ಕನ್ನಡಿಗೊಂದು ಕನ್ನಡಿ

ಕನ್ನಡಿಗೊಂದು ಕನ್ನಡಿ

ಡಾ.ಗೋವಿಂದ ಹೆಗಡೆ ಕನ್ನಡಿಗೊಂದು ಕನ್ನಡಿ ಕನ್ನಡಿಯೆದುರು ನಿಂತೆ ಬುದ್ದಿ ಕಲಿಸಲೆಂದೇ ಬಿಂಬಕ್ಕೆ- ಹೊಡೆದೆ ಈಗ ಕೆನ್ನೆಯೂದಿದೆ ! •• ಕೋಪದಲ್ಲಿ ಹೋಗಿ ನಿಂತೆ ಕನ್ನಡಿಯೆದುರು ಉರಿದೆ, ಕೂಗಾಡಿದೆ. ಸರಿ- ಬಿಂಬಕ್ಕೆ ಕೋಪ ಬಂದರೆ ಏನು ಮಾಡುತ್ತದೆ ಹೇಗೆ ಇದಿರು ನಿಲ್ಲುತ್ತದೆ ?! **********

ಸಮಾಜಾರ್ಥಿಕ ಘಟಕಗಳು

ಪ್ರಗತಿಗಾಗಿ ಸ್ವಯಂ ಸ್ವಾವಲಂಬಿ ಸಮಾಜಾರ್ಥಿಕ ಘಟಕಗಳು ಗಣೇಶಭಟ್ ಶಿರಸಿ ಭಾರತದ ಆರ್ಥಿಕ ಸ್ಥಿತಿ ಆತಂಕಕಾರಿಯಾಗಿದೆಯೆಂಬುದನ್ನು ಸರ್ಕಾರ ಮತ್ತು ಅದರ ಹಿಂಬಾಲಕರು ಒಪ್ಪಲು ಸಿದ್ಧರಿಲ್ಲ.ಆದರೆ, ಕುಸಿಯುತ್ತಿರುವ ಉದ್ಯೋಗಾವಕಾಶಗಳು, ಕ್ಷೀಣಿಸುತ್ತಿರುವ ಖರೀದಿ ಶಕ್ತಿ, ಜನರನ್ನುಕಾಡುತ್ತಿರುವ ಅಭದ್ರತಾಭಾವ,ಏರುತ್ತಿರುವ ಬೆಲೆಗಳು, ಎಗ್ಗಿಲ್ಲದೇ ನಡೆಯುತ್ತಿರುವ ಬ್ಯಾಂಕ್ ವಂಚನೆಗಳು, ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಗಳಿಂದ ದೇಶ ಬಾಧಿತವಾಗಿರುವುದನ್ನು ದೇಶ, ವಿದೇಶಗಳ ಸಾಮಾಜಿಕ-ಆರ್ಥಿಕ ತಜ್ಞರು ಗಮನಿಸುತ್ತಿದ್ದಾರೆ.ರಾಜಕಾರಣಿಗಳ ಪೊಳ್ಳು ಭರವಸೆಗಳನ್ನೇ ನಂಬಿರುವ ದೇಶದ ನಾಗರಿಕರು ಸಮಸ್ಯೆಗಳ ಪರಿಹಾರದ ನಿರೀಕ್ಷೆಯಲ್ಲಿ ದಿನದೂಡುತ್ತಿದ್ದಾರೆ. ಇಂದಿನ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳ ಬಳಿ ಯಾವುದೇ ಪರಿಹಾರವಿಲ್ಲ. […]

ಕಾವ್ಯಯಾನ

ಇನ್ನೇನು ಬೇಕಿದೆ. ಪ್ರಮಿಳಾ ಎಸ್.ಪಿ. ಇನ್ನೇನು ಬೇಕಿದೆ. ಒಡೆದ ಹಿಮ್ಮಡಿಯೂರಿ ನಿಂತು ಎನ್ನ ಹೆಗಲಮೇಲಿರಿಸಿ ತಾನು ಕಾಣದ ಪರಪಂಚವ ನನಗೆ ತೋರಿಸಿದವ ನನ್ನಪ್ಪ. ಕುದಿಯುವ ಸಾರಿನೊಂದಿಗೆ  ಕುಳಿತ ಹೆಂಡತಿಯನು ತಣ್ಣೀರಿನೊಂದಿಗಾಡುವ ಮಕ್ಕಳನು ಮುದ್ದಾಡಿ ಬೆಳೆಸಿದ್ದ ನನ್ನಪ್ಪ. ಮಕ್ಕಳನು ಓದಿಸಲೇಬೇಕೆಂದು ಹಠಹಿಡಿದವಳು ….ನಾವು ಓದಿಕೊಂಡದ್ದು ಏನೆಂದು ತಿಳಿಯದವಳು ನನ್ನವ್ವ. ಕವಿತೆ ಬರೆಯಲು ಬಾರದವಳು ಮಕ್ಕಳ ಬದುಕನ್ನೇ ಸುಂದರ ಕವಿತೆಯಾಗಿಸಲು  ಭಾವವಾದವಳು ನನ್ನವ್ವ. ಹೀಗೆಲ್ಲಾ ಹೊಗಳಿ ಬರೆದ ನನ್ನ ಪ್ರಾಸವಿರದ ಕವಿತೆಗಳು ಬೇಕಿಲ್ಲಾ ಈಗ ಅವರಿಗೆ…! ಪಿಂಚಣಿ ಬಂದಿತೆ ಮಧುಮೇಹ […]

