ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಸಮಾಜ ಕೆ.ಸುಜಾತಾ ಗುಪ್ತ ಬಗ್ಗಿದವನ ಬೆನ್ನಿಗೊಂದು ಗುದ್ದು ಇರಲು ಹಾಗೆ ಮತ್ತೊಂದು ಗುದ್ದು ಇದಾಗಿದೆ ಪ್ರಸ್ತುತ ಸಮಾಜದ ನೀತಿ ಮೂರ್ಖತನದ ಪರಮಾವಧಿ ದಾಟಿರಲು ಶಾಂತಿಯ ತತ್ವವ- ಮಹತ್ವವ ಅರಿವ ಮನಗಳುಹೆಣಗಳಾಗಿವೆ. ಈಗೆಲ್ಲಿದೆ..ಶಾಂತಿ ಗೆ ತಾಣ!? ಎಲ್ಲಿದೆ ಶಾಂತಿಗೆ ಪ್ರಾಮುಖ್ಯತೆ.. ಬುದ್ಧನನ್ನು ನೆನೆಯೆ ಪೆದ್ದನೆನುವರು.. ‘ ಶಾಂತಿ ‘ ಅಸಹಾತೆಯಕತೆಯ ಚಿಹ್ನೆ ಎನುವರು.. ಕಲ್ಪನೆಯಲ್ಲಿ ‘ಶಾಂತಿ ಮಂತ್ರ’ ಚಂದವೋ ಚಂದ.. ವಾಸ್ತವದಲ್ಲಿ ಎಲ್ಲವೂ ಮಿಥ್ಯವೋ ಮಿಥ್ಯ… ********

ಕಾವ್ಯಯಾನ Read Post »

ಇತರೆ

ಪಾಟೀಲ ಪುಟ್ಟಪ್ಪ

ಪ್ರಪಂಚ ತೊರೆದ ಪಾಪು ನಾಡೋಜ, ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ, ಡಾ.ಪಾಟೀಲ ಪುಟ್ಟಪ್ಪ ಅಸ್ತಂಗತ..! ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ (102) ಅವರು ವಿಧಿವಶರಾಗಿದ್ದಾರೆ… ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ… ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾತನಾಡಿದ್ದ ಸಿಎಂ, ರಾಷ್ಟ್ರೀಯ ಬಸವ ಪುರಸ್ಕಾರದೊಂದಿಗೆ ಹತ್ತು ಲಕ್ಷ ರೂ. ನಗದು ನೀಡಲಾಗುವುದು. ಅಲ್ಲದೇ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದರು… ನಾಡೋಜ ಪಾಪು ಅವರು, ವಿಪರೀತ ಜ್ವರ, ಉಸಿರಾಟ ತೊಂದರೆ ಹಾಗೂ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ದೀರ್ಘಕಾಲದ ಪುಪ್ಪಸ ತೊಂದರೆ ಹಾಗೂ ತಲೆಯಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಮಾಡಲಾಗಿತ್ತು. ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡು ಬಂದಿದ್ದು, ಈ ಎಲ್ಲಾ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗಿತ್ತು… ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಯಿತು. ಆದರೆ ಶಸ್ತ್ರಚಿಕಿತ್ಸೆ ನಂತರ ಆರೋಗ್ಯ ಗಂಭೀರವಾಗಿತ್ತು. ಬಳಿಕ ಕೃತಕ ಉಸಿರಾಟ ಯಂತ್ರ (ವೆಂಟಿಲೇಟರ್) ಅಳವಡಿಸಲಾಗಿತ್ತು. ದೀರ್ಘಕಾಲ ಹಾಸಿಗೆ ಹಿಡಿದ ಪರಿಣಾಮ ಪಲ್ಮನರಿ ಥ್ರಂಬೋ ಎಂಬೋಲಿಸಂ ಆಗಿದೆ ಎಂದು ತಜ್ಞ ವೈದ್ಯ ಪ್ರೊ.ಡಿ.ಎಂ.ಕಬಾಡಿ ತಿಳಿಸಿದ್ದರು… ಹೀಗೆಯೇ ಕೊನೆಗೂ ಅಸ್ತಂಗತರಾದರೂ ಡಾ. ಪಾಟೀಲ ಪುಟ್ಟಪ್ಪನವರು..! ಡಾ.ಪಾಟೀಲ ಪುಟ್ಟಪ್ಪನವರ ‘ಪ್ರಪಂಚ’..!– ಕನ್ನಡ ನಾಡಿಗೆ ಕೀರ್ತಿ ತಂದವರು ಪುಟ್ಟಪ್ಪದ್ವಯರು. ಸಾಹಿತ್ಯ ಲೋಕಕ್ಕೆ ಕುವೆಂಪು. ಪರ್ತಕರ್ತರಾಗಿ ಪ್ರಪಂಚ ಖ್ಯಾತಿಯ ಪಾಟೀಲ ಪುಟ್ಟಪ್ಪ ಅಥವಾ ಪಾ.ಪುರವರು. ಡಾ.ಪಾಪು ಹುಟ್ಟಿದ್ದು ಹಾವೇರಿ ತಾಲ್ಲೂಕಿನ ಕುರುಬಗೊಂಡ ಹಳ್ಳಿಯಲ್ಲಿ. ತಂದೆ ಸಿದ್ಧಲಿಂಗಪ್ಪ, ತಾಯಿ ಮಲ್ಲಮ್ಮ… ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದ ಊರು ಮತ್ತು ಹಾವೇರಿಯಲ್ಲಿ ಮುಗಿಸಿದರು. ಲಿಂಗರಾಜ ಕಾಲೇಜ ಸೇರಿ ಕಾನೂನು ಪದವಿ ಗಳಿಸಿದರು. ಬಿಜಾಪುರದಲ್ಲಿ ವಕೀಲ ವೃತ್ತಿ ಆರಂಭ ಮಾಡಿದರು. ಕಕ್ಷಿಗಾರರಿಲ್ಲದೇ ಸಂಪಾದನೆ ಖೋತವಾಯಿತು. ಊಟಕ್ಕೂ ತತ್ವಾರ. ಉದ್ಯೋಗಕ್ಕಾಗಿ ಮುಂಬೈಗೆ ಪಯಣ ಬೆಳೆಸಿದರು. ಅವರು ಕೋರ್ಟಿಗಿಂತ ಪತ್ರಿಕಾ ಕಚೇರಿಗಳಿಗೆ ಹೋದದ್ದೇ ಹೆಚ್ಚು. ಫ್ರೀ ಪ್ರೆಸ್ ಜರ್ನಲ್‌ದ ಸದಾನಂದ, ಬಾಂಬೆ ಕ್ರಾನಿಕಲ್ ಪತ್ರಿಕೆಯು ಸೈಯದ್ ಅಬ್ದುಲ್ಲಾ ಮತ್ತು ಎ.ಜಿ.ತೆಂಡೂಲ್ಕರ್ ಸ್ನೇಹ, ಪತ್ರಿಕೋದ್ಯಮದ ಹುಚ್ಚು ಹಿಡಿಸಿತು… ಕ್ಯಾಲಿಫೋರ್ನಿಯಾಗೆ ತೆರಳಿ ಪತ್ರಿಕೋದ್ಯಮದ ಎಂ.ಎಸ್‌ಸಿ. ಗಳಿಸಿ ಹಿಂದಿರುಗಿ ಬಂದು ಪತ್ರಿಕಾರಂಗ ಪ್ರವೇಶ ಮಾಡಿದರು… ೧೯೪೭ರಲ್ಲಿ ವಿಶಾಲ ಕರ್ನಾಟಕ, ೧೯೫೨ರಲ್ಲಿ ನವಯುಗ, ೧೯೫೪ರಲ್ಲಿ ಪ್ರಪಂಚ ಸಾಪ್ತಾಹಿಕ, ೧೯೫೬ರಲ್ಲಿ ಸಂಗಮ ಮಾಸಿಕ, ೧೯೫೯ರಲ್ಲಿ ವಿಶ್ವವಾಣಿ ದೈನಿಕ, ೧೯೬೧ರಲ್ಲಿ ಮನೋರಮ ಸಿನಿಮಾ ಪಾಕ್ಷಿಕ, ೧೯೬೪ರಲ್ಲಿ ಸ್ತ್ರೀ ಮಾಸಿಕ ಮುಂತಾದ ಹಲವಾರು ಪತ್ರಿಕೆಗಳ ಸಂಪಾದಕತ್ವ‌ ವಹಿಸಿದ್ದರು… ಮೊನಚಿನ ಬರಹಕ್ಕೆ ಬೆರಗಾಗಿ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಪದವಿ ಪಡೆದರು. ಯಾವುದೇ ಕಚೇರಿ ನೇರಪ್ರವೇಶ, ಕನ್ನಡ ಬಳಕೆಗೆ ಆಗ್ರಹ. ಕನ್ನಡ ದುರವಸ್ಥೆ ಕಂಡು ಖಂಡನೆ ಇತ್ಯಾದಿ ಇದ್ದೇ ಇತ್ತು… ಅಧಿಕಾರಿಗಳಿಗೆ ಚಾಟಿ ಪ್ರಹಾರವೂ‌ ನಡದೇ ಇತ್ತು. ಇವರು ಕನ್ನಡಕ್ಕೆ ಗಳಿಸಿಕೊಟ್ಟ ಸ್ಥಾನಮಾನ ಅಪಾರ. ಚರಿತ್ರಾರ್ಹ ಕಾರ‍್ಯ ಸಾಧನೆಯಾಗಿತ್ತು… ಹಲವಾರು ಸಾಹಿತ್ಯ ಕೃತಿಗಳ ರಚನೆಯೂ ನಡೆದೇ ಇತ್ತು. ಸಾವಿನ ಮೇಜುವಾನಿ, ಗವಾಕ್ಷ ತೆರೆಯಿತು, ಶಿಲಾಬಾಲಿಕೆ ನುಡಿಗಳು-ಕಥಾಸಂಕಲನಗಳು ; ಸರ್ ಸಿದ್ದಪ್ಪ ಕಂಬಳಿ, ಹೊಸಮನಿ ಸಿದ್ದಪ್ಪನವರು- ಜೀವನ ಚರಿತ್ರೆ ; ನನ್ನೂರು ಈ ನಾಡು, ಹೊಸದನ್ನ ಕಟ್ಟೋಣ, ಬದುಕುವ ಮಾತು-ಪ್ರಬಂಧ ಸಂಕಲನಗಳು ಮುಖ್ಯವಾದ ಅವರ ಕೃತಿಗಳು… ಡಾ.ಪಾಟೀಲ ಪುಟ್ಟಪ್ಪನವರನ್ನು ಅರಸಿಬಂದ ಪ್ರಶಸ್ತಿಗಳು ಹಲವಾರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ, ರಾಜ್ಯಸಭಾ ಸದಸ್ಯತ್ವ, ೨೦೦೩ರಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬಸವಶ್ರೀ ಪ್ರಶಸ್ತಿ, ಟಿ.ಎಸ್.ಆರ್. ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಮುಂತಾದುವುಗಳು. ಅಭಿಮಾನಿಗಳು ಅರ್ಪಿಸಿದ ಗೌರವಗ್ರಂಥ ‘ಪ್ರಪಂಚದ ಪಾಪು’ ಮತ್ತು ‘ನಾನು ಪಾಟೀಲ ಪುಟ್ಟಪ್ಪ.’ ಮುಂತಾದವುಗಳು..! ಇಷ್ಟು ಹೇಳಿ ಡಾ.ಪಾಟೀಲ ಪುಟ್ಟಪ್ಪನವರ ಬಗೆಗೆ ಮಾತು ಮುಗಿಸುತ್ತೇನೆ… ‌ ‌‌‌‌‌‌ ‌ — ಕೆ.ಶಿವು.ಲಕ್ಕಣ್ಣವರ

