ದೂರ ದೂರದತೀರ

ದೂರ ದೂರದತೀರ

ಕವಿತೆ ದೂರ ದೂರದತೀರ ಶಾಂತಲಾ ಮಧು ದೂರ ದೂರದ ತೀರತೀರದೀದೂರಹಾಲ ಬೆಳದಿಂಗಳುನಕ್ಷತ್ರದಾ ಸರತಬ್ಬಿಮುದ್ದಾಡಿದಾ ನೆಲಬರ ಸಿಡಿಲು ಗುಡುಗುಮಳೆ ಅಪ್ಪಳಸಿ ಆಲಂಗಿಸಿ…ನಲಿದು ಹರಿದಾಡಿ ನೆಲ ದೂರ ದೂರದ ತೀರತೀರದೀ ದೂರ ತೆಂಗು ಅಡಕೆ ಮರತಬ್ಬಿದಾ ಬಳ್ಳಿಗಳುಹೂವಾಗಿ ಹಣ್ಣು ಕಾಯಾಗಿಮಣ್ಣಿನವಾಸನೆಗೆಮರುಳಾಗಿ ಸುಕಿಸಿದಾ ನೆಲ ದೂರ ದೂರದ ತೀರತೀರದೀ ದೂರ ಹಸಿರಿನಂಗಳಕೆ ಅದೆಕನಸಿನ ಚಾವಡಿ ಹೊದೆಸಿಲಕ್ಷಣ ವಿತ್ತ ಮೂರ್ತಿಕೆತ್ತಿಟ್ಟು ಜೀವದಾಳದಪ್ರಿತಿ ಸಂಸ್ಕೃುತಿಯಬೆೇರನಾಳದಲಿಹೂತ್ತಿಟ್ಟ ಆ ನೆಲ ದೂರ ದೂರದ ತೀರತೀರದೀ ದೂರ ಗುಡ್ಡ ಬೆಟ್ಟದಸಾಲುಪಶು ಪಕ್ಷಿ ಇಂಚರಒಡನಾಟ, .ಹಳ್ಳ ಕೊಳ್ಳದ ಸ್ಪರ್ಷಜೀವ ಚೇತನವಾಗಿಪಾಠ […]

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು”

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” ರಶ್ಮಿ ಎಸ್. ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ ಡಿ. 6,7,8 ಬಾಬರಿ ಮಸೀದಿ ಪ್ರಕರಣ ಆದಾಗ ಇಡೀ ದೇಶ ಕೋಮು ದಳ್ಳುರಿಯೊಳಗ ಧಗಧಗಿಸುತ್ತಿತ್ತು… ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ … ಮುಗಲ ಮಾರಿಯೊಳಗ ದೇವರ ನಗಿ ನೋಡ್ಕೊಂತ… ನನ್ನ ತಾಯಾ, (ದೊಡ್ಡಪ್ಪ) ಅಂಗಳದೊಳಗ ಅರಾಮ ಕುರ್ಚಿ ಹಾಕ್ಕೊಂಡು ಆಕಾಶ ನೋಡ್ಕೊಂತ ಕುಂತಾರ ಅಂದ್ರ ಏನೋ ಚಿಂತಿ ಕಾಡ್ತದ ಅಂತನೇ ಅರ್ಥ. ಅವಾಗ ನಾವು ಯಾರೂ […]

ಅಂಕಣ ಬರಹ ಕರುಳು ಹಿಂಡುವ ಬಡಪಾಯಿಯೊಬ್ಬನ ಕರುಣ ಕಥೆ ‘ಆಡು ಜೀವನ’ ‘ಆಡು ಜೀವನ’ಮೂಲ : ಬೆನ್ಯಾಮಿನ್ಕನ್ನಡಕ್ಕೆ : ಡಾ.ಅಶೋಕ ಕುಮಾರ್ಪ್ರಕಾಶಕರು : ಹೇಮಂತ ಸಾಹಿತ್ಯಪ್ರಕಟಣೆಯ ವರ್ಷ: ೨೦೧೨ಬೆಲೆ : ರೂ.೧೦೦ಪುಟಗಳು : ೧೮೪ ಬಡತನದ ಬೇಗೆಯನ್ನು ತಾಳಲಾರದೆ ಉತ್ತಮ ಭವಿಷ್ಯದ ಕನಸು ಕಾಣುತ್ತ ಕೊಲ್ಲಿ ರಾಷ್ಟçಕ್ಕೆ ಹೋಗಿ ಅಲ್ಲೂ  ದುರಾದೃಷ್ಟದ ಅನಿರೀಕ್ಷಿತ ಹೊಡೆತದಿಂದ ಅಸಹನೀಯ ವೇದನೆಯನ್ನನುಭವಿಸಿದ ಬಡಪಾಯಿಯ ಕರುಣ ಕತೆ ‘ಆಡು ಜೀವನ’. ಅಶಿಕ್ಷಿತನಾದ ಆತನ ಬಾಯಿಯಿಂದ ಕೇಳಿದ ಕತೆಗೆ ಲೇಖಕ ಬೆನ್ಯಾಮಿನ್ ಅವರು ಕಾದಂಬರಿಯ […]

