ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರಬಂಧ

ಕರೊನ-ನೆಗಡಿ ಜ್ಯೋತಿ ಡಿ.ಬೊಮ್ಮಾ ಈಗ ಎಲ್ಲರೂ ಅಸ್ಪೃಶ್ಯರೆ ,ಒಬ್ಬರಿಂದ ಒಬ್ಬರು ದೂರ ಇರುವ ಅಸಹಾಯಕತೆ ತಂದೊಡ್ಡಿದ ಆ ಒಂದು ಚಿಕ್ಕ ವೈರಾಣುವಿಗೆ ಇಡೀ ಮನುಕುಲವೇ ಅಂಜಿ ನಡುಗುತ್ತಿದೆ. ಆಪ್ತವಾಗಬೇಕಿದ್ದ ಬಾಂಧವ್ಯಗಳು ಸಂಬಂಧಗಳು ಕರಗುತ್ತಿವೆ.ದೈಹಿಕ ಅಂತರ ಮನದಂತರವನ್ನು ದೂರಗೊಳಿಸುತ್ತಿದೆ ಒಬ್ಬರನ್ನೊಬ್ಬರು ಅನುಮಾನದಿಂದ ನೋಡಿಕೊಳ್ಳುತ್ತ ,ತಮ್ಮವರೊಡನೆಯೂ ಆಗಂತುಕರಂತೆ ಬದುಕುವಂತೆ ಮಾಡಿದ ಈ ಸಂದರ್ಭ ಯಾತಾನಾಮಯವಾಗಿದೆ. ಮನೆಯಲ್ಲಿ ಎಲ್ಲರೊಡನೆ ಬೆರೆತು ಊಟ ತಿಂಡಿ ಮಾಡುತಿದ್ದರೂ ಒಳಗೆಲ್ಲ ಎಕಾಂಗಿ ಭಾವ ,ಎನೋ ತಳಮಳ ಹೇಳಿಕೊಳ್ಳಲಾಗದ ಅಸಹಾಯಕತೆ ,ಹಿಂದೆಂದೂ ಕಾಡಿರದ ಅನಿಶ್ಚಿತತೆ ಮನ ಕೊರೆಯುವಂತೆ ಮಾಡುತ್ತಿದೆ. ಇಡೀ ದೇಶವೆ ಒಂದು ಕಾರಾಗೃಹವಾಗಿ ಎಲ್ಲರ ಸ್ವಾತಂತ್ರ್ಯ ಹರಣವಾಗಿ ಈಗ ಅಕ್ಷರಶಃ ಎಲ್ಲರೂ ಕೈದಿಗಳೆ. ಆಪತ್ತು ತಮ್ಮ ಮೇಲೆ ಯಾವಾಗ ಎರಗುವದೋ ಎಂಬ ಭಿತಿಯಲ್ಲಿ ದಿನಗಳನ್ನು ದೂಡುತ್ತ ಮತ್ತೆ ಮೊದಲಿನಂತೆ ಬದುಕು ಬಂಡಿ ಸಾಗಿಸುವ ದಿನಗಳ ಕನಸು ಕಾಣುತ್ತ ,ಕ್ಷಣಕೊಮ್ಮೆ ಬಣ್ಣ ಬದಲಾಯಿಸುವ ಭಾವನೆಗಳೊಂದಿಗೆ ಬೆರೆಯುತ್ತ ಇನ್ನೆಷ್ಟು ದಿನ ಹೀಗೆ ಎಂದು ಉತ್ತರವಿರದ ಪ್ರಶ್ನೆಗಳನ್ನು ಒಬ್ಬರಿಗೊಬ್ಬರು ಕೇಳುತ್ತ ದಿನ ದೂಡುವಂತಾಗಿದೆ.ಹಾಗೆ ನೋಡಿದರೆ ರೋಗ ಯಾರಿಗೂ ಹೊಸದಲ್ಲ .ರೋಗ ಇರದ ಮನುಷ್ಯ ನಿರಲು ಸಾಧ್ಯವೇ ,! ಕೆಮ್ಮು ನೆಗಡಿಯಂತ ಸಾಮಾನ್ಯ ರೋಗವೆ ರೋಕ್ಷವಾಗಿ ಬೆಳೆದು ಕಂಗೆಡುವಂತಾಗಿದೆ. ನನಗೂ ನೆಗಡಿಗೂ ಅವಿನಾಭಾವ ಸಂಬಂಧ.ವರ್ಷದ ಎಲ್ಲಾ ದಿನಗಳು ಅದು ನನಗೆ ಆಪ್ತ.