ಕಾವ್ಯಯಾನ

ಕಾವ್ಯಯಾನ

ನಗುವ ತೊಡಿಸಲೆಂದು ಶಾಲಿನಿ ಆರ್. ತಾಳ್ಮೆ ಕಳಕೋತಿದಿನಿ ದಿನದಿಂದ ದಿನಕ್ಕೆ, ಮರೆತೆನೆಂದರು ನೆನಪ ನೋವ ಎಳೆಯ ನೂಲುತಿದೆ ಗೆಳೆಯ, ಬೇಡ ಎನಗಿದು ಬೇಸರದ ಹೊದಿಕೆ ಸ್ವಚ್ಛಂದ ಹಕ್ಕಿಯಿದು ನಭದ ನೀಲಿಯಲಿ ಹಾರುವ ಬಯಕೆ, ಒಲವ ಮಳೆಯಿದು ನನಗಾಗಿ ಕಾಯುತಿದೆ, ಬಣ್ಣದ ಕುಂಚಗಳು ತುಂಟನಗೆ ಬೀರುತಿದೆ, ಅಂಕುಡೊಂಕಿನ ನವಿಲು, ಬಿಂಕ ತೋರಿಅಣಕಿಸುತಿದೆ, ಮನದ ಸಾರಂಗ ಮನಸಾರೆ ತಪಿಸುತಿದೆ, ಕಳೆದ ನೆನ್ನೆಗಳು ನಾಳೆಗಳ ಹುಡುಕುವಂತೆ ಬಾಗಿದ ಬೆನ್ನಿಗಿದು ನೋವಿನ ಕುಣಿಕೆ, ನಾ ಒಲ್ಲೆ ಗೆಳೆಯ ನಾಳೆಯ ಸೂರ್ಯನಿಗೆ ಸುಪಾರಿ ಕೊಟ್ಟು […]

ಮಕ್ಕಳ ಹಾಡು

ನಮ್ಮಯ ಬದುಕು ಮಲಿಕಜಾನ ಶೇಖ ಹಂಸಮ್ಮಾ ಬಂದಳು ಹಂಸಮ್ಮಾ ಕ್ವ್ಯಾಕ್ -ಕ್ವ್ಯಾಕ್ ಕ್ವ್ಯಾಕ್-ಕ್ವ್ಯಾಕ್ ನುಡಿಯುತ್ತಾ ಶ್ವೇತ ಬಣ್ಣ ನನ್ನದು ಹಾಲು-ಮೀನು ಕಂಡರೆ ನಾನು ಕರಿವೆ ಎಂದಳು ಮಕ್ಕಳ-ಮರಿಯನ್ನು. ಹುಂಜಪ್ಪಾ ಬಂದನು ಹುಂಜಪ್ಪಾ ಕುಕ್ಕು-ಕೂ ಕುಕ್ಕು- ಕೂ ಕೂಗುತ್ತಾ ತೆಲೆಯಲಿ ಫುಂಜ ನನ್ನದು ಹುಳವ-ಗಿಳವ ಕಂಡರೆ ನಾನು ಕರಿವೆ ಎಂದನು, ಹೆಂಡತಿ ಮಕ್ಕಳನು. ಕಾಗಣ್ಣ ಬಂದ ಕಾಗಣ್ಣ ಕಾವ್-ಕಾವ್ ಕಾವ್-ಕಾವ್ ಕಿರಚುತ್ತಾ ಕಪ್ಪು ಬಣ್ಣದು ನನ್ನದು ಅನ್ನದ ಅಗಳ ಕಂಡರೆ ನಾನು ಕರಿವೆ ಎಂದನು, ಬಂಧು-ಬಳಗವನು. ಗುಬ್ಬಕ್ಕಾ ಬಂದಳು […]

ಕಾವ್ಯಯಾನ

ಶ್ವೇತಾಂಬರಿ ಸಿಂಧು ಭಾರ್ಗವ್ ಕನಸು ಕಂಗಳ ಚೆಲುವೆ ನಾನು ಬರುವೆನೆಂದು ಹೋದೆ ನೀನು ಮುಗಿಲು ತುಂಬ ಬೆಳ್ಳಿ ಮೋಡ ಕರಗಿ ಬೀಳೋ ಹನಿಯ ನೋಡ ಕಂಬನಿಯ ಒರೆಸುವವರಿಲ್ಲ ಮನದ ಮಾತಿಗೆ ಕಿವಿಗಳಿಲ್ಲ ಹಾರೋ ಹಕ್ಕಿಗೂ ಇದೆ ಗೂಡು ಪ್ರೀತಿ ಹಕ್ಕಿಗಿಲ್ಲಿ ಗೂಡು ಇಲ್ಲ ಒಂಟಿ ಮನಕೆ ಜೊತೆಯಾದೆ ನೀನು ನಗುವ ನೀಡಿ ಹೋದೆಯೇನು ಮಾತು ಮರೆತ ಮನವು ನನ್ನದು ಮಾತು ಕಲಿಸಿ ನಡೆದೆ ನೀನು ಹತ್ತು ಹದಿನಾರು ಕನಸುಗಳು ಮತ್ತೆ ಮೂರು ನನಸುಗಳು ಸುತ್ತ ನಗುವ ಸುಮಗಳು […]

