ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅಪ್ಪ ಅಂದರೆ ಆಕಾಶ ದೇವಿ ಬಳಗಾನೂರ ಅಪ್ಪ ಅಂದರೆ ಆಕಾಶ ಅಪ್ಪ ಅಂದ್ರೆ ಅಗೋಚರ ಪ್ರೀತಿಯ ಕಡಲು ನನ್ನಮ್ಮನಂತ ಕರುಣೆಯ ಮಡಿಲು ಮಗಳ ಸಾಧನೆಯು ಪ್ರಜ್ವಲಿಸಲು ಕಾರಣವಾದ ತಿಳಿಮುಗಿಲು ಮಗಳಿಗಾಗಿ ದಣಿದನದೆಷ್ಟೋ ಹಗಲು ಅವಳಿಗಾಗಿಯೇ ಕಾಯ್ದಿರಿಸಿದನು ತನ್ನ ಇರುಳು ಅಪ್ಪ ಅಂದ್ರೆ ಮಗಳ ಪಾಲಿನ ನಾಯಕ ಅವಳ ಬದುಕ ದೋಣಿಯ ನಿಜ ನಾವಿಕ ಮಗಳ ಮುಗ್ದ ನಗುವಿಗಾಗಿ ಕಾದ ಅಮಾಯಕ ಅವಳ ಬದುಕ ರೂಪಣೆಯ ನಿಜ ಮಾಲಿಕ ಅಪ್ಪ ಅಂದ್ರೆ ಮಗಳಿಗಾಗಿಯೇ ಬದುಕೋ ಜೀವ ಅವಳ ಖುಷಿಯಲ್ಲೆ ಮರೆವನು ತನ್ನೆಲ್ಲ ನೋವ ಮಗಳೇ ತನ್ನ ಅತಿದೊಡ್ಡ ಸಂಪಾದನೆಯೆಂಬ ಭಾವ ಮತ್ತೊಮ್ಮೆ ಮಗದೊಮ್ಮೆ ಹೇಳುವೆನು ಕೇಳಿ ಅಪ್ಪ ಅಂದ್ರೆ ಆಕಾಶ ಅಪ್ಪ ಅಂದ್ರೆ ತಾಯಿಯೆಂಬ ಭೂಮಿಗೇ ಒಡಲು ಮಗಳಿಗವನೇ ಪ್ರೀತಿಯ ಕಡಲು

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಮಂಗ್ಲೇಶ್ ಡಬರಾಲ್ ಹಿಂದಿ ಕವಿ ಕನ್ನಡಕ್ಕೆ:ಕಮಲಾಕರ ಕಡವೆ “ನಮ್ಮ ಹೆದರಿಸುವಾತ” ನಮ್ಮನ್ನು ಹೆದರಿಸುವವಹೇಳುತ್ತಾನೆ ಹೆದರುವಂತದ್ದು ಏನೂ ಇಲ್ಲನಾನು ಯಾರನ್ನೂ ಹೆದರಿಸುತ್ತಿಲ್ಲನಮ್ಮನ್ನು ಹೆದರಿಸುವವಗಾಳಿಯಲ್ಲಿ ಸೆಟೆದ ತನ್ನ ಬೆರಳು ತಿವಿದು ಹೇಳುತ್ತಾನೆಯಾರಿಗೂ ಹೆದರುವ ಅಗತ್ಯವಿಲ್ಲಅವನು ತನ್ನ ಮುಷ್ಟಿ ಬಿಗಿದು ಗಾಳಿಯಲ್ಲಿ ಬೀಸುತ್ತಾನೆಮತ್ತು ಹೇಳುತ್ತಾನೆ ನೀವು ಹೆದರುತ್ತಿಲ್ಲ ತಾನೇ.ನಮ್ಮನ್ನು ಹೆದರಿಸುವವಕನ್ನಡಕದ ಹಿಂದಿನಿಂದತನ್ನ ತಣ್ಣಗಿನ ಕ್ರೂರ ಕಣ್ಣಿಂದ ನಮ್ಮೆಡೆ ದುರುಗುಟ್ಟುತ್ತಾನೆನೋಡುತ್ತಾನೆ ಯಾರು ಯಾರು ಹೆದರಿದ್ದಾರೆಯಾವಾಗ ಜನರು ಹೆದರ ತೊಡಗುತ್ತಾರೋ ಅವನು ಹಿಗ್ಗಲು ತೊಡಗುತ್ತಾನೆಮುಗುಳ್ನಗುತ್ತ ಹೇಳುತ್ತಾನೆ ಹೆದರುವ ಪ್ರಸಂಗವೇನೂ ಇಲ್ಲನಮ್ಮನ್ನು ಹೆದರಿಸುವವತಾನೇ ಹೆದರಿಕೊಳ್ಳುತ್ತಾನೆಯಾರೂ ಹೆದರುತ್ತಿಲ್ಲವೆಂದು ಅವನಿಗೆ ಕಂಡಂತೆ ====

ಅನುವಾದ ಸಂಗಾತಿ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ಪೂರ್ಣವಾಗದ ಸ್ವಾತಂತ್ರ ಹೋರಾಟಗಾರರ ಸ್ಮಾರಕ ಕೆ.ಶಿವು ಲಕ್ಕಣ್ಣವರ ಇನ್ನೂ ಪೂರ್ಣವಾಗಿಲ್ಲ ಹಾವೇರಿಯ ‘ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ವಸ್ತುಸಂಗ್ರಹಾಲಯ’..! 1934ನೇ ಇಸವಿಯಲ್ಲಿ ಗಾಂಧೀಜಿ ಶಿರಸಿ, ಹಾನಗಲ್ ಮೂಲಕ ಹಾವೇರಿ ಪ್ರವಾಸ ಹೊರಟಿದ್ದರು. ಆಗ ನೊಂದ ದಲಿತ ಹೆಣ್ಣು ಮಗಳೊಬ್ಬಳು ಹೋಗುತ್ತಿರುವುದನ್ನು ಗಮನಿಸುತ್ತಾರೆ ಗಾಂಧೀಜಿ. ಆಕೆಯನ್ನು ವೀರನಗೌಡ ಅವರ ಮೂಲಕ ಆಶ್ರಮಕ್ಕೆ ಸೇರಿಸುತ್ತಾರೆ. ಮುಂದೆ ಗಾಂಧೀಜಿ ಸಲಹೆಯಂತೆ ಸಂಗೂರು ಕರಿಯಪ್ಪ ಅವರು ಆ ಹೆಣ್ಣು ಮಗಳನ್ನು ಮದುವೆಯಾಗುತ್ತಾರೆ. ಹೀಗೆ ಸ್ವಾತಂತ್ರ್ಯ ಸಂಗ್ರಾಮದ ಕಾಲಗಟ್ಟ, ಸಮಾನತೆ, ಸಾಮರಸ್ಯವನ್ನೂ ಸಾರುತ್ತಾರೆ… ‘ನಮ್ಮ ನೆಲದಲ್ಲೇ ನಡೆದ ಇಂತಹ ಐತಿಹಾಸಿಕ ಘಟನೆಗಳ ಬಗ್ಗೆ ಎಷ್ಟೋ ಜನರಿಗೆ ಅರಿವಿಲ್ಲ. ಅವು ದಾಖಲೀಕರಣಗೊಳ್ಳಬೇಕು. ಆ ಮಾಹಿತಿ ಕಿರಿಯರಿಗೆ ದೊರೆಯಬೇಕು. ಆಗ ದೇಶಪ್ರೇಮ ಬೆಳೆಯಲು ಸಾಧ್ಯ. ಇದರ ಪ್ರಯತ್ನವೇ ‘ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ವಸ್ತುಸಂಗ್ರಹಾಲಯ’ ಎನ್ನುತ್ತಾರೆ ಹುತಾತ್ಮ ಮಹದೇವ ಮೈಲಾರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸದಸ್ಯ ವಿ.ಎನ್‌ ತಿಮ್ಮನಗೌಡ… ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ್‌ ಅಧ್ಯಕ್ಷತೆಯ ಈ ಟ್ರಸ್ಟ್ ಬಜೆಟ್‌ ಪೂರ್ವದಲ್ಲೇ ರೂಪಾಯಿ 6.22 ಕೋಟಿಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ‘ಹಾವೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನೆನಪಿನಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಲು ರೂಪಾಯಿ 2.5 ಕೋಟಿ ಅನುದಾನ ನೀಡಲಾಗುವುದು’ ಎಂದು ಮಾರ್ಚ್‌ 2015ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆಯೂ ಮಾಡಿದ್ದರು. ಆದರೆ, ಈ ಘೋಷಣೆಯಾಗಿ ವರ್ಷಗಳೇ ಕಳೆದರೂ, ಬಿಡಿಗಾಸು ಬಂದಿಲ್ಲ. ಹೀಗಾಗಿ ಮಹತ್ತರ ಯೋಜನೆಯ ಕಾರ್ಯವು ಇನ್ನೂ ‘ಯೋಚನೆ’ಯಿಂದ ‘ಯೋಜನೆ’ ಹಂತಕ್ಕೆ ಬಂದಿಲ್ಲ. ಈ ವಸ್ತು ಸಂಗ್ರಹಾಲಯದ ಕಟ್ಟಡ, ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಸಂಗ್ರಹಿಸಬೇಕಾದ ಕಾರ್ಯ ಆರಂಭಗೊಂಡಿಲ್ಲ. ಸರ್ಕಾರ ಜಿಲ್ಲಾಡಳಿತಕ್ಕೆ ಅನುದಾನ ಬಿಡುಗಡೆ ಮಾಡಿದ ತಕ್ಷಣವೇ ಈ ಕಾರ್ಯವು ಚಿಗುರೊಡೆಯುವ ನಿರೀಕ್ಷೆ ಮೊದಲಿತ್ತು, ಈಗಿಲ್ಲ… ಸ್ವಾತಂತ್ರ್ಯದಲ್ಲಿ ‘ಹಾವೇರಿ’: ಸ್ವಾತಂತ್ರ್ಯ ಹೋರಾಟದಲ್ಲಿ ಹಾವೇರಿ ಜಿಲ್ಲೆಯು ವಿಶಿಷ್ಟ ಹೆಜ್ಜೆ ಗುರುತು ಮೂಡಿಸಿದೆ. ಜಿಲ್ಲೆಯ ಮೈಲಾರ ಮಹದೇವಪ್ಪ, ತಿರುಕಪ್ಪ ಮಡಿವಾಳರ, ವೀರಯ್ಯ ಹಿರೇಮಠ, ಕೆ.ಎಫ್‌ ಪಾಟೀಲ್‌, ಹಳ್ಳಿಕೇರಿ ಗುದ್ಲೆಪ್ಪ, ಸಂಗೂರು ಕರಿಯಪ್ಪ, ಟಿ.ಆರ್. ನಿಸ್ವಿ, ಮೆಣಸಿನಹಾಳ ತಿಮ್ಮನಗೌಡ, ಹೊಸ್ಮನಿ ಸಿದ್ದಪ್ಪ, ತಾವರೆಕೆರೆ ಫಕ್ಕೀರಪ್ಪ, ಪಂಚಾಕ್ಷರಪ್ಪ ವಳಸಂಗದ, ಚಾಂದ ಸಾಬ್, ಪರಮಣ್ಣ ಹರಕಂಗಿ ಮತ್ತಿತರ ಹಲವಾರು ಪ್ರಮುಖರು ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. 