ಅಡುಗೆಮನೆ ಜಗತ್ತು

ವಾರದ ಕವಿತೆ ಅಡುಗೆಮನೆ ಜಗತ್ತು ಉಮಾ ಮುಕುಂದ್ ಕಬ್ಬಿಣದ ತವದ ಮೇಲೆರೆದದೋಸೆಯ ರುಚಿ ಮತ್ತು ಗರಿನಾನ್ ಸ್ಟಿಕ್ ತವದ ದೋಸೆಗೆ ಬಂದೀತು ಹೇಗೆ?ಅಂಟಿಸಿಕೊಳ್ಳದ್ದು ಆಪ್ತವಾದೀತು ಹೇಗೆ? ಉಪ್ಪಿನಕಾಯಿ ಜಾಡಿಗೆ ತುಂಬಿಸಿಮುಚ್ವಿಟ್ಟರೆ ಮುಗಿಯಲಿಲ್ಲಆಗಾಗ್ಗೆ ಕೈಯಾಡಿಸಬೇಕು ತೆಗೆದುಕೆಡದಂತಿರಿಸಿಕೊಳ್ಳಲು. ಅಡುಗೆಮನೆ ಕೈಒರೆಸುಅನಿವಾರ್ಯವಾದರೂಮನೆಯವರಿಗೆ ಸಸಾರಕೆಲಕೆಲವು ಜನರ ಹಾಗೆ. ಬೇಕಾದ್ದು, ಬೇಡದ್ದು ತುಂಬಿಮುಚ್ಚಿಬಿಡುವ ಕಪಾಟಿನಡುಗೆಮನೆಗಿಂತಾಇಟ್ಟಿದ್ದು, ಕೆಟ್ಟದ್ದು ಕಾಣುವ ಅಡುಗೆಮನೆಯಾದರೆಆಗಾಗ ಶುಚಿಗೊಳಿಸಿಕೊಂಡೇವು. ತರಕಾರಿ ಸಹಜ ಬಣ್ಣ ಉಳಿಸಿಕೊಳ್ಳಲುಬೇಯುವಾಗಿಷ್ಟು ಉಪ್ಪು ಉದುರಿಸಿದರಾಯ್ತುಮನುಷ್ಯರ ನಿಜಬಣ್ಣ ತಿಳಿಯಲುಉಪಾಯವೇನಾದರೂ ಇದ್ದಿದ್ದರೆ… ಮೊಂಡಾದ ಚಾಕು, ಈಳಿಗೆಗೆಸಾಣೆ ಹಿಡಿಯಬೇಕು ಆಗಾಗ್ಗೆಮೊನಚು ಕಳಕೊಂಡ ಸಂಬಂಧಗಳಿಗೂ ಹಾಗೇ… […]

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..!

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಕೆ.ಶಿವು.ಲಕ್ಕಣ್ಣವರ ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಡಿ. 6 ದೇಶದ ಮಹಾನಾಯಕ ಅಂಬೇಡ್ಕರ್ ಅವರನ್ನು ಕಳೆದುಕೊಂಡ ದಿನ. ಅವರ ಕೊನೆಯ ಸಂದೇಶವನ್ನು ಪ್ರತಿಯೊಬ್ಬರು ತಿಳಿಯಬೇಕು ಅಂದು ಡಿಸೆಂಬರ್  6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ ಕಣ್ತೆರೆಸಿ, […]

ಹಾಯ್ಕುಗಳು

ಹಾಯ್ಕುಗಳು ಕೆ.ಸುನಂದಾ ಗೆಳತಿ ನಿನ್ನಸೌಂದರ್ಯ ಯಾವ ಶಿಲ್ಪಿಕೈ ಚಳಕವೊ ?** ವಿದ್ಯೆ ದುಡಿಮೆತಾಳ್ಮೆ ; ಇದ್ರೆ ಎಲ್ಲವೂಜಯಶೀಲವು** ಮನತಟ್ಟದೆಹುಟ್ಟೀತೇನು ; ಸ್ವಂತಿಕೆಮರೆತ ಕಾವ್ಯ** ಕಾವ್ಯ ಲಹರಿಬಸಿರಲ್ಲಿ ಪಳಗಿಜನ್ಮಿಸಬೇಕು** ಪಕ್ಟವಾಗದೇಕಿತ್ತರೆ ರುಚಿಸದುಸಾಹಿತ್ಯ ರಸ ** ತಾಳದು ಮನಬರೆದೆ ಕಾವ್ಯ ; ಉಕ್ಕಿಹೊರಹೊಮ್ಮಿತು** ಭವ್ಯತೆಯಲಿಹುಟ್ಟಿದ್ದು ಶಾಸ್ವತದಮಧುರ ಗೀತೆ** ಪಲ್ಲವಿಸಿತುಆತ್ಮದಿಂದ ; ಕಾವ್ಯದಸತ್ವ ಶಕ್ತಿಯು** ಭಾವ ಗರ್ಭದಿಕಾವ್ಯ ಕಟ್ಟಿ ; ಹುಟ್ಟಿದ್ದುರಸ ಭರಿತ**************************************