ಪಾಟೀಲ ಪುಟ್ಟಪ್ಪ Read Post »

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ತಗಿ ನಿನ್ನ ತಂಬೂರಿ ಲೇಖಕಿ-ಚಂದ್ರಪ್ರಭ ದಾವಲ್ ಸಾಬ್ ಭಾರತೀಯ ಸನಾತನವಾದಿ ಆಧ್ಯಾತ್ಮವನ್ನು ಲೇವಡಿಗೊಳಿಸುವಂತೆ ತತ್ವಪದಗಳನ್ನು ಕಟ್ಟಿರುವ ಈ ಕವಿಲೋಕ ಬದುಕಿನ ಮಹತಿಯನ್ನು ಎತ್ತಿ ಹಿಡಿಯುತ್ತಾನೆ. ಅದೇ ಕಾಲಕ್ಕೆ ಆಳುವ ವರ್ಗಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ಒದ್ದಾಡುತ್ತಿರುವ ಸಾಮಾನ್ಯ ಜನತೆಯ ಬದುಕಿನ ಸಂಕಷ್ಟಗಳನ್ನು ಕಾಣಿಸುತ್ತಾನೆ. ಇಂಥ ಸಂಕಟ ತಳಮಳಗಳಿಂದ ಕೂಡಿ ಜನಸಾಮಾನ್ಯರ ಬದುಕು ಹೀನಸ್ಥಿತಿಯಲ್ಲಿದ್ದಿರುವಾಗ ಈ ನಾಡನ್ನು ಪುಣ್ಯ ಭೂಮಿ ಪಾವನ ನಾಡು ಎಂದು ಹೇಳುತ್ತಿರುವುದರ ಔಚಿತ್ಯವೇನು? ಇಂಥ ಹೇಳಿಕೆಗಳು ಸಂಕಟವನ್ನೆಲ್ಲ ಮುಚ್ಚಿಕೊಂಡು ನಗುವಿನ ಮುಖವಾಡ ಧರಿಸುವ ಔದಾರ್ಯಕ್ಕೆ ಒಳಗಾಗಿವೆ. ಭಾರತೀಯರ ಪ್ರಾಚೀನ ಬದುಕು ಸುಖದ ಸುಪತ್ತಿಗೆಯಾಗಿತ್ತು. ಅಲ್ಲಿ ಎಲ್ಲ ಬಗೆಯ ಸಮಾನತೆ ಇತ್ತು.ವೈದಿಕಯುಗದಲ್ಲಿ ಶಾಂತಿ,ಸಮೃದ್ದಿಯಿತ್ತು ಎಂಬ ಹೇಳಿಕೆಗಳು ಡಾಂಭಿಕತೆಯನ್ನು ಮೆರೆಯುತ್ತಿವೆ. ಹಸಿ ಸುಳ್ಳನ್ನು ಪ್ರದರ್ಶಿಸುತ್ತಿವೆ. ವಾಸ್ತವವೆಂದರೆ ರಾಜಪ್ರಭುತ್ವದ ಕಾಲದಲ್ಲಿ ಜನಸಾಮಾನ್ಯರ ಬದುಕು ಅತಿ ಹೆಚ್ಚು ಸಂಕಟ ಮತ್ತು ಶೋಷಣೆಗೆ ಒಳಗಾಗಿತ್ತು ಎಂಬುದನ್ನು ಶರೀಫರ ತತ್ವಪದಗಳಲ್ಲಿ ಕಂಡುಬರುತ್ತದೆ ಎಂಬಂತಹ ವಿಚಾರ ಚಂದ್ರಪ್ರಭಾ ರವರ ಈ ಹೊತ್ತಿಗೆಯಲ್ಲಿ ಕಾಣುತ್ತೇವೆ. ಬೌದ್ಧಿಕ ಬದುಕಿನ ದುಃಖ ದುಮ್ಮಾನಗಳನ್ನು ಧಿಕ್ಕರಿಸಿ ಜನನ ಮರಣ ಭವ ಚಕ್ರದಿಂದ ಪಾರಾಗುವ ಮುಕ್ತಿ ಸಾಧನೆಯನ್ನು ಸಾಧಿಸಬಹುದು. ಲೋಕ ಜೀವನವು ಹಲವು ವ್ಯಾಧಿಗಳಿಂದ ಕೂಡಿದೆ.ಹಸಿವು ನಿದ್ದೆ ನೀರಡಿಕೆ ನೆರೆಹಾವಳಿ ಅತಿವೃಷ್ಟಿ ಅನಾವೃಷ್ಟಿ ಬಡತನ ಅಜ್ಞಾನ ಮೌಢ್ಯ ಮೊದಲಾದವುಗಳು ಇಡುಕಿರಿದು ಭವ ಸಾಗರವು ಘೋರವಾಗಿದೆ.ಈ ಭವ ಸಾಗರದಿಂದ ಶಾಶ್ವತವಾಗಿ ಮುಕ್ತಿ ಪಡೆಯಲು ಆಧ್ಯಾತ್ಮ ಮಾರ್ಗವೇ ಸಾಧನ. ಜೀವ ಜಗತ್ತು, ಈಶ್ವರ ಮಾಯೆ ಮೊದಲಾದ ತತ್ವಗಳ ಹುಡುಕಾಟ, ನಂತವಾದ ಈ ಬದುಕಿನಿಂದ ಅನಂತವಾದದತ್ತ ಚಲಿಸುವುದೇ ಜೀವನದ ಗುರಿಯಾಗಿದೆ. ಹೀಗೆ ಇನ್ನೂ ಹಲವಾರು ವಿಷಯಗಳನ್ನು ಶ್ರೀಮತಿ.ಚಂದ್ರಪ್ರಭಾ ರವರು “ತಗಿ ನಿನ್ನ ತಂಬೂರಿ” ಎಂಬ ಕಿರುಹೊತ್ತಿಗೆಯಲ್ಲಿ ಸವಿವರವಾಗಿ ಚರ್ಚಿಸಿದ್ದಾರೆ.

