ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಸಂಪಾದಕೀಯ

ಗೆಳೆಯರೆ, ಸಂಗಾತಿ ಪತ್ರಿಕೆಯನ್ನು ಕೇವಲ ರಂಜನೆಗಾಗಿ ರೂಪಿಸಿಲ್ಲ-ಜೊತೆಗೆ ಕೇವಲ ಕತೆ-ಕತೆಗಳಿಗೆ ಮಾತ್ರ ಮೀಸಲಿರಿಸಿಯೂ ಇಲ್ಲ.ಪತ್ರಿಕೆಯಲ್ಲಿ ಪ್ರಖರವಾದ ವೈಚಾರಿಕ ಲೇಖನಗಳನ್ನು,ಸಮಕಾಲೀನ ಸಮಸ್ಯೆಗಳ ಬಗ್ಗೆ ವಸ್ತುನಿಷ್ಠ ವಿಮರ್ಶಾತ್ಮಕ, ಬರಹಗಳನ್ನು ಪ್ರಕಟಿಸಬೇಕೆಂಬುದು ನಮ್ಮಬಯಕೆ. ಈ ವಿಷಯಗಳಬಗ್ಗೆ ಬರೆಯುವವರು ಸಾಕಷ್ಟು ಜನ ಲೇಖಕರಿದ್ದರೂ ಅವರಿನ್ನೂ ನಮ್ಮ ಪತ್ರಿಕೆಗೆ ಬರೆಯುವ ಮನಸ್ಸು ಮಾಡಿಲ್ಲ. ಬಹುಶ: ಪತ್ರಿಕೆಯ ನಡೆಯನ್ನು ಕಾದುನೋಡುವ ಉದ್ದೇಶವಿದ್ದರೂ ಇರಬಹುದೇನೊ. ಈ ದಿಸೆಯಲ್ಲಿ ಬಹಳಷ್ಟು ಲೇಖಕರನ್ನು ಈಗಾಗಲೇ ಸಂಪರ್ಕಿಸಿ ಬರೆಯಲು ಕೋರಿದ್ದೇನೆ.ಜನಪ್ರಿಯತೆಗಾಗಿ ಸಂಗಾತಿ ತನ್ನಗುಣಮಟ್ಟ ಮತ್ತು ಸ್ವಂತಿಕೆಯನ್ನುಯಾವತ್ತಿಗೂ ಬಿಟ್ಟು ಕೊಡುವುದಿಲ್ಲೆಂದು ಈ ಮೂಲಕ ತಮಗೆ ಮನವರಿಕೆ ಮಾಡಿಕೊಡುತ್ತಿದ್ದೇನೆ. ಅದಕ್ಕೆ ತಕ್ಕಂತೆ ಹಿರಿಯ ಬರಹಗಾರರುಸಹ ನಮಗೆ ಬರೆಯುತ್ತಾರೆಂದು ಆಶಿಸುತ್ತೇನೆ ಕು.ಸ.ಮಧುಸೂದನರಂಗೇನಹಳ್ಳಿ

ಸಂಪಾದಕೀಯ Read Post »

