ಗಝಲ್ ಲೋಕ
ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ
ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ
ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು ಸ್ಪರ್ಶಕ್ಕಾಗಿ ಹಂಬಲಿಸಿರಬಹುದೇನು? ಚಾಚಿದ ಕಾಲು ಬಯಸಿತಾ ಸಹನಡಿಗೆಯನ್ನು? ಏನೋ ಹುಡುಕುವ ಕ್ಯಾಮರಾ ಕಣ್ಣು ನನ್ನದೇ ಚಿತ್ರ ಸೆರೆಹಿಡಿಯುತ್ತಿದೆಯೇನು? ತುಟಿಸೋಕಿ ಸುಟ್ಟ ಕಹಿಕಾಫಿ ನಿನ್ನ ಪಾಲಿನ ನಾನಲ್ಲವೇನು? ನನ್ನ ಪ್ರೀತಿಯ ಹಾಡು ನಿನ್ನ ಪಾಡಾಗಿ ಕಿವಿಯ ಸೋಕುತ್ತಿರಬಹುದೇನು? ಇಲ್ಲಿ ಬೀಸಿದ ಗಾಳಿ ಸುತ್ತಿ ಸುಳಿದು ನಿನ್ನಾತ್ಮವ ಪುಳಕಿಸಬಾರದಿತ್ತೇನು? ನನ್ನ ಕಣ್ಣು ಕತ್ತಲು ಕಪ್ಪುಪಟ್ಟಿ ಕಟ್ಟದೆಯೇ.. ಕಿವಿ ಮುಚ್ಚಿಹೋಗಿದೆ ಧ್ವನಿ ತಲುಪಲಾಗದೆಯೇ.. ನಾಲಿಗೆ ಸೀಳಿದೆ ಮತ್ತೆಂದೂ ಹೊಲಿಯಲಾಗದೆಯೇ.. ಅವಯವಗಳೇ ಸುಟ್ಟುಹೋಗಿದೆ ಭಾವ ಚಿಗುರಲಾಗದೆಯೇ.. ನಾನೇ ಹೂತುಹೋಗಿರುವೆ ಅಸ್ತಿತ್ವವಿಲ್ಲದೆಯೇ.. ಮಾತೇ ಇಲ್ಲದ ಮೌನದಾಯುಧಗಳು ಸೋತು ಎರಡೂ ಕಡೆ.. ಮನಸು ಜಾರಿ ಹೃದಯದೆಡೆ..ಕದನವಿರಾಮ ಜಾರಿಯಾಗಬಾರದೇ? **********
ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ ಇಬ್ಬನಿ ಬನಿಯೊಳಗೆ ನಾನಿದಿದ್ದರೆ, ನಿನ್ನ ಪಾದ ಪ್ರಾತಃ ಸ್ಪರ್ಶಕೆ ನಾ ಸದಾ ಕಚಗುಳಿಯಿಡುತಿದ್ದೆ, ನಿನ್ನ ನೋಡುವ ಕನ್ನಡಿ ನಾನಾಗಿರೆ, ನಿನ್ನಂತರಂಗನರಿವ ಬೆರಗು ನಾನಾಗಿ ಬಳಿಯಿರುತಿದ್ದೆ, ನೀ ನಡೆವ ಹಾದಿಗೆ ಮರವು ನಾನಾದೊಡೆ, ನಿನ್ನ ದಣಿವಿಗೆ ನಾ ನೆರಳಾಗ ಬಯಸಿದ್ದೆ, ನೀ ನೋಡುವ ನೋಟದ ಕಣ್ಣು ನಾನಗಿದ್ದರೆ, ಭರವಸೆಯ ಬೆಳದಿಂಗಳ ಕಣ್ಗಿರಿಸಿ ತಣಿಯುತಿದ್ದೆ, ನಿನ್ನ ನಿಜ ಪ್ರೀತಿ ನಾನಾಗಿ ಹೃದಯಮಿಡಿವಂತಿದಿದ್ದರೆ, ಪ್ರತಿಬಡಿತದ ದನಿಗೆ ನಾ ಮೈ ಮರೆಯುತಿದ್ದೆ, ಆಸೆಗಳ ದಟ್ಟ ಕಾನನದಲಿ ಹೀಗೆ ನಡೆದು ಹೋಗಬೇಕು, ಘನಿಕರಿಸಿದೆಲ್ಲ ಅಮಲು ಭಾವಗಳಲಿ ಸುರಿದು ನದಿಯಾಗಬೇಕು. ********
