ಕೂರಿಗಿ ತಾಳು

ಕೂರಿಗಿ ತಾಳು

ಪುಸ್ತಕ ಪರಿಚಯ ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ .  ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ […]

ಅಪ್ಪನ ಆತ್ಮ

ಕವಿತೆ ಫಾಲ್ಗುಣ ಗೌಡ ಅಚವೆ. ಇಲ್ಲೇ ಎಲ್ಲೋಸುಳಿದಾಡಿದಂತೆ ಭಾಸವಾಗುವಅಪ್ಪನ ಅತ್ಮನನ್ನ ತೇವಗೊಂಡ ಕಣ್ಣುಗಳನ್ನುನೇವರಿಸುತ್ತದೆ. ಅಪ್ಪನ ಹೆಜ್ಜೆ ಗುರುತುಗಳಿರುವಗದ್ದೆ ಹಾಳಿಯ ಮೇಲೆನಡೆದಾಡಿದರೆಇನ್ನೂ ಆಪ್ತವಾಗಿಸುಪ್ತ ಭಾವನೆಗಳನ್ನುಆಹ್ಲಾದಕರಗೊಳಿಸುತ್ತದೆ. ನಾನು ನಡೆದಲ್ಲೆಲ್ಲನೆರಳಿನಂತೆ ಬರುವ ಅದುನನಗೆ ಸದಾ ಗೋಚರಿದಂತೆ ಭಾಸ! ನನ್ನನ್ನೇ ಕುರಿತು ನೇರಬೊಟ್ಟು ಮಾಡಿ ತೋರಿಸಿದಂತೆಏನನ್ನೋ ಹೇಳುತ್ತದೆ!ದ್ವೇಷದ ಬೆಂಕಿಯಲ್ಲಿಮಗನ ಮುಖವ್ಯಗ್ರವಾಗಿರುವುದ ಕಂಡುಬೇಸರಿಸಿಕೊಂಡಿದೆಆತ್ಮದ ಮ್ಲಾನ ವದನ!! ಅನ್ಯರಿಗೆ ಅಗೋಚರವೆನಿಪಅಪ್ಪನ ಅತ್ಮಕ್ಕೂ ನನಗೂಅದೆಂಥದೋಅಲೌಕಿಕ ನಂಟು! ಅವನ ನೆನಪಿನೊಂದಿಗಿನಮುಕ್ತ ತಾದಾತ್ಮ್ಯವೇನನ್ನ ಅದ್ಯಾತ್ಮ!!! ********

ನನ್ನಜ್ಜ

ಕವಿತೆ ಚೈತ್ರಾ ಶಿವಯೋಗಿಮಠ ಬಸ್ಟ್ಯಾಂಡ್ ನ್ಯಾಗ ನಿಂತುಬಾರಕೋಲು ಬೇಕಾ ಅಂದಾಗಮಂದಿ ಬೇಡಿ ಕೊಡಿಸ್ದಾವ ನನ್ನಜ್ಜಇದ ಕಥಿ ನೂರ ಸರತಿ ಹೇಳಿ“ಹಠಮಾರಿ ಚೈತ್ರಾ” ಅಂದಾವ ನನ್ನಜ್ಜ ಹೆಗಲ ಮ್ಯಾಲೆ ಹೊತ್ತು ಓಣಿತುಂಬಾ ತಿರಗ್ಯಾಡಿದಾವ ನನ್ನಜ್ಜಬಾಯಿ ಒಡದರ, ತುಂಬಾ ಬಿಳಿ ಬೀಜಕೆಂಪಗ ಕಾಣೂ ಪ್ಯಾರಲ ಹಣ್ಣ ತರಾವ ನನ್ನಜ್ಜನಿಂಬುಹುಳಿ, ಪೇಪರಮಟ್ಟಿ, ಚಾಕಲೇಟ್ಗಾಂಧಿ ಮುತ್ಯಾನ ಫೋಟೋ ಮುಂದ ನಿಂದರೀಸಿಕಣ್ಮುಚ್ಚಿಸಿ, ಮುತ್ಯಾ ಕೊಟ್ಟ ನೋಡನ್ನವ ನನ್ನಜ್ಜ ಮುದುಕಿ, ನರಿ-ಒಂಟಿ ಅಂತ ನೂರ ಕಥಿಅವನ ಅಂಗಿ ಕಿಶೆದಾಗ. ಸ್ವತಂತ್ರ ಸಿಕ್ಕಾಗನಡುರಾತ್ರಿ ಮಾಸ್ತಾರ ಎಬ್ಬಿಸಿದ್ದನ್ನ ಕಥಿಮಾಡಿ […]

