾ ಕಾಲದ ರಂಗಸಂಸ್ಕೃತಿ ಚಿಂತನೆಗಳು ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಕರಾಳ ರಾಕ್ಷಸ ಹಾವಳಿಯಿಂದಾಗಿ ಮನುಷ್ಯರ ಬದುಕು ತೀವ್ರ ಸ್ವರೂಪದ ಆಘಾತವನ್ನು ಎದುರಿಸುವಂತಾಗಿದೆ. ಸಾಂಸ್ಕೃತಿಕ ಬದುಕಿಗೂ ತೀವ್ರವಾದ ಪೆಟ್ಟು ಬಿದ್ದಿದೆ. ನಿಸ್ಸಂದೇಹವಾಗಿ ಅದನ್ನು ಯಾರೂ ಅಲ್ಲಗಳೆಯಲಾರರು. ಹಾಗಂತ ಕೊರೊನಾ ಪೂರ್ವದಲ್ಲಿ ನಮ್ಮ ಸಾಹಿತ್ಯ, ಸಂಗೀತ, ನಾಟಕ ಹೀಗೆ ಎಲ್ಲಾ ಕಲೆಗಳಿಗೆ ಸಿಗುತ್ತಿದ್ದ ಪ್ರೋತ್ಸಾಹ, ಸಹಾಯ, ಸಹಕಾರ, ಅಭಿವ್ಯಕ್ತಿ ಸ್ವಾತಂತ್ರ್ಯ ಅಮೋಘವಾಗಿತ್ತು. ಅದರಿಂದಾಗಿ ಅತ್ಯಂತ ಸಮೃದ್ಧವಾದ ಸಾಂಸ್ಕೃತಿಕ ಬದುಕು ಮೈಮನ ತುಂಬಿ ಚೆಂಗುಲಾಬಿಯಂತೆ ಅರಳಿಕೊಂಡಿತ್ತೆಂದು ಭ್ರಮಿಸಬೇಕಿಲ್ಲ. ಈಗ ಕೊರೊನಾ […]

ಕಾವ್ಯಯಾನ

ಅಪ್ಪ ವೀಣಾ ನಿರಂಜನ್ ಯಾಕೋ ನಾನುಇವತ್ತಿಗೂ ಕೂಡಬೆಳೆದು ದೊಡ್ಡವಳಾಗಲೇ ಇಲ್ಲ! ಅಪ್ಪ ಮಾತ್ರಎಂದಿನಂತೆ ನನ್ನೊಳಗೆಬೆಳೆಯುತ್ತಲೇ ಇದ್ದಾನೆಅಪ್ಪನ ಅಸ್ಪಷ್ಟ ನೆನಪುಕಾಡಿದಾಗಲೆಲ್ಲನನ್ನವನೆದುರಿಗೆ ಮಗುವಾಗಿಬಿಡುವ ನಾನುಸುಖಾಸುಮ್ಮನೆರಚ್ಚೆ ಹಿಡಿಯುತ್ತೇನೆ ಹುಸಿ ರಂಪಎರಡು ಹನಿ ಕಣ್ಣೀರುಬಾಲ್ಯದ ಸವಾರಿಮಾಡಿಬಿಡುವ ಮನಸ್ಸುಅಪ್ಪನ ಕಾಯಿಲೆಅಮ್ಮನ ಗೋಳುಸರೀಕರ ತಾತ್ಸಾರನಮ್ಮಗಳ ಅಕಾಲ ಗಾಂಭೀರ್ಯತೆಎಷ್ಟು ನೀರು ಹಿಡಿದೀತುಪುಟ್ಟ ಬೊಗಸೆ ! ಪಾಳುಬಿದ್ದ ಅಪ್ಪನ ಮಹಾಮನೆಗೋಡೆ ಮಣ್ಣ ತಾರಸಿಯಮೇಲೆಲ್ಲ ಹುಲ್ಲು ಕಳೆಸಸ್ಯಗಳದೇ ಕಾರುಬಾರುಬಿರಿದು ಚೂರಾದ ಕಂಬಗಳುಎಷ್ಟು ಕತೆಗಳ ಹೇಳಿದರೂಮುಗಿಯದು ಇತಿಹಾಸ. ಮುದಿ ಹೆಂಗಸು ಹಜರತ್ ಬಿಇಂದಿಗೂ ಸ್ಮರಿಸುತ್ತಾಳೆಅಪ್ಪ ಕೊಡಿಸಿದ ಸರ್ಕಾರಿ ಮನೆಮತ್ತು ವಿಧವಾ ಪಿಂಚಣಿಯನ್ನು […]

