ತಿಮಿರ

ತಿಮಿರ

ಕವಿತೆ ತಿಮಿರ ಡಾ. ಅಜಿತ್ ಹರೀಶಿ ಸೂಡಿ ಹಿಡಿದು ಓಡಾಡುವ ಕಾಲದಲ್ಲಿಕೊಳ್ಳಿ ದೆವ್ವಗಳು ಕಾಲಿಗೊಂದು ತಲೆಗೊಂದುಹರದಾರಿ ನಡೆದು ಸಾಗುವ ದಿನಗಳಲ್ಲಿಅವುಗಳ ಜಾತ್ರೆ ರಸ್ತೆ ಪಕ್ಕದಲ್ಲಿ ಕಳೆದ ಬಾಯಿ ಮುಚ್ಚದಂತೆ ಲಾಟೀನು-ಬೆಳಕಿನಲ್ಲಿ ಕೇಳಿ ಸುದ್ದಿ ಹೆದರಿಕೆ ಬೇಜಾನುತಿರುಚಿದ ಪಾದ ಗುರುತರವಾದ ಗುರುತುದೆವ್ವ ಕಂಡವನಿಂದ ಇತರರಿಗೆ ತರಬೇತು! ಕತ್ತಲಿನಲ್ಲಿ ಇಣುಕುವ ಬೆಳಕು, ಬರುವ ಶಬ್ದಎಂತಹವರನ್ನೂ ಮಾಡುವುದು ಸ್ತಬ್ಧಎಲ್ಲರೊಳಗೊಬ್ಬ ಕವಿ, ಆಗ ರವಿಯಿಲ್ಲಕಲ್ಪನೆಗೆ ಕಾಲು ಬಾಲ ಗಲ್ ಗಲ್, ಸರ ಪರಚಿತ್ತದಲ್ಲಿ ಮೂಡುವ ಚಿತ್ರಗುಂಡಿಗೆಯಲ್ಲಿ ನಡುಕಆಕ್ರಮಿಸುವ ಆತಂಕ ಅಕ್ರಮಕ್ಕೆ ಸೂಕ್ತ ಅಮಾವಾಸ್ಯೆವಿದ್ಯುತ್ […]

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ

ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ ಎಪ್ಪತ್ತು ಎಪ್ಪತ್ತೊಂದರ ಸಮಯ. ನನಗೆ ಕರಾರುವಾಕ್ಕಾಗಿ ದಿನಾಂಕ ಮತ್ತು ಮಾಹೆ ಸದ್ಯ ಜ್ಞಾಪಕ ಇಲ್ಲ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ನಾನು ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾಗ. ಆ ಕಾಲಕ್ಕೆ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ, ಅದರಿಂದಾಗಿ ಸಾಂಸ್ಕೃತಿಕ ಚಟುವಟಿಕೆಗಳು ಉತ್ತುಂಗಕ್ಕೆ ಏರಿದ್ದ ಕಾಲ. ಈಗ ಹೇಗೋ ನಾ ಕಾಣೆ. ವಾಸ್ತವವಾಗಿ ವಾರ್ಷಿಕೋತ್ಸವದಲ್ಲಿ ನಾಟಕ ನಿರ್ದೇಶನಕ್ಕೆ ಸಿನಿಮಾ […]

