ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರಸ್ತುತ

ವಿಶ್ವಾಸದ್ರೋಹಿ ನೇಪಾಳ ಸಂಗಮೇಶ ಎನ್ ಜವಾದಿ ವಿಶ್ವಾಸದ್ರೋಹಿ ನೇಪಾಳದಲ್ಲಿ ಭಯಂಕರ ಪ್ರಕೃತಿ ವಿಕೋಪ ಆದಾಗ ಇದರ ಸಂಕಷ್ಟಕ್ಕೆ ಕೈಜೋಡಿಸಲು ಮೊದಲು ಬಂದಿದ್ದು ಮತ್ತು ನೆರವಾಗಿದ್ದು ಭಾರತ ದೇಶ. ನೇಪಾಳಕ್ಕೆ ಭಾರತದ ಸಹಾಯ, ಸಹಕಾರ ಬೇಕು ಜೊತೆಗೆ ಆರ್ಥಿಕ ಸಹಾಯ ಸಹ ಬೇಕೇ ಬೇಕು, ಇವರ ಯುವಕ ಯುವತಿಯರಿಗೆ ದುಡಿಯಲು ಭಾರತ ಬೇಕು.ಇವರ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಯಲು ಭಾರತ ದೇಶ ಬೇಕು.ಭಾರತದಲ್ಲಿ ಸೀಗುವ ಪ್ರತಿಯೊಂದು ವಸ್ತುಗಳ ಸಹಾಯದ ಅಗತ್ಯತೆ ನೇಪಾಳ ಜನರಿಗೆ ಬೇಕು ಹಾಗೂ ಭಾರತದ ಸಹಾಯ ಇವರಿಗೆ ಯಾವತ್ತೂ – ಯಾವಾಗಲೂ ಅವಶ್ಯಕತೆ ಇದ್ದೆ ಇರುತ್ತದೆ ಎನ್ನುವುದು ಅಲ್ಲಿನವರಿಗೆ ಗೊತ್ತು ಆದರೆ ಇದಕ್ಕಿದಂತೆ ನಮ್ಮ ಸಹಾಯವನೆಲ್ಲಾ ನೇಪಾಳದವರು ಮರೆತು ಕೆಲವು ದಿನಗಳಿಂದ ಭಾರತದ ವಿರುದ್ಧವಿಚಿತ್ರವಾಗಿ ವರ್ತನೆ ಮಾಡುತ್ತಿದ್ದಾರೆ ಎನ್ನುವುದು ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕು ಮತ್ತು ಪರಿಗಣಿಸುವುದು ಅತಿ ಅವಶ್ಯಕತೆ ಇದೆ. ಹಾಗೆ ನೇಪಾಳದವರ ಚೈನೀಸ್ ಫಾಸ್ಟ್ ಫುಡ್ ವೆಂಬ ಹೆಸರಿನ ಗೂಡಂಗಡಿ ಭಾರತದ ಯಾವ ರಾಜ್ಯ ಯಾವ ಜಿಲ್ಲೆ ಯಾವ ನಗರದಲ್ಲಿ ಇಲ್ಲ ಹೇಳಿ? ಬ್ಯುಟಿ ಪಾರ್ಲರ್ ಮಾಸಾಜ್ ಪಾರ್ಲರ್ ಗಳಲ್ಲಿ ಇವರ ಯುವತಿಯರದ್ದೇ ಕಾರುಬಾರು.ಇವರ ಯುವಕ ಯುವತಿಯರು ಭಾರತಕ್ಕೆ ಬಂದು ಇಲ್ಲಿ ದುಡಿದು ಇಲ್ಲೇ ತಮ್ಮ ಜೀವನವನ್ನ ಸಾಗಿಸುತ್ತಿದ್ದಾರೆ, ಅಂದು ನೇಪಾಳದಲ್ಲಿ ಭೂಕಂಪ ಆದಾಗ ಸಹಾಯಕ್ಕೆ ಮೊದಲು ಧಾವಿಸಿದು ಭಾರತ ದೇಶವೇ ಎನ್ನುವುದು ನೇಪಾಳದ ಇಂದಿನ ಕುತಂತ್ರಿ ಸ್ವಾರ್ಥ ರಾಜಕೀಯ ಮುಖಂಡರಿಗೆ ಮರೆತು ಹೋಗಿದೆ ಎನ್ನಬಹುದು,ಮರೆತು ಭವ್ಯ ಭಾರತದ ಬಗ್ಗೆ ಹಗುರವಾಗಿ ಅಲ್ಲಿನ ನೀಚ ರಾಜಕೀಯ ಪುಂಡರು ಮಾತನಾಡುತ್ತಿದ್ದಾರೆ. ಸಧ್ಯ ಈಗ ಸುನಾಮಿಯಂತೆ ಅಪ್ಪಳಿಸುತ್ತಿರುವ ಕೊರೋನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಭಾರತದಿಂದ ಸುಮಾರು 571 ಟನ್ ಗಳಷ್ಟೂ ವೈದ್ಯಕೀಯ ಉಪಕರಣ,ವೈದ್ಯಕೀಯ ಸವಲತ್ತು,ಆಹಾರ ಸಾಮಗ್ರಿ,ನೀರು, ಹಾಗೂ ಸಿಬ್ಬಂದಿಗಳನ್ನ ಕಳುಹಿಸಿ ಕೊಟ್ಟು ನೇಪಾಳಕ್ಕೆ ಮಾನವೀಯ ನೆಲೆಗಟ್ಟಿನಲ್ಲಿ ಸಹಾಯಸ್ತ ಚಾಚಿದೆ. ಇಷ್ಟೆಲ್ಲಾ ನಿಸ್ವಾರ್ಥದಿಂದ ಸೇವೆ ಮಾಡಿರುವ ಮತ್ತು ನಿರಂತರವಾಗಿ ಸಹಾಯ ಮಾಡುತ್ತಿರುವಸಹಾಯವನ್ನು ಉಪಯೋಗಿಸಿಕೊಂಡು – ಉಪಯೋಗಿಸಿಕೊಳ್ಳುತ್ತಿರುವ ಇವರು ಇದೀಗ ಭಾರತದ ವಿರುದ್ಧವೇ ಹೀನ ಬುದ್ಧಿ ನೇಪಾಳ ಪ್ರದರ್ಶನ ಮಾಡುತ್ತಿದೆ. ಭಾರತದಿಂದ ನೀಡಿರುವ ಸಕಲ ಸೌಲಭ್ಯಗಳನ್ನು ಉಪಯೋಗಿಸಿ ಮೈಮರೆತು ಈಗ ನೇಪಾಳ ಇಂದು ಪ್ರಜಾಪ್ರಭುತ್ವ ವಿರೋಧಿ ದೇಶ ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ.ಚೀನಾ ಯಾವ ರೀತಿಯಲ್ಲಿ ನೇಪಾಳಕ್ಕೆ ಹೇಳುತ್ತದೇಯೂ ಹಾಗೆ ಅದೇ ತರಹ ನಮ್ಮ ವಿರುದ್ಧ ಕೆಲಸ ಮಾಡುತ್ತಿದ್ದೆ.ಯಾವುದೇ ರೀತಿಯಲ್ಲಿಯೂ ಚೀನಾ,ನೇಪಾಳಕ್ಕೆ ಸಹಾಯ ಹಾಗೂ ಸಹಕಾರವಂತೂ ಖಂಡಿತಾ ಮಾಡಲ್ಲಾ ಆದರೆ ಚೀನಾದ ಕಪಟದಿಂದ  ಭಾರತದ ಮೇಲೆ ವೈಷಮ್ಯ ಕಾರುತ್ತಿದೆ ನೇಪಾಳ.ಇದಲ್ಲದೆತನ್ನ ದೇಶದ ಹೊಸ ಭೂಪಟವನ್ನ ಪ್ರಕಟಿಸಿ ಭಾರತದ ಸೀಮೆಯ ಕಾಲಪಾನಿ,ಹಾಗೂ ಲೆಪುಲೆಕ್ ತನ್ನದು ಭಾರತ ಇದನ್ನ ಅಕ್ರಮವಾಗಿ ಆಕ್ರಮಿಸಿ ಕೊಂಡಿದೆ ಹಾಗೂ ತಾನು ಇದನ್ನ ಭಾರತದಿಂದ ವಶಪಡಿಸಿಕೊಳ್ಳುತ್ತೇನೆ ಎಂದು ಹೇಳಿದೆ ಎಷ್ಟೇಲ್ಲಾ ಸಹಾಯ ಮಾಡಿದರು ನೇಪಾಳಕ್ಕೆ ಮಾನವೀಯತೆ ಗೊತ್ತಿಲ್ಲ ಅಂತಾ ಕಾಣುತ್ತದೆ. ಜೊತೆಗೆ ಸಹಕಾರತತ್ವದ,ಮಾನವೀಯ ಮೌಲ್ಯಗಳ, ಮೌಲ್ಯಾಧಾರಿತ ಸಿದ್ದಾಂತಗಳ ಕುರಿತು ಎಳಷ್ಟು ಕಾಳಜಿ ಇಲ್ಲವೆಂದು ನಮಗೆ ತೋರುತ್ತದೆ. ಇಂದಿನ ನೇಪಾಳದ ಪ್ರಧಾನಿ ಕೋರೋನಾ ವೈರಸ್ ಹರಡಿದ್ದು ಚೀನಾದ ವುಹಾನ್ ಅಲ್ಲ ಬದಲಾಗಿ ಭಾರತ ಹಾಗೂ ಇದು ಆತಿ ವೇಗವಾಗಿ ಸಮಾಜಕ್ಕೆ ಹರಡಿಸುತ್ತಿದೆ ಎಂದು ನೇಪಾಳದ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ನೋಡಿ ಇದು ಎಂತಹ ಅವಿವೇಕದ ಮಾತು, ವಿಶ್ವ ವಿಶ್ವವೇ ಇಂದು ಚೀನಾದ ಮೇಲೆ ಕಿಡಿಕಾರುತ್ತಿದ್ದಾಗ (ಕಿಡಿಕಾರುತ್ತಿರುವಾಗ)ಈ ವಿಶ್ವಾಸದ್ರೋಹಿ ನೇಪಾಳ ಮಾತ್ರ ಭಾರತದ ವೈರಸ್ ಎಂದು ಬೊಬ್ಬೆ ಹಾಕುತ್ತಿದೆ. ಇದು ಹೀಗೆ ಹೇಳಿದರೆ ಭಾರತಕ್ಕೆ ಯಾವುದೇ ರೀತಿಯಲ್ಲಿಯೂ ಹಾನಿಯಾಗಲ್ಲ,ಯಾಕೆಂದರೆ ಕೊರೋನಾ ವೈರಸ್ ಚೀನಾದ ಕುತಂತ್ರದಿಂದ ಜನ್ಮಪಡೆದ ವೈರಸ್ ಎಂಬುದು ಜಗತ್ತಿಗೆ ಗೊತ್ತಿದೆ. ಆದಕಾರಣ ನೇಪಾಳ ಏಷ್ಟೇ ನೀಚ ಬುದ್ಧಿ ತೋರಿಸಿದರು ಫಲಪ್ರದ ಖಂಡಿತಾವಾಗುದಿಲ್ಲ.ಇದರ ಹಿಂದೆ ಯಾರು ಇದ್ದಾರೆ ಅನ್ನುವುದು  ಜಗತ್ತಿಗೆ ಹಾಗೂ ನಮ್ಮಗೆಲ್ಲರಿಗೂ ಗೊತ್ತು ಅದೇ ಕುತಂತ್ರೀ ಚೀನಾ ಎಂಬುದು.ಆದರೆ ಚೀನಾದ ಬಗೆ ಒಂದೇ ಒಂದು ಮಾತನಾಡುತ್ತಿಲ್ಲ, ಯಾಕೇ ! ಎನ್ನುವುದೇ ದೊಡ್ಡ ಯಕ್ಷ ಪ್ರಶ್ನೆ ? ಚೀನಾವು ಯಾವ ಕುತಂತ್ರಿ ಬುದ್ಧಿ ಉಪಯೋಗಿಸಿ ನೇಪಾಳವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ ಎನ್ನುವುದೇ ತಿಳಿಯದ ವಿಚಾರವಾಗಿದೆ ಮತ್ತು ಯಾವುದೇ ರೀತಿಯಲ್ಲಿಯೂ (ನೇಪಾಳಕ್ಕೆ) ಸಹಾಯ ಮಾಡದ ಜನವಿರೋಧಿ ದೇಶವಾದ ಚೀನಾದ ಬಗೆ ಮಾತನಾಡದೇ ಭಾರತ ದೇಶದ ಬಗ್ಗೆ ಮಾತನಾಡುತ್ತಿರುವ ನೇಪಾಳಕ್ಕೆ ಸಧ್ಯ ಬುದ್ಧಿ ಭ್ರಮೆ ಯಾಗಿದೆ ಎನ್ನಬಹುದು. ಭಾರತದಂತಹ ಬಲಿಷ್ಠ ದೇಶ ಮುಂದೆ ನೇಪಾಳ ಯಾವ ಲೆಕ್ಕ,ಯಾವುದೇ ರೀತಿಯಲ್ಲಿಯೂ ಭಾರತದ ಎದುರಿಗೆ ನಿಲ್ಲುವ ತಾಕತ್ತು ನೇಪಾಳಕ್ಕೆ ಖಂಡಿತಾ ಇಲ್ಲ,ಚೀನಾದ ಬೆಂಬಲದಿಂದ ಇಷ್ಟೊಂದು ಹಾರಡುತ್ತಿರುವ ನೇಪಾಳಕ್ಕೆ ಬುದ್ಧಿ ಕಲಿಸುವ ದಿನಗಳು ದೂರವಿಲ್ಲ ಎನ್ನುವುದು ಅಲ್ಲಿನ ಹೀನ ರಾಜಕೀಯ ಮುಖಂಡರು ಅರಿತು ನಡೆದರೆ ಉತ್ತಮ ಇಲ್ಲವಾದಲ್ಲಿ ನೀವು ಮಾಕಾಡೆ ಮಲಗುವ ದಿನ ದೂರವಿಲ್ಲ ಎನ್ನುವುದು ಮರೆಯಬೇಡಿ.———