ನನಗೆ ಹೀಗನಿಸುತ್ತದೆ

ಕವಿತೆ ನನಗಿಷ್ಟ ಚಂದ್ರಪ್ರಭ ನನಗೆ ಹೀಗನಿಸುತ್ತದೆ…. ಕವಿತೆ ಬಗೆಗಿನ ಎಲ್ಲ ಆರಾಧನಾ ಭಾವಗಳಾಚೆ ಕವಿತೆ ಪುಸ್ತಕಗಳು ಅವಗಣನೆಗೆ ಒಳಗಾಗುವ ಸತ್ಯ ಬಹುಶಃ ಒಂದು ಕಾಲದ್ದಾಗಿಲ್ಲದಿರಬಹುದು. ಕವಿತೆ ಮೂಲತಃ ಒಂದು ಸಶಕ್ತ ಅಭಿವ್ಯಕ್ತಿ ಮಾಧ್ಯಮ. ಅದರ ಹರಿವಿನಗುಂಟ ಸಾಗುವಾಗ ಕೇಳಿಸುವ ಮೊರೆತವೂ ವಿಭಿನ್ನ. ಕವಿತೆ ನನಗೇಕೆ ಇಷ್ಟ ಎಂದೆನ್ನಿಸಿದ ಕ್ಷಣ ನನಗೆ ಹೀಗೆಲ್ಲ ತೋರಿತು… ಬಿಡುಗಡೆ ಗಾಗಿನ ಮನುಷ್ಯನ ಪ್ರಯತ್ನ ನಿರಂತರದ್ದು. ಒಂದಿಲ್ಲೊಂದು ಸಂಗತಿಯಿಂದ ಬಿಡುಗಡೆ ಹೊಂದುತ್ತ ಆಯುಷ್ಯವೇ ಕಳೆದು ಹೋಗುವುದು. ಯಾವುದರಿಂದ ಬಿಡುಗಡೆ, ಯಾರಿಂದ ಬಿಡುಗಡೆ, ಉಳಿದದ್ದು […]

ಕಾವ್ಯಯಾನ

ಭರವಸೆ ನಾಗಶ್ರೀ ಸಾವಿರ ಬಾರಿ ಸೋತರು ಭರವಸೆಯೊಂದಿದೆ ಕಾಯುವ ಕನವರಿಕೆಯಲು ನಿನ್ನದು ಬರೀ ಹುಂಬತನ ಅರಿವಾಗುವುದು ಅಂತರ ಕಾಯ್ದುಕೊಳ್ಳಲು ಅದೆಷ್ಟು ಚಡಪಡಿಕೆಯೆಂದು ಅರಿಯಬೇಕಿತ್ತು ಅಂತರಾತ್ಮವ ಕಾದು ಕಾದು ಬೆಂಡಾದ ಭಾವನೆಗಳಿಗೆ ಸಮಯವೂ ಸೊಪ್ಪಾಕುತಿದೆ ನನ್ನ ನಾ ಅರಿಯದ ಇರಾದೆಗೆ ಅರ್ಥೈಸಲು ನೂರು ಬಾರಿ ಹೇಳುವ ಅವಶ್ಯಕತೆಯಾದರೂ ಇಲ್ಲವಲ್ಲ ಅರ್ಥಮಾಡಿಕೊಳ್ಳಲು ಒಂದು ಘಳಿಗೆ ಸಾಕಲ್ಲ ನಂಬಿಕೆಯ ಕವಲೊಳಗೆ ಅಪನಂಬಿಕೆಯ ಟಿಸಿಲುಗಳು ಮತ್ತೆದೆ ಹುಸಿಯ ನಂಬುವ ಹಂಬಲದತ್ತ ವಾಲುವ ಮನ ಕರುಳಿನ ನೋವು ಕಣ್ಣವರೆಗೂ ತಲುಪಿ ಕಣ್ಣರೆಪ್ಪೆಗೂ ನೋವಂತೆ ಕಣ್ತೆರೆಯಲಾಗದ […]

