ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ

ಗಝಲ್ ಲೋಕ

‘ಗಝಲ್ ಲೋಕ’ ಬಸವರಾಜ್ ಕಾಸೆಯವರ ಹೊಸ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೊದಲ ಅದ್ಯಾಯ ಒಲವಿನ ಅಧಿವೇಶನವೇ ಈ ಗಜಲ್ ಗಜಲ್ ಎನ್ನುವ ಪದ ಕೇಳಿದರೆ ಸಾಕು ಇದರಲ್ಲಿ ಏನೋ ಇದೆ ಎಂದು ತನ್ನಷ್ಟಕ್ಕೇ ತಾ ಹಿಡಿದಿಟ್ಟು ಕಾಡುವ ಒಂದು ಭಾವ ಕಣ್ಣು ಮುಂದೆ ಬರುತ್ತದೆ. ಹೌದು ಗಜಲ್ ಎಂದರೆ ಹಾಗೆ ಮನಸ್ಸಿಗೆ ಮುಟ್ಟಿ ಬಿಟ್ಟ ನಂತರವೂ ಸಹ ಆವರಿಸುವ ಒಂದು ಬೆಚ್ಚನೆ ಅನುಭೂತಿ. ಅದಕ್ಕೆ ಅಡೆತಡೆಗಳಿಲ್ಲದೆ ಸದಾ ಹರಿಯುವುದು ಮಾತ್ರವಲ್ಲದೆ ಪುಟಿಯುವುದು ಗೊತ್ತು. ಬಿಡದೇ ಸುರಿಯುವ ಜಡಿ ಮಳೆಯಂತೆ ಗಜಲ್, ಚಳಿಗಾಲದ ಒಲವಿನ ಅಧಿವೇಶನಕ್ಕಾಗಿ ಕಾಯುತ್ತಿರುವ ಪ್ರೇಮಿಗಳ ನಾಡಿ ಮಿಡಿತ ಈ ಗಜಲ್. ಹೊತ್ತಲ್ಲದ ಹೊತ್ತಲ್ಲಿ ನೆನಪುಗಳ ಹೊತ್ತು ತರುವ ಪರಿಮಳವೇ ಗಜಲ್. ಹೌದು ಗಜಲ್ ಎಂದರೆ ಹಾಗೆ ಹೀಗೆ ಮತ್ತು ಅದಕ್ಕೆ ಇರುವ ಶಕ್ತಿಯೇ ಅಷ್ಟು ಅನನ್ಯ ಮತ್ತು ಅಪೂರ್ವ. ಅಂತಹ ಅಮೋಘ ಕಾವ್ಯ ಪ್ರಕಾರವಾದ ಗಜಲ್ ಕುರಿತ ಅಂಕಣಕ್ಕೆ ತಮಗೆ ಇದೋ ಸ್ವಾಗತ. ಗಜಲ್ ಬಹುತೇಕವಾಗಿ ಎಲ್ಲರೂ ಒಮ್ಮೆ ಆದರೂ ಓದಿಯೇ ಇರುತ್ತೀರಿ ಇಲ್ಲ ಅಂದ್ರೆ ಆ ಬಗ್ಗೆ ಕೇಳಿಯೇ ಇರುತ್ತೀರಿ. ಈ ಮೊದಲು ತುಂಬಾ ಅಪರೂಪವಾಗಿದ್ದ ಗಜಲ್ ಇತ್ತಿಚೆಗೆ ಕನ್ನಡದಲ್ಲೂ ಸಾಕಷ್ಟು ಸದ್ದು ಮಾಡುತ್ತಿದೆ. ಆ ಮೂಲಕ ನಮ್ಮ ವಿಶಾಲ ಕನ್ನಡ ಸಾಹಿತ್ಯ ಗಜಲಗಳಿಗೂ ತೆರೆದುಕೊಂಡಿದ್ದೂ ಹೊಸ ಹೊಸ ಬರಹಗಾರರು ಇದರಲ್ಲಿ ತೊಡಗಿಸಿಕೊಂಡಿರುವುದು ಆಸಕ್ತಿಕರ ವಿಷಯ. ಈಗಾಗಲೇ ಕೆಲವು ಬೆರಳಣಿಕೆ ಸಂಖ್ಯೆಯ ಪರಿಣತಿ ಹೊಂದಿದ ಉತ್ತಮ ಗುಣಮಟ್ಟದ ಖ್ಯಾತ ಗಜಲಕಾರರು ಕನ್ನಡದಲ್ಲಿ ಇದಾರೆ. ಅಂತೆಯೇ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಗಜಲಕಾರರು ಹೊರ ಹೊಮ್ಮುತ್ತಿರುವುದು ಸಹ ಖುಷಿಯ ವಿಚಾರ ಗಜಲ್ ಏನನ್ನು ನಿರೀಕ್ಷಿಸುವುದು ಯಾವುದೇ ಸಾಹಿತ್ಯ ಪ್ರಕಾರವಾದರೂ ಸರಿ ನಾವು ಬರೆಯಬೇಕು ಎಂದರೆ ಅದಕ್ಕೆ ಆ ಬಗ್ಗೆ ತಿಳುವಳಿಕೆ, ಆಳವಾದ ಜ್ಞಾನ, ಸತತ ಅಧ್ಯಯನ, ಉತ್ತಮ ಓದು ಮೊದಲಾದವು ಬಹು ಅಗತ್ಯ. ಅದು ಇಲ್ಲವಾದರೆ ಪೊಳ್ಳು ಜೊಳ್ಳುಗಳಾಗಿ ಬೆಲೆ ಕಳೆದುಕೊಳ್ಳುತ್ತವೆ. ಈ ದೃಷ್ಟಿಯಿಂದ ನೋಡಿದಾಗ ಈ ಡಿಜಿಟಲ್ ಯುಗದಲ್ಲಿ ಫೇಸ್ಬುಕ್, ಟ್ವಿಟ್ಟರ್, ಇನಸ್ಟಾಗ್ರಾಮ್ ಮೊದಲಾದ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ದಿನಕ್ಕೆ ಒಬ್ಬರು ಬರಹಗಾರರು ಹುಟ್ಟುತ್ತಿದ್ದಾರೆ. ಹಾಗೆ ಅದೊಂದು ಒಳ್ಳೆಯ ಬರಹವೇ ಎಂದು ನೋಡಿದರೆ ಖಂಡಿತ ಅದರಲ್ಲಿ ಏನು ಇರುವುದಿಲ್ಲ. ಆ ಬಗ್ಗೆ ವಿಚಾರಿಸಿದರೆ ಅವರಿಗೆ ಆ ವಿಷಯದ ಕುರಿತು ಕನಿಷ್ಠ ಜ್ಞಾನದ ಅರಿವು ಇರುವುದಿಲ್ಲ. ಬರಿದಿದ್ದೂ ಎಲ್ಲಾ ಬರಹಗಳು ಆಗಲ್ಲ ಅಂತೆಯೇ ಕವಿಗಳು ಸಹ ಆಗುವುದಿಲ್ಲ. ಹಾಗೆಯೇ ಗಜಲ್ ಕೂಡ ಸಾಕಷ್ಟು ಅರ್ಹತೆಗಳನ್ನು, ಕೌಶಲಗಳನ್ನು ನಿರೀಕ್ಷಿಸುತ್ತದೆ. ಇತರ ಸಾಹಿತ್ಯ ಪ್ರಕಾರಗಳಿಗಿಂತ ಗಜಲ್ ಬರಹಗಳಿಗೆ ಹೆಚ್ಚಿನ ಪೂರ್ವ ಸಿದ್ದತೆಗಳೇ ಬೇಕು ಯಾಕೆಂದರೆ ಗಜಲ್ ಅಷ್ಟು ಸುಲಭವಾಗಿ ಒಗ್ಗುವಂತದಲ್ಲ, ಇಲ್ಲಿ ಪ್ರತಿ ಬರಹಗಳು ಧ್ಯಾನದಂತೆ ಜೀವಿಸಬೇಕು. ಗಜಲ್ ಛಾಯೆ ಕನ್ನಡದ ಪ್ರಸಿದ್ಧ ಹಿರಿಯ ಕಿರಿಯ ದಿನಪತ್ರಿಕೆಗಳು, ವಾರಪತ್ರಿಕೆಗಳು, ಮಾಸಪತ್ರಿಕೆಗಳು, ಅಂತರ್ಜಾಲ ಪತ್ರಿಕೆಗಳು ಮೊದಲಾದವುಗಳಲ್ಲಿ ಗಜಲ್ ಎಂದು ಪ್ರಕಟವಾಗುವ ಎಷ್ಟೋ ಬರಹಗಳು ಗಜಲಗಳೇ ಆಗಿರುವುದಿಲ್ಲ. ಗಜಲ್ ಅಲ್ಲದ ಇಂತಹ ಗಜಲಗಳನ್ನು ಗಜಲ್ ಎಂದು ಪ್ರಕಟಿಸುವುದಕ್ಕೆ ಇರುವ ಮಾನದಂಡಗಳು ಏನು ಎಂದು ಇತ್ತೀಚೆಗೆ ಸಾಕಷ್ಟು ಗಜಲಕಾರರು ಆಕ್ಷೇಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆಲವರು ಪತ್ರಿಕೆಗಳಿಗೆ ಪತ್ರ ಬರೆದು ಕರೆ ಮಾಡಿ ವಿವರಣೆ ಕೇಳಿಯೂ ಇದ್ದಾರೆ. ಹಾಗೆ ನೋಡಿದಾಗ ಗಜಲ್ ಬರಹಗಳನ್ನು ಪ್ರಕಟಿಸಲು ಅಲ್ಲಿ ಪ್ರತ್ಯೇಕ ಗಜಲ್ ತಜ್ಞರು ಇರುವುದಿಲ್ಲ ಮತ್ತು ಓದಿದಾಗ ಸ್ವಲ್ಪ ಚೆನ್ನಾಗಿ ಇದೆ ಎನಿಸಿದರೆ ಪ್ರಕಟಿಸಿ ಬಿಡುವುದು ಅವರ ರೀತಿ ನೀತಿಗಳು. ಹೀಗೆಂದು ಪತ್ರಿಕೆಯೊಂದರ ಸಂಪಾದಕರೇ ತಿಳಿಸಿದಾಗ ಒಂದಿಷ್ಟು ಬೇಸರ ಆಗಿದ್ದೂ “ಓದುಗರು ಏನೋ ಚೆನ್ನಾಗಿ ಇದ್ದರೆ ಓದಿ ಖುಷಿ ಪಡಬಹುದು. ಆದರೆ ಅದನ್ನು ಓದುವ ಇತರ ಬರಹಗಾರರು ಆಕರ್ಷಣೆಗೆ ಒಳಗಾಗಿ ಅಲ್ಲಿನ ಬರಹವನ್ನೇ ಗಜಲ್ ಎಂದು ಅನುಸರಿಸಿದರೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಮತ್ತು ಒಂದು ಒಳ್ಳೆಯ ಪ್ರಕಾರವನ್ನು ಬೇಕಾಬಿಟ್ಟಿ ಹರಿಯ ಬಿಟ್ಟು ಹಾಳು ಮಾಡಿದಂತೆ” ಎಂದಾಗ ಈ ಬಗ್ಗೆ ಗಮನಿಸಿ ಇನ್ನೂ ಮುಂದೆ ಹಾಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೌದು ಈಗಾಗಲೇ ಹಲವಾರು ಬರಹಗಾರರು ಗಜಲ್ ಅಲ್ಲದ ಆದರೆ ಗಜಲ ಛಾಯೆ ಹೊಂದಿದ ಬರಹಗಳನ್ನು ಅನುಸರಿಸಿ ಗಜಲ್ ಹೆಸರಿನಲ್ಲಿ ಏನೇನೋ ಬರೆಯುತ್ತಿದ್ದಾರೆ. ಆದರೆ ಮೌಲ್ಯ ಕಳೆದುಕೊಳ್ಳುವ ಅಂತಹ ಬರಹಗಳು ಇತರ ಉದಯೋನ್ಮುಖ ಬರಹಗಾರರನ್ನು ಗೊಂದಲಕ್ಕೆ ಒಳಗಾಗಿಸುತ್ತವೆ. ಆದರೆ ಗಜಲ್ ಅಂತಹ ಬರಹಗಳನ್ನು ಕಾಲಕ್ರಮೇಣ ಮೂಲೆ ಗುಂಪಾಗಿಸುತ್ತದೆ ಗಜಲ್ ಬರೆಯಲು ಏನು ಬೇಕು ಕವನ ಆಗಬಹುದು, ಚುಟುಕು ಆಗಬಹುದು, ಭಾವಗೀತೆ ಆಗಿರಬಹುದು ಅಥವಾ ನೀಳ್ಗವಿತೆಯೇ ಆಗಿರಬಹುದು ಯಾವುದೇ ಕಾವ್ಯ ಪ್ರಕಾರವನ್ನು ನೋಡಿ ಪ್ರತಿಯೊಂದು ಸಹ ತನ್ನದೇ ಆದ ಚೌಕಟ್ಟು, ಗುಣ ಲಕ್ಷಣಗಳು ಮೊದಲಾದವುಗಳನ್ನು ಹೊಂದಿವೆ. ಇದನ್ನು ಗಜಲಗಳಿಗೆ ಹೋಲಿಸಿದರೆ ಇದರ ಚೌಕಟ್ಟು ಅತ್ಯಂತ ಕಟ್ಟುನಿಟ್ಟಾಗಿದ್ದೂ ಗುಣ ಲಕ್ಷಣಗಳೊಂದಿಗೆ ನಿಯಮಗಳನ್ನು ಸಹ ಹೊಂದಿದೆ. ಪ್ರತಿ ಸಾಲು ಹೀಗೆ ಇರಬೇಕು ಹಾಗೆ ಇರಬೇಕು ಎಂದು ಬಯಸುವ ಗಜಲ್, ಬರೆಯಲು ಅದರ ಬಗೆಗಿನ ಅರಿವು ಮೊದಲ ಮತ್ತು ಕನಿಷ್ಠ ಅವಶ್ಯಕತೆ. ಜೊತೆಗೆ ಗಜಲ್ ಇತಿಹಾಸ, ಬೆಳೆದು ಬಂದ ರೀತಿ, ತನ್ನೊಳಗೆ ಹಲವು ಪ್ರಕಾರಗಳನ್ನು ಅಡಗಿಸಿಗೊಂಡಿರುವ ನೀತಿ ಹೀಗೆ ಗಜಲ್ ಬಗ್ಗೆ ಉತ್ತಮ ಬರವಣಿಗೆಗೆ ಏನು ಬೇಕು, ಏನು ಬೇಕು, ಹೇಗೆ ಇರಬೇಕು ಎನ್ನುವ ಮೊದಲಾದ ಅಂಶಗಳನ್ನು ನಿಮ್ಮ ಮುಂದೆ ತೆರೆದಿಡುವುದು ಗಜಲ್ ಲೋಕ ಎನ್ನುವ ಈ ಅಂಕಣದ ಹೊಣೆಯಾಗಿರಲಿದೆ. ಇನ್ನೂ ಮುಂದೆ ಇದರ ಬಗ್ಗೆ ಪ್ರತಿ ಸಂಚಿಕೆಯಲ್ಲಿ ಮಾಹಿತಿ ನೀಡುತ್ತಾ ಸಾಗಲಾಗುವುದು. *********** ಬಸವರಾಜ ಕಾಸೆ

ಗಝಲ್ ಲೋಕ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ನಾಳೆ ಬಪ್ಪುದು ಕೆ.ಶಿವುಲಕ್ಕಣ್ಣವರ ಹಲವಾರು ಪಲ್ಲಟಗಳನ್ನು ಹೊಂದಿರುವ ‘ನಾಳೆ ಬಪ್ಪುದು’ ಎಂಬ ಹನುಮಂತ ಹಾಲಿಗೇರಿಯವರ ನಾಟಕವೂ..! ಸಾಹಿತಿ ಹನುಮಂತ ಹಾಲಿಗೇರಿಯವರು ತಮ್ಮ ‘ಏಪ್ರಿಲ್ ಫೂಲ್’ ಕಥೆಗಳ‌ ಸಂಕಲನದ ‘ಏಪ್ರಿಲ್ ಪೂಲ್’ ಕಥೆಯನ್ನು ಆಧರಿಸಿ ‘ನಾಳೆ ಬಪ್ಪುದು’ ಎಂಬ ನಾಟಕವನ್ನು ಬರೆದಿದ್ದಾರೆ… ಈ ನಾಟಕವನ್ನು ಓದುತ್ತಿದ್ದಂತೆ, ಇದು ಮುಖ್ಯವಾಗಿ ನಾಟಕಕಾರ ಹನುಮಂತ ಹಾಲಿಗೇರಿಯವರ ಫ್ಯಾಂಟಸಿ ನಾಟಕದಂತೆ ನನಗೆ‌ ಭಾಸಾವಾಯಿತು… ಯಾರಿಗೆ ಗೊತ್ತು ಇದು ಮುಂದೆ ವಾಸ್ತವವಾಗಲೂಬಹುದು. ಇರಲಿ. ಮುಂದೆ ಈ ನಾಟಕದ ಹಂದರ ನೋಡೋಣ… ಇಲ್ಲಿ ಮುಖ್ಯವಾಗಿ ನನಗೆ ಮೈತ್ರಿರಾವ್, ಈಕೆಯ ಗಂಡ ರಾಮು, ಮೈತ್ರಿರಾವ್ ಮಗಳು ಭೂಮಿರಾವ್, ‌ಮೈತ್ರಿರಾವ್ ಮಗ ದೀಪು ಮತ್ತು ಮೈತ್ರಿರಾವ್ ಸೊಸೆಯಾಗುವವಳು ಶರ್ಮಿಳಾರಾವ್ ಗಳ ಪಾತ್ರ ಮುಖ್ಯವಾಗಿ ಕಂಡವು. ಈ ಪಾತ್ರಗಳೇ ಈ ನಾಟಕದಲ್ಲಿ ಮುಖ್ಯವಾದವು ಮತ್ತು ಇವುಗಳ ಜೊತೆಗೆ ಅನೇಕಾನೇಕ ಪಾತ್ರಗಳೂ ಇಲ್ಲಿ ಬರುತ್ತವೆ… ಇಲ್ಲಿ ಬರುತ್ತಿರುವ ಪಾತ್ರಗಳು ಒಂದು ಕಾಲದಲ್ಲಿ ಅಂದರೆ ಪ್ರಸ್ತುತ ಕಾಲದಲ್ಲೂ ಪುರುಷ ಪ್ರಧಾನ ಸಮಾಜದಲ್ಲಿ ಮುಖ್ಯವಾಗಿ ಕನಸ್ಸು ಕಾಣುತ್ತಿರುವುದು ಹನುಮಂತ ಹಾಲಿಗೇರಿಯವರ ಸ್ತ್ರೀ ಸಮಾನಾಂತರ ಸಮಾಜವನ್ನು. ಪುರುಷರಿಗೆ ಸ್ತ್ರೀಯರು ಸಮಾನವಾಗಿ ಎಲ್ಲಾ ವಿಧದಲ್ಲೂ ಕಾಣಬೇಕೆನ್ನುವ ನಿಟ್ಟಿನಲ್ಲಿ ಹನುಮಂತ ಹಾಲಿಗೇರಿಯವರು ಈ ‘ನಾಳೆ ಬಪ್ಪುದು’ ಎಂಬ ನಾಟಕ ಹೆಣೆದಿದ್ದಾರೆ… ಇಲ್ಲಿ ಬರುವ ಪಾತ್ರಗಳು ಮುಖ್ಯವಾಗಿ ಪ್ರಸ್ತುತ ಕಾಲಘಟ್ಟದಲ್ಲಿ ಪುರುಷರು ಅದು ಹೇಗೆ ಸ್ತ್ರೀಯನ್ನು ಅಸಮವಾಗಿ ಕಾಣುತ್ತಾರೋ ಹಾಗೆಯೇ ನಾಳೆಯ ದಿನಗಳಲ್ಲಿ ಸ್ತ್ರೀಯರು ಪುರುಷರನ್ನು ಅಸಮವಾಗಿ ಕಾಣುವ ದೃಶ್ಯಗಳನ್ನು ನಾವು ಅಂದರೆ ನಾಟಕಕಾರ ಕಾಣುವ ಸಮಾಜವನ್ನೂ ಅಲ್ಲಗಳೆಯಲಾಗದು. ಅಂದರೆ ಇಲ್ಲಿ ಪುರುಷ ಮುಂದೊಂದು ದಿನ ಸ್ತ್ರೀಯೂ ಕಾಲಚಕ್ರದಲ್ಲಿ ಬದಲಾಗಿ ಈ ಪುರುಷರನ್ನು ಹಿಮ್ಮೆಟ್ಟಿಸಿ ಮುನ್ನಡೆಯಬಹದು‌ ಎಂಬ ಸಂದೇಶವನ್ನು ಪರೋಕ್ಷವಾಗಿ ಕೊಡುತ್ತಾರೆ… ಇಲ್ಲಿ ಮುಂದೊಂದು ಕಾಲದಲ್ಲಿ ಬರುವ ಮತ್ತೊಂದು ಮುಖ್ಯ ಪಾತ್ರವಾದ ಬಾಪಣ್ಣ ಎಂಬ ಪುರುಷ ರಕ್ಷಣಾ ವೇದಿಕೆ ಅಧ್ಯಕ್ಷನದು. ಹೆಂಡತಿ ಮತ್ತು ಅತ್ತೆಯಿಂದ ಸಾಕಷ್ಟು ಶೋಷಣೆಗೆ ಒಳಗಾಗಿ ಮನೆಯಿಂದ ಹೊರಗೆ ದಬ್ಬಲ್ಪಟ್ಟ ನಂತರ ಅವರು ಸದರಿ ಸಂಘಟನೆ ಕಟ್ಟಿಕೊಂಡು ಪುರುಷನೇ ಈ ಪ್ರಕೃತಿಗೆ ಪ್ರಧಾನ ಎಂದು ವೇದ ಕಾಲದಿಂದಲೂ ಹೇಳಿಕೊಂಡು ಬರಲಾಗುತ್ತಿದೆ. ಆದರೆ ಕಾಲ ಬದಲಾದಂತೆ ಮಹಿಳೆಯರೇ ಅಧಿಕಾರ ಚುಕ್ಕಾಣಿ ಹಿಡಿದುಕೊಂಡು ಅಮಾಯಕ ಪುರುಷರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸಂವಿಧಾನವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡು ಎಲ್ಲ ಚರ ಮತ್ತು ಸ್ಥಿರಾಸ್ತಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ನಮ್ಮ ಪೂರ್ವಜ ಪುರುಷರು ಮಾಡಿದ ತಪ್ಪಗೆ ಸ್ತ್ರೀಯರು ಸಮಾಜದ ಎಲ್ಲ ಪುರುಷರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬಲ್ಲಿಯಿಂದ ಹಿಡಿದು ಒಟ್ಟಾರೆ ಸಮಾಜದಲ್ಲಿ ಸ್ತ್ರೀಯರು ಪುಷರನ್ನು ಹಿಂಸಿಸಿಸುತ್ತಿದ್ದಾರೆಂಬಲ್ಲಿಯ ವರೆಗೆ ಬಾಪಣ್ಣ ಹೇಳುತ್ತಾನೆ ಮತ್ತು ವೇದ ಕಾಲದ ಗುಣಗಾನ ಮಾಡುತ್ತಾನೆ. ಅಲ್ಲದೇ ಸ್ತ್ರೀ ಕಾಲವನ್ನು ದೂಷಿಸುತ್ತಾನೆ… ಬಾಪಣ್ಣನದು ಒಂದು ಮನವಿ ಇದೆ. ಅದೆಂದರೆ ಹೆಂಗಸರಿಗೆ ಸಮಾನವಾಗಿ ಪುರುಷರಿಗೆ ಶಿಕ್ಷಣ ಹಕ್ಕು, ಆಸ್ತಿ ಹಕ್ಕು ಇತ್ಯಾದಿ ಹಕ್ಕುಗಳನ್ನು ನೀಡುವವರೆಗೆ ತಮ್ಮ ಹೋರಾಟ ನಡೆದಿರುತ್ತದೆ ಎಂಬುದು ಬಾಪಣ್ಣನ ಹಕ್ಕೊತ್ತಾಯವಾಗಿರುತ್ತದೆ… ಹೀಗೆಯೇ ಪುರುಷರ ಕಾಲದ ಕನಸಿನ ಮನವರಿಕೆಯ ಹಕ್ಕೊತ್ತಾಯವೂ ಆಗಿರುತ್ತದೆ ಮತ್ತದೇ ಮುಂದೊಂದು ಕಾಲದಲ್ಲಿ ಈ ಸ್ತ್ರೀಯರ ಕಾಲವನ್ನು ಮೈತ್ರಿರಾವ್ ಕನಸ್ಸಿನಲ್ಲಿ ಕಂಡವರಂತೆ ಶಿರಸಾವಸಿ ಪಾಲಿಸಿಕೊಂಡು ಬಂದವಳು. ಮತ್ತು ಅಂತೆಯೇ ತನ್ನ ಜೀವನದಲ್ಲೂ ಅಳವಡಿಸಿಕೊಂಡವಳು. ತನ್ನ ಗಂಡ ರಾಮುನನ್ನು ತನ್ನ ಅಂಕೆಯಲ್ಲೇ ಇಟ್ಟುಕೊಂಡು, ಸ್ತ್ರೀ ದಬ್ಬಾಳಿಕೆಯನ್ನು ನಡೆಸುತ್ತಲೇ ಬಂದವಳು. ಅಂತೆಯೇ ಮೈತ್ರಿರಾವ್ ತನ್ನ ಮಗಳು ಭೂಮಿರಾವ್ ಳನ್ನೂ ಬೆಳೆಸಿದವಳು. ಮಗ ದೀಪು ತನ್ನಪ್ಪ ರಾಮುನಂತೆಯೇ ಇಲ್ಲಿ ಸ್ತ್ರೀ ಪ್ರಧಾನ ಸಮಯದಲ್ಲಿ ದೀಪು ಕೂಡ ಸ್ತ್ರೀ ದಬ್ಬಾಳಿಕೆ ಅನುಭವಿಸಿದನು. ಮೈತ್ರಿರಾವ್ ಮಗಳು ಭೂಮಿರಾವ್ ಮಾತ್ರ ತನ್ನ ತಾಯಿ ಮೈತ್ರಿರಾವ್ ಳಂತೆ ಬೆಳೆದವಳು ಮತ್ತು ಸ್ತ್ರೀ ಪ್ರಧಾನವಾಗಿ ಈ ಸಮಾಜವನ್ನು ನೋಡುವವಳು. ಮೈತ್ರಿರಾವ್ ಸೊಸೆಯಾಗುವವಳು ಶರ್ಮಿಳಾರಾವ್ ಕೂಡ ಮೈತ್ರಿರಾವ್ ಳಂತೆಯೇ ಇರಬೇಕೆಂಬುದು ಮೈತ್ರಿರಾವ್ ಕನಸ್ಸು… ಹೀಗೆ ಸಾಗುವ ಈ ನಾಟಕ ಹಂದರ ಒಂದು ಕನಸ್ಸನ್ನು ಹುಟ್ಟು ಹಾಕುತ್ತದೆ. ಈ ಸುಂದರ ಭೂಮಿಯಲ್ಲಿ ಗಂಡು-ಹೆಣ್ಣು ಸಮವಾಗಿ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯು ಒಡಮೂಡಿಸುತ್ತದೆ. ಗಂಡು-ಹೆಣ್ಣು ಸಮವಾಗಿ ಬದಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆ ಏಳುಸುತ್ತದೆ. ಅದು ಸಾಧ್ಯವಿದೆ ಆದರೆ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ‘ಮನುವಾದ’ವಾದದ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಪುರುಷ ಪ್ರಾಧಾನ್ಯತೆಯ ಮನವರಿಕೆ ಆಗಿ ಹೆಣ್ಣು-ಗಂಡು ಸಮವಾಗಿ ಬಾಳಿದರೆ ಮಾತ್ರ ಎಂಬ ಅರಿವನ್ನು ಈ ನಾಟಕ ಮೂಡಿಸುತ್ತದೆ… ಅನಾದಿ ಕಾಲದಿಂದ ಹೆಣ್ಣು ಹುಟ್ಟಿದಾಗ ತಂದೆಯ ಆಶ್ರಯದಲ್ಲಿ, ದೊಡ್ಡವಳಾಗಿ ಮದುವೆ ಆಗುತ್ತಿದಂತೆ ಗಂಡನ ನೆರಳಲ್ಲಿ, ಮುದುಕೆಯಾಗುತ್ತಿದ್ದಂತೆ ಮಕ್ಕಳ ಆಶ್ರಯದಲ್ಲಿ ಬದುಕು ಸಾಗಿಸಬೇಕೆಂಬ ಅನ್ನುವ ದುರಾಲೋಚನೆಯ ಗಂಡಸರು ಮನುಶ್ಯಾಸ್ತ್ರ, ವೇದ, ಉಪನಿಷತ್ತು, ಪುರಾಣಗಳಲ್ಲಿ ಹೇಳುತ್ತಲೇ ಬಂದವು‌ ಸ್ಬಾರ್ಥ ಈ ಗಂಡು ಪ್ರಧಾನ ಗ್ರಂಥಗಳು. ಹೆಣ್ಣನ್ನು ಕಪಟಿ, ಮೋಸಗಾತಿ, ಮಾಯೆ, ಅಬಲೆ ಎಂಬ ಋಣಾತ್ಮಕತೆಯನ್ನು ಅಂಟಿಸಿಬಿಟ್ಟವು ಆ ಮನುವಿನ ಮಕ್ಕಳು. ಹೆಣ್ಣು ಒಂದು ವೇಳೆ ಬೀದಿಪಾಲಾದರೆ ಆ ಹೆಣ್ಣಿನ ಪರಿಸ್ಥಿತಿಯಂತೂ ಊಹಿಸಲೂ ಆಗದು… ಹಾಗಾಗಿಯೇ ಹೆಣ್ಣು ಬಾಯಿ ಮುಚ್ಚಿಕೊಂಡು ಪುರುಷ ಪ್ರಧಾನ ಸಮಾಜದಲ್ಲಿ ಬದುಕಬೇಕಾಗಿತ್ತು. ಆದರೆ ಕಾಲ ಚಕ್ರ ಬದಲಾ ಒಂದೇ ತರಹವಿರುದಿಲ್ಲ. ಈ ಕಾಲ ಚಕ್ರ ಉರುಳುತ್ತಿದ್ದಂತೆ ಬದಲಾಯಿತು ಸಮಾಜ. ಹೆಣ್ಣು ಗಟ್ಟಿಯಾದ ಧ್ವನಿಯಲ್ಲಿ ಪ್ರಶ್ನಿಸತೊಡಗಿದಳು ಈ ಮೊದಲಿನ ಸಮಾಜವನ್ನು. ಅಕ್ಷರಾಭ್ಯಾಸ ಮಾಡತೊಡಗಿದಳು. ಮಹಿಳಾ ದೌರ್ಜನ್ಯದ ವಿರುದ್ಧ ಹೋರಾಡತೊಡಗಿದಳು. ಹಾಗೆಯೇ ರಾಜಕೀಯ ಇಚ್ಛಾಶಕ್ತಿ ಬೆಳೆಸಿಕೊಂಡಳು. ಪರಿಣಾಮವಾಗಿ ಬಿಬಿಪಿ ಪಕ್ಷ ಕಟ್ಟಿಕೊಂಡು ಆ ಮುಖೇನ ರಾಜಕಾರಣಕ್ಕೂ ಇಳಿದಳು.ಕಾಲಕ್ರಮೇಣ ಬದಲಾಯಿತು ಸಮಾಜ. ಮಹಿಳೆಯರು ಅಧಿಕಾರ ಚುಕ್ಕಾಣಿ ಹಿಡಿಯುತ್ತಿದಂತೇ ಈ ಮಹಿಳೆಯರಿಗೂ ಮದವೇರಿತು ಪುರುಷರನ್ನು ಕಾಲಕಸ ಮಾಡಿಕ್ಕೊಂಡನಾಟಕ ಈ ಮಹಿಳಾ ಮಣಿಗಳ ಪಿತ್ತವೂ ನೆತ್ತಿಗೇರಿದಂತೆ ಮೈತ್ರಿರಾವ್ ಪಾತ್ರ ಕುಣಿಯಲಾರಂಭಿಸಿತು… ಹೀಗೆ ಈ ನಾಟಕ ‘ನಾಳೆ ಬಪ್ಪುದು’ ಎಂಬುದನ್ನು ಸಾಹಿತಿ ಹನುಮಂತ ಹಾಲಿಗೇರಿಯವರು ಸಾಧರಪಡಿಸುತ್ತಾರೆ…. ಹೀಗೆ ಶಿಲಾಯುಗ, ವೇದಕಾಲ, ವರ್ತಮಾನ ಕಾಲ ಮತ್ತು ಭವಿಷ್ಯದ ಹೊಳವನ್ನು ಹೊಂದಿರುವ ಮಹಿಳೆಯರ ಕಾಲದ ಪಲ್ಲಟಗಳಿಂದ ಈ ನಾಟಕ ಕೂಡಿದೆ… *******

