ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಆವರ್ತನ ಎನ್ ಆರ್ ರೂಪಶ್ರೀ ಬದುಕೆಂದರೆ ಕನಸುಗಳ ಸಂತೆಮನಸಿನ ಭಾವನೆಗಳ ಒರತೆಕನಸಿನೂರಿನ ಪಯಣಸುಖದುಃಖಗಳ ಸಮ್ಮಿಶ್ರಣ. ಅತ್ತ ಬಂದರೂ ಬರಲಾಗದೆನಿಂತರೂ ನಿಲ್ಲಲಾಗದೆತವಕ ತಲ್ಲಣಗಳ ಮಹಾಪೂರಅಲೆಗಳ ನಡುವಿನ ಸಾಗರ. ಜೀವ ಜೀವದ ಜೀವಸೆಲೆಯಿದುನಿಲ್ಲದ ನಿರಂತರ ಪಯಣವಿದುಸಾಗುತ್ತಲೇ ಸಾಗುವ ಜಿನುಗುತ್ತಲೇ ಜಿನುಗುವ ತುಂತುರು ಮಳೆ ಹನಿಯಿದು. ಕಡಿದಂತೆ ಚಿಗುರು ಕಾಂತಿಯ ಬೆರಗುಸವಿನಯ ಭಾವದ ಸೆರಗುಮತ್ತೆ ಮತ್ತೆ ಮರುಕಳಿಸುವ ಮೆರಗು ಮೌನದಿ ಜೊತೆಗೆನ್ನ ಹುದುಗು. ಹರಿವ ಸಾಗರದಿ ಅಲೆಗಳ ನಡುವೆಪ್ರೀತಿಯ ಸಂಚಲನಬಾಳಹಾದಿಯಲ್ಲಿ ಸಾಗುತ್ತಲಿರುವಆವತ೯ನ. *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಪ್ಪ… ಸುಜಾತ ಲಕ್ಷ್ಮೀಪುರ. ಅಪ್ಪ ನೆನಪಿಗೆ ಬರುವುದು ಅಪರೂಪ… ಕಣ್ಣು ಬಿಟ್ಟಾಗಿನಿಂದ‌ ಕಂಡ‌ಅಮ್ಮನ ಮೊಗದಲ್ಲೇ ಅಪ್ಪನ‌ ಸುಳಿವು..ಅಮ್ಮನಲ್ಲಿ ಪ್ರೀತಿ ತುಂಬಿದ ಭಯ ಆತಂಕಆವಸರಿಸಿದರೆ ಗೊತ್ತಾಗುತ್ತಿತ್ತು ಅಪ್ಪ ಬಂದಾ! ಚಿಕ್ಕವಳಿರುವಾಗಲೇಮಧ್ಯ ರಾತ್ರಿ ಎಬ್ಬಿಸಿ ಕುಳ್ಳಿರಿಸುತ್ತಿದ್ದ ಓದು.. ಓದು..ತಾನು ಕಲಿತ ನಾಲ್ಕು ಅಕ್ಷರ ಸಾಲದೆಂದು ನಮ್ಮನ್ನು ಬಡಿದೆಚ್ಚರಿಸುತ್ತಿದ್ದ. ರಾತ್ರಿ ಎಷ್ಟೋ ಹೊತ್ತಿಗೆ ಕುಡಿದು ತೂರಾಡುತ್ತಾ ತಿಂಡಿ ಕಟ್ಟಿಸಿಕೊಂಡುಮನೆಗೆ ಬರುತ್ತಿದ್ದ ಅಪ್ಪ..ಹೊತ್ತು ಗೊತ್ತು ನೋಡದೆಯೇ ಎಬ್ಬಿಸಿ ತಿನ್ನಿಸುತ್ತಿದ್ದ. ಕುಡಿತ ದುಡಿಮೆಯಲ್ಲೇಜೀವ ಸವೆಸಿದ ಅಪ್ಪಮುದ್ದು ಮಾಡಿದ್ದು ನೆನಪೇ ಇಲ್ಲಾ..ಒದ್ದು ಎಬ್ಬಿಸಿ ನೀರಿಗೆಂದು ಕೊಡ ಕೊಡುತ್ತಿದ್ದ,ಆಮೇಲೆ‌ ಕೈಗೆ ಪುಸ್ತಕ. ಯೌವನದ ಹೊಸ್ತಿಲಿಗೆ ಕಾಲಿಡುವ ಮುನ್ನವೇ ಮಲಗಿದ್ದವನು ಮಲಗಿದ್ದಂತೆ ಹೊರಟುಹೋದ. ಅದೆಂದೋ ಒಂದು ದಿನ ಅಪ್ಪ ಅಮ್ಮನಿಗೆ ಹೇಳುತ್ತಲಿದ್ದ,‘ನೋಡು ನನ್ನ ‌ಮಗಳು ಚಂದ ಓದಿ ದೊಡ್ಡವಳಾಗಿ ಹೆಸರು ತರುತ್ತಾಳೆ. ನಿನ್ನ ಮಗ ನಾಲಾಯಕ್’ ಅಪ್ಪನೆಂದರೆ ಗದರಿಕೆಯ ದನಿ ಈಗಲೂ ಕೇಳಿಸುತ್ತದೆಅಪ್ಪ ಆಡಿದ್ದು ಗಳಿಸಿದ್ದು ಸಾಕಿದ್ದು ಸಲಹಿದ್ದು ಬಹಳ ಕಡಿಮೆ.ಅವನಿಟ್ಟಿದ್ದ ಒಂದೇ ವಿಶ್ವಾಸನನ್ನನ್ನು ಬೆಳೆಸಿದೆ. ನನ್ನ ನೆರಳಾಗಿ ಗೆಲುವಾಗಿ ನೆಮ್ಮದಿಯಾಗಿ ಅಮ್ಮ ನಿಂತಿದ್ದಾಳೆ.ಅಮ್ಮನ ಎದೆಯ ಗೂಡಲ್ಲಿ ಅಪ್ಪ ಈಗಲೂ ಬೆಚ್ಚಗಿದ್ದಾನೆ. ***********

ಕಾವ್ಯಯಾನ Read Post »