ಅಂಕಣ ಬರಹ “ಆಕಾಶವಾಣಿಯ ಅವಕಾಶದಾಕಾಶ” “ಬರೆದ ಕಥೆ ಹಾಗೇ ಬಿಡುವಂತಿಲ್ಲ. ವಿಳಾಸ ಕೊಡುತ್ತೇನೆ. ಆಕಾಶವಾಣಿಗೆ ಕಳುಹಿಸು. ನೋಡೋಣ! ನೀನು ಎಂತಹ  ಕಥೆಗಾರ್ತಿ”.ನಾನು ಬರೆದ ಕಥೆಯೊಂದು ಸರ್ ಗೆ ಸಿಕ್ಕಿ ಗಂಡ- ಹೆಂಡತಿ ಅದನ್ನು ಓದಿ ಮುಂದಿನ ಬಾರಿ ಅವರ ಮನೆಗೆ ಹೋದಾಗ ಇಬ್ಬರೂ ಸೇರಿ ವಿಚಾರಣೆಗೆ ಕಟಕಟೆಯಲ್ಲಿ ನಿಲ್ಲಿಸಿದ್ದರು. ತಲೆತಗ್ಗಿಸಿದವಳ ಪರ ಲಾಯರ್ ಆಗಿ ಅವರ ಶ್ರೀಮತಿ ನಿಂತಿದ್ದರು. ಕೊನೆಗೂ ತೀರ್ಪು ಹೊರಬಿದ್ದಿತ್ತು.  ಚಿಕ್ಕನಡುಕ,ಸಂಭ್ರಮ ಜೊತೆಯಾಗಿತ್ತು. ಆದರೆ ಸರ್ ಗೆ ಆಕಾಶವಾಣಿಯಲ್ಲಿ ಪರಿಚಯವಿದೆ. ಅವರು ಒಂದು ಮಾತು […]

ದಾಖಲೆಗಳಿವೆ

ಕವಿತೆ ದಾಖಲೆಗಳಿವೆ ವಸುಂಧರಾ ಕದಲೂರು ಸುಧಾರಕರನು ಹುಚ್ಚರೆಂದುಕರೆದು ಥಳಿಸಿದುದಕೆ, ಕೂಡುರಸ್ತೆಗಳ ನಡುವಲ್ಲಿ ಹೀಗಳೆದುಕಲ್ಲುತೂರಿ ಕಟುನುಡಿ ಮಳೆಗರೆದು,ತೋಯಿಸಿ ನೋಯಿಸಿದುದಕೆ. ಗಾಸೀಪು ತೂಪಾಕಿಗಳ ತೂಫಾನುಸಿಡಿಸಿ ಗಡೀಪಾರು ಮಾಡಿಸಿ; ಗುಲ್ಲೆಬ್ಬಿಸಿ ಗಲ್ಲಿಗೇರಿಸಿ, ಗುಂಪುಗುಂಪಾಗಿ ಗುಟ್ಟು ಮಾಡಿ; ಒಳಸಂಚು ಮಾಡಿ ಮೂಲೆ ಗುಂಪಾಗಿಸಲು ಕಾರ್ಯ ಗೇಯ್ದದದಕೆ. ಇದರ ನಡುವೆಯೂ ಅವರು, ಅವರ ವರ್ತಮಾನಗಳಲಿ ದಂತಕತೆಗಳಾಗಿ, ಭವಿಷ್ಯತ್ತಿನಲಿ ಹುತಾತ್ಮರಾಗಿ ಇತಿಹಾಸದ ಪುಟಗಳಲಿ ಮಹಾತ್ಮರಾಗಿ ಸೇರಿಹೋದುದಕೆ ಸಾಕ್ಷ್ಯಗಳಿವೆ.. ********************************************

ಅಂಜಿಕೆ

ನದಿ ತಾ ಪಯಣಿಸಿದ ಹಾದಿಯತ್ತ ಹಿಂತಿರುಗಿ ನೋಡುತ್ತದೆ
ಪರ್ವತದ ಶಿಖರಗಳಿಂದ
ಉದ್ದನೆಯ ಅಂಕುಡೊಂಕಾದ ರಸ್ತೆ ದಾಟಿದೆ ಕಾಡು ಮತ್ತು ಹಳ್ಳಿಗಳನು