ಇಷ್ಟು ವರ್ಷಗಳ ಸಂಗಾತಿಯಾದ ಅದರ ಮೇಲಿನ ಮುನಿಸು ಮಾಯವಾಗಿ ಅದರ ಉಪದ್ರವ ಸಹಿಸಿಕೊಳ್ಳುವದು ಕಲಿತಿದ್ದೆನೆ.ಹತ್ತು ಹದಿನಾರು ವಸ್ತುಗಳ ಅಲರ್ಜಿ ಇರುವ ನನ್ನ ಶರಿರಕ್ಕೆ ಆ ವಸ್ತುವಿನ ಸಂಪರ್ಕಕ್ಕೆ ಬಂದ ತಕ್ಷಣ ಸೀನುಗಳು ಜ್ಞಾಪಿಸುತ್ತವೆ .ತಕ್ಷಣವೇ ಎಚ್ಚೆತ್ತುಕೊಂಡು ಆ ವಸ್ತುವಿನಿಂದ ದೂರವಿರುತ್ತೆನೆ .ಆದರೂ ನನ್ನ ಸೀನುಗಳು ಮುನಿದು ಆ ಮುನಿಸು ಹೊರಹಾಕದೆ ಬಿಡವು . ಮೊದಮೊದಲು ನನ್ನ ಅಲರ್ಜಿ ಸೀನುಗಳನ್ನು ಗಂಭಿರವಾಗಿ ಪರಿಗಣಿಸುತ್ತಿದ್ದ ಮನೆಯವರು ಈಗೀಗ ಅದೊಂದು ಸಾಮಾನ್ಯ ಪ್ರಕ್ರಿಯೆ ಎಂಬಂತೆ ಕಾಣತೊಡಗಿದ್ದಾರೆ ಹೀಗಾಗಿ ಸೀನುಗಳು ನನ್ನ ಉಸಿರಾಟದಷ್ಟೆ ಸಾಮಾನ್ಯವಾಗಿರುವವು ನನಗೆ. ಆದರೆ ನಮ್ಮೆಜಮಾನರು ಇದಕ್ಕೆ ತದ್ವಿರುದ್ಧ ,ಒಂದೇ ಒಂದು ಸೀನು ಬಂದರು ಆಕಾಶವೆ ತಲೆ ಮೇಲೆ ಬಿದ್ದಂತೆ ಮೈ ಮುಖಕ್ಕೆಲ್ಲ ವಿಕ್ಸ ಬಳಿದುಕೊಂಡು ಮುಸುಕೆಳೆದು ಮಲಗಿಬೀಡೋರು. ಆ ರಂಪಾಟ ಮುಲುಗಾಟ ,ಮಾತ್ರೆಗಳು ಸಿರಪ್ ಗಳು, ಬಂದ ನೆಗಡಿಯನ್ನು ಆದಷ್ಟೂ ಬೇಗ ಓಡಿಸುವ ಧಾವಂತ ಆದರೂ ಜಪ್ಪಯ್ಯ ಎಂದರೂ ಜಗ್ಗದ ನೆಗಡಿ ಬಂದು ನಾಲ್ಕೈದು ದಿನ ಇದ್ದು ಆತಿಥ್ಯ ಸ್ವೀಕರಿಸಿಯೇ ಹೊಗುವದು.ಅದು ಇರುವವರೆಗೂ ಮನೆ ಒಂದು ಜಾತ್ರಯೇ ,ಬಿಸಿ ನೀರು ಕುಡಿಯುವದು ,ವಿಕ್ಸ ಹಾಕಿ ಹಬೆ ತೆಗೆದುಕೊಂಡು ಮುಖವೆಲ್ಲ ಕೆಂಪಗೆ ಮಾಡಿಕೊಂಡು ಹೋಂಕರಿಸುತ್ತ ,ಸೂರು ಹಾರಿಹೋಗುವಂತೆ ಸೀನುತ್ತ ಪರದಾಡುವದು ನೋಡಿದರೆ ನನಗೆ ಬರುವ ಸೀನುಗಳು ನಿರುಪದ್ರವಿಗಳೊ ಅಥವಾ ನಾನೇ ಅವುಗಳಿಗೆ ಒಗ್ಗಿಕೊಂಡಿರುವೆನೊ ತಿಳಿಯದು. ನೆಗಡಿ ಯಾವಾಗಲೂ ಆಪ್ತ ಕಾಯಿಲೆ ,ಒಬ್ಬರಿಗೆ ಬಂದರೆ ಮತ್ತೊಬ್ಬರನ್ನು ಸೆಳೆಯುತ್ತದೆ.