ಸ್ವಾತ್ಮಗತ Read Post »

ಪುಸ್ತಕ ಸಂಗಾತಿ

ನಾನು ಓದಿದ ಪುಸ್ತಕ

ಹಾಣಾದಿ ಕಪಿಲ ಪಿ.ಹುಮನಾಬಾದ ಕೆಚ್ಚೆದೆಯ ಹೋರಾಟ “ಹಣಾದಿ”. ಹೌದು ಕೆಲವು ದಿನಗಳ ಹಿಂದೆ ಅಬ್ದುಲ್ ಹೈ (ಹೈ.ತೋ) ರವರ ಕಾವ್ಯಮನೆ  ಪ್ರಕಾಶನದಲ್ಲಿ ಮುದ್ರಿತವಾಗಿ ಲೇಖಕರು ಮಿತ್ರರಾದ “ಕಪಿಲ್ ಹುಮನಾಬಾದಿ” ರವರ “ಹಣಾದಿ” ಕಿರು ಕಾದಂಬರಿ ಲೋಕಾರ್ಪಣೆ ಗೊಂಡು ಓದುಗರನ್ನು ತನ್ನತ್ತ ಸೆಳೆದಿದೆ ಅದರಲ್ಲಿ ನಾನು ಒಬ್ಬ. ಅತಿ ಚಿಕ್ಕ ವಯಸ್ಸಿನಲ್ಲಿ ಅನುಭವಿ ಲೇಖಕನಂತೆ ಅದ್ಭುತವಾಗಿ ಹೆಣೆದಿದ್ದಾರೆ. ಬಾದಾಮು ಗಿಡದ  ಸುತ್ತ ಕತೆ ಹೆಣೆದ ರೀತಿ ವಿಶೇಷ ಎನ್ನವಂತಿದೆ. ಅಪ್ಪನನ್ನು ನೋಡಲು ಹಳ್ಳಿಗೆ ಮರಳಿದ ಮಗನಿಗೆ ಕಂಡಿದ್ದು ವಿಚಿತ್ರವಾದ ಊರ ಚಿತ್ರಣ. ಒಂಟಿಯಾದ ಅವನ ಮನೆಯಲ್ಲಿ ಭೂತಕಾಲದ ಚಿತ್ರಣ ಬರೆಯಲು ಉಳಿದಿದ್ದು ಗುಬ್ಬಿ ಆಯಿ ಸಂದರ್ಭಕ್ಕನುಸಾರವಾಗಿ ಅವನ ಪ್ರಶ್ನೆಗಳಿಗೆ ಉತ್ತರಿಸುವ ರೀತಿ ಸುತ್ತಲು ಮೋಡವಾದಾಗ ಮಳೆಸುರಿಸುವಂತಿದೆ. ತಲ್ಲಣಗೊಂಡ ಅವನ ಮನಸ್ಸು ಭಯದಲ್ಲೂ ಅಪ್ಪನನ್ನು ಕಾಣುವ ಹಂಬಲ ಎಳ್ಳಷ್ಟು ಕ್ಷೀಣಿಸದೆ ಗುಬ್ಬಿ ಆಯಿಯನ್ನು ಬೆಂಬಿಡದೆ ನೆಡೆದಿದ್ದು ಓದುಗರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ಉತ್ತರ ಸಿಗದ ಅವನ ಪ್ರಶ್ನೆಗಳು ಹತಾಶನಾಗದೆ ಕುತುಹಲ ಕೆರಳಿಸುವಂತಿವೆ. ಬಾದಾಮು ಗಿಡವನ್ನು ಉಳಿಸಿಕೊಳ್ಳಲು ಅಂದರೆ ಪರೋಕ್ಷವಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ರೀತಿ ಹಾಗೂ ಸ್ವತಂತ್ರವಾಗಿ ಬದುಕುವ ಹಕ್ಕಿಗಾಗಿ ಇಡೀ ಊರನ್ನೆ ಎದುರು ಹಾಕಿಕೊಂಡು ನೆಡೆಸಿದ ಹೋರಾಟ ಓದುಗನ ಮನಸ್ಸಿನಲ್ಲಿ ಅಚ್ಚುವತ್ತಿದೆ. ಊರಲ್ಲಿ ಯಾವುದಾದರು ಹೆಣ ಹೂಳಿದರೆ ಮಾತ್ರ ಹೊಟ್ಟೆ ತುಂಬಾ ಊಟ ಇಲ್ಲವಾದರೆ ಅರೆಹೊಟ್ಟೆ ಊಟ ಮಾಡುವ ಕಂಠಿಯ ಜಾತಿಯನ್ನು ತಿರಸ್ಕರಿಸಿ ಬದುಕು ಮತ್ತು ವೃತ್ತಿಯನ್ನು ಗೌರವಿಸುವ ರೀತಿ, ಅದಕ್ಕೆ ಅವನ ಅಪ್ಪನ ಕಾಳಜಿ, ಹಾಗೂ ಬದುಕಿನ ಹೋರಾಟಕ್ಕೆ ಕಂಠಿ ನೀಡಿದ ಸಾಥ್ ಚೆನ್ನಾಗಿ ಹೆಣೆಯಲಾಗಿದೆ.               ಅಪ್ಪನ ಈ ಹೋರಾಟದಲ್ಲಿ ಜಾತಿ, ಧರ್ಮ, ದೇವರು ಮತ್ತು ಸಿರಿತನ ವಿರುದ್ಧ ಗಟ್ಟಿಯಾಗಿ ನಿಂತಿರುವುದು ಬದುಕು. ಸೊಗಸಾಗಿ ಹೆಣೆದ ಕಥೆಯಲ್ಲಿ ವಿಶೇಷವಾದ ಆಕರ್ಷಣೆಯಾಗಿದೆ ಸ್ಥಳೀಯ ಭಾಷೆ. ಒಟ್ಟರೆಯಾಗಿ ಕಿರು ಕಾದಂಬರಿಯಲ್ಲಿ ಲೇಖಕರು ಸಮಾಜದಲ್ಲಿ ಬದುಕನ್ನು ಗಟ್ಟಿಗೊಳಿಸುವ ರೀತಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಹೆಣೆದಿರುವ ಹೋರಾಟದ ದಾರಿ ಓದುಗನನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಗೂ ವಿಶಾಲವಾದ  ಸಮಾಜದಲ್ಲಿ ಹಣಾದಿಯಲ್ಲೂ (ಬಂಡಿ ಜಾಡಿನಂತ ಚಿಕ್ಕ ಹಾದಿಯಲ್ಲಿ) ಪ್ರಾಮಾಣಿಕವಾದ ಉತ್ತಮ ಬದುಕು ಕಟ್ಟಿ ಕೊಳ್ಳಬಹುದು ಮತ್ತು ಬದುಕು ನಿರಂತರ ಎನ್ನುವ ಒಳ್ಳೆಯ  ಸಂದೇಶವನ್ನು ನೀಡಿದ್ದಾರೆ.       ಜೀವನದ ಮಹತ್ವ ತಿಳಿಸುವ ಹಾಗೂ ಸಮಾಜಕ್ಕೆ ಸಂದೇಶ ಸಾರುವ ಹೊಸ ಲೇಖಕರ ಹೊಸ ಹೊಸ ವಿಚಾರಗಳು ಹೊರ ಹೊಮ್ಮಲಿ ಎನ್ನುವುದು ಮತ್ತು ಬರಹದ ಮೂಲಕ ಸಮಾಜವನ್ನು ತಿದ್ದುವ ಕೆಲಸಗಳು ಸದಾ ಜಾರಿಯಲ್ಲಿರ ಬೇಕು ಎನ್ನುವುದು ಆಶಯ… ************************ ನಾಗರಾಜ ಮಸೂತಿ…      

ನಾನು ಓದಿದ ಪುಸ್ತಕ Read Post »

ಇತರೆ

ಲಹರಿ

ನಿನಗಾಗಿ ಶಾಲಿನಿ ಆರ್. ಹೌದು, ಬೆಳಗ್ಗೆ ಬೆಳಗ್ಗೆ ಆ ಪ್ರಾಥಃ ಸ್ಪರ್ಶ ಇರತ್ತಲ್ಲ ಅದನ್ನ ಆಸ್ವಾದಿಸೋದೆ ಒಂದು ಹಬ್ಬ ನನಗೆ.ಇದನ್ನ ಬರಿವಾಗ ಕೋಗಿಲೆ ಹಾಡ್ತಿದೆ. ಜಸ್ಟ ವಾಕಿಂಗ್ ಮುಗ್ಸಿ ಬಂದೆ. ಬಂದ್ ಕೂಡ್ಲೆ ಮನದಲ್ಲಿ ಒಂದು ಆಲಾಪನೆ ಶುರುವಾಯಿತು. ಅದಕ್ಕೆ ಈ ನೂರಾರು ಪದಗಳ ಹರವನ್ನ ,ಬದುಕಿನ‌ ಹದಗಳನ್ನ ಹರಡಿಕೊಂಡು ಕುಳಿತೆ.    ಐದುವರಿಯಿಂದ ಆರು ಇಪ್ಪತ್ತು ರವರೆಗೆ  ವಾಕಿಂಗ್  ಹೋಗಿದ್ದೆ.ದಾರಿಲಿ, ಪಾರಿಜಾತದ ಪರಿಮಳ ,ಮಲ್ಲಿಗೆ ಸುವಾಸನೆ, ದೂರದಲ್ಲಿ ಕೂಗೋ ನವಿಲು, ಕೋಗಿಲೆಯ ಆ ಪಂಚಮಸ್ವರ ಜೊತೆಗೆ ನನ್ನ ಪುಟ್ಟ ಜಗತ್ತಿನ ಒಲವು ನೀ ನಿನ್ನ ಜೋಡಿ ಅದನ್ನೆಲ್ಲ ಮನಸ್ಸಿನಲ್ಲಿ ಅನುಭವಿಸುತ್ತ ಮನೆಗೆ ಬಂದೆ .ನೆನ್ನೆ ರಾತ್ರಿ ಮಾಡಿದ ಈ ಹಲ್ವನ ಡೈಮಂಡ್ ಶೇಪಲ್ಲಿ ಕಟ್ ಮಾಡಿ ಪಿಕ್ ತೆಗೆದು ಇವತ್ತಿನ ಶುಭೋದಯ ಕಳ್ಸಿದೀನಿ ನೋಡು. ಇವತ್ತಿನ ಈ ಬರಹ ಕೂಡ ಹಲ್ವಾ ನೆಪಾನೆ. ಅಷ್ಟು ಚೆಂದದ ಹದಾ ಬಂದಿದೆ. ಪ್ರತಿಭಾರಿನು ಬರತ್ತೆ. ಹಲ್ವಾ , ನೆನಸಿದ ರಾಗಿನ ರುಬ್ಬಿ ಅದರ ಹಾಲು ತೆಗೆದು ಸೋಸಿ ಎಕ್ದಂ ಪೈನ್ ಹಾಲ ಬರಬೇಕು ಹಾಗೆ. ಅದಕ್ಕೆ ಸರಿಯಾದ ಪ್ರಮಾಣದಲ್ಲಿ ಬೆಲ್ಲ ಬೆರೆಸಿ. ಅದನ್ನ ಕೈ ಬಿಡದ ಹಾಗೆ ಬೆರೆಸ್ತಾನೆ ಇರಬೇಕು ಸಣ್ಣ ಉರಿಯಲಿ. ಅದನ್ನ ಗುರಾಡ್ತಾನೆ ಇರಬೇಕು, ಕೈ ನೋವಾಗತ್ತೆ ಗೊತ್ತಾ. ಗುರಾಡ್ತಾ ಗುರಾಡ್ತ ಅದು ಗಟ್ಟಿಯಾಗ್ತಾ ಬೆಂದು ಬೆಂದು ಬರತ್ತೆ. ಆಗ ಒಂದು ಹದ ಬರತ್ತೆ. ಎಂಥ ಅನುಭವ ಗೊತ್ತಾ ಅದು. ಅದು ಜೀವನದ ಅನುಭಾವಾವೆ ಸರಿ. ಬದುಕು ಹೀಗೆ ಅಲ್ವ , ಶರಣಾಗತಿಯ ಸಮರ್ಪಣೆ. ಜೀವನದಲ್ಲಿ ಏನು ಅರಿದೇ ಇದ್ದಾಗ ಬೆಸೆವ ಸಂಬಂಧಗಳು ಒಂದು ಹದಕ್ಕೆ ನಿಲುಕಿ ಬೆಂದು ನೊಂದು ಗಟ್ಟಿಯಾಗಿ ನಮ್ಮನ್ನೆಲ್ಲ ಒಂದುಗೂಡಿಸೋದು.      ‌         ಒದ್ದಾಡ್ತ ಇರತ್ತೆ ಬೆಲ್ಲ ರಾಗಿ ಎರಡು ಬೆರೆಯೋಕೆ, ಆದರೆ ಬೆರೆತ ಮೇಲೆ ಅದಕ್ಕೆ ಒಂದು ಹಿಡಿತ ಸಿಕ್ಕತ್ತೆ. ಆಗ ನೋಡಬೇಕು ಅದರ ಬಣ್ಣ ಬದಲಾಗೋ ರೀತಿ,  ಅಲ್ಲಿ ಪ್ರೀತಿ ಮೇಳೈಸಿ ಒಂದು ಹೊಂಬಣ್ಣಬರತ್ತೆ. ನೋಡೋಕೆ ಚೆಂದ ಗೊತ್ತಾ. ರಾಗಿ, ಬೆಲ್ಲ ಎರಡೂ ಬೇರೆ ಬೇರೆ ಅಸ್ಮಿತೆ  ಹೊಂದಿದ್ದರು, ಎರಡು ಬೆರೆತು ಒಂದಾಗೋ ಪರಿನೆ ಅದ್ಭುತ. ಎರಡಕ್ಕೋ ಆದ ಬದಲಾವಣೆ ಈ ಹದ, ಚೆಲುವಿದ್ದರೇನು, ಸಿರಿಯಿದ್ದರೇನು ನಲವಿಲ್ಲದ ಬದುಕಿಗೆ . ಪ್ರೀತಿ ಅಂದರೇನೆ  ಬದಲಾವಣೆ , ಅದರಿಂದ ಸಿಗೋ ಈ ನಿರಾಳತೆ, ಸ್ವಭಾವಗಳ ರೂಪಾಂತರ, ಇದೇ ಅಲ್ವೆನೋ  ಮೂಲ ಖುಷಿಗೆ ಕಾರಣ. ನಿನ್ನ ಖುಷಿಗೆ ನಾ ಕಾರಣ , ನನ್ನ ಖುಷಿಗೆ ನೀ ಅನ್ನೋ ಮನೋಭಾವ ಸದ್ದಿಲ್ಲದೆ ಜಾಗ ಮಾಡಿ ಮನದ ಗುಡಿಸಲಲ್ಲಿ ಕೂರತ್ತಲ್ಲ. ಅದರ ಜೋಡಿ ತುಟಿಯಂಚಿನಲಿ ಕಂಡು ಕಾಣದ ಹಾಗೆ ಮೂಡಿ ಬರುವ ಈ ನಗು ಕೂಡ ಖುಷಿನೆ . ಇದೇ ಮುಂದೆ ಬರುವ ದಿನಗಳ ಭರವಸೆಗಳ ಬೆಳೆ.‌      ಈ ಹೊತ್ತಲ್ಲಿ  ಹಲ್ವಾ ಗಟ್ಟಿಯಾಗಿ ಮತ್ತಷ್ಟು ಗಟ್ಟಿಯಾಗತ್ತ ಹೋಗತ್ತೆ . ಈಗ ನಿಜವಾದ ಟೆನಷ್ಷನ್ , ಒಂದು ಕ್ಷಣ ಮೈಮರೆತರು.ಹಲ್ವ ಹಳ್ಳ ಹಿಡಿಯೋ ಹೊತ್ತು. ಗಂಟಾಗಿಲ್ಲ ಅನ್ನೋ ಮನದಟ್ಟು ಆಯ್ತಾ, ಆದರೂ, ಬಿಡದೆ ಕೈಯಾಡ್ಸತ್ತ , ಒಂದು ನೆಮ್ಮದಿಯ ನಿಟ್ಟುಸಿರು ಬಿಡ್ತಿನಿ. ಈಗ ಪರಿಪೂರ್ಣ ಬೆಂದಿದೆ ಅನ್ನೊ ಹೊತ್ತಿಗೆ ಅದನ್ನ ಮುಚ್ಚಿ ಮತ್ತಷ್ಟು ಹೊತ್ತು ಇಡೋದು. ನಂತರ ತಟ್ಟೆಗೆ ತುಪ್ಪ ಸವರಿ, ಬೆಂದ ಹಲ್ವಾ ಹಾಕಿ ಚೆನ್ನಾಗಿ ಸಮಮಾಡಿ ಇಡೋದು .ಆಗ್ಲೆ ಹಲ್ವಾ ಮಾಡಿದ ಅನುಭವ ಅನುಭಾವ ಆಗಿರುತ್ತೆ. ಹಲ್ವಾ ಮಸ್ತ ಬಂದಿದೆ.  ಆ ಖುಷಿ ನಿನ್ನೊಟ್ಟೊಗೆ  ಹಂಚ್ಕೋಬೇಕಿತ್ತು, ನಿನ್ನ ಪ್ರೇಮದ ಪರಿಯ ನಾನರಿಯೇ ಕನಕಾಂಗಿ ಅನ್ನೋ ಹಾಡು ಕಿವಿಲಿ ಗುನುಗುಟ್ಟುತಿದೆ. ಅದೇ ಪ್ರೇಮ ಹಬ್ಬಿದ ಪರಿಲಿ ಈ ಬರಹ ನಿ‌ನಗಾಗಿ ಬರಿತಿದೀನಿ. ಮತ್ತೆ ಹಲ್ವಾ ನೋಡಿ ಮನಸ್ಸು  ಮತ್ತೆ ಜಪ ಮಾಡ್ತಿದೆ. ನಮ್ಮ ಪ್ರೀತಿ ಮತ್ತಷ್ಟು ಅದರ ಮೃದುತ್ವ ಪಡೆದು ಕೂಡಿ ಕೊಳ್ಳಲಿ ಅಂತ ಮನಸ್ಸು ಹೇಳ್ತಿದೆ. ಅನುಭವನೇ ಹಾಗೆ , ಅದು ಅಡಿಗೆ ಮನೆದಿರಲಿ ಅದರಾಚೆಗಿನ ಪ್ರಕೃತಿಯ ಎಲ್ಲ ಪ್ರಕಾರಗಳಲ್ಲೇ ಇರಲಿ, ಪ್ರತಿಯೊಂದರಲ್ಲೂ ನಾವು ಕಾಣೋ ಪ್ರೀತಿ , ಪ್ರೇಮದ ನಂಟು  ಹಬ್ಸೋ ರೀತಿಲಿ ನನ್ನ ನಾನು ನನ್ನತನ ಮಾತ್ರ ಉಳಿಸಿ ಮೆರೆಸೋ ತಂತ್ರ ಅದನ್ನ ಬಳಸೋ ಬಾಳು ಎಲ್ಲ ಸೋಜಿಗಾದ ಸೂಜುಮಲ್ಲಿಗೇನೆ ಅಲ್ವಾ…? *************

ಲಹರಿ Read Post »

ಕಾವ್ಯಯಾನ

ಕಾವ್ಯಯಾನ

ಶಬರಿ ಡಾ.ಗೋವಿಂದ ಹೆಗಡೆ ಯಾವುದೋ ಬೇಡರ ಹುಡುಗಿ ಹೆಸರಿಲ್ಲದೇ ಮರೆಗೆ ಸಲ್ಲುವ ಬದಲು ‘ಶಬರಿ’ ಎನಿಸಿ ತಪಕೆ ಹೆಸರಾಗಿ ನಿಂತಿದ್ದು ರಾಮನ ಮಹಿಮೆಯೇ ಶಬರಿಯದೇ ಕನಸ ಕಂಡಿರಬಹುದೇ ಹುಡುಗಿ ಕುದುರೆಯೇರಿ ಬರುವ ಯಾವುದೋ ಉತ್ತರದ ರಾಜಕುವರನದು ಹುಡುಗಿ ಹೆಣ್ಣಾಗಿ ಹಣ್ಣಾಗಿ ಹಪ್ಪು ಮುದುಕಿಯಾಗುವವರೆಗೂ ಕಾದು ಕಾದು ಪಾತ್ರ ಬದಲಿಸಿ ಹರಿದಿರಬೇಕು ನದಿ ಕಾದ ಕಾಯುವ ಕಾವಿನಲ್ಲಿ ಕಾಮನೆಗಳು ಕರಗಿ ನೋಡುವ ಊಡುವ ಬಯಲ ಬಯಕೆ ಉಳಿದು ಕಣ್ಣು ಮುಚ್ಚುವ ಮೊದಲು ಕಂಡೇನೇ ಎಂದು ಕಣ್ಣ ಕೊನೆಯಲ್ಲೆ ಜೀವವನಿರಿಸಿ ಕಾದಿದ್ದಕ್ಕೆ ಬಂದ ಉತ್ತರವಾಗಿ ಅರಸುಮಗನಾಗಲ್ಲ ತಾಪಸಿಯ ವೇಷದಲ್ಲಿ ಕೊನೆಗೂ ಬಂದ ಘನಿತ ಮೋಡ ಎಂಥ ಮಳೆ ಬಂದಿರಬೇಕು ಆಗ! ಯಾವ ಹಣ್ಣನ್ನು ಯಾರು ತಿಂದಿರಬೇಕು ಕಳಿತ ನೇರಳೆಯಂಥವನಿಗೆ ನೇರಳೆಯ ಕೊಟ್ಟಳೇ ಮುದುಕಿ ಕಚ್ಚಿದ್ದಳಂತೆ, ಎಂಜಲು ಹಣ್ಣು ಹಿಡಿದು ಕಾದಿದ್ದಳಂತೆ -ಆಹಾ! (ರಾಮಫಲವನ್ನು ಸವಿದಳೇ ಕಣ್ಣಲ್ಲೇ) ನಡುಗು ಕೈ ಮೈಗಳಲ್ಲಿ ಏನು ಕೊಟ್ಟಳೋ ಪಡೆದಳೋ ಯಾರಿಗೆ ಗೊತ್ತು ವಿರಹ ತಪ್ತ ರಾಮ ; ರಾಮ ತಪಿತೆ ಶಬರಿ ಇದ್ದೀತು ಅವನಿಗದು ಎಂದಿನಂಥದೇ ಇನ್ನೊಂದು ಹಗಲು ಶಬರಿಗೋ ಸಂಜೆಯರಳಿ ಹಗಲು ಸಂಜೆಯಿರದ ಹಗಲು *******

ಕಾವ್ಯಯಾನ Read Post »

ಇತರೆ

ಜ್ಞಾನಪೀಠ ವಿಜೇತರು

ಗಿರೀಶ್ ಕಾರ್ನಾಡ್ ಗಿರೀಶ್ ಕಾರ್ನಾಡ್ ಕನ್ನಡ ಸಾಹಿತ್ಯ ಲೋಕ ಕಂಡ ಅದ್ಭುತ ನಾಟಕಕಾರ, ಸಾಹಿತಿ , ಚಿತ್ರ ನಟ ಮತ್ತು ನಿರ್ದೇಶಕ. ಕನ್ನಡ, ಹಿಂದಿ, ತೆಲಗು,ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತಮ್ಮ ಅಭಿನಯದಿಂದ ವಿಶಿಷ್ಠ ಮುದ್ರೆ ಒತ್ತಿರುವ ಇವರು ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಏಳನೇ ಸಾಹಿತಿ. ಪ್ರಗತಿಶೀಲ ಸಮತಾವಾದ ಮತ್ತು ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಇವರು ಕೆಲವು ಬಾರಿ ತಮ್ಮ ನೇರ ನುಡಿಗಳ ಮೂಲಕ ಹಲವು ವಿವಾದಗಳಲ್ಲಿ ಸಿಲುಕಿದ್ದುಂಟು… 1938 ಮೇ 19 ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಇವರು ಜನಿಸಿದರು. ಇವರ ತಂದೆ ರಘುನಾಥ ಕಾರ್ನಾಡ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಕೃಷ್ಣಾಬಾಯಿ ಬಾಲ್ಯ ವಿವಾಹವಾಗಿ ಒಂದು ಮಗುವಾದ ನಂತರ ವಿಧವೆಯಾಗಿದ್ದರು. ರಘುನಾಥರ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೇ ಸಲ್ಲಿಸುವಾಗ ಪರಿಚಯವಾದ ಇವರನ್ನು ಆಗಿನ ಸಮಾಜಿಕ ಕಟ್ಟುಪಾಡುಗಳ ವಿರುದ್ಧವಾಗಿ ರಘುನಾಥರು ಕೈಹಿಡಿದರು. ನಂತರ ಈ ದಂಪತಿಗಳ ಮೂರನೇ ಮಗನಾಗಿ ಗಿರೀಶ್ ಜನಿಸಿದರು… ಬಾಲ್ಯದಲ್ಲಿ ಕೆಲಕಾಲ ಮರಾಠಿ ಶಿಕ್ಷಣ ಪಡೆದ ನಂತರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ ಧಾರವಾಡದ ಬಾಸೆಲ್ ಮಿಶನ್‌ನಲ್ಲಿ ಹೈಸ್ಕೂಲಿನಲ್ಲಿ ಓದಿದ ನಂತರ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಮುಗಿಸಿದರು ಗಿರೀಶ್ ಕಾರ್ನಾಡ್ ರು. ನಂತರ ರ್ಹೋಡ್ಸ್ ಸ್ಕಾಲರ್‌ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್ ಯುನಿವರ್ಸಿಟಿಯಲ್ಲಿ ರಾಜಕೀಯಶಾಸ್ತ್ರ, ತತ್ವಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1963 ರಲ್ಲಿ ಚರ್ಚಾಕೂಟದ ವೇದಿಕೆಯಾದ ಆಕ್ಸ್‌ಫರ್ಡ್ ಯುನಿಯನ್ ಆಧ್ಯಕ್ಷರಾದವರು… ಚೆನ್ನೈನಲ್ಲಿ ಆಕ್ಸ್‌ಫರ್ಡ್ ಯುನಿವರ್ಸಿಟಿ ಪ್ರೆಸ್‌ನಲ್ಲಿ ಸುಮಾರು 7 ವರ್ಷ ಕೆಲಸ ಮಾಡಿದ ಇವರು ನಂತರ ಅಮೇರಿಕಾದ ಚಿಕಾಗೋ ಯುನಿವರ್ಸಿಟಿಯಲ್ಲಿ ಒಂದು ವರ್ಷ ಅತಿಥಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇವೆಲ್ಲರ ಮಧ್ಯೆಯೇ ನಾಟಕ ಬರಹದಲ್ಲಿ ತೊಡಗಿದ್ದರು. ಇವರು ಕೆಲಕಾಲ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ ಮತ್ತು ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ ಗಿರೀಶ್ ಕಾರ್ನಾಡ್ ರು… 1980 ರಲ್ಲಿ ಡಾ.ಸರಸ್ವತಿ ಗಣಪತಿಯವರನ್ನು ಮದುವೆಯಾದರು. ದಂಪತಿಗಳಿಗೆ ಒಬ್ಬ ಪುತ್ರ ಮತ್ತು ಪುತ್ರಿಯರುಂಟು. 2011 ರಲ್ಲಿ ತಮ್ಮ ಆತ್ಮಕಥೆಯಾದ `ಆಡಾಡತ ಆಯುಷ್ಯ’ ವನ್ನು ರಚಿಸಿದರು… ಇವರು ಬರೆದ `ನಾಗಮಂಡಲ’ ಒಂದು ಜನಪದ ಕಥೆಯಾಗಿದ್ದು, ಇವರಿಗೆ ಕರ್ನಾಟಕ ಸಾಹಿತ್ಯ ಪ್ರಶಸ್ತಿ ದೊರೆಕಿಸಿ ಕೊಟ್ಟಿತು. ಇದು ಮನು‍ಷ್ಯನ ಕಾಮವನ್ನು ಬಹುರೂಪಿ ಸರ್ಪದೊಂದಿಗೆ ಸಮೀಕರಿಸಿ ಬರೆದಂತ ನಾಟಕವಾಗಿತ್ತು. ಇದು ಮುಂದೆ 1997 ರಲ್ಲಿ ಟಿ.ಎಸ್.ನಾಗಭರಣರ ನಿರ್ದೇಶನದಲ್ಲಿ ಚಲನಚಿತ್ರವಾಗಿ ಮೂಡಿತು… ಮಹಾಭಾರತದ ಪಾತ್ರ ‘ಯಯಾತಿ’ ಮೇಲೆ ಹೊರಬಂದ ನಾಟಕ ಯಯಾತಿ’ ವಿವಾಹಿತ ರಾಜನ ಅತೃಪ್ತ ಕಾಮ ವಾಸನೆ ಮತ್ತು ಅತಿಲೋಲುಪತೆಯ ಮೇಲೆ ಬೆಳುಕು ಚೆಲ್ಲಿತು. ನೆಹುರು ಕಾಲದ ಅತಿಯಾದ ಆದರ್ಶವಾದ ಮತ್ತು ಅದು ಹತಾಶೆಯಲ್ಲಿ ಪರ್ಯವಸಾನಗೊಂಡ ವ್ಯಥೆಯನ್ನು ‘ತುಘಲಕ್’‌ನೊಂದಿಗೆ ಸಮೀಕರಿಸಿ ಐತಿಹಾಸಿಕತುಘಲಕ್’ ನಾಟಕ ರಚಿಸಿದರು… ಕಥಾಸರಿತ್ಸಾಗರದ ಕಥೆಯಧಾರಿತ `ಹಯವದನ’ ಮನುಷ್ಯನ ಅಪೂರ್ಣತೆ , ಪೂರ್ಣತೆಯೆಡಗಿನ ಬಯಕೆಯ ಮೇಲೆ ಬೆಳಕು ಚೆಲ್ಲಿತು… ನಂತರ ಬಂದ ‘ತೆಲೆದಂಡ’ 12 ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಬಸವಾದಿ ಪ್ರಮಥರ ಮೇಲೇ ನಡೆದಂತ ದಬ್ಬಾಳಿಕೆ, ಕಗ್ಗೋಲೆಗಳನ್ನು ತೆರೆದಿಟ್ಟಿತು. ಇವರ `ಅಂಜು ಮಲ್ಲಿಗೆ’ ನಾಟಕ ಸಹೋದರ- ಸಹೋದರಿಯ ನಡುವೆ ಮೂಡುವ ನಿಷಿದ್ಧ ಪ್ರೇಮದೆಡೆಗೆ ಬೆಳಕು ಚೆಲ್ಲಿತ್ತದೆ. ಹೀಗೆ ಕಾರ್ನಾಡರ ನಾಟಕ ಪ್ರಪಂಚ ಬದುಕಿನ ಮತ್ತು ಮನುಷ್ಯನ ಜೀವನ ಘಟ್ಟದ ಹಲವಾರು ಆಯಾಮಗಳ ಪರಿಚಯ ಮಾಡಿಸಿಕೊಡುತ್ತವೆ… 1970 ರಲ್ಲಿ ತೆರೆಕಂಡ ಯು.ಆರ್.ಅನಂತಮೂರ್ತಿ ಕಾದಂಬರಿ ಆಧಾರಿತ `ಸಂಸ್ಕಾರ’ ಚಿತ್ರದ ಮೂಲಕ ನಟನೆಗೆ ಇಳಿದರು. ಈ ಚಿತ್ರದಲ್ಲಿನ ಪ್ರಾಣೇಶಾಚಾರ್ಯ ಪಾತ್ರವನ್ನು ತುಂಬಾ ಪ್ರಬುದ್ಧರಾಗಿ ನಿಭಾಯಿಸಿದರು ಗಿರೀಶ್ ಕಾರ್ನಾಡ್. ಈ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಕೂಡ ಇವರೇ ಬರೆದಿದ್ದರು… ನಂತರ ಶಂಕರನಾಗ್ ನಿರ್ದೇಶನದ ‘ಮಾಲ್ಗುಡಿ ಡೇಸ್‌’ ಕಿರುತೆರೆ ಧಾರಾವಾಹಿಯಲ್ಲಿ ನಟಸಿದರು. ಎಸ್.ಎಲ್.ಭೈರಪ್ಪನವರ ಕಾದಂಬರಿ ಆಧಾರಿತ ವಂಶವೃಕ್ಷ’ ವನ್ನು ತೆರೆಗೆ ತರುವ ಮೂಲಕ ಚಿತ್ರ ನಿರ್ದೇಶನಕ್ಕೂ ಕಾಲಿಟ್ಟರು. ಈ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದರು. ಕುವೆಂಪುರವರಕಾನೂರು ಹೆಗ್ಗಡತಿ’ ಕೃತಿಯನ್ನು ಪರದೆಗೆ ತಂದ ಕೀರ್ತಿ ಗಿರೀಶ್ ಕಾರ್ನಾಡರದು. ನಂತರ ಹಲವಾರು ಚಿತ್ರಗಳನ್ನು ಮತ್ತು ಸಾಕ್ಷ್ಯ ಚಿತ್ರಗಳನ್ನು ನಿರ್ದೇಶಿಸಿದ್ದಾರೆ ಇವರು. ತಮ್ಮ ನಟನೆಯಿಂದಲೂ ಪ್ರಸಿದ್ಧರಾಗಿರುವ ಇವರು ಹಲವು ಕನ್ನಡ,ತೆಲಗು ಮತ್ತು ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ… ಇಂತಹ ಗಿರೀಶ್ ಕಾರ್ನಾಡ್ ಜೂನ್ 10, 2019 ರಂದು ಬೆಂಗಳೂರಿನ ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು..! ******************** ಕೆ.ಶಿವು ಲಕ್ಕಣ್ಣವರ

