ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅರಿವು ಬಿ.ಎಸ್.ಶ್ರೀನಿವಾಸ್ ಹೊತ್ತಾಯಿತು ಗೊತ್ತಾಯಿತು ಪಯಣ ಮುಗಿಯಲಿದೆಯೆಂದು ರವಿಯು ಮುಳುಗಿ ತಾರೆ ಮಿನುಗಿ ಶಶಿ ಆಗಸ ಬೆಳಗುವನೆಂದು ಹೊತ್ತಾಯಿತು ಗೊತ್ತಾಯಿತು ಗಳಿಸಿದ್ದು ಉಳಿಸಿದ್ದು ಚಿಟಿಕೆಯಷ್ಟೇ ಎಂದು ಅರಿಯುವುದು ಅಳಿಸುವುದು ಬೆಟ್ಟದಷ್ಟಿದೆಯೆಂದು ಹೊತ್ತಾಯಿತು ಗೊತ್ತಾಯಿತು ಬಾಳಲೆಕ್ಕಾಚಾರದಲಿ ಒಂದನೊಂದು ಕೂಡಿದರೆ ಎರಡೇ ಆಗಬೇಕಿಲ್ಲವೆಂದು ಶೂನ್ಯವೂ ಮೂಡಬಹುದೆಂದು ಹೊತ್ತಾಯಿತು ಗೊತ್ತಾಯಿತು ಭರದಿ ಹರಿದ ನದಿಯು ಧುಮುಕಿ ಕಡಲ ಸೇರಲಿದೆಯೆಂದು ತನ್ನತನವ ಕಳೆದುಕೊಂಡು ಅಲೆಅಲೆಯಲಿ ಸುಳಿಯುವುದೆಂದು ಹೊತ್ತಾಯಿತು ಗೊತ್ತಾಯಿತು ನನ್ನದೆಂಬುದೆಲ್ಲ ನನ್ನದೇ ಆಗಿರಬೇಕಿಲ್ಲವೆಂದು ಋಣಸಂದಾಯವಾಗದೆ ಬಿಡುಗಡೆಯು ಸಾಧ್ಯವೇ ಇಲ್ಲವೆಂದು ಕಿರುಪರಿಚಯ: ಹವ್ಯಾಸಿ ಬರಹಗಾರರು, ಎರಡು ಕವನಸಂಕಲನಗಳುಪ್ರಕಟವಾಗಿವೆ. ವೃತ್ತಿ-ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರು

ಕಾವ್ಯಯಾನ Read Post »

ಅಂಕಣ ಸಂಗಾತಿ

‘ಸ್ವಾತ್ಮಗತ’

ಕೆ.ಶಿವು.ಲಕ್ಕಣ್ಣವರ ಅಜರಾಮರವಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಮಹತ್ ಸಾಧನೆ..! ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ  ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂ ಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ  ದೇವರು ಎಂದು ಕೂಡ ಜನರು ಕರೆಯುತ್ತಿದ್ದರು. ‌ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಅವರು. ಅವರಿಗೆ ಭಾರತ ಸರ್ಕಾರವು ೨೦೧೫ ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದೆ… ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು. ಮಾರ್ಚ್ ೩, ೧೯೩೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೇ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದರು ಅವರು… ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿದ್ದ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದರು. ತಮ್ಮ ಮಠದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು, ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದರು… ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ ೧, ೧೯೦೮ರಲ್ಲಿ ೧೩ನೇ ಮಗನಾಗಿ ಶಿವಣ್ಣ ಜನಿಸಿದರು. ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ. ವೀರಾಪುರದಲ್ಲಿಯೇ ಇದ್ದ ಕೂಲಿಮಠದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದ ಉರಾದ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಪ್ರಾಥಮಿಕಾ ಶಾಲಾ ದಿನಗಳಲ್ಲಿ ತಾಯಿಯನ್ನು ಕಳೆದುಕೊಂಡ ಶಿವಣ್ಣ ಅನಂತರ ಅಕ್ಕನ ಆಸರೆಯಲ್ಲಿ ಬೆಳೆದರು. ತುಮಕೂರು ಬಳಿ ಇರುವ ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣದ ನಂತರ ೧೯೨೨ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ೧೯೨೬ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. ೧೯೨೭ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು. ಬೆಂಗಳೂರಿನಲ್ಲಿ ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದರು. ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟದಲ್ಲಿದ್ದರು. ಹಿರಿಯ ಗುರುಗಳಾದ ಉದ್ಧಾನ ಸ್ವಾಮಿಜಿಗಳ ಹಾಗೂ ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಭೇಟಿಕೊಡುತಿದ್ದರು. ತುಮಕೂರು ಜಿಲ್ಲೆಯಲ್ಲಿ ಭೀಕರ ಪ್ಲೇಗ್ ರೋಗ ಇದ್ದರೂ ಶಿವಣ್ಣನವರ ಹಾಗೂ ಮಠದ ಒಡನಾಟ ಎಂದಿನತೆಯೇ ಇತ್ತು… ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ ೧೯೩೦ರಲ್ಲಿ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾದರು. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನರನ್ನು ಉದ್ಧಾನ ಸ್ವಾಮಿಜಿಗಳು ಎಲ್ಲರ ಸಮ್ಮುಖದಲ್ಲಿ ಮಠದ ಉತ್ತರಾಧಿಕಾರಿ ಎಂದು ಘೋಷಿಸಿದರು. ನಂತರ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ ,ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜು ಪಾಲಿಸುತ್ತಾ ವಿದ್ಯಾಭ್ಯಾಸ ಮುಗಿಸಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿದರು, ನಂತರ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ. ನಂತರ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತ , ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ… ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗೂ ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು. ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ ಎಂಬ ಆಡು ನುಡಿಗಳೂ ಕೇಳಿ ಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗೂ ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ… ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾ ಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಿದ್ದರು. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಿದ್ದರು. ನಂತರ ಆಹಾರ ಸೇವನೆ, ಮುಂಜಾನೆ ಐದೂವರೆ ಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, ‘ಸಿಹಿ’ ಹಾಗೂ ‘ಖಾರ ಚಟ್ನಿ’ ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, ‘ಬೇವಿನ-ಚಕ್ಕೆ ಕಷಾಯ’ ಸೇವನೆ ಮಾಡುತ್ತಿದ್ದರು… ಮುಂಜಾನೆ ಮತ್ತು ಸಂಜೆ ಮಠದ ಆವರಣದಲ್ಲಿ ಮಕ್ಕಳಿಂದ ನಡೆಯುವ ಪ್ರಾರ್ಥನೆಯಲ್ಲಿ ಶ್ರೀಗಳು ಪಾಲ್ಗೊಳ್ಳುತ್ತಿದ್ದರು. ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಹಿಡಿದು ಪದವಿ ಅಭ್ಯಾಸದಲ್ಲಿರುವ ತರುಣರ ವರೆಗೂ ಸಾವಿರಾರು ಮಂದಿ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವುದನ್ನು ನೋಡಲು ಕಣ್ಣುಗಳು ಪುಣ್ಯ ಮಾಡಿರಬೇಕು ಅನ್ನುವಂತ ವಾತಾವರಣ ಮಠದ್ದು. ಮಠದ ಆವರಣದಲ್ಲಿರುವ ವಿಧ್ಯಾರ್ಥಿ ನಿಲಯದ ಮುಂದಿರುವ ವಿಶಾಲವಾದ ಬಯಲಿನಲ್ಲಿ ಸಾವಿರಾರು ಜನ ಒಟ್ಟಿಗೆ ಪ್ರಾರ್ಥನೆ ಮಾಡುವುದನ್ನು ನೋಡುವುದೂ ಸಿದ್ಧಗಂಗೆಯ ಒಂದು ಪ್ರಮುಖ ಆಕರ್ಷಣೆ. ಪ್ರಾರ್ಥನೆಯ ನಂತರ ಕಛೇರಿಗೆ ಧಾವಿಸುವ ಶ್ರೀಗಳು ದಿನ ಪತ್ರಿಕೆಗಳನ್ನು ಓದುತ್ತಿದ್ದರು. ಅಲ್ಲಿಗೆ ಬಂದ ಭಕ್ತರಿಗೆ, ದರ್ಶನಾರ್ಥಿಗಳಿಗೆ ದರ್ಶನ ನೀಡುತ್ತಿದ್ದರು. ಮಳೆ-ಬೆಳೆ, ಕುಶಲೋಪರಿ ವಿಚಾರ,ಗಣ್ಯರ ಭೇಟಿ, ಮಠದ ಆಡಳಿತ ಕಡತಗಳ ಪರಿಶೀಲನೆ,ಪತ್ರವ್ಯವಹಾರಗಳೇ ಮುಂತಾಗಿ ಹಲವಾರು ಕಾರ್ಯಗಳಲ್ಲಿ ನಿರತರಾಗಿರುತ್ತಿದ್ದರಲ್ಲದೇ ಆ  ಇಳಿವಯಸ್ಸಿನಲ್ಲೂ ಧಣಿವರಿಯದೇ ಕಾರ್ಯನಿರತರಾಗಿ “ಕಾಯಕವೇ ಕೈಲಾಸ” ಎಂದು ನುಡಿಯಲ್ಲಿ ಮಾತ್ರ ಹೇಳದೇ ಹಾಗೆಯೇ ನಡೆಯಲ್ಲೂ ತೋರಿಸಿಕೊಟ್ಟವರಾದ್ದರು… ಅವರುಮಠದ ಪ್ರಸಾದ ನಿಲಯದ ಮುಂಭಾಗದ ಮಂಚದ ಮೇಲೆ ಆಸೀನರಾಗುತ್ತಿದ್ದರು. ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತಿತ್ತು. ಮಠಕ್ಕೆ ಭೇಟಿ ಕೊಡುವ ಬಹುತೇಕ ಭಕ್ತರು ರೈತಾಪಿ ವರ್ಗದವರಾದ್ದರಿಂದ ಶ್ರೀಗಳು ಬೇರೆ ಬೇರೆ ಪ್ರದೇಶದಿಂದ ಬಂದ ರೈತರಲ್ಲಿ ಮಳೆ ಬೆಳೆಗಳ ಬಗ್ಗೆ ಪ್ರಶ್ನಿಸುತ್ತಿದ್ದರು. ಇದರ ಬಳಿಕ ಶ್ರೀಗಳು, ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಿದ್ದರು. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದ ಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಿದ್ದರು. ಸಂಜೆ ೪ ಗಂಟೆಯ ನಂತರ ಪುನಃ ಭಕ್ತಗಣದ ಭೇಟಿ. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ, ದಾಸೋಹದ ಮಾಹಿತಿ ಸುಮಾರು ರಾತ್ರಿ ೯ ಗಂಟೆಯವರೆವಿಗೂ ನಡೆಯುತ್ತಿತ್ತು… ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದರು. ಇದು ಕನಿಷ್ಠ ಅರ್ಧ ತಾಸಾದರೂ ನಡೆಯುತ್ತಿತ್ತು. ಹನ್ನೊಂದು ಗಂಟೆಗೆ ಮಲಗುತ್ತಿದ್ದರು. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತ್ತಿತ್ತು. ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿ ನೀಡುತ್ತಿದ್ದರು. ದೂರದ ಊರುಗಳಿಗೂ ಓಡಾಡುತ್ತಿದ್ದರು. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಿದ್ದರು. ಬಾಕಿ ಸಂದರ್ಭದಲ್ಲಿ ಏನನ್ನೂ ಸೇವಿಸುತ್ತಿರಲಿಲ್ಲ. ಕಳೆದ ೮ ದಶಕಗಳ ಜೀವನ ಇದೇ ರೀತಿ ಸಾಗಿತು. ಶ್ರೀಗಳ ಆರೋಗ್ಯವೂ ಚೆನ್ನಾಗಿಯೇ ಇತ್ತು. ಅದೇ ಸಮಯದಲ್ಲಿ ಶ್ರೀಗಳವರ ಮೇಲೆ ಒಂದು ಸಾಕ್ಷ್ಯಚಿತ್ರ ತಯಾರಿಸಿದ್ದಾರೆ… ಅವರು ಶಿಕ್ಷಣ ಮತ್ತು ತರಬೇತಿಗಾಗಿ ಒಟ್ಟು 132 ಸಂಸ್ಥೆಗಳನ್ನು ಸ್ಥಾಪಿಸಿದರು, ನರ್ಸರಿಯಿಂದ ಎಂಜಿನಿಯರಿಂಗ್, ವಿಜ್ಞಾನ, ಕಲೆ ಮತ್ತು ನಿರ್ವಹಣೆ ಜೊತೆಗೆ ವೃತ್ತಿಪರ ತರಬೇತಿಯೂ ಸಹ ಇದೆ. ಅವರು ಸಂಸ್ಕೃತದ ಸಾಂಪ್ರದಾಯಿಕ ಕಲಿಕೆಯಲ್ಲಿ ಆಧುನಿಕ ಶಿಕ್ಷಣ ಮತ್ತು ತಂತ್ರಜ್ಞಾನದಲ್ಲಿ ಶಿಕ್ಷಣ ನೀಡುವ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದರು.ಅವರ ಪರೋಪಕಾರಿ ಕೆಲಸಕ್ಕಾಗಿ ಅವರು ಎಲ್ಲಾ ಸಮುದಾಯಗಳಿಂದ ವ್ಯಾಪಕವಾಗಿ ಗೌರವಿಸಲ್ಪಟ್ಟರು. ಸ್ವಾಮಿ ಅವರ ಮಠದಲ್ಲಿ ೧೦೦೦೦ ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದೆ. ೫ ವಯಸ್ಸಿನಿಂದ ೧೬ ವರ್ಷ ವಯಸ್ಸಿನ ಯಾವುದೇ ಹಂತದಲ್ಲಿ ಮತ್ತು ಉಚಿತ ಆಹಾರ, ಶಿಕ್ಷಣ ಮತ್ತು ಆಶ್ರಯ (ತ್ರಿವಿಧ ದಾಸೋಹ) ಅನ್ನು ಒದಗಿಸುವ ಎಲ್ಲ ಧರ್ಮ, ಜಾತಿ ನೋಡದೇ ಎಲ್ಲಾ ಮಕ್ಕಳಿಗೆ ತೆರೆದಿರುತ್ತದೆ. ಮಠದ ಯಾತ್ರಾರ್ಥಿಗಳು ಮತ್ತು ಸಂದರ್ಶಕರು ಕೂಡಾ ಉಚಿತ ಊಟದ ವ್ಯವಸ್ಥೆ ಇದೆ. ಮಠಾಧೀಶ ಮಾರ್ಗದರ್ಶನದಲ್ಲಿ, ವಾರ್ಷಿಕ ಕೃಷಿ ಜಾತ್ರೆಯನ್ನು ಸ್ಥಳೀಯ ಜನಸಂಖ್ಯೆಯ ಅನುಕೂಲಕ್ಕಾಗಿ ನಡೆಸಲಾಗುತ್ತದೆ. ಕರ್ನಾಟಕ ಸರಕಾರವು 2007 ರಿಂದ ಶಿವಕುಮಾರ ಸ್ವಾಮೀಜಿ ಪ್ರಶಸ್ತಿಯನ್ನು ಸ್ವಾಮೀಜಿಯ ಶತಮಾನೋತ್ಸವದ ವಾರ್ಷಿಕೋತ್ಸವವನ್ನು ಘೋಷಿಸಿತು. ಭಾರತದ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತುಮಕೂರಿಗೆ ಭೇಟಿ ನೀಡಿದರು ಮತ್ತು ಶಿಕ್ಷಣ ಮತ್ತು ಮಾನವೀಯ ಕೆಲಸದಲ್ಲಿ ಸ್ವಾಮಿಯ ಉಪಕ್ರಮಗಳನ್ನು ಶ್ಲಾಘಿಸಿದರು… ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ೧೯೬೫ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.ಪೂಜ್ಯ ಸ್ವಾಮೀಜಿಯವರ ೧೦೦ ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.2015ರಲ್ಲಿ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.2017 ರಲ್ಲಿ, ಕರ್ನಾಟಕ ಸರಕಾರ ಮತ್ತು ಅವರ ಭಕ್ತರು ಸ್ವಾಮೀಜಿಯವರ ಸಾಮಾಜಿಕ ಸೇವೆಗಾಗಿ ಅವರಿಗೆ ಭಾರತ ರತ್ನ ನೀಡಲು ಮನವಿ ಮಾಡುತ್ತಾರೆ. ಕರ್ನಾಟಕದ ಆಗಿನ ಸಂದರ್ಭದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ವಾಮಿಜಿಯವರ ಮಾನವೀಯ ಕೆಲಸದ ಗುರುತಿಸುವಿಕೆಗಾಗಿ ‘ಭಾರತ ರತ್ನ’ವನ್ನು ನೀಡಲು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು… ಸ್ವಾಮೀಜಿಯವರ ಬಗ್ಗೆ ಜಿ.ಎಸ್.ಶಿವರುದ್ರಪ್ಪನವರುಸದ್ದು ಗದ್ದಲವಿರದ ಸಾಧನೆಯಿಲ್ಲಿ ಗದ್ದುಗೆಯೇರಿದೆ ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ ಕಾವಿಯುಡುಗೆಯನುಟ್ಟು ನಭವೇ ಕಿರಣ ಹಸ್ತವ ಚಾಚಿದೆ ಎಲ್ಲ ನನ್ನವರೆನ್ನುವ ಭಾವದ ಕರುಣೆಯೇ ಕಣ್ತೆರೆದಿದೆ ಎಂದೆಲ್ಲಾ ಕಾವ್ಯ ರಚಿಸಿದ್ದರು… ವಯೋಸಂಬಂಧಿ ಅನಾರೋಗ್ಯದಿಂದ ಬಳಲಿದ ಸ್ವಾಮೀಜಿಯವರನ್ನು ಹೃದಯಕ್ಕೆ ಸ್ಟಂಟ್ ಅಳವಡಿಸುವುದಕ್ಕೋಸ್ಕರ ೨೦೧೮ರ ಡಿಸೆಂಬರ್ ನಲ್ಲಿ ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸ್ವಾಮೀಜಿ ಮಠಕ್ಕೆ ಹಿಂದಿರುಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಶ್ವಾಸಕೋಶ ಸೋಂಕಿನಿಂದ ಬಳಲಿದ ಶ್ರೀಗಳನ್ನು ಮತ್ತೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅರೋಗ್ಯ ಸುಧಾರಿಸಿದ

