ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ವೈರಸ್ ಅಶ್ವಥ್ ಏನೋ ಬಲ್‌ಶಾಲಿ ಅನ್ಕೊಂಡ್‌ಬುಟ್ಟು ಬೇಕಾದ್ದೆಲ್ಲ ಮಾಡ್ಕೊಂಡ್‌ಬುಟ್ಟು ಭೂತಾಯ್‌ ಮುಂದ್‌ ಗತ್ತು ಗಮ್ಮತ್ತು ವೈರಸ್‌ ಬಂತು ಮಂಡಿಯೂರು ಅಂತು ನವರಂಗೀ ಮಾಧ್ಯಮ್‌ಗಳಾಗೆ ಪಟತೆಕ್ಕಂಡ್‌ ವಾಲಾಡುವಾಗೇ ಕಣ್ಣಿಗ್‌ ಕಾಣ್ದಿರ್ ಅಣುವೊಂದ್‌ ಬಂತು ಕೈಕಾಲ್‌ ಕಟ್ಕಂಡ್‌ ಮನೆಲ್ಕೂರ್‌ ಅಂತು ಜಗತ್ತೆಲ್ಲಾ ಚಿಂದಿ ಚೂರಾದ್ರೂನೇ ಕಣ್ಣಾಗ್‌ ಕಣ್ಣಿಟ್‌ ನೋಡೋದಾಗ್ದೇನೆ ಕಿಂಚಿತ್‌ ಅನ್ನೋ ವೈರಸ್ಸೇ ಬರ್‌ಬೇಕಾತು ನಮ್‌ ಸಂಬಂಧ್‌ಗೋಳ್‌ ಏನಂತ ತಿಳ್‌ಸ್ತು ನಮ್‌ ಕೈತೊಳ್ಕೊಂಡ್ರಷ್ಟ್‌ ಸಾಕಾಗಲ್ಲ ಮನ್ಸ್‌ ಉಜ್ಜುಜ್ಜಿ ತೊಳ್ಕೊಬೇಕೆಲ್ಲ ವದ್ದ್‌ ವೋಡ್ಸೋಕ್‌ ಮುಂಚೆ ವೈರಸ್ಸನ್ನ ಎತ್ತ್‌ ಹಿಡೀಬೇಕಾಗೈತೆ ಮನ್ಸತ್ವಾನಾ ********************

ಕಾವ್ಯಯಾನ Read Post »

ಇತರೆ

ವಿಶ್ವ ಗುಬ್ಬಚ್ಚಿಗಳ ದಿನ

ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಕೆ.ಶಿವು ಲಕ್ಕಣ್ಣವರ ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಮಾರ್ಚ್ ೨೦ ವಿಶ್ವ ಗುಬ್ಬಚ್ಚಿಗಳ ದಿನ. ಅದಕ್ಕಾಗಿ ಆ ನೆಪದಲ್ಲಿ ಈ ಗುಬ್ಬಚ್ಚಿಗಳ ಕುರಿತಾದ ಈ ಲೇಖನ… ಒಂದು ಕಾಲದಲ್ಲಿ ಬಹುತೇಕ ಹಳ್ಳಿಮನೆಗಳಲ್ಲಿ ಬೆಳಗ್ಗಿನ ಅಲಾರ್ಮ್ ಎಂದರೆ ಗುಬ್ಬಚ್ಚಿಗಳ ಚಿಲಿಪಿಲಿಯೇ… ಈಗಲೂ ಬೇರೆ ಊರು ಇರಲಿ, ನಮ್ಮ ಊರಿನಲ್ಲಿ ಅಲ್ಲಲ್ಲಿ ಮನೆಗಳಲ್ಲಿ ಗುಬ್ಬಚ್ಚಿಗಳು ಗೋಡು ಕಟ್ಟುತ್ತಿವೆ. ವಾಸಿಸುತ್ತಿವೆ. ಅಷ್ಟಿಷ್ಟು ಇರುವ ಈ ಗುಬ್ಬಚ್ಚಿಗಳು ಹಾಗೋ-ಹೀಗೋ ಹೇಗೋ ವಾಸಿಸುತ್ತವೆ… ಒಂದಿಷ್ಟು ದಿನಗಳ ವರೆಗೆ ಕಣ್ಮರೆಯಾಗಿದ್ದ ಈ ಗುಬ್ಬಚ್ಚಿಗಳು ಈಗ ಒಂದಿಷ್ಟು ನೋಡಲು ಸಿಗುತ್ತಿವೆ. ಅದೇ ಪುಣ್ಯ. ಈ ಗುಬ್ಬಚ್ಚಿಗಳು ಮಣ್ಣಿನ ಮನೆಗಳ ಜಂತಿಯ ಬಿರುಕುಗಳಲ್ಲಿ ಅಥವಾ ಅಲ್ಲಲ್ಲಿ ಮನೆಗಳ ಸಂದಿ-ಗೊಂದಿಗಳಲ್ಲಿ ಗೂಡು