ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ನಾ ಮನುಷ್ಯಾ ಅದೀನಿ

ಚಂರಾನನ

ದು:ಖ ಆದಾಗ ಅತ್ತೇನಿ
ಸಂತೋಷ ಆದಾಗ ನಕ್ಕೇನಿ
ಯಾಕಂದ್ರ ನಾ ಮನಷ್ಯಾ ಅದೀನಿ…..

ಮನಸ್ನ್ಯಾಗೊಂದು, ಮಾತ್ನ್ಯಾಗೊಂದು, ಕೆಲಸ್ದಾಗೊಂದು ಮಾಡಿಲ್ಲ
ಯಾಕಂದ್ರ ನಾ ಮನಷ್ಯಾ ಅದೀನಿ….

ಮುಖವಾಡ ಇಟ್ಕೊಂಡ್ ನೋಡಿಲ್ಲ
ಮುಖವಾಡ ಹಾಕ್ಕೊಂಡ್ ಆಡಿಲ್ಲ
ಯಾಕಂದ್ರ ನಾ ಮನುಷ್ಯಾ ಅದೀನಿ…..

ಇದ್ರ ಕೊಟ್ಟೀನಿ,ಇಲ್ಲಾಂದ್ರ ಬಿಟ್ಟೀನಿ
ಮುಂದ್ ಹೊಗಳಿಲ್ಲ,ಹಿಂದ್ ಬೈದಿಲ್ಲ
ಯಾಕಂದ್ರ ನಾ ಮನಷ್ಯಾ ಅದೀನಿ…..

ಕಷ್ಟ ಅಂದ್ರ ಕರಗೀನಿ,ಇಷ್ಟ ಅಂದ್ರ ಹಿಗ್ಗೀನಿ
ಏನೂ ಇಲ್ಲಾಂದ್ರ ಸುಮ್ಮನದೀನಿ
ಯಾಕಂದ್ರ ನಾ ಮನಷ್ಯಾ ಅದೀನಿ……

ಬದಕಾಕ ರೊಕ್ಕ ಬೇಕ,ರೊಕ್ಕಕ ಬದಕಿಲ್ಲ
ಇದ್ದಾಗ ಉಂಡೇನಿ,ಇಲ್ಲದಾಗ ನೊಂದೇನಿ
ಯಾಕಂದ್ರ ನಾ ಮನಷ್ಯಾ ಅದೀನಿ…..

===========================

About The Author

1 thought on “ಕಾವ್ಯಯಾನ”

Leave a Reply

You cannot copy content of this page

Scroll to Top