ಇತರೆ

ಶಿಶುಗೀತೆ

ಇರುವೆ ತೇಜಾವತಿ ಹೆಚ್.ಡಿ. ಇರುವೆ ಇರುವೆ ಎಲ್ಲಿರುವೆಎಲ್ಲಾ ಕಡೆಯಲು ನೀನಿರುವೆಶಿಸ್ತಿಗೆ ನೀನೇ ಹೆಸರಾಗಿರುವೆಹೆಚ್ಚಿನ ಭಾರವ ನೀನೊರುವೆ ಇರುವೆ ಇರುವೆ ಕೆಂಬಿರುವೆಕೋಪದಿ ಏಕೆ ನೀನಿರುವೆಅರಿಯದೆ ನಿನ್ನ ಮುಟ್ಟಿದರೆಚುರುಚುರು ಅಂತ ಕಚ್ಚಿರುವೆ ಇರುವೆ ಇರುವೆ ಕಟ್ಟಿರುವೆದಾರಿಲಿ ಏಕೆ ನಡೆದಿರುವೆಅರಿಯದೆ ಪಾದವ ಮೆಟ್ಟಿದರೆಸಾಲನು ಬಿಟ್ಟೇ ಚುಚ್ಚಿರುವೆ ಇರುವೆ ಇರುವೆ ಚಗಳಿರುವೆಕೊಟ್ಟೆಯ ಎಲ್ಲಿ ಕಟ್ಟಿರುವೆಚಟ್ನಿಗೆ ನೀನು ಚಂದಿರುವೆಮಲ್ನಾಡ ಸೀಮೆಲಿ ನೀನಿರುವೆ ಇರುವೆ ಇರುವೆ ಕಪ್ಪಿರುವೆತತ್ತಿಯ ಎಲ್ಲಿ ಬಿಟ್ಟಿರುವೆಬೆಲ್ಲವ ನೀನು ಮುತ್ತಿರುವೆಹಿಡಿಯ ಹೋದ್ರೆ ಬುಳುಗುಡುವೆ ***********

ಶಿಶುಗೀತೆ Read Post »