ನಿಮ್ಮೊಂದಿಗೆ

ಕಾವ್ಯಯಾನ

ದಾರಿಯುದ್ದಕ್ಕೂ…… ಮುಗಿಲಕಾವ್ಯ ನೀ ಬರುವ ದಾರಿ ಉದ್ದಕ್ಕೂ ಒಲವಿನ ಹೂ ಹಾಸಿ ಗರಿಗೆದರಿದ ನನ್ನೊಳಗಿನ ಹೃದಯದ ಭಾವಗಳನ್ನು,,, ಒಪ್ಪವಾಗಿ ಜೋಡಿಸಿಕೊಳ್ಳುತ್ತಾ ಕಣ್ಣು ಕೀಲಿಸುತ್ತೇನೆ,, ಹಾದಿಯೂ ಒಮ್ಮೊಮ್ಮೆ ಸಿಟ್ಟಿಗೇಳುತ್ತದೆ ಅಲ್ಲಲ್ಲ ಕರುಬುತ್ತದೆ ನಿನ್ನ ಮೇಲಿನ ನನ್ನೊಲವಿನ ಕಂಡು ಇದರ ಮತ್ಸರ ಎಷ್ಟಿದೆ ಗೊತ್ತಾ? ಬೇಕೆಂತಲೇ ಭಾರವಾಗಿ ದೂರವಾಗಿ ಕ್ಷಣಗಳನ್ನು ಯುಗಗಳಾಗಿ ಮಾಡುತ್ತಾ,,, ಮತ್ತಷ್ಟು ನನ್ನ ಕಾಯಿಸಲು ಶುರುವಿಟ್ಟುಕೊಳ್ಳುತ್ತದೆ ಮೊದಮೊದಲಿಗೆ ನಾನು ಜಿದ್ದಿಗಿಳಿಯುತ್ತೇನೆ ಸೋಲಲಾರೆ ಎಂದೂ ನಿನ್ನ ಕಾಣುವ ತವಕ ಮೂಡಿದಂತೆಲ್ಲಾ ನಾನೇ ನಾನಾಗಿ ಸೋತುಬಿಡುತ್ತೇನೆ; ನಿನ್ನ ಸಂಧಿಸುವ ಗಳಿಗೆಯ ಮುಂದೆ ,,ನನ್ನ ಜಿದ್ದು ಮಂಡಿಯೂರಿ ಬಿಡುತ್ತದೆ,, ನಿನಗೋಸ್ಕರ ತಾನೇ ಎಂಬ ಭಾವ ಮೂಡಿ ಮನ ಸಮಾಧಾನಿಸಿಕೊಂಡು; ದಾರಿ ಉದ್ದಕ್ಕೂಕಣ್ಣು ಕೀಲಿಸುತ್ತದೆ ನೀನು ಈ ಹಾದಿಯಿಂದ ಎಂದೋ ಕವಲೊಡೆದು ಬಹುದೂರ ಸಾಗಿದ್ದರೂ ಮತ್ತೆ ದಾರಿಯಲಿ ಒಲವಿನ ಹೂ ಹಾಸಿ ಪ್ರೀತಿಸುವುದಷ್ಟೆ ಗೊತ್ತಿರುವ ಈ ಮನಸ್ಸು,,,, ದಾರಿ ಉದ್ದಕೂ ಕಣ್ಣುಕೀಲಿಸುತ್ತದೆ. ===========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಿನುಗುವ ನಕ್ಷತ್ರ ಚೈತ್ರ ಶಿವಯೋಗಿಮಠ ಅಗೋ…. ಅಲ್ಲಿ ಮಿನುಗುವ ನಕ್ಷತ್ರ ನೀನೇ ಇರಬಹುದು ಅಪ್ಪ! ಪ್ರತಿ ಇರುಳು ಕಾಯುವೆ  ನಿನ್ನ ಬಾಂದಳದಲಿ ಕಾಣಲು! ಮಿಣುಗುವ ಚುಕ್ಕಿ ಸ್ಮೃತಿ  ಪಟಲವ ಕೆಣಕುವುದು! ನೀ ನನ್ನ ಆಡಿಸಿದ್ದು, ಟುವ್ವಿ ಟುವ್ವಿ ಎಂದು