ಪ್ರಸ್ತುತ

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? […]

ಕಾವ್ಯಯಾನ

ನಿನ್ನ ನೆನಪೆಂದರೆ… ವಸುಂಧರಾ ಕದಲೂರು ಆಗ ನಿನ್ನ ನೆನಪೆಂದರೆ, ಬೇಕಾದ ಮಳೆಯಂತೆತುಂಬಿಕೊಳ್ಳಲು ಹಳ್ಳಕೊಳ್ಳಜಲಾಗರ ಸಾಗರ;ಮುತ್ತುಹವಳ ಸಂಗ್ರಹಾಗಾರ. ಅಚ್ಚಬಿಳುಪಿನ ಕಾಗದದಲಿನೆಚ್ಚಿನ ಅರ್ಥ ತುಂಬಿದ ಭಾವಕೋಶಅಚ್ಚುಕಟ್ಟಾಗಿ ಅಚ್ಚು ಮಾಡಿಸಿದಪದಕೋಶ.. ಈಗ ನಿನ್ನ ನೆನಪೆಂದರೆ, ಅಕಾಲದಲ್ಲಿ ಮಳೆಗರೆದು ಆದರಾಡಿ ರಸ್ತೆಅರ್ಥಕೋಶದಲಿ ಸೇರಿಬಿಟ್ಟಖಾಲಿ ಹಾಳೆ ********

ಚಿಂತನೆ

ಅರಿಷಡ್ಬರ್ಗಗಳನು  ದಾಟಿ….. ಅಶ್ವಥ್ ಕಳೆದ ವಾರ ಗೆಳೆಯನೊಬ್ಬನಿಗೆ ಏನೋ ಗೊಂದಲವಾಗಿ ಕೆಲವು ಪ್ರಶ್ನೆಗಳನ್ನು ಒಂದಕ್ಕೊಂದು ಪೋಣಿಸಿ ಪ್ರಶ್ನೆಗಳ ಒಂದು ಮಾಲೆಯನ್ನೇ ಮಾಡಿಟ್ಟುಕೊಂಡಿದ್ದ. ನಾವು ಕತೆ ಕೇಳ್ತೇವೆ, ಇತಿಹಾಸ ಅಧ್ಯಯನ ಮಾಡ್ತೇವೆ, ಪುರಾಣ ಪುಣ್ಯಕತೆಗಳನ್ನು ಓದುವುದು ಕೇಳುವುದು ನೋಡುವುದು ಇದ್ದೇ ಇದೆ. ಇಷ್ಟೇ ಅಲ್ಲದೇ ನಮ್ಮ ತಲೆಮಾರಿನವರಿಗೆ ಬಾಲ್ಯದಲ್ಲಿ ಪೌರಾಣಿಕ ನಾಟಕಗಳು, ಹರಿಕತೆಗಳು, ಬೀದಿನಾಟಕ, ಗೊಂಬೆನಾಟಕ ಹೀಗೆ ಹತ್ತು ಹಲವು ರೀತಿಯಲ್ಲಿ ನಮ್ಮ ಹೊರಗನ್ನು ತಿಳಿಯುವ ಸಾಮಾನ್ಯ ಸಾಧ್ಯತೆಗಳಿದ್ದವು. ಈಗ ಹಳೆಯ ಈ ಮಾಧ್ಯಮಗಳೆಲ್ಲ ಹಿನ್ನೆಲೆಗೆ ಸರಿದು, ಸಿನಿಮಾ, […]

ಕಾವ್ಯಯಾನ

ಒಂದು ಕವಿತೆ ಎಂ.ಎಸ್.ರುದ್ರೇಶ್ವರ ಸ್ವಾಮಿ (he ran away from there, he preferred her. she shouted – listen, I am older than you… was he too young for her?) ನಿನ್ನೆ ಮೊನ್ನೆಯಿಂದ ಮುನಿದುದೂರವೇ ಇದ್ದಅವಳು, ಮತ್ತೆ ಬಂದು ಮಕ್ಕಳ ಆಟಆಡೋಣವಾ? ಎಂದು,ಮಗುವಿನ ಹಾಗೆ ಕೇಳಿದಳು. ಭಾಷೆ, ಮಾತಿನಅರ್ಥದ ಜಾಡು ಹಿಡಿದು ವಿಶ್ಲೇಷಣೆಗೆಸಿದ್ಧವಾಯಿತು; ಮಗುವಿನಹಾಗೆ, ಮಗುವಲ್ಲ ಅವಳು. ಮನಸ್ಸು ನದಿ-ಯ ಹಾಗೆ ಹರಿಯುತ್ತಲೇ ಹಿಂತಿರುಗಿನೋಡಬಲ್ಲದು.ಗೌರಿಶಂಕರದ ಕನಸುಕಾಣುತ್ತ ಮಳೆಯಾಗಿ ಇಳೆ ಸುತ್ತಬಲ್ಲದು. […]