“ನಿಮ್ಮ ಕೈಗಳು ಮೂಲ: ಬಾಬುರಾವ್ ಬಾಗುಲ್(ಮರಾಠಿಕವಿ) ಕನ್ನಡಕ್ಕೆ:ಕಮಲಾಕರ ಕಡವೆ ನಿಮ್ಮ ಕೈಗಳು ಇದ್ದಿರಬಹುದು ಬಂಧಿಆದರೆ ಅವು ಸೃಜನಶೀಲನಿಮ್ಮ ಕೈಗಳು ಇದ್ದಿರಬಹುದು ಶಾಂತ, ಅಮಾಯಕಆದರೆ ಅವು ಪರಿವರ್ತನೆಯ ರಥಗಳುಪ್ರಗತಿಯ ಹೆದ್ದಾರಿಗಳುನಿಮ್ಮ ಐದು ಬೆರಳುಗಳು ಪಂಚಮಹಾಭೂತಗಳುಇದೇನು ಬಾ. ಬಾ. ನ ಕಲ್ಪನೆಯಲ್ಲರಶಿಯಾ, ಅಮೇರಿಕ, ಯುರೋಪು ಆಗಿದ್ದಾರೆ ಸಾಕ್ಷಿನಿಮ್ಮ ಖಚಿತ ಸಾಮರ್ಥ್ಯಕ್ಕೆ ********
ಚಹರೆ ನನ್ನ ಅವಳ ಸಂಬಂದಮುರಿದುಬಿದ್ದುಮುವತ್ತು ವರುಷಗಳಾದರೂ ನಮ್ಮ ವಿದಾಯದ ಕ್ಷಣಗಳ ಕ್ಷಣಗಳ ಸಾಕ್ಷಿಗಳಿನ್ನೂಹಾಗೇ ಉಳಿದಿವೆ ರಪ್ಪನೆ ಬಾಗಿಲು ತೆಗೆದು ಸದ್ದು ಮಾಡುತ್ತಾ ಹೋದವಳುಎಸೆದು ಹೋದ ಮುಖ ಕನ್ನಡಿಯ ಚೂರುಗಳಲ್ಲಿನ್ನುಅವಳ ಚಹರೆಗಳು ಕಾಣುತ್ತಿವೆ! ಮತ್ತೆಂದೂ ನೋಡಲಾರೆ ನಿನ್ನ ಮುಖವ ಎಂದು ಕೂಗಿ ಹೇಳಿ ಹೋದವಳಮಾತುಗಳಿನ್ನೂ ಹಳೆಯ ಮಣ್ಣಿನ ಗೋಡೆಗಪ್ಪಳಿಸಿಮತ್ತೆ ಮತ್ತೆ ಕೇಳುತ್ತಲೇ ಇವೆ! ನನ್ನ ಅವಳ ಸಂಬಂದಮುರಿದುಬಿದ್ದುಮುವತ್ತು ವರುಷಗಳಾದರೂ ಕೇಳಿಸುತ್ತಲೇ ಇವೆ ಶಬ್ದಗಳುಕಾಣಿಸುತ್ತಲೇ ಇವೆ ಚಿತ್ರಗಳು ಒದ್ದೆಯಾಗುತ್ತಲೇ ಇವೆ ಕಣ್ಣುಗಳು!ಕಾರಣವಿರದೇ? ********* ಕು.ಸ.ಮದುಸೂದನ
ಗಝಲ್ ಬಸವರಾಜ ಕಾಸೆ ಹೊತ್ತಲ್ಲದ ಹೊತ್ತಲ್ಲಿ ಪದೇ ಪದೇ ಗುನುಗುನಿಸುವ ಹಾಡೊಂದು ನೀನು/ ತನ್ನಷ್ಟಕ್ಕೇ ತಾ ಪುಟಿದೇಳುವ ಉತ್ಸಾಹಕ್ಕೆ ಗೊತ್ತಿರದ ಸ್ಪೂರ್ತಿಯೊಂದು ನೀನು// ಆ ರೆಪ್ಪೆ ಮಿಟುಕಿದಷ್ಟು ಬಾರಿ ಕ್ಷಣಕ್ಕೊಮ್ಮೆ ಕಾಣೆಯಾಗಿ ವಾಪಸ್ಸಾಗುವ ನಾನು/ ಮೆದು ಕುಣಿತದ ಕಣ್ಣ ಹುಬ್ಬು ಹುಟ್ಟು ಹಾಕುವ ಅನುಭವವೊಂದು ನೀನು// ಸರಸರನೆ ಸೆಳೆದೆಳೆದು ಸಾಗರ ಒಳಗೆಳೆದುಕೊಂಡಂತೆ ಸಂಜೆ ಸೂರ್ಯನನ್ನು/ ಮರಳು ದಡದ ಮೇಲೆ ಮೆಲ್ಲಗೆ ಮೆಲುಕುವ ಮಲ್ಲಿಗೆ ದಂಡೆಯೊಂದು ನೀನು// ನೀ ಬರುವ ಸಮಯಕ್ಕೆ ಕಾಯುವ ಭಾವಗಳು ಹರಿಯುವವು ಮಳೆಗಾಲದ ಹೊಳೆಯಾಗಿ/ ಹೋಗಿ ಮೈಯೊಡ್ಡಿ ನೆನೆಯುವ ಗುಂಗಿಗೆ ರಂಗೇರಿಸುವ ಮಳೆಬಿಲ್ಲೊಂದು ನೀನು// ಕಂಡು ಹಿಡಿಯಬೇಕು ಹೊಸ ಸೂತ್ರ ನೀ ಕೊಟ್ಟ ಕನಸುಗಳ ಕಚಗುಳಿ ಲೆಕ್ಕ ಹಾಕಲು/ ಆ ಮೂಗಿನ ನತ್ತು ಪ್ರತಿ ರಾತ್ರಿಗಳ ಮತ್ತು ಜೀವ ತಳೆಯುವ ಜಾಗರಣೆಯೊಂದು ನೀನು// ಮಟಮಟ ಮಧ್ಯಾಹ್ನ ಕಪ್ಪು ಬಿಳಿ ಮೋಡಗಳ ಪಯಣ ಧರೆಗಿಳಿಯಲು ಅನುರಾಗ/ ಕಳೆದೋಗುವ ಮುನ್ನ ವ್ಯರ್ಥವಾಗಿ ಚಳಿಗಾಲ ಹಿಡಿದಪ್ಪಿದ ಎಳೆಬಿಸಿಲೊಂದು ನೀನು// ಇಲ್ಲದೊಂದು ಕವಿತೆಯದು ಕಾಡುವಂತಹ ಒನಪು ಹೊದ್ದುಕೊಂಡು ಬಿಸುಪು/ ಸುಮ್ಮಸುಮ್ಮ ನಗುವ ಸದ್ದಿರದ ಸಂಗತಿಗಳಿಗೆ ಸುದ್ದಿಯಾಗುವ ನೆಪವೊಂದು ನೀನು// ********
ನನಗಷ್ಟೆ ಗೊತ್ತು! ಲೋಕೇಶ್ ಅಷ್ಟು ಸುಲಭವಲ್ಲ ನಿನ್ನ ಉಳಿಸಿಕೊಳ್ಳುವುದು ಅಷ್ಟು ಸಲೀಸು ಅಲ್ಲ ನಿನ್ನ ಕಳೆದುಕೊಳ್ಳುವುದು ನೀನೆಂದು ಉನ್ಮಾದ ರುಚಿಗೆ ತಾಕೀದೊಡನೇ ನೀ ಕರೆದೊಯ್ಯುವ ಜಗತ್ತು ನನಗಷ್ಟೇ ಗೊತ್ತು! ನೀನೆಂದು ಭಾವನ್ಮೊದಾ ಮನಕ್ಕೆ ನೆನಪದೊಡನೇ ನೀ ಆವರಿಸಿಕೊಳ್ಳುವ ನಿಯತ್ತು ನನಗಷ್ಟೇ ಗೊತ್ತು! ನೀನೆಂದು ಸವಿ ವಿನೋದ ಮಾತಿಗೆ ಜೊತೆಯಾದೊಡನೇ ನೀ ಆಪ್ತವಾಗುವ ಅವಲತ್ತು ನನಗಷ್ಟೇ ಗೊತ್ತು! ನೀನೆಂದು ಉಸಿರ ನಾದ ಏರಿ ಇಳಿದೊಡನೇ ನನ್ನ ಎದೆಯಲ್ಲೆಳೆವ ಹೆಸರಂತು ನನಗಷ್ಟೇ ಗೊತ್ತು *************
ಯುಗಾದಿಯ ಆ ದಿನ ನೀ.ಶ್ರೀಶೈಲ ಹುಲ್ಲೂರು ಹೆದ್ದಾರಿಗಂಟೇ ಇರುವ ನನ್ನ ಮನೆ ಮಹಲಿನ ಮಹಡಿಯ ಬಾಲ್ಕನಿಯಲಿ ಬಂದು ನಿಂತೆ ಬಿಕೋ ಎನ್ನುವ ಸತ್ತುಬಿದ್ದ ರಸ್ತೆ! ಅಲ್ಲೊಂದು ಇಲ್ಲೊಂದು ಆಗೊಂದು ಈಗೊಂದು ಕಂಡು ಕಣ್ಮರೆಯಾಗುವ ಬೀದಿ ನಾಯಿ ಗಳು ತಮ್ಮ ವಿಸರ್ಜನಾ ವ್ಯೂಹ ದ ಕೊನೆಯ ಅಂಗದ ಅಂತಿಮ ಚಪಲವ ಲೈಟಿನ ಕಂಬಕೆ ಕಾಲೆತ್ತಿ ನೆಲಕೆ ತಳವೊತ್ತಿ ತೀರಿಸಿ ಕೊಂಡು ಕಂಬಿ ಕಿತ್ತವು! ಪ್ರಾಸಕ್ಕಂಟಿದ ‘ಕವಿತೆ ಸಾಲು’ ಇಂದು ನನ್ನನ್ನು ಪರದೇಶಿಯಾಗಿಸಿ ಕ್ರಾಸ್ ಕಂಟ್ರಿ ಓಟಕ್ಕಿಳಿದವು. ಸರಿ,ಬಂದಂತೆ ಬರೆದಿಡುವೆ ಬೈದವರಿಗೊಂದು ಸಲಾಂ ಹೇಳಿ! ಇಲ್ಲಿ ಹರಿದೋಡುತಿರುವ ಸಾಲುಗಳಂತೆಯೇ ಹರಕು-ಪರಕು ಚೆಲ್ಲಾಪಿಲ್ಲಿ ಮನದ ಕವಲು! ತುಂಬಿಕೊಂಡಿರುವುದೇನು ಒಳಗೆ? ಎಲ್ಲ ಖಾಲಿ ಖಾಲಿ ಮೋಡ ವಿಲ್ಲದ ಬಾನು ! ಸ್ವಾತಂತ್ರ್ಯ ದ ಹೋರಾಟದಲ್ಲಿ ನಾವಿರಲಿಲ್ಲ ,ಅವರೇಕೆ ಆ ಪರಿ ಹೋರಾಡಿದರು?ಎಂಬುದನು ಓದಿ ತಿಳಿದುದಕಿಂತ ಇಂದಿನ ದಿಗ್ಬಂಧನವೇ ಎಮ್ಮೆ ಬಡಿವ ಬಾಲ್ಯ ನೆನಪಿಸಿತು! ಖಾರ ತಿಂದವನ ಒದ್ದಾಟ! ಒಳಗೊಳಗೇ ಗುದ್ದಾಟ! ನಂಮೀ ಸಂಕಟ ತೊಳಲಾಟಕೆ ಪ್ರಧಾನಿಯೇ ಕಾರಣ ಎಂದು ಫೂತ್ಕರಿಸಿದೆ! ಅಲ್ಲಿ ನಮ್ಮ ಓಣಿಯಾಚೆಯ ಆಸ್ಪತ್ರೆ ಪಕ್ಕ ಜನರ ಗೌಜು ಗದ್ದಲದ ನಡುವೆ ಬಾಯಿ ಬಿರಿವಂತೆ ಗಹಗಹಿಸಿ ನಗುತ್ತಿತ್ತು ಕರೋನಾ! *******
ಗಝಲ್ ಡಾ.ಗೋವಿಂದ ಹೆಗಡೆ ನಮ್ಮ ಪೇಲವ ನಗುವ ಕಂಡು ನಗುತಿರುವನೇ ದಿನಕರ ನಿಸ್ತೇಜ ಬದುಕನು ಕಂಡು ಮರುಗಿರುವನೇ ದಿನಕರ ವಸಂತ ಬಂದಿದ್ದಾನೆ ನಿಜ, ಎಂದಿನಂತಿಲ್ಲ ದಿನ ನಮ್ಮ ಗೋಳನು ಕಂಡು ಕರಗಿರುವನೇ ದಿನಕರ ಅವನೋ ಧಗಧಗಿಸಿದ್ದಾನೆ ಎಂದಿನ ಉಗ್ರತೆಯಲ್ಲಿ ಹೂಕರಗಳಿಂದ ಎತ್ತಿ ನಮ್ಮ ಮುದ್ದಿಸುವನೇ ದಿನಕರ ಅವನಿಂದಲೇ ನಳನಳಿಸಿದೆ ಇಳೆ, ಎಲ್ಲರ ಬಾಳು ಬಂದಿರುವ ಸಂಕಟಕೆ ಮದ್ದರೆಯುವನೇ ದಿನಕರ ಹೆಣ ಬಣಬೆ ಬಿದ್ದಿದೆ ಜಗದ ಬೀದಿಬೀದಿಗಳಲ್ಲಿ ಭರವಸೆಯ ಕಿರಣ ಸುರಿದು ಪೊರೆಯುವನೇ ದಿನಕರ ಕತ್ತಲು ಸರಿದು ಬೆಳಕು, ಲೋಕದ ನಡೆ ‘ಜಂಗಮ’ ಆಪದಗಳ ಕಳೆದು ನಲವ ಎರೆಯುವನೇ ದಿನಕರ ********
You cannot copy content of this page