ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ಅಲೀಕತ್ತು

ಅಲೀಕತ್ತು ಕಥೆ ಕೆ. ಎ. ಎಂ. ಅನ್ಸಾರಿ “ನಮ್ಮ ಮಗಳು ಆಮಿನಾ ಳಿಗೆ ವಯಸ್ಸು ಹನ್ನೆರಡು ಆಯಿತಲ್ಲವೇ…? ಇನ್ನು ಒಂದೆರಡು ವರ್ಷ ಆದ್ರೆ ಮದುವೆ ಗಂಡು ಹುಡುಕಬೇಕು… ಅದಕ್ಕಿಂತ ಮೊದಲು ಅವಳಿಗೆ ಅಲೀಕತ್ತು ತೊಡಿಸಬೇಕಲ್ಲಾ…” ಪೋಕರ್ ಹಾಜಿ ಮಡದಿ ಪಾತುವಿನಲ್ಲಿ ಹೇಳುವುದು  ಆಮಿನಾಳಿಗೆ ಕೇಳಿಸುತ್ತಿತ್ತು ಅಲೀಕತ್ತು ಎಂಬ ಪದ ಕೇಳುತ್ತಿದ್ದಂತೆಯೇ ಅಪ್ಪನ ಮಂಚದ ಕೆಳಗೆ ಮಲಗಿದ್ದ ಅಮಿನಾ ನಾಚಿ ನೀರಾದಳು… ಅವಳಿಗೆ ಬಂಗಾರವೆಂದರೆ ಪ್ರಾಣ. ಆಮಿನಾ ಕೇಳಿಸಿಕೊಂಡವಳಂತೆ ನಟಿಸಲಿಲ್ಲ.. ಅವಳಷ್ಟಕ್ಕೆ ಚಾಪೆಯಲ್ಲಿ ಹೊರಳಾಡುತ್ತಿದ್ದಳು… … ರಾತ್ರಿ ಸುಮಾರು ಗಂಟೆ 12 ಕಳೆದಿರಬಹುದು.. ಆಮಿನಾಳಿಗೆ ನಿದ್ದೆಯಿಲ್ಲ. ಅಪ್ಪನ ಗೊರಕೆ ಸದ್ದು ಕೇಳಿಸುತ್ತಿತ್ತು.. ಅಮ್ಮ  ತನ್ನ ಪಕ್ಕದಲ್ಲಿ ಗಾಢ ನಿದ್ದೆಯಲ್ಲಿದ್ದಳು.. ಆಮಿನಾ ಎದ್ದು ಮೆಲ್ಲಗೆ ಸದ್ದು ಮಾಡದೆ ಬಚ್ಚಲು ಮನೆಯತ್ತ ನಡೆದಳು… ಬಚ್ಚಲು ಮನೆಗೆ ಹೊರಡುವಾಗ ಅಪ್ಪ ಮೀಸೆ ಕತ್ತರಿಸುವಾಗ ಬಳಸುತ್ತಿದ್ದ ಕನ್ನಡಿ ಒಯ್ಯಲು ಮರೆಯಲಿಲ್ಲ. ಬಚ್ಚಲು ಮನೆಯಲ್ಲಿ ಚಿಮಿಣಿ ದೀಪದ ಬೆಳಕು ಏರಿಸುತ್ತಾ ತನ್ನ ಮೊಗವನ್ನೊಮ್ಮೆ ನೋಡಿದಳು. ಕನ್ನಡಿ ನೋಡಿ ನಕ್ಕಳು… ಕನ್ನಡಿಯಲ್ಲಿ ಕಿವಿಯನ್ನು ನೋಡುತ್ತಾ ಸಂಭ್ರಮಿಸಿದಳು.. ಕತ್ತಲ್ಲಿ ಇದ್ದ ಬೆಳ್ಳಿಯ ಸರವನ್ನು ಸರಿಪಡಿಸಿ ತನ್ನ ಎದೆಯನ್ನೊಮ್ಮೆ ನೋಡಿ ನಾಚಿದಳು. … ಅಪ್ಪನ ಕೆಮ್ಮುವ ಸದ್ದು ಕೇಳಿಸುತ್ತಿದ್ದಂತೆ ಭಯದಿಂದ ಚಿಮಿಣಿ ದೀಪ ಮತ್ತು ಕನ್ನಡಿಯೊಂದಿಗೆ ಜಾಗ ಖಾಲಿ ಮಾಡಿ ಏನೂ ಅರಿಯದವಳಂತೆ ಸ್ವಸ್ಥಾನದಲ್ಲಿ ಬಂದು ಮಲಗಿದಳು.. ನಾಳೆ ಬಟ್ಟೆ ಒಗೆಯಲು ಹೋಗುವಾಗ ಈ ವಿಷಯ ಗೆಳತಿ ಗುಬ್ಬಿಯಲ್ಲಿ ಮತ್ತು ಅತೀಕಾ ಳಲ್ಲಿ ಹೇಳಬೇಕು ಎಂದು ತೀರ್ಮಾನಿಸಿದಳು… .. ರಾತ್ರಿಯ ನಿದ್ದೆ ಕೈಕೊಟ್ಟ ಕಾರಣ ಎಂದಿನ ಸಮಯಕ್ಕೆ ಆಮಿನಾ ಎಚ್ಚರಗೊಳ್ಳಲಿಲ್ಲ. ಅಮ್ಮ ನಮಾಜು ಮಾಡಿ ಬಂದ ನಂತರ ಕರೆದಳು.. ಗಂಟೆ 6 ಕಳೆಯಿತು. ನಮಾಜು ಮಾಡಿ ನಂತರ ಬೇಕಿದ್ದರೆ ಮಲಗು… ಆಮಿನಾ ಥಟ್ಟನೆ ಎದ್ದು ಬಚ್ಚಲು ಕೋಣೆಗೆ ಓಡಿದಳು.. ವುಜೂ ಮಾಡಿ ನಮಾಜಿಗೆ ನಿಂತಳು… ನಮಾಜಿಗೆಂದು ನಿಂತಿದ್ದರೂ ಮನಸ್ಸು ಮಾತ್ರ ನಿನ್ನೆ ರಾತ್ರಿಯ ಸಂಭಾಷಣೆಯ ಪ್ರತಿಫಲನ.. .. “ಅಮ್ಮಾ ಅಪ್ಪ ಎಲ್ಲಿ… ?” “ಅಪ್ಪ ಬೆಳಗ್ಗೆ ಮಸೀದಿ ಹೋದವರು ಬಂದಿಲ್ಲ. ನಿನಗೆ ಅಲೀಕತ್ತು ತೋಡಿಸಬೇಕು. ಉಸ್ತಾದರಲ್ಲಿ ಸಮಯ ನಿಶ್ಚಯಿಸಿ ಅಕ್ಕ ಸಾಲಿಗನ ಹತ್ತಿರ ಹೋಗಿ ಬರುತ್ತಾರೆ…” ಅಮ್ಮ ಪಾತು ದೋಸೆ ಹುಯ್ಯುತ್ತಾ ಉತ್ತರಿಸುತ್ತಿದ್ದಳು. ತನಗೆ ಏನೂ ಅರಿವಿಲ್ಲದಂತೆ ಆಮಿನಾ ದೋಸೆಯ ತುಂಡೊಂದನ್ನು ತೆಗೆದು ತಿನ್ನ ತೊಡಗಿದಳು. .. ಇನ್ನೇನು ಚಹಾ ಕುಡಿದು ಮುಗಿಯಲಿಲ್ಲ.. ಅಷ್ಟ್ಹೊತ್ತಿಗೇ ಆಮಿನಾ ಎಂಬ ಕೂಗು ಕೇಳಿಸಿತು.. ಕೂಗು ಕೇಳಿಸುತ್ತಿದ್ದಂತೆ ಬಕೆಟ್ ತುಂಬಾ ಬಟ್ಟೆ ತುಂಬಿಸುತ್ತಾ.. “ಹಾಂ ಬಂದೆ ಗುಬ್ಬಿ”  ಎನ್ನುತ್ತಾ ಗೇಟು ತೆಗೆದು ಹೊರ ನಡೆದಳು. ಇಬ್ಬರೂ ಕೂತು ಬಕೆಟಿನಿಂದ ಬಟ್ಟೆ ತೆಗೆಯುತ್ತಾ ಹೊಳೆದಡದಲ್ಲಿ ಮಾತಿಗಾರಂಭಿಸಿದರು.  ರಾತ್ರಿ ನಡೆದ ಸಂಭಾಷಣೆಯನ್ನು ಎಳೆ ಎಳೆಯಾಗಿ ವಿವರಿಸತೊಡಗಿದಳು. ಅಂದ ಹಾಗೆ ಗುಬ್ಬಿ ಈಕೆಯಿಂದ ಎರಡು ವರ್ಷ ದೊಡ್ಡವಳು… ಅಷ್ಟ್ಹೊತ್ತಿಗೆ  ಅತೀಕಾ ಕೂಡಾ ಹೊಳೆ ಪಕ್ಕದಲ್ಲಿ ಬಂದು ಸೇರಿದಳು. ಅತೀಕಾ ಮೆತ್ತಗೆ ಆಮಿನಾಳ ಕೆನ್ನೆಗೆ ಚಿವುಟುತ್ತಾ .. “ಹಾಂ ಮದುವೆಗೆ ಮುನ್ನುಡಿ ಆಯ್ತು ಅಂತ ಹೇಳು.. ಅಲೀಕತ್ತು ಬಂದ್ರೆ ಬರುವ ಒಂದೆರಡು ವರ್ಷಗಳಲ್ಲಿ ಮದುವೆ ಗ್ಯಾರಂಟಿ .. ಅನ್ನು.” ಆಮಿನಾ ನಾಚಿ ನೀರಾದಳು.. …. ಮಧ್ಯಾಹ್ನ ಒಗೆದು ತಂದಿದ್ದ ಬಟ್ಟೆಯನ್ನೆಲ್ಲಾ ಒಣಗಲು ಹಾಕುತ್ತಿದ್ದ ಆಮಿನಾಳಿಗೆ ಅಪ್ಪನ ಕೂಗು ಕೇಳಿಸಿತು… ಆಮಿನಾ … ಅಪ್ಪ ಹತ್ತಿರ ಕರೆದು ಬುದ್ದಿ ಮಾತು ಹೇಳತೊಡಗಿದ.  ‘ನೀನು ಈಗ ದೊಡ್ಡವಳಾಗಿದ್ದಿಯಾ .. ಮುಂಚಿನ ಹಾಗೆಲ್ಲಾ ಹೊಳೆ ಬದಿಯಲ್ಲಿನ ಬಟ್ಟೆ ಒಗೆತ ಕಡಿಮೆ ಮಾಡಬೇಕು. ನಾಡಿದ್ದು ಗುರುವಾರ ನಿನಗೆ ಅಲೀಕತ್ತು ತೊಡಿಸಲು ದಿನ ನಿರ್ಧರಿಸಲಾಗಿದೆ. ಹಾಂ ಬಾಪಾ … ಮರು ಮಾತನಾಡದೆ ಆಮಿನಾ ತನ್ನ ಕಾಯಕ ಮುಂದುವರಿಸಿದಳು.. … ಆಮಿನಾಳ ಖುಷಿ ಏನೋ ಮಾಯವಾದಂತೆ ಕಂಡಿತು ತಾಯಿ ಪಾತುವಿಗೆ. ಸದ್ಯ ಏನೂ ಕೇಳುವುದು ಬೇಡವೆಂದು ಸುಮ್ಮನಿದ್ದಳು. ಮಧ್ಯಾಹ್ನ ಊಟ ಮಾಡಿ ಮಲಗಿದ ಆಮಿನಾಳಿಗೆ ವಿಪರೀತ ಹೊಟ್ಟೆನೋವು…. ಅಮ್ಮ ಬಂದು ಹೊಟ್ಟೆ ಒತ್ತಿ ನೋಡಿಯಾಯಿತು… ಕಿಬ್ಬೊಟ್ಟೆಯ ಹತ್ತಿರ ಒತ್ತಿ ನೋಡುತ್ತಾ.. ಈಗ ನೋವಿದೆಯಾ ಅಮ್ಮ ಕೇಳಿದಾಗ ಹಾಂ.. ಎಂದು ಉತ್ತರಿಸಿದಳು. ಸರಿ ನೀ ಮಲಗಿರು. ಸ್ವಲ್ಪ ಹೊತ್ತಾದ ಮೇಲೆ ಎಲ್ಲಾ ಸರಿಯಾಗಬಹುದು ಎನ್ನುತ್ತಾ ಮುಗುಳ್ನಕ್ಕು ಪಾತು ಹೊರನಡೆದಳು. ಆಮಿನಾಳಿಗೆ ಒಂದೂ ಅರ್ಥವಾಗಲಿಲ್ಲ. ನಾನಿಲ್ಲಿ ಹೊಟ್ಟೆನೋವಿನಿಂದ ಸಾಯುತ್ತಿದ್ದರೂ ಅಮ್ಮನಿಗೆ ನಗು ಎಂದು ಮನಸ್ಸಲ್ಲೇ ಕೋಪಿಸಿದಳು. ನಂತರ ಕಿಟುಕಿಯಿಂದ ನೋಡಲು ಅಮ್ಮ,  ಅಪ್ಪನನ್ನು ಕರೆದು ಕಿವಿಯಲ್ಲಿ ಏನೋ ಪಿಸುಗುಟ್ಟುವುದು ಕಾಣಿಸಿತು. ಆಮಿನಾ ಮಲಗಿಯೇ ಇದ್ದಳು. ಅಮ್ಮ ಬಂದು ಕಿವಿಯಲ್ಲಿ..,”ನೀನು ದೊಡ್ಡವಳಾಗಿದ್ದಿ ಅಷ್ಟೇ.. ಭಯವೇನೂ ಬೇಡ. ಒಂದೆರಡು ದಿನ ಹೀಗೆ ಇರುತ್ತೆ’ ಎಂದು ಸಮಾಧಾನಪಡಿಸಿದಳು. ಥಟ್ಟನೆ ಅವಳಿಗೆ ಗುಬ್ಬಿ ಮತ್ತು ಅತೀಕಾ ಇದರ ಬಗ್ಗೆ ಹೇಳಿದ್ದು ನೆನಪಿಗೆ ಬಂತು. ಆಮಿನಾ ನಾಚಿ ನೀರಾದಳು. ಜೊತೆಗೆ ಮನಸ್ಸಿಗೆ ಏನೋ ಒಂದು ರೀತಿಯ ಖುಷಿ. ದಿನಗಳು ಓಡತೊಡಗಿತು.. ಅಕ್ಕಸಾಲಿಗ ಬಂದು ಕಿವಿ ಚುಚ್ಚಿ ಅಲೀಕತ್ತು ತೊಡಿಸಿ ಚೀಲದಲ್ಲಿ  ವೀಳ್ಯದೆಲೆ, ಅಕ್ಕಿ, ಅಡಿಕೆ ತುಂಬಿಸಿ ದಕ್ಷಿಣೆ ತಗೊಂಡು ಎಲೆ ಅಡಿಕೆ ಜಗಿಯುತ್ತಾ ಹೊರಹೋದ.. ಆಮಿನಾಳಿಗೆ ದಿನಕ್ಕೆ ಹತ್ತು ಹದಿನೈದು ಸಲ ಕನ್ನಡಿ ನೋಡುತ್ತಾ ತನ್ನ ಸೌಂದರ್ಯ ನೋಡುವುದೇ ಅಭ್ಯಾಸವಾಗಿ ಹೋಗಿತ್ತು. ಅಡಿಯಿಂದ ಮುಡಿವರೆಗೆ ತನ್ನನ್ನೇ ಕನ್ನಡಿಯಲ್ಲಿ ನೋಡುತ್ತಾ ಖುಷಿ ಪಡುತ್ತಿದ್ದಳು. ವರುಷ ಒಂದು ಕಳೆಯಿತು. ಒಂದು ದಿನ ರಾತ್ರಿ ಅಪ್ಪ ಪಾತುವಿನಲ್ಲಿ ಹೇಳುತ್ತಿದ್ದ. ಮಗಳಿಗೆ ವರ್ಷ 14 ಆಯಿತು. ಸಯ್ಯದ್ ಬ್ಯಾರಿ ಒಬ್ಬ ಒಳ್ಳೆಯ ಸಂಬಂಧ ಇದೆ ಅಂತ ಹೇಳಿದ್ದಾನೆ. ನಮಗಾದರೆ ಗಂಡಾಗಿ ಹೆಣ್ಣಾಗಿ ಇರುವುದು ಒಂದೇ ಕುಡಿ. ಇನ್ನು ತಡ ಮಾಡುವುದು ಬೇಡ ಎಂದು ತೀರ್ಮಾನಿಸಿ ನಾಡಿದ್ದು ಆದಿತ್ಯವಾರ ಹುಡುಗನ ಕಡೆಯವರನ್ನು ಬರಲು