ಕಾವ್ಯಯಾನ

ಗಝಲ್ ವಿನಿ ಬೆಂಗಳೂರು ಪ್ರಕೃತಿಯೇ ತಾನಾಗಿ ಸೌಂದರ್ಯ ತುಂಬಿದವಳು ತಾಯಿ ಭೂಮಿಯೇ ಅವಳಾಗಿ ಭಾರವನು ಹೊತ್ತವಳು ತಾಯಿ ಸಾವಿಗೂ ಹೆದರದೆ ಹೆರಿಗೆ ನೋವ ನುಂಗುವಳು ತಾಯಿ ಸಾವಿರ ಕನಸು ಕಂಡು ಮಗುವಿನ ಒಳಿತ ಬಯಸುವವಳು ತಾಯಿ ಭವಿಷ್ಯದ ಉತ್ತಮ ವ್ಯಕ್ತಿಯಾಗಲು ಶ್ರಮಿಸುವಳು ತಾಯಿ ಅಕ್ಷರೆ ಪ್ರೀತಿ ಮಮತೆಯ ಧಾರೆ ಎರೆದು ಬೆಳೆಸುವಳು ತಾಯಿ ತನ್ನೆಲ್ಲ ನೋವ ಮರೆತು ನಗುತ ಮುದ್ದು ಮಾಡುವವಳು ತಾಯಿ ಕಷ್ಟವೆಲ್ಲವನು ತಾನೆ ಅನುಭವಿಸುತ ತನ್ನ ಕುಡಿಗಾಗಿ ದುಡಿದವಳು ತಾಯಿ ತನ್ನೆಲ್ಲ ವಾತ್ಸಲ್ಯವನು ಉಣಿಸಿ […]

ಕಾವ್ಯಯಾನ

ವೈರಾಣು-ಪರಮಾಣು ಉಮೇಶ್ ಮುನವಳ್ಳಿ ಕೆಟ್ಟು ಕೆರವಾದ ಮನಸ್ಥಿತಿಯ ಗುಟ್ಟು, ರಟ್ಟು! ಜತನಮಾಡಿ ಇಟ್ಟಿದ್ದು, ಹಿಡಿ ಹಿಟ್ಟು, ಹಾಲು, ಔಷಧಿ, ಸೋಪು, ಸ್ಯಾನಿಟೈಸರು. ಬೀದಿಗೆ ಬಿದ್ದಿದ್ದು, ಲಿಪ್‌ಸ್ಟಿಕ್, ಪೌಡರ, ಪೇಂಟು, ಫ್ರೆಶ್ನರು! ಗುಡಿ-ಗುಂಡಾರ, ಮಸೀದಿ, ಚರ್ಚು ಸ್ಥಬ್ದ ಅರಿವಿನ ಆಸ್ಧಾನದಲಿ ಮನಸ್ಸು ನಿಶ್ಶಬ್ದ! ತಪ್ಪಿನ ಅರಿವು, ಒಪ್ಪಿನ ಹುಡುಕಾಟ, ಒಪ್ಪತ್ತಿನ ಊಟದ ಹೊಂದಾಣಿಕೆ. ಬೆಳೆದವನ ಮಾಲು, ಮನೆ ಬಾಗಿಲಿಗೆ! ದಲ್ಲಾಳಿಗಳ ಗಲ್ಲಾಪೆಟ್ಟಿಗೆ ಲೂಟಿ. ದೂರದ ಪಯಣ, ದೂರ, ಒಬ್ಬರಿಗೊಬ್ಬರು ದೂರ ದೂರ. “ನಮ್ಮ ಹಳ್ಳಿ ಊರ ನಮಗ ಪಾಡ, […]

