ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕವಿತೆ ಕಾರ್ನರ್

ನನ್ನಾತ್ಮದ ಕನ್ನಡಿಯಲ್ಲಿ

ಇರಬೇಕಿತ್ತು ನೀನುನನ್ನಾತ್ಮದ ಕನ್ನಡಿಯಲಿ ದೂಳು ಕೂರದಂತೆನನ್ನ ಪ್ರಜ್ಞೆಯಾಳದೊಳಗೆ ಅಹಮ್ಮಿನ ಮುಳ್ಳು ಬೆಳೆಯದಂತೆನನ್ನ ಹೃದಯದಾಳದಲಿ ಪಾಪಿಷ್ಠ ಲಹರಿಗಳುಗುನುಗದಂತೆ ನೋಡಿಕೊಳ್ಳಲು. ಜನರಹಿತ ರಾತ್ರಿಯ ಬೆತ್ತಲು ರಸ್ತೆಗಳಲ್ಲಿಸಂಜೆ ಉರಿಸಿದ ಚಿತೆಯ ಬೆಂಕಿ ಆರದ ಮಸಣಗಳಲಿಗತದ ನೆನಪುಗಳೆಲ್ಲ ಹಾವುಗಳಂತೆ ಹರಿದಾಡುವಅಸಹನೀಯ ಕ್ಷಣಗಳ ಪಯಣದಲಿ. ಎಂದೂ ಮಳೆಯಾಗದಬೀಜ ಸಸಿಯಾಗದಸಸಿ ಮರವಾಗಿಮರ ಹೂವರಳಿಸಿ ಹಣ್ಣುಗಳ ಫಲಿಸಿತಾಯಾಗಲಾರದಂತಹ ತೀರಗಳಿರದರುದ್ರಭೀಕರ ಮರಳುಭೂಮಿಯನಡುವಲ್ಲೂ ಹಸಿರು ಚಿಗುರಿಸುವಛಲದೊಡತಿ ನೀನಿರಬೇಕಿತ್ತು ಮುಗಿದ ನನ್ನಿಷ್ಟಕಾಲದ ಜೊತೆಗೆಆರಂಭಗೊಂಡ ಕಷ್ಟಕಾಲದಲಿನೀನಿರಬೇಕಿತ್ತು ನನ್ನಾತ್ಮದ ಕನ್ನಡಿಯಲ್ಲಿ! ****** ಕು.ಸ.ಮಧುಸೂದನ್

ನನ್ನಾತ್ಮದ ಕನ್ನಡಿಯಲ್ಲಿ Read Post »