ಪುಸ್ತಕ ವಿಮರ್ಶೆ Read Post »

ಇತರೆ

ಪರಿಚಯ

ಹನುಮಾಕ್ಷಿ ಗೋಗಿ. ಅನನ್ಯ ಶಾಸನ ಸಂಶೋಧಕಿ, ಸಾಹಿತಿ, ಪ್ರಕಾಶಕಿ ಹನುಮಾಕ್ಷಿ ಗೋಗಿ..! ಸಂಶೋಧಕಿ ಹನುಮಾಕ್ಷಿ ಗೋಗಿಯವರು ನನಗಷ್ಟೇಯಲ್ಲ ನಮ್ಮ ಗೆಳೆಯರಿಗೆ ಪರಿಚಯವಾಗಿದ್ದು ಇದೇ ಧಾರವಾಡದಲ್ಲಿ ನೆಲಸಿದ್ದ ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಅಗಡಿ ಗ್ರಾಮದವರಾಗಿದ್ದ ನನ್ನ ಅಷ್ಟೇ ಅಲ್ಲ ಅನೇಕಾನೇಕ ನಮ್ಮ ಗೆಳೆಯರ ಮಾರ್ಗದರ್ಶಕರಾಗಿದ್ದ ಮೋಹನ ನಾಗಮ್ಮನವರ ಮೂಲಕ. ಮೋಹನ ನಾಗಮ್ಮನವರಿಗೆ ಇದ್ದ ಅನೇಕಾನೇಕ ಶಿಷ್ಯ ಬಳಗದಲ್ಲಿ ನಾನು, ರೈತ ಕವಿಯಾದ ಚಂಸು ಅಂದರೆ ಚಂದ್ರಶೇಖರ ಪಾಟೀಲ ಮತ್ತು ರೈತ, ನ್ಯಾಯವಾದಿ ಮತ್ತು ಲೇಖಕ ವಿಜಯಕಾಂತ ಪಾಟೀಲಗಳು ತೀರಾ ಹತ್ತಿರದ ಶಿಷ್ಯರಾಗಿದ್ದೆವು. ಆ ಸಮಯದಲ್ಲಿ ಸಿಕ್ಕವರು ಅಂದರೆ ನಮಗೆ ತೀರಾ ಪರಿಚಿತವಾದರು ಸಂಶೋಧಕಿ ಹನುಮಾಕ್ಷಿ ಗೋಗಿಯವರು… ಹನುಮಾಕ್ಷಿ ಗೋಗಿಯವರು ಬರೀ ಸರ್ಕಾರಿ ಅಧಿಕಾರಿಗಳು ಮಾತ್ರ ಆಗಿರಲಿಲ್ಲ. ಅವರೊಬ್ಬ ಅನನ್ಯ ಲೇಖಕಿಯಾಗಿದ್ದರು. ಅದರಲ್ಲೂ ಅವರೊಬ್ಬ ಶಾಸನಗಳ ಸಂಶೋಧಕಿಯಾಗಿದ್ದರು. ಅವರ ಸಂಶೋಧನೆ ತೀರಾ ಹಸಿವಿನಿಂದ ಕೂಡಿತ್ತು, ಅಂದರೆ ಅವರು ಶಾಸನ ಅಧ್ಯಯನದಲ್ಲಿ ಅಷ್ಟೊಂದು ತೀರಾ ಚಿಕಿತ್ಸಕರಾಗಿದ್ದರು. ಶಾಸನಗಳ ಹುಡುಕಾಟದಲ್ಲಿ ಭಾರೀ ಹಸಿವು ಉಳ್ಳವರು ಆಗಿದ್ದರು ಹನುಮಾಕ್ಷಿ ಗೋಗಿಯವರು… ಮಹಿಳಾ ಸಾಹಿತ್ಯದಲ್ಲಿ ಹೆಸರು ಮಾಡಿದವರೂ ಆಗಿದ್ದರು. ಹಾಗಾಗಿಯೇ ಹನುಮಾಕ್ಷಿ ಗೋಗಿಯವರು ‘ಮಹಿಳಾ ಸಾಹಿತ್ಯಕಾ’ ಎಂಬ ಪ್ರಕಾಶನವನ್ನೂ ತೆರೆದು ನಾಡಿನ ಪ್ರಮುಖ ಲೇಖಕಿಯರ ಸಾಹಿತ್ಯವನ್ನು ಪ್ರಚುರಪಡಿಸಿದವರು ಮತ್ತು ಈಗಲೂ ಆ ನಿಟ್ಟಿನ ಕೆಲಸದಲ್ಲಿ ತೊಡಗಿಕೊಂಡವರು. ಇವರ ಪ್ರಕಾಶನದಿಂದ ಅಮೂಲ್ಯ ಸಾಹಿತ್ಯ ಒಡಮೂಡಿದೆ. ಹಾಗಾಗಿಯೇ ತಾವೊಬ್ಬ ಸಾಹಿತಿಯಾಗಿಯೂ ಇತರ ಪ್ರಮುಖ ಮಹಿಳಾ ಸಾಹಿತಿಗಳನ್ನೂ ಹೊರತಂದವರು ಹನುಮಾಕ್ಷಿ ಗೋಗಿಯವರು… ಮುಖ್ಯವಾಗಿ ಇವರೊಬ್ಬ ಶಿಲಾ ಶಾಸನಗಳ ಸಂಶೋಧಕಿಯಾಗಿ ಮಾಡಿದ ಕೆಲಸ ಅಮೂಲ್ಯ ಮತ್ತು ಅನನ್ಯವಾದದು. ಇಂತಹ ಹನುಮಾಕ್ಷಿ ಗೋಗಿಯವರ ಬಗೆಗೆ ಒಂದು ಕಿರು ಟಿಪ್ಪಣಿ ಹೀಗಿದೆ… ಹನುಮಾಕ್ಷಿ ಗೋಗಿ ಅವರು ೧೯೫೫ ಜೂನ ೧ ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೈಚಬಾಳ ಗ್ರಾಮದಲ್ಲಿ ಜನಿಸಿದರು… ಇವರು ಮೂಲತಃ ಅವಿಭಜಿತ ಗುಲ್ಬರ್ಗಾ ಅಥವಾ ಕಲಬುರ್ಗಿ ಜಿಲ್ಲೆಯವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಮೂರು ಚಿನ್ನದ ಪದಕಗಳೊಂದಿಗೆ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅದೇ ವಿಶ್ವ ವಿದ್ಯಾಲಯದಿಂದ ಶಾಸನ ಶಾಸ್ತ್ರದಲ್ಲಿಯೂ ಅವರು ಪ್ರಥಮ ಶ್ರೇಣಿಯೊಂದಿಗೆ ಪ್ರಥಮ ಸ್ಥಾನವನ್ನೂ ಪಡೆದುಕೊಂಡರು. ಸದ್ಯ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆಯ ಸೇವೆಯಲ್ಲಿದ್ದಾರೆ. ಈಗ ಧಾರವಾಡದಲ್ಲಿ ನೆಲೆಸಿರುವ ಹನುಮಾಕ್ಷಿ ಗೋಗಿಯವರು, ಲೇಖಕಿ, ಸಂಶೋಧಕಿ ಹಾಗೂ ಪ್ರಕಾಶಕಿಯಾಗಿಯೂ ಇದ್ದಾರೆ… ಇವರು ‘ಮಹಿಳಾ ಸಾಹಿತ್ಯಿಕಾ’ ಎನ್ನುವ ಪ್ರಕಾಶನ ಸಂಸ್ಥೆಯನ್ನು ಪ್ರಾರಂಭಿಸಿ, ಅದರ ಮೂಲಕ ಅನೇಕಾನೇಕ ಲೇಖಕಿಯರ ಸಾಹಿತ್ಯದ ವಿವಿಧ ಪ್ರಕಾರಗಳ ೪9ಕ್ಕೂಹೆಚ್ಚು ಕೃತಿಗಳನ್ನು ಪ್ರಕಟಗೊಳಿಸಿದ್ದಾರೆ… ಶಾಸನಗಳ ಆಕರ ಸಂಶೋಧಕಿಯಾಗಿರುವ ಇವರ ಕೃತಿಗಳು ಹೀಗಿವೆ– ವ್ಯಾಸಂಗ (೧೯೮೩). ಮುದ್ನೂರು ಮತ್ತು ಯಡ್ರಾಮಿ ಶಾಸನಗಳು (೧೯೯೩) (ಡಾ. ಬಿ. ಆರ್. ಹಿರೇಮಠ ಜೊತೆಯಲ್ಲಿ). ಸುರಪುರ ತಾಲೂಕಿನ ಶಾಸನಗಳು (೧೯೯೪). ಕಲಬುರ್ಗಿ ಜಿಲ್ಲೆಯ ಶಾಸನಗಳು (೧೯೯೫). ಕರ್ನಾಟಕ ಭಾರತಿ ಸೂಚಿ (೨೦೦೨). ಅನುಶಾಸನ (೨೦೦೨). ಉಪ್ಪಾರ ಹಣತೆ (೨೦೦೨). ಬೀದರ ಜಿಲ್ಲೆಯ ಶಾಸನಗಳು (೨೦೦೫). ಕಾಳಾಮುಖ ಮತ್ತು ಪಾಶುಪತ ದೇವಾಲಯಗಳು (೨೦೦೭). ಲಕ್ಕುಂಡಿ ಶಾಸನಗಳು (೨೦೦೮). ಡಂಬಳ: ಸಾಂಸ್ಕೃತಿಕ ಅಧ್ಯಯನ (೨೦೦೮) (ಡಾ. ಪಿ. ಕೆ. ರಾಥೋಡರ ಜೊತೆಯಲ್ಲಿ). ಜಗದ್ಗುರು ತೋಂಟದಾರ್ಯ ಮಠದ ದಾಖಲು ಸಾಹಿತ್ಯ (೨೦೦೯) (ಡಾ. ಪಿ. ಕೆ. ರಾಥೋಡ ಜೊತೆಯಲ್ಲಿ). ನವಿಲುಗುಂದ ಸಿರಿ (ಶತಮಾನೋತ್ಸವ ಸ್ಮರಣ ಸಂಚಿಕೆ) (೨೦೦೯). ಅಣ್ಣಯ್ಯ ತಮ್ಮಯ್ಯಗಳ ಪುರಾಣ (೨೦೧೦) (ಡಾ. ಪಿ. ಕೆ. ರಾಥೋಡ ಜೊತೆಯಲ್ಲಿ). ಚೈತನ್ಯಶೀಲೆ ( ಸರೋಜಿನಿ ಚವಲಾರ ಅವರ ಸಂಭಾವನಾ ಗ್ರಂಥ) (೨೦೧೧). ಹುಬ್ಬಳ್ಳಿ ತಾಲೂಕಿನ ಶಾಸನಗಳು (೨೦೧೩). ಡಾ.ಆರ್.ಎನ್.ಗುರವ ಸಂಪ್ರಬಂಧಗಳು (೨೦೧೪). ರಾಜಮನೆತನದ ಚರಿತ್ರೆಗಳು (೨೦೧೪). ಲಕ್ಷ್ಮೇಶ್ವರದ ಶಾಸನಗಳು (೨೦೧೫). ದಂಡಿನ ದಾರಿ (೨೦೧೬). ಯಾದಗಿರಿ ಜಿಲ್ಲೆಯ ಶಾಸನಗಳು (೨೦೧೬). ಇವರ ಸಂಶೋಧನೆಗೆ ಸಂದ ಸನ್ಮಾನ ಮತ್ತು ಪುರಸ್ಕಾರಗಳು-– ೧೯೯೧ – ಆಡಳಿತಾತ್ಮಕ ಸೇವೆಗೆ ಸನ್ಮಾನ. ೪ನೆಯ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ನರಗುಂದದ ಪುರಸ್ಕಾರ. ೧೯೯೫ – ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ, ಬೆಂಗಳೂರು. ೧೯೯೬ – ರಾಜ್ಯ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಬೆಂಗಳೂರು. ೨೦೦೪ – ಮಾತೋಶ್ರೀ ರತ್ನಮ್ಮ ಹೆಗ್ಗಡೆ ಬಹುಮಾನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ. ೨೦೦೫ – ಡಾ. ಜ. ಚ. ನಿ. ಪ್ರಶಸ್ತಿ, ರಾಜೂರು. ೨೦೦೫ – ಬಾಲಕೃಷ್ಣ ಪ್ರಶಸ್ತಿ, ನರೇಗಲ್ಲ. ೨೦೦೫ – ಲೇಪಾಕ್ಷಸ್ವಾಮಿ ಪ್ರಶಸ್ತಿ, ಬೆಂಗಳೂರು. ೨೦೦೬ – ಡಾ. ಶೈಲಜ ಉಡಚಣ ಪ್ರಶಸ್ತಿ, ಕಲಬುರ್ಗಿ. ೨೦೦೬ – ರುಕ್ಮಿಣಿಬಾಯಿ ಸ್ಮಾರಕ ಪ್ರಶಸ್ತಿ, ಬೆಂಗಳೂರು. ೨೦೦೭- ಡಾ. ದ. ರಾ. ಬೇಂದ್ರೆ ಪ್ರಶಸ್ತಿ, ಅಡ್ನೂರು. ೨೦೦೯ – ಡಾ. ಬಾ. ರಾ. ಗೋಪಾಲ ಪ್ರಶಸ್ತಿ, ಇತಿಹಾಸ ಅಕ್ಯಾಡಮಿ, ಬೆಂಗಳೂರು. ೨೦೧೪ – ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ಇನ್ಫೋಸಿಸ್ ಫೌಂಡೇಶನ್ ಪ್ರಶಸ್ತಿ. ೨೦೧೪ – ಚಂದ್ರಗಿರಿ ಮಹೋತ್ಸವ ಸಮಿತಿ ವತಿಯಿಂದ ಶಾಸನ ಸಾಹಿತ್ಯ ಪ್ರಶಸ್ತಿ. ೨೦೧೫ – ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ೨೦೧೨ರ ಗೌರವ ಪ್ರಶಸ್ತಿ. ೨೦೧೫ – ಕರ್ನಾಟಕ ಲೇಖಕಿಯರ ಸಂಘದಿಂದ ಪುಸ್ತಕಕ್ಕೆ ಜಯಮ್ಮ ಕರಿಯಣ್ಣ ದತ್ತಿ ಬಹುಮಾನ. ೨೦೧೫ – ಅಖಿಲ ಭಾರತ ಕವಿಯಿತ್ರಿಯರ ಸಮ್ಮೇಳನದಲ್ಲಿ ಲೋಪಾಮುದ್ರಾ ಪ್ರಶಸ್ತಿ. ೨೦೧೫ – ಜಗದ್ಗುರು ತೋಂಟದಾರ್ಯ ಮಠದಿಂದ ಸನ್ಮಾನ. ೨೦೧೫ – ಕಸಾಪದಿಂದ ಟಿ.ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ. ೨೦೧೬ – ಮಲ್ಲೆಪುರಂ ಪ್ರತಿಷ್ಠಾನ ಸಾಹಿತ್ಯ ಪ್ರಶಸ್ತಿ. ೨೦೧೭ – ಬೇಲೂರು ಬಸವಕಲ್ಯಾಣದ ಉರಿಲಿಂಗ ಪೆದ್ದಿ ಸಾಹಿತ್ಯ ಪ್ರಶಸ್ತಿ. ಹೀಗೆಯೇ ವಿವಿಧ ಪುರಸ್ಕಾರ ಮತ್ತು ಪ್ರಶಸ್ತಿಗಳು ಬಂದಿವೆ ಹನುಮಾಕ್ಷಿ ಗೋಗಿಯವರಿಗೆ… ಹೀಗೆಯೇ ಒಬ್ಬ ಸರ್ಕಾರಿ ಅಧಿಕಾರಿಯಾಗಿಯೂ ಶಾಸನ ಸಾಹಿತ್ಯ ಮತ್ತು ಇತರೆ ಸಾಹಿತ್ಯದ ಕೃಷಿಯಲ್ಲಿ ತೊಡಗಿಸಿಕೊಂಡರು ಹನುಮಾಕ್ಷಿ ಗೋಗಿಯವರು..! *********** — ಕೆ.ಶಿವು.ಲಕ್ಕಣ್ಣವರ

