ಕಾವ್ಯಯಾನ

ಕಾವ್ಯಯಾನ

ಕಾಲದ ಕರೆ ಡಾ.ಪ್ರಸನ್ನ ಹೆಗಡೆ ಮನೆಯ ಒಳಗೇ ಉಳಿಯಬೇಕಾಗಿದೆ ನಮ್ಮನ್ನ ನಾವೇ ಉಳಿಸಿಕೊಳಬೇಕಾಗಿದೆ ನಮ್ಮ ನಂಬಿದವರ ನಾವೇ ರಕ್ಷಿಸಿಕೊಳಬೇಕಾಗಿದೆ ಒಳಗಿದ್ದುಕೊಂಡೇ ಸಮರ ಸಾರ ಬೇಕಾಗಿದೆ ಮುಖಗವಚ ಧರಿಸಬೇಕಾಗಿದೆ ವೈರಾಣುವ ದೂರವೇ ಇಡಬೇಕಾಗಿದೆ ನಡುನಡುವೆ ಅಂತರ ಕಾಪಾಡಿಕೊಂಡು ನಮ್ಮ ನಮ್ಮ ಅಂತಸ್ಥ ಮೆರೆಯಬೇಕಾಗಿದೆ ಕಾಲ್ಗಳ ಕಂಬವಾಗಿಸಿಕೊಂಡು ಇದ್ದಲ್ಲೇ ಇರಬೇಕಾಗಿದೆ ಮನಸ್ಸನ್ನು ಕಲ್ಲಾಗಿಸಿಕೊಂಡು ಯೋಚಿಸಬೇಕಾಗಿದೆ ಶಿರವನ್ನೇ ಹೊನ್ನಗಲಶವಾಗಿಸಿಕೊಂಡು ಆತ್ಮಜ್ಯೋತಿಯ ಬೆಳಗಬೇಕಾಗಿದೆ ಮನದಿ ಕುಣಿವ ಮಂಗಗಳ ಹಿಡಿದು ಉದ್ಯಾನವನ ಉಳಿಸಿಕೊಳಬೇಕಾಗಿದೆ ಉಳಿದಿದ್ದೆಲ್ಲವ ನಾಳೆಗೆ ಮುಂದೂಡಿ ಈ ದಿನವ ಹೇಗೋ ದೂಡಬೇಕಾಗಿದೆ ಹೊರಗೆ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್. ಡಿ ಅಭಿಮಾನದ ಎದೆಪುಟದಲಿ ಅನುಮಾನದ ಸಾಲುಗಳೇತಕೆ ಗೆಳೆಯಾ ಆತ್ಮಸಾಕ್ಷಿಯ ದೀಪದೆದುರಲಿ ಅಂಧಕಾರದ ಚಿಂತೆಗಳೇತಕೆ ಗೆಳೆಯಾ ಅಂಗೈಯ್ಯಲೇ ಮಾಣಿಕ್ಯವಿದ್ದರೂ ಅದರಾಕರ್ಷಿತರ ಗೊಡವೆಗಳೇತಕೆ ಒಡೆಯಾ ನಿನ್ನಂತರಂಗದೊಳು ನಾನು ಪಣತಿಯಾಗಿದ್ದರೂ ಭ್ರಮೆಗಳೇತಕೆ ಗೆಳೆಯಾ ಹದವರಿತು ಹೆಪ್ಪಾಗಿರುವ ಮೊಸರಿನಲಿ ಕಲ್ಲ ಹುಡುಕುವುದೇತಕೆ ಇನಿಯಾ ಒಳಗವಿತಿರುವ ಕಂಪಿನ ಘ್ರುತವಿದ್ದರೂ ನಾರುವ ಭಾವಗಳೇತಕೆ ಗೆಳೆಯಾ ನೋವುನಲಿವಲೂ ಜೊತೆಯಾಗಿ ಹಿಂಬಾಲಿಸುವ ನೆರಳ ಬಾಧಿಸುವುದೇತಕೆ ಹೃದಯಾ ನೆರಳಿಗೆ ನಿನ್ನ ಹೊರತು ಮತ್ಯಾವ ಆಸರೆ, ನಿನಗೆ ಭಯಗಳೇತಕೆ ಗೆಳೆಯಾ ದುಃಖಗಳ ಮನದ ಮರುಭೂಮಿಯಲಿ ಬಿಸಿಗಾಳಿಯಾಗಿ ಸುಳಿಯುವುದೇತಕೆ […]

