ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಬರಿ ಮಣ್ಣಲ್ಲ ನಾನು….! ಶಿವಲೀಲಾ ಹುಣಸಗಿ ಬಯಕೆಯೊಂದು ಮನದಲವಿತು ಕಾಡುತ್ತಿತ್ತು…ಮದ ತುಂಬಿದೆದೆಯಲಿ ಹದವಾಗಿ ನಾಟಿ ಮೀಟುತ್ತಿತ್ತುಹೃದಯ ಬಡಿತದ ಗೀಳೊಂದು ಸಂಕೋಲೆಯತೊಡರಾಗಿ,ನಿನ್ನರಸುವ ಗಾಳಿಗುಂಟ ದಿಕ್ಕಾಪಾಲುನುಸುಳಿದಾಗೆಗಲೆಲ್ಲ ಸದ್ದಿಲ್ಲದೆ ಮುಳ್ಳುಗಳು ಚುಚ್ಚಿಪರಚಿದ ಗಾಯಕ್ಕೊಂದು ಮುಲಾಮುಹಿತವಾಗಿ ಅಪ್ಪಿದ ಗಳಿಗೆಗಳು,ತೀವ್ರತೆಗೆ ಸಾಣೆ ಹಿಡಿದು ತನುವಿನೊಳಗೆ ಭಾವೋದ್ರೇಕದ ಸುಳಿಗಾಳಿಮುತ್ತಿನ ಹನಿಗಳಿಗೆ,ಬಯಲಾಗಿ ಮೈದೆಳೆದಿದೆಹೊನಲು ಬೆಳಕಿನಾರ್ಭಟದಲಿ ಪ್ರೇಮೋತ್ಸವವಿದೆಸಂಭ್ರಮಕ್ಕೊಂದು ಮಿತಿಯಿದೆ ನಿಧಾನಿಸು,ಬಿಕರಿಯಾಗದಿರಲಿ ಸೆಳೆತದಾ ಬಿಗಿ ನಂಟುಬರೀ ಮಣ್ಣಲ್ಲ ನಾನು,ನೀ ಬಿತ್ತುವ ಬೀಜಕೆಕಾಪಿಡುವ ಜೀವದುಸಿರಿನ ಆಸರೆಒಡಲೊಳು ಬಂಧಿಸಿ ನಿನ್ನ ಮರುಸೃಷ್ಟಿಗೆಎನ್ನೆದೆಯು ಯುಗಗಳಿಗೆ ಸಾಕ್ಷಿಯಾಗಿದೆನಿನಗಾಗಿ ಹಂಬಲಿಸದ ದಿನಗಳಿಲ್ಲನೀನಿಲ್ಲದೆ ಹೂ ಅರಳಿಲ್ಲ,ಗುಬ್ಬಿ ಗೂಡು ಕಟ್ಟಿಲ್ಲ,ಜಗವೆಲ್ಲ ಮಂಕಾಗಿಹುದು ನೀ ಅರಿತಿಲ್ಲಮುಂಗಾರಿನ ಅಭಿಷೇಕಕೆ ಹಾತೊರೆದುಅಮೃತ ಧಾರೆಯ ಮೊದಲ ಸ್ಪರ್ಶದಾ ಸಿಹಿಗರಿ ಬಿಚ್ಚಿ ಕುಣಿವ ಮನದಿಂಗಿತ ಚಿಗುರಿಒಂದು ಹನಿಯು ಕೈ ಜಾರದಂತೆಗುಟ್ಟಾಗಿ ಬಚ್ಚಿಡಲು ಸಿದ್ದವಿದೆ ತನುವಿಂದುಪ್ರಳಯವಾಗಲಿ,ಪ್ರವಾಹ ಬರಲಿ,ಸಾಗರವುಕ್ಕಲಿಸಂಗಮದ ಪರಮಾವಧಿಗೆ ದಿಕ್ಕೊಂದಾಗಲಿಇಂಚಿಂಚು ಭರ್ತಿಯಾಗಲಿ ಒಲವಿನ ಆಗರನನಗೊಂದು ಬಯಕೆಯ ಮಹಾಪೂರಸೀಮಂತಕೆ ಸಜ್ಜಾಗುವ ಕಾತುರದ ಗಾನಹಸಿರ ತೋರಣ ಕಟ್ಟಿ ಇಳೆಯ ಆಲಿಂಗನನಾಚಿ ನೀರಾಗಲಿ ಭವದ ಸುಖವೆಲ್ಲಭೂಮಿ ಆಕಾಶಗಳ ಮಿಲನದಾ ಅಂತ್ಯದಲ್ಲಿಮೇಘಗಳ ಸರಮಾಲೆಗೆ ಕೊರಳೊಡ್ಡಿಹೊತ್ತಿಗೊಂದು ಮುತ್ತಿನ ಸೆರಗೊಡ್ಡಿ *******

ಕಾವ್ಯಯಾನ Read Post »

ಇತರೆ

ಪ್ರಸ್ತುತ

ಜಪಾನಿನ ಕಾವ್ಯ ಪ್ರಕಾರ ತಂಕಾ, ಕನ್ನಡದ ಅಂಗಳದಲ್ಲಿ ಮನುಷ್ಯ ಭಾವನಾ ಜೀವಿ. ತನ್ನ ಭಾವನೆಗಳ ಅಭಿವ್ಯಕ್ತಿಗೆ ತನಗೆ ಅನುಕೂಲವಾದ ಭಾಷೆಯನ್ನು ಬಳಸಿಕೊಳ್ಳುತ್ತಾನೆ. ಅದುವೇ ಮುಂದೆ ಸಾಹಿತ್ಯದ ರೂಪ ಪಡೆಯಿತು. ಸಹೃದಯರಿಗೆ ಭಾಷೆಯ ಹಂಗು ಇರುವುದಿಲ್ಲ. ಅಂತೆಯೇ ಅವರು ತಮ್ಮ ಹೃದಯಕ್ಕೆ ಸ್ಪಂದಿಸುವ ಸಾಹಿತ್ಯದ ಕಡೆಗೆ ವಾಲುತ್ತಾರೆ. ಅದಕ್ಕೆ ಭಾಷಾಂತರವೂ ಒಂದು ವರವಾಗಿದೆ. ಆ ಕಾರಣಕ್ಕಾಗಿಯೇ ಎಲ್ಲಿಯೊ ಇರುವ ಜಪಾನಿನ ಹಲವು ಸಾಹಿತ್ಯ ಪ್ರಕಾರಗಳು ಕನ್ನಡಿಗರ ಮನಗೆದ್ದು, ಸ್ವತಂತ್ರವಾಗಿ ಕನ್ನಡದಲ್ಲಿಯೆ ಕೃಷಿ ಆರಂಭಿಸಿವೆ. ಅವುಗಳಲ್ಲಿ ಹೈಕು, ತಂಕಾ… ಮುಂಚೂಣಿಯಲ್ಲಿವೆ. ಭಾಷಾಂತರದ ಕಾರಣವಾಗಿ ಸಾಹಿತ್ಯ ಪ್ರಕಾರಗಳನ್ನು ಹಲವು ರೀತಿಯಲ್ಲಿ ಗುರುತಿಸಲಾಗುತ್ತಿದೆ. ಉದಾಹರಣೆಗೆ ತಂಕಾ..ಇದನ್ನು ಟಂಕಾ, ತಾಂಕಾ, ಟ್ಯಾಂಕಾ… ..ಎಂತಲೂ ಕರೆಯಲಾಗುತ್ತಿದೆ. ಇದು ಜಪಾನ್ ದಲ್ಲಿ ಏಳನೆಯ ಶತಮಾನದಲ್ಲಿಯೇ ಪ್ರವರ್ಧಮಾನದಲ್ಲಿತ್ತು. ಇದು ಎಷ್ಟು ಜನಪ್ರಿಯವಾಗಿತ್ತು ಎಂದರೆ ಅಂದಿನ ಜಪಾನಿನ ಇಂಪೀರಿಯಲ್ ನ್ಯಾಯಾಲಯದ ಗಣ್ಯರು ‘ತಂಕಾ’ ಕವನ ಸ್ಪರ್ಧೆಗಳಲ್ಲಿ ಭಾಗವಹಿಸುತಿದ್ದರಂತೆ…!!