ಎದೆಯಲ್ಲಿ ಅಡಗಿದ ಬೆಳಕು

ಎದೆಯಲ್ಲಿ ಅಡಗಿದ ಬೆಳಕು

ಕವಿತೆ ಎದೆಯಲ್ಲಿ ಅಡಗಿದ ಬೆಳಕು ಡಾ ರೇಣುಕಾ ಅರುಣ ಕಠಾರಿ ನನಗೆ ನಾನಾಗುವಾಸೆನಿನ್ನನೂ ಒಳಗೊಂಡು ನೋವಿನ ನಡುವೆಯೂನನ್ನೆದೆಯಲಿ ಹೂವರಳಿಸಿನಕ್ಷತ್ರ ಪುಂಜಗಳ ಕಣ್ತಂಬಿಸಿಆ ಆಕಾಶದಲ್ಲಿ ದಾರಿ ಕಾಣುವಾಸೆ ಹೆಚ್ಚಾಗಿದೆ. ನನ್ನ ಪ್ರೀತಿ-ನೀತಿದುಃಖ-ದುಮ್ಮಾನಗಳ ನಡುವೆಆಸೆ ನಿರಾಸೆಗಳ ಕೇಂದ್ರದ ಸಾಗರದಲ್ಲಿಯುಬದುಕಿನ ಸಾಂದ್ರ ನೀನೇ. ಪುಟಿದೇಳುವುದು ಒಮ್ಮೊಮ್ಮೆ ನಿನ್ನಲೂಆರ್ಭಟ ದುರಂಕಾರಎದೆಯಲ್ಲಿ ಅಡಗಿದಶ್ರೇಷ್ಠತೆಯ ಹಾವ ಭಾವದಲ್ಲಿಅಲ್ಲಗಳಿದಾಗಲೆಲ್ಲ ನಾನುಅನುದಿನವು ಸಾಯುತಲಿರುವೆ. ಆಗಾಗಸಂಜೆಯ ತಂಗಾಳಿಯ ಬೊಗಸೆಯಲಿಕೆನ್ನೆಗಳ ತುಂಬಿಸಿಎದೆಗೇರಿಸಿಕೊAಡಾಗನಿನ್ನೆದೆಯ ಬಡಿತದ ಸದ್ದುಗಳಲೆಕ್ಕ ಹಾಕುವೆನು. ಪ್ರತಿ ಮಿಡಿತವೂಬದುಕಿನಜಮಾ ಖರ್ಚಿನ ಪುಟಗಳೇ.ಪುಟಗಳ ಲೆಕ್ಕವೆ ಮೀರಿ ನಿಂತಿರುವಚಿಲುಮೆಯ ಸಾಕ್ಷತ್ಕಾರ ನೀನು. ಇದಕ್ಕೆಎಲ್ಲವುಗಳ ನಡುವೆನಿನ್ನನೂ […]

ಪಾತ್ರೆಗಳು ಪಾತ್ರವಾದಾಗ

ಕವಿತೆ ಪಾತ್ರೆಗಳು ಪಾತ್ರವಾದಾಗ ಶಾಲಿನಿ ಆರ್. ಬೇಳೆ ಬೇಯಿಸೋಕೆಪಾತ್ರೆ ಬೇಕೆ ಬೇಕು!ಹೊಟ್ಟೆ ತುಂಬಿಸೋಕೆಮನದ ಅಗಣಿತಭಾವಗಳತಣಿಸೋಕೆ? ಹುಟ್ಟಿದ ಹಸಿವಿಗೆತಿನುವ ಹಂಬಲಕೆರುಚಿ ನೋಡೋಕೆಕಾದ ಮನಗಳಿಗೆಉಣ ಬಡಿಸೋಕೆಹೇಗಾದರೂ ಸರಿ! ಹದವಾದ ರುಚಿತರಿಸಬೇಕು,ಬೆಂದ ಬೇಳೆಗಳಬತ್ತಿಸಿ,ಕರಗಿಸಿಗುರಾಡಿ ,ಬಾಡಿಸಿಮತ್ತಷ್ಟು ನೀರುಣಿಸಿನೆಪಕ್ಕೊಂದು ಪಾತ್ರೆಯಿರಿಸಿ! ಹಸಿದವರಿದ್ದರೆಹೇಳಿ?ಬೆಂದ ಬೇಳೆಗಳ ರುಚಿಗೆ!ಹಸಿವಿಲ್ಲದವರನ್ನುಕರೆತನ್ನಿ ,ಹಸಿವ ಇಂಗಿಸಲೋ?ಇಲ್ಲವಾದರೆ,ರುಚಿ ಸವಿಯಲು! ಸ್ವಲ್ಪ ಹುಳಿ,ಖಾರಒಗ್ಗರಣೆ ಸಾಕು!ಇನ್ನಿತರ ಮಸಾಲಪದಾರ್ಥಗಳುಬೇಕಿದ್ದರೆಪಾತ್ರಕ್ಕೊಪ್ಪುವಂತೆ!ರುಚಿಗೆ ಇಂತಿಷ್ಟೇ ಉಪ್ಪು,ಮುಖ ಕಿವುಚದಂತೆ ಮತ್ತೆ! ಹಿತ ಮಿತವಾದಪದಾರ್ಥಗಳುಪಾತ್ರಗಳ ಸೋಕಿನಾಲಿಗೆಯ ರುಚಿ!ಮನಕಿಳಿದ ಗೆಲುವೋ?ಬೆಂದ ಬೇಳೆಯದೋಮನದಗಲದಪಾ(ತ್ರೆ)ತ್ರ ದೋ??? ****************************************************