ಪುಸ್ತಕ ಸಂಗಾತಿ

ಪರಿಧಾವಿ

ಪುಸ್ತಕ ವಿಮರ್ಶೆ ಪರಿಧಾವಿ ಡಾ. ಅಜಿತ ಹೆಗಡೆಯವರ – ಪರಿಧಾವಿ-ಆಧುನಿಕ ಬದುಕಿನ ಕನ್ನಡಿ. ಎದುರಾದ ಅಡೆತಡೆಗಳಿಗೆ ಮುಖ ಕೊಟ್ಟು ಬದುಕುವ  ಆ ಸಂಘರ್ಷವನ್ನೆ ಬದುಕೆಂದು ಸ್ವೀಕರಿಸುವ ಜನರು ಜನಸಾಮಾನ್ಯರು. ಅವರ ಬದುಕಿನಲ್ಲಿ ಸಂಭವಿಸದ ಘರ್ಷಣೆಗಳಿಲ್ಲ, ಉಂಟಾಗದ ವಿಕೋಪಗಳಿಲ್ಲ. ನಡೆಯದ ಕಥೆಗಳಿಲ್ಲ. ಹಾಗಾಗಿ ಹಿಂದಿನ ಕಥೆಗಳಿಗೂ ಇಂದಿನ ಕಥೆಗಳಿಗೂ ಅಂತಹ ವ್ಯತ್ಯಾಸಗಳೇನೂ ಇರುವುದಿಲ್ಲ. ಮಾನವ ಸ್ವಭಾವಗಳು ಎಲ್ಲ ಜನಾಂಗಕ್ಕೂ, ಎಲ್ಲ ಕಾಲಕ್ಕೂ ಒಂದೇ ರೀತಿ ಇದ್ದರೂ ಕಾಲಧರ್ಮಕ್ಕೆ ತಕ್ಕಂತೆ ಈ ಜನಸಾಮಾನ್ಯರ ಜೀವನ ಸಂಘರ್ಷವೂ ಭಿನ್ನ ಪಾತಳಿಯಲ್ಲಿ ಮೈತಾಳಿಬರುವುದು. ಹಾಗಾಗಿ ಇತ್ತೀಚಿನ ಕಥೆಗಳು ಏಡ್ಸ ಎಂಬ ಭೀಕರ ಕಾಯಿಲೆಯ ಕುರಿತೋ, ವಿವಾಹ ವಿಚ್ಛೇದನದ ಕುರಿತೋ, ಇಲ್ಲವೇ ಆತ್ಮರತಿಯ ಕುರಿತೋ ಆಗಿದ್ದರೂ ಅವು ಬದಲಾದ ಕಾಲಘಟ್ಟದ ಮಾನವನ ಬದುಕಿನ ರೀತಿಗಳೇ ಆಗಿವೆ. ಇಂತಹ ಸಂಗತಿಗಳು ನಮ್ಮ ಬದುಕಿನಲ್ಲೋ ಇಲ್ಲವೇ ನಮ್ಮ ಸುತ್ತಲಿನ ಜಗತ್ತಿನಲ್ಲಿ ಕಂಡಾಗ ಸಂವೇದನಾಶೀಲವ್ಯಕ್ತಿ ಅದನ್ನು ಪದಗಳಲ್ಲಿ ಹಿಡಿದಿಡುವ ಪ್ರಯತ್ನ ಮಾಡುತ್ತಾನೆ. ಸ್ಪಂದನೆಯ ಅಥವಾ ಅಭಿವ್ಯಕ್ತಿಯ ಹತ್ತಾರು ಬಗೆಗಳಲ್ಲಿ ಕಥಾ ಲೋಕ ಹೆಚ್ಚು ಪರಿಣಾಮಕಾರಿಯಾಗಿ, ವಿಸ್ತೃತವಾಗಿ ಘಟನೆಯ ಓರೆಕೋರೆಗಳನ್ನು ಸೂಕ್ಷ್ಮ ವಿಚಾರಗಳನ್ನು ಎಳೆಎಳೆಯಾಗಿ ಬಿಡಿಸಿಡಲು ಸಹಾಯಮಾಡುತ್ತದೆ. ಹಾಗಾಗಿ ಸಣ್ಣಕಥೆಗಳು ಇಂದಿಗೂ ಸಹೃದಯ ಓದುಗರ ಅಚ್ಚುಮೆಚ್ಚಿನ ಪ್ರಕಾರ. ಸಂಕಷ್ಟದ ಬದುಕನ್ನು ಸವೆದ ಜೀವನ, ಇಲ್ಲವೇ ಸುತ್ತಮುತ್ತಲಿನ ಜನರ ಪಡಿಪಾಟಲಿಗೆ ತೆರೆದ ಕಣ್ಣಿನಿಂದ ವೀಕ್ಷಿಸುವ ಚಿಕಿತ್ಸಕ ಮನೋಗುಣ ಯಾರಲ್ಲಿ ಇರುವುದೋ ಆ ವ್ಯಕ್ತಿಯ ಜೀವನಾನುಭವ ಗಾಢ ಎಂಬುದನ್ನು ನಮ್ಮ ಹಿರಿಯರು ಒಪ್ಪಿಕೊಂಡಿರುವ ಸಿದ್ಧಾಂತ. ಡಾ.ಅಜಿತ ಹೆಗಡೆಯವರ ಕಥಾ ಸಂಕಲನ ಪರಿಧಾವಿ ಅ ನಿಟ್ಟಿನಲ್ಲಿ ಪ್ರತಿಬಿಂಬಿತವಾಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಅಜಿತ್ ತಮ್ಮ ಚಿಕಿತ್ಸಕ್ ನೋಟದಿಂದ ಇಲ್ಲಿಯ ಕಥೆಗಳನ್ನು ಹಣೆದಿರುವುದು ವೇದ್ಯವಾಗುತ್ತದೆ. ಸಂಕಲನದಲ್ಲಿ ಮೂರನೇ ಕಥೆ ತಾಯಿ  ಆಶಯದಲ್ಲಿ ಬಹು ಮೌಲಿಕವಾಗಿದೆ. ನಮ್ಮ ಸಂಪ್ರದಾಯಸ್ಥ ಸಮಾಜದ ಗೊಡ್ಡು ಆಚರಣೆಗಳಿಂದ ಕಟ್ಟಿದ ಸಂಬಂಧಗಳಿಗಿಂತ ಹೃದಯಗಳೆರಡು ಒಪ್ಪಿಕೊಂಡ ಪರಿಶುದ್ಧ  ಸಂಬಂಧದ ದೀಘರ್ಾಯುಷ್ಯವನ್ನು ಪ್ರಶ್ತುತ ಪಡಿಸಿದ ರೀತಿ ಬಹಳ ಆಪ್ತವಾಗುತ್ತದೆ. ತಾಯ್ತನ ಎನ್ನುವುದು ಕೂಡಾ ಕೇವಲ ಹೇರುವುದರಿಂದ ಮಾತ್ತ ಬರುವುದು ಎಂಬುದಕ್ಕೆ ತಾಯಮ್ಮ ಅಪವಾದವಾಗುತ್ತಾರೆ. ಅವರ ತಾಯ್ತನ ಅಂತಃಕರಣದ್ದು. ಅವಿವಾಹಿತರಾದ ಪಂಪಯ್ಯ ಮೇಷ್ಟ್ರ ಜೀವನದ ಅನಿವಾರ್ಯತೆಗೆ ಮನೆಗೆಲಸದ ಹೆಂಗಸಾಗಿ ಬಂದ ತಾಯಮ್ಮ ಮಾಗಿದ ಜೀವನದ ಹಾದಿಯಲ್ಲಿ ಮೇಷ್ಟ್ರ ಜೊತೆಯಾಗಿ, ಆನಂತರ ಅವರಿಬ್ಬರಲ್ಲಿ ಬೆಸೆವ  ಬಂಧ  ಜಾತಿಯಲ್ಲಿಯೇ ಶಾಸ್ತ್ರೋಕ್ತವಾಗಿ ವಿವಾಹ ಬಂಧನಕ್ಕೆ ಒಳಗಾದ ಸದಾಶಿವ ಮತ್ತು ಆತನ ಪತ್ನಿಯ ವಿಘಟಿತ ಬದುಕಿನ ರೀತಿಯನ್ನು  ತುಲನಾತ್ಮಕವಾಗಿ  ವಿವೇಚಿಸುವಂತೆ ಮಾಡುತ್ತದೆ. ಮಕ್ಕಳನ್ನು ಹೆಡೆಯದಿದ್ದರೂ ತಾಯಮ್ಮ ತಾಯಿ ಪದಕ್ಕೆ ಅನ್ವರ್ಥಕವಾಗಿ ಕಥೆಯಲ್ಲಿ ಪ್ರತಿಬಿಂಬಿತವಾಗಿರುವುದು ಕೂಡಾ ಗಮನಾರ್ಹ ಸಂಗತಿ. ಗಟ್ಟಿ ಸಂಬಂಧಗಳು ಹುಟ್ಟುವುದು ಹೃದಯಂತರಾಳದಲ್ಲಿ ಹೊರತೂ, ಬಾಹ್ಯ ಚಹರೆ ಅಥವಾ ಒಪ್ಪಂದಗಳ ಮೇಲಲ್ಲ. ಮಾನಸಿಕ ಒಪ್ಪಂದವೇ ನಿಜವಾದ ವಿವಾಹ. ಹಾಗೇ ತಾಯ್ತನವೂ ಕೇವಲ ಶರೀರಜನ್ಯ ಸಾಮಥ್ರ್ಯದಿಂದ ಹುಟ್ಟುವ ಪದವಲ್ಲ ಎಂಬುದನ್ನು ಮನಗಾಣಿಸುತ್ತದೆ ಕಥೆ ಸಂಕಲನ ಮೊದಲ ಕಥೆ ಆಶ್ಲೇಷ ಈಶ ಎಂಬ ಹೆಸರಿನಿಂದಲೇ ಕಥೆಯುದ್ದಕ್ಕೂ ಮೂಡುವ ಪಾತ್ರ.  ಆಧುನಿಕ ಜಗತ್ತಿನ ಐಶಾರಾಮಿ ಖಾಯಿಲೆಯಲ್ಲಿ ಒಂದಾದ ಏಡ್ಸಗೆ ಒಳಗಾಗಿ ಬದುಕಿದ್ದೂ ಸತ್ತು, ಸತ್ತರೂ ಎರವಾಗಿ ಹೋಗುವ ಪಾತ್ರ.  