ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ) ಜಗದ ಜೀವನಾಡಿಯಲ್ಲಿ ಅಮೃತದ ಕಳಶ ಜೊತೆಯಾದಂತೆ ನನ್ನ ದನಿಗೆ ನಿನ್ನ ದನಿಯುಜೀವ ಕರುಣೆಯ ಪೊರೆವ ಜಗನ್ಮಾತೆಯ ಸುದೀರ್ಘ ಉಸಿರಂತೆ ನನ್ನ ದನಿಗೆ ನಿನ್ನ ದನಿಯು ಸೆರಗಿನ ಮರೆಯಿಂದ ಇಣುಕಿದ ಕೂಸಿನ ಹವಳದ ತುಟಿಯ ಕಟವಾಯಿಯಲ್ಲಿದೆ ನೊರೆವಾಲುಹಾಲುಗಲ್ಲದ ಮುಗ್ಧ ಮುಖದ ಮಗುವಿನ ಕಿಲಕಿಲ ನಗುವಂತೆ ನನ್ನ ದನಿಗೆ ನಿನ್ನ ದನಿಯು ಕನಸುಗಳೇ ಇರದ ಬರಡು ಎದೆಯೊಳಗೆ ಮೊಳೆತಿದೆ ನಿನ್ನ ನೆನಪಿನ ಗರಿಕೆ ಹುಲ್ಲಿನ ಚಿಗುರುಶರದೃತುವಿಗೆ ಆವರಿಸಿ ಮೈ ನಡುಗಿಸುವ ತಂಗಾಳಿಯಂತೆ ನನ್ನ ದನಿಗೆ ನನ್ನ ದನಿಯು ಸುತ್ತೆಲ್ಲ ಹರಡಿದೆ ಎದೆಕೋಟೆಯ ಬತ್ತಲಾರದ ಬಯಕೆಯಂತೆ ಸುರುಗಿಯ ಸಮ್ಮೋಹನಬದುಕಿನ ಪ್ರತಿಕ್ಷಣದಲ್ಲೂ ಜೀವದೃವ್ಯ ಚಿಮ್ಮಿದಂತೆ ನನ್ನ ದನಿಗೆ ನಿನ್ನ ದನಿಯು ಮಥುರೆಯೊಂದಿಗೆ ತೊರೆದು ಹೋದ ಕೃಷ್ಣನಿಗಾಗಿ ಜೀವಮಾನವಿಡಿ ಕಾತರಿಸಿದಳು ರಾಧೆನವಿಲುಗರಿಯ ಸಾವಿರ ಎಳೆಗಳ ನವಿರಾದ ಸ್ಪರ್ಶದಂತೆ ನನ್ನ ದನಿಗೆ ನಿನ್ನ ದನಿಯು ಸಪ್ತಸಾಗರಗಳಿದ್ದರೂ ಪಾಲ್ಗಡಲ ಬೆಳ್ನೊರೆಯೇ ಬೇಕಂತೆ ಲಕ್ಷ್ಮಿಕಾಂತ ಹರಿಗೆಶಿವನ ರುದ್ರ ಡಮರುಗದ ಅಬ್ಬರಿಸುವ ಅಲೆಯ ನಿನಾದಂತೆ ನನ್ನ ದನಿಗೆ ನಿನ್ನ ದನಿಯು ಸುರೆಯಲ್ಲೇ ಮುಳುಗಿರುವ ದೇವಲೋಕದ ಅಧಿಪತಿಗೆ ಅಮರಾವತಿಯೂ ಬೇಸರವಂತೆಗಸಗಸೆ ಪಾಯಸದ ಗೋಡಂಬಿಗೆ ನಶೆಯೇರಿದ ಅಮಲಂತೆ ನನ್ನ ದನಿಗೆ ನಿನ್ನ ದನಿಯು ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಕಾತರಿಸುತಿದೆ ನಿದ್ದೆಯಿರದ ಕಮಲ ಸೂರ್ಯನಿಗೆ, ನೈದಿಲೆಯ ನೆತ್ತಿಗೀಗ ವಿರಹದ ಉರಿನಸುಕಿನ ಸೂರ್ಯನ ಎಳಸು ಕಿರಣಕೆ ನಾಚುವ ಇಬ್ಬನಿಯಂತೆ ನನ್ನ ದನಿಗೆ ನಿನ್ನ ದನಿಯು ಸಿರಿ, ಆಗದಿರುವುದಕೆ ಮರುಗುವ ಬದಲು ಪಾಲಿಗೆ ಬಂದಿದ್ದನ್ನು ಸಂತಸದಲಿ ಒಪ್ಪಿಕೊಒಮ್ಮೆಯೂ ಸೇರದ ಎಂದಿಗೂ ಅಗಲದ ರೈಲು ಹಳಿಯಂತೆ ನನ್ನ ದನಿಗೆ ನಿನ್ನ ದನಿಯು ನನ್ನ ದನಿಗೆ ನಿನ್ನ ದನಿಯು (ಗಿರೀಶ ಜಕಾಪುರೆ) ಮಧುರ ಮದಿರಿಗೆ ಅಧರ ಮಧು ಬೆರೆಸಿದಂತೆ ನನ್ನ ದನಿಗೆ ನಿನ್ನ ದನಿಯುನೆಲದ ಕುಸುಮಕೆ ಮುಗಿಲ ಘಮ ಸುರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜಗದ ರೀತಿ ರಿವಾಜು ಮುರಿದು ಒಲವಿಗಾಗಿ ಎಲ್ಲೆ ಮೀರಿಗೆ, ಅಪ್ಪಿದೆಕಡಲು ತಾನೇ ಹರಿದು ನದಿ ಸೇರಿದಂತೆ ನನ್ನ ದನಿಗೆ ನಿನ್ನ ದನಿಯು ನಿನ್ನ ಹೆಸರು ಕೇಳಿದೊಡನೆ ಮನಸಿನಲಿ ಹೆಜ್ಜೆ ಗೆಜ್ಜೆಯ ಘಲಿರು ನಾದಒಲವ ಮಿಡಿತ ಎದೆಯಿಂದ ಎದೆಗೆ ಹರಿಸಿದಂತೆ ನನ್ನ ದನಿಗೆ ನಿನ್ನ ದನಿಯು ತಿಳಿಯದಾಗಿದೆ ಈಗ ಯಾವ ಬಿಂಬ ನನ್ನದು ಯಾವ ಬಿಂಬ ನಿನ್ನದುನನ್ನ ದೇಹ ನಿನ್ನ ರೂಪ ಧರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಮಗುವು ತಾಯಿಯ ಹಿಂದೆ ಬರುವಂತೆ ಬಂದೆ ಒಲವ ಸಮ್ಮೋಹಿತನಾಗಿಶಾರೀರ ಶರೀರವ ಅನುಕರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಜನ್ಮದ ಬಂಧವೂ ಚೆಂಬೆಳಕಾಗಿ ಬಂದು ಕೂಡಿದೆ ಬಾಳಿಗೆಕತ್ತಲಲಿ ನಂದಾದೀಪ ಉರಿಸಿದಂತೆ ನನ್ನ ದನಿಗೆ ನಿನ್ನ ದನಿಯು ನೀನು ಮುಟ್ಟಿದ ಶಿಲೆಗಳಿಂದ ಹೊಮ್ಮುತಿದೆ ಸುರಸಂಗೀತ ಝರಿಯಾಗಿಬರೀ ಸ್ಪರ್ಶದಿಂದ ಗಾಯ ಭರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಪ್ರಹರದಲೂ ಮರೆತಿಲ್ಲ ಮಾಯೆ ‘ಅಲ್ಲಮ’ ಒಬ್ಬರನೊಬ್ಬರುಬೇಟವು ಬೇಟೆಗಾರನ ಸ್ಮರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಇದು ಶ್ರೀದೇವಿ ಕೆರೆಮನೆ ಹಾಗೂ ಗಿರೀಶ್ ಜಕಾಪುರೆಯವರು ಬರೆದ ಗಜಲ್ ಜುಗಲ್ ನನ್ನ ದನಿಗೆ ನಿನ್ನ ದನಿಯು ಸಂಕಲನದ ಶೀರ್ಷಿಕಾ ಗಜಲ್‌ಗಳು. ಇಲ್ಲಿ ಶ್ರೀದೇವಿ ಕೆರೆಮನೆಯವರು ೩೮ ಮಾತ್ರೆ ಬಳಸಿದ್ದರೆ, ಗಿಋಈಶ್ ಜಕಾಪುರೆಯವರು ೩೦ ಮಾತ್ರೆ ಬಳಸಿ ಬರೆದಿದ್ದಾರೆ. ಈ ಗಜಲ್‌ಗಳ ವೈಶಿಷ್ಟ್ಯತೆ ಏನೆಂದರೆ ಇಬ್ಬರೂ ಪರಸ್ಪರರ ತಕಲ್ಲೂಸ್‌ನ್ನು ತಮ್ಮ ಗಜಲ್‌ಗಳಲ್ಲಿ ಬಳಸಿಕೊಂಡಿದ್ದಾರೆ. ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಶ್ರೀದೇವಿಯವರು ಬರೆದಿದ್ದರೆ ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಗಿರೀಶ ಜಕಾಪುರೆಯವರು ಹೇಳಿದ್ದಾರೆ. ಗಜಲ್ ಪರಂಪರೆಯಲ್ಲಿಯೇ ಇಂತಹುದ್ದೊಂದು ವಿಶಿಷ್ಟ ಪ್ರಯೋಗ ಪ್ರಪ್ರಥಮ ಬಾರಿಗೆ ಬಳಕೆಯಾಗಿದೆ. ಗಜಲ್ ಬರೆಯುವವರಿಗೆ ಇವು ಅಭ್ಯಾಸಕ್ಕೆ ಯೋಗ್ಯವಾದ ಗಜಲ್‌ಗಳಾಗಿವೆ