ಅನುವಾದ ಸಂಗಾತಿ

ಕಡಲೊಳಗೆ ಕಡಲಾಮೆಗಳು ಇಂಗ್ಲೀಷ್ ಮೂಲ:Melvin B Tolson ಕನ್ನಡಕ್ಕೆ: ವಿ.ಗಣೇಶ್ ವಿಚಿತ್ರ ಆದರೂ ಸತ್ಯವಿದು ಕೇಳಿ     ಕಡಲಿನಲಿರುವ ಕಡಲಾಮೆಗಳ ಕಥೆ     ಕಡಲಾದರೇನು ಒಡಲಾದರೇನು?     ಕುಣಿದು ಕುಪ್ಪಳಿಸುವುದಕೆ ಚಿಂತೆ     ಒಮ್ಮೊಮ್ಮೆ ಅನ್ನ ಆಹಾರಗಳಿಲ್ಲದೆ     ಶಾರ್ಕಗಳು ಕಡಲಲ್ಲಿ ಒದ್ದಾಡುವುವು     ಬೇಟೆಯನು ಹುಡುಕುತ್ತ ಬರುವ     ಶಾರ್ಕ್‍ಗಳಿಗೆ ಸಿಗುವುದೀಆಮೆಗಳು     ಉದರವನು ತಣಿಳಿಸಲು ಆಕ್ರಮಿಸಿ     ನುಂಗುವುವು ಇಡಿ ಕಡಲಾಮೆಗಳನು     ಬೆಣ್ಣೆಯಂತಹ  ದೇಹದೊಳಗಿಳಿಯುತ್ತ     ಜಾರುವುದು ಆಮೆಯು ಉದರದೊಳಗೆ     ಒಳಸೇರಿದೊಡೆ […]

ಕಾವ್ಯಯಾನ

ಪ್ರೀತಿ ಬಡತನ ವಾಣಿ ಭಂಡಾರಿ ಅವ್ವನ ಸದ್ದಿರದ ಖಾಲಿ ಅಡಿಗೆ ಮನೆಯು,ಬಣಬಣ ಎನುತಲಿ ಮನವನು ಹಿಂಡಿದೆ.ಒಡಲೊಪ್ಪತ್ತಿಗೆ ಕೂಳು ತರಲು ಆಚೆಮನೆ,ಕಂಡ್ಲಿಲಿ ನಿಂತ ಅವ್ವನ ಬಂಗಿ ಕಾಣದಾಗಿದೆ. ಒಲೆಯೊಳು ಉರಿವ ಬೆಂಕಿಗೆ ಬೇಸರವು,ಚೆರ್ಗೆಯೊಳು ಕಾದಾರಿದ ಎಸರ್ನೀರಿತ್ತು.ತಣ್ಣಗಾಗಿ ಮತ್ತೊತ್ತುರಿಯಲು ಮನಸಿಲ್ಲದೆ, ಹೊಗೆಯುಗುಳುತಲಿ ನೋವಲಿ ಮಲಗಿತು. ಹಸಿ ಸೌದೆಯೊಳು ಉಗುಳೊ ಹೊಗೆಯಂತೆ,ಮನವು ಜಡ್ಡುಗಟ್ಟಿದಂತಹ ಮಸಿಯರಬೆ.ಇಲ್ಲಣವಿರದ ಖಾಲಿಪಾತ್ರೆ ಹೊರಳಿ ಮಲಗಿ,ಗಿಲಾವಿರದ ಗೋಡೆ ಕಥೆ ಹೇಳಿ ಮನದಲಿ ಹಬೆ. ತೊಳೆದ ಪಾತ್ರೆಯೊಳು ಪಾವಕ್ಕಿಯಿರದೆ,ಮನೆಮನದ ಮೂಲೆಯಲ್ಲಿ ರಶ್ಮಿ ಚೆಲ್ಲಿದೆ.ಬಡತನಕಿರುವ ಸಾವು ಪ್ರೀತಿಗಿರದಿಲ್ಲಿ ಎನುತ,ನೆಮ್ಮದಿ ತಾಣವೆ ಅಮ್ಮನಡಿಗೆ […]

