ಇತರೆ

ಇತರೆ

ಓಲೆ ಮರೆತರೆ ನಿನ್ನ ಮಡಿವೆನು ಚಿನ್ನ!                                                    ಜಯಶ್ರೀ.ಜೆ. ಅಬ್ಬಿಗೇರಿ ಬೆಳದಿಂಗಳ ರಾತ್ರಿಯ ಪೂರ್ಣ ಚಂದಿರನ ಮೊಗ ನೋಡಿದಾಗೊಮ್ಮೆ ನಿನ್ನ ಮುಖವನ್ನೇ ನೋಡಿದಂತೆ ಅನಿಸುತ್ತದೆ. ನೀನೇನು ಚಂದಿರನ ಮಗಳಾ ಎನ್ನುವ ಸಂಶಯ ಮನದಲ್ಲಿ ಕಾಡುತ್ತದೆ. ನಿನ್ನ ಹತ್ತಿರ ಅದೇನೋ ಮಾಯಾ ಶಕ್ತಿ ಇದೆ ನಿನ್ನನ್ನೇ ನೋಡೋಕೆ ಮನಸ್ಸು ಕಾತರಿಸುತ್ತದೆ. ಈ ಹಿಂದೆ ನೂರು ನೂರು ಸುಂದರಿಯರನ್ನು ಕಂಡ ಕಣ್ಣು ಹೀಗೆ ಹಟ ಹಿಡಿದಿರಲಿಲ್ಲ. ಸ್ವಭಾವದಲ್ಲಿ ತುಂಬಾ ಮೌನಿ ನಾನು. ಮರುಭೂಮಿಯಲ್ಲಿ ಗುಲಾಬಿ ಹೂ ಅರಳಿದಂತೆ ಅರಳಿದ ನಿನ್ನ […]

ವಾರದ ಕವಿತೆ

ಹುಡುಗ ನೀ ಸಾಯಬೇಕಿತ್ತು ಲಕ್ಷ್ಮೀ ಪಾಟೀಲ್ (ಶ್ರೀ ಕೆ ವಿ ಅಯ್ಯರ್ ಬರೆದಿರುವ “ರೂಪದರ್ಶಿ “ಕಾದಂಬರಿಯಲ್ಲಿ ಬರುವ ” ಆರ್ನೆಸ್ಟ್” ನನ್ನು ಕುರಿತ ಕವಿತೆಯಿದು) ಹೊಟ್ಟೆಯಲ್ಲೇ ಅಪ್ಪ ಅಮ್ಮರಿಗಾಗಿಗೋರಿಗರಸ ಎಬ್ಬುವಾಗ ಹಾಳಮಣ್ಣ ಹಾಸಿನಲ್ಲಿಭ್ರಮೆಯ ಬದುಕು ಬಿಕ್ಕುವ ಮುನ್ನಹುಡುಗ ನೀ ಸಾಯಬೇಕಿತ್ತು ಅಜ್ಜಿಯ ಪೊರೆವ ಬಾಂಧವ್ಯದಲ್ಲಿಬದುಕನ್ನು ಒದ್ದೆಯಾಗಿಸಿಕೊಳ್ಳುವಾಗಅವಳ ನೋವಿಗೆ ಬಾಲ ಕನಸುಗಳತೇಪೆ ಜೋಡಿಸುವಾಗ ದೂರ ದುರಂತ ಕಾಣದ ಮುನ್ನಹುಡುಗ ನೀ ಸಾಯಬೇಕಿತ್ತು ಕೈಯಾಡಿಸಿದ ಕೈಗೆ ಬಾಲ ಭಾವದ ಹಾಲು ಗೆಣ್ಣೆಅಪರೂಪದ ಬಾಲ ಯೇಸುವಿನ ವಿರಾಜತೆಮೈಕಲ್ ಏಂಜಲೋನ ದಿವ್ಯ ಅಪ್ಪುಗೆಯ […]