ಕಾವ್ಯಯಾನ

ಗಝಲ್ ಎ.ಹೇಮಗಂಗಾ ಜುಲ್ ಕಾಫಿ಼ಯಾ ಗಜ಼ಲ್………….. ಜಂಜಾಟಗಳ ಒತ್ತಡವೇ ನಿಜಬದುಕೆಂದು ನೆಮ್ಮದಿಯನ್ನೇ ಮರೆತೆ ಅಜ್ಞಾನದ ಕತ್ತಲಕೂಪವೇ ಜಗತ್ತೆಂದು ಜ್ಞಾನಜ್ಯೋತಿಯನ್ನೇ ಮರೆತೆ ಎದುರಾದ ನೂರು ಸಂಕಷ್ಟಗಳು ತಾತ್ಕಾಲಿಕವೆಂಬ ಅರಿವು ಇರಬೇಕಿತ್ತು ನಿನ್ನ ದುಃಖ ವೇದನೆಯೇ ಎಲ್ಲಕಿಂತ ಮಿಗಿಲೆಂದು ನಗುವುದನ್ನೇ ಮರೆತೆ ದ್ವೇಷ ಮದ ಮತ್ಸರಗಳ ಜ್ವಾಲಾಮುಖಿ ಸುಡುವುದಿಲ್ಲವೇ ನಿನ್ನನ್ನು ? ಇತರರ ಅವನತಿಯಲ್ಲೇ ನಲಿವಿದೆಯೆಂದು ಪ್ರೀತಿಯನ್ನೇ ಮರೆತೆ ಮೂರು ದಿನದ ಬಾಳಿನಾಟದಿ ಯಾರೂ ಯಾವುದೂ ಶಾಶ್ವತವಲ್ಲ ಸ್ವಾರ್ಥ ಲಾಲಸೆಯಲ್ಲೇ ಏಳಿಗೆಯಿದೆಯೆಂದು ನಿಸ್ವಾರ್ಥವನ್ನೇ ಮರೆತೆ ಎಚ್ಚರಿಸಬೇಕಿತ್ತು ನಿನ್ನ ಮನಸ್ಸಾಕ್ಷಿ ಎಂದೂ […]

ಕಾವ್ಯಯಾನ

ನೀರೊಲೆಯ ಮೇಲೆ. ಶಶಿಕಲಾ ವೀ ಹುಡೇದ ನೀರೊಲೆಯ ಮೇಲೆ. ಸೀಗೆಯ ಹೊಗರು ಸುಡುಸುಡು ನೀರು ಬೆರಕೆಯ ಬೇಡುವ ಹೊತ್ತು ಸುಣ್ಣ ನುಂಗಿದ ಹೊಗೆಸುತ್ತಿದ ಗೋಡೆಗಳ ಮೇಲೆ ನೀರ ಹನಿಗಳದೇ ಚಿತ್ತಾರ ಯಾವ ಯುದ್ಧದ ಕತೆಯ ಹೇಳುತ್ತಾವೋ ನೋಡುವ ಕಣ್ಣುಗಳಿಗೆ ಒಂದೊಂದು ರೀತಿಯ ಅರ್ಥ ಉಸಿರಾಡಲು ಒದ್ದಾಡುವ ಒಂದೇ ಒಂದು ಕಿಂಡಿಯ ಕುತ್ತಿಗೆಯ ಮಟ್ಟ ಧೂಳು ಮಸಿಯದೇ ಕಾರುಬಾರು ಹೆಸರೂ ನೆನಪಿರದ ಮುತ್ತಜ್ಜ ಬುನಾದಿ ಹಾಕಿದ ಈ ಬಚ್ಚಲು ಮನೆ ಯಾವ ವಾರಸುದಾರನ ಅವಧಿಗೆ ಏನನು ಸುಖ ಕಂಡಿದೆಯೋ […]

ಕಾವ್ಯಯಾನ

ಪ್ರೇಮದ ಹನಿಗಳು ನಾಗರಾಜ ಹರಪನಹಳ್ಳಿ ಬಿಕೋ ಎನ್ನುವ ರಸ್ತೆಗಳ ಮಧ್ಯೆಯೂ ನಿನ್ನದೇ ಧ್ಯಾನ ಎಂದಾದರೆ ಅದೇ ಪ್ರೀತಿ ; ಮತ್ತಿನ್ನೇನು ಅಲ್ಲ… ಜನ ಮನೆ ಸೇರಿದರು ಸರ್ಕಾರದ ಆದೇಶದಿಂದ ಪ್ರೀತಿಯ ಬಂಧಿಸುವುದು ಕಷ್ಟ ಉರಿ ಬಿಸಿಲಲ್ಲೂ ಮೈತುಂಬ ಹೂ ಹೊದ್ದ ಮರ ನೆರಳ ಚೆಲ್ಲಿ ವಿರಹಿಗೆ ಸಾಂತ್ವಾನ ಹೇಳಿತು ನನ್ನ ಕೂಗಾಟ, ಚರ್ಚೆ ವಾದ ಎಲ್ಲವೂ ನಿನಗಾಗಿ ಪ್ರೇಮ ಹುಲುಮಾನವರಿಗೆ ಅರ್ಥವಾಗುವುದಿಲ್ಲ ದೂರದಿಂದ ಸಂತೈಸುವ ನೀನು ನನ್ನ ತಾಯಿ ಪ್ರೇಮಿ, ಕಡು ವ್ಯಾಮೋಹಿ ಕೊಂಚ ಅಸಮಧಾನಿ ಸಹಜ […]

