ನೆಲೆ ಸಂಭ್ರಮ – 2020

ನೆಲೆ ಸಂಭ್ರಮ – 2020

ನೆಲೆ ಸಂಭ್ರಮ – 2020 ಫೇಸ್ಬುಕ್ ನಲ್ಲಿ ಕಾವ್ಯ ಓದುವುದರ ಮೂಲಕ ಕತೆ ಕೇಳುತ್ತಲೇ ಚಿಂತನೆಗಳನ್ನು ಮೆಲುಕು ಹಾಕುವುದರ ಜೊತೆಗೆ ನೆಲೆ ಸಂಭ್ರಮವನ್ನು ಆಚರಿಸೋಣ ಬನ್ನಿ…… ಎನ್ನುತ್ತಲೇ ಆರಂಭವಾದ ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಗೆ ಇದೀಗ ನಾಲ್ಕು ದಶಕಗಳನ್ನು ಪೂರೈಸುತ್ತಿದೆ. ಇದರ ಹುಟ್ಟಿಗೆ ಪ್ರಮುಖ ಕಾರಣರು ಇದರ ಜೋಡಿ ಸ್ಥoಭದಂತಿರುವ ಡಾ. ಎಂ ಎಂ ಪಡಶೆಟ್ಟಿ ಹಾಗೂ ಡಾ. ಚನ್ನಪ್ಪ ಕಟ್ಟಿಯವರು. ಹವ್ಯಾಸಕ್ಕಾಗಿ ಹುಟ್ಟಿಕೊಂಡ ಸಂಸ್ಥೆ ಸ್ಥಳೀಯ ಲೇಖಕರ ಹಾಗೂ ಮಹಿಳೆಯರ ಕೃತಿಗಳ ಪ್ರಕಟಣೆಗೆ ಆದ್ಯತೆ ನೀಡುವುದರ […]

ಅನುವಾದ ಸಂಗಾತಿ

ಚಿತ್ರಗಳು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇಂಗ್ಲೀಷಿಗೆ:ಪಂ. ರವಿಕಿರಣ್ ಮಣಿಪಾಲ ಚಿತ್ರಗಳು ನನ್ನ  ಮನದಲ್ಲೆಷ್ಟೋ ಚಿತ್ರಗಳಿವೆ ಬಿಡಿಸ ಹೋದರೆ ಅವು ಹಾಳೆಗಳಲ್ಲಿ ನಿರ್ಜೀವ ಹೆಣಗಳಂತೆ ಬೋರಲು ಬೀಳುತ್ತವೆ ಇನ್ನು ಕೆಲವು ಬೆನ್ನಡಿಯಾಗಿ ಬಿದ್ದ ಜಿರಳೆಗಳಂತೆ ಅಸಹಾಯಕವಾಗಿಕೈಕಾಲಾಡಿಸುತ್ತ ಕಪ್ಪು ಕಂಗಳಲ್ಲಿ ಚಂದ್ರನನ್ನೇ ನೋಡುತ್ತಿರುತ್ತವೆ. ನನ್ನ ಮನದ ಚಿತ್ರಗಳು ತಮ್ಮದಲ್ಲದ ಇನ್ನಾರದ್ದೋ ಬದುಕನ್ನು ಬದುಕುತ್ತ  ಕೆಂಪು ಕೆಂಪಾದ ಹಸಿಗಾಯದ ಮೇಲೆ ಯಾರ್ಯಾರೋ ಗೀರಿದಂತೆ ನೆತ್ತರಲ್ಲಿತೊಯ್ದಿರುತ್ತವೆ. ನನ್ನ ಮನದ ಚಿತ್ರಗಳು ಬದುಕಿನತಿಪ್ಪೆಯಲ್ಲಿ ಅವನು ಬಿಸಾಕಿದ ಎಂಜಲು ಅನ್ನಕ್ಕಾಗಿ ಕಚ್ಚಾಡುತ್ತಿರುತ್ತವೆ ಹಸಿವಲ್ಲಿ […]