ಗಝಲ್ ಜುಗಲ್ Read Post »

ಕಾವ್ಯಯಾನ

ನಿವೇದನೆ…

ಕವಿತೆ ಹರೀಶ ಕೋಳಗುಂದ ಹೌದು…ನನಗೆ ಗೊತ್ತುನೀ ನನ್ನ ಪಕ್ಕದಲ್ಲೇ ಕುಳಿತಿರುವೆಸುಳ್ಳು ಹೇಳುವುದಿಲ್ಲ ನಾನುಈ ಕಡುಗತ್ತಲಲ್ಲೂ ನಿನ್ನ ಮುಖತಿಳಿನೀರ ಬಾವಿಯಲ್ಲಿ ಬಿದ್ದಚಂದಿರನ ಬಿಂಬವೆಂದು ಎಡತಾಕುತ್ತಿದೆ ನನ್ನೆದೆಗೆನಿನ್ನುಸಿರ ಬಿಸಿನಿನ್ನೆದೆಬಡಿತದ ಸದ್ದುನೀ ತೊಟ್ಟ ಕೈ ಬಳೆಯ ಘಲುಗುಮುಡಿದ ಮಲ್ಲಿಗೆಯ ಘಮಲು ಹೊತ್ತು ಉರುಳುತ್ತಿದೆಅರಿವೇ ಇಲ್ಲಏನೋ ಹೇಳುವ ಬಯಕೆತುಟಿ ಎರಡಾಗಿಸುವ ಧೈರ್ಯ ಸಾಲದುಕೈ ನಡುಗುತ್ತಿವೆಮೈ ಬೆವರುತ್ತಿದೆಎದೆಯೊಳಗೆ ಅಸ್ಪಷ್ಟ ಆತಂಕ ನೆನಪಿರಬಹುದು ನಿನಗೆನಾ ನಿನ್ನ ಮೊದಮೊದಲು ಕಂಡಾಗನೀ ನನ್ನ ಕಂಡೂ ಕಾಣದಂತೆನೋಡಿಯೂ ನೋಡದಂತೆಕಣ್ಣು ಹಾಯಸಿದಷ್ಟೂದೂರ ಕಾಣುವ ಮರೀಚಿಕೆಯಂತೆಕಣ್ಣಿಗೆ ಬಿದ್ದುಕೈಗೆ ಸಿಗದ ಮಾಯಾಜಿಂಕೆಯಂತೆಮರೆಯಾದದ್ದು ಮತ್ತೆಲ್ಲೋ ನಿನ್ನ ಹುಡುಕಿದಾಗಪಿಸುಗುಡುವ ರಾತ್ರಿಗಳಲಿತೆರೆದ ಕಿಟಕಿಯಾಚೆ ಮೊರೆವ ಕನಸುಗಳಂತೆಕರಿಮಲೆಯ ಬೆನ್ನಲ್ಲಿನ ನಿಚ್ಛಳ ನೀಲಾಕಾಶದಂತೆನಿನ್ನೊಲುಮೆಯ ಕುರುಹು ಸಿಕ್ಕಿದ್ದು ಈಗೀಗ ನನ್ನ ಪಾಲಿಗೆನಿನ್ನೊಲವಿನ ಜಲಪಾತದಲ್ಲಿಎಳೆ ಮೀನಾಗಿ ಈಜುವ ತವಕನಿನ್ನ ಸಾನಿಧ್ಯದಲಿನಾ ನನ್ನ ಸಂಪೂರ್ಣ ಕಳೆದುಕೊಂಡುಮತ್ತೊಮ್ಮೆ ಪಡೆದುಕೊಂಡುನಿನ್ನರ್ಧವೇ ಆಗಿ ಪರಿಪೂರ್ಣನಾಗುವ ತಹತಹಿಕೆಜ್ವರದುರಿಯಲ್ಲಿ ಕುದಿವ ಮಗುತಾಯ್ಮೊಲೆಗೆ ಕನವರಿಸುವಂತೆನಿನ್ನ ಹೆಸರ ಕರೆವಾಸೆಹೊಸಮಳೆಗೆ ಹದಗೊಂಡ ಮಣ್ಣಿನೆದೆಯ ಮೇಲೆಬಿದ್ದು ಬೇರೂರಿದ ಈ ಉಳಿಜಾಲಿಜಡಗೊಂಡು ಮುದಿ ಕೊರಡಾಗುವವರಗೆನಿನ್ನ ಸಾಂಗತ್ಯದಲಿನಿನ್ನ ನಿಷ್ಕಲ್ಮಶ ಪ್ರೇಮದುರಿಯಲಿದಹಿಸುವ ಬಯಕೆನಿನ್ನ ಮಡಿಲ ತೆಕ್ಕೆಯಲಿ ಬೆಚ್ಚಗೆ ಒರಗಿಕಣ್ಮುಚ್ಚುವ ಹಂಬಲ ******

ನಿವೇದನೆ… Read Post »