ವಿಜ್ಞಾನ

ವಿಜ್ಞಾನದ ಕ್ಷಿತಿಜ, ಮನುಕುಲದ ಪ್ರಗತಿ ವಿಸ್ತರಿಸುವ ಮೈಕ್ರೊವೈಟಾ         ವಿಶೇಷವಾದ ಜ್ಞಾನವೇ ವಿಜ್ಞಾನ.  ಹೊಸ ಸಂಶೋಧನೆಗಳು, ಹೊಸ ಆವಿಷ್ಕಾರಗಳಿಗೆ  ಮೂಲ ಕಾರಣ, ಕನಸನ್ನು ಕಾಣುವ  ಮತ್ತು ಅದನ್ನು  ನನಸಾಗಿಸುವ  ತೀವ್ರ ತುಡಿತ ಜೊತೆಗೆ ನಿರಂತರ  ಪ್ರಯತ್ನ. ಹಕ್ಕಿಗಳಂತೆ ತಾನು ಆಕಾಶದಲ್ಲಿ  ವಿಹರಿಸಬೇಕೆಂಬ ಕನಸನ್ನು ಕಂಡು ನನಸಾಗಿಸಿದವರಿಂದಾಗಿ ಇಂದು ವಾಯುಯಾನ ಸಾಧ್ಯವಾಗಿದೆ. ಸ್ಥೂಲ  ಜಗತ್ತೇ ಸರ್ವಸ್ವ ಎಂದುಕೊಂಡಲ್ಲಿಂದ  ನ್ಯಾನೋ ತಂತ್ರಜ್ಞಾನದ ಬಳಕೆಯ  ದಿನಗಳು ಬಂದಿವೆ. ಇಡೀ ವಿಶ್ವವು  ತರಂಗರೂಪಿ ಅಸ್ತಿತ್ವವೆಂಬ ಅರಿವಿನಿಂದಾಗಿ, ವಿಜ್ಞಾನದ  ಮೂಲ ನಂಬಿಕೆಗಳೂ ಬದಲಾಗುತ್ತಿವೆ. ಪ್ರೋಟೋನ್, […]

ಕಾವ್ಯಯಾನ

ಗಝಲ್ ವೆಂಕಟೇಶ್ ಚಾ ಭವಿಷ್ಯದ ಬದುಕಿನ ಚಿತ್ರಪಟ ಹಸಿರಾಗಿದೆ ನಾವಿಬ್ಬರೂ ಜೊತೆಯಾದಾಗ ನಿಸರ್ಗವು ಹೊಸ ಬದುಕಿಗೆ ಸಾಕ್ಷಿಯಾಗಿದೆ ನಾವಿಬ್ಬರೂ ಜೊತೆಯಾದಾಗ|| ಬಾಹುಗಳ ಬಂಧನವು ಮತ್ತಷ್ಟು ಗಟ್ಟಿಗೊಂಡಿದೆ ತಂಗಾಳಿಯ ತಂಪಿನಲಿ ಮಣ್ಣಿನ ಕಂಪಿಗೆ ಮನಸ್ಸು ಹೂವಾಗಿದೆ ನಾವಿಬ್ಬರೂ ಜೊತೆಯಾದಾಗ|| ಹೆಜ್ಜೆಗಳು ಜೊತೆಯಾಗಿ ಲಜ್ಜೆಯಿಲ್ಲದೆ ಸುಂದರ ಪಯಣ ಬೆಳೆಸಿವೆ ಮುಂಗಾರು ಮಳೆಗೆ ದಾರಿಯು ಹಸನಾಗಿದೆ ನಾವಿಬ್ಬರೂ ಜೊತೆಯಾದಾಗ || ನಂಬಿಕೆಯ ಕೊಡೆಯೊಂದು ರಕ್ಷಣೆಯ ಹೊಣೆಯನ್ನು ಹೊತ್ತಿದೆ ಬಹುದಿನಗಳ ಕನಸು ಹಣ್ಣಾಗಿ ನನಸಾಗಿದೆ ನಾವಿಬ್ಬರೂ ಜೊತೆಯಾದಾಗ || ಅಗೋ,ಮುಂಬರುವ ದಿನಗಳ ತುಂಬಾ […]

ಜಾನಪದ

ಗರ್ದಿ ಗಮ್ಮತ್ತು ಅಳಿದು ಹೋದ ಜಾನಪದ ಕಲೆ ನಮ್ಮ ಎಳೆಯ ಕಾಲದ ‘ಗರ್ದಿ ಗಮ್ಮತ್ತು’..! ವಿಧಾನಸೌಧ ನೋಡ… ಹೇಮಾ ಮಾಲಿನಿ ನೋಡ… ದುರ್ಗಪ್ಪನ; ‘ಗರ್ದಿ ಗಮ್ಮತ್ತು’ ನೋಡ..!! 1970 ಮತ್ತು 1980ರ ಆಸುಪಾಸಿನಲ್ಲಿ ಮನರಂಜನೆ ಎಂಬುದೇ ವಿರಳವಾಗಿತ್ತು. ಆಗ ಸಿನೆಮಾಗಳು ಹಾಗೂ ವರ್ಷಕ್ಕೊಮ್ಮೆ ಜರುಗುವ ಜಾತ್ರೆ, ಹಬ್ಬಹರಿದಿನಗಳು ಇವುಗಳೇ ಮನರಂಜನೆಯಾಗಿದ್ದವು… ಆ ಸಮಯದಲ್ಲಿ ಪ್ರತಿ ಜಾತ್ರೆಯಲ್ಲಿ ತಪ್ಪದೇ ಕಾಣುತ್ತಿದ್ದ ಒಂದು ವಿಶೇಷ ಅಂದರೆ ‘ಗರ್ದಿ ಗಮ್ಮತ್ತು’. ಮೊಬೈಲ್, ವಾಟ್ಸ್ ಅಪ್‌ನಲ್ಲಿ ಕಳೆದುಹೋದ ಇಂದಿನ ಬಹುತೇಕ ಮಕ್ಕಳಿಗೆ ‘ಗರ್ದಿ […]

ಕಾವ್ಯಯಾನ

ಗೆರೆಗಳು ಎನ್.ಆರ್.ರೂಪಶ್ರೀ, ಬದುಕಿನ ಗೆರೆಗಳು ಒಂದೊಂದಾಗಿ ಮೂಡುತ್ತಲೇ ಹೋಗುತ್ತವೆ ಅಳಿಸಲಾಗದ ಗೆರೆಗಳು ಅಳಿಸಿದರೂ ಅಳಿಸಲಾಗದ ಗೆರೆಗಳು ಗೆರೆಗಳು ಗೆರೆಗಳಾಗಿಯೇ ಇರಬೇಕಾದ್ದು ಇರದೇ ಇರುವುದು ಗೆರೆಗಳ ನಡುನಡುವೆ ಚುಕ್ಕಿಚಿತ್ತಾರಗಳು ಜೀವನದ ಗೆರೆಗಳಲ್ಲಿ ಎಲ್ಲವೂ ಎಲ್ಲರದ್ದಾಗಿದ್ದರೂ ಯಾರದ್ದು ಯಾವುದು ಆಗಿರುವುದಿಲ್ಲ. ಗೆರೆಗಳೇ ಹಾಗೆ ಬದುಕಿನಲ್ಲಿ ಎಳೆಎಳೆಯಾಗಿ ಬಂದು ಎಳೆಯುತ್ತವೆ ಗೆರೆಗಳಿಲ್ಲದ ಬದುಕು ಬದುಕು ಅಲ್ಲ ಬದುಕಿನಲ್ಲಿ ಗೆರೆಗಳು ಇರಬೇಕೆಂದೇನಿಲ್ಲ ಬದುಕು ಬದುಕೇ ಗೆರೆಗಳು ಗೆರೆಗಳೇ ತಾನೇ. ******