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ಭಾವನೆಗಳು ಮಾತನಾಡುತ್ತಿವೆ ಕಲ್ಪನೆಗಳ ಸಾಗರದಲಿ ಹುದುಗಿ ಹೊಕ್ಕಿದ್ದ ಶಿಲ್ಪವನು ಹೆಕ್ಕಿ ನನಸಾಗಿಸುವಾಸೆಯಲಿ ನೂರೂರಗಳ ಸುತ್ತಿ ಸುತ್ತಿ ಮೌನಿಯಾದ ಶಿಲ್ಪಿಯೊಬ್ಬ ಬಾಯಾರಿ ದಣಿದಿರಲು ತಿರುಕನ ಕನಸು ಹಾರೈಸಿದಂತೆ ಚಂದಿರನ ಬೆಳದಿಂಗಳ ಮೀರಿ ಅಮೃತ ಸಮಾನ ಶಿಲೆಯೊಂದು ಹರ್ಷದಾ ವರವಾಗಿ ಗೋಚರಿಸಿ ವನವಾಸದಲಿಹ ಲಕ್ಷ್ಮಣನ ಕಾಯ್ದು ಕನವರಿಸಿ ಕಲ್ಲಾಗಿ ತಪಗೈವಂತೆ ಊರ್ಮಿಳೆ, ಹಸಿವು ನಿದ್ದೆಗಳ ಗೆದ್ದು ಕಾಲನ ಕುಣಿಕೆಯ ಮರೆತು ಹಗಲಿರುಳು ಹವಣಿಸುತಲಿ ಶಿಲೆಯನು ದೃಷ್ಟಿಸುತಲಿ ಅಂತರಾತ್ಮದಿ ಅಡಗಿಹ ಅರಿವನು ಹದಗೊಳಿಸಿ ಕಲ್ಪನೆ ಶಿಲ್ಪವನೆ ಉಸಿರಾಡಿ ಇಂದ್ರಿಯಗಳ ನಿಗ್ರಹಿಸಿ ಅತೀಂದ್ರಿಯ ಹುರಿಗೊಳಿಸಿ ಬಕಧ್ಯಾನದಿಂದಲಿ ಶಿಲೆಯ ತಿದ್ದುತಲಿ ತೀಡುತಲಿ ನವಿರಾಗಿ ಸಿಹಿ ಉಳಿಪೆಟ್ಟು ನೀಡುತಲಿ ಜ್ಞಾನದ ಒಳಗಣ್ಣ ತೆರೆದು ಕಾಲ್ಬೆರಳಿಗುಂಗುರ ಕೈಗೆಬಳೆಗಳ ಮೂಗುನತ್ತು ಕೊರಳ ಮಾಂಗಲ್ಯ ಜೀವ ಭಾವಗಳೆಲ್ಲವ ತುಂಬಿ ಕಣ್ಬಿಟ್ಟ ಶಿಲ್ಪವನು ಹೆಣ್ಣಾಗಿಸಿ ಅಪ್ಸರೆ ಸೋಲಿಸುವ ತವಕದಿ ದಣಿದ ಶಿಲ್ಪಿಯ ಉಸಿರು ಸಿಂಧೂರವಿಡದೆ ಹೆಣ್ಣಾದ ಶಿಲ್ಪಕೆ ವಿಧಿಯಾಟಕೆ ಬಲಿಯಾಯಿತು ಶಿಲ್ಪಿ ಸಾಂಗತ್ಯಕೆ ಕಾಯುತಲಿ ಜೀವಬಂದ ಶಿಲ್ಪ ಒಂಟಿತನದಿ ಬರಿಯ ಮೌನವೇ ಶಾಪವಾಗಿ ಮೂಕ ರೋಧನೆಯ ಕೂಪದಿ ಭಾವನೆಗಳು ಮಾತನಾಡುತ್ತಿವೆ ************

ಕಾವ್ಯಯಾನ Read Post »

