ನಂಬಿಕೆ

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ‌ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್:

ಪುಸ್ತಕ ಪರಿಚಯ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: ಒಂದು ಅವಲೋಕನ (ಅಂಕಿತ ಪುಸ್ತಕ, ಬೆಂಗಳೂರು: ೨೦೨೦; ಪು.೧೬೦  ಬೆಲೆ: ರೂ.೧೫೦/-) ಭಾರತೀಯ ಕಾನೂನುಗಳ – ಅದರಲ್ಲೂ ವಿಶೇಷವಾಗಿ ‘ಭಾರತೀಯ ದಂಡ ಸಂಹಿತೆ’ – ಕುರಿತು ಮಾತನಾಡುವಾಗ “ಮಹಿಳೆ” ಎನ್ನುವುದನ್ನು ಒತ್ತಿ ಹೇಳಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರವಾದರೂ ಅದೊಂದು ನಿಷ್ಠುರ ಸಾಮಾಜಿಕ ಸತ್ಯ ಎಂಬುದನ್ನು ಒಪ್ಪಿಕೊಳ್ಳಲೇ ಬೇಕು. ‘ಸರ್ವರ ಸಮಾನತೆ’ಯನ್ನು ನಮ್ಮ ಸಂವಿಧಾನ ಎತ್ತಿ ಹಿಡಿದಿದೆಯಾದರೂ […]

ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿ‌ಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು […]

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು […]

ಸಿಂ(ಹ)ಪತಿ

ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ …// ಒಡಲ ಕಣದಲಿನೀ ಅಂಗಾಂಗುಲವೂಎಷ್ಟೇ ಗಾಯಗೊಳಿಸಿಕೊರಗಿಸಿದರೇನು ಗೆಳೆಯ ?ಮತ್ತೆ ಮತ್ತೆ ನೀನೇ ಬರುವೆನನ್ನ ಭೂಪತಿಯಾಗಿ…// ಮೋಹಕ ನೋಟದಕಣ್ಣ ಕಂಬನಿಗೆನೀ ಕಾರಣವಾಗಿಎಷ್ಟೇ ಕಾಡಿದರೇನು ಗೆಳೆಯ ?ಆ ಕಣ್ಣ ಕನಸಲಿಮತ್ತೆ ಮತ್ತೆ ನೀನೇ ಬರುವೆನನ್ನ ಪತಿಯಾಗಿ…!!ಅದಕ್ಕೆ ನಾವಾಗಿರುವೆವುದಂಪತಿಯಾಗಿ …// ***************************

ಒಂದು ಸಾಂದರ್ಭಿಕ ಚಿತ್ರ

ಕವಿತೆ ಒಂದು ಸಾಂದರ್ಭಿಕ ಚಿತ್ರ ಬಸವರಾಜ ಹೂಗಾರ ಕರಿಕಲ್ಲಿನ ಮೇಲೆಚಂದದ ನಾಮಫಲಕಚಿಕ್ಕ ಗೇಟುಎರಡು ಕುರ್ಚಿ ಹಾಕುವಷ್ಟೇ ವರಾಂಡಇಣುಕಿ ನೋಡಿದರೆದೊಡ್ಡ ಪಡಸಾಲೆಎರಡು ಕೋಣೆಗಳ ಮಧ್ಯೆಅಂಗೈಯಗಲದ ದೇವರಮನೆ.ಬಾಡಿಗೆ ಮನೆಯಲಿಇದ್ದೂ ಇದ್ದೂ ಸಾಕಾಗಿಸಾಕಿಷ್ಟು ನಮಗೆಎನ್ನುವಷ್ಟಿತ್ತು ಮನೆ. ರಸ್ತೆಯಲ್ಲಿ ಹೋಗುವಾಗಆ ಮನೆ ಈ ಮನೆಬಣ್ಣ ಬಣ್ಣದ ಮನೆಗಳನೂರು ನೋಟ ಆಸೆ ಕನಸುಗಳಗಿಲಕಿ ಹಳವಂಡಎಚ್ಚರಾದವನಿಗೆ ಲೋಕ ಸುಂದರ. ಎಲ್ಲ ಮನೆಗಳೂ ಚಂದಕಂಡವರ ಮನೆ ಸಿಟೌಟಿನಲಿಪೇಪರ್ ಓದುವವನು ನಾನೊಬ್ಬನೆ !ಹತ್ತುವಾಗ ಇಳಿಯುವಾಗಹೆಚ್ಚು ಕಂಡದ್ದು ಈ ಚಿಕ್ಕ ಮನೆಗಂಡ ವ್ಯಾಪಾರಿ ಹೆಂಡತಿ ಸಂಸಾರಿಕಂಪೌಂಡಿನಂಗಳದಲಿಗೆಜ್ಜೆ ಗಿಲಕಿಯ ಹೆಜ್ಜೆವೂರುವ ಮಗು. […]