ಜೀವನದಲ್ಲಿ ಎದುರಾಗುವ ಅದೆಷ್ಟೋ ಬದಲಾವಣೆಗಳು, ಮಾಡುವ ಅಪರಾಧಗಳು ನಮ್ಮ ಸ್ವಯಂಕೃತವಾಗಿರುತ್ತವೆ. ಕೆಲವೊಮ್ಮೆ ಅದೃಷ್ಟ ಕೈ ಹಿಡಿದಂತೆ ಮಾಡಿ ಮಾಯಾಜಾಲದ ಸುಳಿಗೆ ಸಿಕ್ಕಿಸಿ, ಕೊನೆಗೊಮ್ಮೆ ಯಾರಿಗೂ ಬೇಡವಾದ ಜೀವನವನ್ನು ಬಳುವಳಿಯಾಗಿ ನೀಡಿಬಿಡುವುದು. ಹಣದ ಹರಿವು ಅದು ತಂದುಕೊಡುವ ಸವಲತ್ತು  ಸುಖದ ಸುಪ್ಪತ್ತಿಗೆ ಜೊತೆಗೆ ಆಪತ್ತು  ಮತ್ತು ಚಟ್ಟದ ಹಾಸಿಗೆ ಎಲ್ಲವನ್ನೂ ಮನೋಜ್ಞವಾಗಿ ಚಿತ್ರಿಸಿರುವರು. ಅದೂ ಕೂಡಾ ಆಧುನಿಕ ಈ ಜಗತ್ತಿನ ಮಹಾಮಾರಿ ಏಡ್ಸ್ ಎಂಬ ಭೀಕರ ಕಾಯಿಲೆಯೂ ಆಗಿರಬಹುದು. ವೈದ್ಯ ವೃತ್ತಿಯ ಡಾ. ಅಜಿತರಿಗೆ ಇಂತಹ  ನೈಜ ಘಟನೆಗಳು ದಿನದ ಅನುಭವಗಳಾಗಿರುತ್ತವೆ. ಅವುಗಳಿಗೆ ಸಂವೇದನಾಶೀಲ ವೈದ್ಯನೊಬ್ಬನ ಶಬ್ದ ರೂಪದ ಪ್ರತಿಕೃತಿಯಂತಿದೆ ಈ ಕಥೆ. ಶೀರ್ಷಕಾ ಕಥೆ  ಪರಿಧಾವಿ ಶುದ್ಧ ನೈಸಗರ್ಿಕ ನೆಲೆಗಳನ್ನು ನಾಶ ಮಾಡುತ್ತಿರುವ ಕಾಪರ್ೋರೆಟ್ ಜಗತ್ತಿನ ಕೈವಾಡವನ್ನು ಬಿಂಬಿಸುತ್ತಾ  ಸಾಮಾಜೀಕರಣದ ಹೊಸ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತದೆ. ಹಳೆಯ ಸಂಪ್ರದಾಯ, ಗೊಡ್ಡು ಆಚಾರಗಳನ್ನು ಕಿತ್ತು ಹಾಕಬೇಕೆಂಬ ಸಂದೇಶವಿದೆ. ಜಾತೀಯತೆಯ ಕರಿನೆರಳಿಂದ ಮುಕ್ತಗೊಂಡ ಸಮಾಜ, ಬಂಡವಾಳಶಾಹಿ ಜಗತ್ತಿನ ಕಪಿಮುಷ್ಟಿಯಿಂದ ದೂರನಿಂತು ಸಹಜ ಬದುಕಿಗೆ ತೆರೆದುಕೊಂಡ ಜೀವನ ಖುಷಿಗೆ ಕಥೆಯಲ್ಲಿ ಸ್ಥಾನವಿದೆ. ಕಥಾ ಅಂತ್ಯ ಅದನ್ನೆ ಸ್ಪಷ್ಟಿಕರಿಸುತ್ತದೆ. ಕಾನೇರಿಯ ನಾರಾಯಣ ಹೆಗಡೆಯವರ ಮೊಮ್ಮಗ ಪವನ ಹೆಸರಿಗೆ ತಕ್ಕಂತೆ ಈ ಎಲ್ಲ ಬದಲಾವಣೆಯ ಗಾಳಿ ಹೊತ್ತು ತರುತ್ತಾನೆ. ಇದು ಸಾಮಾಜಿಕ ವ್ಯವಸ್ಥೆಯ ಪುನನರ್ಿಮಾಣದ ಬಹುದೊಡ್ಡ ಆಶಯ ಹೊಂದಿರುವ ಕಥೆ ಎಂದೆನ್ನಿಸುತ್ತದೆ ಆತ್ಮರತಿ ಕಥೆ ಭಾರತೀಯ ಸಮಾಜ ಇಂದಿಗೂ ಸಹಜವಾಗಿ ಒಪ್ಪಿಕೊಳ್ಳದ, ಅಸಹ್ಯದಿಂದ ಮೂಗುಮುರಿಯುವ ಸಲಿಂಗ ಕಾಮ ಮತ್ತು ಆತ್ಮರತಿಗಳ ಕುರಿತು ಮಾತನಾಡುತ್ತದೆ. ಹೊಸ ಜಗತ್ತಿನ ಬದುಕಿನ ಶೈಲಿಯನ್ನು ಸ್ವಾಗತಿಸುವ ಆಧುನಿಕ ಮನೋಭಾವದ ಕಥೆಗಾರರು ಈ ವಿಷಯದಲ್ಲಿ ಮಾತ್ರ ಕಥೆಯಲ್ಲಿ ನೀಲಾಳನ್ನು  ದುರಂತದ ಪಾತ್ರವಾಗಿ ಚಿತ್ರಿಸಿದಂತಿದೆ. ನೈಸಗರ್ಿಕ ಜಗತ್ತು ಒಪ್ಪಿದ ಗಂಡು ಹೆಣ್ಣುಗಳ ಮಿಲನ ನೀಡಿದ ಸುಖಾನುಭೂತಿಗೂ,ತೃಪ್ತಿಯನ್ನು ನೀಡದ ಆತ್ಮರತಿ ಅಥವಾ ಸಲಿಂಗ ಕಾಮ ನೈಸಗರ್ಿಕ ವಿರೋಧಿ ಎಂಬ ತತ್ವವನ್ನು ಕಥೆ ಹೇಳುತ್ತದೆ. ವಿಕ್ಷಿಪ್ತ ಮನಸ್ಥಿತಿಯನ್ನು ಬಹುಚೆನ್ನಾಗಿ ನಿರ್ವಹಿಸಿದ ಕಥೆ. ಟೊಮೆಟೋ ಕೆಚಪ್ ಎಂಬ ಕಥೆಯಂತೂ ವಿವಾಹಕ್ಕೆ ಪರಸ್ಪರ ಸಿದ್ಧವಾದ   ಹೃದಯಗಳೆರಡು ನಡೆಸುವ ಸಂಭಾಷಣೆಯಿಂದಲೇ ಸಿದ್ಧಗೊಂಡಿದೆ. ಇದು ಕಥೆಗಾರರ ನೈಜ ಪ್ರತಿಭೆಗೆ ಸಾಕ್ಷಿ. ಹಿಂದಿನ ಕಾಲದಲ್ಲಿ ವಿವಾಹಗಳು ಗುರುಹಿರಿಯರ ಒಪ್ಪಿಗೆಯಿಂದ ವಿವಾಹ ಮಧ್ಯವತರ್ಿಗಳ ನೆರವಿನಿಂದ ನಡೆಯುತ್ತಿದ್ದರೆ ಇಂದು ಆಧುನಿಕ ವೈವಾಹಿಕ ವ್ಯವಸ್ಥೆಯಲ್ಲಿ ಅಂತಜರ್ಾಲದಲ್ಲಿ ಮೆಟ್ರಿಮೋನಿಯಲ್ ಪ್ರೋಫೈಲ್ಗಳ ಮೂಲಕ ಕುದುರುವ ವಿವಾಹಗಳು, ಭವಿಷ್ಯದಲ್ಲಿ ಗಂಡು ಹೆಣ್ಣು ಪರಸ್ಪರ  ಹೊಂದಿಕೊಳ್ಳುವ ಸಂದರ್ಭದಲ್ಲಿ ಗಂಡು ಹೆಣ್ಣು ವಿವಾಹಪೂರ್ವ ಒಬ್ಬರನ್ನೊಬ್ಬರು ಅರಿತುಕೊಳ್ಳಲು ನಡೆಸುವ ಏಕಾಂತದ ಭೇಟಿಗಳು, ವ್ಯಕ್ತಿತ್ವವನ್ನು ಟೊಮೆಟೋ ಕೆಚಪ್ ಮೂಲಕ ಅಥರ್ೈಸಲು ಬಳಸುವ ಉಪಮೆಗಳು, ಹೊಟೆಲ್ಲಿನಲ್ಲಿ ಮೆನು ಆಯ್ಕೆಯ ಮೂಲಕ ಹೆಣ್ಣಿನ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬಯಸುವ ಗಂಡು ಹೀಗೆ ವಿನೂತನ ರೀತಿಯಲ್ಲಿ ಕಥೆ ಹೆಣೆದಿದ್ದಾರೆ. ಆದರೆ ಹೆಣ್ಣನ್ನು ಆರಿಸುವ ಪೂರ್ಣ ಸ್ವಾತಂತ್ರ್ಯವನ್ನು ಗಂಡಿಗೆ ಮಾತ್ರ ನೀಡಿ ಆಧುನಿಕ ಜಗತ್ತು ಸಮಾನತೆಯ ತಳಹದಿ ಅಲ್ಲ ಎಂದು ಬಿಂಬಿಸುವಂತೆ ಗಂಡಿಗೆ ಮಾತ್ರ ಆ ಆಯ್ಕೆಯ ಸ್ವಾತಂತ್ರ್ಯ ನೀಡಿದ್ದು ಸ್ತ್ರೀ ದೃಷ್ಟಿಕೋನದಿಂದ  ನೋಡಿದಾಗ ಕೊಂಚ ನಿರಾಶೆ ಮೂಡಿಸುತ್ತದೆ. ಹನ್ನೆರಡು ಕಥೆಗಳ ಈ ಸಂಕಲನದಲ್ಲಿಯ ಸಂಧಾನ ಆಯ ‘ಸಮೀಕರಣ’ ‘ವ್ಯವಚ್ಛೇದ’ ಮುಂತಾದ ಕಥೆಗಳು ಬದುಕಿನ ವೈರುಧ್ಯಗಳನ್ನು ಸಮರ್ಥವಾಗಿ ಹಿಡಿದಿಟ್ಟ ಕಥೆಗಳೆಂದೇ ಹೇಳಬೇಕು.  ವೈವಿಧ್ಯಮಯ ವಿಷಯ ವಸ್ತುಗಳಿಂದ ಗಮನ ಸೆಳೆಯುವ ಇಲ್ಲಿಯ ಕಥೆಗಳು ಕಥನ  ಶೈಲಿಯಲ್ಲಿ ಕೊಂಚ ಅತಿಯಾದ ವಿವರಣೆಗಳು  ಅನಗತ್ಯ ಎನಿಸಿಕೊಳ್ಳುತ್ತವೆ. ಮುನ್ನುಡಿಯಲ್ಲಿ ಖ್ಯಾತ ಕಥೆಗಾರರಾದ ಶ್ರೀಧರ ಬಳಿಗಾರರ ಅಭಿಪ್ರಾಯದಂತೆ ಪಾತ್ರ ಹಾಗೂ  ಕಥಾ ಹಂದರದ ಬೆಳವಣಿಗೆಯಲ್ಲಿ ಆಗಾಗ ಉದ್ದೇಶಪೂರ್ವಕ ಇತಿಮಿತಿಗಳನ್ನು ಹಾಗೂ ಕೆಲವೊಮ್ಮೆ  ಅತೀ ಪ್ರಜ್ಞಾಪೂರ್ವಕವಾಗಿ ಪಾತ್ರಗಳ ಬಳಸಿಕೊಳ್ಳುವುದರಿಂದ ಕೆಲವು ಕಥೆಯ ನಿರೂಪಣೆಯಲ್ಲಿ ಒಂದಿಷ್ಟು ಕೃತಕತೆ. ಹೀಗಿದ್ದೂ ಡಾ. ಅಜಿತರ ಕಥೆಗಳು ಆಪ್ತವಾಗಲು ಕಾರಣ ಅವರು ಆದರ್ಶ ಪಾತ್ರಗಳ ಸೃಷ್ಟಿಗಿಂತ  ವಾಸ್ತವಿಕ ತಮ್ಮ ಸುತ್ತಮುತ್ತಲಿನ ಪಾತ್ರಗಳನ್ನು ಕಥೆಯಲ್ಲಿ ನಿರ್ವಹಿಸುವ ಪ್ರಯತ್ನ ಮಾಡಿದ್ದು. ಇಲ್ಲಿಯ ಕಥೆಗಳು ಇಂದಿನ  ಸಾಮಾಜಿಕ ಲೋಕದ ಮಾನಸಿಕ ವಿಕೃತಿಗಳನ್ನು ಎತ್ತಿ ತೋರಿಸುತ್ತಾ ಕೊನೆಯಲ್ಲಿ ಕನಿಕರದ ಅಂತಃಕರಣಕ್ಕೆ ಸಾಕ್ಷಿಯಾಗುವಂತಹ ಕ್ಲೈಮಾಕ್ಸ ನೀಡುತ್ತವೆ. ********** ನಾಗರೇಖಾ ಗಾಂವಕರ