ಅನುವಾದ ಸಂಗಾತಿ

ಸ್ವಾಮಿ ಭಕ್ತಿ ಮೂಲ:ವಿಲಿಯಂ ವರ್ಡ್ ವರ್ತ್ ಕನ್ನಡಕ್ಕೆ: ವಿ.ಗಣೇಶ್ ಬೊಗಳುವ ಸಪ್ಪಳವು ಕುರುಬನಿಗೆ ಕೇಳಿಸಿತು ನರಿಯದೋ ನಾಯಿಯದೋ ಕೂಗಿರಬೇಕೆಂದು ಅರೆ ಕ್ಷಣ ನಿಂತು ಹುಡುಕಾಡಿದನು ದಶದಿಕ್ಕುಗಳಲಿ. ಹರಿದು ಹಾಸಿದ್ದ ಕಲ್ಲುಬಂಡೆಗಳ sಸುತ್ತಲೂ ಹುಡುಕಾಡಿದಾಗ ತುದಿಯ ಗಿಡಗಂಟೆಗಳ ಮಡಿಲಲ್ಲಿ ಅಲುಗಾಡುತ್ತಿರುವ ಹಸಿರು ಪೆÇದೆಯೊಂದು ಕಾಣಿಸಿತು. ಅದರ ಅಡಿಯಲಿ ಕಣ್ಣೀರಿಡುತಿರುವ ಶುನಕವೊಂದು ಪೊದೆಯ ಕಡೆಗೇ ವೀಕ್ಷಿಸುತ ಅಳುವುದ ಕಾಣಿಸಿತು.   ಅತಿ ಸೂಕ್ಷ್ಮಮತಿಯಾದ ಆ ಶುನಕವ ನೋಡಿದರೆ ಕಾಡಿನಲಿ ಹುಟ್ಟಿ ಬೆಳೆದ ಶುನಕವಲ್ಲವೆನಿಸಿತು. ಅದರ ಅಳುವಿನಲೇನೋ ಘೋರ ದುಃಖವಿಹುದೆಂದು ಭಾವಿಸಿದ […]

ಉದಯಿಸುತ್ತಿರುವ ಸೂರ್ಯನೊಂದಿಗೆ ಹೆಜ್ಜೆಯಿಡುವ ತವಕದಲ್ಲಿ. ತೇರೂವೋ ಮೂಲ ಗೌರಿ ದೇಶಪಾಂಡೆ ಕನ್ನಡಕ್ಕೆ- ಚಂದ್ರಕಾಂತ ಪೋಲಳೆ ಬೆಲೆ-೮೦   ನನಗೆ ಬೇರೆ ಭಾಷೆಗಳಿಂದ ಅನುವಾದಗೊಂಡ ಕಾದಂಬರಿಗಳ ಹುಚ್ಚು ಹಿಡಿಸಿದ್ದು ಸೃಷ್ಟಿ ನಾಗೇಶರವರು. ಅವರ ಸೃಷ್ಟಿ ಪ್ರಕಾಶನ ಎಂದರೆ ಅನುವಾದಗಳಿಗಾಗಿಯೇ ಮೀಸಲಾಗಿರುವ ಪ್ರಕಾಶನ. ಜಗತ್ತಿನ ಅದ್ಭುತ ಕಾದಂಬರಿಗಳ ಅನುವಾದಗಳನ್ನು ನಾನು ಓದಿದ್ದು ಸೃಷ್ಟಿ ಪ್ರಕಾಶನದ ಪುಸ್ತಕಗಳಿಂದಾಗಿಯೇ. ತಮ್ಮ ಪ್ರಕಾಶನದ ಪುಸ್ತಕಗಳನ್ನು ತಲುಪಿಸುವ ಸೃಷ್ಟಿ ನಾಗೇಶ ಇದನ್ನು ಮೊದಲು ಓದಿ, ಈ ಪುಸ್ತಕ ಅದ್ಭುತವಾಗಿದೆ ಓದಿ ಎಂದೆಲ್ಲ ಸಲಹೆ ಮಾಡಿಯೇ ಕಳುಹಿಸುತ್ತಾರೆ. […]