ಹೇಳಿದ್ದೇನೆ. ಅವನೂ ಒಬ್ಬನೇ ಒಬ್ಬ ಮಗನಂತೆ. ಒಳ್ಳೆಯ ತರವಾಡು.. ನಾವು ಹತ್ತಿರದ ಒಂದಿಬ್ಬರು ಸಂಬಂಧಿಕರನ್ನು ಮಾತ್ರ ಕರೆಯೋಣ… ಶನಿವಾರ ಸಂಜೆ ಹೊತ್ತಿಗೆ ಅತೀಕಾ ಮತ್ತು ಗುಬ್ಬಿ ಆಮಿನಾಳ ಮನೆಗೆ ಬಂದರು. ಕೈಗಳಿಗೆ ಮೆಹಂದಿ ಹಚ್ಚುತ್ತಾ ಕೀಟಲೆ ಮಾಡತೊಡಗಿದರು.. “ಹೋಗೇ” ಎಂದು ಬೈದರೂ ಮನಸ್ಸಿನಲ್ಲಿ ಪ್ರಕಟಿಸಲಾಗದ ಖುಷಿಯನ್ನು ಅವಳ ಮುಖಭಾವ ಹೇಳುತ್ತಿತ್ತು. ಆದಿತ್ಯವಾರ ಬೆಳಿಗ್ಗೆಯೇ ಪೋಕರ್ ಹಾಜಿಯ ಇಬ್ಬರು ಅಣ್ಣಂದಿರು ಮತ್ತು ಅವರ ಮಡದಿಯರು ಹಾಜರಾದರು. ತುಪ್ಪದ ಊಟ, ಕೋಳಿ ಸಾರು ಎಲ್ಲಾ ತಯಾರಾಯಿತು. ಮಧ್ಯಾಹ್ನದ ಹೊತ್ತು ಅಂಬಾಸಿಡರ್ ಕಾರಿನಲ್ಲಿ ಮದುಮಗನೊಂದಿಗೆ ಆತನ ಅಪ್ಪ ಅಮ್ಮ ಮತ್ತು ಒಂದಿಬ್ಬರು ಹೆಂಗಸರು ಇಳಿದು ಬಂದರು. ಆಮಿನಾ ಕಿಟುಕಿಯಿಂದ ಇಣುಕಿ ನೋಡುತ್ತಿದ್ದಳು… ಬಿಳಿ ಮೈಬಣ್ಣ, ತಲೆಗೊಂದು ಟೋಪಿ .. ಅಚ್ಚುಕಟ್ಟಾಗಿ ಟ್ರಿಮ್ ಮಾಡಿದ ಗಡ್ಡ…. ಮೊದಲ ನೋಟದಲ್ಲೇ ಇಷ್ಟವಾಯಿತು. ಚಾ ತಿಂಡಿ ಕಳೆದು ಪೋಕರ್ ಹಾಜಿ…. ,, ‘ಪಾತೂ.. ಹುಡುಗನಿಗೂ ನಮ್ಮ ಮಗಳನ್ನೊಮ್ಮೆ ತೋರಿಸು.. ಅವನಿಗೆ ಇಷ್ಟ ಆದ್ರೆ ಅಲ್ಲವೇ ಮುಂದಿನ ಮಾತು…” ನಗುತ್ತಾ ಹೇಳಿದ. ಹುಡುಗನೊಂದಿಗೆ ಬಂದ ಹೆಂಗಸರು ಒಳಗೆ ಕರೆದಾಗ ಹುಡುಗ ಅದನ್ನೇ ಕಾಯುತ್ತಿದ್ದವನಂತೆ ಬೇಗನೆ ಒಳ ನಡೆದ. ತಲೆಗೆ ಮಿನುಗುವ ಶಾಲು. ಆ ಶಾಲನ್ನು ಬೇಕೆಂತಲೇ ಕಿವಿ ಕಾಣುವಂತೆ ತಲೆಗೆ ಹಾಕಿದ್ದಳು. ಕಿವಿ ಮುಚ್ಚಿದರೆ ಅಲೀಕತ್ತು ದರ್ಶನವಾಗದು ಅಲ್ವೇ…? ಹುಡುಗ ಕೊಠಡಿಗೆ ಕಾಲಿಡುತ್ತಿದ್ದಂತೆಯೇ ತನ್ನೆರಡೂ ಕೈಗಳಿಂದ ಮುಖ ಮುಚ್ಚಿದಳು. ಮುಚ್ಚಿದ ಕೈಗಳ ಎಡೆಯಿಂದ ಹೊಳೆವ ಎರಡು ಕಣ್ಣುಗಳು ಕಾಣಿಸುತ್ತಿತ್ತು.. ಹುಡುಗನೊಂದಿಗೆ ಬಂದಿದ್ದ ಹೆಂಗಸರು ಆಕೆಯ ಕೈ ಯನ್ನು ಹಿಂದಕ್ಕೆ ಸರಿಸಿ ಹುಡುಗನಿಗೆ ಮುಖ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು. ಆಮಿನಾಳ ಕಣ್ಣು ಹೊಳೆಯುತ್ತಿತ್ತು.. ಜತೆಗೆ ಮೈಯೆಲ್ಲಾ ಬೆವರಿತ್ತು…. ಮುಖ ದರ್ಶನದ ನಂತರ .. “ನನಗೆ ಇಷ್ಟವಾಯಿತು” ಎಂಬ ಒಂದೇ ಒಂದು ಮಾತು ಹೊರಬಂತು. ಆಮಿನಾಳಿಗೆ ದೇಹವೆಲ್ಲಾ ವಿದ್ಯುತ್ ಸಂಚಾರವಾದ ಅನುಭವ. ಸಂತಸವ ವಿವರಿಸಲು ಪದಗಳಿಲ್ಲ.  