ಜೀವನ್ಮುಖಿ

ಹೊಸ ವರ್ಷ ಹೊಸ ಹರ್ಷ ಜಯಲಕ್ಷ್ಮಿ ಕೆ. ಹೊಸ ವರ್ಷ -ತರಲಿ ಹರ್ಷ . “ಆದದ್ದು ಆಗಿ ಹೋಯ್ತು, ಮಣ್ಣಾಗಿ ಹೋದ ನನ್ನವರು ತಿರುಗಿ ಬರಲಾರರು. ಇರುವವನು ಇರುವಷ್ಟು ದಿನ ಬದುಕಬೇಕಲ್ಲ? ನನ್ನ ಗಾಡಿ, ನನ್ನ ಎತ್ತುಗಳೂ ಭೂಕಂಪದ ಅಂತರoಗ ಸೇರಿದ್ದರೆ ನನಗೆ ಕಷ್ಟವಾಗುತ್ತಿತ್ತು. ಪುಣ್ಯಕ್ಕೆ ಸ್ವಲ್ಪ ಹೊಲವೂ ಉಳಿದಿದೆ. ಬದುಕಬೇಕಾದ ನನ್ನ ಬದುಕಿಗೆ ಇಷ್ಟು ಸಾಕಲ್ಲ ….ಉಳಲು, ಬಿತ್ತಲು, ಮನೆಕಟ್ಟಲು …..” 1993 ರಲ್ಲಿ ಮಹಾರಾಷ್ಟ್ರದಲ್ಲಿ ಸಂಭವಿಸಿದ್ದ ಭಾರೀ ಭೂಕಂಪದಲ್ಲಿ ತನ್ನವರನ್ನೆಲ್ಲ ಕಳೆದುಕೊoಡಿದ್ದ ವೃದ್ದನೊಬ್ಬ ಪತ್ರಕರ್ತನ […]

ಸ್ವಾತ್ಮಗತ

ಪಾಟೀಲ್ ಪುಟ್ಟಪ್ಪನವರಿಗೆ ನೂರರ ಸಂಭ್ರಮ ಕೆ.ಶಿವುಲಕ್ಕಣ್ಣವರ ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ, ಪತ್ರಿಕೋದ್ಯಮ ಭೀಷ್ಮ ನಾಡೋಜ ಡಾ.ಪಾಟೀಲ ಪುಟ್ಟಪ್ಪರಿಗೆ ನೂರಾರ ಸಂಭ್ರಮ..! ಪಾಟೀಲ ಪುಟ್ಟಪ್ಪರು 1921ರಿಂದ ಪತ್ರಿಕೋದ್ಯಮವನ್ನು ಕನ್ನಡ ಪರ ಹೋರಾಟಕ್ಕೆ ದುಡಿಸಿಕೊಳ್ಳುತ್ತಿರುವ ಧೀಮಂತ. ಪಾಟೀಲ ಪುಟ್ಟಪ್ಪನವರು ಹುಟ್ಟಿದ್ದು 1921ರಲ್ಲಿ. ಈಗಿನ ಹಾವೇರಿ ಜಿಲ್ಲೆಯ ಕುರುಬಗೊಂಡದಲ್ಲಿ. ತಂದೆ ಸಿದ್ಧಲಿಂಗಪ್ಪ, ತಾಯಿ ಮಲ್ಲಮ್ಮ… ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ಅಪರೂಪದ ಪ್ರತಿಭಾವಂತ ಪಾಪು. ಸ್ವಾತಂತ್ರ್ಯ ಬರುವುದಕ್ಕೆ ಒಂದು ವರ್ಷ ಮೊದಲೇ ಪತ್ರಿಕೋದ್ಯಮಕ್ಕೆ ಕಾಲಿಟ್ಟ ಪಾಪು, ಬರಹಗಳು ಅಂದೂ […]

