ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

Buy Meera Abstract Painting at Lowest Price by Rajesh Sharma

ಎ.ಹೇಮಗಂಗಾ

ಜುಲ್ ಕಾಫಿ಼ಯಾ ಗಜ಼ಲ್…………..

ಜಂಜಾಟಗಳ ಒತ್ತಡವೇ ನಿಜಬದುಕೆಂದು ನೆಮ್ಮದಿಯನ್ನೇ ಮರೆತೆ
ಅಜ್ಞಾನದ ಕತ್ತಲಕೂಪವೇ ಜಗತ್ತೆಂದು ಜ್ಞಾನಜ್ಯೋತಿಯನ್ನೇ ಮರೆತೆ

ಎದುರಾದ ನೂರು ಸಂಕಷ್ಟಗಳು ತಾತ್ಕಾಲಿಕವೆಂಬ ಅರಿವು ಇರಬೇಕಿತ್ತು
ನಿನ್ನ ದುಃಖ ವೇದನೆಯೇ ಎಲ್ಲಕಿಂತ ಮಿಗಿಲೆಂದು ನಗುವುದನ್ನೇ ಮರೆತೆ

ದ್ವೇಷ ಮದ ಮತ್ಸರಗಳ ಜ್ವಾಲಾಮುಖಿ ಸುಡುವುದಿಲ್ಲವೇ ನಿನ್ನನ್ನು ?
ಇತರರ ಅವನತಿಯಲ್ಲೇ ನಲಿವಿದೆಯೆಂದು ಪ್ರೀತಿಯನ್ನೇ ಮರೆತೆ

ಮೂರು ದಿನದ ಬಾಳಿನಾಟದಿ ಯಾರೂ ಯಾವುದೂ ಶಾಶ್ವತವಲ್ಲ
ಸ್ವಾರ್ಥ ಲಾಲಸೆಯಲ್ಲೇ ಏಳಿಗೆಯಿದೆಯೆಂದು ನಿಸ್ವಾರ್ಥವನ್ನೇ ಮರೆತೆ

ಎಚ್ಚರಿಸಬೇಕಿತ್ತು ನಿನ್ನ ಮನಸ್ಸಾಕ್ಷಿ ಎಂದೂ ಕೇಡು ಬಗೆಯದಿರೆಂದು
ಪರರ ಸಾವಿನಲ್ಲೇ ಸಾರ್ಥಕತೆ ಇದೆಯೆಂದು ಮಾನವತೆಯನ್ನೇ ಮರೆತೆ

*************************************

About The Author

Leave a Reply

You cannot copy content of this page

Scroll to Top