ದಿಕ್ಸೂಚಿ

ದಿಕ್ಸೂಚಿ

ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ. ಜಯಶ್ರೀ ಜೆ.ಅಬ್ಬಿಗೇರಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ “ನ್ಯಾಯಾಧೀಶರೇ, ನನ್ನ ಜೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ” ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ “ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ. ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ […]

ಜೀವನ

ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “ ಪ್ರೊ ಸುಧಾ ಹುಚ್ಚಣ್ಣವರ “ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “             “ದೃಷ್ಟಿಯಂತೆ ಸೃಷ್ಟಿ “ಎನ್ನುವ ಹಾಗೆ ನಮ್ಮಲ್ಲಿರುವ ವಿಶಾಲ ದೃಷ್ಟಿಕೋನಗಳೇ ನಮ್ಮ ಸುಂದರ ಬದುಕಿಗೆ ಆಧಾರವಾಗುತ್ತದೆ.ಸೃಷ್ಟಿಯಲ್ಲಿ ಇತರ ಜೀವಿಗಳಿಗೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ತೀರ್ಮಾನ ಮಾಡುವ ವಿವೇಕ ಇರುವುದಿಲ್ಲ ಆದರೆ ಮನುಷ್ಯನಲ್ಲಿ ಈ ವಿವೇಕವೂ ಪೂರ್ಣ ಪ್ರಮಾಣದಲ್ಲಿ ವಿಕಾಸವಾಗಿದೆ.ಸೃಷ್ಟಿಯ ಆದಿಯಿಂದಲೂ ಮನುಷ್ಯ ತನ್ನ ವಿವೇಕವನ್ನು ಹಲವಾರು ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತ ಬಂದಿದ್ದಾನೆ.ನಮ್ಮ ಸುತ್ತಲಿರುವ […]

ಕಾವ್ಯಯಾನ

ಸ೦ಜೆ ಇಳಿಬಿಸಿಲು ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಎಷ್ಟು ಚೆ೦ದ ವಿದ್ದೆಯೇ ನೀನು,ಓರೆ ಬೈತಲೆಯವಳೆ, ಮಲ್ಲಿಗೆಯ ಮುಡಿದವಳೆಲ೦ಗ ದಾವಣಿಯಲ್ಲಿ ನಲಿದಾಡಿದವಳೆ,ಪಡಸಾಲೆಯಲಿ ಓಡಿ ಬ೦ದುಧಿಕ್ಕಿಯ ಹೊಡೆದು ಗಾಭರಿಯ ನೋಟದಲಿಪ್ರೇಮದೆಸಳುಗಳನೆಸೆದು ಓಡಿ ಹೋದವಳೆ! ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಕೆರೆಯ ಏರಿಯ ಮೇಲೆ ಕುಳಿತಿದ್ದ ಆ ಸ೦ಜೆತಾವರೆಯ ಮೊಗ್ಗುಗಳ ತೋರಿಸುತನಿನ್ನ ಮೊಲೆಗಳ ಹಾಗೆ ಎ೦ದು ನಾನ೦ದಾಗಹುಸಿ ಕೋಪದಲಿ ನನ್ನ ನೂಕಿದವಳೆಕೆರೆಯ ನೀರಲಿ ಕೆಡವಿನನ್ನ ಬಟ್ಟೆಯ ಜತೆಗೇ ನನ್ನ ಮನಸನ್ನೂಒದ್ದೆ […]

