ಪಾರಿಜಾತ ಗಿಡ

ಪಾರಿಜಾತ ಗಿಡ

ಲಲಿತ ಪ್ರಬಂಧ ಪಾರಿಜಾತ ಗಿಡ ವಿದ್ಯಾ ಶ್ರೀ ಎಸ್ ಅಡೂರ್. ಪಾರಿಜಾತ ಹೂವಿನ ಮರ ಎಂದರೆ ಚಿಕ್ಕಂದಿನಿಂದಲೂ ನನಗೆ ಅದೆಂತದೋ  ಒಂದು  ರೀತಿಯ ಪ್ರೀತಿ.ಅದೊಂದು ದೇವಲೋಕದ ಸುವಸ್ತು, ಕೃಷ್ಣ ತನ್ನ ಮಡದಿ ಸತ್ಯಭಾಮೆಗಾಗಿ ತಂದ ಹೂವು ಎಂದೆಲ್ಲ  ಅರ್ದಂಬರ್ದ ಕಥೆಗಳು ಕಲಸುಮೇಲೋಗರ ವಾಗಿ ಒಂದು ಅಲೌಕಿಕ ಆಕರ್ಷಣೆ ಯಾಗಿ ಬೆಳೆದಿದೆ.             ಕೆಲವು ವರ್ಷಗಳ ಹಿಂದೆ ಎಲ್ಲೋ ನೆಂಟರ ಮನೆಗೆ ಹೋಗಿದ್ದಾಗ ಒಂದು ಗೆಲ್ಲು ಕೇಳಿ ತಂದು ಮನೆಯ ಹಿತ್ತಿಲಲ್ಲಿ ನೆಟ್ಟಿದ್ದೆ. ಕಾಲಮಾನ ಕ್ಕೆ ಅನುಗುಣವಾಗಿ ಅದು […]

ನಿನಗಿಂತ ದೊಡ್ಡವರು…..

ಕವಿತೆ ನಿನಗಿಂತ ದೊಡ್ಡವರು….. ಯಮುನಾ.ಕಂಬಾರ ತುಟಿ ಬಿಚ್ಚದೇ ಬಾಯ್ಮುಚ್ಚಿಕೊಂಡುತೆಪ್ಪಗೆ ಮೌನದಲಿ,ಒಮ್ಮೆ ದುಃಖ ಒಮ್ಮೆ ಸುಖ ಅಟ್ಟಿಸಿಕೊಂಡುಕಾಲ ಹಾಕುವ ಕಾರಣಿಕಳೇ….!!. ಕ್ರೌರ್ಯ , ಕೋಪ ತಾಪಗಳಗರ್ಭದಲ್ಲಿ ಅಡಗಿ ಕುದಿಗೊಂಡರೂಮತ್ತೆ ಮತ್ತೆ ಅದೇ ಮೌನಅದೇ ಶಾಂತಿ ,ಅದೇ ಆ ಸುರಿಯುವ ಕಾಂತಿ !! ನಿನ್ನ ಸಹನೆಗೆ ತಾಳ್ಮೆಗೆಇಲ್ಲ – ಸಾಟಿಇತಿಹಾಸದ ಕತ್ತಲಲ್ಲಿ – ಕರಗಿವೆಸಾವಿರ ಸಾವಿರ ಮರೆಯದ ಮಾಣಿಕ್ಯದ ದೀಪ್ತಿ !! ಆಗಲೂ ಈಗಲೂ ಧುಮ್ಮಿಕ್ಕಿ ಪುಟಿಯುತಿವೆ – ಸಾಯದ ಅಮರ ಅಕ್ಷರಗಳು:” ದುರಾಸೆ ದುಃಖಕ್ಕೆ ಮೂಲಅಹಿಂಸೆ ಬದುಕಿನಸೂತ್ರಕಾಯಕವೇ ಕೈಲಾಸ […]

ಜಿ. ಪಿ. ರಾಜರತ್ನಂ ಜನ್ಮದಿನ

ಇಂದು ಕನ್ನಡದ ಧೀಮಂತ ಸಾಹಿತಿ ಪ್ರೊ.ಜಿ.ಪಿ.ರಾಜರತ್ನಂ ಅವರು ಜನಿಸಿದ ದಿನ ಬಾಲ್ಯ ‘ಜಿ. ಪಿ. ರಾಜರತ್ನಂ'(೧೯೦೪-೧೯೭೯) ರವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ “ನಾಗಪಟ್ಟಣ”ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೪ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು […]