‘ಚಕಾ’ ಎನ್ನುವ ಉದ್ದನೆಯ ಸಾಹಿತ್ಯ ಪ್ರಕಾರವನ್ನು ತುಂಡರಿಸಿ ‘ತಂಕಾ’ ಸಾಹಿತ್ಯ ಪ್ರಕಾರ ಹುಟ್ಟಿಕೊಂಡಿದೆಯೆಂದು ಜಪಾನಿನ ಕವಿ ಮತ್ತು ವಿಮರ್ಶಕ ಮಸೋಕಾ ಶಿಕಿ ಅವರು ಹೇಳುತ್ತಾರೆ. ಇದು ಮೂವತ್ತೊಂದು ಉಚ್ಚರಾಂಶಗಳನ್ನು ಹೊಂದಿದ್ದು, ಮುರಿಯದ ಒಂದೇ ಸಾಲಿನಲ್ಲಿ ಬರೆಯಲಾಗುತಿತ್ತು. ಮುಂದೆ ಇಂಗ್ಲೀಷ್ ಭಾಷಾಂತರಗಳಲ್ಲಿ ಐದು ಸಾಲಿನ ರೂಪವನ್ನು ಪಡೆಯಿತು. ಮೊದಲನೆಯ ಮತ್ತು ಮೂರನೆಯ ಸಾಲುಗಳು ಐದು ಉಚ್ಚರಾಂಶ/ ಅಕ್ಷರಗಳನ್ನು ಹೊಂದಿರುತ್ತದೆ. ಇನ್ನೂ ಎರಡನೆಯ, ನಾಲ್ಕನೆಯ ಮತ್ತು ಐದನೆಯ ಸಾಲುಗಳು ಏಳು ಉಚ್ಚರಾಂಶ/ ಅಕ್ಷರಗಳನ್ನು ಹೊಂದಿರುತ್ತದೆ. ಇದಕ್ಕೆ ಕೆಲವು ಉದಾಹರಣೆಗಳನ್ನು ನೋಡಬಹುದು.. ಅಕಿ-ಸುಕೆ ಯವರ ಪ್ರಸಿದ್ಧ ತಂಕಾ ಪ್ರಕೃತಿಯ ಸುಂದರ ಚಿತ್ರಣವನ್ನು ನೀಡುತ್ತದೆ.“ನೋಡು, ಮಾಗಿಯ ಮಾರುತ ಹೇಗೆ ಓಡಿಸುತ್ತಿದೆ ಮೋಡಗಳನ್ನು ಎಡ ಬಲಕ್ಕೆ ; ಎಡಕಿನಿಂದ ಚಂದಿರ ಇಣುಕುತ್ತಾನೆ ಕಿರಣಗಳಿಂದ ಓಡಿಸುತ್ತಾ ರಾತ್ರಿಯ ಕತ್ತಲನು”ಕ್ರಿ.ಶ.670 ಮತ್ತು ಕ್ರಿ. ಶ.1235 ರ ಮಧ್ಯದ 565 ವರ್ಷಗಳಲ್ಲಿಯ ಅನುಪಮ ಕವನಗಳನ್ನು ಆಯ್ದು ಕ್ರಿ.ಶ. 1235 ರಲ್ಲಿ ನೂರು ಜನರ, ನೂರು ಕವನಗಳನ್ನು ಸಂಪಾದಿಸಿ ಪ್ರಕಟಿಸಿರುವುದು ಸದೈಯೋ ರುಜಿವಾರ ರವರ ಅಮೋಘ ಸಾಧನೆಯೆಂಬುದು ತಿಳಿದು ಬರುತ್ತದೆ. ಇದನ್ನೇ ಮುಂದೆ ವಿಲಿಯಂ ಪೋರ್ಟರ್ ರವರು ಇಂಗ್ಲೀಷಿಗೆ ತರ್ಜುಮೆ ಮಾಡಿದ್ದಾರೆ. ಈ ಕೃತಿಗಳು ಇಂದಿಗೂ ಓದುಗರನ್ನು ಸೆಳೆಯುತ್ತಿವೆ..!ಪ್ರಣಯದ ಆರಂಭದಲ್ಲಿ ಈ ತಂಕಾಗಳು ಕೋಮಲವಾಗಿರುತ್ತವೆ. ಇಬ್ಬರು ಪ್ರೇಮಿಗಳು ಒಟ್ಟಿಗೆ ಇರಲು ರಾತ್ರಿಯಲ್ಲಿ ನುಸುಳುತ್ತಾರೆ ಮತ್ತು ಮರುದಿನ ಬೆಳಿಗ್ಗೆ ಪರಸ್ಪರ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಲು ಈ ತಂಕಾಗಳನ್ನು ಬಳಸುತಿದ್ದರು.ಜಪಾನಿನ ಸಂಸ್ಕೃತಿಯಲ್ಲಿ ತಂಕಾ ಪ್ರಮುಖ ಸಾಹಿತ್ಯ ರೂಪವಾಗಿದೆ. ಈ ತಂಕಾಗಳು ಭಾವನಾತ್ಮಕವಾಗಿ ಓದುಗನ ಕಲ್ಪನೆಗೆ ಗರಿ ಕಟ್ಟುವಂತೆ ಇರುತ್ತವೆ. ಪ್ರಾಸ, ಲಯ ಇಲ್ಲಿ ಇರುವುದಿಲ್ಲವಾದರೂ ಶ್ಲೇಷೆ ಇರುತ್ತದೆ. ಪದಗಳ ಪರ್ಯಾಯ ಅರ್ಥಗಳೊಂದಿಗಿನ ಆಟಗಳು ಇಲ್ಲಿ ಇರುತ್ತವೆ. ಇದರಲ್ಲಿ ಚೀನಿ ಪದಗಳ ಪ್ರಭಾವವಿಲ್ಲ, ಅಪ್ಪಟ ಜಪಾನಿನ ಭಾಷೆಯ ಬಳಕೆಯಾಗಿದೆ. ಜನಜೀವನದ ಸಣ್ಣಪುಟ್ಟ ದೃಶ್ಯಗಳು ತಂಕಾಗಳಾಗಿವೆ. ಇಲ್ಲಿ ರಕ್ತಪಾತ, ಅಂಧಕಾರ, ಅಪರಾಧ, ಭೂಗತ ಜಗತ್ತು, ಮೋಸ, ಕಪಟತನ, ಅತಿರೇಕದ ಭಾವ, ವಿಜೃಂಭಣೆ… ಯಾವುದು ಇರುವುದಿಲ್ಲ. ಹೃದಯಕ್ಕೆ ಮುದ ನೀಡುವಂತಿರುತ್ತವೆ. ಕವಿತೆಯ ಶಕ್ತಿ ಇರುವುದು ಕಾವ್ಯದ ನಿರ್ವಾತದಲ್ಲಿ. ಶೂನ್ಯದಿಂದ ಸಂಪಾದನೆಯೆಡೆಗೆ ಸಾಗುತ್ತಿರುತ್ತದೆ. ಇಬ್ಬರು ವ್ಯಕ್ತಿಗಳ ಅಥವಾ ಎರಡು ಚಿತ್ರಗಳು ಒಂದಕ್ಕೊಂದು ಭೇಟಿಯಾದಾಗ ಮೂಡುವ ಒಂದು ಕ್ಷಣದ ಭಾವವೇ ‘ತಂಕಾ’ ಕ್ಕೆ ಜನ್ಮ ನೀಡುತ್ತದೆ. ಮೌನದ ಘಳಿಗೆಯಲ್ಲಿ ಉದಯಿಸಿದ ಕವಿತೆಯೊಂದು ಹೀಗಿದೆ.“ಎರಡು ಎ.