ಪರಿಚಯ Read Post »

ಪುಸ್ತಕ ಸಂಗಾತಿ

ಪುಸ್ತಕ ಬಿಡುಗಡೆ

ಸಂಕೋಲೆಗಳ ಕಳಚುತ್ತ ಕೃತಿ-ಸಂಕೋಲೆಗಳಕಳಚುತ್ತ ಕವಿ-ಕು.ಸ.ಮಧುಸೂದನ ಪ್ರಕಾಸಕರು- ಕಾವ್ಯಸ್ಪಂದನ ಪ್ರಕಾಶನ,ಬೆಂಗಳೂರು. ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆಗೊಂಡ ‘ಸಂಕೋಲೆಗಳ ಕಳಚುತ್ತಲ ಕವನಸಂಕಲನ        ಕವಿ ಕು.ಸ.ಮಧುಸೂದನ್ ಅವರ ಕವನಸಂಕಲನ ’ಸಂಕೋಲೆಗಳ ಕಳಚುತ್ತ’ ಕೃತಿಯು 15-03-2020ರ ಬಾನುವಾರ ಲೋಕಾರ್ಪಣೆಗೊಂಡಿತು.    ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಭೀತಿಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ ನಡೆಸದೆ, ಫೇಸ್ ಬುಕ್, ಟ್ವೀಟರ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಪುಸ್ತಕವನ್ನು ವಿಭಿನ್ನವಾಗಿ ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು.ಈ ಲೈವ್ ಕಾರ್ಯಕ್ರಮದಲ್ಲಿ ಮಾತಾಡಿದ ಕವಿಯಿತ್ರಿ ಅವ್ಯಕ್ತ ಅವರು ಮದುಸೂದನ್ ಅವರ ಕಾವ್ಯ ಜನಪರ ಕಾವ್ಯವಾಗಿದ್ದು, ಅವರಿಂದ ಮತ್ತಷ್ಟುಕೃತಿಗಳು ಮೂಡಿಬರಲೆಂದು ಹಾರೈಸಿದರು. ನಂತರ ಮಾತಾಡಿದ ಕವಿ ಮದುಸೂದನ್ ಅವರು ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಸಾಹಿತ್ಯವನ್ನು ಬೆಳೆಸಬೇಕೆಂದು ಕರೆ ನೀಡಿದರು. ಕೃತಿ ಬಿಡುಗಡೆಯ ಈ ಕಾರ್ಯಕ್ರಮವನ್ನು ಸಾವಿರಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದರು. ಸಂಕೋಲೆಗಳ ಕಳಚುತ್ತಆನ್ ಲೈನ್ ಮೂಲ ಪುಸ್ತಕ ಕೊಳ್ಳುವ ಮಾಹಿತಿಪುಸ್ತಕದ ಬೆಲೆ-150=00 ರೂಪಾಯಿಗಳುIFSC code:CNRBOOO2698A/c:. 1145101036761Bhadravathi RamachariCanara bank,. Rajajinagar 2nd Block. ಮೇಲಿನ ಖಾತೆಗೆ ಹಣ ಹಾಕಿಕೆಳಗಿನ ವಾಟ್ಸಪ್ ನಂಬರಿಗೆ ವಿಳಾಸ ಕಳುಹಿಸಿನಂಬರ್-8861495610ಇಂದ: ಕಾವ್ಯ ಸ್ಪಂದನ ಪ್ರಕಾಶನ,ಬೆಂಗಳೂರು ***********************************

ಪುಸ್ತಕ ಬಿಡುಗಡೆ Read Post »