ಹಾಡಿದ್ದು ಕಣ್ಮರೆಯಾಗಿ ಕಾಡಿದ್ದು  ಮುಂಜಾನೆಯ ವಿಹಾರಕ್ಕೆ ಹೋಗಿದ್ದು ಸದ್ದು ಮಾಡುತ್ತಾ ಕಾಫಿ ಹೀರಿದ್ದು ಎಲ್ಲವೂ ಕಾಡುವುದು ಅಪ್ಪ! ಈ ನಕ್ಷತ್ರದಂತೆಯೇ ನೀನು ಕತ್ತಲು ಕವಿದಾಗ ದಾರಿ ತೋರುವೆ ಈ ಚುಕ್ಕಿಯಂತೆಯೇ ಆದೆ ನೀನು ಹಗಲೆಂಬ ಸಂತಸದಲಿ ಮಾಯವಾದೆ ಆದರೆ ಇರುಳೆಂಬ ಸಂಕಟದಲಿ ಆಸರೆಯಾಗುವೆ! ಹಗಲಲಿ ಮಾಯವಾದಂತೆನಿಸಿದರೂ  ನೀ ಇಲ್ಲೇ ಇರುವೆ ಕಣ್ಣಿಗೆ ಮಾತ್ರ ಕಾಣಲಾರೆ! ನಿನ್ನಿರುವ ನಾ ಮಾತ್ರ ಗ್ರಹಿಸುವೆ! ಅಪ್ಪ, ಈ ನಕ್ಷತ್ರದಂತೆಯೇ  ಸದಾ ಸಂತಸ ಕೊಡುವವ ನೀ!! =================================== ಪರಿಚಯ: ಮೂಲತಃ ಬಿಜಾಪುರ, ಬೆಂಗಳೂರಿನ ನಿವಾಸಿ.Mtech ಪದವಿಯನ್ನು VTU ವಿಶ್ವವಿದ್ಯಾಲಯದಿಂದ ಪಡೆದು, ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆದರೂ ಪ್ರವೃತ್ತಿಯಲ್ಲಿ ಕವಯಿತ್ರಿ.. ಕಾರ್ಯಕ್ರಮ ನಿರೂಪಣೆ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವರು. ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ಕಾವ್ಯ ಪರೀಕ್ಷೆಯಲ್ಲಿ ಉತ್ತೀರ್ಣ. ಮುದ್ದೇಬಿಹಾಳ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ ಹಾಗೂ ಇನ್ನಿತರ ಕವಿ ಗೋಷ್ಠಿಗಳಲ್ಲಿ ಭಾಗವಹಿಸಿರುವರು. ಅವಧಿ  – ಡಿಜಿಟಲ್ ಮ್ಯಾಗಝಿನ್, ಸುಗಮ – ಬ್ಲಾಗ್ಸ್ಪಾಟ್, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ಪ್ರಜಾಪ್ರಗತಿ, ವಾರ್ತಾಭಾರತಿ, ಕರ್ಮವೀರ ಹಾಗೂ ಜನತಾವಾಣಿ ಪತ್ರಿಕೆಗಳಲ್ಲಿ ಕವನಗಳು ಪ್ರಕಟವಾಗಿವೆ.

ಕಾವ್ಯಯಾನ Read Post »

ಕಥಾಗುಚ್ಛ

ಕಥಾಗುಚ್ಛ

ಹಬ್ಬ ಪ್ರೀತಿಯನ್ನು ಹಬ್ಬಿದರೆ ಸುಮಂಗಳ ಮೂರ್ತಿ ಬಾನುಮತಿ ಈ ಸಾರಿ ವಿಜಯದಶಮಿಯನ್ನು ವಿಶೇಷವಾಗಿ ಆಚರಿಸಬೇಕು, ಅದು ನಮ್ಮ ಕುಟುಂಬದವರಿಗೆ ಮತ್ತು ಬಂದ ಬಂಧು ಬಳಗದವರಿಗೆ ಖುಷಿ ಕೊಡುವ ಹಾಗೆ ಇರಬೇಕು,ಎಂದು ಯೋಚಿಸುತ್ತಿದ್ದ ಅವಳು,ಖರ್ಚಿನ ಬಗ್ಗೆಯೂ ನಿಗಾವಹಿಸಬೇಕಿತ್ತು. ಅವಳು ಒಂದು ಮಧ್ಯಮವರ್ಗದ ಕುಟುಂಬಸ್ಥೆ ಎನ್ನುವುದು ಮರಿಯೋ ಆಗಿಲ್ಲ .          ಬಾನುಮತಿಗೆ ಮದುವೆಯಾದ ನಂತರದ ಮೊದಲನೇ ವಿಜಯದಶಮಿ, ಹಾಗಾಗಿ ಗಂಡನ ಮನೆಯ ಪದ್ಧತಿಗಳು ಅವಳಿಗೆ ಅಷ್ಟಾಗಿ ಏನು ತಿಳಿದಿರಲಿಲ್ಲ. ಆ ಕಾರಣದಿಂದ ಅವಳ ಅತ್ತೆಯ ಸಲಹೆ ಕೇಳಿ ಅವರ ಸಲಹೆಗಳನ್ನು ಪಾಲಿಸಿದರೆ ಮತ್ತಷ್ಟು ಚಂದ ಎಂದು ಯೋಚಿಸುತ್ತಾ,ಸಂಜೆಯ ಕಾಫಿ ತಯಾರಿಸಿ, ಯಾವುದೋ ನ್ಯೂಸ್ ಚಾನಲ್ ನೋಡುತ್ತಿದ್ದ ಮಾವನವರಿಗೆ,ಮೊಬೈಲ್ ನೋಡುತ್ತಿದ್ದ ಗಂಡನಿಗೆ,ಪೂಜೆಗೆಂದು ಹೂ ಕಟ್ಟುತಿದ್ದ ಅತ್ತೆಯವರಿಗೆ ಕೊಟ್ಟು,ತಾನು ಕುಡಿಯುತ್ತಾ ಅತ್ತೆಯ ಬಳಿ ಕೂತಳು.           ಬಾನುಮತಿಯ ಕೆಲಸದ ವೈಖರಿ,ಅವಳ ಅತ್ತೆಗೆ ಬಹಳ ಇಷ್ಟವಾಗಿತ್ತು.ಬಾನುಮತಿ ಮನೆಗೆ ಬಂದ ಸ್ವಲ್ಪ ದಿನಗಳಲ್ಲಿಯೇ ಮನೆಯವರನ್ನೆಲ್ಲ ಬಹಳ ಚೆನ್ನಾಗಿ ಅರ್ಥಮಾಡಿಕೊಂಡು,ಹೊಂದಿಕೊಂಡಿದ್ದಳು. ಸಮಯ ಸಿಕ್ಕಾಗೆಲ್ಲ ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದ ಅವಳಿಗೆ, ಪುಸ್ತಕಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವಳು ಮೊದಲಿನಿಂದಲೂ ಯಾರಿಗಾದರೂ ಉಡುಗೊರೆ ಕೊಡಬೇಕಾದರೆ ಪುಸ್ತಕವನ್ನೇ ಕೊಡುವುದು ಅವಳ ರೂಢಿಯಾಗಿತ್ತು.ಈ ಬಾರಿ ಹಬ್ಬಕ್ಕೆ ತಾಂಬೂಲದೊಂದಿಗೆ ಪುಸ್ತಕಗಳನ್ನ ಕೊಡಬೇಕು,ಆದರೆ ಅತ್ತೆಯವರು ಏನೇಳುತ್ತಾರೋ ಎಂಬ ಯೋಚನೆಯಿಂದ,ಈ ಕುರಿತು ಅತ್ತೆಯ ಜೊತೆ ಮಾತನಾಡಬೇಕೆಂದು ಅವಳ ಮನಸ್ಸಿನಲ್ಲೇ ಆಲೋಚಿಸುತ್ತಿರುತ್ತಾಳೆ.