ಅನುವಾದ ಸಂಗಾತಿ

ನನ್ನ ಪ್ರಿಯ ಕವಿ ಮೂಲ: ಸರ್ಬಜೀತ್ ಗರ್ಚ ಕನ್ನಡಕ್ಕೆ:ಕಮಲಾಕರ ಕಡವೆ ಬೇಕಾದರೆ ಅವುಗಳನ್ನು ಕವಿತೆ ಎನ್ನಬೇಡಆದರೆ ಬರೆವೆಯಾದರೆ ಬರೆಜೇಬಿನ ಕತ್ತಲೆಗೆ ಬೆಳಕ ಚೆಲ್ಲದಿದ್ದರೂಕೊಂಚ ಬೆಚ್ಚಗಿರುಸುವಂತಸಾಲುಗಳನ್ನು ಹೇಗೆ ನೆಲಹಾಸಿನ ಮೇಲೆ ಬೀಳುವ ಬಿಸಿಲಕೋಲುವರ್ಷಾನುಗಟ್ಟಲೆ ಮುಚ್ಚಿದ್ದ ಕೋಣೆಗೂಹೊರಗೆ ಬೆಳಗುತ್ತಿರುವ ಸೂರ್ಯನಕಾಣುವ ತವಕವನ್ನು ಕೊಟ್ಟಂತೆ ಅಂತಹ ಸಾಲುಗಳುಜೇಬಿನಲ್ಲಿಯೇ ಇದ್ದು ಇದ್ದುಒಂದು ದಿನ ಪಕಳೆಯಾಗಿ ಬಿಡುವವು ಹಾಗೂ ಸೂರ್ಯನಾಗುವನು ಒಂದು ಗುಲಾಬಿಹರಡಿ ಅದರೊಳಗೆಲ್ಲ ತನ್ನ ಕಿರಣ ಕಾಗದ ಅಥವಾ ಜೇಬು ಇಲ್ಲದೆಯೂಅವು ದಿನದಿನವೂ ಬೆಳಗುವವುಅನುದಿನವೂ ನಗುವವು *********

ನಾನು ಓದಿದ ಪುಸ್ತಕ

ಒಡಲಾಳ ದೇವನೂರು ಮಹಾದೇವ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಕೆಲವು ಕಥೆಗಳು ಸಾರ್ವಕಾಲಿಕ. ಈ ಕೊರೋನಾ ರಜೆಯಲ್ಲಿ ನಾನು ಓದಿದ ಈ ಕಥೆ ತನ್ನ ಒಡಲಾಳದ ಬದುಕನ್ನ ತುಂಬ ಅದ್ಭುತವಾಗಿ ಹೇಳುವ ‘ದೇವನೂರು ಮಹಾದೇವ’ ಅವರ ರಚಿತ ‘ಒಡಲಾಳ’. ನಾನು ಚಿಕ್ಕವಳಿದ್ದಾಗ ಅಜ್ಜಿ ಮನೆ ಮೂಡಿಗೆರೆಯ ಹತ್ತಿರದ ಹೊಸಮನೆಯಲ್ಲಿ ಕೆಲಕಾಲ ಇದ್ದೆ. ನಾವು ಅವರನ್ನು ‘ಹೊಸಮನೆ ಅಜ್ಜಿ’ ಎಂದೇ ಸಂಬೋಧಿಸುತ್ತಿದ್ದದ್ದು. ಆಗ ಅಜ್ಜಿ ಅವರ ಕಷ್ಟ ಕಾಲದ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದರು. ಒಂದೊತ್ತಿನ ಊಟಕ್ಕೂ ಕಷ್ಟಪಡುವಂತ ಕಾಲ ಅದು. ಅವ್ರ […]

Back To Top