ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ದೀಪಾಜಿ ಬದುಕು ಬಯಲಾಗಿದೆ ಬಾಳು ಹಣ್ಣಾಗಿದೆ ಬೇಕೆ ನಿನಗೀಗ ದೀಪದೇಹ ಬೆಂಡಾಗಿದೆ ಮನವೂ ಮಾಗಿಹೋಗಿದೆ ಬೇಕೆ ನಿನಗೀಗ ದೀಪ ಸುತ್ತಲು ಆವರಿಸಿ ನಿಂತ ಮಬ್ಬುಗತ್ತಲಿಗೆ ಎಷ್ಟೆಣ್ಣೆ ಸುರಿವೆಬಾಯ್ತುಂಬಿಕೊಂಡ ಗಾಳಿ ಉದುವ ದ್ವೇಷಿಗಳಿಗೆ ನಂಜಿದೆ ಬೇಕೆ ನಿನಗೀಗ ದೀಪ ಒಂದಿಷ್ಟು ಮೆಟ್ಟಿಲಾಚೆ ಬಾಗಿಲಿಲ್ಲದ ಬದುಕೊಂದಿದೆಸುತ್ತೆಲ್ಲ ಸಣ್ಣಗೆ ಮಳೆ ಇದೆ ದೀವಟಿಗೆ ಕುಡಿ ಮೇಲೆ ಅಂಗೈ ಹಿಡಿದೆ ಬೇಕೆ ನಿನಗೀಗ ದೀಪ.. ಕೂಸೆರಡು ಕೈಹಿಡಿದು ಪ್ರೇಮದಾರಿ ತೋರಿಸುತಿವೆಮುಳ್ಳ ಕಣಿವೆಯ ಮೇಲೆ ಮಮತೆಯ ಸೇತುವೆ ಕಟ್ಟಲಾಗಿದೆ ಬೇಕೆ ನಿನಗೀಗ ದೀಪ.. ಗಂವ್…ಎನ್ನುವ ಯೌವನವಿಲ್ಲ ಹುಚ್ಚೆಬ್ಬಿಸುವ ಕಾಮದ ತಹತಹಿ ಇಲ್ಲಇದ್ದುದೊಂದೆ ವಾತ್ಸಲ್ಲ ಹಿಡಿಯಷ್ಟು ಒಲವು ಇದೆ ಬೇಕೆ ನಿನಗೀಗ ದೀಪ… *******

ಕಾವ್ಯಯಾನ Read Post »

ಇತರೆ

ಪ್ರಸ್ತುತ

ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಗಂಗಾಧರ ಬಿ ಎಲ್ ನಿಟ್ಟೂರ್ ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಅವಲೋಕಿಸಲೇಬೇಕಾದ ಕೆಲ ಅಂಶಗಳು  //    ಪರಸ್ಪರ ಪರಿಚಯ, ವಿಚಾರ ವಿನಿಮಯ, ಆರೋಗ್ಯಕರ ಚರ್ಚೆ, ಪ್ರತಿಭೆಯ ಅನಾವರಣ ಹಾಗೂ ಹೊಸ ಕಲಿಕೆಯ ಮೂಲ ಉದ್ದೇಶದಿಂದ ಇಂದು ಎಲ್ಲ ಕ್ಷೇತ್ರದಲ್ಲೂ ಸಾಮಾಜಿಕ ಜಾಲತಾಣವನ್ನು ಮಾಧ್ಯಮವನ್ನಾಗಿಸಿಕೊಂಡು ಒಂದಲ್ಲ ಒಂದು ವಾಟ್ಸಾಪ್ ಅಥವಾ ಫೇಸ್‌ಬುಕ್ ಗುಂಪು ರಚನೆಯಾಗಿರುವುದು ಸರ್ವರಿಗೂ ತಿಳಿದ ಸಾಮಾನ್ಯ ಸಂಗತಿ. ಯಾರು ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ, ಅಭಿರುಚಿ ಇದೆಯೋ ಅಂಥವರು ತಮ್ಮಿಷ್ಟದ ಆಯಾ ಕ್ಷೇತ್ರದ ಒಂದು ಅಥವಾ ಹಲವು ಗುಂಪುಗಳಲ್ಲಿ ಸಕ್ರಿಯ ಸದಸ್ಯರಾಗಿ ಗುಂಪಿನ ಸದ್ಭಳಕೆಯಲ್ಲಿ ತೊಡಗಿದ್ದಾರೆ.       ಸದಾ ಒಂದಿಲ್ಲೊಂದು ಕ್ರಿಯಾತ್ಮಕ ಚಟುವಟಿಕೆ ರೂಪಿಸಿ ಸರ್ವ ಸದಸ್ಯರನ್ನು ಹುರಿದುಂಬಿಸಿ ಸೃಜನಶೀಲತೆ ಮತ್ತು ಕ್ರಿಯಾಶೀಲತೆಗೆ ವೇದಿಕೆ ಕಲ್ಪಿಸುತ್ತಿರುವ ವಿವಿಧ ಬಳಗಗಳ ಸಂಚಾಲಕರು ಅಥವಾ ಅಡ್ಮಿನ್ ಗಳ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ.    ಆಯಾ ಕ್ಷೇತ್ರದ ಬಳಗಗಳು ತಮ್ಮ ಬಳಗದ ಸದಸ್ಯರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ನಾನಾ ಪ್ರಕಾರಗಳನ್ನು ಪರಿಚಯಿಸುವ ಮತ್ತು ಅದರಲ್ಲಿ ತೊಡಗಿಸುವ ವಿವಿಧ ಸ್ಪರ್ಧೆಗಳನ್ನು ನಡೆಸಿ ಸಲಹೆ ಸೂಚನೆಗಳೊಂದಿಗೆ ಜ್ಞಾನಾರ್ಜನೆಗೆ ಇಂಬು ನೀಡುತ್ತಿರುವುದಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಫರ್ಧಾಥಿಗಳಿಗೆ ಪುಸ್ತಕ ಅಥವಾ ನಗದು ರೂಪದ ಪುರಸ್ಕಾರ ಇಲ್ಲವೇ 3 ಬಹುಮಾನಗಳ ಘೋಷಣೆ ಮಾಡುವ ಮೂಲಕ ಪ್ರೋತ್ಸಾಹಿಸುತ್ತಿವೆ. ಕೆಲವೇ ಕೆಲ ಬಳಗಗಳು ಮಾತ್ರ ಭಾಗವಹಿಸುವ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸ್ಥಾನ ನೀಡಿ ಉತ್ತೇಜಿಸುವ ಜತೆ ಅಭಿನಂದನಾ ಪತ್ರ ನೀಡಿ ಗೌರವಿಸುವ ಸಂಪ್ರದಾಯ ರೂಢಿಸಿಕೊಂಡಿವೆ. ಇದು ಸ್ತುತ್ಯಾರ್ಹ ಮತ್ತು ಮಾದರಿ ಕಾರ್ಯ. ಇತರೆ ಗ್ರೂಪ್ ಗಳ ಚಟುವಟಿಕೆಗಳಿಗಿಂತಲೂ ವಿಭಿನ್ನ, ವಿಶೇಷ ನಡೆ ಎಂದು ಬಣ್ಣಿಸುವ ಜತೆ ಇದು ಆಯಾ ಬಳಗದ ಮುಖ್ಯಸ್ಥರ ಸಹೃದತೆಗೆ ಸಾಕ್ಷಿಯೂ ಸಹ ಆಗಿದೆ ಎಂದರೂ ಅತಿಶಯೋಕ್ತಿ ಏನಲ್ಲ.        ಆದಾಗ್ಯೂ ಈ ಪ್ರೋತ್ಸಾಹ – ಪ್ರೇರಣೆಗೆ ಮೌಲ್ಯ – ಘನತೆ ಇಮ್ಮಡಿಸುವ ನಿಟ್ಟಿನಲ್ಲಿ, ಬಳಗದ ಚಟುವಟಿಕೆಗಳು ಮತ್ತು ನಿರ್ವಾಹಕ ಮಂಡಳಿಯ ಬಗ್ಗೆ ಈಗಾಗಲೇ ಸದಸ್ಯರಲ್ಲಿರುವ ಅಭಿಮಾನವನ್ನು ಚಿರಕಾಲ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಹಾಗೂ ಬಳಗದ ಸರ್ವ ಸದಸ್ಯರ ಸೌಹಾರ್ದತೆಯನ್ನು ಸದಾ ಕಾಪಾಡುವ ದಿಸೆಯಲ್ಲಿ ವಾಟ್ಸಾಪ್ ಗುಂಪು / ಬಳಗದ ಅಡ್ಮಿನ್ ಗಳು ಅಥವಾ ಸಂಚಾಲಕರು ತಂತಮ್ಮ ಗುಂಪಿನ ಚಟುವಟಿಕೆಗಳನ್ನು ಮತ್ತು ಸ್ಪರ್ಧೆಯನ್ನು ಆಯೋಜಿಸುವ ವೇಳೆ ಈ ಕೆಳಕಂಡ ಕೆಲ ಅಂಶಗಳನ್ನು ಅವಶ್ಯವಾಗಿ ಅವಲೋಕಿಸುವುದು ಅಥವಾ ಪಾಲಿಸುವುದು ಅವಶ್ಯ  ಎನಿಸುತ್ತದೆ …. * ಸಾಮಾನ್ಯವಾಗಿ ಯಾವುದೇ ಬಳಗಗಳಲ್ಲಿ ಪ್ರಮುಖವಾಗಿ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಹಳೆಯ ಮತ್ತು ಹೊಸ ಹೊಸ ಆವಿಷ್ಕಾರ – ಸಂಶೋಧನೆಗಳ ಕುರಿತು ಹಾಗೂ ಆಯಾ ಕ್ಷೇತ್ರದ ಸಾಧಕರುಗಳ ಕುರಿತು ಪರಸ್ಪರ ವಿಚಾರ ವಿನಿಮಯ, ಮಾಹಿತಿಯ ಹಂಚಿಕೆಯ ಕಾರ್ಯವಾಗಬೇಕು ಎಂಬುದು ಹಿರಿಯರ, ಅನುಭವಿ ಪರಿಣಿತರ ಮತ್ತು ತಜ್ಞರ ಅಭಿಪ್ರಾಯ. * ಎರಡನೆಯದಾಗಿ ಆಯಾ ಬಳಗದ ಸದಸ್ಯರ ಪ್ರತಿಭೆ, ಸಾಧನೆ, ಸಂಶೋಧನೆ, ಆರೋಗ್ಯಕರ ಚರ್ಚೆ, ಜ್ಞಾನಾನುಭವಗಳ ಅನಾವರಣಕ್ಕೆ ಅವಕಾಶ ಕಲ್ಪಿಸುವ ಕಾರ್ಯ ನಡೆಯಬೇಕು. * ವಾಟ್ಸಾಪ್ ಅಥವಾ ಫೇಸ್ ಬುಕ್ ಗುಂಪು ಎಂಬುದು ಒಂದು ರೀತಿ ಸಾರ್ವಜನಿಕ ವಲಯವಿದ್ದಂತೆ. ಅಲ್ಲಿ ಕೇವಲ ನಮ್ಮ ಪರಿಚಿತರಷ್ಟೇ ಅಲ್ಲ, ನಮಗೆ ಪರಿಚಯವಿಲ್ಲದ ನಮ್ಮ ಸ್ನೇಹಿತರ ಸ್ನೇಹಿತರು, ವಿವಿಧ ವಯೋಮಾನದವರು, ಹೊಸಬರು, ಕಲಿಕಾರ್ಥಿಗಳು ಮತ್ತು ಪರಿಣಿತರು ಸಹ ಇರುತ್ತಾರೆ. ಹಾಗಾಗಿ ವೈಯಕ್ತಿಕ / ವ್ಯಕ್ತಿಗತ ವಿಚಾರಗಳ ವಿನಿಮಯ, ಅನಗತ್ಯ ಚರ್ಚೆ, ಹಾಯ್ ಬಾಯ್ ಮೆಸೆಜ್, ವೈಯಕ್ತಿಕ ಅಥವಾ ಸಾಮುದಾಯಿಕವಾಗಿ ಯಾವುದೇ ರೂಪದ ಅವಮಾನ, ನಿಂದನೆ, ಅವಹೇಳನ, ಮನಸ್ತಾಪಕ್ಕೆ ಕಾರಣವಾಗುವಂತಹ ಸಂದೇಶಗಳ ರವಾನೆ ಮಾಡದೆ ಜ್ಞಾನ ವೃದ್ಧಿ, ಪರಸ್ಪರ ಪ್ರೀತಿ, ವಿಶ್ವಾಸ, ಗೌರವಾದರ ಮೂಲಕ ಬಾಂಧವ್ಯ ಬೆಸೆಯುವುದಕ್ಕೆ ಮಾತ್ರ ಆದ್ಯತೆ ನೀಡಬೇಕು. *  ಸುಲಭವಾಗಿ ವಿವಿಧ ರೂಪದಲ್ಲಿ ಹಣ ವಸೂಲಿ, ವೈಯಕ್ತಿಕ ಲಾಭ ಇತ್ಯಾದಿ ಸ್ವಾರ್ಥ ಪರ ಧೋರಣೆಯ / ದುರುದ್ದೇಶದಿಂದ ಕೂಡಿದ ಕೆಲವು ಬಳಗಗಳು ಸಹ ರಚನೆಯಾಗುತ್ತಿವೆ. ಸದಸ್ಯರು ಇಂತಹ ಬಳಗಗಳ ಬಗ್ಗೆ ಎಚ್ಚರದಿಂದಿರಬೇಕು. * ಸಾಮಾನ್ಯವಾಗಿ ಶಿಕ್ಷಣ, ಸಾಹಿತ್ಯ, ಸಂಗೀತ, ವಿಜ್ಞಾನ, ಕಲೆ ಮತ್ತು ಸಾಂಸ್ಕೃತಿಕ ಬಳಗಗಳಲ್ಲಿ ಸ್ಪರ್ಧೆಗಳನ್ನು ನಡೆಸುವ ಪರಂಪರೆ ಅತಿ ಹೆಚ್ಚು ರೂಢಿಯಲ್ಲಿದೆ. ಸ್ಪರ್ಧೆಗಳನ್ನು ನಡೆಸುವುದು ಅತ್ಯಂತ ಸೂಕ್ಷ್ಮ ಕಾರ್ಯ. ಹಾಗಾಗಿ ಅನಿವಾರ್ಯ ಮತ್ತು ತೀರಾ ಅಗತ್ಯ ಎಂದಾದಲ್ಲಿ ಮಾತ್ರ ಸ್ಪರ್ಧೆಗಳನ್ನು ಆಯೋಜಿಸಬೇಕು. ಯಾವುದೇ ಕ್ಷೇತ್ರಕ್ಕೆ ಸಂಬಂಧಿಸಿದ ಅಥವಾ ಆಯಾ ಕ್ಷೇತ್ರದ ಒಳ ಪ್ರಕಾರಗಳ ಸ್ಪರ್ಧೆ ನಡೆಸುವಾಗ ಆಯಾ ಪ್ರಕಾರದಲ್ಲಿ ಆಳವಾಗಿ ಅಧ್ಯಯನ ನಡೆಸಿರುವ ಅಥವಾ ಈಗಾಗಲೇ ಆ ಕ್ಷೇತ್ರದಲ್ಲಿ ಕೃಷಿ ಮಾಡಿ ಹೆಸರಾಗಿರುವ ಬಳಗದ ಸದಸ್ಯರಲ್ಲದ ಹೊರಗಿನ ಪರಿಣಿತರನ್ನು  ಮಾತ್ರವೇ ತೀರ್ಪುಗಾರರನ್ನಾಗಿ ನೇಮಿಸುವುದು ಸೂಕ್ತ. * ಸ್ಪರ್ಧೆಗಳನ್ನು ನಡೆಸುವ ವೇಳೆ ಯಾವುದೇ ಕಾರಣಕ್ಕೂ ಆಯಾ ಬಳಗದ ಸದಸ್ಯರನ್ನು ತೀರ್ಪುಗಾರರನ್ನಾಗಿ ನೇಮಿಸಲೇಕೂಡದು. ಇದರಿಂದಾಗಿ ಸದಸ್ಯರ ನಡುವಿನ ಸೌಹಾರ್ದತೆಗೆ ಧಕ್ಕೆ ಉಂಟಾಗಬಹುದು. ಇಲ್ಲವೇ ಒಬ್ಬೊಬ್ಬರೇ ಆ ಗುಂಪಿನಿಂದ ವಿದಾಯ ಹೇಳುವ ಪ್ರಸಂಗ ಸೃಷ್ಟಿಯಾದರೂ ಅಚ್ಚರಿಯೇನಿಲ್ಲ. ಆರಂಭದಲ್ಲಿ ತುಂಬಾ ವೇಗವಾಗಿ ಚಟುವಟಿಕೆಗಳು ನಡೆದು ಕ್ರಮೇಣ ಕ್ಷೀಣಿಸಬಹುದು ಅಥವಾ ನಿಂತೇ ಹೋಗಬಹುದು. ಇದು ಕಟ್ಟು ಕಥೆಯಲ್ಲ. ಯೋಚಿಸಲೇಬೇಕಾದ ವಾಸ್ತವ ಸಂಗತಿ * ಪ್ರಥಮ, ದ್ವಿತೀಯ, ತೃತೀಯದ ಹೊರತಾಗಿ ಉತ್ತಮ, ಅತ್ಯುತ್ತಮ ಎಂಬ ಬಹುಮಾನಗಳ ಘೋಷಣೆ ಇರಲೇಕೂಡದು. ಎಲ್ಲರಿಗೂ ಒಂದಲ್ಲ ಒಂದು ಬಹುಮಾನ ನೀಡಲೇಬೇಕೆಂಬ ಔದಾರ್ಯ ತೋರುವುದಾದಲ್ಲಿ ಅದೇ 3 ಬಹುಮಾನಗಳ ಪಟ್ಟಿಯಲ್ಲೇ ಎಲ್ಲರನ್ನೂ ಸೇರಿಸಬಹುದಲ್ಲವೇ. * ಪ್ರಥಮ, ದ್ವಿತೀಯ ಎಂಬಿತ್ಯಾದಿ ಬಹುಮಾನ ಘೋಷಣೆ ಬದಲು ಭಾಗವಹಿಸುವ ಎಲ್ಲರಿಗೂ ಅಭಿನಂದನಾ ಪತ್ರ ನೀಡಿ ಸುಮ್ಮನಿರುವುದು ಒಳಿತು ಅಥವಾ ಪ್ರತಿಭೆಗೆ ಅನುಗುಣವಾಗಿ ಅದಕ್ಕೊಪ್ಪುವ ಗೌರವ ಸೂಚಕ ವಿಶೇಷಣ ಪದ ನೀಡುವ ಮೂಲಕ ಅಭಿನಂದನಾ ಪತ್ರ ವಿತರಿಸಬಹುದು. ಹೇಗೂ ಭಾಗವಹಿಸದೆ ಇರುವ ಸದಸ್ಯರಿಗಂತೂ ಅಭಿನಂದನಾ ಪತ್ರ ವಿತರಿಸುವುದಿಲ್ಲವಲ್ಲ. ಹಾಗಾಗಿ ಭಾಗವಹಿಸುವ ಆಯಾ ಬಳಗದ ಸದಸ್ಯರಿಗೆ ಇದೇ ಒಂದು ದೊಡ್ಡ ಪ್ರೋತ್ಸಾಹ – ಪುರಸ್ಕಾರವೆಂದು ಪರಿಗಣಿಸಲ್ಲಡುತ್ತದೆ ಅಲ್ಲವೆ. * ಪ್ರತಿಭೆಗೆ ಬಹುಮಾನವೇ ಎಂದಿಗೂ ಮಾನದಂಡವಾಗಲಾರದು. ಅದರಲ್ಲೂ ಸರ್ಕಾರಿ ಸಂಸ್ಥೆಗಳ ಹೊರತಾಗಿ ಅನ್ಯ ಖಾಸಗಿ ಸಂಸ್ಥೆಗಳು ನೀಡುವ ಪ್ರಶಸ್ತಿ – ಪುರಸ್ಕಾರ ಅಥವಾ ಅಭಿನಂದನಾ ಪತ್ರಗಳು ಯಾವುದೇ ರೀತಿಯ ಸರ್ಕಾರಿ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣನೆಗೆ ಬಾರದಿರುವುದರಿಂದ ಅವು ಕೇವಲ ಪ್ರೋತ್ಸಾಹದ ಉದ್ದೀಪನಗಳು ಮಾತ್ರ. ಭಾಗವಹಿಸುವ ಸ್ಪರ್ಧಾರ್ಥಿಗಳು ಸಹ ಇದನ್ನು ಮನಗಂಡು ಅವುಗಳ ಬೆನ್ನ ಹಿಂದೆ ಬೀಳುವುದಾಗಲಿ ಅಥವಾ ಬಹುಮಾನ ದೆಸೆಯಿಂದಲೇ ಭಾಗವಹಿಸಲು ಮುಂದಾಗುವುದು ತರವಲ್ಲ. * ಎಲ್ಲಾ ಬಳಗಗಳಲ್ಲಿ ಅಲ್ಲದೆ ಇದ್ದರೂ ಸಾಮಾನ್ಯವಾಗಿ ಬಹುತೇಕ ಬಳಗಗಳಲ್ಲಿ ನಡೆಯುವ ಎಲ್ಲರನ್ನೂ ಓಲೈಸುವ ತಂತ್ರಗಾರಿಕೆಯ ಪರಿಣಾಮವಾಗಿ ಬಹುಮಾನಗಳ ಘೋಷಣೆಯಲ್ಲಿಯೂ ಸಹಜವಾಗಿಯೇ ವೈರುದ್ಯಗಳು ಸಂಭವಿಸುತ್ತವೆ. ಇದರಿಂದಾಗಿ ನೈಜ ಪ್ರತಿಭೆಗೆ ಧಕ್ಕೆ ಉಂಟಾಗಬಹುದು, ನಿರಾಸಕ್ತಿ ಮೂಡಬಹುದು, ಕಮರಬಹುದು, ತುಳಿತಕ್ಕೆ ಒಳಗಾಗಬಹುದು ಅಥವಾ ವಾಮಮಾರ್ಗದ ಹಾದಿ ತುಳಿಯಲು ಕಾರಣವಾಗಬಹುದು ಇಲ್ಲವೇ ನಿಜ ಪ್ರತಿಭೆ ಸತ್ತು ಹೋಗಲೂಬಹುದು. * ಸ್ಪರ್ಧೆಯಲ್ಲಿ ಭಾಗವಹಿಸುವ ಸದಸ್ಯರಲ್ಲೇ ಒಬ್ಬರು ಮತ್ತೊಬ್ಬರ ರಚನೆ ಕುರಿತು ಅಭಿಪ್ರಾಯ, ಅನಿಸಿಕೆ ಹಂಚಿಕೊಳ್ಳಲು ಸೂಚಿಸುವುದು ಮತ್ತೊಂದು ಎಡವಟ್ಟಿಗೆ ಕಾರಣ. ಅದರ ಬದಲು ತೀರ್ಪುಗಾರರೇ ಬಹುಮಾನಿತ ರಚನೆಗಳ ಆಯ್ಕೆಯ ಕುರಿತು ತಮ್ಮ ಅನಿಸಿಕೆ ಬರೆಯುವಂತೆ ವ್ಯವಸ್ಥೆ ಮಾಡುವುದು ಹೆಚ್ಚು ಸೂಕ್ತ. * ಸಾಹಿತ್ಯ ಬಳಗಗಳಲ್ಲಿ ಒಬ್ಬರು ಮತ್ತೊಬ್ಬರ ರಚನೆಯ ಕುರಿತು ಅಭಿಪ್ರಾಯಿಸುವ ಅನಿಸಿಕೆಯನ್ನು “ವಿಮರ್ಶೆ” ಎಂದು ಕರೆಯಲೇಬಾರದು. ಏಕೆಂದರೆ ವಿಮರ್ಶೆ ಎಂಬ ಶಬ್ಧದ ಅರ್ಥ, ವ್ಯಾಪ್ತಿ, ವಿಸ್ತಾರ ಪರಿಧಿ ಮತ್ತು ಹಿರಿಮೆ – ಗರಿಮೆ ಬಹಳವೇ ದೊಡ್ಡದು. ಕಲಿಕಾರ್ಥಿಗಳ ಅನಿಸಿಕೆ ಎಂದಿಗೂ ವಿಮರ್ಶೆಯಾಗಲಾರದು. ಅದು ವಿಮರ್ಶಾ ಲೋಕದಲ್ಲಿ ಪಳಗಿದ ಬಹು ದೊಡ್ಡ ದೊಡ್ಡ ವಿದ್ವಾಂಸರು ಮಾಡುವ ಕಾರ್ಯ. ಹಾಗಾಗಿ ” ವಿಮರ್ಶೆ ” ಎಂಬ ಪದ ಬಳಕೆ ಸರ್ವಥಾ ಸಲ್ಲದು.     ಗುಂಪುಗಳು ಮೂಲ ಸ್ವರೂಪ ಮತ್ತು ಮೂಲ ಉದ್ದೇಶ ಮರೆತಲ್ಲಿ ಪರಿಶ್ರಮ ನೀರಿನಲ್ಲಿ ಹುಣಸೆ ಹಣ್ಣು ತೊಳೆದಂತಾಗಿ ದಿಕ್ಕು ದೆಸೆಯಿಲ್ಲದೆ ಮೂಲ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಬಹುದು ಅಥವಾ ಕಳಂಕಕ್ಕೆ ತುತ್ತಾಗಬಹುದು.         ಹಾಗಾಗಿ ಇಂತಹ ಹತ್ತು ಹಲವು ಸೂಕ್ಷ್ಮ ಸಂಗತಿಗಳ ಕುರಿತು ಬಳಗಗಳ ಅಡ್ಮಿನ್ ಗಳು / ಸಂಚಾಲಕರು ಎಚ್ಚರಿಕೆ ವಹಿಸಿ ಗುಂಪುಗಳ ರಚನೆ ಮತ್ತು ಚಟುವಟಿಕೆಗಳ ಆಯೋಜನೆ ಮಾಡಲು ಮುಂದಾಗಬೇಕು. ಆಗ ಮಾತ್ರ ಅಂತಹ ಬಳಗಗಳು ಚಿರಕಾಲ ಉಳಿಯುತ್ತವೆ, ಬೆಳೆಯುತ್ತವೆ, ಮಾದರಿಯಾಗುತ್ತವೆ ಮತ್ತು ಜನಮಾನಸದಲ್ಲಿ ಹೆಸರಾಗಿ ಹಸಿರಾಗುತ್ತವೆ. ಆ ದಿಕ್ಕಿನಲ್ಲಿ ಗುಂಪುಗಳ ರಚನೆಯಾಗಲಿ ಎಂಬುದಷ್ಟೇ ಈ ಲೇಖನದ ಆಶಯ. ********** –