ಅಂಕಣ ಬರಹ ಸವಡಿಯಾಗುವ ಸವತಿಯರು ಭಾರತ ಬಹುಸಂಸ್ಕೃತಿ ನಾಡು. ಅಂತೆಯೆ ಬಹು ಪತ್ನಿತ್ವ ಸಮಾಜವುಳ್ಳ ಕೇಂದ್ರಸ್ಥಾನವೂ ಹೌದು.ಒಬ್ಬ ಪುರುಷನನ್ನು ಇಬ್ಬರು ಮಹಿಳೆಯರು ಮದುವೆಯಾದರೆ ಅವರು ಒಬ್ಬರಿಗೊಬ್ಬರು ಸವತಿಯಾಗುವರು. ‘ಸವತಿ’ ಎನ್ನುವ ಈ ಶಬ್ದ ಮೂಲತಃ ಸಹವರ್ತಿ ಎನ್ನುವ ಪದದಿಂದ ಬಂದಿದ್ದು. ಇದರ ಅರ್ಥ ಇಬ್ಬರೂ ಸಮಾನ ಹಕ್ಕು ಹೊಂದಿರುವುದು ಎಂದಾಗುತ್ತದೆ. ಸಮಾನ ಹಕ್ಕುಗಳು, ಸಮಾನ ಸಕಲ ಸವಲತ್ತುಗಳನ್ನು ಸಮಾನವಾಗಿ ಪಡೆಯುವರನ್ನು ಸವತಿ ಎಂದು ಕರೆಯುವರು‌. ಈ ಸವತಿ ಎನ್ನುವ ಪದ ಹೊಟ್ಟೆಕಿಚ್ಚು, ಮತ್ಸರ, ವೈರಿ, ಅಸಹನೆ ಎಂಬ […]

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-6 ಹೌರಾ ಬ್ರಿಜ್ ಹತ್ರ ಬಂದು ನಿಂತು ಸ್ವಲ್ಪ ಹೊತ್ತು ಫೋಟೊ ಶೂಟ್ ಎಲ್ಲಾ ಆಗುವಾಗ, ಅಲ್ಲಿವರೆಗೆ ಸರ್ಕಸ್ ಮಾಡಿ ಬಂದಿದ್ದು ಸಾಕಾಗಿ ಹೋಯ್ತೇನೊ. ಇನ್ನು ಸಾಕು‌. ವಾಪಸ್ ಹೋಗೋಣ ಅಂದರು ಸತೀಶ್. ನೀರಿನಲ್ಲಿ ನಕ್ಷತ್ರ ಮೀನು, ಜೆಲ್ಲಿ ಮೀನು ಇನ್ನೇನೇನೊ ನೋಡುತ್ತಾ ಮಕ್ಕಳು ಮುಂದೆ ಹೋಗಿದ್ದರು.ನೀವು ಮುಂದೆ ಹೋಗಿ ನೋಡಿ ಬನ್ನಿ. ನಾವಿಲ್ಲೇ ಕೂತಿರ್ತೇವೆ ಎಂದು ಸರಸ್ವತಿಗೆ ಹೇಳಿದೆ. […]

ಕವಿತೆಯ ಜೀವನ

ಕವಿತೆ ಕವಿತೆಯ ಜೀವನ ಟಿಪಿ.ಉಮೇಶ್ ಅಸಹಾಯಕ ಅಕ್ಷರದ ಕಾಲುಗಳ ಊರುತ್ತಾಪೇಲವ ಮುಖ ಚಿಹ್ನೆಗಳ ಹೊತ್ತು ಬಂದವುಪ್ರೇಯಸಿಯ ಮನೆಗೆ;ಭಿಕ್ಷಾಂದೇಹಿ!ಕೆದರಿದ ಕೂದಲು ಕೆಸರಾದ ಕೈಕಾಲು ಹರಿದ ಬಟ್ಟೆಗಳ ಮುಗ್ಗಲು ನಾರುತ್ತಿರುವಕವಿತೆಗಳ ಕಂಡೊಡನೆ;ಪ್ರೇಯಸಿ ಅನ್ನ ಹಾಕುವುದಿರಲಿಒಂದು ಹಸನಾದ ಮಾತುಹಸನ್ಮುಖ ನಗುವನ್ನು ತೋರದೆದಡಾರನೆ ಕದವಿಕ್ಕಿಗೊಂಡು ಒಳ ಹೋದಳು!ಮರುದಿನಕವಿತೆಪತ್ರಿಕೆಯಲ್ಲಿ ರಾರಾಜಿಸುತ್ತಿದೆ!!ಬಹುಖ್ಯಾತಿಗೊಂಡು ಮನೆ ಮನ ಬೀದಿ ಓಣಿಗಳಲ್ಲಿ ಕುಣಿಯುತ್ತಿದೆ!ಪ್ರೇಯಸಿ ದಾರಿಗಿಳಿದು ಬಂದವಳೇ;ಕವಿತೆಯ ಬೆನ್ನ ನೇವರಿಸಿದಂತೆ ಮಾಡಿಜುಟ್ಟು ಹಿಡಿದುಕೊಂಡುದರದರನೆ ಮನೆಯ ಒಳಗೆ ಎಳೆದೊಯ್ದಳು! ಬೀದಿಯಲ್ಲಿ ನಿಶ್ಯಬ್ಧ!ಮನೆಯಲ್ಲಿ ಸಶಬ್ಧ! ಅವರ ಮನೆ ಕತೆ ನಮಗೆ ನಿಮಗೇಕೆಲೋಕದ ಡೊಂಕು ಕೊಂಕು […]