ಶ್ರೀಮಂತ ಅನುಭವಗಳ ಸಹಜ ಒಡಂಬಡಿಕೆ ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಶಿಕ್ಷಕಿಯಾಗಿದ್ದಾರೆ. ಸಾಹಿತ್ಯ ಕೃಷಿಯಲ್ಲಿ ಆಸಕ್ತಿ ಇರುವ ಕಾರಣ ರಾಧಾ, ನೃತ್ಯಗಾಥಾ, ಮಕ್ಕಳ ರವೀಂದ್ರ, ನಾರಸಿಂಹ, ಮಕ್ಕಳ ರಾಮಾಯಣ, ಕನಕ-ಕೃಷ್ಣ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ರವೀಂದ್ರ ನಾಥ ಟ್ಯಾಗೋರರ ಚಿತ್ರಾ, ಕೆಂಪುಕಣಗಿಲೆ, ಅವಳ ಕಾಗದ ಮೊದಲಾದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ‘ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹ ಜಿ.ಎನ್ ಮೋಹನ್ ಸಾರಥ್ಯದ “ಅವಧಿ” ಅಂತರ್ಜಾಲ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. […]

ಸೇಡಿನ ಫಲ

ಸೇಡಿನ ಫಲ ವಿಲಿಯಂ ಬ್ಲೇಕ್ ಕವನದ ಅನುವಾದ ನನ್ನ ಗೆಳೆಯನ ಮೇಲೆ ಬಂದ ಮುನಿಸಿಗೆ ನಾನುತಾಳ್ಮೆಯಿಂದಲೆ ಅಂದೆ, ‘ಸುಮ್ಮನಿರು’ ಎಂದುಮಾಯವಾಗಿಯೆ ಹೋಯ್ತು ಕೋಪವಂದು.ನನ್ನ ವೈರಿಯ ಮೇಲೆ ಬಂದ ಮುನಿಸಿಗೆ ನಾನುಕೋಪದಿಂದಲೆ ನುಡಿದೆ, ‘ಚೆಂಡಾಡು’ ಎಂದುಮನದೊಳಗೆ ಬೆಳೆಯಿತದು ನನಗರಿವಿಲ್ಲದೆಲೆ ಹಗೆತನದ ಬೀಜವದು ಮೊಳಕೆಯೊಡೆಯುತ್ತಸಸಿಯಾಗಿ ಬೆಳೆದು ಮರವಾಗಿ ನಿಂತಿತ್ತುಭಯವೆಂಬ ಕಣ್ಣೀರ, ನಗುವೆಂಬ ಎಳೆ ಬಿಸಿಲನೀಡುತ್ತ ಬೆಳೆಸಿದೆನು ಹಗಲು ರಾತ್ರಿಯೆನ್ನದೆಲೆವಂಚನೆಯ ತಂತ್ರಗಳ ನಡುನಡುವೆ ತುರುಕುತ್ತಮರವಾಗಿ ಬೆಳೆಸಿದೆನು ಸೇಡಿನಾ ಗಿಡವನ್ನು ಮರ ಬೆಳೆದು ಹೂವಾಯ್ತು, ಹೂವರಳಿ ಹಣ್ಣಾಯ್ತುನನ್ನ ಅರಿ ನೋಡಿದನು ಥಳಥಳಿಪ ಹಣ್ಣನ್ನುಕಿಂಚಿತ್ತು […]

Back To Top