ನನ್ನ ಇಷ್ಟದ ಕವಿತೆ

ನನ್ನ ಇಷ್ಟದ ಕವಿತೆ ದ.ರಾ.ಬೇಂದ್ರೆ ಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ ವಾರದಾಗ ಮೂರಸರತಿ ಬಂದು ಹೋದಾಂವಾ ||ಪಲ್ಲ ೧) ಭಾರಿ ಜರದ ವಾರಿ ರುಮ್ಮಾಲಾ ಸುತ್ತಿಕೊಂಡಾಂವಾ ತುಂಬು-ಮೀಸಿ ತೀಡಿಕೋತ ಹುಬ್ಬು ಹಾರಸಾಂವಾ ಮಾತು ಮಾತಿಗೆ ನಕ್ಕ ನಗಿಸಿ ಆಡಿಸ್ಯಾಡಾಂವಾ ಏನೋ ಅಂದರ ಏನೋ ಕಟ್ಟಿ ಹಾಡ ಹಾಡಾಂವಾ ಇನ್ನೂ ಯಾಕ………. ೨) ತಾಳೀಮಣೀಗೆ ಬ್ಯಾಳಿಮಣಿ ನಿನಗ ಬೇಕೆನಂದಾಂವಾ ಬಂಗಾರ-ಹುಡೀಲೇ ಭಂಡಾರಾನ ಬೆಳೆಸೇನಂದಾಂವಾ ಕಸಬೇರ ಕಳೆದು ಬಸವೇರ ಬಿಟ್ಟು ದಾಟಿ ಬಂದಾಂವಾ ಜೋಗತೇರಿಗೆ ಮೂಗುತಿ ಅಂತ ನನsಗ ಅಂದಾಂವಾ […]

ಹಿರಿಯ ಕವಿಗಳಹಳೆಯ ಕವಿತೆಗಳು

ಇತರೆ ಹಿರಿಯ ಕವಿಗಳಹಳೆಯ ಕವಿತೆಗಳು ಡಾ.ಎಂ.ಗೋಪಾಲಕೃಷ್ಣ ಅಡಿಗ ಪ್ರಾರ್ಥನೆ ಪ್ರಭೂ,ಪರಾಕುಪಂಪನ್ನೊತ್ತಿಯೊತ್ತಿ ನಡ ಬಗ್ಗಿರುವಬೊಗಳುಸನ್ನಿಯ ಹೊಗಳುಭಟ್ಟ ಖಂಡಿತ ಅಲ್ಲ;ಬಾಲವಾಡಿಸಿ ಹೊಸೆದು ಹೊಟ್ಟಿ ಡೊಗ್ಗುಸಲಾಮುಬಗ್ಗಿ ಮಿಡುಕುವ ಸಂಧಿವಾತ ಪೀಡಿತನಲ್ಲ;ತನ್ನ ಮೋಂಬತ್ತಿ ನಂದಿಸಿ ಸಂದಿಬೆಳಕಲ್ಲಿಜುಮ್ಮನರಸುವ ಷಂಡ ಜಿಗಣೆಯಲ್ಲ;ಕಾಲಪುಷ್ಟರ ಪೃಷ್ಠಕೊಡ್ಡಿ ಬೆನ್ನ, ಕಠಾರಿಒರೆಗೆ ತುರುಕಿರುವ ಹೆಂಬೇಡಿಯಲ್ಲ. ಈ ಸಣ್ಣ ದೊಂದಿಯನ್ನೆತ್ತಿ ಹೊತ್ತಿನ ಮುಖಕ್ಕೆಬೆಳಕು ಹರಿದದ್ದು ತನ್ನಿಂದಲೇ ಎಂದು ತನ್ನೊಳಗೆಮುಖ ಕಿರಿವ, ನೆಣ ಬಿರಿವ, ಬಗ್ಗಲಾರದ ಬೊಜ್ಜ,ಕೋಲುನಡಿಗೆಕವಾತು ಕಲಿತ ಕೊಬ್ಬಿದ ಹುಂಜ:ವಾಸಿಮಾಡಯ್ಯ ಈ ಜಲೋದರದ ಭಾರದ ಜಡ್ಡ.ಕುಮರುತೇಗಿನ ಕಪಿಲೆಹೊಡೆದು ಹಗಲೂ ಇರುಳುತೇಗಿಗೊಂದು ಅಮೋಘ ಸ್ಫೂರ್ತಿಗೀತವ […]