ಊಟದ  ನಂತರ ಮಾತುಕತೆ.. ಎಲ್ಲವೂ ಮುಗಿದು ಎರಡು ವಾರದೊಳಗೆ ಮದುವೆ ಎಂದು ದಿನವೂ ನಿಶ್ಚಯಿಸಲಾಯಿತು. ಆಮಿನಾಳಿಗೆ ನಿದ್ದೆಯಿಲ್ಲದ ರಾತ್ರಿಗಳು. ಕೈ ಬೆರಳಿನಿಂದ ದಿನಗಳನ್ನು ಎಣಿಸುತ್ತಿದ್ದಳು. ಅಪ್ಪನಿಗೂ ಚಿಂತೆ ಇಲ್ಲ ಎಂದಲ್ಲ. ಮದುವೆ ಅಂದಮೇಲೆ ಒಡವೆ ವಸ್ತ್ರಗಳು ಬೇಕು.. ಅಪ್ಪ ಹಣದ ಬಗ್ಗೆ ಲೆಕ್ಕ ಹಾಕುತ್ತಿದ್ದ.. ಅಮ್ಮನಿಗೂ ಬಿಡದ ಚಿಂತೆ.. 14 ವರ್ಷ ಸಾಕಿ ಸಲುಹಿದ ಒಬ್ಬಳೇ ಒಬ್ಬಳು ಮಗಳನ್ನು ಕಳುಹಿಸಿಕೊಡಬೇಕು. ಜೊತೆಗೆ ನಾಲ್ಕು ಹಸುಗಳು.. ಅವುಗಳಿಗೆ ಸರಿಯಾದ ಸಮಯಕ್ಕೆ ಹುಲ್ಲು ಹಾಕಬೇಕು.. ಸಂಜೆ ಹೊತ್ತಿಗೆ ಹಟ್ಟಿಯಲ್ಲೂ ಕಟ್ಟಬೇಕು… ಆಮಿನಾಳು ಗಂಡನ ಮನೆ ಸೇರಿದರೆ ಹಸುವಿನ ಆರೈಕೆಯೂ ಬೇರೆ ಪಾತುವಿನ ಹೆಗಲಿಗೆ ಬರುತ್ತದೆ. ಪಾಲನೆ ಕಷ್ಟ ಆಗುವುದು ಎಂದು ಹಸುವನ್ನು ಮಾರಲೂ ಆಗದು. 20 ಲೀಟರ್ ಹಾಲು.. ಇದೊಂದು ಪ್ರಮುಖ ಆದಾಯ ಮಾರ್ಗ. ಚುಟುಕಾಗಿ ಹೇಳುವುದಿದ್ದರೆ ಮೂವರಿಗೂ ಬೇರೆ ಬೇರೆ ರೀತಿಯ ಚಿಂತೆಗಳು. ಬೆಳಿಗ್ಗೆ ಅಮ್ಮ ಮಗಳ ಮಾತಿನ ನಡುವೆ ಅಮ್ಮಳ ಒಂದು ಚಿಕ್ಕ ಪ್ರಶ್ನೆ… “ಆಮಿನಾ ನಿನಗೆ ಯಾವ ರೀತಿಯ ಒಡವೆ ಇಷ್ಟ ?”  ಒಲ್ಲದ ಮನಸ್ಸಿನಿಂದಲೇ ಅಮ್ಮನಲ್ಲಿ ಒಂದು ವಿಷಯ ಹೇಳಿದಳು. “ಅಮ್ಮಾ .. ಒಡವೆ ರೂಪದಲ್ಲಿ ನನಗೆ ಇಷ್ಟವಾಗಿರೋದು ಅಲೀಕತ್ತು ಮಾತ್ರ.  ಇರುವ ಅಲೀಕತ್ತು ಚಿಕ್ಕದು. ಮಾಲೆ ಸರ ಏನೂ ಬೇಡ.. ಸ್ವಲ್ಪ ಗಟ್ಟಿಯುಳ್ಳ ಅಲೀಕತ್ತು ಮಾತ್ರ ಸಾಕು.” ಅವಳ ಅಲೀಕತ್ತು ಪ್ರೀತಿಯನ್ನು ಕಂಡು ಆಶ್ಚರ್ಯ ಪಟ್ಟರೂ ತೋರ್ಪಡಿಸದೆ.. ಹಾಗೇ “ಆಗಲಿ. ಅಪ್ಪನಲ್ಲಿ ಹೇಳಿ ಹೊಸದು ಮಾಡಿಸೋಣ” ಎಂದು ಸಮ್ಮತಿ ಸೂಚಿಸಿದಳು. ಮದುವೆ ಅದ್ದೂರಿಯಾಗಿ ನಡೆಯಿತು. ಗಂಡು-ಹೆಣ್ಣಿನ ಕಡೆಯವರಿಂದ ಒಂದೇ ಮಾತು. ಮದುಮಗಳ ಅಲೀಕತ್ತು ಸೂಪರ್… ಈ ಮಾತು ಕೇಳಿಸುತ್ತಿದ್ದಂತೆ ಆಮಿನಾಳಿಗೆ ಮಾತ್ರವಲ್ಲ ಅಮ್ಮನಿಗೂ ಖುಷಿಯಾಗುತ್ತಿತ್ತು. ಅಮೀನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಳು. ಸುಮಾರು ಒಂದುವಾರ ಮದುಮಗ ಮನೆಯಲ್ಲಿಯೇ ಇದ್ದ. ಆಮಿನಾಳಿಗೆ ಸ್ವರ್ಗ ಸುಖದ ಅನುಭವ. ದಿನಗಳುರುಳುತ್ತಿತ್ತು. ಪೇಟೆಯಲ್ಲಿ ಅಂಗಡಿ ಇಟ್ಟಿದ್ದ ಗಂಡ ಇಬ್ರಾಹಿಂ ವಾಪಸ್ ಬರುವಾಗ ರಾತ್ರಿ ಗಂಟೆ ಹತ್ತು ಕಳೆಯುತ್ತಿತ್ತು. ಮೊದ ಮೊದಲು ಕಷ್ಟವಾದರೂ ಕ್ರಮೇಣ ಅಭ್ಯಾಸವಾಗಿ ಹೋಗಿತ್ತು. ಈ ನಡುವೆ ಆಮಿನಾ ಕುಟುಂಬಕ್ಕೆ ಮೊದಲ ಶಾಕ್ ಉಂಟಾಯಿತು. ಅಪ್ಪ ಪೋಕರ್ ಹಾಜಿಯ ಅಕಾಲಿಕ ಮರಣ. ಇಡೀ ಕುಟುಂಬವೇ ಕಣ್ಣೀರಲ್ಲಿ ಮುಳುಗಿತು. ಹೇಗೋ ಸುಧಾರಿಸಿ ಜೀವನ ಚಕ್ರ ನಡೆಯುತ್ತಿತ್ತು. ವಾರಕ್ಕೊಂದು ಸಲ ಆಮಿನಾ ಳು ಕೂಡಾ ಅಮ್ಮನ ಮನೆಗೆ ಬಂದು ಹೋಗುತ್ತಿದ್ದಳು. ಪ್ರತಿ ತಿಂಗಳೂ ಅಮ್ಮ ಹಾಗೂ ಅತ್ತೆ ಮನೆಯಿಂದ ಒಂದೇ ಪ್ರಶ್ನೆ… “ಹೀಗೆ ಇಬ್ಬರು ಮಾತ್ರ ಇದ್ದರೆ ಸಾಕಾ…? ಒಂದು ಮಗುವಿನ ಬಗ್ಗೆ ಇನ್ನೂ ಚಿಂತಿಸಿಲ್ಲವೇ ?”. “ದೇವರು ಯಾವಾಗ ಕೊಡುತ್ತಾನೋ ಆವಾಗ ಸಂತೋಷದಲ್ಲಿ ಸ್ವೀಕರಿಸೋಣ” ಎಂದು ಹೇಳಿ ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ಇಬ್ರಾಹಿಂ. ಜೀವನ ರಥ ಸಾಗುತ್ತಿತ್ತು. ಒಂದು ದಿನ ರಾತ್ರಿ ಗಂಟೆ ಹತ್ತು ಕಳೆದರೂ ಇಬ್ರಾಹಿಂ ಬರಲಿಲ್ಲ. ಚಾವಡಿಯಲ್ಲಿ ಕೂತು ಸುಸ್ತಾದ ಆಮಿನಾಳ ಮೈಯೆಲ್ಲಾ ಬೆವರ ತೊಡಗಿತು. ಗಂಟೆ ಹನ್ನೊಂದು ದಾಟಿತು.. ಇಲ್ಲ… ಇನ್ನೂ ಬರದೇ ಇದ್ದಾಗ  ಆಮಿನಾ ಆಗಲೇ ನಿದ್ದೆಗೆ ಜಾರಿದ್ದ ತನ್ನ ಅತ್ತೆ ಮಾವನವರನ್ನು ಕೂಗಿ ಎಬ್ಬಿಸಿದಳು… “ಏನು ಮಾಡುವುದು…?” “ಎಲ್ಲಿ ಹೋಗಿರಬಹುದು..?” “ಇದುವರೆಗೂ ಹೇಳದೆ ಎಲ್ಲೂ ಹೋದವನಲ್ಲ.  ಇನ್ನೂ ಸ್ವಲ್ಪ ಕಾಯೋಣ…” ಮೂವರೂ

ಅಲೀಕತ್ತು Read Post »

ಕಥಾಗುಚ್ಛ

ನಾಯಿ ಮತ್ತು ಬಿಸ್ಕತ್ತು

ಕಿರು ಕಥೆ ನಾಗರಾಜ ಹರಪನಹಳ್ಳಿ ಆತ ದಂಡೆಗೆ ಬಂದು ಕುಳಿತ. ಎಲ್ಲಾ ಕಡೆ ಬಂಧನಗಳಿಂದ ಬಿಗಿದ‌ ಜಗತ್ತು ಸಾಕೆನಿಸಿತ್ತು.‌ ರಸ್ತೆಗಳೆಲ್ಲೆ ಮಕಾಡೆ ಮಲಗಿದ್ದವು. ಜನರ ಸುಳಿವಿಲ್ಲ.‌ಮುಚ್ಚಿದ  ಹೋಟೆಲ್ಲು, ಲಾಡ್ಜು, ಅಂಗಡಿ ಬಾಗಿಲು. ಗೂಡಂಗಡಿಗಳು ಬಲವಾದ ಹಗ್ಗಗಳಿಂದ ಬಂಧಿಸಲ್ಪಟ್ಟಿದ್ದವು.‌‌ ಇಡೀ ನಗರ ಸತ್ತು ಹೋಗಿತ್ತು. ಬಿಕೊ ಅನ್ನುತ್ತಿದ್ದ ಬಸ್ ಸ್ಟ್ಯಾಂಡ್. ‌ಬಿಕ್ಷುಕುರ ಸುಳಿವು ಸಹ ಇಲ್ಲ.