ಅದೊಂದು ಗಳಿಗೆ.

ಅದೊಂದು ಗಳಿಗೆ.

ಅದೊಂದು ಗಳಿಗೆ. ನಿನ್ನ ಕಾಣುವ ಬಯಕೆಯೊಂದು ಮತ್ತೆ ಮತ್ತೆ ಮುಗಿಬೀಳಲು ತುಕ್ಕು ಹಿಡಿದ ಬುದ್ದಿ ಹಿಡಿತ ತಪ್ಪಿ ಬಂದು ನಿಂತಿದ್ದು ನಿನ್ನ ಮನೆಯಂಗಳಕೆ ಬಂದಾಗ ನೀನು ಮುಚ್ಚಿದ ಕದ ತೆರೆಯದೆ ಕಾಯಿಸಿದ್ದು ನಿನ್ನೊಳಗಿನ ಅಹಮ್ಮಿನ ತುಣುಕಿನೊಂದಂಶವಾಗಿತ್ತು ಕರಗಿದ ಹಗಲು ನಿಶ್ಯಬ್ದ ಇರುಳೊಳಗೆ ಕರಗಿ ಲೀನವಾಗುವ ಸರಿಹೊತ್ತಲ್ಲಿ ದಿಡೀರನೆ ಜ್ಞಾನೋದಯವಾಗಿ ಕಣ್ಮುಂದೆ ಕಂಡ ಮಾಣಿಕ್ಯವೊಂದು ಕಣ್ಮರೆಯಾದ ಪರಿಗೆ ಏಳೂರುಗಳೂ ದಿಗ್ಬ್ರಮೆಗೊಳಗಗಿದ್ದವು. ಸುದೀರ್ಘ ಬರದ ಬೆಂಕಿಯೊಳಗೆ ಬೆಂದ ನನ್ನೂರೊಳಗಿನ ಹಸಿವಿನ ಹಾಹಾಕಾರಕ್ಕೆ ಅಸುನೀಗಿದ ಹಾಲುಗಲ್ಲದ ಹಸುಗೂಸುಗಳ ಹೊತ್ತು ಮಣ್ಣು ಮಾಡಿದ ಕೈಗಳಿಗೆ ಹತ್ತಿದ ಕುಷ್ಠ ಕಿವಿ ಮೂಗು ಪಾದಗಳ ಬೆರಳ ಸಂದಿಗಳಿಗೆ ವ್ಯಾಪಿಸಿ ಉರಿದು ಹೋಯಿತು ಹಾಗೇನೆ ಹಗಲ ಚಿತೆ ಹಿಮ ಪರ್ವತದ ತುತ್ತ ತುದಿಯಲಿ ನೆಲೆಸಿದ ಶಂಕರನ ಪಾದಗಳ ನುಣುಪಾದ ತಣ್ಣನೆಯ ಸ್ಪರ್ಶಕೆ ಕರಗಬಲ್ಲುದೆಂದು ನಂಬಿದ ಪಾಪಾತ್ಮಗಳ ದಿವ್ಯೋಪದೇಶಕೆ ಮಾರು ಹೋಗಿ ಹಮ್ಮು ತೊರೆದು ಸುತ್ತೂರಿನೆಲ್ಲ ಗರತಿಯರ ಪಾದಕೆರಗಿ ಶತಮಾನಗಳ ಪುರಾತನ ಶಾಪ ಉಶ್ಯಾಪಗಳೆಲ್ಲವನ್ನು ಇಲ್ಲವಾಗಿಸಿ ಅದೊಂದು ಮಂಗಳಕರವಾದ ಬೆಳಗಿಗೆ ಕಾಯುತ್ತ ಕೂತ ಕಡುಪಾಪಿ ಮನುಷ್ಯನ ಪಾಪಿಷ್ಠ ಕ್ಷಣಗಳ ಮನ್ನಿಸುವ ಮನಸಿರುವ ದೇವಪುರುಷನಿಗಾಗಿ ಕಾಯುವ ಗಳಿಗೆಯಿದೆಯಲ್ಲ ಅದಕ್ಕಿಂತ ಅಮೃತಮಯವಾದ್ದು ಬೇರೆ ಯಾವುದಿದೆ? ********* ಕು.ಸ.ಮಧುಸೂದನ

