ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನೂರಿನನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಹೋರಿ ಕಣ್ಣು ಮೊನ್ನೆ ರಾತ್ರಿ ಊಟ ಮುಗಿಸಿ ಮಲಗಿದ ನಿದ್ರೆ ಹತ್ತಿದ ಸ್ವಲ್ಪ ಹೊತ್ತಿನಲ್ಲೇ ಯಾಕೋ ಇದ್ದಕ್ಕಿದ್ದ ಹಾಗೆ ಕಲ್ಹಳ್ಳಿ ಎತ್ತು ಎದುರಲ್ಲಿ ಬಂದು ನಿಂತಂತೆ ಇತ್ತು!  ಸುತ್ತ ನೋಡಿದೆ, ಯಾರಿದಾರೆ ಜೊತೆಯಲ್ಲಿ,  ಬರೀ ಕಲ್ಹಳ್ಳಿ ಎತ್ತು… ಮನೆ ಎತ್ತು ಯಾವ್ ಕಡೆ ಹೋಯ್ತು? ಮತ್ತೆ ಇನ್ನೊಂದು ಸಲ ಪರಿಶೀಲಿಸಲೇ, ಎಲ್ಲಿದಿವಿ, ಕಲ್ಹಳ್ಳಿ ಎತ್ತು ಮತ್ತು ನಾನು ಇಬ್ಬರೇ. ಯಾರಿಗೆ ಹೇಳೋದು ಈಗ, ಗಾಬರಿಯಾಯ್ತು. ಆ ಗಾಬರಿಗೆ ಕಾರಣ,  ಮನೆ ಎತ್ತು ಜೊತೆಯಲ್ಲಿದ್ದರೆ ಮಾತ್ರ  ಕಲ್ಹಳ್ಳಿ ಎತ್ತಿನ  ಹತ್ತು ಇಪ್ಪತ್ತು ಅಡಿ ದೂರದಲ್ಲಿ ನಾನು ಸುಳಿಯಲು ಧೈರ್ಯಮಾಡುತ್ತಿದ್ದುದು.  ಆದರೆ ಇವತ್ತು  ಎದುರೇ ನಿಂತುಬಿಟ್ಟಿದಾನೆ, ದುರುಗುಟ್ಟು ನೋಡ್ತಾ ಇರುವ ಹಾಗಿದೆ ಬೇರೆ. ಮತ್ತೆ ಸ್ವತಃ ಧೈರ್ಯ ತಂದುಕೊಳ್ಳೋಕೆ ಮನೆಯ ಬೇರೆ ಯಾರೂ ಜೊತೆಯಲ್ಲಿ ಇಲ್ಲ. ಈ ಮನೆ ಎತ್ತು ಮತ್ತು ಕಲ್ಹಳ್ಳಿ ಎತ್ತುಗಳೆರಡೂ ತಾವು ಬದುಕಿದ ಬಹುತೇಕ ದಿನಗಳಲ್ಲಿ ಜೊತೆಯಲ್ಲೇ ಇದ್ದವು. ಬಹುಶಃ ಅವೆರಡಕ್ಕೂ ವಯಸ್ಸಲ್ಲಿ ಎರಡು ಅಥವಾ ಮೂರು ವರ್ಷಗಳ ಅಂತರವಿದ್ದಿರಬಹುದು. ಎಳೆಗರುವಿನಿಂದ ಮುದಿಯಾಗುವವರೆಗೂ ಜೊತೆಯಾಗಿಯೇ ಬೆಳೆದವು, ಜೊತೆಯಾಗಿಯೇ ದುಡಿದವು. ಮನೆಯಲ್ಲೇ ಹುಟ್ಟಿದ ಕರುವಿಗೆ ಜೋಡಿಮಾಡಲು ಕಲ್ಹಳ್ಳಿಯಿಂದ ಖರೀದಿಸಿ ತಂದಿದ್ದ ಕರು ಕಲ್ಹಳ್ಳಿ ಎತ್ತಾಗಿ ಬೆಳೆಯಿತು. ನಾನು ಆರೇಳು ವರ್ಷದವನಿದ್ದಾಗ ಇವೆರಡೂ ಆಗತಾನೇ ತಮ್ಮ ಇಳಿವಯಸ್ಸಿನ ಕಡೆ ಮುಖಮಾಡಿದ್ದರಿಂದ ಅವುಗಳ ಹೆಸರು ಹೋರಿ ಎನ್ನುವುದರಿಂದ ಎತ್ತು ಎನ್ನುವುದಕ್ಕೆ ಬದಲಾಗುತ್ತಿತ್ತು. ಕೆಲವೊಮ್ಮೆ ಹೋರಿ ಎಂದೂ ಮತ್ತೆ ಕೆಲವೊಮ್ಮೆ ಎತ್ತು ಎನ್ನುತ್ತಲೂ, ಬರುಬರುತ್ತಾ ಎತ್ತು, ಮುದಿಎತ್ತು ಹೀಗೆ ಅವುಗಳ ಹೆಸರಿನ ಬಡ್ತಿಯ ನೆನಪು. ಮನೆ ಹೋರಿ ಕರುವಾಗಿದ್ದಾಗಿನಿಂದಲೂ ಮನೆಯವರ ಮತ್ತು ಊರವರ ನೆನಪಿನಲ್ಲೆಲ್ಲಾ ಶಾಂತ ಸ್ವಭಾವದ್ದಾಗಿದ್ದು, ಗೋವು ಅಂತ ನಿರ್ವಿವಾದವಾಗಿ ಕರೆಯಬಹುದಾಗಿತ್ತು. ಅದೇ ಕಾರಣಕ್ಕೋ ಏನೋ, ನನ್ನ ಬಾಲ್ಯದ ಬುದ್ಧಿಗೆ ಮನೆಹೋರಿಯ ಹೆಸರು ‘ರಂಗ’ ಅಂತ ಹೊಳೆದಿತ್ತು. ಕಲ್ಹಳ್ಳಿ ಹೋರಿಯದು ಬೇರೆಯೇ ಕತೆ. ಮನೆ ಹೋರಿಗೆ ಹೋಲಿಕೆಯಲ್ಲಿ ಬಹುತೇಕ ಹೊಂದುತ್ತಿತ್ತಾದರೂ, ಸ್ವಭಾವ ಅದರ ತದ್ವಿರುದ್ಧ. ಮನೆ ಹೋರಿಯ ಜೊತೆಯಲ್ಲೇ ಇದ್ದಿದ್ದರಿಂದಲೋ ಏನೋ, ಶಾಂತವಾಗೇನೋ ಇರುತ್ತಿತ್ತು. ಆದರೆ ಅದರ ಕೋಪ ಪೊಲೀಸನ ಸೊಂಟದಲ್ಲಿರುವ ಪಿಸ್ತೂಲಿನಂತೆ ಸದಾ ಬದಿಯಲ್ಲಿಯೇ ತೂಗುತ್ತಿರುತ್ತಿತ್ತು. ಹಾಗಾಗಿ ಅದರ ಹೆಸರು ನರಸಿಂಹ, ಎಂದು ಕಲ್ಪಿಸಿಕೊಂಡು ನಂತರ ಆ ಹೆಸರನ್ನು ಕುದಿಸಿ ಭಟ್ಟಿ ಇಳಿಸಿ ಸರಳವಾಗಿ ‘ತಿಮ್ಮ’ ಎಂದು ಕಲ್ಪಿಸಿಕೊಂಡಿದ್ದೆ.  ಈ ರಂಗ ಮತ್ತು ತಿಮ್ಮ, ಇವರ ಹೆಸರು ನಾನು ಕಲ್ಪಿಸಿಕೊಳ್ಳುವುದಕ್ಕೆ ಇನ್ನೊಂದು ಕಾರಣವಿತ್ತು. ಈ ಜೋಡಿ ಎತ್ತುಗಳು ಅಜ್ಜಿಮನೆಯ(ಅಮ್ಮನ ತವರು) ದೊಡ್ಡ ಸಂಸಾರದ ಖಾಯಂ ಸದಸ್ಯರಾಗಿ ಇದ್ದಂತಹವು.  ಹಾಗಾಗಿ ಆಕಾರದಲ್ಲಿ ಮನುಷ್ಯರಂತಿಲ್ಲದೆ, ಮಾತು ಬಾರದಿದ್ದರೂ ಅವರಿಬ್ಬರ ಸುತ್ತಮುತ್ತ ಇರುವಾಗ ನಮ್ಮಂತೆಯೇ ಅವುಗಳೂ ಮಾತನಾಡುತ್ತವೆ ಎಂದೇ ಅನಿಸುತ್ತಿತ್ತು… ಸದ್ದು ಬಾರದಿದ್ದರೂ ಅವುಗಳ ಮಾತು ಕಣ್ಣುಗಳಲ್ಲಿ, ಕಾಲ್ಗಳಲ್ಲಿ, ಬಾಲದಲ್ಲಿ ವ್ಯಕ್ತವಾಗುತ್ತಿತ್ತು. ಆ ಜೋಡಿ, ಮನೆಯಲ್ಲಿರುವ ಎರಡು ದುಡಿಯುವ ಮೂಕ ಸದಸ್ಯರು, ಆದರೆ ತಮ್ಮ ನಡೆಯೇ ಅವರ ಭಾಷೆಯಾಗಿ ನಮ್ಮೊಟ್ಟಿಗೆ ಮಾತನಾಡುತ್ತಾರೆ ಎಂಬುದೇ ನನ್ನ ಕಲ್ಪನೆಯಾಗಿತ್ತು.  ರಂಗನ ಬಗ್ಗೆ ನಮಗೆ ಎಳ್ಳಷ್ಟೂ ಆತಂಕವಿರಲಿಲ್ಲ. ಮೈತೊಳೆಯುವುದು, ಹುಲ್ಲುಹಾಕುವುದು, ಹಣೆ ಸವರುವುದು ಏನು ಮಾಡಿದರೂ ರಂಗ ಅಪ್ಪಟ ಸಾಧು.  ತಿಮ್ಮನ ಹತ್ತಿರ ಸುಳಿಯುವುದಿರಲಿ, ನಾನೊಬ್ಬನೇ ಇದ್ದರೆ  ತಿಮ್ಮನ ಕಣ್ಣು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಎಲ್ಲೋ ಅಪರೂಪಕ್ಕೊಮ್ಮೆ ಹತ್ತಿರ ಸುಳಿಯುವುದಿದ್ದರೂ, ಅದು ತಾತನ ಅಥವಾ ಮಾವಂದಿರ ಜೊತೆ ಸುರಕ್ಷಿತವಾಗಿದ್ದಾಗ ಮಾತ್ರ. ನಾನು ಹುಟ್ಟುವುದಕ್ಕೂ ಮೊದಲೇ ನಮ್ಮ ಮನೆಯಲ್ಲಿ ಹೋರಿಗಳಾಗಿದ್ದ ಈ ನಮ್ಮ ಕುಟುಂಬದ ಸದಸ್ಯರ ಬಗ್ಗೆ ತರಹೇವಾರಿ ಕತೆಗಳನ್ನು ನಾನು ಕೇಳಿದ್ದೇನೆ.  ಬೇಸಿಗೆಯ ಒಂದು ದಿನ ಕಟ್ಟೆಅರಸಮ್ಮನ ಹರಕೆಯ ಬಗ್ಗೆ ಮಾತಾಡಿ, ಯಾವತ್ತು ಹೋಗೋದು ಅಂತ ಚರ್ಚಿಸಿ ಒಂದು ದಿನ ಗೊತ್ತುಮಾಡಿದರು. ಕಟ್ಟೆಅರಸಮ್ಮನಿಗೆ ಮುತ್ತಜ್ಜಿಯ ಯಾವುದೋ ಒಂದು ಹಳೆಯ ಹರಕೆಯಿತ್ತಂತೆ. ನಮ್ಮ ಊರಿನಿಂದ ಕಟ್ಟೆಅರಸಮ್ಮನ ಗುಡಿ ನಲವತ್ತು ಕಿಲೋಮೀಟರು ದೂರ. ಗುಡಿ ಅನ್ನೋದಕ್ಕಿಂತ ಅದು ಆಗ ಒಂದು ಸಣ್ಣ ಗೂಡು.  ಈಗ ಒಂದು ಕಟ್ಟಡ ಆಗಿ ಅದು ಗುಡಿ ಆಗಿದೆ.  ಕಟ್ಟೆಅರಸಮ್ಮನ ಹರಕೆ ಅಂದರೆ ಅದು ಕುರಿ, ಕೋಳಿ, ಹಂದಿಯನ್ನು ದೇವಸ್ಥಾನದ ಬಳಿ ಬಲಿಕೊಡುವುದು.