ಬೇಲಿಯೊಳಗಿನ ಬೆಳೆ –

ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ […]

ಶ್ರಮಿಕ

ಕವಿತೆ ಶ್ರಮಿಕ ಡಾ.ಜಿ.ಪಿ.ಕುಸುಮ, ಮುಂಬಯಿನನ್ ತಾಯಿ….ನೀ ಗೆಲ್ಲಬೇಕೆಂದುನಾ ನಿಂತೆ ಒಳಗೆ.ದೂರ ದೂರದವರೆಗೆಯಾರೂ ಇಲ್ಲ ಹೊರಗೆ.ಗಲ್ಲಿಗಲ್ಲಿಗಳಲ್ಲಿ ಮೌನ ಮಲಗಿದೆಮಣ್ಣು ಒಣಗಿದೆ.ನನ್ನೆದೆ ಗೂಡು ಒದ್ದೆಯಾಗ್ತಿದೆನಿನ್ನ ಬಿಟ್ಟು ಹೋಗೊಕಾಗಲ್ಲಹೋದ್ರೆ ಹೋದಲ್ಲಿಬದುಕೋಕಾಗಲ್ಲ.ನನ್ನ ದಿನ, ನನ್ನ ರಾತ್ರಿನನ್ನ ಸೋಲು, ನನ್ನ ಗೆಲುವುಎಲ್ಲವೂ ನೀನೆ..ನೀ ಯಾವತ್ತೂ ಹೀಗೆಮನೆಬಾಗಿಲು ಮುಚ್ಕೊಂಡುಮೂಕಿಯಾಗಿದ್ದಿಲ್ಲ.ಅಂಗಾಂಗ ಸುಟ್ಟುಕೊಂಡಾಗ್ಲೂಮಳೆನೀರು ಮುಳಗಿಸಿದಾಗ್ಲೂಭಯ ಗೆದ್ದಿಲ್ಲ…ಇದೀಗ ಏನಾಯ್ತೋ ತಾಯಿಕಾಣದ ವೈರಿಗೆಎಷ್ಟೊಂದು ಸೊರಗಿದೆ.ಹಳಿತಪ್ಪಿದೆ ನೋಡು ಬದುಕಬಂಡಿಸ್ವಪ್ನನಗರಿಯಲ್ಲೀಗಬದುಕು ಘಮಘಮಿಸುವುದಮರೆತಿದೆ.ಬರಿಗಾಲಲಿ ಬರಿಕಿಸೆಯಲಿಬರಿಹೊಟ್ಟೆಗೆ ಕೈಯನಿಟ್ಟುನೆತ್ತಿಮೇಲೆರಡು ಪ್ಯಾಂಟು ಶರ್ಟುರಾಶಿ ಬಿಸಿಲ ಸೀಳಿಕಾಲನ್ನೆತ್ತಿ ಹಾಕುತಸಾಗ್ತೇನೆ ನಾನುಹೊಸ ಕನಸುಗಳ ನೇಯಲುತೀರ ಬಿಟ್ಟುಸಾಗರವ ದಾಟಲು. ***************************

ಹುನ್ನಾರ

ಕವಿತೆ ಹುನ್ನಾರ ಡಾ.ಸುರೇಖಾ ರಾಠೋಡ ಕಾಲಲಿ ಗೆಜ್ಜೆ ಹಾಕಿನನ್ನ ಚಲನವಲನನಿಯಂತ್ರಿಸುವಹುನ್ನಾರ ನಿನ್ನದು ಕೊರಳಲಿ ತಾಳಿ ಕಟ್ಟಿನನ್ನ ತಾಳ್ಮೆಪರೀಕ್ಷಿಸುವಹುನ್ನಾರ ನಿನ್ನದು ಕೈಯಲ್ಲಿ ಕೈ‌ಬಳೆ ತೊಡಿಸಿಏನು ಮಾಡದಂತೆಕೈಕಟ್ಟಿ ಹಾಕುವಹುನ್ನಾರ ನಿನ್ನದು ಹಣೆಗೆ ನಿನ್ನ ಹೆಸರಿನಕುಂಕುಮವ ಹಚ್ಚಿಸಿಹಣೆಯ ಬರಹವೆನಿನ್ನದಾಗಿಸಿಕೊಳ್ಳುವಹುನ್ನಾರ ನಿನ್ನದು ಕಾಲಿನ ಬೆರಳುಗಳಿಗೆಕಾಲುಂಗುರವ ತೊಡೆಸಿನಡೆಯನ್ನೆ ಕಟ್ಟಿ ಹಾಕುವಹುನ್ನಾರ ನಿನ್ನದು ಎಲ್ಲವ ತೊಡಿಸಿಕಟ್ಟಿ ಹಾಕಿರುವೇ ಎಂದುನೀ ಬಿಗುತ್ತಿರುವಾಗ …ನನ್ನ ಮನಸ್ಸನ್ನುಕಟ್ಟು ಹಾಕಲುಸಾಧ್ಯವೇ?… *********************************************************

