ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕವಿತೆ ಕಾರ್ನರ್

ಕವಿತೆ ಕಾರ್ನರ್

ಅವಳು ಮತ್ತು ಕವಿತೆ! ಅವಳು ನೋವಿನ ಬಗ್ಗೆ ಕವಿತೆ ಬರೆದಳು ಓದಿದ ಜನ ಅವಳ ನೋವನ್ನು ಸವಿದು ಸಂಭ್ರಮಿಸಿದರುಅದರ ಆಳಅಗಲಗಳ ಅಳೆದು ತೂಗಿದರು ಆ ನೋವಿನ ಉತ್ಕಟತೆಯನ್ನಳೆಯಲುಇರಬಹುದೆಮಾಪಕವೆನಾದರೆಂದು ಅದನೂ ಹುಡುಕಾಡಿದರು ಅವಳ ನೋವಿಗಿರಬಹುದಾದ ಕಾರಣಗಳ ಕುರಿತುಸಂಶೋಧನೆಯನ್ನೇ ನಡೆಸಿದರು ಭಗ್ರಪ್ರೇಮ, ಮುರಿದ ದಾಂಪತ್ಯಹೀಗೆ ಕಾರಣಗಳ ಪಟ್ಟಿ ಮಾಡುತ್ತ ಹೋದರು ನೋವಿಗೂ ಮಾರುಕಟ್ಟೆ ಇದೆಯೆಂದರಿತ ಅವಳುಹೀಗೆಯೇ ವರ್ಷಗಟ್ಟಲೆಕವಿತೆ ಬರೆಯುತ್ತ ಪ್ರಸಿದ್ದಳಾಗುತ್ತ ಹೋದಳು ಅದ್ಯಾಕೊ ಒಂದು ದಿನಬರಿದೇ ನೋವಿನ ಬಗ್ಗೆ ಬರೆಯುವುದು ಬೇಸರವೆನಿಸಿನಗುವಿನ ಬಗ್ಗೆಬರೆಯತೊಡಗಿದಳು. ಅವಳ ನೋವಿಗೆ ಲೊಚಗುಟ್ಟುವುದಕ್ಕೆಒಗ್ಗಿ ಹೋಗಿದ್ದ ಓದುಗರುಅವಳ ಹೊಸ ಕವಿತೆಗಳತ್ತ ತಿರುಗಿಯೂ ನೋಡಲಿಲ್ಲ ಈಗವಳು ನೋವಿಲ್ಲದಿದ್ದರೂ ನಗುನಗುತ್ತಲೇ ನೋವಿನ ಬಗ್ಗೆ ಬರೆಯಲೇ ಬೇಕಾದಗೊಂದಲಕೆ ಸಿಲುಕಿಕೊಂಡಳು ಬಹಳ ಯೋಚಿಸಿದ ಅವಳೊಂದುದಿನಕವಿತೆ ಬರೆಯುವುದ ನಿಲ್ಲಿಸಿನಿಸೂರಾದಳು! ********* ಕು.ಸ.ಮಧುಸೂದನ

ಕವಿತೆ ಕಾರ್ನರ್ Read Post »

ಕಾವ್ಯಯಾನ

ಕಾವ್ಯಯಾನ

ಪ್ರೇಮವೆಂದೂ ಹೇರಲ್ಪಡುವುದಿಲ್ಲ ಪೂರ್ಣಿಮಾ ಸುರೇಶ್ ಪ್ರೇಮವೆಂದೂ ಹೇರಲ್ಪಡುವುದಿಲ್ಲ.ಮತ್ತೆಮತ್ತೆ ನಿನ್ನೆಗಳನುಕರೆತಂದುಎದುರು ನಿಲ್ಲಿಸಿಯುದ್ಧ ಹೂಡುವೆಯೇಕೆ.. ಒಪ್ಪುವೆಜೊತೆ ಸೇರಿಯೇಬುತ್ತಿ ಕಟ್ಟಿದ್ದೆವುನಾಳೆಗೆ ನಡೆವ ನಡೆಎಡವಿದ ಹೆಜ್ಜೆತಿರುವುಗಳುಗಂಧ ಮಾರುತದಸೆಳೆತದಾರಿ ಕವಲಾಗಿನೀನುನೀನಾಗಿ ನಾನು ಒಂಟಿಯಾಗಿಅನಿವಾರ್ಯ ಹೆಜ್ಜೆಗಳು ಅದೆಷ್ಟು ಮಳೆ..ಸುರಿಸುರಿದುಒದ್ದೆ ಒದ್ದೆ ಒಳಕಂಪನ ಹೊರನಡುಕತೊಯ್ದ ಹಸಿವೆಗೆಹಳಸಿಹೋದತಂಗಳು ಬುತ್ತಿಚಾಚಿದ ಕೈ ಬೊಗಸೆಖಾಲಿ ಖಾಲಿ ಹೌದುಅದು ತಿರುವೊಂದರ ಆಕಸ್ಮಿಕಮನಸುಗಳ ಡಿಕ್ಕಿನಡೆದ ಹಾದಿಯ ಬೆವರಿನ ವಾಸನೆಮುಡಿದ ಹೂವಿನ ಘಮತನ್ಮಯತೆಯನುನಮ್ಮೊಳಗೆ ಅರಳಿಸಿತ್ತು ಬಿಗಿದ ತೆಕ್ಕೆ ಸಡಿಲಿಸಲೇ ಬೇಕುಉದುರಿ ಬಿದ್ದ ಹೂ ಎಸಳುಗಳು ಕೊಡವಿಕೊಂಡೆಅಂಟಿದಬೆವರು ಕಳಚುವ ಮಳೆಗೆನಾನೂ ಕಾದೆ ಬೇಡ. ತಂಗಳು ಬಿಡಿಸದಿರುಇರಲಿ ಬಿಡು ಮುದಿಯಾಗದೆ..ಹಾಗೆ. ನನಗೆ ನಾಳೆಗಳಲಿ ನಂಬಿಕೆಯಿದೆಹಳಸಿದ ನಿನ್ನೆಗಳನು ತೆರೆಯಲಾರೆ ಪ್ರೇಮವೆಂದೂ ಹೇರಲ್ಪಡುವುದಿಲ್ಲ *********