ನಿರೀಕ್ಷೆ

ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ ತೊಟ್ಟು ನೀಳ ಕೇಶವ ಹೆಣೆದು ಮಲ್ಲಿಗೆಯ ಮುಡಿದಿದ್ದೆ ನಗೆ ಚೆಲ್ಲುವ ತುಟಿಗಳಿಗೆ ಕೆಂಪು ಬಣ್ಣ ಲೇಪಿಸಿ ನಿನ್ನ ಕಣ್ಣುಗಳ ನೆನೆದು ನನ್ನ ಕಣ್ಣಿಗೆ ಕಾಡಿಗೆ ಬಳಿದಿದ್ದೆ ಅನುಗಾಲ  ನಿನ್ನತ್ತ ಬರಲು ತವಕಿಸುವ ಕಾಲುಗಳಿಗೆ  ಗೆಜ್ಜೆ ತೊಟ್ಟಿದ್ದೆ ಕಂಗಳಲಿ ಮಿಂಚಿಟ್ಟು, ತುಟಿಗಳಲಿ ನಗೆಯಿಟ್ಟು ನಿನ್ನ ದಾರಿಯ ಕಾದಿದ್ದೆ. ನೀ ಬಾರದೆ  ನಿರೀಕ್ಷೆಗಳು  ನೀರ ಮೇಲಣ ಗುಳ್ಳೆಗಳಾದವು ಕನಸುಗಳು […]

ಚೆಲ್ಲಿ ಹೋಯಿತು ಉಸಿರು

ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ಗಾಳಿಗೆ ಗಂಧ ತುಂಬುತ್ತಿದ್ದಬಾಗಾಳು ಮರವನ್ನುಈ ಬೆಳಗು ಕಡಿಯಲಾಗಿದೆಮರದ ಮಾಂಸ ರಕ್ತ ಚರ್ಮಚೆಲ್ಲಾಡಿದ ಬೀದಿಯೊಳಗೆಇದೀಗ ತಾನೇ ನಡೆದುಬಂದೆನೆಲದಲ್ಲಿ ಜಜ್ಜಿಹೋದ ಹೂಮೊಗ್ಗು ಎಲೆಗಳ ಕಂಬನಿಕುಡಿಯುತ್ತಾ… ಹಕ್ಕಿ ಕೊರಳಿಗೆ ಕಷಾಯಕುಡಿಸಿದ ಸಂಗಾತಿ ಮರಮಣ್ಣಿನಾಳದ ಕಸುವುಗಳನಕ್ಷತ್ರಗಳಿಗೆ ಅಂಟಿಸಿದಅವಧೂತ ಮರಜೀವಜಂತುಗಳಿಗೆ ಜೀವಜಲಮೊಗೆದ ತಾಯಿಮರಬದುಕಿತ್ತು ಇಲ್ಲೇ ಕಣ್ಣೆದುರಲ್ಲೇಮಾತು ಮೀರಿದಬುದ್ಧಕಾರುಣ್ಯದಂತೆಮಮತೆ ತೋಳುಗಳಂತೆ… ಚೆಲ್ಲಿಹೋಯಿತು ಉಸಿರುಸಾವು ಹೆಪ್ಪುಗಟ್ಟಿದಂತೆ!****** ಬಾಗಾಳು ಮರ– […]

ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಮೂರ್ತಿ ಅವರು ತಮ್ಮ ಇಪ್ಪತ್ತರಿಂದ ಮೂವತ್ನಾಲ್ಕನೇ ವಯಸ್ಸಿನವರೆಗೆ ಬರೆದ ಕಥೆಗಳಲ್ಲಿ ಆಯ್ದ ಹತ್ತು ಕಥೆಗಳು ಇಲ್ಲಿವೆ. ಇದಕ್ಕೆ ಕೆ.ವಿ. ತಿರುಮಲೇಶ್ ಅವರು ಮುನ್ನುಡಿ ಬರೆದಿದ್ದಾರೆ.ನಾನಿಲ್ಲಿ ಉದ್ದೇಶಪೂರ್ವಕವಾಗಿ ಪ್ರತೀ ಕಥೆಯ ಬಗ್ಗೆ ಬರೆಯುವುದಿಲ್ಲ. ಏಕೆಂದರೆ ಇವು ಸಾಕಷ್ಟು ಸಂಕೀರ್ಣವಾಗಿ ಇದ್ದು ಒಂದೇ ಹಿಡಿತಕ್ಕೆ ಸಿಗುವಂಥವಲ್ಲ. ಇವೆಲ್ಲವೂ ಬಹಳ ಪ್ರಬುದ್ಧ ಕಥೆಗಳೆಂದು ಮಾತ್ರ ಹೇಳಬಹುದು. ಕತೆಯನ್ನು ಗಂಭೀರವಾಗಿ […]