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ ಅಲೆಮಾರಿಯ ದಿನದ ಮಾತುಗಳು  ಪುಸ್ತಕ : ಅಲೆಮಾರಿಯ ದಿನದ ಮಾತುಗಳು  ( ಪದ್ಯ – ಗದ್ಯಗಂಧಿ ಚಿಂತನ ಬರಹಗಳು ) ಲೇಖಕ: ಗಂಗಾಧರ ಅವಟೇರ ಪ್ರಕಾಶನ: ಪ್ರತೀ(ಕ)ಕ್ಷಾ ಪ್ರಕಾಶನ, ಕುಕನೂರ ಜಿ|| ಕೊಪ್ಪಳ ಪುಟಗಳು: 96 ಬೆಲೆ: 100/- ಪ್ರಕಟಿತ ವರ್ಷ: 2019 ಲೇಖಕರ ದೂರವಾಣಿ: 9449416270          ಮಾನವ ಸಮಾಜಜೀವಿ. ಅವನು ಸಮಾಜವನ್ನು ಬಿಟ್ಟು ಬಾಳಲಾರ-ಬದುಕಲಾರ. ಅರಿಸ್ಟಾಟಲ್ ಹೇಳುವಂತೆ ‘ಸಮಾಜವನ್ನು ಬಿಟ್ಟು ಬದುಕುವ ಮಾನವ ದೇವರು ಇಲ್ಲವೇ ಪಶು ಆಗಿರುತ್ತಾನೆ’. ಮಾನವ ಭಾಗಶಃ […]

ಲಲಿತ ಪ್ರಬಂಧ

ಲಲಿತ ಪ್ರಬಂಧ ನನ್ನ ಲಿಯೋ ಸಮತಾ ಆರ್.   ಒಂದು ದಿನ ಎಂದಿನಂತೆ ಶಾಲೆಗೆ ಹೊರಟು ಸಿದ್ದಳಾಗಿ ಹೊರಬಂದು ಕಣ್ಣಾಡಿಸಿದರೆ, ಲಿಯೋ ಅವನಿರುವ ಜಾಗದಲ್ಲಿ ಇಲ್ಲ!”ಲಿಯೋ ರೆಡಿ ಏನೋ, ಎಲ್ಲಿದ್ದೀಯೋ’?”ಎಂದಾಕ್ಷಣ”ನಾನಾಗಲೇ ರೆಡಿಯಾಗಿ ನಿಂತಿದ್ದೀನಿ ಬಾರಕ್ಕ”ಎಂಬ ಉತ್ತರ ಕೇಳಿಸಿತು, ಆದರೆ ಕಾಣಲಿಲ್ಲ. “ಲೋ, ಎಲ್ಲೋ ಇದಿಯಾ, ಇರೋ ಜಾಗದಲ್ಲಿರೋಕೆ ನಿಂಗೇನೋ ಕಾಯಿಲೆ! ಈಗ್ಲೇ ಲೇಟಾಗಿದೆ ,ಇನ್ನು ನಿನ್ನನ್ನು ಹುಡುಕಿಕೊಂಡು ಬೇರೆ ಸಾಯ್ಬೇಕು” ಎಂದು ಸಿಟ್ಟಿನಿಂದ ಕಿರುಚಿದಾಗ,” ಅಕ್ಕ ಒಂಚೂರು ಈ ಕಡೆ ನೋಡು”ಎಂದು ನನ್ನ ಬಲಬದಿಯ ಹತ್ತು ಮಾರು […]

