ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಈ ಯುದ್ಧ ಗೆಲ್ಲಲು ಡಾ .ಪ್ರಸನ್ನ ಹೆಗಡೆ ಈ ಯುದ್ಧ ಗೆಲ್ಲಲು ಶಸ್ತ್ರಾಸ್ತ್ರ ಬೇಕಿಲ್ಲ ಮುಖಗವಚವಷ್ಟೆ ಸಾಕು ಈ ಯುದ್ಧ ಗೆಲ್ಲಲು ಹೊರ ನಡೆಯ ಬೇಕಿಲ್ಲ ಒಳಗಿದ್ದರಷ್ಟೆ ಸಾಕು ಈ ಯುದ್ಧ ಗೆಲ್ಲಲು ಬೊಬ್ಬಿರಿಯಬೇಕಿಲ್ಲ ಮೌನಾಸ್ತ್ರವಷ್ಟೆ ಸಾಕು ಈ ಯುದ್ಧ ಗೆಲ್ಲಲು ಕಿತ್ತುಕೊಳ್ಳುವುದು ಬೇಕಿಲ್ಲ ಹಂಚಿ ತಿಂದರಷ್ಟೆ ಸಾಕು ಈ ಯುದ್ಧ ಗೆಲ್ಲಲು ಮಲ್ಲ ಶಾಸ್ತ್ರ ಬೇಕಿಲ್ಲ ಉಸಿರ್ವಿದ್ಯೆ ಯಷ್ಟೆ ಸಾಕು ಈ ಯುದ್ಧ ಗೆಲ್ಲಲು ಅಂತರಿಕಿಕ್ಷಕ್ಹಾರ ಬೇಕಿಲ್ಲ ಅಂತರದ ಮಂತ್ರ ಸಾಕು ಈ ಯುದ್ಧ ಗೆಲ್ಲಲು ಸೈನ್ಯವೇ ಬೇಕಿಲ್ಲ ಆತ್ಮಬಲ ಒಂದೇ ಸಾಕು. *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶಾಯರಿ ಮರುಳಸಿದ್ದಪ್ಪ ದೊಡ್ಡಮನಿ (೧) ಹರೇ ಬಂದ್ರ ಅದು ಖರೇನ ಹೇಳತೈತಿ ಯಾವಾಗ್ಲೂ ನಕ್ಕೊಂತನ ಇರತೈತಿ ಹರೇ ಅನ್ನುದು ಹುಚ್ಚು ಕೊಡಿಯಾಗಿರತೈತಿ ಬೇಕಾದವರನ್ನ ಬೇಕಾದಂಗ ತಿರುಗುಸತೈತಿ. (೨) ಪ್ರೀತಿ ಅನ್ನು ವಿಷ ಕುಡದೇನಿ ಸಾಯಾಕ ಒದ್ದ್ಯಾಡಕ ಹತ್ತೇನಿ ನೀ ಬಂದ್ರ ನಾಕು ದಿನ ಬದುಕತೇನಿ ಇಲ್ಲಂದ್ರ ಸಾವಿನ ಕೂಡ ಮಲಗತೇನಿ. (೩) ಪ್ರೀತಿ ಮಾಡವರ ಮೂಗಿನ ತುದಿ ಮ್ಯಾಲ ಸಿಟ್ಟಿರತೈತಿ ಅವರಿಗೆ ಅದೇ ತಾನೇ ಪ್ರೀತಿ ಹುಟ್ಟಿಗೊಂಡಿರತೈತಿ ಮಾತಾಡವ್ರನ್ನ ಕಂಡ್ರ ಸಿಟ್ಟುಬರತೈತಿ. (೪) ಪ್ರೀತಿ ಸಮುದ್ರ ಒಡಿತೇಂದ್ರ ಅದು ತಡಿಯಾಂಗಿಲ್ಲ ಅದರ ತೆರಿ ಒತ್ತಿ ಬಂದ್ರ ಕಾಡವರು ಉಳಿಯಾಂಗಿಲ್ಲ. (೫) ಸಾವು ದಿವಸ ಮುಗಿಯದ ಬರಂಗಿಲ್ಲ ಪ್ರೀತಿ ಮಾಡಿದ ಹುಡುಗಿ ಕೈ ಕೊಟ್ಟರ ಪ್ರೀತಿಸಿದವ್ರು ಸಾವಿನ ಮನಿ ಮುಂದ ನಿಂದ್ರುದು ಬಿಡಲ್ಲ. *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನನ್ನ ಸಖ ಮಧು ವಸ್ತ್ರದ್ ನೀಲಾಗಸದಿ ಹೊಳೆವ ತಾರೆಯ ಕಂಡನು ಸಖ.. ಸಖನ ಮತ್ತೇರಿಸುವ ಕಂಗಳಲಿ ನನದೇ ನಗು ಮುಖ.. ನಗುಮುಖದ‌ ಪ್ರೀತಿಯರಿತು ಕೈ ಹಿಡಿದು ನೀಡಿದ ಸ್ನೇಹಸುಖ.. ಸ್ನೇಹಸುಖದ ಎರಕ ಜೀವನದಲಿ ದೂರಾಗಿಸಿದೆ ದುಃಖ.. ದುಃಖ ದುಗುಡವ ಬೇರು ಸಹಿತ ಕಿತ್ತೆಸೆದಿದೆ ನಿನ್ನೊಲವು.. ನಿನ್ನೊಲವ ಮಹಲಿನೊಳಕರೆದು ಬರಸೆಳೆದು ನೀಡಿದೆ ನೀ ನಲಿವು.. ನಲಿವುನೋವಿನಬಾಳಪಯಣದಿ ನಮ್ಮದಾಯ್ತು ಗೆಲುವು.. ಗೆಲುವ ಮಾಲೆಯ‌ಪ್ರೇಮಪುಷ್ಪ ಗಳಿಗೆ ಅದೆಂಥಾ ಚೆಲುವು.. ಚೆಲುವಾದ ಕಂಗಳಲಿ ಅರಸುತ ನಿನ್ನರಸಿಯ.. ನಿನ್ನರಸಿಯ ಮನದ ಹಿರಿಯ ಧ್ಯೇಯವ ಹರಸುವೆಯ.. ಹರಸುತವಳ ಕಾರ್ಯದಕ್ಷತೆಯ ಎಲ್ಲಡೆ ಮೆರೆಸುವೆಯ.. ಮೆರೆಯುತಿರಲಿ ನಮ್ಮ ಉನ್ನತ ಧ್ಯೇಯವೆಂದೂ ನೀಲಾಗಸದಲಿ ***********