ಗಝಲ್

ಗಝಲ್ ಸಹದೇವ ಯರಗೊಪ್ಪ ಎದೆ ಎತ್ತರ ಬೆಳೆದು ನಿಂತ ಪೀಕಿನಲಿ ಕಣ್ಣು ತಪ್ಪಿಸಿ ಎಲ್ಲಿ ಹೋದೆ|ಬತ್ತಿದೆದೆಯ ಬಾವಿಗೆ ಕಣ್ಣೀರು ಕುಡಿಸಿ ಎಲ್ಲಿ ಹೋದೆ|| ಬಿತ್ತಿದ ತಾಕುಗಳಿಗೆ ಉಳಿ ನೀರು ಉಣಿಸದೆ ಸೆರಗ ಜಾಡಿಸಿದೆ|ಮಣ್ಣಿನ ಹೊಕ್ಕಳಿಂದ ಅನ್ನದ ಬೇರು ಕತ್ತರಿಸಿ ಎಲ್ಲಿ ಹೋದೆ|| ತೂಗಿ ತೊನೆವ ಬೆವರ ತೆನೆಗಳಿಗೆ ಕವಣೆ ಬೀಸಲೆ ಇಲ್ಲ|ನೇಸರನ ಕಾಯುವ ಸೂರ್ಯಕಾಂತಿ ದಿಕ್ಕು ಬದಲಿಸಿ ಎಲ್ಲಿ ಹೋದೆ| ಬಿರುಕು ಬಿಟ್ಟ ನೆಲದ ಕೆಂಡಕ್ಕೆ ಬೆವರ ದೂಪದ ಬೆರಕೆ|ತೀರದ ಸಾಲಕ್ಕೆ ಉಳುವ ನೇಗಿಲ ಅಡಾ ಇರಿಸಿ […]

ಗಝಲ್

ಗಝಲ್ ಮಾಲತಿ ಹೆಗಡೆ ಎದೆಯ ಮಧುಬನವ ಹದಗೆಡಿಸಿ ತೊರೆದು ಹೋದೆ ನೀನುಮನದ ಮೃದು ಭಾವ ಚೆದುರಿಸಿ ತೊರೆದು ಹೋದೆ ನೀನು ಲೋಕನಿಂದೆಗೆ ಕಿವುಡಾಗಿ ನಿನ್ನವಳಾಗಿದ್ದೆನೋ ಗಿರಿಧರಾನನ್ನನೀ ಭವದ ಭಾಧೆಗೆ ಸಿಲುಕಿಸಿ ತೊರೆದು ಹೋದೆ ನೀನು ಕಡೆದ ಮಜ್ಜಿಗೆಯಲ್ಲೆತ್ತಿದ ಶುದ್ಧ ನವನೀತದಂತಿತ್ತು ನನ್ನೊಲವುರಾಧೆಯ ರೋದನವ ಕಡೆಗಣಿಸಿ ತೊರೆದು ಹೋದೆ ನೀನು ಇಹ ಪರದ ಚಿಂತೆಯನೆಲ್ಲ ತೂರಿ ವೇಣು ನಾದದಲಿ ಕರಗಿದ್ದೆಜೀವ ಭಾವದ ನಂಟು ಕತ್ತರಿಸಿ ತೊರೆದು ಹೋದೆ ನೀನು ಮರುಳೋ ಮಾಯೆಯೋ ಅರಿಯದ ಕಡುಮೋಹಿಯಾಗಿದ್ದೆಆತ್ಮಸಾಂಗತ್ಯದಲಿ ಅಧೀನವಾಗಿಸಿ ತೊರೆದು ಹೋದೆ […]

ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು ಹಲವು ಜೈವಿಕ & ಭೌತಿಕ ಘಟಕಗಳ ಆಗರ, ಇವುಗಳ ನಡುವೆಯೇ ಬೇಕು-ಬೇಡಗಳ ಸಂಘರ್ಷ. ೧೯೭೨-೧೯೭೩ರಿಂದ ವಿಶ್ವ ಸಂಸ್ಥೆಯ ನೇತೃತ್ವದಲ್ಲಿ ಪರಿಸರದ ಜಾಗೃತಿಗೊಳಿಸುತ್ತಲೇ ಬಂದಿದ್ದೇವೆ ಆದರೂ ಮತ್ತೆ ಮತ್ತೇ ನಮ್ಮ ಪರಿಸರದ ಬಗ್ಗೆ ತಿಳಿಯುವ ಹಾಗೂ ಅದರ ಮಹತ್ವ ಅರಿಯುವ ಜೊತೆಗೆ ನಮ್ಮಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅವಲೋಕಿಸಿ ಸಂರಕ್ಷಿಸಲು ಪಣತೊಡುವ ಮಹತ್ವದ ದಿನ. ಈ ಪರಿಸರ […]

