ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ತುಂಟ ಮೋಡವೊಂದು ಫಾಲ್ಗುಣ ಗೌಡ ಅಚವೆ ಎಲ್ಲಿಂದಲೋ ಹಾರಿಬಂದ ತುಂಟ ಮೋಡವೊಂದು  ನನ್ನೆದೆಗೆ ಬಂದುತನ್ನೊಳಗಿನ ಹನಿ ಹನಿಇಬ್ಬನಿಗರೆಯಿತು ಅಂಗಳದ ಸಂಜೆ ಗತ್ತಲುಬೆರಗುಗಣ್ಣಿನ ಚುಕ್ಕೆಗಳುಅಗಾಧ ನೀಲಾಕಾಶಹಿಮಕಣಗಳ ಹೊತ್ತು ತಂದ ಗಾಳಿನನ್ನ ತೆಕ್ಕೆಯಿಂದ ಹೊರಬಿದ್ದವು ಆ ಬೆಳ್ಳಿ ಮೋಡ ಬಂದದ್ದೇ ತಡ:ಎದೆಯ ತುಂಬೆಲ್ಲನಾದದ ನವನೀತವಾಗಿನೀರವ ಮೌನದ ಮಜಲುಗಳುಶಬ್ದವಾಗಿಸಾಲು ಬೆಳ್ಳಕ್ಕಿಗಳಾದವು ತಿಳಿ ನೀರ ಸರೋವರದ ಆವಿಯೋಕಡಲ ಅಲೆ ಮಿಂಚಿನಹಿತ ನೋವ ಸ್ಪರ್ಶವೋಗಾಳಿ ಮರದ ಮೌನಭಾಷೆಯಇನಿದನಿಗೆ ದಂಗಾಗಿದಿಗಂತಕ್ಕಾಗಿ ಕಾದುಕುಳಿತದಂಡೆಯೋಏನೂ ಹೊಳೆಯಲಿಲ್ಲ ನನ್ನ ಏಕಾಂತವನ್ನು ಹಾದಆ ತುಂಟ ಮೋಡನೋಡ ನೋಡುತ್ತಿದ್ದಂತೆನಕ್ಷತ್ರಗಳಲ್ಲಡಗಿದ ಮಿಂಚಂತೆಮೈ ತುಂಬಿಬಂದುಅಕ್ಷರದಲ್ಲಡಗಿತು! *******

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಮಾತು ಕಳೆದುಕೊಂಡಿದ್ದೇನೆ ಕನ್ನಡ:ಆನಂದ್ ಋಗ್ವೇದಿ ಇಂಗ್ಲೀಷ್: ನಾಗರೇಖಾ ಗಾಂವಕರ್ ಮಾತಾಡುವುದಿಲ್ಲ ಎಂದಲ್ಲ ಆಡುವ ಪ್ರತಿ ಮಾತಿನ ಹಿನ್ನೆಲೆ ಚರಿತ್ರೆ ಪರಂಪರೆ ಎಲ್ಲವನ್ನೂ ಶೋಧಿಸಿ ತಮಗೆ ಬೇಕಾದುದು ಸಿಕ್ಕದಿದ್ದರೆ ಸಂ- ಶೋಧಿಸಿ ತಮಗೆ ಹೊಳೆದ ಹೊಸ ಅರ್ಥ ಲಗತ್ತಿಸುವ ಅರ್ಥಧಾರಿಗಳ ಅನರ್ಥದಿಂದಾಗಿ- ನಾನು ಮಾತಾಡಿದರೆ: ಭವಿ ಭಕ್ತ ಬ್ರಾಹ್ಮಣ್ಯ ಬಿಟ್ಟರೂ ಬ್ರಾಹ್ಮಣ್ಯ ನನ್ನ ಬಿಡದೇ ಬ್ರಾಹ್ಮಣ ಬೀದಿಗಿಳಿದ ಸಹವರ್ತಿಗಳ ಬೆನ್ನಿಗೆ ನಿಂತರೂ ಶೋಷಕ ಪಕ್ಷ- ಪಾತಿ ಮತ ಧರ್ಮ ನಿರಪೇಕ್ಷೆಯಿಂದ ದರ್ಗಾದಲ್ಲಿ ಸಕ್ಕರೆ ಓದಿಸಿ ಬಂದರೂ ಕೋಮು ವಾದಿ ಜನ ವಿರೋಧಿ! ನನ್ನ ಕಾಳಜಿಯೂ ಹುಸಿ ಕನಿಕರ ಸೌಹಾರ್ದ ಕಥನವೂ ಅತಿ ರಂಜಿತ ವಾಸ್ತವ ಆತ್ಮ ಪ್ರಶಂಸೆ ಜನಾರೋಗ್ಯದ ಕಾಯಕದಲ್ಲೂ ಗು- ಮಾನಿ ಮಾನವಂತನ ತನವೂ ಆಶಾಡ- ಭೂತಿಯಂತೆ! ಕಾಯ್ದೆ ಪರ ವಹಿಸಿದರೆ ಕಾರ್ಮಿಕರ ಬೀದಿಗೆ ಬಿದ್ದವರ ಕನಿಕರಿಸಿದವರ ಕೆಂಗಣ್ಣಿನ ಉರಿಗೆ ಗುರಿ ಯಾರೋ ಉಡಾಳರು ಮಾಡಿದ್ದ ಖಂಡಿಸುವಂತಿಲ್ಲ, ನಿಯಮ ಮೀರಿದ ಉಡಾಫೆಯ ಪ್ರಶ್ನಿಸುವಂತಿಲ್ಲ ಕವಿ ಸದಾ ಸೂಕ್ಷ್ಮ ಆಗಿರಬೇಕು ಅವರಿವರೆನ್ನದೇ ತನ್ನವರ ಮರೆತೂ ಅವ ಇವರು ಹೇಳಿದಂತೆ ಮಾತ ಆಡಬೇಕು ಕವನದ ಕನಸ ಬೇಕು ಇವರು ಹೆಸರಿಸಿದವರಿಗೇ ಉಸಿರೆತ್ತದೆ ಭೋ ಪರಾಕು ಲಂಚ ಹೊಡೆಯದೇ ಬಡವ ಬಲ್ಲಿದರ ಕಾಡದೇ ಕೆಳೆಯನಾದರೆ ನಿರುಪಯುಕ್ತ ಬರಿಯೇ ಕಾನೂನು ಹೇಳ್ವ ನಿಷ್ಪ್ರಯೋಜಕ! ಏನ ಮಾತಾಡಲಿ!? ನಿನ್ನೆಯ ದಂಗೆ ಮೊನ್ನೆಯ ಗಲಭೆ ಆಚೆ ಮೊನ್ನೆಯ ಗುಪ್ತ ಸಭೆಯ ಆಯ್ದ ಸಂಗತಿ ಮಾತ್ರ ಇತಿ ಹಾಸಃ! ಆಹಾ ಭವ್ಯ ದೇಶದ ದಿವ್ಯ ಪ್ರಜೆಗೆ ಮಾತು ಆಡುವ ವಾಕ್ ಸ್ವಾತಂತ್ರ್ಯ ಸಂವಿಧಾನದ ಪುಸ್ತಕದಲ್ಲಿ ಮಾತ್ರ! I have lost my words I have lost my words It doesn’t mean that i won’t talk But by the wrong interpretation of these Scholiasts For every word i utter Its context, its past, and customs, they explore everything If didn’t find the expected thing in it then they predict new meaning so as what they assume. If i speak Im meterialistic, even if I leave brahmanism, it won’t leave me so as im a brahmin If i stand with a supportive pose to my companions on their campaigns Still im biased.( an exploiter’s partisan) If i distribute sugar in a masjid to promote religious righteousness Im communalist And a people opponent. My indeed care appears fake merciful, harmonious stories looks exaggerated self- flattery If i work for the health of people there too prevails disbelief. the term ” hypocrite” overlaps on humanity feelings If i stand for rules, for labourers , downtrodden people, and show sympathy towards then myself to be exposed to a glare of comtempt, shouldn’t blame the misbehaviour of the rascals, shouldn’t ask negligibly violated rules, Poet always should be sensitive, should forget his people, talk and act accordingly what these people insist And should dream of a poem. Without any queries should say Jai, Jai”to whom they recommend, If I become a friend to poors and riches without accepting bribery and by avoiding corruption Im unskilled, and a useless man of rules amd regulations. What can i say? Yesterday’s riot, tumult of the day before, the day before last secret matters of whispering campaigns only these are our historic aspects! Aha! (What an irony) An honest citizen of the Great Nation has the right of speech only in the book of constitution. *******