ಗುಂಡಪ್ಪೆಯ ಮಳೆಗಾಲ ಈ ಮಾವಿನಹಣ್ಣಿಗೂ ಮಳೆಗಾಲಕ್ಕೂ ಒಂಥರಾ ಅವಿನಾಭಾವ ಎನ್ನುವಂಥ ಸಂಬಂಧ. ಮೊದಲಮಳೆಯೆನ್ನುವ ಸಂಭ್ರಮ ನಮ್ಮೊಳಗೊಂದು ಹೊಸ ಚೈತನ್ಯ ತುಂಬುವ ಸಮಯದಲ್ಲಿ, ಸಕಲ ಸೊಬಗಿನ ದೇವಕನ್ಯೆಯೊಬ್ಬಳು ಭುವಿಗಿಳಿದಂತೆ ಮಾವಿನಹಣ್ಣೊಂದು ನೆಲಕ್ಕುರುಳುತ್ತದೆ. ಹೀಗೆ ಕಳಚಿಬಿದ್ದ ಮಾವಿನಹಣ್ಣಿನ ಮೇಲೆ ಮಳೆಹನಿಗಳೆಲ್ಲ ಮುತ್ತಿನಂತೆ ಹೊಳೆದು, ಗೌಜು-ಗದ್ದಲವಿಲ್ಲದ ಹೊಸ ಲೋಕವೊಂದು ಸೃಷ್ಟಿಯಾಗುತ್ತದೆ. ಹೀಗೆ ಗದ್ದೆಬಯಲಿನಲ್ಲೋ, ಬೆಟ್ಟದ ತುದಿಯಲ್ಲೋ ನಿರಾತಂಕವಾಗಿ ಹುಟ್ಟಿಕೊಳ್ಳುವ ಈ ಸೊಬಗಿನ ಪ್ರಪಂಚಕ್ಕೆ ಮಳೆಯೊಂದು ಜೀವ ತುಂಬುವ ಪರಿ ಅನನ್ಯ. ಮಳೆ ಆಗೊಮ್ಮೆ ಈಗೊಮ್ಮೆ ಅವಾಂತರಗಳನ್ನು ಸೃಷ್ಟಿಸಿದರೂ ಅದೊಂದು ಮಾಯೆಯಾಗಿ ಮೈ-ಮನಗಳನ್ನು […]

ಪುಸ್ತಕ ಸಂಗಾತಿ

ನಾನು ಮತ್ತು ಆಕಾಶ ಡಾ.ಧನಂಜಯ ಕುಂಬ್ಳೆ ಕವಿಮಿತ್ರ ಡಾ.ಧನಂಜಯ ಕುಂಬ್ಳೆಯವರ ‘ನಾನು ಮತ್ತು ಆಕಾಶ’ ವಿಮರ್ಶಾ ಸಂಕಲನದ ಬರಹಗಳನ್ನು ಮರುಓದುವ ಅವಕಾಶ ಲಭಿಸಿದೆ. ಹದಿನಾರು ವರ್ಷಗಳ ಹಿಂದೆ ಪುಟ ತಿರುವಿ ದೃಷ್ಟಿ ಹಾಯಿಸಿದ್ದೆ ಅಷ್ಟೆ. ಈಗ ಅನುಭವಿಸಿದ ಸಾರ್ಥಕ ಭಾವ. ೨೦೦೩ರಲ್ಲಿ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪುಸ್ತಕ ಪ್ರಕಾಶನ ಧನಸಹಾಯ ಯೋಜನೆಯಲ್ಲಿ ಆಯ್ಕೆಯಾದ ಈ ಕೃತಿಯನ್ನು ಪುತ್ತೂರಿನ ಅನನ್ಯ ಪ್ರಕಾಶನ ಹೊರ ತಂದಿದೆ. ಧನಂಜಯ ಅವರ ಭಾವಗಳು, ಸಂವೇದನೆಗಳು, […]

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನುಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ […]

ಕಥಾಯಾನ

ಮರಳಿನ ಕಥೆ ರಮೇಶ್ ನೆಲ್ಲಿಸರ ತುಂಗಾನದಿಯ ನೀರನ್ನು ಕುಡಿದೊ ಅಥವಾ ಬೆಳೆಗಳಿಗೆ ಹಾಯಿಸಿ ಬದುಕು ಕಟ್ಟಿಕೊಂಡವರು ಹಲವರಾದರೆ ತುಂಗೆಯ ಒಡಲ ಬಗೆದು ಮರಳು ತೆಗೆಯುವುದರ ಮೂಲಕ ಸಿರಿತನದ ಸುಪ್ಪತ್ತಿಗೆಯನ್ನು ಅನುಭವಿಸುತ್ತಿರುವವರು ಕೆಲವೇ ಕೆಲವರು, ರಾಜಕೀಯದ ವಾಸನೆ ತುಂಗೆಯ ಎಡಬಲದ ಮರಳು ಕ್ವಾರಿಗಳ ಪ್ರತಿ ಮರಳಿನ ಕಣದಲ್ಲಿ ಹಿಂದೆಯೂ ಇತ್ತು ಈಗಲೂ ಇದೆ. ಅಂದ ಹಾಗೆ ನಾನು ಹೇಳ ಹೊರಟಿದ್ದು ಈ ಮರಳು ಮಾಫಿಯಾದ ಕುರಿತು ಅಲ್ಲ!, ಈ ಮರಳು ದಂಧೆಗೆ ಅಂಟಿಕೊಂಡಿರುವ ಕೆಲಸಗಾರರ ಕುರಿತು, ಆಗ 2002-03 […]

Back To Top