ಕಾವ್ಯಯಾನ Read Post »

ಇತರೆ

ಪ್ರಸ್ತುತ

ಬಸವಣ್ಣನವರು ಉಮೇಶ ಮುನವಳ್ಳಿ ಶಿಕ್ಷಿತರಲ್ಲಿ ಅನೇಕರು ನಾವು ಬಸವಣ್ಣನವರನ್ನು ಕೇವಲ ಸಮಾಜ ಸುಧಾರಕ, ಕ್ರಾಂತಿಕಾರಿ, ದಾರ್ಶನಿಕ ಇದೇ ಪರಿಧಿಗೆ ಸೀಮಿತಗೊಳಿಸಿದ್ದೇವೆ. ಇದರಾಚೆ ಅವನನ್ನು ಕಂಡುಕೊಳ್ಳುವ ಒಳಗಣ್ಣಿನ ಕೊರತೆ ನಮ್ಮಲ್ಲಿ ಎದ್ದುಕಾಣುತ್ತದೆ. ಅದೇ ನಮ್ಮ ಗ್ರಾಮೀಣ ಜನಕ್ಕೆ ಬಸವಣ್ಣ ಒಬ್ಬ ದೇವ, ದೈವ, ಕೇಳಿದ್ದನ್ನು ಕೊಡುವ ಕಲ್ಪವೃಕ್ಷ! ಕೇವಲ ಶಬ್ದಗಳಲ್ಲಿ ಹಿಡಿದಿಡಲಾಗದ ‘ಅಗಮ್ಯ, ಅಗೋಚರ, ಅಪ್ರತಿಮ’ ವ್ಯಕ್ತಿತ್ವ ಅವನದು. ಅವನ ಆ ಘನ ವ್ಯಕ್ತಿತ್ವವನ್ನು ಒಳಗೊಳ್ಳದಷ್ಟು ಚಿಕ್ಕವಾದವೇ ನಮ್ಮ ಮನಸ್ಸಿನ ಪಾತ್ರೆಗಳು? ದೋಷ ನಮ್ಮ ಪಾತ್ರೆಯಲ್ಲಿದೆ. ಮೇಲಾಗಿ ಅವನನ್ನು ವಿಶ್ಲೇಷಿಸಿ ನಾವು ದೊಡ್ಡವರಾಗಹೊರಟಿದ್ದೇವೆ. ಅವನನ್ನು ಬಂಡವಾಳವಾಗಿಸಿಕೊಂಡು ಬದುಕುತ್ತಿದ್ದೇವೆ. ಯಾವಾಗಲೂ ಯಾವ ಮಹಾಪುರುಷನ ಆಶಯವು ಅದಾಗಿರುವುದಿಲ್ಲವೋ ಅದರ ತದ್ವಿರುದ್ಧದ ಕಾರ್ಯ ಅವನ ಅನುಯಾಯಿಗಳಿಂದ ನಡೆಯುತ್ತದೆ. ಬಸವಣ್ಣ, ‘ಲಿಂಗವನ್ನು ಪೂಜಿಸಿ ಲಿಂಗವೇ ಆದ’ ಮಹಾಮಹಿಮ. ಆದರೆ ‘ಎನಗಿಂತ ಕಿರಿಯರಿಲ್ಲ, ಶಿವಭಕ್ತರಿಗಿಂತ ಹಿರಿಯರಿಲ್ಲ’ ಎನ್ನುವ ಕಿಂಕರ ಭಾವ. ದೇಹವೇ ದೇವಾಲವಾದ ಪರಿ: “ಎನ್ನ ಕಾಲೇ ಕಂಬ, ದೇಹವೇ ದೇಗುಲ”. “ಅಂಬುದಿಯೊಳಗೆ ಬಿದ್ದ ಆಲಿಕಲ್ಲಂತೆ” ಜೀವ ಶಿವರಾದ ಪರಿ. “ಭಿನ್ನಭಾವವರಿಯದೇ ‘ಶಿವ ಶಿವಾ’ ಎನುತಿರ್ದೆನಯ್ಯ.” “ಕೂಡಲ ಸಂಗಮದೇವರಲ್ಲಿ ತಾನೇ ಪ್ರಸಾದಿ” “ಬೆಳಗಣೊನಳಗಣ ಬೆಳಗು ಮಹಾಬೆಳಗು” “ಪರಮಾನಂದವನೇನೆಂದುಪಮಿಸುವೆನಯ್ಯ” ಎನ್ನುವ ನುಡಿಯಲ್ಲಿ ಪರಬ್ಬಹ್ಮ ಸ್ಥಿತಿ ತಲುಪಿದ ಭಾಸವಾಗುತ್ತದೆ. ಬಸವಣ್ಣನವರು ವಚನ ಸಾಹಿತ್ಯವನ್ನು ದಾಸೋಹ ಭಾವನೆಯಿಂದ ರಚಿಸಿದ್ದಾರೆ. ಲೋಕೋದ್ಧಾರಕ್ಕೆಂದು ರಚಿಸಿದ್ದಾರೆ ಇಲ್ಲದೇ ಹೋದರೆ ಅವುಗಳನ್ನು ರಚಿಸುವ ಅಗತ್ಯತೆ ಅವರಿಗಿರಲಿಲ್ಲ. ಅವರು ಮೌನಸ್ಥಿತಿಯನ್ನು ಯಾವಾಗಲೋ ಧರಿಸಿದ್ದರು. ಕೃಷ್ಣ ಅರ್ಜುನನಿಗೆ ಭಗವದ್ಗೀತೆ ಬೋಧಿಸುವ ಅನಿವಾರ್ಯತೆ ಬಂದೊದಗಿದಂತೆ ಅವರಿಗೂ ಲೋಕದ ಜನರ ಉದ್ಧಾರ ಪ್ರಮುಖವೆನಿಸಿತು. ಎಲ್ಲ ಮಹಾತ್ಮರ ವಿಷಯದಲ್ಲೂ ಇದು ಸತ್ಯ. ಬುದ್ಧನಿಗೆ ಕಾಡಿನಿಂದ ಮರಳಿ ಬರುವ ಅವಶ್ಯಕತೆ ಇರಲಿಲ್ಲ, ಆದರೆ ಜನರು ದುಃಖದಲ್ಲಿ ತೊಳಲಾಡುವುದನ್ನು ಅವನಿಂದ ನೋಡಲಾಗಿಲ್ಲ. ಆತ್ಮಮೋಕ್ಷಾರ್ತಂ ಜಗತ್ ಹಿತಾಯಚ ಎಂಬ ಮಾತಿದೆ: ಆತ್ಮ ಸಾಕ್ಷಾತ್ಕಾರಗೊಂಡಮೇಲೆ ಜಗತಿನ ಹಿತಚಿಂತನೆ ಮಾಡುವುದು. ‘ಭಾವದಲ್ಲಿ ವೃತಗೆಟ್ಟುದಾಗಿ, ಆ ಭಾವದಲ್ಲಿ ಜೀವಸಂಹಾರಿ ಕೂಡಲ ಸಂಗಮದೇವ ಸರ್ವನಿವಾಸಿಯಾಗಿ”.” ಸ್ವಯಂ ಲಿಂಗದನುಭಾವ ದೊರಕೊಂಡ ಬಳಿಕ” “ಏನೆಂಬೆ, ಏನೆಂಬೆ ಒಂದೆರಡಾದುದ, ಏನೆಂಬೆ ಏನೆಂಬೆ ಎರಡೊಂದಾದುದ” ಜೀವ-ಶಿವ ಒಂದಾದ ಜೀವನ್ಮುಕ್ತ ಸ್ಥಿತಿ. “ಭಾವ ಭಾವಿಸಲು ನಿರ್ಭಾವ” ಸ್ಥಿತಿ. ಘನಗಂಭೀರ ಮಹಾಘನದೊಳಗಿನ ಘನಕ್ಕೆ ಘನವಾಗಿದ್ದೆನಯ್ಯಾ. ಕೂಡಲ ಸಂಗಮದೇವಯ್ಯನೆಂಬ ಮಹಾಬೆಳಗಿನ ಬೆಳಗಿನೊಳಗಿದ್ದೇನೆಂಬ ಶಬ್ದ ಮುಗ್ಧವಾದುದೇನೆಂಬೆನಯ್ಯ. ” ಆರೂಢದ ಕೂಟದ ಸುಖವ ಕೂಡಲ ಸಂಗಯ್ಯ ತಾನೇ ಬಲ್ಲ ” ಲಿಂಗಾಂಗ ಸಾಮರಸ್ಯವನ್ನು ಸಾಧಿಸಿ, ಜೀವ-ಶಿವನಾದ ಶಿವೈಕ್ಯ ಸ್ಥಿತಿ. ಬಸವಣ್ಣನು ನಮಗೆ ಮುಕ್ತಿದಾತ, ಶಕ್ತಿದಾತ, ಅವನು ನೆಲೆಸಿದ ಕ್ಷೇತ್ರ, ಅವಿಮುಕ್ತ ಕ್ಷೇತ್ರ. ಕಲ್ಯಾಣ ಕ್ಷೇತ್ರ.” ಬಸವನ ಆರಾಧಕರೆಷ್ಟೋ ಜನ ದೈವೀ ಪುರುಷರಾದದ್ದನ್ನು ನಾವು ಕಣ್ಣಾರೆ ನೋಡಿದ್ದೇವೆ. ಆದರೆ ಬಸವಣ್ಣನವರ ವಿಶ್ಲೇಷಣೆಯಲ್ಲಿ ನಮಗೆ ಮಿತಿ ಮೀರಲಾಗಲಿಲ್ಲ. ಇದು, ನಮ್ಮ ಇತಿಮಿತಿ. ಹನ್ನೊಂದು ಜನ ಅಂಧರು ಆನೆಯನ್ನು ವಿಶ್ಲೇಷಿಸಿದಂತೆ. *********