ಪರಿಧಾವಿ Read Post »

ಪುಸ್ತಕ ಸಂಗಾತಿ

ಬಿತ್ತಿದ ಬೆಂಕಿ

ಬಿತ್ತಿದ ಬೆಂಕಿ ಇಲ್ಲಿ ಬಿತ್ತಿದ ಬೆಂಕಿ ಸುಡುವುದಿಲ್ಲ, ಪರಿವರ್ತಿಸಿ ಬೆಳೆಸುತ್ತದೆ. ಇತ್ತೀಚೆಗೆ ಕಾದಂಬರಿಕಾರರು ಮತ್ತು ಹಿರಿಯ ಲೇಖಕರು, ಕವಿತೆಗಳನ್ನು ರಚಿಸುವುದರಲ್ಲಿ ತೊಡಗಿರುವುದು ಆಸಕ್ತಿಕರ ಸಂಗತಿ. ನಾನು ಗಮನಿಸಿದಂತೆ ಅವರಲ್ಲಿ ಎಸ್. ದಿವಾಕರ, ಇಂದ್ರಕುಮಾರ್ ಎಚ್.ಬಿ ಜೊತೆಗೆ ಶ್ರೀಧರ ಬನವಾಸಿ ಅವರು ಪ್ರಮುಖರು. ಏಕೆ ಹೀಗೆ ಎಂಬುದು ಕೂಡಾ ಚರ್ಚಾರ್ಹ ಸಂಗತಿಯೇ! ಫಕೀರ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಶ್ರೀಧರ ಬನವಾಸಿ ಅವರು ಬೇರು (2017) ಕಾದಂಬರಿಯ ಮೂಲಕ ಮನೆಮಾತಾದವರು. ಬೇರು ಒಟ್ಟು ಒಂಬತ್ತು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅವರು ಈ ಮೊದಲೇ ತಿಗರಿಯ ಹೂಗಳು ( 2014) ಎಂಬ ಕವನ ಸಂಕಲನ ರಚಿಸಿದ್ದಾರೆ. ಅಮ್ಮನ ಆಟೋಗ್ರಾಫ್, ದೇವರ ಜೋಳಿಗೆ, ಬ್ರಿಟಿಷ್ ಬಂಗ್ಲೆ ಅವರ ಕಥಾಸಂಕಲನಗಳು. ತಿಗರಿಯ ಹೂಗಳು ಕವನ ಸಂಕಲನದಲ್ಲಿ ಹೆಣ್ಣು, ನಿಸರ್ಗ, ತಾನು, ಕವಿತೆಗಳ ಬಗ್ಗೆ ಬರೆದಿದ್ದ ಶ್ರೀಧರರು ಈ ಸಂಕಲನದಲ್ಲಿ ಇದೇ ವಿಚಾರಗಳ ಅಂತಃಸತ್ವ, ಆಧ್ಯಾತ್ಮ, ಇಹ- ಪರ ಮತ್ತು ಮನೋವ್ಯಾಪಾರಗಳನ್ನು ಚಿತ್ರಿಸಲು ಯತ್ನಿಸಿದ್ದಾರೆ. ಅಂತಹ ಒಂದು ಪ್ರಯತ್ನದಲ್ಲಿ ಬರುವ ಸಾಲುಗಳು.. ” ಜಗದ ಗಗನ ಕುಸುಮವೆಂಬಂತೆಮುಗಿಲ ಲೋಹದ ಹಕ್ಕಿಯು ಹಾರುತ್ತಿತ್ತು” ಮುನ್ನುಡಿಯಲ್ಲಿ ಡಾ.ಮಲರ್ ವಿಳಿ ಕೆ ಅವರು ಹೇಳಿದಂತೆ ಇಲ್ಲಿ ಕವಿಯ ವರ್ಣನೆಯ ಶಕ್ತಿ ಅನಾವರಣವಾಗಿದೆ. ಸಿಕ್ಕಿದ್ದು ಮತ್ತು ದಕ್ಕಿದ್ದು, ಈ ಎರಡು ತುದಿಗಳ ನಡುವಿನ ತೊಳಲಾಟವೇ ಕಾವ್ಯದ ದರ್ದು, ದಂದುಗ. ಈ ಅಂತರದ ಬಗ್ಗೆ ಶ್ರೀಧರರು ನಿಗಾವಹಿಸಿರುವುದು ಅವರ ಕಾವ್ಯ ಚಿಂತನೆಯ ವಿಶೇಷ ಎಂದು ಡಾ.ಎಚ್.ಎಸ್ ಶಿವಪ್ರಕಾಶ್ ಅವರು ಬೆನ್ನುಡಿಯಲ್ಲಿ ಹೇಳಿರುವುದು ತುಂಬಾ ಪ್ರಸ್ತುತವಾಗಿದೆ. ‘ಕೊನೆ ಎಂದಿಗೋ’ ಕವಿತೆಯು ತಪ್ಪುಗಳು ಘಟಿಸುವ ಕುರಿತಾಗಿದೆ, ಆದ ತಪ್ಪುಗಳು ಪುನರಾವರ್ತನೆ ಆಗಬಾರದು ಎಂಬ ಆಸ್ಥೆಯಿದೆ. ಆದರೂ ಅಪರಾಧಗಳಾಗುತ್ತವೆ. ಮತ್ತೆ ಪಶ್ಚಾತ್ತಾಪ, ಕ್ಷಮೆಯಾಚನೆ ಎಲ್ಲಾ! ಹೀಗೆ ಕೊನೆ ಎಂದಿಗೋ? ಎಂಬ ಪ್ರಶ್ನೆಯಲ್ಲಿ ಕವನ ಮುಗಿಯುತ್ತದೆ. ನೀ ಬಂಧಿಯಲ್ಲ! ಎಂಬ ಕವಿತೆಯನ್ನು ನೋಡಿ.. “ ಕಟುಕನ ಕತ್ತಿಗೆ ದೇಹ ಯಾವುದಾದರೇನು?ಎಷ್ಟು ರುಚಿಯಿದ್ದರೇನು! ಕತ್ತಿ ಅನುಭವಿಸಿತೇ?“ “… ಅನಿರೀಕ್ಷಿತ ಆಕರ್ಷಣೆಯ ಬೆಸುಗೆಯೂ ಆಗಿಬಿಡುತ್ತದೆಸುಂದರ ತನುಘಟದ ಮಾಯೆಯ ಬತ್ತಳಿಕೆಯಲ್ಲಿ” ವಾಸ್ತವವಾದ ಜಗತ್ತಿನ ಅನಾವರಣ ಮಾಡಿದ್ದಾರೆ. “ರಕ್ತ ಚಿಮ್ಮುವ ಹೃದಯದಲ್ಲಿಯಾವ ವ್ಯಾಘ್ರವು ಅಡಗಿಹುದೋ?” ಸೂರ್ಯನ ಸುತ್ತಲೂ ಕತ್ತಲು ಕವನದ ಸಾಲುಗಳು ರಾಜಕೀಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತದೆ. “ಹೊಕ್ಕಳ ಬಳ್ಳಿಯ ರಕ್ತಜಿನುಗುತಿದೆ….…….ಕ್ರೌರ್ಯ ತುಂಬಿದ ಧರ್ಮದ ಹೃದಯದಲಿಅದೆಂಥ ರಾಕ್ಷಸನು ಅಡಗಿರುವನೋ ?” ‘ಧರ್ಮದ ಬತ್ತಳಿಕೆಯಲ್ಲಿ ‘ ಕವಿತೆಯಲ್ಲಿ ಧರ್ಮದ ನಕಾರಾತ್ಮಕ ಬಳಕೆಯ ಕುರಿತು ಕವಿ ಮಿಡಿದಿದ್ದಾರೆ. ಕೆಲವು ತರ್ಕಗಳು ಆಧ್ಯಾತ್ಮಿಕ ತುಡಿತ ತುಂಬಿದ ಕವಿತೆ. ” ಹುಟ್ಟಿದ ಪ್ರೀತಿಬಿತ್ತಿದ ಬೆಂಕಿಎರಡೂ ಭಯಾನಕಸುಡುವುದು ಒಂದು ಒಳಗೆಇನ್ನೊಂದು ಹೊರಗೆ” ಸತ್ಯದ ಹುಡುಕಾಟದಲ್ಲಿ ತೊಡಗಿದ ಕವಿಗೆ ಕಾಣುವ ಮತ್ತು ಕಾಡುವ ಸಂಗತಿಯಿದು. ವೃಕ್ಷಮಾತೆ ಪರಿಸರದ ಕುರಿತು, ಸಾಲುಮರದ ತಿಮ್ಮಕ್ಕ ಅವರ ಬಗ್ಗೆ ಇರುವ ಕವಿತೆ. ಬಡವನ ನೊಗದಾಗ ನೂರೆಂಟು ಭಾರ ಮತ್ತು ಮುತ್ತೈದೆಯ ಮೂಗುತಿ ಜನಪದ ಶೈಲಿಯ ಗಮನಾರ್ಹ ಕವಿತೆಗಳು. ಹೀಗೆ ಭಾಷೆ, ವಿಷಯ ವೈವಿಧ್ಯವನ್ನು ಹೊಂದಿರುವ ಈ ಕವನ ಸಂಕಲನದ ಸೊಗಸನ್ನು ಓದಿಯೇ ಅನುಭವಿಸಬೇಕು. ಒಂದು ಒಳ್ಳೆಯ ಕವನ ಸಂಕಲನ. ಬಿತ್ತಿದ ಬೆಂಕಿ ಕವನ ಸಂಕಲನವನ್ನು ಒಮ್ಮೆ ಓದಿ.************* ಡಾ. ಅಜಿತ್ ಹರೀಶಿ

ಬಿತ್ತಿದ ಬೆಂಕಿ Read Post »