ರಾಮಕೃಷ್ಣ ಗುಂದಿ ಆತ್ಮಕತೆ–02 ಗುಂದಿ ಹಿತ್ತಲದಲ್ಲಿ ಕಡ್ಲೆ ಬೇಸಾಯ ಗಂಗಾವಳಿ ನದಿಯ ದಕ್ಷಿಣ ತೀರದಿಂದ ನದಿಯ ಶಾಖೆಯಾಗಿ ಚಿಕ್ಕ ಹಳ್ಳವೊಂದು ಅಗ್ಗರಗೋಣ ಗ್ರಾಮದ ಅಂಚಿನಿಂದ ಹೆಗ್ರೆ ಗ್ರಾಮದವರೆಗೆ ಹರಿದು ಅಗ್ರಗೋಣ ಮತ್ತು ನಾಡುಮಾಸ್ಕೇರಿ ಗ್ರಾಮಗಳ ನಡುವೆ ಗಡಿರೇಖೆಯೊಂದನ್ನು ನಿರ್ಮಿಸಿದೆ. ಹಳ್ಳದ ಇಕ್ಕೆಲದಲ್ಲೂ ವಿಸ್ತಾರವಾದ ಗದ್ದೆಬಯಲು ಹನೇಹಳ್ಳಿಯ ಅಂಚಿನವರೆಗೂ ವ್ಯಾಪಿಸಿದೆ. ಹಳ್ಳದ ಪೂರ್ವ ದಂಡೆಯ ಅಗ್ಗರಗೋಣ ಗ್ರಾಮ ವ್ಯಾಪ್ತಿಯ ಬಯಲಲ್ಲಿ ಒಂದು ಪುಟ್ಟ ದಿನ್ನೆಯಿದೆ. ಹಳ್ಳಕ್ಕೆ ಹತ್ತಿರವಾಗಿ ಎರಡು-ಮೂರು ಗುಂಟೆಯ ಅಳತೆಯಲ್ಲಿ ವಿಸ್ತರಿಸಿಕೊಂಡಿರುವ ಈ ಗುಂದವನ್ನು ಜನರು ವಾಡಿಕೆಯಲ್ಲಿ […]

ಬೆಳಗಬೇಕಾದರೆ..!

ಕವಿತೆ ಬೆಳಗಬೇಕಾದರೆ..! ಸುಮನಸ್ವಿನಿ. ಎಂ ನೋವ ನುಂಗಲು ಹಿಂಜರಿಯದೇಘರ್ಷಿಸಿಕೊಳ್ಳಬೇಕುಬೆಳಕ ಹೊತ್ತಿಸಬೇಕಾದರೆ… ಸುಟ್ಟುಕೊಳ್ಳುವ ಅಂಜಿಕೆಯಿಲ್ಲದೇನಿರ್ಭಯ ಗೀರಿಕೊಳ್ಳಬೇಕುಬೆಳಗಬೇಕಾದರೆ… ಕರಗಿಹೋಗಲು ಕಳವಳಗೊಳದೇಪ್ರಾಂಜಲ ದಹಿಸಬೇಕುಪ್ರಜ್ವಲಿಸಬೇಕಾದರೆ… ಬೂದಿಯಾಗಲು ಹೆದರದೇಹೊತ್ತಿ ಉರಿಯಬೇಕುಬೆಳಕಾಗಬೇಕಾದರೆ… ಮಾಯವಾಗೋ ಭಯವ ಮೀರಿನಿರಂತರ ಧಗಧಗಿಸಬೇಕುಶಾಶ್ವತ ಮಿನಗುತಿರಬೇಕಾದರೆ… ******************************************