ಚೆಗುವೆರ ಎಂಬ ಮುಗಿಯದ ಪಯಣ

ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ.  ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ.  ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು […]

ಅಮೃತಾ ಮೆಹಂದಳೆ ಹೊಸ ಕವಿತೆ

ಕವಿತೆ ಅಮೃತಾ ಮೆಹಂದಳೆ ಹೊಸ ಕವಿತೆ ಕೋಮುದಂಗೆಗೆಆಕ್ರೋಶಗೊಳ್ಳುವ ನಾನುಸಹಿಷ್ಣುತೆಯ ಕವಿತೆ ಬರೆವೆಸಾಮಾಜಿಕ ಕಾಳಜಿಯಬಗ್ಗೆ ಬರೆವ ನಾನುಇಂದು ನೋಡಬೇಕಾದಹೊಸ ಚಿತ್ರದ ಪಟ್ಟಿ ಮಾಡುವೆಸೀರೆ ಚಾಲೆಂಜ್ ಗೆಸಿಡಿಮಿಡಿಗೊಳ್ಳುವ ನಾನುಸೆಲ್ಫೀಯಲ್ಲಿ ಮೈಮರೆವೆಹಸಿದವರ ವಿಡಿಯೋಗೆಕಣ್ಣೀರ್ಗರೆಯುವ ನಾನುಪಾನಿಪುರಿಗೆ ಪುದಿನಾ ಜೋಡಿಸುವೆರಾಜಕೀಯ ದೊಂಬರಾಟಕ್ಕೆಅಸಹ್ಯಿಸಿಕೊಳ್ಳುವ ನಾನುಭಾಷಣಕ್ಕೆ ಕೈತಟ್ಟುವೆಉಚಿತ ಭಾಗ್ಯಗಳ ಬಗ್ಗೆಮೆಚ್ಚುಗೆ ತೋರುವ ನಾನುಪರಿಣಾಮಗಳಿಗೆ ಕುರುಡಳಾಗುವೆಬೇಕಿಂಗ್ ನ್ಯೂಸ್ಹಂಚಿಕೊಳ್ಳುವ ನಾನುಹಕ್ಕಿಗಾಗಿ ನೀರಿಡಲು ಮರೆವೆಆರ್ಥಿಕ ಮುಗ್ಗಟ್ಟಿಗೆಚಿಂತಿತಳಾಗುವ ನಾನುಬಾರದ ಪಾರ್ಸೆಲ್ಲಿಗೆ ಮರುಗುವೆನಾಳಿನ ಭವಿಷ್ಯಕ್ಕೆಸಿನಿಕಳಾಗುವ ನಾನುಹಪ್ಪಳಕ್ಕೆ ಅಕ್ಕಿ ನೆನೆಸುವೆಆಧುನಿಕ ಜೀವನಶೈಲಿಗೆಹಿಡಿಶಾಪ ಹಾಕುವ ನಾನುಪಿಜ್ಜಾ ಆಫರಿಗೆ ಕಣ್ಣರಳಿಸುವೆದೇಶಪ್ರೇಮದ ರೀಮೇಕ್ ಹಾಡಿಗೆಲವ್ ಇಮೋಜಿ ಒತ್ತುವ ನಾನುಮೆಚ್ಚಿನ ನಟನ […]

Back To Top