ಇತರೆ

ಲಹರಿ

ಆತ್ಮಸಾಕ್ಷಿಯಾಗಿ… ಸುರೇಶ ಎನ್ ಶಿಕಾರಿಪುರ. ಸತ್ತ ವ್ಯಕ್ತಿಯನ್ನು ಶ್ರೀಗಂಧ, ಒಣ ಕೊಬ್ಬರಿ, ತುಳಸಿಯನ್ನು ರಾಶಿ ಒಟ್ಟಿ, ಮೇಲೆ ತುಪ್ಪವ ಸುರಿದು ಸುಟ್ಟರೆ ಅದು ಕಡೆಯ ಪಕ್ಷ ಹೆಣದ ವಾಸನೆಯನ್ನು ಮರೆ ಮಾಚಬಹುದು ಇಲ್ಲವೇ ಸತ್ತ ವ್ಯಕ್ತಿಯ ಶ್ರೀಮಂತಿಕೆಯ ಪ್ರದರ್ಶನ ವಾಗಬಹುದು ಅಷ್ಟೆ. ಅದು ಗುಣದ ಮಾನದಂಡವಲ್ಲ. ಅದರಿಂದ ಮೃತ ವ್ಯಕ್ತಿಯ ಗುಣ ಮಾತ್ರ ಸುಡುವುದಿಲ್ಲ. ಅದು ಒಳ್ಳೆಯ ಗುಣವಾಗಿದ್ದರೂ ಕೆಟ್ಟ ಗುಣವಾಗಿದ್ದರೂ ಹುಟ್ಟು ಗುಣ ಸುಟ್ಟರೂ ಹೋಗುವುದಿಲ್ಲ… ಸದ್ಗುಣವಾಗಿದ್ದರೆ ಜನತೆಯ ನಾಲಗೆಯ ಮೇಲೆ ಸ್ತುತಿಯಾಗಿಯೂ ದುರ್ಗುಣವಾಗಿದ್ದರೆ ಅದೇ ಜನರ ನಾಲಗೆಯ ಮೇಲೆ ನಿಂದೆಯಾಗಿಯೂ ತಲೆಮಾರುಗಳು ಕಳೆದರೂ ಹಾಗೆಯೇ ಉಳಿಯುತ್ತದೆ‌. “ಉಂಡರೆ ಉಟ್ಟರೆ ಸೇರ ಮಂಡೆ ಬಾಚಿದರೆ ಸೇರ | ಕುಂತಲ್ಲಿ ಸೇರ ದುಸ್ಮಾನ | ಸತ್ತಾರೆ | ಉಂಡ್ಹೋಗಿ ಹೆಣವ ತಗುದೇವೊ||“ ಇದು ದುಷ್ಟರ ಸಾವಿಗೆ ಜನಪದ ಪ್ರತಿಕ್ರಿಯಿಸಿದ ರೀತಿ. ಬೂತಯ್ಯ ಸತ್ತಾಗ ಊರು ಪ್ರತಿಕ್ರಿಯಿಸಿದ ರೀತಿಯೂ ಹಾಗೇ. ಆದರೆ ಒಳ್ಳೆಯವರ ಸಾವನ್ನೂ ಪಟಾಕಿ ಹೊಡೆದು ಸಂಭ್ರಮಿಸುವ, ಕೇಕೆ ಹಾಕಿ ಕುಣಿಯುವ, ನಿಂದೆಗಳ ಮಳೆಗರೆದು ವಿಕೃತ ಆನಂದ ಅನುಭವಿಸುವ ವಿಕಾರಿಗಳೇ ತುಂಬಿರುವ ಅಸಹನೀಯ ವಾತಾವರಣದಲ್ಲಿ ನಾವೀಗ ಬದುಕುತ್ತಿದ್ದೇವೆ. ದುಷ್ಟರ ಸಾವು ನೋವು ಸಮಾಜದ ದೃಷ್ಟಿಯಲ್ಲಿ ಯಾವ ಸಹಾನುಭೂತಿಯನ್ನೂ ಗೌರವವನ್ನೂ ಪಡೆದುಕೊಳ್ಳುವುದಿಲ್ಲ. ಸಾವು ಸಾರ್ಥಕವಾಗಬೇಕಾದರೆ ಬದುಕು ಸಾರ್ಥಕವಾಗಿರಬೇಕು. ಆ ಸಾರ್ಥಕತೆ ನಮ್ಮಷ್ಟಕ್ಕೆ ನಮ್ಮದೇ ಆಗಿರದೆ ಅದು ನಾಲ್ಕು ಜನರೂ “ಸಾರ್ಥಕವಾಗಿ ಬದುಕಿದ್ನಪ್ಪ ಆ ಮನುಷ್ಯ ಪುಣ್ಯಾತ್ಮ” ಎನಿಸಿಕೊಳ್ಳುವಂತಿರಬೇಕು. ಅದಕ್ಕೇ ಯಾರೋ ಒಬ್ಬ ಕವಿ ಬರೆದುಬಿಟ್ಟ, “ಒಳಿತು ಮಾಡು ಮನುಸಾ… ನೀ ಇರೋದು ಮೂರು ದಿವಸ…” ಎಂದು. ನಾವು ಸರಳವಾಗಿ ಬದುಕಬೇಕು. ಕಪಟವಿಲ್ಲದ ನೆಡೆ ನುಡಿ ನೋಟ ಹೊಂದಿರಬೇಕು. ನನಗೆ ಸಾಲದೆಂದು ನನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಮರಿಮಕ್ಕಳಿಗೂ ಅವರ ಮರಿ ಮಕ್ಕಳಿಗೂ ಆಗುವಷ್ಟು ಕೂಡಿಡುವ ದುರಾಸೆ ಸಲ್ಲದು. ಸಂಪತ್ತು ಹೆಚ್ಚಿದಷ್ಟೂ ಮನುಷ್ಯ ನೆಮ್ಮದಿ ಕಳೆದುಕೊಳ್ಳುತ್ತಾ ಹೋಗುತ್ತಾನೆ ಮಾತ್ರವಲ್ಲ ಮನುಷ್ಯತ್ವವನ್ನೂ ಕಳೆದುಕೊಳ್ಳುತ್ತಾ ಹೋಗುತ್ತಾನೆ. ದರ್ಪ, ಅಹಂ, ಮದ, ಉದಾಸೀನತೆ, ಕ್ರೌರ್ಯ ಅವನಲ್ಲಿ ಮನೆ ಮಾಡುತ್ತಾ ಹೋಗುತ್ತದೆ‌. ಅವನೊಬ್ಬ ಶೋಷಕನೂ ನಾಶಕನೂ ಆಗಿ ಮಾರ್ಪಾಡಾಗುತ್ತಾನೆ‌. ಮಾನವ ದಾನವನಾಗುವ ಪರಿ ಇದು. ಇಂಥವರ ಸಾವು ನೊಂದವರ ಸಂಭ್ರಮವಾಗುತ್ತದೆ. ಸಾವು ಅರ್ಥಪೂರ್ಣವಾಗಬೇಕು ಸತ್ತ ಮೇಲೂ ಬದುಕಬೇಕು ಎಂದರೆ ನಾವು ಹಣವನ್ನು ಸಿರಿಯನ್ನು ಕೀರ್ತಿಯನ್ನು ಅಧಿಕಾರವನ್ನು ಮೋಹಿಸುವುದನ್ನು ಸ್ವಾರ್ಥವನ್ನು ಸ್ವಪ್ರತಿಷ್ಟೆಯನ್ನು ಬಿಡಬೇಕು. ಮನದ ಮುಂದಣ ಆಸೆಯೆಂಬ ಮಾಯೆ ನಮ್ಮನ್ನು ಎಂದೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಬಿಡದು. ಮನುಷ್ಯನಿಗೆ ಹಂಚಿ ತಿನ್ನುವ ಗುಣ ಇರಬೇಕೋ ಹೊರತು ಹೊಂಚಿ ಹೊಡೆದು ತಿನ್ನುವ ಗುಣ ಅಲ್ಲ. ಯಾವನು ಅಂತರಂಗವೂ ಬಹಿರಂಗವೂ ಶುದ್ಧನಾಗಿರುತ್ತಾನೋ ಅವನು ಜಗತ್ತಿನ ಯಾವ ಶ್ರೀಮಂತನಿಗೂ ಕೆಳಗಿನವನಲ್ಲ. ಗುಣಶ್ರೀಯೇ ಮನುಷ್ಯನ ಶ್ರೀಮಂತಿಕೆ. ಗುಣವನ್ನು ಹಣ ಕೊಟ್ಟು ಕೊಳ್ಳಲು ಆಗುವುದಿಲ್ಲ. ಅದು ನಮ್ಮೊಳಗೇ ಹುಟ್ಟಿ ಹರಿಯುವ ಅಮೃತವಾಹಿನಿ ಅದನ್ನು ಮನುಷ್ಯನಿಂದ ಮನುಷ್ಯನಿಗೆ ಹರಿಸಬೇಕು.. ಮಾನವತೆಯ ಬೀಜವನ್ನು ಬಿತ್ತಿ ಬೆಳೆಯಬೇಕು. ನಮ್ಮ ದೇಹ ಹೊರಟುಹೋಗುವ ಹಕ್ಕಿಯನ್ನು ಕೂಡಿಹಾಕಿಕೊಂಡಿರುವ ತೊಗಲು ಮಾಂಸ ಮೂಳೆಯ ಪಂಜರ. ಹಕ್ಕಿಯು ಒಂದಲ್ಲಾ ಒಂದು ದಿನ ಬಂಧನದಿಂದ ಮುಕ್ತವಾಗಿ ಹಾರಿ ಹೋಗುತ್ತದೆ. ಅಸ್ತಿತ್ವ ಕಳೆದುಕೊಂಡ ದೇಹವೆಂಬ ಪಂಜರ ಕೊಳೆಯಲು ಆರಂಭಿಸುತ್ತದೆ. ಇದು ಸಕಲ ಪ್ರಾಣಿ ಜಗತ್ತಿನ ಬಾಳಿನ ಅಂತಿಮ ಸತ್ಯ. ಆದರೆ ಮನುಷ್ಯನನ್ನು ಹೊರತು ಪಡಿಸಿ ಬೇರಾವ ಪ್ರಾಣಿಗಳೂ ಅಪ್ರಾಕೃತಿಕವಾಗಿ ಬದುಕಲಾರವು ಅವುಗಳ ವರ್ತನೆಯಲ್ಲಿ ನಮ್ಮ ಸಣ್ಣತನಗಳಿಲ್ಲ. ನಮ್ಮ ದುರಾಸೆಗಳಿಲ್ಲ, ನಮ್ಮ ಧರ್ಮ ಜಾತಿಯ ಕಿತ್ತಾಟಗಳಿಲ್ಲ‌. ನಾಳೆಗೆ ಕೂಡಿಸಿಟ್ಟುಕೊಳ್ಳಬೇಕೆಂಬ ಸ್ವಾರ್ಥ ದಾಹವಿಲ್ಲ. ಗುಣದಲ್ಲಿ ಅವೇ ಮೇಲು ನಾವೇ ಕೀಳು. ಸದಾ ಅತೃಪ್ತಿಯಲ್ಲೇ ಬದುಕುವಾತ ಎಂದೂ ಸುಖವಾಗಿರಲಾರ ಮತ್ತು ಆತ ಇತರರನ್ನೂ ಸುಖವಾಗಿರಲು ಬಿಡಲಾರ. ಯಯಾತಿಯ ದಾಹ ಯಯಾತಿಯನ್ನೇ ಬಲಿ ಪಡೆಯಿತು. ಕಂಡಕಂಡ ಹೆಣ್ಣುಗಳನ್ನೆಲ್ಲಾ ಭೋಗಿಸಿದ, ಚಿರ ಯೌವ್ವನಕ್ಕಾಗಿ ಹಪಹಪಿಸಿದ, ಅವನ ದುರಾಸೆ ಅವನ ಅತೃಪ್ತಿ ಅವನ ದಾಹಕ್ಕೆ ತೃಷೆಗೆ ಎಲ್ಲೆಯೇ ಇರಲಿಲ್ಲ. ಮನುಷ್ಯತ್ವ ಕಳೆದುಕೊಂಡ ಕಾಮದ ಪುತ್ಥಳಿಯಾಗಿದ್ದ. ತನ್ನ ತೆವಲು ತನ್ನ ಸುಖಕ್ಕಾಗಿ ನಿಸರ್ಗದ ಧರ್ಮದ ವಿರುದ್ಧವಾದ ಹಾದಿಯಲ್ಲಿ ಗೂಳಿ ದನದಂತೆ ನುಗ್ಗುತ್ತಿದ್ದ ಆತ; ಅಕಾಲಿಕ ಮುಪ್ಪಿನ ಶಾಪಕ್ಕೆ ಗುರಿಯಾದ. ಕಡೆಗೆ ಮಗನ ಯೌವ್ವನಕ್ಕೂ ಕನ್ನ ಹಾಕಿದ. ಎಲ್ಲವೂ ಆದಮೇಲೆ ಅವನಿಗೆ ಬದುಕಿನ ಅಂತಿಮ ಸತ್ಯದ ಅರಿವಾಯಿತು ದರ್ಶನವಾಯಿತು. ತಪ್ಪಿಗಾಗಿ ಪರಿತಪಿಸಿದ ಪಶ್ಚಾತ್ತಾಪಬಟ್ಟ. ಆದರೆ ಶಿಕ್ಷೆಯಿಂದ ಆತನಿಗೆ ಮುಕ್ತಿಯಿಲ್ಲ. ಬಂದ ಮುಪ್ಪನ್ನು ನಿರಾಕರಿಸಲು ತಪ್ಪಿಸಿಕೊಳ್ಳಲು ದಾರಿಗಳಿಲ್ಲವೆಂಬ ಜೀವನ ಸತ್ಯದ ಅರಿವಾದಾಗ ಎಲ್ಲವನ್ನೂ ಬಿಟ್ಟುಕೊಟ್ಟು ನಿರಾಳನಾದ ಆತ “ಮಹಾತ್ಮ” ಎನಿಸಿಕೊಂಡ. ‌ನಾವು ನಮ್ಮೊಳಗಿನ ಯಯಾತಿಯ ದಾಹವನ್ನು ಕೊಂದುಕೊಳ್ಳಬೇಕು. ಸನ್ಮಾರ್ಗದ ಆಯ್ಕೆಯೇ ನಮ್ಮನ್ನು ಸುಖವಾಗಿ ಸುಂದರವಾಗಿ ಇಡುವುದು. ಬಾಳು ಇರುವುದು ಸ್ವೀಕರಣೆಗೋ ಹೊರತು ನಿರಾಕರಣೆಗಲ್ಲ. ಎಲ್ಲರಿಂದಲೂ ಕಲ್ಲು ಹೊಡೆಸಿಕೊಳ್ಳುವ ಕಾಬಾದ ಶಿಲೆಯಾಗಿ ಬಾಳುವುದಕ್ಕಿಂತ ಎಲ್ಲರೂ ಮೆಚ್ಚವ ಮನುಷ್ಯನಾಗಿ ನಾಲ್ಕು ಕಾಲ ಬಾಳಿದರೆ ಸಾಕು.. **************************

ಲಹರಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಜಾಂಬ್ಳಿ ಟುವಾಲು ಜಾಂಬ್ಳಿ ಟುವಾಲು ಕಥಾಸಂಕಲನ ಲೇಖಕರು- ರಾಜು ಹೆಗಡೆ ಪ್ರಕಾಶನ – ಅಂಕಿತ ಪುಸ್ತಕ ಶಿರಸಿಯಲ್ಲಿ ಕನ್ನಡ ಉಪನ್ಯಾಸಕರಾಗಿರುವ ಪ್ರೊ.ರಾಜು ಹೆಗಡೆ ಉತ್ತರ ಕನ್ನಡದ ಪ್ರಮುಖ ಕವಿ ಮತ್ತು ಕಥೆಗಾರ.ಉ.ಕದ ಗಡಿರೇಖೆಯೊಳಗೆ ತಮ್ಮ ಕಥಾಲೋಕ ಸೃಷ್ಟಿಸಿಕೊಂಡು ಇಲ್ಲಿಯೇ ನೆಲೆಸಿರುವ ಬರಹಗಾರ. ಜಾಂಬ್ಳಿ ಟುವಾಲು ಎಂಬ ಹೆಸರಿನ ಯಾವುದೇ ಕಥೆ ಇಲ್ಲಿಲ್ಲ. ಆದರೆ ‘ಕುರುರಾಯ ಇದನೆಲ್ಲ ಕಂಡು..’ ಎಂಬ ಕಥೆಯಲ್ಲಿ ಟವೆಲ್ ಇಟ್ಟು ಹೋದವರ ಜಗಳದ ಪ್ರಸಂಗ ಬರುತ್ತದೆ. ಕಥೆಗಳನ್ನು ಜಾಂಬ್ಳಿ – ಇಲ್ಲಿ ಆರು ಕಥೆಗಳು ಇವೆ. ಟುವಾಲು- ಇಲ್ಲಿಯೂ ಆರು ಕಥೆಗಳಿವೆ. ಮತ್ತು ಅನುಬಂಧದಲ್ಲಿ ನಾಲ್ಕು ಕಥೆಗಳಾಗಿ ವಿಂಗಡಿಸಲಾಗಿದೆ. ಅಪಾರ ಪಾಂಡಿತ್ಯವನ್ನು ಪಡೆದಿದ್ದರೂ ರಾಜು ಹೆಗಡೆ ಅವರು ಅದನ್ನು ಕಥೆಗಳಲ್ಲಿ ತುರುಕಿಲ್ಲ. ಸರಳ ಮತ್ತು ಉತ್ತರ ಕನ್ನಡದ ಭಾಷೆಯಲ್ಲಿ ಕತೆ ಹೇಳುತ್ತಾ ಹೋಗಿದ್ದಾರೆ. ವಿನೋದದ ಪ್ರಸಂಗವನ್ನು ಚಂದಾಗಿ ಹೇಳಬಲ್ಲ ಹೆಗಡೆಯವರು ‘ ಲಾರಿ ಏರಿದ ಕಾಡು ‘ ಎಂಬ ಕತೆಯಂತಹ ಕತೆಯಲ್ಲಿ ವಿಷಾದವನ್ನು ಸಟಕ್ಕನೆ ತಂದು ಕಾಡುವರು. ಕತ್ತಲೆ ಮೌನ ಮತ್ತು… ಪ್ರಜಾವಾಣಿ ದೀಪಾವಳಿ ವಿಶೇಷಾಂಕದಲ್ಲಿ ಮೊದಲ ಬಹುಮಾನ ಪಡೆದ ಕಥೆ. ಇಲ್ಲಿ ಗಜಾನನ, ತಿಮ್ಮಣ್ಣ (ತಿರುಮಲೇಶ) ಮತ್ತು ಗೌರಿಯ ಸುತ್ತ ಸುತ್ತುತ್ತಾ ಊರನ್ನೂ ಒಳಗೊಳ್ಳುವ ಕಥೆ. ಸಣ್ಣ ಪುಟ್ಟ ಚಾಲ್ ನಲ್ಲೆ ಚಿತ್ರಣ ಕಟ್ಟಿಕೊಡುವುದು ಇವರ ನಿರೂಪಣೆಯ ವಿಶೇಷ. ಚಾವಿ ಕಥೆ ಅತ್ಯಂತ ಸಣ್ಣ ಸಮಯದಲ್ಲಿ ನೆಡೆಯುವ ಸಾಮಾನ್ಯ ಘಟನೆ. ಆದರೆ ಅದು ರಾಜು ಹೆಗಡೆ ಅವರ ಕೈಯಲ್ಲಿ ಕಲಾತ್ಮಕವಾಗಿ ಹೊರಹೊಮ್ಮಿದೆ. ಪಾರಿಜಾತದ ಗೀರು ಒಂದು ವಿಶಿಷ್ಟವಾದ ಕಥೆ.ಇಲ್ಲಿಯ ಪ್ರೇಮಿಗಳ ವಾತಾವರಣ ಈಗಿನ ಕಾಲಘಟ್ಟದ್ದಾದರೂ, ಇಬ್ಬರೂ ಪ್ರೌಢರು. ವಿಪ್ರಲಂಭ ಕೂಡಾ ಎಕ್ಸ್ಟ್ರಾ ಮರೈಟಲ್ ರಿಲೇಶನ್ ಶಿಪ್ ಬಗ್ಗೆ ರೋಮ್ಯಾಂಟಿಕ್ ನಿರೂಪಣೆಯಲ್ಲಿ ಸಾಗುತ್ತದೆ. ಲಾಸ್ಟ್ ಪೆಗ್,ಫ್ರಿಜ್ಜು, ಲೌಕಿಕ ದಂತಹ ಕತೆಗಳು ಯಾವುದೇ ಪ್ರಕಾರದ ಹಂಗಿಲ್ಲದೆ ಓದುವ ಮತ್ತು ಕೇವಲ ಓದುವ ಖುಷಿಯನ್ನು ಕೊಡುತ್ತವೆ. ಈ ಎಲ್ಲಾ ಹಿನ್ನೆಲೆಯಲ್ಲಿ ಒಮ್ಮೆ ಓದಲೇಬೇಕಾದ ಕೃತಿ ಈ ‘ ಜಾಂಬ್ಳಿ ಟುವಾಲು. ***********. ಡಾ.ಅಜಿತ್ ಹರೀಶಿ

ಪುಸ್ತಕ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ರೆಕ್ಕೆ ಮುರಿದಾಗ… ಚೇತನಾ ಕುಂಬ್ಳೆ ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಅಲ್ಲಿ ಉರುಳಿ ಬಿದ್ದು ಅಸುನೀಗಿದ್ದು ಬರೇ ಜೀವಗಳು ಮಾತ್ರ ಆಗಿರಲಿಲ್ಲ. ಹಲವು ಕುಟುಂಬಗಳ ಆಧಾರಸ್ತಂಭಗಳಾಗಿತ್ತು. ಅಲ್ಲಿ ಕಳೆದುಕೊಂಡದ್ದು ಸ್ನೇಹ ಸಂಬಂಧಗಳ ಕೊಂಡಿಯಾಗಿತ್ತು. ಒಬ್ಬರಿಗೆ ಪ್ರೀತಿಯ ಒಡಹುಟ್ಟಿದವರು ಮತ್ತೊಬ್ಬರಿಗೆ ಸ್ನೇಹಿತರು ಮಗದೊಬ್ಬರಿಗೆ ಬಾಳಿಗೆ ಬೆಳಕಾಗಿದ್ದ ಹೆತ್ತವರು ಕೆಲವರಿಗೆ ಜೀವದುಸಿರಾಗಿದ್ದ ಬಾಳಸಂಗಾತಿಗಳು, ಕರುಳಬಳ್ಳಿಗಳು ಮತ್ತೂ ಕೆಲವರಿಗೆ ಸಂಬಂಧಿಕರು ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಅಲ್ಲಿ ನುಚ್ಚುನೂರಾದದ್ದು ಕೇವಲ ದೇಹಗಳೂ ಎಲುಬುಗಳೂ ಮಾತ್ರವಾಗಿರಲಿಲ್ಲ ಹೆಣೆದಿಟ್ಟ ಕನಸುಗಳಾಗಿತ್ತು ಮನದ ಮೂಲೆಯಲ್ಲಿದ್ದ ನಿರೀಕ್ಷೆಗಳಾಗಿತ್ತು ಭದ್ರವಾಗಿ ಬೇರೂರಿದ ನಂಬಿಕೆಗಳಾಗಿತ್ತು ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಕ್ಷಣದೊಳಗೆ ಹೊತ್ತಿ ಉರಿದದ್ದು ಒಂದಷ್ಟು ಮಿಡಿವ ಹೃದಯಗಳು ಮಾತ್ರ ಆಗಿರಲಿಲ್ಲ ಗೆಳೆಯರಿಗಾಗಿ, ಬಂಧುಗಳಿಗಾಗಿ ಖರೀದಿಸಿದ ಸ್ನೇಹದ ಉಡುಗೊರೆಗಳಾಗಿದ್ದವು ಹೆತ್ತವರಿಗಾಗಿ ತೆಗೆದಿರಿಸಿದ ವಸ್ತ್ರಾಭರಣಗಳಾಗಿದ್ದವು ಬಾಳ ಸಂಗಾತಿಗಾಗಿ ಅಡಗಿಸಿಟ್ಟ ಒಲವ ಉಡುಗೊರೆಗಳಾಗಿದ್ದವು ಮಕ್ಕಳಿಗಾಗಿ ಕೊಂಡುಕೊಂಡ ಚಾಕ್ಲೇಟ್ ಗಳೂ, ಆಟಿಕೆಗಳೂ ಆಗಿದ್ದವು. ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಎಲ್ಲವೂ ನಭವನ್ನಾವರಿಸಿದ ಕಪ್ಪು ಹೊಗೆಯೊಂದಿಗೆ ಬೆರೆತು ಕರಕಲಾಗಲು ಒಂದು ನಿಮಿಷವೂ ಬೇಕಾಗಿರಲಿಲ್ಲ ಎಲ್ಲವೂ ಮುಗಿದಿತ್ತು ಕ್ಷಣದೊಳಗೆ ಏನೆನ್ನಲಿ… ವಿಧಿಯಾಟವ…. ಹೇಗೆ ಮರೆಯಲಿ… ಹೇಗೆ ಸಹಿಸಲಿ…ನೋವನ್ನು… ದಿನಗಳುರುಳಿ ವರುಷಗಳಾಗುತ್ತಿವೆ ವರುಷಗಳೊಂದಿಗೆ ಕಾಲವೂ ಬದಲಾಗುತ್ತಿದೆ ಆದರೆ, ನೆನಪುಗಳು… ಅದೂ ಕಹಿ ನೆನಪುಗಳು… ಈಗಲೂ ಎದೆಯನ್ನು ಇರಿಯುವಾಗ ಕಣ್ಗಳು ಹನಿಗೂಡುತ್ತವೆ ಹೃದಯ ಭಾರವಾಗುತ್ತದೆ ಜೊತೆಗೆ, ದೀರ್ಘವಾದ ಒಂದು ನಿಟ್ಟುಸಿರು… (ದಶಕದ ಹಿಂದೆ ಮಂಗಳೂರಲ್ಲಿ ನಡೆದ ವಿಮಾನ ದುರಂತ ಘಟನೆಯ ಆಧಾರಿತ) *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ತಂಗಾಳಿ! ಕೆ.ಬಿ.ವೀರಲಿಂಗನಗೌಡ್ರ ಅವಳೆಂದರೆ.. ತೊರೆದವನಿಗೆ ಅರಳಿಮರವಾದವಳು ಅವಳೆಂದರೆ.. ಕೂಡಬೇಕೆಂದವನಿಗೆ ಅನುಭವಮಂಟಪವಾದವಳು ಅವಳೆಂದರೆ.. ಹೋರಾಟಗಾರನಿಗೆ ಊರುಗೋಲಾಗಿ ನಿಂತವಳು ಅವಳೆಂದರೆ.. ಸಮತೆಯೆಂದವನಿಗೆ ತಕ್ಕಡಿ ಹಿಡಿದು ನಿಂತವಳು ಅವಳೆಂದರೆ.. ಎದೆಯದನಿಗೆ ಸ್ವಾತಿ ಹನಿಯಾದವಳು ಅವಳೆಂದರೆ.. ಬೆಳೆಸಲೆಂದೇ ಬೇರಾಗಿ ಕೆಳಗಿಳಿದವಳು ಅವಳೆಂದರೆ.. ಕಾಣದ ತಂಗಾಳಿ ಅರ್ಥವಾಗದ ಅಮೂರ್ತ. *******