ಸಾಧನೆಯ ಹಾದಿಯಲ್ಲಿ

ಎಂಭತ್ತರ ದಶ ಕದಲ್ಲಿ ಇನ್ನು ಗ್ರಾಮೀಣ ಭಾಗದ ಮಹಿಳೆಯರು ಅಕ್ಷರ ಲೋಕಕ್ಕೆ ಅಂಬೆಗಾಲಿಡುತ್ತ ಸಾಗುತ್ತಿದ್ದ ದಿನಗಳಲ್ಲಿ ಇವರು ಉನ್ನತ ಶಿಕ್ಷಣ ಪಡೆದು ಮಹಿಳಾ ಅಧಿಕಾರಿಯಾಗಿ ಆಯ್ಕೆ ಯಾಗಿ ಬೀದರ್ ನಂತಹ ಹಲವಾರು ಸಮಸ್ಯೆ ಇರುವ ಜಿಲ್ಲೆಗೆ ಅಧಿಕಾರಿಯಾಗಿ ವೃತ್ತಿ ಆರಂಭಿಸಿರುವುದು ಗುರುತ್ತ ರವಾದ ಹೆಜ್ಜೆ

ಬದುಕು ಬಂದಂತೆ

ಕಥೆ ಬದುಕು ಬಂದಂತೆ ಅನಸೂಯ ಎಂ.ಆರ್. ಲತ ಮನೆಗೆ ಬಂದಾಗ ಎಂದಿನಂತೆ  ಸುಶೀಲಮ್ಮನು ಬಾಗಿಲು ತೆರೆಯದೆ  ಮನು ಬಂದಾಗ “ಅಜ್ಜಿ ಎಲ್ಲೊ” ಎಂದಳು. ” ಅಜ್ಜಿ ಮಲಗಿದಾರಮ್ಮ” ಎಂದ ಕೂಡಲೇ ವ್ಯಾನಿಟಿ ಬ್ಯಾಗ್ ಮತ್ತು ಲಂಚ್ ಬಾಕ್ಸ್ ನ್ನು ಟೇಬಲ್ ಮೇಲಿಟ್ಟು “ಅತ್ತೆ” ಎನ್ನುತ್ತಾ ರೂಂ ನೊಳಗೆ ಹೋದಳು ಮುಸುಕು ಹಾಕಿ ಮಲಗಿದ್ದ ಸುಶೀಲಮ್ಮ ಮುಸುಕನ್ನು ತೆಗೆಯುತ್ತಾ “ಯಾಕೋ, ಜ್ವರ ಬಂದಂತಾಗಿದೆ ಕಣಮ್ಮ” ಎಂದರು. ಅವರ ಹಣೆಯ ಮೇಲೆ ಕೈಯಿಟ್ಟು ನೋಡಿದ ಲತಾ ” ಬಹಳ ಜ್ವರ […]

ಚಂದ್ರನೆಂಬ ವೈಜ್ಞಾನಿಕ ವಿಸ್ಮಯ

ಭಾರತವು ತನ್ನದೇ ಆದ ತಂತ್ರಜ್ಞಾನ ಸಂಶೋಧಿಸಿ ಅಭಿವೃದ್ಧಿಗೊಳಿಸಿದ್ದರಿಂದ ಚಂದ್ರಯಾನ ಯೋಜನೆಯಿಂದ ಭಾರತದ ಬಾಹ್ಯಾಕಾಶ ಯೋಜನೆಗೆ ಮಹತ್ವದ ಉತ್ತೇಜನ ಲಭಿಸಿತು.

