ಕಾವ್ಯಯಾನ

ಕಾವ್ಯಯಾನ

ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ ಬೆಳೆಸಿರಬೇಕುಅವನ ಊರಿನ ಕಡೆಗೇ..ಕಿಟಕಿಯಾಚೆ‌ ಮಳೆಮೋಡವೂಕಣ್ಣಂಚಲಿ‌ ತೊಟ್ಟಿಕ್ಕಲುಹವಣಿಸುತಿದೆ ಅರೆಗಳಿಗೆ ಅತ್ತುಬಿಡಲು ಅವಸರಿಸಿವೆ ನಯನಗಳುತಂಗಾಳಿಯೂ ತಂಪೀಯದೆಸುಟ್ಟು ಬೂದಿಯೂ ಆಗಿಸದೆಕಿಡಿ ತಾಗಿಸಿ ಮರೆಯಲಿ ಇಣುಕಿದೆ. ನಿಟ್ಟುಸಿರ ಮೈದಡವಿಮುದ್ದು ಮಾತುಗಳಲಿ ಒಲಿಸಿಜೇನು ಸುರಿಸುವ ಕಣ್ಣಂಚಿನ ಪಿಸುಮಾತೂ ಕಾಣೆಯಾಗಿದೆ ಬರಿದೆ ಹಂಬಲಿಕೆ‌ ಚಡಪಡಿಕೆಮುಗಿಯದಾ ಕಾಲದ ಸಂಚುಸುಕ್ಕಾಗುತ್ತಿದೆ ನಿರೀಕ್ಷೆ.ಅವನು ಸುಳಿಯುತ್ತಿಲ್ಲಾ..ಬೆಳಗು ಬೈಗು ನೆನಪಿನ ಗಾಯಒಳಗೊಳಗೇ ಹಸಿರಾಡುತ್ತಿದೆ. ಬೇಸರದಿ ಆಸರೆಗೆಕತ್ತಲಲ್ಲಿ ಕೈಚಾಚಿದ್ದೇನೆಏಕಾಂತವೆಲ್ಲಾ‌ ಲೋಕಾಂತಆಗಿಸುವ ಬಯಕೆ ಅವನುಮಾಯವಾಗಿದ್ದಾನೆ […]

ಅನುವಾದ ಸಂಗಾತಿ

ಶೂರ್ಪನಖಾಯಣ ಮಲಯಾಳಂ ಮೂಲ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ರಾತ್ರಿ ಕಂಡ ಕನಸಿನಲ್ಲಿನನ್ನ ಮುಂದಿದ್ದಳು ಶೂರ್ಪನಖಿಎಲ್ಲಿಯೂ ಸೀತೆಯನ್ನು ಕಾಣಲಿಲ್ಲಬಳಿಯಲ್ಲಿ ರಾಮನೂ ಇರಲಿಲ್ಲ ಹಲವು ದಿನಗಳಿಂದ ಆಲೋಚನೆಗಳಲ್ಲಿರಾಮ ರಾವಣ ಯುದ್ಧವೇ ತುಂಬಿತ್ತುಯಾರ ಪಕ್ಷ ಸೇರಲಿ?ಮಾನ್ಯರಲ್ಲ ಇಬ್ಬರೂ ಸೀತೆಯೊಂದಿಗೆ ನಿಂತುರಾಮನನ್ನು ದೂಷಿಸಬಹುದೇ?ವಾಲಿಯನ್ನು ವಧಿಸದೆರಾಮನ ವಿರುದ್ಧ ನಿಲ್ಲಬಹುದು ತಾಟಕಿ, ಶಂಬೂಕರುನಮ್ಮ ಪಕ್ಷ ಸೇರುವರುರಾವಣನನುಜ ವಿಭೀಷಣನನ್ನು ಅಂಕೆಯಲ್ಲಿರಿಸಬಹುದು ಹನುಮಂತನನ್ನು ಸೋಲಿಸಲುವಾಲಿಯೊಬ್ಬನೇ ಸಾಕಲ್ಲವೇಪ್ರಜೆಗಳು ಹೇಗಾದರೂ ಇರಲಿಅಮ್ಮನಿಗೆ ಕೈಯೆತ್ತುವರು ಅವರ ಮಾತನಾಲಿಸಿನಾಡಿನಲ್ಲಿ ಬದುಕಲು ಸಾಧ್ಯವೇ?ಗಾಳಿಸುದ್ದಿಯನ್ನೇ ಹಬ್ಬಿಸುವರೆಲ್ಲರೂಬೇರೇನೂ ಕೆಲಸವಿಲ್ಲವಲ್ಲ ವಾಲ್ಮೀಕಿ ಬರೆಯಲಿಅವರು ಕವಿಯಲ್ಲವೇಕವಿತೆಗಳೆಲ್ಲವೂ ಕಥೆಗಳಲ್ಲಕಥೆಗಳೆಲ್ಲವೂ ನಿಜವಲ್ಲ ರಾಮನಿಗೆ ಸೀತೆ […]