ಕಥಾ ಯಾನ

ಕಥೆ ಸ್ವಾತಂತ್ರ್ಯ ಡಾ.ಪ್ರೇಮಲತ ಬಿ. ನನಗೀಗ ೧೯ ವರ್ಷ. ಕೆಲವೊಮ್ಮೆ ಆಲೋಚನಾ ಲಹರಿಯಿಂದ ನಾನು ಇತರರಿಗಿಂತ ವಿಭಿನ್ನ ಮಿಡಿತಗಳನ್ನು ಹೊಂದಿರುವಂತೆ ಅನಿಸಿದರೂ ತಾರುಣ್ಯದ ದಿನಗಳ ಎಲ್ಲ ಭಾವನೆಗಳ ಉಗಮದ ಪ್ರತಿ ಅನುಭವ ನನಗಾಗಿದೆ. ಮಧ್ಯಮವರ್ಗದ ಸಾಂಪ್ರದಾಯಿಕ ಕುಟುಂಬದಿಂದ ಬಂದಿರುವ ಕಾರಣದಿಂದಲೋ ಏನೋ, ಪ್ರೀತಿ-ಪ್ರೇಮದ ಅಲೆಗಳಲ್ಲಿ, ಡಿಸ್ಕೋ-ಕುಡಿತಗಳ ಅಮಲಿನಲ್ಲಿ ಕೊಚ್ಚಿಹೋಗುವ ಉನ್ಮಾದಕ್ಕಾಗಿ ಮನಸ್ಸು ತೀವ್ರವಾಗಿ ಮಿಡಿದಿಲ್ಲ. ಬದಲು ಸಮಾಜದಲ್ಲಿ ಮುಕ್ತತೆಯನ್ನು ಕಾಣುವ, ಸ್ವಾತಂತ್ರದ ಸಂಪೂರ್ಣ ಸ್ವೇಚ್ಚೆಗಾಗಿ ನನ್ನ ಮನಸ್ಸು ತುಮಲಗೊಳ್ಳುತ್ತದೆ. ಧೀಮಂತ ಯುವ ಶಕ್ತಿಯನ್ನು ಬಳಸಿ ಈ ಸಂಕುಚಿತ […]

ಕಾವ್ಯಯಾನ

ಕವಿತೆ ನನ್ನ ಶ್ರಾವಣ ಅನಿತಾ ಪಿ. ಪೂಜಾರಿ ತಾಕೊಡೆ. ಕರುಳ ನಂಟಿನ ಪ್ರೀತಿ ಪ್ರತಿರೂಪಗಳಕಂಡುಂಡು ಬೆಳೆದ ಮನೆಯಹೊಸ್ತಿಲು ದಾಟಿದೆನಲ್ಲ ಅಂದುಬಾಳಿ ಬದುಕುವ ಮನೆಗೆ ಬಲಗಾಲಿಟ್ಟು ನೆನಪಿನ್ನೂ ಹಸಿರೇ ಶ್ರಾವಣ ಸಿರಿಯಂತೆಅಂದು ಮೊದಲ ಬಾರಿ ತವರಿಗೆ ಬಂದಾಗಮುಳ್ಳನ್ನು ಬದಿಗೊತ್ತಿ ಖುಷಿಯ ಹೂವುಗಳನ್ನೇ ಬಿಡಿಸಿಟ್ಟಿದ್ದು… ಶ್ರಾವಣ ಕಳೆದುಒಲ್ಲದ ಮನಸನು ಮೆಲ್ಲನೆ ಒಲಿಸಿ ಮುಂದೆ ನಡೆದಾಗಕಳೆದ ದಿನಗಳು ಸುತ್ತ ಸುಳಿದು.ಶ್ರಾವಣವೇ ನಿಲ್ಲು ನಿಲ್ಲೆಂದು ಮರುಗಿದ್ದು ಈಗಲೂ ಶ್ರಾವಣವೆಂದರೆ ಅದೇನೋ ಸೆಳವುಅಲ್ಲಿರುವ ಸಲುಗೆ ಇಲ್ಲಿರುವ ಬೆಸುಗೆಅಲ್ಲಿರುವ ಪ್ರೀತಿ ಇಲ್ಲಿರುವ ನೀತಿಎಲ್ಲವೂ ಬೇರೆ ಬೇರೆ […]