ಅನುವಾದ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಗತ್ತಿನ ಭಾಷೆ ಗೊತ್ತಿಲ್ಲ ಮಧುಸೂದನ ಮದ್ದೂರು ಅಳುವ ಮುಗಿಲಿನಿಂದ ಕಣ್ಣೀರ ಕಡವ ಪಡೆದು ಭೋರ್ಗೆರೆವ ಕಡಲ ಮೇಲೆ ಯಾತನೆಯ ಯಾನ ಬಯಸಿದ್ದೇನೆ.. ನಿನ್ನ ನೆನಪು ಮಾಸಿ ಸೋಲುಗಳು ಗೆಲುವುಗಳಾಗಲೆಂಬ ಬಯಕೆಯಿಂದಲೂ ಭ್ರಮೆಯಿಂದಲೂ…. ನಗೆಯ ಕೋಟೆಗೆ ಲಗ್ಗೆಯಿಟ್ಟು ಅಳುವ ಆಳೋ ಸಂತಸದ ತೇರನ್ನೇರಿ ಮೈ ಮರೆತ್ತಿದ್ದೇನೆ.. ನಿನ್ನ ಒನಪು ಕಾಡದಿರಲೆಂಬ ಜಂಭದಿಂದಲೂ ಆತಂಕದಿಂದಲೂ… ಬಯಕೆ ಭ್ರಾಂತಿಯಾಗುವುದೋ ಜಂಭ ಕರಗಿ ನಿನ್ನೆದೆಗೆ ಒರಗುವನೋ ಗೊತ್ತಾಗುತ್ತಿಲ್ಲ.. ಕಾರಣ ಹೃದಯಕೆ ಗತ್ತಿನ ಭಾಷೆ ಗೊತ್ತಿಲ್ಲವಲ್ಲ.. **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದೇದೀಪ್ಯಮಾನ ರೇಶ್ಮಾ ಗುಳೇದಗುಡ್ಡಾಕರ್ ಎಲ್ಲ ಕಳೆದುಕೊಂಡೆ ಎಂದುಗೀಳಿಟ್ಟವು ಸುತ್ತಲಿನ ಜನಮನಗಳುಮನದಲ್ಲೆ ನಕ್ಕು ಮಾತಿಗಾಗಿಅನುಕಂಪ ತೂರಿದವರೆಷ್ಟೊ…ನನ್ನದಲ್ಲದ ವಸ್ತುಗಳಿಗೆಬೆಲೆಕಟ್ಟಿ ಮುನಿದವರೆಷ್ಟೋ..!! ಇವುಗಳ ಮಧ್ಯೆ ನನ್ನಲ್ಲಿಎನೀಲ್ಲ ಎಂದರೊ ಮಡುಗಟ್ಟಿಎದೆಯಾಳದಲಿ ಹುದುಗಿಸಣ್ಣ ಸದ್ದು ಮಾಡುತ್ತಿತ್ತು “ನನ್ನತನ “ದೇಹ ಮಾಗಿ ,ಬದುಕು ಬೆಂದರೂಪರಿಪಕ್ವವಾಗಿ ನನ್ನೇ ಬಿಗಿದಪ್ಪಿ ಸಂತೈಸುತ ಒಳಗಣ್ಣ ತೆರಸುತ ಭರವಸೆಯಲೋಕಕ್ಕೆ ಲಗ್ಗೆ ಇಟ್ಟುಭಾವನೆಗಳ ಸಂಘರ್ಷಕೆ ಉದ್ವೇಗ ಗಳಅರ್ತನಾದಕೆ ಮೌನ ಸವಿ ಸಾಗರವಉಡುಗೂರೆ ನೀಡಿ ಜೀವನದ ಪ್ರೀತಿಯಕಲಿಸಿ ಉತ್ಸಹಾದ ಬುಗ್ಗೆಯ ಹರಿಸಿತುಕಳೆದುಕೊಂಡಷ್ಟು ಬದುಕಿನಲ್ಲಿಪಡೆಯುವದು ಅಗಾಧ ಬದ್ದತೆಭರವಸೆಯ ಕಿರಣ ದೇದೀಪ್ಯಮಾನವಾಯಿತು …. *******  