ಇತರೆ

ಲಹರಿ

ಮಳೆಗಾಲದ ಹಸಿ ಪ್ರೇಮಪತ್ರ… ಆಶಾಜಗದೀಶ್ ಯಾರೋ ಹುಡುಗ ಹೇಳಿದನಂತೆ ತನ್ನ ಹುಡುಗಿಗೆ, “ಹೋಗಿ ಮಳೆಯ ಹನಿಗಳನ್ನು ಎಣಿಸು.. ನಾ ನಿನ್ನನ್ನು ಅಷ್ಟು ಪ್ರೀತಿಸುತ್ತೇನೆ” ಎಂದು. ನನ್ನ ಅದೆಷ್ಟೋ ಸಂದರ್ಭಗಳ ಪ್ರೇಮದ ಉತ್ಕಟತೆಗೆ ಮಾತಾಗಿ ನಿಂತಿತ್ತು ಈ ಕಥೆ. ಏನೊಂದು ಹೇಳದೆಯೂ “ನನ್ನ ಪ್ರೀತಿ ಇದು” ಎಂದು ಹೇಳಿದ ಮೌನ ಮಾತಾಗಿತ್ತು ಈ ಕಥೆ. ಅರೆ… ಆ ಹೆದ್ದಾರಿಯ ಮಗ್ಗುಲ ಕಾಲುದಾರಿಯ ಪೊದೆಗೆ ಎಲ್ಲ ಗೊತ್ತಿದೆ. ನಾವು ಹೃದಯವನ್ನು  ಹಂಚಿಕೊಳ್ಳುತ್ತಾ ನಮ್ಮ ಆತ್ಮಗಳನ್ನು ಒಂದಾಗಿಸಿದ್ದನ್ನು ಕಂಡಿದೆ ಅದು. ನೋಯಿಸುವಷ್ಟು ತೀವ್ರ ಮಳೆಯಲ್ಲಿ ಕಂಗಾಲಾಗಿ ಅಳುತ್ತಾ ನಮ್ಮ ತೆಕ್ಕೆಗಳನ್ನು ಬಿಡಿಸಿಕೊಂಡು ಮನೆದಾರಿ ಹಿಡಿದಿದ್ದಕ್ಕೆ ಸಾಕ್ಷಿಯಾಗಿದೆ ಅದು. ಮತ್ತೆ ಒಂದಾಗುವ ತೀವ್ರ ಭಾವದಲ್ಲಿದ್ದೂ ಇನ್ನೊಂದೇ ಒಂದು ಹೆಜ್ಜೆಯನ್ನು ಬೇಕಂತಲೇ ಮರೆತು ನಡೆದದ್ದು ಅದರ ಮುಂದೆಯೇ. ನನ್ನ ಸಿಂಧೂರ ಹಣೆಯ ಮೇಲಿಂದ ಅತ್ತು ಇಳಿದದ್ದು ಇಂಥದೇ ಒಂದು ಹುಚ್ಚು ಮಳೆಯಲ್ಲಿ. ಹೇಳಲು ಮರೆತ ಮಾತೊಂದನ್ನು ಉಸುರಲು ನಿಂತ ಕಣ್ಣಂಚಿನ ಹನಿಯೊಂದನ್ನು ತೊಳೆದು ಅಳಿಸಿಬಿಟ್ಟಿದೆ ಈ ಮಳೆ. ಮತ್ತೆ ನಮ್ಮ ಕಣ್ಣುಗಳು ಆಡಿಕೊಳ್ಳುತ್ತಿದ್ದ ಮಾತುಗಳೆಷ್ಟೋ ಕೊಚ್ಚಿ ಹೋದದ್ದೂ ಇದೇ ಮಳೆಯಲ್ಲಿ… ಹಾಗಾಗಿ ಸುಮ್ಮನೇ ಮಳೆಯೊಂದರ ಮುಂದೆ ಕೂತು ಬಿಟ್ಟರೂ ಸಾಕು ನಿನ್ನ ಮಿಸುಗಾಟವೂ ನೆನಪಾಗತೊಡಗುತ್ತದೆ ನನಗೆ. ಮತ್ತೆ ಮಳೆಯೆನ್ನುವ ಮಾಯಾವಿಯ ಮುಂದೆ ಮಂಡಿಯೂರಿ ಸೆರಗೊಡ್ಡಿ ನಿನ್ನ ಪ್ರೇಮದ ತುಣುಕೊಂದನ್ನು ಬೇಡಿದ ಘಳಿಗೆ ಮತ್ತೆ ಮತ್ತೆ ನೆನಪ ಮೂಟೆ ಹೊತ್ತು ತರುವ ಮಹಾನ್ ಮಳೆರಾಯನ ಆಗಮನದಿಂದ ಮತ್ತೆ ಮತ್ತೆ ನವೀಕರಣಗೊಳ್ಳುತ್ತಾ ಬಂದಿದೆ… ಆದರೆ ನಮ್ಮ ನಿಲುವುಗಳು ಯಾವ ಗಟ್ಟಿ ಬುನಾದಿಯ ಮೇಲೆ ನಿಂತಿರುತ್ತವೋ, ಅವೇ ನಮ್ಮ ಬದುಕಿನ ದಿಕ್ಕನ್ನು ನಿರ್ಧರಿಸುತ್ತವೆ. ಅಂತಹ ಒಂದು ಗಟ್ಟಿ ನಿಲುವೇ ನಮ್ಮ ಆಯ್ಕೆಗಳ ವಿಷಯದಲ್ಲೂ ಕೆಲಸ ಮಾಡಿರುವುದು. ಪ್ರೀತಿಯೂ ತನ್ನ ನಿಲುವಿನ ಮೇಲೆ ತಾನು ನಿಲ್ಲುತ್ತದೆ. ಹೃದಯದ ಬುನಾದಿಯ ಮೇಲೆ ಸೌಧ ಕಟ್ಟುತ್ತದೆ. ಕೆಸರಿನಲ್ಲಿ ನಾಟಿದ ಭತ್ತದ ಸಸಿಯ ತಪಸ್ಸಿನಷ್ಟೇ ಘೋರ ತಪಸ್ಸೊಂದು ಪ್ರೇಮವನ್ನು ಇನ್ನಿಲ್ಲದಂತೆ ಪೊರೆಯುತ್ತಿರುತ್ತದೆ. ದೈಹಿಕ ಆಸೆಯೊಂದೇ ಇಷ್ಟು ದೂರ ಪೊರೆದು ನಡೆಸಲಿಕ್ಕೆ ಹೇಗಾದರೂ ಸಾಧ್ಯ!  ಜಗತ್ತನ್ನು ಎತ್ತಿ ನಿಲ್ಲಿಸಿರುವ, ಜೀವಿ ಜೀವಿಗಳ ಬೆಸೆವ ಪ್ರೇಮ, ಭೂಮಿಯನ್ನು ತಲುಪದೇ ಪೈರು ಪಚ್ಚೆಯಾಗುವುದಾದರೂ ಹೇಗೆ?! ಜೀವದ ಹಂಗು ತೊರೆದು ಹೆಣೆದ ಹೆಜ್ಜೆಗಳ ಸಾಲು, ಅವನ ಮನೆಯ ಕದ ತಟ್ಟಬೇಕಿದೆ. ಮನೆಯ ಕದದಷ್ಟೇ ಅವನ ಎದೆ ಕದವೂ ಕದಲುವುದನ್ನು ಕಂಡು ಹುಚ್ಚೆದ್ದು ಕುಣಿಯಬೇಕಿದೆ. ಕಾರ್ಮೋಡ ಕಂಡು ಗರಿ ಬಿಚ್ಚಿ ಕುಣಿವ ನವಿಲಿನಂತೆ. ಪ್ರತಿ ಗಂಡೂ ಭೂಮಿಯಂತೆ ಎದೆಸೆಟೆಸಿ ನಿಲ್ಲುತ್ತಾನೆ, ಕಣ್ಣೀರ ನುಂಗಿ ನಸು ನಗುತ್ತಾನೆ. ಪ್ರತಿ ಹೆಣ್ಣೂ ಮಳೆಯಂತೆ ನವಿರಾಗಿ, ಕೋಮಲವಾಗಿ ಸ್ಪರ್ಷಿಸುತ್ತಾಳೆ, ನೋವನ್ನು ಮರೆಸುತ್ತಾಳೆ, ಭೂಮಿಯುದರದಲ್ಲಿ ಜೀವದ ಫಲವಾಗಿ ಫಲಿಸುತ್ತಾಳೆ. ಇಳೆ ಮಳೆಯ ನಂಟು ತನ್ನ ಮಜಲುಗಳನ್ನು ಹಾಯುತ್ತಾ ಸಾಗುತ್ತಲೇ ಹೋಗುತ್ತದೆ. ಬಹುಶಃ ಇದರಿಂದಲೇ ಪ್ರೇಮವೆನ್ನುವುದು ಹುಟ್ಟಿದ್ದಿರಬೇಕು. ಬತ್ತದ ಪ್ರೇಮದ ತಿಳಿಕೊಳವೊಂದು ಪ್ರೇಮಿಗಳ ಉಡಿ ತುಂಬಿ ಕಳಿಸುತ್ತಿರಬೇಕು. ನಾವು ನಮ್ಮ ಕೈಗಳ ಮೇಲೆ ಅಚ್ಚೆ ಹೊಯ್ಸಿಕೊಳ್ಳುವಾಗಲೂ ಹೃದಕ್ಕಿಳಿಯುವ ಬಣ್ಣಕ್ಕಾಗಿ ಹುಚ್ಚು ಮಳೆಯಲ್ಲಿ ಹುಡುಕಾಡಿದ್ದೆವು. ಹುಡುಕಾಟದ ಕೊನೆಯಲ್ಲಿ ಬರಿಗೈ! ಕೊನೆಗೆ ಅರ್ಥವಾದ ಸತ್ಯವೆಂದರೆ ಅವು ಅಗೋಚರ ಬಣ್ಣಗಳು ಎಂದು. ಆದರೆ ಕಾಣುವ ಕಾಮನ ಬಿಲ್ಲಿನ ಚೂರುಗಳು ನಿನ್ನ ಕಾಮನೆಗಳ ಫಲ ಎನಿಸುವಾಗೆಲ್ಲ ನೀನು ನಡುರಸ್ತೆಯಲ್ಲಿ ಕೊಟ್ಟ ಮುತ್ತುಗಳ ಲೆಕ್ಕ ತಪ್ಪುತ್ತಲೇ ಇದೆ. ಮತ್ತೆ ಅವನ್ನೆಲ್ಲ ಈ ಹಸಿ ಮಣ್ಣಿನ ವಾಸನೆಯಲ್ಲಿ ಜೋಪಾನವಾಗಿ ಬಚ್ಚಿಟ್ಟಿದ್ದೇನೆ.  ಮತ್ತೆ ನಿನಗೆ ಗೊತ್ತಾ… ಮಳೆಗಾಲದ ಹಸಿ ನೆಲದಲ್ಲಿ ಇದ್ದಕ್ಕಿದ್ದಂತೆ ಎನ್ನುವ ಹಾಗೆ ಕಾಣಿಸಿಕೊಳ್ಳುವ ನಂಜುಳಗಳು ಆ ಮುತ್ತುಗಳ ಮೇಲೆಲ್ಲಾ ಪುಳುಪುಳು ಓಡಾಡುತ್ತಾ ಕಚಗುಳಿ ಇಡುತ್ತಿವೆಯಂತೆ. ನನಗೆ ಸುಮ್ಮಸುಮ್ಮನೇ ನಗು ಬರುತ್ತದೆ. ಯಾರನ್ನೂ ಕಣ್ಣಿಟ್ಟು ನೋಡಲಾಗದು. ದೃಷ್ಟಿ ನೆಲ ನೋಡುತ್ತದೆ. ಕಾಲ ಹೆಬ್ಬೆರಳ ರಂಗೋಲಿಯಲೂ ನಿನ್ನದೇ ಹೆಸರು. ಚಡಪಡಿಸುವ ಕೈಬೆರಳ ತುದಿಯಲ್ಲಿ ನನ್ನ ಕೂದಲೆಳೆ. ಹಗಲುಗನಸಿಗೆಳೆಸುವ ಕೆಂಪು ನಾಚಿಕೆ. ಹೇಳು ನೀನ್ಯಾರು? ಪ್ರೇಮವೆನ್ನುವುದು ಪ್ರಕೃತಿಗೆಷ್ಟು ಸಹಜವೋ ಅದರದೇ ಭಾಗವಾದ ನಮ್ಮಂತಹ ಹುಲು ಮಾನವರಿಗೂ ಸಹ. ಅದು ನೆನ್ನೆ ಇತ್ತು, ಇಂದು ಇದೆ, ಮತ್ತೆ   ನಾಳೆ ಇರುತ್ತದೆ. ಆದರೆ ಅದನ್ನು ಮೀರಿದವನು ನೀನು. ಹೇಳು ನೀನ್ಯಾರು? ಭಾಷೆಯೊಂದು ನಿನ್ನ ಮುಂದೆ  ಸೋತು ಶರಣಾಗುತ್ತಿದೆ. ಅದಕ್ಕೆ ನಿಲುಕುತ್ತಿಲ್ಲ ನೀನು. ಹೇಳೋ ಪ್ಲೀಸ್ ನೀನ್ಯಾರೋ??? ನಿನ್ನ ಅನಾಮಿಕತನವೂ ಆಪ್ಯಾಮಾನವಾಗಿದೆ. ಮತ್ತು ಸೋಲುವುದರ ರುಚಿ ಉಣಿಸುತ್ತಿದೆ. ಆದರೆ ನನಗೆ ಅಂದು ನೀನು ಬಯಲ ಏಕಾಂತದಲಿ ಮಳೆಯ ಹೊಡೆತಕ್ಕೆ ಎದೆಯೊಡ್ಡಿ ನಿಂತು, ನೀನು ನೀನಾಗಲ್ಲದೆ, ನಿನ್ನನ್ನು ಇಂಚಿಂಚೇ ಕಳೆದುಕೊಳ್ಳುತ್ತಾ ಅತ್ತದ್ದು ನೆನಪಾಗುತ್ತದೆ. ಖಾಲಿ ಇರುವ ನಿನ್ನ ಎದೆಯ ತೋರಿಸುತ್ತಾ ಅಲ್ಲಿ ನನ್ನನ್ನು ಆ ಕ್ಷಣವೇ  ಪ್ರತಿಷ್ಟಾಪಿಸಿ ಆವಾಹಿಸಿಕೊಳ್ಳುವ ನಿನ್ನ ಉಳಿವಿನ ತುರ್ತನ್ನು  ಅಳುವಿನ ಭಾಷೆಯಲ್ಲಿ ಹೇಳುತ್ತಿದ್ದುದ್ದನ್ನು ಕಂಡೂ ಅಸಹಾಕಳಾಗಿ ನಿಂತ ನನಗೆ, ಭೂಮಿ ಬಾಯ್ಬಿಡುವುದೇ ಸೂಕ್ತ ಎನಿಸಿತ್ತು. ಅವತ್ತು ನಾವಿಬ್ಬರೂ ಆಡಿದ್ದ ಮಾತುಗಳಷ್ಟೂ ಸತ್ತು ಹೋಗಿದ್ದವು. ಕಡು ವಿಷಾದ ಮಾತ್ರ ಹೆಪ್ಪುಗಟ್ಟಿತ್ತು. ಆದರೆ ಒಂದಾಗುವ ಸಮಯಕ್ಕೆ ಕಾಯುತ್ತಿದ್ದ ನಮ್ಮ ದಾರಿಗಳು, ಸಧ್ಯ ನಾವು ಮರಳಬೇಕಿರುವ ನಮ್ಮ ನಮ್ಮ ಪ್ರತ್ಯೇಕ ದಿಕ್ಕು ದಿಸೆಗಳನ್ನು ನೆನಪಿಸುತ್ತಿದ್ದವು. ನಾವಿಬ್ಬರೂ ಕ್ಷಣಗಳನ್ನು ಮುಂಗಾರಿನ ಹನಿಗಳಂತೆ ನಮ್ಮ ನಮ್ಮ ಬೊಗಸೆಯಲ್ಲಿ ತುಂಬಿಕೊಂಡು ವಿರುದ್ಧ ದಿಕ್ಕಿನಲ್ಲಿ ಹೊರಟುಹೋಗಿದ್ದೆವು. ಒಮ್ಮೆಯೂ ಹಿಂತಿರುಗಿ ನೋಡದೆ. ಆದರೆ ಬೆನ್ನುಗಳಲ್ಲಿ ಕಣ್ಣು ಮೂಡಿದ್ದು ಇಬ್ಬರಿಗೂ ತಿಳಿದಿದ್ದ ಆದರೆ ಒಬ್ಬರಿಂದೊಬ್ಬರು ಮುಚ್ಚಿಟ್ಟ ವಿಚಾರವಷ್ಟೇ… ಇದೆಲ್ಲವನ್ನೂ ನೆನೆಯುತ್ತ ಕೂತಿರುವ ನನ್ನ ಮುಂದೆ ಏನೊಂದೂ ಕಾಣಿಸದಷ್ಟು ಜೋರು ಸುರಿಯುತ್ತಿದೆ ಮಳೆ. ಮಳೆಯ ನೀಳ ಸಮತಲದ ಮೇಲೆ ನಿನ್ನ ಚಹರೆಯನ್ನೊಮ್ಮೆ ಹುಡುಕುತ್ತೇನೆ. ಕಾಣಿಸದಾಗ ಮಳೆಯ ಬಿರುಸಿನ ನಡುವೆ ನಿನ್ನ ಮುಖವನ್ನು ಕಾಣಲೇ ಬೇಕೆಂದು ರಚ್ಚೆ ಹಿಡಿಯಬೇಕೆನಿಸುತ್ತದೆ. ಹುಚ್ಚಿಯಂತೆ ಅಲೆಯುತ್ತಾ ಹೊರಟುಬಿಡಬೇಕು ಎನಿಸುತ್ತದೆ. ನೀನು ಸಿಕ್ಕಲ್ಲದೇ ಮರಳಲೇ ಬಾರದು ಎನಿಸುತ್ತದೆ. ಮಳೆಯ ಈ ದಿನಗಳು ಮುಗಿಯುವುದರೊಳಗಾಗಿ ನಾವಿಬ್ಬರೂ ಮತ್ತೆ ಯಾಕೆ ಎದುರು ಬದರಾಗಬಾರದು?! ತಬ್ಬಿ ನಿಲ್ಲಬಾರದು?! ಮತ್ತೆ ನಮ್ಮ ಹಾದಿಗಳನ್ನು ದಿಕ್ಕುಗಳನ್ನು ಏಕೆ ಒಂದಾಗಿಸಬಾರದು?! ನಮ್ಮನ್ನು ಸದಾ ಹಿಡಿದಿಡುವ ಸಾಂಗತ್ಯ, ಸಹಚರ್ಯವೊಂದನ್ನು ಮಳೆಯ ಹನಿಗಳಲ್ಲಿ ಏಕೆ ಹರಳುಗಟ್ಟಿಸಬಾರದು?! ಪರಿಣಾಮ ನಿನ್ನ ನಗು ಸಹಜವಾಗುತ್ತದೆ. ನನ್ನ ಒಂದೊಂದು ಸೆಕೆಂಡುಗಳ ಅರ್ಥ ಮರಳುತ್ತದೆ. ನಿನ್ನ ಎದೆ ಸಮಾಧಾನದ ಸಾಗರವಾಗುತ್ತದೆ. ನನ್ನ ಅಂತಃಕರಣ ಹಸಿಯಾಗುತ್ತದೆ. ಮುಂಗಾರು ಕಳೆಯುವುದರೊಳಗಾಗಿ ಅಲ್ಲೊಂದು ಪುಟ್ಟ ಹಾಲು ಗಲ್ಲದ ಸಸಿ ತಂದು ನೆಟ್ಟು ಅದರ ಬೆಳವಣಿಗೆಯಲ್ಲಿ ನಮ್ಮ ಪ್ರೇಮದ ಯಶೋಗಾಥೆ ಬರೆಯೋಣ. ಏನಂತಿ? ಅಲ್ಲ ಕಣೋ ಮಾರಾಯ್ನೇ… ಯಾವ ಬೇಲಿಯೂ ಶಾಶ್ವತವಲ್ಲ. ಬೇಲಿಯನ್ನು ದಾಟುವುದು ಸುಲಭವೂ ಅಲ್ಲ. ಆದರೆ ಪ್ರೇಮಕ್ಕೆ ಬೇಲಿ ಕಟ್ಟಲು ಹೊರಟವರು ಸೋಲಬೇಕಲ್ಲದೆ ಪ್ರೇಮವೆಂದಾದರೂ ಸೋಲುತ್ತದಾ? ಮತ್ತೆ ನಮ್ಮ ಪ್ರೇಮದ ಮುಂದೆ ಬೇಲಿಯೆನ್ನುವ ತೃಣಮಾತ್ರದ ಅಡೆತಡೆಗೆ ನಮ್ಮ ಓಟವನ್ನು ಕಟ್ಟಿಹಾಕುವ ಶಕ್ತಿ ಎಲ್ಲಿಂದಾದರೂ ಬರಬೇಕು?! ದೈಹಿಕ ನೋವಿಗೆ ನಮ್ಮನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯ ಇಲ್ಲ. ನಾವು ಸಾಯುವ ಕೊನೆ ದಿನದವರೆಗೂ ಪ್ರತಿದಿನ ನನ್ನ ಪ್ರೀತಿಯಲ್ಲಿ ನೀನು, ನಿನ್ನ ಪ್ರೀತಿಯಲ್ಲಿ ನಾನು ಬೀಳುವಂಥವರು ಎನ್ನುವುದನ್ನು ಯಾರಿಗಾದಗೂ ಋಜುವಾತು ಮಾಡಿ ತೋರಿಸಬೇಕಿಲ್ಲ. ಜಗತ್ತಿನ ಮುಂದೆ ಅದು ಬಂದು ನಿಂತಾಗ ಯಾರಿಗೇ ಆಗಲಿ ನಂಬದೆ ವಿಧಿ ಇರುವುದಿಲ್ಲ. ಇಂದು… ಈಗ… ಈಗಲೇ… ನಾ ನಿನ್ನ ಮುಂದೆ ಬಂದು ನಿಲ್ಲುತ್ತೇನೆ. ನಿನ್ನ ಬೊಗಸೆಯಲ್ಲಿ ನನ್ನನ್ನು ತೆಗೆದುಕೋ. ಒಂದು ಕ್ಷಣ ತುಂಬಿದ ಕಂಗಳಿಂದ ದಿಟ್ಟಿಸುತ್ತಾ ಮೆಲ್ಲಗೆ ಬೊಗಸೆಯನ್ನು ಮೇಲೆತ್ತಿ, ತುಟಿಗೆ ಸೋಕಿಸಿ, ಒಮ್ಮೆ ಮೆಲುವಾಗಿ ಚುಂಬಿಸಿ, ಬಿಗಿಯಾಗಿ ಕಣ್ಮುಚ್ಚಿ, ಕುಡಿದುಬಿಡು. ಕಪೋಲಗಳ ದಾಟಿ ಕತ್ತಿನ ಗುಂಟ ಹರಿದು ಹೃದಯದ ಮಡುವಿಗೆ ಜಾರಿದ ಕಣ್ಣೀರ ಹನಿಯೊಂದು ನಿನ್ನ ಎದೆಬಡಿತವಾಗಲಿ. ಮತ್ತದರ ಶಬ್ಧ ನನ್ನ ಹೆಸರಾಗಲಿ… ಇದೋ ಬಂದೆ… ನಿನ್ನವಳು ನಿನ್ನವಳು ಮಾತ್ರ… *********