ಕಾವ್ಯಯಾನ

ಬಂಗಾರದ ನೆನಪಿನ ಬೆಳ್ಳಿ ಗೆಜ್ಜೆ’ ವಸುಂಧರಾ ಕದಲೂರು ಮೊನ್ನೆ ಬಯಸೀ ಬಯಸೀಆಭರಣದಂಗಡಿಯಲಿ ಬಂಗಾರಬಣ್ಣದ ಗೆಜ್ಜೆ ಕೊಂಡೆ. ಬೆಳ್ಳಿ ಪಾದತುಳಿದು ಬಂದ ಹಾದಿ ನೆನಪುರಿಂಗಣಿಸಿ ಅನಾವರಣವಾಯಿತು ಹಣೆ ಕೆನ್ನೆ ಕೈಗಳ ಮೇಲೆ ಕಾಸಗಲಕಪ್ಪನು ದೃಷ್ಟಿ ಸೋಕದಂತೆ ಹಾಕಿಮುದ್ದು ಮಾಡಿ, ಪುಟ್ಟ ಕಾಲಿಗೆ ಹಗೂರಕಾಲ್ಮುರಿ ಕಿರುಗೆಜ್ಜೆಯನು ತೊಟ್ಟಿಲಲಿಟ್ಟುತೂಗಿದ ಸಂಭ್ರಮದ ನೆನಪಾಯಿತು.. ಗೋಡೆ ಹಿಡಿದು ತಟ್ಟಾಡಿಕೊಂಡುಹೆಜ್ಜೆಗೊಮ್ಮೆ ಝಲ್ಲೆನುವ ಪುಟ್ಚಪಾದಊರಿ ಬರುವ ಸದ್ದನು ಮುಂದುಮಾಡಿದಗೆಜ್ಜೆಯ ಸಮಾಚಾರ ನಾಕಾರು ಬೀದಿತಟ್ಟಿ ಕೇಕೆ ಹಾಕಿದ ನೆನಪಾಯಿತು.. ಅದೇನು ಗಮ್ಮತ್ತು ! ಗತ್ತು!ಮತ್ತು,ಸದ್ದು ಮಾಡದ ಗೆಜ್ಜೆ ತೊಟ್ಟಿದ್ದರೆದಾರಿ […]