ಕಣ್ಣು ಮೂಗಿನಲ್ಲಿ ಸುರಿಯುವ ನೀರನ್ನು ಸೊರ್ ಸಿರ್ ಎಂದೆನಿಸುತ್ತ ಕೆಂಪೇರಿದ ಮುಖವನ್ನು ನೋಡಿದವರು ಅಯ್ಯೊ ಎಂದು ಅನುಕಂಪ ತೊರಿಸಿ ನಮಗಾಗಿ ಮರಗುವರು ,ಅಂತಹ ಸಂದರ್ಭದಲ್ಲಿ ನಮ್ಮ ಕೆಲಸ ಕಾರ್ಯ ಗಳಿಗೂ ವಿನಾಯ್ತಿ ದೊರಕಿಸಿ ಕೊಡುವರು.ಎದುರಿನವರ ಪ್ರೀತಿಯ ಸ್ಪಂದನೆಗೆ ಮುದವಾದ ಮನ ನೆಗಡಿಯನ್ನು ಅಪಾಯ್ಯಮಾನವಾಗಿ ಅಪ್ಪಿಕೊಳ್ಳುವದು. ಕೆಲವರು ನೆಗಡಿ ಬಂದರೆ ಊಟ ತಿಂಡಿ ಬಿಟ್ಟು ಮುಷ್ಕರ ಹೂಡಿದಂತೆ ಇದ್ದು ಬಿಡುವರು.ನನಗೋ ನೆಗಡಿ ಬಂದರೆ ಬೇರೆ ದಿನಗಳಿಗಿಂತ ಹೆಚ್ಚಾಗಿ ತಿನ್ನುವ ಚಪಲವಾಗುತ್ತದೆ.ನೆಗಡಿಯಿಂದ ರುಚಿ ವಾಸನೆ ಕಳೆದುಕೊಂಡ ಗ್ರಂಥಿಗಳ ಚಿಗುರುವಿಕೆಗೆ ಹೊಸ ಬಗೆಯ ಖಾದ್ಯಗಳ ಸಮಾರಾಧನೆಯಾಗಲೆಬೇಕು .ಬೇರೆಲ್ಲಾ ರೋಗಗಳಿಗೆ ಉಟದಲ್ಲಿ ಪಥ್ಯ ಅನುಸರಿಸಿದರೆ ನೆಗಡಿಗೆ ಪಥ್ಯವೆ ಇಲ್ಲ.ಬಾಯಿ ರುಚಿ ಕೆಟ್ಟಿದೆಯೆಂದು ಹೇರಳವಾಗಿ ಉಪ್ಪು ಹುಳಿ ಖಾರದ ಅಡುಗೆಗಳು ಸಿಹಿ ಪದಾರ್ಥಗಳು ಎಗ್ಗಿಲ್ಲದೆ ಸೇವಿಸುತ್ತ ಹಾಗೆ ಸೀನುತ್ತ ,ಎಲ್ಲರಿಗೂ ನೆಗಡಿಯಾಗಿದೆ ಆರಾಮಿಲ್ಲ ಎಂದು ಹೇಳುತ್ತಲೆ ನೆಗಡಿಯನ್ನು ಪ್ರೀತಿಸುವ ಪ್ರತಿಯೊಬ್ಬರು ಇಲ್ಲಿವರೆಗೆ ನೆಗಡಿ ಒಂದು ರೋಗ ಎಂದು ಪರಿಗಣಿಸಿದ್ದೆ ಇಲ್ಲ. ಯಾವಾಗಾ ಈ ಕರೋನ ಮಾರಿ ಕಾಲಿಟ್ಟಿತ್ತೊ ನನ್ನ ಪ್ರೀತಿ ಪಾತ್ರ ನೆಗಡಿ ಎಲ್ಲರ ಕಂಗೆಣ್ಣಿಗೆ ಗುರಿಯಾಯಿತು.ಈಗ ಪ್ರತಿಯೊಬ್ಬರ ಕೆಮ್ಮು ಸೀನುಗಳು ಅನುಮಾನದಿಂದ ನೋಡುವಂತಾಗಿದೆ.ಕೆಲವೊಮ್ಮೆ ಒಗ್ಗರಣೆಯಿಂದ ಬರುವ ಸೀನುಗಳನ್ನು ಪ್ರಯತ್ನ ಪೂರ್ವ ಕವಾಗಿ ತಡೆಹಿಡಿಯುವ ಮನಸ್ಸಾಗುತ್ತಿದೆ. ಯಾರಾದರೂ ಕೇಳಿದರೆ ಅನುಮಾನ ಪಟ್ಟುಕೊಳ್ಳುವರು ಎಂಬ ಭಯದಿಂದ. ಮೊದಲೆಲ್ಲ ನೆಗಡಿಯಾದರೆ ಮನೆಯವರ ಅನುಕಂಪಕ್ಕೆ ಪಾತ್ರಳಾಗುತಿದ್ದ ನಾನು ,ಈಗ ಒಂದೇ ಒಂದು ಸೀನಿದರು ಎದುರಿನವರ ಕಣ್ಣಲ್ಲಿ ನೂರೆಂಟು ಪ್ರಶ್ನೆಗಳು ! ಅಂತಹುದರಲ್ಲಿ ಉಪದೇಶ ಬೇರೆ ,ಜಾಸ್ತಿ ಸೀನಬೇಡ ,ಯಾರಾದರು ಅಕ್ಕ ಪಕ್ಕದವರು ಕಂಪ್ಲೆಂಟ ಮಾಡಿದರೆ ಹೋಂ ಕಾರೈಂಟೈನ ನಲ್ಲಿ ಇರಬೇಕಾಗುತ್ತೆ ಎಂಬ ಅನುಮಾನ ಬೇರೆ.