ಅಷ್ಟರಲ್ಲಿಯೇ, ಬಾನು ನಿನ್ನ ತವರಲ್ಲಿ ವಿಜಯದಶಮಿ ಹಬ್ಬವನ್ನ ಹೇಗೆ ಆಚರಿಸುತ್ತಿದ್ದರು? ಎಂದ ಅತ್ತೆಯ ಪ್ರಶ್ನೆಗೆ ಬಾನುಮತಿ,ಹೀಗೆ ಇಲ್ಲಿಯ ರೀತಿಯೇ ಅತ್ತೆ ಶರನ್ನವರಾತ್ರಾರಂಭ ದಿಂದ ವಿಜಯದಶಮಿಯ ವರೆಗೆ ಒಂದೊಂದು ಶಕ್ತಿ ದೇವತೆಯ ಆರಾಧನೆ,ಮುತ್ತೈದೆಯರಿಗೆ ಕುಂಕುಮ ಪ್ರಸಾದ ಕೊಡುವುದು, ನಾನು ಪ್ರತೀ ಬಾರಿ ಕುಂಕುಮದೊಂದಿಗೆ ಕನ್ನಡ ಪುಸ್ತಕಗಳನ್ನು ಕೊಡುತ್ತಿದ್ದೆ.ಅತ್ತೆ ನೀವು ಒಪ್ಪುವುದಾದರೆ ಪುಸ್ತಕಕೊಡುವ ನನ್ನ ಅಭ್ಯಾಸವನ್ನ ಮುಂದುವರಿಸಲೇ ?ಎಂದ ಬಾನುಮತಿಯ ಮಾತಿಗೆ ಖಂಡಿತ ಬಾನು ಇದು ತುಂಬ ಒಳ್ಳೆಯ ಅಭ್ಯಾಸ ಮುಂದುವರೆಸು ಎನ್ನುತ್ತಾ ಮುಗುಳ್ನಗೆ ಬೀರಿದರು.           ಅತ್ತೆಯ ಸಮ್ಮತಿಗೆ ಖುಷಿಯಾದ ಬಾನುಮತಿ,ಮನದಲ್ಲೇ ಅತ್ತೆಯೂ ಅಮ್ಮನಂತೆಯೇ ನೋಡು ಇದಕ್ಕೆ ಹೇಳುವುದು, “ಪ್ರೀತಿ ಹಂಚಬೇಕು ಯಾವುದೇ ನಿರೀಕ್ಷೆ ಇಲ್ಲದೆ,ಆಗ ಹಂಚಿದಕ್ಕಿಂತ ಹೆಚ್ಚಿನ ಪ್ರೀತಿಯೇ ದಕ್ಕುತದೆ ” ನನ್ನ ಈ ಹೊಸ ಬದುಕಿನಲ್ಲೂ ಅಮ್ಮ ಜೊತೆಗಿದ್ದಾಳೆ,ಹೀಗೆ ಮನಸ್ಸಿನಲ್ಲೇ ಖುಷಿಪಡುತ್ತಿದ್ದ ಬಾನುಮತಿಯ ಅರಳಿದ ಮುಖ  ಹೊಳೆಯುವ ಚಂದ್ರನೂ ನಾಚುವಂತೆ ಕಂಗೊಳಿಸುತ್ತಿತ್ತು.              ಬಾಂಧವ್ಯ ಅಂದರೆ ಇದೇ ಅಲ್ಲವೇ,ಪರಸ್ಪರ ಹೊಂದಾಣಿಕೆ. ಬಾನುಮತಿಯ ಉತ್ತಮ ನಡುವಳಿಕೆ ಕನ್ನಡ ಸಾಹಿತ್ಯ ಓದುವುದರಿಂದ ಬಂದಿದೆ ಎಂದರೆ ತಪ್ಪಾಗಲಾರದು.           ಸಾಮಾನ್ಯವಾಗಿ ಒಂದಿಬ್ಬರು ಮೂರು ಹೆಂಗಸರು ಮಾತನಾಡಲು ಶುರುಮಾಡಿದ್ರೆ,ಇಡೀ ಒಂದು ಬಡಾವಣೆಯ ವಿಚಾರಗಳು ಬಿತ್ತರಿಕೆಯಾಗುವುದನ್ನ ಕಾಣಬಹುದು,ಅದರಲ್ಲಿ ಬೇರೊಬ್ಬರ ಕಾಲೆಳೆಯೊ ವಿಷಯಗಳೇ ಹೆಚ್ಚಾನ್ಹೆಚ್ಚು.ಇಂತಹ ಮಾತುಗಳಿಗೆ ಅವಕಾಶ ನೀಡದಂತ ಸ್ವಭಾವದವಳು ಬಾನುಮತಿ.