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಎದೆಯ ಕದ ತೆರೆದಾಗ. “ಎದೆಯ ಕದವ ತೆರೆಯುತಿರೆ| ಒಳಗೆ ಬೆಳಕು ಹರಿಯಿತು|ಹೂಗಳೆಸಳು ಬಿರಿಯುತಿರೆ |ತುಂಬಿ ಹಾಡು ಮೊರೆಯಿತು”——ಕವಿ ಕಯ್ಯಾರರ ‘ಯುಗಾದಿ’ ಕವನದ ಸಾಲುಗಳಿವು.ಯುಗಾದಿ ಸಮೃದ್ಧಿಯ ಸಂಕೇತ.ಪ್ರಕೃತಿ-ಮಾನವ ಅನುಸಂಧಾನದ ಪ್ರತೀಕ.ಕವಿಗಳು ಪರಿಸರ ಪ್ರೇಮಿಗಳು.ಮಣ್ಣಿನಲ್ಲಿ ಸ್ವರ್ಣವನ್ನು, ಶಿಲೆಯಲ್ಲಿ ಶಿಲ್ಪವನ್ನು ಕಾಣುವವರು.ಎದೆಯ ಕದ ತೆರೆದು ಆತ್ಮದ ಮಿಂಚನ್ನು ಹೊಳೆಯಿಸುವವರು.ಅಂತರಂಗದ ಬೆಳಕಲ್ಲಿ ಬಹಿರಂಗವನ್ನು ಬೆಳಗಿಸುವವರು.ಮೊಗ್ಗು ಹೂವಾಗಿ ದಳ ಬಿರಿದು ನಿಂತಾಗ ಒಂದು ರೀತಿಯ ನಿಸ್ವನ.ಹೂವಿನ ಮಕರಂದ ಹೀರುವ ದುಂಬಿಗಳು,ಝೇಂಕಾರದ ನಾದಮಯತೆ,ನವನವೋನ್ಮೇಷ, ಮಾಧುರ್ಯದ ಮೊರೆತಕ್ಕೆ ಮನವರಳುವುದು ಸಹಜ.ಹೀಗೆ ರವಿ ಕಾಣದ್ದನ್ನು ಕವಿ ಕಂಡೇ ಕಾಣುತ್ತಾನೆ ಎಂಬುದಂತೂ ಸತ್ಯ.“ಎದೆಎದೆಗೂ ವ್ಯತ್ಯಯ ಹಾಳಾಗಲಿ ಎದೆಎದೆ ಗೂಡಲಿ ಹಾಲಾಗಲಿ” ಎಂಬ ವಿ.ಗ ನಾಯಕರ ಸಾಲುಗಳು ಇಲ್ಲಿ ನೆನಪಾಗುತ್ತವೆ.ದ್ವೇಷಿಸುವ ಎದೆಗಳು ಬೇಡ, ಪ್ರೀತಿಸುವ ಎದೆಗಳು ಬೇಕು.ಎದೆಎದೆಗಳ ಮಿಳಿತ ಜೀವಜೀವದ ಸೆಳೆತ.ಎದೆಯ ಆಕಾರಕ್ಕೆ ಆಕರ್ಷಣೆಯಿದೆ.ಹೃದಯದ ತುಡಿತದಲ್ಲಿ ಪ್ರೀತಿಯ ಮಿಡಿತವಿದೆ.ಕವಯಿತ್ರಿ ಆಶಾ ದಿಲೀಪ್ ಸುಳ್ಯಮೆ ಅವರ ಚೊಚ್ಚಲ ಕವನ ಸಂಕಲನದ ಶೀರ್ಷಿಕೆ “ಎದೆಯ ಕದ”.ವಿಷಯ ವೈವಿಧ್ಯತೆಯ ನಲುವತ್ತೆರಡು ಕವನಗಳ ಈ ಸಂಕಲನ 2016 ರಲ್ಲಿ ಬೆಳಕಿಗೆ ಬಂದಿದೆ.ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ನ ಕಲ್ಲೂರು ನಾಗೇಶ್ ಇದರ ಪ್ರಕಾಶಕರು.ಬಿಡುಗಡೆಯಾದ ಸಂದರ್ಭದಲ್ಲಿ ಓದಿ ಖುಷಿ ಪಟ್ಟವರಲ್ಲಿ ನಾನೂ ಒಬ್ಬ.ಈಗ ಮತ್ತೊಮ್ಮೆ ಕಣ್ಣು ಹಾಯಿಸುವ ಅವಕಾಶ ಲಭಿಸಿದೆ.ಕವನಗಳ ಬಗ್ಗೆ ಕೆಲವು ಮಾತುಗಳನ್ನು ಹೇಳ ಬೇಕು ಎನಿಸಿದೆ.ಇಲ್ಲಿ ಕಲೆಹಾಕಿದ ಕವನಗಳೆಲ್ಲವು ಭಾವ ಕೇಂದ್ರಿತ ರಚನೆಗಳು.ಆಶಾ ಅವರು ಭಾವನೆಯ ಬಲೆ ಹೆಣೆದು ಕಾವ್ಯ ಕಟ್ಟಿದ್ದಾರೆ.ಅನುಭವಕ್ಕೆ ದಕ್ಕಿದ್ದನ್ನು ಸಶಕ್ತ ಪದಗಳಲ್ಲಿ ಅಭಿವ್ಯಕ್ತಿಸಿದ್ದಾರೆ.ಎದೆ ಮುಟ್ಟುವ ರಚನೆಗಳಿಗೆ ಭಾವವೇ ಮೂಲದ್ರವ್ಯ ವಾದರೂ ಇಲ್ಲಿ ಎದೆಯ ಕದ ತೆರೆದಾಗ ಅನುಭವದ ಅಂತರ್ಧ್ವನಿ ಅನುರಣಿಸುವುದನ್ನು ಕಾಣಬಹುದು.ಮುನ್ನುಡಿಯಲ್ಲಿ ಸಾಹಿತಿ, ಮಾಧ್ಯಮ ತಜ್ಞ ಡಾ ವಸಂತಕುಮಾರ್ ಪೆರ್ಲ ಅವರು ಹೇಳುವಂತೆ ‘ಈ ಸಂಕಲನದಲ್ಲಿ ಮನೆ, ಮಕ್ಕಳು, ಸಂಸಾರ ಜೊತೆಗೆ ಕೆಲವು ಪ್ರಕೃತಿ ಚಿತ್ರ ಗಳು ಇವೆ.ಎಲ್ಲವುಗಳ ಕಡೆಗೆ ಒಂದು ಸಹೃದಯ ವೀಕ್ಷಣೆ ಕವಯಿತ್ರಿಯಲ್ಲಿ ಕಂಡುಬರುತ್ತದೆ.