ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ನಾವೆಲ್ಲರೂ ಮನೆಯಲ್ಲೇ ಇದ್ದೇವೆ ರೇಖಾಭಟ್ ನಾವೆಲ್ಲರೂ ಮನೆಯಲ್ಲೇ ಇದ್ದೇವೆ ಒಂದೊಂದು ಖುರ್ಚಿಗೆ ಒಬ್ಬೊಬ್ಬರಂತೆ ಅಡುಗೆಮನೆ ಈಗ ಕೇಂದ್ರ ಸ್ಥಾನ ಟಿ.ವಿ ಹಾಲ್ ನಮ್ಮ ಆಸ್ಥಾನ ಬೀದಿಗಂತೂ ಹೋಗೋದಿಲ್ಲ ಅದಂತೂ ಈಗ – ಖಬರಸ್ಥಾನ! ಮಾವನ ವಾಕಿಂಗ್ ಸ್ಟಿಕ್ ಗೋಡೆ ಮೂಲೆಯಲ್ಲೆ ನಿದ್ರೆಗೆ ಜಾರಿದೆ! ಅತ್ತೆಯ ಹೂವಿನ ಚೊಬ್ಬೆ ದೇವಸ್ಥಾನ ಮರೆತು ಬೊರಲು ಬಿದ್ದಿದೆ! ಪುಟ್ಟ ಪಿಂಕ್ ಸೈಕಲ್ ಮರದ ಬುಡದಲಿ ಒರಗಿ ನಿಂತು ಇಷ್ಟಿಷ್ಟೇ ಬಣ್ಣವ ಕಳೆದುಕೊಳ್ಳುತ್ತಿದೆ! ಕೊರೊನಾ ಬೂತದ ಚಿತ್ರ ಬಿಡಿಸಿ ಅದಕ್ಕೆ ಕ್ರಾಸ್ ಮಾರ್ಕ್ ಹಾಕಿ ಆಗಾಗ ಕಿಟಕಿಯಲ್ಲಿ ಹಣಕುವ ಮಗಳ ಕಣ್ಣೊಳಗಿನ ಬಣ್ಣವೂ ತುಸು ಕಡಿಮೆಯೇ ಆಗಿದೆ ಕಂಪ್ಯೂಟರೊಳಗೆ ಹೊಕ್ಕು ಇ ಪೇಪರ್ ಓದುತ್ತ ಆಗಾಗ ಕೊರಾನಾ ಅಂಕಿ ಅಂಶ ವರದಿ ಮಾಡುವ ಅವಳಪ್ಪನೋ ಬಂಧಿತ- ಕಾಲು ಸುಟ್ಟ ಬೆಕ್ಕು- ಆದರೂ ಹೊತ್ತು ಸರಿಯುತ್ತಿದೆ ಅದಕೆ ಕಾರಣ ಇಂಟರ್ ನೆಟ್ಟು!! ಒಮ್ಮೆ ಗ್ರೀನ್ ಟೀ ಮತ್ತೊಮ್ಮೆ ಕಷಾಯ ತುಸು ಹೊತ್ತಿಗೆ ಚಹಾ ಬಿಸಿಲೇರಲು ಮಜ್ಜಿಗೆ ಬೆಲ್ಲ ಈ ದಾಹ ಹೆಚ್ಚುತ್ತಿರುವುದು ಬಿಸಿಲಿಗೊ, ಆತಂಕಕ್ಕೊ ಅರ್ಥವಾಗುತ್ತಿಲ್ಲ ಮನೆಯೊಳಗಿನ ಬಿಸಿಯ ಹೊರಹಾಕಲು ಫ್ಯಾನ್ ಇಪ್ಪತ್ತ್ನಾಲ್ಕು ಗಂಟೆ ತಿರುಗುತ್ತಿದೆ ಒಳಗುದಿಯ ಹೊರಹಾಕಲಾರದ ನಾನು ಯಾವ ಕವಿತೆಯನ್ನು ಪೂರ್ತಿ ಬರೆಯಲಾಗದೇ ಪೂರ್ಣವಿರಾಮ ಇಡುತ್ತಿದ್ದೇನೆ! *******************