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ನಿಶ್ಯಬ್ದ ವೀಣಾ ರಮೇಶ್ ಕತ್ತಲೆಯ ಬಿಳಿ ಮಂಚದಲಿ ಮಲಗಿರುವೆ ಕನಸುಗಳು ಬೀಳುತ್ತಿವೆ ಎಬ್ಬಿಸಬೇಡಿ ನೆನಪುಗಳೆ, ಸದ್ದು ಮಾಡದಿರಿ ಎದೆಯ ಬಡಿತದ ಸದ್ದು ಇಲ್ಲಿಗೂ ಕೇಳಿಸುತ್ತಿದೆ ಮತ್ತೆ ಬೆಳಕಾದರೆ ನನಗಿಲ್ಲ ಬಿಡುವು ಮತ್ತೆ ನೀ ನಸು ನಾಚಿ ಬಂದರೆ ಬಾವನೆಗಳ ಹರಿವು, ನನ್ನೊಳಗೂ ನೀನು ಹೊರಗೂ ನೀನು ನಿನ್ನ ಕನಸುಗಳ ಹೊದಿಕೆ ಬೇಕಾಗಿತ್ತು,ಮತ್ತೆ ನೆನಪುಗಳು ದಾಳಿ ಮಾಡದಿರಲಿ ಸೂರ್ಯೋದಯದ ಮೊದಲು ನಿನ್ನ ನಗುವಿನ ನಂದಾದೀಪ ನೋಡಬೇಕು ನಾನು ಬಂದು ಬಿಡು ಕಾರಣವಿಲ್ಲದೆ ಮತ್ತೆ ತೆರಳಬೇಡ ಸದ್ದಿಲ್ಲದೆ. ***********