ಕಾವ್ಯಯಾನ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ಕಣ್ನೀರಾಗುತ್ತೇನೆ! ಕಗ್ಗತ್ತಲ ಇರುಳೊಳಗೆ ಬೀದಿ ದೀಪಗಳ ನೆರಳುಗಳಾಟದೊಳಗೆ ಮುಸುಕೊದ್ದು ಮಲಗಿದ ನಿನ್ನ ಶಹರದೊಳಗೆ ಅಡ್ಡಾಡುತ್ತೇನೆ ನಿಶಾಚರನಂತೆ ಹಗಲು ಕಂಡ ಬೀದಿಯ ಹುಡುಕಿ ಇರುಳು ಅಲೆಯುತ್ತೇನೆ ಎತ್ತರದ ನಿನ್ನ ಮನೆಯ ಮಹಡಿಯಮೇಲೆ ಕವಿದ ಕಪ್ಪು ಮೋಡಗಳಾಚೆ ಇಣುಕುತ್ತಿರುವ ಚಂದ್ರನ ನಿದ್ದೆಗಣ್ಣಿನ ನಗುವಿಗೆ ಹೋಲಿಸಿ ನಿನ್ನ ಮಂದಹಾಸವ ನಾಚುತ್ತೇನೆ! ಮೂಡಿದ ಸೂರ್ಯನ ಎಳೆ ಕಿರಣಗಳು ನಿನ್ನಂಗಳದಲ್ಲಿ ಚಿತ್ತಾರ ಬಿಡಿಸುವ ದಿವ್ಯ ಮುಂಜಾವದಲ್ಲಿ ಮೈಮುರಿಯುತ್ತ ಹೊರಬಂದ ನಿನ್ನ ಮುದುಡಿದ ಸೀರೆಯ ನಿರಿಗೆಗಳಲ್ಲಿ ಅಡಗಿರಬಹದಾದ ಹಿಂದಿನ ರಾತ್ರಿಯ ಕನಸುಗಳಲ್ಲಿ ನನ್ನ  ಹುಡುಕುತ್ತೇನೆ! ಕಾಣದ ಕನಸುಗಳ ನೆನೆದು ಕಣ್ನೀರಾಗುತ್ತೇನೆ ************ ಕು.ಸ.ಮಧುಸೂದನ