ಜ್ಞಾನಪೀಠ ವಿಜೇತರು Read Post »

ಕಾವ್ಯಯಾನ

ಕಾವ್ಯಯಾನ

ಉರಿಪಾದವ ಊರಿನಿಂತ ಹೆಜ್ಜೆಗೆ ಎಸ್.ಕೆ.ಮಂಜುನಾಥ್ ಇಟ್ಟಿಗೆ ಕಲ್ಲು ಹೊತ್ತು ಕಟ್ಟಿದ ಯಾವ ಮಹಲು ನಮ್ಮದಲ್ಲ ನೆರಳನು ನೀಡುತ್ತಿಲ್ಲ ಕೈಬೀಸಿ ಕರೆದ ನಗರ ಕತ್ತು ಹಿಡಿದು ನೂಕಿತ್ತಲ್ಲ ಹಸಿವೆಂದು ಬಂದೆವು ಹಸಿವಿಗಾಗಿ ದುಡಿದೆವು ಮತ್ತೆ ಮತ್ತೆ ಹಸಿವ ಹೊಟ್ಟೆ ಬೆನ್ನ ಮೇಲೆ ಹೊರೆಯ ಕಟ್ಟೆ ಹಸಿವಿನಿಂದ ಅಳುವ ಮಗು ಬೀದಿಬದಿಯ ಅನ್ನದೊಡೆಯ ಕಾಣದಾದನು ಎಲ್ಲಿಗೋದನು ಕರೆತಂದು ಬಿಟ್ಟ ಯಾವ ಬಸ್ಸು ರೈಲು ಕಾಣುತ್ತಿಲ್ಲ ಈ ಹೆಜ್ಜೆಗೂ ಈ ದಾರಿಗೂ ನಂಟು ಇನ್ನು ಮುಗಿದಿಲ್ಲ ಹಸಿವ ಗಂಟುಮೂಟೆ ಕಟ್ಟಿಕೊಂಡು ತಲೆಯ ಮೇಲೆ ಹೊತ್ತುಕೊಂಡು ತಾವೇ ಮಾಡಿದ ಹೆದ್ದಾರಿಯ ಮೇಲೆ ಮೈಲುಗಲ್ಲು ಎಣಿಸುತ್ತ ಹೆಜ್ಜೆ ಇಟ್ಟುಕೊಂಡು ಭಾರತ ಬರಿಗಾಲಲಿ ನಡೆಯುತ್ತಿದೆ ಬಿಟ್ಟುಬಂದ ಹುಟ್ಟಿದೂರ ದಾರಿ ಹಿಡಿದು ಹೊರಟರು ಯಾರಾದರು ಅಪ್ಪತಪ್ಪಿ ಅಲ್ಲಿ ಕೇಳದಿರಲಿ ಇವರ ಹೆಸರು (ಅಲೆಮಾರಿ ಪಾದಗಳಿಗೆ ಅರ್ಪಿತ) **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ವಿನಿ (ಬೆಂಗಳೂರು) ಮಾಮರದಲಿ ಕುಳಿತ ಕೋಗಿಲೆಯ ದನಿ ಮಧುರವಂತೆ ಗೆಳೆಯಾ ಭೃಂಗವದು ಗೂಯ್ ಎನುವ ಝೇಕಾರ ಸೆಳೆದಂತೆ ಗೆಳೆಯಾ ಭೋರೆನುವ ಜಲಪಾತದ ರಮಣೀಯ ದೃಶ್ಯವದು ಮನಮೋಹಕವಂತೆ ಕಾನನದ ರೌದ್ರ ಮೌನವದು ಎದೆನಡುಗಿಸಿದಂತೆ ಗೆಳೆಯಾ ಬೇಲೂರ ಹಳೇಬೀಡಿನ ಶಿಲ್ಪವದು ಶಿಲ್ಪಿಯ ಅದ್ಭುತ ಕೈಚಳಕವಂತೆ ಒಂದೊಂದು ಮದನಿಕೆಯರು ಸೌಂದರ್ಯದ ಪ್ರತೀಕದಂತೆ ಗೆಳೆಯಾ ಪ್ರಕೃತಿಯ ಮಡಿಲಲಿ ಮೈಮರೆತು ಸಂತಸವನು ಆಸ್ವಾದಿಸಿದಂತೆ ಹುಣ್ಣಿಮೆಯ ಪೂರ್ಣಚಂದಮನು ಸೊಗಸಾಗಿ ಕಣ್ಮನ ಸೆಳೆದಂತೆ ಗೆಳೆಯಾ ಸಪ್ತಸ್ವರಗಳ ನಾದದಲಿ ವಿಜಯಳು ದನಿಗೂಡಿಸಿದಂತೆ ಬಾಳ ಪಲ್ಲವಿಗೆ ನಿನ್ನೊಲವಿನ ಸಾಲುಗಳೆ ಭಾವಗೀತೆಯಂತೆ ಗೆಳೆಯಾ ******************

ಕಾವ್ಯಯಾನ Read Post »