ಎಂನಾನು ನನ್ನ ಮಲಗುವ ಕೋಣೆ ಬಾಗಿಲು ತೆರೆದಿದ್ದೇನೆಬಿಳಿ ಬೆಕ್ಕು ಓಡಿ ಹೋಯಿತುಕ್ಲಾಂಗಿಂಗ್ ಪತನದಿಂದ ಬೆಚ್ಚಿ ಬಿದ್ದಿದೆಸತ್ಕಾರದ ಜಾರ್ನ್ ಲೋಹದ ಮುಚ್ಚಳದಲ್ಲಿ”ಇದು ತುಂಬಾ ಪ್ರಮುಖವಾದ ತಂಕಾ. ಇದರಲ್ಲಿ ಗಮನಿಸಬೇಕಾದ ಒಂದು ಪ್ರಮುಖ ಅಂಶವಿದೆ. ಇಲ್ಲಿಯ ಮೂರನೆ ಸಾಲನ್ನು “ಪಿವೋಟ್” ಎನ್ನುವರು. ಅಂದರೆ ಮಹತ್ವದ ತಿರುವು ಎಂದಾಗುತ್ತದೆ. ಇದು “ತಂಕಾ” ವನ್ನು ಎರಡು ವಿಭಿನ್ನ ವಿಭಾಗಗಳಾಗಿ ವಿಂಗಡಿಸುತ್ತದೆ. ಈ ತಂಕಾದಲ್ಲಿ ‘ಬಿಳಿ ಬೆಕ್ಕು ಓಡಿ ಹೋಯಿತು’ ಎಂಬ ಮೂರನೆಯ ಸಾಲು ತಂಕಾವನ್ನು ವಿಭಾಗಿಸಿ ಪ್ರತ್ಯೇಕ ಅರ್ಥವನ್ನು ನೀಡುತ್ತದೆ..!ಇಷ್ಟೆಲ್ಲ ಗಮನಿಸಿದಾಗ ನಮಗೆ ಒಂದು ಅಂಶ ತುಂಬಾ ಕಾಡುತ್ತದೆ. ‘ಈ ತಂಕಾ ಎಂಬ ಜಪಾನಿನ ಕಾವ್ಯ ಪ್ರಕಾರ ನಮಗೆ ಇಷ್ಟವಾಗುತ್ತಿರುವುದು ಯಾಕೆ’ ಎಂಬ ಪ್ರಶ್ನೆ. ಅದಕ್ಕೆ ನಾವು ಹಲವು ಕಾರಣಗಳನ್ನು ಹುಡುಕಬಹುದು. ನಮ್ಮ ಗೌತಮ ಬುದ್ಧ ಅವರನ್ನು ಜಪಾನಿನ ಜನರು ಸ್ವೀಕರಿಸಿದ್ದು, ಭಾರತೀಯರಂತೆ ಅವರೂ ಕೈ ಜೋಡಿಸಿ ನಮಸ್ಕರಿಸುವುದು, ನಮ್ಮಂತೆಯೇ ಅವರೂ ಕೂಡ ಸಂಪ್ರದಾಯಿಕ ಮನಸ್ಥಿತಿ ಹೊಂದಿರುವುದು… ಇವೆಲ್ಲ ಕಾರಣಗಳು ಆಗಿರಬಹುದು…!!ಇಲ್ಲಿಯವರೆಗೆ ನಾವು ಜಪಾನಿನ ತಂಕಾಗಳ ಬಗ್ಗೆ ಮಾಹಿತಿ ಹಂಚಿಕೊಂಡೆವು. ಇನ್ನೂ ಕನ್ನಡದ ಕೆಲವು ತಂಕಾಗಳನ್ನು ಅಧ್ಯಯನಕ್ಕಾಗಿ ಗಮನಿಸಬಹುದು. ಸ್ಮಶಾನದಲ್ಲಿಪಿಂಡ ತಿನ್ನೋರ ನೋಡಿಗೋರಿಯಲ್ಲಿಯಶವ ವೇದನೆಯಲ್ಲಿಕಿಲ ಕಿಲ ನಗ್ತಿತ್ತು .. ಸಾವಿಗೆ ಎಲ್ಲಿಮಾನದಂಡ, ಜೀವಕ್ಕೆಎಲ್ಲಿದೆ ನ್ಯಾಯ;ಬಾಳ ತಕ್ಕಡಿಯಲ್ಲಿಎಲ್ಲವೂ ಅಯೋಮಯ..! ಬುದ್ಧಿವಂತರುಸಾಕಷ್ಟು ಇರುವರುಸಮಾಜದಲ್ಲಿ ;ಹೃದಯವಂತರಿಗೆಹುಡುಕುತಿದೆ ಇಂದು ಬಿಡುವು ಇಲ್ಲಎನ್ನುವ ವ್ಯಕ್ತಿಗಳಸ್ವತ್ತಲ್ಲ ಕಾಲಪಾದರಸದಂತದ್ದುಚಲನೆಗೆ ಸ್ವಂತದ್ದು ನಂಬಿಕೆ ಜೀವತೆಗೆಯುವ ಸಾಧನಆಗಬಾರದುಬಾಳು ಮುನ್ನಡೆಸುವದಾರಿದೀಪ ಆಗಲಿ ಗೌರವಿಸುವಕಲೆ ಹೃದಯದಲ್ಲಿಮೂಡಿರುತ್ತದೆ;ಪಡೆದವರಿಗಿಂತಕೊಟ್ಟವರು ತೃಪ್ತರು.. ಕತ್ತಲೆಂದಿಗೂಅಮಂಗಳವಲ್ಲಯ್ಯನಮ್ಮ ಬಾಳಿಗೆಅದುವೇ ದೀಪವಾಗಿಮುನ್ನಡೆಸುವುದಯ್ಯ ಮಹಾಭಾರತಓದಿ ನೋಡಿ, ಬದುಕಿನಏರಿಳಿತವುಹೃದಯದಿ ಇಳಿದುದಾರಿ ತೋರಿಸುತ್ತದೆ.. ******* ಡಾ. ಮಲ್ಲಿನಾಥ ಶಿ. ತಳವಾರ

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ನಿರ್ವಾಣದೆಡೆಗೆ ಎಮ್.ಟಿ. ನಾಯ್ಕ. ಹೆಗಡೆ ಹೋಗಿ ಬಂದವನು ನಾನುನಿರ್ವಾಣದೆಡೆಗೆಸರ್ವ ಚೈತನ್ಯ ಶೂನ್ಯದಂಚಿಗೆ ಕೋಟೆ, ಕಿರೀಟ, ಕೀರ್ತಿಗಳನೆಲ್ಲಾತೊರೆದು ಸಾಗುವ ದಾರಿಅರಸು ಆಳುಗಳನೆಲ್ಲಾ ಕೊನೆಗೆಕೂಡಿಸುವ ಕೂಡುದಾರಿ ….! ನಡೆದ ಬಸವಣ್ಣಕಲ್ಯಾಣ ಕ್ರಾಂತಿಯ ನಡುವೆ ,ತನ್ನ ಶಿಲುಬೆ ತಾ —ಹೊತ್ತು ನಡೆದ ಯೇಸುನಿರ್ವಾಣದೆಡೆಗೆ . ಕಾಲಪುರುಷನಾಣತಿಯಂತೆಲ್ಲಾತೊರೆದು ಹೊರಟಲೋಕದ ‘ ಶ್ರೀ ರಾಮ ‘ ,ಜಗನ್ನಾಟಕ ಸೂತ್ರಧಾರಿಯಗರಿಮೆ ಹೊತ್ತವ —ಕಾನನದ ನಡುವೆ ವ್ಯಾಧನ‘ ಶರಕೆ ‘ ಹೊರಟನಲ್ಲಿಂದಲೇನಿರ್ವಾಣದೆಡೆಗೆ ಕ್ಷಣಭಂಗುರದ ಬದುಕಿನಕತೆಯ ತೆರೆದಿಡುವ ಗಳಿಗೆಜೀವ ಜಗದಗಡಿಯಾರದ ಗುರುತುನಿರ್ವಾಣದ ಗಳಿಗೆ ದಾಟಿ ಉಳಿದವರಿಲ್ಲ ಆ ಗಳಿಗೆ..! **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶಾಲ್ಮಲೆ ಉಮೇಶ ಮುನವಳ್ಳಿ ನನ್ನ ಹಿತ್ತಲದಲ್ಲಿ ಹುಟ್ಟಿದ ಶಾಲ್ಮಲೆಕೋಟೆ ಕೊತ್ತಲಗಳ ದಾಟಿಕಾಡು ಮೇಡುಗಳ ಮೀಟಿಮಲೆನಾಡಿನಲ್ಲಿ ಮೈದಳೆದಿಲ್ಲವೇ? ಎತ್ತಣ ಬಯಲುಸೀಮೆ,ಎತ್ತಣ ಮಲೆನಾಡು?ಎಲ್ಲೆ ಮೇರೆಗಳ ಮೀರಿ? ಗುಪ್ತಗಾಮಿನಿ, ಗತಿ ಹಿಡಿದು ಸಾಗಿಮತಿಯನು ಪ್ರಜ್ಞೆಯಲಿ ನೀಗಿಮಂಜುಳ ಗಾನದಲಿ ತೇಲಿಸಾಗರ ಸೆರುವ ಕಾತರದಲಿ? ಸೊಕ್ಕಿದ ಸರ್ಪದ ಭರಾಟೆಯ ಹರಿವುಉಕ್ಕಿದ ಕಡಲು, ಮಿಕ್ಕಿದ ಉನ್ಮಾದಮಿಲನದ ಸಾವಧಾನದ ಸುಮೇರು? **************

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಯಾವ ಮಾತಿನ ನೆನಪು ಮರೆತಿಲ್ಲ ಸಾಕಿಎದೆಯಲಿ ತುಂಬಿದ ನೋವು ಕಳೆದಿಲ್ಲ ಸಾಕಿ ಮೌನ ಅನುಭವಿಸಿದ ಯಾತನೆ ಸಾಕಾಗಿದೆಕಾಲನ ಲೀಲೆ ಹೇಳಲು ಏನು ಉಳಿದಿಲ್ಲ ಸಾಕಿ ಕೀವು ತುಂಬಿಕೊಂಡಿದೆ ಹೃದಯದೊಳುಅದನು ಅನುಭವಿಸಲು ಜೀವ ಬೇಕಲ್ಲ ಸಾಕಿ ಹೇಗಾದರೂ ಆಗಲಿ ಸೈರೈಸಿಕೊಂಡು ನಡೆವೆಕೊನೆಗಾಲದ ದಿನಗಳಿಗೆ ಕಾದಿರುವೆನಲ್ಲ ಸಾಕಿ ಚುಚ್ಚು ಮಾತಿಗೆ ಬೆಚ್ಚಿಬೀಳದೆ ಉಳಿದಿರುವೆಮರುಳ ಬದುಕಿರುವ ತನಕ ಮಿಡಿಯಬಲ್ಲ ಸಾಕಿ *********

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಡಾ.ಗೋವಿಂದ ಹೆಗಡೆ ಮಾಸಿಹೋದ ನಗುವಿಗೇಕೆ ಬಣ್ಣ ಮೆತ್ತುವೆಕರಗಿಹೋದ ನಲಿವಿಗೇಕೆ ಬಣ್ಣ ಮೆತ್ತುವೆ ದಾರಿ ನಡೆ ನಡೆಯುತ್ತ ಸರಿಯಿತು ಕಾಲಕಂದಿಹೋದ ಕೆನ್ನೆಗೇಕೆ ಬಣ್ಣ ಮೆತ್ತುವೆ ಏರುವ ಖುಷಿ ಮುಗಿದು ಇಳಿಜಾರು ಈಗಕಾಂತಿ ಕಳೆದ ಕಣ್ಣಿಗೇಕೆ ಬಣ್ಣ ಮೆತ್ತುವೆ ಯಾವಾಗ ಅದು ಎದೆಯಲ್ಲಿ ಬೆಳಕಾಡಿದ್ದುಅರ್ಥ ಕಳೆದ ಮಾತಿಗೇಕೆ ಬಣ್ಣ ಮೆತ್ತುವೆ ಮಾತು ಮನಸು ಕೃತಿಗಳಲ್ಲಿ ಮೇಳವೆಲ್ಲಿದೆಋಜುತೆ ಮರೆತ ನಡತೆಗೇಕೆ ಬಣ್ಣ ಮೆತ್ತುವೆ ಹೆಳವ ಹೆಜ್ಜೆಗಳಲಿ ಈಗ ಸಾಗಿದೆ ಪಯಣರೆಕ್ಕೆ ಸವೆದ ಹಕ್ಕಿಗೇಕೆ ಬಣ್ಣ ಮೆತ್ತುವೆ ಯಾವ ರಂಗು ಬಳಿದರೇನು ‘ಜಂಗಮ’ನಿಗೆಕನಸು ಹರಿದ ಬದುಕಿಗೇಕೆ ಬಣ್ಣ ಮೆತ್ತುವೆ ******

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಮಳೆ ಒಲವು ವಸುಂಧರಾ ಕದಲೂರು ಸಂಜೆ ಮಳೆ, ಹನಿಗಳ ಜೊತೆನೆನಪುಗಳನು ಇಳಿಸಿತುತೋಯ್ದ ಮನದಲಿ ಬಚ್ಚಿಟ್ಟನೆನಪುಗಳ ಮೊಗ್ಗು ಅಂತೆಮಣ್ಣ ಘಮಲಿನಂತೆ ಹರಡಿತು ಇರುಳ ರಾಗ ಕದಪ ಮೇಲೆನವ ಯೌವನದ ಅಲೆಗಳಲಿರಂಜಿಸಿತು ಮನವು ಮಧುರರಾಗ ಗುನುಗುವಂತೆ ಅಂತೆಹೊಸೆದು ಹೊಸತು ಹಾಡಿತು ಮನವು ತೋಯ್ದ ಪರಿಗೆತನುವು ತಾನು ನಡುಗಿತುಬಳ್ಳಿ ಚಿಗುರು ಮರವನಪ್ಪಿಬೆಚ್ಚಗಾಗುವಂತೆ ಅಂತೆನೆಚ್ಚು ಹೆಚ್ಚಿ ಬಲವಾಯಿತು ಅಧರ ಬಿರಿದು ಮಧುರನುಡಿದು ಪಿಸು ಮಾತಿನಬಿಸಿ ಎದೆಗೆ ಇಳಿದಂತೆಅಂತೆ ಒಲವು ಆವರಿಸಿತು ಮಳೆಯೆಂದರೆ ಒಲವುಒಲವೆಂದರೆ ನೆನೆದ ನೆಲದಒದ್ದೆಯಂತೆ ಅಂತೆ ಎಂದುಮತ್ತೆ ಸಾರಿತು ಮನವುಮಧುರವಾಗಿ ನಡುಗಿತು ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗೋಡೆಯ ಮೇಲಾಡುವ ಚಿತ್ರ ಬಿದಲೋಟಿ ರಂಗನಾಥ್ ಒಳಬರಲಾದ ಬಾಗಿಲಲ್ಲಿಕಾದು ಕುಳಿತು ನಿನ್ನ ಪ್ರೀತಿಗೊಸ್ಕರ ಹಸಿದೆಚಂದಿರನ ಅಷ್ಟೂ ಬೆಳಕು ನಿನ್ನ ಕಣ್ಣಲ್ಲಿತ್ತುನೀನು ಪಾದಗಳು ನೆಲ ಸೋಕುವುದು ಬೇಡವೆಂದುರಂಗೋಲಿ ಬರೆದು ಕೂತೆ ಮುಗುಳು ನಗೆ ಮೆತ್ತಿರಂಗೋಲಿಗೂ ಕಣ್ಣು ಕಿವಿ ಎಲ್ಲಾ ಮೂಡಿದವು ನೀನು ಮಾತ್ರ ಬರಲಿಲ್ಲ ಗೋಡೆ ನೋಡುತ್ತಾ ಕೂತವನಿಗೆಅದರ ಮೇಲಾಡುವ ಚಿತ್ರ ಕರೆದಂತಾಯಿತುಅರೆ ! ಅವಳೇ ಅಲ್ಲವೆ ?