ಕಾವ್ಯಯಾನ

ಬಂಧಿ ಎನಿಸಿಲ್ಲ ಬಂಧನದಲ್ಲಿ ಜಿ.ಲೋಕೇಶ್ ನಿನ್ನ ನೆನಪುಗಳಲ್ಲಿ ಬಂಧಿಯಾದ ನನಗೆ ಗೃಹ ಬಂಧನವು ಕಷ್ಟವೇನು ಅನಿಸುತ್ತಿಲ್ಲ ಏಳಿ, ಮಲಗಲು,.ನಾಲಿಗೆ ಎದೆಯ ಹೆಸರನ್ನು ಸಾರಿ ಸಾರಿ ಹೇಳುವಾಗ ಬಂಧನವು ಬಂಧಿ ಎನಿಸಿಲ್ಲ ಪ್ರತಿ ಮೂಲೆ ಮೂಲೆಯಲ್ಲಿ ನಿನ್ನೂರಿನ ನೆನಪುಗಳು ಜೊತೆಯಿರುವಾಗ ಬಂಧನವು ಬಂಧಿ ಎನಿಸಿಲ್ಲ ***** ಕೊಡಿಸಿದ ಅಷ್ಟು ವಸ್ತುಗಳು ಹೋದ ಪ್ರತಿ ಜಾಗಗಳಿಗೆ ಕರೆದೊಯ್ಯುತಿರುವಾಗ ಬಂಧನವು ಬಂಧಿ ಎನಿಸಿಲ್ಲ ಎಷ್ಟೋ ಭಾವಗಳನ್ನು ಪದಗಳಲ್ಲಿ ಕವಿತೆಯಾಗಲು ಪೋಣಿಸುತಿರುವಾಗ ಬಂಧನವು ಬಂಧಿ ಎನಿಸಿಲ್ಲ ****