ಕಾವ್ಯಯಾನ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ಶಾಂತಾದೇವಿ ಕಣವಿ ಚೆನ್ನವೀರ ಕಣವಿಯವರ ಪತ್ನಿ ಶಾಂತಾದೇವಿ ಕಣವಿಯವರ ಸಾಹಿತ್ಯಕ ಕೊಡುಗೆಯೂ..! ಅಲ್ಲದೇ ಇವರಂತೆ ಸಾಹಿತ್ಯಕ್ಕೆ ಕೊಡುಗೆ ನೀಡಿದ ಸಾಹಿತ್ಯಕ ದಂಪತಿಗಳೂ..!! ಶಾಂತಾದೇವಿ ಕಣವಿ ಅವರು ಈಗ ತೀರಿದ್ದಾರೆ. ಅವರಿಗೆ ಗೌರವ ನಮನ ಸಲ್ಲಿಸುತ್ತಾ ಅವರಂತೆಯೇ ಇತರ ಸಾಹಿತ್ಯಕ ದಂಪತಿಗಳ ಬಗೆಗೂ ನೋಡೋಣ. ಅವರು ಹೀಗಿದ್ದಾರೆ ನೋಡಿ. ಶಾಂತಾದೇವಿ ಕಣವಿ, ಅವರು ಜನಿಸಿದ್ದು1933ರ ಜನೆವರಿ 17 ರಂದು ವಿಜಾಪುರದಲ್ಲಿ. ತಂದೆಯವರು ಸಿದ್ದಬಸಪ್ಪ ಗಿಡ್ನವರ, ತಾಯಿಯವರು ಭಾಗೀರಥಿ ದೇವಿ. ಇಂತಹ ಶಾಂತಾದೇವಿ ಕಣವಿಯವರ ಪ್ರಕಟಿತ ಕೃತಿಗಳು– ಸಂಜೆ ಮಲ್ಲಿಗೆ (ಕವನ ಸಂಕಲನ), ಬಯಲು ಆಲಯ, ನಿಜಗುಣ ಶಿವಯೋಗಿ (ಜೀವನ ಚರಿತ್ರೆ), ಮರು ವಿಚಾರ (ಹರಟೆ), ಜಾತ್ರೆ ಮುಗಿದಿತ್ತು (ಸಣ್ಣಕತೆ), ಅಜಗಜಾಂತರ (ಲಲಿತ ಪ್ರಬಂಧ), ಕಳಚಿ ಬಿದ್ದ ಪಂಜರ, ಪ್ರಶಾಂತ (ಸಂಪಾದನೆ) ನೀಲಿಮಾ ತೀರ (ಸಣ್ಣಕತೆ) ಗಾಂಧಿ ಮಗಳು, ಇನ್ನೊಂದು ಸಂಪುಟ. ಹೀಗೆಯೇ ಶಾಂತಾದೇವಿ ಕಣವಿ ಅವರ ಸಾಹಿತ್ಯ ಸಾರವಾಗಿದೆ. ಶಾಂತಾದೇವಿ ಕಣವಿ ಅವರಿಗೆ ಬಯಲು ಆಲಯ ಕೃತಿಗೆ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (1987) ಹಾಗೂ 2009ರ ರಾಜ್ಯ ಸರ್ಕಾರದ ದಾನ ಚಿಂತಾಮಣಿ ಪ್ರಶಸ್ತಿಗಳೂ ಸಂದಿದೆ. ಇದು ಶಾಂತಾದೇವಿ ಕಣವಿಯವರು ತಮ್ಮ ಪತಿಯ ಜೊತೆ ಜೋತೆಗೆ ಸಾಹಿತ್ಯವನ್ನು ಸೃಷ್ಟಿಸಿದ್ದಾರೆ. ಹೀಗೆಯೇ ಶಾಂತಾದೇವಿ ಕಣವಿಯವರಂತೆ ಸಾಹಿತ್ಯಕ ಬರಹಗಾರಿಕೆಯಲ್ಲಿ ತೊಡಗಿಕೊಂಡವರು ಸಾಕಷ್ಟು ಜನ ಸಾಹಿತ್ಯಕ ದಂಪತಿಗಳು ಇದ್ದಾರೆ. ಅವರ ಬಗೆಗೂ ತುಸು ಗಮನ ಹರಿಸೋಣ. ಇಂದಿನ ಸಾಹಿತ್ಯ ಕ್ಷೇತ್ರದಲ್ಲಿ ಕಮಲಾ ಹಂಪನಾ, ಮಾಲತಿ ನಾಡಿಗ್‌, ಗಾಯತ್ರಿ ನಾವಡ,‌ ಉಷಾ ನವರತ್ನಾರಾಂ ಮುಂತಾದ ಹಲವಾರು ದಂಪತಿಗಳು ಸಾಹಿತ್ಯಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ. ಈ ಮಹಿಳೆಯರಿಗೆ ಶೈಕ್ಷಣಿಕ ಶಿಸ್ತಿನ ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆಯುವ ಅವಕಾಶಗಳು ಸುಲಭವಾಗಿ ದೊರೆತಿದ್ದು ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಹಿಂದಿನ ತಲೆಮಾರಿನ ದಂಪತಿ ಲೇಖಕರುಗಳಾದ ಶಾರದಾ ಗೋಕಾಕ್‌, ಶಾಂತಾದೇವಿ ಮಾಳವಾಡ, ಶಾಂತಾದೇವಿ ಕಣವಿ ಇವರುಗಳಿಗೆ ಅಂದಿನ ಪರಿಸ್ಥಿತಿಯಿಂದ ವಿದ್ಯಾಭ್ಯಾಸದಿಂದ ವಂಚಿತರಾದುದಷ್ಟೇ ಅಲ್ಲದೆ ಪ್ರೌಢಾವಸ್ಥೆ. ತಲುಪುವ ಮೊದಲೇ ವಿವಾಹ ಬಂಧನಕ್ಕೊಳಗಾಗಿ ವಿದ್ಯೆ ಕಲಿಯುವ ಅವಕಾಶಗಳು ಕಮರಿ ಹೋಗಿದ್ದರೂ, ಪತಿಗೃಹ ಸೇರಿದ ನಂತರ ಪತಿಯಿಂದ ಅಥವಾ ಮನೆಯವರಿಂದ ದೊರೆತ ಸಹಕಾರ, ಸಹಾನುಭೂತಿಯಿಂದ ವಿದ್ಯೆ ಕಲಿತು ಸಾಹಿತ್ಯ ಕೃಷಿ ರಚಿಸಿದ್ದಷ್ಟೇ ಅಲ್ಲದೇ ಪತಿಯ ಯಶಸ್ಸಿನ ರೂವಾರಿಯಾಗಿಯೂ ದುಡಿದಿದ್ದಾರೆ. ಶಾರದಾ ಗೋಕಾಕರು ಓದಿದ್ದು ಆರನೆಯ ತರಗತಿಯವರೆಗಾದರೆ ಶಾಂತಾದೇವಿ ಮಾಳವಾಡರು ಪತಿಗೃಹ ಸೇರಿದ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಕವಿ, ಕಾವಾ, ಜಾಣ ಮುಂತಾದ ಪರೀಕ್ಷೆಗಳನ್ನೂ ಪಾಸು ಮಾಡಿದ್ದಲ್ಲದೇ ಉಪಾಧ್ಯಾಯರ ಸಹಾಯದಿಂದ ಹಿಂದಿ, ಇಂಗ್ಲಿಷ್‌ ಭಾಷೆಯನ್ನು ಮನೆಯಲ್ಲಿಯೇ ಪಾಠ ಹೇಳಿಸಿಕೊಂಡು ಕಲಿತವರು. ಇವರಿಬ್ಬರಿಗಿಂತ ಸ್ವಲ್ಪ ಸುಧಾರಿಸಿದವರೆಂದರೆ ಶಾಂತಾದೇವಿ ಕಣವಿಯವರು. ಮೆಟ್ರಿಕ್ಯುಲೇಷನ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಪತಿ ಗೃಹ ಸೇರಿದ್ದರಿಂದ ಓದು ಮುಂದುವರೆಸಲಾಗಲಿಲ್ಲ. ಕಣವಿಯವರು ಕವಿಯಾಗಿ ಪ್ರಸಿದ್ಧರಾಗಿದ್ದರೆ ಶಾಂತಾದೇವಿ ಕಣವಿಯವರು ಪತಿಯ ಪ್ರೋತ್ಸಾಹದಿಂದ ಸಾಹಿತ್ಯವನ್ನೂ ಅಭ್ಯಸಿಸಿ ಕತೆಗಾರ್ತಿಯಾಗಿ ರೂಪಗೊಂಡು ಎಂಟು ಕಥಾಸಂಕಲನಗಳಲ್ಲದೆ ಪ್ರಬಂಧ, ಮಕ್ಕಳ ಪುಸ್ತಕಗಳನ್ನೂ ರಚಿಸಿದ್ದಾರೆ. ಶಾಂತಾದೇವಿ ಮಾಳವಾಡರು ರಚಿಸಿದ ಕೃತಿಗಳು ವೈವಿಧ್ಯತೆಯಿಂದ ಕೂಡಿದೆ. ಕಾದಂಬರಿ, ಜೀವನ ಚರಿತ್ರೆಗಳು, ವಚನ ಸಾಹಿತ್ಯ ಕೃತಿಗಳಲ್ಲದೆ ಹಲವಾರು ಸೃಜನ ಶೀಲ ಕೃತಿಗಳನ್ನು ರಚಿಸಿದ್ದು ಒಟ್ಟು ೪೦ ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಸ.ಸ. ಮಾಳವಾಡರ ಆಕಸ್ಮಿಕ ನಿಧನದಿಂದ ಧೃತಿಗೆಟ್ಟರೂ, ಮನಸ್ಸನ್ನೂ ಸ್ಥಿಮಿತಕ್ಕೆ ತಂದುಕೊಂಡು ಮಾಳವಾಡರು ಪ್ರಾರಂಭಿಸಿದ್ದ ಆತ್ಮ ಚರಿತ್ರೆ ‘ದಾರಿ ಸಾಗಿದೆ’ ಕೃತಿಯನ್ನೂ’ ಶಾಂತಾದೇವಿ ಮಾಳವಾಡರೇ ಬರೆದು ಪೂರ್ಣಗೊಳಿಸಿದರು. ಅನುರೂಪ ದಾಂಪತ್ಯದ ಶಾರದಾ ಗೋಕಾಕರು ಹುಟ್ಟಿದ್ದು ಧಾರವಾಡದಲ್ಲಿ. ೧೯೧೬ ರ ಜುಲೈ ೩೧ ರಂದು. ತಂದೆ ಬಳವಂತರಾವ್‌ ಬೆಟ್ಟದೂರು, ತಾಯಿ ಕಮಲಾಬಾಯಿ. ಓದಿದ್ದು ಮಾಧ್ಯಮಿಕ ಶಾಲೆಯವರೆಗಾದರೂ ಸಾಹಿತ್ಯಾಸಕ್ತಿಯನ್ನೂ ಬೆಳೆಸಿಕೊಂಡವರು. ಗೋಕಾಕರ ಯಶಸ್ಸಿಗೆ ಶಾರದಾ ಗೋಕಾಕರ ಪಾತ್ರವೂ ಬಹುದೊಡ್ಡದೆ. ಗೋಕಾಕರ ಷಷ್ಟ್ಯಬ್ದಿ ಸಂದರ್ಭದಲ್ಲಿ ಶಾರದಾ ಗೋಕಾಕರು ಬರೆದ ಕವನ ಸಂಕಲನ ‘ಸುಮಂಗಲಾಕ್ಷತೆ’ಯು ಪ್ರಕಟಗೊಂಡಿದ್ದು (೧೯೬೯) ಅದರಲ್ಲಿ ೩೭ ಕವನಗಳಿವೆ. “ಶ್ರೀ ವಿನಾಯಕರ ಷಷ್ಟ್ಯಬ್ದಿಪೂರ್ತಿಯ ಸುಮಂಗಲ ಸಮಾರಂಭದಲ್ಲಿ ನನ್ನ ಕೆಲವು ಸುಮಂಗಲಾಕ್ಷತೆಯನ್ನು ಅರ್ಪಿಸಲು ಸಾಧ್ಯವಾದುದಕ್ಕೆ ಭಗವಂತನಿಗೆ ಕೃತಜ್ಞತೆಯ ಪ್ರಣಾಮಗಳನರ್ಪಿಸುತ್ತಿದ್ದೇನೆ. ನನ್ನ ಒಳ ಜೀವನದಲ್ಲಿ ಹೊಳೆದ ಚಿತ್ರಗಳ ಶಬ್ದ ರೂಪಗಳನ್ನೂ ಕವನಗಳನ್ನಾಗಿಸಿ ಜನತೆಯ ಮುಂದಿಟ್ಟಿದ್ದೇನೆ” ಎಂದು ವಿನಮ್ರರಾಗಿ ನುಡಿದಿದ್ದರು. ಗೋಕಾಕರು ತಮ್ಮ ಕವನ ಸಂಗ್ರಹ ಸಿಮ್ಲಾ ಸಿಂಫನಿಗೆ (೧೯೭೩) ತಮ್ಮ ಮಡದಿ ಶಾರದಾರವರನ್ನೂ ಸಹಲೇಖಕಿಯಾಗಿಸಿಕೊಂಡಿದ್ದರು. ಆ ಸಂಗ್ರಹದ ಒಂದು ಭಾಗದಲ್ಲಿ ಶಾರದಾ ಗೋಕಾಕರ ರಚನೆಗಳಿವೆ. ಬಾ ಎಂದು ಕರೆದಾವ ಸೋಬಾನ ಹಾಡ್ಯಾವ ಸಿಮ್ಲಾದ ಹಕ್ಕಿ…ಎಂದು ಸಿಮ್ಲಾ ನಿಸರ್ಗದ ಸೊಬಗಿಗೆ ಮಾರು ಹೋಗಿ ರಚಿಸಿದ ಕವನ ಇದಾಗಿದೆ. ಶಾರದಾ ಗೋಕಾಕರ ಮತ್ತೊಂದು ಬಹು ಮುಖ್ಯ ಕೃತಿ ಎಂದರೆ ‘ಒಲವೇ ನಮ್ಮ ಬದುಕು’ (೧೯೭೭). ಮರಾಠಿಯಲ್ಲಿ ಪ್ರಕಟವಾಗಿದ್ದ ಮರಾಠಿ ಸಾಹಿತಿ ವಾಮನ ತಿಲಕರ ಪತ್ನಿ ಲಕ್ಷ್ಮೀಬಾಯಿ ತಿಲಕರು ಬರೆದ ‘ಸ್ಮೃತಿ ಚಿತ್ರಗಳ’ ಕೃತಿಯಲ್ಲಿ ವಾಮನ ತಿಲಕರ ವ್ಯಕ್ತಿತ್ವದ ಚಿತ್ರಣವಿರುವುದನ್ನೂ ಓದಿದ ಶಾರದಾ ಗೋಕಾಕರು ಇದರಿಂದ ಪ್ರೇರಿತರಾಗಿ ಬರೆದ ಆತ್ಮಕಥೆ ‘ಒಲವೇ ನಮ್ಮ ಬದುಕು’. ಮದುವೆಯಾದಂದಿನಿಂದ ಬೆಂಗಳೂರಿಗೆ ಬಂದು ನೆಲೆಸುವಾಗಿನ ದಾಂಪತ್ಯ ಕತೆಯ ನಿರೂಪಣೆಯದಾಗಿದೆ. ಮೂರು ಕೃತಿಗಳಲ್ಲೂ ಶಾರದಾ ಗೋಕಾಕರು ಗೋಕಾಕರ ವ್ಯಕ್ತಿತ್ವವನ್ನು ಹಿಡಿದಿಟ್ಟು, ಗೋಕಾಕರ ಬದುಕನ್ನೂ ಅರ್ಥಮಾಡಿಕೊಳ್ಳಲು ಸಹಾಯಕವಾಗುವಂತಹ ಕೃತಿ ರಚಿಸಿದ್ದರು. ಗೋಕಾಕರು ಶಾರದಾರವರಿಗೆ ಬರೆದ ಪತ್ರಗಳನ್ನೂ ‘ಜೀವನ’ ಪತ್ರಿಕೆಯಲ್ಲಿ ‘ವನಮಾಲಿಯ ಒಲವಿನೋಲೆಗಳು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ್ದು ನಂತರ ‘ಜೀವನ ಪಾಠಗಳು’ ಎಂಬ ಪುಸ್ತಕ ರೂಪದಲ್ಲಿ ಪ್ರಕಟಗೊಂಡಿದ್ದು ಶಾರದಾರವರ ವ್ಯಕ್ತಿತ್ವವನ್ನು ಪರಿಚಯಿಸಿದ್ದರು. ಹೀಗೆ ಗೋಕಾಕರು ಮತ್ತು ಶಾರದಾ ಗೋಕಾಕರ ಬದುಕನ್ನರಿಯಲು ಈ ಗ್ರಂಥಗಳು ಸಹಾಯಕವಾಗಿವೆ. ಹೀಗೆ ಸಾಹಿತ್ಯಕ ದಂಪತಿಗಳ ಸಾಹಿತ್ಯ ಕೊಡುಗೆ‌ ಅಪಾರ. ******* ಕೆ.ಶಿವು. ಲಕ್ಕಣ್ಣವರ