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯನ

ಕಾಪಾಡಬೇಕಿದೆ ರಾಮಕೃಷ್ಣ ಸುಗತ ನೀವು ಆಯ್ಕೆ ಮಾಡಿದ್ದೀರಿ ಫಲವತ್ತಾದ ಮಣ್ಣನ್ನುಅಷ್ಟೇ ಆಸ್ಥೆಯಿಂದ ಬೆಳೆಸಿದ್ದೀರಿ ಹೂವಿನ ತೋಟವನ್ನುಕರೆಸಿದ್ದಿರೇನು ನಿಮ್ಮದೇ ದೇವಲೋಕದ ವರ್ಣಕರನ್ನುಎಷ್ಟು ಬಣ್ಣ ಬಣ್ಣದ ಹೂಗಳುತಿಳಿಯುತ್ತಿಲ್ಲ ಅವುಗಳ ವಾಸನೆನೀವು ಆಯುವಂತರು ಸ್ವಾಮಿಎಂದೋ ಕೊಯ್ದು ಬಿಟ್ಟಿದ್ದೀರಿ ನಮ್ಮ ಮೂಗನ್ನು ಮನೆಯ ಹಿಂಭಾಗದಲ್ಲಿ ಹುಲ್ಲು ಬೆಳೆದಿದ್ದಕ್ಕೆನೀವು ದೂರು ಕೊಡುತ್ತೀರಿನೀವು ಪುಣ್ಯವಂತರು ಸ್ವಾಮಿನೀವು ಕಾಲಿಟ್ಟು ಹೋದ ನಮ್ಮದೇ ಓಣಿಗಳಲ್ಲಿಎಲ್ಲೋ ಮೂಲೆಯಲ್ಲಿ ಚಿಗುರುವ ಚಿಗುರಿಗೂಅರ್ಜಿ ಹಾಕುತ್ತಿದ್ದೇವೆ ಅನ್ಯಗ್ರಹ ಜೀವಿಗಳಂತೆ ಪ್ರೀತಿಯೆಂದರೆ ಕುದಿಯುವ ನಿಮ್ಮನ್ನುಚಳಿಗಾಲದ ತಂಪು ರಾತ್ರಿಗಳು ಏನೆಂದು ಕಾಡಿಯಾವುನೀವು ಆರೋಗ್ಯವಂತರು ಸ್ವಾಮಿನಾವು ಬೆಚ್ಚಗೆ ಮಲಗಿದರೆನಿದ್ರಾಹೀನತೆಯಿಂದ ಬಳಲುತ್ತೀರಲ್ಲಾಕನಿಷ್ಠ ನಮ್ಮ ಮನೆಗೆ ಬೆಂಕಿ ಹಚ್ಚುವಾಗಲಾದರೂಬಿಸಿಲಿಗೆ ನಿಂತುಕೊಳ್ಳಿ ಸರಿ ನಾನಿನ್ನು ಬರುತ್ತೇನೆಎದೆಯಲ್ಲಿ ಉಗಿಯ ಬಂಡಿಯೊಂದು ಓಡುತ್ತಿದೆನಿತ್ಯವೂ ನೋವು ಹೊತ್ತು ಸಾಗುತ್ತಿದೆಯಾರೋ ಕಟ್ಟಿಟ್ಟ ನಿಲ್ದಾಣಕ್ಕೆನನ್ನ ಹೆಸರಿಟ್ಟಿದ್ದಾರೆಇದೀಗ ನಾನು ಇಳಿಯಲೇಬೇಕಿದೆಹಳಿಯನ್ನೇ ಕಸಿವವರ ಮಧ್ಯೆ ಸರಕನ್ನು ಕಾಪಾಡಬೇಕಿದೆ **********

ಕಾವ್ಯಯನ Read Post »