ಅನುವಾದ

ದ್ವೇಷ

ಇಂಗ್ಲೀಷ್ ಮೂಲ: ಸ್ಟೀಪನ್ಸ್ ಕನ್ನಡಕ್ಕೆ: ವಿ.ಗಣೇಶ್ ವಿ.ಗಣೇಶ್ ಕಗ್ಗತ್ತಲ ಆ  ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ ನನ್ನ ನೋಡುತ್ತಿದ್ದಾಗತುಟಿಯದುರುತ್ತಿತ್ತು, ತನು ನಡುಗುತ್ತಿತ್ತು. ಹರಿದು ತಿನ್ನುವ ತೆರದಿ ವೈರಿಯ ನೋಡುತದೂರ್ವಾಸನಂತೆ ಉರಿಗಣ್ಣು ಬಿಟ್ಟಾಗನನ್ನ ಎರಡು ಕಣ್ಣುಗಳು ಕಾದ ಕಬ್ಬಿಣದಂತೆಕೆಂಪಾಗಿ ಕೆಂಡ ಕಾರುತ್ತಾ ಉರಿಯುತ್ತಲಿದ್ದವು ಶಾಂತಿಸಹನೆಯ ಮೂರ್ತಿಯಾದ ನನ್ನ ವೈರಿನಸುನಗುತ “ಗೆಳೆಯಾ, ಏಕಿಷ್ಟು ಉಗ್ರನಾಗಿರುವೆ?ಬಾಲ್ಯದಿಂದಲೂ ಕೂಡಿ ಕಳೆದ ಆ ಸಿಹಿ ದಿನಗಳನ್ನುಅದಾಗಲೇ ಮರೆತುಬಿಟ್ಟೆಯಾ?” ಎನ್ನ ಬೇಕೇ? “ಏನೋ ನಡೆಯ ಬಾರದ ಕಹಿ ಘಟನೆ ನಡೆದುನಮ್ಮಿಬ್ಬರ ಹಾದಿಯಲ್ಲಿ ಒಡಕಾದ ಮಾತ್ರಕ್ಕೆನಮ್ಮಿಬ್ಬರ ಪ್ರೀತಿಯ ತೊರೆ ಬತ್ತಿ ಬರಡಾಗಿಬದುಕು ಇಲ್ಲಿಗೇ ಮುಗಿದು ಹೋಯಿತೆನ್ನುವೆಯಾ?” “ನಿನ್ನ ಬತ್ತಳಿಕೆಯ ವಿಷಪೂರಿತ ಮೊನಚಾದಬಾಣಗಳೆಲ್ಲಾ ಬರಿದಾದಾಗ, ‘ನಾವೇಕೆ ಹೀಗೆದ್ವೇಷಿಸುತ್ತಿದ್ದೆವು?’ ಎಂಬುದಕ್ಕೆ ಉತ್ತರಿಸಬಲ್ಲೆಯಾ?ಅರ್ಥವಿಲ್ಲದ ಈ ದ್ವೇಷಕ್ಕೆ ಕೊನೆಯಿಲ್ಲವೇ?” ಎಂದಾಗ ಆ ವೈರಿಯ ಮುಂದೆ ತುಂಬಾ ಚಿಕ್ಕವನಾಗಿಮಾತೇ ಹೊರಡದೆ ಮೂಕನಾಗಿಬಿಟ್ಟೆತಗ್ಗಿಸಿದ ತಲೆಯನಾಗ ಮೇಲೆತ್ತಲಾರದೇಅದಾಗಲೇ  ತಣ್ಣಗಾಗಿ ಕುಸಿಯ ತೊಡಗಿದೆ ಪ್ರೀತಿಯ ಸಿಹಿ ಕೋಪದ ಕಹಿಯ ಕರಗಿಸಿದಾಗನಾಚಿ ನೀರಾಗುತ್ತ ಅವನತ್ತ ನೋಡಿದೆನಮ್ಮಿಬ್ಬರ ದೃಷ್ಟಿ ಮತ್ತೆ ಕಲೆತಾಗ, ಬಾಲ್ಯದನೆನಪು ಮನದಾಳದಿಂದ ಚಿಮ್ಮತೊಡಗಿತು ಆಗ ನಾನೇನು ಹೇಳುವೆನೋ ಎಂದು ಕಾತರದಿನನ್ನೆಡೆಗೆ ನೋಡುತ್ತಿದ್ದವನ ಎದುರಿಸಲಾಗದೇಎಲ್ಲಿ ಹಿಡಿದು ಮುತ್ತಿಡುವೆನೋ ಏನೋ ಎಂದುಮುಖನೋಡಲಾಗದೇ ಹಾಗೇ ಒಳಕ್ಕೆ ಓಡಿದೆ. ಬಾಡಿ ಮುದುಡಿದ  ಗೆಳೆತನದ ಸಸಿ ಅಂದುಚಿಗುರೊಡೆದು ಹಸಿರಾಗಿ ಬೆಳೆಯತೊಡಗಿದಾಗನನ್ನ ಕೋಪದ ಬಂಡೆ ಅದಾಗಲೇ ಕರಗಿ ನೀರಾಗಿಚಿಗುರುತಿಹ ಆ ಸಸಿಗೆ ನೀರೆರೆಯತೊಡಗಿತ್ತು. Hate: By Stephans ********

ದ್ವೇಷ Read Post »

ಕಾವ್ಯಯಾನ

ದಡ

ಫಾಲ್ಗುಣ ಗೌಡ ಅಚವೆ ಮತ್ತೆ ಅದೇ ಏಕಾಂಗಿತನಮರಿ ಮಾಡುತ್ತಲೇ ಇದೆಕಾವು ಕೊಡದಿದ್ದರೂ ಮೊನ್ನೆ ನಡೆದ ಅಸಂಗತ ನಾಟಕದನಾಯಕ ಅವನ ಪಾತ್ರದಲ್ಲಿಯೇನೆಲೆಗೊಂಡಂತಿದೆ ಇನ್ನೂಧಾವಂತಗಳ ದಾಟದೇದಗದಿ ದಳ್ಳುರಿಯ ಎದುರಿಸಲಾಗದೇಹೊಸ ಹುಡುಕಾಟಗಳ ಲೆಕ್ಕಿಸದೇತಡಕಾಡಿಸುತ್ತಲೇ ಇದೆಚುಕ್ತಾ ಮಾಡಲಾಗದಬಡತನದ ಕನಸುಗಾರಿಕೆ ಇಲ್ಲಿಯೇ ಇದ್ದು ಅಲ್ಲಿ ಹೊರಟಂತೆದಾಪುಗಾಲಿಟ್ಟವರುಮನವಿ ಕೊಟ್ಟಂತಿದೆಗೈರು ಹಾಜರಾದ ಕುರಿತು ಸಾವು ಸಮನಿಸುವಂತಸವಾಲುಗಳಿವೆ ಇನ್ನೂಅಂಟಿಕೊಂಡಿವೆ ಅರವತ್ತರನಂತರದ ಆಹ್ವಾನಗಳು ಕಾಲದ ಹೆಜ್ಜೆಗಳಿಗೆ ಒಂದಷ್ಟುಬಣ್ಣ ಬಳಿದರೂಹಿಂದೆ ಬಳಿದ ಸುಣ್ಣವೇಇಣುಕುತ್ತಿದೆ ಅಲ್ಲಲ್ಲಿ ಸಹಜ ನಿಯಮವೇ ಬದಲಾವಣೆಸ್ತಬ್ಧಗೊಂಡಿದೆ ಹರಿವುನಿದ್ದೆಯ ಮಂಪರಿದೆಅಲೆಯದ ಕಡಲಿಗೆಹೊಸ ಅಲೆಯುಕ್ಕಿಸೋಸುನಾಮಿ ಅದೆಲ್ಲಿದೆಯೋ? ಆಧುನಿಕ ಅವಾಂತರಗಳುಮತ್ತೆ ಮತ್ತೆ ಆವರಿಸಿಗುಂಗೆ ಹುಳವಾಗಿ ಗಿರಕಿ ಹೊಡೆದನೂರೆಂಟು ನರಳಿಕೆಗಳುಜಗ್ಗಿದಂತೆನಿಸಿವೆ ಅಚ್ಚರಿಯೆಂದರೆಹೊರಟ ಹೈದರಿಗೆಇನ್ನೂ ಆಚೆ ದಡನಿಲುಕಿಲ್ಲ! **********

ದಡ Read Post »

ಕಾವ್ಯಯಾನ

ಖಾದಿ ಮತ್ತು ಕಾವಿ

ಎಮ್. ಟಿ. ನಾಯ್ಕ.                         ಜನ ಸೇವಕನೆಂದಿತು ಖಾದಿ ಧರ್ಮ ರಕ್ಷಕನೆಂದಿತು ಕಾವಿ ಇಂಚಿಂಚಾಗಿ ಮಾನವ ಕುಲವ ನುಂಗಿ, ನೀರು ಕುಡಿಯುತ್ತಿರುವ ಗೋಮುಖ ವ್ಯಾಘ್ರಗಳು     ವಿಷಯ ಲಂಪಟತೆಗೆ     ಇನ್ನೊಂದು ಹೆಸರು     ಖಾದಿ ಮತ್ತು  ಕಾವಿ ಇವುಗಳ ಹೆಸರೆತ್ತಿದರೆ ಸಾಕು ಬೀದಿ ನಾಯಿಗಳೂ ಕೂಡ ಮೂಗು ಮುಚ್ಚುತ್ತವೆ ಹಸಿ ಹಾದರದ ಕತೆಗೆ ನಸು  ನಾಚುತ್ತವೆ! ಹೊನ್ನು ಹೆಣ್ಣು ಮಣ್ಣಿನ ವಾಸನೆ ಗರ್ಭಗುಡಿಯೊಳಗೆ……! ಎಷ್ಟೆಲ್ಲಾ  ಸತ್ಯಗಳು ಕತ್ತಲೆಯ  ಗರ್ಭದೊಳು ….. !? ಖಾದಿಯದೋ……ರಾಜಕುಲ ಕಾವಿಯದೋ ……ದೇವಕುಲ ಇಬ್ಬರಿಗೂ ಬೇಕಂತೆ ಝಡ್ ಪ್ಲಸ್ ರಕ್ಷಣೆ ಇಬ್ಬರದೂ ಒಂದೇ ಮುಖ ಸದಾ ನಗುಮುಖ ಆದರೆ .. ಅನಾವರಣಗೊಳ್ಳುವುದೊಮ್ಮೊಮ್ಮೆ ಇವರ  ಬಹುಮುಖ! *************