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಲೇಖನ ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಡಾ.ಸುಜಾತಾ.ಸಿ.                                     “ನೀನು ನಂಗೊAದು ರೊಟ್ಟಿ ಕೊಟ್ರೆ                                     ಒಂದು ದಿವ್ಸ ಹಸಿವನ್ನ ತೀರಿಸ್ದಂಗೆ                                     ರೊಟ್ಟಿಗಳಿಸೋದು ಹೆಂಗೇAತ ಕಲಿಸಿದ್ರೆ                                     ಗಳಿಸೋ ಅವಕಾಶ ಕಿತ್ಕಳೋ ತಂಕ                                     ನನ್ನ ಹಸಿವನ್ನ ತೀರ್ಸಿದಂಗೆ                                     ಅದೇ ನಿನೇನಾದ್ರೂ ವಿದ್ಯೆ ಕಲ್ಸಿ                                     ಒಗ್ಗಟ್ಟಾಗಿ ಹೋರಾಡೋದು ಕಲ್ಸಿದ್ಯಾ?                                     ಏನ್ಬೇಕಾದ್ರೂ ಆಗ್ಲಿ, ಯಾವ ಕಷ್ಟನಾದ್ರೂ ಬರಲಿ                                     ಎಲ್ಲ ಒಟ್ ಸೇರಿ                                     ನಮ್ ದಾರಿ ನಾವು […]

“ಶಾವಾ”ತ್ಮ ಪದಗಳು

ಮನದ ಮಾತು ಶಾಂತಿವಾಸು ಮನಸನ್ನೊಂದು ಮಾತು ಕೇಳು….ಹುಟ್ಟಿನಿಂದ ಕಲಿತು, ಸರಿತಪ್ಪುಗಳನ್ನರಿತು, ಲೋಕಾರೂಢಿಯನುಭವ ಪಡೆದರೇನು? ಕಾರ್ಯಸಿದ್ದಿಗೆ,ಮನಸನ್ನೊಂದು ಮಾತು ಕೇಳು…. ಮನಕ್ಕೊಪ್ಪುವ ಕೆಲಸ ಮಾಡು….ಯಾರೆಷ್ಟು ನಿಂದಿಸಲೇನು? ನಿನ್ನೆತ್ತರವನ್ಹೊಗಳಲೇನು? ತಟಸ್ಥ ಮನಕೆ ಶಕ್ತಿ ತುಂಬಿ ಆತ್ಮತೃಪ್ತಿಯಿಂದ,ಮನಕ್ಕೊಪ್ಪುವ ಕೆಲಸ ಮಾಡು…. ಮನವನೊಮ್ಮೆ ಇಣುಕಿ ನೋಡು….ಎಲ್ಲವೂ ನಿನದಾಗಿ ಕಂಡರೂ, ಬಂದುದು ಕೈತಪ್ಪಿ ಹೋಗಲು ನೆಪವೊಂದಿದೆಯೆಂಬ ಸತ್ಯವರಿತ,ಮನವನೊಮ್ಮೆ ಇಣುಕಿ ನೋಡು…. ಮನಸಿಗೊಂದು ಮಾತು ಹೇಳು…ಜಗದೆಲ್ಲವೂ ನೀನಲ್ಲ, ಜಗದಲ್ಲಿಹುದೆಲ್ಲವೂ ನಿನದಲ್ಲ. ಇರುವರರಿತು, ಬಾಳಲದುವೇ ಬದುಕೆಂದು,ಮನಸಿಗೊಂದು ಮಾತು ಹೇಳು…. *****************************