ಜೀವನವೆಲ್ಲ ಮನೆಯಲ್ಲೇ ಕಳೆಯುವ ನಾವು ಗೃಹಿಣಿ ಯರಿಗೆ ಮನೆ ಎಂದೂ ಬಂಧನ ಎನಿಸಿದ್ದೆ ಇಲ್ಲ. ಈಗ ಗೃಹಬಂಧನದಲ್ಲಿರುವ ಪುರುಷರಿಗೆ ಸ್ವಲ್ಪ ವಾದರೂ ಅರ್ಥ ವಾಗಿರಬೇಕು ,ದಿನವೆಲ್ಲ ಮನೆಯಲ್ಲಿ ಏನು ಮಾಡುತ್ತಿ ಎಂಬ ಪ್ರಶ್ನೆಯ ಉತ್ತರ. ಇಲ್ಲಿಯವರೆಗ ನೆಗಡಿ ಕೆಮ್ಮಿಗೆ ಪ್ರತ್ಯಕವಾದ ಔಷಧ ಲಭ್ಯವಿಲ್ಲ.ಅದು ಸರದಿಯಂತೆ ಬರುತ್ತದೆ ನಿರ್ಗಮಿಸುತ್ತದೆ. ಸಭೆ ಸಮಾರಂಭ ಜಾತ್ರಗಳಲ್ಲಿ ಹಿಂಡು ಹಿಂಡಾಗಿ ಓಡಾಡುತ್ತ ಒಬ್ಬರ ಬೆನ್ನಿಂದ ಒಬ್ಬರು ಸೀನುತ್ತ ಸಂಚರಿಸುವ ನಾವು ,ಮತ್ತೊಬ್ಬರು ಸಮೀಪವಾಗಿರುವಾಗಲೂ ದೂರ ನಿಂತು ಸೀನಬೇಕೆಂಬ ಕಲ್ಪನೆಯು ಇರದೆ ಆಕ್ಷಿಇ ..ಎಂದು ಸೀನಿದಾಗಲೂ ಇದೊಂದು ಸಾಮನ್ಯ ಪ್ರಕ್ರಿಯೆ ಎಂಬಂತೆ ನೋಡಿದ ನಮಗೆ ಈಗಿನ ಸಾಮಾಜಿಕ ಅಂತರ ಅರಗಿಸಿಕೊಳ್ಳಲು ಹಿಂಸೆಯಾಗುತ್ತಿದೆ. ಅದರೂ ಈ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ಇವುಗಳನ್ನು ಅನುಸರಿಸದೆ ಬೇರೆ ದಾರಿಯಿಲ್ಲ. ಮತ್ತೊಬ್ಬರಿಂದ ನಮಗೆ ರೋಗ ಅಂಟಬಾರದು ಎಂದು ತಗೆದುಕೊಳ್ಳುವ ಮುಂಜಾಗ್ರತೆಯೊಂದಿಗೆ ನಮಗೆ ಬಂದಿದ್ದನ್ನು ಮತ್ತೊಬ್ಬರಿಗೆ ಹರಡದಂತೆ ಎಚ್ಚರವಹಿಸುವದು ತುಂಬಾ ಮುಖ್ಯವಾಗಿದೆ. **********************

ಪ್ರಬಂಧ Read Post »

ಕಾವ್ಯಯಾನ

ಕಾವ್ಯಯಾನ

ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು  ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, ಹತ್ತಿರದವರನ್ನು ದೂರವಿರಿಸಿ ದೂರ ಇರುವವರನ್ನು ದೂರವೇ ಬಯಸಿ ಮರೆಯಿತಿರುವ ಕ್ವಾರಂಟೈನ್ ದಿನ., ಕಸ ಗುಡಿಸುವಾಗ ನೆಲ ಒರೆಸುವಾಗ ಪಾತ್ರೆಗಳ ತೋಳೆಯುವಾಗೆಲ್ಲ ಕೆಲಸದವಳ  ನೆನಪು ಇದು ಕ್ವಾರಂಟೈನ್ ದಿನ ಎಲ್ಲರ ಮನೆಯ ತಾರಸಿಯ ಮೇಲೆ ನಕ್ಕು ನಲಿಯುತಿದೆ ಮುಟ್ಟಿಯು ಮುಟ್ಟಲಾರದಂತಹ ಕ್ವಾರಂಟೈನ್ ದಿನ, ಮುಟ್ಟಿದ  ಪ್ರತಿ ತಪ್ಪಿಗೂ ಪದೇ ಪದೇ ಸ್ಯಾನಿಟೈಜರ್ ಉಪಯೋಗಿಸಿ ಮತ್ತೆ ಮತ್ತೆ ಕೈ ತೊಳೆವ ಕ್ವಾರಂಟೈನ್ ದಿನ ಮುಗಿಯದ ಮಕ್ಕಳ ಕಲರವ ಮುಳುಗಿದೆ ಮನೆಯು ಇವರ ಆಫೀಸಿನ ತರಹ ಅಡುಗೆ ಮನೆಗೆ ಬಿಡುವಿಲ್ಲವಂತೆ ಇದು ಕ್ವಾರಂಟೈನ್ ದಿನ, ಇದ್ದ ಅಲ್ಪ ಸ್ವಲ್ಪ ನನ್ನ ಗಳಿಗೆಗಳು ಇಲ್ಲವಾದ ದಿನ ಮಳೆಹನಿಗೆ ಕೈಒಡ್ಡದ ಹಸಿರ ಹವೆಗೆ ಮೈತಾಗದ ಇದು ಕ್ವಾರಂಟೈನ್ ದಿನ… ಆದರೂ ನನ್ನ ನಾ ಅರಿವ ನನ್ನವರೆಲ್ಲ ಹಗಲಿರುಳು ಒಂದಾಗಿ , ಒಂದೇ ಸೂರಿನಡಿಯಲಿ ನಕ್ಕು ನಲಿದು, ತುತ್ತು ಉಣಿಸಿ ಮೆರೆಯುತಿರುವ ಅಭಿಮಾನದ ಕ್ವಾರಂಟೈನ್ ದಿನ… ********** ಕಸ ಗುಡಿಸುವಾಗ ನೆಲ ಒರೆಸುವಾಗ ಪಾತ್ರೆಗಳ ತೋಳೆಯುವಾಗೆಲ್ಲ ಕೆಲಸದವಳ  ನೆನಪು ಇದು ಕ್ವಾರಂಟೈನ್ ದಿನ ಎಲ್ಲರ ಮನೆಯ ತಾರಸಿಯ ಮೇಲೆ ನಕ್ಕು ನಲಿಯುತಿದೆ ಮುಟ್ಟಿಯು ಮುಟ್ಟಲಾರದಂತಹ ಕ್ವಾರಂಟೈನ್ ದಿನ, ಮುಟ್ಟಿದ  ಪ್ರತಿ ತಪ್ಪಿಗೂ ಪದೇ ಪದೇ ಸ್ಯಾನಿಟೈಜರ್ ಉಪಯೋಗಿಸಿ ಮತ್ತೆ ಮತ್ತೆ ಕೈ ತೊಳೆವ ಕ್ವಾರಂಟೈನ್ ದಿನ ಮುಗಿಯದ ಮಕ್ಕಳ ಕಲರವ ಮುಳುಗಿದೆ ಮನೆಯು ಇವರ ಆಫೀಸಿನ ತರಹ ಅಡುಗೆ ಮನೆಗೆ ಬಿಡುವಿಲ್ಲವಂತೆ ಇದು ಕ್ವಾರಂಟೈನ್ ದಿನ, ಇದ್ದ ಅಲ್ಪ ಸ್ವಲ್ಪ ನನ್ನ ಗಳಿಗೆಗಳು ಇಲ್ಲವಾದ ದಿನ ಮಳೆಹನಿಗೆ ಕೈಒಡ್ಡದ ಹಸಿರ ಹವೆಗೆ ಮೈತಾಗದ ಇದು ಕ್ವಾರಂಟೈನ್ ದಿನ… ಆದರೂ ನನ್ನ ನಾ ಅರಿವ ನನ್ನವರೆಲ್ಲ ಹಗಲಿರುಳು ಒಂದಾಗಿ , ಒಂದೇ ಸೂರಿನಡಿಯಲಿ ನಕ್ಕು ನಲಿದು, ತುತ್ತು ಉಣಿಸಿ ಮೆರೆಯುತಿರುವ ಅಭಿಮಾನದ ಕ್ವಾರಂಟೈನ್ ದಿನ…