ಕಾವ್ಯಯಾನ

ಸಾಹಿತ್ಯದ ಒಳಸುಳಿಗಳ ಜೊತೆ ಒಂದು ಸುತ್ತು!! ಸುಜಾತಾ ಲಕ್ಮನೆ ಅರೆಚಣವೂಅತ್ತಿತ್ತ ಅಲುಗದೇಮಗ್ಗುಲಲ್ಲೇ ಕೂತು ಕಚಗುಳಿಯಿಟ್ಟು ನಗಿಸುವಮನದನ್ನೆಯಂತೆ ಇದು –“ಸಾಮಾಜಿಕ ಜಾಲತಾಣ” !ನಾವೂ ನೀವೂ ಎಲ್ಲರೂ ಜಾಲಿಯಾಗಿ ಜಾಲಾಡಿಈಜಾಡುವ ಸುಂದರ ತಾಣ!ಮೆರೆಸಬಹುದಿಲ್ಲಿಸ್ವ-ಪ್ರತಿಷ್ಠೆ, ಸ್ವ-ಪ್ರಶಂಸೆ, ಬೊಗಳೆ ಒಂದಷ್ಟು, ವೈಯಕ್ತಿಕ ಬಿನ್ನಾಣ..!ಅಷ್ಟಷ್ಟು ಸಾಧನೆ ಸನ್ಮಾನಗಳ ಲಿಸ್ಟಿನ ಅನಾವರಣ!ಹಾಗೋ ಹೀಗೋ ಗೀಚಿ, ಬೀಗಿ,, ಎದೆ ಸೆಟೆಸಿಮೈ ಮನ ಮ(ಮೆ)ರೆಯಲು ಇದೊಂದು ಚಂದದ ನಿಲ್ದಾಣ!ಬರೆದದು ಜೊಳ್ಳೋ, ಸುಳ್ಳೋ, ಕಾವ್ಯವೋ, ವಾಚ್ಯವೋ,ನಿಯಮಬದ್ಧ ಗಜ಼ಲ್ಲೋ, ಅಪಭ್ರಂಶವೋ,ಸ್ವಂತವೋ, ಸಂಗತವೋ, ಅನೂಹ್ಯವೋಒಟ್ಟಾರೆ–ದೊಪ್ಪೆಂದು ರಾಶಿ ರಾಶಿ ಸುರುವಿಸಾಕಷ್ಟು ಲೈಕ್ ಗಿಟ್ಟಿಸಿದರೆಅಲ್ಲಿಗೆ ಸಾರ್ಥಕ್ಯ […]

ಕಥಾಯಾನ

ಕನ್ನಡದ ಇಲಿ ವಸುಂಧರಾ ಕದಲೂರು ಅಮ್ಮನ ಕೈ ಹಿಡಿದು ಹಾಲಿನ ಬೂತಿನ ಬಳಿ ನಿಂತಿದ್ದ ಕಿಶೋರನಿಗೆ ಪಕ್ಕದ ಮೋರಿಯಿಂದ ಏನೋ ಚಲಿಸುತ್ತಿರುವುದು ಕಂಡಿತು.          ಅಮ್ಮನ ಕೈಯನ್ನು ಗಟ್ಟಿಯಾಗಿ ಹಿಡಿದವನೇ ಪುನಃ ಆ ಕಡೆಗೇ ನೋಡತೊಡಗಿದ. ಪುಳುಪುಳನೆ ಪುಳಕ್ಕೆಂದು ಬಿಲದಿಂದ ಹೊರಬಂದ ಇಲಿಯೊಂದು ಕಸದ ಡಬ್ಬದ  ಹೊರಗೆ ಚೆಲ್ಲಿದ್ದ ಹಾಲಿನ ಕವರ್ ಅನ್ನು ಸ್ವಲ್ಪ ಎಳೆಯಿತು.       ಬರೀ ಟಾಮ್ ಅಂಡ್ ಜರ್ರಿ ಕಾರ್ಟೂನಿನಲ್ಲಿ ಇಲಿ ನೋಡಿ ಗೊತ್ತಿದ್ದ ಕಿಶೋರ ನಿಜವಾದ […]

ಕಾವ್ಯಯಾನ

ನದಿ ಈಗ ದಿಕ್ಕು ಬದಲಿಸಿದೆ ಸ್ಮಿತಾ ಅಮೃತರಾಜ್.ಸಂಪಾಜೆ. ಜುಳು ಜುಳೆಂದು ಹರಿಯುವನನ್ನೂರಿನ ತಿಳಿನೀರಿನ ನದಿಈಗ ಕೆನ್ನೀರ ಕಡಲು. ತಪ್ಪನ್ನೆಲ್ಲಾ ಒಪ್ಪಿಕೊಂಡಂತೆತೆಪ್ಪಗೆ ಹರಿಯುತ್ತಿದ್ದ ನದಿ.. ಒಣಗಿದೆದೆಯ ಮೇಲೆ ಮೊಗೆದುತಣಿಯುವಷ್ಟು ತೇವವನ್ನುನಮಗಾಗಿಯೇ ಕಾಪಿಡುತ್ತಿದ್ದ ನದಿ.. ಅಂಗಳದ ತುದಿಯವರೆಗೂ ಬಂದುಗಲಗಲಿಸಿ ನಕ್ಕು ನೇವರಿಸಿ ಹರಿಯುತ್ತಿದ್ದ ನದಿ.. ಹೌದು! ಇದುವೇ ನದಿಮೊನ್ನೆ ಹುಚ್ಚೆದ್ದು ಕೆರಳಿದ್ದಕ್ಕೆನೆಲದ ಎದೆಯೊಡೆದು ಸೆಲೆ ಸಿಡಿದುಸಾವಿರ ನದಿಯಾಗಿ ಒಸರಿ ಹರಿದವುರಕ್ತ ಕಣ್ಣೀರ ಕೋಡಿ. ದಿಕ್ಕಾಗಿದ್ದ ನದಿ ತಾನೇದಿಕ್ಕು ಬದಲಿಸಿ ಕೆಂಪಗೆ ಹರಿಯುವಾಗನಾನೋ ದಿಕ್ಕು ಕಾಣದೆ ದಿಕ್ಕೆಟ್ಟುನದಿ ಹರಿಯುವ ದಿಕ್ಕಿಗೆ ಮುಖ […]

ನನ್ನಿಷ್ಟದ ಕವಿತೆ

ನನ್ನಿಷ್ಟದ ಕವಿತೆ ಮೀನಕಣ್ಣಿನ ಸೀರೆ ಲಲಿತಾ ಸಿದ್ಧಬಸವಯ್ಯಾ.               –  ಮೀನಕಣ್ಣಿನ ಸೀರೆ ಈ ಅಪರೂಪ ಸುಂದರಿಗೆ ಸೀರೆಯ ಬಗ್ಗೆ ಎಂಥ ಮುತುವರ್ಜಿ ಎಷ್ಟೇ ಆಗಲಿ ರಾಜಕುಮಾರಿ ಅವಳು ಒಮ್ಮೆ ಹಾಗೆ ಸುತ್ತಿಕೊಂಡು ಮೈಕಾಂತಿಗೆ ಸೋಕಿಸಿ ಬಿಸಾಡಿದ ಹೊಚ್ಚ ಹೊಸ ಸೀರೆಗಳನ್ನೇ ಉಟ್ಟು ಬೆಳೆದ ನೂರಾರು ದಾಸಿಯರ ನಡುವೆ ಒಡ್ಡೋಲಗ ನಡೆಸಿದವಳು ಸ್ವಯಂವರಕ್ಕೆ ಬರುವ ಮೊದಲು ಸೀರೆಗಳ ಆಯ್ದಾದು ಅದುಬೇಡಇದುಬೇಡ ಬೇಡದ ಗುಪ್ಪೆಗಳ ಬೆಟ್ಟವೇತಯಾರು ಕೊನೆಗೆ ಹತ್ತುಮಗ್ಗಗಳ ನಿಂತನಿಲುವಲ್ಲೇ ಹೂಡಿಸಿ ಅವಳ ಕಣ್ಣೆದುರಲ್ಲೇ ಅಂಚು ಸೆರಗುಗಳ […]

ಕಾವ್ಯಯಾನ

ನಂದಿನಿ ಹೆದ್ದುರ್ಗರವರ ಕವಿತೆ ಅವನ ಅದ್ದಿ ಬರೆದ ಪದ್ಯಗಳುಈಗಲೂ ಹೊಸದಾಗಿಯೇ ಇವೆ… ನಾಜೂಕು ಅಕ್ಷರಗಳ ನೇವರಿಸಿಒಳಗೊಳ್ಳುತ್ತೇನೆ ಹೊಸದೆಂಬಂತೆಪ್ರತಿ ಬಾರಿಯೂ… ತೆರೆದ ಬಾಗಿಲಿನ ಪಂಜರದಿಂದಹಾರಿ ಹೋದ ಹಕ್ಕಿಯೊಂದುಇಳಿಸಂಜೆಗೆ ಮರಳಿದಿನದ ಕಥೆ ಹೇಳುತ್ತದೆ. ಕೆಲವು ಹಳತುಗಳುಹೊಸತಾಗಬಹುದೆಂಬ ಪುಳಕಉಳಿದೇಹೋಗಿದೆ ಇಲ್ಲಿ…! ಹೊಳಪು ಮತ್ತು ಬೆಳಕುಬಚ್ಚಿಡುವುದೂ ಎಂಥಹರಸಾಹಸ ಪ್ರಭುವೇ…!!! ****************

ಕೊರೊನಾ ಮತ್ತು ಕಲಾವಿದೆ ಬೇಗಂ…

ಕಥೆ ಕೊರೊನಾ ಮತ್ತು ಕಲಾವಿದೆ ಬೇಗಂ… ಮಲ್ಲಿಕಾರ್ಜುನ ಕಡಕೋಳ ಕೈ ಕಾಲುಗಳಲ್ಲಿ ಥರ್ಕೀ ಹುಟ್ಟಿದಂಗಾಗಿ ನಡುಗ ತೊಡಗಿದವು. ಮೈಯೆಲ್ಲ ಜಲ ಜಲ ಬೆವೆತು ಹೋಯ್ತು. ಎದೆಗುಂಡಿಗೆ ಹಿಂಡಿದಂಗಾಯ್ತು. ಎದ್ದು ಹೋಗಿ ನೀರಿನ ತಂಬಿಗೆ ತುಂಬಿಕೊಳ್ಳಬೇಕೆಂದು ರಗಡ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಲಿಲ್ಲ. ಯಾರಿಗಾದರೂ ಫೋನ್ ಮಾಡಬೇಕೆಂದ್ರೆ ಅವಳ ಡಬ್ಬಾ ಫೋನಲ್ಲಿ ದುಡ್ಡಿಲ್ಲ. ಎರಡು ತಿಂಗಳಿಂದ ಅದು ಬರೀ ಇನ್ಕಮಿಂಗ್ ಸೆಟ್ ಆಗಿತ್ತು. ” ದೈವಹೀನರಿಗೆ ದೇವರೇಗತಿ ” ಎಂಬ ಸಾಳುಂಕೆ ಕವಿಗಳ ನಾಟಕವೊಂದರ ಡೈಲಾಗ್ ನೆನಪಾಗಿ, ದೇವರನ್ನೇ […]

ಕಾವ್ಯಯಾನ

ಪ್ರಕೃತಿ ಪಾರ್ವತಿ ಸಪ್ನಾ ಶತಮಾನಗಳ ಲೆಕ್ಕವಿಲ್ಲದೇಇದ್ದಲ್ಲೇ ಇದ್ದು ಸತತವಾಗಿಮಾನವನ ಕೈಯಲ್ಲಿನಾಶವಾಗುತ್ತಿರುವ ಪ್ರಕೃತಿಕೇಳಲಿಲ್ಲನಾನು ಯಾರೆಂದು ! ಕರಿಮೋಡ ಸುತ್ತುತ್ತಲೇ ಇದೆನೀಲಿ ಬಾನು ಇದ್ದಲ್ಲೇ ಇದೆಸೂರ್ಯ ಚಂದ್ರರಿಗೇ ಪುರಸೊತ್ತಿಲ್ಲಆದರೂ ನಮ್ಮನೆಂದು ಕೇಳಲಿಲ್ಲ.ನಾನು ಯಾರೆಂದು ! ಕೋಟಿ ಜೀವ ರಾಶಿಗೆಜಲವೇ ಬೇಕು ಭೂಮಿಗೆದಾಹ ನೀಗಿ ಬದುಕ ಕೊಟ್ಟುಕಡಲ ಸೇರುವ ನೀರಿಗೆಈಗಲೂ ಅರಿವಿಲ್ಲ ನೋಡುನಾನು ಯಾರೆಂದು ! ಏನೇನೂ ಅಲ್ಲದತನ್ನ ಮೂಲ ತಿಳಿಯದಮಾನವೀಯತೆ ಮರೆತುಯಾರೊಂದಿಗೂ ಬೆರೆಯದಮಾನವ ಜನ್ಮವೇಒಮ್ಮೆ ನಿನ್ನನ್ನೇ ಪ್ರಶ್ನೆ ಮಾಡಿಕೋ ನಾನು ಯಾರೆಂದು ! *********************

Back To Top