ಕವಿತೆ ಕಾರ್ನರ್ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ನಾನು ಅಘೋರಿಯಲ್ಲ “ನಾನು ಅಘೋರಿಯಲ್ಲ”” – Santoshkumar Mehandale 10 ವರ್ಷದ ಹಿಂದೆಯೇ ತರಂಗದಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ, ರಾಜ್ಯಮಟ್ಟದ ಜನಪ್ರಿಯ ಕಾದಂಬರಿ ಎಂದೆನಿಸಿಕೊಂಡ, (ಬಹುಶ ಹಲವು ಪ್ರಶಸ್ತಿಯೂ ) ಪುಸ್ತಕ….    ನನ್ನ ಬಹುದೊಡ್ಡ ಹೊಟ್ಟೆಯುರಿ ಅಂದ್ರೆ ಈ ಲೇಖಕರು,  ಇವರ ಬರಹಗಳು ನಂಗೆ ಪರಿಚಯವಾದದ್ದು ತೀರ ಇತ್ತೀಚಿಗೆ, ಇಷ್ಟು ವರ್ಷ ನಾನೀ ಲೇಖಕರ ಪುಸ್ತಕ ಬರಹ ಎಲ್ಲಾ ಮಿಸ್  ಮಡ್ಕೊಂಡೇ ಅಂತನ್ನಿಸೋದು ಇವರ ಕೆಲವು ಪುಸ್ತಕಗಳು ಸಿಗದಿದ್ದಾಗ, ಅವನು ಗಂಧರ್ವ….  ಯಾವ ಪ್ರೀತಿಯೂ…. ಓದಿದ ನಂತರ ಸರ್ ನಿಮ್ಮ ಯಾವ್ಯಾವ ಬುಕ್ಸ್ ಲಭ್ಯ ಇದೇ ಕಳಿಸಿಬಿಡಿ ಅಂತಾ ತರಿಸಿಕೊಂಡಿದ್ದೆ ಆದರೇ ಮಿಸ್ ಆದ ಪುಸ್ತಕಗಳಲ್ಲೊಂದು “”ನಾನು ಅಘೋರಿಯಲ್ಲ “”   ನನ್ನದೊಂದು (ದುರ )ಅಭ್ಯಾಸ ಅಂದ್ರೆ ನಂಗೆ ಯಾವುದೇ ಬುಕ್ ಬೇಕಂದ್ರೂ ಇನ್ನೊಬ್ರತ್ರ ಇಸ್ಕೊಳೋದು ಲೈಬ್ರರಿಲಿ ತರೋದು ಆಗೋಲ್ಲ, ಆದ್ರೆ ಮಾರ್ಕೆಟ್ ನಲ್ಲಿ ಸಿಗದಿದ್ದಾಗ ಲೈಬ್ರರಿ ಮೊರೆ ಅನಿವಾರ್ಯ, ಹೀಗೇ ಯಾವ್ದೋ ಬುಕ್ ತರೋದಿತ್ತು ಹಾಗೂ ಈ ಮೆಹಂದಳೆ ಸರ್ ದು, ನಂದೂ ಬುಕ್ಸ್ ಅಲ್ಗೆ ತಳ್ಪಸೋಣಾ ಅಂತಾ ಹೋದಾಗ ಕಣ್ಣಿಗೆ ಬಿದ್ದದ್ದು ಈ ನಾನು ಅಘೋರಿಯಲ್ಲ, ಒಂದ್ಸಲ ಆದ ಖುಷಿಗೆ ಪಾರವಿರಲಿಲ್ಲ, ನಿನ್ನೆ ಇಡೀ ದಿನ ಮಾಡಬೇಕಾದ ಎಲ್ಲಾ ಕೆಲ್ಸ ಬಿಟ್ಟು ಕೂತು ಓದಿ ಮುಗ್ಸಿದ್ದೀನಿ, ನನ್ನನಿಸಿಕೆ ಕೇವಲ ಅನಿಸಿಕೆ ನಿಮ್ಮ ಮುಂದೆ…   ಈ ಅಘೋರಿ ಅನ್ನೋ ಪದಾನೇ ನನ್ನ ವಿಚಿತ್ರವಾಗಿ ಸೆಳೆಯತ್ತೆ, ಇದರ ಬಗ್ಗೆ ಓದಿಲ್ಲ ಕೇಳಿಲ್ಲ ಅಂತಲ್ಲ, ಬಹುಶ: ಅಘೋರಿ ಅಂದ್ರೆ ಒಂಥರಾ ಭಯ ಗಾಬರಿ ಏನೋ ಮುಜುಗರದಂತಹ ಫೀಲಿಂಗ್, ಅವ್ರೇನೋ ಬೇರೇ ಗ್ರಹದವರ ಎಂಬ ಅಸ್ಪೃಶ್ಯ ಅಲ್ದೇ ಸರಿಯಾಗಿ ಹೇಳ್ಬೇಕಂದ್ರೆ ಅಸಹ್ಯ ಅನ್ನೋ ಭಾವನೇನೇ ಜಾಸ್ತಿ, ಆದರೇ ಈ ಪುಸ್ತಕದ ವಿಶೇಷ ಅಂದ್ರೆ ಇದನ್ನ ಓದಿದರೆ ಸರಿಯಾಗಿ ಅರ್ಥೈಸಿಕೊಂಡರೆ ಲೇಖಕರು “”ಅಘೋರಿಗಳ “” ಬಗೆಗಿನ ಎಲ್ಲಾ ಪೂರ್ವಗ್ರಹಗಳನ್ನೂ ನಿವಾರಿಸಿಬಿಡುತ್ತಾರೆ ಮಾತ್ರವಲ್ಲ ಅವರೊಂದಿಗೆ ಒಂದು ಮಾನವೀಯ ಗೌರವ ಭಾವವೂ ಹುಟ್ಟಿಕೊಳ್ಳುತ್ತೆ, ಮತ್ತೆಂದೂ ಪೂರ್ವಾಪರ ವಿವೇಚನೆ ಇಲ್ದೆ ಅಘೋರಿಗಳನ್ನ ನೀವು ನಿರಾಕರಿಸಲಾರಿರಿ ಡ್ಯಾಮ್ ಶ್ಯೂರ್…..    ಸಾಮಾಜಿಕ ವ್ಯವಸ್ಥೆಯ ಮೂರ್ನಾಲ್ಕು ರಂಗಗಳನ್ನು ಒಂದಕ್ಕೊಂದು ಕೊಂಡಿಗಳನ್ನ ಜೋಡಿಸೋದನ್ನು ಪರಸ್ಪರ ಒಬ್ರಿಗೊಬ್ರು ದ್ರೋಹವೆಸಗೋದನ್ನೂ , ಅದರೊಳಗೂ ಹರಡಿ ಘಮಿಸುವ ನಿರ್ಮಲ ನಿಷ್ಕಲ್ಮಶ ಪ್ರೀತಿಯನ್ನು ಅದ್ಬುತವಾಗಿ ಎಲ್ಲೂ ಕಿಂಚಿತ್ತು ಬೇಸರವಾಗದಂತೆ ಎಲ್ಲಿಯೂ ಯಾವ ಚಿಕ್ಕ ಲೋಪವೂ ಬಾರದಂತೆ,  ಬೇಸರವಾಗದoತೆ ಕಥೆ ಹೆಣೆದಿರುವ ಲೇಖಕರ ಕೌಶಲ್ಯ ಮನಸೆಳೆಯುತ್ತದೆ.. ವೈಜ್ಞಾನಿಕಥೆಗೆ  ಅಧ್ಯಾತ್ಮದ,  ವಾಮಲೋಕದ ಅಘೋರ ವಿಜ್ಞಾನ, ಹೇಗೆ ಒಂದಕ್ಕೊಂದು ತಳುಕು ಹಾಕಿಕೊಳ್ಳಬಲ್ಲದು ಹಾಗೂ ಪರಸ್ಪರರ ಅವನತಿಗೂ ಕಾರಣವಾಗಬಲ್ಲದು ಎಂಬುದನ್ನು ಮಾರ್ತಾಂಡ ಬಾಬಾ ಹಾಗೂ ಅಧ್ವೈತ ಸ್ವಾಮಿ ಮೂಲಕ ಅರಿವನ್ನು ನೀಡಿದ್ದಾರೆ ಹಾಗೂ ಅಘೋರಿಗಳೂ ತಮ್ಮ ಸಿದ್ಧಿಯನ್ನು ಲೋಕ ಕಲ್ಯಾಣಕ್ಕೆ ಉಪಯೋಗಿಸುವ ಬಗ್ಗೆ ಖಂಡಿತವಾಗಿಯೂ ಸಾಮಾನ್ಯ ಜನಕ್ಕೆ ತಿಳುವಳಿಕೆ ಇರಲಾರದು, ಅಘೋರ ವಿಜ್ಞಾನ ಕೂಡ ವೈಜ್ಞಾನಿಕ ಆಧಾರಿತ ಅನ್ನೋದನ್ನೂ ಸರಳವಾಗಿ ಅರ್ಥವಾಗುವಂತೆ ಬಿಡಿಸಿಟ್ಟಿದ್ದಾರೆ, ನಮ್ಮ  ಆಡಳಿತ ವೈಖರಿ ಅಧಿಕಾರಿ ವರ್ಗದ ಕೆಲವು ವಿಫಲತೆ, ಭ್ರಷ್ಟಾಚಾರ, ಧರ್ಮವನ್ನು ದುರುಪಯೋಗ ಪಡಿಸಿಕೊಳ್ಳುವ ದುರವಸ್ಥೆ ಖೇದವೆನಿಸುತ್ತದೆ, ಮನುಷ್ಯನ ದುರಾಸೆಯಿಂದ ಸಮಾಜಕ್ಕಾಗುವ ಹಾನಿ ನಷ್ಟವನ್ನು ಅಗ್ನಿಹೋತ್ರಿ ಎಂಬ ವಿಜ್ಞಾನಿ ತನ್ನ ಅದ್ಬುತ ಪಾಂಡಿತ್ಯದಾಚೆಗೂ ಪ್ರಯೋಗವನ್ನು ಅಧೂರಿಯಾಗಿ ಬಿಟ್ಟು ತನ್ನನ್ನು ತನ್ನ ದಶಕಗಳ ಶ್ರಮವನ್ನು ಬೂದಿ ಮಾಡಿಕೊಳ್ಳುವ ಅಸಾಹಾಯಕತೆ ಗಲಿಬಿಲಿಗೊಳಿಸತ್ತೆ, ಅಘೋರಿಗಳ ವಾಮಮಾರ್ಗದ  ಭೀಭಿತ್ಸ  ಭೀಕರ ಆಚರಣೆಯ ಬಗ್ಗೆ ಮಾತ್ರಾ ತಿಳಿದವರಿಗೆ ಅದರ  ಹಿಂದಿನ ಸಾಮಾಜಿಕ ಕಳಕಳಿ, ಹಿತದೃಷ್ಟಿ ಅರಿವಿಗೆ ಬಂದ್ರೆ ಅಘೋರ ಲೋಕ ಹಾಗೂ ಅಘೋರಿಗಳ ಬಗೆಗಿನ ತಪ್ಪು ತಿಳುವಳಿಕೆ ಅಂತರ ಕಡಿಮೆಯಾಗಿ ಅವರೊಂದಿಗೆ ಒಂದು ಮಾನವೀಯ ಸಂವಹನ ಸಾದ್ಯವಾಗಬಲ್ಲದು, ಇದು  ಇನ್ನೊಮ್ಮೆ ಪ್ರತಿಲಿಪಿಯಲ್ಲಾದರೂ ಬರಲಿ ಎಂಬುದು ನನ್ನ ಕೋರಿಕೆ, ಇಲ್ಲಿನದೇ ಒಂದಷ್ಟು ಓದುಗರು ಓದಲು ಅನುಕೂಲ ಆಗಬಹುದೆಂಬುದು ನನ್ನಾಶಯ,   ಇನ್ನು ರೇಶಿಮೆ ಜರತಾರಿನ ಸೀರೆಯಲ್ಲಿ ಬೆಳ್ಳಿ ಝರಿಯಂತೆ ನಿಕ್ಷಿಪ್ತವಾಗಿ ಎಲ್ಲರಲ್ಲಿಯೂ ಸೇರಿಕೊಂಡಿರೋದು, “”ಪ್ರೇಮ ಎಂದರೆ ಆಕಾರಕ್ಕೆ ನಿಲುಕದ….    ಕಲ್ಪನೆಗೆ ನಿಲುಕದ……. ಮನಸ್ಸು… !!       ಒಂದು   “”ಪ್ರಚ್ಚನ್ನ ಮೌನ “”” ಆದಿ ಪುರಾಣ ಕಾಲದಿಂದಲೂ ಇಂದಿನವರೆಗೂ ಸಾವಿರಾರು ಪ್ರೇಮ ಕಥೆಗಳು ಆಗಿಹೋಗಿವೆ, ಒಂದಷ್ಟು ಸುಖಾಂತ ಒಂದಷ್ಟು ದುಃಖಾಂತ, ಎರಡರ ಬಯಕೆಯೂ ನಿಸ್ವಾರ್ಥ… ತ್ಯಾಗ…. ಅದೆಲ್ಲಕಿಂತ ತಾದ್ಯಾತ್ಮತೆಯನ್ನ…. ಎಂದು ಇತಿಹಾಸಗಳಿಂದ ಅರಿತವರು ತುಂಬಾ ಕಡಿಮೆ ಮಂದಿ…. ಈ  ಲೇಖಕ ಮಹಾನುಭಾವರ ಪ್ರೇಮದ ಪ್ರೀತಿಯ ವ್ಯಾಖ್ಯಾನಗಳು ಅತೀ ಸುಂದರ ಚೇತೋಹಾರಿ ಮನೋಲ್ಲಾಸಗೊಳಿಸುವಂತದ್ದು, ನಮ್ಮಂತ ಆಡಲಾರದ ಅನುಭವಿಸಲಾರದ ಬಿಸಿತುಪ್ಪದಂತೆ ನುಂಗಲಾರದೆ ಉಗುಳಲಾರದೇ ಸಂಕಟ ಪಡುವ ಮನಗಳಿಗೆ ಕೊಂಚ ಧೈರ್ಯ ತುಂಬಿ ಅಗತ್ಯವಾದದ್ದನ್ನು ಕೇಡಿಲ್ಲದ, ಅನ್ಯಾಯವಲ್ಲದ ರೀತಿಯಲ್ಲಿ ಎಟುಕಿಸಿಕೊಳ್ಳುವ, ಮನಃಸ್ಥಿತಿಗೆ ತಂದು ಬದುಕಿಗೆ ಅಲ್ಪ ಸ್ವಲ್ಪ  ನೆಮ್ಮದಿ ಚೈತನ್ಯ ತುಂಬುವಂತಹುದು, ಹೌದು ಇನ್ನೊಬ್ಬರಿಗೆ ಕೇಡೆಣಿಸದಂತ ಯಾವ ಪ್ರೀತಿಯೂ ಅನೈತಿಕವಲ್ಲ ಎಂದೇ ಸಾರಿದವರಲ್ಲವೇ….?? ಮನಸ್ಸಿನ ಅನುಭೂತಿಗೊಂದು ಆಯಾಮ ಕಲ್ಪಿಸುವುದೇ ಪ್ರೇಮವಾ?? ಇದ್ದಷ್ಟೂ ಮತ್ತಷ್ಟು ಬೇಕೆಂದುಕೊಳ್ಳುವುದು ಪ್ರೇಮವಾ?? ಜಾಜಿ ಮಲ್ಲೆಯ ಘಮಲಾ??  ಮುಂಜಾವಿನ ಇಬ್ಬನಿಯ ಮೃದುತ್ವವಾ?? ನಗುವ ಗಾಳಿಯ ಸಣ್ಣಸುಳಿಯ ಕಲರವವಾ?? ಮೊದಲ ಮಳೆಯ ಮಣ್ಣಿನ ವಾಸನೆಯ ಗಾಢತೆಯಾ?? ಪ್ರೇಮವೊಂದು ನೆರವೇರುವುದಕ್ಕಿಂತ ಅದು ನೆರವೇರಲಿರುವ ನಿರೀಕ್ಷೆ ತುಂಬಾ ಹಿತವಾಗಿರುತ್ತದೆಂದು ಯಾಕೆನಿಸುತ್ತದೆಯೋ… ಮಲ್ಲಿಗೆ ಬಳ್ಳಿಯ ತೂಗುವಿಕೆಯ  ಲಾಸ್ಯವಾಗಿ ಮನದಲ್ಲಿ ಬೆಳದಿಂಗಳಾಗಿ, ಇಂಧ್ರಧನುಸ್ಸಾಗಿ,, ಚಿನ್ನದ ಮೋಡಗಳ ಗರಿಗಳಾಗಿ… ಇದಕ್ಕಿಂತ ಹಿತವಾದುದು ಖಂಡಿತಾ ಇದರ ಮೀರಿದ ಹಿತವಿಲ್ಲ ಎಂದೇ ನಮ್ಮನಿಸಿಕೆಯೂ ಲೇಖಕರೇ… ಮೈನವಿರೇಳಿಸುವ ಅಘೋರ ಲೋಕದ ವಿದ್ಯಮಾನಗಳಾಗಲಿ…., ಹಿಪ್ನಾಟೈಸ್…., ಆರತ್ಯುಂಗ…. ವರ್ಣಗೋಲ….  ಕಡೆಗೆ ಕಾನ್ಫಿಡೆನ್ಸ್ ಏನೇ ಇರಲಿ, ಯಾವುದೇನು ಮಾಡಿದರೂ ಮನಸ್ಸನ್ನು ಕಂಡು ಹಿಡಿಯುವ ತಂತ್ರಜ್ಞಾನ ಮಾತ್ರಾ ಎಟುಕಲಾರದೇನೋ…???  ಅಂತದ್ದೊಂದು ಎಟುಕಬಾರದು ಕೂಡಾ… ಅದೇ ಈ ಸಕಲ ಜೀವಗಳಿಗೂ ಜಗತ್ತಿಗೂ ಶುಭ……   ಹೌದು ಪ್ರೇಮವೆಂದರೆ ಅಪೂರ್ವ ಶಾಂತಿ….        “”””ಪ್ರಚ್ಚನ್ನ ಮೌನ  “””” ಅದ್ಬುತ ಪ್ರೇಮ ರಾಸಾಯನದೊಂದಿಗೆ ಅಘೋರಿಗಳ ಹೊಸಮುಖ ಪರಿಚಯಿಸಿದ, ಒಂದು ನಿಗೂಢವನ್ನ ಅನಾವರಣಗೊಳಿಸಿದ ಲೇಖಕರಿಗೆ ವಂದನೆ ಅಭಿನಂದನೆಗಳು… ಹೀಗೇ ಬರೀತಾ ಇರಿ… ನಮ್ಮೆಲ್ಲ ಅಭಿಮಾನಿಗಳ ಪ್ರೀತಿಯ ಕಸುವು ನಿಮಗಿರಲಿ… ************ ಪದ್ಮಜಾ ಜೋಯಿಸ್

ಪುಸ್ತಕ ಸಂಗಾತಿ Read Post »