ಹಬ್ಬ ಪ್ರೀತಿಯನ್ನ ಹಬ್ಬಿಸಬೇಕು,ಮನಗಳನ್ನ ತಣಿಸಬೇಕು,ಎನ್ನುವುದಷ್ಟೆ ಇವಳ ಹರಿಕೆ.        ಓ…ಹಬ್ಬದ ತಯಾರಿಯಲ್ಲಿ  ಮಗ್ನಳಾದ ಬಾನು,ಎಲ್ಲವನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಿದ್ದಾಳೆ,ಆದರೆ ಚಾಪೆ ಇದ್ದಷ್ಟು ಕಾಲುಚಾಚು ಎಂಬ ಗಾದೆ ಮಾತಿಗೆ ವಿರುದ್ಧವೇನೂ ಅಲ್ಲ. ಮತ್ತು ಅತ್ತೆ ಸೊಸೆ ಇಬ್ಬರು ಹಬ್ಬಕ್ಕೆ ದೂರದ ಬಂಧು ಮಿತ್ರರನ್ನ,ಫೋನ್ ಮೂಲಕ ಕರೆಯುತ್ತಾರೆ,ಮನೆಯ ಅಕ್ಕಪಕ್ಕದವರನ್ನೆಲ್ಲ ಖುದ್ದಾಗಿ ಹೋಗಿ ಕರೆಯುತ್ತಾರೆ.ಇವರ ಪ್ರೀತಿಯ ಕರೆಗೆ ಯಾರು ಬಾರದೆ ಉಳಿಯಲಿಲ್ಲ.           ಬಾನುಮತಿಯ ಮನೆ ಸಂಮೀಪಿಸುತ್ತಿದ್ದಂತೆ, ಅವಳ ಮನೆಯಂಗಳದ ಪುಟ್ಟ ಹಣತೆಗಳ ಬೆಳಗು ನಕ್ಷತ್ರಗಳ ಮಿಂಚಿನಂತೆ ಜಗಮಗಿಸುತ್ತಿರುವುದು ಕಣ್ಣಿಗೆ ದೇವಾಲಯದಂತೆ ಕಾಣುತ್ತದೆ.ಹಾಗೇ ಮನೆಯಂಗಳದ ಹೂವುಗಳರಳಿದ ಹಸಿರು ಕಾಶಿಗೆ ಇಬ್ಬನಿ ಮುತ್ತಿಕ್ಕಿದೆ, ಹಣತೆಗಳ ಬೆಳಗಿಗೆ,ಹೊಂಬಣ್ಣದ ಹನಿಗಳು ಪನ್ನೀರಿನಂತೆ ಜಿನುಗಿ ಮೈಮನ ಪುಳಕಗೊಂಡಂತೆ ಭಾಸವಾಯ್ತು.           ಬಂದವರನ್ನ ಪ್ರೀತಿಯಿಂದ ಮಾತನಾಡಿಸಿ,  ‘ಬನ್ನಿ’ ಬೆಳಕಾಗಲಿ,ಪ್ರೀತಿ ಬದುಕಾಗಲಿ. ಎಂದು ನುಡಿಯುತ್ತಾ ,ಕುಂಕುಮ ಹಚ್ಚಿ, ಪ್ರಸಾದದ ಜೊತೆ ಕನ್ನಡ ಪುಸ್ತಕ ಕೊಟ್ಟು,ಬಿಡುವಿನ ಸಮಯದಲ್ಲಿ ಓದಿ ಎಂದು ಅಕ್ಕರೆ ಹರಿಸಿದ ಬಾನುಮತಿಯ ಮಾತು,ಮತ್ತಷ್ಟು ಹಿತವೆಸಿತ್ತು.     ==================================== ಪರಿಚಯ: Spoken English faculty ಆಗಿ 12 ವರ್ಷಗಳಿಂದ ಕೆಲಸಮಾಡುತ್ತಿದ್ದಾರೆ.ಬಾಲ್ಯದಿಂದಲೇ ಕನ್ನಡ ಸಾಹಿತ್ಯವನ್ನ ಬರೆಯುವ ಮತ್ತು ಓದುವುದು ಹವ್ಯಾಸ. ಕಥೆ, ಕವಿತೆ,ಗಜಲ್,ವಚನ,ಲೇಖನ ಬರಹಗಳನ್ನು ಬರೆಯುತ್ತಿರುತ್ತಾರೆ.2013 ರಲ್ಲಿ Kannada to English dictionary ಬರೆದಿರುವ ಇವರ ಕವನ ಸಂಕಲನ “ಖಾಲಿಹಾಳೆ”ಬಿಡುಗಡೆಗೆ ಸಿದ್ಧವಾಗಿದೆ