‘ಸ್ವಾತ್ಮಗತ’ Read Post »

ಕಾವ್ಯಯಾನ

ಕಾವ್ಯಯಾನ

ಡಾ.ಗೋವಿಂದ ಹೆಗಡೆಯವರ ಎರಡು ಪದ್ಯಗಳು ನಕ್ಕು ಬಿಡು. ಉಂಡ ಕಹಿಗುಳಿಗೆಗಳ ತಪಸೀಲು ಬೇಕಿಲ್ಲ ಸವೆಸಿದ ಕೊರಕಲು ದಿಣ್ಣೆ ದಾರಿಗಳಿಗೆ ಎಡವಿದ ಗಾಯ ನಟ್ಟ ಮುಳ್ಳುಗಳಿಗೆ ಪುರಾವೆಯಿಲ್ಲ ಹನಿಗೂಡಿದ ಕಣ್ಣುಗಳಲ್ಲಿ ತಿರುಗಿ ನೋಡಿ ಒಮ್ಮೆ ನಕ್ಕು ಬಿಡು, ಗೆಳತಿ! ಕೂಡಿ ನಡೆದ ದಾರಿಗಳು ಬೇರಾದ ಹೆಜ್ಜೆಗಳು ಏರು ದಾರಿಯ ಕುಂಟುನಡೆ-ಗೆ ಒದಗದ ಊರುಗೋಲುಗಳು ಬೆನ್ನಿಗೆರಗಿದ ಬಾರುಕೋಲುಗಳು ಎಲ್ಲ ಅನುಭವ ಸಂತೆಯಲ್ಲೊಮ್ಮೆ ನಿಂತು ಗೆಳತೀ, ನಕ್ಕುಬಿಡು ದಾರಿ ಹೂವಿನದಲ್ಲ ನೆರಳು- ನೀರು ಸಿಗುವ ಖಾತರಿಯಿಲ್ಲ ಮುಗಿವ ಮುನ್ನ ಹಗಲು ಸೇರುವುದು ಯಾವ ಮಜಲು ಕಾಲ ಕೆಳಗಿನ ಕಳ್ಳ ಹುದಿಲಲ್ಲೂ ನೇರ ನಡೆವ ಬಿಗಿ ನಿಲುವಿನ ಅವಡುಗಚ್ಚಿದ ಮುಖದಲ್ಲೂ ಒಮ್ಮೆ ಸಡಲಿಸಿ ಗಂಟು ಕುಸಿದಾಗ ಮಡಿಲೀವ ನೆಲದ ನಲುಮೆಗೆ ನಮಿಸಿ ಒಮ್ಮೆ- ನಕ್ಕುಬಿಡು! ಕುಲುಮೆ ಚಿನ್ನ ಸುಟ್ಟಾಗ ಶುದ್ಧವಾಗುತ್ತದೆ ಮಣ್ಣು ಇಟ್ಟಿಗೆಯಾಗುತ್ತದೆ ಕಟ್ಟಿಗೆ ಇಂಧನವಾಗುತ್ತದೆ ಯಾರದೋ ಹಸಿವೆಗೆ ಎದೆಯ ಕುಲುಮೆ ಉರಿಯುತ್ತಲೇ ಇದೆ ಏನನ್ನು ಉರಿಸುತ್ತದೆ ಪುಟಕ್ಕಿಡುತ್ತದೆ ಅಥವಾ ಸುಟ್ಟು ಬೂದಿಯಾಗಿಸುತ್ತದೆ ನೀನು ಅಲಕ್ಕಾಗಿ ಕೂತುಬಿಟ್ಟಿದ್ದೀ- ನೆನಪುಗಳೇ ಇಲ್ಲದ ಹಾಗೆ..