ಪ್ರಪಂಚದಲ್ಲಿ ಬಹುಶಃ ತಪ್ಪೇ ಮಾಡದಿರುವ ಒಬ್ಬನೇ ಒಬ್ಬ ವ್ಯಕ್ತಿ ಇರಲಿಕ್ಕಿಲ್ಲ. ಯಾವುದಾದರೂ ಒಂದು ಸಂದರ್ಭದಲ್ಲಿ ಏನಾದರೂ ಒಂದು ತಪ್ಪನ್ನು ಮಾಡಿರಲೇ ಬೇಕು. ಮಾಡಿದ ತಪ್ಪನ್ನು ಒಪ್ಪಿಕೊಳ್ಳದೆ , ತಾನು ಯಾವಾಗಲೂ ಸರಿ ಎಂಬ ವರ್ತನೆಯನ್ನು ತೋರಿಸುವ ಬಹಳಷ್ಟು ಮಂದಿಯಿದ್ದಾರೆ

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ ೨೦೨೦ನೆಯ ಸಾಲಿನಿಂದ ಕೊಡಮಾಡುವ ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ೪೦ ವರ್ಷದೊಳಗಿನ ಕವಿಗಳಿಂದ ಕೃತಿಗಳನ್ನು ಆವ್ಹಾನಿಸಲಾಗಿದೆ.ಪ್ರಶಸ್ತಿಯು ೫ ಸಾವಿರ ನಗದು,ಸ್ಮರಣಿಕೆ ಒಳಗೊಂಡಿದೆ.ಆಸಕ್ತ ಕವಿಗಳು ೨೦೨೦ ನೆಯ ಸಾಲಿನಲ್ಲಿ ಪ್ರಕಟಗೊಂಡ ತಮ್ಮ ಸ್ವರಚಿತ ಮೂರು ಕವನ ಸಂಕಲನಗಳನ್ನು ಜನವರಿ ೧೫,೨೦೨೧ ರೊಳಗೆಸಂಚಾಲಕರು, ನಾಗಶ್ರೀ ಕಾವ್ಯಪ್ರಶಸ್ತಿ ಸಮಿತಿಸಿಂದಗಿ,ವಿಜಯಪುರ ಜಿಲ್ಲೆಈ ವಿಳಾಸಕ್ಕೆ ಪ್ರೊಫೆಷನಲ್ ಕೋರಿಯರ್ ಮಾಡಬಹುದು.ಹೆಚ್ಚಿನ ಮಾಹಿತಿಗಾಗಿ +918951375140,988065654 ಸಂಪರ್ಕಿಸುವಂತೆ ಕೋರಿದ್ದಾರೆ.

ಊದ್ಗಳಿ ಊದುತ್ತಾ.

ಪುಸ್ತಕ ಸಂಗಾತಿ ಊದ್ಗಳಿ ಊದುತ್ತಾ.   ಬದುಕಿನ ಜೀವಂತಿಕೆ ಇರುವುದು ಬದಲಾವಣೆಗಳಲ್ಲಿ. ಕಾಲದ ಜೊತೆ ಜೊತೆಗೆ ಹೆಜ್ಜೆ ಹಾಕಲೆ ಬೇಕು, ಇಲ್ಲದಿದ್ದರೆ ನಾವು ಹಿಂದುಳಿದು ಬಿಡುತ್ತವೆ, ಸ್ಮೃತಿ ಪಟಲದಿಂದ ಮರೆಯಾಗುತ್ತೇವೆ. ಹಳೆಯದು ಹೊಸದಕ್ಕೆ ಎಡೆಮಾಡಿಕೊಡುತ್ತದೆ. ಅತೃಪ್ತಿ ಬದುಕಿನಲ್ಲಿ ಹೊಸದನ್ನು ತರುತ್ತದೆ. ಇದು ಸಾರಸ್ವತ ಲೋಕಕ್ಕೂ ಅನ್ವಯಿಸುತ್ತದೆ. ಸಾಹಿತ್ಯದಲ್ಲೂ ಕಾಲಕಾಲಕ್ಕೆ ಬದಲಾವಣೆಗಳು ನಡೆಯುತ್ತಿರುತ್ತವೆ. ಆ ಪರಿಧಿಯಲ್ಲಿ ‘Those who create nothing now, destroy” ಎಂಬ ಮಾತನ್ನು ಇಲ್ಲಿ ಸ್ಮರಿಸಬಹುದು. ನಮ್ಮ ಕನ್ನಡ ವಾಙ್ಮಯ ಇತಿಹಾಸವನ್ನು ಗಮನಿಸಿದಾಗ ಚಂಪೂ, […]

Back To Top