ಅನುವಾದ

ಅನುವಾದ ಸಂಗಾತಿ

ಹೂವಿನ ಹೃದಯ ಚೂರಾಗಿದೆ ಮೂಲ: ನೋಷಿ ಗಿಲ್ಲಾನಿ(ಪಾಕಿಸ್ತಾನಿಕವಿಯಿತ್ರಿ) ಕನ್ನಡೆ: ಮೇಗರವಳ್ಳಿರಮೇಶ್ ಮೇಗರವಳ್ಳಿ ರಮೇಶ್ ಹೂವಿನ ಹೃದಯ ಚೂರಾಗಿದೆಅದರ ಸುಗ೦ಧ ತ೦ಗಾಳಿಯೊಡನೆ ಸ್ನೇಹ ಬೆಸೆದಿದೆ. ಯಾರು ಹೇಳಬಲ್ಲರು ಹಾಳುಗೆಡವಿದವರಾರೆ೦ದು ಹೂವನ್ನು?ದ೦ಡನೆಯ ತೀರ್ಪಿನಡಿಯಲ್ಲಿ ಕಳೆಯುತ್ತಿದ್ದೇವೆ ನಾವು ಈ ಸ೦ಜೆಯನ್ನು! ಯಾರೂ ಈಗ ಪಯಣ ಕೈಗೊಳ್ಳುವ೦ತಿಲ್ಲಆದರೂ ನೀ ಇಚ್ಛಿಸಿದರೆ ನಾ ಬರಬಲ್ಲೆ. ಈ ನಗರದ ಎಲ್ಲ ಬೀದಿಗಳೂ ಮಲಗಿವೆಎಚ್ಚರವಾಗಿರುವುದೀಗ ನನ್ನ ಪಾಳಿ. ಈ ಸ೦ಜೆಯ ಅನಿಶ್ಚತೆಯಲ್ಲಿಎಲ್ಲವೂ ಕ೦ಪಿಸುತ್ತಿವೆ. ನಮ್ಮ ಮಿಲನವನ್ನು ನಾವು ಹೇಗೆ ತಾನೇ ಸ೦ಭ್ರಮಿಸ ಬಲ್ಲೆವುನನ್ನ ಹೃದಯ ಅಗಲಿಕೆಯ ಹೆದರಿಕೆಯಲ್ಲಿ ತೊಳಲುತ್ತಲಿರುವಾಗ? ಎಲ್ಲವನ್ನೂ ಮೀರಿ ಆಶಿಸುತ್ತಿದೆ ನನ್ನ ಹೃದಯಈ ಸ೦ಜೆಯನ್ನು ನಾವು ನಮ್ಮದಾಗಿಸಿಕೊಳ್ಳೋಣ **********

ಅನುವಾದ ಸಂಗಾತಿ Read Post »

ಇತರೆ, ಜೀವನ

ಪ್ರಸ್ತುತ

ಸಂವಾದ ಜ್ಯೋತಿ ಡಿ.ಬೊಮ್ಮಾ. ಹೌದು ಪಾಶ್ಚಾತ್ಯ ಸಂಸ್ಕೃತಿಯೆ ಚನ್ನ ಒತ್ತಾಯದ ಬದುಕು ಅವರಾರು ಬದುಕರು ಹೊಂದಾಣಿಕೆಯ ಪ್ರಯತ್ನವೇ ಮಾಡರವರು ನಮ್ಮಂತಲ್ಲ ಒಳಗೊಂದು ಹೊರಗೊಂದು ಇಷ್ಟವಿಲ್ಲದವನ/ಳೊಂದಿಗೆ ಏಗುವ ರಗಳೆ ಕುಡಿದು ಪೀಡಿಸುವ ಗಂಡನೊಡನೆ ಸಹಬಾಳ್ವೆ ಇಲ್ಲಿ ಮಕ್ಕಳಾಗದಿದ್ದರು ತಾನೆ ತಪಿತಸ್ಥಳು ಲೋಕಕ್ಕೆ ಅವನು ಗಂಡಸು..ಅವನಲ್ಲೆನು ಕೊರತೆ..! ಮಕ್ಕಳಾದ ಮೇಲೆ ಇನ್ನೆನಿದೆ. ಅನುಸರಿಸಿಕೊಂಡು ಹೋಗುವದೊಂದೆ. ಅವರಾದರೂ ಎಲ್ಲಿರುತ್ತಾರೆ ಕೊನೆವರೆಗೆ ನಮ್ಮವರಾಗಿ..! ಬಿಟ್ಟು ಬಿಡುವದೊಳಿತು ಮನಸ್ಸಿಗೊಪ್ಪದು ಸುಮ್ಮನಿರು ,ಮಾತು ಬೇರೆ  ಆತ್ಮ ಬೇರೆ ಎರಡು ಒಂದಾಗಬೇಕಾದರೆ ತೆರೆ ಸರಿಸಿ ಬದುಕಬೇಕು. ಬಯಸಿ ದೊರಕಿಸಿಕೊಂಡದ್ದು ಹಳತಾಗದೆ..! ಹಾಗಂತ ಹೊಂದಾಣಿಕೆಯಲ್ಲೆ ಬದುಕಬೇಕೆ.. ದೇವತೆಗಳ ನೆಲೆವೀಡು ನಮ್ಮ ನಾಡು ಸುಸಂಸ್ಕತಿ ಉಳ್ಳದ್ದು. ಪುರುಷ ದೇವರೆಲ್ಲ ಬಹುಪತ್ನಿತ್ವ ಸ್ಥರೆ ಶ್..ಕದ್ದು ಕೇಳುವ ಕಿವಿಗಳಿವೆ ಇಲ್ಲಿ. ಕದ್ದು ಏನು ಮಾಡಿದರು ನಡೆಯಬಹುದಿಲ್ಲಿ.. ಇರುವದನ್ನೆ ಒಪ್ಪಿಕೊಂಡರು ಬದುಕಿದರಾಗದೆ..? ನೀವು ಬುದ್ದಿ ಜೀವಿಗಳು ,ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡುವವರು.. ಎಡ ಬಲವೆಂದು ಎಗ್ಗಿಲ್ಲದೆ ಬಡಿದಾಡುವ ಗೊಡ್ಡು ವಾದಿಗಳು.. ನೈಜತೆ ಮರೆಮಾಚಿ ಕಲ್ಪನೆಯಲ್ಲಿ ಬದುಕುವರು.. ಯಾಕೋ..ಅಲ್ಲಗಳೆಯಲಾಗಲಿಲ್ಲ.           **********

ಪ್ರಸ್ತುತ Read Post »

ಇತರೆ, ಜೀವನ

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? ಯಾಕಿಲ್ಲ,ಎಷ್ಟೋ ಮಂದಿ ತಮ್ಮ ಉದ್ದೇಶಕ್ಕಾಗಿ ವಿವಾಹವಾಗದೇ ಉಳಿದಿದ್ದಾರೆ. ಆದರೆ ಯಾರೋ ಒಬ್ಬ ವಿವೇಕಾನಂದ,ಎಲ್ಲೊ ಒಬ್ಬ ಕಲಾಂ, ಮೋದಿಯಂತವರೇ ಹೊರತು ನಮ್ಮ ಅಣ್ಣ-ತಮ್ಮ,ಅಕ್ಕ-ತಂಗಿಯರಂತು ಅಲ್ಲವೇ ಅಲ್ಲ..! ವಿವಾಹವಿಲ್ಲದೆ ಮೋಕ್ಷವಿಲ್ಲ ಎಂಬುದು ಹಿಂದೂಗಳ ನಂಬಿಕೆ ಹಾಗಾಗಿ ವಿವಾಹ ಅನಿವಾರ್ಯ. ಮದುವೆ ಎಂಬುದು ಬಂಧನವೇ? ಅಲ್ಲವೇ ಅಲ್ಲ. ಇದು ಎರಡು ಜೀವಗಳನ್ನ ಹತ್ತಿರ ತಂದು ಜೀವನವಿಡೀ ಒಂದಾಗಿ ಬಾಳಬೇಕೆಂದು ಹರಸುವಂತಹ ಒಂದು ವಿಧಿ. ವಿವಾಹದ ಕುರಿತು ಹೆಣ್ಣು-ಗಂಡುಗಳಲ್ಲಿ ಹತ್ತಾರು ಕನಸುಗಳಿರುತ್ತವೆ,ಮಾತ್ರವಲ್ಲ ಹಲವರು ತಮ್ಮ ಸಂಗಾತಿಯನ್ನ ಆಯ್ಕೆ ಮಾಡಿಕೊಂಡಿರುತ್ತಾರೆ. ಇದಕ್ಕೆ ವಿರುದ್ಧವಾದ ಸಂದರ್ಭ ಸೃಷ್ಠಿಗೊಂಡಾಗ ಮಾತ್ರ ವಿವಾಹ ಬಂಧನವಾಗುತ್ತದೆ.     ಹೌದು ಮದ್ವೆ ಒಂದೆರಡು ದಿನದ ಜವಾಬ್ದಾರಿಯಲ್ಲ, ಒಂದೆರಡು ದಿನದ ಸಂಭ್ರಮವಲ್ಲ. ಅಂದೊಂದು ಪವಿತ್ರ ಬಂಧ. ಒಂದೆರಡು ದಿನದ ಸಂಭ್ರಮ ಮುಗಿಸಿಹೋಗುವವರು ನೀವಾದರೆ, ಅವರು ಜೀವನದ ಕೊನೆಯ ಪಯಣದವರೆಗೂ ವಿವಾಹವಾದವರೊಡನೆ ನಡೆಯುವವರಾಗಿರುತ್ತಾರೆ. ಹಾಗಾಗಿ ಯಾರೋ ನೊಡುವ ಹೆಣ್ಣು-ಗಂಡನ್ನು ನಂಬುವ ನೀವೂ ನಿಮ್ಮ ಕೈಬೆರಳ ಹಿಡಿದು ಜೊತೆ ಜೊತೆ ಸಾಗಿ ಬಂದ ನಿಮ್ಮ ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ…? ಅವರ ಅಭಿಪ್ರಾಯಕ್ಕೂ ಮನ್ನಣೆ ಕೊಡಿ. ನೀವು ಪ್ರತಿನಿತ್ಶ ಪೂಜಿಸುವ ಆ ನಿಮ್ಮ ದೇವರುಗಳು ಕೂಡ ಸಂಗಾತಿಗಳನ್ನ ಆಯ್ಕೆಯಾಗೆ ತಾನೇ ವಿವಾಹವಾಗಿರುವುದು.    ಹೌದು ನಾವು ಸಮಾಜದ ಹೊರತಾಗಿ ಬದುಕಲು ಸಾಧ್ಶವಿಲ್ಲ. ಹಾಗಂತ ಸಮಾಜಕ್ಕಾಗಿ ಬದುಕುವುದು ಸರಿಯೇ?. ಸಂಗಾತಿಯನ್ನ ಆಯ್ಕೆ ಮಾಡಿಕೊಂಡ ಮಾತ್ರಕ್ಕೆ ಸಮಾಜ ಹದಗೆಡುವುದೇ? **********

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ನಿನ್ನ ನೆನಪೆಂದರೆ… ವಸುಂಧರಾ ಕದಲೂರು ಆಗ ನಿನ್ನ ನೆನಪೆಂದರೆ, ಬೇಕಾದ ಮಳೆಯಂತೆತುಂಬಿಕೊಳ್ಳಲು ಹಳ್ಳಕೊಳ್ಳಜಲಾಗರ ಸಾಗರ;ಮುತ್ತುಹವಳ ಸಂಗ್ರಹಾಗಾರ. ಅಚ್ಚಬಿಳುಪಿನ ಕಾಗದದಲಿನೆಚ್ಚಿನ ಅರ್ಥ ತುಂಬಿದ ಭಾವಕೋಶಅಚ್ಚುಕಟ್ಟಾಗಿ ಅಚ್ಚು ಮಾಡಿಸಿದಪದಕೋಶ.. ಈಗ ನಿನ್ನ ನೆನಪೆಂದರೆ, ಅಕಾಲದಲ್ಲಿ ಮಳೆಗರೆದು ಆದರಾಡಿ ರಸ್ತೆಅರ್ಥಕೋಶದಲಿ ಸೇರಿಬಿಟ್ಟಖಾಲಿ ಹಾಳೆ ********