ಸ್ವಾತ್ಮಗತ Read Post »

ಕಾವ್ಯಯಾನ

ಕಾವ್ಯಯಾನ

ಸಾಕ್ಷಿ ವೀಣಾ ನಿರಂಜನ್ ರೆಕ್ಕೆಯಿಲ್ಲದ ಹಕ್ಕಿಯೊಂದು ಹಾರುವುದ ಕಂಡಿರಾ ಹಾಯಿಯಿಲ್ಲದ ದೋಣಿಯೊಂದು ಚಲಿಸುವುದ ಕಂಡಿರಾ ನೆರಳಿಲ್ಲದ ಜೀವವೊಂದು ನಡೆಯುವುದ ಕಂಡಿರಾ ಬಿಸಿಲು, ಗಂಧ, ಗಾಳಿ ಸೋಂಕದ ನೆಲೆಯೊಂದ ಕಂಡು ನಿಟ್ಟುಸಿರು ಬಿಟ್ಟಿತು ಕವಿತೆ ಚಿತ್ರ ಕಟ್ಟಿ ಕೊಟ್ಟ ಶಬ್ದಗಳೆಲ್ಲ ಒಣಗಿ ಬಿಟ್ಟವು ಎಲ್ಲಿತ್ತೊ? ಹೇಗಿತ್ತೊ? ಮಾಯದ ಚಿಟ್ಟೆಯೊಂದು ಹಾರಿ ಬಂದು ಅವಳ ನೆತ್ತಿ ಮೂಸಿ ಮುತ್ತನಿಟ್ಟಿತು ಕನಸುಗಳು ಅರಳಿದವು ನೆನಪುಗಳು ಮರುಕಳಿಸಿದವು ನೆಲ ನಗ ತೊಡಗಿತ್ತು! ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಸ್ತಿತ್ವ ಮೇಗರವಳ್ಳಿ ರಮೇಶ್ ನಾನೊಬ್ಬ ಸಾಧಾರಣ ಮನುಷ್ಯ!ಬರೀ ಮನುಷ್ಯನಲ್ಲತನ್ನನ್ನು ಜನ ಗುರುತಿಸ ಬೇಕೆಂಬ ಹಂಬಲದಒಬ್ಬ ಕವಿಯೂ ಇದ್ದಾನೆ ನನ್ನೊಳಗೆ! ಹಾಗೆ ನೋಡಿದರೆ ನಾನೂ ಬರೆದಿದ್ದೇನೆಹಲವಾರು ವರ್ಷಗಳಿಂದ ನೂರಾರು ಕವಿತೆಗಳನ್ನ.ಪತ್ರಿಕೆಗಳಲ್ಲೂ ಬೆಳಕು ಕಂಡಿವೆ ಹಲವಾರು ಕವಿತೆಗಳು.ನನ್ನದೊಂದು ಕವಿತಾ ಸಂಕಲನವೂ ಹೊರಬಂದಿದೆ!ಆದರೂ ನಾನು ಗುರುತಿಸಲ್ಪಡುವುದಿಲ್ಲ!ಎದುರು ಬಂದವರು ಸುಮ್ಮನೇ ನಕ್ಕು ಮುಂದೆ ಸಾಗಿ ಬಿಡುತ್ತಾರೆನಾನು ಏನೂ ಅಲ್ಲವೆಂಬಂತೆ!ಸಾಹಿತ್ಯ ದಿಗ್ಗಜರ ಕಣ್ಣಲ್ಲಂತೂನಾನೊಬ್ಬ ನಗಣ್ಯ ಕವಿ! ಮೊನ್ನೆ ಮೇಗರವಳ್ಳಿಗೆ ಹೋದವನುಬೆಳಗಿನ ವಾಕಿಂಗ್ ಮಾಡುತ್ತಾ ಸಾಗಿದ್ದೆನಿಃಶಬ್ದ, ಪ್ರಶಾಂತ ಪರಿಸರದ ನಡುವೆ ಸಾಗುವ ಹಾದಿ ಗುಂಟ!ಥಟ್ಟನೇ ಕಾಣಿಸಿತಾಗ ರಸ್ತೆಯ ಮಧ್ಯ ಬಿದ್ದಿದ್ದಒಂದು ನವಿಲು ಗರಿ. ಮೇಲೆತ್ತಿಕೊಂಡೆ.ಚಿತ್ತಾರದ ನುಣುಪು ರೇಶ್ಮೆ ಯಂಥ ಅದನ್ನು ಕೆನ್ನೆಗೆ ಸವರಿಕೊಂಡೆ.ಆ ಗರಿಯ ಯಜಮಾನ ನವಿಲು ಇಲ್ಲೇ ಎಲ್ಲೋ ಇರಬೇಕೆಂದೆನಿಸಿಗರಿ ಬಿಚ್ಚಿ ಕುಣಿವ ಅದರ ವೈಭವವನ್ನು ಕಣ್ತುಂಬಿ ಕೊಳ್ಳುವ ಹಂಬಲದಲ್ಲಿಸುತ್ತಲೂ ಕಣ್ಣು ಹಾಯಿಸಿದೆ.ಅದೋ, ತುಸು ದೂರದಲ್ಲಿ ಕೇಕೆ ಹಾಕುತ್ತಾಗರಿ ಬಿಚ್ಚಿ ನರ್ತಿಸುತ್ತಿತ್ತು ನವಿಲು ತಾನೇ ತಾನಾಗಿ!ನೋಡುತ್ತಾ ಮೈಮರೆತೆ. ರಸ್ತೆಯ ನಡುವೆ ಬಿದ್ದಿದ್ದ ಆ ಒಂದು ನವಿಲು ಗರಿಅದರ ಅಸ್ತಿತ್ವವನ್ನು ಸಾರಿಅದನ್ನು ಕಾಣಬೇಕೆಂಬ ಹಂಬಲವನ್ನು ನನ್ನೊಳಗೆ ಮೂಡಿಸಿತಲ್ಲ,ಎಂಥ ಅಚ್ಚರಿ! ಇನ್ನು ಮೇಲೆ ಬರೆದರೆಆ ನವಿಲು ಗರಿಯಂಥ ಕವಿತೆಗಳನ್ನೇಬರೆಯ ಬೇಕು ಅಂದು ಕೊಂಡೆ! ********