1943ರ ಹೊಸರಿತ್ತಿಯಲ್ಲಿ ಮೈಲಾರ ಮಹದೇವಪ್ಪ ಹಾಗೂ ಜೊತೆಗಾರರ ಬಲಿದಾನ, ಹೋರಾಟಕ್ಕೆ ಬಾಂಬ್‌ ತಯಾರಿಸಲು ಹೋಗಿ ಕೈಯನ್ನೇ ಕಳೆದುಕೊಂಡ ಸಂಗೂರ ಕರಿಯಪ್ಪ, ಮೆಣಸಿನಹಾಳ ತಿಮ್ಮನಗೌಡರ ಬಲಿದಾನ ಸೇರಿದಂತೆ ಹಲವಾರು ಘಟನಾವಳಿಗಳಿಗೆ ಹಾವೇರಿ, ಅಗಡಿ, ಹೊಸರಿತ್ತಿ, ಮೋಟೆಬೆನ್ನೂರ, ಬ್ಯಾಡಗಿ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳು ‘ಪವಿತ್ರ ಸಾಕ್ಷಿ’ಯಾಗಿವೆ. ಹಲವೆಡೆ ತ್ಯಾಗದ ನೆತ್ತರೂ ಹರಿದಿದೆ… ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡರೂ ಎಲೆಮರೆಕಾಯಿಯಾಗಿ ಉಳಿದವರೇ ಸಹಸ್ರಾರು ಜನ. ಅಂತಹ ದೇಶಪ್ರೇಮಿಗಳ ನೆನೆಪುಗಳ ದಾಖಲೀಕರಣ ಹಾಗೂ ಯುವಜನತೆಯಲ್ಲಿ ದೇಶಪ್ರೇಮ ಜಾಗೃತಗೊಳಿಸುವ ಉದ್ದೇಶವೇ ಈ ವಸ್ತುಸಂಗ್ರಹಾಲಯ ಯೋಜನೆ ರೂಪುಗೊಳ್ಳಲು ಕಾರಣ’ ಎಂದಿದ್ದರು ಟ್ರಸ್ಟ್‌ನ ಇನ್ನೊಬ್ಬ ಸದಸ್ಯ ಸಾಹಿತಿ ಸತೀಶ ಕುಲಕರ್ಣಿ… ‘ಟ್ರಸ್ಟ್‌ ಮೂಲಕ ದೇಶಪ್ರೇಮ ಕುರಿತ ಕಾರ್ಯಕ್ರಮ ನಡೆಯುತ್ತಿತ್ತು. ಇದಕ್ಕೆ ವಸ್ತುಸಂಗ್ರಹಾಲಯವು ಇನ್ನಷ್ಟು ಇಂಬು ನೀಡಲಿದೆ’ ಎಂದಿದ್ದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ… ಈ ವಸ್ತುಸಂಗ್ರಹಾಲಯದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ಘಟನಾವಳಿ ಹಾಗೂ ಹೋರಾಟಗಾರರನ್ನು ಬಿಂಬಿಸುವ ಚಿತ್ರಗಳ ಗ್ಯಾಲರಿ, ಹೋರಾಟಕ್ಕೆ ಸಂಬಂಧಿಸಿದ ವಸ್ತುಗಳು ಪ್ರದರ್ಶನಗಳು ಕಾಣಲಿವೆ. ಅದರೊಂದಿಗೆ ಇತಿಹಾಸದ ಕ್ಷಣಗಳನ್ನು ಅಕ್ಷರಗಳಲ್ಲಿ ದಾಖಲಿಸಲಾಗುತ್ತದೆ. ಮತ್ತೊಂದೆಡೆ ಸಬರಮತಿ, ಇತರ ಆಶ್ರಮಗಳು, ದಂಡಿ ಸತ್ಯಾಗ್ರಹ ಮತ್ತಿತರ ಪ್ರಮುಖ ಸ್ಥಳ– ಘಟನೆಗಳ ಮಾದರಿಯನ್ನು ರೂಪಿಸಲಾಗುತ್ತದೆ. ಸ್ವಾತಂತ್ರ್ಯದ ಇತಿಹಾಸವನ್ನು ಆಧುನಿಕ ತಂತ್ರಜ್ಞಾನದ ವಿದ್ಯುನ್ಮಾನ ಸಾಧನಗಳ ಮೂಲಕ ದೃಶ್ಯ, ಶ್ರವಣ ಹಾಗೂ ಅಕ್ಷರಗಳಲ್ಲಿ ದಾಖಲಿಸಲಾಗುತ್ತದೆ… ‘ವೀಕಿಪೀಡಿಯಾ’ ಮಾದರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಘಟನಾವಳಿಗಳ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಸರಳವಾಗಿ ಈ ಮಾಹಿತಿ ಪಡೆಯಬಹುದು… ‘ದೇಶ, ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ಘಟನಾವಳಿಗಳನ್ನು ಹಂತ ಹಂತವಾಗಿ ದಾಖಲಿಸುವ ಉದ್ದೇಶವಿದೆ’ ಎಂದಿದ್ದರು ಟ್ರಸ್ಟ್‌ ಸದಸ್ಯ ವಿ.ಎನ್‌ ತಿಮ್ಮನಗೌಡ ಅವರು… ‘ಜಿಲ್ಲಾಧಿಕಾರಿ ಅಧ್ಯಕ್ಷತೆಯ ಹುತಾತ್ಮ ಮೈಲಾರ ಮಹದೇವಪ್ಪ ಟ್ರಸ್ಟ್ ಮೂಲಕ ರಾಜ್ಯ ಸರ್ಕಾರಕ್ಕೆ ಬಜೆಟ್ ಪೂರ್ವ ಪ್ರಸ್ತಾವನೆ ಹೋಗಿತ್ತು. ಈಗ ಕನಸು ನನಸಿಗಾಗಿ ಬಿ.ಜಿ ಬಣಕಾರ, ಸಿ.ಎಂ ಉದಾಸಿ, ಜಿಲ್ಲೆಯ ಶಾಸಕರುಗಳು, ಜಿಲ್ಲಾಧಿಕಾರಿ ಮತ್ತಿತರರು ಪ್ರಮುಖ ಕಾರ್ಯಕ್ಕೆ ಶ್ರಮಿಸುತ್ತಿದ್ದಾರೆ’ ಎಂದ್ದಿರು ಅವರು ಆಗ… ಇಷ್ಟೆಲ್ಲಾ ಪಯತ್ನಗಳಾದರೂ ವಸ್ತುಸಂಗ್ರಹಾಲಯ ಪೂರ್ಣ ಪ್ರಮಾಣದಲ್ಲಿ ಆಗಬೇಕಾದ ಕೆಲಸವಾಗಿಲ್ಲ. ಈ ಕೆಲಸ ಜರೂರಾಗಿ ಆಗಬೇಕಾಗಿದೆ..! ========