ಖಾದಿ ಮತ್ತು ಕಾವಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಅಲೆಮಾರಿಯ ದಿನದ ಮಾತುಗಳು ಅನುದಿನದ ಅನುಭಾದ ನುಡಿಗಳು(ಗಂಗಾಧರ ಅವಟೇರ ಅವರ “ಅಲೆಮಾರಿಯ ದಿನದ ಮಾತುಗಳು”) ಪ್ರೊ.ಗಂಗಾಧರ ಆವಟೇರ ಬಹುಕಾಲದ ಗೆಳೆಯ.ಬೊಗಸೆ ತುಂಬ ಪ್ರೀತಿ ತುಂಬಿಕೊಂಡೇ ಮಾತನಾಡುವಾತ. ಮನದಲ್ಲಿ, ಮಾತಲ್ಲಿ ಎರಡಿಲ್ಲದ ನೇರ ನುಡಿಯ ತುಂಬ ಹೋರಾಟದ ಬದುಕನ್ನು ಬದುಕುತ್ತ ಬಂದಾತ.ಅದಕ್ಕೆ ಹಿನ್ನೆಲೆಯಾಗಿಯೇ ಬದುಕಿದಾತಸದ್ಯಕ್ಕೆ ಇತಿಹಾಸ ಪ್ರಸಿದ್ಧ ಕುಕನೂರ ತಾಲೂಕಿನ‌ ಮಹಾದೇವ ದೇವಾಲಯ ನೆಲೆಸಿರುವ ಇಟಗಿಯ ಶ್ರೀ ಮಹೇಶ್ವರ ಪಿ.ಯು.ಕಾಲೆಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಮಹಾಲಿಂಗಪೂರದಲ್ಲಿ ಉಪನ್ಯಾಸಕನಾಗಿದ್ದಾಗಿನಿಂದಲೂ ಅವರ ಆತ್ಮೀಯ ಸ್ನೇಹದ ಸವಿ ನನಗೆ ದೊರಕಿದುದುಂಟು.ಅದನ್ನೆಲ್ಲ ಬರೆಯಲು ಇದು ಉಚಿತ ವೇದಿಕೆಯಲ್ಲ.ಸದ್ಯಕ್ಕೆ ‘ಅಲೆಮಾರಿಯ ದಿನದ ಮಾತುಗಳು ‘ಕೃತಿಯನ್ನು ನನ್ನ ಮುಂದಿಟ್ಟುಕೊಂಡು ಆ‌ ಕುರಿತು ನನ್ನ ಅನಿಸಿಕೆ ವ್ಯಕ್ತ ಮಾಡಲು ಹೊರಟಿದ್ದೇನೆ. ಗಂಗಾಧರ ಅವರ ಬಗ್ಗೆ ಬರೆಯುವಾಗ ಬಹುವಚನ ಬಳಸುವದು ಸ್ನೇಹಕ್ಕೆ ಮಾಡಿದ ಅಪಚಾರ ಎಂದು ಞಬಾವಿಸಿ ಏಕವಚನವನ್ನೆ ಬಳಸಿದ್ದೇನೆ.‌ ಅಲೆಮಾರಿ ಎನ್ನುವ ಪದಕ್ಕು ಗಂಗಾಧರನಿಗೂ ಬಿಡದ ನಂಟು.ಅವನು ಮೂಲತಃ ಅಲೆಮಾರಿಯೇ. ಪ್ರಥಮತಃ ಕವಿಯಾದ ಅವನಲ್ಲೊಂದು ಕವಿ ಜೀವವಿದೆ.ಅದು ಬಡವರ ನೋವಿಗೆ ಮಿಡಿಯುವ,ಅನ್ಯಾಯ ಕಂಡಾಗ ಆಕ್ರೋಶಗೊಳ್ಳುವ ಹೃದಯದ ಮಿಡಿತವಿರುವ ಜೀವ .ಹೀಗಾಗಿ ಇಲ್ಲಿರುವ ದಿನದ ಮಾತುಗಳಲ್ಲಿ ವ್ಯಕ್ತಮಾಡುವ. ವಿಚಾರಗಳು ಗದ್ಯಗಂಧಿಯಾದರೂ ಪದ್ಯದ ಭಾವವನ್ಬು ಬಿಟ್ಟಿಲ್ಲ.ಇಂದು ನಮ್ಮಯುವಜನಾಂಗ ಅತಿಯಾಗಿ ಓದುವ ಪುಸ್ತಕ ಯಾವಿದಾದರೂ ಅದು ಪೇಸ್ ಬುಕ್.ಅವರು ಎಲ್ಲಿ ಓದುತ್ತಾರೆಯೋಅಲ್ಲಿಯೆ ಅವರಿಗೆ ಒಳಿತಾಗುವಂಥದನ್ನು,ಉಪಯುಕ್ತವಾಗುವದನ್ನು ನೀಡಬೇಕು.ಮತ್ತೆ ದೀರ್ಘವಾದುದನ್ನು ಬರೆದರೆ ಓದಲು ಯಾರಿಗೆ ಪುರುಸೊತ್ತಿದೆ? ಓದುಗರ ನರನಾಡಿ ಗೊತ್ತಿರುವ ಲೇಖಕ ಇಂತಹುದನ್ನು ಪ್ರಯತ್ನ‌ಮಾಡುತ್ತಾನೆ. ಅವಟೇರ ಅದರಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ.ದಿನಕ್ಕೊಂದರಂತೆ ತಮ್ಮವ್ಯಾಟ್ಸಪ್ ಮತ್ತು‌ಮುಖಪುಟದಲ್ಲಿ ಬರೆದು ಹಾಕಿದ ಬರಹಗಳನ್ನು ಸಂಗ್ರಹಿಸಿ ಇಲ್ಕಿ ನೀಡಿದ್ದಾರೆ. ಇವು ಕವಿತೆಗಳೇ? ಗದ್ಯದ ತುಣುಕಗಳೇ?ಚಿಂತನೆಗಳೇ? ಹಾಗೆ ನೋಡಿದರೆ ಎಲ್ಲವೂ ಹೌದು.ಆದ್ದರಿಂದ ಬೆನ್ನುಡಿ ಬರೆದ ಹಿರಿಯ ಕವಿಮಿತ್ರ ಡಾ.ಗುಂಡಣ್ಣ ಕಲಬುರ್ಗಿ ಗದ್ಯಗಂಧಿ ಇವುಗಳನ್ನು ಬರಹಗಳು ಎಂದಿದ್ದಾರೆ.ಕನ್ನಡದಲ್ಲಿ ಗಪದ್ಯ ಎಂಬ ಪ್ರಕಾರವೊಂದಿದೆ ಅಂತಹ ಪ್ರಕಾರಕ್ಕೆ ಸೇರಬಹುದಾದ ಲೇಖಗಳಿವು ಎನ್ನಬಹುದು. ಆದರೆ ಇಲ್ಲೊಂದು ಅಪಾರ ಓದಿನ ಅನುಭವದ ಮೂಸೆಯಲ್ಲಿ ಹೃದ್ಯಗೊಂಡ ಮನಸ್ಸಿದೆ. ಕವಿತ್ವದ ಮೂಸೆಯಲ್ಲಿ ಹದಗೊಂಡ ದನಿಯಿದೆ.ಕನ್ನಡದಲ್ಲಿ ಇಂತಹದೊಂದು ಸಂಕಲನ ಬಂದಿದೆಯೇ ? ಅಥವಾ ಇದೇ ಮೊದಲಿನದೆ ?ಪ್ರಾಜ್ಞರು ಹೇಳಬೇಕು.ನಾನು ಬಲ್ಲಂತೆ ಇದು ಪ್ರಥಮ ಪ್ರಯತ್ನವೇ ಇರಬೇಕು. ಅಲೆಮಾರಿ ಮಾತ್ರ ಬದುಕಿನ ಆಳವಾದ ಅನುಭವ ಗಳಿಸಬಲ್ಲ.ನಮ್ಮ ಹಿಂದಿನ ಹಿರಿಯರು ದೇಶ ಸುತ್ತಬೇಕು,ಕೋಶ ಓದಬೇಕು ಎನ್ನುತ್ತಿದ್ದರು.ಗಂಗಾಧರ ಅವರು ಬರೀ ದೇಶ ಸುತ್ತಿಲ್ಲ ಅವರ ಬದುಕುನಿಡಸೂರಿನಿಂದ ಆರಂಭವಾಗಿಅಮೀನಗಡ ಹುನಗುಂದ,ಧಾರಚಾಡ,ಮೂಡಲಗಿ,ತೇರಸದಾಳ,ರಬಕವಿ,ಮಹಾಲಿಂಗಪೂರ,ಕೆಸರಗೊಪ್ಪ,ಈಗ ಸದ್ಯಕ್ಕೆ ಇಟಗಿಯಲ್ಲಿ ನೆಲೆನಿಂತಿದೆ.ಬದುಕಿನ ಅನ್ನಕ್ಕಾಗಿ ಅವರು ಮಾಡಿದ ಸಾಹಸವೂ ಕೂಡ ಒಂದು ದೊಡ್ಡ ಪ್ರಬಂಧದ ವಸ್ತುವಾದೀತು. ದಾರಿಯೆಂದರೆ ಬದುಕಿಗ ಸಂಬಂಧಿಸಿದ್ದು.ಅದು ಚಲನಶೀಲರಿಗೆ ಮಾತ್ರ ದಕ್ಕಿದ್ದು. ಅಲೆದಾಡಬೇಕುನೆಲೆಯಿಲ್ಲದ ಅಲೆಮಾರಿಯಂತೆ ಎನ್ನುವ ವಾಕ್ಯದಂತೆ ಆರಂಭವಾಗುವ ಈ ಅನುಭವೋಕ್ತಿಗಳು ಬದುಕಿನ ಸೂತ್ರಗಳನ್ನು ವಿವರಿಸುತ್ತವೆ.ಸೋಲುಗಳನ್ನು ಎದುರಿಸಿ ,ಎದುರಿಸಿ ಗಟ್ಟಿಗೊಂಡ ಮನಸ್ಸುಕೊನೆಗೆ ಈ ಸ್ಥಿತಿ ಮುಟ್ಟುತ್ತದೆ. ಸೋಲು ಪ್ರತಿಯೊಬ್ಬರನ್ನುಕ್ಷಣ ಕಾಲ ಅಸ್ತಿತ್ವವನ್ನೂ ಅಲುಗಾಡಿಸುತ್ತದೆ ನಿಜ.