ಕಾವ್ಯಯಾನ

ಗಝಲ್ ಸುಜಾತ ಲಕ್ಷ್ಮೀಪುರ ಮಾತು ಮಾತಿಗೆ ಕಿಡಿ ತಾಗಿಸಿ ಸುಡುವುದು ಸಹಜ ಧರ್ಮವಲ್ಲಸುಮ್ಮನೇ ಮೌನದ ಅಗಾಧ ಕೂಪಕೆ ದೂಡುವುದು ಸರಿಯಲ್ಲ. ಮೌನವೂ ಮಣಭಾರವಾಗಿ ಕಾಡುವುದಿಲ್ಲವೆ ಏಕಾಂತದಿಕಣ್ಣಿನಲ್ಲೇ ಒಲವನು ಸೂಸಬಹುದು ಕೊಲ್ಲುವುದು ತರವಲ್ಲ ತಪ್ಪು ಮಾಡಿ ಕ್ಷಮೆ ಕೇಳುವುದೇ ದೊಡ್ಡ ವಿಚಾರವಲ್ಲಾಪ್ರೀತಿಗೆ ಶರಣಾಗಲು ಅಹಂ‌ಕಾರ ಸರಿಸುವುದು ಸೋಲಲ್ಲ ಬೆಳಕು ಮೂಡಲು ತಮವು ಅಳಿದೂ ಜಗವೆಲ್ಲಾ ಬೆಳಗುತ್ತದೆಮೈಮನವೆಲ್ಲ ಆವರಿಸಲು ಒಲವಲ್ಲದೆ ಬೇರೆ ಪಥವಿಲ್ಲ ಶಿವೆ,ಕಾಡುವ ಬಳ್ಳಿ ಬಿಡಿಸಿಕೊಳ್ಳುವುದು ಸಾಧ್ಯವೆ ನಿನ್ನಂತೆಎರಡಳಿದು ಒಂದಾಗಲು ಸವಿ ಪ್ರೇಮವಲ್ಲದೆ ಜಗವಿಲ್ಲ *******************************.

ಕಾವ್ಯಯಾನ

ನಿನ್ನ ಸೇರೋ ತವಕ ಪ್ಯಾರಿಸುತ ನಿನ್ನೂರು ದಾರಿಯು ಸವಿದಷ್ಟುದೂರಹವೆ ತುಂಬಿದ ಗಾಲಿಗಳು ಉರುಳಿದಷ್ಟುಮತ್ತಷ್ಟು ದೂರಉರುಳಿ ಹೊರಟ ಗಾಲಿಯಲ್ಲಿ ಹವೆಯಿತ್ತುನಿನ್ನ ನೆನೆದು ಬರುತ್ತಿರುವ ನನ್ನಲ್ಲಿ ಚಲವಿತ್ತುಪ್ರಯಾಸಗೊಂಡೆ,ಅನಾಯಾಸಗೊಂಡೆಕತ್ತಲು ಆವರಿಸಿದ ಕಪ್ಪು ಹೊಲದ ನಟ್ಟ ನಡುವೆಬೆಳೆದಿದ್ದ ಒಂಟಿ ಬೇವಿನಮರದಬುಡದಲ್ಲಿ ಮಗ್ಗಲು ಭುವಿಗೆ ಹೊಂದಿಸಿಮಲಗಿಕೊಂಡುನಿನ್ನ ಸೇರೋ ಕನಸು ಕಾಣುತ್ತಿದ್ದೆಕನಸನ್ನು ಭಗ್ನ ಮಾಡಿ,ಮತ್ತೆನಿನ್ನೂರು ದಾರಿ ಹಿಡಿಯಲುಪ್ರೇರೇಪಿಸಿದ್ದು ಅದೇ ಸೊಳ್ಳೆಅದು ನೀನೋ ಅಥವಾ ನಿಜವಾಗಿಯೂ ಸೊಳ್ಳೆಯೂತರ್ಕಕ್ಕೆ ಇಳಿಯುದಿಲ್ಲಅದು ಕಚ್ಚಿ ಹೋದ ಜಾಗದಲ್ಲಿ ನೀ ಕಚ್ಚಿದ ಹೋಲಿಕೆಯಿದೆದಾರಿಯುದ್ದಕ್ಕೂ ಮೈಲುಗಲ್ಲಿನ ಮೇಲೂ ನಿನ್ನದೇಸ್ವಾಗತಗೀತೆ,ಅದೆಷ್ಟು ಚಂದ ಅನ್ನುತ್ತಿಯಾ…?ನೋಡುತ್ತಾ,ಕೇಳುತ್ತಾ ಅಲ್ಲೇ ನಿಂತುಬಿಡಬೇಕುಇಲ್ಲ,ನಿನ್ನ […]