ಸ್ವಾತ್ಮಗತ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ಯಶು ಬೆಳ್ತಂಗಡಿ ಮೊದಲು ಶಿಶುವಾಗಿ ಭುವಿ ಸ್ಪರ್ಶಿಸಿ,, ಮೊದಲ ಉಸಿರಾಟ ನಡೆಸಿ,, ಮೊದಲ ಕಣ್ಣೀರ ಸುರಿಸಿ,, ಮೊದಮೊದಲು ಕಂಡ ತೊದಲು ಮಾತಿನ ಕನಸು… ಮೊದಲ ತರಗತಿಗೆ,, ಮೊದಲ ಹೆಜ್ಜೆಯಿಟ್ಟಾಗ,, ಭಯದಲ್ಲೇ ಕಂಡ ನೂರೊಂದು ಕನಸು.. ಮೊದಲ ಬಾರಿ ರಾಷ್ಟ್ರನಾಯಕರ ಕಥೆ ಕೇಳಿದಾಗ,, ಮೊದಲು ಸ್ವಾತಂತ್ರ್ಯದ ಘಟನೆ ಓದಿದಾಗ,, ಅರಳಿದ ದೇಶಪ್ರೇಮದ ಕನಸು… ಮೊದಲು ಚಲನಚಿತ್ರದಿ ಮಧ್ಯಪಾನ ನೋಡಿದಾಗ,, ಮೊದಮೊದಲು ಗಲಾಟೆ ದೊಂಬಿಗಳ ನೋಡಿದಾಗ,, ಅವರಂತೆ ನಾಯಕನಾಗಬೇಕೆಂದು ಕಂಡ ಹುಚ್ಚು ಕನಸು.. ಅವನ ಸುಂದರ ಕಣ್ಣು ಕಂಡಾಗ,, ಅವನು ಮೌನದಿ ಮಾತಾಡಿದಾಗ,, ಅವನ ಸ್ಪರ್ಶದಿ ಜಗವನ್ನೇ ಮರೆತ ಸುಂದರ ಕನಸು.. ಅವನ ಹಸ್ತದಿ ತಾಳಿ ಕಟ್ಟಿಸಿಕೊಂಡಾಗ,, ಕಂಡ ಹತ್ತಾರು ಕನಸು.. ತಾಳಿ ಬೆಲೆಕಳೆದುಕೊಂಡಾಗ,, ನುಚ್ಚುನೂರಾದ ಬದುಕಿನ ಕನಸು.. ಊಟ ತಿಂಡಿ ಬಿಟ್ಟು ಆರೋಗ್ಯ ಹದೆಗೆಟ್ಟಾಗ,, ಜೀವದ ಆಸೆ ಮರೆತಾಗ,, ಸಕಲವ ತೊರೆದು ಸಾವಿನ ಮನೆಗೆ ಹೊರಟಾಗ,, ಕನಸಾಗೇ ಉಳಿದ ಸಾವಿರ ಕನಸು.. ಕನಸಾಗೇ ಉಳಿದ ಬದುಕಿನ ಕನಸು.. ಕಣ್ಣೀರಲ್ಲೇ ಕೊಚ್ಚಿಹೋದ ನೂರೊಂದು ಕನಸು.. ========

ಕಾವ್ಯಯಾನ Read Post »

ಕಥಾಗುಚ್ಛ

ಕಥಾಯಾನ

ತ್ರಿಶಂಕು ಟಿ.ಎಸ್.ಶ್ರವಣಕುಮಾರಿ ತ್ರಿಶಂಕು ಹಪ್ಪಳ ಒತ್ತುತ್ತಿದ್ದ ಸೀತಮ್ಮ, ಬಟ್ಟಲಿಗೆ ಮುಚ್ಚಿದ್ದ ಒದ್ದೆ ಬಟ್ಟೆಯನ್ನು ಸರಿಸಿ ಉಳಿದ ಉರುಳಿಗಳ ಲೆಕ್ಕ ಹಾಕಿದರು. ಇನ್ನು ಹದಿನೈದು ಉಂಡೆಗಳಿವೆ. ಬೆಳಗ್ಗೆಯೇ ಮಹಡಿಯ ಮೇಲೆ ಹಪ್ಪಳ ಒಣಗಿ ಹಾಕಲು ಸವರಿಸುತ್ತಿದ್ದುದನ್ನು ನೋಡಿದ್ದ ಧೀರಜನ ಫ್ರೆಂಡ್ಸ್ “ಅಜ್ಜಿ ನಾವೆಲ್ಲಾ ಶಾಲೆಯಿಂದ ಬಂದಮೇಲೆ ತಿನ್ನಕ್ಕೆ ಹಪ್ಪಳದ ಹಿಟ್ಟು ಕೊಡಬೇಕು” ಅಂತ ತಾಕೀತು ಮಾಡಿ ಹೋಗಿದ್ದರು. ಧೀರಜ್ ಅಮೆರಿಕಕ್ಕೆ ಹೋದಮೇಲೆ ಈ ಮಕ್ಕಳು ಮನೆಗೆ ಬರುವುದೂ ಅಪರೂಪವೇ. ಯಾವಾಗಾದರೂ ಒಮ್ಮೊಮ್ಮೆ ಇಂಥದೇನಾದರು ಇದ್ದಾಗಷ್ಟೆ ಬರುತ್ತಾರೆ. ಪಾಪ ಅವರಾದರೂ ಯಾಕೆ ಬರುತ್ತಾರೆ? ಮುದುಕರೊಂದಿಗೆ ಆಡಲು ಸಾಧ್ಯವೇ? ಅವನಿದ್ದಾಗಾದರೆ ಮಲಗುವ ಹೊತ್ತು, ಶಾಲೆಗೆ ಹೋಗುವ ಸಮಯ ಬಿಟ್ಟರೆ ಮಿಕ್ಕಷ್ಟು ಹೊತ್ತೂ ನಮ್ಮ ಮನೆಯಲ್ಲೇ ಠಿಕಾಣಿ. ಧೀರಜನೇ ಇವರಿಗೆಲ್ಲಾ ಇಂತಹ ರುಚಿಯನ್ನು ಕಲಿಸಿರೋದು. ಮೊಮ್ಮಗನ ನೆನಪು ಬಂದ ತಕ್ಷಣ ಮುಖದ ಮೇಲೆ ತಂತಾನೇ ಒಂದು ಮುಗುಳ್ನಗು ಮೂಡಿತು. ʻಸರಿ, ಆ ಮಕ್ಕಳು ಶಾಲೆಯಿಂದ ಬಂದ ಮೇಲೆ ಒಬ್ಬೊಬ್ಬರೂ ಎರಡೂ, ಮೂರೋ ಉರುಳಿಯನ್ನು ತಿನ್ನುವುದಾದರೆ ಇಷ್ಟು ಸರಿಹೋಗುತ್ತದೆ. ಇನ್ನು ನಿಲ್ಲಿಸೋಣʼ ಎಂದುಕೊಳ್ಳುತ್ತಾ ಗಂಡನನ್ನು ಕರೆದರು. “ಇದಿಷ್ಟು ಹಪ್ಪಳ ಒಣಗಿ ಹಾಕಿ ಬಂದುಬಿಡಿ. ಅಲ್ಲಿಗೆ ಆಯ್ತು”. ಪೇಪರ್ ಓದುತ್ತಿದ್ದ ರಾಮಣ್ಣನವರು ಪಕ್ಕಕ್ಕಿಟ್ಟು ಎದ್ದರು. ಎರಡು ಮೂರು ಗಂಟೆಗಳ ಕಾಲ ಒಟ್ಟಿಗೆ ಕೂತಿದ್ದು, ಸೀತಮ್ಮನವರಿಗೆ ತಕ್ಷಣ ಎದ್ದು ನಿಲ್ಲಲಿಕ್ಕೆ ಆಗಲಿಲ್ಲ. ಸಾವರಿಸಿಕೊಳ್ಳುತ್ತಿರುವಾಗ ತಡೆಯಲಾಗದೇ ರಾಮಣ್ಣನವರು ಅಂದರು. “ಅದಕ್ಕೇ ಹೇಳಿದ್ದು. ಅಡಿಗರ ಅಂಗಡಿಯಿಂದ ತಂದಿಡ್ತೀನಿ. ತೊಂದರೆ ತೊಗೋಬೇಡ ಅಂತ. ನನ್ನ ಮಾತೆಲ್ಲಿ ಕೇಳ್ತಿ ನೀನು” ಲಟ್ಟಿಸಿದ ಹಪ್ಪಳದ ತಟ್ಟೆಯನ್ನು ಹಿಡಿದುಕೊಂಡು ಮೆಟ್ಟಿಲ ಕಡೆ ನಡೆಯುತ್ತಾ. “ಅಂಗಡಿಯಿಂದ ತಂದರೆ ಮನೇಲಿ ಮಾಡಿದ ಹಾಗೆ ಆಗುತ್ತೇನೂ. ಆ ಮಗೂ ಫೋನ್ ಮಾಡಿದಾಗೆಲ್ಲಾ ಕೇಳತ್ತೆ. ಅಜ್ಜಿ ಹಪ್ಪಳ ಮಾಡಿದೀ ತಾನೆ, ಉಪ್ಪಿನಕಾಯಿ ಹಾಕಿದೀ ತಾನೆ, ನಾ ಬರ್ತಾ ಇದೀನಿ. ನಂಗೆಲ್ಲಾ ಬೇಕು ಅಂತ. ಏನೋ ಈ ವರ್ಷಕ್ಕೆ ಇಷ್ಟಾಯ್ತು” ಎನ್ನುತ್ತಾ ಸೀತಮ್ಮ ಸೀರೆ ಕೊಡವಿಕೊಂಡು, ಲಟ್ಟಣಿಗೆ, ಮಣೆ, ಎಲ್ಲವನ್ನೂ ಒಂದೊಂದಾಗಿ ಅಡುಗೆ ಮನೆಗೆ ತೆಗೆದುಕೊಂಡು ಹೋಗಿ ಇಟ್ಟರು. ಆಗಲೇ ಹನ್ನೆರಡು ಘಂಟೆಯಾಗಿರಬೇಕು. ತಣ್ಣಗೆ ಏನಾದರೂ ಕುಡಿಯೋಣವೆನ್ನಿಸಿ, ಕಡೆದು ಇರಿಸಿದ್ದ ಮಜ್ಜಿಗೆಯನ್ನು ಎರಡು ಲೋಟಕ್ಕೆ ಬಗ್ಗಿಸಿಕೊಂಡು ಪಡಸಾಲೆಗೆ ಬಂದರು. “ಎಷ್ಟಾಯ್ತು ಅಂತ ಎಣಿಸಿದ್ರಾ” ಕೆಳಗೆ ಬಂದ ಗಂಡನ ಕೈಯಲ್ಲಿ ಮಜ್ಜಿಗೆಯ ಲೋಟವನ್ನಿಡುತ್ತಾ ಕೇಳಿದ್ರು. “ಆಗ್ಲೇ ಎಣಿಸಿದಾಗ ಎಂಭತ್ತೈದು ಆಗಿತ್ತು. ಈಗ ಎಷ್ಟಿತ್ತು” ಅಂದರು. “ಸರಿ ಹತ್ತಿರ ಹತ್ತಿರ ನೂರು ಆಗಿರತ್ತೆ ಬಿಡಿ” ಅನ್ನುತ್ತಾ ಮಜ್ಜಿಗೆಯ ಲೋಟವನ್ನು ಹಿಡಿದುಕೊಂಡು ಅಲ್ಲೇ ಸೋಫಾದ ಮೇಲೆ ಕುಳಿತವರು, “ದಿನಕ್ಕೆ ಇನ್ನೂರು, ಮುನ್ನೂರು ಹಪ್ಪಳ ಸಲೀಸಾಗಿ ಮಾಡ್ತಾ ಇದ್ದೆ. ಈಗ ನೂರು ಮಾಡೋಷ್ಟರಲ್ಲೇ ಸೋತು ಹೋಗೋ ಹಾಗಿದೆ” ನಿಟ್ಟುಸಿರು ಬಿಟ್ಟರು. “ಇನ್ನೇನು ಒಂದು ವಾರದಿಂದ ಒಂದೇ ಸಮ ಸಂಡಿಗೆ, ಉಪ್ಪಿನಕಾಯಿ, ಬಾಳಕ ಅಂತ ಏನೇನೋ ಮಾಡ್ಕೊಂಡು ಕುಣೀತಿದೀಯ. ವಯಸ್ಸು ಹಿಂದ್ಹೋಗತ್ತಾ? ಇನ್ನೇನೂ ಹಚ್ಚಿಕೊಳ್ಳಕ್ಕೆ ಹೋಗ್ಬೇಡ. ಇವತ್ತಾಗಲೇ ಗುರುವಾರ. ಭಾನುವಾರ ಅವರೆಲ್ಲಾ ಬಂದೇ ಬಿಡ್ತಾರೆ. ಇನ್ನೆರಡು ದಿನ ಸ್ವಲ್ಪ ಸುಧಾರಿಸ್ಕೋ. ಈಗ ಬೇಕಾದ್ರೆ ನಾನೇ ಅಡುಗೆ ಮಾಡ್ತೀನಿ” ಅಕ್ಕರೆಯಿಂದ ನುಡಿದರು. “ಬೆಳಗ್ಗೇನೇ ಕುಕ್ಕರ್ ಇಟ್ಟಾಗಿದೆ. ಸಾರಿಗೊಂದು ಕೂಡಿಟ್ರೆ ಆಯ್ತು. ಊಟಕ್ಕೆ ಕೂತುಕೊಳ್ಳೋಕೆ ಮುಂಚೆ ಮಾಡಿದ್ತಾಯ್ತು ಬಿಡಿ” ಎನ್ನುತ್ತಾ ಮಜ್ಜಿಗೆಯ ಲೋಟ ಕೆಳಗಿಟ್ಟು ಅಲ್ಲೇ ಸೋಫಾದಲ್ಲಿ ಹಿಂದಕ್ಕೆ ಒರಗಿದರು. “ಸರಿ. ನೀನು ಸ್ವಲ್ಪ ಸುಧಾರಿಸ್ಕೋ. ನಾನು ಹೋಗಿ ಎಲೆಕ್ಟ್ರಿಸಿಟಿ ಬಿಲ್ಲು ಕಟ್ಟಿ ಬರ್ತೀ ನಿ” ಎನ್ನುತ್ತಾ ಮೇಲಕ್ಕೆದ್ದರು. “ಹೊರಗಡೆ ಏನು ಬೆಳದಿಂಗಳೇ? ಈ ಸುಡುಸುಡು ಬಿಸಿಲಲ್ಲಿ ಹೊರಗೆ ಹೊರಟಿದೀರಲ್ಲ, ನಾಳೆ ಹೋದ್ರಾಯ್ತು ಬಿಡಿ” ಎಂದರೂ “ಇಲ್ಲ ನಾಳೆ ಗುಡ್ ಫ್ರೈಡೆ ರಜ. ಇನ್ನು ಶನಿವಾರವೊಂದೇ ಉಳಿಯೋದು. ಆಗ್ಲಿಲ್ಲ ಅಂದ್ರೆ ಕಷ್ಟ. ಭಾನುವಾರ ಅವರೆಲ್ಲಾ ಬಂದು