ಆವಿಷ್ಕಾರ

ಆವಿಷ್ಕಾರ

ಆವಿಷ್ಕಾರ ಡಾ.ಅಜಿತ್ ಹರೀಶಿ ಗುಪ್ತಗಾಮಿನಿ ರಕುತಹೃದಯದೊಡಲಿಂದ ಚಿಮ್ಮುತಕೋಟಿ ಜೀವಕಣಗಳಿಗುಣಿಸುತಜೀವಿತವ ಪೊರೆಯುವುದುಎಷ್ಟು ಸಹಸ್ರಕಾಲದ ನಡೆಯುಹೀಗೆ ಅರಿವಾದಂತೆಹೊಸ ಕಾಯಕಲ್ಪ ಜೀವನಕ್ಕೆ…! ಪರಮಾಣುಗಳಲಿ ಅದುಮಿಟ್ಟಬಹಳ ಬಲವಾದ ಸ್ಫೋಟಅಣ್ವಸ್ತ್ರಗಳೊಳಗೆ ಬಿಗಿದಿಟ್ಟುಲಕ್ಷ ಜೀವಗಳ ಮರಣಪಟ್ಟಿರಣಕಹಳೆ ಊದುವ ಮೊದಲೇಯುದ್ಧ ನಡೆಸುವ ರಣನೀತಿಅಸ್ತ್ರಗಳು‌ ಅಣುವಾದಂತೆಬೃಹತ್ ದ್ವೇಷ ಜಗಕ್ಕೆ…! ಧರಣಿ ಹೂಡದ ಧರೆಯ ಮೇಲೆಹಸಿರುಟ್ಟು ನಿಂತ ಸಸ್ಯಶ್ಯಾಮಲೆಕಾಡು, ನಾಡಿಗೆ ಜೀವಂತ ದೇವರೇಇವು ಜೀವಿಸುತ್ತವೆ, ಎಂಬ ವಿಜ್ಞಾನಈ  ತಿಳಿವು ಬಂದಂತೆಮುನ್ನಡೆಯಾಯಿತು ವಿನಾಶಕ್ಕೆ..! **********

ಅಂಕಣ ಬರಹ

ಸಂಪ್ರೋಕ್ಷಣ ಬಣ್ಣಗಳಲ್ಲದ್ದಿದ ಬದುಕು ಅಂಜನಾ ಹೆಗಡೆ ಬಣ್ಣಗಳೇ ಇರದಿದ್ದರೆ ಜಗತ್ತು ಹೇಗಿರುತ್ತಿತ್ತು ಯೋಚಿಸಿ ನೋಡಿ. ಪುಟ್ಟ ಮಗುವೊಂದು ಬಣ್ಣದ ಬಲೂನುಗಳ ಹಿಂದೆ ಓಡುವ ದೃಶ್ಯವೇ ಕಾಣಸಿಗುತ್ತಿರಲಿಲ್ಲ. ಗಾಳಿಪಟವೊಂದು ಚೂರುಚೂರೇ ನೆಗೆಯುತ್ತ ಆಕಾಶಕ್ಕೆ ಎಗರಿ ಬಣ್ಣದ ಲೋಕವೊಂದನ್ನು ಸೃಷ್ಟಿಸುತ್ತಲೇ ಇರಲಿಲ್ಲ. ಕೆಂಡಸಂಪಿಗೆಗೆ ಕೆಂಡದಂತಹ ಬಣ್ಣವಿರುತ್ತಿರಲಿಲ್ಲ. ಕಾಮನಬಿಲ್ಲೊಂದು ಹುಟ್ಟುತ್ತಲೇ ಇರಲಿಲ್ಲ. ಬಣ್ಣಗಳಿಲ್ಲದಿದ್ದರೆ ಕಲೆ, ಸೌಂದರ್ಯ, ಪ್ರಕೃತಿ ಇವೆಲ್ಲವುಗಳ ಪರಿಕಲ್ಪನೆ ಬೇರೆಯೇ ಏನೋ ಆಗಿರುತ್ತಿತ್ತು. ಅದೇನಾಗಿರಬಹುದಿತ್ತು ಎಂದು ಒಂದು ಸೆಕೆಂಡು ಯೋಚಿಸಿದರೂ ಒಂದಿಷ್ಟು ಬಣ್ಣಗಳೂ ಯೋಚನೆಯೊಂದಿಗೆ ಅಂಟಿಕೊಳ್ಳುತ್ತವೆ.      ಯೋಚನೆಗಳಷ್ಟೇ ಅಲ್ಲದೇ […]

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ.

ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ? ನಂದಿನಿ ಹೆದ್ದುರ್ಗ ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ. ‘ರೀಫಿಲ್ ಮಾತ್ರ ಸಾಕು’ ಎಂದೆ.. ‘ಅಯ್ಯೋ ರೀಫಿಲ್ಗೂ ,ಫುಲ್ ಪೆನ್ನಿಗೂ ಎರಡೇ ರೂಪಾಯಿ ವ್ಯತ್ಯಾಸ ಮೇಡಮ್ . ಇದನ್ನೇ ತಗೋಳಿ ‘ ಅಂದ ಅಂಗಡಿಯ ಹುಡುಗ. ತಕ್ಕಮಟ್ಟಿಗೆ ವಿದ್ಯಾವಂತನಂತೇ ಕಾಣುತ್ತಿದ್ದ.. ಎರಡು ಮೂರು ರೂಪಾಯಿಗಳ ವ್ಯತ್ಯಾಸಕ್ಕಲ್ಲಣ್ಣ ರಿಫಿಲ್ ಕೇಳ್ತಿರುವುದು.. ನಾನು ಉತ್ಪತ್ತಿ ಮಾಡುವ ಕಸದ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಎಂದೆ… ವಿಚಿತ್ರ ಪ್ರಾಣಿಯಂತೆ ಸುತ್ತಲಿನವರು ನೋಡಿದರೆ ಇನ್ನೂ ಕೆಲವರು ನೀವು ಏನ್ […]

ಅದೊಂದು ಗಳಿಗೆ.