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಾಮರಸ್ಯ ನೆನಪಾಗುತ್ತಾರೆ ಈದ್ ದಿನ ಬಾನು,ಅಹ್ಮದರು ಯುಗಾದಿ ದೀಪಾವಳಿಗೆ ಶುಭ ಕೋರುವ ಇವರು ಅಳುವಲ್ಲಿ ನಗುವಲ್ಲಿ ಒಂದಾಗುವ ನಾವು ಕಾಣುವ ಕನಸುಗಳಿಗೆ ಬಿಳಿಹಸಿರುಕೇಸರಿ ಎಂಬ ಭೇದವಿಲ್ಲ ಅಂತರಂಗದ ಮಿಡಿತ ನಮ್ಮದು ವೇಷ-ಭೂಷ, ಆಚಾರ-ವಿಚಾರಗಳಿಲ್ಲದ ನಮ್ಮ ಸ್ನೇಹ ತೊಟ್ಟಿದೆ ಸಾಮರಸ್ಯದ ಅಂಗಿಯನ್ನು ಇಣುಕಲಾರವು ಜಾತಿ ಮತ ಧರ್ಮಗಳು ಹೆಡೆಮುರಿ ಕಟ್ಟಿಕೊಂಡು ಬಿದ್ದಿರುತ್ತವೆ ಅವು. ***** ಗೌರಿ.ಚಂದ್ರಕೇಸರಿ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಭಾವ ಬಂಧುರ ರೇಮಾಸಂ ಬಂಧುರದ ಭಾವದಲಿ ಬಿದ್ದಿರುವೆ ನಲ್ಲ, ಬಿಡದೆ ಮನದಿ ನಿನ್ನ ಸಾಯುವ ಮಾತೇಕೆ ? ಇರುವೆ ನಾ ನಿನ್ನುಸಿರಲಿ ಹಠ ಮಾಡದಿರು ಸಖ ಮುನಿಸಿನಲಿ/ ನಾನಿರುವೆ ಕರ್ಮದ ಪಥದಲಿ ಗೊತ್ತೇನು ಒಲವೇ//ಪ// ಸಂತೈಸಿದ ಎನ್ನ ಮನಕೆ ಮುಗಿದಿಲ್ಲ ಬಾಳು / ಕಂಡ ಕಣ್ಣ ಕನಸು ಆಗುವದೇ ಗೋಳು/ ಬರಡಾಗಲು ಮನಸು ನಿನದಲ್ಲ ಮರುಳೇ/ ಬಾ ಎನಲು ನಾ ಹೋಗಿರುವೆನೇನು ನಿನ್ನಲ್ಲೇ ಇರುವೆನು ಗೊತ್ತೇನು ಒಲವೇ// ನೀನೇಕೆ ಬಡಪಾಪಿ ಜೀವನಕೆ ಚೇತನವಾಗಿರುವೆ/ ಎನ್ನ ಹೃದಯವಿದೆ ನಿನ್ನಲ್ಲೇ ಕಾಯವ ಕಾಯದಿರು ಕಲ್ಪವೇ/ ಕಂದಕ ಮಾತಿನ ಕ್ಷಮೆಯೇಕೆ, ಕಾಣುವ ಕನಸಿಗೆ ಸಾವಿನ ಮಾತೇಕೆ / ನಾ,ನೀನಾಗಿರುವೆನು ಗೊತ್ತೇನು ಒಲವೇ// ***********