ದೇವನೂರು ಮಹಾದೇವ

ದೇವನೂರ ಮಹಾದೇವ ಸಂದರ್ಶನ ರಹಮತ್ ತರಿಕೆರೆ ಅವರಿಂದ (1999 ರಲ್ಲಿನಡೆದ ಸಂದರ್ಶನವನ್ನುಸಂಗಾತಿಯ ಓದುಗರಿಗಾಗಿ ಪ್ರಕಟಿಸುತ್ತಿದ್ದೇವೆ.) (ಕನ್ನಡದ ದೊಡ್ಡ ಲೇಖಕರ ವಿಶಿಷ್ಟತೆ ಎಂದರೆ, ಅವರು ಎಷ್ಟು ದೊಡ್ಡ ಕಲಾವಿದರೋ ಅಷ್ಟೇ ದೊಡ್ಡ ರಾಜಕೀಯ ಸಾಮಾಜಿಕ ಚಿಂತಕರು ಕೂಡ. ಇದಕ್ಕೆ ಕಾರಣ ಕರ್ನಾಟಕದ ಸಾಮಾಜಿಕ ಸನ್ನಿವೇಶಗಳೂ ಬಸವಣ್ಣ ಕುವೆಂಪು ಕಾರಂತ ಮುಂತಾದ ಚಿಂತಕ ಲೇಖಕರ ಪರಂಪರೆಯೋ ನಮ್ಮ ಲೇಖಕರ ಸಾಮಾಜಿಕ ಹಿನ್ನೆಲೆಯೊ ಗೊತ್ತಿಲ್ಲ. ‘ನನಗೆ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಎಂಬಂತೆ ಚಿಂತಿಸುವವರು ನಮ್ಮ ಸಂಸ್ಕೃತಿಯಲ್ಲಿ ದೊಡ್ಡ ಚಿಂತಕರು’ ಎಂದು […]

ಶರಣಾಗಿ ಬಿಡಲೆ

ಅನುವಾದಿತ ಕವಿತೆ ಮೂಲ ಕನ್ನಡ: ವಸುಂಧರಾ ಕದಲೂರು ಇಂಗ್ಲೀಷಿಗೆ: ಸಮತಾ ಆರ್. ಶರಣಾಗಿ ಬಿಡಲೆ ನಿನ್ನ ಕಂಗಳ ಪ್ರಾಮಾಣಿಕತೆ  ನನ್ನನು ಹಿಂಬಾಲಿಸುತ್ತಿದೆ. ಭದ್ರ ಕೋಟೆ ಗಟ್ಟಿ ಬೇಲಿ ಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡು ನೀನೂ ಮಂಡಿಯೂರಿ ಬಿಡು ಮಾರ್ದನಿಸುವ ಮಾತುಗಳಿಗೆ ಇನ್ನೆಷ್ಟು ಕಾಲ ಕಿವುಡಾಗಿರಲಿ ಹಾದಿ ಮರೆವ ಮುನ್ನ ನಾಕು ಹೆಜ್ಜೆ ನಡೆದು ಬರಲೆ ಹನಿ ಮುತ್ತು ಜಲಗರ್ಭದ ಚಿಪ್ಪೊಳಗೆ ಕಾಣೆಯಾಗಲು ಬಿಡಬೇಡ ಮುಳುಗಿ ತೆಗೆ ಪಿಸುಮಾತು ಕೇಳುತ್ತಿದೆ ಪ್ರತಿಧ್ವನಿ ತರಂಗವಾಗಿ ಹೃದಯದಲಿ ನಯವಾಗಿ […]

ಮೌನಯುದ್ಧ

ಪುಸ್ತಕ ಪರಿಚಯ ಮೌನ ಯುದ್ದ(ಕವನಸಂಕಲನ) ಕವಿ: ಸುರೇಶ್ ಎಲ್. ರಾಜಮಾನೆ ಪ್ರಕಾಶನ: ವಿಶ್ವ ಖುಷಿ ಪ್ರಕಾಶನ, ನವನಗರ ಬಾಗಲಕೋಟ. ಪುಟಗಳು: 92  ಬೆಲೆ: 120/- ಪ್ರಕಟಿತ ವರ್ಷ: 2018 ಕವಿಯ ಸಂಪರ್ಕ ಸಂಖ್ಯೆ: 8105631055          ಗಂಭೀರ ಕಾವ್ಯಾಧ್ಯಯನ ಮೂಲಕ ನಿರಂತರ ಅನುಸಂಧಾನದಲ್ಲಿ ತೊಡಗಿ ಕಾವ್ಯ ರಚನೆ ಕೃಷಿಗೆ ಮುಂದಾಗಿರುವ ರನ್ನಬೆಳಗಲಿಯ ಯುವಕವಿ ಸುರೇಶ್ ರಾಜಮಾನೆಯವರು “ಸುಡುವ ಬೆಂಕಿಯ ನಗು” ಎನ್ನುವ ಕೃತಿಯನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಲೋಕವನ್ನು ಪ್ರವೇಶಿಸಿದರು. ಈಗ “ಮೌನಯುದ್ಧ”ದ ಮೂಲಕ ನಮ್ಮೊಂದಿಗೆ ಮಾತಿಗಿಳಿದಿದ್ದಾರೆ. […]