ಇತರೆ

ಕವಿ-ಪರಿಚಯ

ಕಮಲಾದಾಸ್ ಶೀಲ ಮತ್ತು ಅಶ್ಲೀಲ ನಡುವಿನ ಗೋಡೆಯನ್ನು ಕೆಡುವಿದ ವಿವಾದಿತ ಮಲಯಾಳಂ ಮತ್ತು ಇಂಗ್ಲೀಷ್ ಲೇಖಕಿ ಕಮಲಾದಾಸ್..! ಕಮಲಾದಾಸ್ ರೆಂದರೆ ನಮ್ಮ ಕನ್ನಡದ ಲೇಖಕಿ ಕಮಲಾ ಹೆಮ್ಮಿಗೆಯವರಿಗೆ ಅದೆಂತದೋ ಪ್ರೀತಿ. ಈ ಲೇಖಕಿ ಕಮಲಾ ಹೆಮ್ಮಿಗೆಯವರ ಬಹುತೇಕ ಕೃತಿಗಳಲ್ಲಿ ಇದೇ ಕಮಲಾದಾಸ್ ರ ನೆರಳನ್ನು ಕಾಣಬಹುದು ಎಂಬ ಅಭಿಪ್ರಾಯ ನನ್ನದು. ಈ ಕಮಲಾ ಹೆಮ್ಮಿಗೆಯವರ ಪ್ರತಿ ಕೃತಿಗಳಲ್ಲೂ ನಾನು ಇದೇ ಕಮಲಾದಾಸ್ ರ ಛಾಪನ್ನು ಕಂಡಿದ್ದೇನೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹೀಗೆ ಹೇಳುತ್ತಲೇ ಈ ಕಮಲಾದಾಸ್ ರ ಜನ್ಮದಿನವಾದ ಮಾರ್ಚ್ 31‌ ರಂದು ಈ ಕಮಲಾದಾಸ್ ರ ಬಗೆಗೆ ಒಂದಿಷ್ಟು ಮಾಹಿತಿ ನೋಡೋಣ… ಕಮಲಾದಾಸ್ ಮಲಯಾಳಂ ಭಾಷೆಯ ಲೇಖಕಿ. ಸಾಹಿತ್ಯವನ್ನು ಬರೆಯಲು ಆರಂಭಿಸಿ ‘ಮಾಧವಿಕುಟ್ಟಿ’ ಎಂಬ ಕಾವ್ಯ ನಾಮದಿಂದ ಕಮಲಾದಾಸ್ ಕತೆಗಳನ್ನು, ಕಾದಂಬರಿಗಳನ್ನು ರಚಿಸಿದರು… ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ಕತೆ, ಕಾದಂಬರಿಗಳ ಕ್ಷೇತ್ರ ಬಹಳ ವಿಶಾಲವಾದುದು. ಅತಿ ಭಾವುಕತೆಯತ್ತ ಕಿರುಗತೆಗಳು ಜಾರುತ್ತಿದ್ದ ಕಾಲದಲ್ಲಿ ಮಾಧವಿಕುಟ್ಟಿ ಎಂಬ ಕಾವ್ಯ ನಾಮದಿಂದ ಕಮಲಾದಾಸ್ ಕತೆಗಳನ್ನು ಕಾದಂಬರಿಗಳನ್ನು ರಚಿಸಿದರು. ವಿವಾದಗಳ ಅಗ್ನಿಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮನ್ನಣೆಯ ಗುರಿಯನ್ನು ತಲುಪುವಷ್ಟರಲ್ಲಿ ಕಮಲಾದಾಸ್ ಸಾಕಷ್ಟು ಮುಳ್ಳುಹಾದಿಗಳನ್ನು ತುಳಿಯಬೇಕಾಯಿತು. ಖ್ಯಾತ ಕತೆಗಾರರಾಗಿದ್ದ ವೈಕ್ಕಂಮಹಮ್ಮದ್ ಬಷೀರ್, ತಗಳಿ ಶಿವಶಂಕರ ಪಿಳ್ಳೈ, ಎಂ.ಟಿ.ವಾಸುದೇವನ್ ನಾಯರ್, ಟಿ. ಪದ್ಮನಾಭನ್ ರವರ ಜೊತೆ ಜೊತೆಗೆ ಕಮಲಾದಾಸ್ ರೂ ಬರೆಯತೊಡಗಿದರು… ಸೋದರಮಾವ, ತಂದೆ, ತಾಯಿ ಮುಂತಾದವರು ಹೇಳಿದ ದಟ್ಟವಾದ ಜೀವನಾನುಭವಗಳಿಗೆ ಅವರು ಅಕ್ಷರ ರೂಪವನ್ನು ಕೊಟ್ಟರು. ಪ್ರಣಯ, ಪ್ರೀತಿ, ಪ್ರೇಮ, ವಾತ್ಸಲ್ಯ ಹಾಗೂ ಮನುಷ್ಯ ಮನುಷ್ಯರ ನಡುವಿನ ಸಂಬಂಧಗಳ ಕುರಿತಾದ ಅವರ ರಚನೆಗಳು ಈಗಲೂ ಪ್ರಸ್ತುತ. ಕೇರಳದ ಗ್ರಾಮೀಣ ಬದುಕಿನ ಮುಗ್ಧತೆಗಳನ್ನು ಅವರು ತಮ್ಮ ಕತೆಗಳಲ್ಲಿ ಹಿಡಿದಿಟ್ಟಿದ್ದಾರೆ. ನಗರದ ಸಂಘರ್ಷಯುಕ್ತ ಆತಂಕಕಾರಿ ಬದುಕನ್ನು ಮನುಷ್ಯ ಮನಸ್ಸುಗಳ ಸಂಕೀರ್ಣತೆಗಳನ್ನು ಅವರು ತೆರೆದಿಟ್ಟಿದ್ದಾರೆ… ಬಾಲ್ಯ ಕಾಲವನ್ನು ಕೇರಳ ಮತ್ತು ಕಲ್ಕತ್ತಾದಲ್ಲಿ ಅವರು ಕಳೆದರು. ಮಾತೃಭಾಷೆ ಮಲಯಾಳಂನ್ನು ಮಮೆಯಲ್ಲಿಯೇ ಕಲಿತರು. ಕಲ್ಕತ್ತಾದ ಬದುಕಿನ ಹಿನ್ನೆಲೆಯಲ್ಲಿ ಅವರು ರಚಿಸಿದ `ಸಮ್ಮರ್ ಇನ್ ಕಲ್ಕತ್ತಾ’ ಎಂಬ ಇಂಗ್ಗ್ಲಿಷ್ ಕವನ ಸಂಕಲನದಿಂದ ಅವರು ಜಗತ್ತಿನ ಸಾಹಿತ್ಯಾಸಕ್ತರ ಗಮನ ಸೆಳೆದರು. ಲೈಂಗಿಕತೆಯನ್ನು ಮತ್ತು ಸಲಿಂಗ ಕಾಮವನ್ನು ಹಸಿಹಸಿಯಾಗಿ ಬರೆದ ಆಧುನಿಕ ಲೇಖಕಿಯರಲ್ಲಿ ಕಮಲಾದಾಸ್ ಮೊದಲಿಗರೆಂದು ಸಾಹಿತ್ಯ ತಜ್ಞರ ಅಭಿಪ್ರಾಯವಾಗಿದೆ… ಅವರು ಬರೆದ ‘ಎಂಡೆಕತ’ (ನನ್ನ ಕತೆ) ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಾಗ ಕೇರಳದ ಸಾಹಿತ್ಯ ಪ್ರಪಂಚ ಅವರನ್ನು ಕಟು ಮಾತುಗಳಿಂದ ಟೀಕಿಸಿತ್ತು. ಅದು ಇಂಗ್ಲಿಷ್ ನಲ್ಲಿ ಬರೆದಾಗ ಪುನಃ ವಿವಾದಗಳಿಗೆ ಸಿಲುಕಿದ್ದರು. ಇವೆರಡು ಪುಸ್ತಕ ರೂಪದಲ್ಲಿ ಹೊರಬಂದಾಗ ಪ್ರತಿಭಟಿಸಿದ ಮಡಿವಂತರೇ ಅದನ್ನು ಕೊಳ್ಳಲು ಮುಗಿಬಿದ್ದರಂತೆ… ಇವರ ಮೈಸ್ಟೋರಿ’ ಕೃತಿಯು ಹದಿನೈದು ವಿದೇಶಿ ಭಾಷೆಗಳಿಗೆ ಅನುವಾದಗೊಂಡಿದೆ. ಈ ಕೃತಿ ತನ್ನ ಆತ್ಮ ಕತೆಯೆಂದು ಹೇಳಿ ಕಮಲಾದಾಸ್ ಅದರ ಮಾರಾಟವನ್ನು ಹೆಚ್ಚಿಸಿಕೊಂಡಿದ್ದರು. ಬಹಳ ವರ್ಷಗಳ ನಂತರಮೈಸ್ಟೋರಿ’ ತನ್ನ ಕಲ್ಪನೆಯ ಕೂಸೆಂದೂ, ಹಣಕ್ಕಾಗಿ ಬರೆದೆನೆಂದೂ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದರು‌ ಕಮಲಾದಾಸ್ ರು… ಇಂಗ್ಲಿಷ್ ನಲ್ಲಿ ಕವಿತೆಗಳನ್ನು ಬರೆದು ಹೊಸತೊಂದು ತರಂಗವನ್ನೇ ಜಗತ್ತಿನಾದ್ಯಂತ ಸೃಷ್ಟಿಸಿದ್ದ ಕವಯತ್ರಿ ಕಮಲಾದಾಸ್. `ಕನ್ ಫೆಷನಲ್ ಪೋಯೆಟ್ರಿ’ ಎಂಬ ನವೀನ ಮಾದರಿಯ ಪದ ಸಂಕುಲ, ಶೈಲಿಗಳು, ಹೆಣ್ಣಿನ ಮನಸ್ಸಿನ ಒಳತೋಟಿಯನ್ನು ಅನಾವರಣಗೊಳಿಸಿದೆ.. ಶೀಲ ಮತ್ತು ಅಶ್ಲೀಲಗಳ ನಡುವಿನ ಗೋಡೆಯನ್ನು ಅವರು ತಮ್ಮ ಬರಹಗಳಿಂದ ಕೆಡವಿ ಹಾಕಿದ್ದಾರೆ.