ಅನುವಾದ

ವಿಚಾರವೇನೆಂದರೆ…

ಅನುವಾದಿತ ಕವಿತೆ ಮೂಲ ಇಂಗ್ಲೀಷ್: ಹೆಲೆನ್ ಬ್ಯಾಸ್ ಕನ್ನಡಕ್ಕೆ: ಅಶ್ವಥ್ ಬದುಕ ಪ್ರೀತಿಸುವುದು,ಹಂಬಲವಿಲ್ಲವೆನಿಸಿದಾಗಲೂ,ಆಪ್ತವಿದ್ದೆಲ್ಲವೂ ಉರಿದು ಬೂದಿಯಾಗಿಕೈಗಂಟುವ ಧೂಳಿನಂತಾದರೂಆ ಬೂದಿಯ ಕೆಸರುಗಂಟಲಿಗಿಳಿದು ಬಿಗಿದಾಗಲೂಬದುಕ ಪ್ರೀತಿಸುವುದು. ಕೊರಗು ನಿನ್ನ ಬಳಿಯೇ ಕುಳಿತಿರುವಾಗಲೂಅದರ ಬೇಸಿಗೆಯುರಿ, ಗಾಳಿಯನು ನೀರಾಗಿಸಿ,ಒಲೆಮೇಲೆ ಕುದಿವಂತೆ ಬೊಬ್ಬುಳಿ ತರಿಸಿನಿನ್ನುಸಿರಿಗೆ ತಾಕಿಸಿದಾಗಲೂ,ಅದೇ ಕೊರಗು ನಿನ್ನದೇ ಮಾಂಸಖಂಡಗಳಂತೆಭಾರವೆನಿಸಿ, ಉಲ್ಪಣಗೊಂಡು,ಕೊರಗಿನದೇ ಸ್ಥೂಲಕಾಯವಾದಾಗಲೂದೇಹವಿದೆಲ್ಲವನು ಹೇಗಾದರೂ ಸಹಿಸೀತು? ಅದುಕೊಳ್ಳುತ್ತಲೇಮುದ್ದಾದ ನಗುವಿರದ, ನೀಲಗಣ್ಣುಗಳಿರದಆಡಂಬರವಿರದ ಸಾಮಾನ್ಯ ಮುಖದಂತೆಬದುಕನೊಮ್ಮೆ ಅಂಗೈಗಳ ನಡುವೆ ಹಿಡಿದುಹೇಳಿಬಿಡು ಖಚಿತ, ನಾನಿನ್ನ ಸ್ವಾಗತಿಸುತ್ತೇನೆನಾನಿನ್ನ ಪ್ರೀತಿಸುತ್ತೇನೆ, ಮತ್ತೊಮ್ಮೆ ಎಂದು. **************

ವಿಚಾರವೇನೆಂದರೆ… Read Post »

