ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

Lightning and Gray Clouds

ಸಹದೇವ ಯರಗೊಪ್ಪ

ಹರವಾದ ಎದೆಯ ಹೊಲ ಹರಗಿ ಮಿದುಗೊಳಿಸಿ ಮಳೆಗಾಗಿ ಕಾಯುತಿರುವೆ|
ಕಸ ಕಡ್ಡಿಗಳನು ಎರೆಹುಳುವಿನ ಜರಡಿಯಿಂದ ಸಾಣಿಸಿ ಮಳೆಗಾಗಿ ಕಾಯುತಿರುವೆ||

ಎಲ್ಲೇ ಮೀರಿ ಓಡುವ ಮೋಡಗಳಿಗೆ ಬಲೆ ಬಿಸಿ ನಾಲ್ಕು ಹನಿ ಉದುರಿಸಿ ಬಿಸಿಲು ತಣಿಸುವೆ|
ಇಳಿಜಾರಿನ ಎದೆಗೆ ನೀರುಣಿಸಲು ಒಡ್ಡು ಬಿಗಿಗೊಳಿಸಿ ಮಳೆಗಾಗಿ ಕಾಯುತಿರುವೆ||

ಇರಿದು ಹರಿದೋಡುವ ಭಾವದಲೆಗಳಿಗೆ ಅಲ್ಲಲ್ಲಿ ತಡೆಗೋಡೆ ನಿರ್ಮಿಸಿರುವೆ|
ಬಾಯ್ದೆರೆದ ರೆಂಟೆ ಸಾಲುಗಳ ಗಂಟಲು ಒಣಗಿಸಿ ಮಳೆಗಾಗಿ ಕಾಯುತಿರುವೆ||

ಮಳೆ ಮೈದುಂಬಿ ಸುರಿದು ಇಳೆಗೆ ಆಲಂಗಿಸಿ ಹಸಿರು ಅಚ್ಛಾದಿಸುವ ವಿಶ್ವಾಸ|
ಕಪ್ಪು ಮೂತಿಯ ಮುಗಿಲ ಕಣ್ಣೀರು ಕೋಡಿ ಹರಿವು ಆಶಿಸಿ ಮಳೆಗಾಗಿ ಕಾಯುತಿರುವೆ||

ನೆಲ ಮುಗಿಲು ಮಿಲನ ಮರೆತರೆ ಕಂಗಳ ಕೊಳದ ನೀರುಣಿಸಿ ಬರ ಚಿಗುರಿಸುವೆ|
ಸಾಚಿ ಉಡಿ ಮುತ್ತುಗಳನ್ನು ಕೂರಿಗೆ ಕಣ್ಣಲ್ಲಿ ಪೋಣಿಸಿ ಮಳೆಗಾಗಿ ಕಾಯುತಿರುವೆ||

***********

About The Author

3 thoughts on “ಕಾವ್ಯಯಾನ”

  1. ಕೃಷಿಕರ ಮಹಾದಾಸೆ ಮಳೆಯ ನಿರೀಕ್ಷೆ ತಮ್ಮ ಕೃತಿಯಲ್ಲಿ ಅಚ್ಚುಕಟ್ಟಾಗಿ ಮೂಡಿಬಂದಿದೆ ಸರ್

Leave a Reply

You cannot copy content of this page

Scroll to Top