ಅನುವಾದ ಸಂಗಾತಿ

ಧಗೆ ಕನ್ನಡ ಮೂಲ; ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್ ಅದು ನಾಲ್ಕನೆಯ ಪಂಚಾಯತಿ ಬಾವಿ ಇನ್ನೂನೀರಿತ್ತೆನ್ನುವ ಕುರುಹೆಲ್ಲಿ ?ಹುಡುಕುವ ಕಣ್ಣೆವೆಗಳಿಗೆ ಯುದ್ಧಮುಂದೆ ಸಾಗಿ ಪ್ರಯೋಜನವಾದರೂ ಏನುಬಿಸಿಲ ಧಗೆಗೆ ರಿವರ್ಸ್‌ಗೇರ್ ಹಾಕಿದಭಯದ ಬೆವರ ಹನಿಕಣ್ಣುಗಳಿಗೆ ಬೀಗ ಜಡಿದುಕಂಡಿದ್ದ ಜಲರಾಶಿ ಮತ್ತೆ ಕಂಡೆಕಣ್ಣ ಹನಿ, ಬೆವರ ಹನಿಜೊತೆಗೂಡಿ ಬಿಟ್ಟ ಕಣ್ಣುಆಲಿಕಲ್ಲು ಅರಸಿಎಡವಿದ ಕಲ್ಲಿಗೆ ರಕ್ತದೋಕುಳಿಆಕಾಶದ ಹೃದಯ ಕಲ್ಲಾಗಿದೆಪಾದಪಗಳೂ ಚಲನ ಹೀನನದಿಯ ಬೆಸುಗೆಯಲ್ಲೂ ವಿರಸ‌ನರರ ವಿಲಾಸಿ ಜೀವನಈಗ ಸಣಕಲಾದ ಇಳೆಒಗಟು ಮಾತ್ರಬಾವಿಯ ಎಡಭಾಗದ ಮೂರನೆಯಒಣಗಿದ ಗದ್ದೆ ನಕ್ಕು ಹೇಳಿದೆ That is […]

ನನ್ನ ಇಷ್ಟದ ಕವಿತೆ

ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಜುಮ್ಮೆಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು-ಬೇಟೆಗಾರ. ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು […]

ಮಕ್ಕಳ ಕವಿತೆ

ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ […]

ನಾನು ಈಜು ಕಲಿತ ಪ್ರಸಂಗ:

ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ ಯಥಾಪ್ರಕಾರ ಅಡ್ಡಿ – ‘ಮಾಣಿಗೆ ಏನಾದ್ರೂ ಹೆಚ್ಚು-ಕಮ್ಮಿ’ (ನೇರ ಮಾತಲ್ಲಿ ‘ಗೊಟಕ್!’) ಆದರೆ ಎಂಬ ಭಯ! ಅದಕ್ಕೆ ಸರಿಯಾಗಿ ಅದೇ ಸಮಯಕ್ಕೆ ನಮ್ಮ ಮನೆ ಪಕ್ಕದ ಸುಬ್ರಾಯ ದೇವಸ್ಥಾನದ ಚಿಕ್ಕ, ಅಷ್ಟೇನೂ ಆಳವಿಲ್ಲದಿದ್ದ ಕೆರೆಯಲ್ಲಿ ಈಜು ಕಲಿಯುವಾಗ ಓರಗೆಯ ಹುಡುಗನೊಬ್ಬ ಮುಳುಗಿ ಪ್ರಾಣಬಿಟ್ಟಿದ್ದ. ಅವನು ಮುಳುಗುವುದನ್ನು ನೋಡಿ ಉಳಿದ ಚಿಳ್ಳೆಪಿಳ್ಳೆಗಳೆಲ್ಲಾ ಹೆದರಿ ಪದ್ರಾಡ್! ( ತುಳು […]