ಅದೊಂದು ಗಳಿಗೆ. ನಿನ್ನ ಕಾಣುವ ಬಯಕೆಯೊಂದು ಮತ್ತೆ ಮತ್ತೆ ಮುಗಿಬೀಳಲು ತುಕ್ಕು ಹಿಡಿದ ಬುದ್ದಿ ಹಿಡಿತ ತಪ್ಪಿ ಬಂದು ನಿಂತಿದ್ದು ನಿನ್ನ ಮನೆಯಂಗಳಕೆ ಬಂದಾಗ ನೀನು ಮುಚ್ಚಿದ ಕದ ತೆರೆಯದೆ ಕಾಯಿಸಿದ್ದು ನಿನ್ನೊಳಗಿನ ಅಹಮ್ಮಿನ ತುಣುಕಿನೊಂದಂಶವಾಗಿತ್ತು ಕರಗಿದ ಹಗಲು ನಿಶ್ಯಬ್ದ ಇರುಳೊಳಗೆ ಕರಗಿ ಲೀನವಾಗುವ ಸರಿಹೊತ್ತಲ್ಲಿ ದಿಡೀರನೆ ಜ್ಞಾನೋದಯವಾಗಿ ಕಣ್ಮುಂದೆ ಕಂಡ ಮಾಣಿಕ್ಯವೊಂದು ಕಣ್ಮರೆಯಾದ ಪರಿಗೆ ಏಳೂರುಗಳೂ ದಿಗ್ಬ್ರಮೆಗೊಳಗಗಿದ್ದವು. ಸುದೀರ್ಘ ಬರದ ಬೆಂಕಿಯೊಳಗೆ ಬೆಂದ ನನ್ನೂರೊಳಗಿನ ಹಸಿವಿನ ಹಾಹಾಕಾರಕ್ಕೆ ಅಸುನೀಗಿದ ಹಾಲುಗಲ್ಲದ ಹಸುಗೂಸುಗಳ ಹೊತ್ತು ಮಣ್ಣು ಮಾಡಿದ ಕೈಗಳಿಗೆ ಹತ್ತಿದ ಕುಷ್ಠ ಕಿವಿ ಮೂಗು ಪಾದಗಳ ಬೆರಳ ಸಂದಿಗಳಿಗೆ ವ್ಯಾಪಿಸಿ ಉರಿದು ಹೋಯಿತು ಹಾಗೇನೆ ಹಗಲ ಚಿತೆ ಹಿಮ ಪರ್ವತದ ತುತ್ತ ತುದಿಯಲಿ ನೆಲೆಸಿದ ಶಂಕರನ ಪಾದಗಳ ನುಣುಪಾದ ತಣ್ಣನೆಯ ಸ್ಪರ್ಶಕೆ ಕರಗಬಲ್ಲುದೆಂದು ನಂಬಿದ ಪಾಪಾತ್ಮಗಳ ದಿವ್ಯೋಪದೇಶಕೆ ಮಾರು ಹೋಗಿ ಹಮ್ಮು ತೊರೆದು ಸುತ್ತೂರಿನೆಲ್ಲ ಗರತಿಯರ ಪಾದಕೆರಗಿ ಶತಮಾನಗಳ ಪುರಾತನ ಶಾಪ ಉಶ್ಯಾಪಗಳೆಲ್ಲವನ್ನು ಇಲ್ಲವಾಗಿಸಿ ಅದೊಂದು ಮಂಗಳಕರವಾದ ಬೆಳಗಿಗೆ ಕಾಯುತ್ತ ಕೂತ ಕಡುಪಾಪಿ ಮನುಷ್ಯನ ಪಾಪಿಷ್ಠ ಕ್ಷಣಗಳ ಮನ್ನಿಸುವ ಮನಸಿರುವ ದೇವಪುರುಷನಿಗಾಗಿ ಕಾಯುವ ಗಳಿಗೆಯಿದೆಯಲ್ಲ ಅದಕ್ಕಿಂತ ಅಮೃತಮಯವಾದ್ದು ಬೇರೆ ಯಾವುದಿದೆ? ********* ಕು.ಸ.ಮಧುಸೂದನ

ನಿರೀಕ್ಷೆ

ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ ತೊಟ್ಟು ನೀಳ ಕೇಶವ ಹೆಣೆದು ಮಲ್ಲಿಗೆಯ ಮುಡಿದಿದ್ದೆ ನಗೆ ಚೆಲ್ಲುವ ತುಟಿಗಳಿಗೆ ಕೆಂಪು ಬಣ್ಣ ಲೇಪಿಸಿ ನಿನ್ನ ಕಣ್ಣುಗಳ ನೆನೆದು ನನ್ನ ಕಣ್ಣಿಗೆ ಕಾಡಿಗೆ ಬಳಿದಿದ್ದೆ ಅನುಗಾಲ  ನಿನ್ನತ್ತ ಬರಲು ತವಕಿಸುವ ಕಾಲುಗಳಿಗೆ  ಗೆಜ್ಜೆ ತೊಟ್ಟಿದ್ದೆ ಕಂಗಳಲಿ ಮಿಂಚಿಟ್ಟು, ತುಟಿಗಳಲಿ ನಗೆಯಿಟ್ಟು ನಿನ್ನ ದಾರಿಯ ಕಾದಿದ್ದೆ. ನೀ ಬಾರದೆ  ನಿರೀಕ್ಷೆಗಳು  ನೀರ ಮೇಲಣ ಗುಳ್ಳೆಗಳಾದವು ಕನಸುಗಳು […]

ಚೆಲ್ಲಿ ಹೋಯಿತು ಉಸಿರು

ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ಗಾಳಿಗೆ ಗಂಧ ತುಂಬುತ್ತಿದ್ದಬಾಗಾಳು ಮರವನ್ನುಈ ಬೆಳಗು ಕಡಿಯಲಾಗಿದೆಮರದ ಮಾಂಸ ರಕ್ತ ಚರ್ಮಚೆಲ್ಲಾಡಿದ ಬೀದಿಯೊಳಗೆಇದೀಗ ತಾನೇ ನಡೆದುಬಂದೆನೆಲದಲ್ಲಿ ಜಜ್ಜಿಹೋದ ಹೂಮೊಗ್ಗು ಎಲೆಗಳ ಕಂಬನಿಕುಡಿಯುತ್ತಾ… ಹಕ್ಕಿ ಕೊರಳಿಗೆ ಕಷಾಯಕುಡಿಸಿದ ಸಂಗಾತಿ ಮರಮಣ್ಣಿನಾಳದ ಕಸುವುಗಳನಕ್ಷತ್ರಗಳಿಗೆ ಅಂಟಿಸಿದಅವಧೂತ ಮರಜೀವಜಂತುಗಳಿಗೆ ಜೀವಜಲಮೊಗೆದ ತಾಯಿಮರಬದುಕಿತ್ತು ಇಲ್ಲೇ ಕಣ್ಣೆದುರಲ್ಲೇಮಾತು ಮೀರಿದಬುದ್ಧಕಾರುಣ್ಯದಂತೆಮಮತೆ ತೋಳುಗಳಂತೆ… ಚೆಲ್ಲಿಹೋಯಿತು ಉಸಿರುಸಾವು ಹೆಪ್ಪುಗಟ್ಟಿದಂತೆ!****** ಬಾಗಾಳು ಮರ– […]

ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಮೂರ್ತಿ ಅವರು ತಮ್ಮ ಇಪ್ಪತ್ತರಿಂದ ಮೂವತ್ನಾಲ್ಕನೇ ವಯಸ್ಸಿನವರೆಗೆ ಬರೆದ ಕಥೆಗಳಲ್ಲಿ ಆಯ್ದ ಹತ್ತು ಕಥೆಗಳು ಇಲ್ಲಿವೆ. ಇದಕ್ಕೆ ಕೆ.ವಿ. ತಿರುಮಲೇಶ್ ಅವರು ಮುನ್ನುಡಿ ಬರೆದಿದ್ದಾರೆ.ನಾನಿಲ್ಲಿ ಉದ್ದೇಶಪೂರ್ವಕವಾಗಿ ಪ್ರತೀ ಕಥೆಯ ಬಗ್ಗೆ ಬರೆಯುವುದಿಲ್ಲ. ಏಕೆಂದರೆ ಇವು ಸಾಕಷ್ಟು ಸಂಕೀರ್ಣವಾಗಿ ಇದ್ದು ಒಂದೇ ಹಿಡಿತಕ್ಕೆ ಸಿಗುವಂಥವಲ್ಲ. ಇವೆಲ್ಲವೂ ಬಹಳ ಪ್ರಬುದ್ಧ ಕಥೆಗಳೆಂದು ಮಾತ್ರ ಹೇಳಬಹುದು. ಕತೆಯನ್ನು ಗಂಭೀರವಾಗಿ […]