ಇತರೆ, ಲಹರಿ

ಹೆಣ್ಣುಮಕ್ಕಳ ಓದು

ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ…     ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ.    ಇಂಥ ಪ್ರಶ್ನೆಗಳು ಈಗ ಹೆಚ್ಚು ಇರಲಾರದು ಬಿಡಿ. ಆದರೂ ಲೇಖನಿ ಹಿಡಿದರೂ, ಕೀಲಿಮಣೆ ಕುಟ್ಟಿದರೂ ಮುಸುರೆ ತಿಕ್ಕೋದು, ತೊಟ್ಟಿಲು ತೂಗೋದು ನಿಮಗೆ ತಪ್ಪಿದ್ದಲ್ಲ ಎಂದು ಕೊಂಕು ರಾಗ ಹಾಡುವವರಿಗೇನೂ ಕಮ್ಮಿಯಿಲ್ಲ.    ಅಲ್ಲಾ ಇವರೇ.., ನಮ್ಮ ಮನೆ ಪಾತ್ರೆ ಪರಡೆಗಳನ್ನು ನಾವು ತೊಳೆದು ಸ್ವಚ್ಛ ಮಾಡಿಕೊಳ್ಳೋದ್ರಲ್ಲಿ ಏನು ತಪ್ಪಿದೆ ಹೇಳಿ? ಕೆಲಸಕ್ಕೆ ಹೊರಗೆ ಹೋಗಿ ಬಂದು ಮನೇಲಿ ಅಚ್ಚುಕಟ್ಟು ಮಾಡಬಾರದು ಅಂತ ಇದೆಯೇ? ಇಲ್ಲಾ ನಾಕಾರು ಅಕ್ಷರ ಕಲಿತರೆ ಮಕ್ಕಳನ್ನು ಹೆರಬಾರದು ಎಂದು ಎಲ್ಲಾದರೂ ಕಾನೂನಾಗಿದೆಯೇ?    ಒಟ್ಟಿನಲ್ಲಿ ಜನಕ್ಕೆ ಹೇಗಿದ್ದರೂ ತಪ್ಪೇ… ಅವರಿಗೆ ಕಂಡವರನ್ನು ಮೂದಲಿಸದೇ ಇರಲಾಗದು. ಇತರರನ್ನು ಎತ್ತಾಡದೇ ಹೋದರೆ ತಿಂದದ್ದೂ ಜೀರ್ಣವಾಗದು. ಕಲಹ ಪ್ರಿಯರು ಮೊಸರಲ್ಲಿ ಕಲ್ಲು ಹುಡುಕೀ ಹುಡುಕಿ, ಅದು ಸಿಗದೇ ಹೋದಾಗ ತಾವೇ ನಾಕಾರು ಬೆಣಚು ಚೂರು ಹಾಕಿಬರುವಷ್ಟು ಮಟ್ಟಿಗೆ ಕೆಟ್ಟಿರುತ್ತಾರೆ.   