ಕಥಾಗುಚ್ಛ Read Post »

ಕಾವ್ಯಯಾನ

ಕಾವ್ಯಯಾನ

ಗಾಯಗಳ ಎಣಿಸುತ್ತಲೇ! ದೀಪಾಜಿ ಮಾತಿಗೊಮ್ಮೆ ತುಟಿಕಚ್ಚಿ  ಹೀಗೆಂದರೆ ಎಲ್ಲಿ ಬಿಟ್ಟು ಹೋದಾನೊ ಹಾಗೆಂದರೆ ಎಲ್ಲಿ ಬಿಟ್ಟು ಹೋದಾನೊ ಎಂಬ ದುಗುಡದಲ್ಲೆ ಕಳೆದೆ ಅಷ್ಟು ದಿನಗಳನ್ನ.. ಹೆಜ್ಜೆ ಹೆಜ್ಜೆಗೊಮ್ಮೆ ಹೆಜ್ಜೇನು ಸುರಿದು ಬಾಯಿಗೆ ಸೆರಗ ಒತ್ತಿ ದುಃಖ ಉಮ್ಮಳಿಸಿದಾ -ಗೆಲ್ಲ ಹುಸಿ ನಗುವನ್ನೆ ಹೊರಚೆಲ್ಲಿ ನೋವೆಲ್ಲ ಪಕ್ಕಡಿಗೆ ಸರಿಸುತ್ತಲೆ ಕಳೆದೆ ಅಷ್ಟು ದಿನಗಳನ್ನ.. ಉಸಿರು ಬಿಟ್ಟುರು ಸಾಕು ಹೆಡೆಎತ್ತಿ ಬುಸುಗುಡುತ್ತೀ ಪ್ರೇಮ ಸರಸ ಸಮರಸ ಕಲ್ಪಸಿದವಳಿಗೆ ಸಿಕ್ಕಿದ್ದು ಬರಿಯ ಹಾಲಾಹಲ ನಿನ್ನ ಸಿಟ್ಟುರಿಯ ಹರಿವು ಅಸಮಾಧಾ -ನದ ಕೋಲಾಹಲ ಸಹಿಸುತ್ತಲೇ ಬಂದೆ ಅಷ್ಟು ದಿನಗಳನ್ನ ಅಕ್ಕರೆಯ ಸವಿಬೆಲ್ಲ ನೀ ಹರೆಸಲಿಲ್ಲ ಅನ್ನಕ್ಕೇನು ಕೊರತೆ ಮಾಡಲಿಲ್ಲ ಆದರೆ ನೀ ಹುಡುಕಿದ್ದು ಮೊಸರೊಳಗಿನ ಕಲ್ಲ, ಆ ಕಲ್ಲು ಇಲ್ಲವೆನ್ನುತ್ತಲೆ ಕಳೆದೆ ಅಷ್ಟು ದಿನಗಳನ್ನ ಕರುಣೆ ಕಕ್ಕಲಾತಿಗಳೇನು ಬೇಡ ಆದರೆ ಸಹಿಸುತ್ತ ಸವರುತ್ತ ಬಂದಿ -ರುವುದು ಬೆನ್ನ ಮೇಲಿನ ಬಾಸುಂಡೆಗಳನೆ ಗಾಯಗಳ ಎಣೆಸುತ್ತಲೆ ಕಳೆದೆ ಅಷ್ಟು ದಿನಗಳನ್ನ ಮಕ್ಕಳು ನಿನ್ನ ಹೋಲುವುದೆ ಇಲ್ಲವೆಂದು ಹೊಡೆದು ಬಡೆದು ಹಾಕುತ್ತೀ ,ನಶೆ ಎರುವ ಮುಂಚೆ ಮನೆಗೆ ಬಂದರೆ ತಿಳಿದೀತು ಹೋಲಿಕೆ,ಗರ್ತಿಯ ತಲೆಗೆ ಅಪಚಾರದ ಪಟ್ಟ  ಕಟ್ಟುತ್ತಲೆ ಬಂದಿ ಅದ ಕೇಳುತ್ತಲೆ ಉಳಿದೆ ಅಷ್ಟು ದಿನಗಳನ್ನ ಗಂಡಬಿಟ್ಟವಳೆಂದು ಅವರಿವರೆಂದಾರೆಂದು ನಿನ್ನ ಸಹಿಸುವುದು ದಂಡವೇ ಸರಿ ಗಂಡನಿಲ್ಲದಿದ್ದರು ಅದೆಂಥ ವೈನಾಗಿ ಬದುಕಿದಳೆನ್ನುವಂತೆ ಕಳೆಯುವೆ ಇನ್ನೂಳಿದ ಅಷ್ಟು ದಿನಗಳನ್ನ… ================= ಪರಿಚಯ: ಅಂಚೆಇಲಾಖೆಯಲ್ಲಿ ವೃತ್ತಿ, ಓದು, ಬರವಣಿಗೆ ಹವ್ಯಾಸ

ಕಾವ್ಯಯಾನ Read Post »

You cannot copy content of this page

Scroll to Top