ಅಂಕಣ ಬರಹ ರಂಗ ರಂಗೋಲಿ -೨  ‘ಸಿರಿ’ ತುಂಬಿದ ಬಾಲ್ಯ ಒಂದು ಭಾವನಾ ಲೋಕದ ಹೊಸಿಲಿನ ಒಳಗೆ ರಂಗು ರಂಗಾದ ಕಲ್ಪನಾಲೋಕ ಶೃಂಗಾರಗೊಂಡು ಕೂತಿತ್ತು. ಅಲ್ಲಿ ನಿತ್ಯ ನರ್ತನ ವಿಲಾಸ. ನನ್ನಲೊಳಗೆ ” ಸಿರಿ” ಎಂಬ ಪ್ರೀತಿ ಅರಳಿದ ಪ್ರಕ್ರಿಯೆಗೆ ಮೂಲ ಬಿತ್ತನೆಯಿದು.  ಹಾಂ..ಸಿರಿ!. ಹೌದು..ಸ್ತ್ರೀ ಕುಲಕ್ಕೆ ಪ್ರತಿಭಟನೆಯ ದಾರಿಯನ್ನು ತೋರಿಸಿಕೊಟ್ಟ, ಪುರುಷ ಪ್ರಧಾನ ಸಮಾಜದ ವಿರುದ್ಧ ಬಂಡಾಯ ಸಾರಿದ ಹಳ್ಳಿಯ ಹೆಣ್ಣಿನ ಆತ್ಮವಿಶ್ವಾಸದ ಪ್ರತೀಕ. ಸ್ತ್ರೀತ್ವವನ್ನು ಅರಿವಿನ ನೆಲೆಯಲ್ಲಿ  ಗ್ರಹಿಸಬೇಕಾದ ಒತ್ತಾಯವನ್ನು ತಿಳಿಸಿದ ಇಲ್ಲಿನ ಮಣ್ಣಿನಲ್ಲಿ […]

ಮಾರುವೇಷ

ಕವಿತೆ ಮಾರುವೇಷ ಪ್ರೊ.  ಚಂದ್ರಶೇಖರ ಹೆಗಡೆ ಪಾತಾಳದಿಂದೆದ್ದು ಭೋಂಕನೆಬೇಟೆಯಾಡುವ ವಿಧಿಯೇಶ್ವಾನದಲ್ಲಡಗಿ ಹೊಟ್ಟೆ ಹೊರೆವಹಂಗಿನರಮನೆಯ ವಾಸವೇಕೆ ?ವಾಹನದೊಳಗಿಳಿದು ಬಲಿ ಬೇಡುವಭಿಕ್ಷಾಟನೆಯ ಡಾಂಭಿಕತೆಯೇಕೆ ?ಹೃದಯದೊಳಪೊಕ್ಕು ನಿಲ್ಲಿಸುವಮೋಸದ ಮಾರುವೇಷವೇಕೆ ? ಹೊರಬಂದು ಎದುರಾಗಿಬಿಡು ಒಮ್ಮೆನಿಜರೂಪ ಸತ್ಯ ನಾಮವ ತಳೆದುಕಣ್ತುಂಬಿಕೊಳ್ಳಲಿ ಜಗವು ಮೊರೆದುಪ್ರಾರ್ಥಿಸಿದಣಿವಿಲ್ಲದ ಕಾಯಕಕೆ ಶರಣುಶರಣೆಂದೆನುತ!ಎದೆಯೊಳಗಿನ ದಯೆ ಕರುಣೆಗಳಹುಡುಕಿ ಕೊರಗುತ ಯಾರಿಗೂ ಜಗ್ಗದ ಭೀಮಬಲವೆಲ್ಲಿಯದು ?ವಶ ಮಾಡಿಕೊಳ್ಳುವ ಅವಲೋಕಿನಿಯೆಲ್ಲಿಯದು ?ಬಿಡುವ ಬಾಣದ ತುದಿಗೆಎಂದೂ ನೀಗದ ಹಸಿವಿನೊಡಲುಎಲ್ಲಿ ಬರಿದಾಗುವುದೋ ಇಂದುಯಾವ ತಾಯಿಯ ಮಡಿಲು ಪಯಣ ಹೊರಟವರ ಮನದಲ್ಲೊಂದುನಿತ್ಯ ಅಳುಕುಯಾರಿಗೆ ಗೊತ್ತು ನಿನ್ನೊಳಗಿನವಂಚನೆಯ ಹುಳುಕುಕಾಣದ ಲೋಕದೊಳಗೇಕೆ […]

ಶಾಯರಿ

ಶಾಯರಿ ಭಾರತಿ ರವೀಂದ್ರ ಕಾಡಿಗೆ ಕಣ್ಣುಗಳನ್ನಮುದ್ದಿಸಲಿ ಹ್ಯಾಗೆ ಹೇಳು, ನನ್ನೊಡತಿಕರಿ ಮೋಡ ಕೋಪಿಸಿಕೊಂಡುಸುರದಾವ ಪ್ರವಾಹ ಬಂದಾಂಗ. ಬಂದರ ಬರಲೇಳುಸಾವಿರ ಸಂಕಟಗಳಸುರಿ ಮಳಿನಿನ್ನ ಪಿರೂತಿ ಸಾಥ್ಇರುವಾಗ ನಂಗ್ಯಾಕೆ ಭೀತಿ ******************************************

ಸ್ನೇಹ

ವಾರದ ಕಥೆ ಸ್ನೇಹ ಜ್ಯೋತಿ ಡಿ ಭೊಮ್ಮಾ ಮದುವೆಯಾಗಿ ಮುವತೈದು ವಸಂತಗಳನ್ನು ಜೊತೆಯಲ್ಲಿ ಕಳೆದ ನಿರ್ಮಲಾ ಮತ್ತು ಮೂರ್ತಿ ದಂಪತಿಗಳಿಗೆ ಈಗ ಬದುಕಿನ ಎಲ್ಲಾ ಜವಾಬ್ದಾರಿ ಮುಗಿಸಿ ನಿರಮ್ಮಳವಾಗಿ ಬದುಕು ಸಾಗಿಸುವ ಸಮಯ.ಮಗನ ಮತ್ತು ಮಗಳ ಮದುವೆ ಮಾಡಿ ಅವರನ್ನು ಒಂದು ದಡಕ್ಕೆಸೇರಿಸಬೇಕಾದರೆ ಜೀವನದ ಸಮಯವೆಲ್ಲ ಮುಡುಪಾಗಿಡಬೇಕಾಯಿತು. ಈಗ ನಿವೃತ್ತಿ ಜೀವನ ನಡೆಸುತ್ತಿರುವ ಅವರಿಗೆ ಎಲ್ಲವೂ ಒಮ್ಮೆಲೆ ಖಾಲಿಯಾದ ಅನುಭವ,ಯಾವದರಲ್ಲೂ ಉತ್ಸಾಹವಿಲ್ಲ.ಇಷ್ಟು ದಿನ ನೌಕರಿ ಹಣಗಳಿಕೆ ಪ್ರತಿಷ್ಠೆ ಮಕ್ಕಳ ವಿದ್ಯಾಭ್ಯಾಸ ಮದುವೆಗಳ ಜವಾಬ್ದಾರಿಗಳೆಲ್ಲ ಒಂದೋಂದಾಗಿ ಮುಗಿಯುತ್ತಿದ್ದಂತೆ ಜೀವನದಲ್ಲಿ […]

ಮೌನದಲ್ಲಿ ಮಾತುಗಳ ಮೆರವಣಿಗೆ…

ಪುಸ್ತಕ ಪರಿಚಯ ಮಾತು ಮೌನದ ನಡುವೆ ಸಾಹಿತ್ಯ ಎನ್ನುವುದು ಮಾನವನ ಪಾರದರ್ಶಕ ಅನುಭವಗಳ ಅನುಪಮ ಅಭಿವ್ಯಕ್ತಿ. ಈ ಅನುಭವ ಅನುಭೂತಿಯ ಮೂಲ ಆಕರವೇ ನಮ್ಮ ಸುಂದರ ಸಮಾಜ. ನಮ್ಮ ಸುತ್ತ ಮುತ್ತಲಿನ ಪರಿಸರ, ಪ್ರಕೃತಿ, ಸನ್ನಿವೇಶ, ಘಟನೆಗಳು ಹಾಗೂ ಮಾನವರ ವ್ಯಕ್ತಿತ್ವವು ಪರಸ್ಪರ ವ್ಯಕ್ತಿಗಳ ಅನುಭವವನ್ನು ರೂಪಿಸುತ್ತವೆ. ವ್ಯಕ್ತಿಯ ಈ ಅನನ್ಯ ಅನುಭವಕ್ಕೆ ರೂಪ ಕೊಡುವ ಸಾಧನವೇ ಭಾಷೆ. ಇದು ನಮ್ಮ ಸಾಮಾಜಿಕ ವ್ಯವಸ್ಥೆಯ ಕೂಸು. ಇದನ್ನು ಬಳಸಿಕೊಂಡೆ ಕವಿಯು ತನ್ನ ಅನುಭವಕ್ಕೆ ಚಿತ್ರ ಬಿಡಿಸುವುದು. ಈ […]

Back To Top