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಆಡಾಡತ ಆಯುಷ್ಯ ಆಡಾಡತ ಆಯುಷ್ಯ ಆತ್ಮ – ಕತೆಗಳು ಗಿರೀಶ ಕಾರ್ನಾಡ ಮನೋಹರ ಗ್ರಂಥಮಾಲಾ ಆಡಾಡತ ಆಯುಷ್ಯ ಗಿರೀಶ್ ಕಾರ್ನಾಡರ ಆತ್ಮಕಥನ. ಈ ಕತೆಯನ್ನು ಅವರು ಹನ್ನೊಂದು ಅಧ್ಯಾಯಗಳಲ್ಲಿ ಹೇಳಿದ್ದಾರೆ. ಪ್ರಾಕ್ಕು – ತಾಯಿ ಕೃಷ್ಣಾಬಾಯಿ ಮಂಕೀಕರ ( ಕುಟ್ಟಾಬಾಯಿ) ಅವರ ಬದುಕಿನ ಕುರಿತು ಇದರಲ್ಲಿ ಅವರು ಹೇಳಿದ್ದಾರೆ. ಬಾಲಚಂದ್ರ ಎಂಬ ಮಗ ಹುಟ್ಟಿ ಒಂದು ವರ್ಷದೊಳಗೇ ಗಂಡ ತೀರಿಕೊಳ್ಳುತ್ತಾನೆ. ನಂತರ ಅವರ ಭಾವ ಅವಳನ್ನು ಡಾ. ಕಾರ್ನಾಡರ ಬಳಿ ನರ್ಸ್ ಕೋರ್ಸಿಗೆ ಸೇರಿಸುತ್ತಾರೆ.ಐದು ವರ್ಷಗಳ ಕಾಲ ಅವರ ಮನೆಯಲ್ಲೇ ಇದ್ದ ಕುಟ್ಟುಬಾಯಿ ಮುಂದೆ ಅಗ್ನಿಸಾಕ್ಷಿಯಾಗಿ ಡಾ. ಕಾರ್ನಾಡರನ್ನು ಮದುವೆಯಾಗುತ್ತಾರೆ. ಅವರಿಗೆ ವಸಂತ, ಪ್ರೇಮಾ, ಗಿರೀಶ್ ಮತ್ತು ಲೀನಾ ಜನಿಸುತ್ತಾರೆ. ಮುಂದೆ ಮೊದಲ ಗಂಡನಿಗೆ ಜನಿಸಿದ ಬಾಲಚಂದ್ರನ ಮನಸ್ಥಿತಿಯ ವಿವರಗಳಿವೆ, ಗೋಕರ್ಣ ಅಡ್ಡಹೆಸರು ಹೋಗಿ ಕಾರ್ನಾಡ್ ಆದ ಮಾಹಿತಿಗಳಿವೆ. ಶಿರಸಿ – ಶಿರಸಿಯ ಪಂಡಿತ ಕಾಟೇಜ್ ಹಾಸ್ಪಿಟಲ್ ಗೆ ಗಿರೀಶರ ತಂದೆ ವೈದ್ಯರಾಗಿ ಬರುತ್ತಾರೆ. ಶಿರಸಿ ಸಿದ್ದಾಪುರ ಮಧ್ಯದ ಕಾಡಿನ ವರ್ಣನೆಯಿದೆ. ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿ ಪಟ್ಟೆ ಹುಲಿಗಳನ್ನು ನೋಡಿದ್ದನ್ನು ಗಿರೀಶರು ನೆನಪಿಸಿಕೊಳ್ಳುತ್ತಾರೆ. ಆಗ ಕುಮಟಾ- ಸಿದ್ಧಾಪುರ ಮಧ್ಯೆ ಕಲ್ಲಿದ್ದಲು ಬಳಸುವ ಬಸ್ಸುಗಳು ಒಂದೆರಡು ಓಡಾಡುತ್ತಿದ್ದವಂತೆ! ಆಯಿ ಬಾಪ್ಪಾ ಜೊತೆ ವಾಸಿಸುವ ಗಿರೀಶರ ಬಾಲ್ಯದ ನೆನಪುಗಳು ಇಲ್ಲಿವೆ. ನಿಲೇಕಣಿಯಲ್ಲಿ ಚಂಪಾಷಷ್ಠಿಯ ದಿನ ನಡೆಯುವ ತೇರಿನ ವಿವರ ಇಲ್ಲಿದೆ. ಇದು ಏಳೆಂಟು ಸಾರಸ್ವತ ಕುಟುಂಬಗಳು ಮಾಡುತ್ತಿದ್ದ ಖಾಸಗಿ ರಥೋತ್ಸವ ಆಗಿತ್ತಂತೆ. ಚಿತ್ರಾಪುರ ಮಠದ ಬಗ್ಗೆ ಇಲ್ಲಿ ಅವರು ಬರೆದಿದ್ದಾರೆ. ಶಿರಸಿಯ ಐದುಕತ್ರಿ, ಚರ್ಚ್, ಫಾದರ್, ನೀಲೇಕಣಿ ವೆಂಕಟರಾಯರು, ಆವೆ ಮರಿಯಾ ಕಾನ್ವೆಂಟ್, ಮಾರಿಕಾಂಬಾ ಹೈಸ್ಕೂಲ್, ಯಕ್ಷಗಾನ, ಅಡಿಕೆ ತೋಟ, ಹುಲಿಮನೆ ಸೀತಾರಾಮ ಶಾಸ್ತ್ರಿಗಳ ನಾಟಕ ಮಂಡಳಿ, ಮಾರಿಕಾಂಬಾ ದೇವಸ್ಥಾನ,ಬೇಡರ ಕುಣಿತ, ಕತೆ- ಕವಿತೆಗಳ ಪ್ರಾರಂಭಿಕ ಪಾಠ ಮಾಡಿದ ಜಿ.ಕೆ ಹೆಗಡೆ ಮಾಸ್ತರರ ಚಿತ್ರಣವನ್ನು ಅವರು ಇಲ್ಲಿ ಕಟ್ಟಿ ಕೊಟ್ಟಿದ್ದಾರೆ. ಧಾರವಾಡ: ಐವತ್ತೊಂದು ಮನೆ – ಸಹಕಾರಿ ತತ್ವದಡಿ ಭಾನಪ ( ಚಿತ್ರಾಪುರ ಸಾರಸ್ವತ) ರು ಕಟ್ಟಿದ ಹೌಸಿಂಗ್ ಕೊಲೋನಿಯ ವಿವರಗಳು ಈ ಅಧ್ಯಾಯದಲ್ಲಿವೆ. ಹುಬ್ಬಳ್ಳಿ- ಧಾರವಾಡ, ಶಿರೂರ ಶಂಕರಾಯರ ಬಗ್ಗೆ ಇಲ್ಲಿ ಹೇಳಿದ್ದಾರೆ. ಧಾರವಾಡ: ಕರ್ನಾಟಕ ಕಾಲೇಜು- ಕಾರ್ನಾಡ್ ಕುಟುಂಬ ಶಿರಸಿ ಬಿಟ್ಟು ಧಾರವಾಡಕ್ಕೆ ಹೋಗುವುದು ೧೯೫೨ರಲ್ಲಿ. ಇಲ್ಲಿನ ಸಾಹಿತ್ಯ ಮತ್ತು ಶಿಕ್ಷಣದ ಬಗ್ಗೆ ಈ ಅಧ್ಯಾಯದಲ್ಲಿ ಹೇಳಲಾಗಿದೆ. ಆಲೂರು ವೆಂಕಟರಾಯರು, ವಿ.ಕೃ ಗೋಕಾಕ, ಬೇಂದ್ರೆ, ಶ್ರೀರಂಗ, ರಾಮಾನುಜನ್, ವಿ.ಜಿ ಭಟ್ ಕುರಿತು ಉಲ್ಲೇಖಗಳಿವೆ. ಮುಂಬಯಿ, ಆಕ್ಸ್ಫರ್ಡ್, ಮದ್ರಾಸ್, ಶೃಂಗೇರಿ ಅಧ್ಯಾಯಗಳಲ್ಲಿ ಗಿರೀಶರು ತಮ್ಮ ಓದಿನ ದಿನಗಳ ಮತ್ತು ವೃತ್ತಿ ಜೀವನದ ಆರಂಭದಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. ಹಳೆ ಮೈಸೂರು: ಹೊಸ ಅಲೆ, ಪುಣೆ: ಫಿಲ್ಮ್ ಹಾಗೂ ಟೆಲಿವಿಜನ್ ಇನ್ಸ್ಟಿಟ್ಯೂಟ್ ಮತ್ತು ಅರ್ಧ ಕಥಾನಕ ಅಧ್ಯಾಯಗಳಲ್ಲಿ ಗಿರೀಶರು ತಮ್ಮ ನೌಕರಿ, ನಾಟಕ, ಸಿನಿಮಾ ರಂಗ ಮತ್ತು ವೈವಾಹಿಕ ಜೀವನದ  ಕುರಿತು ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ತಾನು ಹುಟ್ಟುತ್ತಲೇ ಇರಲಿಲ್ಲ ಎಂದೂ ಮತ್ತು ಕೊನೆಯಲ್ಲಿ, ಸುದೀರ್ಘ ಕಾಲ ಪ್ರೀತಿಸಿದ ಸರಸ್ವತಿಯನ್ನು ಮದುವೆಯಾಗುತ್ತೀಯಾ ಎಂದು ಕೇಳುವಾಗಿನ ಘಟನೆಗಳು ಸ್ವಾರಸ್ಯಕರವಾಗಿವೆ. ಆತ್ಮಕತೆಗಳನ್ನು ಇಷ್ಟಪಡುವ ಮತ್ತು ಗಿರೀಶ್ ಕಾರ್ನಾಡರ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಇರುವ ಎಲ್ಲರೂ ಖಂಡಿತವಾಗಿ ಓದಲೇಬೇಕಾದ ಪುಸ್ತಕವಿದು. ******* ಡಾ. ಅಜಿತ್ ಹರೀಶಿ

ಪುಸ್ತಕ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಹೀಗೊಂದು ಕವಿತೆ ಎಸ್ ನಾಗಶ್ರೀ ಹೀಗೆ ಬಿರುಸುಮಳೆಯಲ್ಲೇ ಒಮ್ಮೊಮ್ಮೆ ಗೆಳೆತನಗಳು ಗಾಢವಾಗುವುದು ಬೇಡಬೇಡವೆಂದರೂ ಹುಣಸೆಮರದಡಿಯಲಿ ನಿಂತು ಗುಡುಗು ಸಿಡಿಲಿಗೆ ಬೆಚ್ಚುತ್ತಾ ಬಿದ್ದ ಕಾಯಿಗಳ ಕಣ್ಣಲ್ಲೇ ಭಾಗಮಾಡುತ್ತಾ ನಿನ್ನೆಯೊಂದು ಇತ್ತು ನಾಳೆ ಬರುವುದು ಇಂದು ಅರ್ಧ ಮುಗಿದಿದೆಯೆಂಬ ಯಾವ ಕುರುಹೂ ಕಾಣದಂತೆ ಮುಗಿಲಿನ ಮಾತಿಗೆ ಭುವಿ ಕಿವಿಯಾನಿಸಿ ಮತ್ತೆ ಮತ್ತೆ ಅರೆಶಬ್ದಗಳಲಿ ಉತ್ತರಿಸುವುದ ನೋಡುವುದೂ ಜೀವಮಾನದ ಅನುಭವ ಹಾಗೆ ಒಂದೊಮ್ಮೆ ಬಿರುಮಳೆಯಲ್ಲಿ ಸಿಕ್ಕ ಗೆಳತಿ ಇನ್ನು ಹತ್ತು ವರ್ಷಕ್ಕೆ ನೇಣು ಬಿಗಿದುಕೊಂಡಳು ಒಡಲಲ್ಲಿ ಐದು ತಿಂಗಳ ಹಸುಗೂಸು ಎಷ್ಟು ಪ್ರೇಮ ಕವನ ಮಳೆಯ ಸೌಂದರ್ಯದ ಕವಿತೆ ಬರೆಯಲು ಕೂತರೂ ಆಗಾಗ ವಹಿಗೆ ಸಿಕ್ಕು ಕವಿತೆಯೇ ಕೊಲೆಯಾಗುತ್ತದೆ ಮಳೆಯೇ ಪ್ರಥಮವರದಿಗಾರನು ನಾನು ಏನೆಂದು ಶುಭ್ರ ಆಗಸ ಮೂಡುವವರೆಗೂ ಕಾದು ಕಾದು ಕಾಫಿ ಹೀರುತ್ತೇನೆ. *********

ಕಾವ್ಯಯಾನ Read Post »

ಕಾವ್ಯಯಾನ, ವಾರದ ಕವಿತೆ

ವಾರದ ಕವಿತೆ

ಹೆಸರಿಲ್ಲದ ಕವಿತೆ ಸ್ಮಿತಾಅಮೃತರಾಜ್. ಸಂಪಾಜೆ ಹೆಸರಿಲ್ಲದ ಕವಿತೆ ನಾನು ಹಠಕ್ಕೆ ಬಿದ್ದವಳಂತೆ ತಾಳ್ಮೆಯಿಂದ ಕಾಯುತ್ತಲೇ ಇದ್ದೇನೆ ಹಾಗೇ ಬಂದು ಹೀಗೇ ಹೋದ ಕವಿತೆಯನ್ನೊಮ್ಮೆ ಎಳೆದು ತಂದೇ ತೀರುವೆನೆಂಬಂತೆ. ಗೊತ್ತಿದೆ, ಬಲವಾದ ಕಾರಣವಿಲ್ಲದೆ ಕವಿತೆ ಕಾಣೆಯಾಗುವುದಿಲ್ಲ. ಅಥವಾ ಮತ್ಯಾವುದೋ ಗಳಿಗೆ ಸದ್ದಿಲ್ಲದೇ ಪಕ್ಕಕ್ಕೆ ಬಂದು ಆತುಕೊಳ್ಳುವ ಅದರ ಆತುರಕ್ಕೆ ಅವಸರ ಸಲ್ಲವೆಂಬುದೂ.. ಕಾಡಿದ್ದು ಒತ್ತರಿಸಿ ಬಂದು ಯಾವುದೋ ಒಂದು ಕ್ಷಣದಲ್ಲಿ ಪದಗಳಾಗಿದ್ದಕ್ಕೆ.. ನಿನಗೆ ಪದ್ಯ ಹೊಸೆಯುವುದೊಂದೇ ಕೆಲಸವಾ? ನಮಗೆ ನೋಡು ಓದೋಕ್ಕಾದರೂ ಪುರುಸೊತ್ತು ಬೇಡವಾ? ಪಾಪ! ಹೌದಲ್ವಾ! ಅವರ ನಿರ್ಭಾವುಕ ಪ್ರಶ್ನೆಗೆ ಕವಿತೆಯೂ ಬೆಚ್ಚುತ್ತಿದೆ. ಈಗೀಗಲಂತೂ ನಮ್ಮೂರ ಹಸಿರ ಕಡೆಗೆ ಎಲ್ಲರ ಕಣ್ಣು . ಕವಿತೆ ಅದಕ್ಕೆ ಇಲ್ಲೇ ಬೇರು ಬಿಟ್ಟಿದೆ ಅಂತ ತಾರೀಫು ಬೇರೆ. ಬೀಜ ಬಿತ್ತಿ, ಮೊಳಕೆ ಚಿಮ್ಮಿ, ರೆಕ್ಕೆ ಹಾಯುವವರೆಗೂ ನಮ್ಮ ಕಣ್ಣನ್ನೇ ಕಾವಲಿಗಿಟ್ಟದ್ದರ ಕುರಿತು ಅವರಿಗೆ ಕುತೂಹಲವೇ ಇಲ್ಲ. ಹಸಿರು ಫಲಬಿಡಲು ಗೊಬ್ಬರವೂಡದಿದ್ದರೆ ನಡೆದೀತೇ? ಇವತ್ತೂ ಅಷ್ಟೆ, ಹತ್ತಾಳು ಕೆಲಸಕ್ಕೆ ಸಂಬಳ ಕಡಿಮೆ; ಕೆಲಸ ಜಾಸ್ತಿ ಹೆಂಗಳೆಯರೇ ಸೈ ಅಂತ ಒಳಗಿನ ಮಾತು ಹೊರಕ್ಕೆ ಬರುವುದಿಲ್ಲ. ಬೆಳಗಿನೊಂದಾರ‍್ತಿಯದ್ದು ಲಗುಬಗೆಯಲಿ ಮುಗಿಸಿ ಈಗ ಮಧ್ಯಾಹ್ನಕ್ಕೆ ಏದುಸಿರಿನ ತಯಾರಿ ದೊಡ್ಡ ಹಂಡೆಯ ನೀರು ಬಿಸಿಯಾಗುತ್ತಿದೆ ಒಲೆ ಉರಿ ಹೆಚ್ಚುತ್ತಿದೆ ಅಕ್ಕಿ ಕುದಿ ಹತ್ತುತ್ತಿದೆ. ಹೊರಗಿನ ತುರ್ತು; ಒಳಗಿನ ಒತ್ತಡಕ್ಕೆ ಒಗ್ಗಿಕೊಳ್ಳುತ್ತಲೇ ಹದಗೊಳ್ಳುತ್ತಿದೆ ಧ್ಯಾನ. ಎರಡರ ಕುದಿ ಒಳಕ್ಕಿಳಿದಾಗ ಆಳದಿಂದ ಮುಗುಳೊಡೆಯುತ್ತಿದೆ ಹೆಸರಿಲ್ಲದ ಹೊಸತೊಂದು ಭಾವ. ಅಕಾ! ಹೊತ್ತು ಗೊತ್ತು ಬೇಡವಾ? ಕವಿತೆ ಈ ಹೊತ್ತಲ್ಲದ ಹೊತ್ತಿನಲ್ಲಿ ಹೀಗೆ ಬಂದು ಕೂಡುವುದಾ?!.