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-3 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಅರಿವು ವಿಸ್ತರಿಸಲಿ.. ಮನೆ ಬಾಗಿಲು ದಾಟಬೇಡಿ.. ಮನೆಯೊಳಗೇ ಸುರಕ್ಷಿತವಾಗಿರಿ ಎಂದಕೂಡಲೇ ಮನಸ್ಸು ತರಾವರಿ ಚಿಂತಿಸುತ್ತದೆ. ಇಷ್ಟಪಟ್ಟು ಸಾಲ ತೆಗೆದು, ಕಷ್ಟಬಿದ್ದು ಕಟ್ಟಿಸಿದ ನಮ್ಮ ಮನೆಯೂ ನಮಗೆಸೆರೆಮನೆಯೆನಿಸುತ್ತದೆ. ಯಾಕೆ ಹೀಗೆ? ಯಾವುದು ಬೇಡ ಎಂದು ಹೇಳುತ್ತಾರೆಯೋ ಅದನ್ನು ಮೀರುವುದು ಸಾಹಸ… ಆದರೆ ಈಗ ಅದು ದುಃಸ್ಸಾಹಸ. ವಿವೇಚನೆ ಇಲ್ಲದ ನಡೆ. ಸುರಕ್ಷಿತತೆಯ ಪ್ರಶ್ನೆ ಎದ್ದಾಗ ಅದಕ್ಕೇ ನಮ್ಮ ಮೊದಲ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್. ಡಿ. ಸರಿರಾತ್ರಿಯ ನಿದಿರೆಯನ್ನು ಕಸಿದು ಮನವು ಕೇಳುತ್ತದೆ ನಿನ್ನನ್ನೆ ಒತ್ತಿದರು ಮುಚ್ಚದ ರೆಪ್ಪೆಯೊಳಗೆ ಕಂಗಳು ಅರಸುತ್ತವೆ ನಿನ್ನನ್ನೆ ಸಂತೆಯೊಳಗಿದ್ದರು ಏಕಾಂತದ ಭಾವ ಕವಿದು ವಿರಹ ಕಾಡಿದೆ ಬಂದಪ್ಪಿ ಬಿಡು ದಾಹ ತೀರುವಷ್ಟು ಬೆಳಗೊಳಗೆ ಬೇಡುತ್ತದೆ ನಿನ್ನನ್ನೆ ಹೃದಯದೊಳಗೆ ಅಡಗಿಸಿಟ್ಟ ಒಲವು ಹೊರಗಿಣುಕಿ ನೋಡುತ್ತಿದೆ ಎಲ್ಲಾದರು ಮಿಡಿಯಬಹುದೇ ಅಂತರಂಗ ತುಡಿತ ಕಾಯುತ್ತದೆ ನಿನ್ನನ್ನೆ ಸೆರೆಮನೆಯ ಬದುಕು ಸ್ವಚ್ಛಂದ ಹಾರಾಡಲು ಹಾತೊರೆಯುತ್ತಿದೆ ವಂಚನೆಯಿಂದ ನ್ಯಾಯ ಬಯಸಿ ನಂಬಿಕೆಯಲ್ಲಿ ಹಂಬಲಿಸುತ್ತದೆ ನಿನ್ನನ್ನೆ ಪ್ರತಿ ಇರುಳು ಹೊಂಗನಸಿನೊಡನೆ ಹತಾಶೆಗೊಳ್ಳುತ್ತಿವೆ […]

ಕವಿತೆ ಕಾರ್ನರ್

ಇರುಳ ಹೊಕ್ಕುಳ ಸೀಳಿ ಸುಡುಕೆಂಡದ ಪಾದಗಳ ಮೆಲ್ಲನೂರಿ ಅಂಬೆಗಾಲಿಟ್ಟವನ ಸ್ವಾಗತಕೆ ಊರಕೇರಿಯ ಕೋಳಿಗಳು ಕೂಗು ನಿಲ್ಲಿಸಿ ಹಸಿದ ನಾಯಿಗಳು ಊಳಿಟ್ಟು ಮಲಗಿದ್ದ ಕಂದಮ್ಮಗಳು ಕಿಟಾರನೆ ಕಿರುಚಿದಂತೆ ಅಳತೊಡಗಿ ಊರೂರೇ ತೆರೆದ ಮಶಾಣದಂತೆ ಬಾಸವಾಗಲು ಮಾರ್ಚುರಿಯೊಳಗೆ ಕೊಯಿಸಿಕೊಂಡ ಹೆಣಗಳು ವಾರಸುದಾರರಿರದೆ ಪೋಲಿಸರ ಕಾವಲಲಿ ಬೇಯುತ್ತ ಹೆರಿಗೆ ವಾರ್ಡಿನ ನರ್ಸಮ್ಮಗಳು ಅತ್ತಿಂದಿತ್ತ ಇತ್ತಿಂದತ್ತ ಓಡಾಡುವ ತರಾತುರಿಯಲ್ಲಿ ಎಂತ ಮಗು ಕಣ್ಣರಳಿಸುವ ಗಂಡಸಿನ ಕಣ್ಣೊಳಗೆ ಬೆಳಕೊಂದು ಮೂಡಿದಂತಾಗಿ ಗುಳೆಹೊರಟ ಪರದೇಸಿ ಗುಂಪಿನಲ್ಲಿನ ಹರಯದ ಹೆಣ್ಣುಗಳ ಬೇಟೆಯಾಡಲು ಹವಣಿಸುವ ತಲೆಹಿಡುಕರ ಹಿಂದೆ ಸಾಲುಗಟ್ಟಿನಿಂತ […]

Back To Top