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೌನದ ಮಡುವಿನೊಳಗೆ ಸಂತೆಬೆನ್ನೂರು ಫೈಜ್ನಾಟ್ರಾಜ್ ಮನಸ್ಸು ನೀರಿಂದ ಹೊರಬಂದ ಮೀನು ಇಂದಿನಿಂದ ಅಲ್ಲ ಅಂದಿನಿಂದಲೂ…! ಕಾರಣವಲ್ಲದ ಕಾರಣಕ್ಕೆ ಸುಖಾ ಸುಮ್ಮನೆ ಮಾತಿಗೆ ಮಾತು ಬೆಳೆದು’ಮೌನ’ ತಾಳಿ ತಿಂಗಳ ಮೇಲೆ ಹನ್ನರೆಡು ದಿನಗಳಾದವು! ದಾಂಪತ್ಯ ಆದಾಗ್ಯೂ ನೂರಾರು ಕ್ಷಣಗಳನ್ನು ಹೇಗೆಂದರೆ ಹಾಗೆ ಎಲ್ಲೆಂದರೆ ಅಲ್ಲಿ ಸರಸದಿ ಹಾಡು ಹಳೆಯದಾದರೇನು ಎಂಬಂತೆ  ಕಳೆದಿದ್ದೂ ಒಂದು ‘ಮಾತು’ ನೂರು ಸುಖಗಳನ್ನು ಕೊಲ್ಲುತ್ತೆ ಅನ್ನೋದೆಷ್ಟು ಘಾಟು ಅಲ್ವಾ? ಜಗಳ ಆಡೋದು ಇಬ್ಬರಿಗೂ ಚಟ ಅಲ್ಲ, ಚಾಳೀನೂ ಇಲ್ಲ. ಒಣ ಅಹಂ ಇಷ್ಟು ಅಂತರ ತಂದಿರಿಸಿ ನಮಗೇ ಇರುಸು-ಮುರುಸು   ಆದಂತಾಗಿದೆ. ನಮ್ಮಗಳ ನಡುವಿನ ಸಂತಾನಗಳ ಸಂಧಾನವೂ ಈಗೀಗ ಸಫಲವಾಗದೇ’ಮೌನವೇ ಆಭರಣ…’ ಅಂದುಕೊಳ್ಳುತ್ತಲೇ  ಕಳ್ಳ ಮನಸ್ಸು ಕದ್ದು ಕೂಡಾ ಪರಸ್ಪರ ನೋಡಿಕೊಳ್ಳುತ್ತಿಲ್ಲ? ಒಲವೆಂಬ ಒಲವು   ಮಾತುಗಳಿಂದಲೇ ಶುರುವಾಗುತ್ತೆ ಅನ್ನುವಾಗಲೇ ಮೌನ-ಕಣಿವೆ ತೋರಿಸುತ್ತೆ ಅನ್ನೋದು ಈಗೀಗ ಈರ್ವರಿಗೂ ಪಥ್ಯವಾಗಿದೆ(?) ಮೊದಲೇ ಹೇಳಿದೆನಲ್ಲಾ ಅಹಂ ಅಡ್ಡ ಬಂದು ಒಂದು ಹಾಸಿಗೆಯ ಎರೆಡೆರಡಾಗಿ ಮಾಡಿ ಮಧ್ಯರಾತ್ರಿ ಕೂಡಾ ಮೈ-ಕೈ ತಾಕಿದರೂ ಬೆಚ್ಚಿಬೀಳೋ ತರಹ ಆಗಿದೆಯೆಂದರೆ ಮಾತುಗಳಿಗೆ ಅದೆಷ್ಟು ಶಕ್ತಿ ಅಲ್ವಾ? ಕಂಡೂ ಕಾಣದ ಪ್ರೀತಿಗೆ, ಕೇಳಿಯೂ ಕೇಳದ ಒಳ ಮಾತಿಗೆ ಇಬ್ಬರೂ ಕಿವಿ-ಮನ  ಕೊಡ್ತಾ ಇದ್ದೇವೆ. ಗಂಡೆಂಬ ಅಥವಾ ಹೆಣ್ಣೆಂಬ ಅಗೋಚರ ಅಹಮಿಕೆ ಅಡ್ಡಗೋಡೆ!    ಅದರ ಮೇಲಿನ ಪ್ರೀತಿ ದೀಪ ಉರಿಯುತಿದೆ ಸರಿ, ಅದರಡಿಯ ಕತ್ತಲು ನಮ್ಮ ನಡುವೆ ಕಣ್ಣ ಪಟ್ಟಿಯಾಗಿದೆ! ಒಂದೇ ಸೂರಿನಡಿ ಒಂದೇ ಮನಸ್ಸಿದೆಯಾದರೂ ಮಾತುಗಳು ಒಂದೇಆಗಿಲ್ಲ. ಮೌನ ರಾಜ್ಯದ ಒಳಗೆ ಪ್ರೀತಿ ಸೈನಿಕರೆಲ್ಲಾ ರೆಸ್ಟ್ ನಲ್ಲಿದ್ದಾರೆ ಏನು ಮಾಡುವುದು?

ಕಾವ್ಯಯಾನ Read Post »