ಕಾವ್ಯಯಾನ Read Post »

ಇತರೆ

ಚಿಂತನೆ

ಅರಿಷಡ್ಬರ್ಗಗಳನು  ದಾಟಿ….. ಅಶ್ವಥ್ ಕಳೆದ ವಾರ ಗೆಳೆಯನೊಬ್ಬನಿಗೆ ಏನೋ ಗೊಂದಲವಾಗಿ ಕೆಲವು ಪ್ರಶ್ನೆಗಳನ್ನು ಒಂದಕ್ಕೊಂದು ಪೋಣಿಸಿ ಪ್ರಶ್ನೆಗಳ ಒಂದು ಮಾಲೆಯನ್ನೇ ಮಾಡಿಟ್ಟುಕೊಂಡಿದ್ದ. ನಾವು ಕತೆ ಕೇಳ್ತೇವೆ, ಇತಿಹಾಸ ಅಧ್ಯಯನ ಮಾಡ್ತೇವೆ, ಪುರಾಣ ಪುಣ್ಯಕತೆಗಳನ್ನು ಓದುವುದು ಕೇಳುವುದು ನೋಡುವುದು ಇದ್ದೇ ಇದೆ. ಇಷ್ಟೇ ಅಲ್ಲದೇ ನಮ್ಮ ತಲೆಮಾರಿನವರಿಗೆ ಬಾಲ್ಯದಲ್ಲಿ ಪೌರಾಣಿಕ ನಾಟಕಗಳು, ಹರಿಕತೆಗಳು, ಬೀದಿನಾಟಕ, ಗೊಂಬೆನಾಟಕ ಹೀಗೆ ಹತ್ತು ಹಲವು ರೀತಿಯಲ್ಲಿ ನಮ್ಮ ಹೊರಗನ್ನು ತಿಳಿಯುವ ಸಾಮಾನ್ಯ ಸಾಧ್ಯತೆಗಳಿದ್ದವು. ಈಗ ಹಳೆಯ ಈ ಮಾಧ್ಯಮಗಳೆಲ್ಲ ಹಿನ್ನೆಲೆಗೆ ಸರಿದು, ಸಿನಿಮಾ, ಅಥವಾ ಕಿರುತೆರೆ (ಟಿವಿ, ಅಮೇಜಾನ್, ನೆಟ್ಫ್ಲಿಕ್ಸ್, ಯೂಟ್ಯೂಬ್ ಆದಿಯಾಗಿ ಮೊಬೈಲ್ಗಳನ್ನೂ ಸೇರಿಸಬಹುದು) ಇವೇ ವಿಜೃಂಭಿಸುವ ಕಾಲದಲ್ಲಿ ನಾವಿದ್ದೇವೆ. ಓದುವುದು ಒಂದು ಹವ್ಯಾಸ ಆಗಿರುವವರಿಗೆ ಕಾಲಾತೀತವಾಗಿ ವರ್ತಮಾನವನ್ನು ಗ್ರಹಿಸಿಕೊಳ್ಳುವುದು ಸಾಧ್ಯ. ಆದರೆ ಓದು ಅಂದರೆ ಪರೀಕ್ಷೆಯಲ್ಲಿ ಪಾಸಾಗುವುದಕ್ಕೆ, ಪುಸ್ತಕಗಳನ್ನೋ, ಅಥವಾ ಮೇಷ್ಟರು ಬರೆಸಿದ ನೋಟ್ಬುಕ್ಗಳನ್ನೋ ಓದುವುದಕ್ಕೆ ಮೀಸಲಾದರೆ ಅದರಿಂದ ಏನೂ ಪ್ರಯೋಜನವಾಗಲಾರದು. ಆ ರೀತಿಯದ್ದಲ್ಲದ ವಿಷಯ, ವಿದ್ಯಮಾನಗಳ ಗ್ರಹಿಕೆಯ ಓದು ಒಂದು ಹವ್ಯಾಸವಾದವರಿಗೆ ಯಾವ ಮಾಧ್ಯಮ ಹಿನ್ನೆಲೆಗೆ ಸರಿದರೂ, ಯಾವ ಹೊಸ ಮಾಧ್ಯಮ ಚಾಲನೆಗೆ ಬಂದರೂ ಅಂತಹವುಗಳಿಂದ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ನಮ್ಮಂತಹವರು ಅಂದರೆ ಸಾಮಾನ್ಯವಾಗಿ ಹೈಸ್ಕೂಲು, ಆನಂತರ ಎರಡು ಮೂರು ವರ್ಷ ಕಾಲೇಜು ಅಥವಾ ಒಂದು ಪದವಿ ಮುಗಿಸಿಕೊಂಡವರು ಅತ್ತ ಹಳೇಕಾಲದ ಗ್ರಹಿಕೆಯ ಮಾಧ್ಯಮದ ಅವಕಾಶಗಳೂ ಇಲ್ಲದೇ, ಇತ್ತ ಹೊಚ್ಚ ಹೊಸ ಆಕರ್ಷಣೀಯ ಮಾಧ್ಯಮಗಳ ಕಡೆ ಹೊರಳಿಕೊಂಡು ಸಿನಿಮಾ ಹೀರೋಗಳ ಡೈಲಾಗುಗಳಿಗೋ, ಅಥವಾ ಹೆಚ್ಚು ಕಡಿಮೆ ಇದೇ ರೀತಿಯಲ್ಲೇ ಡೈಲಾಗು ಬರೆದುಕೊಂಡು (ಬಹುತೇಕ ಬರೆಯಿಸಿಕೊಂಡು) ಭಾಷಣಭೀರುಗಳ ದಾಳಿಗೆ ಒಳಪಟ್ಟು, ಅವರವರ ಅಭಿಮಾನಿ ಸಂಘಗಳಿಗೆ ಸದಸ್ಯರುಗಳಾಗಿ, ಅಂತಹ ಡೈಲಾಗುಗಳನ್ನೊಂದಿಷ್ಟು ಕರತಲಾಮಲಕ ಮಾಡಿಕೊಂಡು ನಮ್ಮ ಗ್ರಹಿಕೆ ಹಿಗ್ಗಿದೆ ಅಂದುಕೊಂಡಿರ್ತೇವೆ. ಮೊನ್ನೆ ಪ್ರಶ್ನೆ ಮಾಡಿದ ಗೆಳೆಯನನ್ನು ಕಾಡಿದ ಆ ಗೊಂದಲಗಳು ಅವನೊಬ್ಬನವೇ ಅಲ್ಲ; ಬಹುತೇಕ ನಮ್ಮೆಲ್ಲರವೂ ಹೌದು. ಅದಕ್ಕೆ ಉತ್ತರ ಹುಡುಕಲು ಹೊರಡುವುದು ಅಂದರೆ ಬದುಕೆಂದರೆ ಏನು ಅನ್ನುವುದನ್ನೆಲ್ಲ ಕ್ರೋಢೀಕರಿಸಲು ಹೊರಟಂತಹ ಸಾಹಸವಾಗಬಹುದು. ಆದರೂ ಸಂಕ್ಷಿಪ್ತವಾಗಿ ಕಡಿಮೆ ಹೊತ್ತಿನ ಆಲೋಚನೆಗೆ ಹೊಳೆದ ಕೆಲವು ಹೊಳಹುಗಳನ್ನು ಹಿಡಿದಿಡುವ ಪ್ರಯತ್ನ ಇದು. ಆ ಪ್ರಶ್ನೆಗಳ ಸರಮಾಲೆಯನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ ಬದುಕು ಹೇಗಿರಬೇಕು. ಎಲ್ಲರಂತೆ ಬದುಕುವುದು ಅಂದರೆ ಈಗ ಕಿತ್ತಾಡಿಕೊಂಡೇ ಬದುಕಬೇಕಾದ ಅನಿವಾರ್ಯತೆಯಿದೆ. ಹೇಗೋ ಬದುಕುವುದಾದರೆ ಈ ಪ್ರಶ್ನೆಗಳು ಮೂಡುವುದೇ ಇಲ್ಲ. ಅಂತಃಕರಣದಲ್ಲಿ ಏನೋ ಸರಿಯಿಲ್ಲವೆನ್ನುವ ಭಾವನೆಯಿಂದಲೇ ಈ ಪ್ರಶ್ನೆಗಳ ಅಲೆಗಳು ಶುರುವಾಗುವಂತಹದ್ದು. ಹೈಸ್ಕೂಲಲ್ಲಿ “ಹೃದಯವಂತಿಕೆಯ ಸಮಸ್ಯೆಗಳು” (ವಿ.ಕೃಗೋಕಾಕರದ್ದು) ಅಂತ ನಮಗೊಂದು ಪಾಠ ಇತ್ತು . ಅಂತಹ ಹೃದಯವಂತಿಕೆ ಕಿಂಚಿತ್ತು ಇದ್ದಾಗ ನಮ್ಮ ತಪ್ಪುಗಳ ಬಗ್ಗೆ ನಾವೇ ಯೋಚಿಸುವ, ಪ್ರಶ್ನೆ ಮಾಡಿಕೊಳ್ಳುವ ಆ ಮೂಲಕ ಬದುಕು ಕಾಲದ ಹರಿವಿನೊಟ್ಟಿಗೇ ಕೊಚ್ಚಿಕೊಂಡು ಹೋಗಲು ಬಿಡದೇ, ಅಂಬಿಗನು ನಡೆಸುವ ಹರಿಗೋಲಿನ ಹಾಗೆ ಮುನ್ನಡೆಸುವುದು ಸಾಧ್ಯವಾಗಬಹುದು. ಮಾನವನಿಗೆ ನೆಮ್ಮದಿಯಾಗಿರುವುದಕ್ಕೆ ಅನ್ನ, ಅರಿವು, ಉಡುಪು, ಆರೋಗ್ಯಮತ್ತು ವಸತಿ (ಮನೆ) ಈ ಐದು ಮೂಲಭೂತ ಸೌಕರ್ಯಗಳು ಅತ್ಯಗತ್ಯವಾದವು. ಈ ಐದನ್ನೇ ಸಂಪಾದಿಸಲು ಅಲ್ಲವೇ ಆ ಲಕ್ಷಾಂತರ ವಲಸೆ ಕಾರ್ಮಿಕರು; ಕಾಲಿಗೆ ಚಪ್ಪಲಿಯಿಲ್ಲದೆ, ಅನ್ನ ನೀರಿನ ಏರ್ಪಾಡೂ ಇಲ್ಲದೇ ನಡೆದವರು; ತಮ್ಮ ಸ್ವಂತ ಊರುಗಳನ್ನು ಬಿಟ್ಟು ಸಾವಿರಾರು ಮೈಲಿ ದೂರದಿಂದ ಅವಕಾಶಗಳನ್ನು ಅರಸಿಕೊಂಡು ಬಂದಿದ್ದು? ಈ ಐದು ಸೌಲಭ್ಯಗಳಿಗಾಗಿಯೇ ಬಹುತೇಕ ತೊಂಭತ್ತಕ್ಕೂ ಹೆಚ್ಚು ಶೇಕಡಾ ಜನ ಹೋರಾಡುವುದು. ಇದರಲ್ಲಿ ಕೆಲವು ಶೇಕಡಾ ಜನ ಮಾತ್ರ ಈ ನೆಮ್ಮದಿಯ ಟಾನಿಕ್ಕುಗಳಾಚೆಗೆ, ಕೆಲಸದ ಸುರಕ್ಷತೆ, ಭವಿಷ್ಯಕ್ಕೆಂದು ಒಂದಿಷ್ಟು ಗಂಟು, ಸಮಾಜದಲ್ಲಿ ಅಂತಸ್ತು, ಅಸ್ವಾಭಾವಿಕ ಮನ್ನಣೆ ಗಳಿಸುವ ಸರ್ಕಸ್ಸು, ಇಂಗ್ಲೀಷಿನಲ್ಲಿ ʼಲೈಮ್ಲೈಟ್ʼನ್ನುವ ನಿಂಬೆಹುಳಿಬೆಳಕಿನಲ್ಲಿ ಹೊಳೆಯುವ ವಿಲಕ್ಷಣ ಬಯಕೆ ಇತ್ಯಾದಿಗಳ ಮೊರೆಹೋಗಿ ತಾವು ನೆಮ್ಮದಿಯ ಆಚೆ ಒದ್ದಾಡುವುದರ ಜೊತೆಜೊತೆಯಲ್ಲೇ ತಮಗೆ ಬೇಕಾದ್ದಕ್ಕೆ ಬೇರೆ ಬಡ, ಮಧ್ಯಮ ವರ್ಗದ ಒಂದಿಷ್ಟು ಮಂದಿಯನ್ನೂ ಸೇರಿಸಿಕೊಂಡು ಗೌಜಿ ಸೃಷ್ಟಿ ಮಾಡ್ತಾರೆ. ಈ ರೀತಿಯ ಗೌಜಿಯೇ ಈ ಕಾಲದ ವಿಶೇಷ. ಕಾಂಟ್ರಾವರ್ಸಿ ಎಲ್ಲಿದೆ ಅಂದರೆ ?ಎಲ್ಲಿಲ್ಲ ಅಂತ ಕೇಳಿಕೊಳ್ಳಬೇಕಾದ ಪರಿಸ್ಥಿತಿ ಈಗ ಇದೆ ಅನಿಸಲ್ವೇ? “ರಾಮನುಕಾಡಿಗೆಹೋದನು”.  