ಅಮ್ಮಿಣಿ

ಕಿರುಗಥೆ ಕೆ. ಎ. ಎಂ. ಅನ್ಸಾರಿ ಅಮ್ಮಿಣಿಗೆ ಒಂದೇ ಚಿಂತೆ… ಸೂರ್ಯೋದಯಕ್ಕೆ ಮೊದಲೇ ಹೊರಡುವ ಗಂಡ ಸುಂದ ವಾಪಸ್ಸು ಬರುವಾಗ ಕತ್ತಲೆಯಾಗುತ್ತದೆ. ಖಂಡಿತಾ ಅವನು ಹೆಚ್ಚಿನ ಸಮಯ ಲಚ್ಚಿಮಿ ಯ ಗುಡಿಸಲಲ್ಲೇ ಕಳೆಯುತ್ತಿರಬಹುದು.  ರಾತ್ರಿ ತನ್ನ ಗುಡಿಸಲು ಸೇರಿದರೆ ಗದ್ದಲ ಬೇರೆ. ಸಾರಾಯಿ ಏರಿಸದೆ ಒಂದು ದಿನವೂ ಬಂದದ್ದಿಲ್ಲ. ಹಾಗೆಂದು ಮನೆ ಖರ್ಚಿಗೆ ಕೊಡುವುದಿಲ್ಲ ಎಂದಲ್ಲ. ಮಕ್ಕಳ ಮೇಲೆ ಪ್ರೀತಿಯಿದೆ .. ಆದರೂ ಆ ಲಚ್ಚಿಮಿ ಯ ಗುಡಿಸಲಲ್ಲಿ ಅವನಿಗೆ ಏನು ಇಷ್ಟು ಕೆಲಸ .. ? […]

ಸಾಹಿತ್ಯದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ

ಚರ್ಚೆ (ಈ ಲೇಖನದಲ್ಲಿ ಪ್ರಸ್ತಾಪಿಸಲಾದ ಅಂಶಗಳ ಬಗ್ಗೆ ವಸ್ತುನಿಷ್ಠ ಚರ್ಚೆ ನಡೆಸಲು ಬಯಸುವಿರಾದರೆ ನಿಮ್ಮಬರಹಗಳನ್ನು ಕಳಿಸಬಹುದು-ಸಂ) ಚಂದಕಚರ್ಲ ರಮೇಶ ಬಾಬು ಸಾಹಿತ್ಯದ ಹರಿವು ಬಾಯಿ ಮಾತಿನಿಂದ ಹಿಡಿದು, ಬರವಣಿಗೆ, ಮುದ್ರಣ, ಪುಸ್ತಕ ವಿತರಣ, ಪುಸ್ತಕ ಭಂಡಾರಗಳಲ್ಲಿ ದಾಸ್ತಾನು ಹೀಗೆ ಅನೇಕ ವಿಧಗಳಾಗಿ ನಮಗೆ ಕಂಡಿದೆ. ಬಾಯಿಮಾತಿನಿಂದ ಹರಡಿದ ಸಾಹಿತ್ಯ ದಾಖಲೆಗೊಳ್ಳದೆ ಅನೇಕ ವಚನಗಳು, ಪದಗಳು ಮತ್ತು ಕೃತಿಗಳು ನಮಗೆ ಅಲಭ್ಯವಾಗಿವೆ. ಬರವಣಿಗೆ ಆರಂಭವಾದ ಮೇಲೆ ಈ ಅಡಚಣೆ ಸ್ವಲ್ಪ ಮಟ್ಟಿಗೆ ತಹಬಂದಿಗೆ ಬಂದಿತು. . ತಾಳೆಗರಿಗಳ ಮೇಲೆ […]

ದೇವರ ವಾನಪ್ರಸ್ತ.