ಇತರೆ

ಮಾನವ ಹಕ್ಕುಗಳು

ಡಿಸೆಂಬರ್ – 10 ಮಾನವ ಹಕ್ಕುಗಳ ರಕ್ಷಣಾ ದಿನ. ಈ ಹಕ್ಕುಗಳ ರಕ್ಷಣೆ ಅರ್ಥಪೂರ್ಣವಾಗಿ ಸಾಕಾರಗೊಳುತ್ತಿದೆಯೇ..? ಅಲ್ಲದೇ ಭಾರತದಲ್ಲಿ ‘ಮಾನವ ಹಕ್ಕು’ಗಳ ಸ್ಥಿತಿ‌ ಹೇಗಿದೆ..!? ಕೆ.ಶಿವು.ಲಕ್ಕಣ್ಣವರ ಇದೇ ಡಿಸೆಂಬರ್ 10ರಂದೇ ಈ ಮಾನವ ಹಕ್ಕುಗಳ ರಕ್ಷಣಾ ದಿನದ ಈ ಲೇಖನ ಬರೆಯಬೇಕಾಗಿತ್ತು ನಾನು. ಅಲ್ಲದೇ ಇನ್ನೂ ಒಂದಿಷ್ಟು ಸಾಂದರ್ಭಿಕ ಲೇಖನಗಳನ್ನೂ ಬರೆಯಬೇಕಾಗಿತ್ತು. ಆದರೆ ಈ ಯಾವುದೋ ಲೇಖನಗಳ ಮಾಹಿತಿ ಸಂಗ್ರಹಕ್ಕಾಗಿ ಹೀಗೆಯೇ ಸಿರಿಗೆರೆ ಹೋಗಿದ್ದೆ. ಹಾಗಾಗಿ ಈ ಡಿಸೆಂಬರ್ ‌10ರ ಈ ಮಾನವ ಹಕ್ಕುಗಳ ರಕ್ಷಣಾ ದಿನದ ಮಾಹಿತಿ ಲೇಖನ ಬರೆಯಲಾಗಲಿಲ್ಲ. ಅದಕ್ಕಾಗಿ ಈಗ ಬರೆಯುತ್ತಿದ್ದೇನೆ… ಪ್ರಪಂಚದ ಎಲ್ಲಾ ನಾಗರಿಕರಿಗೆ ಮಾನವ ಹಕ್ಕುಗಳು ದೊರಕುವುದನ್ನು ಖಾತ್ರಿಪಡಿಸುವ ಹೊಣೆ ವಿಶ್ವಸಂಸ್ಥೆಯದು. ಈ ಹಕ್ಕುಗಳು ಎಲ್ಲರಿಗೂ ದೊರಕಿವೆಯೆ? ಮನುಷ್ಯರು ಇರುವ ಎಲ್ಲಾ ಕಡೆ ಅವರಿಗೆ ಹಕ್ಕುಗಳು ಇರುತ್ತವೆ. ಇಂದಿನ ಸಮಾಜದಲ್ಲೂ ಮನುಷ್ಯರ ಹಕ್ಕುಗಳಿಗೆ ಮಾನ್ಯತೆಯನ್ನು ಕೊಡಲಾಗಿದೆ… ಪ್ರಪಂಚದಲ್ಲಿ ಡಿಸೆಂಬರ್ ಹತ್ತನೇ ತಾರೀಖನ್ನು ವಿಶ್ವಾದ್ಯಂತ ‘ಮಾನವ ಹಕ್ಕುಗಳ ದಿನ’ ಎಂದು ಆಚರಿಸಲಾಗುತ್ತಿದೆ. ಡಿಸೆಂಬರ್ 10, 1948ರಂದು ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಚಾರ್ಟರ್‍ಗೆ ಮನ್ನಣೆಯನ್ನು ನೀಡಿತು. ಇದನ್ನು ವಿಶ್ವಸಂಸ್ಥೆಯು ತನ್ನ ಎಲ್ಲಾ ಸದಸ್ಯ ದೇಶಗಳನ್ನು ಕಡ್ಡಾಯಗೊಳಿಸಿದೆ. ಈ ಹಕ್ಕುಗಳ ಬಗ್ಗೆ ಎಲ್ಲಾ ಸದಸ್ಯ ರಾಷ್ಟ್ರಗಳು ತಮ್ಮಲ್ಲಿನ ವಿದ್ಯಾರ್ಥಿ ಸಮುದಾಯಕ್ಕೆ, ಯುವಜನರಿಗೆ ತಿಳುವಳಿಕೆ ನೀಡಬೇಕೆಂದು ಕಡ್ಡಾಯಗೊಳಿಸಿದೆ… ಮಾನವ ಹಕ್ಕುಗಳ ದಿನ ಆಚರಿಸುವುದರ ಹಿಂದಿನ ಪ್ರಮುಖ ಉದ್ದೇಶ ಎಂದರೆ, ಪ್ರಪಂಚದಲ್ಲಿ ಮನುಷ್ಯರು ಮೂಲಭೂತ ಸೌಲಭ್ಯಗಳನ್ನು, ನ್ಯಾಯವನ್ನು ಮತ್ತು ಶಾಂತಿಯನ್ನು ಪಡೆದುಕೊಳ್ಳಲು ಹುಟ್ಟಿದಾಗಿನಿಂದಲೇ ಹಕ್ಕುಳ್ಳವರಾಗಿದ್ದಾರೆ; ಈ ಹಕ್ಕುಗಳನ್ನು ಹೊಸಕಿ ಹಾಕುವ ಅಧಿಕಾರವು ಪ್ರಪಂಚದ ಯಾವ ಶಕ್ತಿಗೂ ಇಲ್ಲ. ಎಲ್ಲಾ ದೇಶಗಳ ನಾಗರಿಕರಿಗೆ ಮಾವನ ಹಕ್ಕುಗಳು ಕಡ್ಡಾಯವಾಗಿ ದೊರಕಬೇಕು ಎಂಬುದನ್ನು ತಿಳಿಸಿ ಕೊಡುವುದು… ಮಾನವ ಹಕ್ಕುಗಳ ಚಾರ್ಟರ್‍ನಲ್ಲಿ ಅನುಚ್ಛೇದ-1, ಪ್ರತಿಯೊಬ್ಬ ಮನುಷ್ಯರಿಗೆ ಗೌರವ ಮತ್ತು ಹಕ್ಕು ಸಮಾನವಾಗಿ ದೊರಕಬೇಕು ಎಂದು ಹೇಳುತ್ತದೆ. ಅನುಚ್ಛೇದ-2, ಎಲ್ಲಾ ಮನುಷ್ಯರಿಗೆ ಅವರ ಬಣ್ಣ, ಜಾತಿ, ವಂಶ, ಲಿಂಗ, ಭಾಷೆ, ಪ್ರದೇಶ ಮತ್ತು ರಾಜಕೀಯ ವಿಚಾರಗಳ ಆಧಾರದಲ್ಲಿ ತಾರತಮ್ಯ ಮಾಡದೆ, ಮಾನವ ಹಕ್ಕುಗಳನ್ನು ಒದಗಿಸತಕ್ಕದ್ದು ಎಂದು ಹೇಳುತ್ತದೆ. ಅನುಚ್ಛೇದ-5, ಮನುಷ್ಯರ ವಿಷಯದಲ್ಲಿ ಅಮಾನವೀಯವಾಗಿ ಯಾರೂ ವರ್ತಿಸತಕ್ಕದ್ದಲ್ಲ ಎನ್ನುತ್ತದೆ. ಅನುಚ್ಛೇದ-12, ವ್ಯಕ್ತಿಯ ವೈಯಕ್ತಿಯ ಮತ್ತು ಸಾಂಸಾರಿಕ ಜೀವನದಲ್ಲಿ ಯಾವುದೇ ಅಡ್ಡಿಯನ್ನು ಯಾರೂ ಉಂಟು ಮಾಡತಕ್ಕದ್ದಲ್ಲ ಎನ್ನುತ್ತದೆ. ಈ ಪ್ರಕಾರ, ಒಟ್ಟು 30 ಅನುಚ್ಛೇದಗಳಲ್ಲಿ ಮನುಷ್ಯರಿಗೆ ಮುಕ್ತವಾಗಿ, ಸಮಾನವಾಗಿ ಮತ್ತು ಗೌರವದಿಂದ ಬದುಕುವ ಎಲ್ಲಾ ಹಕ್ಕುಗಳನ್ನು ಒದಗಿಸಲಾಗಿದೆ… ಇಷ್ಟೆಲ್ಲಾ ಹಕ್ಕುಗಳನ್ನು ಮನುಷ್ಯರಿಗೆ ಒದಗಿಸಿದ್ದರೂ, ಪ್ರಪಂಚಾದ್ಯಂತ ಇಂದು ಅನ್ಯಾಯ, ಅಶಾಂತಿ, ಆಕ್ರಮಣ ಎಡೆಬಿಡದೆ ನಡೆಯುತ್ತಿರುವುದು ಅತ್ಯಂತ ಕಳವಳದ ವಿಷಯವಾಗಿದೆ. ವಿಶ್ವದಲ್ಲಿ ಮಾನವ ಹಕ್ಕುಗಳ ಸಂಘಟನೆಗಳು ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ನಾಗರಿಕ ಸಂಘಟನೆಗಳು ಮೇಣದ ಬತ್ತಿ ಹಚ್ಚಿ, ಸರ್ಕಾರಗಳು ವಿಚಾರ ಸಂಕಿರಣಗಳನ್ನು ಏರ್ಪಡಿಸುವ, ಜಾಹೀರಾತು ನೀಡುವ, ಭಾಷಣ ಏರ್ಪಡಿಸುವುದು, ನ್ಯಾಯ ಮತ್ತು ಶಾಂತಿ ಎಲ್ಲೆಡೆ ಖಾಯಂ ಆಗಿ ಇರಬೇಕು ಎಂದು ಪ್ರತಿಪಾದಿಸುವುದು, ಮಾನವ ಹಕ್ಕುಗಳ ರಕ್ಷಣೆ ಮಾಡಬೇಕೆಂಬ ಭರವಸೆ ನೀಡುವುದು… ಇತ್ಯಾದಿಗಳು ನಡೆಯುತ್ತವೆ. ಆದರೂ, ಪ್ರಸ್ತುತ ಸಮಾಜ ಅನೇಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದರೂ, ಸಾಮಾನ್ಯ ಜನರಿಗೆ ಮಾತ್ರ ಯಾವ ಮಾನವ ಹಕ್ಕುಗಳೂ ದೊರಕುತ್ತಿಲ್ಲವಲ್ಲ. ಪ್ರಪಂಚದಲ್ಲಿ ಎಲ್ಲರೂ ನಿರ್ಭಯವಾಗಿ ಜೀವಿಸಬೇಕು. ಜೀವನಾವಶ್ಯಕ ವಸ್ತುಗಳನ್ನು ಅಂದರೆ ಆಹಾರ, ಬಟ್ಟೆ, ವಸತಿ ಪಡೆದುಕೊಳ್ಳಬೇಕು; ಆದರೆ, ಬಹುಸಂಖ್ಯೆ ಜನರಿಗೆ ಇವುಗಳು ಯಾವುವೂ ಸಿಕ್ಕುತ್ತಿಲ್ಲ. ಅದೇ ರೀತಿ, ಮನುಷ್ಯರು ಮುಕ್ತವಾಗಿ ಯೋಚಿಸುವ ಮತ್ತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ಕೂಡ ಮಾನವ ಹಕ್ಕುಗಳಲ್ಲಿ ಸೇರಿದೆ. ಆದರೆ, ಇದಕ್ಕೂ ಕೂಡ ವಿಶ್ವದಲ್ಲಿ ಯಾವುದೇ ಅವಕಾಶ ಇಲ್ಲ… ನಮ್ಮ ದೇಶದಲ್ಲೂ ಮಾನವ ಹಕ್ಕುಗಳ ಸ್ಥಿತಿ ಹೀನಾಯ ಮಟ್ಟ ಮುಟ್ಟಿದೆ. ದೇಶದ ನೂರಾರು ಹಳ್ಳಿಗಳಲ್ಲಿ ಕೋಟ್ಯಂತರ ಜನರು ಇಂದಿಗೂ ಮೂಲಹಕ್ಕುಗಳಿಂದ ವಂಚಿತರಾಗಿದ್ದಾರೆ. ವಿಶ್ವಸಂಸ್ಥೆಯ ಅನುಚ್ಛೇದ-5ರ ಪ್ರಕಾರ, ಮನುಷ್ಯರ ಮೇಲೆ ದೌರ್ಜನ್ಯ ಅಥವಾ ಅಮಾನುಷ ಕೃತ್ಯಗಳಿಗೆ ಮನುಷ್ಯರನ್ನು ಗುರಿಪಡಿಸುವುದು ಅಪರಾಧ. ಆದರೆ, ಪ್ರಪಂಚದ ಹಲವಾರು ದೇಶಗಳನ್ನು ಅಮೆರಿಕಾ ಭೀತಿಯಲ್ಲಿ ಇಟ್ಟಿದೆ; ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಚಾರ್ಟರ್‍ನಲ್ಲಿ ಇರುವ ಎಲ್ಲಾ ಹಕ್ಕುಗಳನ್ನು ಅಮೆರಿಕಾ ಉಲ್ಲಂಘಿಸಿಕೊಂಡೇ ಬಂದಿದೆ. ಈ ಕುರಿತು ವಿಶ್ವಸಂಸ್ಥೆ ಕೂಡ ಏನು ಕ್ರಮ ಕೈಗೊಳ್ಳಬೇಕೊ, ಅದನ್ನು ಕೈಗೊಂಡಿಲ್ಲದಿರುವುದು ವಿಷಾದದ ವಿಷಯವೇ ಸರಿ… ಬಂಡವಾಳಶಾಹಿ ವ್ಯವಸ್ಥೆ, ಜಾತಿ ವ್ಯವಸ್ಥೆ, ಜಮೀನ್ದಾರಿ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ಇಲ್ಲಿನ ನಾಗರಿಕರಲ್ಲಿ ಭೀತಿಯನ್ನು ಹುಟ್ಟಿಸಿವೆ; ಅಮಾಯಕರ ಮೇಲೆ ದೌರ್ಜನ್ಯಗಳನ್ನು ನಡೆಸುತ್ತಿವೆ. ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರು ಭಾರತದಲ್ಲಿ ಗೌರವದಿಂದ ಬದುಕುವುದು ದುಸ್ತರವಾಗಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಚಾರ್ಟರ್‍ನ ಅನುಚ್ಛೇದ -25ರ ಪ್ರಕಾರ, ಇಲ್ಲಿ ಎಲ್ಲಾ ಮಾನವರಿಗೆ ತಮ್ಮ ಕುಟುಂಬ ಸಮೇತ ಆಹಾರ, ಆರೋಗ್ಯ, ಗೌರವದೊಂದಿಗೆ ಜೀವಿಸುವ ಹಕ್ಕು ದೊರಕಿದೆ. ಎಲ್ಲಾ ನಾಗರಿಕರಿಗೆ ಈ ಮೂಲಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ನಮ್ಮ ದೇಶವು ಕೂಡ ಮಾನವ ಹಕ್ಕುಗಳನ್ನು ಉಳಿಸುವ ನಿಟ್ಟಿನಲ್ಲಿ ತನ್ನ ದಾಖಲೆಯನ್ನು ಸುಧಾರಿಸಿಕೊಳ್ಳಬೇಕಿದೆ… ಮತ್ತದೇ ಇಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಜೀವಂತಿಕೆ ಇರುವುದೇ ನಾಗರಿಕ ಸಮಾಜದ ಸ್ವತಂತ್ರ ಬದುಕಿನಿಂದ. ಹಾಗಾಗಿ ಸಂವಿಧಾನ ಹಾಗೂ ಕಾನೂನು ನೀಡಿರುವ ಮಾನವ ಹಕ್ಕುಗಳನ್ನು ಬೆಂಬಲಿಸಿ, ಬಾಳಬೇಕಿದೆ. ಇನ್ನೋರ್ವರ ಸ್ವಾತಂತ್ರಯವನ್ನು ಗೌರವಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಈ ದಿನದ ಸಂದೇಶ ಪೂರಕವಾಗಲಿ ಎಂಬುದೇ ಸದಾಶಯ… ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಸ್ವತಂತ್ರವಾಗಿ ಜೀವಿಸುವ ಹಕ್ಕು ಹೊಂದಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಯನ್ನು ಗೌರವ ಮತ್ತು ಆದರದಿಂದ ಕಂಡರೆ ಅದೇ ನಾವು ಮಾನವ ಹಕ್ಕುಗಳಿಗೆ ನೀಡುವ ಗೌರವ. ಸಮಾಜದಲ್ಲಿ ದುರ್ಬಲರು, ಶೋಷಿತರನ್ನು ರಕ್ಷಿಸುವಲ್ಲಿ ಮಾನವ ಹಕ್ಕುಗಳು ಅತ್ಯಂತ ಗಮನಾರ್ಹ ಪಾತ್ರ ವಹಿಸಿವೆ… ಜಗತ್ತಿನಾದ್ಯಂತ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅದರ ರಕ್ಷಣೆಗಾಗಿ ದಿನನಿತ್ಯ ಹೋರಾಟಗಳು ನಡೆಯುತ್ತಲೇ ಇವೆ. “ಜನರ ಹಕ್ಕುಗಳನ್ನು ನಿರಾಕರಿಸಿದರೆ ಅದು ಅವರ ಮನುಷ್ಯತ್ವವನ್ನು ತಿರಸ್ಕರಿಸಿದಂತೆ’ ಎಂದು ದಕ್ಷಿಣ ಆಫ್ರಿಕಾದ ಗಾಂಧಿ ಎಂದು ಕರೆಸಿಕೊಳ್ಳುವ ನೆಲ್ಸನ್‌ ಮಂಡೇಲಾ ಮಾನವ ಹಕ್ಕುಗಳ ಕುರಿತು ಹೇಳಿದ್ದಾರೆ… ವಿಶ್ವದಲ್ಲಿ ಮಾನವ ಹಕ್ಕುಗಳ ಜಾರಿ– 1948ರ ಜಾಗತಿಕ ಮಹಾಯುದ್ಧದಲ್ಲಿ ಸಂಭವಿಸಿದ ಆಪಾರ ಸಾವುನೋವಿನಿಂದ ಮನನೊಂದು ಜಗತ್ತು ಹಿಂಸೆಯನ್ನು ತ್ಯಜಿಸಬೇಕು ಎಂಬ ನಿಲುವಿಗೆ ಬಂತು. ಈ ವಿಚಾರವಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಮಾನವ ಹಕ್ಕುಗಳನ್ನು ಜಾರಿಗೊಳಿಸಲು ಒಮ್ಮತ ಸೂಚಿಸಿದವು. ಇದರ ಪರಿಣಾಮವಾಗಿ 1948ರ ಡಿ. 10ರಂದು ವಿಶ್ವ ಸಂಸ್ಥೆಯಲ್ಲಿ ಮಾನವ ಹಕ್ಕುಗಳನ್ನು ಘೋಷಣೆ ಮಾಡಲಾಯಿತು. ಇದರ ಮುಖ್ಯ ಕಚೇರಿ ಜಿನೆವಾದಲ್ಲಿದೆ. ಅಂದಿನಿಂದ ವಿಶ್ವಾದ್ಯಂತ ವರ್ಣ, ಧರ್ಮ, ಲಿಂಗ, ಭಾಷೆ, ಅಂತಸ್ತು, ಸಾಮಾಜಿಕ, ರಾಷ್ಟ್ರೀಯತೆ ಹಿನ್ನೆಲೆಯಲ್ಲಿ ನಡೆಯುವ ತಾರತಮ್ಯ, ದೌರ್ಜನ್ಯ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಘೋಷಣೆಯಾಗಿ 71 ವರ್ಷಗಳು ಕಳೆದರೂ ಇಂದಿಗೂ ತನ್ನ ಪ್ರಾಮುಖ್ಯವನ್ನು ಉಳಿಸಿಕೊಂಡಿರುವುದು ಗಮನಾರ್ಹ ಸಂಗತಿ… ಆಯೋಗ‌ದ ಕಾರ್ಯಗಳು– 1 ವಿಶ್ವದ 78 ರಾಷ್ಟ್ರಗಳ 40,000 ಜನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿದೆ. 2 27 ರಾಷ್ಟ್ರಗಳಿಂದ 10,000 ಜನರಿಗೆ ಗುಲಾಮಗಿರಿ ಯಿಂದ ಮುಕ್ತಿ 3 2,101 ಬಂಧನ ಸ್ಥಳಗಳಿಗೆ ಭೇಟಿ ನೀಡಿದೆ. 4 7,504 ವಿಶ್ವಾದ್ಯಂತ ಮಾನವ ಹಕ್ಕುಗಳ ಪರಿಸ್ಥಿತಿ ತನಿಖೆ ಮತ್ತು ದಾಖಲೆಗಾಗಿ ಸ್ಥಾಪಿಸಲಾದ ಮೇಲ್ವಿಚಾರಣೆ ಮಿಶನ್‌ಗಳು. 5 692 ದಾಖಲಾದ ಹೊಸ ಆರೋಪಗಳು… 1 2016ರಿಂದ 2019ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಆಯೋಗಕ್ಕೆ ಅಲ್ಪಸಂಖ್ಯಾಕರು ಹಾಗೂ ದಲಿತರ ಮೇಲೆ ಗುಂಪು ಥಳಿತ ಮತ್ತು ದೌರ್ಜನ್ಯದ ಬಗ್ಗೆ ದಾಖಲಾದ ಅಪರಾಧಗಳ ಸಂಖ್ಯೆ -2,008. ಅತೀ ಹೆಚ್ಚು ಉ.ಪ್ರದೇಶ- 869 2 ಭಾರತದಲ್ಲಿ ಒಟ್ಟು 25 ರಾಜ್ಯಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ರಚಿಸಲಾಗಿದೆ. 3 ಅಸ್ಸಾಂ ಮೊದಲ ರಾಜ್ಯವಾಗಿದೆ (ಜನವರಿ 19, 1996) 4 ಕರ್ನಾಟಕದಲ್ಲಿ ಜೂನ್‌ 25, 2005ರಂದು ರಚನೆಯಾಗಿದೆ. 5 ರಾಜ್ಯದಲ್ಲಿ ಇದುವರೆಗೆ ಏಳು ಜನ ಅಧ್ಯಕ್ಷರು ಕಾರ್ಯನಿರ್ವಹಿಸಿದ್ದಾರೆ. ನ್ಯಾ| ರಂಗನಾಥ್‌ ಮಿಶ್ರಾ ಮೊದಲಿಗರು… ಪ್ರಮುಖವಾಗಿ ಪ್ರಜ್ಞಾವಂತರು ಜನರಲ್ಲಿ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸದಲ್ಲಿ ತೊಡಗಬೇಕಿದೆ; ಸರ್ಕಾರಗಳ ಮೇಲೆ ಒತ್ತಡ ಹೇರಿ, ಜನರಿಗೆ ಮಾನವ ಹಕ್ಕುಗಳು ದೊರಕುವಂತೆ ನೋಡಿಕೊಳ್ಳಬೇಕು. ಈ ಮೂಲಕ ಮಾನವ ಹಕ್ಕುಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು… ಆಗ ಮಾತ್ರ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ನಿಜವಾದ ಅರ್ಥ ಬರುವುದು… ಹೀಗೆಯೇ ಈಗ ಭಾರತದಲ್ಲಿ ‘ಮಾನವ ಹಕ್ಕು’ಗಳ ಸ್ಥಿತಿಯ ಬಗೆಗೆ ನೋಡೋಣ… ಭಾರತದಲ್ಲಿ ‘ಮಾನವ ಹಕ್ಕು’ಗಳು– ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ. ವಾಕ್ಯಾಂಗದ ಉಪ ನಿಯಮಗಳು ಮಾತನಾಡುವ (ಹಕ್ಕು)ಸ್ವಾತಂತ್ರ್ಯತೆಯನ್ನು ಒದಗಿಸಿದೆ. ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾಗಿದ್ದು, ದೇಶದ ಒಳಗೆ ಮತ್ತು ಹೊರಗೆ ಎಲ್ಲಾ ರೀತಿಯ ಚಲನೆಯ ಸ್ವಾತಂತ್ರ್ಯವನ್ನೂ ನೀಡಲಾಗಿದೆ… ಮತ್ತೆ ಮತ್ತೆ ಹೇಳುವಂತೆ, ಅದರಲ್ಲಿಯೂ ಭಾರತೀಯ ಮಾನವ ಹಕ್ಕುಗಳ ತಂಡವು ಮತ್ತು ಕ್ರಿಯಾಶೀಲರು ಹೇಳುವಂತೆ, ದಲಿತ ಸಂಘದ ಸದಸ್ಯರು ಅಥವಾ ಅಸ್ಪೃಶ್ಯರು ಬಹಳ ಕಷ್ಟ ಅನುಭವಿಸಿದ್ದು, ಈಗಲೂ ಅನುಭವಿಸುತ್ತಿದ್ದು, ಗಣನೀಯ ತಾರತಮ್ಯದ ವಿವೇಚನೆಯಿಂದ ಇನ್ನೂ ತೊಳಲಾಡುತ್ತಿದ್ದಾರೆ. ಭಾರತದಲ್ಲಿ ಮಾನವ ಹಕ್ಕುಗಳು ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ದೇಶವು ಸಾಮಾನ್ಯವಾಗಿ ಮಾನವ ಹಕ್ಕುಗಳಿಗೆ ಸಂಬಂಧಪಟ್ಟಂತೆ ಗಮನಕೊಡುವಂತಹದ್ದಲ್ಲ,ಬೇರೆ ದೇಶಗಳಲ್ಲಿರುವಂತೆ ದಕ್ಷಿಣ ಏಷ್ಯದಲ್ಲಿ . ಈ ವಿಷಯಗಳನ್ನು ಪರಿಗಣನೆಗೆ ತೆಗೆದುಕೊಂಡು, ವಿಶ್ವ ೨೦೦೬ರ ಸ್ವಾತಂತ್ರ್ಯ ವರದಿಯ ಅನ್ವಯ, ಸ್ವಾತಂತ್ರ್ಯದ ಮನೆಯು, ಭಾರತಕ್ಕೆ ರಾಜಕೀಯ ಹಕ್ಕಿಗೆ ೨ನೇ ಸ್ಥಾನವನ್ನು ಹಾಗೂ ನಾಗರೀಕ ಸ್ವಾತಂತ್ರಕ್ಕೆ ೩ನೇ ಸ್ಥಾನವನ್ನು ಕೊಟ್ಟು , ಸ್ವಾತಂತ್ರತೆಯಲ್ಲಿ ಅತ್ಯಂತ ಉನ್ನತ ದರ್ಜೆಯ ಸ್ಥಾನವನ್ನು ಪಡೆಯಿತು… ಭಾರತದಲ್ಲಿ ಮಾನವ ಹಕ್ಕುಗಳ ಕಾಲಗಣನೆಯ ಘಟನೆಗಳು– ೧೮೨೯ – ಸಾಂಪ್ರದಾಯಿಕ ಹಿಂದೂ ಅಂತ್ಯ ಸಂಸ್ಕಾರದ ಆಚರಣೆಯ ವಿರುದ್ಧ, ಅಂದರೆ ಗಂಡನ ಸಾವಿನ ನಂತರ ವಿಧವೆಯರು ಸ್ವತಃ ಅಗ್ನಿಗಾಹುತಿಗೆ ಒಳಗಾಗುವ ಅಥವಾ ಸತಿ ಸಹಗಮನದಂತಹ ಕೆಟ್ಟ ಸಂಪ್ರದಾಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ,ಹಿಂದೂ ಧರ್ಮ ಸುಧಾರಣಾ ಚಳುವಳಿಗಳಂತಹ, ಬ್ರಹ್ಮಸಮಾಜದ ಸ್ಥಾಪಕರಾದ ರಾಜಾ ರಾಮ್ ಮೋಹನ್ ರಾಯರ ನೆರವಿನಿಂದ, ಬದಲಾವಣೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ, ಅಂದಿನ ಗವರ್ನರ್ ಜನರಲ್ ವಿಲಿಯಂ ಬೆಂಟಿಂಕ್‌ನು ಭಾರತದ ಹಿಂದೂ ಧರ್ಮದಲ್ಲಿ ಜಾರಿಯಲ್ಲಿದ್ದ ‘ಸತಿ’ ಪದ್ಧತಿಯನ್ನು, ಆಡಳಿತಾತ್ಮಕವಾಗಿ, ತೊಡೆದು ಹಾಕಿದನು/ ರದ್ದುಗೊಳಿಸಿದನು. ೧೯೨೯ – ಬಾಲ್ಯ ವಿವಾಹ ನಿಷೇಧ ಕಾಯಿದೆ , ೧೪ ವರ್ಷ ತುಂಬಿದ ಎಲ್ಲಾ ಚಿಕ್ಕ ವಯಸ್ಸಿನವರ ವಿವಾಹವನ್ನು ನಿಷೇಧಿಸುವುದು… ೧೯೪೭ – ಬ್ರಿಟಿಷ್ ರಾಜರಿಂದ ರಾಜಕೀಯ ಸ್ವತ್ರಂತ್ರವನ್ನು ಭಾರತ ಪಡೆಯಿತು. ೧೯೫೦ – ಭಾರತದ ಸಂವಿಧಾನದ ರಚನೆಯಿಂದಾಗಿ, ಪ್ರಜಾಪ್ರಭುತ್ವದ ಸಾರ್ವಭೌಮತ್ವದ ಗಣರಾಜ್ಯವಾಗಿ ಶ್ರೀಸಾಮಾನ್ಯರಿಗೆ ಮತದಾನ ಮಾಡುವ ಹಕ್ಕು. ಸಂವಿಧಾನದ ೩ನೇ