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಚಿರಂಜೀವಿ ಮೂಲ ಮಲಯಾಳಂ:ರಾಧಾಕೃಷ್ಣ ಪೆರುಂಬಳ ಕನ್ನಡಕ್ಕೆ:ಚೇತನಾ ಕುಂಬ್ಳೆ ಮರಣ ಇತರರಿಗಿರುವುದು ರೋಗಗಳೂ ದುರಂತಗಳೂ ಅವರಿಗಾಗಿಯೇ ನನಗಲ್ಲ ಮರಣ ಪಕ್ಕದಮನೆಯಲ್ಲೇ ಇದೆ ಅನ್ಯ ಜಾತಿ ಮತದವರಿಗೆ ಬೇರೆ ಪಕ್ಷದಲ್ಲಿರುವವರಿಗೆ ನನ್ನ ಯಾರಾದರೂ ಬಂಧುಗಳೋ, ಗೆಳೆಯರೋ ಅಥವಾ ಯಾರಾದರೂ ನಾಯಕರು ಅದೇ ರೀತಿ ನೆರೆಕರೆಯವರು ನಿಧನರಾದಾಗಲೋ, ರೋಗಬಾಧಿತರಾದಾಗಲೋ ಅಪಘಾತಕ್ಕೊಳಗಾದಾಗಲೋ ಅಂಥ ದುಃಖದಲ್ಲಿ ನನಗೂ ಪಾಲ್ಗೊಳ್ಳುವ ಅವಕಾಶವಿದೆ ಆಗ ನಾನೂ ದುಃಖಪಡುತ್ತೇನೆ ಅಲ್ಲಿಗೆ ಭೇಟಿ ನೀಡುತ್ತೇನೆ ಅವರ ನೋವಿನಲ್ಲಿ ಭಾಗಿಯಾಗುತ್ತೇನೆ ಸಾಂತ್ವನ ಪಡಿಸುತ್ತೇನೆ, ಸಹಾಯ ಮಾಡುತ್ತೇನೆ ಹೂ ಇಡುತ್ತೇನೆ, ಭಾಷಣ ಮಾಡುತ್ತೇನೆ ಇವುಗಳಿಗೆ ಬೇಕಾಗಿಯಲ್ಲವೇ ನಾನಿಲ್ಲಿರುವುದು…ಹೀಗೆ…. ಚಿರಕಾಲ… ******** ചിരഞ്ജീവി മരണം മറ്റുള്ളവർക്കാണ് രോഗദുരിതങ്ങളും അപകടങ്ങളും അവർക്കുതന്നെയാണ് എനിക്കല്ല മരണം അയൽപക്കത്താണ് അന്യ-ജാതി- മതസ്ഥർക്കാണ് മറ്റേ പാർട്ടിയിലുള്ളവർക്കാണ് എൻ്റെ ഏതെങ്കിലും ബന്ധു ഏതെങ്കിലും സുഹൃത്ത് ഏതെങ്കിലും നേതാവ് അത്പോലെ അയൽവാസി മരിക്കുകയോ രോഗപ്പെടുകയോ അപകടത്തിലാവുകയോ ചെയ്തേക്കാം അത്തരം ദുഖങ്ങൾക്കും എനിക്കും അവകാശമുണ്ട് ഞാനതിൽ ദുഖിക്കുന്നു അവിടെ സന്തർശിക്കുന്നു വേതനയിൽ പങ്കുചേരുന്നു ആശ്വസിപ്പിക്കുന്നു സഹായിക്കുന്നു രീത്തുവെക്കുന്നു പ്രസംഗിക്കുന്നു അതിനൊക്കെയായിട്ടല്ലേ ഞാനിങ്ങനെയിവിടെ ചിരകാലം രാധാകൃഷ്ണൻ പെരുംബള ********

ಅನುವಾದ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಬಾಳಲ್ಲಿ ಎಡರು ತೊಡರುಗಳು ಬಂದಾಗ ನಿನ್ನ ಸಹಾಯ ಬೇಕು ಸಾಮಾಜಿಕ ವ್ಯವಸ್ಥೆಯು ಎದುರಾದಾಗ ನಿನ್ನ ಸಹಾಯ ಬೇಕು ಈ ಜೀವನದಲ್ಲಿ ನಿನ್ನನ್ನು ಹೊರತುಪಡಿಸಿ ಬೇರೆ ಯಾರೂ ಇಲ್ಲ ಅನುದಿನವು ನಾನು ಹೊಸ್ತಿಲು ದಾಟುವಾಗ ನಿನ್ನ ಸಹಾಯ ಬೇಕು ರಜನಿಗೆ ರಜನೀಚರ ಬೆಂಗಾವಲಾಗಿರುವನು ರವಿ ಮೂಡೊವರೆಗೆ ಕರಾಳ ಅಂಧಕಾರವು ನನಗೆ ಅಪ್ಪಿದಾಗ ನಿನ್ನ ಸಹಾಯ ಬೇಕು ಅನುರಾಗದ ನಿಷ್ಠೆಯಿಂದ ನಾನು ನಿನ್ನನ್ನು ಹಿಂಬಾಲಿಸುತಿದ್ದೇನೆ ಜೀವನದಲ್ಲಿ ಉಸಿರಿನೊಂದಿಗೆ ಆಡುವಾಗ ನಿನ್ನ ಸಹಾಯ ಬೇಕು ನಾವು ಮೊದಲೇ ಭೇಟಿಯಾಗಿದ್ದೆವೆಂದು ಹೃದಯಕ್ಕೆ ತಿಳಿದಿದೆ ‘ಮಲ್ಲಿ’ಯ ಜಿಂದಗಿಯಲ್ಲಿ ತಪ್ಪಾದಾಗ ನಿನ್ನ ಸಹಾಯ ಬೇಕು ******

ಕಾವ್ಯಯಾನ Read Post »

You cannot copy content of this page

Scroll to Top