ಚಿತ್ರಕ ಸನ್ನಿವೇಶವೊಂದನ್ನು ಕೊಡುತ್ತಲೇ ಅದರಾಚೆಗಿನ ಅರ್ಥ ಭಾವಗಳನ್ನು ಭಾಷಿಕ ಸಂವಿಧಾನದ ಮೂಲಕ ಕಟ್ಟಿಕೊಡುವ ಪರಿ ಸಂತೋಷ ಕೊಡುತ್ತದೆ.ಈ ಮಾತಗಳು ಎದೆಯ ಕದ ತೆರೆದು ನೋಡುವ ಕುತೂಹಲ ವನ್ನು ಹೆಚ್ಚಿಸುತ್ತದೆ’.ಕಾವ್ಯ ಸಹಜವಾಗಿ ಹುಟ್ಟು ವ ಕ್ರಿಯೆ.ಅತಿಯಾದ ನೋವು ಮತ್ತು ಸಂತೋಷವಾದಾಗ ಜೀವ ಪಡೆಯುತ್ತದೆ.ಇದು ಆಶಾ ಅವರು ಕಂಡುಕೊಂಡ ಸತ್ಯ.ಮೌನರೋದನದಲ್ಲಿ ರೋಮಾಂಚನದ ಉತ್ತುಂಗದಲ್ಲಿ ಸುಖದುಃಖದ ಕಟ್ಟೆಯೊಡೆದು ಕಾವ್ಯಕನ್ನಿಕೆ ಹುಟ್ಟುತ್ತಾಳೆ ಎಂಬುದು ಅನುಭವ ಜನ್ಯ.ಆದರೆ ‘ಬರೆಯಲು ಹೊರಟರೆ ಸುಂದರ ಕವಿತೆ| ಪದಗಳ ಮರ್ಮವ ಅರಿಯದೆ ಹೋದೆ’ ಎಂಬ ಮರುಕ ‘ಒಂಟಿ ನಾನು’ ಕವನದಲ್ಲಿದೆ.ಕ ವಯಿತ್ರಿ ‘ಭಾವ ಜೀವ ರಸಿಕನೆದೆಗೆ ದಾಳಿಯಿಡುವ ಕವಿಯು ನಾನಾಗ ಬೇಕು| ನನ್ನ ಕವಿತೆಯ ಪ್ರಾಸ ನೀನಾಗ ಬೇಕು|ನಾ ಭಾವವಾದರೆ ಜೀವ ನೀನಾಗ ಬೇಕು’ ಎಂಬ ಆಶಯವನ್ನು ವ್ಯಕ್ತಪಡಿಸುತ್ತಾರೆ.ನಲ್ಲೆಯ ನಲ್ನುಡಿ ಯ ಕೇಳದೆ ವಿಚಲಿತನಾದ ನಲ್ಲ ಆಸೆ ಮುತ್ತುಗಳ ಪೋಣಿಸುತ ಎದೆ ಬಾಗಿಲಿಗೆ ತೋರಣ ಕಟ್ಟಿ ಕಾಯುತ್ತಾನೆ.ಏಕಾಂಗಿಯಾಗಿರುವ ಆತನ ಭಾವನೆಗಳು ಬಂಧನಕ್ಕೊಳಗಾಗಿದೆ. ‘ನನ್ನೆದೆಯ ಕದವನ್ನು’ ಸರಳತೆ ಮತ್ತು ಆರ್ದ್ರತೆಗಳಿಂದ ಗಮನ ಸೆಳೆಯುತ್ತದೆ.ಸಂಕಲನದ ಮೊದಲ ಕವಿತೆ ‘ಯಾವ ಮಾಯೆಯಮ್ಮಾ’ ಜೀವದನಿ ತುಂಬಿ ಕೊಂಡ ಭಾವ ಗೀತೆ.ಹೆಣ್ಣು ಮಾಯೆ ಆಕೆಯ ಮಹಿಮೆ ಅಪಾರ.ಸಕಲ ಜೀವದ ಭಾಗ್ಯ ದಾಯಿನಿ ಆಕೆ.’ಅಷ್ಟವೈರಿಗಳನ್ನು ದಮನಮಾಡಿಸಿ| ಸ್ವರ್ಗ ದಾರಿಯಲ್ಲಿ ನಮ್ಮನ್ನು ನಡೆಸು’ ಎಂಬ ಪ್ರಾರ್ಥನೆ (ಗೀತೆ)ಯಾಗಿಯೂ ಈ ರಚನೆ ಸಲ್ಲುತ್ತದೆ.ತಾಯಿಗೆ ಮಕ್ಕಳು ಅಂದರೆ ಮಮತೆ.ಹೊತ್ತು ಸಲಹಿದಾಗ ಕಂದನ ಮುಖವರಳುವುದು ಸಹಜ.ಆದು ಹೆತ್ತ ನೋವನ್ನು ಮರೆಸುತ್ತದೆ.’ಅಮ್ಮ ಎನ್ನುವ ಕಂದನ ಕೂಗಲಿ|ಬ್ರಹ್ಮಾಂಡದ ಭವ್ಯತೆ ಅಡಗಿತ್ತು’ (ಅಮ್ಮ) ಎಂಬೀ ಸಾಲುಗಳಲ್ಲಿ ದರ್ಶನದ ಕಲ್ಪನೆಯಿದೆ.ಮಹಿಳೆ ಎಂದರೆ ಮಹಾ ಇಳೆ.ಸಕಲ ಚರಾಚರಗಳಿಗೂ ಜೀವ ಚೈತನ್ಯ ನೀಡುವವಳು.ಮಹಿಳೆ ತಾಯಿಯೂ ಹೌದು.ಭೂದೇವಿಯೂ ಹೌದು.’ಭರತ ಭೂಮಿ ವಿಶ್ವ ವಂದ್ಯೆ ಜನ್ಮದಾತೆಯು’ಎಂದು ಆರಂಭವಾಗುವ ‘ಭರತಭೂಮಿ ವಿಶ್ವ ವಂದ್ಯೆ’ ಎನ್ನುವ ಕವನದಲ್ಲಿ ದೇಶಪ್ರೇಮವುಕ್ಕಿಸುವ ಭಾವನೆಗಳಿವೆ.’ವೇಷ ಬೇರೆ ಭಾಷೆ ಬೇರೆ ಒಲವು ಮೆರೆಯಲಿ |ಪ್ರೀತಿ ಉಳಿದು ದ್ವೇಷ ಅಳಿದು ನಗೆಯು ಚಿಮ್ಮಲಿ’ ಎಂಬ ಆಶಯವಿದೆ.ಬದುಕಿನ ಉನ್ಮಾದ’ ವಿಷಾದ,ಪ್ರೀತಿ ,ತೀವ್ರತೆಯನ್ನು ಆಪ್ತವಾಗಿ ಕಟ್ಟಿಕೊಡುವ ‘ತೂಗದ ತೊಟ್ಟಿಲು’ ಅಂತರಂಗದ ನಿಸ್ವನ.’ಒಲುಮೆ ತುಂಬಿದ ಮನೆಯಲ್ಲಿ| ತೂಗಲಿಲ್ಲ ತೊಟ್ಟಿಲು| ಕೊನೆಗೂ ಕಂದನ ಕನಸು ಕಾಡಿದೆ|ಬರಿದಾಗಿದೆ ಮಡಿಲು’.