ಕಾವ್ಯಯಾನ

ಹೀಗೊಂದು ಕವಿತೆ ನಾಗರಾಜ್ ಹರಪನಹಳ್ಳಿ -1-ಎರಡು ಬಾಗಿಲು ಮುಚ್ಚಿದವುಇಷ್ಟೇ ತೆರೆದ ಕಿಟಕಿಗಳುಅಲ್ಲಿ ಶಬ್ದಗಳುಮೊಳೆಯಲಿಲ್ಲ -2-ಬಾಗಿಲಿಲ್ಲದ ಊರಲ್ಲಿಬೀಗಗಳು ಕಳೆದು ಹೋಗಿವೆಶಬ್ದಗಳ ಕಳಕೊಂಡವರುದಿಕ್ಕು ದಿಶೆಯಿಲ್ಲದೇನಡೆಯುತ್ತಿದ್ದಾರೆಎಂದೂ ಸಿಗದ ಕೊನೆಗೆ -3-ಕಾಲಿಲ್ಲದವರನ್ನುಕೈಯಿಲ್ಲದವರು ಕುಣಿಸಿದರುಅನಾಥ ಬೀದಿಗಳಲ್ಲಿಮೆದುಳಿಲ್ಲದವರನ್ನುಕಣ್ಣಿಲ್ಲದವರು ಕೂಗಾಡಿಸಿದರುಹೃದಯ ಕಳೆದುಕೊಂಡದೊರೆಯ ಮಹಲಿನ ಮುಂದೆ -4-ಮುಗಿಲದುಃಖಭೂಮಿಯಬಾಯಾರಿಕೆಮುಗಿಯುವಂತಹದ್ದಲ್ಲ ಯಾಕೋ ಮನಸ್ಸು ಖಾಲಿ ಖಾಲಿಯಾಗಿದೆಆಕೆಯ ಹೆಜ್ಜೆ ಗೆಜ್ಜೆ ಸದ್ದು ಕೇಳದೇ ಹರಿವ ನದಿಗೂ ಕಳೆಯಿಲ್ಲಸಮುದ್ರ ಸೇರಿಯೂ ಸಂಭ್ರಮಿಸದ ಆಕೆಯಂತೆಮನದಲ್ಲಿ ಎದ್ದ ಭಾವಗಳ ಅಲೆ ಸದ್ದು ಅವಳ ತಟ್ಟಿದೆ**-6-ಹಿಡಿಯಷ್ಟು ಬದುಕಿನಲ್ಲಿ ಕಡಲಿನ ಪ್ರೀತಿಯ ಅರಿಯಲಾಗಲಿಲ್ಲ ದಿನವೂ ಸೂರ್ಯ ಬೆಳಗಿದರೂ ಮನುಷ್ಯ ಮನದ […]

ಕಾವ್ಯಯಾನ

ಅಪ್ಪ ಬಿದಲೋಟಿ ರಂಗನಾಥ್ ವಾತ್ಸಲ್ಯದ ಕೆನೆಕಟ್ಟಿಅಪ್ಪನ ಕರಳು ಅರಳಿಕಿರುಬೆರಳಿಡಿದು ನಡೆದ ಸ್ಪರ್ಶದ ಸುಖಮೀಸೆ ಬಲಿತರೂ ಕಾಡುವ ನೆನಪು ಊರ ಜಾತ್ರೆಯಲಿಕನ್ನಡಕದೊಳಗಿನ ಕಣ್ಣು ಬರೆದ ಕವನಮೌನದ ಮೆದು ಭಾಷೆಯಲಿಹೃದಯ ತಟ್ಟಿ ಅವ್ವನ ನಿರರ್ಗಳ ಉಸಿರು ದುಡ್ಡಿಲ್ಲದ ಅಪ್ಪನ ಜೇಬಿನಲಿನೋವಿನ ಜೇಡರ ಬಲೆ ಕಟ್ಟಿದರೂಬಿಡಿಸುತ್ತಾನೆ ಎಳೆ ಎಳೆಯಾಗಿಕಾಲದ ನೆರಳ ಮೇಲೆ ಕುಳಿತು ಅಪ್ಪನ ಹೇಗಲ ಮೇಲೆಎರಡೂ ಕಾಲುಗಳು ಇಳಿಬಿಟ್ಟುಜಗದ ಬೆಳಕನು ಕಣ್ಣುಗಳಲ್ಲಿ ತುಂಬಿಕೊಂಡುನಡೆಯುವಾಗಿನ ದಾರಿಯ ಬದಿಯಲಿಗರಿಕೆ ಚಿಗುರುವ ಪರಿಗೆಸೂರ್ಯನಿಗೂ ಹೊಟ್ಟೆಕಿಚ್ಚು ಗುಡಿಸಲ ಕವೆಗೆ ನೇತಾಕಿದ್ದತಮಟೆಯ ಸದ್ದಿನಲಿಕತ್ತಲೆಯ ಬೆನ್ನು ಮುರಿವ ಗತ್ತುಬೀಡಿ […]

Back To Top