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ನಾನು ಓದಿದ ಪುಸ್ತಕ

ನಕ್ಷತ್ರ ಸೂಕ್ತ  ಡಾಕ್ಟರ್ ಅನಸೂಯಾದೇವಿ  ನಕ್ಷತ್ರ ಸೂಕ್ತ  ಲೇಖಕಿ ಡಾಕ್ಟರ್ ಅನಸೂಯಾದೇವಿ  ಪ್ರಕಾಶಕರು ಶ್ರೀ ಅನ್ನಪೂರ್ಣ ಪ್ರಕಾಶನ ಅಗ್ರಹಾರ ದಾಸರಹಳ್ಳಿ ಬೆಂಗಳೂರು ೫೦೦೦೭೯  ಮೊದಲ ಮುದ್ರಣ ೨೦೧೪ ಬೆಲೆ ರೂ.೧೫೦/ ಮೂರು ಪ್ರಬುದ್ಧ ಮುಖ್ಯಪಾತ್ರಗಳ ಸುತ್ತ ತಿರುಗುವ ಕಥೆ .ಅಡಿ ಟಿಪ್ಪಣಿ ಹೇಳುತ್ತದೆ “ನನಗೊಂದು ಮಗು ಬೇಕು” ನಾಯಕಿ ಮಾರ್ದವಿ ಸಂಗೀತಗಾರಳು ವಿದ್ಯಾವಂತೆ ಹಾಗೂ ಸೌಮ್ಯ ಸ್ವಭಾವದ ರೂಪಸಿ .ಅವಳ ಪ್ರತಿ ಮಧುಕರ ಕಾಲೇಜು ಉಪನ್ಯಾಸಕನಾಗಿದ್ದವನು  ಹಾಗೂ ದೇವಾಲಯದ ಅರ್ಚಕ ಸಂಸ್ಕೃತ ವಿದ್ವಾಂಸ ಹಾಗೂ ಪಿ.ಎಚ್.ಡಿ. ಬರೆಯುತ್ತಿರುವ ಭಾಸ್ಕರ ಸೋಮಯಾಜಿ. ಅವರ ಕಥೆಗೆ ಹಿರಿಯರ ಕಾಲದ ಶಾಪದ ವೃತ್ತಾಂತ ಆಸ್ತಿಗಾಗಿ ಅಣ್ಣತಮ್ಮಂದಿರ ದ್ವೇಷ ಕಲಹಗಳ ಹಿನ್ನೆಲೆ ತೆಗೆದುಕೊಂಡು ವಿವರಿಸುತ್ತಾ ಹೋಗುವ ಕಥೆಯ ಎಳೆ. ಇತ್ತೀಚಿನ ದಿನಗಳಲ್ಲಿ ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದ ಕಾದಂಬರಿ ಇದು.  ಬಾಲವಿಧವೆ ರಾಧಜ್ಜಿಯ ಹಕ್ಕಿಗಳೊಡನಿನ ಸಂಭಾಷಣೆ, ಅಣ್ಣನ ಮೋಸಕ್ಕೆ ಬಲಿಯಾದ ಶಾಂತಾರಾಮಜ್ಜ, ಅನ್ಯಾಯಕ್ಕೆ ಈಡಾಗಿ ವಿಷ ಕುಡಿದು ವಂಶಕ್ಕೆ ಶಾಪ ಕೊಟ್ಟ ಶಾಂತಾರಾಮನ ಪತ್ನಿ ಜಯಲಕ್ಷ್ಮಿ ಈ ಪಾತ್ರಗಳು ನೆನಪಿನಲ್ಲಿ ಉಳಿಯುತ್ತವೆ. ಪ್ರತಿಯೊಂದು ಮನೆತನದಲ್ಲಿ ಹುಡುಕಿದರೆ ಇಂತಹ ಕಥೆಗಳು ಸಿಗಬಹುದೇನೋ. ಆದರೆ ತಮ್ಮ ಪಾಪದ ಫಲ ಇಂದಿನ ತಮ್ಮ ಅವಸ್ಥೆ ಎಂದರಿಯುವವರು ಮಾತ್ರ ಇರುವುದಿಲ್ಲ.   ಪೂರ್ಣ ಕಥೆಯನ್ನು ವಿವರಿಸಿ ನಿಮ್ಮ ಕುತೂಹಲಕ್ಕೆ ಭಂಗ ತರುವುದಿಲ್ಲ ನಾನು.  ಓದಿಯೇ ತೀರಬೇಕು ಅದರ ಆಸ್ವಾದ ಅರಿಯಲು. ಮುನ್ನುಡಿಯಲ್ಲಿ ಡಾಕ್ಟರ್ ಟಿ ಎ ಬಾಲಕೃಷ್ಣ ಅಡಿಗರು ಹೇಳಿರುವಂತೆ ” ಭಾವ ಬೆಳಕು ಭಾವಲೋಕ, ಭಾವವಲಯ, ಭಾವಸಂಗಾತಿ ಭಾವ ತೇವತೆ ಭಾವ ಜಟಿಲತೆ ಈ ಎಲ್ಲಾ ಪದಗಳನ್ನು ಲೇಖಕಿಯು ಬಳಸುವಲ್ಲಿ ಅವರು ಸೃಷ್ಟಿಸಿರುವ ಭಾವಜಗತ್ತನ್ನು ಅರ್ಥೈಸಿಕೊಳ್ಳುವಲ್ಲಿ ಈ ಕಾದಂಬರಿಯ ಓದುಗನಿಗೂ ಕೂಡ ವಿಶೇಷ ಭಾವ ಸಂಸ್ಕಾರವಿದ್ದರೆ ಒಳಿತು “. ನಿಜ ತಮ್ಮ  ಭಾವ ತೀವ್ರತೆ ಇರುವ ಬರವಣಿಗೆಯಿಂದ ಲೇಖಕಿ ನೇರ ಓದುಗನ ಹೃದಯದಾಳಕ್ಕೆ ಲಗ್ಗೆಯಿಡುತ್ತಾರೆ . ಬಳಸಿರುವ ಭಾಷೆಯ ಮೇಲಿನ ಹಿಡಿತ ಜೊತೆಯಾಗಿರುವ ಸಂಗೀತ ಸಾಹಿತ್ಯ ಉದ್ದರಣೆಗಳು ಕಥೆಯ ಓಘಕ್ಕೆ ಇಂಬು ಕೊಡುತ್ತ ಹೋಗುತ್ತದೆ. ಪ್ರಾಚೀನ ಹಾಗೂ ಅರ್ವಾಚೀನ ಸಂಗತಿಗಳ ನಡುವಣ ಸಾಮರಸ್ಯ ,ಉದಾಹರಣೆಗೆ ನಿಯೋಗ ಪದ್ಧತಿ ಮತ್ತ ಐವಿಎಫ್, ವೇದ ಕಾಲದ ಸೂಕ್ತಗಳು ಹಾಗೂ ಮೊಹೆಂಜದಾರೋ ಮುದ್ರೆಗಳ ನಡುವಣ ಸಾಮ್ಯತೆ ಹಾಗೂ ಅಧ್ಯಯನ ಎಲ್ಲವೂ ಕಥೆಗೆ ಪೂರಕವಾಗುತ್ತಾ ಸಾಗುತ್ತದೆ . ಲೇಖಕಿ ಸ್ವತಃ ಗಾಯಕಿಯೂ ಹೌದು. ಆದ್ದರಿಂದ ನಾಯಕಿಯ ಗಾಯನ ಆಗಿನ ಅವಳ ಮನಃಸ್ಥಿತಿಗಳನ್ನು ಕಣ್ಣಿಗೆ ಕಟ್ಟುವಂತೆ ಮನಕ್ಕೆ ನಾಟುವಂತೆ ಚಿತ್ರಿಸಿದ್ದಾರೆ.  ಹೆಣ್ಣಿನ ಜನ್ಮದ ಸಾಫಲ್ಯ ತಾಯ್ತನ .ಪ್ರತಿ ಹೆಣ್ಮನವೂ “ನನಗೊಂದು ಮಗು ಬೇಕು” ಎಂದು ಹಂಬಲಿಸುತ್ತಲೇ ಇರುತ್ತದೆ.  