ಬದಲಾವಣೆಯ ಕಾಲಘಟ್ಟದಲ್ಲಿ ಪ್ರೀತಿ ಮಮಕಾರ ಯಾಂತ್ರಿಕವಾದಾಗ,ಸಹಜತೆಯ ಒರತೆ ಬತ್ತಿ ಹೋಗುವುದನ್ನು ಇಲ್ಲಿ ಕಾಣಬಹುದು.ದಾರ್ಶನಿಕ ಹೊಳಹು ಗಳನ್ನು ನೀಡುವ ‘ಆತ್ಮದೇಗುಲ’ದಲ್ಲಿ ‘ಬಾಳ ಹಾದಿ ಚಿಮ್ಮಿ ನಗಲಿ ಹೂವ ಹಾಸಿಗೆ| ಒಲವ ಧಾರೆ ಹರಿದು ಬರಲಿ ಬಾಳ ಹಣತೆಗೆ’ ಎಂಬ ಆಶಯವಿದೆ.’ಸಿಹಿಯುಂಟು ಕಹಿಯುಂಟು ಜೀವನ ಯಾತ್ರೆಲಿ| ಮರೆಯಲು ಕಲಿತೋನೆ ಜಾಣ ಈ ಜಗದಲಿ’ ಈ ವಾಸ್ತವ ಸತ್ಯ ‘ಹೋಗೋಣ ಬಾರೆ’ ಕವನದಲ್ಲಿದೆ.‘ವಂದನೆ-ಅಭಿನಂದನೆ’ಯಲ್ಲಿ ಸಾಮರಸ್ಯದ ಸಂದೇಶವಿದೆ.’ಹಿಂದೂ ಸಿಖ್ಖ ಕ್ರೈಸ್ತ ಮುಸಲ್ಮಾನರು| ಒಟ್ಟಿಗೆ ಬದುಕುವ ರೀತಿಯೆ ಅಭಿಮಾನವು’ ನಿಜವಾಗಿಯು ಇದು ಹೆಮ್ಮೆಯ ವಿಷಯ. ಸ್ವಾತಂತ್ರ್ಯ ಸಿಕ್ಕಿ ವರ್ಷಗಳೇ ಸಂದರೂ ಅಳಿಯಲಿಲ್ಲ ಗುಲಾಮಗಿರಿ.’ಎಲ್ಲಿದೆ ಸಮಾನತೆ ಮೀಸಲಾತಿ| ಸ್ತ್ರೀ ಸ್ವಾತಂತ್ರ್ಯದ ಅನುಭೂತಿ’ ಎಂಬುದು ಉತ್ತರ ಸಿಗದ ಪ್ರಶ್ನೆಯಾಗಿಯೇ ಉಳಿದಿದೆ.ಹಳತಿಗೆ ವಿದಾಯ, ಹೊಸತಿಗೆ ಸ್ವಾಗತ ಹೇಳುವ ಸಂದರ್ಭವನ್ನು ನೆನಪಿಸುವ ‘ವಿದಾಯ’ ವರ್ತಮಾನದ ವೈಚಿತ್ರ್ಯ ವನ್ನು ಧ್ವನಿಸುವ ‘ನಲುಗುತ್ತಿದೆ ವರ್ತಮಾನ’ಕನಸು ಭ್ರಮೆಯಾಗಿ ಕಾಡುವ ಘಟನೆಗಳನ್ನು ಪಲ್ಲವಿಸುವ ‘ಭ್ರಮೆ’ ಅರ್ಥ ಸಂಚಲನ ಮೂಡಿಸುತ್ತದೆ.ವಿಕೃತ ಮನಸುಗಳ ಅಮಾನುಷ ವರ್ತನೆಗಳಿಗೆ ಮುಖಾಮುಖಿ ಯಾಗುವ ‘ಭಯಾನಕ ರಾತ್ರಿ’ಯಲ್ಲಿ ಸೂಚ್ಯಾರ್ಥವಿದೆ.ಇಂಟರ್ನೆಟ್ ಯುಗದಲ್ಲಿ ಭಾವನೆಗಳ ಒರತೆ ಬರಿದಾಗುವ ಸಂದಿಗ್ಧ ಪರಿಸ್ಥಿತಿ ‘ಒಂಟಿ ಹಕ್ಕಿಯ ಮರ್ಮರ’ದಲ್ಲಿದೆ. ಪರಿಸರವನ್ನು ಉಳಿಸಬೇಕಾದ ಅನಿವಾರ್ಯತೆ ‘ಕೆಡಿಸದಿರು ಪರಿಸರವ’ಕವನ ಸಾರಿ ಹೇಳುತ್ತದೆ.’ಗೆಳತಿ’,’ಕಳೆದು ಹೋದ ಬಾಲ್ಯ’,’ಅರಳುವ ಹೂಗಳು’ ‘ನೆನಪಿದೆಯಾ ಗೆಳತಿ’ ಭಾವನೆಗಳಿಗೆ ಶಬ್ದ ರೂಪ ಕೊಡುವ ಕ್ರಿಯೆಯಲ್ಲಿ ಯಶಸ್ವಿಯಾಗಿದೆ.ಪ್ರೀತಿ ವಾತ್ಸಲ್ಯಕ್ಕಾಗಿ ಕವಯಿತ್ರಿಯ ‘ಹಂಬಲ’ ಸಾರ್ವಕಾಲಿಕ ಮೌಲ್ಯ ಪಡೆದ ಕವನವಾಗಿ ಸಲ್ಲುತ್ತದೆ.ಸರಳವಾಗಿ ಹೇಳುತ್ತಲೇ ಸಂಕೀರ್ಣವಾಗುವ ರಚನೆಗಳೂ ಸಂಕಲನದಲ್ಲಿ ಇಲ್ಲದ್ದಿಲ್ಲ.ನವೋದಯದ ನಾದಮಯತೆ,ನವ್ಯದ ಧ್ವನಿ ಶಕ್ತಿ ಆಶಾ ದಿಲೀಪ್ ಅವರ ಕವನಗಳಲ್ಲಿ ಕಾಣಬಹುದು.ಹೆಚ್ಚಿನವುಗಳೂ ಗೇಯತೆಯ ರಚನೆಗಳು.ಸಂದರ್ಭೋಚಿತವಾಗಿ ಬರೆದವುಗಳು.ಅವರ ಭಾಷೆ,ಭಾವ, ಲಯ ಆಪ್ತವಾಗುತ್ತದೆ.ಪ್ರತಿಮೆ ಸಂಕೇತಗಳಿಂದ ತಾಜಾ ಅನಿಸುತ್ತದೆ.ಗೌರವಾನ್ವಿತ ಗುರು ಸಾವಿತ್ರಿ ಎಸ್ ರಾವ್ ‘ಎದೆಯ ಕದ’ಕ್ಕೆ ಬೆನ್ನುಡಿ ಬರೆದಿದ್ದಾರೆ.ಆಶಾ ಅವರ ಕ್ರಿಯಾಶಕ್ತಿ, ಧೀಶಕ್ತಿಗೆ ಕನ್ನಡಿ ಹಿಡಿದಿದ್ದಾರೆ. ******* ರಾಧಾಕೃಷ್ಣ ಕೆ ಉಳಿಯತ್ತಡ್ಕ

ಪುಸ್ತಕ ಸಂಗಾತಿ Read Post »

ಇತರೆ, ಜೀವನ

ಪ್ರಸ್ತುತ

ಮತ್ತೆ ಕಾಣಬಲ್ಲೆವೇ ಆ ದಿನಗಳನು..? ಮಲ್ಲಿಕಾರ್ಜುನ ಕಡಕೋಳ ದುರಿತಕಾಲ ಎಂಬ ಪದ ನಾವೆಲ್ಲ ಬರಹಗಳಲ್ಲಿ ಸೂಕ್ಷ್ಮತೆಯಿಂದ ಬಳಕೆ ಮಾಡಿದ ಪರಿಚಯವಿತ್ತು. ಪ್ರಸ್ತುತ ನಾವು ಅನುಭವಿಸುತ್ತಿರುವ ಖರೇ, ಖರೇ ದುರಿತಕಾಲದ ಈ ದಿನಗಳಿಗೆ ಕೊನೆಯೆಂಬುದು ಯಾವಾಗ ಎಂಬ ದುಗುಡ ನಮ್ಮನ್ನೀಗ ಘೋರವಾಗಿ ಬಾಧಿಸುತ್ತಿದೆ. ಅಷ್ಟಕ್ಕೂ ಕೊರೊನಾದ ಈ ಕಾಲಘಟ್ಟಕ್ಕೆ ಕೊನೆಯೆಂಬುದು ಇದೆಯೋ, ಇಲ್ಲವೋ ಎಂಬ ಕ್ರೂರ ಆತಂಕ. ಹಗಲು ರಾತ್ರಿಗಳೆನ್ನದೇ ಕಿವಿ, ಕಣ್ಣು, ಬಾಯಿ, ಮೂಗು, ಮನಗಳ ತುಂಬೆಲ್ಲ ಸೋಂಕಿತರು, ಶಂಕಿತರು, ರೆಡ್ ಝೋನ್, ಎಲ್ಲೋ ಝೋನ್, ಪೋಲಿಸರು, ವೈದ್ಯರಿಗೇ ಸೋಂಕು ಪದಗಳ ರಕ್ಕಸ ಕುಣಿತ. ಇವುಗಳ ಜೊತೆಗೆ ಜಾಗತಿಕ ಮಟ್ಟದ ಲಕ್ಷ ಲಕ್ಷ ಸಂಖ್ಯೆಯ ಸಾವು ನೋವಿನ ಅಂಕಿ ಅಂಶಗಳ ರುದ್ರನರ್ತನ. ಹುಟ್ಟೂರಿಗೆ ಹೋಗಿಯೇ ಸಾಯಬೇಕೆಂಬ “ಬದುಕಿಗಾಗಿ” ರಹದಾರಿಗಳಿಲ್ಲದೇ ಸಾವಿರಾರು ಮಂದಿ ನೂರಾರು ಹರದಾರಿ ನಡಕೊಂಡೇ ಹೋದವರು. ಹಾಗೆ ನಡಕೊಂಡು ಹೋಗುವ ನಡುದಾರಿಯಲ್ಲೇ ನೀರು – ಕೂಳಿಲ್ಲದೇ ಪ್ರಾಣಬಿಟ್ಟ ಬಸುರಿ – ಬಾಣಂತಿ, ತಾಯಿಮಕ್ಕಳ ಸಂಕಟದ ಸಾಲು ಸಾಲು ಸರಗಥೆಗಳು. ಹೀಗೆ ಅರಣ್ಯ ರೋದನವಾಗುತ್ತಿರುವ ಒಂದೆರಡಲ್ಲ ನಿತ್ಯವೂ ನೂರಾರು ಸಂಕಟಗಳ ಕರುಳು ಹಿಂಡಿ ಹಿಪ್ಪೆಮಾಡುವ ದೃಶ್ಯಗಳಿಗೆ ಕೊನೆಯೆಂಬುದಿದೆಯೇ ? ಇದ್ದರೆ ಯಾವಾಗ..? ಕೊರೊನಾ ಸಂದರ್ಭದಲ್ಲಿ ಮನುಷ್ಯ, ಮನುಷ್ಯರ ನಡುವಿನ ದೈಹಿಕ ದೂರ ಕಾಪಾಡಬೇಕೆಂಬುದು ವೈಜ್ಞಾನಿಕ ಸತ್ಯ. ವಿದೇಶಗಳಲ್ಲಿ ಸೋಶಿಯಲ್ ಗ್ಯಾದರಿಂಗ್ ಹಿನ್ನೆಲೆಯಲ್ಲಿ ಸೋಶಿಯಲ್ ಡಿಸ್ಟನ್ಸ್ ಎಂದು ಕರೆದಿರಬಹುದು. ಆದರೆ ಬಹುತ್ವ ಭಾರತದ ಸಂದರ್ಭದಲ್ಲಿ ಅದನ್ನು ಸಾಮಾಜಿಕ ಅಂತರ ಎಂಬ ಹೆಸರಿಂದ ಕರೆಯುವ ಮೂಲಕ ಅದು ಭಯ ಮೂಲದ್ದು ಎಂಬುದು ಮಾತ್ರವಲ್ಲದೇ ಜನಸಂಸ್ಕೃತಿ ವಿರೋಧಿಜನ್ಯ ಭಾವಕ್ಕೆ ಹತ್ತಿರವಾಗಿದೆ. ಅದು ವ್ಯಕ್ತಿಗತ ಅಥವಾ ದೈಹಿಕ ಅಂತರ – ದೂರ ಎಂಬುದು ವಾಸ್ತವವೇ ಆದರೂ ಹಾಗೇಕೆ ಕರೆಯುತ್ತಿಲ್ಲ.? ಮಡಿ – ಮೈಲಿಗೆ ಎಂಬಂತೆ ಸಾಮಾಜಿಕ ಅಂತರ ಎಂದು ಕರೆಯುವ ಮೂಲಕ ಅದು ಹುಟ್ಟುಹಾಕುತ್ತಿರುವ ಭಯ ಮಾತ್ರ ಭಯಂಕರ. ಕೊರೊನಾಗಿಂತ ಕೊರೊನಾ ಕುರಿತು ಹುಟ್ಟಿಕೊಂಡಿರುವ ಈ ತೆರನಾದ ಆತಂಕಕಾರಿ ಜೈವಿಕ ಸಂಸ್ಕೃತಿ (Bio Culture) ಬಣ್ಣಿಸಲಸದಳ. ಈ ಕೊರೊನಾಮಾರಿ ಮನುಷ್ಯ ಮನುಷ್ಯರ ನಡುವಿನ ಜೀವ ಸಂಬಂಧಗಳನ್ನು ನಿರ್ನಾಮಗೊಳಿಸುತ್ತಿದೆ. ಜೀವ ಕಕುಲಾತಿಯ ಸಹಬಾಳ್ವೆ, ಸಹಿಷ್ಣುತೆ, ಸಮಷ್ಟಿ ಪ್ರಜ್ಞೆಯ ಸಾಮೂಹಿಕ ಬದುಕು ಮತ್ತೆ ಮರಳಿ ಬರುವುದೇ ಎಂಬ ಶಂಕೆ. ಒಡೆದು ಹೋಗುತ್ತಿರುವ ಸಹಮತದ ಜೀವಗನ್ನಡಿ ಹರಳು ಮತ್ತೆ ಬೆಸೆದೀತೇ.? ಎಲ್ಲವೂ ಸರಿಯಾಗುವವರೆಗೆ ಲಾಕ್ ಡೌನ್, ಸೀಲ್ ಡೌನ್ ಪ್ರಕ್ರಿಯೆಗಳು ಮುಂದುವರೆದರೆ ನಾವೆಲ್ಲ ಬದುಕುಳಿಯಬಹುದೇ.? ಹೀಗೆ ಏನೇನೋ ಜೀವದುಸಿರು ಸೂತಕದ ಆಲೋಚನೆಗಳು. ಸಣ್ಣದೊಂದು