ಚಿಕ್ಕಿಯ ಫೋಟೋ

ಕಥೆ ಚಿಕ್ಕಿಯ ಫೋಟೋ ಮಧುರಾ ಕರ್ಣಮ್ “ಚಿಕ್ಕಿ ಇಸ್ಕೂಲಿಗೆ ಬತ್ತೀಯೇನೆ? ಟೇಮಾಗ್ತಾ ಐತೆ” ಎಂದು ಕಮಲಿ ಕೂಗು ಹಾಕಿದಾಗ ಚಿಕ್ಕಿ “ಒಸಿ ನಿಂತ್ಕೊಳ್ಳೆ, ಬಂದೆ” ಎನ್ನುತ್ತ ತಟ್ಟೆಯಲ್ಲಿದ್ದ ತಂಗಳನ್ನ ಮುಗಿಸಿ ಕೈ ತೊಳೆದಳು. ಅಲ್ಲಲ್ಲಿ ಹರಿದ ಸ್ಕೂಲ್ ಬ್ಯಾಗ್ ಹೆಗಲಿಗೇರಿಸಿ “ನಾನ್ ಇಸ್ಕೂಲಿಗೆ ಹೋಗ್ಬರ್ತೀನಿ ಕಣವ್ವೋ” ಎಂದು ಕೂಗು ಹಾಕಿದಳು. “ಚಿಕ್ಕಿ, ಹಿಂದೆ ಒಂದ್ನಾಲ್ಕು ಪಾತ್ರೆ ಅವೆ, ತೊಳದ್ಹೋಗೆ” ಎಂಬ ಕೂಗು ಕೇಳಿಸದಂತೆ ಕಮಲಿಯ ಕೈಹಿಡಿದು ಓಡಿದಳು. “ಈ ಅವ್ವ ಹೋಗಾಗಂಟ ಕೆಲ್ಸ ಮಾಡಿದ್ರೂನು ಮತ್ತೆ `ಇದ್ […]

ಜಿಹ್ವೆ

ಕವಿತೆ ಜಿಹ್ವೆ ಅರುಣ ರಾವ್ ಈ ನಾಲಿಗೆಗೇನು?ಅಂದು ಕೊಂಡದ್ದು ನೋಡಿದ್ದುಊಹಿಸಿಕೊಂಡದ್ದು ಕಲ್ಪಿಸಿಕೊಂಡದ್ದು ನುಡಿದುಬಿಡುತ್ತದೆ ನುಡಿದೇ ಬಿಡುತ್ತದೆತುಸು ತಡೆದರೇನು ನಷ್ಟ? ಎಂದೊಮ್ಮೆಕೇಳಿದರೆ ಸರಸರನೆ ತಿರುಗಿ ಗಿರಗಿರನೆ ಸುತ್ತಿಮೇಲೆ ಕೆಳಗೆ ಹಾರಿ ಉರಿದುರಿದು ಬೀಳುತ್ತದೆ ತಾಳ್ಮೆಯಿಂದಿದ್ದು ಕೊಂಚಯೋಚಿಸಬಾರದೇ ಕ್ಷಣಕಾಲ?ಮನಃಶಾಂತಿಯಾದರೂ ಇರುತಿತ್ತು ಆಗಕೇಳಿದ್ದಷ್ಟೇ ಅಲ್ಲ, ನೋಡಿದ್ದೂ ಸುಳ್ಳಾಗುವ ಕಾಲಇದುವೆ ಎಂದೊಂದರೆಗಳಿಗೆ ನೆನೆಯಬಾರದೆ? ಗಳಿಗೆಗೊಂದರಂತೆ ಮಾತಂತೆ ಕತೆಯಂತೆಅದರಲೊಂದಿಷ್ಟು ಹುರುಳು ಹೂರಣಮತ್ತೆ ಕೆಲವೇನೋ ಕಸ ಕಡ್ಡಿ ಕೊಚ್ಚೆ ಕೂಳೆಕೆಸರೆರೆಚಾಟ ಅರೆಚಾಟ ಅಬ್ಬರಕಲ್ಪನೆಯ ಕೂಸಿನ ಅರೆನಗ್ನ ಕುಣಿದಾಟ ಮುಂದೊಂದು ಹಿಂದೊಂದು ಮತ್ತೊಂದು ಮಗದೊಂದು ಆಗೊಂದು ಈಗೊಂದುನನಗೊಂದು […]

ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ?