ವಾರದ ಕವಿತೆ Read Post »

ಅಂಕಣ ಸಂಗಾತಿ

ಗಾಳೇರ ಬಾತ್

ಗಾಳೇರ ಬಾತ್-06 ಆ ದಿನಗಳ ದಸರಾ…… ಆ ದಿನಗಳ ದಸರಾ……         ದಸರಾ ಹಬ್ಬಕ್ಕೆ ನಮ್ಮ ಕಡೆಯ ಹಳ್ಳಿಗಳಲ್ಲಿ  ಮಾರ್ನಮಿ ಹಬ್ಬ ಅಂತ ಕರೀತಾರೆ. ಮಾರ್ನಮಿ ಹಬ್ಬ ಅಂದ್ರೆ ಸಾಕು, ನಮಗೆ ಎಲ್ಲಿಲ್ಲದ ಖುಷಿ, ಎಲ್ಲಿಲ್ಲದ ಆನಂದ. ಯಾಕಂದ್ರೆ ಈ ಹಬ್ಬಕ್ಕೆ ನಮಗೆಲ್ಲಾ ಹೊಸಬಟ್ಟೆಗಳು! ಆ ಬಟ್ಟೆಗಳನ್ನ ನೆನಸಿಕೊಂಡ್ರೆ ಇವತ್ತಿಗೂ ನಗು ತಡಿಯೋಕೆ ಆಗಲ್ಲ ಕಣ್ರಿ. ಆಗ ನಮಗೆ ಚಡ್ಡಿ ಮತ್ತೆ ಅಂಗಿ, ಆಗಿನ ಚಡ್ಡಿಗಳನ್ನ ಇವತ್ತಿನ ಬರ್ಮುಡಾ ಗಳಿಗೆ ಹೋಲಿಸಬಹುದು ನೋಡ್ರಿ. ಯಾಕಪ್ಪಾ ಇಷ್ಟು ದೊಡ್ಡದು ಅಂತ ಕೇಳೋಕೆ ಹೋಗಬೇಡ್ರಿ ; ಯಾಕೆಂದ್ರೆ ಬೆಳೆ ಮಕ್ಕಳು ನೋಡು ನೋಡುತ ಮಾರುದ್ದ ಬೆಳಿತಾರ ದೊಡ್ಡವಾದ್ರಾ ಒಂದನಾಲ್ಕು ವರ್ಷ ಹಾಕೊಬಹುದಂತ future plan ನಮ್ಮ ಹೆತ್ತವರದು .        ನಿನ್ನೆ ನಾನು, ಒಬ್ಳು ಫೇಸ್ಬುಕ್ ಫ್ರೆಂಡ್ ದೀಪ ಅಂತ; ಅವ್ಳಿಗೆ ಕಾಲ್ ಮಾಡಿದೆ. “ಹಾಯ್ ಮೇಡಂ ಹಬ್ಬ ಜೋರ”. ಆ ಕಡೆಯಿಂದ “ಹಾಯ್ ಸರ್ ಹೇಗಿದ್ದೀರಾ, ಯಾವ ಹಬ್ಬ! ಅಷ್ಟೇನಿಲ್ಲ ಬಿಡಿ ಮಾಮೂಲಿ ಇದ್ದಿದೇ”. ಮತ್ತೆ ನಾನು “ಯಾಕ್ ಮೇಡಂ ಮೈಸೂರಿಗೆ ಹೋಗ್ಲಿಲ್ವಾ ದಸರಾಕ್ಕೆ” ಆ ಕಡೆಯಿಂದ “ಹೇ ಏನು ದಸರಾ ನಾ, ಏನೋ ಬಿಡ್ರಿ, ಈ ಟೈಮಲ್ಲಿ ಮೈಸೂರು ನೋಡೋಕಾಗುತ್ತಾ, ಫುಲ್ ಜನ ಇರುತ್ತೆರಿ, ಇವಾಗ್ ಏನಾದ್ರೂ ಹೋದರೆ, ಮೈಕೈ ನೋವು ಮಾಡಿಕೊಂಡು ಸುಸ್ತಾಗಿ ಬರಬೇಕಾಗುತ್ತೆ, ಅಷ್ಟೇ ಕಥೆ”. ಈ ಮಾತುಗಳನ್ನು ಕೇಳಿ ನನಗೆ ಏನು ಹೇಳಬೇಕು ಅಂತ ತೋಚದೆ ನನ್ನ ಮುಖಕ್ಕೆ ನಾನೇ ಹೊಡಕಂಡಂಗಾಯಿತು. ಅದು ಕ್ಷಣ ಮಾತ್ರಕ್ಕೆ ನೋಡ್ರಿ ಯಾಕಂದ್ರಾ ನಾನು ಪಕ್ಕಾ village boy ಅಂತ ನಿಮಗೆ ಹೇಳೋ ಅವಶ್ಯಕತೆ ಇಲ್ಲ ಅನ್ಕೊಂಡಿನಿ. ಪಾಪ ಇದು ಅವರ ತಪ್ಪಲ್ಲ. ಬೃಹತ್ ಬೆಂಗಳೂರಿನ ತಪ್ಪು. ಮತ್ತೆ ನಾನು ಹೇಳಿದೆ “ನೋಡಿ ಮೇಡಂ, ಮೈಕೈ ನೋವು ಮಾಡಿಕೊಂಡು ನೋಡದರಲ್ಲಿ ಇರುವಂತ ಮಜ, ಮತ್ಯಾವುದರಲ್ಲಿಲ್ಲ ರೀ. ” ಅದಕ್ಕ ಆ ಕಡೆಯಿಂದ “ಹೇ ಬಿಡ್ರಿ ದಸರಾ ನೋಡಾಕ ಮೈಸೂರಿಗೆನಾ ಹೋಗಬೇಕಾ. ಇಲ್ಲೇ ಟಿ.ವಿಯಲ್ಲಿ ಅಲ್ಲಿಗಿಂತ ಚೆನ್ನಾಗಿ ಕಾಣ್ತಾದ, ಎನ್ನಬೇಕಾ! ಆಯಾಮ್ಮ” ಇದನ್ನ ಕೇಳಿ ನಂಗೆ ತಲೆ ತಿರುಗಿ ಬಿಳೋದೊಂದೆ ಬಾಕಿ ಇತ್ತು. ಯಪ್ಪ ಉಸ್ಸಾ ಅಂತ ಪೋನ್ ಇಟ್ಟು ನನ್ ಗೆಳೆಯನೊಬ್ಬನಿಗೆ ಪೋನ್ ಮಾಡಿದೆ.           “ಏನೋ ಮಗ, ಊರಿಗೆ ಬರಲೇನೋ. ನಮ್ಮ  old ಡೌವ್ ಗಳೆಲ್ಲಾ ಬಂದಾರ; ಬಾರಲೇ ಎನ್ನಬೇಕಾ ಬಡ್ಡಿ ಮಗಾ”. Old ಡೌವ್ ಗಳು ಅಂದ ತಕ್ಷಣ ನಂಗೆ ಇವತ್ತಿಗೂ ನೆನಪಿಗೆ ಬರೋದಂದ್ರೆ; ಸರ್ಕಾರದವರು ಕೊಡತಿದ್ದ ಕಡು ನೀಲಿ, ತಿಳಿ ನೀಲಿ, ಲಂಗ ಮೇಲೊಂದಿಷ್ಟು ಅಂಗಿ ಅಂತ ಚೋಲಿ ಹಾಕೊಂಡು ನಮ್ಮ ಜೊತೆ ಎಮ್ಮಿಕರಗಳನ್ನ ಮೇಯಿಸೋಕೆ ಎರಡು ಜಡೆ ಇಳಿಬಿಟ್ಟು ಬರೋ ಹಳ್ಳಿ ಹುಡುಗಿರು. ಮತ್ತೆ “ಲೇ ಮೂಗ ಮಾತಾಡಲೇ ಆ ರೆಡ್ ಇಂಕ್ ನೆನಪಾದ್ಲ್ ಅನ್ನಬೇಕಾ”. ಯಪ್ಪ ಇದೇನೋ ಮಾತಡತಾನೋ ಇವನೌನ್; ಬಿಟ್ರೆ  ಪ್ರೈಮರಿ ಸ್ಕೂಲಲಿ ಓದಿರೋ ಹುಡುಗಿರನೆಲ್ಲಾ ನನ್ ಕೊಳ್ಳಿಗೆ ಕಟ್ಟಾಂಗ್ ಇದಾನ ಅನಿಸಿತು. ಆದ್ರೆ ಅವನೇನೋ ಕಟ್ಟಬಹುದು, ಕಟ್ಕೋಳಾಕೆ ಹುಡುಗಿರು ಬೇಕಲ್ಲ. ಎಲ್ರೂ ಕರಿಮಣಿ ಕಟ್ಕೋಂಡು; ಕೈಯಲ್ಲೊಂದು ಬ್ಯಾಗ್, ಕುಂಕಳದಲ್ಲೊಂದು ಮಗು. ಹೀಗೆ ನಮ್ಮ ಹಳ್ಳಿ ಹುಗಿಯರ ಬದುಕಿನ ಬಣ್ಣವೇ ಬದಲಾಗಿತ್ತು. ಅಷ್ಟ್ರಲ್ಲಿ ನೋ ಹೊರಗಡೆ ಶಬ್ದ!  ಹೋಗಿ ನೋಡಿದ್ರೆ ಬಡ್ಡಿ ಮಗಂದು ಬೆಕ್ಕು ಇಲಿ ತಿನ್ನಾಕ ಓಡಾಡುತ್ತಿತ್ತು. ಆ ನನ್ ಗೆಳೆಯಗ ಮತ್ತೆ phone ಮಾಡೋ ಗೋಜಿಗೆ ಹೋಗಲಿಲ್ಲ.        ನಾನು ದಸರಾ ಬಗ್ಗೆ ಹೇಳ್ತಾ ಇದ್ದೆ ಅಲ್ವಾ! ಹೌದು ನಮ್ಮ ಹಳ್ಳಿಗಳ ದಸರಾವನ್ನು ನೋಡೋದೇ ಒಂದು ಚಂದ. ಚಂದಚಂದದ ಲಂಗ ದಾವಣಿ ಹಾಕಿಕೊಂಡು ಹಳ್ಳಿ ಹುಡುಗೇರು, ಎದುರುಗಡೆ ಮನೆ ಹುಡುಗರು ನೋಡಲಿ ಅಂತ ಹಲ್ಲಕಿಸ್ಕಂಡು ನಿಂತಾಗ ಹಿಂದಿನಿಂದ ಅವರಜ್ಜ ಬಂದು “ಏ ಇಲ್ಲೇನು ಮಾಡ್ತೀಯಾ,  ಯಾಕ ಹಲ್ಲುಕಿಸಗೊಂಡ ನಿಂತೀಯಾ! ಅವನಿಗೆ ಹೇಳಿದೆ ಹೆಣ್ಮಕ್ಕಳಿಗೆ ಜಾಸ್ತಿ ಕಲಿಸೋದು ಬೇಡಂತ; ಎಲ್ಲಿ ಕೇಳ್ತಾನ, ನನ್ನ ಮಾತು, ಬಿದ್ದಾಡದೋನು”, ಅಂತ ಎಚ್ಚರಿಸೋ ಅರವತ್ತು ದಾಟಿದ ಮುದಕರು ಸಹ ನನ್ನ ಹಳೆ ಡವ್ ಬಂದಿರಬಹುದಾ ಅಂತ ಕುತೂಹಲ ಕೆರಳಿಸೋ ದಸರಾ ಕಣ್ರೀ ಇದು. ನನಗೆ ಇನ್ನೂ ಸರಿಯಾಗಿ ನೆನಪಿದೆ; ನಮ್ಮ ಮನೆಯಲ್ಲಿ ಆಗ ನವಣೆ ಅನ್ನ ಮಾಡ್ತದ್ವಿ. ಅದು ನಮ್ಮ ದೈನಂದಿನ ಆಹಾರ ಆಗಿತ್ತು. ನೆಲ್ಲಕ್ಕಿ ಅನ್ನ ಮಾಡೊದು, ಹಬ್ಬ ಹರಿದಿನಗಳಲ್ಲಿ ಮಾತ್ರ. ಅದು ಸೋಸೈಟಿಯಲ್ಲಿ ಕೊಡೋ ನೆಲ್ಲಕ್ಕಿ, ಅದರಲ್ಲಿ ಬಹುಪಾಲು ಶಾಲಿ ಹುಡುಗರಿಗೆ ಕೊಡೋ ಅಕ್ಕಿನೇ ಹಬ್ಬಕ್ಕೆ ಶೇಖರಣೆ ಮಾಡಿಡತಿದ್ರು ಮನಿಗೆ ಹಿರೆ ತಲೆ ಅನಿಸಿಕೊಂಡ  ಅಜ್ಜಿಗಳು. ನೆಲ್ಲಕ್ಕಿ ಅನ್ನ, ಗೋದಿ ಹುಗ್ಗಿ, ಆಕಳ ತುಪ್ಪ, ಜೊತೆಗೆ ಒಲೆಯಲ್ಲಿ ಹಾಕಿ ಸುಟ್ಟ ಹಪ್ಪಳ. ಮನೆಯ ಎಲ್ಲಾ ಗಂಡಸರು, ಮಕ್ಕಳಿಗೆ ಉಣ್ಣಾಕ ನೀಡಿ. ಅಡುಗೆ ಹೇಗಿದೇನೋ ಏನೋ! ಅಂತ ಸೆರಗನ್ನ ತಲೆ ತುಂಬಾ ಹೊದ್ಕೊಂಡು, ಆಕಾಶವೇ ನೆಲದ ಮೇಲೆ ಬಿದ್ದಿರೋ ತರ ನಮ್ಮ ಹಳ್ಳಿ ಸೊಸೆಯಂದಿಯರ ಮಾರಿಗಳನ್ ನೋಡೋದೆ ಒಂದು ಚೆಂದ.         