ಸಮಾಧಾನದ ಸಂಗತಿಯೆಂದರೆ ಟೀವಿಗಳಲ್ಲಿ ಗಂಟೆಗಟ್ಟಲೇ ಕೊರೆಯುತ್ತಿದ್ದ, ಮನುಕುಲದ ಉದ್ದಾರಕ್ಕಾಗಿಯೇ ಹುಟ್ಟಿ ಬಂದವರಂತೆ ತರಹೇವಾರಿ ಫೋಸು ಕೊಡುತ್ತಿದ್ದ ದೇವಮಾನವ ನಾಮಾಂಕಿತ ಜೋತಿಷಿಗಳು ನಾಪತ್ತೆಯಾಗಿದ್ದಾರೆ. ಕೊರೊನಾ ಹೋದಮೇಲೂ ಅವರು ಮತ್ತೆ ಬಾರದಿರಲಿ. ಆಯುರ್ವೇದ, ಅಲೋಪತಿ, ಸಿದ್ಧ, ಹೋಮಿಯೋಪಥಿ ಯಾವುದರಲ್ಲಿ ಇದಕ್ಕೆ ನೆಟ್ಟಗಾಗುವ ಮದ್ದಿದೆ ? ದಿನಕ್ಕೊಂದಲ್ಲ ಹತ್ತಾರು, ನೂರಾರು ತರಹೇವಾರಿ ಸುದ್ದಿಗಳಿಂದ ಬದುಕು ಅಕ್ಷರಶಃ ಗದ್ಗದಿತವಾಗಿದೆ. ಸಾವಿಗಿಂತಲೂ ಸಾವಿನ ಕುರಿತಾದ ಸಾವಿನಪ್ಪನಂತಹ ಸುದ್ದಿಗಳನ್ನು ಜೀರ್ಣಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ತಿಂಗಳೊಪ್ಪತ್ತಿನಿಂದ ನಾಗಾಲೋಟದಲ್ಲಿ ನೂರಿನ್ನೂರನೇ ಪ್ರಯೋಗದಲ್ಲಿ ಮುನ್ನುಗ್ಗುತ್ತಿರುವ ಪ್ರಸಿದ್ಧ ಕಂಪನಿ ನಾಟಕಗಳ ಪ್ರಯೋಗಗಳಂತೆ. ಆದರಿದು ಕುಪ್ರಸಿದ್ಧವಾಗುತ್ತಿರುವ ಕೊರೊನ ಎಂಬ ಮಹಾರಾಕ್ಷಸತ್ವದ ಕರಾಳ ಕಥೆ. ಮನುಷ್ಯರ ಬದುಕು ಬರ್ಬರಗೊಳ್ಳುತ್ತಿರುವ ದುಃಖಸಾಗರದ ಕಥೆ. ಜನರ ಜೀವನ ಅಕ್ಷರ ಅಕ್ಷರಶಃ ತತ್ತರಿಸಿ ಹೋಗಿದೆ. ಆದರೆ ಇಂತಹ ಸಂಕಟಗಳನ್ನು ಹಾಡು, ರೂಪಕ, ಸಣ್ಣಾಟ, ಜಾನಪದ, ಪ್ರಹಸನ, ಕವನ ಮುಂತಾದ ಪ್ರಕಾರಗಳಲ್ಲಿ ಜನಕಲಾವಿದರು ತೋರಿಸುವ ಕ್ರಿಯಾಶೀಲತೆ ಮಾತ್ರ ತುಂಬಾ ಚುರುಕಾಗಿದೆ. ಬಡವರು ಸತ್ತಾರ ಸುಡಲಾಕ ಸೌದಿಲ್ಲ ! ಶಿವನೇ ಬಡವರಿಗೆ ಸಾವು ಕೊಡಬೇಡ !! ಸಾವಿನ ಘನಘೋರ ಸಂದರ್ಭದಲ್ಲೂ ನಮ್ಮ ಜನಪದರ ಕರುಳಿನ ಸಂಕಟ ಕೊರಳ ಸಿರಿಕಂಠದ ಮೂಲಕ ಜೀವದ ಹಾಡಾಗಿ, ಪಾಡಾಗಿ ಹೊರಹೊಮ್ಮುತ್ತದೆ. ಅದು ನಮ್ಮ ಜೀವಪರ ಜನಸಂಸ್ಕೃತಿ. ಅದು ಶಿವಸಂಸ್ಕೃತಿ. ಸಾವಿನ ಬಗ್ಗೆ ಅವರಿಗೆ ಭಯವಿಲ್ಲ. ಆದರೆ ಸತ್ತರೆ ಸುಡಲು ಸೌದೆಇಲ್ಲ. ಅದಕ್ಕೆಂದೇ ಶಿವನೆ ಬಡವರಿಗೆ ಸಾವು ಕೊಡಬೇಡವೆಂದು, ಅವರು ಬಡತನದ ಬೇಗೆಯಲ್ಲೇ ಬೆಂದುಹೋಗುವ ಸತ್ಯದ ಮೊರೆತ ಅವರದು. ಒಡಲುಗೊಂಡವ ಹಸಿವ, ಒಡಲುಗೊಂಡವ ಹುಸಿವ, ಒಮ್ಮೆ ನೀನು ಒಡಲುಗೊಂಡು ನೋಡಾ ರಾಮನಾಥ., ಎಂದು ದೇವರ ದಾಸಿಮಯ್ಯ ದೇವರಿಗೆ ಹಾಕುವ ಒಡಲಿನ ಸವಾಲು, ಪ್ರಪಂಚದ ಯಾವ ವೇದಾಂತ, ಸಿದ್ದಾಂತ, ಸಾಹಿತ್ಯ ಹೇಳಿಲ್ಲ. ಇಂತಹ ಪರಮಸತ್ಯದ ಸವಾಲು ನಮ್ಮ ಸಂಸ್ಕೃತಿ. ಈಗ ಅವುಗಳಿಗೆ ಸಾಮಾಜಿಕ ಜಾಲತಾಣಗಳೇ ಬಹುದೊಡ್ಡ ಮಾಧ್ಯಮ. ಜನಸಮೂಹದ ನೆಲೆದಾಣಗಳಲ್ಲಿ ಸಾರ್ವತ್ರಿಕ ಅವಕಾಶಗಳಿಲ್ಲವಾದ್ದರಿಂದ ಸಧ್ಯಕ್ಕೀಗ ಸಾಮಾಜಿಕ ಅಂತರ ಕಾಪಾಡಿಕೊಂಡಿರುವ ಸಾಮಾಜಿಕ ಜಾಲತಾಣಗಳೇ ಏಕೈಕ ಸಂವಹನ ಸಾಧನಗಳು. ನಾಕೈದು ತಿಂಗಳುಕಾಲ ಅಂದರೆ ಬೇಸಿಗೆಯ ಆರಂಭದ ಒಂದೆರಡು ವಾರ ಮೊದಲೇ ಆರಂಭಗೊಂಡು ಮಿರುಗ (ಮೃಗಶಿರ)ದ ಮಳೆಯವರೆಗೂ ನಾಡಿನ ತುಂಬಾ ಜರುಗುವ ಜಾತ್ರೆ, ಸಾಂಸ್ಕೃತಿಕ ಹಬ್ಬ ಹರಿದಿನಗಳದ್ದೇ ಸಂಭ್ರಮ, ಸಡಗರ. ಜನವರಿ ತಿಂಗಳು ಬಹುಪಾಲು ಸಂಕ್ರಮಣಕ್ಕೆ ಮೊದಲೇ ಆರಂಭಗೊಳ್ಳುವ, ಜನಜೀವಾಳವೇ ಆಗಿರುವ ರೈತಾಪಿ ಬದುಕಿನ ಸುಗ್ಗಿ, ದೇವರು ದಿಂಡರ ಪರಿಷೆ, ಜನಪದರ ಜಾತ್ರೆ, ಸಾರ್ವಜನಿಕ ಪ್ರೀತಿ ಹುಟ್ಟಿಸುವ ಹತ್ತು ಹಲವು ಮಹೋತ್ಸವಗಳ ಸಾಂಸ್ಕೃತಿಕ ಸುಗ್ಗಿಯಕಾಲ. ಜನವರಿಯಿಂದ ಮೇ, ಜೂನ್ ಮುಗಿಯೋಮಟ ಜನಸಂಸ್ಕೃತಿಯ ಕಲಾಪ್ರದರ್ಶನಗಳಿಗೆ ಹೇಳಿ ಮಾಡಿಸಿದ ಕಾಲ. ರೈತಾಪಿ ಕೆಲಸಗಳು ಮುಗಿದು ಜನರ ಬದುಕಿನ ಸಾಹಿತ್ಯ, ಹಾಡು, ಕುಣಿತ ಒಟ್ಟು ಎಲ್ಲ ಕಲಾಪ್ರಕಾರ ಪ್ರದರ್ಶನಗಳ ಸಂಭ್ರಮಕಾಲ. ಸಡಗರದ ಕಾಲ. ಈ ಸಡಗರ ಸಂಭ್ರಮಗಳಿಗೆ ಈ ಬಾರಿ ಅವಕಾಶವೇ ಇಲ್ಲವಾಯಿತು. ಕೊರೊನಾ ಇಲ್ಲದಿದ್ದರೆ ಇದು ತಿಂಗಳುಗಳ ಕಾಲ ಜಾತ್ರೆಗಳು ಜರುಗುವ ಸಮಯ. ಜಾತ್ರೆಗಳಲ್ಲಿ ನಾಟಕ ಕಂಪನಿಗಳಿಗೆ ರಂಗನಾಟಕಗಳ ಬಂಪರ್ ಸುಗ್ಗಿಯ ಸಂಭ್ರಮ. ಪುಣ್ಯಕ್ಕೆ ನಾಟಕಗಳ ಜಾತ್ರೆಯೆಂದೇ ಪ್ರಸಿದ್ದವಾದ ಬನಶಂಕರಿ ಜಾತ್ರೆಯ ಸದುಪಯೋಗ ಹನ್ನೊಂದು ನಾಟಕ ಕಂಪನಿಗಳು ಮಾಡಿಕೊಂಡವು. ಆ ನಂತರ ಮಾರ್ಚ್ ಮೊದಲ ವಾರದಿಂದ ಜಾತ್ರೆಯ ಕ್ಯಾಂಪುಗಳದ್ದು ನೋವಿನ ಮಜಕೂರ. ಕಲಾವಿದರ ನಿತ್ಯದ ಬದುಕಿಗೂ ತತ್ವಾರ. ನಾಟಕ ಕಂಪನಿಗಳ ಕಲಾವಿದರೆಲ್ಲ ಮನೆ ಸೇರಿದ್ದಾರೆ. ಹಳ್ಳಿಯ ಜಾತ್ರೆಗಳಲ್ಲಿ ಜರುಗುವ ವೃತ್ತಿರಂಗ ನಾಟಕಗಳಲ್ಲಿ ಅಭಿನಯಿಸುವ ನೂರಾರು ಮಂದಿ ಹವ್ಯಾಸಿ ಕಲಾವಿದೆಯರು ನಿರುದ್ಯೋಗದ ನಿಟ್ಟುಸಿರು ಬಿಡುತ್ತಿದ್ದಾರೆ. ಮುಖ್ಯವಾಗಿ ಮದುವೆಗಳ ಸೀಜನ್ ಇದಾಗಿತ್ತು. ಮಂಗಳವಾದ್ಯ ನುಡಿಸುವ ಕಲಾವಿದರಿಗೆ ಅಗ್ನಿಪರೀಕ್ಷೆಯಂತಹ ಬದುಕಿನ ಪ್ರಶ್ನೆಯ ಸಮಯ. ಅವರ ಕುಟುಂಬ ನಿರ್ವಹಣೆ ಅಕ್ಷರಶಃ ಸಂಕಟಮಯ. ಸಿನೆಮಾ, ಧಾರಾವಾಹಿಗಳಲ್ಲಿ ಕೆಲಸ ಮಾಡುವ ಕಲಾವಿದರು, ತಂತ್ರಜ್ಞರ ಜೀವನ ಸಂಕಷ್ಟಕ್ಕೀಡಾಗಿದೆ. ಪುಸ್ತಕಗಳ ಪ್ರಕಟಣೆ ಸ್ಥಬ್ಧಗೊಂಡಿದೆ. ಹೀಗೆ ವಿರಮಿಸಿರುವ ಸಂಸ್ಕೃತಿ ಸಂಬಂಧಿತ ಬಹುದೊಡ್ಡ ಪಟ್ಟಿಯೇ ಇದೆ. ಹಳ್ಳಿ, ಪಟ್ಟಣ, ನಗರಗಳೆನ್ನದೇ ಬೇಸಿಗೆ ಶಿಬಿರಗಳು ಸಂಸ್ಕೃತಿಯ ಸಮೃದ್ಧತೆಯನ್ನು ಮಕ್ಕಳಿಗೆ ಉಣ ಬಡಿಸುತ್ತಿದ್ದವು. ಮಕ್ಕಳಿಗೆ ಅಭಿನಯ, ಸಂಗೀತ, ಅಜ್ಜಿಹೇಳುವ ಕಥೆ, ಚಿತ್ರಕಲೆ ಕಲಿಕೆ ಹೀಗೆ ಹೊಸತನದ ಸೃಜನಶೀಲತೆಗಳಿಗೆ ಮಕ್ಕಳನ್ನು ಸಿದ್ಧಗೊಳಿಸುವ ಎಲ್ಲಕ್ಕೂ ಕೊರೊನಾ ಕಲ್ಲು ಬಿದ್ದಿದೆ. ಸರಕಾರದ ರಂಗಾಯಣಗಳು ಮಕ್ಕಳಿಗೆ ಬೇಸಿಗೆ ಶಿಬಿರಗಳನ್ನು ನಡೆಸುತ್ತಿದ್ದವು. ಖಾಸಗಿಯಾಗಿ ಸಂಘ ಸಂಸ್ಥೆಗಳು ಅಲ್ಲಲ್ಲಿ ಜರುಗಿಸುತ್ತಿದ್ದ ಇಂತಹ ನೂರಾರು ಶಿಬಿರಗಳು ಸಂಸ್ಕೃತಿಯ ವಿವಿಧ ಮಜಲುಗಳ ಬೃಹತ್ ಕಾರ್ಯಾಗಾರ, ಕಮ್ಮಟ, ಸಮಾವೇಶಗಳು ನಾಡಿನ ಸಂಸ್ಕೃತಿ ಬಿಂಬಿಸುವ ಅವಕಾಶಗಳಾಗಿದ್ದವು. ಅಲ್ಲದೇ ಸರಕಾರದ ಹತ್ತು ಹಲವು ಸಂಸ್ಕೃತಿ ಉತ್ಸವಗಳು ಜರುಗುತ್ತಿದ್ದವು. ಅವೆಲ್ಲವುಗಳನ್ನು ಕೊರೊನಾ ಎಂಬ ಕರಾಳ ಕಾಳಿ ನುಂಗಿ ನೊಣೆಯುತ್ತಿದೆ. ಲಾಕ್ ಡೌನ್ ಮತ್ತು ಸೀಲ್ ಡೌನ್ ಗಳಿಂದ ಸಾಂಸ್ಕೃತಿಕ ಲೋಕವಿರಲಿ ಸಾಮಾನ್ಯ ಜನಜೀವನ ಸಹಜಸ್ಥಿತಿಗೆ ಮತ್ತೆ ಮರುಳತ್ತದೆಯಾ.? ಮತ್ತೆ ಕಾಣಬಲ್ಲೆವೇ ಆ ದಿನಗಳನು ಎಂಬ ಸಹಸ್ರಮಾನದ ನಿರೀಕ್ಷೆ ನಿತ್ಯವೂ ನಮ್ಮೆಲ್ಲರನ್ನು ಕಾಡುತ್ತಿದೆ. ***********