`ಕವಿತೆಯೆಂದರೆ ಹಸುಗೂಸಿನಂತೆ’ ಎಂದು ಅವರು ಟಿ ವಿ ಸಂದರ್ಶನದಲ್ಲಿ ಹೇಳಿದ್ದರು… ಕವಿತೆಗಳನ್ನು ಅವರು ಸತ್ಯಕ್ಕೆ ಹೋಲಿಸುತ್ತಿದ್ದರು. ಸತ್ಯವನ್ನು ತಡೆಯುವುದು ಎಂದರೆ ಹೆರಿಗೆ ನೋವಿನಿಂದ ಬಳಲುತ್ತಿರುವ ಹೆಂಗಸಿಗೆ,`ನೀನು ಹಡೆಯಬಾರದು’ಎನ್ನುವಂತಿರುತ್ತದೆ ಎಂಬುದು ಅವರ ನಿಷ್ಟುರ ಅಭಿಪ್ರಾಯವಾಗಿತ್ತು… ೧೯೯೯ರ ಅಂತ್ಯದಲ್ಲಿ ಅವರು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದರು. ಗುರುವಾಯೂರ್ ಕೃಷ್ಣನ ಪರಮ ಭಕ್ತೆಯಾಗಿದ್ದ ಕಮಲಾದಾಸ್ ರವರು ಮತಾಂತರಗೊಂಡ ಕೂಡಲೆ ಕಮಲಾದಾಸ್ ‘ಸುರೈಯಾ’ (ನಸುಕಿನ್ ನಕ್ಷತ್ರ) ಎಂದು ಹೆಸರನ್ನು ಬದಲಾಯಿಸಿಕೊಂಡರು… ನನ್ನ ಕೃಷ್ಣ ನನ್ನ ಜೊತೆಯಲ್ಲೇ ಬಂದು ಮಹಮ್ಮದನಾಗಿದ್ದಾನೆ. ‘ಗುರುವಾಯೂರಿನಲ್ಲಿ ಈಗ ಕೃಷ್ಣ ಇಲ್ಲ.’ ಎಂದು ಹೇಳಿ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದರು. ಕೇವಲ ಬರವಣಿಗೆಯಲ್ಲಷ್ಟ್ರೇ ಅಲ್ಲ ಸಾರ್ವಜನಿಕ ಬದುಕಿನಲ್ಲಿಯೂ ಅವರು ಹೊಸ ಹಾದಿಯನ್ನು ಹುಡುಕಿದ್ದರು. ೧೯೮೪ರ ಲೋಕಸಭಾ ಚುನಾವಣೆಯಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು… ಆದರೆ ಅವರ ಸಾಹಿತ್ಯದ ಜನಪ್ರಿಯತೆ ಲೋಕಸಭೆ ಪ್ರವೇಶಿಸುವುದಕ್ಕೆ ಸಹಕಾರಿಯಾಗಲಿಲ್ಲ. ತನ್ನ ಪಾಲಿಗೆ ಬಂದ ಕೌಟುಂಬಿಕ ಆಸ್ತಿಯನ್ನು ಅವರು ಕೇರಳ ಸಾಹಿತ್ಯ ಆಕಾಡೆಮಿಗೆ ಬಳುವಳಿಯಾಗಿ ನೀಡಿದ್ದರು. ದೀನದಲಿತರು, ಅನಾಥ ಮಕ್ಕಳೆಂದರೆ ಅವರಿಗೆ ಅತೀವ ಅಕ್ಕರೆ. ತಮ್ಮ ಮೂವರು ಮಕ್ಕಳ ಜೊತೆಯಲ್ಲಿ ಇಬ್ಬರು ಅನಾಥ ಮಕ್ಕಳನ್ನೂ ದತ್ತು ತೆಗೆದುಕೊಂಡು ಪ್ರೀತಿ, ವಾತ್ಸಲ್ಯಗಳಿಂದ ಬೆಳೆಸಿ ಬದುಕಿನಲ್ಲಿ ಒಳ್ಳೆಯ ಸ್ಥಾನ ದೊರಕಿಸಿಕೊಟ್ಟಿದ್ದರು… ಭಾರತ ಸರಕಾರ ನೋಬೆಲ್ ಪ್ರಶಸ್ತಿಗೆ ಕಮಲಾದಾಸ್ ಹೆಸರನ್ನು ಶಿಫಾರಸು ಮಾಡಿತ್ತು. ಹ್ಜೈಸ್ಕೂಲ್ ಶಿಕ್ಷಣವನ್ನು ಪೂರೈಸುವ ಮೊದಲೆ‌ (೧೫ನೆ ವಯಸ್ಸಿಗೆ) ಅವರಿಗೆ ಮದುವೆ ಮಾಡಲಾಗಿತ್ತು. ಮುಂಬಯಿ, ಕಲ್ಕತ್ತಾ, ದೆಹಲಿಗಳಲ್ಲಿ ಅವರು ಬದುಕು ಕಂಡಿದ್ದರು… ಯಾವುದೇ ವಿಶ್ವವಿದ್ಯಾ ಲಯದ ಪದವಿಯನ್ನು ಪಡೆಯದ ಕಮಲಾದಾಸ್ ರ ಕೃತಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಠ್ಯ ಪುಸ್ತಕಗಳಾಗಿವೆ. ‘ಸಮ್ಮರ್ ಇನ್ ಕಲ್ಕತ್ತಾ’, ಆಲ್ಫಬೆಟ್ ಆಫ್ ಲಸ್ಟ್, `ದಿ ಡಿಸೆಂಡೆನ್ಸ್, ಓಲ್ಡ್ ಪ್ಲೇ ಹೌಸ್’ ಕಲೆಕ್ಟೆದ್ ಪೋಯಮ್ಸ್, ಓನ್ಲಿ ದಿ ಸೋಲ್ ನೋಸ್ ಹೌ ಟು ಸಿಂಗ್, ಮುಂತಾದವುಗಳು ಅವರ ಇಂಗ್ಲಿಷ್ ಕೃತಿಗಳು… ಮಲಯಾಳಂನಲ್ಲಿ ಅವರು ಒಟ್ಟೂ ೨೪೫ ಕತೆಗಳನ್ನೂ,೧೦೩ ಕವಿತೆಗಳನ್ನೂ, ೧೧ ಕಾದಂಬರಿಗಳನ್ನೂ, ೩ ನಾಟಕಗಳನ್ನೂ, ೨ ಆತ್ಮಕತೆಗಳನ್ನೂ, ೨ ಪ್ರವಾಸ ಕತೆಗಳನ್ನೂ, ೧೫೩ ಲೇಖನಗಳನ್ನೂ ಮತ್ತು ಎಂಟು ಟಿಪ್ಪಣಿಗಳನ್ನೂ ಕಮಲಾದಾಸ್ ಬರೆದಿದ್ದಾರೆ. ಅವರ ಅನೇಕ ಕತೆ, ಕಾದಂಬರಿಗಳು ಚಲನಚಿತ್ರಗಳಾಗಿ ಯಶಸ್ವಿ ಕಂಡಿವೆ… ಅವರಿಗೆ ದೊರೆತ ಪ್ರಶಸ್ತಿಗಳು ಅನೇಕ. ೧೯೬೩ರಲ್ಲಿ ಪೆನ್ ಅವಾರ್ಡ್, ೧೯೬೪ರಲ್ಲಿ ಏಷ್ಯನ್ ಪೋಯೆಟ್ರಿ ಪ್ರೈಸ್, ೧೯೬೫ರಲ್ಲಿ ಕೇಂಟ್ ಅವಾರ್ದ್, ೧೯೬೭ರಲ್ಲಿ ಕೇರಳ ಸಾಹಿತ್ಯ ಆಕಾಡೆಮಿ ಅವಾರ್ದ್, ೧೯೮೫ರಲ್ಲಿ ಆಶಾನ್ ವರ್ಲ್ಡ್ ಅವಾರ್ಡ್, ೧೯೮೫ರಲ್ಲಿ ಕೆಂದ್ರ ಸಾಹಿತ್ಯ ಆಕಡೆಮಿ ಅವಾರ್ಡ್, ೧೯೮೭ ವರ್ಲ್ಡ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ನಿಂದ ಡಾಕ್ಟರೇಟ್, ೨೦೦೧ರಲ್ಲಿ ಕೇರಳ ಆಕಾಡೆಮು ಫೆಲೊಶಿಪ್, ಇತ್ಯಾದಿಗಳು… ಇದರ ಜೊತೆಗೆ ರಾಜ್ಯ ಚಲನಚಿತ್ರ ಪ್ರಶಸ್ತಿ, ವಯಲಾರ್ ರಾಮವರ್ಮ ಪ್ರಶಸ್ತಿಗಳು ಅವರಿಗೆ ಸಂದಿವೆ… ಕಮಲಾದಾಸ್ ಅವರು ಕೇರಳ ಫೋರೆಸ್ಟ್ ಬೋರ್ಡ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕೇರಳ ಶಿಶು ಸಂರಕ್ಷಣಾ ಸಮೀತಿಯ ಸದಸ್ಯೆ, ಸಾಹಿತ್ಯ ಅಕಾದೆಮಿಯ ಉಪಾಧ್ಯಕ್ಷೆ, ಇಲ್ಲಸ್ತ್ರೇಟೆಡ್ ವೀಕ್ಲಿ ಪತ್ರಿಕೆಯ ಕವನ ವಿಭಾಗದ ಸಂಪಾದಕಿಯಾಗಿಯೂ ಸೇವೆ ಸಲ್ಲಿಸಿದ್ದರು… ಬದುಕಿನುದ್ದಕ್ಕೂ ವಿವಾದಿತ ಲೇಖಕಿಯಾಗಿದ್ದ ಕಮಲಾದಾಸ್ ಮತಾಂತರಗೊಂಡು ಕೇರಳದಲ್ಲಿ ನೆಲೆಸಿದಾಗ ಬಹಳ ವಿರೋಧವನ್ನು ಎದುರಿಸಬೇಕಾಯಿತು. ಇದರಿಂದ ಬೇಸತ್ತು ಕೇರಳ ತೊರೆದು ತನ್ನ ಕಿರಿಯ ಮಗನೊಂದಿಗೆ ಪೂನಾದಲ್ಲಿ ನೆಲೆಸಿದ್ದರು. ೩೧-೫-೨೦೦೯ರಲ್ಲಿ ಅವರು ನಿಧನರಾದಾಗ ಇಸ್ಲಾಂ ಧರ್ಮಕ್ಕೆ ಅನುಗುಣವಾಗಿ ಕೇರಳದಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಯಿತು… ಇಂತಹ ಮಹತ್ವದ ಲೇಖಕಿಯ ಸಮಗ್ರ ಕತೆಗಳೂ ಮತ್ತು ಸಮಗ್ರ ಕಾದಂಬರಿಗಳೂ ಪುಸ್ತಕ ರೂಪದಲ್ಲಿ ಈಗ ಕನ್ನಡಿಗರಿಗೆ ದೊರೆಯುತ್ತಿದೆ.‌ ಕನ್ನಡಕ್ಕೆ ಅನುವಾದಿಸಿದವರು ಕೆ.ಕೆ.ಗಂಗಾಧರರವರು ಕಮಲಾದಾಸ್ ರ ಸಮಗ್ರ ಕಾದಂಬರಿಗಳನ್ನು ಅನುವಾದಿಸಿದವರು… ಹೀಗಿದೆ ಕಮಲಾದಾಸ್ ರ ಬದುಕು ಮತ್ತು ಬರಹ‌ ಅಂಥ ಹೇಳುತ್ತಲೇ ನನ್ನ ಬರಹವನ್ನು ಮುಗಿಸುತ್ತೇನೆ… *********** ಕೆ.ಶಿವು.ಲಕ್ಕಣ್ಣವರ ‌‌‌‌‌ ‌ ‌‌‌‌ ‌‌‌ —