ಕನ್ನಡದ ಕಾಪಿರೈಟಿಂಗ್ ಪುಸ್ತಕದಲ್ಲಿ ಸಾಮಾನ್ಯವಾಗಿ    ಇದು ಮೊದಲ ವಾಕ್ಯ. ಅಲ್ಲೊಂದು ಕುತೂಹಲ ಮೂಡಿಸುವ ಉದ್ದೇಶವಿದ್ದಿರಬಹುದು ಅನಿಸತ್ತೆ. ಪ್ರೈಮರಿ ಸ್ಕೂಲಿನ ಮಗುವೊಂದಕ್ಕೆ ರಾಮನು ಕಾಡಿಗೆ ಹೋದನು ಅಂದರೆ ರಾಮ ಯಾರು? ಕಾಡು ಅಂದರೆ ಏನು? ರಾಮ ಕಾಡಿಗೆ ಯಾಕೆ ಹೋಗಿದ್ದು? ಈ ರೀತಿಯ ಪ್ರಶ್ನೆಗಳು ಮನಸ್ಸಿನಲ್ಲಿ ಮೂಡಿದರೆ ಕಾಪಿರೈಟಿಂಗಿನ ಜೊತೆಯಲ್ಲೇ ರಾಮಾಯಣ ತಿಳಿಯುವುದಕ್ಕೆ ಮಗುವಿಗೆ ಮಾರ್ಗಸೂಚಿ ಆಯ್ತು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಆಗ್ಗಾಗ್ಗೆ ನಾವು ಇದೇ ರೀತಿ ಪ್ರಶ್ನಿಸಿಕೊಳ್ಳುವ, ಕೆಲವು ಕುತೂಹಲಗಳನ್ನು ಮೂಡಿಸಿಕೊಳ್ಳುವ, ಅಂತಹ ಕುತೂಹಲಗಳಿಗೆ ಉತ್ತರಗಳನ್ನು ಹುಡುಕಿಕೊಳ್ಳುವ ಒಂದಿಷ್ಟು ಅಭ್ಯಾಸ ಮಾಡುತ್ತಾ ಹೋಗುವುದು ವೈಯಕ್ತಿಕ ಮಟ್ಟದಲ್ಲಿ ಆರೋಗ್ಯಕರ. ಸಧ್ಯ  ಸಮೂಹ ಮಾಧ್ಯಮಗಳಲ್ಲೆಲ್ಲ, ಬೂಟಾಟಿಕೆಗಳೇ ತುಂಬಿ ಹೋಗುವ ಮಟ್ಟಕ್ಕೆ ನಮ್ಮನ್ನು ನಾವೇ ತಂದು ನಿಲ್ಲಿಸಿಕೊಂಡಿರುವ ಈ ಕಾಲದಲ್ಲಿ ಗೆಳೆಯನ ಗೊಂದಲಗಳ್ಯಾವೂ ಬೇರೆ ಯಾರಿಗೂ ಹೊಳೆಯದ ವಿಚಾರಗಳಲ್ಲ. ಆದರೂ ಅಂತಹ ಪ್ರಶ್ನೆಗಳು ಮೂಡುತ್ತಿವೆ ಅಂದರೆ ಕನಿಷ್ಟಪಕ್ಷ ಬೂಟಾಟಿಕೆಗಳನ್ನು ಮೀರಿ ಬದುಕುವ ಸಹಜದಾರಿಯೊಂದನ್ನು ಹುಡುಕುವ ಪ್ರಯತ್ನವೊಂದು ಮನಸ್ಸಿನೊಳಗೆ ನಡೆಯುತ್ತಿದೆ ಎಂದರ್ಥ. ಸನಾತನ ಅಂತ ಕರೆಯುವ ಅನಾದಿಕಾಲದಿಂದಲೂ ಮನುಷ್ಯ ಹೀಗೇನೇ ಬದುಕಬೇಕು ಅನ್ನುವ ಚೌಕಟ್ಟು ಕಾಲಕಾಲಕ್ಕೆ ಕಟ್ಟಿಕೊಳ್ಳುತ್ತಾ ಕಾಲಾಂತರದಲ್ಲಿ ಸವೆತಕ್ಕೆ ಸಿಕ್ಕಿ ನವೀಕರಣಗೊಳ್ಳುತ್ತಾ ಬಂದಿರುವುದರಿಂದಲೇ ಸಾವಿರಾರು ವರ್ಷಗಳ ಹಿಂದೆ ಬದುಕಿದ್ದ ದಶರಥನ ಮಗ ರಾಮನೂ, ದೇವಕಿ-ಯಶೋಧೆಯರ ಮಗ ಕೃಷ್ಣನೂ, ಪಾಂಡವರೂ ಕೌರವರೂ ನಮಗೆ ಈಗಲೂ ಕತೆಗಳ ರೂಪದಲ್ಲಿ ಸಿಕ್ಕಿರುವುದು, ಸಿಗುತ್ತಿರುವುದು. ಆದರೆ ಕತೆ ಹರಿಯುವಾಗ ಯಥಾರೂಪಕ್ಕೆ ವೈಭವೀಕರಣವೆಲ್ಲ ಸೇರಿಕೊಂಡು ಅವೆಲ್ಲ ಅವತಾರಗಳು ಪೌರುಷಗಳು ಪವಾಡಗಳೆಲ್ಲ ಮಿಶ್ರಣವಾಗಿ ಮಾನವನ ಬದುಕಿಗೆ ಒಂದೊಳ್ಳೆ ಮಾರ್ಗದರ್ಶಿ ಆಗುವ ಅವಕಾಶಗಳೇ ಹೊರಟುಹೋಗಿವೆ. ಉದಾಹರಣೆಗೆ ಗಮನಿಸಿ, ಕುರುಕ್ಷೇತ್ರ ಅಂತ ಸಿನಿಮಾ ಮಾಡಿದ್ದಾರಲ್ಲ, ನಿತ್ಯದ ಬದುಕಿನಲ್ಲಿ ಆ ಸಿನಿಮಾ ಕುರುಕ್ಷೇತ್ರದ ಯಾವ ಭಾಗವನ್ನು ಅಳವಡಿಸಿಕೊಳ್ಳಲು ಸಾಧ್ಯವಾದೀತು? ಹಾಗೆ ಮಾಡಲೇಬೇಕೆಂದರೆ ನಾವೂ ಒಂದು ಸೆಟ್ ನಿರ್ಮಿಸಿಕೊಂಡು ನಾಟಕ ಆಡುವುದಾಗುತ್ತೆ ಅಷ್ಟೇ! ಅಥವಾ ಅವೆಲ್ಲ ಕೇವಲ ಮನರಂಜನೆಗೋಸ್ಕರ ಇರುವ ಪಾತ್ರಗಳೆಂದೂ, ಪಾತ್ರಗಳ ಮೂಲಕ ವರ್ಗಾವಣೆಯಾಗಬೇಕಾದ ನೀತಿ, ಮಾನವೀಯತೆಯ ಅಂಶಗಳೆಲ್ಲವೂ ಸಣ್ಣಗೆ ಸದ್ದುಮಾಡಿ ಮರೆಯಾಗಿ ಹೋಗುತ್ತವೆ. ಆಧ್ಯಾತ್ಮ ಮಾನವನ ಒಳಜಗತ್ತಿನ ಆವಿಷ್ಕಾರಕ್ಕೆ, ವಿಹಾರಕ್ಕೆ ಆ ಮೂಲಕ ಮಾನಸಿಕ ನೆಮ್ಮದಿಗೆ ಒಂದು ಸಾಧನವಾಗಬೇಕು. ಆಧ್ಯಾತ್ಮ ಪ್ರತಿವ್ಯಕ್ತಿಗೂ ವೈಯಕ್ತಿಕವಾದದ್ದು. ಪ್ರತಿಯೊಬ್ಬರೂ ತಮಗೆ ಒಪ್ಪುವ ದೈವಿಕತೆಯನ್ನು ತಾವೇ ತಮ್ಮ ವಿಚಾರವಂತಿಕೆಯಿಂದ ಸಿದ್ಧಿಸಿಕೊಳ್ಳುವ ಹಾದಿ ತೆರೆದುಕೊಳ್ಳಬೇಕು, ಈ ದಾರಿಯಲ್ಲಿ ಪರಮಹಂಸರು, ವಿವೇಕಾನಂದರೂ ಕೆಲಸ ಮಾಡಿದ್ದಾರೆ. ಅದು ಬಿಟ್ಟು ಎಲ್ಲೋ ಯಾರೋ ಗುನುಗಿದ ಮಂತ್ರಕ್ಕೆ ಕಿವಿಯೊಡ್ಡುವ, ಯಾರೋ ಕೊಡುವ ತೀರ್ಥ ಪ್ರಸಾದಗಳೊಳಗಷ್ಟೇ ಭಕ್ತಿ ತೋರಿಸಿ ಅದನ್ನೇ ಆಧ್ಯಾತ್ಮ ಅಂದುಕೊಂಡು ಭ್ರಮೆಯಲ್ಲಿರುವುದು ಸೂಕ್ತ ಅಲ್ಲ.ವ್ಯಕ್ತಿ,   ವ್ಯಕ್ತಿತ್ವಗಳ ವಿಕಸನಕ್ಕೆ ಬೇಕಾದ ಪರಿಸರವನ್ನು ರೂಢಿಸುವುದಕ್ಕಾಗಿ ಪುರಾಣದ ಪಾತ್ರಗಳಿದ್ದರೆ, ಅವುಗಳ ಉಪಯೋಗ ಮಾತ್ರ ರಾಜಕಾರಣಕ್ಕೆ, ಮುಜರಾಯಿ ಇಲಾಖೆಯ(ಮುಜರಾಯಿಗೆ ಒಳಪಡದ ಖಾಸಗಿ ಸಂಸ್ಥೆಗಳನ್ನೂ ಸೇರಿಸಿಕೊಳ್ಳಬಹುದು) ಆದಾಯಕ್ಕೆ ಸೀಮಿತವಾಗಿಬಿಟ್ಟಿವೆ. ಅಂತಹವು ಬದಲಾಗಬೇಕು ಅಂತ ಕುವೆಂಪು ತರದ ನಮ್ಮ ಕಾಲದ ದಾರ್ಶನಿಕರು ಎಷ್ಟೇ ಪ್ರಯತ್ನಪಟ್ಟರೂ ಈ ಮೊದಲು ಹೇಳಿದ ಗೌಜಿಯ ಕಾರಣದಿಂದಾಗಿ ಅವರ ದರ್ಶನ, ಮಾರ್ಗದರ್ಶನಗಳೆಲ್ಲ ಹೊಳೆಯಲ್ಲಿ ಹುಣಸೆ ಕಲಸಿದ ಹಾಗೆ. ಯಾವ ಮೂಲೆಗೂ ಸಾಲುವುದಿಲ್ಲ. ಹಾಗಾಗಿ ಗೆಳೆಯನಿಗೆ ಇಷ್ಟೇ ಹೇಳಬೇಕು ಅಂದುಕೊಂಡೆ. ನೆಮ್ಮದಿಗೆ ಬೇಕಾಗಿರುವುದನ್ನು ಸಂಪಾದಿಸಲು ಸಮಾಜದಲ್ಲಿರುವ ಸರಿಯಾದ, ನೈತಿಕವಾದ ದಾರಿ ಯಾವುದಿದೆಯೋ ಆ ಮೂಲಕ ಬದುಕು ಕಟ್ಟಿಕೊಳ್ಳಲು ಏನು ಬೇಕೋ ಅದು ಮಾಡೋಣ. ಇಲ್ಲಿ ನೆಮ್ಮದಿಯ ಅಗತ್ಯಗಳನ್ನು ಇಲ್ಲಿ ಹೇಳಿರುವ ಕ್ರಮದಲ್ಲಿಯೇ ಆದ್ಯತೆಯಾಗಿ ತೆಗೆದುಕೊಳ್ಳೋಣ.  ೧. ಅನ್ನ  ೨. ಅರಿವು .೩ಅರಿವೆ (ಬಟ್ಟೆ). ೪. ಆರೋಗ್ಯ (ದೈಹಿಕಹಾಗೂಮಾನಸಿಕ) ೫. ವಸತಿ. (ಹೇಳ್ಕಾಳಾಕ್ಒಂದೂರುತಲೆಮ್ಯಾಲೆಒಂದ್ಸೂರು). ಇದರಾಚೆಗೆ ಏನೇ ಬಂದರೂ ಬರದಿದ್ದರೂ ಅಡ್ಡದಾರಿಯ ಕಡೆ ಯೋಚನೆಯನ್ನು ಹರಿಯಗೊಡದಿದ್ದರೆ, ಇದ್ದುದ್ದರಲ್ಲಿ ನೆಮ್ಮದಿ ಕಾಣುವುದು ಸಾಧ್ಯ ಇದೆ. ಹೀಗೇ ಇದ್ದಾಗಲೂ ಗೌರವ, ಮನ್ನಣೆ, ಅಂತಸ್ತು ಇತ್ಯಾದಿಗಳೆಲ್ಲವೂ ಬಂದರೂ ಸಹ ಮತ್ತೆ ನಿಂಬೆಹುಳಿಬೆಳಕಿನ ಕಡೆ (ನನ್ನ ಪ್ರಕಾರ ಇದನ್ನ ʼಹುಸಿಬೆಳಕುʼ ಅನ್ನಬಹುದು) ಜಿಗಿಯುವ ಮಿಡತೆಯಂತಾಗದೇ ನಮ್ಮ ಸ್ವಕರ್ಮವನ್ನು ಬಿಟ್ಟುಕೊಡದೇ ಇದ್ದರೆ ಅಷ್ಟು ಸಾಕು. ಈಗಿರುವ ತಲೆಮಾರಿನವರಿಗೂ, ಮುಂದೆ ಬರುವ ತಲೆಮಾರಿನವರಿಗೂ ಇದರಿಂದ ನಾವು ಗಳಿಸಿ ಗುಡ್ಡೆಹಾಕಿದ್ದು ಏನನ್ನೂ ತೋರ್ಪಡಿಸುವುದು ಸಾಧ್ಯವಾಗದೇ ಇದ್ದರೂ, ಯಾರನ್ನೂ, ಏನನ್ನೂ ನಾಶಮಾಡಿ ನಾವು ಬದುಕು ಕಟ್ಟಿಕೊಂಡಿಲ್ಲ ಅನ್ನುವ ನೆಮ್ಮದಿಯ ಮುಂದೆ ಬೇರೆ ಯಾವ ಗುಡ್ಡೆ ಐಶ್ವರ್ಯಗಳೂ   ನಗಣ್ಯ. ಇಷ್ಟರ ಬಗ್ಗೆ ಯೋಚಿಸಿ ಮುಂದುವರಿಯುವ ಆತ್ಮಶಕ್ತಿ ಬರಲಿ. ಆತ್ಮಶಕ್ತಿಗಿಂತ ಬೇರೆ ಕಲ್ಪವೃಕ್ಷ ಎಲ್ಲಿದೆ? ಸತ್ಯವಾದ ಘನತೆ ಸೋಲೇ ಕಾಣದಂತೆ. ************