ಮಾನವ ಹಕ್ಕುಗಳು Read Post »

ಇತರೆ

ಕಾವ್ಯ ಪರಂಪರೆ

ಬನ್ನಿ ನಮ್ಮ ಜೊತೆಗೂಡಿ…….. ಪ್ರತಿ ತಿಂಗಳ ಕಾರ್ಯಕ್ರಮ ಹಳಗನ್ನಡ ವಾಚನ ಮತ್ತು ವ್ಯಾಖ್ಯಾನ ದಿನಾಂಕ:15/12/2019 ಭಾನುವಾರ ಬೆಳಿಗ್ಗೆ 11ಕ್ಕೆ. ಮಹಿಳಾ ವಿಶ್ರಾಂತಿ ಕೊಠಡಿ ರವೀಂದ್ರ ಕಲಾಕ್ಷೇತ್ರ, ಬೆಂಗಳೂರು. ಬನ್ನಿ ನಮ್ಮ ಜೊತೆಗೂಡಿ……..

ಕಾವ್ಯ ಪರಂಪರೆ Read Post »

ಕಾವ್ಯಯಾನ

ಕಾವ್ಯಯಾನ

ಆರ್ಭಟ ಅವ್ಯಕ್ತ ದಿನಕರನ ಉದಯ, ಅಳಿವಿಲ್ಲದ ಅಂಧಾಕಾರವಾಗಿದೆ, ಶಶಿಧರನ ತಂಪು, ಕೋಲ್ಮಿಂಚಿನ ಧಗೆಯಾಗಿದೆ. ನೀಲಿ ಗಗನದಲಿ ಕಾರ್ಮೋಡ ಕವಿದು ನಿಂತಿದೆ, ತಂಪು ಗಾಳಿಯಲಿ ದುರ್ಗಂಧ ಪಸರುತ್ತಿದೆ, ತಿಳಿ ನೀರಿನಲಿ ವಿಷದ ತೊಟ್ಟೊಂದು ಸೇರಿದೆ, ಹಸಿರು ತುಂಬಿರಬೇಕಾದ ನೆಲ ಬಂಜರಾಗಿ ಹೋಗಿದೆ… ಸ್ತಬ್ಧ ಶಿಲೆಗಳ ಕಣ್ಣಂಚಿನಲ್ಲಿ ಒಂದು ಹನಿ ನೀರಿಲ್ಲ, ಯಾವ ರೋಧನೆಗೂ ಕಿವಿಯೊಂದು ಒಡೆಯಲಿಲ್ಲ, ಮಿಡಿವ ಕಲ್ಲು ಚೂರಾದರೂ ಮನಕೆ ನಾಟಲಿಲ್ಲ, ದೈತ್ಯಾಕಾರದ ಭುಜಗಳಿಗೆ ವ್ಯಾಘ್ರತ್ವದ ಅರಿವಿಲ್ಲ, ಆ ಭಯಂಕರ ಆಕ್ರಂದ! ಯಾವ ಪಾಪದ ಶಿಕ್ಷೆಯೋ ಇದು, ಕಣ್ಮನಗಳನ್ನು ಸುಡುವುದು, ಮುಗ್ಧತೆಯ ಪರಿಹಾರವಿದು, ಕಡುತಂಪಿನಲಿ ಮೈ ಬೆವರಿದೆ, ಮನೆ ಪುನಃ ಪುನಃ ಮರುಗಿದೆ, ಬಣ್ಣದ ಓಕುಳಿಯ ನಡುವಿನಲ್ಲಿ ಮನುಷ್ಯತ್ವ ಮಾಯವಾಗಿದೆ. ಅಮಾನುಷತೆ ಪ್ರತಿರೂಪ, ನೋಡಿಲ್ಲಿ ನಿಂತಿದೆ, ಪ್ರಾಣಿಗೂ ಮೀರಿದ ಕ್ರೌರ್ಯತೆ ಈಗಿಲ್ಲಿ ನಡೆದಿದೆ, ಮದವೇರಿದ ರಕ್ಕಸಮೃಗಕ್ಕೆ ಕಿತ್ತುತಿಂದ ಸಂತೃಪ್ತಿ ಇದೆ, ತೋಳಗಳ ನಡುವಿನಲಿ ಜಿಂಕೆಯೊಂದು ಅರೆಜೀವವಾಗಿದೆ. ಮರಿಯಾಗಿ ಅರಳಿ, ಕಿರಿಯಾಗಿ ಪ್ರೀತಿಸಿ, ಸಂಗಾತಿಯಾಗಿ ರಾಜಿಸಿ , ಮರವಾಗಿ ಸಲುಹಿ, ಗುರುವಾಗಿ ಬೋಧಿಸಿ, ಸ್ವತಂತ್ರವಾಗಿ ಗಗನಕ್ಕೇರೀ, ಆದರೆ…. ಆದರೆ… ಈಗ ಹೆಣ್ಣಾಗಿದ್ದಕ್ಕೆ ಮರುಗಿ…!!! ಛೆ ಹೀಗಾಯಿತೆ ಇವಳ ಬಾಳಿನ ನೌಕೆ, ದಡ ಸೇರುವ ಮುನ್ನವೇ ಮುರಿದು ಚೂರಾಗಿಹೋಯಿತೇ, ಎಂದು ಮರುಗಿದರೆ ಬರುವುದೇ ಸಫಲತೆ ??? ಇದು ಎಂದೆಂದಿಗೂ ಮುಗಿಯದ ಕತ್ತಲಿನ ಕಥೆ !!