ವರ್ತಮಾನ

ಕವಡೆ ಲೋಬಾನದ ಪರಿಮಳಕ್ಕೆ ಬಿತ್ತು ಕರಾಳ ಕೊರೊನಾ ಪೆಟ್ಟು ಪ್ರತೀ ವರುಷವೂ ಸಂಕ್ರಮಣದಿಂದ ನಾಗರಪಂಚಮಿವರೆಗೆ ಹಳ್ಳಿ ಹಳ್ಳಿಗಳು ಸೇರಿದಂತೆ ನಗರ ಪಟ್ಟಣಗಳ ತುಂಬೆಲ್ಲಾ ವೃತ್ತಿರಂಗಭೂಮಿ ನಾಟಕಗಳ ಸುಗ್ಗಿ. ಬಹುಪಾಲು ಜಾತ್ರೆಗಳು ಜರುಗುವುದು ಇದೇ ಅವಧಿಯಲ್ಲೇ. ಒಕ್ಕಲುಮಕ್ಕಳು ಬೆಳೆವ ಬೆಳೆಗಳ ಫಸಲಿನಸುಗ್ಗಿ ಮುಗಿದು ಹಬ್ಬ, ಹುಣ್ಣಿಮೆ, ಜಾತ್ರೆಗಳ ಸಡಗರ ಸಂಭ್ರಮ. ವರ್ಷವೆಲ್ಲ ದುಡಿದ ಜೀವಗಳಿಗೆ ಆಡಿ ನಲಿದು, ಹಾಡಿ, ಕುಣಿವ ಹಂಗಾಮ. ಸಹಜವಾಗಿ ವೃತ್ತಿರಂಗ ನಾಟಕಗಳೆಂದರೆ ಜನ ಸಾಮಾನ್ಯರ ಮನರಂಜನೆಯ ಘಮಲು. ಕವಡೆ ಲೋಬಾನದ ಪರಿಮಳ. ಝಗಮಗಿಸುವ ಬಣ್ಣಬಣ್ಣದ […]

ಕಾವ್ಯಯಾನ

 ಯಾವತ್ತೂ ಅವರ ಕತೆಯೇ ಉಂಡೆಯಾ ಕೂಸೆ ಎಂದುಅವ್ವಗೆ ಕೇಳುವ ಆಸೆಅಡ್ಡಿ ಮಾಡುವುದದಕೆಅಪ್ಪನ ತೂತುಬಿದ್ದ ಕಿಸೆ ಅವರ ಒಲೆಯ ಮೇಲಿನ ಮಡಕೆಒಡೆದು ಹೋದುದು ಮುದ್ದೆ ಕೋಲಿನಕಾರಣಕ್ಕೇನಲ್ಲಎಸರಿಗೂ ನೀರ ಇಡಲಾರದ ಬರಡುನೋವಿಗೆ ಖಾಲಿ ಮಡಕೆಯೂಬಾಯ್ದೆರೆಯಿತು ನೋಡಲ್ಲ. ನೆಲೆ ನೀಡದ ಸೂರು, ಉರಿವಸೂರ್ಯನ ತೇರು, ಕೆಂಡದುಂಡೆಯಮೇಲೆಯೇ ನಡೆದರು ಅವರೆಲ್ಲ;ಉರಿ ಹಾದಿ ಬರಿಗಾಲಿಗೆ ಊರದಾರಿ ಮರೆಸಿತು, ಹರಿದ ಬೆವರುಕಣ್ತುಂಬಿ, ನೋಟ ಮಂಜಾಯಿತು ಇವನಾರವ ಇವನಾರವಎಂದವರೇ ಎಲ್ಲ ; ಇವ ನಮ್ಮವಅವ ನಮ್ಮವ ಎನ್ನಲ್ಲಿಲ್ಲ. ಕಷ್ಟಸಂಕಷ್ಟವಾಗಿ ಅವರನು ಕಾಡಿತಲ್ಲಕಾಯಕಜೀವಿಗೆ ಯಾವ ಯುಗದಲೂರಕ್ಷಣೆ ಸಿಗದಲ್ಲ.. ***** […]