ಲೇಖನ ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ? ಆಶಾ ಸಿದ್ದಲಿಂಗಯ್ಯ ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ಚಳಿಗಾಲದ ತರಕಾರಿಗಳು: ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, […]

ನಸುಕಿನ ತುಂತುರು

ಕವಿತೆ ನಸುಕಿನ ತುಂತುರು ಸ್ಮಿತಾ ಶ್ಯಾಮ ತುಂತುರು ಹನಿಗಳ ಮುಂಜಾನೆಯ ಮಳೆಸರಿಗಮ ಪದನಿಸ ಹಾಡುತಿದೆಸಪ್ತ ಸ್ವರಗಳ ಸಂಗಮದಲಿ ತೇಲಿದೆಹಸಿರನುಟ್ಟು ಕಂಗೊಳಿಸುತಿಹ ವಸುಧೆ || ಪ|| ಹಕ್ಕಿಗಳಿಂಚರದಿ ಬೆರೆತಿದೆ ಮಳೆಗಾನಹೊಮ್ಮುತಲಿದೆ ಹೊಂಬೆಳಕಿನ ರವಿ ಕಿರಣಪರಿಮಳವನು ಸೂಸುತಲಿವೆ ಹೂಬನಪ್ರಕೃತಿಯ ಸೊಬಗದು ರೋಮಾಂಚನ. ||೧|| ಮುಂಜಾನೆಯ ಮಳೆಯ ಸಿಂಚನತನನ ತನನ ನವಿಲ ನರ್ತನಸಾಗರದ ದಡಕೆ ಅಲೆಯ ಚುಂಬನತಂಪು ಸೂಸುತ ಹಾಯ್ವ ಪವನ. ||೨|| ಸುಪ್ರಭಾತ ಹಾಡುತಲಿದೆ ಪ್ರಾತಃಕಾಲದಿ ವರ್ಷವುಗುಡಿಗೋಪುರಕದುವೆ ನಸುಕಿನ ಅಭಿಷೇಕವುಶುಭ್ರಗೊಂಡಿಹುದು ಮನೆ ಮನೆಯ ಅಂಗಳವುತನುಮನವನು ತುಂಬುತಲಿದೆ ನವೋಲ್ಲಾಸ ಚೇತನವು||೩|| *********************************

ಅಂಕಣ ಬರಹ ಘೋರಾರಣ್ಯದಲ್ಲಿ ಹಾರುವ ಹಂಸೆ ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಪರವಾದ ನಿಲುವನ್ನು ತಾಳಿದ ಸಾಹಿತ್ಯಕ ಮತ್ತು ಧಾರ್ಮಿಕ ಚಳುವಳಿಯೆಂದರೆ ಅದು ವಚನಸಾಹಿತ್ಯ. ಅದರ ಉಗಮಕ್ಕೆ ಕಾರಣವಾದದ್ದು ಬಸವಾದಿ ಪ್ರಮಥರ ಧಾರ್ಮಿಕ ತಾತ್ವಿಕ ಸುಧಾರಣೆಗಳು ಅದರೊಂದಿಗಿನ ಸಾಮಾಜಿಕ ಸುಧಾರಣೆ. ಅವಿದ್ಯಾವಂತರಿಂದ ವಿದ್ಯಾವಂತರವರೆವಿಗೂ ತಮ್ಮದೇಯಾದ ಸಾಮಾಜಿಕ, ಧಾರ್ಮಿಕವಾಗಿ ಜೀವನಕ್ರಮದ ಬಗೆಗಿನ ಕಾಳಜಿಯ ಅಭಿವ್ಯಕ್ತಿಯು ಮುಕ್ತವಾಗಿ ನಡೆದದ್ದಾಗಿದೆ. ಸಮಾಜ ಸುಧಾರಣೆಯು ಮುಖ್ಯ ಆಶಯವಾಗಿ ವಚನಗಳು ರಚನೆಯಾದರೂ ಅದರೊಂದಿಗಿನ ಸಾಹಿತ್ಯಿಕ ಅಂಶಗಳು ಉಪೋತ್ಪನ್ನವಾಗಿ ಹೊಂದಿ ವಚನಗಳು ರಚಿಸಲ್ಪಟ್ಟವು. ಆ ಚಳುವಳಿಯಲ್ಲಿನ ‘ಕಂಭದ […]

Back To Top