ಆದರೆ ಅದೇ ಅಂತಿಮವಲ್ಲ ಎಂಬ ತಿಳಿವಳಿಕೆ ಇರಬೇಕು ಹೀಗೆ ಅನುಭವ ಹರಳುಗಟ್ಟಿದಾಗ ಮಾತ್ರ ಇಂತಹ ಸೂಕ್ತಿಗಳು ಬರಲು ಸಾಧ್ಯ.ಮಾಡಿದ ಉಪಕಾರವನ್ನು ಮರೆಯುವದು ಎಷ್ಟು ಕೃತಘ್ನತೆಯರೂಪ ಎನ್ನುವದನ್ನು ವಿವರಿಸಲು ಮತ್ತೊಬ್ಬರು‌ ಮಾಡಿದಉಪಕಾರವನ್ನು ಮರೆತವರುಹೆತ್ತ ತಂದೆ ತಾಯಿಗಳನ್ನುಮರೆತರೆ ಆಶ್ಚರ್ಯ ಪಡಬೇಕಾಗಿಲ್ಲ ಇಂತಹ ಮಾತುಗಳು ಇಂದಿನ ಜನಾಂಗಕ್ಕೆಒಂದಿಷ್ಟಾದರೂ ಯೋಚನೆ ಮಾಡಲು ಹಚ್ಚುತ್ತವೆ.ಮನೆ, ಕುಟುಂಬ,ತಂದೆ, ತಾಯಿ ಇತ್ಯಾದಿ ಮೌಲ್ಯಗಳನ್ನು ಮರೆಯುತ್ತಿರುವ ಜನಕ್ಕೆ ಹಿತವಚನ‌ ನೀಡುತ್ತವೆ. ನಮಗೆ ದ್ವೇಷ ಮಾಡಲುಬಹಳಷ್ಟು ದಿನ ಇಲ್ಲಇರುವಷ್ಟು ದಿನಎಲ್ಲರನ್ನು ಪ್ರೀತಿಸೋಣ ಇಂಥ ಮಾತುಗಳು ಏಲ್ಲೊ ಓದಿದ ಮಾತು ಎನಿಸುತ್ತವೆ.ಆದರೂ ಒಂದು ಸಂದೇಶ ಅಲ್ಕಿ ಇದ್ದೇ ಇದೆ.ಉಪನ್ಯಾಸಕರಾಗಿ ಹತ್ತಾರು ವರುಷ ಕಳೆದಿರುವ ಗಂಗಾಧರ ಅಂಥವರಿಗೆ ಮಾತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರ ನಡುವಿನ ಈ ಅಂತರ ಹೊಳೆಯಲು ಸಾಧ್ಯ ವಿದ್ಯಾರ್ಥಿಗಳುಎಂದರೆಸುಂದರವಾದ ಕನಸುಗಳ‌ಮೇಲೆ ಸವಾರಿ ಮಾಡುವ ಸರದಾರರುವಿದ್ಯಾರ್ಥಿನಿಯರುಎಂದರೆವಾಸ್ತವವನ್ನು ಅರಗಿಸಿಕೊಂಡು ನೆಲದ ಮೇಲೆಹೂವು ಭಾರವಾದ ಹೆಜ್ಜೆ ಹಾಕುವ ಶ್ರಮಜೀವಿಗಳು ಕಾಲೆಜು ಹಂತದ ಹುಡುಗ ಹುಡುಗಿಯರ ಮನಸ್ಥಿತಿಯನ್ಬು ಅರಿತ ಆವಟೇರ‌ ಅವರು ಹುಡುಗರು ಹೇಗೆ ಕನಸುಗಳಲ್ಲಿ ಕರಗಿ ಹೋಗುತ್ತಾರೆ?ಹುಡುಗಿಯರು ಹೇಗೆ ವಾಸ್ತವ ಅರಿತು ಶ್ರಮ‌ಹಾಕಿ ಮುಂದೆ ಬರುತ್ತಾರೆ ಎನ್ನುವದನ್ನು ಸೂಕ್ಷ್ಮವಾಗಿ ಗುರುತಿಸುತ್ತಾರೆ.ಇಂದು ಕಾಲೇಜುಗಳ‌ ಫಲಿತಾಂಶವನ್ನು ನೋಡಿದಾಗ ಈ ಅನಭವೋಕ್ತಿ ನಿಜ ಎನಿಸುತ್ತದೆ.ಬಹಳ ಹಿಂದೆ ಕವಿ ಡುಂಡಿರಾಜ್ ಹುಡುಗಿಯರು ಮುಂದೆ ಮುಂದೆಹುಡುಗರು ಅವರ ಹೊಂದೆ ಹಿಂದೆ ಎಂಬ ಚುಟುಕು ಬರೆದಿದ್ದನ್ನು ನೆನಪಿಸಬಹುದು.ಎಲ್ಲ ಕಲೆಗಳಿಗಿಂತ ಜೀವನ ಎಂಬುದು ಪರಮ ಕಲೆ.ಅದನ್ನು ಹೇಳಿ ಕೊಡಲು ಮಾತ್ರ ಯಾವುದೆ ಶಾಲೆ‌ ಕಾಲೆಜು ಗಳಿಲ್ಲ. ಅದರಲ್ಲಿ ಯಶಸ್ವಿಯಾದವರಿಗೆ ಯಾವುದೆ ವಿಶ್ವ ವಿದ್ಯಾಲಯ ದ ಪ್ರಮಾಣ ಪತ್ರದ ಅಗತ್ಯವಲ್ಲ. ಬದುಕುವ ಕಲೆಕರಗತ ಮಾಡಿಕೊಂಡವರಿಗೆಯಾವುದೆ ವಿಶ್ವ ವಿದ್ಯಾಲಯದಅರ್ಹತೆಯ ಪ್ರಮಾಣ ಪತ್ರದ ಅಗತ್ಯವಿಲ್ಲ ಬದುಕು ಸರಳ ರೇಖೆಯಲ್ಲಅದರಲ್ಲಿಯೂ ಆಗಾಗ ವಕ್ರರೇಖೆಯಪ್ರತಿಪಫಲನಗಳು ಉಂಟಾಗುತ್ತವೆ ಇಂತಹ ಮಾತುಗಳು ಬದುಕಿನ ವ್ಯಾಖ್ಯಾನ‌ಮಾಡಲು ಹವನಿಸುತ್ತವೆ.ಯೋಗ ಎಂಬ‌ ಮಾತಿಗೆ ಅರ್ಥ ಹೇಳುತ್ತ ಯೋಗ ವ್ಯಾಯಾಮವಲ್ಲದೇಹ ಮತ್ತು ಮನಸ್ಸುಗಳನಿಯಂತ್ರಣ ಮಾಡುವ ಸಾಧನ ಎಂದು ವಿವರಿಸಿರುವದು ಒಂದು ರೀತಿಯಲ್ಲಿ ಯೋಗ ಚಿತ್ತವೃತ್ತಿ ನಿರೋಧ ಎಂಬ ಪರಂಪರೆಯ ಮಾತನ್ನು ನೆನಪಿಸುತ್ತದೆ.ಮಾತಿನ‌ ಬಗೆಗಿನ ಅವರ ಚಿಂತನೆ ಹೀಗಿದೆ. ನಾವು ಆಡುವ ಮಾತುಉದಯಿಸುವ ಸೂರ್ಯನ ಕಿರಣಗಳಂತೆಹೊಳೆಯುತ್ತಿರಲಿ,ಆದರೆಅವುಗಳು ಯಾರನ್ನು ಸುಡದಿರಲಿ ಎನ್ನುವ ಚಿಂತನೆ ಮಾತು ಸುಡುವ ಬೆಂಕಿಯಾ ಗಬಾರದು, ಬೆಳಗುವ ಹಣತೆಯಾಗಬೇಕು ಎನ್ನುವ ದನ್ನು ನೆನಪಿಸುತ್ತದೆ.ಹೀಗೆ ಇಲ್ಲಿನ ಮಾತುಗಳು ಸಂಕ್ಷಿಪ್ತವಾಗಿದ್ದಂತೆ ಕಾವ್ಯಾತ್ಮಕವಾಗಿವೆ.ಆದರೆ ದೀರ್ಘವಾಗುತ್ತಾ ಹೋದಂತೆ ಜಾಳು ಜಾಳು ಎನಿಸುತ್ತವೆ .ಕವಿತೆಯೆ ಆಗಲಿ,ಒಂದು ಸೂಕ್ತಿಯೇ ಆಗಲಿ ಅದು ವಿವರಣೆಯಾಗುತ್ತಾ ನಡೆದಂತೆ ಅವುಗಳ ಅರ್ಥ ಸಾಂದ್ರತೆ ಕಡಿಮೆಯಾಗುತ್ತದೆ. ದೇವರು,ಧರ್ಮ ಇಂತಹ ಅನುಭಾವದ ಮಾತುಗಳೂ ಇವೆ. ಪ್ರೊ.ಗಂಗಾಧರ ಅವಟೇರ ಅವರ ಸ್ನೇಹವಲಯ ದೊಡ್ಡದು.ಹೀಗಾಗಿ ಅರವತ್ತು ಪುಟಗಳ ಈ -ಅಲೆಮಾರಿಯ ದಿನದ ಮಾತುಗಳು -ಸಂಕಲನ ಕ್ಕೆ ೩೬ ಪುಟಗಳ ಬೇರೆಯವರ ಅಭಿಪ್ರಾಯ, ಮುನ್ನುಡಿ ಪ್ರಸ್ತಾವನೆಗಳೇ ಇವೆ.ಮೂಗುತಿ ಮುಂಭಾರ ಎನ್ನುವಂತೆ! ಇರಲಿ ಪ್ರೀತಿಯ ಭಾರ ತುಸು ಹೆಚ್ಚಾದರೂ ತಡೆಯಬಹಯದಲ್ಲವೇ.ಮೊಬಾಯಲ ಮಾಧ್ಯಮದ ಮೂಲಕ ಜೀವನ ಸಂದೇಶ ಹಂಚಿದ ಗೆಳೆಯರನ್ನು ಅಭನಂದಿಸುತ್ತೇನೆ.ನನಗೆ ಕವಿ ಗಂಗಾಧರ ಆವಟೇರ ಇಷ್ಟ.ಅವರು ಇನ್ನಷ್ಟು ಕವಿತೆ ಬರೆಯಲಿ ಎಂದು ಹಾರೈಸುತ್ರೇನೆ. ********* ಡಾ.ಯ.ಮಾಯಾಕೊಳ್ಳಿ