ಪುಸ್ತಕ ಸಂಗಾತಿ

ಕವಿ ಏಕತ್ವದ ಸಂಕೇತವಾದರೆ, ಕತೆಗಾರ/ಕತೆಗಾರ್ತಿ ಬಹುತ್ವದ ಪ್ರತಿನಿಧಿ ಇವತ್ತು ಕನ್ನಡದ ಕತೆಗಾರ್ತಿ ಡಾ.ವೀಣಾ ಶಾಂತೇಶ್ವರ ಅವರ ಸಮಗ್ರ ಕಥನ‌ ಸಾಹಿತ್ಯ ಓದಲು ತೆಗೆದುಕೊಂಡ ಪುಸ್ತಕ ‌.ಇದರಲ್ಲಿ‌ ನಾ ಓದೊದ ಮೊದಲ ಕತೆ‌ ಕವಲು ಸಂಕಲನದ‌ ” ಹನುಮಾಪುರದಲ್ಲಿ ಹನುಮಂತ ಜಯಂತಿ. ಹಾಗೂ ಹೋಟೆಲ್ ಬ್ಲೂ.ಹನುಮಾಪುರದಲ್ಲಿ ಹನುಮ‌‌ ಜಯಂತಿ …ಜಾತಿ ಸಂಘರ್ಷದ ಸಣ್ಣ ಝಲಕ್ ಹಿಡಿದಿಡುವ ಕತೆ.‌ ಒಂದು ಗ್ರಾಮದ ಚಲನೆ ಶಿಕ್ಷಣ ಕಲಿತು ಬಂದ ಯುವಕನಿಂದ ಹೇಗೆ ಸಾಧ್ಯವಾಗುತ್ತದೆ ಹಾಗೂ ಸಂಬಂಧಗಳು ಹೇಗಿರುತ್ತವೆ..ಜಾತೀಯ ವ್ಯವಸ್ಥೆ ಆಯಾಮವನ್ನು ಕತೆಗಾರ್ತಿ […]

ಕಾವ್ಯಯಾನ

ಏಕಾಂಗಿಯೊಬ್ಬನ ಏಕಾಂತ ಕಣ್ಣೀರು ಖಾಲಿಯಾಗುವುಂತೆತುಂಬಿಕೊಳ್ಳುತ್ತದೆ ಮತ್ತೆ ಮತ್ತೆಏಕಾಂತ ಖಾಲಿಯಾದರೂಏಕಾಂಗಿಯಾಗುವಂತೆಕಣ್ಣೀರು ಕೂಡ ನೀರಾಗುತ್ತದೆಅವಳ ಬಸಿದು ತಾನೇ ಉಳಿದಾಗ ಮೂರುಗಂಟಿನ ಆಚೆ ನೂರುಗಂಟುಗಳಾಚೆತೆರೆದುಕೊಂಡ ಹೊಸಲೋಕಕೆಪಕ್ಷಿಯ ರೆಕ್ಕೆಗಳ ಕಸುವಿನಂತೆಜಿಗಿದ ಕನಸುಗಳನೆಲ್ಲಾ ಗಂಟಿನೊಳಗೆಮನದೊಡೆಯನ ಸಂಗಾತಕೆಇಬ್ಬನಿಯ ಜೀವದಂತೆ ಕಾದುಕೂತವಳು ಅಲೆಯೊಡೆವ ರುಚಿ ತಂಗಾಳಿಗೆ ಸವರಿಕಾಮನ ಬಿಲ್ಲನು ಕಂಡವಳುತೆಂಡೆಯೊಡೆದ ಕಣ್ಣೀರ ಮಾತಿಗೆಗಾಳಿಯನೆ ಸೀಳಿ ಹೊರಟಾಗತಂಗಾಳಿಗೆ ಬಸಿರಾಗಿ ಕನಸುಗಳ ಹೆತ್ತವಳು ಅಕ್ಷರಕ್ಕೆ ಸಿಗದ ಅಕ್ಕರೆಯನುಲಿಪಿಮಾಡಿ ಅವನಿಗೆ ತಲುಪಿಸಲುಹಾರಿ ಹಾರಿ ನೆಲೆ ಕಾಣದೆ ಅಲೆಯುವಳುಆಗೊಮ್ಮೆ ಈಗೊಮ್ಮೆ ಟಿಸಿಲೊಂದು ಕಂಡಾಗಮುಂಗಾಲಿನಲೆ ಜೀವ ಹಿಡಿಯುವಳುನಂಬಿಕೆಯ ಮಾತು ಹೇಳಿದ ಆ ಮರಕೆಅವಳ ಹಳಹಳಿಕೆಗಳನು […]