ಕಟ್ಟಿಕೊಂಡು ವಾಸಿಸುತ್ತವೆ. ಈ ಗುಬ್ಬಚ್ಚಿಗಳು ವಾಸಿಸುವ ಜಂತಿಯ ಬಿರುಕುಗಳು ಅಥವಾ ಸಂದಿ-ಗೊಂದಿಗಳಲ್ಲೇ ತಮ್ಮ ವಂಶೋದ್ಧಾರದ ಪಡಿಪಾಟಲನ್ನು ತೀರಿಸಿಕೊಳ್ಳುತ್ತಿವೆ. ವಂಶೋದ್ಧಾರವೆಂದರೆ ಅದೇ ಗೂಡುಗಳಲ್ಲಿ ತತ್ತಿ(ಮೊಟ್ಟೆ) ಇಡುವುದು, ಮೊಟ್ಟೆಗೆ ಕಾವು ಕೊಟ್ಟು ಮರಿ ಮಾಡುವುದು, ಆ ಮರಿ ತುಸು ರಕ್ಕೆ:ಪುಕ್ಕ ಮೂಡಿದೊಡನೆ ಹಾರುವುದು. ಹೀಗೆ ವಂಶೋದ್ಧಾರದ ಸಂಸ್ಕಾರದಲ್ಲಿ ಗುಬ್ಬಚ್ಚಿಗಳು ಅಷ್ಟಿಷ್ಟಾಗಿ ಒಂದಿಷ್ಟು ಜೀವನ ಕಾಣುತ್ತಿವೆ … ಸಾಂದರ್ಭಿಕವಾಗಿ ಹೇಳುತ್ತೇನೆ, ಗುಬ್ಬಚ್ಚಿಗಳಂತೆ ನಮ್ಮ ಹಳ್ಳಿಯಲ್ಲಿ ಕಾಗೆ, ಗೂಬೆಗಳು, ಅಲ್ಲಲ್ಲಿ ಅಪರೂಪಕ್ಕೊಮ್ಮೆ ಕಾಣಸಿಗುವ ರತ್ನ ಪಕ್ಷಿ (ಹಳ್ಳಗಳಲ್ಲಿ ಈ ರತ್ನ ಪಕ್ಷಿಗೆ ಸಾಂಬಾರಗಾಗಿ ಅಂತಲೂ ಕರೆಯುತ್ತಾರೆ)ಗಳು, ಗೊರವಂಕಗಳು ಇತ್ಯಾದಿ ಪಕ್ಷಿಗಳು ಅಪರೂಪದ ಅತಿಥಿಯಂತೆ ಕಾಣಸಿಗುತ್ತವೆ… ಹೊಲ-ಗದ್ದೆ, ತೋಟಗಳಲ್ಲೂ ಗಣನೀಯವಾದ ಅಪರೂಪದ ಅತಿಥಿಯಾದರೂ ಇವೆ ಇವು. ಆದರೆ ಇವುಗಳ ಸಂಖ್ಯೆ ತೀರಾ ಗಣನೀಯವಾಗಿ ಇಳಿಮುವಾಗಿದೆ. ಅಂದರೆ ಈ ಪಕ್ಷಿಗಳೆಲ್ಲ ಮುಂದೊಂದು ದಿನ ಕನಸಿನಂತೆ ಆಗಬಹುದು. ಇವುಗಳೆಲ್ಲವೂ ಸರ್ವನಾಶವಾಗಲೂಬಹುದು… ಇದೆಲ್ಲ ಈಗ ಯಾಕೆ ಮಾತು ಬಂತಂದರೆ ಮಾರ್ಚ್ ೨೦ ವಿಶ್ವ ಗುಬ್ಬಚ್ಚಿಗಳ ದಿನವಾದ್ದರಿಂದ ಇದೆಲ್ಲ ನೆನಪಾಯಿತು… ಒಂದು ಮುಖ್ಯ ವಿಷಯವೆಂದರೆ ಈ ಗುಬ್ಬಚ್ಚಿಗಳು, ಕಾಗೆ, ಗೂಬೆಗಳೆಲ್ಲ ಕಾಂಕ್ರೀಟ್ ಕಾಡುಗಳಾದ ಪಟ್ಟಣ, ನಗರ, ಮಹಾನಗರಗಳಲ್ಲಿ ಕಾಣಸಿಗುವುದೇ ಇಲ್ಲ. ಅಂದರೆ ನಾಶವಾಗಿವೆ. ಮನುಷ್ಯ ತನ್ನ ಮಿತಿಮೀರಿದ ತೀವ್ರ ಸ್ವಾರ್ಥದಲ್ಲಿ ಈ ಉಳಿದ ಪ್ರಕೃತಿ ಸಹಜ ಪ್ರಾಣಿ-ಪಕ್ಷಿಗಳಿಗೆ ಜಾಗವೇ ಇಲ್ಲದಂತೆ ಮಾಡಿದ್ದಾನೆ..! ಇರಲಿ, ಮುಖ್ಯ ವಿಷಯಕ್ಕೆ ಬರುತ್ತೇನೆ ಈಗ. ಅದೇ ಗುಬ್ಬಚ್ಚಿಗಳ ವಿಷಯ… ಈ ಗುಬ್ಬಚ್ಚಿಗಳು ಸಂಗ್ರಹಿಸಿಟ್ಟ ಭತ್ತದ ಒಣಹುಲ್ಲುಗಳ ತೆನೆಯಲ್ಲಿ ಅಲ್ಲಲ್ಲಿ ಸಿಗುವ ಭತ್ತಗಳನ್ನು ಹುಡುಕುತ್ತ ಸಂಸಾರ ಸಮೇತ ಸುಪ್ರಭಾತ ಹಾಡುವುದು ಗುಬ್ಬಚ್ಚಿಗಳ ದಿನಚರಿಯ ಮೊಟ್ಟ ಮೊದಲ ಕೆಲಸ..! ಹೆಣ್ಣು ಗುಬ್ಬಿಯ ಗರ್ಭದಲ್ಲಿ ಪುಟ್ಟದೊಂದು ಗುಬ್ಬಚ್ಚಿ ಮೊಳೆಯುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಅವುಗಳ ತಯಾರಿ ಶುರು. ಗಂಡು ಗುಬ್ಬಿಗಂತೂ ಆಗ ಎಲ್ಲಿಲ್ಲದ ಕೆಲಸ. ಒಂದೊಂದೇ ಹುಲ್ಲುಕಡ್ಡಿಗಳನ್ನು ಆರಿಸಿ ತಂದು ಗೂಡನ್ನು ಕಟ್ಟಿ ಜೋಪಾನ ಮಾಡುವುದೇನು. ಕಾಳು ಕಡಿ ಸಂಗ್ರಹಿಸುವುದೇನು. ಆ ಸಂಭ್ರಮ ಅವಕ್ಕೇ ಗೊತ್ತು..! ಮೊಟ್ಟೆಗೆ ಸರದಿಯಂತೆ ಕಾವುಕೊಡುವ ಜೋಡಿ! ಮನೆಯೊಡತಿ ಅಕ್ಕರೆಯಿಂದ ಹಾಕಿದ ಅಕ್ಕಿ ಕಾಳುಗಳನ್ನೆಲ್ಲ ತನ್ನ ಪುಟ್ಟ ಕೊಕ್ಕಲ್ಲಿ ಆರಿಸಿಕೊಂಡು, ಗೂಡಲ್ಲಿ ರಚ್ಚೆಹಿಡಿದ ಮರಿಗಳ ಬಾಯಿಗೆ ಗುಟುಕಿಡುವ ಪರಿ. ಆಹಾ ಅದನ್ನು ನೋಡಿಯೇ ಆನಂದಿಸಬೇಕು… ಆದರೆ. ಆ ಮಧುರ ಕ್ಷಣಗಳು ಇನ್ನು ಮರೀಚಿಕೆ ಮಾತ್ರವಾ…? ಮನುಷ್ಯನ ಸಹವಾಸದಲ್ಲೇ ಬದುಕುತ್ತಿದ್ದ ಮನೆಗುಬ್ಬಿಗಳು ‘ಈ ಮನುಷ್ಯರ ಸಹವಾಸವೇ ಸಾಕು’ ಎಂದು ಹಳ್ಳಿಮನೆ ಬಿಟ್ಟು ಪಟ್ಟಣ ಸೇರಿದ್ದೇವೆಯೇ..? ಹಾಗೇನೂ ಇಲ್ಲ ಎಂದಾದರೆ ಇದ್ದ ಗುಬ್ಬಿಗಳೆಲ್ಲ ಎಲ್ಲಿ ಹೋದವು? ಹಳ್ಳಿಗಳಲ್ಲಿ ಪ್ರತಿ ಮನೆಯಲ್ಲೂ ಏನಿಲ್ಲವೆಂದರೆ ಕನಿಷ್ಠ 10-15 ಸಂಖ್ಯೆಯಲ್ಲಿರುತ್ತಿದ್ದ ಗುಬ್ಬಚ್ಚಿ ಮಾಯವಾಗಿದ್ದೇಕೆ..? ಅಳಿವಿನಂಚಿಗೆ ಸರಿಯುತ್ತಿರುವ ‘ಮನೆಗುಬ್ಬಿ’ಗಳನ್ನು ರಕ್ಷಸಿ ಎಂದು ಕೂಗಿ ಹೇಳುವುದಕ್ಕಾಗಿ ಇಂದು ‘ವಿಶ್ವ ಮನೆ ಗುಬ್ಬಿಗಳ ದಿನ’ವನ್ನು ಆಚರಿಸಲಾಗುತ್ತಿದೆ. ಪ್ರತಿ ವರ್ಷ ಮಾ.20 ರಂದು ಆಚರಣೆಗೊಳ್ಳುವ ಈ ದಿನದಂದು ಗುಬ್ಬಿಗಳ ಸಂತತಿಯನ್ನು ರಕ್ಷಿಸುವುದಕ್ಕೆ ಪಣತೊಡಲಾಗುತ್ತದೆ… ಮನುಷ್ಯನ ಸ್ನೇಹಿತರಾದ ಈ ಗುಬ್ಬಿಗಳು ಚಿಂವ್ ಚಿಂವ್ ಎನ್ನುತ್ತ ಮನೆತುಂಬ ಓಡಾಡುತ್ತಿದ್ದರೇನೇ ಶೋಭೆ. ಆದರೆ ಕಾರಣಾಂತರಗಳಿಂದ ಅವುಗಳ ಸಂತತಿ ಕಡಿಮೆಯಾಗುತ್ತಿರುವುದು ಆತಂಕ ಮೂಡಿಸಿದೆ… ಎಲ್ಲಿ ಹೋದವು ಮುದ್ದು ಗುಬ್ಬಚ್ಚಿಗಳು..?