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ನೇಪಥ್ಯ ಎಮ್ . ಟಿ . ನಾಯ್ಕ.ಹೆಗಡೆ ಆ ನೀಲಿ ಬಾನು, ಮಿನುಗು ತಾರೆಬೆಳೆದು ಕರಗುವ ಚಂದ್ರಈ ಭೂಮಿ – ಅದರ ಕಣಿವೆಮೊರೆವ ಕಡಲು….ಆ ತಂಗಾಳಿ, ಮುಂದೆ ಬಿರುಗಾಳಿನದಿಯ ಓಟ, ಆ ನಾದದುಂಬಿ ಗಾನಗಾಳಿಗಂಟಿದ ಬದುಕಿನಎಕ್ಕೆ ಬಿತ್ತಗಳೆಲ್ಲಾಬಿತ್ತುತ್ತಾ ಹೊರಟದ್ದುಯಾವ ಕತೆ ? ಯಾರ ಕತೆ ? ಗತಿಸಿದ ಸಾಮ್ರಾಜ್ಯಕರಗಿದ ಅರಮನೆಉರುಳಿದ ಕಿರೀಟಕ್ಕೆ–ಲ್ಲ, ಹಿನ್ನೆಲೆ ಏನು ಕತೆ ? ಬಂದ ಗುರುತುಗಳಿಹುದುನಿಂದ ಗುರುತುಗಳಿಹುದುಹೋದ ಗುರುತುಗಳಿಹುದುಆದರೆ —ಬಂದವರು ಬಂದಂತೆಹೋದುದು ಯಾಕೆ ? ಆ ಬಾನು , ಈ ಭೂಮಿ ,ಅದರ ಹೊನ್ನುಮತ್ತೆ ಮುಕುಟಎಲ್ಲಾ ತೊರೆದೇಹೋದುದು ಯಾಕೆ ?ಇಲ್ಲ … ಮರೆತೇ ಹೋದರೆ ? ಈ ಬಯಲಲಿ ಬದುಕ ಹರಡಿಕತೆ ಬರೆದವರು ಯಾರು ?ಬರೆವವರು ಯಾರು …? *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ರಸಧಾರೆ, ಮತ್ತಿತರೆ ಕವನಗಳು ವಸುಂಧರಾ ಕದಲೂರು ಹಸಿರೆಲೆ ಕಾನನಹಸುರಲೆ ಮಲೆಯೋ ಹೊಸ ಬಗೆ ನರ್ತನಹರುಷದ ನೆಲೆಯೋ ಹುಮ್ಮಸಿನ ಮನವೋಹುರುಪಿನ ಚೆಲುವೋ ಹರಸುವ ಖುಷಿಗೆಹಾತೊರೆವ ಕ್ಷಣವೋ ಸಂಭ್ರಮ ಸಂತಸಮಳೆ ಹನಿ ಜೊತೆಗೆ ಸುರಿದಿದೆ ಹರಿದಿದೆಜೀವರಸಧಾರೆಚೈತನ್ಯದೆಡೆಗೆ ‘ಮತ್ತಿತರೆ’ ಅತ್ತಲೂ ಇತ್ತಲೂಸುತ್ತಲೂ ಕತ್ತಲೆ ಬತ್ತಿದ ಹೊಳೆಬಾರದ ಮಳೆಬಿತ್ತದ ಇಳೆಕಟ್ಟಿದೆ ಕೊಳೆಸುಟ್ಟಿದೆ ಕಳೆ ಕದಡಿದ ಕನಸಿಗೆಹೊಸತರ ಕನವರಿಕೆ ಬೇಸರದ ಭಾರಕೆಬರಿ ಭಾವ ನಿಸೂರ ಇತ್ತಲಾಗಿ ಹೊತ್ತೂಹೋಗದು ಅತ್ತಲಾಗಿಚಿತ್ತವೂ ಸ್ವಸ್ಥವಾಗದು ಹಾಗಾಗಿಬೇಕಿಲ್ಲ ಯಾವುವೂಇತರೆಇನ್ನಿತರೆ ಮತ್ತಿತರೆ. ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ. ದೀಪಾ ಗೋನಾಳ ಏಷ್ಟವಸರಅದೆಷ್ಟು ಗಡಿಬಿಡಿಎಷ್ಟೇ ಬೇಗ ಎದ್ದರೂತಿಂಡಿತಿನ್ನಲೂ ಆಗುವುದೆ ಇಲ್ಲಅನುಗಾಲ ಒಳ ಹೊರಗೆ ಗುಡಿಸಿಹಸನ ಮಾಡುವುದರಲ್ಲೆಅರ್ಧಾಯುಷ್ಯ ,,,ತಿಂದರೊ ಇಲ್ಲವೊ..!?ಕಟ್ಟಿಕೊಟ್ಟ ಡಬ್ಬಿ ಇಟ್ಟುಕೊಂಡರೊ ಇಲ್ಲವೊ..!?ತೊಳೆದ ಬಾಟಲಿಗೆ ನೀರು ತುಂಬಿದ್ದೆ ಒಯ್ದರೊ ಇಲ್ಲವೊ..!?ಹಾಲಿನ ಪಾತ್ರೆಗೆ ಮುಚ್ಚಿದೆನೊ ಇಲ್ಲವೊ..!?ಮೊಸರು ಫ್ರಿಜ್ಜಿಗೆ ದಬ್ಬಿದೆನೊ ಇಲ್ಲವೊ..!?ಬದುಕೆಲ್ಲ ಉದ್ಘರಾದ ಹಾರ..ದಾರಿಯ ತುಂಬ ಹೋಯ್ದಾಟಮನಸ್ಸಿನ ಮಾತು ಕಿವಿಗೆ ಕೇಳುವಷ್ಟು ದೀರ್ಘ ಆಲೋಚನೆ ಒಳಗೊಳಗೆ..ಜೋಲಿ ಹೊಡಿಯುವ ಬಸ್ಸಿನಲ್ಲಿ ಎದುರಿಗೆ ನನ್ನಂತೆ ಅವಸರಕ್ಕೆಎದ್ದೋಡಿ ಬಂದವಳು ಹೇಳುತ್ತಾಳೆ,ಕುಂಕುಮ ಹಚ್ಚೆ ಇಲ್ಲ!!ಓಹ್! ಹೌದು ಕನ್ನಡಿ ಮುಂದೆ ನಿಲ್ಲಲೇ ಇಲ್ಲ, ನನ್ನ ನಾನು ನೋಡಿಕೊಂಡುಆಗುವುದಾದರೂ ಏನಿದೆಸೀಟು ಸಿಕ್ಕಮೇಲೆ ಬ್ಯಾಗಿನ ತುಂಬ ತಡಕಾಡಿ ಒಂದು ಬಿಂದಿಹಣೆಗೇರಿಸಬೇಕುಕಿಟಕಿ ಗಾಜಿನಲ್ಲೊಮ್ಮೆ ಮಸುಕುಮೊಗ ನೋಡಿಕೊಳ್ಳಬೇಕುಮತ್ತಿಳಿದು ಓಡಬೇಕುಮೊಳೆಹೊಡೆದ ಚಪ್ಪಲಿಗೆ ನೋವಾಗದಂತೆ ಪೂರ್ತಿ ಪಾದ ನೆಲಕ್ಕೂರದೆ ಹಕ್ಕಿಯಂತೆ ಹಾರಿಹಾರಿಕಛೇರಿ ಮೆಟ್ಟಿಲೇರಬೇಕು ಬಂದ ಕೂಡಲೆ ಮತ್ತೊಮ್ಮೆ ಸೊಂಟದ ಮೇಲಿನ ಸೀರೆ ಸರಿ ಮಾಡಿಕೊಂಡೆ ಕೂಡಬೇಕುಒಂದಿನಿತು ಮಗ್ಗಲು ಕುಳಿತವರಮತಿಭಂಗವಾಗದಂತೆ ಹೊಟ್ಟೆ ಚುರ್ ಎಂದದ್ದುನನಗೆ ಕೇಳಿಸಿಯೆ ಇಲ್ಲವೆಂಬಷ್ಟುಗಂಭೀರವಾಗಿ ಕುಳಿತಾಗಲೆಅವಳು ಎದ್ದು ಬಂದುನಾನು ಇಂದು ತಿಂಡಿ ತಿನ್ನಲಿಲ್ಲಡಬ್ಬಿಗೆ ಹಾಕಿಕೊಂಡು ಬಂದಿದ್ದೇನೆಬಾ ಎಂದು ಕೈ ಹಿಡಿದು ಜಗ್ಗಿ ಜಭರ್ದಸ್ತಿಲೆ ಹೊಟ್ಟೆಗೆ ಹಾಕುತ್ತಾಳೆ ಎರಡು ಹಿಡಿ ಎರಡು ಜಡೆ ಎಂದೂ ಕೂಡುವುದಿಲ್ಲ !ಹೆಣ್ಣಿಗೆ ಹೆಣ್ಣೆ ಶತ್ರು.. ಎಂಬುವರಮಾತು ಇಲ್ಲಿ ಶುದ್ಧ ಸುಳ್ಳುದುಡಿಮೆಗೆ ಟೊಂಕ ಕಟ್ಟುವ ಹೆಂಗಳೆಯರ ಹಸಿವುಹೆಂಗರುಳಿಗಿಲ್ಲಿ ಚೆಂದ ಅರ್ಥವಾಗುತ್ತದೆ..ನಮ್ಮ ಟೊಂಕದ ಮೇಲಿನ ಸೀರೆಜಾರಿದ್ದನ್ನಷ್ಟೆ ನೋಡುವಮೀಸೆಗಳಿಗೆ ಇದು ಅರ್ಥವಾಗದು.. ***********

ಕಾವ್ಯಯಾನ Read Post »

You cannot copy content of this page

Scroll to Top