ಕಾವ್ಯಯಾನ

ಕವಿತೆಯಾಗುವ ಹೊತ್ತು ಅಂಜನಾ ಹೆಗಡೆ ಅಲ್ಲಿಕರುಳ ಬಿಸುಪಿಗೆಕದಲಿದ ಕುಡಿಯೊಂದುಕನಸಾಗಿ ಮಡಿಲುತುಂಬಿಬೆಳ್ಳಿಗೆಜ್ಜೆಯ ಭಾರಕ್ಕೆ ಕನಲಿದರೆನಕ್ಷತ್ರವೊಂದುದೃಷ್ಟಿಬೊಟ್ಟು ಸವರಿಹಣೆ ನೇವರಿಸಿ ನಕ್ಕಾಗಸೃಷ್ಟಿ ಸ್ಥಿತಿ ಲಯಗಳಭಾಷ್ಯವಿಲ್ಲದ ಬರೆಹಕ್ಕೆತಂಬೂರಿ ಹಿಡಿದುನಾನಿಲ್ಲಿಅಕ್ಷರವಾಗುತ್ತೇನೆ ಅಲ್ಲೊಂದು ಇಬ್ಬನಿಹಸಿರೆಲೆಯ ಮೋಹಕ್ಕೆಆವಿಯಾಗುವ ಹೊತ್ತಲ್ಲಿಮುಂಗುರುಳೊಂದು ನಾಚಿಕೆಂಪಾಗಿಅರಳಿದ ದಾಸವಾಳದಪ್ರೇಮಕ್ಕೆ ಬಿದ್ದಾಗಅಂಗಳಕ್ಕಿಳಿದ ಬಣ್ಣಗಳಒಂದೊಂದಾಗಿ ಹೆಕ್ಕುತ್ತಜೋಡಿಸುತ್ತಬೆಳಕಾಗಿ ಮೈನೆರೆದುನಾನೊಂದುಚಿತ್ರಕಾವ್ಯವಾಗುತ್ತೇನೆ ಅಲ್ಲಿಜೋಕಾಲಿಯೊಂದುಸ್ವಪ್ನಗಳ ಜೀಕುತ್ತಮುಗಿಲಿಗೆ ಮುಖಕೊಟ್ಟುಹಗುರಾಗುವ ಕ್ಷಣದಲ್ಲಿಗಾಳಿಗಂಟಿದ ಪಾದನೆಲವ ಚುಂಬಿಸುವಾಗಜೀಕಲಾಗದನೆಲದೆದೆಯ ನಿಟ್ಟುಸಿರಗಾಳಿಗೊಪ್ಪಿಸಿನಾನಿಲ್ಲಿಕವಿತೆಯಾಗುತ್ತೇನೆ **********