ಪುಸ್ತಕ ಸಂಗಾತಿ Read Post »

ಕಾವ್ಯಯಾನ

ಮತ್ತೆ ಮತ್ತೆ ಹೇಗೆ ಹಾಡಲಿ

ಸಂತೆಬೆನ್ನೂರು ಫೈಜ್ನಟ್ರಾಜ್ ಹಾಡಿದ ಹಾಡನೆ ಮರಳಿ ನಾನುಮತ್ತೆ ಮತ್ತೆ ಹೇಗೆ ಹಾಡಲಿಕಡಲೊಳಗೆ ಬೆರೆತ ಆ ನದಿಯಯಾವ ಕಣ್ಣಿನಿಂದ ನಾನು ನೋಡಲಿ೧ ಬಂದವರು ಹೋದವರು ಇದನೆ ತಾನೆಹಾಡಿ ಹೋದರು ಬಿದಿರ ಸೀಳಿದಂತೆತೂತ ಕೊರೆದು ಎದೆಯ ತೆರೆದುಹಾಡಿದರೂ ನಾ ಹೋದರು ಕೇಳದಂತೆ೨ ಕಾಡ ಕರುಣೆ ಹೂವ ಪ್ರೀತಿಜೋಲಿಯ ಲಾಲಿ ಪಿಸ ಮಾತಿನೊಲುಮೆಒಲ್ಲೆನೆಂದರು ಮತ್ತೆ ಮನಕಿಳಿದುತಿದಿಯೊತ್ತೆ ರಾಗ ಚಿಮ್ಮಿ ಭಾವ ಕುಲುಮೆ೩ ನಮ್ಮವರು ನಿಮ್ಮವರು ಎಂದಿಗೂಹಾಡಿದುದನೆ  ಹಾಡಿ ದಣಿದ ಕಥೆಯೂಹಾಡೊಂದೆ ಇಲ್ಲಿ ಭಾವ ಬೇರೆಇರಲಿ ಮನುಜ ಪ್ರೀತಿ ಬೇಡ ದುಗುಡ ವ್ಯಥೆಯೂ! **************

ಮತ್ತೆ ಮತ್ತೆ ಹೇಗೆ ಹಾಡಲಿ Read Post »

ಕಾವ್ಯಯಾನ

ರುಬಾಯಿ

ಶಾಲಿನಿ ಆರ್. ೧.  ಮುಂಗಾರಿನ ಮಳೆಹನಿ      ಇಳೆಗೆ ಇಳಿದ ದನಿ      ನನ್ನ ರಮಿಸುವ ಪ್ರೀತಿ,      ಒಡಲ ಸೋಕಿ ಜೇನ್ಹನಿ… ೨.   ಮಳೆ ಬಂತು ನಾಡಿಗೆ       ತೆನೆ ತಂತು ಬೀಡಿಗೆ       ಅಚ್ಚ ಪಚ್ಚ ಪಯರು,       ಹೊನ್ನೂತ್ತಿ ಸೊಬಗಿಗೆ… ೩.   ಮಳೆಯಿದು ಮಮತೆ ಸೆರಗು       ಭುವಿಯಲೆಲ್ಲ ಹಾಸಿ ಬೆರಗು       ಧಾತ್ರಿ ತಂದಿತು ಒಸೆದು ಪ್ರೀತಿ,       ಮೊಗೆದು ತುಂಬಿ ಸಿರಿ ಸೊಬಗು… ೪.   ಮುಂಗಾರು ಮಳೆ ತಂದ ಒಲವ       ಭಾವ       ಒಡಮೂಡಿದೆ ಇಳೆಯಲೆಲ್ಲ ಜೀವ       ಸುತ್ತಮುತ್ತ ಹಸಿರ ಹೊನಲ ಗಾಳಿ,       ಮೂಡಿತಲ್ಲಿ ನಾಳಿನ ನಂಬಿಕೆ ದೈವ… ೫.   ಮುಂಗಾರಿನ ಕರಿಮುಗಿಲ ಕಾನನ       ಸುರಿಯುತಿದೆ ಜೀವಹನಿ ತಾನನ       ಚೆಂದದೊಡಲ ಇಳೆಗದು ಸಂಭ್ರಮ       ಬಾಳಿನಂದದಲಿ ಉಸಿರ ನರ್ತನ… ***********

ರುಬಾಯಿ Read Post »

ಕಾವ್ಯಯಾನ

ಅವನು ಗಂಡು

ಚೇತನಾ ಕುಂಬ್ಳೆ ಬೆಳಕು ಹರಿದೊಡನೆ ಹೊಸ್ತಿಲ ದಾಟುವನುಕತ್ತಲಾವರಿಸಿದೊಡನೆ ಮನೆಯ ಕದವ ತಟ್ಟುವನುಉರಿವ ಬಿಸಿಲು, ಕೊರೆವ ಚಳಿ, ಸುರಿವ ಮಳೆಯನ್ನದೆಹಗಲಿರುಳೂ ದುಡಿಯುವನುಯಾಕೆಂದರೆ, ಅವನು ಗಂಡು…ಜವಾಬ್ದಾರಿಗಳ ಭಾರವನ್ನು ಹೆಗಲಲ್ಲಿ ಹೊತ್ತವನು ಮಡದಿಯ ಪ್ರೀತಿಯಲ್ಲಿ ಅಮ್ಮನ ವಾತ್ಸಲ್ಯವನ್ನರಸುವನುಮಕ್ಕಳ ತುಂಟಾಟಗಳಲ್ಲಿ ಕಳೆದ ಬಾಲ್ಯವನ್ನು ಕಂಡು ಸಂಭ್ರಮಿಸುವನುಮುಗಿಯದ ಹಾದಿಯುದ್ಧಕ್ಕೂ ಕನಸ ಬಿತ್ತುತ್ತಾ ನಡೆಯುವನುಹರಿದ ಚಪ್ಪಲಿಗೆ ಹೊಲಿಗೆ ಹಾಕುತ್ತಾಯಾಕೆಂದರೆ,ಅವನು ಗಂಡುಬೆವರ ಹನಿಯ ಬೆಲೆ ಎಷ್ಟೆಂದುಅರಿತವನು ಸ್ವಭಾವ ಸ್ವಲ್ಪ ಒರಟು,ಆದರೂ ಮೃದು ಹೃದಯಮಾತು ಬಲ್ಲವನೇ ಆದರೂ ಮಿತಭಾಷಿಎದೆಯೊಳಗೆ ಹರಿವ ಒಲವ ಝರಿಕೋಪದೊಳಗೆ ಪ್ರೀತಿಯ ಬಚ್ಚಿಟ್ಟವನುಮನದೊಳಗೆ ಮಧುರ ಭಾವನೆಗಳಿದ್ದರೂಮೌನದಲ್ಲಿಯೇ ಎಲ್ಲವನ್ನೂ ಅರ್ಥಮಾಡಿಸುವನುಯಾಕೆಂದರೆ , ಅವನು ಗಂಡುಮನದ ತುಡಿತಗಳೆಲ್ಲವನ್ನು ಅಕ್ಷರಗಳಲ್ಲಿ ಹಿಡಿದಿಡಲರಿಯದವನು ಅನುಭವದ ಬೆಳಕಿನಲ್ಲಿಸರಿತಪ್ಪುಗಳನ್ನು ಹೇಳಿಕೊಟ್ಟುಬಾಳಿನುದ್ಧಕ್ಕೂ ದಾರಿದೀಪವಾದವನುಕಷ್ಟ ಸುಖಗಳಲ್ಲಿ ಹೆಗಲಾದವನುಎದೆ ಹೊತ್ತಿ ಉರಿಯುತ್ತಿದ್ದರೂತುಟಿಗಳಿಗೆ ನಗುವ ಲೇಪಿಸಿಕೊಂಡವನುನೋವಿನಲ್ಲೂ ಅಳಲು ಮರೆತವನುಯಾಕೆಂದರೆ, ಅವನು ಗಂಡುಭಾವನೆಗಳನ್ನು ತೋರ್ಪಡಿಸಲರಿಯದೆ ಎಲ್ಲವನ್ನೂ ಒಳಗೊಳಗೇ ಅದುಮಿಟ್ಟುಕೊಂಡವನು. ********

ಅವನು ಗಂಡು Read Post »

You cannot copy content of this page

Scroll to Top