ಕಾವ್ಯಯಾನ

ಧನಿಕನ ರಿಮೋಟ್ ಕಂಟ್ರೋಲ್ .. ಕೆ.ಜಿ.ಸರೋಜಾ ನಾಗರಾಜ್ ಹಸಿವಿನಿಂದ ಸತ್ತೋರಿಗೆ ಹಬ್ಬ ಸಡಗರಗಳೆಂತು ಹೊಟ್ಟೆ ಬಟ್ಟೆ ಕಟ್ಟಿದೋರು ಬಡವರು ಅನ್ನವೆಂದು ನರಳುತ್ತಾ ಬದುಕುವರು..! ಕೋಟಿ ಕೋಟಿ ಕನಸುಗಳೊಂದಿಗೆ ಉರಿಯುವ ಮನಸ್ಸುಗಳ ಭೂಕಂಪ ಹೆಣವಾಗಿಸುವ ಸೂಚನೆಗೆ ಹೊರಗೆ ಬಿದ್ದವರು ಬಡವರೇ..! ಹಸಿವಿನ ಕಣ್ಣುಗಳ ಮೇಲೆ ಹೊಂದಿದವರು ದೌಲತ್ತು ಗೋಳಿನ ಕಡಲನು ಬತ್ತಿಸಲು ಬಡವನ ಗುಡಿಸಿಲಿಗೆ ಬರಲೇ ಇಲ್ಲ..! ಕಳಂಕ ರಹಿತ ಧರಣಿಗೆ ಬಡವನ ಹಸಿವೇ ಚರಿತ್ರೆಯಾಗಿರುವಂತೆ ಶತಮಾನದ ಬಡತನಕ್ಕೆ ನೂರಾರು ಸಾಕ್ಷಿಗಳು ಗುಡಿಸಿಲಿನಲ್ಲಿ..! ಬಡವನ ತಲೆಗೆ ಧನಿಕರ ರಿಮೋಟ್ […]

ಕಾವ್ಯಯಾನ

ಗಝಲ್ ಜಗತ್ತೇ ತನ್ನ ಸುತ್ತ ಸುತ್ತುತಿದೆ ಎಂದಾಗ ಹೊರಟು ಬಿಡಬೇಕು ಎಲ್ಲೆಲ್ಲೂ ಪ್ರೀತಿ ನೋಟವಿದೆ ಎಂದಾಗ ಹೊರಟು ಬಿಡಬೇಕು ಇಂದ್ರಚಾಪ ಮೂಡಿಸುವ ಹಗಲಿರುಳುಗಳೇನು ನಿರಂತರವೇ ಇಂದಿಗಿಂದಿನ ಬದುಕು ರಂಗೇರಿದೆ ಎಂದಾಗ ಹೊರಟು ಬಿಡಬೇಕು ಸುಖ ಸಂತಸಗಳು ಪ್ರತಿ ವರುಷ ಬರುವ ವಸಂತನ ತರವೇನು ಹರುಷ ನಲಿ ನಲಿದು ಉಕ್ಕುತಿದೆ ಎಂದಾಗ ಹೊರಟು ಬಿಡಬೇಕು ಎದೆಗೂಡ ಭಿತ್ತಿಯಲಿ ಒಲುಮೆ ಉಲಿವಾಗ ಸ್ವರ್ಗವೂ ನಾಚದೇನು ಸಮುಲ್ಲಾಸದಿ ಜೀವ ಗಂಧ ತೀಡುತಿದೆ ಎಂದಾಗ ಹೊರಟು ಬಿಡಬೇಕು ಇನಿಯನ ಉಸುರುಸಿರ ಬಿಸುಪು ಬೀಗಿ ಮೈ ಮನ ಮರೆಸದಿರದೇ ಕನಸು ಕಚಗುಳಿಯಿಟ್ಟು ಮಾಗುತಿದೆ ಎಂದಾಗ ಹೊರಟು ಬಿಡಬೇಕು […]

ಕಾವ್ಯಯಾನ

ಅಪ್ಪ ಅಪ್ಪ ಎಂದರೆ ನನ್ನಾಸರೆಯ ಹೆಗಲು ಕಡುಗಪ್ಪಿನಂತಹ ಮುಗಿಲು ಬಯ್ಬಿರಿದ ಭೂಮಿಗೆ ಸುರಿವ ಮಳೆಯ ಹನಿಯ ಮುತ್ತಿನ ಸಾಲು ಅಪ್ಪ ಎಂದರೆ ಪ್ರೀತಿಯ ಹೊನಲು ಸವಿಜೇನಿಗೆ ಬೆರೆತ ಹಾಲು ಮಗಳ ಕಾಯುವ ಒಡಲು ಜೊತೆಗಿದ್ದರೆ ಜಗದಲಿ ನನ್ನ ಕೈಯೇ ಮೇಲು ಅಪ್ಪ ಎಂದರೆ ನಗುವ ದ್ವನಿಯ ಕೊರಳು ಸದಾ ಜೊತೆಗಿರುವ ನೆರಳು ಹಿಡಿದು ಹೊರಟರೆ ಅಪ್ಪನ ಕಿರುಬೆರಳು ಖುಷಿಯ ಬುಗ್ಗೆಯಲಿ ಮೆರವಣಿಗೆ ಹಗಲಿರುಳು ಅಪ್ಪನಿಲ್ಲದಾ ಈ ಕ್ಷಣವು ಹೃದಯದಲವಿತಿದೆ ನಿರಾಸೆಯು ಯಾರಲ್ಲಿ ಹುಡುಕಲಿ ಅಪ್ಪನೊಲವು ಅಪ್ಪನ ಕಳೆದುಕೊಂಡ […]

Back To Top