ಕಾವ್ಯಯಾನ

ಕಾವ್ಯಯಾನ

ಮೊಗ್ಗುಗಳು ತುಟಿ ಬಿಚ್ಚೆ ಕೆ.ಸುಜಾತ ಗುಪ್ತ ನಾ ಪ್ರಕೃತಿ ಪ್ರೇಮಿಯಾಗಿ ಸೂಕ್ಷ್ಮವಾಗಿ ಗಮನಿಸೆ ಪ್ರಕೃತಿಯ ಸೊಬಗು ನೂರ್ಮಡಿ ಹೆಚ್ಚಿತ್ತು… ಭಾವುಕತೆಯಲಿ ಪ್ರಕೃತಿಯ ಮಡಿಲಲ್ಲಿ ಕುಳಿತು ನನ್ನ ನಾ ಮರೆತು ಲಲ್ಲಗೆರೆಯಲು ಹರುಷದಿ ಸ್ಪಂದಿಸಿ ನಸು ನಕ್ಕಿತ್ತು ಪ್ರಕೃತಿ.. ಬಿರಿದು ಪರಿಮಳವ ಸೂಸಲು ರವಿ ಕಿರಣದ ಸ್ಪರ್ಶದ ನಿರೀಕ್ಷೆಯಲ್ಲಿರಲು ಮೊಗ್ಗುಗಳು, ಮಂಜಿನ ಮುಂಜಾನೆಯಲಿ ಭೂದರನ ಮರೆಯಲಿ ರಾಜೀವ ಸಖ ಇಣುಕೆ, ಸಜ್ಜಾಗಿ ನಿಂತು ವಯ್ಯಾರದೆ ಅವನೆಡೆಗೆ ಓರೆನೋಟ ಬೀರಿದ ಮೊಗ್ಗುಗಳು ನಸು ನಾಚಿ ತುಟಿ ಬಿಚ್ಚಿ ಲಯಬದ್ದವಾಗಿ …ಹಾಯ್ …ಎಂದಾಗ, ಹರುಷದೆ ರವಿ ಅಪ್ಪಿ ಮುತ್ತಿಡಲು ರವಿ ಕರಗಳ ಆಲಿಂಗನದಿ ಬಿರಿಯುತ್ತಿದ್ದ ಮೊಗ್ಗುಗಳು ಪ್ರೇಮ ಕಾವ್ಯಕೆ ಮುನ್ನುಡಿಯ ಬರೆಯುವಂತೆ ಭಾಸವಾಯ್ತು.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಾಡು ನೀ ಪ್ರಯತ್ನ ಪ್ಯಾರಿಸುತ ಯತ್ನ,ಯತ್ನ ಮಾಡು,ಮಾಡು ನಿನ್ನ ಪ್ರಯತ್ನ ಆಗಲೇ ನನಸಾಗಿಸುವುದು ಆ ನಿನ್ನ ಸಪ್ನ ರಾತ್ರಿ ಕಂಡ ಕನಸುಗಳೆಲ್ಲ ಕನಸುಗಳೇ ಅಲ್ಲ ಮಲಗಲಾವುದು ಬಿಡೋದಿಲ್ಲವಲ್ಲ ಅದುವೇ ನಿನ್ನ ಸಪ್ನ, ಮಾಡು ನೀ ಪ್ರಯತ್ನ ಒಳ್ಳೆ ಬದುಕು ಕಾಣಲು ವಿದ್ಯೆಯೊಂದು ಸಾಲದು ಒಂದೇ ಗುರಿಯ ನಿಗದಿಸಿ ಯತ್ನ ಮಾಡು ಸಿಗುವುದು ಕಾಲ ತುಂಬಾ ಓಡುವದು ನೀನು ಯಾಕೆ ನಿಲ್ಲುವದು ಗುರಿಯ ಕಡೆ ಓಡುತಿರೇ ಸಾಧನಾಶಿಖರವೇ ನಿನ್ನದು ಬಡವ ಬಲ್ಲವ ಎಲ್ಲ ಒಂದೇ ಗುರಿಯನ್ನು ಸಾಧಿಸಲು ಕುಂಟು ನೆಪವು ಹೇಳಿದರೆ ಆಗದು ಉಚ್ಛವಾಗಿ ಬದುಕಲು ಪಡೆದು ಬಂದ ಜನುಮ ಗುರುತಾಗಿಯೇ ಉಳಿಸಲು ಹಗಲಿರುಳು ಯತ್ನಿಸು ಜಯದ ಡಮರುಗ ಬಡಿಯಲು ಗೆದ್ದು ಬಂದ ಸಾಧಕರೆಲ್ಲ ಅದೃಷ್ಟ ಮಾಡಿ ಗೆದ್ದವರಲ್ಲ ಇಟ್ಟ ಗುರಿಯನು ಆಗದೆಂದು ಬಿಟ್ಟವರಲ್ಲ ಸುಲಭವಾಗಿ ಗೆದ್ದರೆ ಸಾಧನೆಯಾಗೋದಿಲ್ಲ ಗೌರವಯುತ ಸನ್ಮಾನ ಬಿಟ್ಟಿಯಾಗಿ ಸಿಗೋದಿಲ್ಲ *******************************

ಕಾವ್ಯಯಾನ Read Post »