– ಮನುಷ್ಯನ ಸಾಂಗತ್ಯದಲ್ಲೇ ಬದುಕಲು ಬಯಸುತ್ತಿದ್ದ ಗುಬ್ಬಿಗಳು ಗೂಡು ಕಟ್ಟುತ್ತಿದ್ದಿದ್ದೇ ಮನೆಯ ಮಾಡಿನ ಸಂದಿ-ಗೊಂದಿಗಳಲ್ಲಿ. ಸದಾ ಮನೆಯಲ್ಲೇ ಕೂತು, ಹೊರಗೆಲ್ಲೂ ಸುತ್ತದವರಿಗೆ ‘ಮನೆಗುಬ್ಬಿ’ ಎಂಬ ಉಪಮೇಯ ಈಗಲೂ ಚಾಲ್ತಿಯಲ್ಲಿದೆ. ಅಂದರೆ ಅಷ್ಟರ ಮಟ್ಟಿಗೆ ಗುಬ್ಬಚ್ಚಿಗಳು ಮನೆಯ ಸದಸ್ಯರೇ ಆಗಿ ಮನೆಯಲ್ಲುಳಿಯುತ್ತಿದ್ದವು. ಆದರೆ ಇತ್ತೀಚೆಗೆ ಹಳ್ಳಿ ಮನೆಗಳೂ ಥಾರಸಿಯಾಗಿ ಬದಲಾಗಿದ್ದು, ಮೊಬೈಲ್ ತರಂಗಗಳು ಗುಬ್ಬಚ್ಚಿಯ ಜೀವಕ್ಕೇ ಸಂಚಕಾರ ಎಂಬ ಆತಂಕ ಮುಂತಾದವೆಲ್ಲ ಸೇರಿ ಮುದ್ದು ಗುಬ್ಬಚ್ಚಿಗಳು ಕಣ್ಣಿಗೇ ಕಾಣದಂತೆ ಮಾಯವಾಗಿವೆ… ವಿಶ್ವವನ್ನು ಸುಂದರವಾಗಿಸಿದ ಗುಬ್ಬಚ್ಚಿಗಳು ವಿಶ್ವ ಗುಬ್ಬಿಗಳ ದಿನದಂದು ಈ ಪುಟ್ಟ ಪ್ರಭೇದವನ್ನು ರಕ್ಷಿಸಲು ಕೈಜೋಡಿಸೋಣ. ಅವುಗಳ ಚಿಲಿಪಿಲಿ ಸದ್ದು ಈ ವಿಶ್ವವನ್ನು ಮತ್ತಷ್ಟು ಸುಂದರವಾಗಿಸಿದೆ. ಅವುಗಳಿಗೆ ನೀರು, ಆಹಾರ, ನೆರಳು ನೀಡಿ ಸಲಹೋಣ… ಈ ಸುಂದರ ಗುಬ್ಬಿಗಳನ್ನು ರಕ್ಷಿಸೋಣ. ಇಲ್ಲವೆಂದರೆ ನಮ್ಮ ಮುಂದಿನ ತಲೆಮಾರಿಗೆ ಇವುಗಳ ಚಿತ್ರವನ್ನಷ್ಟೇ ತೋರಿಸಬೇಕಾದೀತು… ರಕ್ಷಣೆಯ ಕುರಿತು ಅರಿವು ಮೂಡಿಸೋಣ– ನಿಸರ್ಗದ ಸಣ್ಣಪುಟ್ಟ ಜೀವಿಗಳೂ ನಮ್ಮ ಬದುಕನ್ನು ಸುಂದರವಾಗಿಸಿವೆ. ನಿಸರ್ಗದ ಪ್ರತಿ ವಸ್ತುವನ್ನೂ, ಜೀವಿಯನ್ನೂ ರಕ್ಷಿಸುವುದು ನಮ್ಮ ಕರ್ತವ್ಯ. ವಿಶ್ವ ಗುಬ್ಬಿ ದಿನದಂದು ಈ ಪಕ್ಷಿಗಳ ರಕ್ಷಣೆಯ ಕುರಿತು ಅರಿವು ಮೂಡಿಸೋಣ… ಗುಬ್ಬಿಗಳ ಚಿಲಿಪಿಲಿ ಸದ್ದಿನಿಂದಲೇ ಈ ಜಗತ್ತು ಸುಂದರವಾಗಿದೆ. ಎಂದು ನನಗೆ ಹಲವು ಬಾರಿ ಅನ್ನಿಸುತ್ತದೆ. ಅವುಗಳಿಗೆ ನಮ್ಮ ಮನೆಯ ಒಂದು ಮಾಡಿನಲ್ಲಿ ಕೊಂಚ ಜಾಗ ಮಾಡಿಕೊಡೋಣ. ಅವುಗಳಿಗೆ ನೀರು, ಆಹಾರ ಒದಗಿಸೋಣ. ಈ ಬೇಸಿಗೆಯಲ್ಲಿ ಅವುಗಳ ರಕ್ಷಣೆ ನಮ್ಮ ಹೊಣೆ..! ಈ ಸಮತೋಲನದ ಗುಬ್ಬಚ್ಚಿಗಳು ಈಗ ಬೇಕಾಗಿದೆ..! ಇಂತಿಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ..!