ಕವಿ-ಪರಿಚಯ Read Post »

ಕಾವ್ಯಯಾನ

ಕಾವ್ಯಯಾನ

ಹಾರು ಗರಿ ಬಿಚ್ಚಿ ಡಾ.ಗೋವಿಂದ ಹೆಗಡೆ ಏನಾದರೂ ಆಗಬೇಕು ಬಾಂಬಿನಂತಹ ಏನೋ ಒಂದು ಸ್ಫೋಟಿಸಿ ಹೊಗೆಯಲ್ಲಿ ಅಥವಾ ಅಗ್ನಿಗೋಲದಲ್ಲಿ ಮರೆಯಾಗಿ ಬೇಡ, ಚಾಚಿದ ಕಾಲಿಗೆ ಅಲ್ಲೆಲ್ಲೋ ಮರಳಲ್ಲಿ ಓಡುವ ಇರುವೆ ಕಚ್ಚಿ ‘ಹ್ಹಾ’ ಎಂದು ಏನಾದರೂ ನಡೆಯಲಿ ಇಲ್ಲಿ ಈ ನಿಷ್ಕ್ರಿಯತೆಯನ್ನು ಹೇಗೆ ಸಹಿಸುವುದು +++ ನಿಷ್ಕ್ರಿಯತೆ ನಿರಾಕರಣೆಯೇ ಅನುಭವವೇ ಆಭಾಸವೇ ಅಲ್ಲೆಲ್ಲೋ ಕೋಗಿಲೆ ಕೂಗಿದೆ ಹಕ್ಕಿ ಜೋಡಿ ಸಂಜೆ ಆಗಸವ ಸೀಳಿ ಹಾರಿವೆ ಎಲೆಯೊಂದು ಟಕ್ಕೆಂದು ತೊಟ್ಟು ಕಳಚಿದೆ ತುಸು ಆಲಿಸಿದರೆ ಕೊಂಬೆಯೊಳಗೆ ಹರಿವ ಜೀವರಸದ ಸದ್ದೂ ಕೇಳಬಹುದು ಆದರೂ ಐಸಿಯು ನಲ್ಲಿರುವ ಬಾಲೆಯ ಸ್ತಬ್ಧ ಕಣ್ಣುಗಳ ಶೂನ್ಯ ನೋಟ ಮಾತ್ರ… +++ ಸೂರ್ಯ ಎಂದಿನಂತೆ ಬೆಳಗುತ್ತ ಈ ಗಿಡ ಮರ ಎಲ್ಲ ಹಸಿರುಟ್ಟು ಬೀಗುತ್ತ ಹೊಂಗೆ ಮತ್ತಾವುದೋ ಗಿಡ ಹೂತೇರು ಕಟ್ಟಿ ನಾನು ನಾಲ್ಕು ಗೋಡೆಗಳ ಒಳಗೆ ಹರಿವ ನೀರಿಗೆ ಬಿಚ್ಚಿ ಹಾರಲಾರೆ ಗುಡ್ಡ ಹತ್ತಲಾರೆ ಮರ ಏರಲಾರೆ ಬಯಲಲ್ಲಿ ಕುಣಿಯಲಾರೆ ಆಜೀವ ಶಿಕ್ಷೆಗೆ ಪಕ್ಕಾದ ಕೈದಿಯಂತೆ ಗೋಡೆ ಬಾಗಿಲುಗಳ ನಿರುಕಿಸುತ್ತ.. +++ ಬೋಳು ರಸ್ತೆಗಳು ಹೆಜ್ಜೆ ಸದ್ದಿಗೆ ತವಕಿಸಿರಬಹುದು ಪುಚ್ಚ ಕುಣಿಸಿ ಹಾರುವ ಹಕ್ಕಿ ಓಡುತ್ತ ಏರುವ ನಡುವೆ ಗಕ್ಕನೆ ನಿಂತ ಅಳಿಲಿಗೆ ಇರಬಹುದು ಅಗತ್ಯ ನನ್ನ ನೋಟವೊಂದರ ಸಾಂಗತ್ಯ ಮತ್ತೆ ಚಕ್ರ ತಿರುಗಿ ರಸ್ತೆ ಕಲಕಲ ಎನ್ನುವಾಗ ಮರೆಯದೆ ಐಸಿಯು ನ ಆ ಬಾಲೆಯ ಕೈಯಲ್ಲಿ ಕೈಯಿಡಬೇಕು ಹೂ ರೆಪ್ಪೆಗಳ ಮೇಲೆ ಹಗೂ‌♪ರ ಬೆರಳಾಡಿಸಿ ಪಿಸುಗುಡಬೇಕು “ಏಳು ಮಗೂ, ಸರಿದಿದೆ ಮೋಡ ಕಾದಿದೆ ಬಾನು ಹೋಗು ಹಾರು ಗರಿ ಬಿಚ್ಚಿ…” **********

ಕಾವ್ಯಯಾನ Read Post »

You cannot copy content of this page

Scroll to Top