ಅಂಕಣ ಬರಹ ಅಂಕಣ ಬರಹ ಒಂದು ಸಲ, ರೈತರ ಕಮ್ಮಟದಲ್ಲಿ ಮಾತಾಡುವ ಅವಕಾಶ ಒದಗಿತು. ನನ್ನ ಮಾತಿನ ಸಾರವನ್ನು ಹೀಗೆ ಹಿಡಿದಿಡಬಹುದು: “ಯಾವುದೇ ಚಳುವಳಿಗೆ ರಾಜಕೀಯ, ಆರ್ಥಿಕ ಸಾಂಸ್ಕೃತಿಕ ಆಯಾಮಗಳಿರುತ್ತವೆ. ಸದ್ಯದ ಮಾರುಕಟ್ಟೆ ಆರ್ಥಿಕತೆಯ ಸನ್ನಿವೇಶವು ರೈತರನ್ನು ದಲಿತರ ಹಾಗೂ ಮಹಿಳೆಯರ ಹಾಗೆ ದಮನಿತ ವರ್ಗಕ್ಕೆ ಇಳಿಸಿದೆ. ಇದಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಸಂಭವಿಸಿರುವ ಅವರ ಸಾವುಗಳೇ ಸಾಕ್ಷಿ. ರೈತರ ಮುಖ್ಯ ಬೇಡಿಕೆಗಳೆಂದರೆ, ಜಮೀನನ್ನು ತಮ್ಮಿಚ್ಛೆಗೆ ವಿರುದ್ಧವಾಗಿ ಕಿತ್ತು ಉದ್ಯಮಿಗಳಿಗೆ ಕೊಡುವುದರಿಂದ ರಕ್ಷಿಸಿಕೊಳ್ಳುವುದು; ಬೀಜ ಗೊಬ್ಬರ ಕೊಳ್ಳಲು ಕಡಿಮೆ […]

ಅನ್ನ ಕೊಟ್ಟವರು ನಾವು.

ಕವಿತೆ ಅನ್ನ ಕೊಟ್ಟವರು ನಾವು. ಅಲ್ಲಾಗಿರಿರಾಜ್ ಕನಕಗಿರಿ ನೆನಪಿರಲಿ ನಿಮಗೆ.ನೀವು ದೆಲ್ಲಿಯ ರಸ್ತೆ ಮುಚ್ಚಿಕೊಂಡರೆ,ನಾಳೆ ನಾವು ಹಳ್ಳಿ ಹಳ್ಳಿಯರಸ್ತೆ ಮುಚ್ಚುತ್ತೇವೆ. ಆಗ ಶುರುವಾಗುತ್ತದೆ ನೋಡಿ ಅಸಲಿ ಯುದ್ಧ. ಸರ್ಕಾರ ಎಂದರೆ ಸೇವಕ ಎನ್ನುವುದು ಮರೆತ್ತಿದ್ದಿರಿ ನೀವು.ಸಾಕುಮಾಡಿ ನೇತಾರರ ಹೆಸರಲ್ಲಿ ಬೂಟಾಟಿಕೆಯ ಕೆಲಸ. ಇಂದಲ್ಲ ನಾಳೆ ಪಾರ್ಲಿಮೆಂಟ್ ನಲ್ಲಿ,ಮನುಷ್ಯ ಪ್ರೀತಿಯ ಬೀಜ ಬಿತ್ತುತ್ತೇವೆ ನಾವು.ಮೊದಲು ಧರ್ಮದ ಅಮಲಿನಿಂದ ಹೊರ ಬನ್ನಿ ನೀವು. ಹೋರಾಟದ ನದಿ ಕೆಂಪಾಗುವ ಕಾಲ ಬಂತು.ನಿಮ್ಮ ಮುಖವಾಡ ಕಳಚಿ ಬಿಡಿನೇಗಿಲ ಯೋಗಿ ಮುಂದೆ…….. ನೆನಪಿರಲಿ ಅನ್ನ […]