ರಾತ್ರಿಯಿಡೀ ಕಗ್ಗತ್ತಲು. ಯಾಕಿಲ್ಲ, ಅಮವಾಸ್ಯೆಯ ರಾತ್ರೆಯದು. ಗುಹೆಯೊಂದರಲ್ಲಿ ಮಲಗಿದ್ದ ಶಿಲಾಮಾನವ ರಾತ್ರೆ ಕಳೆಯುತ್ತಿದ್ದ. ಸುತ್ತ ,ಅಡವಿ. ಅದೊಂದು ನಿದ್ದೆಯಲ್ಲದ ನಿದ್ದೆ. ಗಾಳಿಗೆ ಮರಗಳ ಸುಂಯ್..ಸುಂಯ್.. ಒಂಥರಾ ನೀರವ ಕಗ್ಗತ್ತಲು. ಕಣ್ಣಿಗೇನೂ ಕಾಣಿಸದಾದಾಗ, ಕಿವಿ ಅತ್ಯಂತ ಸೂಕ್ಷ್ಮವಾಗುತ್ತೆ. ದೂರದಿಂದ, ನರಿಗಳು ಊಳಿಡುವ ಶಬ್ಧ, ಪಟ್ಟೆ ಹುಲಿ ನಡೆಯುವಾಗ,ಓಡುವಾಗ ಶಬ್ಧಮಾಡುವುದಿಲ್ಲ. ಸೈಲೆಂಟ್ ಕಿಲ್ಲರ್ ಅದು! ಹ್ಞಾ! ಕೇಳಿಸಿತಲ್ಲ, ಜಿಂಕೆಯ ಮರಣಾಕ್ರಾಂದನ..ಖಂಡಿತಾ ಹುಲಿ ಹಿಡಿದಿರಬೇಕು, ನಾಳೆ ಸಿಗುತ್ತೆ ಅದರ ಅವಶೇಷಗಳು. ಹೇಗಿದ್ದರೂ, ಗುಹೆಯ ಬಾಗಿಲಿಗೆ ಬಂಡೆ ಪಾರ್ಶ್ವದಿಂದ ಮುಚ್ಚಿದೆ. ಹುಲಿಗೂ ಭಯವಿದೆ. […]

ವಿನಂತಿಯಷ್ಟೇ…

ಕವಿತೆ ಮಧುಸೂದನ ಮದ್ದೂರು ನಿನ್ನ ಒಂದೇ ಒಂದು ಕನಸಿಗೆ ಇಷ್ಟು ಪರಿತಪಿಸ ಬೇಕಿತ್ತೆ…..? ನಿನ್ನ ಕುಡಿಮಿಂಚ ಕಣ್ಣೋಟಎದೆ ಇರಿದಿದ್ದರೆ ಸಾಕಿತ್ತು..ಎದೆಗೆ ನಿನ್ನ ನೆನಪುಗಳ ಭರ್ಜಿಯಿಂದಇರಿದುಕೊಳ್ಳಬೇಕಿರಲಿಲ್ಲ..ನಿನ್ನ ತುಸು ಸ್ಪರ್ಶದ ಕೆನೆಗಾಳಿ ಎದೆಗೆ ಸೊಂಕಿದ್ದರೆ ಸಾಕಿತ್ತು… ನಿನ್ನ ಸಿಹಿ ಮುತ್ತೊಂದು ಸಿಕ್ಕಿದ್ದರೆ ಸಾಕಿತ್ತು..ಮಧುಶಾಲೆಗೆ ಎಡತಾಕಿ ಮತ್ತಿನ ಬಾಟಲಿಗಳಿಗೆ ಮುತ್ತಿಕ್ಕುವ ಪ್ರಮೇಯವೇ ಇರುತ್ತಿರಲಿಲ್ಲ… ನಿನ್ನ ನವಿರು ಬಿಸಿಯುಸಿರು ನನ್ನೆದೆಗೆ ಸುಳಿಗಾಳಿಯಾಗಿದ್ದರೆ ಸಾಕಿತ್ತು..ಧೂಮಲೀಲಾ ವಿನೋದವಳಿಗೆ ಅಗ್ನಿಮಿತ್ರನಾಗುತ್ತಿರಲಿಲ್ಲ.. ಈಗಲೂ ಕಾಲ‌ಮಿಂಚಿಲ್ಲ..ಒಂದೇ ಒಂದು ಬಾರಿ ಕನಸಿಗೆ ಬಂದು ಬಿಡು ಸಾಕುಈ‌ ನನ್ನಿ ವ್ಯಸನಗಳ ಸಾಮ್ರಾಜ್ಯವ ಸೋಲಿಸಿಎದೆಯ […]

Back To Top