ಕಬ್ಬಿಗರ ಅಬ್ಬಿ – ಸಂಚಿಕೆ -7 ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು ಮುಖಾಮುಖಿಯಾದಾಗ ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು  ಮುಖಾಮುಖಿಯಾದಾಗ ಓಹ್! ನಮಸ್ಕಾರ ಸಾರ್!.. ಬನ್ನಿ..ಬನ್ನಿ.. ಹೀಗೆ ಬನ್ನಿ! ಇದೇ ನೋಡಿ! ನಮ್ಮ ಕವಿಗಳ ಮನೆಯ ಡ್ರಾಯಿಂಗ್ ರೂಂ,  ಎಷ್ಟು ವಿಶಾಲವಾಗಿದೆ ಅಲ್ವಾ. ಕೆಲವೇ ಕೆಲವು ಪೀಠೋಪಕರಣಗಳು, ಅವರಿವರು ಬಂದಾಗ, ಮುಖಕ್ಕೆ ಮುಖ ಕೊಟ್ಟು ಮಾತಾಡಲು, ಕೆಲವೊಮ್ಮೆ ಮುಖವಾಡ ತೊಟ್ಟು ಮಾತಾಡಲೂ. ಸ್ವರಗಳು ಕಂಪಿಸುವ ಮಾತುಗಳು, ಸ್ವರಗಳು ಸರೀಸೃಪದ ಹಾಗೆ ಹರಿದಾಡುವ ಮಾತುಗಳು, ಹಾವಿನಂತೆ ಬುಸುಗುಟ್ಟುವ ಮಾತುಗಳು, […]

ಏಕಾಂತದ ನಿರೀಕ್ಷೆಯಲ್ಲಿ

ಕವಿತೆ ಏಕಾಂತದ ನಿರೀಕ್ಷೆಯಲ್ಲಿ ತೇಜಾವತಿ.ಹೆಚ್.ಡಿ. ಬಹಳ ಖುಷಿಯಾಗಿದ್ದೆ ನಾನುಹರೆಯದ ವಯಸ್ಸಿನಲ್ಲಿ ಮೂಡಿದಅಸ್ಪಷ್ಟ ಕನಸುಗಳಿಗೆ ರೆಕ್ಕೆಪುಕ್ಕ ಕಟ್ಟಿಕೊಂಡುನನ್ನದೇ ಕಲ್ಪನಾ ಲೋಕದಲ್ಲಿ ತಾರೆಯಾಗಿ ಪ್ರಜ್ವಲಿಸಿದ್ದೆ ದಿಂಬಿಕೆ ತಲೆಗೊಡುವುದೇ ತಡನಿದ್ರಾದೇವಿಗೆ ಶರಣಾಗುತ್ತಿದ್ದೆಗುಡಿಸಿಲಿನ ಅಂಗಳದಿ ಕುಳಿತುಅರಮನೆಯ ರಾಣಿಯಾಗಿದ್ದೆಅತೀ ಸೂಕ್ಷ್ಮ ಸಂವೇಗಗಳಿಗೂ ಪ್ರತಿಕ್ರಿಯಿಸುತ್ತಾಚಳಿಗೆ ಬೆಂಕಿ ಕಾಯಿಸುವಾಗಮಾರು ದೂರವಿರುವಾಗಲೇನೆಗೆದು ಹೌಹಾರಿ ಬೀಳುತ್ತಿದ್ದೆ ಎಡವಿದ ಕಲ್ಲಿಗೂ ಕಂಬನಿಗರೆದುಮಳೆಯಲ್ಲಿ ತೋಯುತ್ತಿದ್ದೆಪುಟ್ಟ ಪುಟ್ಟ ಕಂಗಳಲಿ ದೊಡ್ಡ ದೊಡ್ಡ ಖುಷಿಯ ಕ್ಷಣಗಳನ್ನು ಸೆರೆಹಿಡಿಯುತ್ತಿದ್ದೆ ಪ್ರತಿ ವೀಕೆಂಡ್ ಬಂತೆಂದರೆ ಸಾಕುಕಾಲಿಗೆ ಚಕ್ರ ಕಟ್ಟಿದವಳಂತೆ ಗರಗರ ಗಿರಕಿ ಹೊಡೆಯುತ್ತಿದ್ದೆ ಬರುಬರುತ್ತಾ….ಕಾಯ ಗಟ್ಟಿಗೊಂಡುಮನಸ್ಸು ಪಕ್ವವಾಗಿಚರ್ಮ ಸುಕ್ಕುಗಟ್ಟಿಅಂತರಂಗ […]

Back To Top