ಕಾವ್ಯಯಾನ Read Post »

ಅಂಕಣ ಸಂಗಾತಿ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ನನಗೊಂದು ಹವ್ಯಾಸ. ಪ್ರತಿವರ್ಷ ಮೊದಲನೆಯ ದಿನವೇ ಮಕ್ಕಳಲ್ಲಿ ನನ್ನ ಬಗ್ಗೆ ನನಗಿಷ್ಟ ಬರುವ ರೀತಿಯಲ್ಲಿ ಚಾಪು ಮೂಡಿಸುವುದು.ಈ ಬಾರಿ ನಾನು ತುಂಬ ಜೋರು ಎಂಬ ಭಯ ಹುಟ್ಟಿಸೋದು ನನ್ನ ಗುರಿಯಾಗಿತ್ತು. ಕ್ಲಾಸಿನೊಳಗೆ ಬೆಂಕಿಯಂತೆ ನುಗ್ಗಿದೆ. Quiiiiiiiiete! Which category of animals do you belong ? Shameless fellows…what are you looking at? Atleast have the courtesy of wishing! What? should I teach you that  too!!!ಫುಲ್ಲು ಸಿಟ್ಟು ತೋರಿಸುತ್ತಾ ಇಡೀ ಕ್ಲಾಸ್ ತಬ್ಬಿಬ್ಬಾಗಿ ನನ್ನ ನೋಡುವುದನ್ನು ಕಂಡು ಒಳಗೊಳಗೆ ನಗು ನಂಗೆ. ಎಲ್ಲರಂತೆ ಇವಳು ಹೆದರಿದ್ದಳು ಬೇಕಂತಲೇ ಅವಳನ್ನು ನೋಡುತ್ತಾ ಇದು ಸ್ಕೂಲಲ್ಲ ಕಾಲೇಜ್! ಅಂದೆ..      ಬಲೂನ್ ಒಳಗಿನ ಗಾಳಿ ಹೊರಗೆ ಹೋದರೆ ನೆಪ್ಪೆಯಾಗುವಂತೆ ಆದರು. ಸಹಜವಾಗಿ ಇಂಥ ಸಮಯದಲ್ಲಿ ಯಾರೂ ಧೈರ್ಯವಾಗಿ ಮಾತಾಡಲ್ಲ, ಇವಳು “ನೀವು ಕ್ಲಾಸ್ ಟೀಚರ್ರಾ” ಅಂತ ಕೇಳೇ ಬಿಟ್ಲು! ನಾನು “ನಿಮಗ್ಯಾಕೆ ?ಯಾರಾದ್ರೇನು ಬಿಹೇವಿಯರ್ ಇಸ್ ಇಂಪಾರ್ಟೆಂಟ್” ಅಂದೆ. ಮನಸಲ್ಲಿ ಖುಷಿಯಾಯಿತು…. ಇಂದಿನ ಯುಗದ ದೈರ್ಯಶಾಲಿ ನಾರಿಯಾಗುವಳು ಅನ್ಕೊಂಡೆ.  ಇದೊಂದು ಹೊಸ ಹುರುಪಿನವಳು ನನ್ನ ಕ್ಲಾಸಿಗೆ ಆ ವರ್ಷ…ನಿಂತಲ್ಲಿ ನಿಂತರೆ ಕೂತಲ್ಲಿ ಕೂತರೆ ಅಂದು ಸೂರ್ಯ ಪಶ್ಚಿಮದಲ್ಲಿ ಹುಟ್ಟಿಬಿಡುತ್ತಾನೆ. ಚಿಟಿ ಪಿಟಿಪಿಟಿಪಿಟಿ ಮಾತು, ಪ್ರಶ್ನೆಗಳ ಒಂದು ಸಣ್ಣ ಪಿಟಾರಿ,ಬಹುಶಃ ಒಬ್ಬಳೇ ಮಗಳಿರ್ಬೆಕು ಬಹಳ ಮುದ್ದಿನಲ್ಲಿ ಸಾಕಿರಬಹುದು ಅನ್ಕೊಂಡೆ. ಓದುವುದಷ್ಟೇ ಅಲ್ಲ ಹಾಡು, ನೃತ್ಯ, ಬೇರೆ ಕಲೆಗಳು, ಆಟ, ಎಲ್ಲಾದ್ರಲ್ಲೂ ಭಾಗವಹಿಸುವಳು.. ಅಷ್ಟೇ ಅಲ್ಲ ಸರಿ-ತಪ್ಪುಗಳು ಸಂಬಂಧಗಳ ವಿಶ್ಲೇಷಣೆಗಳು ಜೀವನ ಇತ್ಯಾದಿ, ಇತ್ಯಾದಿ, ಪ್ರಶ್ನೆಗಳು… ಕ್ಲಾಸ್ ಲೀಡರ್ ಆದ್ಮೇಲಂತೂ ನನಗೆ ಏನನ್ನೂ ನೆನಪಿಟ್ಕೊಳ್ಳೋ ಗೋಜೇ ಇರ್ಲಿಲ್ಲ. ಅವಳೇ ಒಂದು ಸಣ್ಣ ಲ್ಯಾಪ್ಟಾಪ್. ಲವ್ಲವಿಕೆ ಕುತೂಹಲ ಚುರುಕುತನ ಎಲ್ಲಾ ನೋಡಿ ಅವಳಿಗೆ ಒಂದು ಪೆಟ್ನೆಮ್ ಇಟ್ಬಿಟ್ಟೆ. ನಾನು ಮಾತ್ರ ಹಾಗೆ ಕರಿತ್ತಿದ್ದೆ.. ಆ ಒಂದು ದಿನ ಲ್ಯಾಬ್ ಒಳಗೆ ಕಲ್ಲು ಬಂಡೆಯಂತೆ ಮುಖ ಗಂಟು ಹಾಕಿಕೊಂಡು ಒಳಗೆ ಬಂದ್ಲು…ಮನಸಲ್ಲಿ ಅನ್ಕೊಂಡೆ ಈಗ ಒಂದು ವಾಲ್ಕೆನೊ ಇರಪ್ಟ್ ಆಗಬಹುದು ಅಂತ…ಏನಾಯ್ತೇ…ಕೂಗಾಡ್ತಾಳೆ, ಬೈತಾಳೆ, ಅನ್ಕೊಂಡ್ರೆ, ರಾಣಿ ಉಲ್ಟಾ! ಜೋರು ಅಳು ಬರ್ತಿದೆ, ಅದನ್ನ ಮುಚ್ಚಿಟ್ಕೊಳ್ಳೋ ಹಠ ಬೇರೆ. ಮುದ್ದು ಬಂದ್ಬಿಡ್ತು ಆ ಮಗು ಮೇಲೆ…ನನ್ನದೇ ಒಂದು ರೂಪ ಅವಳಲ್ಲಿ ನೋಡ್ದಂಗಾಯ್ತು…   ಸುಮ್ನೆ ಹೇಳ್ದೆ “ನನಗೆ ಅಹಂಕಾರ ಜಾಸ್ತಿ, ನಾನು ಯಾರ ಎದುರು ಅಳಲ್ಲಾ, ನನ್ನ ನೋವು ಹೇಳಿಕೊಳ್ಳಲ್ಲಾ.. ಯಾಕೆ ಹೇಳಬೇಕು ಅಲ್ವಾ…?” , “ನಾನು ಅಷ್ಟೇ ಮಿಸ್? ನಾನು ಯಾರಿಗೂ ಹೇಳಲ್ಲ” ಅಂದ್ಲು…ಅವಳ ಕಣ್ಣಂಚಲ್ಲಿ ದೊಡ್ಡ ಹೊಳೆ ಕಾಣ್ತಿದೆ. “Good ಅಲ್ಲೆಲ್ಲಾರು ಕೂತ್ಕೋ ಅಳು ಬಂದರೆ ಅಳು. ನಾನು ನೋಡಲ್ಲ, ಆಮೇಲೆ ಬರ್ತೀನಿ” ಅಂದೆ. ಪರ್ವಾಗಿಲ್ಲ ಮಿಸ್ ನಿಮ್ಮತ್ರ ಏನು, ಅಂತ ಹೇಳಿಕೊಂಡು ಅವಳು, ‘ಅವಳ ಸ್ನೇಹಿತ ಇನ್ನಿಲ್ಲ’ ಎಂಬ ವಿಷ್ಯ ಹೇಳಿದ್ಲು, ಜೊತೆಗೆ ಅವನ ಬಗ್ಗೆ ಅಸಂಬಧ ಮಾತಾಡ್ತಿರೋರ ಮೇಲೆಲ್ಲಾ ಸಿಟ್ಟು ಕೂಡ ತೋರ್ಸಿದ್ಲು… ನಾನು ಬಿಟ್ಟೆ ಮನಸಲ್ಲಿರೋ ನೋವೆಲ್ಲ ಹೊರಗೆ ಬಂದು ಬಿಡ್ಲಿ, ಮನಸ್ಸು ಹಗುರ ಆಗುತ್ತೆ ಅಂತ…ಅದ್ರ ಜೊತೆ ಒಂದು ಬಾಂಬ್ ಬಿತ್ತು…, “ನಾನು ಇಷ್ಟಪಡೋರೆಲ್ಲಾ  ನನ್ನಿಂದ ದೂರ ಹೋಗ್ತಾರೆ,ನನಗೆ ಇಷ್ಟ ಪಡೋಕೆ ಭಯ, ನಾ ಇನ್ಮಲೆ ಯಾರನ್ನೂ ಇಷ್ಟಪಡೊದಿಲ್ಲ, ನಾನೊಬ್ಬಳೇ ಇದ್ಬಿಡ್ತೀನಿ”… ವಾಹಾ! ಗಾಂಪೆ, ಅಂತ ಮನಸಲ್ಲಿ ಹೇಳಿಕೊಂಡು ಪರಿಸ್ಥಿತಿ ಅರ್ಥ ಮಾಡಿಕೊಂಡೆ.. ಸ್ವಲ್ಪ ಹೊತ್ತು ಬಿಟ್ಟು…. ಆಯ್ತಾ ಅತ್ತಿದ್ದೆಲ್ಲಾ…ಯಾರ್ನೆಲ್ಲ ಪ್ರೀತಿಸ್ತಿದ್ಯೆ ರಾಣೀsssss? ಯಾರೆಲ್ಲ ಬಿಟ್ಟು ಹೋದ್ರೆ ನಿನ್ನಾ? ಅಂತ ಕೇಳ್ದೆ. ಒಂದೊಂದೇ ಹೆಸರು, ಅದರ ಹಿಂದಿನ ಕಥೆಗಳು, ಎಲ್ಲಾ ಬಂತು.. ಸರಿ ಅವರೆಲ್ಲಾ ನಿನಗೆ ಯಾಕೆ ಇಷ್ಟ ಆದ್ರು ಒಂದೊಂದೇ ಹೇಳು ನೋಡೋಣ..……..ಒಳ್ಳೆ ಮಾತಾಡ್ತಿದ್ರು, ………ಪಟಪಟ ಅಂತ,……. ತುಂಬಾ ಸಹಾಯ ಮಾಡೋರು…. ಎಲ್ಲರನ್ನು ಸಂತೋಷವಾಗಿಡ್ತಿದ್ರು ……ಸಂಬಂಧಗಳಿಗೆ ಬೆಲೆ ಕೊಡ್ತಿದ್ರು,…… ಸಣ್ಣಸಣ್ಣ ಕೆಲಸದಲ್ಲಿ ಸಂತೋಷ ಹಂಚಬಹುದು ಅಂತ ಗೊತ್ತಿತ್ತು…. ಹಾಡು, ನೃತ್ಯ ನಾಟಕ, ಇತ್ಯಾದಿತ್ಯಾದಿ..  ಅಯ್ಯೋ ಬಂಗಾರಿsssss, ಇದೆಲ್ಲ ನಿನ್ನಲ್ಲೇ ಇದ್ಯಲ್ಲೇ.. ಅದಕ್ಕೆ ನಾನು ನಿನ್ನ “…..” ಅಂತ ಕರೆಯೋದು. ಯಾರೂ ನಿನ್ನ ಬಿಟ್ಟು ಹೋಗಿಲ್ಲ, ನಿನ್ನೊಳಗೇ ಇದ್ದಾರೆ! ಅವಳಿಗೇನೋ ಸಮಾಧಾನ ಆಯ್ತು ನನ್ನ ಮಾತು ಕೇಳಿ.ಅಂದು ಮೊಳಕೆಯಾಗಿ ನೋಡಿದ ಅವಳನ್ನು ಈಗ ಮರವಾಗಿ ನೋಡಿದರೆ ಹೆಮ್ಮೆಯಾಗುತ್ತೆ!!  “ಜೀವನದಲ್ಲಿ ಯಾರು ಎಷ್ಟೇ ಮಾನಸಿಕವಾಗಿ, ದೈಹಿಕವಾಗಿ ,ಸಾಮಾಜಿಕವಾಗಿ ಬಲಿಷ್ಠರಾಗಿದ್ದರೂ, ಅವರ ಕುಗ್ಗಿದ ಸಮಯದಲ್ಲಿ ಪ್ರಿಯರ ಒಡನಾಟ, ಪ್ರೀತಿ, ಸಹಾಯ, ಅತಿಮುಖ್ಯ…ಅಂತಹ ವಿಶೇಷ ಚೇತನಗಳಿಗೆ ಸುಮ್ನೆ ಕೈ ಹಿಡಿದರೆ ಸಾಕು ಹಾರುವ ಸಾಮರ್ಥ್ಯ ಅವರೊಳಗೆ ಇರುತ್ತದೆ ”. ——————————————————-