ಕಾವ್ಯಯಾನ

ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ ಅವಳು…ನಗಬಾರದೆಂದಳು… ಒಂದೆರಡು ವರುಷಗಳ ಹಿಂದೆಇವರು ಅವರನ್ನುಕೊಂದಿ ದ್ದರು..ಸಾವಿಗೆ ಸಂಭ್ರಮಿಸಬಾರದು.. ದಫನ ವಾಗಿರಬಹುದೇ..ನಾ ಕೇಳಿದ ಪ್ರಶ್ನೆ..ಹೌದು. ಈಗ ಮುಗಿದಿರಬಹುದೆನುವಉತ್ತರ.. ಇವರು-ಅವರುಇಬ್ಬರೂ ಊರಿನವರು ..ಅದೇನೋ ಜಗಳ ತಾರಕಕ್ಕೇರಿದಾಗಇರಿತದಿಂದ ಅವರುಪರಲೋಕ ತಲುಪಿದ್ದರು..ಇಂದು ಇವರ ಸರದಿ.. ಮೆಲ್ಲನೆ ಮಸೀದಿಯತ್ತ ಹೆಜ್ಜೆ ಹಾಕಿದೆ..ಪಕ್ಕದಲೇ ಖಬರಸ್ಥಾನ.ಗುಂಪು ಕಟ್ಟಿ ನಡೆದ ಇವರುಒಬ್ಬಂಟಿ ಮಲಗಿದ್ದರು..ಹೊತ್ತೊಯ್ದವರು ಮಣ್ಣು ಮಾಡಿಮರಳಿದ್ದರು.. ಬಡ-ಸಿರಿವಂತ ರೆಲ್ಲರೂಮಲಗುವ ತಾಣವಿದು..ಇವರೀಗ ಒಬ್ಬಂಟಿ..ಸುಮ್ಮನೇ ಪಕ್ಕದಲಿ ಯಾರು ಮಲಗಿರುವುದೆಂದುಕುತೂಹಲದಿ […]

ಕಾವ್ಯಯಾನ

ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ, ಕಲಬುರ್ಗಿ, ಗೌರಿ ಕೊಂದ ನಾಡಿನಲ್ಲಿ??ಬರೆವ ಕೈಗಳ,ನಿಜದ ಮಾತಿಗೆ ಬೀಗ ಜಡಿದ ಮೇಲೆ ??ಕೊಲೆಯಾಗಿದೆ ಅಭಿವ್ಯಕ್ತಿ! ಗೊತ್ತಾ ನಿನಗೆ ??ಅಮಾಸ, ಠೊಣ್ಣಿಯರ ಹಸಿವು ಹಿಂಗಿಲ್ಲಸಾಕವ್ವ ಬದುಕಿನ ಜಂಜಾಟ ನಿಂತಿಲ್ಲ; ಹರಕು ಸೀರೆ ,ಮುರಿದ ಮನೆ ಕಟ್ಟಲಾಗಿಲ್ಲಐತ ಪೀಂಚಲು ಬದುಕ ಕಟ್ಟಲು ಅಲೆದಾಡುತ್ತಿದ್ದಾರೆಚೋಮುನ ಭೂಮಿ ಹೊಂದುವ ಕನಸು ಕನಸಾಗಿಯೇ ಇದೆ…ನಾಡದೊರೆಯ ಕಣ್ಣು ಬದಲಾಗಿಲ್ಲ ಹೀಗಿರುವಾಗ…ನನಗೆ ನಾಚಿಕೆಯಾಗುತ್ತದೆಮಳೆ ನದಿ ಕಾಡು […]

Back To Top