ಗಝಲ್

ಗಝಲ್ ಸಹದೇವ ಯರಗೊಪ್ಪ ಎದೆ ಎತ್ತರ ಬೆಳೆದು ನಿಂತ ಪೀಕಿನಲಿ ಕಣ್ಣು ತಪ್ಪಿಸಿ ಎಲ್ಲಿ ಹೋದೆ|ಬತ್ತಿದೆದೆಯ ಬಾವಿಗೆ ಕಣ್ಣೀರು ಕುಡಿಸಿ ಎಲ್ಲಿ ಹೋದೆ|| ಬಿತ್ತಿದ ತಾಕುಗಳಿಗೆ ಉಳಿ ನೀರು ಉಣಿಸದೆ ಸೆರಗ ಜಾಡಿಸಿದೆ|ಮಣ್ಣಿನ ಹೊಕ್ಕಳಿಂದ ಅನ್ನದ ಬೇರು ಕತ್ತರಿಸಿ ಎಲ್ಲಿ ಹೋದೆ|| ತೂಗಿ ತೊನೆವ ಬೆವರ ತೆನೆಗಳಿಗೆ ಕವಣೆ ಬೀಸಲೆ ಇಲ್ಲ|ನೇಸರನ ಕಾಯುವ ಸೂರ್ಯಕಾಂತಿ ದಿಕ್ಕು ಬದಲಿಸಿ ಎಲ್ಲಿ ಹೋದೆ| ಬಿರುಕು ಬಿಟ್ಟ ನೆಲದ ಕೆಂಡಕ್ಕೆ ಬೆವರ ದೂಪದ ಬೆರಕೆ|ತೀರದ ಸಾಲಕ್ಕೆ ಉಳುವ ನೇಗಿಲ ಅಡಾ ಇರಿಸಿ […]

ಗಝಲ್

ಗಝಲ್ ಮಾಲತಿ ಹೆಗಡೆ ಎದೆಯ ಮಧುಬನವ ಹದಗೆಡಿಸಿ ತೊರೆದು ಹೋದೆ ನೀನುಮನದ ಮೃದು ಭಾವ ಚೆದುರಿಸಿ ತೊರೆದು ಹೋದೆ ನೀನು ಲೋಕನಿಂದೆಗೆ ಕಿವುಡಾಗಿ ನಿನ್ನವಳಾಗಿದ್ದೆನೋ ಗಿರಿಧರಾನನ್ನನೀ ಭವದ ಭಾಧೆಗೆ ಸಿಲುಕಿಸಿ ತೊರೆದು ಹೋದೆ ನೀನು ಕಡೆದ ಮಜ್ಜಿಗೆಯಲ್ಲೆತ್ತಿದ ಶುದ್ಧ ನವನೀತದಂತಿತ್ತು ನನ್ನೊಲವುರಾಧೆಯ ರೋದನವ ಕಡೆಗಣಿಸಿ ತೊರೆದು ಹೋದೆ ನೀನು ಇಹ ಪರದ ಚಿಂತೆಯನೆಲ್ಲ ತೂರಿ ವೇಣು ನಾದದಲಿ ಕರಗಿದ್ದೆಜೀವ ಭಾವದ ನಂಟು ಕತ್ತರಿಸಿ ತೊರೆದು ಹೋದೆ ನೀನು ಮರುಳೋ ಮಾಯೆಯೋ ಅರಿಯದ ಕಡುಮೋಹಿಯಾಗಿದ್ದೆಆತ್ಮಸಾಂಗತ್ಯದಲಿ ಅಧೀನವಾಗಿಸಿ ತೊರೆದು ಹೋದೆ […]

ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು ಹಲವು ಜೈವಿಕ & ಭೌತಿಕ ಘಟಕಗಳ ಆಗರ, ಇವುಗಳ ನಡುವೆಯೇ ಬೇಕು-ಬೇಡಗಳ ಸಂಘರ್ಷ. ೧೯೭೨-೧೯೭೩ರಿಂದ ವಿಶ್ವ ಸಂಸ್ಥೆಯ ನೇತೃತ್ವದಲ್ಲಿ ಪರಿಸರದ ಜಾಗೃತಿಗೊಳಿಸುತ್ತಲೇ ಬಂದಿದ್ದೇವೆ ಆದರೂ ಮತ್ತೆ ಮತ್ತೇ ನಮ್ಮ ಪರಿಸರದ ಬಗ್ಗೆ ತಿಳಿಯುವ ಹಾಗೂ ಅದರ ಮಹತ್ವ ಅರಿಯುವ ಜೊತೆಗೆ ನಮ್ಮಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅವಲೋಕಿಸಿ ಸಂರಕ್ಷಿಸಲು ಪಣತೊಡುವ ಮಹತ್ವದ ದಿನ. ಈ ಪರಿಸರ […]

Back To Top