ಇತರೆ

ಪ್ರಸ್ತುತ

ಕ್ವಾರಂಟೈನ್ ರಜೆ ಯಲ್ಲಿ ಆತ್ಮಾವಲೋಕನ.. ವಿದ್ಯಾಶ್ರೀ. ಎಸ್.ಅಡೂರ್ ಹಿಂದೆಂದೂ ಕಂಡು, ಕೇಳಿ ಅರಿಯದ…..ಮುಂದೆಂದೂರ ಈ ರೀತಿಯೂ ಆಗಬಹುದೇ ಎಂದು ಖಾತ್ರಿಯೇ ಇಲ್ಲದಂತಹ ವಿದ್ಯಮಾನವೊಂದು ಜಗತ್ತಿನಾದ್ಯಂತ ತಾಂಡವವಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೌದು…ನಾನು ಕೊರೊನ ಬಗೆಗೆಯೇ ಹೇಳುತ್ತಿರುವುದು.         ಯಾರಿಗೆ ಪಥ್ಯವಾದರೂ…ಆಗದಿದ್ದರೂ…ಪ್ರಕೃತಿಯ ಮುಂದೆ ಹುಲುಮಾನವ ತೃಣಕ್ಕೆ ಸಮಾನವಾಗಿದ್ದಾನೆ.ಜಗತ್ತಿನ ದೊಡ್ಡಣ್ಣ ಎನ್ನಲಾಗುವ ಅಮೇರಿಕಾದಂತಹ ದೇಶವೇ ಸೋತು ಸುಣ್ಣವಾಗಿದೆ. ವೈಜ್ಞಾನಿಕವಾಗಿ,… ವೈಚಾರಿಕವಾಗಿ….ಯೋಚಿಸುವಾಗ ಅನೇಕ ತರ್ಕಬದ್ಧ ವಿಚಾರಗಳನ್ನು ಪುಟಗಟ್ಟಲೆ ಮಂಡಿಸಬಹುದು..ಚರ್ಚಿಸಬಹುದು. ನಾನು..ನೀನು ಎಂದು ಅನೇಕ ತಾಕಲಾಟ-ಮೇಲಾಟ ಗಳನ್ನು ಮಾಡಬಹುದು. ದೊಂಬಿ-ಗಲಾಟೆಗಳನ್ನು ಎಬ್ಬಿಸಬಹುದು.           ಆದರೆ ವೈಯಕ್ತಿಕವಾಗಿ ಕೂತು ಮೌನವಾಗಿ ಯೋಚಿಸಿದರೆ  ಮನುಷ್ಯನ ಅಲ್ಪತನದ ಅನಾವರಣವಾಗಿತ್ತ ಹೋಗುತ್ತದೆ. ದೊಡ್ಡ ದೊಡ್ಡ ವಿಚಾರಗಳ ಮಾತೇ ಬೇಡ;ನಮ್ಮ ನಿತ್ಯದ ಜೀವನದ ಮಗ್ಗಲುಗಳನ್ನು ವಿಮರ್ಶಿಸಿದಾಗಲೇ ನಮಗೆ ಅರಿವಾಗುತ್ತದೆ, “ನಮ್ಮ ನಿಜವಾದ ಅಗತ್ಯವೇನು??ಮತ್ತು ನಾವು ನಮಗೆ ಏನೆಲ್ಲಾ ಅಗತ್ಯ ಎಂದುಕೊಂಡಿದ್ದೇವೆ??”ಎಂದು.           ಈ ಕ್ವಾರಂಟೈನ್ ರಜೆಗಳಲ್ಲಿ ನಾನು ಅನೇಕ ಹಳೆ ಕಾಲದ  ತಿಂಡಿ ತಿನಿಸು ಗಳನ್ನು ಮಾಡಲು ಪ್ರಯತ್ನಿಸಿದೆ. ಚೆನ್ನಾಗಿ ಬಂತು ಕೂಡ. ಆದರೆ ದುರದೃಷ್ಟವಶಾತ್ ನಮ್ಮ ಮಕ್ಕಳಿಗೆಅವುಗಳ ಹೆಸರುಗಳೇ ಗೊತ್ತಿಲ್ಲ. ಆದರೆ  ಅದು  ಅವರ ತಪ್ಪಲ್ಲವೆಂದು ಸ್ಪಷ್ಟವಾಗಿ ನನಗೆ ಗೊತ್ತು.ಬಗೆ ಬಗೆಯ, ರುಚಿ ರುಚಿಯಾದ ತಿಂಡಿ ತಿನಿಸು ಗಳು ಮಾರ್ಕೆಟ್ ನಲ್ಲಿ ಹೋಗುವಾಗ,ಮಕ್ಕಳಿಗೂ ಮೋಹ ಆಚೆ ಕಡೆಗೆಯೇ ..ಜಾಸ್ತಿ. ನಮ್ಮಂತಹ ದೊಡ್ಡವರಿಗೂ ಸುಲಭವಾಗಿ ಕೆಲಸ ಆಗುತ್ತದಲ್ಲ ಎನ್ನುವ ಭಾವ. ಅದರಿಂದ ಆರೋಗ್ಯ ಹಾಳಾಗುತ್ತದೆ ಎಂದು ಗೊತ್ತಿದ್ದರೂ ದಿವ್ಯ ನಿರ್ಲಕ್ಷ್ಯವನ್ನು ತಳೆದುಬಿಡುತ್ತೇವಲ್ಲ. ಈ ರಜೆ ಗಳಲ್ಲಿ ಇದಕ್ಕೆ ಕಡಿವಾಣ ಬಿದ್ದಿದೆ ತಾನೇ….??        ಎಷ್ಟೋ ಜನ ನನ್ನ ಗೆಳೆಯ, ಗೆಳತಿಯರ ವಾಟ್ಸಾಪ್ ಸ್ಟೇಟಸ್ ಗಳಲ್ಲಿ ನಾನು ಅವರವರ ಮಕ್ಕಳು ಮಾಡಿದ ಅಡಿಗೆಯದ್ದಿರಬಹುದು,ರಂಗೋಲಿ-ಪೇಂಟಿಂಗ್ ಗಳದ್ದಿರಬಹುದು,ಅವರು ಆಡುವ ಆಟಗಳದ್ದಿರಬಹುದು,…ಫೋಟೋ-ವಿಡಿಯೋ ಗಳನ್ನು ಹೆಚ್ಚಾಗಿ ನೋಡುತ್ತಿದ್ದೇನೆ. ಇದನ್ನು ನೋಡಿದ ನಿಮಗೆ ಏನನ್ನಿಸುತ್ತದೆ?ಮಕ್ಕಳು ಮೊದಲು ಪೇಂಟಿಂಗ್..ರಂಗೋಲಿ ಗಳನ್ನು ಮಾಡದೆ, ಈಗ ಮಾತ್ರ ಮಾಡುತ್ತಿದ್ದಾರೆ ಎಂದೇ..?? ಮೊದಲು ಮಾಡುತ್ತಿದ್ದರೂ ಈಗ ಮಾಡುತ್ತಿರುವುದು ಮಾತ್ರ ರಜೆಯಲ್ಲಿ ಕೆಲಸವಿಲ್ಲದೆ ಖಾಲಿ ಕೂತ ಅಪ್ಪ-ಅಮ್ಮಂದಿರಿಗೆ ಕಾಣಿಸುತ್ತಿದೆ ಎಂದೇ..??ಅಲ್ಲ..ಎಲ್ಲರ ಹಾಗೆ ತಾನೂ ಏನಾದರೂ ಮಾಡಿ ಎಲ್ಲರ ಗಮನ ಸೆಳೆಯಬೇಕೆಂದು ಮಗು ಬಯಸುತ್ತಿದೆ ಎಂದೇ..?? ಯಾವ ರೀತಿಯಲ್ಲಿ ಅಳೆದು ತೂಗಿ ನೋಡಿದರೂ ಇದರಲ್ಲಿ ಎಳ್ಳಷ್ಟೂ ತಪ್ಪು ಕಾಣಿಸುತ್ತಿಲ್ಲವಲ್ಲ. ಈಗ …ಈ ರಜೆ ಗಳಲ್ಲಿ ಮಾತ್ರ ಮಕ್ಕಳು, ಈ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆಂದರೆ…ಅವರು ಇಷ್ಟು ಸಮಯದ ತಮ್ಮ ಶೈಕ್ಷಣಿಕ “ಜೀತದಿಂದ”ಬಿಡುಗಡೆಹೊಂದಿ,ತಮ್ಮ ತನವನ್ನು ಅರಸುತ್ತಿದ್ದಾರೆಂದು ಅರ್ಥವಲ್ಲವೇ??? ಈ ಹಿಂದೆ ಶಾಲಾಸಮಯಗಳಲ್ಲಿ ಶಿಕ್ಷಕರ,ಪೋಷಕರ ಕಣ್ಣು ತಪ್ಪಿಸಿ ತಮ್ಮ ಇಷ್ಟ ವಿಷಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದು,ಈಗ ಈ ರಜೆ ಗಳಲ್ಲಿ ತಮ್ಮ ತಮ್ಮ ಪೋಷಕರ ಪ್ರೋತ್ಸಾಹದಿಂದ ಆ ಕಾರ್ಯ ಗಳಲ್ಲಿ ತೊಡಗಿಸಿಕೊಂಡಿದ್ದಾರಾದರೆ, ಆ ಮಕ್ಕಳ ಆತ್ಮಸ್ತೈರ್ಯ ಅದೆಷ್ಟು ಪಟ್ಟು ಹೆಚ್ಚಾಗಿರಬೇಡ??ಯೋಚಿಸಿ ನೋಡಿ.            ನಮ್ಮ ಕಾಲದ ಕುಂಟೆಬಿಲ್ಲೆ,ಲಗೋರಿ ಇತ್ಯಾದಿ ಆಟಗಳನ್ನೆಲ್ಲ ಮಕ್ಕಳಿಗೆ ಹೇಳಿಕೊಟ್ಟ,ಅವರು ಖುಷಿಯಿಂದ ಅವುಗಳನ್ನು ಆಡುವಾಗ ಅದೆಷ್ಟು ಪುಳಕಿತಳಾಗಿದ್ದೇನೆ. ಮುಸ್ಸಂಜೆಯ ವೇಳೆಯಲ್ಲಿ ಅವರನ್ನು ಕೈ-ಕಾಲು ತೊಳೆದು,ದೇವರ ಮುಂದೆ ಕೂರಿಸಿ,ಭಜನೆ-ಶ್ಲೋಕ ಗಳನ್ನು ಹೇಳಿಸುವಾಗ ಅದೆಷ್ಟು ಧನ್ಯತಾಭಾವ ಆವರಿಸುತ್ತದೆ. ಮಕ್ಕಳಿಗೆ ರಜಯಲ್ಲಿ ಪೇಟೆ ಸುತ್ತುವುದು,ಪ್ರವಾಸ ಕರೆದುಕೊಂಡು ಹೋಗುವುದು ಇತ್ಯಾದಿ ಯಾವುದೂ ಇಲ್ಲದೆ ತೋಟದಲ್ಲಿ ವಾಕಿಂಗ್ ಹೋಗಿ ಬರುವುದು , ಅಡಿಕೆ-ತೆಂಗಿನಕಾಯಿ ಹೆಕ್ಕಿ ತರುವುದು , ಗುಡ್ಡೆಗೆ ಹೋಗಿ ಗೇರುಹಣ್ಣು ಕೊಯ್ಯುವುದು ಇತ್ಯಾದಿ ಸಣ್ಣ ಸಣ್ಣ ಚಟುವಟಿಕೆಗಳನ್ನು ಮಾಡುವುದರಿಂದ ದೈಹಿಕ ವ್ಯಾಯಾಮ ದೊಂದಿಗೆ ಹಳ್ಳಿ ಜೀವನದ ಕಿರುಪರಿಚಯ ಮಾಡಿ ಕೊಟ್ಟಂತೆ ಆಗುವುದಿಲ್ಲವೇ? ಈ ತರಹದ ಬೇಸತ್ತು ಹೋಗುವ ದೀರ್ಘ ರಜೆಗಳಿಲ್ಲದೇ ಹೋಗಿದ್ದರೆ ಮಕ್ಕಳಿಂದ ಇದನ್ನೆಲ್ಲ ಮಾಡಿಸಲು ಸಾಧ್ಯವಿತ್ತೇ..            ಅಂದಾಜು ಮೂವತ್ತರಿಂದ ಮೂವತ್ತೈದು ವರ್ಷಗಳನ್ನು ಹಳೆಯ ರಾಮಾಯಣ, ಮಹಾಭಾರತದ ಬಗೆಗಿನ ಟಿವಿ ಧಾರಾವಾಹಿ ಗಳ ಮರುಪ್ರಸಾರದ ಒಂದು ಎಪಿಸೋಡು ಗಳನ್ನೂ ತಪ್ಪಿಸದೇ ಅತ್ಯಂತ ಆಸಕ್ತಿಯಿಂದ ನಮ್ಮ ಮಕ್ಕಳು ನೋಡುವ ಹಾಗೆ ಮಾಡಿದ ಈ ಕ್ವಾರಂಟೈನ್ ರಜೆಗೆ ಅದ್ಹೇಗೆ ಧನ್ಯವಾದ ಹೇಳಲಿ. ಟಿವಿ ಯಲ್ಲಿ ಬರುವ ಹಾಳು ಮೂಳು ಧಾರಾವಾಹಿ, ರಿಯಾಲಿಟಿ ಷೋ ಗಳನ್ನು ಕಣ್ಣು ಎವೆಯಿಕ್ಕದೆ ನೋಡುವ ನಮ್ಮ ಮಕ್ಕಳು, ಅಷ್ಟೇ ಶ್ರದ್ಧೆಯಿಂದ ರಾಮಾಯಣ, ಮಹಾಭಾರತವನ್ನೂ ನೋಡುತ್ತಾರೆಂದರೆ ಇದರ ಅರ್ಥ ಏನು?? ನಾವು ಆದರ್ಶವಂದು ಬೋಧಿಸುವ ವಿಚಾರಗಳಲ್ಲೇ ದೋಷವಿದೆ ಎಂದಲ್ಲ?? ಒಳ್ಳೆಯ ವಿಚಾರಗಳು ನಮಗ್ಯಾರಿಗೂ ಬೇಡವಾಗಿದೆ ಎಂದಲ್ಲವೇ ?? ನೈತಿಕತೆಯ ವ್ಯಾಖ್ಯಾನ ವೇ ಬದಲಾಗಿದೆ ಎಂದಲ್ಲವೇ?? ಸುಮ್ಮನೆ ನಮ್ಮ ಮಕ್ಕಳನ್ನು ದೂರಿ ಪ್ರಯೋಜನವಿಲ್ಲ. ದುಡ್ಡು ಮಾಡುವ ದಂಧೆಕೋರರ ನಡುವೆ ಅವರ ಬಾಲ್ಯ ಮಾರಾಟವಾಗುತ್ತಿದೆ ,ಅಷ್ಟೇ .. ಇದನ್ನೆಲ್ಲ ಅರಿತುಕೊಳ್ಳಲು ಇದಕ್ಕಿಂತ ಒಳ್ಳೆಯ ಸುವರ್ಣ ಅವಕಾಶ ಬೇರೆ ಸಿಕ್ಕೀತೇ??        ನಮ್ಮ ಬಾಲ್ಯದಲ್ಲಿ ಮತ್ತು ತೀರ ಇತ್ತೀಚಿನ ವರೆಗೂ ಊರು ಬಿಟ್ಟು ಪೇಟೆ-ಪಟ್ಟಣ ಗಳಲ್ಲಿ ವಾಸಿಸುವ,ದೇಶ ಬಿಟ್ಟು  ವಿದೇಶದಲ್ಲಿರುವವರು, ಉದ್ಯೋಗ ನಿಮಿತ್ತವೇ ಹೋಗಿದ್ದರೂ ಅಪರೂಪಕ್ಕೊಮ್ಮೆ ಊರಿಗೆ ಮರಳುವಾಗ ಅವರಿಗೆ ಸಿಗುವ ಮರ್ಯಾದೆ ನೋಡಿದರೆ, ಊರಿನ ದೇವರ  ಜಾತ್ರೆ ಸುರುವಾಗಿದೆಯೇನೋ ಎಂದೆನಿಸುತ್ತದೆ.ಅಂತಹವರಲ್ಲಿ ಅನೇಕರು ಇಂದು ಪೇಟೆ-ಪಟ್ಟಣಗಳೆಂಬ ಕಾಂಕ್ರೀಟ್ ಕಾಡಿನಲ್ಲಿ,ಒಂಟೊಂಟಿ ಮನೆಗಳಲ್ಲಿ, ಬಾಗಿಲು ಜಡಿದು ಅಕ್ಷರಷಃ ಬಂಧಿಗಳಂತಾಗಿರುವ ಈ ಸಮಯದಲ್ಲಿ ತೋಟ,ಗುಡ್ಡ, ಹಸು,ಕರು ಇತ್ಯಾದಿ ವಿಶಾಲ ವ್ಯಾಪ್ತಿ ಯಲ್ಲಿರುವ ನಮ್ಮ ಹಳ್ಳಿಗರು ಅದೆಷ್ಟು ಧನ್ಯರು ಎಂದೆನಿಸದೇ ಇದ್ದರೆ ಖಂಡಿತ ಆತವಂಚನೆಯಾಗುತ್ತದೆ          ಆದರೂ ಕೂಳ್ಳುಬಾಕತನದಿಂದ ಹಳ್ಳಿಗರೂ ಹೊರಗುಳಿದಿಲ್ಲ. ಯಾವುದು ಬೇಕು, ಯಾವುದು ಬೇಡ ಎಂದು ಕಿಂಚಿತ್ತೂ ಯೋಚಿಸದೆ ಸ್ಪರ್ಧೆಗೆ ಬಿದ್ದಂತೆ ಕೊಂಡು ತಂದು ಮನೆಯಲ್ಲಿ ರಾಶಿ ಹಾಕಿದ ಯಾವುದೇ  ನಿರ್ಜೀವ ವಸ್ತುಗಳಿಗೂ ಬೆಲೆಯೇ ಇಲ್ಲ ಎಂದು ಕೊರೊನ ಹೇಳಿ ಕೊಟ್ಟಿದೆ. ತೋಟಕ್ಕೆ,ಹಟ್ಟಿಗೆ ಹೋಗುವಾಗ ಬಳಸುವ ಸ್ಲಿಪ್ಪರ್ ಒಂದನ್ನು ಬಿಟ್ಟು, ಆಸೆಬುರುಕುತನದಿಂದ ಕೊಂಡು ರಾಶಿ ಹಾಕಿದ ಎಂಟ್ಹತ್ತು ಜತೆ ಚಪ್ಪಲಿ ಗಳು ಉಪಯೋಗಕ್ಕೇ ಬರುತ್ತಿಲ್ಲ. ಮನೆಯಲ್ಲಿ ದಿನವೂ ಧರಿಸುವ ಉಡುಪುಗಳನ್ನು ಬಿಟ್ಟು ಕಪಾಟುಗಳಲ್ಲಿ ಪೇರಿಸಿಟ್ಟ ಬಣ್ಣ ಬಣ್ಣದ, ಬಗೆ ಬಗೆಯ ರಾಶಿ ರಾಶಿ ಉಡುಪುಗಳಿಗೆ ಕೆಲಸವೇ ಇಲ್ಲವಾಗಿದೆ.          ಕಾಂಕ್ರೀಟು ಹಾಕಿ ಹಾಕಿ ಕಟ್ಟಿದ ಬಿಲ್ಡಿಂಗ್ ಗಳಾಗಲೀ…ಅಪಾರ ಸಂಖ್ಯೆಯಲ್ಲಿ ಮರಗಳ ಮಾರಣಹೋಮ ಮಾಡಿ ರಚಿಸಿದ ರಸ್ತೆಗಳಾಗಲೀ…ಇವತ್ತು ನಮ್ಮ ಉಪಯೋಗಕ್ಕೆ ಬರುತ್ತಿಲ್ಲ. ಉಪಯೋಗಕ್ಕೆ ಬರುತ್ತಿರುವುದೇನಿದ್ದರೂ, ಮಣ್ಣಿನಲ್ಲಿ ಬೆಳೆದ ಹಣ್ಣು, ತರಕಾರಿ, ದವಸ,ಧಾನ್ಯ ಮಾತ್ರ.ಹಾಗಾದರೆ ನಮಗೆ ನಿಜವಾಗಿಯೂ ಏನು ಬೇಕು, ಏನು ಬೇಡ ಎಂದು ಯೋಚಿಸುವುದರಲ್ಲಿ ನಾವು ಸೋತಿದ್ದೇವೆ ಎಂದರ್ಥವಲ್ಲವೇ??          ಈ ಕೊರೊನ ರಜೆ ಯೋಚಿಸಲು ನಮಗೊಂದು ಉತ್ತಮ ಸಮಯಾವಕಾಶ ವನ್ನು ಕೊಟ್ಟಿದೆ. ಹಿಂದಿನ ತಪ್ಪುಗಳನ್ನು  ಸರಿಪಡಿಸಿ, ಬಲಹೀನರನ್ನು ಎತ್ತಿ ಎಬ್ಬಿಸಿ ಹೆಗಲು ಕೊಡುವುದಕ್ಕಾಗಿ ಒಳ್ಳೆಯ ಅವಕಾಶ ವನ್ನು ಒದಗಿಸಿದೆ. ನಮ್ಮ ಮುಂದಿನ ಪೀಳಿಗೆಗೆ ನಿಜಕ್ಕೂ ನಾವು ಮಾಡಬೇಕಾದ ದ್ದೇನು ಎಂದು ಯೋಚಿಸಿ ಕಾರ್ಯಗತಗೊಳಿಸುವ ಮೈದಾನ ವನ್ನು  ಒದಗಿಸಿದೆ. ನಾಡು,ಅಥವಾ ದೇಶ ಕಾಯಲು ಸೈನಿಕನಾಗಿ ಗಡಿಗೇ ಹೋಗಬೇಕಿಲ್ಲ, ನಮ್ಮ ನಮ್ಮ ಮಿತಿಯನ್ನರಿತು ವ್ಯಾಪ್ತಿಯನ್ನು ಬಳಸಿ ಪರೋಪಕಾರಾರ್ಥಂ ಇದಂ ಶರೀರಂ ಎಂಬಂತೆ ಬದುಕಿ “ಅನನ್ಯ”ರಾಗಬಹುದೆಂಬ ಬಹುದೊಡ್ಡ ಪಾಠವನ್ನೇ ಕಲಿಸಿದೆ.