ಇನ್ನೂ ದಸರಾದಲ್ಲಿ ಆಯುಧಪೂಜೆಯನ್ನುವುದು. ಇಂದಿಗೂ ಹಳ್ಳಿಗಳಲ್ಲಿ ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದೆಂದರೆ ತಪ್ಪಾಗಲಾರದು. ಮನೆಯಲ್ಲಿರುವ ಎಲ್ಲಾ ಆಯುಧಗಳು ಬೆಳಕಿಗೆ ಬರುತ್ತವೆ. ಅಜ್ಜ ಹಂದಿ ಓಡಿಸಲೆಂದು ತಂದಿದ್ದ ಭರ್ಚಿ, ಅಪ್ಪನ ಗಳೆಸಮಾನುಗಳು, ಕುಡುಗೋಲು, ಕುರ್ಚಿಗಿ, ಚಾಕು, ಚೂರಿ, ಒಳಕಲ್ಲು, ಬೀಸೋ ಕಲ್ಲು, ಗುಂಡಕಲ್ಲು, ಇವೆಲ್ಲವೂ ದಸರಾ ದಿನ ದೇವರಾಗಿ ಹೊಸ ರೂಪ ಪಡೆದು ಕೊಂಡಿರುತ್ತವೆ. ಇನ್ನೂ ನಮ್ಮಜ್ಜಿ ಪೂಜೆ ಹೇಳೋದೆ ಒಂದು ಚೆಂದ ಕಣ್ರೀ. ವರ್ಷಗಟ್ಟಲೆ ಮನೆಯ ಮೂಲೆಯೊಂದರಲ್ಲಿ ನೇತಾಡುತ್ತಾ ಜಾಡು ಮೆತ್ತಿ, ಕಪ್ಪು ಹಿಡಿದಿದ್ದ ಮಣ್ಣಿನ ಕುಡಿಕೆಯನ್ನು ತೊಳೆದು,  ಬಳಿದು , ಸಿಂಗರಿಸಿ ಅದಕ್ಕೆ, ಊರಿನ ಕರಿಯಮ್ಮ ದೇವಿ ಅಂತ ಬಿರುದು ನೀಡಿ. ಸಿಹಿ ಪದಾರ್ಥದ ಹೆಡೆ ಇಟ್ಟು. ನಂತರ ಅದನ್ನು ಹುಡಿಯಲ್ಲಿ ತುಂಬಿಕೊಂಡು; ಕರಿಯಮ್ಮ ನಿನ್ನಾಲಿಕೆಗೆ ಉಧೋ ಉಧೋ ಎಂದು ದೇವರ ಕೇಲ್ನ್ ನಮ್ಮೂರ ಹಳೆ ಬಾವಿಗೆ ಕಳಿಸಿ ಬರಲಿಕ್ಕೆ ಹೊರಡುವುದು. ಇಂತಹ ಎಷ್ಟೊಂದು ವಿಸ್ಮಯ ಆಚರಣೆಗಳು ಹಳ್ಳಿಯಲ್ಲಿ ಈಗಲೂ ಲಭ್ಯ.        ನಮ್ಮೂರ ದಸರಾ ಅಂದರೆ, ಬನ್ನಿ ಮುಡಿಯುವುದು ಹೇಳದೇ ಇದ್ರೇ ಹಬ್ಬ ಪೂರ್ತಿಯಾಗಲ್ಲ. ಏಕೆಂದರೆ ಬನ್ನಿಗೂ ಇವತ್ತಿಗೂ ಪವಿತ್ರವಾದ ಸ್ಥಾನವಿದೆ. ಅಂತ ಬನ್ನಿಯನ್ನು ಹಿರಿಯರು ಕಿರಿಯರು ವಿನಿಮಯ ಮಾಡಿಕೊಂಡು. ಕಿರಿಯರು ಹಿರಿಯರ ಕಾಲಿಗೆ ನಮಸ್ಕರಿಸಿದಾಗ, ಹಿರಿಯರು ಅದಕ್ಕೆ ಪ್ರತಿ ಬನ್ನಿ ನೀಡಿ. “ಬನ್ನಿ ತಗೊಂಡು ಬಂಗಾರದಂಗ ಇರು” ಎನ್ನುವ ಆರ್ಶೀವಾದ. ಇನ್ನೂ ಎಷ್ಟೆಷ್ಟೋ ಸಂಗತಿಗಳು, ಆಚರಣೆಗಳು ಈ ಹಬ್ಬ ನಮ್ಮ ಹಳ್ಳಿಯ ವಾತಾವರಣವನ್ನು ಇನ್ನು ಹಿಡಿದಿಟ್ಟುಕೊಂಡಿದೆ. ಹೀಗೆ ನನ್ನ ಆ ದಿನಗಳ ದಸರಾ ಆಚರಣೆಗಳನ್ನು ನೆನಪಿಸಿಕೊಂಡರೆ ಇಂದಿಗೂ ಮೈಯ್ಯಲ್ಲಿ ರೋಮಾಂಚನವಾಗುತ್ತದೆ. ಈ ನನ್ನ ಬರವಣಿಗೆ ನಿಮಗೆ ಮೆಚ್ಚುಗೆಯಾದರೆ ನನ್ನ ಈ ಲೇಖನಕ್ಕೆ ಹೊಸ ಕಳೆ ಎಂದು ಭಾವಿಸುವೆ. ******************** ಮೂಗಪ್ಪ ಗಾಳೇರ

ಗಾಳೇರ ಬಾತ್ Read Post »

You cannot copy content of this page

Scroll to Top