ಲಹರಿ Read Post »

ಕಾವ್ಯಯಾನ

ಕಾವ್ಯಯಾನ

ಮಳೆ ಪದ್ಯಗಳು ಜಿ.ಲೋಕೇಶ ಮತ್ತೆ ಮತ್ತೆ ಮಳೆ ಹುಯ್ದುನೆನೆದ ನೆನಪು ತರಿಸಿದೆ ಹಾರಿಹೋದ ಕೊಡೆಯು ಕೂಡಕಣ್ಣು ಸನ್ನೆ ಮಾಡಿದೆ ಮೊದಲ ಭೇಟಿಗೆ ಮರದ ನೆಳಲುಮಳೆಯು ಗುಡುಗು ಜೊತೆಗೆ ಸಿಡಿಲು ಎದೆಯ ತಬ್ಬಿ ಭಯದಿ ಹಿಡಿತ ಬಿಗಿದುತಬ್ಬಲೇನು ಅಡ್ಡಿ ಯಾಕೋ ಬೆರಳು ತಡೆದು ತೋಯ್ದ ದೇಹ ತಣ್ಣನೆ ಬಿಸಿಯ ಫಲವುಇರದು ಜೀವ ಮೆಲ್ಲ ಮುರಿದುನಿಯಮವು ಕಾಲ ಹೊತ್ತ ತಬ್ಬಿದೆದೆಗೆ ಅನ್ಯ ನಾದಹುಯ್ದು ಮರೆತ ಮಳೆಗೆ ಒಂದು ಧನ್ಯವಾದ ಮತ್ತೆ ಬರಲಿ ಕ್ಷಣವು ಅವಕಾಶದಂತೆಮತ್ತೆ ತೊಯ್ದು ತೆಪ್ಪೆಯಾಗುವಂತೆ ****

ಕಾವ್ಯಯಾನ Read Post »

ಕಾವ್ಯಯಾನ

ಮತ್ತೆ ಮಳೆ ಬಂದಿದೆ.. ಹರಿವ ನೀರಲ್ಲಿ ತನ್ನ ಪುಟ್ಟ ಕೈಗಳಿಂದದೋಣಿಗಳ ಬಿಟ್ಟುಅವು ಚಲಿಸುವ ಚಂದಕ್ಕೆಬೆರಗಾಗಿ ನಕ್ಕು ಹಗುರಾಗಿದೆ ಅರಳಿದ ನೆಲಸಂಪಿಗೆಯ ಕೇಸರಗಳಮುಟ್ಟಿ ನೋಡುತ್ತಹನಿ ಮುತ್ತಿಕೊಂಡ ದಳಗಳಸವರಿ ಇನ್ನಷ್ಟು ನಯವಾಗಿಸುತ್ತದೆ ಬೀಸುವ ತಂಗಾಳಿ ಅಲೆಯುವಎಲೆಗಳ ಜೊತೆ ಗುಟ್ಟುಗಳನಿಟ್ಟುಹೂವಿಂದ ಹೂವಿಗೆ ಅಲೆದುಪರಿಮಳವ ಹೊತ್ತೊಯ್ಯುತ್ತದೆ ಸಂಜೆ ಬಂದ ಮಳೆಗೆ ಖಾಸಾನೆಂಟರ ಕರೆದುತಾಜಾ ಮೀನುಗಳ ಹಿಡಿದುಊಟ ಬಡಿಸುವ ಭೂಮಿರಾತ್ರಿ ಪಟ್ಟಾಂಗ ಹೊಡೆದುಬದುಕಿನ ಖುಷಿಯ ದ್ವಿಗುಣಗೊಳಿಸುತ್ತದೆ ರಾಶಿ ರಾಶಿ ರಾಶಿ ಮೋಡಗಳು ಜಗದ ತುಂಬೆಲ್ಲಾ ಕವಿಯುವಾಗನವಿಲಿನ ಹಜ್ಜೆಗೆ ಗೆಜ್ಜೆದನಿಮೂಡಿ ಮುಸ್ಸಂಜೆಯ ಆಲಾಪಕ್ಕೆಶೃತಿ ಕೊಡುತ್ತದೆ ಕತ್ತಲಾಗಲಿ,ಜೀರುಂಡೆಗಳ ಸಂಗೀತ ಕಚೇರಿಕಪ್ಪೆಗಳ ಕರತಾಡನಹೊಯ್ಯುವ ಮಳೆ ಸದ್ದಿಗೆಭೂರಮೆಗೆ ಖುಷಿಯೋ ಖುಷಿ! ಹದಗೊಂಡ ಹಸೆಗೆಬೆದೆಗೊಂಡ ಭೂಮಿಹಸಿರುಕ್ಕಿಸಿ ಹಸನಾಗಿದೆಯಾಕೆಂದರೆ,ಕಾದು ಕಾದು ಕಾದು ಹೋಗಿದ್ದಈ ಧರೆಗೆ ಮತ್ತೆ ಮಳೆ ಬಂದಿದೆ.! ****** ಫಾಲ್ಗುಣ ಗೌಡ ಅಚವೆ

Read Post »