ಕಾವ್ಯಯಾನ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ರಣಹಸಿವಿನಿಂದ ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರು ಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರು ಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಊರೂರುಗಳಿಗೆ ಬೆಂಕಿ ಹಚ್ಚಿದ್ದರು ಉರಿದ ಮನೆಗಳಲ್ಲಿ ಹೆಂಗಸರು ಮಕ್ಕಳೆನ್ನದೆ ತಲೆ ತರೆದಿದ್ದರು ಇದೀಗ ಆನಾಥಾಶ್ರಮಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಕೋವಿ ಖಡ್ಘಗಳ ಹಿಡಿದಿದ್ದರು ಇದೀಗ ಧರ್ಮ ಗ್ರಂಥಗಳ ಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದ ಅಕಾರಣ ಯುದ್ದಗಳಿಗೀಗ ಸಕಾರಣಗಳ ಪಟ್ಟಿ ಮಾಡುತ್ತ ಕೂತಿದ್ದಾರೆ ತರಿದ ತಲೆಗಳ ಭೋಗಿಸಿದ ಯೋನಿಗಳ ಕಚ್ಚಿದ ಮೊಲೆಗಳ ಕಲಸಿಹಾಕಿದ ಭ್ರೂಣಗಳ ನಿಖರ ಅಂಕಿಅಂಶಗಳಿಗಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ ಪ್ರತಿ ಮನುಷ್ಯನಿಗೂ ಇರಬಹುದಾದ ಮೃಗದ ಮುಖವಾಡವ ಕಳಚಲೆತ್ನಿಸಿದಷ್ಟೂ ಗೊಂದಲವಾಗುವುದು ಖಚಿತ ನೋಡು ಬರೆಯುವಾಗಲೂ ಇದನು ಕೆಕ್ಕರಿಸಿ ನೋಡುತಿದೆ ಮೃಗವೊಂದು ರಣಹಸಿವಿನಿಂದ! ******** ಕು.ಸ.ಮಧುಸೂದನ

ಕವಿತೆ ಕಾರ್ನರ್ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ನಾವೇನು ವ್ಯಬಿಚಾರಿಗಳಾಗಿರಲಿಲ್ಲ! ಅವಳನ್ನು ಪ್ರೀತಿಸಿದ್ದು ನಿಜಹೆಸರಲ್ಲೇನಿದೆ ಹೇಳಿಸುಶೀಲಾ, ಶಕೀಲಾ, ಶೈನಿ!ಏನಾದರು ಒಂದಂತು ಆಗಿರಲೇ ಬೇಕೆಂಬ ಹಟ ನನಗಂತು ಇರಲಿಲ್ಲ! ಹಾಗೇನೆ ನನ್ನ ಹೆಸರುಮಹೇಶ, ಮುಬಾರಕ್, ಮ್ಯಾಕ್ಹೀಗೇನೆ ಯಾವುದಾದರೊಂದು ಆಗಿರಲೇ ಬೇಕೆಂಬ ಹಟಅವಳಿಗೂ ಇದ್ದಂತೆ ಕಾಣಲಿಲ್ಲ… ನಮ್ಮ ಮಿಲನದ ಉನ್ಮತ್ತ ಕ್ಷಣದೊಳಗೂಅವಳಾಗಲಿ ನಾನಾಗಲಿ ಅಪ್ಪಿ ತಪ್ಪಿಯೂನಮ್ಮಹೆಸರುಗಳ ಪಿಸುಗುಡಲಿಲ್ಲ!ಅಷ್ಟು ಅನಾಮಧೇಯರಾಗಿ ಪ್ರೇಮಿಸಿದೆವು. ಹೊರಗಿನವರಿಗೆ ನಾವು ಗೊತ್ತಿದ್ದುದು ನಮ್ಮ ಹೆಸರುಗಳಿಂದ ಮಾತ್ರಆದರೆ ಆ ಹೆಸರುಗಳಾಚೆಯಲ್ಲಿಯೂಇರುವ ನಮ್ಮ ಐಡೆಂಟಿಟಿಯನ್ನುಹುಡುಕಿಕೊಳ್ಳುವುದು ನಮಗೆ ಅನಿವಾರ್ಯವಾಗಿತ್ತು. ಹಾಗಂತ ನಾನು ವಿಟನಾಗಿರಲಿಲ್ಲಅವಳೇನು ಜಾರಿಣಿಯಾಗಿರಲಿಲ್ಲ!************* ಕು.ಸ.ಮದುಸೂದನ

ಕವಿತೆ ಕಾರ್ನರ್ Read Post »

You cannot copy content of this page

Scroll to Top