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ಸರಸ ಬಾಲಕೃಷ್ಣ ದೇವನಮನೆ ಹುಣ್ಣಿಮೆಯ ಶೃಂಗಾರದಾಟಕೆಉದ್ರೇಕಗೊಂಡು ಮೊರೆಯುತ್ತಿದೆ ಕಡಲುದಂಡೆಯಲ್ಲಿ…ಎದೆಯಿಂದ ನಾಭಿಯಲಿ ಸುಳಿದುತೊಡೆಸಂಧಿಯಲಿ ಕುದಿಯುತ್ತಿದೆ ಉಸಿರು… ಮೌನವನು ಹೊದ್ದ ತಿಂಗಳುಮುಚ್ಚಿದ ರೆಪ್ಪೆ;  ಕಚ್ಚಿದ ತುಟಿ,ಕಿವಿಯ ಪದರದಲಿ ಮುಲುಕಾಟದಾಲಾಪ,ಕುಳಿರ್ಗಾಳಿ ಸೋಕಿದ ಬೆರಳುಮೈಮುರಿದ ತೋಳುಉಸಿರಿನೇರಿಳಿತಕಿಬ್ಬೊಟ್ಟೆಯಲಿ ಬಿಗಿತ;ನಡುವಿಂದ ಕಾಲ್ಸೆಳೆತ. ಚದುರಿದ ಮರಳುಹಾಸಿಗೆ, ಕೆದರಿದ ಮುಂಗುರುಳುಗೀರಿದ ಬೆನ್ನುಉಕ್ಕಿದ ಬೆವರು ಹರಿದುಒಡಲೊಳಗೆ ಜೀವಜಲ ಪುಟಿದುಗರ್ಭಗಡಲಲ್ಲಿ ಪುಳಕ..! ಮೊರೆತ ತಗ್ಗಿದ ಕಡಲು ಶಾಂತಪ್ರಶಾಂತ ಮುಗುಳು ಧನ್ಯ!! *******

ಕಾವ್ಯಯಾನ Read Post »

You cannot copy content of this page

Scroll to Top