ಇತರೆ

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು? ಸುಪ್ರಿಯಾ ನಟರಾಜ್ ನಾನೇಕೆ ಲಂಕೇಶರನ್ನು ಓದುತ್ತೇನೆ ಪಿಯುಸಿ ಯಿಂದಲೂ ವಿಜ್ಞಾನದ ವಿದ್ಯಾರ್ಥಿಯಾಗಿದ್ದ ನನಗೆ, ಕನ್ನಡ ಸಾಹಿತ್ಯದಲ್ಲಿ ಅಪಾರವಾದ ಆಸಕ್ತಿ ಇತ್ತು. ಆದರೆ, ಪುಸ್ತಕಗಳನ್ನು ಸಂಗ್ರಹಿಸುವುದು ನನ್ನ ಹವ್ಯಾಸವಾಗಿತ್ತೇ ಹೊರತು, ಓದುವುದು ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ನನಗೆ ಪುಸ್ತಕಗಳ ಮೇಲೆ ಪ್ರೀತಿ ಇತ್ತು. ಆದರೆ ಅವುಗಳನ್ನು ಓದುವ ಚಟವಿರಲಿಲ್ಲ.  ಆದರೂ ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡುವುದು ನನ್ನ ಆಸ್ಥೆಯಾಗಿದ್ದರಿಂದ ಕನ್ನಡ ರತ್ನ ಪರೀಕ್ಷೆ ಯಲ್ಲಿ ಉತ್ತೀರ್ಣಳಾಗಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವಾಗ, ನನ್ನ ಸಂಗ್ರಹದಲ್ಲಿ ಹಲವಾರು ವರ್ಷಗಳಿಂದ ಬೆಚ್ಚಗೆ ಕುಳಿತಿದ್ದ ಮಲೆಗಳ ಮದುಮಗಳನ್ನು, ಮೂಕಜ್ಜಿಯನ್ನು ಭೇಟಿಯಾದ ಮೇಲೆ ನನ್ನಲ್ಲಿದ್ದ ‘ಓದುಗ’ ಪ್ರಜ್ಞೆ ಜಾಗೃತವಾಯಿತು. ಈ ಪ್ರಜ್ಞೆ, ನನ್ನಿಂದ ಕುವೆಂಪು, ಶಿವರಾಮ ಕಾರಂತ, ಕೆ.ಪಿ ಪೂರ್ಣಚಂದ್ರ ತೇಜಸ್ವಿ, ಯು.ಆರ್ ಅನಂತಮೂರ್ತಿ, ಎಸ್.ಎಲ್.ಭೈರಪ್ಪ, ಪಿ.ಲಂಕೇಶ್ ಅವರ ಪರಿಚಯ ಮಾಡಿಸಿ, ಸಾಹಿತ್ಯದ ರೂಪುರೇಷೆಗಳನ್ನು ಮನಸ್ಸಿನಲ್ಲಿ ಮೂಡಿಸಿತು. ನನಗೆ ಪಿ.ಲಂಕೇಶ್ ಅವರ ಪರಿಚಯ ವಾಗಿದ್ದು ಅವರ ಅವ್ವ ಎಂಬ ಕಾವ್ಯದಿಂದ. ಈ ಕವನದಲ್ಲಿ ಲಂಕೇಶರು, ಕೃಷಿ ಸಂಸ್ಕೃತಿಯ ತಾಯಿ ಮತ್ತು ಮಗುವಿನ ಸಂಬಂಧವನ್ನು ರೂಪಕವಾಗಿ ವರ್ಣಿಸಿದ್ದಾರೆ. ಲಂಕೇಶರ ಅವ್ವ ನಮ್ಮ ನಾಡಿನ  ಸಾವಿರಾರು ಹೆಣ್ಣುಮಕ್ಕಳಂತೆ ಮಣ್ಣಿನ ಮಗಳು. ಅವಳ ಉರುಟು ಬದುಕಿನಂತೆ, ಇಲ್ಲಿ ಬಳಸಿದ ಭಾಷೆಯೂ ಉರುಟು. ಲಂಕೇಶರು ತಮ್ಮ ತಾಯಿಗೆ ಕೊಡುವ ಹೋಲಿಕೆಗಳಂತೂ ಓದುಗನನ್ನು ದಿಗ್ಭ್ರಾಂತಿಸುತ್ತದೆ. ಅವಳ ಕಪ್ಪು ನೆಲಸತ್ವ, ಬನದ ಕರಡಿ, ನೊಂದ ನಾಯಿ, ಪೇಚಾಡುವ ಕೋತಿಯ ಗುಣಗಳು, ಹೆಣ್ಣುಮಗಳೊಬ್ಬಳ ಒಂಟಿ ಹೋರಾಟದ ಬದುಕಿನ ಅನಿವಾರ್ಯ ಲಕ್ಷಣಗಳು. ನನಗೆ ಈ ಕವಿತೆ, ‘ಹೊತ್ತುಹೊತ್ತಿಗೆ ತುತ್ತನಿಟ್ಟು ಸಲುಹಿದಾಕೆ, ನಿನಗೆ ಬೇರೆ ಹೆಸರು ಬೇಕೇ, ಸ್ತ್ರೀ ಎಂದರೆ ಅಷ್ಟೇ ಸಾಕೇ’  ಎಂಬ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಸಾಲುಗಳನ್ನು ನೆನಪಿಸಿತು. ಲಂಕೇಶರು, ತಮ್ಮ ತಾಯಿಯನ್ನು ಕೃತಕವಾಗಿ ಹೊಗಳದೇ ಅಭಿನಂದಿಸಿದ್ದಾರೆ. ನೀರಿನಲ್ಲಿ ಹಿಟ್ಟನ್ನು ಕಲಿಸಿ, ಹದಮಾಡಿ, ತಟ್ಟುತ್ತಾ ಹೋದಂತೆ ಸಿದ್ಧವಾಗುವ ರೊಟ್ಟಿ ತಯಾರಿಸುವುದು ಎಲ್ಲರಿಗೂ ಸಿದ್ಧಿಸುವಂತದಲ್ಲ. ಆದರೆ ಲಂಕೇಶರು ತಟ್ಟಿರುವ ರೊಟ್ಟಿ,ವಿಭಿನ್ನ.  ಈ ಮಹತ್ವದ ಕತೆ, ಮನುಷ್ಯನ ಸೂಕ್ಷ್ಮ ಸಂವೇದನೆಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ರೊಟ್ಟಿಯಲ್ಲಿ ರೈತನ ದುಡಿಮೆ,ಪರಿಶ್ರಮ, ಅಮ್ಮನ ಪ್ರೀತಿ ಇದೆ. ಹಸಿದವರ ಒಡಲನ್ನು ತಣಿಸುವ ಗುಣ ಇದೆ. ಆದರೆ, ಲಂಕೇಶರ ರೊಟ್ಟಿಯಲ್ಲಿ, ಹರಕು ಬಟ್ಟೆಯ ಹಸಿದ ವ್ಯಕ್ತಿ, ವಿಚಿತ್ರ ವ್ಯಕ್ತಿತ್ವದ ಹೆಣ್ಣು, ಪೊಲೀಸ್ ಅವ್ಯವಸ್ಥೆ, ಹಸಿವು, ಭಯ, ಕೋಪ, ಅಸಹಾಯಕತೆಯ ಅಂಶಗಳು ಕಾಣಸಿಗುತ್ತದೆ. ಇನ್ನು ಲಂಕೇಶರನ್ನು ಭೇಟಿಮಾಡಲು ನನಗೆ ಸಿಕ್ಕ ಮತ್ತೊಂದು ಕೊಂಡಿ, ‘ಸಂಕ್ರಾಂತಿ’ ನಾಟಕ. ‘ಕ್ರಾಂತಿ’ ಎಂದರೆ ಸುಗ್ಗಿಯ ಸಂಭ್ರಮ. ಸೂರ್ಯ ತನ್ನ ಪಥವನ್ನು ಬದಲಾಯಿಸುವ ದಿನ. ಅಂತಹ ದಿನದಂದು, ಒಂದು ಸಾಮಾಜಿಕ ವಿನ್ಯಾಸದಲ್ಲಿ, ಅದೂ ದಲಿತರ ಕೇರಿಯಲ್ಲಿ, ಕಾಣುವ ವಿಚಿತ್ರ ತಿರುವು ಈ ನಾಟಕದಲ್ಲಿ ಚಿತ್ರಣಗೊಂಡಿದೆ. ಬೇರೆ ಎಲ್ಲಾ ಲೇಖಕರು ತಮ್ಮನಾಟಕಗಳಲ್ಲಿ ಕ್ರಾಂತಿಯ ಸಾಧ್ಯತೆ ಹೇಳಿದ್ದರೆ, ಲಂಕೇಶರು ಇಲ್ಲಿ ‘some ಕ್ರಾಂತಿ’ಯನ್ನುಂಟು ಮಾಡಿದ್ದಾರೆ. ಹನ್ನೆರಡನೇ ಶತಮಾನದ ಬಸವಣ್ಣನ ನೇತೃತ್ವದ ವಚನಕಾರರ ಚಳವಳಿ ಸಮಾಜದಲ್ಲಿ ನಿಜವಾಗಲೂ ಬದಲಾವಣೆ ತಂದಿತ್ತೇ? ತಂದಿದೆಯೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿ, ಸಮಾಜದ ಬದಲಾವಣೆ ಸಂಕೀರ್ಣ ಎಂಬ ಕಹಿ ಸತ್ಯವನ್ನು ಕಕ್ಕುತ್ತದೆ. ಈ ನಾಟಕವನ್ನು ಹರಳಯ್ಯ ಮಧುವರಸರ ಪ್ರಕರಣದಿಂದ  ಸ್ಪೂರ್ತಿ ಹೊಂದಿರುವುದಾಗಿ ಸ್ವತಃ  ಲಂಕೇಶರೇ ಹೇಳಿದ್ದಾರೆ. ‘ಜಾತಿ ಎಂಬ ಸೂತಕ’ ಎಂಬಂತ ಈ ನಾಟಕಕ್ಕೆ ಸಂವಾದಿಯಾಗಿ ‘ಮುಟ್ಟಿಸಿಕೊಂಡವನು’ ಎಂಬ ಇವರದೇ ಮತ್ತೊಂದು ಕತೆಯನ್ನು ಗಮನಿಸಬಹುದು. ಬಸಲಿಂಗನ ಇಲ್ಲಿನ ಜಾತಿ ಧರ್ಮಗಳ ಇಕ್ಕಟ್ಟಿನ ಸ್ಥಿತಿ, ಅಂಧ ಅನಿಸಿಕೆಗಳು, ಈಗಿನ ತಲೆಮಾರಿಗೂ ದಾಟಿಸಿದೆ, ದಾಟಿಸುತ್ತಿದೆ. ಜಾತಿ ಪದ್ಧತಿಯಿಂದ ಕಲುಷಿತಗೊಂಡ ಸಮಾಜ ಸುಧಾರಿಸುವುದು,ಮನುಷ್ಯ ಬಸಲಿಂಗನಂತೆ ಮುಗ್ಧತೆಯಿಂದ ಬದಲಾಗಿ ಜಾತಿ ಎಂಬುದನ್ನು ಧಿಕ್ಕರಿಸಿದಾಗ…ಈ ಕತೆಯನ್ನು ಓದುತ್ತಿರುವಾಗ ನನಗೆ ಯು.ಆರ್. ಅನಂತಮೂರ್ತಿಯವರ ‘ಸಂಸ್ಕಾರ’ ಕಾದಂಬರಿಯಲ್ಲಿ ಬರುವ ಪಾತ್ರಧಾರಿಯೊಂದು, ತನ್ನ ಮಡಿ ಬಿಟ್ಟು, ಗುಟ್ಟಾಗಿ ಮತ್ತೊಬ್ಬರ ಮನೆಯಲ್ಲಿ ಉಪ್ಪಿಟ್ಟು, ಅವಲಕ್ಕಿ ತಿಂದ ಪ್ರಸಂಗ ನೆನಪಾಯಿತು. ನನ್ನ ಪ್ರಕಾರ ಲಂಕೇಶರು, ವ್ಯಕ್ತಿಯೊಬ್ಬ ಹೇಗೆ ಬದುಕಬಲ್ಲ ಆದರೆ ಹೇಗೆ ಬದುಕುತ್ತಿದ್ದಾನೆ  ಎಂಬುದನ್ನು ತಮ್ಮ ಕಾದಂಬರಿಗಳಲ್ಲಿ,ಕತೆಗಳಲ್ಲಿ, ನಾಟಕಗಳಲ್ಲಿ ಹೇಳುತ್ತಾರೆ.ಇವರ ಕಾದಂಬರಿಗಳು ನನ್ನನ್ನು ಸಕ್ರಿಯವಾಗಿ ಓದಿಸಿಕೊಂಡು ಮತ್ತೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಸಾಮಾನ್ಯವಾಗಿ ನಾ ಕಂಡ ಲಂಕೇಶರು, ದಲಿತ ಲೇಖಕರು ಗ್ರಹಿಸಿರುವುದಕ್ಕಿಂತಲೂ ಹೆಚ್ಚು ಸೂಕ್ಷ್ಮವಾಗಿ ದಲಿತ ಪ್ರಜ್ಞೆಯನ್ನು ಗಮನಿಸುತ್ತಾರೆ. ಆದ್ದರಿಂದ ನನಗೆ ಲಂಕೇಶರನ್ನು ಓದಬೇಕು, ಮತ್ತಷ್ಟು ಓದಬೇಕು ಎಂದೆನಿಸುತ್ತದೆ *********