ಕವಿತೆ ಕಾರ್ನರ್

ಕವಿತೆಯಂತವಳು (ಕವಿತೆಯಂತವಳು ಕವಿತೆಯಾದಾಗ) 1.ಸಹ್ಯಾದ್ರಿಯ ಹಸಿರು ಚಪ್ಪರದೊಳಗಿನೊಂದುಹಳೆಯ ಮನೆಯೊಳಗೆ ಕೂತುಬರೆಯುತ್ತಾಳೆಪ್ರತಿ ಶಬುದವನ್ನೂ ಹೃದಯದೊಳಗಿಂದ ಹೆಕ್ಕಿತಂದುತನ್ನ ಒಂಟಿತನದ ಕಣ್ಣೀರಿನಿಂದ ಅವನ್ನು ತೊಳೆದುಒಣಗಿಸಿತನ್ನ ಲೋಕದ ಕಣ್ಣಿನ ನಗುವಿನ ಬಣ್ಣವನದಕೆ ಲೇಪಿಸಿಕಟ್ಟುತ್ತಾಳೆಕವಿತೆಯ ಹಾರ,ತನ್ನಅವಮಾನಅಸಹಾಯಕತೆಹತಾಶೆಗಳ ಪೋಣಿಸಿ!ಓದುತ್ತೇನೆ. ತಲೆದೂಗುತ್ತೇನೆಅವಳ ಕಾವ್ಯ ಕಟ್ಟುವ ಕಲೆಗಿಂತ ಹೆಚ್ಚಾಗಿನಕ್ಕು ನಕ್ಕೇ ದು:ಖ ಮರೆಸಿಮರುಳು ಮಾಡುವ ಅವಳ ಬದುಕುವ ಕಲೆಗಾರಿಕೆಯನ್ನು! ಅವಳಿಗೂ ಬದುಕೆಂಬುದಿದೆ ಕವಿತೆಯಹೊರತಾಗಿಯೂಎಂಬುದು ನೆನಪಾದಾಗೆಲ್ಲನಾನು ಕಣ್ಣೀರಾಗುತ್ತೇನೆ.=================== 2ಕಂಡೆ:ಶಬುದಗಳ ಒಡನಾಟದೊಳಗೆ ತಾನೇ ಒಂದುಹೊಸ ಶಬುದವಾದವಳ ಹಾಗೆ ಅವಳು ಕಟ್ಟಿದ ಪ್ರತಿ ಶಬುದಗಳ ಪಾದಗಳಲ್ಲೂಗಾಯದ ಗುರುತುಇಟ್ಟ ಹೆಜ್ಜೆಗಳೆಲ್ಲವೂ ಹೂವಿನ ಮೇಲೇನೂ ಆಗಿರಲಿಲ್ಲಬಹಳಷ್ಟು […]

ಕಾವ್ಯಯಾನ

ತುಡಿತ ವಿಜಯ್ ಶೆಟ್ಟಿ ಎಲ್ಲ ಮರೆತ ಒಂದು ಹಳೆಯಊರಕೇರಿಯ ದಾರಿಗುಂಟಸತತಸೈಕಲ್ ತುಳಿಯುವ ತುಡಿತನನಗೆ. ಇನ್ನೇನು ದಿನ ಕಳೆದು,ಉದಯಕ್ಕೆ ಸಿದ್ದವಾದ ರಾತ್ರಿಗೆ,ಸಂಜೆಯ ಹುಂಜದ ಹಂಗಿಲ್ಲಅಪರಿಚಿತ ಊರಕೇರಿಯ ದಿಕ್ಕುಹಣ್ಣು ಹಣ್ಣಾದ ರಸ್ತೆಗೂ ಎಂತಹ ಸೊಕ್ಕು! ತುಸುವೇ ಹೊತ್ತಿನ ಬಳಿಕನಾನು ತಲುಪುವ ಕೇರಿಯಾದರೂ ಎಂಥದು? ಮುದಿ ಲಾಟೀನಿನ ಮಂದ ಬೆಳಕಲ್ಲಿಮಿಂದ ಮುಖಗಳೊ,ಮಿಣುಕುವ ಕಣ್ಣುಗಳೋಆ ಊರಿನಲ್ಲಿ?ನೀರವತೆಯ ಬೆನ್ನಟ್ಟಿ ಗಾಳಿಯನ್ನು ಗೋಳಿಕ್ಕುವ ತೆಳು ಹಾಡಿನಂಥ ಸದ್ದುಗಳೋಆ ಊರಿನಲ್ಲಿ?ಒಣ ಗಂಡಸರು,ಇಲಿಗಳಂತ ಮಕ್ಕಳು,ಬಳೆಯ ಹೆಂಗಸರೋಆ ಊರಿನಲ್ಲಿ? ನನ್ನನು ಅಲ್ಲಿ ಊಹಿಸುವ ಉಮೇದಿಗೆ ದುಗುಡ ಕೂಡ ಬೆರೆತಿದೆಒಂದೋಅಪರಿಚಿತ ಗುಡಿಸಲೊಂದರಲ್ಲಿಮಂಕು […]

Back To Top