ಕಾವ್ಯಯಾನ

ಕಾವ್ಯಯಾನ

ಮೂಲ ಬಿಂದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅದ್ಯಾವ ರೂಪದಲ್ಲಿ ಬಂದು ಸೇರಿತ್ತೋ?ಸಣ್ಣ ಸುಳಿವೂ ಇರಲಿಲ್ಲ ನೋಡುಹೆಡೆಯೆತ್ತಿ ಬುಸುಗುಟ್ಟದ ಹೊರತುಇರುವು ತಿಳಿಯುವುದಾದರೂ ಹೇಗೆ?ಮತ್ತೆ ಹಾಗೆ ಗೊತ್ತಾಗುವುದಕ್ಕೂಅದ್ಯಾವತ್ತೂ ಪ್ರಕಟವಾಗಲೂ ಇಲ್ಲ ಬಿಡು. ಅದೂ ಅಲ್ಲದೇ,ಇನ್ಯಾವತ್ತೋ ಹಠತ್ತನೇ ಎದುರಿಗೆ ಬಂದುಹಲ್ಲುಕಿಸಿದು, ನೋಡು ನಾನಿದ್ದೇನೆ; ಅದೂ ನಿನ್ನಲ್ಲೇ!ಅಂತ ಹೆದರಿಸುತ್ತದೆ ಅನ್ನುವ ಕಲ್ಪನೆಯಾದರೂಆವತ್ತು ಯಾರಿಗಿತ್ತು ಹೇಳು? ಯಾವುದೂ ಸುದ್ದಿಯಾಗಲಿಲ್ಲ,ಹಗಲು ರಾತ್ರಿ ಕತ್ತಲು ಬೆಳಕುಮೊಗ್ಗರಳಿದ್ದು ಹೂವಾದದ್ದುಉತ್ತು ಬಿತ್ತ ಮಣ್ಣಲ್ಲಿ ತೆನೆ ತೂಗಿದ್ದುಹಕ್ಕಿ ಹಾರಿದ್ದು ಕಪ್ಪೆ ಕೂಗಿದ್ದುಯಾವುದು ಕೂಡಾ,“ಅವನ ಆಣತಿ ಇಲ್ಲದೇ ಹುಲ್ಲುಕಡ್ಡಿಯೂಅಲ್ಲಾಡುವುದಿಲ್ಲ ಇಲ್ಲಿ…”ಎಲ್ಲದಕ್ಕೂ ಲೆಕ್ಕಾಚಾರವಿದೆ! ಆದರೆ,ಹಗುರವಾಗಿ ತೇಲುತ್ತಾ ಸಾಗುತ್ತಾ ಇದ್ದ ಬೆಳ್ಳಿ ಮೋಡಯಾವತ್ತೋ ಒಮ್ಮೆ ಕಪ್ಪಡರಿ ಘನೀಭೂತವಾಗಿ,ಸುರಿಸುರಿದು ಖಾಲಿಯಾಗುತ್ತದೆ;ಅಂತ ಯಾರಿಗೆ ತಾನೇ ಗೊತ್ತಿತ್ತು?ಎಲ್ಲ ತಡೆಗಳನ್ನು ದಾಟಿ ನಿಂತ ಅದರಆ ಮೂಲ ಬಿಂದುಅಸಲಿಗೆ ಇದ್ದುದಾದರೂ ಎಲ್ಲಿ? ಕಾಳಜಿಯ ಪರದೆಗಳಿಗೆ ಇದ್ದತೂತುಗಳು ಯಾರಿಗೂ ಕಾಣುವುದಿಲ್ಲ;ಅಷ್ಟೂ ಮೈಮರೆಯುತ್ತದೆ ಈ ಲೋಕಎಲ್ಲವೂ ತನ್ನದೇ ಅಧೀನ;ಅನ್ನುವ ಸಂಭ್ರಮದ ಭ್ರಮೆಯಲ್ಲಿಕುಳಿತುಬಿಡುತ್ತದೆ ಮೂಕ! ಎಲ್ಲೂ ನಿಲ್ಲದೇ ಸದಾಹರಿಯುತ್ತಿರುವುದೇ ನಾಕ;ಎಲ್ಲಾ ಗೊತ್ತಿದ್ದೂ,ಸುಮ್ಮನೆ ತಡೆದು ನಿಲ್ಲಿಸುತ್ತದೆಈ ಲೋಕ! ಯಾವುದನ್ನು ಕಟ್ಟಿಹಾಕಬಹುದಿಲ್ಲಿ?ಅದುಮಿಟ್ಟಷ್ಟೂ ಪುಟಿಯುವುದುಕತ್ತರಿಸಿದಷ್ಟೂ ಚಿಗುರುವುದುಬಂಧಿಸಿದಷ್ಟೂ ನೆಗೆಯುವುದು. ದಾಟುವುದೇ ಮನಸ್ಸಿನ ಹುಟ್ಟುಗುಣ;ಬೇಕಾಗಿರುವುದು ಒಂದು ನೆಪ ಮಾತ್ರ. *********

ಕಾವ್ಯಯಾನ Read Post »

ಕಾವ್ಯಯಾನ

ನನ್ನೊಳಗೂ ಮಳೆ ವರುಣ ನೀಡಿದ ಸಿಹಿ ಚುಂಬನದ ಮಳೆ,ನನ್ನೆದೆಯ ಅಂಗಳದಲಿ ನಾಚಿವೆತನುಮನದ ಹೂಗಳುನನ್ನೊಳಗೂ ಮುಂಗಾರು, ಮೌನದ ಪರದೆಯೊಳಗೆಅವಿತ ಮಾತುಗಳುಎದೆಯ ನೆಲದಲಿ ಒಣಗಿದ ನೆನಪುಗಳಿಗೆ,ಕತ್ತಲೆಯ ಬೇಲಿ ದಾಟಿ ಹರಿದು ಬಂದಳುನನ್ನೊಳಗೂ ಮುಂಗಾರು ಮೊಗೆ ಮೊಗೆದು ಸುರಿದಳು ವಿರಹದ ಕಣ್ಣೀರು,ಬಚ್ಚಿಟ್ಟುಕೊಂಡ ಮಾತು ಬಿಚ್ಚಿಡುವ ಸಂತಸನನ್ನೊಳಗೂ ಮುಂಗಾರು ಋತುಗಳ ಕನವರಿಕೆಯಲಿಮಿಲನದ ಲವಲವಿಕೆಮತ್ತೆ ಮೌನವೇ ನಾಚಿತುಬಾಚಿ ತಬ್ಬಿತು,ವಸಂತನಕುಂಚದಲಿ ಮತ್ತೆ ಬಣ್ಣ ಬಣ್ಣದ ಚಿತ್ತಾರಗಳುನನ್ನೊಳಗೂ ಮುಂಗಾರು ಕನಸುಗಳು ಗೂಡು ಕಟ್ಟಿವೆಮನದ ಕೂಜನದಲಿ ಇನಿದನಿ ಕೇಳಿಸುತಿದೆಎಳೆಬಿಸಿಲ ರಂಗು ಕಾಡಿದೆಕಾಮನಬಿಲ್ಲಿನ ವರ್ಣಗಳಲಿ ನನ್ನೊಳಗೂಮುಂಗಾರು ಸುರಿದಿದೆ ನನ್ನೊಳಗೂ ಕವಿತೆ ಓಡಾಡಿದೆ,ಪ್ರೇಮ ಗೀತೆಗಳೆಲ್ಲ ಹರಯ ಕಂಡಿದೆನನ್ನೊಳಗೂ ಹೊರಗೂ ಮಳೆಯಾಗಿದೆ *********** ವೀಣಾ ರಮೇಶ್

Read Post »