ಲಂಕೇಶರನ್ನು ಏಕೆ ಓದಬೇಕು? Read Post »

ಕಾವ್ಯಯಾನ

ಕಾವ್ಯಯಾನ

 ವಿಭಿನ್ನ ರೇಶ್ಮಾ ಗುಳೇದಗುಡ್ಡಾಕರ್ ಕೋಟೆ ಕಟ್ಟುವೆ ಭಾವನೆಗಳ ನಡುವೆಎಂದವ ಹೆಣವಾಗಿ ಬಿದ್ದನುಒಡೆದ ಕನಸುಗಳ ಅವಶೇಗಳಮಧ್ಯೆ …. ಮಾನವತೆಯ ಹರಿಕಾರನೋಂದಮನಗಳ ಗುರಿಕಾರ ಎಂದುನಕಲಿ ಫೋಸು ಕೊಟ್ಟವನುಎಡಬಿಡದೆ ಭಾಷಣಗಳಸುರಿಮಳೆಗೈದವನು ಬಹಳ ದಿನಬಾಳಿಕೆ ಬರಲಿಲ್ಲ ಸತ್ಯಗಳ ಮುಂದೆ …. ಮಾತಿನಲ್ಲೆ ಬಂದೂಕು ಇಟ್ಟವನುಮುಗ್ದ ಮಂದಿಯ ಚಿತ್ತ ಕದಲಿದನುಅನಾಯಾಸವಾಗಿ ಗೆಲುವು ಪಡೆಯಲುನಿರಂತರವಾಗಿ ಹೆಣಗುತಿರುವನುಗುಂಪುಗಳ ನಡುವೆ …. ಹಿಡಿ ಮಣ್ಣಿಗೆ ಸಾರವ ಪರೀಕ್ಷಿಸುವವರುಬದುಕಿನ ಸಾರವ ಹೊತಿಟ್ಟುಮುಖವಾಡಗಳಿಗೆ ಬಣ್ಣ ಹಚ್ಚುವರು ಸರಳತೆಯೇ ಉಸಿರು ಎಂದುಆದರ್ಶಗಳೇ ಬದುಕು ಎಂದುಅಹಿಂಸೆಯೇ ದೇವರೆಂದವರುಇಂದು ಎಂದೆಂದು “ಮಹಾತ್ಮ “ನೇ ಅಗಿರುವರು …… *******

ಕಾವ್ಯಯಾನ Read Post »

ಇತರೆ

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು? ನವೀನ್ ಮಂಡಗದ್ದೆ ಲಂಕೇಶ್ ಅವರನ್ನು ನಾನೇಕೆ ಓದುತ್ತೇನೆ.. ಲಂಕೇಶ್ ನನ್ನ ಹಾಗೆ ದಮನಿತ, ಅನಕ್ಷರಸ್ಥ, ಗ್ರಾಮೀಣ ಪ್ರದೇಶದಿಂದ ಬಂದವರು, …ಇಷ್ಟೆಲ್ಲ ಮಿತಿಗಳಿದ್ದಾಗಲೂ ಅವರು ಸಾಹಿತ್ಯ, ಸಿನಿಮಾ, ಪತ್ರಿಕೆ ಎಂದೆಲ್ಲ ಕೆಲಸ ಮಾಡಿದರು.. ಈ ಹಿನ್ನೆಲೆಯಲ್ಲಿ ನಮಗೀಗ ಕೆಲಸ‌ ಮಾಡಲು ಸಾಕಷ್ಟು ‘ ಸ್ಪೇಸ್’ ಇದೆ ಹಾಗಾಗಿ ಲಂಕೇಶ್ ನನಗೆ ಸ್ಪೂರ್ತಿ.. ಗ್ರಾಮೀಣ ಪ್ರದೇಶಗಳಿಂದ ನಗರ ಕಡೆಗೆ ಮುಖ ಮಾಡುವ ಯುವಕರು ಅಲ್ಲಿನ ಹುಸಿವೈಭವಕ್ಕೆ ಮಾರು ಹೋಗಿ ನಗರಗಳಲ್ಲಿ ಉಳಿದು ಬಿಡುತ್ತಾರೆ.. ಲಂಕೇಶ್ ನಗರದ ಕಡೆ ಮುಖ ಮಾಡಿದರೂ ತನ್ನ ಹಳ್ಳಿಯನ್ನು ಮರೆಯಲಿಲ್ಲ, ಅವರೊಬ್ಬ ಅಕ್ಷರಸ್ತ ವ್ಯಕ್ತಿಯಾಗಿ ಅನಕ್ಷರಸ್ಥ ಸಮುದಾಯದ ಜೊತೆ ನಿಂತರು  ಅವರ ಊರಾದ ಕೊನಗವಳ್ಳಿಯಲ್ಲಿ ಕೌದಿಗಳನ್ನು ಹೊಲಿಸಿ ಬೆಂಗಳೂರಿನಲ್ಲಿ ತೆಗೆದುಕೊಂಡು ಹೋಗಿ ಮಾರಿ ಅದರ ಹಣವನ್ನು ಕೌದಿ ನೇಯ್ದವರಿಗೆ ತಂದುಕೊಡುತ್ತಿದ್ದರಂತೆ ಸಾಹಿತ್ಯ ಕಲಿಸುವ ಬದ್ದತೆ ಏನು ಅದರ ಪ್ರತಿಫಲ ಏನಾಗಿರಬೇಕು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಲಂಕೇಶ್. ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುವವರು ಓದಲೇಬೇಕಾದ ಕತೆ ಮುಟ್ಟಿಸಿಕೊಂಡವನು, ನನ್ನ ಎಚ್ಚರದ ಧ್ವನಿಯಾಗಿ ಆ ಕತೆಯನ್ನು ಓದುತ್ತೇನೆ. ಬಿರುಕು ಕಾದಂಬರಿಯ ಬಸವರಾಜನ ಪಾತ್ರ ನನ್ನನ್ನು ಕಾಡುತ್ತಿರುತ್ತದೆ. ಅದರಲ್ಲಿ ಅವನು ಆಗಾಗ ತನ್ನ ಅಂಗಿಯನ್ನು ಬದಲಿಸುತ್ತಾನೆ, ಅದು ವ್ಯಕ್ತಿತ್ವ ಬದಲಾವಣೆಯ ಸಂಕೇತ, ಆಧುನಿಕೋತ್ತರ ಕಾಲದಲ್ಲು ಇದು ಸಹಜವಾಗಿ ರೂಪುಗೊಂಡಂತೆ ಇದೆಯಲ್ಲ ಅನಿಸುವ ಕಾರಣಕ್ಕಾಗಿ ಆ ಕಾದಂಬರಿಯನ್ನು ಮತ್ತೆ ಮತ್ತೆ ಓದುತ್ತೇನೆ, ಒಟ್ಟಾರೆ ಲಂಕೇಶ್ ಅನುಭವಿಸಿದಷ್ಟು ಕಷ್ಟಗಳನ್ನು ಅನುಭವಿಸದ ನಾವು ಅವರನ್ನು ಸ್ಪೂರ್ತಿಯಾಗಿ ಭಾವಿಸಲು ಸಾಧ್ಯವಿದೆ.

ಲಂಕೇಶರನ್ನು ಏಕೆ ಓದಬೇಕು? Read Post »

You cannot copy content of this page

Scroll to Top