ನನ್ನ ಚಿತ್ತಾರದ ಗೊಂಬೆಇಲ್ಲಿಗೂ ಬಂದಳೇ ?ಇಲ್ಲ ನಾನೇ ಅಲ್ಲಿಗೆ ಹೋದೆನೆ ?ಕಣ್ಣುಜ್ಜಿಕೊಂಡು ಮತ್ತೆ ಮತ್ತೆ ನೋಡಿದೆನವಿಲು ರೆಕ್ಕೆಬಿಚ್ಚಿ ನರ್ತಿಸುವಂತೆಗೋಡೆಯ ಮೇಲಿನ ಚಿತ್ರ ! ತುಟಿಯ ಮೇಲಿನ ಮೃದು ಮಾತುಸಣ್ಣಗೆ ಕೇಳಿಸುತ್ತಿದೆಆ ಚೆಲುವಿನ ನಗ್ನತೆಯಲಿ ದೇವರಿದ್ದಾನೆಬಾಹುಗಳು ಮುಂದೆ ಚಾಚುತ್ತಿವೆಮುಟ್ಟಲು ಹೋದರೆಬೆರಳಿಗಂಟಿದ ಸುಣ್ಣದ ಗುರುತು ! ಎಷ್ಟು ಚೆಂದ !ಕಡಲಿಗೆ ಕಣ್ಣಾಗಿ ಬೆಳಕಾದವಳ ಬಣ್ಣಮೌನದ ತುಟಿಗಳ ನಡುವೆಅಡಗಿದ ಜಗದ ರಹಸ್ಯನನ್ನೆಲ್ಲಾ ವಾಂಛೆಗಳನ್ನು ಹೀರಿಕನ್ನಡಿಗೆ ಮೆತ್ತಿದಳು ಕರುಳು ಕಲೆತ ಆ ಊರಲ್ಲಿಅವಳ ಗೆಜ್ಜೆ ಸದ್ದು ಕೇಳುತ್ತಿದೆನೀಳ ಕೇಶರಾಶಿಯ ತೂಕ ನನ್ನ ಬೆನ್ನ ಸವರುತ್ತಿದೆಕಣ್ಣಲ್ಲೇ ಬರೆದ ಪ್ರೇಮ ಪತ್ರಹೃದಯವ ತಬ್ಬಿದೆ ಮೂಗಿನ ತುದಿಯ ಪ್ರೀತಿಗೆಅವಳ ಮೂಗು ನತ್ತು ಮಿಂಚುತ್ತಿದೆಗೋಡೆಯೇ ಅವಳಾಗಿದ್ದಾಳೆಇಡೀ ಸೀರೆಯೊಳಗೆ ನನ್ನದೇ ಭಾವ ಚಿತ್ರ ! ******

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ      ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ ಓಲ್ಗಾ ಅವರ ಬಹುಚರ್ಚಿತ ಕೃತಿಗಳಲ್ಲಿ ಒಂದು. ಓಲ್ಗಾ ಎಂಬ ಹೆಸರಿನಿಂದಲೇ ದೇಶದಾದ್ಯಂತ ಗುರುತಿಸಿಕೊಂಡಿರುವ ಪೋಪೂರಿ ಲಲಿತ ಕುಮಾರಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ, ಚಿಂತಕಿ, ಅನುವಾದಕಿ, ಹಾಗೂ ಮಹಿಳಾ ಹಕ್ಕುಗಳ ಹೋರಾಟಗರ್ತಿಯಾಗಿರುವ ಇವರು ಪ್ರಸ್ತುತ ತೆಲುಂಗಾಣದ ಸಿಕಂದ್ರಾಬಾದಿನಲ್ಲಿ ನೆಲೆಸಿದ್ದಾರೆ. ಸ್ವೇಚ್ಛ, ನೀಲಿ ಮೇಘಾಲು, ರಾಜಕೀಯ ಕಥಲು, ಮಾಕು ಗೋಡಲು ಲೇವು, ಪ್ರಯೋಗಂ, ವಿಮುಕ್ತ ಇವು ಇವರ ಬಹುಚರ್ಚಿತ ಕೃತಿಗಳು. ಈ ವಿಮುಕ್ತ ಕೃತಿ ಹಲವು ಭಾಷೆಗಳಲ್ಲಿ ಅನುವಾದಗೊಂಡಿವೆ.  ಡಾ. ಸುಪ್ರಿಯ ಎಂ. ಅವರು ಇದನ್ನು ಮಲಯಾಳಕ್ಕೆ ಅನುವಾದ ಮಾಡಿದ್ದಾರೆ.         ಅಜಯ್ ವರ್ಮಾ ಅಲ್ಲೂರಿ ಅವರು ಈ ಕಥಾ ಸಂಕಲನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಜ್ಞಾನದ ವಿದ್ಯಾರ್ಥಿಯಾದ ಅಜಯ್ ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರಿನವರು. ಕ್ರೈಸ್ಟ್ ಕಾಲೇಜಿನ ಬೇಂದ್ರೆ ಕಾವ್ಯ ಸ್ಪರ್ಧೆ, ಅ ನ ಕೃ ಕಥಾ ಸ್ಪರ್ಧೆಗಳಲ್ಲಿ ಬಹುಮಾನಿತರು. ಗಗನ ಸಿಂಧು (ಕವಿತೆಗಳು), ಡಯಾನ ಮರ (ಅಲೆಹಾಂದ್ರಾ ಪಿಜಾರ್ನಿಕ್ ಸ್ಪಾನಿಶ್ ಕವಿತೆಗಳ ಕನ್ನಡಾನುವಾದ), ಕಲಲ ಇನ್ನೀಟ ಪಾಟ ( ವಿಭಾ ಅವರ ಕವಿತೆಗಳ ತೆಲುಗು ಅನುವಾದ) ಅವರ ಪ್ರಕಟಿತ ಕೃತಿಗಳು. ಕಳೆದ ಎರಡು ಮೂರು ವರ್ಷಗಳಿಂದೀಚೆ ಅನುವಾದ ಕ್ಷೇತ್ರದಲ್ಲಿ ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಸದ್ಯ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ  ಎಂ.ಎಸ್ಸಿ (ಭೌತಶಾಸ್ತ್ರ) ಓದುತ್ತಿದ್ದಾರೆ.            ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯಲ್ಲಿ ಒಟ್ಟು ೬ ಕಥೆಗಳಿವೆ. ವಾಲ್ಮೀಕಿ ರಾಮಾಯಣದಲ್ಲಿ ಬರುವ ಶೂರ್ಪನಖಿ, ಅಹಲ್ಯೆ, ರೇಣುಕ, ಮಂಡೋದರಿ ಊರ್ಮಿಳೆಯ ಪಾತ್ರಗಳು ಒಮ್ಮೆ ಮಿಂಚಿ ಮರೆಯಾಗುವುದಾದರೂ ಹಲವು ಕಾರಣಗಳಿಂದ ಓದುಗರ ಮನದಾಳದಲ್ಲಿ ಬೇರೂರಿ ನಿಂತಿವೆ. ರಾಮಾಯಣದಲ್ಲಿ ಅಮುಖ್ಯವಾಗಿ ಪರಿಗಣಿಸಲಾದ ಈ ಪಾತ್ರಗಳನ್ನು  ಓಲ್ಗಾ ಅವರು ತಮ್ಮ ಕಥೆಗಳಲ್ಲಿ ಕೇಂದ್ರ ಪಾತ್ರಗಳಾಗಿ ಆಯ್ದುಕೊಂಡು ಅವುಗಳಿಗೊಂದು ಅಸ್ಥಿತ್ವವನ್ನು ನೀಡುವ ಪ್ರಯತ್ನ ಮಾಡುತ್ತಾರೆ. ಈ ಪಾತ್ರಗಳೆಲ್ಲವೂ ಕಥಾ ನಾಯಕಿ ಸೀತೆಯೊಡನೆ ಬೇರೆ ಬೇರೆ ಕಾಲಘಟ್ಟಗಳಲ್ಲಿ ಸಂವಾದಿಸುತ್ತವೆ.  ಹಾಗೆ ಸೀತೆಯೊಂದಿಗಿನ ಭೇಟಿಯಲ್ಲಿ ಆ ಪಾತ್ರಗಳು ತಮ್ಮ ಅಂತರಂಗವನ್ನು ತೆರೆದು ತೋರಿಸುತ್ತವೆ.  ಅವುಗಳಿಂದ ಸೀತೆ ಹಲವು ಹೊಸ ವಿಚಾರಗಳನ್ನು ತಿಳಿದುಕೊಳ್ಳುತ್ತಾಳೆ. ಆ ಹೊಸ ಅರಿವಿನ ಬೆಳಕು ಕೊನೆಗಾಲದಲ್ಲಿ ಆಕೆಯನ್ನು ಮುನ್ನಡೆಸುತ್ತದೆ. ರಾಮನಿಂದ ಪರಿತ್ಯಕ್ತಳಾದ ಸೀತೆ ವಾಲ್ಮೀಕಿ ಆಶ್ರಮದಲ್ಲಿ ಮಕ್ಕಳ ಬೆಳವಣಿಗೆಯನ್ನು ಕಾಣುತ್ತಾ ಅವರ ಸಂಭ್ರಮದಲ್ಲಿ ತನ್ನ ಖುಷಿಯನ್ನು ಅರಸುತ್ತಿರುತ್ತಾಳೆ. ಅದೇ ಸಂದರ್ಭದಲ್ಲಿ ಈ ಪಾತ್ರಗಳನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ. ಈ ಕಥೆಗಳ ಶೀರ್ಷಿಕೆಗಳೂ ಅರ್ಥಪೂರ್ಣವಾಗಿದ್ದು ಆಕರ್ಷಣೀಯವಾಗಿದೆ.          ಮೊದಲ ‘ಸಮಾಗಮ’ ಕಥೆಯಲ್ಲಿ, ಲವಕುಶರ ನಿಮಿತ್ತ ಸೀತೆ ಮತ್ತು ಶೂರ್ಪನಖಿಯರ ಅನಿರೀಕ್ಷಿತ ಭೇಟಿ ನಡೆಯುತ್ತದೆ. ತನ್ನ ಸೌಂದರ್ಯವನ್ನು ಕಳಕೊಂಡು ಇತರರ ಅವಮಾನ, ಪರಿಹಾಸ್ಯ, ನಿಂದನೆಗೆ ಗುರಿಯಾದ ಶೂರ್ಪನಖಿ ನೋವುಗಳನ್ನು ಮರೆಯಲು ಪ್ರಕೃತಿಯನ್ನು ಪ್ರೀತಿಸತೊಡಗುತ್ತಾ ತನ್ನೊಳಗಲ್ಲೂ ಸೌಂದರ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುತ್ತಾಳೆ. ನಿಸರ್ಗದ ಸೌಂದರ್ದಲ್ಲಿ ಖುಷಿಯನ್ನು ಅರಸುತ್ತಾ, ಹೂದೋಟವನ್ನು ಬೆಳೆಸುವ ಮೂಲಕ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಾಳೆ. ಇಲ್ಲಿ ಬಾಹ್ಯ ಸೌಂದರ್ಯಕ್ಕಿಂತಲೂ ಅಂತರಂಗದ ಸೌಂದರ್ಯವೇ ಮಿಗಿಲೆಂದು ಲೇಖಕಿ ಪ್ರತಿಪಾದಿಸುತ್ತಾರೆ.   ‘ಮೃಣ್ಮಯನಾದ’ ಕಥೆಯಲ್ಲಿ ತನ್ನದಲ್ಲದ ತಪ್ಪಿಗೆ ಗಂಡನಿಂದಲೇ ಶಾಪಕ್ಕೊಳಗಾಗಿ ಕಲ್ಲಾಗಿ ಯುಗಗಳ ಕಾಲ ರಾಮನ ಪಾದ ಸ್ಪರ್ಶಕ್ಕಾಗಿ ಕಾದು ಶಾಪ ವಿಮೋಚನೆ ಪಡೆದ ಅಹಲ್ಯೆಯನ್ನು ಕಾಣಬಹುದು. ವನವಾಸದ ಕಾಲದಲ್ಲಿ ಸೀತೆಯು ಅಹಲ್ಯೆಯನ್ನು ಭೇಟಿಯಾಗುತ್ತಾಳೆ.  ತನ್ನ ಜೀವನಾನುಭವದಿಂದ ತಿಳಿದುಕೊಂಡ ವಿಚರಾಗಳನ್ನು ಅಹಲ್ಯೆ ಹಂಚಿಕೊಳ್ಳುವಾಗ “ವಿಚಾರಣೆ ಮಾಡುವುದೆಂದರೇನು ಸೀತಾ?  ಅಪನಂಬಿಕೆ ತಾನೆ! ಅದಕಿಂತಲೂ ಯಾವುದೋ ಒಂದು ನಂಬಿಕೆಯೇ ಲೇಸಲ್ಲವೇ? ಎಂಬ ಮಾತು ಆ ಕ್ಷಣಕ್ಕೆ ಅರ್ಥವಾಗದಿದ್ದರೂ ಮುಂದೊಂದು ದಿನ ಸೀತೆಗೆ ಅಗ್ನಿಪರೀಕ್ಷೆ ಸಂದರ್ಭದಲ್ಲಿ ಮನವರಿಕೆಯಾಗುತ್ತದೆ. ಮುಂದೆ ಬಸುರಿಯಾಗಿದ್ದಾಗ ಮತ್ತೊಮ್ಮೆ ಅಹಲ್ಯೆಯೊಡನೆ ಮಾತನಾಡುತ್ತಾಳೆ. ಆಗ ಸೀತೆ ಆಕೆಯ ಮಾತುಗಳಿಂದ ತನ್ನನ್ನು ತಾನು ಅರಿತುಕೊಳ್ಳುತ್ತಾಳೆ. ಅದನ್ನೇ ಮುಂದೊಂದು ದಿನ ರಾಮನಿಗೂ ಹೇಳುತ್ತಾಳೆ. “ನಾನು ಭೂಪುತ್ರಿ ರಾಮಾ, ನಾನು ಯಾರೆಂದು ಈಗ ಅರಿತುಕೊಂಡಿದ್ದೇನೆ. ಈ ಇಡೀ ಲೋಕವೆಲ್ಲ ನನ್ನದೇ. ಯಾವ ಕೊರತೆಯೂ ಇಲ್ಲ ನನಗೆ, ನಾನು ಭೂಪುತ್ರಿ” ಎಂದು ಹೇಳುತ್ತಾ ಮಕ್ಕಳನ್ನು ರಾಮನಿಗೊಪ್ಪಿಸಿ ಎಲ್ಲಾ ಬಂಧನಗಳಿಂದಲೂ ಮುಕ್ತಳಾಗಲು ಬಯಸುತ್ತಾಳೆ. ‘ಮರಳ ಮಡಕೆ’  ಕಥೆಯಲ್ಲಿ, ಒಬ್ಬ ಗಂಡಸನ್ನು ನೋಡಿ ಚಂಚಲಗೊಂಡದ್ದಕ್ಕೆ ಗಂಡನಾದೇಶದಂತೆ ಮಗನಿಂದ ಶಿಕ್ಷೆಗೊಳಗಾದ ರೇಣುಕೆಯದ್ದೇ ಪ್ರಧಾನ ಪಾತ್ರ. ಗಂಡ ಮಕ್ಕಳಿಂದ ದೂರವಾಗಿ ಏಕಾಗ್ರತೆಯಿಂದ ಶಿಲ್ಪಗಳನ್ನು ತಯಾರಿಸುತ್ತಾ ಆ ಕಲೆಯನ್ನು ಮತ್ತೊಬ್ಬರಿಗೆ ಕಲಿಸುತ್ತ ಹೊಸ ಬದುಕು ಕಟ್ಟಿಕೊಂಡ ರೇಣುಕೆ “ಗಂಡಂದಿರ ಕುರಿತು, ಮಕ್ಕಳ ಕುರಿತು ನನಗೆ ಗೊತ್ತಿದ್ದಷ್ಟು ಮತ್ತಾರಿಗೂ ಗೊತ್ತಿಲ್ಲ” ಎಂಬ ಅನುಭವಜನ್ಯವಾದ ಮಾತು ಸೀತೆಗೆ ಮೊದಲು ಅರ್ಥವಾಗದಿದ್ದರೂ ಮುಂದೆ ಪರಿಸ್ಥಿತಿಯೆ ಆಕೆಗದನ್ನು ಅರ್ಥಮಾಡಿಸುವುದು ವಿಪರ್ಯಾಸ. ‘ವಿಮುಕ್ತೆ’ ಕಥೆಯಲ್ಲಿ, “ಎಲ್ಲ ದುಃಖಗಳಿಗೂ ಮೂಲ ಕಾರಣ ಅಧಿಕಾರವೇ ಅಕ್ಕಾ” ಎಂದು ಹೇಳುವ ಊರ್ಮಿಳೆ ಯಾರ ಅಧಿಕಾರಕ್ಕೂ ಅಧೀನಳಾಗದೆ, ಅಧಿಕಾರದಿಂದ ಯಾರನ್ನೂ ಬಂಧಿಸಲು ಪ್ರಯತ್ನಿಸದೆ ಮುಕ್ತಳಾಗಲು ಬಯಸುತ್ತಾಳೆ. ಏಕಾಂತ ಮತ್ತು ಧ್ಯಾನದಲ್ಲೇ ತನ್ನ ನೆಮ್ಮದಿ, ಪ್ರೀತಿಯನ್ನು ಅರಸುತ್ತಾಳೆ. ಈ ಸಂದರ್ಭದಲ್ಲಿ ಊರ್ಮಿಳೆಯ ಬಗ್ಗೆ ಶೀಲಾ ಭಂಡಾರ್ಕರ್ ಅವರು ಬರೆದ  ‘ತಪ್ತ ಮೈಥಿಲಿ’ ಎಂಬ ಬರಹ ನೆನಪಾಗುತ್ತದೆ. ಅದರಲ್ಲೂ ಊರ್ಮಿಳೆಯ ಅಂತರಂಗದ ಶೋಧನೆಯಿದೆ. ‘ಅಶೋಕ’  ಕಥೆಯಲ್ಲಿ ಪತಿವ್ರತೆಯರ ಸಾಲಿನಲ್ಲಿ ಗುರುತಿಸಲ್ಪಟ್ಟ ಮಂಡೋದರಿಯ ವ್ಯಕ್ತಿತ್ವದ ಪರಿಚಯವಿದೆ. ಅಶೋಕವನವು ರಾವಣ ಮಂಡೋದರಿಗೆ ನೀಡಿದ ಒಲವಿನ ಉಡುಗೊರೆ. ಅಲ್ಲಿ ಮಂಡೋದರಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಾಳೆ. ಅದು ಆಕೆಯ ಧ್ಯಾನ ಮಂದಿರವೂ ಆಗಿರುತ್ತದೆ. ಅಲಂಕಾರಗಳನ್ನು ಮಾಡುವುದರಲ್ಲೇ ಜೀವನೋತ್ಸಾಹವನ್ನು ಕಾಣುವ ಮಂಡೋದರಿ ತನ್ನ ಆಚಾರ ವಿಚಾರ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬರುವುದನ್ನು ಕಾಣಬಹುದು. ಹಾಗೇ ರಾವಣ ತಪ್ಪು ಹಜ್ಜೆಗಳನ್ನಿಡುವಾಗಲೆಲ್ಲ ಆತನನ್ನು ಸದಾ ಎಚ್ಚರಿಸುವ  ಮಂಡೋದರಿ, ರಾವಣ ಸತ್ತಾಗ,  ಆರ್ಯ ಧರ್ಮದ ವಿಧವೆಯರಂತೆ ಬದುಕಲು ಒಪ್ಪದೆ ಸದಾ ಸರ್ವಾಲಂಕಾರಭೂಷಿತಳಾಗಿರಲು ಬಯಸುತ್ತಾಳೆ. “ಈ ಮಂಡೋದರಿ ಆರ್ಯ ಧರ್ಮಗಳನ್ನು ಅನುಸರಿಸಿ ನಿರಲಂಕಾರಿಯಾಗುವವಳಲ್ಲ. ವೈಧವ್ಯವನ್ನು ಹೊಂದುವವಳಲ್ಲ” ಎಂದು ಪ್ರತಿಭಟಿಸುತ್ತಾಳೆ. ಕುಮಾರಸ್ವಾಮಿ ತೆಕ್ಕುಂಜ ಅವರು ‘ಮಂಡೋದರಿಯ ಪಾತ್ರವನ್ನಿಟ್ಟುಕೊಂಡು ಕಾದಂಬರಿ ಬರೆದಿದ್ದಾರೆ. ಹಾಗೆಯೇ ಭಾಗ್ಯರೇಖಾ ದೇಶಪಾಂಡೆ ಅವರೂ ಮಂಡೋದರಿ ಪಾತ್ರವನ್ನು ಆಳವಾಗಿ ಅಭ್ಯಸಿಸಿ ಒಂದು ಕಾದಂಬರಿಯನ್ನು ನೀಡಿರುವುದು ಗಮನಾರ್ಹ. ‘ಬಂಧಿತ’ ಕಥೆಯಲ್ಲಿ, ರಾಜನಾಗಿ,  ಪ್ರಜಾಪಾಲಕನಾಗಿ ಅಧಿಕಾರ ಕರ್ತವ್ಯಗಳ ಮಧ್ಯೆ ಸಿಲುಕಿ ನಲುಗಿ ಹಲುವು ವಿಚಾರಗಳಲ್ಲಿ ಬಂಧಿತನಾಗಿ, ಕುಟುಂಬ, ಸಂಬಂಧ ಪ್ರೀತಿ ಎಲ್ಲದರಿಂದಲೂ ದೂರ ನಿಂತು ತನ್ನನ್ನು ತಾನೇ ಬಂಧನಕ್ಕೊಳಪಡಿಸಿಕೊಂಡು ಪ್ರಜೆಗಳಿಗಾಗಿ, ಆರ್ಯ ಧರ್ಮದ ಉಳಿವಿಗಾಗಿ ಬದುಕಿದ ರಾಮನಿದ್ದಾನೆ.           