ಅದರಲ್ಲಿ ಕಟ್ಟೆ ಅರಸಮ್ಮನ ಪಾಲು ತುಂಬಾ ಕಡಿಮೆಯೇ. ಮಾಂಸವೂ ಸೇರಿದಂತೆ, ಬೇಯಿಸಿದ ಎಲ್ಲಾ ಅಡುಗೆಯನ್ನೂ, ಒಂದು ಆಳಿಗೆ ಬಡಿಸುವಷ್ಟನ್ನು ಬಾಳೆಯೆಲೆಯಲ್ಲಿ ಬಡಿಸುವುದು, ಅದನ್ನು ಇನ್ನೊಂದು ಬಾಳೆಯೆಲೆಯಲ್ಲಿ ಮುಚ್ಚುವುದು. ಅಲ್ಲಿಗೆ ಬಂದಿರುವ ಮನೆಯ ಸದಸ್ಯರೆಲ್ಲರೂ ಹಣ್ಣು ಕಾಯಿ ಇಟ್ಟು ಅಗರಬತ್ತಿ, ಕರ್ಪೂರ ಹಚ್ಚಿ  ಪೂಜೆ ಮುಗಿಸಿದರೆ ಅಲ್ಲಿಗೆ ಹರಕೆ ತೀರಿದಂತೆ. ಆಮೇಲೆ ದೇವರಿಗಿಟ್ಟ ಪಾಲೂ ಸೇರಿದಂತೆ ಮಾಡಿದ ಅಡುಗೆಯೆಲ್ಲ ಪ್ರಸಾದ. ಇದೊಂಥರಾ ಪಕ್ಕಾ ಫ್ಯಾಮಿಲಿ ಪಿಕ್ನಿಕ್ಕು. ಅಂತಹ ಒಂದು ಪಿಕ್ನಿಕ್ಕು ಮುತ್ತಜ್ಜಿಯ ಹರಕೆಯ ಪೂರೈಕೆಗಾಗಿ ಸಿದ್ಧವಾಗಿತ್ತು. ಮುತ್ತಜ್ಜಿ ನನ್ನ ತಾತನಿಗೆ ಚಿಕ್ಕಮ್ಮ, ತಾತನನ್ನು ತಮ್ಮಯ ಅಂತ ಕರೆಯುತ್ತಿತ್ತು.  “ತಮ್ಮಯ್ಯ, ಗಾಡಿಗೆ ದಬ್ಬೆ ಬಿಗಿಬೇಕು, ಯಾರ್ನಾದರೂ ಕರ್ಕೊಂಡ್ ಬಂದು ಬಿರ್ರನೆ  ಶುರು ಮಾಡದಲ್ವಾ” ಅಂದರು ಮುತ್ತಜ್ಜಿ.  “ಗಾಡಿ ತಡಿಕೆ ಐತಲ್ಲ ಮಳೆ ಏನ್ ಬರಾಂಗಿಲ್ಲ, ಸುಮ್ನೆ ಯಾಕೆ ಈ ಕಮಾನು ದಬ್ಬೆ ಚಿಕ್ಕವ್ವ” ಅಂದರು ತಾತ….  “ರಾತ್ರಿಯೆಲ್ಲಾ ಗಾಳಿ ಥಂಡಿಯಿರ್ತದೆ, ದಮ್ಮು ಜಾಸ್ತಿಯಾದ್ರೆ ಆಸ್ಪತ್ರೆಗೆ ಸೇರಿಸಿ ಬತ್ತೀಯಾ, ಸುಮ್ನೆ ಹೇಳಿದ್ದ್ ಕೇಳು, ದಬ್ಬೆ ಕಟ್ಟಿ ಟಾರ್ಪಲ್ ಹಾಕು”  ಎಂದು ಹೇಳುವುದರಿಂದ ಶುರುವಾದ ಪ್ರಯಾಣದ ಕೆಲಸ, ಮುಸ್ಸಂಜೆಯಾಗುವವರೆಗೂ ಎಲ್ಲರೂ ಒಂದಿಲ್ಲೊಂದು ಕಡೆ ಗದ್ದಲದಿಂದ ಕೆಲಸ ಮಾಡುತ್ತಾ ಮುಂದುವರಿದಿತ್ತು. ರಂಗ ಮತ್ತು ತಿಮ್ಮ ಎರಡೂ ರಾಗಿಹುಲ್ಲು ಮೆಲುಕುತ್ತಾ ಎಲ್ಲರನ್ನೂ ಗಮನಿಸುತ್ತಿದ್ದವು. ಮಧ್ಯಾಹ್ನದ ಹೊತ್ತಿಗಾಗಲೇ ಹೊಟ್ಟೆ ತುಂಬಿಸಿಕೊಂಡವರೇ, ಮನೆಮಂದಿಯೆಲ್ಲಾ ಓಡಾಡುವುದನ್ನು ಗಮನಿಸಿ, ಇವತ್ತು ಸಂಜೆ ಗಾಡಿ ಕಟ್ತಾರೆ…  ರಾತ್ರಿಯಿಡೀ ನಾವು ನಡಿತಾನೇ ಇರಬೇಕು ಅಂತ ಗೊತ್ತಾಗಿ ಮಲಗಿದ್ದಲ್ಲೇ ಕೊರಳು ಅತ್ತಿತ್ತ ಆಡಿಸುತ್ತ ಸುಲಭವಾಗಿ ಬಾಯಿಗೆ ಸಿಗುತ್ತಿದ್ದ ಹುಲ್ಲನ್ನು ಬೇಕೋ ಬೇಡವೋ ಎಂಬಂತೆ  ನಿಧಾನವಾಗಿ ಮೆಲ್ಲುತ್ತಿದ್ದವು.  ನಲವತ್ತು ಕಿಲೋಮೀಟರ್ ಅಂದರೆ ಆರೇಳು ಗಂಟೆಯ ಎತ್ತಿನಗಾಡಿಯ ಪ್ರಯಾಣ. ರಂಗ ಮತ್ತು ತಿಮ್ಮರ ದಾಪುಗಾಲಿಂದ ಬೇಗನೆ ತಲುಪಲು ಸಾಧ್ಯವಿದ್ದರೂ, ಮರದ ಗಾಡಿಯಲ್ಲಿ ಪಾತ್ರೆ, ಅಡುಗೆ ಸಾಮಾನು ಜೊತೆಗೆ ಮನೆಯವರು ಗಾಡಿಯಲ್ಲಿ ಕೂತಿರುವುದರಿಂದ ಆತುರದಿಂದ ಓಡಿ ತಲುಪುವುದು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿಯೇ, ರಾತ್ರಿ ಊಟ ಮುಗಿಸಿ ಹತ್ತು ಹನ್ನೊಂದರ ಸುಮಾರಿಗೆ ಗಾಡಿ ಕಟ್ಟಿದರು…  ಹಂದಿಯ ಕಾಲು ಬಿಗಿದು ಗಾಡಿಯ ತಳಬದಿಗೆ ಕಟ್ಟಿದ್ದರು. ಒಂದರ್ಧ ಗಂಟೆಯಷ್ಟು ಅದರ ಅರಚಾಟ, ನಂತರ ನಿಧಾನವಾಗಿ ರಾಗಾಲಾಪ ಮಾಡಿ ತನ್ನ ವೇದನಾಗಾಯನಕ್ಕೆ ಮಂಗಳ ಹಾಡಿತು. ಗಾಡಿಯ ಮುಂದೆ ದಾರಿ ಕಾಣುವಂತೆ ಒಂದು ಲಾಟೀನು ಕಟ್ಟಿದರು. ಮುತ್ತಜ್ಜಿಯ ಜೊತೆಯಲ್ಲಿ ನಾನೂ ಸೇರಿದಂತೆ ಇನ್ನು ನಾಲ್ಕು ಜನ ತಯಾರಾಗಿ ಗಾಡಿ ಏರಿ ಕುಳಿತೆವು. ಮುತ್ತಜ್ಜಿಗೆ ಹೊದಿಯಲು ಒಂದು ದಟ್ಟಿ, ಕುದಿಸಿ ಆರಿಸಿದ ನೀರು ಇಟ್ಟುಕೊಂಡು,  ‘ಹುಂ ಹೊರಡಿ’ ಅಂತ ಹೇಳಿದರು. ರಂಗ ಮತ್ತು ತಿಮ್ಮರಿಗೆ ಅನುಭವ ಎಷ್ಟರಮಟ್ಟಿಗಿತ್ತೆಂದರೆ, ಅವುಗಳಿಗೆ ಮಾಮೂಲು ಎತ್ತುಗಳಿಗೆ ಸೂಚಿಸುವ ಹಾಗೆ ಅರ್ರ, ಅನ್ನುವುದು ಮಪ್ಪುರಿಯುವುದು, ಏಯ್, ಹೋಯ್ ಎಂದು ಚೀರುವಂತಹ ಯಾವ ಅಗತ್ಯವೂ ಇರಲಿಲ್ಲ.  ಇನ್ನು ಚಾವುಟಿಯ ಅಥವಾ ಬಾರುಕೋಲಿನ ಅಗತ್ಯವಂತೂ ಇಲ್ಲವೇ ಇಲ್ಲ. ಅವು ಕೆಲಸದಲ್ಲಿ ತಲ್ಲೀನರಾಗಿದ್ದಾಗ ಬೆನ್ನ ಮೇಲೆ ಸಣ್ಣಗೆ ಕೈ ತಾಗಿಸಿದರೂ ಚುರುಕಾಗಿಬಿಡುತ್ತಿದ್ದವು. ಅದರಲ್ಲೂ ತಿಮ್ಮನಂತೂ ಚಂಗನೆ ಜಿಗಿಯುತ್ತಿದ್ದ. ಅಪರೂಪಕ್ಕೆಂಬಂತೆ  ಎಲ್ಲಾದರೂ ನಿಧಾನವಾದರೆ, ಒಂದು ಹುಯ್ಗುಟ್ಟರೆ ತಂತಾನೇ ಜಾಗರೂಕರಾಗಿಬಿಡುತ್ತಿದ್ದವು. ಅಪರೂಪದ ದಾರಿಗಳ ಹೊರತಾಗಿ, ಊರಿನ ಒಳಗಿನ ದಾರಿಗಳು, ನೆಂಟರ ಮನೆಗಳು, ಪೇಟೆಯ ಸಂತೆ ದಾರಿ, ಆ ಸಂತೆಯೊಳಗಿನ ಬೀದಿಗಳು, ಊರಿನ ಎಲ್ಲಾ ಹೊಲಗದ್ದೆಗಳ ದಾರಿ, ದೇವಸ್ಥಾನ ಇವೆಲ್ಲ ಹೆಸರಿನ ಸಮೇತ ರಂಗ ತಿಮ್ಮರಿಗೆ ತಿಳಿದಿತ್ತು.  ಅವುಗಳಿಗೆ ಕೊರಳ ಹುರಿ, ಮೂಗುದಾರ ಮತ್ತು ಹಗ್ಗಗಳು ನೆಪಮಾತ್ರಕ್ಕೆ. ಕುಣಿಕೆ ಬಿಗಿಯದೆಯೂ ಕೊಟ್ಟಿಗೆಯಲ್ಲಿ ಅಥವಾ ಮನೆಗೆ ಚಾಚಿಕೊಂಡಂತೆ ಇದ್ದ ಗಾಡಿ ನಿಲ್ಲಿಸುವ ಮಾಡಿನಲ್ಲಿ  ಹಾಗೆಯೇ ಬಿಟ್ಟಿದ್ದರೂ ತಾವು ಇದ್ದಲ್ಲಿಯೇ ಇರುತ್ತಿದ್ದವು.  ಸೈನ್ಯದಲ್ಲಿ ತರಬೇತಿ ಕೊಟ್ಟ ಸೈನಿಕರಷ್ಟೇ ಶಿಸ್ತಾಗಿರುತ್ತಿತ್ತು ಅವುಗಳ ಚಲನವಲನಗಳು. ಭಾರವಾದ ಹೊರೆ ತುಂಬಿದ ಗಾಡಿ ಎಳೆಯುವಾಗ ಇರಬೇಕಾದ ಬಲಾಢ್ಯತೆಯನ್ನಾಗಲೀ,  ಬಿತ್ತನೆಯಾದ ಒಂದೆರಡು ವಾರವಿರುವ ಪೈರಿನ ನಡುವೆ ಕುಂಟೆ ಹೊಡೆಯುವಾಗ ಇರಬೇಕಾಗಿದ್ದ ಸೂಕ್ಷ್ಮತೆಯಾಗಲೀ ಅವೆರಡಕ್ಕೂ ಹೇಳಿ ತಿಳಿಸಬೇಕಾದ  ಅಗತ್ಯವೇ ಇರುತ್ತಿರಲಿಲ್ಲ. ಬಹುಶಃ ತಿಮ್ಮ ಯಾರಿಗಾದರೂ ತಿವಿದು ಎಡವಟ್ಟು ಮಾಡಿಯಾನು ಎನ್ನುವ ಜಾಗರೂಕತೆಯಿಂದ ತಿಮ್ಮನಿಗೆ ಹಗ್ಗ ಮೂಗುದಾರ ಬೇಕಾಗಿತ್ತೇನೋ. ಆದರೆ ರಂಗನಿಗೆ ಖಂಡಿತಾ ಬೇಕಿರಲಿಲ್ಲ. ————-