ಮನುಷ್ಯರ ಸುಳಿವಿಲ್ಲ. ಪ್ರತಿ ಸರ್ಕಲ್ ‌ನಲ್ಲಿ ಸುರಿವ ಉರಿ ಬಿಸಿಲಲ್ಲಿ ಖಾಲಿ ರಸ್ತೆಗಳನ್ನು ಪೊಲೀಸರು ಕಾಯುತ್ತಿದ್ದರು. ಭೀತಿ ಮತ್ತು ಭಯ ಸ್ಪರ್ಧೆಗೆ ಬಿದ್ದಂತೆ ರಸ್ತೆಯ ಇಕ್ಕೆಲಗಳಲ್ಲಿ ಕುಣಿದಾಡುತ್ತಿದ್ದವು .ಜನರಿಲ್ಲದೇ ಆಸ್ಪತ್ರೆಗಳು ಸಹ ದುಃಖಿಸುತ್ತಿದ್ದವು. ಔಷಧಿ ಅಂಗಡಿ ಮಾತ್ರ ತೆರೆದು ಕೊಂಡಿದ್ದು ಕೌಂಟರ್ ನಲ್ಲಿ ಒಬ್ಬ ಪೇಪರ್ ಹಿಡಿದು ಆದ್ಹೇನೋ‌ ಜಗತ್ತು ತಲೆ ಮೇಲೆ ಬಿದ್ದಂತೆ ತದೇಕ ಧ್ಯಾನಸ್ಥನಾಗಿ ಅಕ್ಷರದತ್ತ ದೃಷ್ಟಿ ನೆಟ್ಟಿದ್ದ .‌ಇದನ್ನೆಲ್ಲಾ ಕಣ್ತುಂಬಿ‌ ಕೊಂಡ ರಾಮನಾಥ ದಂಡೆಯಲ್ಲಿ ಧ್ಯಾನಿಸುತ್ತಿದ್ದ. ಆಗ ತಾನೇ ಕೋವಿಡ್ ಲ್ಯಾಬ್ ನಲ್ಲಿ ಅ ದಿನ ಬಂದ ಐವತ್ತು ಜನರ ಗಂಟ ದ್ರವ ಪರೀಕ್ಷೆ ಮಾಡಿ, ಜೀವವನ್ನು ಕೈಯಲ್ಲಿ ಹಿಡಿದು ಬಂದಿದ್ದ.‌ ಅಂದು ಬಂದ ಐವತ್ತು ಸಂಶಯಿತ ಕರೋನಾ ಗಂಟಲು ದ್ರವದಲ್ಲಿ ಹದಿನೆಂಟು ಜನರ ಗಂಟಲು ದ್ರವದಲ್ಲಿ ಕೋವಿಡ್ ೧೯ ವೈರಸ್ ಇರುವುದು ದೃಢಪಟ್ಟಿತ್ತು.‌ ತನ್ನ ಜೀವಮಾನದಲ್ಲಿ ಮನುಷ್ಯರು, ವೈದ್ಯರು, ಅಧಿಕಾರಿಗಳು…. ಎಲ್ಲರೂ ಗಡಿಬಿಡಿ , ಒಂಥರಾ ಅವ್ಯಕ್ತಭಯದಲ್ಲಿ ಇದ್ದುದ ರಾಮನಾಥ ಮೊಟ್ಟ ಮೊದಲ ಬಾರಿಗೆ ನೋಡಿದ್ದ.‌ತನ್ನ ಕೆಲಸವನ್ನು ನಿರ್ಲಿಪ್ತತೆಯಿಂದ‌ ಮುಗಿಸಿ ಬಂದಿದ್ದ ಆತ ಜೀವನದ ನಿರರ್ಥಕ ‌ಕ್ಷಣಗಳಿಗೆ ಸಾಕ್ಷಿಯಾಗಿದ್ದೇನೋ ಅಥವಾ ವರ್ತಮಾನ ಕುಸಿಯುವುದನ್ನು ಕಣ್ಣಲ್ಲಿ ತುಂಬಿಕೊಳ್ಳುತ್ತಿದ್ದೇನೋ ಎಂದು ತರ್ಕಿಸುತ್ತಾ ಕುಳಿತಿದ್ದ. ಇದ್ದಕ್ಕಿದ್ದಂತೆ ಓರ್ವ ವ್ಯಕ್ತಿ ದುತ್ತನೇ ಎದುರಾಗಿ ಮಾತಿಗಿಳಿದ.‌ “ಏನ್ ಸರ್ ಸರ್ಕಾರ ಮಾಡಿದ್ದು ಸರಿಯಾ? ನಾ ಕುಡಿಯದೇ ಬದುಕಲಾರೆ.‌ ಲಿಕ್ಕರ್ ಶಾಪ್ ಮುಚ್ವಿದ್ದು ಸರಿಯೇ” ಎಂದು ಪ್ರಶ್ನಿಸಿದ.‌ ರಾಮನಾಥಗೆ  ಕಸಿವಿಸಿಯಾಯ್ತು.‌ಬಗೆಹರಿಸಲಾಗದ ಇವನ ಪ್ರಶ್ನೆಗೆ ಉತ್ತರ ಎಲ್ಲಿಂದ ತರುವುದು ಎಂದು? ಸರಿಯಲ್ಲ ಎಂದು ತಲೆ ಅಲ್ಲಾಡಿಸಿ ಮತ್ತೆ ನಿರ್ಲಿಪ್ತನಾದ.‌ ಹಠಾತ್ ಎದುರಾದ ವ್ಯಕ್ತಿ ಅಲ್ಲಿಂದ ನಡೆದು‌‌ಹೋದ.‌ಅವನನ್ನು‌ ನಾಯಿಯೊಂದು ಹಿಂಬಾಲಿಸಿತು.