ಚಿಂತನೆ Read Post »

ಕಾವ್ಯಯಾನ

ಕಾವ್ಯಯಾನ

ಒಂದು ಕವಿತೆ ಎಂ.ಎಸ್.ರುದ್ರೇಶ್ವರ ಸ್ವಾಮಿ (he ran away from there, he preferred her. she shouted – listen, I am older than you… was he too young for her?) ನಿನ್ನೆ ಮೊನ್ನೆಯಿಂದ ಮುನಿದುದೂರವೇ ಇದ್ದಅವಳು, ಮತ್ತೆ ಬಂದು ಮಕ್ಕಳ ಆಟಆಡೋಣವಾ? ಎಂದು,ಮಗುವಿನ ಹಾಗೆ ಕೇಳಿದಳು. ಭಾಷೆ, ಮಾತಿನಅರ್ಥದ ಜಾಡು ಹಿಡಿದು ವಿಶ್ಲೇಷಣೆಗೆಸಿದ್ಧವಾಯಿತು; ಮಗುವಿನಹಾಗೆ, ಮಗುವಲ್ಲ ಅವಳು. ಮನಸ್ಸು ನದಿ-ಯ ಹಾಗೆ ಹರಿಯುತ್ತಲೇ ಹಿಂತಿರುಗಿನೋಡಬಲ್ಲದು.ಗೌರಿಶಂಕರದ ಕನಸುಕಾಣುತ್ತ ಮಳೆಯಾಗಿ ಇಳೆ ಸುತ್ತಬಲ್ಲದು. ಮಕ್ಕಳ ಆಟ ಆಡೋಣವಾ?ಮತ್ತೆ ಕೇಳಿದಳು. ಒಂದು ಮೆಟಾಫರ್-ಗಾಗಿ ಕಾಯುತ್ತಿದ್ದನನಗೆ, ಗತಿಸಿದದಿನಗಳು ಕಣ್ಣ ಮುಂದೆಥಕ ಥಕನೆಕುಣಿಯಹತ್ತಿದವು. ಅವಳು ನನಗಿಂತಒಂದು ವರ್ಷಕ್ಕೆದೊಡ್ಡವಳು, ಐದು ಇರಬಹುದು,ನನಗೆ ನಾಲ್ಕು.ನಮಗೆಲ್ಲ ಅವಳೇ ಲೀಡರ್. ಅವಳ ಜೊತೆಹುಡುಗಿಯರು; ನಾನಿದ್ದಲ್ಲಿಹುಡುಗರು. ಅದಕ್ಕೇಅವಳು ನನ್ನನ್ನೇಕೇಳಿದ್ದು. ಮದುವೆ-ಆಟ ಆಡೋಣ, ಎಂದು. ಬಟ್ಟೆಯಲ್ಲಿ ಗೊಂಬೆ-ಮಾಡಿ, ಆಟ ಶುರು…ನೀನು ಮದುವಣಿಗ,ಗೌರಿ ಮದುವಣಗಿತ್ತಿ, ಎಂದು ಹೇಳುತ್ತ,ಕೈ-ಹಿಡಿದು ನಮ್ಮಿಬ್ಬರನ್ನೂ ಕೂರಿಸಿಅರಿಸಿನದ ನೀರು-ಹಾಕುವ ಶಾಸ್ತ್ರಶುರು ಆಗುತ್ತಿದ್ದಂತೆ, ಅಲ್ಲಿಂದ ಎದ್ದು, ನೀನುಹೆಂಡತಿ ಆಗುವುದಾದರೆ,ಸರಿ. ಇಲ್ಲ, ನಾನು ಆಟಕೆಡಿಸುತ್ತೇನೆಎಂದು, ಸಿಟ್ಟಿನಿಂದ ಅವಳಿಗೆ ಹೇಳಿ ಕಾಲುಕಿತ್ತೆ. ಕಿರುಚಿ ಕೂಗಿದಳು, ನಾನು –ದೊಡ್ಡೋಳು ಕಣೋ, ನಿನ್ನ ಹೆಂಡತಿಆಗುವುದಕ್ಕೆ…. *********