ಹೊತ್ತಾರೆ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ನಾನು ಕಸ್ತೂರ್ ಇತ್ತೀಚೆಗೆ ಲೋಕಾರ್ಪಣೆಗೊಂಡ ಡಾ. ಎಚ್.ಎಸ್.ಅನುಪಮಾ ಕೃತಿ. ಲಡಾಯಿ ಪ್ರಕಾಶನದಿಂದ ಪ್ರಕಟಿತ.. ಚಂದ್ರಪ್ರಭಾ ಬಿ. ಒಂದು ಒಳನೋಟು ಭಿನ್ನ ಆಲೋಚನೆ, ಭಿನ್ನ ನಿಲುವಿನ ಡಾ. ಎಚ್.ಎಸ್.ಅನುಪಮಾ ಏನು ಮಾಡಿದರೂ ಅದು ವಿಭಿನ್ನವೇ ಆಗಿರುತ್ತದೆ ಎಂಬ ಮಾತಿಗೆ ಕಸ್ತೂರ್ ಜೀವನ ಕಥನ ಒಂದು ಉದಾಹರಣೆ. ಮೈಸೂರಿನಲ್ಲಿ ಪುಸ್ತಕ ಲೋಕಾರ್ಪಣೆ ಮಾಡುತ್ತ ಮಮತಾ ಸಾಗರ್ ಹೇಳಿದ ಹಾಗೆ ಅನುಪಮಾ ಸ್ವತಃ ನಿವೇದಿಸಿದ ಪ್ರಸ್ತಾವನೆ ರೂಪದ ಬರಹವನ್ನು ಓದಿಯೇ ಪ್ರತಿ ಓದುಗ ಮುಂದೆ ಸಾಗಬೇಕು. ಕೃತಿ ರಚನೆಯ ಹಿನ್ನೆಲೆಯ ಜೊತೆಗೇ ಅದನ್ನು ಓದುವ ಕ್ರಮ ಹೇಗೆಲ್ಲ ಇರಬೇಕೆಂಬ ಸೂಕ್ಷ್ಮ ಸೂಚನೆ, ಸುಳಿವುಗಳು ಅಲ್ಲಿ ವಿಪುಲವಾಗಿ ಸಿಗುತ್ತವೆ. ಓದಿಗೆ ಒಂದು ದಿಕ್ಸೂಚಿ ದೊರಕುತ್ತದೆ. ಮೊದಲೊಮ್ಮೆ ಬರೆದು ಮುಗಿಸಿದ ಬಳಿಕ ಅದು ಕಸ್ತೂರ್ ಕಥನವಾಗುವ ಬದಲಾಗಿ ಗಾಂಧಿ ನೆರಳಾಗಿ ಕಸ್ತೂರ್ ಕಥನ ಹಿಂಬಾಲಿಸಿದ ವಿಸ್ಮಯ, ಅದನ್ನು ಅಳಿಸಿ ಹಾಕಿ ಬೇರೆಯದೇ ಮತ್ತೊಂದು ವಿಶಿಷ್ಟ ಕ್ರಮದಲ್ಲಿ, ವಿಶಿಷ್ಟ ಒಳನೋಟದಲ್ಲಿ ತಾವು ಈ ಕೃತಿ ರಚನೆ ಮಾಡಿದ್ದನ್ನು ಲೇಖಕಿ ಹಂಚಿಕೊಳ್ಳುತ್ತಾರೆ. ಅವರಿಗೆ ಈ ಕಥನದ ಅನನ್ಯತೆ ಕುರಿತ ಸ್ಪಷ್ಟ ಕಲ್ಪನೆ, ನಿರೀಕ್ಷೆಗಳಿದ್ದವು ಎಂಬುದಕ್ಕೆ ಈ ಮಾತು ಸಾಕ್ಷಿ. ಇಲ್ಲಿ ಮಾತನಾಡುವ ಎರಡು ಹೆಣ್ಣು ಜೀವಗಳಿವೆ.. ಒಂದು, ಜಗತ್ತೇ ತನ್ನತ್ತ ತಿರುಗಿ ನೋಡಿ ವಿಸ್ಮಯಪಡುವಾಗ ತನ್ನನ್ನು ತಾನು ಶೋಧನೆಗಳಿಗೆ ಒಡ್ಡಿಕೊಳ್ಳುತ್ತಲೇ ಸಾಗಿದ ಮಹಾನುಭಾವನ ಹೆಂಡತಿ ಎನಿಸಿಕೊಂಡಾಗಲೂ ಕೊನೆವರೆಗೂ ತನ್ನತನವನ್ನು ಕಾಪಿಟ್ಟುಕೊಂಡ ಸಮತೂಕದ ಜೀವ ಕಸ್ತೂರ್… ಮತ್ತೊಂದು ತಾನು ಮಾಡುವ ಪ್ರತಿಯೊಂದು ಕೆಲಸದಲ್ಲಿ, ಓದಿನಲ್ಲಿ, ಬರವಣಿಗೆಯಲ್ಲಿ ಯಾವುದರಲ್ಲೇ ಆಗಲಿ ಮನುಜ ಪ್ರೇಮ, ಸಮಷ್ಟಿ ಪ್ರಜ್ಞೆ, ಘನತೆಯ ಬದುಕನ್ನು ಮಿಡಿಯುವ, ಅವಕಾಶ ಸಿಕ್ಕಿದಲ್ಲೆಲ್ಲ ಪಿತೃ ಸಂಸ್ಕೃತಿಯನ್ನು ತರಿಯುತ್ತ ಸಾಗುವ ಸೂಕ್ಷ್ಮ ಸಂವೇದನೆಯ ಬರಹಗಾರ್ತಿ.. ಆಳದಲ್ಲಿ ಒಮ್ಮೊಮ್ಮೆ ‌ಅಖಂಡ ಹೆಣ್ಣು ಕುಲವೇ ಎದ್ದು ನಿಂತು ಪ್ರಶ್ನಿಸುತ್ತಿರುವಂತೆಯೂ ಭಾಸವಾಗುತ್ತದೆ. ನೇಯ್ಗೆಯ ಒಂದೊಂದು ಎಳೆಯೂ ಹೀಗೇ ಇರಬೇಕೆಂಬ ಲೇಖಕರ ಸಂವೇದನೆ ಸೂಕ್ಷ್ಮ ಓದಿಗೆ ದಕ್ಕುವ ಅಂಶವಾಗಿದೆ. ಒಬ್ಬ ಸಾಮಾನ್ಯ ಹೆಣ್ಣಿನ ರೂಪದಲ್ಲಿ ಕಸ್ತೂರ್ ತನ್ನನ್ನು ತಾನು ಬಿಡಿಸಿಡುತ್ತ ಹೋಗುವ ಕ್ರಮ ಲೇಖಕರ ಆಶಯಗಳ ಅನಾವರಣಕ್ಕೆ ವಿಸ್ತಾರವಾದ ಅವಕಾಶ ಒದಗಿಸುತ್ತ ಸಾಗುವ ರೀತಿಯೇ ಚಂದ. ಹೇಗಿದ್ದೀಯ ಮಗೂ ಎನ್ನುತ್ತ ಮಾತಿಗೆ ತೊಡಗುವ ಕಸ್ತೂರ್ “ಲೋಕದ ಮಾತು ಬಿಡು, ನಮ್ಮ ಪರಿಚಯ ನಮಗೇ ಇರಲ್ಲವಲ್ಲ..ನಮ್ಮ ಭಾಷೆ ಅಂಥದು” ಎಂದು ಬಿಡುತ್ತಾರೆ! ತವರ ಸೊಬಗನ್ನು, ಮೊರೆವ ಕಡಲನ್ನು ಬಣ್ಣಿಸುತ್ತಲೇ ಮದುವೆಯೆಂಬ ಆಟದ ನೆನಪುಗಳನ್ನು ಕೆದಕುತ್ತಾರೆ. ಮಗು ಹುಟ್ಟುತ್ತಲೂ ‘ಹರಿಯ ಅಪ್ಪ’ ದಕ್ಷಿಣ ಆಫ್ರಿಕೆಗೆ ಹೊರಟು ನಿಂತಾಗಿನ ಕಸ್ತೂರ್ ತಳಮಳ… ಸಂಗಾತಿಯನ್ನು ಮೋಕ ಸಂತೈಸುವ ರೀತಿಯಲ್ಲಿ ಯಾವುದೇ ಹೆಣ್ಣು ಜೀವ ತಾನು ಅನುಭವಿಸಲು ಬಯಸುವ ಆರ್ದ್ರ ಮಾಧುರ್ಯವನ್ನು ನಿರೂಪಿಸುವ ಸೊಗಸು ಆಪ್ತ. ಮಗುವಿಗೆ ಹಾಲೂಡುವ ಸೊಬಗಿನ ಜೊತೆಗೇ ತಾನು ಕಳೆದುಕೊಂಡ ಮೊದಲ ಮಗುವಿನ ನೆನಪಲ್ಲಿ ನಿದ್ರಿಸುವ ಈ ಮಗುವನ್ನು ಮುಟ್ಟಿ ಮುಟ್ಟಿ ನೋಡಲು ಬಯಸುವ ತಾಯಿಯ ವರ್ಣನೆಯಲ್ಲಿ ಓರ್ವ ವೈದ್ಯೆ, ತಾಯಿ ಇಬ್ಬರ ಬೆಚ್ಚಗಿನ ಭಾವಗಳೂ ಕಾಣಸಿಗುತ್ತವೆ. ತನ್ನ ಮೊದಲ ಕಡಲ ಯಾನದಲ್ಲಿ ತನಗೆ ಓದು,ಬರವಣಿಗೆ ಕಲಿಸುವ ಭಾಯಿ.. ಎರಡನೇ ಹೆರಿಗೆಯಲ್ಲಿ ಸ್ವತಃ ದಾದಿಯಾಗಿ ಸುಶ್ರೂಷೆಗೈಯುವ ಭಾಯಿ… ಸ್ವಚ್ಛತೆ, ಸರಳತೆ, ಸಮಾನತೆಯ ಪಾಠ ಹೇಳುವಾಗ ತನ್ನ ಮೋಕ ಭಾಯಿ ಆಗಿ ಬೆಳೆದ ಪರಿಗೆ ಕಸ್ತೂರ್ ಜೀವ ಹೆಮ್ಮೆ ಪಡುತ್ತದೆ. ಆದರೆ ಅದೇ ಭಾಯಿ ತಾನು ಪಂಚಮರ ಮಲದ ಕೊಡ ಎತ್ತಲು ನಿರಾಕರಿಸಿದಾಗ ಅಪರಿಚಿತ ನಾಡಿನಲ್ಲಿ ತನ್ನನ್ನು ‘ ಇರುವುದಾದರೆ ಇರು, ಇಲ್ಲದಿದ್ದರೆ ಹೊರಟು ಹೋಗು’ ಎಂದು ಬಿಡುವ ಮಾತಿನ ಕಟುತ್ವವನ್ನು ದಿಟ್ಟತನದಿಂದ ಎದುರಿಸಿದ ಗಳಿಗೆಯನ್ನು ತಣ್ಣಗೆ ನಿರೂಪಿಸುತ್ತಾರೆ. ಭಾಯಿ ಮೇಲೆ ಟಾಲ್ಸ್ಟಾಯ್ ಎಂಬ ‘ಋಷಿ’ಯ ಪ್ರಭಾವ.. ಅದರಿಂದ ಹೆಚ್ಚಿದ ಆಶ್ರಮವಾಸದ ತವಕ..ಸತ್ಯಾಗ್ರಹದ ಪರಿಕಲ್ಪನೆ.. ಎಲ್ಲದರ ಜಿಜ್ಞಾಸೆಗೆ ತೊಡಗುವ ಕಸ್ತೂರ್ ಮುಂದೆ ಗಾಂಧಿ ಆಗಿ ಹೊಮ್ಮಿದ ಭಾಯಿಯ ಶಕ್ತಿ ಇದ್ದುದು ಪ್ರಕೃತಿ ದತ್ತವಾಗಿ ಮನುಜರಿಗೆ ಪ್ರಾಪ್ತವಾದ ಸತ್ಯಕ್ಕಾಗಿ ಆಗ್ರಹಿಸುವ ಅವರ ನಿಲುವಿನಲ್ಲಿ ಎಂದು ಸ್ಪಷ್ಟವಾಗಿ ಗುರುತಿಸುತ್ತಾರೆ. ದಕ್ಷಿಣ ಆಫ್ರಿಕಾದಲ್ಲಿ ಜತೆಗೂಡುವ ಮಿಲಿ, ಸೋನ್ಯಾರಂಥ ಹೆಣ್ಮಕ್ಕಳು ಹೆಣ್ಣುಗಳನ್ನು ಗೆಳತಿಯಾಗಿ ನೋಡದ ಭಾರತೀಯ ಪುರುಷ ಮನಸ್ಥಿತಿಯನ್ನು ಪದೇ ಪದೇ ಪ್ರಶ್ನಿಸುವಾಗ ಭಾಯಿ ಮೇಲೆ ಆದ ಪರಿಣಾಮ.. ಅನಂತರದ ಹೋರಾಟಗಳಲ್ಲಿ ಮಹಿಳೆಯರನ್ನು ಹೋರಾಟದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡ ಭಾಯಿ ಮೇಲೆ ಅವರ ಸುತ್ತ ಇದ್ದ ಹೆಣ್ಣು ಮಕ್ಕಳ ದೊಡ್ಡ ಪಾತ್ರವಿತ್ತು ಎಂದು ವಿವರಿಸುತ್ತಲೇ ಇದರಿಂದ ಗಾಂಧಿಯಲ್ಲಿ ಮೈದಳೆದ ಹೆಣ್ಣುತನ, ಅವರ ಮಾತಿನಲ್ಲಿ ಕರುಣೆ, ಕಳಕಳಿಯನ್ನು ತುಂಬಿದ ಈ ಹೆಣ್ಮಕ್ಕಳ ಕುರಿತು ಅಭಿಮಾನ ವ್ಯಕ್ತಪಡಿಸುತ್ತಾರೆ ಕಸ್ತೂರ್. ಸರಳ ಜೀವನದ ಸೂತ್ರಗಳಿಗೆ ಒಗ್ಗಿಕೊಳ್ಳುತ್ತಲೇ ತಾನು ಹೋರಾಟದ ದಾರಿ ತುಳಿಯುವ ಕಸ್ತೂರ್ ಭಾಯಿಯ ಸತ್ಯ ಶೋಧನೆಯ ದಾರಿಯಲ್ಲಿ ತನ್ನ ಆಂತರಿಕ ಹೊಯ್ದಾಟವನ್ನೂ ನಿರೂಪಿಸುತ್ತಾರೆ. ರೂಪಾಂತರಗೊಂಡ ತನಗೆ ಚರಕಾ ಎಂಬ ನಿತ್ಯ ಸಂಗಾತಿ ದೊರೆತ ಮೇಲೆ ಬದುಕಿನ ಗತಿಯೇ ಬದಲಾದುದನ್ನು ಬಣ್ಣಿಸುತ್ತಾರೆ.. “ನೂಲುವುದೆಂದರೆ ಧ್ಯಾನ.. ಚರಕಾ ತಿರುಗಿಸಿ ನೂಲು ತೆಗೆದಂತೆ ನಾವು ಸಹ ಹತ್ತಿಯಾಗಿ, ದಾರವಾಗಿ,ಲಡಿಯಾಗಿ,ಬಟ್ಟೆಯಾಗಿ ಬದುಕು ನಡೆಯುವುದು..” ಎಂಬ ಚರಕಾ ಫಿಲಾಸಫಿ ಮನಸ್ಸನ್ನು ಆರ್ದ್ರಗೊಳಿಸುತ್ತದೆ. ಈ ಮಾತಿಗೆ ಕಳಶವಿಟ್ಟಂತೆ ” ಮಣಿ ತಿರುಗಿಸುತ್ತ ಮಾಡುವ ಜಪಕ್ಕಿಂತ ನೂಲುವುದು ತುಂಬ ಒಳ್ಳೆಯ ಪೂಜೆ … ಜಡಗೊಂಡದ್ದೆಲ್ಲ, ಜಡಗೊಂಡವರೆಲ್ಲ ತಿರುಗುವಂತೆ ಮಾಡುವ ಶಕ್ತಿ ಆ ಪುಟ್ಟ ಚಕ್ರಕ್ಕೆ, ಆ ಎಳೆಗೆ ಇದೆ” ಎಂಬ ಒಳನೋಟ. ಸಬರಮತಿ ಆಶ್ರಮ… ಅಲ್ಲಿಂದ ಹೊರ ಬಂದ ನಂತರ ವರ್ಧಾ ಆಶ್ರಮ.. ಸೇಗಾಂವ್ ಎಂಬ ಕುಗ್ರಾಮದಲ್ಲಿ ಇಲ್ಲಗಳೆಲ್ಲ ಕಳೆದು ಇದೆ ಆಗುವ ವರೆಗಿನ ಕ್ರಮಣದಲ್ಲಿ ಭಾಯಿಗೆ ಜತೆಯಾದ ಎಳೆಯ ಜೀವಗಳು.. ಭಾಯಿಗೆ ಉಪವಾಸ ಕುರಿತು ಹೆಚ್ಚಿದ ನಂಬಿಕೆ.. ಹದಗೆಡತೊಡಗಿದ ತನ್ನ ಆರೋಗ್ಯ.. ಎಡೆಬಿಡದ ಭಾಯಿಯ ಪತ್ರ ವ್ಯವಹಾರ ಎಲ್ಲವೂ ಕಸ್ತೂರ್ ನೋಟಕ್ಕೆ ದಕ್ಕುತ್ತ ಸಾಗುತ್ತದೆ. ವಿನೋಬಾ, ರವೀಂದ್ರನಾಥ ಟಾಗೋರ್, ಬಾಬಾ ಸಾಹೇಬ್ ಅಂಬೇಡ್ಕರ್ ರಂಥವರೊಡನೆ ಭಾಯಿ ಒಡನಾಟದ ಸಂದರ್ಭ. ಬಾಬಾ ಸಾಹೇಬರ ಸಹವಾಸದಲ್ಲಿ ಅಸ್ಪೃಶ್ಯತೆ ಕುರಿತು ಅಮೂಲಾಗ್ರವಾಗಿ ಬದಲಾದ ತಮ್ಮ ಧೋರಣೆಯನ್ನು ನಿರೂಪಿಸುವ ಕಸ್ತೂರ್ ಹರಿಲಾಲ ಕುರಿತು ಹಂಚಿಕೊಳ್ಳುವ ನೋವು ಓದುಗರು ತಲ್ಲಣಿಸುವಂತೆ ಮಾಡಿ ಬಿಡುತ್ತದೆ. ಬಾಪು ಆಗಿ ಜಗತ್ತಿಗೇ ಮಾದರಿಯಾಗುವ ತನ್ನ ಭಾಯಿ ತಂದೆಯಾಗಿ‌ ಸೋತರೆಂದು ಕಸ್ತೂರ್ ಜೀವ ಮರುಗುತ್ತದೆ. ಹಾಗೆ ಹೇಳುವಾಗಲೂ ತಾಯಿಯಾಗಿ ತಾನು ನಿರ್ವಹಿಸಿದ ಪಾತ್ರದಲ್ಲೇ ಕೊರತೆ ಇತ್ತೇನೊ ಎಂದು ಕಳವಳಿಸುವ ಮಾತೃ ಹೃದಯದ ಹಿರಿಮೆಯೆದುರು ಲೋಕದ ಹಿರಿತನ ಮಂಡಿಯೂರುತ್ತದೆ. ಒಂದೊಂದಾಗಿ ಕಳಚಿಕೊಳ್ಳುತ್ತ ತಂದೆ ಸಾಗುವಾಗ ಮಗ ಎಲ್ಲ ಬಗೆಯ ವ್ಯಸನಗಳನ್ನೂ ಅಪ್ಪಿಕೊಳ್ಳುವುದು..ಮತಾಂತರ.. ನಿರುದ್ಯೋಗ.. ಎಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ನಿರೂಪಿಸುವ ಕಸ್ತೂರ್ ‘ತಾಯಿ- ಹೆಂಡತಿ ಎರಡು ಪಾತ್ರಗಳ ನಡುವೆ ಸುಡುವ ಹೆಣ್ಣು ಜನ್ಮವೇ ಬೇಡ’ ಎಂದು ನಿಟ್ಟುಸಿರುಗರೆವಾಗ ‘ಮಾರು ಗೆಲ್ಲಬೇಕಾದವ ಮನೆಯಲ್ಲಿ ಸೋಲಲೇಬೇಕೆ’ ಎಂಬ ಪ್ರಶ್ನೆಯೊಂದು ವಾಚಕರನ್ನು ಕಾಡತೊಡಗುತ್ತದೆ. ಆಹಾರದಲ್ಲಿ ಸರಳತೆ ತರಲು ಹಂಬಲಿಸುವ ಭಾಯಿ ಅದನ್ನು ಒತ್ತಾಯಪೂರ್ವಕವಾಗಿ ಮಕ್ಕಳ ಮೇಲೆಯೂ ಹೇಳುವುದನ್ನು ಕಸ್ತೂರ್ ವಿರೋಧಿಸುತ್ತಾರೆ. ಅಷ್ಟೇ ಅಲ್ಲ ಹರಯ ಉಕ್ಕಿ ಹರಿಯುವ ಕಾಲದಲ್ಲಿ ಮಕ್ಕಳು ಸಹ ಬ್ರಹ್ಮಚರ್ಯ ಪಾಲಿಸಲಿ ಎಂದು ಬಯಸುವ ‘ಗಾಂಧಿಗಿರಿ’ ಅಸಹಜ ಎನಿಸಲಾರಂಭಿಸುತ್ತದೆ. ಯಾವುದೆಲ್ಲವನ್ನು ತಾನು ಅನುಭವಿಸಿ ಉಂಡ ಬಳಿಕ ನಿರಾಕರಿಸಲು ನಿರ್ಧರಿಸಿದರೊ ಅಂಥದೇ ಅವಕಾಶವನ್ನು ಎಳೆಯರಿಂದ ಕಸಿದುಕೊಳ್ಳುವ ಗಾಂಧಿ ನಿಲುವು ಅನುಚಿತ ಎನಿಸುತ್ತದೆ. ಉಪವಾಸಗಳ ಅಭಿಯಾನದ ಜೊತೆಗೇ ‘ಇನ್ನು ಮೇಲೆ ನಾವಿಬ್ಬರೂ ದೂರ ಇರೋಣ’ ಎಂದು ಘೋಷಿಸಿ ಬಿಡುವ ಗಾಂಧಿ ನಿರ್ಧಾರದ ಒಮ್ಮುಖತೆ… ತನ್ನ ಸಹಧರ್ಮಿಣಿಯ ಇಷ್ಟಾನಿಷ್ಟಗಳನ್ನು ಕೇಳುವ ಸೌಜನ್ಯವನ್ನೂ ತೋರದ ನಿರಂಕುಶತೆ… ಈ ಘಟನೆ ತನ್ನ ವ್ಯಕ್ತಿತ್ವಕ್ಕೆ ಎಸೆದ ಸವಾಲಿನಂತೆ ಎದುರಾದ ರೀತಿ… ಅದರೊಂದಿಗೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ಹೆಣಗಾಡಿದ ಬಗೆ ಎಲ್ಲವೂ ಮನೋವೈಜ್ಞಾನಿಕ ಜಾಡಿನಲ್ಲಿ ಮೈದಳೆದು ವಾಚಕರು ಹಲವು ಬಗೆಯ ಪ್ರಶ್ನೆಗಳಿಗೆ ಮುಖಾಮುಖಿಯಾಗುವಂತೆ ಮಾಡುತ್ತದೆ. ಪ್ರೇಮ ಕಾಮಗಳನ್ನು ಬಾಪು ಬೇರೆ ಬೇರೆಯಾಗಿ ನೋಡಿದ್ದೇ ತಪ್ಪು.. ಅವು ಒಂದು ನಾಣ್ಯದ ಎರಡು ಮುಖಗಳು ಎಂಬ ನಿಲುವು ಒಂದರ ಇರುವಿಕೆಗೆ ಇನ್ನೊಂದರ ಅನಿವಾರ್ಯತೆಯನ್ನು ಒತ್ತಿ ಹೇಳುತ್ತದೆ. ಕಾಮವನ್ನು ಗೆಲ್ಲಲು ಹೊರಟಾತ ಸರಳಾದೇವಿ ಎಂಬ ರೂಪವತಿಗೆ ಮರುಳಾಗಿ ಅದರಿಂದ ಹೊರಬರಲು ಒದ್ದಾಡಿದ ಪರಿ ತತ್ವ ಆದರ್ಶಗಳ ಬೇರುಗಳನ್ನೇ ಅಲ್ಲಾಡಿಸುತ್ತದೆ. ಸತ್ಯ ಶೋಧನೆ, ಸರಳ ಜೀವನ, ಸತ್ಯಾಗ್ರಹ, ಚಳುವಳಿ, ಹೋರಾಟದ ಜೀವನದಲ್ಲಿ ಗಾಂಧಿ ಕಳೆದು ಹೋಗುವಾಗ ಎಲ್ಲಕ್ಕಿಂತ ಹೆಚ್ಚು ಅವರನ್ನು ಅವರ ಮಕ್ಕಳು ಕಳೆದುಕೊಂಡರು ಎಂದು ಕನವರಿಸುವ ತಾಯೊಡಲು ಎಲ್ಲರ ಬಾಪು ಆಗಲು ನನ್ನ ಮಕ್ಕಳ ಬಾಪು ಮಾಯವಾದರು ಎಂಬ ನೋವನ್ನು ತಣ್ಣಗೆ ಹಂಚಿಕೊಳ್ಳುತ್ತಾರೆ. ಬಾಪು ದೇಶಕ್ಕಾಗಿ ಎಲ್ಲವನ್ನೂ ಬಿಟ್ಟರು… ನಾನು ಬಾಪುವನ್ನೇ ಬಿಟ್ಟು ಕೊಟ್ಟೆ ಎಂದು ಕಸ್ತೂರ್ ಬಾಯಲ್ಲಿ ಹೇಳಿಸಿ ಕಸ್ತೂರ್ ಎಂಬ ಜೀವ ಬಾಪುವಿಗಿಂತ ಅದು ಹೇಗೆ ಮೇಲು ಎಂದು ಸಾಬೀತು ಪಡಿಸಲು ತೊಡಗುತ್ತಾರೆ ಲೇಖಕಿ. ಐತಿಹಾಸಿಕ ಘಟನೆಗಳನ್ನು ಕ್ರಮಬದ್ಧವಾಗಿ ಪೋಣಿಸುವಲ್ಲಿ ಲೇಖಕರು ತೋರಿಸುವ ಸೂಕ್ಷ್ಮತೆ ಅನನ್ಯ. ಸಹಜವಾಗಿ ರೂಪು ತಳೆಯುವ ರೂಪಕಗಳಂತೂ ಒಂದಕ್ಕಿಂತ ಒಂದು ಚಂದ. ‘ ಸಬರಮತಿ ನದಿಯ ನೀರು ಅವರ ಲೇಖನಿಯ ಶಾಯಿಯಾಗಿ ತುಂಬಿ ಅದು ಖಾಲಿಯೇ ಆಗುತ್ತಿಲ್ಲವೇನೊ ಎನಿಸುವಷ್ಟು ಪತ್ರಗಳನ್ನು ಬಾಪು ಬರೆಯುತ್ತಿದ್ದರು..’ ‘ತಂದೆ ಮಕ್ಕಳ ಸಂಬಂಧ ಅಳಿಸಿ ಬಿಡಲು ಸಾಧ್ಯವೇ? ಎಷ್ಟಿಲ್ಲ ಅಂದರೂ ಚರ್ಮದ ಹಾಗೆ ಅಂಟಿಕೊಂಡಿರುತ್ತದೆ..’ – ಒಂದೆರಡು ಝಲಕು ಇವು. ತನ್ನವನ ಹೆಜ್ಜೆಯಲಿ ಹೆಜ್ಜೆ ಇರಿಸುತ್ತಲೇ ಸಾಗುವಾಗಲೂ ಆತನ ಗುಣ ಅವಗುಣಗಳನ್ನು ಒರೆಗೆ ಹಚ್ಚುತ್ತದೆ ಕಸ್ತೂರ್ ಜೀವ. ಲೋಕ ಆತನನ್ನು ಮಹಾತ್ಮನೆನ್ನುವಾಗ ಆತನಲ್ಲಿನ್ನೂ ಅಳಿಯದೇ ಉಳಿದ ‘ನಾನು’ ಇತ್ತು ಎಂಬುದನ್ನು ಆ ಜೀವ ಗುರುತಿಸುತ್ತದೆ. ಇದೆಲ್ಲವೂ ಲೇಖಕಿ ತಮ್ಮ ನಿಲುವು,ನೋಟಗಳಿಗೆ ತೊಡಿಸುವ ಸುಂದರ ಹೊದಿಕೆ.‌ ಭೂಮಿಯ ಮೇಲೆ ಬೆಳೆದ ಮರದಂತೆ ಬಾಪು.. ನೆಲವನ್ನೇ ಆಶ್ರಯಿಸಿ ಬೆಳೆದ ಗರಿಕೆ ತಾನು..ಎರಡರ ಮಾಪನವೂ ಬೇರೆ.. ಎರಡರ ಸಾರ್ಥಕ್ಯ ಒಂದೇ ಎಂಬ ಷರಾದೊಂದಿಗೆ ಕಥನಕ್ಕೊಂದು ಪೂರ್ಣ ವಿರಾಮ ಇರಿಸುವ ಲೇಖಕಿ ಕೊನೆಯಲ್ಲಿ ಪ್ರಶ್ನೆಯೊಂದನ್ನು ತೂರಿ ಬಿಡುತ್ತಾರೆ – ‘ಯಾವೆಲ್ಲ ಪ್ರಯೋಗಗಳನ್ನು ಗಾಂಧಿ ಮಾಡಿದರೊ.. ಯಾವುದಕ್ಕೆಲ್ಲ ತಾನು ಉರಿವ ದೀಪದ ಬತ್ತಿಯಾಗಿ ಸುಟ್ಟುಕೊಂಡೆನೊ ಅದೇ ತಿರುವು ಮುರುವಾಗಿದ್ದರೆ!! ಗಾಂಧಿಯಾಗಿ ರೂಪಾಂತರಗೊಂಡ ಮೋಕ ತನ್ನನ್ನು ಅದೇ ಶ್ರದ್ಧೆ, ನಿಷ್ಠೆಯಿಂದ ತನ್ನನ್ನು ಹಿಂಬಾಲಿಸುತ್ತಿದ್ದರೇ? ‘ ಹೆಣ್ಣು ಕುಲ ಎಂದಿನಿಂದ ಕೇಳುತ್ತಲೇ ಬಂದಿರುವ, ನಿಶ್ಯಬ್ದವೇ ಉತ್ತರವಾಗಿರುವ ಪ್ರಶ್ನೆ ಅದು. ಇಡಿಯಾಗಿ ಕಥಾನಕ ಪ್ರಸ್ತಾವನೆಯಲ್ಲಿ ಲೇಖಕಿ ತಾವೇ ಹೇಳಿರುವಂತೆ ಮಹಿಳಾ ದೃಷ್ಟಿಕೋನ, ಸಬಾಲ್ಟ್ರನ್ ದೃಷ್ಟಿಕೋನ, ದಲಿತ ದೃಷ್ಟಿಕೋನ, ಧಾರ್ಮಿಕ – ಆಧುನಿಕ ದೃಷ್ಟಿಕೋನ ಒಂದೊಂದು ಕೋನದಲ್ಲಿಯೂ ಬಾಪುವನ್ನು ವಿಮರ್ಶಿಸುತ್ತ ಬಾ ಬದುಕನ್ನು ಅಸದೃಶ್ಯ ಬಗೆಯಲ್ಲಿ ಕಟ್ಟಿಕೊಡುವಲ್ಲಿ ಯಶಸ್ಸು ಸಾಧಿಸುತ್ತದೆ. ಬಾ ಬದುಕನ್ನು ಕಸ್ತೂರ್ ಬದುಕಾಗಿ ನೋಡುವ ನೋಟ, ನಿರೂಪಿಸುವ ಲೇಖನಿ ಎರಡರ ಹಿಂದೆಯೂ ಅದ್ವಿತೀಯ ಓದು, ಪೂರ್ವಾಗ್ರಹಗಳಿಂದ ಹೊರತಾದ ಮನೋಭೂಮಿಕೆ, ಕವಿ ಹೃದಯ, ಸಂಗೀತದ ಮೋಡಿ, ಹೆಂಗರುಳಿನ ಅದಮ್ಯ ತುಡಿತ, ಸಂವೇದನೆಗಳು ಹದವಾಗಿ ಬೆರೆತಿವೆ. ಈ ಕಥಾನಕ ಆದಷ್ಟು ಶೀಘ್ರ ಅನುವಾದಕರ ಕಣ್ಣಿಗೆ ಬೀಳಬೇಕು. ಹೆಚ್ಚೆಚ್ಚು ಜನರನ್ನು ತಲುಪಬೇಕು. ಗಾಂಧಿ ಎಂಬ ಪದ ಮಾರುಕಟ್ಟೆಯ ಸರಕಿನಂತಾಗಿರುವ ಈ ದುರಿತ