ಬಿಟ್ರೆ, ಆಮೇಲೆ ಹೋಗೋಕಾಗೋದೇ ಇಲ್ಲ” ಎನ್ನುತ್ತಾ ಕೊಡೆ ಹಿಡಿದುಕೊಂಡು ಹೊರಟೇ ಬಿಟ್ಟರು ರಾಮಣ್ಣನವರು. ʻಸುಮ್ನೆ ನನ್ನ ಕಕ್ಕುಲಾತೀಗೆ ಹೇಳಬೇಕಷ್ಟೇ. ಅವರಿಗನ್ನಿಸಿದ್ದನ್ನೇ ಮಾಡೋದುʼ ಎಂದುಕೊಳ್ಳುತ್ತಾ “ಸರಿ ಬಾಗಿಲೆಳೆದುಕೊಂಡು ಹೋಗಿ; ಕೀ ನಿಮ್ಮ ಹತ್ರ ಇದೆ ತಾನೇ” ಎನ್ನುತ್ತಾ ಹಾಗೆಯೇ ಕಣ್ಣು ಮುಚ್ಚಿಕೊಂಡು ಒರಗಿಕೊಂಡರು ಸುಧಾರಿಸಿಕೊಳ್ಳಲೆಂಬಂತೆ….. ಅತ್ತೆಯಿದ್ದಾಗ ಇಬ್ಬರೂ ಸೇರಿ ಅದೆಷ್ಟು ಹಪ್ಪಳ ಸಂಡಿಗೆ ಮಾಡುತ್ತಿದ್ದದ್ದು… ಶಿವರಾತ್ರಿ ಕಳೆಯಿತೆಂದರೆ ಸಾಕು ಇದೇ ಕೆಲಸ. ಇದ್ದದ್ದು ಶಿವಮೊಗ್ಗದ ಹತ್ತಿರದ ಊರಗಡೂರಿನಲ್ಲಿ. ದೊಡ್ಡ ಮನೆ, ಅಡಿಕೆ ತೋಟ, ಮನೆಯ ತುಂಬಾ ಹತ್ತಾರು ಆಳು ಕಾಳು, ಕೊಟ್ಟಿಗೆಯ ತುಂಬಾ ದನ ಕರುಗಳು. ಕೆಲಸ ಒಂದೇ ಎರಡೇ. ಮದುವೆಯಾದ ಹೊಸತರಲ್ಲಿ ಅಷ್ಟು ದೊಡ್ಡ ಮನೆಯ ನೆಲವನ್ನೆಲ್ಲಾ ಸಗಣಿ ಹಾಕಿ ಸಾರಿಸಬೇಕಿತ್ತು. ಆಮೇಲಾಮೇಲೆ ಗಾರೆ ಮಾಡಿಸಿದ ಮೇಲೆ ಆ ದೊಡ್ಡ ಕೆಲಸ ತಪ್ಪಿತ್ತು. ರಾಶಿ ರಾಶಿ ಕೆಲಸ – ಆದರೆ ಅದೆಷ್ಟು ಹುರುಪು, ಉತ್ಸಾಹ! ಮಾವನವರಿಗೆ ಮೂವರು ಗಂಡು ಮಕ್ಕಳು, ಹೆಣ್ಣು ಮಕ್ಕಳಿರಲಿಲ್ಲ. ಇವರೇ ಕಡೆಯವರು. ತಾನು ಮದುವೆಯಾಗಿ ಮನೆಗೆ ಬರುವಾಗ ಎಲ್ಲರ ಜವಾಬ್ದಾರಿಯೂ ಕಳೆದಿತ್ತು. ದೊಡ್ಡ ಮಗ ಇಂಜಿನಿಯರಾಗಿ ಪಿ.ಡಬ್ಲು.ಡಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಊರೂರು ಅಲೆಯುತ್ತಿದ್ದು, ಮಕ್ಕಳಿಗೆ ಓದಲಿಕ್ಕೆ ಅನುಕೂಲವೆಂದು ಬೆಂಗಳೂರಿನಲ್ಲಿ ಮನೆಮಾಡಿ ತಮ್ಮ ಸಂಸಾರವನ್ನು ಅಲ್ಲೇ ಸ್ಥಾಪಿಸಿದ್ದರು. ಎರಡನೆಯವರು ಅಡ್ವೋಕೇಟು. ಅವರ ಮಾವನವರು ಚಿತ್ರದುರ್ಗದಲ್ಲಿ ಅದೇ ಕೆಲಸ ಮಾಡುತ್ತಿದ್ದವರು. ನಮ್ಮ ಮಾವನವರಿಗೂ ಮೊದಲಿಂದಲೇ ಗೆಳೆಯರಂತೆ. ಅವರ ಬಳಿಯೇ ಜೂನಿಯರ್ ಆಗಿ ಕೆಲಸ ಮಾಡಲು ಮಗನನ್ನು ಕಳಿಸಿಕೊಟ್ಟಿದ್ದರು. ಕಡೆಗೆ ಅವರ ಒಬ್ಬಳೇ ಮಗಳನ್ನೇ ಮದುವೆಯಾಗಿ ಅದಾಗಲೇ ಚೆನ್ನಾಗಿ ಕುದುರಿಕೊಂಡಿದ್ದ ಕೆಲಸವನ್ನು ಮುಂದುವರೆಸಿಕೊಂಡು ಅಲ್ಲೇ ಮನೆ ಹೂಡಿಕೊಂಡರು. ಇವರು ಓದಿದ್ದು ಶಿವಮೊಗ್ಗೆಯ ಕಾಮರ್ಸ್ ಕಾಲೇಜಿನಲ್ಲಿ ಬಿ. ಕಾಂ. ಮದುವೆಯಾಗುವಾಗ ಅಂತಹ ಕೆಲಸವೇನೂ ಇರಲಿಲ್ಲ. ಸುಮ್ಮನೆ ಹೊತ್ತು ಕಳೆಯುವುದಕ್ಕೆ ಎಲ್. ಐ. ಸಿ. ಏಜೆಂಟರಾಗಿದ್ದರು. ಅನುಕೂಲವಾದ ಮನೆಯಾದ್ದರಿಂದ ತನ್ನ ತವರು ಮನೆಯವರೂ ಇವರ ಕೆಲಸದ ಬಗ್ಗೆ ಅಷ್ಟೇನೂ ಚಿಂತಿಸಿರಲಿಲ್ಲ. ಆದರೆ ಇವರ ಮನಸ್ಸಿನಲ್ಲಿ ತಾನೂ ಅಣ್ಣಂದಿರ ಹಾಗೆ ದುಡಿಯಬೇಕು ಎಂದು ಆಶೆಯಿತ್ತೋ ಏನೋ – ಯಾವ ಯಾವುದೋ ಕೆಲಸಕ್ಕೆ ಅರ್ಜಿ ಹಾಕುತ್ತಿದ್ದರು. ನಾನು ಮದುವೆಯಾಗಿ ಬಂದು ಒಂದಾರು ತಿಂಗಳಾಗಿತ್ತೇನೋ. ಬ್ಯಾಂಕಲ್ಲಿ ಕೆಲಸ ಸಿಕ್ಕೇ ಬಿಟ್ಟಿತು. ಮೊದಲ ಕೆಲಸ ಹುಬ್ಬಳ್ಳಿಯಲ್ಲಿ. ಇವರಿಗದೆಷ್ಟು ಸಂತೋಷವೋ… “ನಿನ್ನ ಕಾಲ್ಗುಣದಿಂದ ನನಗೆ ಈ ಕೆಲಸ ಸಿಕ್ಕಿದ್ದು. ನಾನು ಹೋಗಿ ಕೆಲಸಕ್ಕೆ ಸೇರಿಕೊಂಡು ಆದಷ್ಟು ಬೇಗಲೇ ಮನೆ ಮಾಡಿ ನಿನ್ನನ್ನೂ ಕರೆಸಿಕೊಳ್ಳುತ್ತೇನೆ. ಅಲ್ಲಿಯವರೆಗೆ ಇಲ್ಲೇ ಅಪ್ಪ ಅಮ್ಮನ ಜೊತೆಯಲ್ಲೇ ಇರು” ಎನ್ನುತ್ತಾ ಹೊರಟೇ ಬಿಟ್ಟರಲ್ಲ. ಅತ್ತೆ ಮಾವಂದಿರೂ ಸಂತೋಷವಾಗೇ ಕಳಿಸಿಕೊಟ್ಟರು. ತನಗೋ ಒಬ್ಬಳೇ ಇರುವುದಕ್ಕೆ ಬೇಸರ, ಆದರೆ ವಿಧಿಯಿಲ್ಲ. ಇನ್ನು ಸ್ವಲ್ಪವೇ ದಿನವಲ್ಲವಾ ಎನ್ನುವ ಸಮಾಧಾನ. ರಾಶಿ ರಾಶಿ ಕೆಲಸದಲ್ಲಿ ಹೊತ್ತು ಹೇಗೋ ಹೋಗುತ್ತಿತ್ತು. ಅತ್ತೆಗೂ ನನ್ನ ಬೇಸರ ಅರ್ಥವಾಗುತ್ತಿತ್ತೇನೋ. ಆದಷ್ಟೂ ನನ್ನ ಜೊತೆಯೇ ಕಾಲ ಕಳೆಯುತ್ತಿದ್ದರು. ಕೆಲಸಕ್ಕೆ ಸೇರಿದ ಹೊಸದಾದ್ದರಿಂದ ಇವರಿಗೆ ಅಷ್ಟು ರಜೆಯೂ ಸಿಕ್ಕುತ್ತಿರಲಿಲ್ಲ. ಅಪರೂಪಕ್ಕೊಂದೊಂದು ಭೇಟಿ. ಒಂದಾರು ತಿಂಗಳು ಕಳೆದಿತ್ತೇನೋ. ಅಂತೂ ಒಂದು ಮನೆ ಮಾಡಿಕೊಂಡು ನನ್ನನ್ನು ಕರೆದುಕೊಂಡು ಹೋಗಲು ಬಂದರು. ಹೊಸ ಸಂಸಾರ ಹೂಡಿಕೊಡಲು ಅತ್ತೆಯೂ ಜೊತೆಗೆ ಬಂದರು. ಯಾಕೋ ಬಂದ ಎರಡು ದಿನಕ್ಕೇ ಅವರಿಗೆ ಹುಶಾರು ತಪ್ಪಿತು. ಹೊಸ ಜಾಗ. ಅವರಿಗೆ ಸರಿ ಹೊಂದಲೇ ಇಲ್ಲ. ವಾಪಸ್ಸು ಊರಿಗೆ ಹೊರಟೇ ಬಿಟ್ಟರು. ವಾರದ ಕೊನೆಯಲ್ಲಿ ಇಬ್ಬರೂ ಅವರನ್ನು ಊರಿಗೆ ಬಿಡಲಿಕ್ಕೆ ಬಂದದ್ದಾಯಿತು. ಜ್ವರ ಹೆಚ್ಚಾಗುತ್ತಾ ಹೋಯಿತು. ಡಾಕ್ಟರು ಮಲೇರಿಯಾ ಅಂದರು. ಸರಿ, ಇವರೊಬ್ಬರೇ ಹುಬ್ಬಳ್ಳಿಗೆ ವಾಪಸ್ಸು ಹೋದರು. ತಾನು ಅತ್ತೆಯ ಶುಶ್ರೂಷೆಗೆ ನಿಂತೆ. ಬರೀ ಒಂದು ವಾರವಷ್ಟೇ. ಇವರು ಮತ್ತೆ ಊರಿಗೆ ಬರುವಂತಾಯಿತು ಸತ್ತ ಅಮ್ಮನನ್ನು ನೋಡಲು…. ಎಲ್ಲ ಕರ್ಮಾಂತರಗಳೂ ಮುಗಿದವು. ಎಲ್ಲರೂ ಹೊರಟು ನಿಂತರು. `ಅಪ್ಪನಿಗೇನು ಮಾಡುವುದು?’ ಎಲ್ಲರ ಮುಂದಿದ್ದ ಪ್ರಶ್ನೆ. ಯಾರು ಬೇಕಾದರೂ ಅವರನ್ನು ಕರೆದುಕೊಂಡು ಹೋಗಲು ತಯ್ಯಾರಿದ್ದರು. ಆದರೆ ಅವರು ಬರುವರೆ? ಬೆಕ್ಕಿಗೆ ಗಂಟೆ ಕಟ್ಟುವ ಪ್ರಶ್ನೆ. ಮಾವನವರಿಗೂ ಇದು ಅರ್ಥವಾಯಿತೇನೋ. ಮಧ್ಯಾನ್ಹ ಊಟ ಮುಗಿದ ನಂತರ ಅವರೇ ಮಕ್ಕಳೆಲ್ಲರಿಗೂ ಹೇಳಿದರು. “ಇನ್ನೆಷ್ಟು ದಿನ ನೀವಿಲ್ಲಿ ಇರಕ್ಕಾಗತ್ತೆ ಕೆಲಸ ಬಿಟ್ಟು. ನಿಮ್ಮ ಪಾಡಿಗೆ ಹೊರಡಿ”. “ಹಾಗಲ್ಲ, ಹೀಗೆ ನಿಮ್ಮೊಬ್ಬರನ್ನೇ ಬಿಟ್ಟು..” ದೊಡ್ಡವರು ಕೇಳಿದರು. “ನೀವೂ ನಮ್ಮ ಜೊತೆಗೇ ಬಂದರೆ ನಮಗೂ ಸಮಾಧಾನವಾಗತ್ತೆ” ಎಲ್ಲ ಮಕ್ಕಳೂ ಹೇಳಿದರು. “ಅದು ಸಾಧ್ಯವಾಗದ ಮಾತು. ಇದು ನಾನು ಹುಟ್ಟಿದಾಗಿಂದ ಇರುವ ಮನೆ. ನಾನು ಸಾಯುವವರೆಗೂ ಇದೇ ನನ್ನ ಮನೆ. ನಿಮ್ಮ ನಿಮ್ಮ ಜೀವನ ನಿಮ್ಮದು. ನೀವು ಹೊರಡಿ” ಎಂದರು ಮುಂದಿನ ಮಾತಿಗೆ ಅವಕಾಶವಿಲ್ಲವೆಂಬಂತೆ. ಯಾರಿಗೂ ಸಮಾಧಾನವಿಲ್ಲ. ಈ ವಯಸ್ಸಲ್ಲಿ ಅಪ್ಪ ಒಬ್ಬರನ್ನೇ ಬಿಟ್ಟು. ಹಾಗಂತ ತಾವು ಇಲ್ಲಿ ಬಂದಿರುವುದೂ ಸಾಧ್ಯವಿಲ್ಲ. ಏನು ಮಾಡುವುದು. ಆಗ ಇವರೆಂದರು – “ಈ ಕೆಲಸ ನನಗೆ ಸಿಕ್ಕುತ್ತೆ ಅಂತ ಅಂದುಕೊಂಡಿರಲಿಲ್ಲ. ಈಗಲೂ ಏನೂ ಪರವಾಗಿಲ್ಲ. ನಾನು ಇಲ್ಲೇ ಅಪ್ಪನ ಜೊತೆಗೇ ಇರ್ತೀನಿ. ಇಲ್ಲಿ ಎಲ್.