ನಂಬಿಕೆ : ಮರು ಪ್ರಶ್ನೆ

ಸಣ್ಣ ಕಥೆ  ನಂಬಿಕೆ : ಮರು ಪ್ರಶ್ನೆ ರೇಷ್ಮಾ ನಾಯ್ಕ, ಶಿರಸಿ ಯಾರು ಒಳ್ಳೆ ಕೆಲ್ಸ ಮಾಡ್ತಾರೋ ಅವ್ರ ಪರ ದೇವ್ರು ನಿಂತಿರ್ತಾನೆ ಯಾವುದೇ ರೀತಿಲಿ ಸಮಸ್ಯೆಗಳಿಗೆ ಪರಿಹಾರಾನೂ ಸೂಚಿಸುತ್ತಾನೆ ಎಂದ ಮಾತಿಗೆ;  ಮಗಳು , ” ಹಾಗಾದ್ರೆ ಜಗತ್ತಿಗೆ ಕರೋನ ಬಂದಿದೆ ಇಷ್ಟೆಲ್ಲ ಕಷ್ಟ ಪಡ್ತಿದೀವಿ ಶಾಲೆಗೂ ಹೋಗೋಕಾಗ್ತಿಲ್ಲ  ಯಾಕಮ್ಮ ದೇವ್ರು ಪರಿಹಾರಾನೇ ಸೂಚಿಸ್ತಿಲ್ಲ?”  ಎಂದಳು. ಕಂದಾ, ” ದೇವ್ರು ಅನ್ನೋದು ಒಂದು ನಂಬಿಕೆ , ಧೈರ್ಯ. “ ನಿಂಗೆ ಜ್ವರ ಬಂದಾಗ ಹೆದ್ರಬೇಡ ನಾವ್ […]

ಮಾಗಿ ಕಾಲ

ಕವಿತೆ ಮಾಗಿ ಕಾಲ ಡಾಲಿ ವಿಜಯ ಕುಮಾರ್. ಕೆ.ವಿ ಆವರಿಸಿದ ಚಳಿನನ್ನ ಮೈತಾಕದಂತೆಎದೆಯ ಚಿಪ್ಪಿನೊಳಗೆ ಕಾದನಿನ್ನ ಬಿಸಿ ಅಪ್ಪುಗೆಯ ಹಿತಕ್ಕೆಬರುವ ಮಾಸಗಳೆಲ್ಲಮಾಘಮಾಸವನ್ನೇಹೊತ್ತಿರಬಾರದೆ ಅನ್ನಿಸುತ್ತೆ… ಒಲಿದ‌ ಮನಸುಗಳಮಾಗಿಸಿ.ಬಿಗಿಯಾಗಿ ಬೆಸೆದುಬಲಿತ ಕನಸುಗಳಮಿಲನವಾಗಿಸುವಶಿಶಿರ ಋತುಪರಿಪೂರ್ಣತೆಯ ಭಾವಗಳಪೂರ್ಣವಿರಾಮದಂತೆ.ನನಗೆ… ಮನದ ಮಾತುಗಾರನಮಂತ್ರಿಸಿ ವಶೀಕರಿಸುವಮಾಘಮಾಸಮಡದಿ ಮನದರಸರಮನಸುಗಳ ಹೊಸೆದುಪ್ರತಿ ಹೊತ್ತಿನ ಪಾಲುದಾರಿಕೆಯಪರಮ ಸುಖಕೆಮುತ್ತುಗಳ ಮಳೆಗರೆಸುವಪ್ರತಿ ಮಾಗಿಯೂಇಲ್ಲಿ ಹೊಸ ವಸಂತಗಳೇ…… ಕಿಟಕಿಯಿಂದತೂರಿ ಬರುವಹೊಂಗಿರಣಗಳ ಅಲ್ಲೇತಡೆದು ನಿಲ್ಲಿಸುವೆ.ಇನಿಯನಮುದ ನೀಡುವಮುದ್ದು ಪ್ರೀತಿಯಕದ್ದು ನೋಡದಿರಲೆಂದು…. ಅಂತದ್ದೊಂದುಸವಿ ಸಾಕಾಗುವಷ್ಟುಸವಿದೇಬಿಡುವೆ.ಸುಮ್ಮನಿರಿಚಿಲಿಪಿಲಿ ರಾಗಗಳೇ.ಬೆಳಗಿನ ಕಾತರಿಕೆ ನನಗಿಲ್ಲ. ಇಂದಿನಕನಸುಗಳ ಕೈಚೆಲ್ಲಿದರೆಮನಮುಂದಿನ ಮಾಗಿಕಾಲಕ್ಕಾಗಿಕಾದು ಕೂರಬೇಕು….ಹೆಪ್ಪುಗಟ್ಟಿದ ಹಲವು ನೆನಪುಗಳಜೊತೆಗೆ…… ಮಾಗಿ-ಶಿಶಿರ-ಚಳಿಗಾಲ *******************************

Back To Top