ಪುಸ್ತಕ ಸಂಗಾತಿ Read Post »

ಇತರೆ

ಲೇಖನ

ಆಧ್ಯಾತ್ಮಕ್ಕೂ, ಅರ್ಥಶಾಸ್ತ್ರಕ್ಕೂ ಬಿಡಲಾರದ ನಂಟು….. ಗಣೇಶ ಭಟ್ ಶಿರಸಿ . ಆಧ್ಯಾತ್ಮದ ವಿಚಾರಗಳನ್ನು ಚರ್ಚಿಸುವಾಗ ದೈನಂದಿನ ಬದುಕಿನ ವಿಚಾರಗಳ ಕುರಿತು ಹೇಳುವದು, ಅರ್ಥಶಾಸ್ತ್ರದೊಡನೆ ಸಂಬಂಧ ಜೋಡಿಸುವದು ಸರಿಯಲ್ಲವೆಂದು ಹಲವರು ಅಭಿಪ್ರಾಯ ಪಡುತ್ತಾರೆ. ಭಾರತದ ದರ್ಶನಶಾಸ್ತ್ರದ, ಬದುಕಿನ ರೀತಿನೀತಿಗಳ ರಕ್ಷಣೆಯ ಗುತ್ತಿಗೆ ಪಡೆದವರಂತೆ ವರ್ತಿಸುವ ಹಲವರು ಆಧ್ಯಾತ್ಮಕ್ಕೂ , ಅರ್ಥಶಾಸ್ತ್ರಕ್ಕೂ ಸಂಬಂಧವೇ ಇಲ್ಲವೆಂದು ಬೊಬ್ಬೆ ಹೊಡೆಯುತ್ತಾರೆ. ಅವರ ಅರಿವಿನ ವ್ಯಾಪ್ತಿಯ ಸೀಮಿತತೆಯೇ ಇದಕ್ಕೆ ಕಾರಣ. ಮಾನವನ ಬದುಕಿನ ಗುರಿಯನ್ನು ಧರ್ಮ, ಅರ್ಥ, ಕಾಮ , ಮೋಕ್ಷಗಳೆಂಬ ಚತುರ್ವರ್ಗಗಳಾಗಿ ಗುರ್ತಿಸುತ್ತಾರೆ. ದೈಹಿಕ, ಮಾನಸಿಕ, ಆಧ್ಯಾತ್ಮಿಕ ಹೀಗೆ ಮೂರು ಸ್ತರಗಳಲ್ಲಿ ಅಸ್ತಿತ್ವವನ್ನು ಹೊಂದಿರುವ ಮಾನವರು ವಿಕಾಸ ಪಥದಲ್ಲಿ ಕ್ರಮಿಸುತ್ತಿರುವಾಗ ಯಾವ ಸ್ತರವನ್ನೂ ನಿರ್ಲಕ್ಷಿಸಲು ಸಾಧ್ಯವಾಗದು. ಪರಿಪೂರ್ಣತೆಯಿಂದ ಬಂದು ಪರಿಪೂರ್ಣತೆಯಲ್ಲಿ ಒಂದಾಗುವ ಸೃಷ್ಟಿ ಚಕ್ರದಲ್ಲಿ ಮಾನವ ಜೀವನ ಅಮೂಲ್ಯವಾದುದು. ಮಾನವನ ಭೌತಿಕ ಅಸ್ತಿತ್ವದ ಅವಶ್ಯಕತೆಗಳನ್ನು ಕಾಮ ಎಂದು ಸಂಸ್ಕೃತದಲ್ಲಿ ಹೇಳುತ್ತಾರೆ. ಮಾನಸಿಕ ತವಕ, ಚಡಪಡಿಕೆಗಳ ನಿವಾರಣೆಯಾಗುವುದು ಅರ್ಥದಿಂದ. ಮನೋ- ಆಧ್ಯಾತ್ಮಿಕ ಹಂಬಲದ ಪೂರೈಕೆಯ ಪ್ರಯತ್ನ ಧರ್ಮ. ಆಧ್ಯಾತ್ಮದ ಉತ್ಕಟ ಆಕಾಂಕ್ಷೆಯ ಪೂರ್ತಿಯೇ ಮೋಕ್ಷ. ಈ ನಾಲ್ಕು ವರ್ಗಗಳ ಅನುಸರಣೆ ಮಾನವ ಜೀವನದಲ್ಲಿ ಅನಿವಾರ್ಯ. ಸೀಮಿತತೆಯಿಂದ ಅನಂತತೆಯೆಡೆಗಿನ ಪಯಣವೇ ಜೀವನ ಎನ್ನುತ್ತಾರೆ. ಸಾಂತವೇ ಅನಂತವಾಗುವ ಪ್ರಕ್ರಿಯೆ ಮೋಕ್ಷ. ಇದು ಮಾನವ ಜೀವನದ ಅಂತಿಮ ಗುರಿ. ಮೋಕ್ಷದ ಹಲವು ಅವೈಜ್ಞಾನಿಕ , ಅತಾರ್ಕಿಕ ಕಲ್ಪನೆಗಳು ಪ್ರಚಾರದಲ್ಲಿವೆ. ಯಾವುದೋ ನದಿಯಲ್ಲಿ ಮುಳುಗು ಹಾಕುವುದರಿಂದ ಮೋಕ್ಷ ಪ್ರಾಪ್ತಿಯೆಂದು ಹಲವರನ್ನು ನಂಬಿಸಲಾಗಿದೆ. ವ್ಯಕ್ತಿ ಮರಣ ಹೊಂದಿದ ನಂತರ ಅವರ ಮಕ್ಕಳು ಅಥವಾ ಹತ್ತಿರದ ಸಂಬಂಧಿಗಳು ಪ್ರಾರ್ಥಿಸುವುದರಿಂದ ಅಥವಾ ನಿರ್ದಿಷ್ಟ ಪೂಜೆ, ಆಚರಣೆಗಳ ಮೂಲಕ ಮೃತರಿಗೆ ಮೊಕ್ಷ ಪ್ರಾಪ್ತಿಯಾಗುತ್ತದೆ ಎಂದು ಮುಂತಾದ ವಿವಿಧ ರೀತಿಯಲ್ಲಿ ಹಲವರು ನಂಬಿಕೊಂಡಿದ್ದಾರೆ. ಮೋಕ್ಷ ಎಂದರೆ ಆತ್ಮ-ಪರಮಾತ್ಮನಲ್ಲಿ ಒಂದಾಗುವುದು ಎಂದು ದರ್ಶನಶಾಸ್ತ್ರ ಹೇಳುತ್ತದೆ. ಹುಟ್ಟು- ಸಾವಿನ ಚಕ್ರದಿಂದ ಬಿಡುಗಡೆ ಪಡೆಯುವ ಹಂತವಿದು. ಬಿಂದು ಸಿಂಧುವಿನಲ್ಲಿ ಒಂದಾಗಿ ಪ್ರತ್ಯೇಕ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿ. ವೈಜ್ಞಾನಿಕವಾಗಿ ವಿವರಿಸುವುದಾದರೆ ಜೀವ ವಿಕಾಸದ ಕೊನೆಯ ಹಂತವೇ ದಾರ್ಶನಿಕರು ವಿವರಿಸುವ ಮೋಕ್ಷ. ಏಕಕೋಶ ಜೀವಿಯಿಂದ ಬಹುಕೋಶ ಜೀವಿಯಾಗಿ ಸಸ್ಯ, ಗಿಡ, ಮರ, ಕ್ರಿಮಿ, ಕೀಟ, ಪಶು, ಪಕ್ಷಿ, ಪ್ರಾಣಿ, ಸಸ್ತನಿ, ಮಂಗ ಹಾಗೂ ಮಾನವನಾಗಿ ವಿಕಾಸ ನಡೆಯಿತೆಂದು ವಿಜ್ಞಾನ ಹೇಳುತ್ತದೆ. ಮಾನವನ ಹುಟ್ಟಿನೊಂದಿಗೆ ವಿಕಾಸ ಕ್ರಿಯೆ ನಿಂತು ಹೋಯಿತೇ? ಮಾನವನ ಹಂತದಿಂದ ಮುಂದೆ ವಿಕಾಸ ಇಲ್ಲವೇ? ವಿಕಾಸ ಪಥದಲ್ಲಿ ಕಾಣಿಸಿಕೊಂಡ ವಿವಿಧ ಜೀವಿಗಳ ನಡುವಿನ ಕೊಂಡಿ ಯಾವುದು ಮತ್ತು ವಿವಿಧ ಜೀವಿಗಳ ದೈಹಿಕ, ಮಾನಸಿಕ, ಬದಲಾವಣೆಗೆ ಕಾರಣಗಳೇನು? ಜೀವೋದ್ಭವ ಹೇಗಾಯಿತು? ಮನಸ್ಸು ಎಂದು, ಹೇಗೆ ಹುಟ್ಟಿಕೊಂಡಿತು? ಮುಂತಾದ ಪ್ರಶ್ನೆಗಳಿಗೆ ಉತ್ತರ ಕಂಡು ಹಿಡಿಯಲು ವಿಜ್ಞಾನಿಗಳು ಇನ್ನೂ ತಿಣುಕಾಡುತ್ತಿದ್ದಾರೆ. ಆದರೆ ಭಾರತೀಯ ದರ್ಶನ ಶಾಸ್ತ್ರದಲ್ಲಿ ಈ ಎಲ್ಲಾ ಪ್ರಶ್ನೆಗಳಿಗೆ ತಾರ್ಕಿಕ ಉತ್ತರವಿದೆ. ಪರಮಪ್ರಜ್ಞೆ ಅಥವಾ ಅನಂತತೆಯ ಇಚ್ಛೆಯಿಂದಲೇ ವಿಶ್ವಮನದ ರಚನೆಯಾಗಿ ಸೂಕ್ಷ್ಮದಿಂದ ಸ್ಥೂಲೀಕರಣ ಪ್ರಾರಂಭವಾಯಿತು. ಪಂಚ ಮಹಾಭೂತಗಳೆಂದು ಕರೆಯಲ್ಪಡುವ ಆಕಾಶ, ವಾಯು, ಅಗ್ನಿ, ಜಲ, ಪೃಥ್ವಿ , ತತ್ವಗಳ ಸೃಷ್ಟಿಯಾಯಿತು. ಅನಂತತೆಯ ಅತ್ಯಂತ ಜಡ ಸ್ಥಿತಿಯೇ ಪೃಥ್ವಿ ಅಥವಾ ಘನ ತತ್ವ. ಈ ಸ್ಥಿತಿಯೂ ಅದೇ ಅನಂತತೆಯ ಒಂದು ರೂಪವಾಗಿರುವುದರಿಂದಲೇ ಅದರಲ್ಲಿಯೂ ಚೇತನವಿದೆ, ಮನಸ್ಸು ಸುಪ್ತಾವಸ್ಥೆಯಲ್ಲಿದೆಯೆಂದು ಭಾರತೀಯ ಚಿಂತನೆ ಹೇಳುತ್ತದೆ. ಆದ್ದರಿಂದಲೇ ಅಣು, ರೇಣು, ತೃಣ, ಕಾಷ್ಠಗಳಲ್ಲಿಯೂ ಪರಮಾತ್ಮನನ್ನು ಕಾಣುವುದು ಈ ನೆಲೆದ ಸ್ವಭಾವ. ಕಲ್ಲಿನಲ್ಲಿಯೂ ಪರಮಾತ್ಮನಿದ್ದಾನೆ ಎಂಬುದನ್ನು ತಿರುಚಿ ಕಲ್ಲಿನಲ್ಲೇ ಪರಮಾತ್ಮನಿದ್ದಾನೆಂದು ನಂಬಿಸುವವರು ಆಧ್ಯಾತ್ಮ ರಂಗದ ಶೋಷಕರು. ಎಲ್ಲೆಡೆ ಪರಮಾತ್ಮನಿದ್ದಾನೆ ಎನ್ನುವುದು ತಾರ್ಕಿಕ. ಪರಮಾತ್ಮ ಇಲ್ಲೇ ಇದ್ದಾನೆ ಎನ್ನುವುದು ಅತಾರ್ಕಿಕ. ಜಡ ವಸ್ತುವಿನಲ್ಲಿ ಸುಪ್ತವಾಗಿರುವ ಚೈತನ್ಯ ಶಕ್ತಿಯೇ ಸೂಕ್ತ ಪರಿಸರ ದೊರಕಿದಾಗಿ ಏಕಕೋಶ ಜೀವಿಯಾಗಿ ರೂಪ ತಾಳುತ್ತದೆ. ಅದರಲ್ಲಿ ಕೂಡಾ ಸುಪ್ತ ಮನಸ್ಸಿರುತ್ತದೆ. ಇಡೀ ವಿಕಾಸ ಪ್ರಕ್ರಿಯೆಯ ಮೂಲ ಉದ್ದೇಶವೇ ಮನಸ್ಸಿನ ವಿಕಾಸ ಪರಮ ಪ್ರಜ್ಞೆ ಅಥವಾ ಅನಂತತೆಯ ಪ್ರತಿಫಲನದ ಸಾಮಥ್ರ್ಯ ವೃದ್ಧಿಯೇ ವಿಕಾಸದ ದಾರಿ. ವಿಕಸಿತವಾಗುತ್ತಿರುವ ಮನಸ್ಸಿಗೆ ಆಧಾರ ನೀಡುವ ಸಲುವಾಗಿ ಭೌತಿಕ, ಜೈವಿಕ ಬದಲಾವಣೆಗಳಾಗಿ ವಿವಿಧ ಜೀವಿಗಳು ರೂಪುಗೊಂಡವು. ಏಕಕೋಶ ಜೀವಿಯ ಮನಸ್ಸೇ ವಿಕಾಸ ಹೊಂದುತ್ತಾ ತನ್ನ ಮುಂದಿನ ವಿಕಾಸದ ಪಥದಲ್ಲಿ ಸಾಗಲು ಮಾನವ ದೇಹದಲ್ಲಿ ಆಶ್ರಯ ಪಡೆಯುತ್ತದೆ. ಇಂದಿನ ಮಾನವ ಹಿಂದೆ ಎಂದೋ ಒಂದು ಕಾಲದಲ್ಲಿ ಏಕಕೋಶ ಜೀವಿಯಾಗಿದ್ದು, ವಿಕಾಸದ ಎಲ್ಲ ಹಂತಗಳಲ್ಲಿ ಹಾದು ಬಂದಿರುವುದನ್ನು ವಿಜ್ಞಾನವೂ ದೃಢಪಡಿಸುತ್ತದೆ. ಕೋಟಿ, ಕೋಟಿ ಜನ್ಮಗಳ ನಂತರ ಮಾನವ ಜೀವನ ಲಭ್ಯವಾಗುತ್ತದೆಂದು ಭಾರತೀಯ ತತ್ವಶಾಸ್ತ್ರದಲ್ಲಿ ಹೇಳಿರುವುದು ಈ ಕಾರಣಕ್ಕಾಗಿ. ಮಿದುಳು ಮನಸ್ಸಿನ ಆಶ್ರಯ ತಾಣವೇ ಹೊರತು ಅದೇ ಮನಸ್ಸಲ್ಲ. ವ್ಯಕ್ತಿಯ ಮರಣದ ನಂತರವೂ ಆ ಮನಸ್ಸು ಅಸ್ತಿತ್ವದಲ್ಲಿರುತ್ತದೆ. ಮುಂದಿನ ವಿಕಾಸಕ್ಕಾಗಿ ಪುನರ್ಜನ್ಮ ತಾಳಲೇ ಬೇಕಾಗುತ್ತದೆ. ( ಟಿವಿಗಳಲ್ಲಿ ತೋರಿಸುವ ಪುನರ್ಜನ್ಮದ ಕಥೆ ಭಾರಿ ಬೊಗಳೆ ಹಾಗೂ ಅತಾರ್ಕಿಕ). ಸೂಕ್ಷ್ಮದಿಂದ ಜಡವಾಗುವ ಪ್ರಕ್ರಿಯೆಯನ್ನು ಸಂಚರ ಎಂದೂ ಜಡದಿಂದ ಸೂಕ್ಷ್ಮತೆಯೆಡೆಗಿನ ಚಲನೆಯನ್ನು ಪ್ರತಿ ಸಂಚರ ಎಂದೂ ಹೇಳುತ್ತಾರೆ. ಸಂಚರ- ಪ್ರತಿ ಸಂಚರಗಳೆರಡೂ ಸೇರಿ ಸೃಷ್ಟಿ ಚಕ್ರವಾಗುತ್ತದೆ. ಮಾನವನಾಗುವ ಹಂತದವರೆಗೆ ವಿಕಾಸದ ದಾರಿ ಪ್ರಕೃತಿ ನಿಯಂತ್ರಿತ. ಇದಕ್ಕೂ ಮುಂದಿನ ವಿಕಾಸದ ಪಥದಲ್ಲಿ ಸ್ವಪ್ರಯತ್ನದಿಂದಲೂ ಸಾಗುವ ಸಾಮಥ್ರ್ಯ ಮಾನವನಿಗೆ ಇದೆ. ಮನಸ್ಸನ್ನು ಏಕಾಗ್ರಗೊಳಿಸಿ ನಡೆಸುವ ಆಧ್ಯಾತ್ಮ ಸಾಧನೆಯಿಂದಲೇ ಮುಂದಿನ ವಿಕಾಸ ಸಾಧ್ಯ. ಆಧ್ಯಾತ್ಮವೆಂದರೆ ಜೀವನದಿಂದ ವಿಮುಖರಾಗಿ ಪಲಾಯನ ಮಾಡುವುದಲ್ಲ. ಆಧ್ಯಾತ್ಮದ ದಾರಿಯಲ್ಲಿ ಸಾಗಲು ಸಂಸಾರ ಬಿಟ್ಟು, ಖಾವಿ ತೊಟ್ಟು ಸನ್ಯಾಸಿಯಾಗಬೇಕೆಂಬುದು ತಪ್ಪು ಕಲ್ಪನೆ. ಮೂಲೆ ಸೇರಿ ಮೂಗು ಹಿಡಿದು, ಕಣ್ಮುಚ್ಚಿ ಕುಳಿತುಕೊಳ್ಳುವುದೇ ಆಧ್ಯಾತ್ಮ ಸಾಧನೆಯಲ್ಲ. ಬಾಹ್ಯ ಮತ್ತು ಆಂತರಿಕ ಪ್ರಪಂಚವನ್ನು ಒಂದೇ ಅಸ್ತಿತ್ವದ ಅಭಿವ್ಯಕ್ತಿಯ ವಿವಿಧ ರೂಪಗಳೆಂದು ಗ್ರಹಿಸಿ, ತನ್ನಂತೆಯೇ ಇತರರು ಎಂದು ಭಾವಿಸಿ, ಯೋಚಿಸಿ, ವ್ಯವಹರಿಸುವ ಮನಸ್ಥಿತಿಯೊಂದಿಗೆ ಮನಸ್ಸನ್ನು ಏಕಾಗ್ರಗೊಳಿಸಿ ಅನಂತತೆಯನ್ನು ಆರೋಹಿಸಿದಾಗ ಆಧ್ಯಾತ್ಮ ಸಾಧನೆಯಾಗುತ್ತದೆ. ಈ ಪ್ರಕ್ರಿಯೆ ಧರ್ಮಾಚರಣೆ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಸ್ವಭಾವ. ವಿಕಾಸ ಹೊಂದುವದು ಮಾನವನ ಸ್ವಭಾವ. ಮಾನವರ ಧರ್ಮ. ಆದ್ದರಿಂದಲೇ ಮಾನವರೆಲ್ಲರ ಧರ್ಮ ಒಂದೇ. ನಾವು ಧರ್ಮವೆಂದು ಕರೆಯುತ್ತಿರುವ ವಿವಿಧ ಆಚರಣೆ ಆಧಾರಿತ ನಂಬಿಕೆಗಳು ಮತ. ಉದಾ: ಹಿಂದೂ, ಕ್ರಿಶ್ಚಿಯನ್, ಇಸ್ಲಾಂ, ಬುದ್ಧ, ಜೈನ ಇತ್ಯಾದಿಗಳೆಲ್ಲವೂ ಮತಗಳೇ ಹೊರತು ನೈಜ ಅರ್ಥದಲ್ಲಿ ಧರ್ಮ ಎನಿಸಿಕೊಳ್ಳುವುದಿಲ್ಲ. ಧರ್ಮದ ಆಚರಣೆಗೆ ಬಾಹ್ಯ ಪರಿಕರಗಳ , ಬಾಹ್ಯ ಆಡಂಬರಗಳ ಅಗತ್ಯವಿಲ್ಲ. ಧರ್ಮಾಚರಣೆ ಅರ್ಥಾತ್ ಆಧ್ಯಾತ್ಮ ಸಾಧನೆ ಪ್ರತಿಯೋರ್ವ ಮಾನವನ ಹಕ್ಕು ಮತ್ತು ಕರ್ತವ್ಯ. ಇದರಲ್ಲಿ ಸ್ತ್ರೀ – ಪುರುಷ ಎಂಬ ಭೇದವಿಲ್ಲ. ಆಧ್ಯಾತ್ಮಿಕ ಸಾಧನೆಯ ಮೂಲ ಅವಶ್ಯಕತೆ ಮಾನವ ದೇಹ. ಆದ್ದರಿಂದ ದೇಹದ ಪಾಲನೆ, ಪೋಷಣೆಯನ್ನು ನಿರ್ಲಕ್ಷಿಸಲಾಗದು. ‘ಬ್ರಹ್ಮ ಸತ್ಯಮ್’ ಎನ್ನುವುದು ಸರಿ. ಆದರೆ ನಾವು ಬದುಕುತ್ತಿರುವ ಜಗತ್ತನ್ನು ಮಿಥ್ಯೆಯೆಂದು ನಿರಾಕರಿಸುವುದು ನಮ್ಮನ್ನೆ ನಾವು ಮೋಸಗೊಳಿಸಿಕೊಳ್ಳುವದಾಗಿದೆ. ದೇಹದಲ್ಲಿ ಜೀವ ಇರುವವರೆಗೂ ಆ ವ್ಯಕ್ತಿಯ ಪಾಲಿಗೆ ಬಾಹ್ಯ ಜಗತ್ತು ಕೂಡಾ ಹೋಲಿಕೆಯ ಸತ್ಯ ಅಥವಾ ಸಾಪೇಕ್ಷಿತ ಸತ್ಯ. ‘ಬ್ರಹ್ಮ ಸತ್ಯಂ ಜಗದಪಿ ಸತ್ಯಮಾಪೇಕ್ಷಿಕಂ’ ( ಆನಂದ ಸೂತ್ರಮ್ 2-14) ಎನ್ನುವುದೇ ಸಮಂಜಸ. ಆದ್ದರಿಂದ ಆಧ್ಯಾತ್ಮ ಸಾಧನೆಗೆ ಪೂರಕವಾದ ವಾತಾವರಣ ಎಲ್ಲರಿಗಾಗಿ ಕಲ್ಪಿಸುವುದು ಸಮಾಜದ ಹೊಣೆಗಾರಿಕೆ. ಒಪ್ಪತ್ತಿನ ಊಟಕ್ಕಾಗಿ ಪರದಾಡುವ, ಜೀವನದ ಕನಿಷ್ಠ ಅಗತ್ಯತೆಗಳನ್ನು ಪೂರೈಸಿಕೊಳ್ಳಲೋಸುಗವೇ, ದಿನವಿಡೀ ದುಡಿಯಲೇಬೇಕಾದ ಜನರಿಗೆ ಆಧ್ಯಾತ್ಮ ಸಾಧನೆಯ ಕುರಿತು ಭೋದಿಸುವದು ಕ್ರೂರ ವ್ಯಂಗ್ಯ. ಪ್ರತಿಯೋರ್ವ ವ್ಯಕ್ತಿಗೂ ಆಹಾರ, ಬಟ್ಟೆ, ವಸತಿ, ಶಿಕ್ಷಣ , ಔಷದೋಪಚಾರಗಳು ಲಭ್ಯವಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡಬೇಕಾದುದು ಸಮಾಜದ ಹಿತಚಿಂತಕರ ಕರ್ತವ್ಯ. ಇಂತಹ ವ್ಯವಸ್ಥೆಯನ್ನು ರೂಪಿಸುವ ಚಿಂತನೆ, ಕಾರ್ಯವಿಧಾನವೇ ಅರ್ಥಶಾಸ್ತ್ರ. ಅರ್ಥಶಾಸ್ತ್ರವೆಂದರೆ ಇಕೊನಿಮಿಕ್ಸ್ ( ಧನ ಶಾಸ್ತ್ರ) ಅಲ್ಲ. ಅರ್ಥ ಶಬ್ದಕ್ಕೆ ಎರಡು ವಿವರಣೆಗಳಿವೆ. ಮಾನವನ ಭೌತಿಕ ಅಸ್ತಿತ್ವದ ತೊಂದರೆಗಳನ್ನು ನಿವಾರಣೆ ಮಾಡುವ ಮಾಧ್ಯಮವೇ ಅರ್ಥ. ಈ ಸಂದರ್ಭದಲ್ಲಿ ಅರ್ಥಕ್ಕೆ ಹಣವೆನ್ನುವ ವಿವರಣೆ ಸಲ್ಲುತ್ತದೆ. ಮಾನಸಿಕ ಬೇಗುದಿಯನ್ನು , ತೋಳಲಾಟವನ್ನು ಪರಿಹರಿಸುವುದಕ್ಕೂ ಅರ್ಥ ಎನ್ನುತ್ತಾರೆ. ಅದು ಕೇವಲ ಹಣದಿಂದಲೇ ಆಗುವಂತಹುದಲ್ಲ. ಮಾನಸಿಕ ನೆಮ್ಮದಿಯನ್ನು ತಾತ್ಕಾಲಿಕವಾಗಿ ನೀಡುವುದು ಅರ್ಥ. ಶಾಶ್ವತವಾಗಿ ನೀಡುವುದು ಪರಮಾರ್ಥ. ಮಾನವನ ಭೌತಿಕ ಅಸ್ತಿತ್ವವನ್ನು ರಕ್ಷಿಸಿ ಉಳಿಸುವದು ಮತ್ತು ಮಾನಸಿಕ ಹಸಿವನ್ನು ನೀಗಿಸುವದು ಅರ್ಥಶಾಸ್ತ್ರದ ಗುರಿ. ಇಂದು ಪ್ರಚಲಿತವಿರುವುದು ಧನಶಾಸ್ತ್ರ; ಬೇಕಿರುವುದು ಅರ್ಥಶಾಸ್ತ್ರ. ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ಚತುರ್ವಣಗಳನ್ನು ಮಾನವರು ಪಾಲಿಸಬೇಕೆಂದು ಭಾರತದ ದಾರ್ಶನಿಕರು ತಿಳಿಸಿದ್ದು ಈ ಅರ್ಥದಲ್ಲಿ. ಭೌತಿಕ ಅಸ್ತಿತ್ವವನ್ನು ಕಾಪಾಡಿಕೊಂಡು ಧರ್ಮಾಚರಣೆ ಮಾಡಲು ಅವಕಾಶ ಕಲ್ಪಿಸಿಕೊಡುವುದು ಅರ್ಥಶಾಸ್ತ್ರ. ಧರ್ಮಾಚರಣೆಯಿಂದ ಮೋಕ್ಷ ಪ್ರಾಪ್ತಿಯಾಗುತ್ತದೆಂದು ಅನುಭಾವಿಗಳು ಅರಿತಿದ್ದರು. ಹಣದಿಂದಲೇ ಧರ್ಮಾಚರಣೆ ಮಾಡುತ್ತೇವೆಂಬ ಭ್ರಮೆಗೆ ಹಲವರು ಸಿಲುಕಿದ್ದಾರೆ. ಬಡವರಿಗೆ, ದೇವಾಲಯ, ಚರ್ಚು, ಮಸೀದಿಗಳಿಗೆ ದೇಣಿಗೆ ನೀಡುವುದು, ಆಡಂಬರದ ಪೂಜೆಗಳನ್ನು ನೆರವೇರಿಸುವುದು, ಖಾವಿ ತೊಟ್ಟವರ ಸೇವೆ ಮಾಡುವುದೇ ಧರ್ಮಾಚರಣೆಯೆಂದು ಜನಸಾಮಾನ್ಯರನ್ನು ನಂಬಿಸಲಾಗಿದೆ. ಆಧ್ಯಾತ್ಮವೆಂದರೆ ಬದುಕಿನ ವಾಸ್ತವದ ನಿರಾಕರಣೆಯೆಂದು ತಪ್ಪಾಗಿ ಬಿಂಬಿಸಿ ಅದಕ್ಕಿಷ್ಟು ನಿಗೂಢತೆಯ ಲೇಪವನ್ನು ಹಚ್ಚಿ ಜನರನ್ನು ಭಯಭೀತರನ್ನಾಗಿಸಲಾಗಿದೆ. ಧನ ಗಳಿಕೆ ಮತ್ತು ಸಂಗ್ರಹಣೆಯೇ ಜೀವನದ ಗುರಿಯೆಂದು ನಂಬಿರುವವರ ಜೀವನದ ಬಹುಪಾಲು ಸಮಯ ಅದರಲ್ಲೇ ಕಳೆದು ಹೋಗುತ್ತದೆ. ಶ್ರೇಷ್ಠ ವಿಚಾರಗಳನ್ನು ಅರಿಯುವ, ಅಧ್ಯಯನ ಮಾಡುವ , ಆಧ್ಯಾತ್ಮ ಸಾಧನೆಯ ಆನಂದವನ್ನು ಅನುಭವಿಸುವುದರಿಂದ ಅವರು ವಂಚಿತರಾಗುತ್ತಿದ್ದಾರೆ. ಸ್ವಾರ್ಥ ಮತ್ತು ಸ್ವ ಕೇಂದ್ರಿತ ಧನಶಾಸ್ತ್ರದ ಚಿಂತನೆಗಳಿಂದ ಪ್ರಭಾವಿತವಾದ ಆರ್ಥಿಕ ವ್ಯವಸ್ಥೆಯಲ್ಲಿ ಸಿಲುಕಿ ಅಸಹಾಯಕತೆ ಅನುಭವಿಸುತ್ತಿರುವವರಿಗೆ ಆಧ್ಯಾತ್ಮದ ಕುರಿತು ಚಿಂತಿಸಲೂ ಸಮಯವಿಲ್ಲವಾಗಿದೆ. ಬಾಹ್ಯಾಡಂಬರ, ಬಾಹ್ಯ ಪೂಜೆ, ಪ್ರಾರ್ಥನೆಗಳಿಂದ ತಮ್ಮ ಕಷ್ಟಗಳು ಪರಿಹಾರ ತಮ್ಮ ಭೌತಿಕ ಅಸ್ತಿತ್ವವನ್ನು ಕಾಪಾಡಿಕೊಳ್ಳಲು ಸಾಧ್ಯವಾದಿತೆಂಬ ನಿರೀಕ್ಷೆಯಲ್ಲಿ ಅವರು ಇನ್ನಷ್ಟು ಮೌಢ್ಯಾಚರಣೆಗಳಿಗೆ ಬಲಿಯಾಗುತ್ತಿದ್ದಾರೆ. ಧನಶಾಸ್ತ್ರದ ಶೋಷಣಾ ಕುಣಿಕೆಗಳನ್ನು ಹರಿದೊಗೆಯಲು ಅರ್ಥಶಾಸ್ತ್ರದ ಅನುಷ್ಠಾನದಿಂದ ಮಾತ್ರ ಸಾಧ್ಯ. ಪ್ರತಿಯೋರ್ವ ವ್ಯಕ್ತಿಗೂ ಜೀವನದ ಕನಿಷ್ಠ ಅಗತ್ಯತೆಗಳನ್ನು ಪೂರೈಸುವ ಹೊಣೆಗಾರಿಕೆ ಸಮಾಜ ಅಂದರೆ ಸರ್ಕಾರಕ್ಕೆ ಇದೆ. ಸರ್ಕಾರದ ಅಥವಾ ಧನವಂತರ ಔದಾರ್ಯದ ಭಿಕ್ಷೆಯಿಂದ ಇದು ಆಗಬೇಕಿಲ್ಲ. ದುಡಿಯುವ ಸಾಮಥ್ರ್ಯವುಳ್ಳ ಪ್ರತಿಯೋರ್ವ ವ್ಯಕ್ತಿಗೂ ದುಡಿಮೆಯ ಅವಕಾಶ ನೀಡುವುದು, ದುಡಿಮೆಯ ಪ್ರತಿಫಲದಿಂದ ದುಡಿಮೆಗಾರ ಹಾಗೂ ಅವರ ಅವಲಂಬಿತರ ಜೀವನದ ಮೂಲಭೂತ ಅವಶ್ಯಕತೆಗಳಾದ ಆಹಾರ, ಬಟ್ಟೆ, ವಸತಿ, ಶಿಕ್ಷಣ, ಔಷಧೋಪಚಾರಗಳ ಅಗತ್ಯತೆಗಳನ್ನು ಪೂರೈಸಿಕೊಳ್ಳುವಂಥ ವ್ಯವಸ್ಥೆಯನ್ನು ನಿರ್ಮಾಣ ಮಾಡುವುದು ಸರ್ಕಾರದ ಹೊಣೆಗಾರಿಕೆ. ಇಂತಹ ವ್ಯವಸ್ಥೆಯ ನಿರ್ಮಾಣ ಬರೀ ಕನಸಲ್ಲ. ವಾಸ್ತವವಾಗಿಸಲು ಸಾಧ್ಯ. ಇಂದಿನ ಸ್ವಾರ್ಥ ಕೇಂದ್ರಿತ ವ್ಯವಸ್ಥೆಯನ್ನು ತೊಲಗಿಸಿ, ಆರ್ಥಿಕ ವಿಕೇಂದ್ರೀಕರಣವನ್ನು ಜಾರಿಗೊಳಿಸಿದಾಗ ಸಂಪನ್ಮೂಲಗಳ ಹತೋಟಿ ಜನಸಾಮಾನ್ಯರಿಗೆ ಸಿಗುತ್ತದೆ. ಲಾಭ ಗಳಿಕೆ, ಲಾಭ ಹೆಚ್ಚಳದ ಉದ್ದೇಶದಿಂದಲೇ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳ ಬದಲಿಗೆ, ಎಲ್ಲರಿಗೂ ಉದ್ಯೋಗ ನೀಡುವ, ಎಲ್ಲರಿಗೂ ಉತ್ತಮ ಬದುಕು ಕಟ್ಟಿಕೊಡುವ ಉದ್ದೇಶದಿಂದ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ಖಾಸಗಿ ರಂಗವು ಸಹಕಾರಿ ರಂಗಕ್ಕೆ ಸ್ಥಾನ ಮಾಡಿಕೊಡುವುದು ಅನಿವಾರ್ಯವಾಗಲಿದೆ. ಇದು ಜನಾಧಿಕಾರ ಅರ್ಥ ವ್ಯವಸ್ಥೆ. ಇದರ ಉದ್ದೇಶ ಎಲ್ಲರ ಸುಖ ಮತ್ತು ಎಲ್ಲರ ಹಿತ. ಸಮಾಜದ ಪ್ರತಿಯೋರ್ವ ವ್ಯಕ್ತಿಗೂ ನೈಜ ಅರ್ಥದ ಧರ್ಮಾಚರಣೆಯಿಂದ ಆಧ್ಯಾತ್ಮದ ಪಥದಲ್ಲಿ ಸಾಗಿ ಯಶ ಪಡೆಯುವ ಅವಕಾಶ ಸೃಷ್ಟಿಸುವುದು. ಮಾನವನ ಅಸ್ತಿತ್ವದ ಶಾರೀರಿಕ, ಮಾನಸಿಕ, ಆಧ್ಯಾತ್ಮಿಕವೆಂಬ ಮೂರು ಸ್ತರಗಳಲ್ಲಿ ಉನ್ನತಿ ಸಾಧಿಸಲು ಅವಕಾಶ ನೀಡುವ ಅರ್ಥವ್ಯವಸ್ಥೆಯೇ ಜನಾಧಿಕಾರ ವ್ಯವಸ್ಥೆ.