ಐ.ಸಿ. ಏಜೆನ್ಸೀನೋ, ಇನ್ನೊಂದು ಏನು ಸಾಧ್ಯವೋ ಅದನ್ನೇ ಮಾಡ್ತೀನಿ. ನೀವು ಹೊರಡಿ. ನಿಮ್ಮದಾಗಲೇ ಬೇರು ಬಿಟ್ಟ ಸಂಸಾರ. ನಾನು ಈಗ ತಾನೇ ಕಣ್ಣು ಬಿಡ್ತಿದೀನಿ”. ಬೇರೆ ಇನ್ನೇನಾದರೂ ಹೇಳಲೂ ಯಾರಿಗೂ ಯಾವ ಉಪಾಯವೂ ಇಲ್ಲ. ನಮ್ಮ ಹುಬ್ಬಳ್ಳಿಯ ಸಂಸಾರ ಬರೀ ಒಂದು ವಾರದ್ದಾಯಿತು. ಎಲ್ಲರನ್ನೂ ಕಳಿಸಿಕೊಟ್ಟು ಜಗಲಿಯಲ್ಲಿ ನೋಡುತ್ತಾ ನಿಂತಿದ್ದ ಇವರ ಹೆಗಲ ಮೇಲೆ ಮಾವನವರು ಬಂದು ಕೈಯಿಟ್ಟರು. ಇವರು ತಿರುಗಿ ನೋಡುವಾಗ ಅವರಿಂದ ಏನನ್ನೂ ಹೇಳಲಾಗಲಿಲ್ಲ… ಸುಮ್ಮನೆ ತಮ್ಮ ಶಲ್ಯದ ತುದಿಯಿಂದ ಕಣ್ಣೊರಸಿಕೊಂಡರು….. ಅಪ್ಪನನ್ನು ಬಳಸಿ ಹಿಡಿದುಕೊಂಡು ಮನೆಯೊಳಗೆ ಬಂದರು… ಏಕೋ ಆ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಥಟ್ಟನೆ ಕಣ್ಣು ಬಿಟ್ಟು ನೋಡಿದರೆ ಆಗಲೇ ಘಂಟೆ ಒಂದೂವರೆ. ಇವರೇನು ಇಷ್ಟು ಹೊತ್ತಾದರೂ ಬರಲಿಲ್ಲ. ಬಾಗಿಲು ತೆರೆದು ಮೆಟ್ಟಿಲ ಕಡೆ ನೋಡಿದರು ಸೀತಮ್ಮ. ಎಲ್ಲೋ ಕೆಳಗಡೆ ಶ್ರೀನಿವಾಸರ ಹತ್ತಿರ ಮಾತಾಡುವ ಶಬ್ದ ಕೇಳಿಸುತ್ತಿದೆ. ಇನ್ನೇನು ಮೇಲೆ ಬಂದಾರು. ಅಷ್ಟರಲ್ಲಿ ಸಾರು ಕೂಡಿಡೋಣ ಎಂದು ಅಡುಗೆ ಮನೆಗೆ ಹೊರಟರು. ಬರೀ ಸಾರಾಯಿತಲ್ಲ ಎಂದುಕೊಂಡು ಸ್ವಲ್ಪ ಸಂಡಿಗೆಯಾದರೂ ಕರೆಯಲೇ ಅಂದುಕೊಂಡವರು, ಇಲ್ಲ ಅದನ್ನು ಧೀರಜನೇ ಮೊದಲು ರುಚಿ ನೋಡಬೇಕು ಎಂದುಕೊಂಡು ಜಾಡಿಯಲ್ಲಿದ್ದ ಉಪ್ಪಿನಕಾಯನ್ನು ಸ್ವಲ್ಪ ತೆಗೆದು ಒಗ್ಗರಣೆ ಹಾಕಿದರು. ತಟ್ಟೆ ಹಾಕುವಷ್ಟರಲ್ಲಿ ರಾಮಣ್ಣನವರೂ ಒಳಗೆ ಬಂದಿದ್ದರು. ಊಟಕ್ಕೆ ಕುಳಿತಾಗ ಕೇಳಿದರು “ಯಾಕಿಷ್ಟು ಹೊತ್ತಾಯಿತು” “ಹಾಗೇ ಬ್ಯಾಂಕಿಗೂ ಹೋಗಿ ಬಂದೆ. ಪಾಸ್ ಬುಕ್ಕನ್ನು ತುಂಬಿಸಿಕೊಂಡು ಬಂದೆ. ವಿಪರೀತ ರಷ್ಷು. ಏನು ಮಾಡೋದು. ಶಂಕರ ಬಂದರೆ ಅವನಿಗೆ ನೋಡಲು ಬೇಕಲ್ಲ” ಎನ್ನುತ್ತಾ ತಟ್ಟೆಗೆ ಕೈಯಿಟ್ಟರು. ಊಟವಾದ ಬಳಿಕ ನಿದ್ರೆ ಬರುತ್ತೋ ಇಲ್ಲವೋ ಅಂತೂ ಒಂದು ಗಂಟೆ ಹೊತ್ತು ಸ್ವಲ್ಪ ಉರುಳಿಕೊಳ್ಳುವ ಅಭ್ಯಾಸ. ಈದಿನ ಎಷ್ಟು ಆಯಾಸವಾಗಿದ್ದರೂ ಸೀತಮ್ಮನಿಗೆ ನಿದ್ರೆ ಬರುತ್ತಿಲ್ಲ. ಏನೋ ಹಳೆಯ ನೆನಪುಗಳು ಬಾಧಿಸುತ್ತಲೇ ಇವೆ… ತಮ್ಮ ಸಂಸಾರ ಊರಗಡೂರಿನಲ್ಲೇ ಮುಂದುವರೆದಾಗ ಸ್ವಲ್ಪ ಬೇಸರವಾದರೂ, ಮಾವನವರೊಬ್ಬರನ್ನೇ ಬಿಟ್ಟು ಹೋಗುವ ಮನಸ್ಸಂತೂ ಆಗಲಿಲ್ಲ. ಗೇಣಿದಾರರ ಗಲಾಟೆಯಲ್ಲಿ ಇದ್ದ ಜಮೀನೆಲ್ಲಾ ಹೋಯಿತು. ಉಳಿದದ್ದು ನಾಲ್ಕೆಕರೆ ತೋಟ ಮತ್ತು ಊರಗಲದ ಮನೆ ಮಾತ್ರ. ದೊಡ್ಡವರಿಬ್ಬರೂ ತಮ್ಮೆಲ್ಲಾ ಪಾಲನ್ನೂ ಇವರಿಗೇ ಬಿಟ್ಟುಕೊಟ್ಟರು. ಹುಟ್ಟಿದ್ದು ಒಬ್ಬನೇ

ಕಥಾಯಾನ Read Post »

You cannot copy content of this page

Scroll to Top