ಆ ತುಡಿತ ಮಿಡಿತದ ಹಪಾಹಪಿ ಹಾಗೂ ಅದನ್ನು ಪೂರೈಸಿಕೊಳ್ಳುವ ವಿಧಾನ ಇದು ಕಥಾವಸ್ತು. ಆದರೆ ಅದನ್ನು ಹಿಡಿದಿಟ್ಟಿರುವ ಲೇಖಕಿಯ ಅನನ್ಯತೆಗೆ ಶರಣು ಅನ್ನಲೇಬೇಕು. ಚರ್ವಿತ ಚರ್ವಣವಾಗದೆ ಹೀಗೆ ಆಗಬಹುದು ಎಂದು ಊಹಿಸಲಾಗದ, ಹೀಗೂ ಆಗಬಹುದು ಎಂದು ನಿರೂಪಿಸಿರುವ ಶೈಲಿ ತುಂಬಾ ಮನಕ್ಕೆ ಮುಟ್ಟಿತು ಆಪ್ಯಾಯವಾಯಿತು ಆಪ್ತವಾಯಿತು . ಕಾದಂಬರಿಯ ಈ ಸಾಲುಗಳು  ಸ್ತ್ರೀ ಸಮಾನತೆ ಸ್ವಾತಂತ್ರ್ಯ  ಪರವಾದವರಿಗೆ ಸಮಾಧಾನವನ್ನೂ ನೀಡಬಹುದು.  “ಬೀಜವೊಂದನ್ನೇ ವಂಶ ಮೂಲವೆಂದು ಗುರುತಿಸುವುದೇಕೆ?  ಕ್ಷೇತ್ರವನ್ನೇಕೆ ವಂಶ ಪಾರಂಪರಿಕೆಯಾಗಿ ಪರಿಗಣಿಸಬಾರದು? ಕ್ಷೇತ್ರವಿಲ್ಲದೆ ಬೀಜವೊಂದರಿಂದಲೇ ವಂಶ ಬೆಳೆಯುತ್ತದೆಯೇ ?” ಮಾರ್ದವಿ ಬೆಟ್ಟಕ್ಕೆ ತೆರಳುವ ಸಂದರ್ಭದಲ್ಲಿ ಕೋತಿಗಳು ಎದುರಾಗುವ ಸಂದರ್ಭವನ್ನು ತುಂಬಾ ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ.  ಹಾಗೆಯೇ ಮಾರ್ದವಿಗೆ ಬೀಳುವ ಕನಸಿನ ವಿವರವೂ ಸಹ . ಮಧ್ಯೆ ಬರುವ ಭಾವ ಗೀತೆಗಳ ಸಾಲುಗಳು ರಾಗಗಳ ವರ್ಣನೆ ಅಬ್ಬಾ ಒಂದು ಸಂಪೂರ್ಣ ಭಾವಮಯ ಭಾವುಕ ಜೀವಿಗಳ ಭಾವ ಬಣ್ಣನೆ! . ಶಿಥಿಲಗೊಳ್ಳುತ್ತಿರುವ ಕೌಟುಂಬಿಕ ಸಂಬಂಧಗಳು,ಹೆಚ್ಚುತ್ತಿರುವ ವಿಷಮ ಸಂಸಾರಗಳು ವಿವಾಹೇತರ ಸಂಬಂಧಗಳ ಮಧ್ಯದಲ್ಲಿ ಇಂತಹ ಕಾದಂಬರಿಗಳು ಹೆಚ್ಚು ಮೌಲಿಕವಾಗುತ್ತದೆ. ಸಮಾಜಕ್ಕೆ ಮಹತ್ವದ ಸಂದೇಶವನ್ನು ನೀಡುವಲ್ಲಿ ಸಹಕಾರಿಯಾಗುತ್ತದೆ ಸಫಲವೂ ಆಗುತ್ತವೆ . ********* ಸುಜಾತಾ ರವೀಶ್

ನಾನು ಓದಿದ ಪುಸ್ತಕ Read Post »

ಕಾವ್ಯಯಾನ

ಕಾವ್ಯಯಾನ

ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ  ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ   ಅನುಪಲ್ಲವಿಮುಗಿಯದ ಹಾಡು ಇದು *******

ಕಾವ್ಯಯಾನ Read Post »

You cannot copy content of this page

Scroll to Top