‌ ಮನ ತಣಿಯುವಷ್ಟು ದಂಡೆಯಲ್ಲಿ ಕುಳಿತ ರಾಮನಾಥ ಎದ್ದು ಮನೆ ಕಡೆ ನಡೆದ . ಅವನು ಒಬ್ಬಂಟಿ ಬೇರೆ. ಸಾಂಬರು ಕಟ್ಟಿಸಿಕೊಳ್ಳಲು‌ ಹೋಟೆಲ್ ‌ಗಳು  ಬೇರೆ ಬಂದ್ ಆಗಿವೆ.‌ ಅನ್ನ ಸಾರು ಅವನೇ ಬೇಯಿಸಿ ತಿನ್ನುವುದು ರೂಢಿಯಾಗಿತ್ತು ಲಾಕ್ ಡೌನ್ ಸಮಯದಲ್ಲಿ.‌ಮೊದಲಾದರೆ ಅನ್ನ ಮಾತ್ರ ಬೇಯಿಸಿಕೊಳ್ಳುತ್ತಿದ್ದ. ಇದೇ ಧಾವಂತದಲ್ಲಿ ಹೆಜ್ಜೆ ಹಾಕಿದವನಿಗೆ ದಾರಿಯಲ್ಲಿ ಹಠಾತ್ತನೇ ದಂಡೆಯಲ್ಲಿ ಪ್ರಶ್ನೆ ಎಸೆದ ವ್ಯಕ್ತಿ ಸಿಕ್ಕ. ಆತ ರಸ್ತೆ ಪಕ್ಕ ನಾಯಿಯೊಂದಿಗೆ ಮಾತಾಡುತ್ತಿದ್ದ. ಅದನ್ನೆ  ತನ್ನ ಜೀವದ ಭಾಗವೆಂಬಂತೆ ಅದಕ್ಕೆ ಬಿಸ್ಕತ್ತು ಹಾಕುತ್ತಾ …ತನ್ನ ದುಃಖವನ್ನೆಲ್ಲಾ  ನಾಯಿಯ ಕಣ್ಣಿಗೆ ವರ್ಗಾಯಿಸುತ್ತಾ ಅದ್ಹೇನೋ ಅದಕ್ಕೆ ಅರ್ಥವಾಗುವ ಭಾಷೆಯಲ್ಲಿ ಹೇಳುತ್ತಿದ್ದ. ಪ್ರತಿ ಮಾತಿಗೂ ಒಂದೊಂದೇ ಬಿಸ್ಕತ್ತಿನ‌ ತುಂಡುಗಳನ್ನು ಅದಕ್ಕೆ ಹಾಕುತ್ತಿದ್ದ.‌ ಮರದ ಕೆಳಗೆ ಈ‌ ಸಂಭಾಷಣೆ ನಡೆದಿತ್ತು. ಕುತೂಹಲದಿಂದ ರಾಮನಾಥ ಇದನ್ನು ಆಲಿಸತೊಡಗಿದ. ಲಿಕ್ಕರ್ ಹುಡುಕಿ ಹೊರಟ ಆ ಸಾಮಾನ್ಯ ಮೊದಲ ನೋಟಕ್ಕೆ ಕುಡುಕ ಅನ್ನಿಸಿದ್ದ. ಈಚೀಚೆಗೆ ಕೆಲಸವೂ ಇಲ್ಲದೇ, ಉಳಿಯಲು ಸೂರು ಇಲ್ಲದೇ ಅಂದಂದೆ ದುಡಿಯುವವರ  ಆಹಾರಕ್ಕೆ ಅಲೆದ‌ ಈ ಸತ್ತ ನಗರದಲ್ಲಿ‌ ;   ನಾಯಿ‌ ಹಸಿವಿಗೂ ಮಿಡಿವ, ಮನುಷ್ಯನ ಕಂಡು ಮನಸಲ್ಲೇ ಸಮಾಧಾನಿಯಾದ. ಅಷ್ಟರಲ್ಲಿ ಹಸಿದವರಿಗೆ ಊಟದ ಜೀಪ್ ನಲ್ಲಿ ಅನ್ನ ಸಾರು ತುಂಬಿದ ಪಾತ್ರೆ ಇಟ್ಟುಕೊಂಡು  ಹಸಿದವರಿಗೆ‌ ಹುಡುಕುವ  ಮದರ್  ಥೆರೇಸಾ ಟ್ರಸ್ಟನ ಸ್ಯಾಮಸನ್  ಎದುರಾದರು. ರಾಮನಾಥನನ್ನ ಕಂಡವರೇ   ಕೈ ಬೀಸಿದರು. ಅತ್ತ ನಾಯಿ‌ ಮತ್ತು ಕುಡುಕ ಮನುಷ್ಯ  , ಸ್ಯಾಮಸನರ  ಅನ್ನ ನೀಡುವ  ಜೀಪ್ ಬಂದ ದಿಕ್ಕಿ ನತ್ತ ಹೆಜ್ಜೆ ಹಾಕಿದರು. ಅದೇ‌ ಬೀದಿಯ ಪಿಡಬ್ಲುಡಿ ಕ್ವಾಟರ್ಸನಲ್ಲಿ ಕೊನೆಯ ಮೂಲೆಯ ಮನೆಯಲ್ಲಿದ್ದ ‌ಮೇರಿ  ಥಾಮಸ್  ಎಂಬ ಚೆಲುವೆ  ಬಾಗಿಲ  ಮರೆಯಲ್ಲಿ ನಿಂತು, ಎಂದಿನಂತೆ ರಾಮನಾಥನ ಕಂಡು ತಣ್ಣಗೆ ಮುಗುಳ್ನಕ್ಕಳು….. *****  

ನಾಯಿ ಮತ್ತು ಬಿಸ್ಕತ್ತು Read Post »

You cannot copy content of this page

Scroll to Top