ಓಲ್ಗಾ ಅವರು ‘ಸೋದರಿತ್ವವೇ ಮಹಿಳೆಯರ ವಿಮೋಚನೆಯ ಪರಿಣಾಮಕಾರಿ ವಿಧಾನ ಎಂದು ದೃಢವಾಗಿ ನಂಬಿದವರು” ಆದ್ದರಿಂದಲೇ ಈ ಸೋದರಿತ್ವದ ಭಾವನೆ ಇಲ್ಲಿನ ಕಥಾ ಪಾತ್ರಗಳಲ್ಲಿ ಗಮನಿಸಬಹುದು. ಸೀತೆ ಭೇಟಿಯಾಗುವ ಎಲ್ಲಾ ಸ್ತ್ರೀ ಪಾತ್ರಗಳು ಈ ಭಾವನೆಯನ್ನು ಬೆಳೆಸಿಕೊಂಡಿದೆ. ಇವರ ಜೀವನ ಅನುಭವಗಳ ಮಾತಿನಿಂದ ಸೀತೆಯೂ ಸತ್ಯಾಸತ್ಯಗಳ ನಡುವಿನ ವಿಚಾರಗಳನ್ನು ತಿಳಿದುಕೊಂಡು ಎಲ್ಲ ಬಂಧನಗಳಿಂದಲೂ ಹೊರಗೆ ಬಂದು ಸ್ವತಂತ್ರಳಾಗಿಬಿಡುತ್ತಾಳೆ. ಸಮಾಜದಲ್ಲಿ ಪುರುಷನಿಂದ ಗುರುತಿಸಿಕೊಳ್ಳುವ ಆಕೆ ನಿಜದ ಅರಿವಾದಾಗ ತಾನು ಕೇವಲ ಭೂಪುತ್ರಿಯಾಗಿ ಉಳಿಯುವ ದಿಟ್ಟ ತೀರ್ಮಾನ ಕೈಗೊಳ್ಳುವುದು ಶ್ಲಾಘನೀಯ.  ಹೀಗೆ ಓಲ್ಗಾ ಅವರು ಈ ಪಾತ್ರಗಳ ಮೂಲಕ ಹೊಸತೊಂದು ಲೋಕವನ್ನು ನಮ್ಮ ಮುಂದೆ ತೆರೆದಿಡುತ್ತಾರೆ. ಆ ಲೋಕವನ್ನು ಪ್ರವೇಶಿಸಿದ ಓದುಗಾರಿಗೆ ಅಲ್ಲಿ ಹಲವು ಅಚ್ಚರಿಗಳೂ ಕಾದಿರುತ್ತದೆ.  ಅಜಯ್ ಅವರ ಅಲಂಕಾರಗಳಿಲ್ಲದ ನೇರ ಮತ್ತು ಸರಳವಾದ ಭಾಷೆ, ಕಥಾ ನಿರೂಪಣೆ, ಎಲ್ಲವೂ ಓದುತ್ತಾ ಹೋದಂತೆ ಆಪ್ತವಾಗಿಬಿಡುತ್ತದೆ. ಈ ಕಥೆಗಳೆಲ್ಲವೂ ಬಹಳ ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ.           ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡ ಈ ಸಂಕಲನಕ್ಕೆ ಬಿ. ಎನ್ ಸುಮಿತ್ರಾಬಾಯಿ ಅವರು ಮುನ್ನುಡಿ ಬರೆದಿದ್ದಾರೆ. ಇದರಲ್ಲಿ ಓ ಎಲ್ ನಾಗಭೂಷಣಸ್ವಾಮಿ ಅವರ ಅಭಿಪ್ರಾಯವೂ ಇದೆ.  “ಇದು ಪೌರಾಣಿಕ ನಾಯಕಿಯರ ಅಂತರಂಗದ ಅಷ್ಟೇ ಅಲ್ಲ ರಾಮನಂಥವರ ಒಳತೋಟಿಗಳನ್ನೂ ಆಳಕ್ಕಿಳಿದು ಗ್ರಹಿಸಿದೆ” ಎನ್ನುವ ವೈದೇಹಿಯವರು ಇದಕ್ಕೆ ಬೆನ್ನುಡಿ ಬರೆದಿದ್ದಾರೆ.  ಅಜಯ್ ಅವರು ಓಲ್ಗಾ ಅವರೊಂದಿಗೆ ನಡೆಸಿದ ಸಂದರ್ಶನವನ್ನು ಕೊನೆಯ ಭಾಗದಲ್ಲಿ ಹಂಚಿಕೊಂಡಿರುವುದರಿಂದ ಅವರ ಬಗ್ಗೆ ತಿಳಿದುಕೊಳ್ಳಲು ಓದುಗರಿಗೆ ಸಹಕಾರಿಯಾಗಿದೆ.  ಇದು ಒಂದು ಅನುವಾದಿತ ಕೃತಿಯಾಗಿದ್ದರೂ ಆ ಭಾವನೆ ಬರಂದಂತೆ ತುಂಬ ಮುತುವರ್ಜಿಯಿಂದ ಸ್ವಂತಿಕೆಯನ್ನುಳಿಸಿಕೊಂಡು ಅಜಯ್ ಅನುವಾದಿಸಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಉತ್ತಮ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಓಲ್ಗಾ ಅವರನ್ನು ಕನ್ನಡಿಗರಿಗೂ ಪರಿಚಯಿಸಿದ್ದಕ್ಕೆ ಕೃತಜ್ಞತೆಗಳು. ಇಂತಹ ಉತ್ತಮ ಕೃತಿಗಳನ್ನು ಅನುವಾದ ಮಾಡುತ್ತಿರಿ ಕನ್ನಡಿಪರಿಚಯಿಸುತ್ತಿರಿ. ನಿಮ್ಮ ಬರವಣಿಗೆಯೂ ನಿರಂತರವಾಗಿರಲಿ. ******** ಚೇತನಾ ಕುಂಬ್ಳೆ

ಪುಸ್ತಕ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ‌ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ ನೀರಸಮನದ ಜ್ಞಾನ ಪಾದರಸನೀ ಮಾತೊಳು ತರುವಕಲೆಯ, ಮೌನದಿ ಪಡೆದವ ನಾ ಹತ್ತಿಕ್ಕಿ ಬಚ್ಚಿಟ್ಟ ಮಾತುಮೌನದ ಮಣಿ ಪೋಣಿಸದುಉಕ್ಕುಕ್ಕಿ ಹರಿವ ನನ್ನ ಮಾತುಚಂದದ‌ ಹಾರವಾಗಿಸದು ನನ್ನ ಗತ್ತಿನ ಭಾವ ತಂದಿತ್ತುನನಗೆ ಗೊತ್ತು ಎಂಬ ಗಮ್ಮತ್ತುತಿಳಿಯದೆ ನಾ ಆಡಿದರೂಮೌನದಲೇ ದಂಡಿಸದಿರು ಧರಿಸಿ ಧರಿತ್ರಿಯಾದೆ ನೀನುಪಾದಕ್ಕೆರಗಿ ಸೇವೆಗೈವೆ ನಾನುಕ್ಷಮಿಸು ಭರಿಸು ನನ್ನ ಮಾತನುಶೇಖರಿಸಿ ನಿನ್ನ ಮೌನವನು ***********

ಕಾವ್ಯಯಾನ Read Post »

You cannot copy content of this page

Scroll to Top