ಲೇಖನ Read Post »

ಕಾವ್ಯಯಾನ

ಕಾವ್ಯಯಾನ

ನಾಲ್ಕಾರು ಮಳೆ ಹನಿಗಳು: ದೇವು ಮಾಕೊಂಡ ಸಿಂದ್ಗಿ ನನಗೆ ನಾನೇ ಬಂಧಿಯಾಗಿರುವೆ ಎರಡು ಕಳ್ಳ ಹುದುಲಗಳ ನಡುವೆ ಸಿಲುಕಿ ಬೇರೆರಡರ ಇಕ್ಕಟಿನಲಿ ಬೆಳೆದ ಈಚಲು ಸಸಿಯ ಹಾಗೆ ವಿಶಾಲ ಭೂಮಿ ಬಾನುಗಳ ನಡುವೆ ತಳಕು ಹಾಕಿಕೊಂಡಿರುವೆ ಪರೀಧಿಯೊಳಗಿನ ಕೇಂದ್ರದ ಹಾಗೆ ಬೆಳಗು ಬೈಗು ಪ್ರೀತಿ ಇಮ್ಮಡಿಗೊಳ್ಳುತ್ತದೆ ಸೂರ್ಯ ಬಿಸಲ ಪ್ರಖರ ಶಾಖಗೆ ಕಾಮ ಕಸ್ತೂರಿ ಅರಳಿದ ಹಾಗೆ ಎಲ್ಲೋ ಎಸೆದ ಬೀಜ ಮೊಳಕೆಯೊಡೆದು ನನ್ನೊಳಗೆ ಹೂವು ಬಿಡುತ್ತಿದೆ ತಿಂಗಳ ಚಂದಿರ ಮೂಡಿದ ಹಾಗೆ ಇರುಳ ರಾತ್ರಿ ಪುಟಿದೇಳುತ್ತಿದೆ ವಿರಹ ಕರಕಲಾಗುತ್ತಿದೆ ಸುಟ್ಟು ಸುಟ್ಟು ಅನಾಥನ ಗರಡಿಯೊಳಗೆ ಸಿಲುಕಿ ಬೆಳದಿಂಗಳ ಮೋಹ ಕಾಮದ ಚಿಗುರನು ಹಿಪ್ಪಿ ಮಾಡುತ್ತಿದೆ ಹಿಂಡಿ ಹಿಂಡಿ ಮರಡಿ ಮಣ್ಣಲಿ ನಾಲ್ಕಾರು ಮಳೆ ಹನಿ ಬಿದ್ದ ಹಾಗೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೌನ ಮಾತಾದಾಗ ಸರೋಜಾ ಶ್ರೀಕಾಂತ ಅಮಾತಿ ಎದೆಯಗೂಡೊಳಗೆ ಬಚ್ಚಿಟ್ಟು ಮರೆಮಾಚಿದ ಮಾತುಗಳೆಷ್ಟೋ!? ನುಡಿಯದೇ ಮೌನರಾಗವಾದ ಶ್ರುತಿ,ತಾಳಗಳಿಲ್ಲದ ಹಾಡುಗಳೆಷ್ಟೋ!!? ತುಟಿಯ ಬಿಟ್ಟು ಹೊರಬರದೇ ಅಡಗಿಸಿಟ್ಟ ನಲಿವು-ನೋವ ಬಗೆಯ! ಬಿಡಿ ಬಿಡಿಸಿ ನಿನ್ನ ಮುಂದಿಡುವೆ ನಾನೀಗ ಕೇಳದಿರಬೇಡ ಗೆಳತಿ ಮನದ ಮಾತೀಗ!! ಅಳಿಯದೆ ಉಳಿದ ಭಾವಗಳಿಗೆ  ಜೀವ ಬಂದಿದೆ ಮತ್ತೊಮ್ಮೆ ಈಗ! ಮನದ ಮೂಲೆಯಲಿ ಅವಿತಿರುವ ಆಸೆ ಹಕ್ಕಿಗೆ  ಹಾರಲು ರೆಕ್ಕೆ ಬಂತೀಗ!! ನನ್ನೀ ಮೌನ ಮಾತಾಗಬೇಕೆಂದರೂ ಬೇಕು ನಿನ್ನ ಸನಿಹ ಸಾಂಗತ್ಯ ನಾ ಬರೆವ ಲೇಖನಿ ನೀನೆಂಬುದು ಸತ್ಯ! ಮತ್ತೇ ಮತ್ತೇ ಬಂದು ಸೇರು ನನ್ನ ಕೈಗೆ ನೀ ನಿತ್ಯ ಮರೆತು ಕೂಡ ಮರೆಯಾಗದಿರು ಕಂಗಳ ಹೊಳಪಿನಿಂದ! ಕನಸ ಕಾಣೋ ಕಲ್ಪನೆಯ ಬಗೆಯಿಂದ ಬಯಸಿದೆ ಮನ ಸದಾ ನಿನ್ನ ಸ್ನೇಹ ಸಂಬಂಧ!! ಅವಿತು ಕೂತ ಮೌನಪದಗಳಿಗೆಲ್ಲ ಮಾತೆಂಬ ಕವಿತೆಯಾಗೋ ಹೊಂಗನಸೀಗ! ನನ್ನೊಲವಿನ ಗೆಳತಿ ಬಂದು ಬಿಡು  ತುಟಿಯಂಚಿನಿಂದ ಆಚೆಯೀಗ!!  ಮತ್ತೇ ಮಾತು ಮೌನವಾಗುವ ಮುನ್ನ!!!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದಾರಿಹೋಕನೆಂದು ನಂಬಿ ಬಿಟ್ಟೆ! ಅವ್ಯಕ್ತ ಕುಶಲ ಚೇಷ್ಟೆಗಳ ಕನಸ ಮಾರುವ ಕಾಂತನೆ ಹೆಣ್ಣಿನ ಒಳಮನಸ್ಸ ಮರ್ಮವ ಹೇಳುವೆ ತಿಳಿದುಕೊ… ನಿನ್ನ ನಿಜ ಲೋಕದ ಕಡಲ ಮುತ್ತು ಗಳಂತಿರುವ, ಮೌನ ವನಿತೆಯರ ಸಖಿಗುಟ್ಟಿದು.. ಮುಂಗುರುಳ ನಡುವೆ ನಲಿವ ಕಣ್ಣಲ್ಲಿ ಕನಸೊಂದ ಹುಡುಕುವುದು ತಪ್ಪೇನಲ್ಲಾ.. ತುಂಟ ನಗುವಿನೊಳಗೆ ರಸಿಕತೆಯ ಬಯಕೆಯು ಅಲ್ಪಾಯುಷಿಯೂ ಅಲ್ಲಾ.. ಸಭ್ಯತೆಯ ನೀಳ ಸೆರಗ ಜಾರಿಸಲು ಬಾಡದ ನಿತ್ಯಾನುರಾಗವ ಹುಡುಕುವಳಷ್ಟೆ, ಸಹಜ ಜೀವನದಲ್ಲಿರುವ ತಿರುವುಗಳ ಮಧ್ಯೆ ಸ್ಪಷ್ಟ ಮನದ ಮದುರ ಪ್ರೀತಿಯ ಅರಸುವಳಷ್ಟೇ. ಉದಾಸೀನ ಪುರುಷನ ಭೂಷಣವಾದರೆ, ಕ್ಷಮಿಸುವುದು ಸ್ತ್ರೀಯ ಮಾತೃತ್ವವೇ ಹೌದು. ನಿನ್ನ ಮೆದುಳಿನಾಟದ ದಾಳದ ಕಾಯಿ ಅವಳೆಂದರೆ, ಅವಳ ಹೃದಯದಾಟದ ಗುಪ್ತ ರಾಜ ನೀನು ಮರುಳೇ. ಅಯ್ಯೋ, ಮೂಢಾಂಧ…! ಈ ಯುಗದ ಬಲಿಷ್ಠ ಸ್ವತಂತ್ರ ನಾರಿ ಇವಳು. ಆ ಕನಸಿನ ವೀಣಾತಂತಿಗಳ ಮೀಟುವುದ ನೀ ನಿಲ್ಲಿಸಿದೆ, ಬಯಕೆಯ ಹೆಬ್ಬಾಗಿಲ ಮುಚ್ಚಿ, ಪ್ರೀತಿಯ ಹೂಗಳನಿಟ್ಟಳು ಮಚ್ಚೆಯ ಕಚ್ಚಿದಾಗಲೇ ಗುಟ್ಟಾದ ಗಂಟೊಂದ ಕಟ್ಟಿದ್ದಳು.. ಕಾಣದೆ ಅರಳುವ ಮುಗುಳ್ನಗೆಯೊಳಗಿನ ಆಲಿಂಗನವ, ತುಸುತಟ್ಟಿ ನೋಡದೆ…. ನಾನು ಕೇವಲ ದಾರಿಹೋಕ ಎಂದು ನೀ ನಂಬಿಬಿಟ್ಟೆ! ಒಲವ ಅನರ್ಘ್ಯ ಮಾಲೆಗೆ ಅಹಂಮಿನ ಮೋಡ ಕವಿಯಿತಷ್ಟೆ.

ಕಾವ್ಯಯಾನ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ಮತ್ತೆಂದೂ ನಿನ್ನ ನೆನೆಯದೆ! ನಾನೀಗ ಬರೆಯುವುದ ನಿಲ್ಲಿಸಿರಬಹುದು ಹಾಗೆಯೇ ನಿನ್ನ ನೆನೆಯುವುದನ್ನೂ ಮೊದಲಿನಂತೆ ಅಕ್ಷರಗಳ ಸಹಕರಿಸುತಿಲ್ಲ ಹುಟ್ಟಿದ ಶಬ್ದಗಳೂ ಅರ್ಥ ಕೊಡುತಿಲ್ಲ ಘನಘೋರ ಬದುಕಿನ  ಹಲವು ಹಗಲುಗಳು ಅಸ್ಥವ್ಯಸ್ಥವಾಗಿ ಸರಿದು ಹೋದವು  ಓಡುವ ರೈಲಿನ ಪಕ್ಕದ ಗಿಡಗಂಟೆಗಳಂತೆ ಆಯ್ದುಕೊಂಡಿದ್ದೆನೆ ನಾನೀಗ ಇರುಳುಗಳನ್ನು ಅದು ತಂದೊಡ್ಡುವ ಸಾವಿನಂತಹ ಏಕಾಕಿತನವನ್ನು ಮೋಡಗಳ  ಹಿಂದಿನ ಬೆತ್ತಲೆ ಚಂದ್ರ ಮೊದಲಿನಂತೆ ಕಣ್ಣಾ ಮುಚ್ಚಾಲೆಯಾಡುವುದಿಲ್ಲ ಬೀಸುವ ಗಾಳಿಗೂ ಉತ್ಸಾಹದ ಉಸಿರಿಲ್ಲ ಎಲ್ಲ ಮುಗಿದು ಹೋದವರ ಅಂಗಳದಲ್ಲಿ ಮಿಂಚು ಹುಳುವೂ ಮಿನುಗುವುದಿಲ್ಲ ನನ್ನ ಪಾಪಗಳು ನಿರಂತರವಾಗಿ ಹಿಂಬಾಲಿಸುತ್ತಿಯೆಂಬ ಅರಿವಿನಲ್ಲಿ ಬದುಕಲೆತ್ನಿಸುತ್ತೇನೆ. ನಿನ್ನನ್ನು ನೆನೆಯದೆ ಏನನ್ನೂ ಬರೆಯದೆ! ಕು.ಸ.ಮಧುಸೂದನ ರಂಗೇನಹಳ್ಳಿ

ಕವಿತೆ ಕಾರ್ನರ್ Read Post »

ಕಾವ್ಯಯಾನ

ಮಕ್ಕಳ ಕವಿತೆ

ಚಂದ್ರಯಾನ ಎನ್. ಶಂಕರರಾವ್ ಆಹಾ ಚಂದಿರ ಪೂರ್ಣ ಚಂದಿರ ಎಷ್ಟು ಎತ್ತರ ನಿಲುಕದಷ್ಟು ದೂರ. ನಾ ನೀ ಜೊತೆ ಜೊತೆಯಲಿ ಆಡುವ ಬಾ ಚಂದಿರ, ಮೋಡದಿ ಮರೆಯಾಗದಿರು ಅಂಬರದಿ ತೇಲಾಡದಿರು. ನಿಲ್ಲು ಅಲ್ಲೇ ಚಂದಮಾಮ ಎಲ್ಲಿ ಅವಿತೆ ಬಾನಲಿ ನೀನು, ಬಲ್ಲೆ ನಿನ್ನ ಕಣ್ಣುಮುಚ್ಚಾಲೆ ಜಲದ ಹಿಂದೆ ಅವಿತೆಯೇಕೆ. ಹುಣ್ಣಿಮೆಯ ಸುಂದರ ಚಂದಿರ ವಿಧು ನೀ ಬಾನಲಿ ಮಂದಿರ, ಮುದದಲಿ ಪ್ರಕಾಶಿಸು ನಿರಂತರ ಬದುಕಿಗೆ ನೀ ಭಾಸುರ. ವಿಜ್ಞಾನದ ಪರಿಶ್ರಮ ಭಾರತದ ಚಂದ್ರಯಾನ, ನೋಡತಲಿರು ಮುಂದೊಮ್ಮೆ ನಿನ್ನಲ್ಲಿಗೆ ನಾ ಬರುವೆ ಚಂದ್ರಯಾನಕೆ ಕಾದಿರಿಸಿರುವೆ. ಕಿರುಪರಿಚಯ: ನಿವೃತ್ತ ಬ್ಯಾಂಕ್ ಮ್ಯಾನೇಜರ್,ಮೂರು ಕವನಸಂಕಲನಗಳು ಬಿಡುಗಡೆಯಾಗಿವೆ.ಇವರ ಹಬ್ಬ ಪದ್ಯ ಐದನೇ ತರಗತಿಯ ಕನ್ನಡ ದ್ವಿತೀಯ ಬಾಷೆಯಲ್ಲಿ ಪಠ್ಯವಾಗಿದೆ

ಮಕ್ಕಳ ಕವಿತೆ Read Post »

ಕಾವ್ಯಯಾನ

ಕಾವ್ಯಯಾನ

ಹೇಳಿ ಹೋಗು ಕಾರಣ ಪ್ರಮಿಳಾ ಎಸ್.ಪಿ. ದಿಂಬಿನ ಕೆಳಗಿನ ಜಂಗಮ ಗಂಟೆಯನ್ನು ಮತ್ತೊಮ್ಮೆ ಮಗದೊಮ್ಮೆ ಹುಡುಕಿ ನೋಡುತ್ತಿದ್ದೆ….. ಕೆಂಪು ಗುಲಾಬಿ ಅದರ ಮುದ್ರೆ ಹೃದಯದ ಇಮೇಜು ಇದ್ದಿರಬಹುದು ನಿನ್ನ ಕಡೆಯಿಂದ…ಎಂದು!!! ಈಗೆಲ್ಲವು ಶೂನ್ಯ… ಅದೆಷ್ಟು ದಿನ ಅಂತರಂಗದ ಒಡೆನಾಟವಿತ್ತೋ… ಅಷ್ಟೂ ದಿನ ನಿನ್ನ ಡಿಪಿ ಗೊಂದು ಬೆಲೆಯಿತ್ತು…. ಈಗ ಕೊನೆಯ ಸೀನ್ ಎಷ್ಟು ಗಂಟೆಗೆ ನೋಡಿರುವೆ… ಎಂಬುದು ಒಂದೇ ಬಾಕಿ ನನಗೆ… ಹೇಳಿ ಹೋಗು ಕಾರಣ ಎನ್ನುವುದಿಲ್ಲ ನಾನು ಕಾರಣ ಹೇಳದೆ ಬಂದಿದ್ದವನು ನೀನು….!!!

ಕಾವ್ಯಯಾನ Read Post »

You cannot copy content of this page

Scroll to Top