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಸ್ವಾಮಿ ಭಕ್ತಿ ಮೂಲ:ವಿಲಿಯಂ ವರ್ಡ್ ವರ್ತ್ ಕನ್ನಡಕ್ಕೆ: ವಿ.ಗಣೇಶ್ ಬೊಗಳುವ ಸಪ್ಪಳವು ಕುರುಬನಿಗೆ ಕೇಳಿಸಿತು ನರಿಯದೋ ನಾಯಿಯದೋ ಕೂಗಿರಬೇಕೆಂದು ಅರೆ ಕ್ಷಣ ನಿಂತು ಹುಡುಕಾಡಿದನು ದಶದಿಕ್ಕುಗಳಲಿ. ಹರಿದು ಹಾಸಿದ್ದ ಕಲ್ಲುಬಂಡೆಗಳ sಸುತ್ತಲೂ ಹುಡುಕಾಡಿದಾಗ ತುದಿಯ ಗಿಡಗಂಟೆಗಳ ಮಡಿಲಲ್ಲಿ ಅಲುಗಾಡುತ್ತಿರುವ ಹಸಿರು ಪೆÇದೆಯೊಂದು ಕಾಣಿಸಿತು. ಅದರ ಅಡಿಯಲಿ ಕಣ್ಣೀರಿಡುತಿರುವ ಶುನಕವೊಂದು ಪೊದೆಯ ಕಡೆಗೇ ವೀಕ್ಷಿಸುತ ಅಳುವುದ ಕಾಣಿಸಿತು.   ಅತಿ ಸೂಕ್ಷ್ಮಮತಿಯಾದ ಆ ಶುನಕವ ನೋಡಿದರೆ ಕಾಡಿನಲಿ ಹುಟ್ಟಿ ಬೆಳೆದ ಶುನಕವಲ್ಲವೆನಿಸಿತು. ಅದರ ಅಳುವಿನಲೇನೋ ಘೋರ ದುಃಖವಿಹುದೆಂದು ಭಾವಿಸಿದ  ಕುರುಬನದರ ಚಲನವ ಗಮನಿಸಿದಾಗ ಅದರ ಸನಿಯದಲಾರ ಸುಳಿವು ಗೋಚರಿಸಲಿಲ್ಲ. ‘ಕಲ್ಲುಬಂಡೆಗಳಿಂದಾವರಿಸಿದ ಆ ಭಯಾನಕ ಸ್ಥಳದಲಿ ಸದ್ದುಗದ್ದಲಗಳಿನಿತು ಕಿವಿಗೆ ಅಪ್ಪಳಿಸದಿರುವಾಗ ಆ ಮೂಕ ಪ್ರಾಣಿ ಕುಳಿತೇನು ಮಾಡತಿದೆಯಲ್ಲಿ? ಎಂದು ಚಿಂತಿಸುತಿದ್ದನು ಆ ಕುರುಬನಲ್ಲಿ   ಸುತ್ತಲೂ ಜಲಾವೃತವಾದ ಆ ಏಕಾಂತ ಸ್ಥಳವು ಜೂನ್ ಮಾಹೆಯಲೂ ಮಂಜಿನಿಂದಲಿ ಮಸುಕಾಗಿತ್ತು ಎದುರಿನಲಿ ದೊಡ್ಡ ಇಳಿಜಾರು ಬಂಡೆ ಜೊತೆ ಕೆಳಗೆ ಕಾಣುತಿದೆ ತುಂಬಿದ ಕೆರೆಯೊಂದು. ಬೆಟ್ಟದ ತಳದಲ್ಲಿ ಅನತಿ ದೂರದ ಅಂಚಿನಲಿ ಹೆದ್ದಾರಿಯೊಂದು ಹಾದು ಹೋಗುತಲಿದೆ. ಅಲ್ಲೊಂದು ಇಲ್ಲೊಂದು ಗುಡಿಸಿಲುಗಳ ನಡುವೆ ಬಿತ್ತಿ ಬೆಳೆದಂತ ಹಸಿರಾದ ಹೊಲಗಳ ಜೊತೆ ಕಾಲು ಹಾದಿಗಳ  ಕುರುಹು ಕಾಣುತಿವೆ ಸುತ್ತಲು.   ನೆಗೆ ನೆಗೆದು ಈಜಾಡುತಿರುವ ಕೊಳದ ಮೀನುಗಳು ಚೀತ್ಕರಿಸುವ ಕೂಗು ಎಲ್ಲೆಡೆಗು ಹರಡುತಿದೆ. ಬಂಡೆಗಳ ತಳದಲಿ ವಟಗುಟ್ಟುವಾ  ಕಪ್ಪೆಗಳ ಗದ್ದಲವು ಇತ್ತ  ತಾ ಕೇಳಿ ಬರುತಲಿದೆ. ಆ ಬನದ ಸಿರಿಯನ್ನು ಹೆಚ್ಚಿಸಲೋ ಎಂಬಂತೆ ಕಾಮನ ಬಿಲ್ಲು ಉದಯಿಸಿದೆ ಬಾನಿನಂಚಿನಲಿ. ಚಲಿಸುತಿಹ ಮೋಡಗಳ ಗುಡುಗು ಸಿಡಿಲಿನಾರ್ಭಟವ ತಡೆಯಲೆಂಬಂತೆ ತಿಳಿಯಾದ ರವಿಕಿರಣಗಳು ಅವುಗಳ ಮಾರ್ಗದಿ ಬಂದು ಬೆಳಕ ಚೆಲ್ಲುತಿವೆ.   ಈ ಎಲ್ಲ ಯೋಚನೆಗಳಿಂದ ಹೊರಬರಲಾಗದೆ ಕುರುಬ ನಿಂತಿದ್ದ ಮಾರ್ಗ ಮಧ್ಯದಿ ಅಂದು ಬೆಟ್ಟದ ಮೇಲಿರುವ ಕಲ್ಲುಬಂಡೆಗಳ ದಾಟಿದವ ಶುನಕವನು ಅನುಸರಿಸಿ ಹುಡುಕಾಡುತಿರುವಾಗ ಭಯಭೀತನಾಗಿ ಬೆದರಿ ನಿಂತನಾ ಕಣಿವೆಯಲಿ. ಬಿದ್ದ ಮಾನವ ಅಸ್ಥಿಪಂಜರವೊಂದನು ಕಂಡು. ಆಶ್ಚರ್ಯಚಕಿತನಾಗಿ ಬೆದರಿದ ಕುರುಬನು ಅದರ ಚರಿತೆಯನರಿಯಲು ಸುತ್ತಲೂ ದಿಟ್ಟಿಸಿದ.     ಆ ಭಯಾನಕವಾದ  ಬಂಡೆಗಳ ಮೇಲಿಂದ ಭಯದಿಂದ ಆ ವ್ಯಕ್ತಿ ಉರುಳಿ ಬಿದ್ದಿರಬಹುದು ಮೇಲಕೇರಲಾಗದೆಯೆ ಉಸಿರು ನಿಂತಿರಬಹುದು ನಡೆದ ಘಟನೆಯ ಬಗ್ಗೆ ಹೀಗೆ ಊಹಿಸಿದನು. ಅವನ ಹೆಸರೇನು? ಎಲ್ಲಿಂದ ಬಂದಿಹನು? ಅಲ್ಲಿಗೆ ಬರುವ ಕಾರಣವೇನಿರಬಹುದೆನ್ನುತ ಮನದೊಳಗೇ ಯೋಚಿಸುತ ನಿಂತ ಬೆರಗಾಗಿ   ದಟ್ಟ ಕಾನನದ ಕಲ್ಲು ಬಂಡೆಗಳ ನಡುವಿಂದ ಶುನಕ ಪರಿತಪಿಸುತಿರಬೇಕು ಬಹುದಿನಗಳಿಂದ ಅಳುವಿನ ಮೂಲಕವೇ  ತರ್ಪಣವ ಕೊಡುತಿರುವ ಅದರ ನೋವಿನ ಆಳವನು ಬಣ್ಣಿಸಲಸದಳವು ಆ ದುಃಖದ ಕಡಲಿಂದ ಹೊರಬರಲಾಗದೆಲೆ ರೋದಿಸುತಿದೆ ಈ ಶುನಕ ಮೂರು ತಿಂಗಳುಗಳಿಂದ ದಿಕ್ಕುಕಾಣದ ಆ ದಟ್ಟ ಅಡವಿಯ ಗರ್ಭಭಾಗದಲಿ, ಆದರ ಮಾರ್ಮಿಕ ಕತೆಯ ಊಹಿಸಿದನಿಂತು.   ನತದೃಷ್ಟ ಪಯಣಿಗನು ಮರಣಿಸಿದ  ದಿನದಿಂದ ಆ ಸ್ಥಳವನು ಕಾಯುತಿದೆ ಹಗಲು ರಾತ್ರಿಯೆುನ್ನದೆಲೆ ಅಳುತಲಿದೆ ಸನಿಹದಿ ಕುಳಿತು ಅವನನೇ ನೋಡುತ ಮೂರು ತಿಂಗಳ ಕಾಲ ಹೇಗೆ ಕಳೆಯಿತೋ ಸಮಯವ ಅನ್ನಾಹಾರಗಳಿಲ್ಲದೆ ಹಸಿವಿನಲಿ ಬಳಲುತ ಮಾನವನ ಮನಕಿಂತ ಮಿಗಿಲಾದ ಹೃದಯವನು ದಯಪಾಲಿಸಿದವನಾರೋ ಆ ಮುಗ್ದ ಪ್ರಾಣಿಗೆ? ಎನುತ ಚಿಂತಿಸುತಲಿದ್ದ ಆ ಮೂಕಪ್ರಾಣಿಯ ನೋಡುತ. ******   Fedility By William Wordsworth

ಅನುವಾದ ಸಂಗಾತಿ Read Post »

You cannot copy content of this page

Scroll to Top