ಕಾವ್ಯಯಾನ

ಮಳೆ ಹುಯ್ಯಲಿ ಜಾರಿದವು ಮುತ್ತಿನ ಹನಿಗಳು ಅಂಜಿಕೆಯಿಲ್ಲದೆನಭದ ಗೇರೆಗಳ ದಾಟಿ ಅನಂತದೆಡೆಗೆಅವಕೊಂದೆ ಚಿಂತೆ ಹನಿದ ಹನಿಗಳೆಲ್ಲಹಸಿರಾಗಲು ಕಾತರಿಸಿದ ಭವದ ಒಡಲ ಸೇರಿಹಿಗ್ಗಿ ನುಲಿಯಲು,ಬೆಸೆಯಲು ಆತುರಯಾವ ಹನಿ ಮುತ್ತಾಗುವುದೋಯಾವ ಹನಿ ನತ್ತಾಗುವುದೋಇಳೆಯ ಮೈಸಿರಿಗೆ ಒನಪಾಗುವುದೋಸಿಡಿಲು ಗುಡುಗಿನ ಆರ್ಭಟಕೆಬೆಚ್ಚಿ ಬಿದ್ದು ಸದ್ದಿಲ್ಲದೆ ಸರಿದೂಗಿಸಲುಉಬ್ಬು ತಗ್ಗುಗಳೆಲ್ಲ ಕೊಂಚ ಸಾವರಿಸಿದಂತೆಮಳೆಯ ತುಂತುರು ಹನಿಗಳಿಗಾಗಿಮೆಲ್ಲುಸಿರಿನ ಪ್ರೇಮಕ್ಕೆ ಹಂಬಲಿಸಿದಂತೆಬೆಂದು ಬಸವಳಿದ ಮನಕಿಂದು ಆನಂದಮೈಮನಕೆಲ್ಲ ಸುಗ್ಗಿಯ ಹಬ್ಬದೂಟದಂತೆಕಾರ್ ಮೋಡಗಳು ಬಿಗಿದಪ್ಪಿ ಬೆವರ ಹರಿಸಿಉನ್ಮದಾದ ಬಿಸಿಗಾಳಿ ಧರೆಯ ನಡುಗಿಸಿದಾಗೆಲ್ಲಎಂಥ..! ಸುಮಧುರ ಮಳೆಗಾಳಿ ಹೊಳಪುಕಾಗದದ ದೋಣಿ ತೇಲಿ ಬಿಟ್ಟ ನೆನಪುಆಣಿ ಕಲ್ಲು ಗಂಟಲಲಿ ಬಿಕ್ಕಿದಂತೆ ಹನಿಗಳುಮಣ್ಣಿನೊಳು ಮೇಳೈಸಿ ಗಂಧ ಪಸರಿಸಿದಂತೆಮಣ್ಣಿನ ಮಗನ ಮೊಗದಲ್ಲಿಂದು ಹೊಂಗನಸುಉತ್ತಿದಾ ಸತ್ವ ಬೀಜಕ್ಕೊಂದು ಚಿಗುರುತುತ್ತು ಕೂಳಿಗಾಗಿ ಹೋರಾಡುವ ಬದುಕಿಗೆಮಳೆಯೊಂದು ಅಮೃತ ಸುರಿಸಿದಂತೆ…ಹೊತ್ತೊಯ್ಯುವ ಮೋಡಗಳ ಚಿತ್ತದಲಿಬಿತ್ತುವ ಮನಕಿಂದು ಅಗಣಿತ ತಾರೆಗಳುಹೊಯ್ಯೋ ಹೊಯ್ಯೋ ಮಳೆರಾಯಇಳೆಯ ತಾಪದಲಿ ಚಿಗುರಲಿ ಹೊಸ ಕಾಯ… *********** ಶಿವಲೀಲಾ ಹುಣಸಗಿ

Read Post »

ಕಾವ್ಯಯಾನ

ಆಮಂತ್ರಣ ಒಣಗಿದೆದೆಯ ಬೆಂಗಾಡಿನಲಿ,ಭ್ರಮೆಯ ದೂಳಡಗಿಸುವಂತೆ,ಬಾ ಮಳೆಯೇ, ದಣಿವಾರದ ಮೂಲೆಯಲಿ,ಜೇಡಭಾವ ಜಾಡಿಸುವಂತೆ,ಬಾ ಮಳೆಯೇ, ಮನದ ಬಯಕೆ ಕತ್ತಲಲಿ,ಕರುಡು ಕಳೆವ ಬೆಳಕಂತೆ,ಬಾ ಮಳೆಯೇ, ಗದ್ದಲಗಳ ಗದ್ದೆಯಲಿ,ಹಸಿರೂಡಲು ನೇಗಿಲಂತೆ,ಬಾ ಮಳೆಯೇ, ನನ್ನ ಮನದ ಮೌನದಲಿ,ಹನಿಯ ಶಬ್ದ ಉಳಿವಂತೆ,ಬಾ ಮಳೆಯೇ, ಬದುಕ ಬಟ್ಟಲ ಬವಣೆಗಳಲಿ,ಉಕ್ಕಿ ಹರಿವ ಕರುಣೆಯಂತೆ,ಬಾ ಮಳೆಯೇ, ಒಂಟಿಯಾದ ಮನದಲಿ,ತಂಪನೀವ ಎಲರಂತೆ,ಬಾ ಮಳೆಯೇ, ಹನಿ ಹನಿಗಳು ಕಾಡುವಂತೆ,ಬಂದಗಳಿಗೆಗಳಿಗೆಲ್ಲ ಬೇಡಿಯಂತೆ,ಬಾ ಮಳೆಯೇ, ಬಾಯಾರಿದ ಪಯಣದಲಿ,ಇನಿಯನ ಜೇನದನಿ ಹನಿಯಂತೆ,ಬಾ ಮಳೆಯೇ, ಬರಿದೆ ಬೊಗಸೆಯಲಿ,ಎದೆ ತುಂಬಿದಾ ಕನಸು ಸುರಿವಂತೆ,ಬಾ ಮಳೆಯೇ, ಸತ್ತ ಕನಸುಗಳ ಮಧ್ಯದಲಿ,ಸೂಚಿ ಮಲ್ಲೆ ಅರಳುವಂತೆ,ಬಾ ಮಳೆಯೇ, ಮನದ ಮರುಭೂಮಿಯಲಿ,ಘನಿಕರಿಸಿದೆಲ್ಲ ಭಾವ ಕರಗುವಂತೆ,ಬಾ ಮಳೆಯೇ, *********** ಶಾಲಿನಿ.ಆರ್

Read Post »

You cannot copy content of this page

Scroll to Top