ವಿಶ್ವ ಗುಬ್ಬಚ್ಚಿಗಳ ದಿನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ದಿನಕ್ಕೊಂದು ಕವಿತೆ ನನ್ನೊಳಗೊಂದು ನಾನು ಅಂಜನಾ ಹೆಗಡೆ ನಾ ಹುಟ್ಟುವಾಗಲೇ ನನ್ನೊಂದಿಗೆ ಹುಟ್ಟಿದ ಕವಿತೆಯೊಂದು ಇದ್ದಕ್ಕಿದ್ದಂತೆ ಎದುರಿಗೆ ಬಂದು ನಿಂತಿತು ಥೇಟು ನನ್ನಂತೆಯೇ ಕಾಣುವ ಅದಕ್ಕೊಂದು ಉದ್ದನೆಯ ಬಾಲ…. ನಾ ಹೋದಲ್ಲೆಲ್ಲ ನನ್ನದೇ ವೇಗದಲ್ಲಿ ಹಿಂದೆಮುಂದೆ ಸುತ್ತುತ್ತಿತ್ತು ಬಾಲದ ಸಮೇತ ಉದ್ದಜಡೆಯ ಹೆಣ್ಣೊಂದು ಹೆಗಲೇರಿದ ಭಾರ ಅಯ್ಯೋ!! ಹೆಣ್ಣುಕವಿತೆಯೇ ಹೌದು…. ಸುಲಿದ ಬೆಳ್ಳುಳ್ಳಿಗಳನ್ನೆಲ್ಲ ಪ್ಲಾಸ್ಟಿಕ್ಕಿನ ಮೇಲಿಟ್ಟು ಜೋರಾಗಿ ಜಜ್ಜಿದೆ ಬಾಲವೂ ಅಲ್ಲಾಡಿತು ಯಾವ ಕೋಪಕ್ಕೆ ಬೆಳ್ಳುಳ್ಳಿ ಬಲಿ!! ಬಾಲ ನಕ್ಕಂತೆ ಭಾಸವಾಗಿ ಸಣ್ಣದೊಂದು ಅವಮಾನ ಈರುಳ್ಳಿಗೆ ಕರಗಿದ ಕಣ್ಣೀರು ಬಾಲದ ತುದಿಗೆ ಅಂಟಿಕೊಂಡಿತು ಅಲ್ಲಾಡುತ್ತಿಲ್ಲ…. ಕೊಂಚ ಕರಗಿದೆ ಯಾವ ತಾಪ ಯಾರ ಎದೆಯ ಮೇಲೋ ಒಗ್ಗರಣೆಯ ಬಿಸಿ ಕುಕ್ಕರಿನ ಕೂಗು ಯಾವುದಕ್ಕೂ ಜಗ್ಗದ ಗಟ್ಟಿ ಬಾಲವಿದು…. ಈಗ ಸಣ್ಣದೊಂದು ಬಾಂಧವ್ಯ ಬಾಲದೊಂದಿಗೆ…. ತುಳಿಯದಂತೆ ನಿಭಾಯಿಸಬೇಕು!! ನನ್ನದಲ್ಲದ ಚಲನೆಯೊಂದು ಬೆನ್ನಿಗಂಟಿ ಜೀವಂತ ಸದಾ ಅಂಟಿಕೊಂಡಿರಲಿ ಹೆಣ್ಣಾಗಿ ಕವಿತೆ ಚಲನೆಯಾಗಿ…. ನಾನಾಗಿ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ದಿನಕ್ಕೊಂದು ಕವಿತೆ ಸಜೀವ ಡಾ.ಗೋವಿಂದ ಹೆಗಡೆ ಕವಿತೆ ನನ್ನ ಲೋಕಕ್ಕೆ ಬಂದಾಗಿನಿಂದ ಜೊತೆಗಿದೆ ಕಿಸೆಯ ಕನ್ನಡಕ ಪೆನ್ನು ಪರ್ಸುಗಳಂತೆ ನನ್ನದಾಗಿ ಅಷ್ಟೇ ಅಲ್ಲ ಎದೆಯ ಲಬ್ ಡಬ್ ಗಳಗುಂಟ ನಾಡಿಗಳಲ್ಲಿ ಹರಿದಿದೆ ಉಸಿರ ತಿದಿಯಲ್ಲಿ ಯಾತಾಯಾತ ಆಡಿದೆ ಕಣ್ಣಾಗಿ ಕಂಡು ಕಿವಿಯಾಗಿ ಕೇಳಿ ನರಮಂಡಲದಲ್ಲಿ ಗ್ರಹಿಸಿ ಸ್ಪಂದಿಸಿ ನನ್ನ ಭಾಗವೇ ಬೇಲಿಸಾಲಿನ ಹೂಗಳಿಗೆ ಕೈ ಆಡಿಸಿ ನಕ್ಕು ಹಕ್ಕಿಗಳ ಪಕ್ಕ ಹಾರಿ ತಾರೆಗಳಿಗೆ ಕಣ್ಮಿಟುಕಿಸಿ ಅಲೆ-ದಂಡೆಗಳಗುಂಟ ಅಲೆದು ಮರುಳು ಮನೆ ಕಟ್ಟಿ ಕುಣಿದು ಮೈಪಡೆದ ಕವಿತೆ ಹಾಗಲ್ಲದೆ ಕವಿತೆ ಕವಿತೆ ಹೇಗೆ ನಾನು ಜೀವಂತ ಹೇಗೆ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಅರಳು ಹುರಿದಂತೆ ನುಡಿವವರೆದುರು ನಾನಾಗಿರುವೆ ಉಗ್ಗ ಅಣಕಿಸಿದರು ಅವರೆಲ್ಲ ನನ್ನನ್ನೀಗ ನಾನಾಗಿರುವೆ ಮೂಕ ಸ್ತುತಿ-ನಿಂದೆಗಳ ಮೀರಿ ಮುಂದೆ ಹೋಗಬೇಕು ಬದುಕಲು ಒಳದನಿಯ ಹೊರತೆಲ್ಲ ಸ್ವರಗಳಿಗೆ ನಾನಾಗಿರುವೆ ಬಧಿರ ಕತ್ತಲನ್ನೇ ಬೆಳೆದರು ಅವರು ನಡುವೆ ನೀನೊಂದು ಹಣತೆ ಒಳಿತಾಯಿತು ಜಡ ಜಂಜಡಗಳಿಗೆ ನಾನಾಗಿರುವೆ ಕುರುಡ ತಮ್ಮ ದಾರಿಯಲ್ಲೇ ಎಲ್ಲರೂ ಸಾಗಬೇಕೆಂಬ ವರಾತವೇಕೆ ದಾರಿ ಕಡಿಯುವೆ ನಾನೇ, ಉಳಿದಂತೆ ನಾನಾಗಿರುವೆ ಹೆಳವ ನನ್ನ ಕತ್ತಿನ ಪಟ್ಟಿ ಹಿಡಿದರೇನು ಒಲ್ಲದುದ ಮಾಡೆಂದು ‘ಜಂಗಮ’ ಸಾಕ್ಷಿ,ಅಹಿತವೆಸಗದಂತೆ ನಾನಾಗಿರುವೆ ಚೊಂಚ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಶಂಕರಾನಂದ ಹೆಬ್ಬಾಳ ಬಡತನದ ಬವಣೆ ನೋವು ನಲಿವುಗಳಲಿ ಕಂಡೆ ಒಳಿತು ಕೆಡಕುಗಳ ನಿತ್ಯಸತ್ಯವ ಆಂತರ್ಯದಲಿ ಕಂಡೆ….!!! ಬಣ್ಣನೆಗೆ ನಿಲುಕದ ಮಾರ್ಮಿಕ ಕಟುಸತ್ಯಗಳ ಜೊತೆ ಜೀವಂತ ಹೆಣದಂತೆ ಬದುಕಿ ಇರುವವರಲಿ ಕಂಡೆ…!!! ಸೋತು ಸೊರಗಿ ಮೂಕವಾದ ಬದುಕಿನಲಿ ಸುಕ್ಕುಗಟ್ಟಿದ ಚರ್ಮ ಬತ್ತಿದ ಬೆವರಿನಲಿ ಕಂಡೆ…!!! ಹರಿದ ಚಿಂದಿ ಬಟ್ಟೆಗಳ ನಡುವೆ ನಾಳೆ ಶ್ರೀಮಂತನಾಗುವೆ ಎನ್ನುವ ಕನಸ ಹೊತ್ತುಕೊಂಡಿರುವ ಬಡವರಲಿ ಕಂಡೆ…!!! ಕೊನೆತನಕ ದುಡಿದರು ಬಡತನ ದೂರಾಗಲಿಲ್ಲ ಎಂಬ ಅಭಿನವನ ಮಾತು ಸುಳ್ಳಲ್ಲ ಎನ್ನುವರ ಮನದಲಿ ಕಂಡೆ…!!! ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನನ್ನೊಳಗೆ ನೀನಿರುವಾಗ… ಬಿದಲೋಟಿ ರಂಗನಾಥ್ ನನ್ನೊಳಗೆ ನೀನಿರುವಾಗ ಭಯದ ಬೆಂಕಿಯನ್ನು ಹಾರುವುದು ಕಷ್ಟವೇನಲ್ಲ ಸುಡುವ ನೆಲದ ತಂಪಿಗೆ ನೀನೆ ಬರೆದ ಪ್ರೇಮ ಪತ್ರವಿರುವಾಗ ಕಾಮನ ಬಿಲ್ಲು ಮಾತಾಡುವುದು ಕಷ್ಟವೇ ಅಲ್ಲ ಪರಿಷೆಯಲ್ಲು ಧ್ಯಾನ ನೇರಗೆರೆಯ ಮೇಲೆ ನಿಂತಿರುವಾಗ ಮನಸು ಯಾವ ಮೂಲೆಯಿಂದ ಪಲ್ಲಟಗೊಳ್ಳುವುದು ಹೇಳು ? ನಗುವ ಚಂದಿರನ ಮುದ್ದಿಸಿದ ನೀನು ಪ್ರೇಮದ ಹೂವಿನ ಸುಗಂಧವ ಮೂಸದೇ ಹೋದೆ ನಿನ್ನೊಳಗಿನ ದಾರಿಯ ಮೇಲೆ ಬೆಳೆದ ಮುಳ್ಳುಗಳು ಚುಚ್ಚುವಾಗ ಜಾತಿಯ ಬಣ್ಣಕೆ ಕಣ್ಣು ಮಂಜಾಗಿದ್ದು ಹೃದಯದ ಕಣಿವೆಗಳಲ್ಲಿ ಕಂದರ ತೋಡಿದ ನೀನು ನನ್ನೆಲ್ಲವನ್ನೂ ಬೀಳಿಸಿಯೇ ಹೋದೆ ನಡೆದ ಅಷ್ಟೂ ದೂರ ತಲೆಯೆತ್ತಿ ನಿಂತ ಭಾವ ಮುರುಟಿ ನೆಲ ನೋಡುವುದ ಕಂಡೆ ನಿನ್ನ ನಗುವಿನ ಅಲೆಗಳು ನನ್ನ ಹೃದಯವೆಂಬ ಸಾಗರದಲ್ಲಿ ಎದ್ದಿರುವಾಗ ನೆಲದ ಕಣ್ಣಲ್ಲಿ ನೀರಾದರೂ ಎಲ್ಲಿ ಬತ್ತೀತು ಹೇಳು. ನಿನ್ನದೇ ಚಿತ್ರ ಗಾಳಿಯಲ್ಲಿ ಬರೆದು ನೋಡುತ್ತಲೇ ಇರುವೆ ಅದು ಬಣ್ಣ ಬಣ್ಣದ ಕನಸುಗಳನ್ನು ಬಿಡಿಸುತ್ತಲೇ ಇದೆ. ***********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅವರು ಒಪ್ಪುವುದಿಲ್ಲ. ! ವಿಜಯಶ್ರೀ ಹಾಲಾಡಿ ಕಾಫಿಯಲ್ಲಿ ಕಹಿ ಇರಬೇಕುಬದುಕಿನ ಹಾಗೆ ಮುತ್ತುಗದ ಹೂ ರಸಕುಡಿವ ಮಳೆಹಕ್ಕಿರೆಕ್ಕೆ ಸುಟ್ಟುಕೊಳ್ಳುತ್ತದೆ ಬೂದಿಯಾದ ದಿನಗಳಆಲಾಪಿಸುವ ಇರುಳಹಕ್ಕಿನಿರಾಳ ಕಂಡುಕೊಳ್ಳುತ್ತದೆ ದಟ್ಟ ನೋವು ಒಸರುವಅಂಟಿನ ಮರ ಯಾರಸಾಂತ್ವನಕ್ಕೂ ಕಾಯುವುದಿಲ್ಲ ಬೋರಲು ಬಿದ್ದ ಆಕಾಶಬುವಿಯ ಕಣ್ಣೀರಿಗೇನೂಕರಗಿದ್ದು ಕಂಡಿಲ್ಲ ನದಿಯಲ್ಲಿ ತೇಲಿಬಂದಹಸಿಮರ -ನಾಗರಿಕತೆಯಹೆಣವೆಂದು ಅವರು ಒಪ್ಪುವುದಿಲ್ಲ.  *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೂತಕ ಶಾಂತಾ ಜೆ ಅಳದಂಗಡಿ ಹುಚ್ಚು ತುರಗ ಈ ಮನ ದಿಕ್ಕೆಟ್ಟು ಓಡುತಿದೆ ಕಾಣಲು ಹೂ ಬನ ಪ್ರೀತಿ ಎಂದರೆ ನೀರ್ಗುಳ್ಳೆ ಒಲವ ನುಡಿಯಲಿರುವುದೆಲ್ಲ ಸುಳ್ಳೆ ಹೂವ ಮಧುವ ಹೀರುವ ವರೆಗು ಮೋಹದ ಮಾತುಗಳ ಬೆರಗು ದಾಹ ತೀರಿದಮೇಲೆ ನದಿಯ ಹಂಗಿಲ್ಲ ವಶವಾದನಂತರ ಅವಳು ನಲ್ಲೆಯಲ್ಲ ಪ್ರೇಮ ಸಾಯುತ್ತೆ ನರಳಿ ನರಳಿ ಬಾರದೆಂದಿಗೂ ಅದು ಮರಳಿ ಮರುದಿನವೂ ರವಿ ಉದಯಿಸುತ್ತಾನೆ ಹೊಂಗಿರಣಗಳ ಭುವಿಗೆಲ್ಲ ಚೆಲ್ಲುತ್ತಾನೆ ಸತ್ತಪ್ರೀತಿಯ ಸೂತಕ ಆನಂದಿಸಲಾಗದು ಸುಂದರ ಬೆಳಕ ಮೈ ಮರೆತರೆ ಒಂದು ಕ್ಷಣ ಬದುಕಾದೀತು ಜೀವಂತ ಹೆಣ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನೀನೀಗ ಇದ್ದಿದ್ದರೆ ಚೈತ್ರಾ ಶಿವಯೋಗಿಮಠ “ನೀನೀಗ ಇದ್ದಿದ್ದರೆ” ಆ ಕಲ್ಪನೆಯೇ ಚಂದ ಬಹುಶಃ ಹೋಗುತ್ತಿದ್ದೆವು ಗಿರಿ-ಕಣಿವೆಗಳ ಮೇಲೆ ಹತ್ತಿಳಿಯಲು!, ಹೂವಿಂದ ಹೂವಿಗೆ ಹಾರುವ ಬಣ್ಣದ ಚಿಟ್ಟೆಗಳ ಹಿಡಿಯಲು, ಓಡುವ ನದಿಯ ಬೆನ್ನುಹತ್ತಲು, ಹಿಮ ಪರ್ವತಗಳ ಮೇಲೇರಿ ಹಿಮದ ಬೊಂಬೆಯ ಮಾಡಿ ನಲಿಯಲು.. ನೀನೀಗ ಇದ್ದಿದ್ದರೆ ಬಹುಶಃ ನನ್ನೆಲ್ಲ ಕ್ಷಣಗಳು ಅಪ್ಪನೆಂಬ ಮಂತ್ರ ಪಠಣವೇ! ಹೊಸ ಪುಸ್ತಕಗಳೋದುವ ನನ್ನ ನೆಚ್ಚಿನ ಸಹಪಾಠಿಯಾಗುತ್ತಿದ್ದೆ ಬಂದ ಹೊಸ ಸಿನಿಮಾಗಳ ನನ್ನ ಖಾಸಗಿ ವಿಮರ್ಶಕನಾಗುತ್ತಿದ್ದೆ! ಎಲ್ಲ ಪ್ರಚಲಿತ ವಿಷಯಗಳ ಮೆಚ್ಚಿನ ವಿಶ್ಲೇಷಕನಾಗುತ್ತಿದ್ದೆ! ನೀನೀಗ ಇದ್ದಿದ್ದರೆ ಬಹುಶಃ ಪ್ರತಿ ಸಂದೇಹಗಳಿಗೂ ನನ್ನ ನಡೆದಾಡುವ ಶಬ್ದಕೋಶ, ನುಡಿ ಕೋಶ, ಜ್ಞಾನ ಭಂಡಾರವೇ, ಗೂಗಲ್ ಗಿಂತ ಆಪ್ತ ಶೋಧಕ ನೀನೇ ಆಗಿರುತ್ತಿದ್ದೆ ಅಪ್ಪ! ನೀನೀಗ ಇದ್ದಿದ್ದರೆ ಬಹುಶಃ ನನ್ನ ಮಗುವಿಗೆ ಅತ್ಯುತ್ತಮ ಸ್ನೇಹಿತನಾಗಿರುತ್ತಿದ್ದೆ ಅದರೆಲ್ಲ ಆಟಪಾಠಗಳ ಅಚ್ಚುಮೆಚ್ಚಿನ ಸಹವರ್ತಿ ನೀನೇ ಆಗಿರುತ್ತಿದ್ದಿ ಅಪ್ಪ! ಅಮ್ಮನ ಪ್ರೀತಿಯ ಲಾಲನೆಯೊಂದಿಗೆ ನಿನ್ನ ವಾತ್ಸಲ್ಯದ ಪಾಲನೆ! ನೀನೀಗ ಇದ್ದಿದ್ದರೆ “ನೀನೀಗ ಇದ್ದಿದ್ದರೆ” ಎಂದು ಹೇಳುವ ಪ್ರಮೇಯವೇ ಇರುತ್ತಿರಲಿಲ್ಲ ಅಪ್ಪ!! ***********

ಕಾವ್ಯಯಾನ Read Post »

You cannot copy content of this page

Scroll to Top