ಗರಿ ಹುಟ್ಟುವ ಗಳಿಗೆ

ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ ಧಿಕ್ಕಾರ ಕೂಗಿದಮರಜಿರಲೆಗಳ ಅನಿರ್ದಿಷ್ಟಾವಧಿಯನಿರಸನ ಅಂತ್ಯವಾಗಿದೆಹಣ್ಣಿನರಸ ನೀಡಲು ಮೋಡಗಳುಧರೆಗಿಳಿದಿವೆ. ಮತ್ತೆ ಮತ್ತೆ ಬೀಳುವ ಮಳೆಅವಳ ನೆನಪುಗಳ ಚಿಗುರಿಸಿಬದುಕುವ ಆಸೆ ಮೂಡಿಸಿದೆಹುಲ್ಲು ಕಡ್ಡಿಗೆ ಜೀವ ಬಂದಂತೆ! ಹೊಯ್ಯುವ ಜುಮುರು ಮಳೆಗೆಅದುರುವ ಮರದ ಎಲೆಗಳುಮೋಡಗಳಿಗೆ ಸಂತಸದ ಸಂದೇಶರವಾನಿಸಿವೆ. ಧರೆಗಿಳಿದ ಮಳೆಗೆ ಬೆರಗಾದ ಕಪ್ಪೆಗಳುಕೂಗಿ ಕೂಗಿ ಕೂಗಿಖುಷಿಗೊಂಡು ಬೆದೆಗೊಂಡಿವೆ. ಹೊಳೆ ಹಳ್ಳಗಳಲ್ಲಿಯ ಮರಿಗಪ್ಪೆಗಳುಬಾಲ ಕಳಚಿ ಮೂಡಿ ಬಂದರೆಕ್ಕೆಗಳ ಕಂಡುಛಂಗನೆ ಕುಣಿದು ಕುಪ್ಪಳಿಸಿವೆ. […]

ಸ್ವಾರ್ಥಿಯಾಗುತಿದ್ದೇನೆ.

ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ ಅಳೆದು ತೂಗಿಒಂದೊಂದೆ ಆಗ ಪ್ರೀತಿಸುತಿದ್ದೆ ಎಲ್ಲರನ್ನೂ ನಿಸ್ವಾರ್ಥದಿಂದಈಗಲೂ ಪ್ರೀತಿಸುತ್ತೆನೆ ಅಥವಾ ಪ್ರೀತಿಸುವಂತೆನಾಟಕವಾಡುತ್ತೆನೆ ಆಗ ಸ್ಪಂದಿಸುತಿದ್ದೆ ಥಟ್ಟನೆ ,ಯಾವಪ್ರತಿಫಲಾಪೇಕ್ಷೆ ಇಲ್ಲದೆ..ಈಗ ಅವರಿಂದಾಗುವ ಲಾಭ ನಷ್ಟ ಗಳುಅವಲಂಬಿಸಿರುತ್ತದೆ ನನ್ನ ಸಹಾಯಹಸ್ತ ಆಗ ನಗುತಿದ್ದೆ ನಿಷ್ಕಲ್ಮಷವಾಗಿ ಮನದುಂಬಿಈಗಲೂ ನಗುತ್ತೆನೆ ಹಿಂದೆಮುಂದೆ ಕೊಂಚ ತುಟಿಯರಳಿಸಿ ಆಗ ಹಾತೊರೆಯುತಿತ್ತು ಮನಸ್ಸುಎಲ್ಲರೊಳಗೊಂದಾಗಿ ಬೆರೆಯಲು ನಲಿಯಲುಈಗ ಹುದುಗುತ್ತೆನೆ ಒಂಟಿತನದ ಚಿಪ್ಪಿನಲ್ಲಿನನ್ನನ್ನು ನಾನು ನಿರ್ಬಂಧಿಸಿಕೊಂಡು ಈಗ ಅವರು […]

ಅನುವಾದಿತ ಟಂಕಾಗಳು

ಅನುವಾದಿತ ಟಂಕಾಗಳು ಮೂಲ ರಚನೆ – ವೈದೇಹಿ ಗಣೇಶ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ವೃತ್ತಿ -ಪ್ರವೃತ್ತಿಜೀವನದ ಬಂಡಿಗೆಚಕ್ರಗಳಂತೆವೃತ್ತಿಗೊ ನಿವೃತ್ತತೆಪ್ರವೃತ್ತಿ ಸಾರ್ಥಕತೆ Profession – dispositionTwo wheels of chariotCalled the lifeRetirement ceases oneAccomplishment graces the other. ಬೇವು ಬಾಗಿತುಸಂಪಿಗೆಯಾಸರೆಗೆ,ಪ್ರಕೃತಿ ಸಾರಿಹೇಳಿತು, ಒಲವಿಗೆಗುಣ ಗಣತಿ ಬೇಕೇ? Bitter neem lentRecourse to fragrant magnoliaThe nature proclaimsFor the endearmentNot to census the virtues ಕರ್ಮದ ಆಟಕಾಲ ಕಲಿಸೋ ಪಾಠಸುಕರ್ಮಗಳಅರಿತು ನಡೆದರೆಗೆದ್ದೆ ಜೀವನದಾಟ […]

Back To Top