ಅವ್ಯಕ್ತಳ ಅಂಗಳದಿಂದ Read Post »

ಕಾವ್ಯಯಾನ

ಕಾವ್ಯಯಾನ

ನನಗಿಷ್ಟವಾದ ಕವಿತೆ ಕುರಿತು. ಕವಿತೆ ಕವಿಯಿತ್ರಿ-ಪ್ರೊ. ಗೀತಾ ವಸಂತ ಯೂಸ್ ಆಂಡ್ ಥ್ರೋ ಪೆನ್ನು ಬಂದಾಗ ಸಕತ್ತು ಸಂಭ್ರಮ. ಇಂಕು ತುಂಬುವ ರೇಜಿಗೆಯಿಲ್ಲ ನಿಬ್ಬು ಕೊರೆಯುವುದಿಲ್ಲ ಬಳಸು ಬಿಸಾಕು. ಬದುಕು ಎಷ್ಟು ಸರಾಗ.. ಆಮೇಲೆ ಬಂದೇ ಬಂದವು ಯೂಸ್ ಆಂಡ್ ಥ್ರೋ ಲೋಟ ತಟ್ಟೆ ಸಿರಿಂಜು ಹೆಂಡದ ಬಾಟಲು ಸ್ಯಾನಿಟರಿ ಪ್ಯಾಡು ಕಾಂಡೋಮು ಒಳಗೊಳಗೇ ಕೊಳೆತ ಸಂಬಂಧಗಳು ಬಣ್ಣ ಬಣ್ಣದ ರ್ಯಾಪರ್ ಹೊತ್ತವು.. ಪ್ರೇಮದ ನಶೆಯೇರಿಸಿದ್ದ ಅದೇ ಪೆನ್ನು ಲೆಕ್ಕವಿಲ್ಲದಷ್ಟು ಕವಿತೆಗಳ ತಿದ್ದಿ ತೀಡಿ ತಬ್ಬಿಕೊಂಡಾಗ ಎದೆಗೊದ್ದು ಖಾಲಿಯಾಯ್ತು ಕೊಟ್ಟ ಪೆಟ್ಟಿಗೆ ನೀಲಿಗಟ್ಟಿದ ಮೈಯ ಕಡೆಗಣ್ಣಲೂ ಕಾಣದೇ ನಿದ್ದೆಹೋಯ್ತು. ಎಷ್ಟು ಪರೀಕ್ಷೆಗಳ ಬರೆದಾಯ್ತು! ಸೋತಷ್ಟೂ ಎದ್ದುನಿಲ್ಲುವ ಹುಕಿಗೆ ಹಚ್ಚಿದ್ದು ಈ ಪೆನ್ನೇ.. ಆತ್ಮದಲಿ ಅದ್ದಿ ಬರೆದಕ್ಷರಗಳ ಅರಿಯದೇ ಹೋಯ್ತು. ಕೊನೆಯ ಅಕ್ಷರವೊಂದು ಕಲಸಿ ಕಣ್ಣೀರಲ್ಲಿ ಹಿಂಜಿಹೋಗುತ್ತಿರುವಾಗ ಹಾಡುತ್ತಲಿದ್ದಾನೆ ಕಸದ ಗಾಡಿಯವನು ಕರಗುವ ಕಸವ ತನ್ನಿ ಭೂಮಿಯ ಉಳಿಸಬನ್ನೀ.. ನಾ ಪೆನ್ನ ಬಳಸಿದೆನೋ ಪೆನ್ನು ಬಳಸಿತೋ ನನ್ನ! ಎಸೆಯಬಾರದ ಪೆನ್ನು ಚುಚ್ಚುತ್ತಿದೆ ಆತ್ಮಸಾಕ್ಷಿಯನು… ಕವಿಯತ್ರಿ : ಪ್ರೊ. ಗೀತಾ ವಸಂತ ಕವಿತೆ ಕುರಿತು:ಡಾ.ಸಂಗಮೇಶ ಎಸ್.ಗಣಿ ಪ್ರೊ. ಗೀತಾ ವಸಂತ ಅವರ ಈ ಮೇಲಿನ ಕವಿತೆ ಕುರಿತು ಒಂದಿಷ್ಟು…. ಭೌತಿಕ ವಸ್ತುಗಳನ್ನು ಬಳಸುವ ಮನುಷ್ಯ ಮೂಲತಃ ಭೋಗಜೀವಿ. ಈ ನಡುವೆಯೂ ಅವನು ತನ್ನ ಅಂತರಂಗ ಮತ್ತು ಆತ್ಮಶುದ್ಧಿಗೆ ಮಿಡಿಯುವುದೂ ಕೂಡ ಅಷ್ಟೇ ಆತ್ಯಂತಿಕ ಸತ್ಯ. ಲೌಕಿಕ ಮೋಹವನ್ನು ಮೀರುವ ಹಂಬಲ ಮನದೊಳಗೆ ಮೂಡಿ, ಕಾಡಿ ತುಡಿಯುತ್ತಲೇ ಇರುವುದು ಸಹಜವೇ. ಮನುಷ್ಯ ತನ್ನ ಅಂತಿಮ ಗಮ್ಯವನ್ನು ತಲುಪಲು ಆತುಕೊಳ್ಳುವ ಮಾಧ್ಯಮ ಮಾತ್ರ ಈ ಅಶಾಶ್ವತ ಕಾಯವೇ. ಆತ್ಮಿಕ ಆನಂದವನ್ನು ಅನುಭವಿಸಲು ಇಂದ್ರಿಯಗಳನ್ನು ನಿರಾಕರಿಸದ ಅಲ್ಲಮನ ತಾತ್ವಿಕತೆ  ಮನುಷ್ಯ ಬದುಕಿನುದ್ದಕ್ಕೂ ಕಾಡುವುದೂ ದಿಟವೇ ಆಗಿದೆ.  ಲೌಕಿಕ-ಅಲೌಕಿಕ, ಜೀವಾತ್ಮ-ಪರಮಾತ್ಮ,  ಭೋಗ- ತ್ಯಾಗ, ಯೋಗ, ಪಾಪ-ಪುಣ್ಯ, ಮೋಕ್ಷ ಇತ್ಯಾದಿ ತಾತ್ವಿಕ ಸಂಘರ್ಷಗಳ ಮಧ್ಯೆ ತೊಣೆಯುವ ಮನುಷ್ಯ ಭೌತಿಕತೆಗೆ ಆತುಕೊಳ್ಳುವುದು ಸಹಜ. ಮನುಷ್ಯ ಭೌತಿಕ ಸುಖವೇ ಜೀವನದ ಪರಮಸುಖ ಎಂಬ ಭ್ರಮೆಯಲ್ಲಿ ಬದುಕಲು ಶುರುಮಾಡಿದಾಗ ‘ಬಳಸು ಬಿಸಾಕು’ ಎಂಬ ನೆಲೆಗೆ ಬಂದು ತಲುಪಿದ. ಬಳಸಿ ಬಿಸಾಕುವಾಗ ಬದುಕು ಸರಳ ಮತ್ತು ಸುಂದರ ಅನ್ನಿಸಿತು. ಪರಿಕರಗಳನ್ನು ಉಪಯೋಗಿಸುತ್ತ ಸುಖಿಸುತ್ತ ನಡೆದ. ಸುಖ ಉಪಭೋಗಿಸುವ ವಸ್ತುಗಳಲ್ಲಿ ಇದೆ ಎಂದು ಬಲವಾಗಿ ನಂಬಿದ. ಮನಸ್ಸಿನ ಮಾತು ಕೇಳುತ್ತ ನಡೆದ ಮನುಷ್ಯ ಆತ್ಮದ ನುಡಿಗೆ ಕಿವುಡಾದ. ಇದು ಕೆಡಕು ಎಂದೂ ತಿಳಿಯದ ಭ್ರಮೆಯ ಸುಳಿಗೆ ಸಿಲುಕಿದ. ಜೀವನದಲ್ಲಿ ಕೆಲವೊಂದು ವಸ್ತುಗಳನ್ನು ಬಳಸುವುದು ಅವಶ್ಯ.  ಆದರೆ ಅವುಗಳನ್ನು ಬಳಸುವ ಕ್ರಮದಲ್ಲಿ ಎಚ್ಚರ ವಹಿಸುವುದೂ ತೀರ ಅತ್ಯವಶ್ಯ. ಈ ಹಿನ್ನೆಲೆಯಲ್ಲಿ ಸರಕು, ಸಂಬಂಧ, ಬದುಕು, ಲೇಖಕ, ಲೇಖನಿ, ಆತ್ಮಸಾಕ್ಷಿ ಹೀಗೆ ಬಹು ಆಯಾಮಗಳನ್ನು ಅನಾವರಣಗೊಳಿಸುವ ಪ್ರೊ. ಗೀತಾ ವಸಂತ ಅವರ ಕವಿತೆ ಗಮನಾರ್ಹ ಮತ್ತು ಮಹತ್ವದ್ದು ಅನ್ನಿಸಿತು.ಲೇಖಕನ ಆತ್ಮಸಾಕ್ಷಿಯನ್ನೇ ಮುಖ್ಯವಾಗಿಸಿಕೊಂಡ ಕವಿತೆ ಭೌತಿಕ ಸರಕುಗಳನ್ನು ಪ್ರಸ್ತಾಪಿಸುತ್ತ ಸಂಬಂಧಗಳ ಕೊಳಕುತನವನ್ನು ಕುರಿತು ಮಾತನಾಡುವುದು ವಿಶೇಷ ಎನಿಸುತ್ತದೆ. ಜೊತೆಗೆ ಆತ್ಮದ್ರೋಹದ ಕೆಲಸಗಳನ್ನು ಮಾಡುತ್ತಿರುವ ಸೂಕ್ಷ್ಮತೆಯನ್ನು ಕಾಣಿಸುವ ಕವಿತೆಯು ಬರೆಹಗಾರನ ಜವಾಬ್ದಾರಿಯನ್ನೂ ಹೇಳುವುದು ಗಮನಾರ್ಹ. ಪೆನ್ನು ಸೇರಿದಂತೆ ಲೋಟ, ತಟ್ಟೆ,ಸಿರಿಂಜು, ಹೆಂಡದ ಬಾಟಲು, ಸ್ಯಾನಟರಿ ಪ್ಯಾಡು, ಕಾಂಡೋಮು ಇತ್ಯಾದಿ ಬಳಸಿ ಬಿಸಾಕುವ ವಸ್ತುಗಳನ್ನು ಪ್ರತಿಮಿಸುವ ಕವಿತೆಯು, ಮನುಷ್ಯನ ಇಂದಿನ ಜೀವನದಲ್ಲಿ ಸಂಬಂಧಗಳು ತಲುಪಿದ ಕೊಳಕುತನವನ್ನು ಬಯಲು ಮಾಡುತ್ತದೆ. ಒಂದುಕಾಲಕ್ಕೆ ಪುರುಷ ಸಮಾಜದ ಭೋಗದ ವಸ್ತುವಾಗಿದ್ದ ಹೆಣ್ಣೂ ಬಳಸಿ ಬಿಸಾಕಲ್ಪಟ್ಟ ವಸ್ತುವಾಗಿ ಅನುಭವಿಸಿದ ತಪ್ತತೆಯೂ ಇಲ್ಲಿ  ಧ್ವನಿ ಪಡೆದಂತಿದೆ. ಜೀವನದಲ್ಲಿ ಪ್ರೇಮದ ನಶೆ ಏರಿಸಿದ ಪೆನ್ನು ಅಸಂಖ್ಯಾತ ಕವಿತೆಗಳನ್ನು ಹೊಸೆದು ತನ್ನ ತೆಕ್ಕೆಗೆ ಕರೆದುಕೊಳ್ಳುತ್ತದೆ ಎಂಬ ಭ್ರಮೆಯಲ್ಲಿರುವಾಗಲೇ ತನ್ನನ್ನು ಒದ್ದುಬಿಡುವ ಮೂಲಕ ಕವಿಗೆ ಭ್ರಮನಿರಶನ ಉಂಟುಮಾಡುತ್ತದೆ.ಈ ಬದುಕು ಅಕ್ಷರಶಃ ಪರೀಕ್ಷೆ. ಈ ಪರೀಕ್ಷೆಯಲ್ಲಿ ಸೋಲು, ನೋವು,ನಿರಾಶೆ, ಹತಾಶೆಯ  ಪ್ರಶ್ನೆಗಳಿಗೆ ಉತ್ತರಿಸಿ ಸೋತರೂ ಗೆಲುವಿನ, ಯಶಸ್ಸಿನ ಸರಿಯಾದ ಉತ್ತರಕ್ಕೆ ಹವಣಿಸುವ ಪೆನ್ನು ಬದುಕನ್ನು ಗೆಲ್ಲುವ ಜಿದ್ದಿಗೆ ಮನುಷ್ಯನನ್ನು ಈಡು ಮಾಡಿದ್ದೂ ಕೂಡ ಗಮನಾರ್ಹ. ಆತ್ಮರತಿಯಲ್ಲಿ ತೊಡಗಿಕೊಂಡ ಲೇಖಕನ ಆತ್ಮವಂಚನೆಯ ಆಯಾಮಗಳನ್ನು ದಾಖಲಿಸುವ ಕವಿತೆಯು, ಆತ್ಮದ ಅನುಭೂತಿಯನ್ನು ಅರ್ಥಮಾಡಿಕೊಂಡು ಲೇಖಿಸುವಲ್ಲಿ ಆತನ ಪೆನ್ನು ಸೋತಿರುವುದನ್ನು ಸೂಚಿಸುತ್ತದೆ. ಈ ಮೂಲಕ ಬರೆಹಗಾರನಾದವನು ಲೇಖನಿಯನ್ನು ಬಳಸುವಾಗ ಆತ್ಮದ್ರೋಹವನ್ನು ಮಾಡಿಕೊಳ್ಳಬಾರದೆಂಬ ಎಚ್ಚರಿಕೆಯೂ ಇದೆ. ಕೊನೆಯ ಅಕ್ಷರ ಕಣ್ಣೀರಲ್ಲಿ ಹಿಂಜಿಹೋಗುವಾಗ ಕಸದ ಗಾಡಿಯವನು ಕರಗುವ ಕಸವನ್ನು ಕೇಳುವುದರಲ್ಲಿ ಔಚಿತ್ಯವಿದೆ. ಆತ್ಮರತಿ, ಆತ್ಮದ್ರೋಹ ಮಾಡಿಕೊಳ್ಳುವ ಈ ಹಂತದಲ್ಲಿ ಉಪಭೋಗಿಸುವ ಭೌತಿಕ ಸರಕುಗಳೇ ಜೀವಕ್ಕೆ ಸರಳಗಳಾಗುವ ಅಪಾಯವನ್ನೂ  ಲೆಕ್ಕಿಸುವುದೊಳಿತು. ಅಷ್ಟಕ್ಕೂ ಪೆನ್ನನ್ನು ಬಳಸಿದ ಬರೆಹಗಾರ, ಬರೆಹಗಾರನನ್ನು ಬಳಸಿದ ಪೆನ್ನುಗಳ ನಡುವೆ ಒಂದು ತಾತ್ವಿಕ ದ್ವಂದ್ವ ಯಾವ ಕಾಲಕ್ಕೂ ಇದ್ದೇ ಇದೆ. ಈವರೆಗೂ ಆತ್ಮವಂಚಿತ ಬರೆಹಗಳನ್ನುಲೇಖಿಸಿದ ಪೆನ್ನು ಬದುಕಿನುದ್ದಕ್ಕೂ ಅವಶ್ಯವಿದೆ ಎಂಬ ಸತ್ಯವನ್ನು ಸಾರುವುದರ ಜೊತೆಗೆ ಅದನ್ನು ಆತ್ಮಸಾಕ್ಷಿಯ ವಿರುದ್ಧ ಬಳಸಬಾರದೆಂಬ ನಿಲುವೂ ಪ್ರತಿಪಾದಿತವಾಗಿದೆ.ಸಂಬಂಧಗಳು ಬಳಸಿ ಬಿಸಾಕುವ ಸರಕುಗಳಲ್ಲ. ಆತ್ಮಸಾಕ್ಷಿಯ ಸಂಬಂಧಗಳ ಅನುಭೂತಿಯನ್ನು ಲೇಖಿಸುವಲ್ಲಿ ಲೆಕ್ಕಣಿಕೆ ಧನ್ಯತೆ ಪಡೆಯಬೇಕು. ತನ್ಮೂಲಕ ಬರೆಹಗಾರನೂ ಮತ್ತು ಬರೆಹವೂ ಆತ್ಮಸಾಕ್ಷಿಯ ನೆಲೆಯಿಂದಲೇ ಅಭಿವ್ಯಕ್ತಿಗೊಳ್ಳಬೇಕು ಎಂಬುದೂ ಈ ಕವಿತೆಯ ಮುಖ್ಯ ಆಶಯ. ಬಳಸಲೇಬೇಕಾದ ಪೆನ್ನು ಆತ್ಮಸಾಕ್ಷಿಯನ್ನು ಚುಚ್ಚದಂತೆ ಇರಬೇಕಾದದ್ದೂ ವ್ಯಕ್ತಿ ಮತ್ತು ಸಮಷ್ಟಿ ದೃಷ್ಟಿಯಿಂದ ಹಿತವೂ ಉಚಿತವೂ ಆಗಿದೆ. ಆತ್ಮಸಾಕ್ಷಿಯನ್ನು ಧ್ವನಿಸುವುದೇ ಇಂದಿನ ಕಾವ್ಯದ ಒಟ್ಟು ಧೋರಣೆ ಆಗಿರಬೇಕೆಂಬುದು ಕವಿತೆಯ ಕೇಂದ್ರಕಾಳಜಿ. ವಿಶೇಷವಾದ ಕವಿತೆಯನ್ನು ಕಟ್ಟಿಕೊಟ್ಟ ಪ್ರೊ. ಗೀತಾ ವಸಂತ ಅವರ ಕವಿತೆಗಳು ಕನ್ನಡ ಕಾವ್ಯಲೋಕವನ್ನು ಇನ್ನಷ್ಟೂ ಅರ್ಥಪೂರ್ಣವಾಗಿ ವಿಸ್ತರಿಸುತ್ತಲಿರುವುದಕ್ಕೆ ಅವರನ್ನು ಅಭಿನಂದಿಸಲೇಬೇಕು.ಡಾ. ಸಂಗಮೇಶ ಎಸ್. ಗಣಿಕನ್ನಡ ಉಪನ್ಯಾಸಕರು,ಅಂಚೆ: ಸೂಳೇಬಾವಿತಾ : ಹುನಗುಂದಜಿ: ಬಾಗಲಕೋಟೆ 9743171324

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಶಾಂತ ಜೆ ಅಳದಂಗಡಿ ನೀಡೆನಗೆ ನನ್ನೊಡೆಯ ನಿನ್ನೊಲುಮೆ ಬಾಳ ಪಥದಲಿ ಆಗಲೆನಗದು ಹಿರಿಮೆ ನಿನಗಾಗಿ ಮಿಡಿಯುತಿದೆ ಸಂತಸದೆ ನಾಡಿ ಬಾಳದಾರಿಯಲಿ ಅನುಕ್ಷಣ ಸಂತಸ ದೇವನಿತ್ತ ವರದೊಲುಮೆ ಬದುಕ ದಾರಿಯಲಿ ನೀ ಮಾರ್ಗಸೂಚಿ ಸಪ್ತನಾಡಿಗಳೂ ಅರಸುತಿವೆ ದಾರಿ ದೊರೆತರದುವೆ ಮನಕೆ ಸಂತಸ ನಿನ್ನೊಲವು ಜೀವಕದು ಗರಿಮೆ ಆಸೆ ಒಲೆ ಹೂಡಿ ಹಿಡಿದು ಅಗ್ನಿ ನಾಡಿ ಪ್ರೇಮ ಪ್ರೀತಿಯ ಪಾಕ ನಿನಗಾಗಿ ಅಟ್ಟಡಿಗೆ ಉಂಡರದುವೆನಗೆ ಸಂತಸ ಗಮ್ಯ ಸೇರಲು ಇದೆ ಪಯಣವೊಮ್ಮೆ ನಡೆವ ದಾರಿಗೆ ಚೆಲ್ಲುವೆ ಮಲ್ಲಿಗೆ ನಿನಗಾಗಿ ದೃಷ್ಟಿ ಸರಿಸದಿರು ಗೆಲುವ ನಾಡಿ ಮಿಡಿತವಿದು ಒಂದಾಗಿರಲು ಗಮ್ಯ ಸೇರೋ ಸಂತಸ

ಗಝಲ್ Read Post »

You cannot copy content of this page

Scroll to Top