ಈಗಂತೂ ಮನೇಲಿ ಕೂರುವವರಿಗಿಂತಲೂ ಹೊರಗೆ ಒಂದಿಲ್ಲೊಂದು ಕೆಲಸಕ್ಕೆ ಹೋಗಿ ಬರುವವರೇ ಹೆಚ್ಚು. ಹಳ್ಳಿಯಿರಲಿ, ಪಟ್ಟಣವಿರಲಿ ವಿದ್ಯೆ ಕಲಿಯುವುದಕ್ಕೆ ಹಿಂದಿನಂತೆ ಅಡ್ಡಿ ಆತಂಕಗಳ ಹರ್ಡಲ್ಸ್ ಹೆಚ್ಚು ಇಲ್ಲ. ಹಾಗಾಗಿ ಹೆಣ್ಣುಮಕ್ಕಳು ವಿದ್ಯಾವತಿಯರಾಗುವ ನಾಗಾಲೋಟಕ್ಕೆ ತಡೆಯಂತೂ ಸಧ್ಯಕ್ಕಿಲ್ಲ.    ಆದರೂ ಒಂದು ಸಂದೇಹ ಯಾವಾಗಲೂ ಕಾಡುತ್ತಿರುತ್ತದೆ.     ಏಕೆ ಹಿಂದಿನವರು ಮಹಿಳೆಯರನ್ನು ಓದುವ, ಕಲಿಯುವ ಅಪೂರ್ವ ಅವಕಾಶಗಳಿಂದ ವಂಚಿತರನ್ನಾಗಿ ಮಾಡಿದ್ದರು ಎಂದು..?!      ಈಗಿನಂತೆ ಸೈನ್ಸು, ಕಾಮರ್ಸು, ಆರ್ಟ್ಸು ಎಂದೆಲ್ಲಾ ಹೆಚ್ಚೇನು ಪಠ್ಯಶಾಖೆಗಳು ಇರದಿದ್ದ ಕಾಲದಲ್ಲಿ ಏನೇನಿತ್ತು ಓದಲು? ಮಹಾಕಾವ್ಯಗಳೂ, ಕತೆ- ಪುರಾಣಗಳೂ, ವೇದೋಪನಿಷತ್ತುಗಳೂ ಇವೇ ಮೊದಲಾದವು ಅಲ್ಲವೇ?     ವೇದೋಪನಿಷತ್ತು ಕಲಿಯಲು ಅನ್ಯರಿಗೆ ನಿಷಿದ್ಧವಿದ್ದಾಗ ಪುರಾಣ ಕಾವ್ಯಗಳನ್ನಲ್ಲದೇ ವಿದ್ಯಾಕಾಂಕ್ಷಿಗಳಿಗೆ ಮತ್ತೇನು ಕಲಿಸಬೇಕಿತ್ತು? ಅಕ್ಷರಾಭ್ಯಾಸ, ಶ್ಲೋಕಾಭ್ಯಾಸ, ಸಾಮಾನ್ಯ ಲೆಕ್ಕ – ಪುಕ್ಕ ಕಲಿಯುವುದು ಬಿಟ್ಟರೆ ಉಳಿಯುವುದು ಮಹಾಕಾವ್ಯಗಳೇ…    ಅವಾದರೂ ಎಂತಹವು..!? ಲೋಕಪ್ರಸಿದ್ಧವಾದ ರಾಮಾಯಣ – ಮಹಾಭಾರತ; ಅದರ ಉಪಕತೆ – ಪುರಾಣ…   ಇನ್ನು ನಮ್ಮ ಹೆಣ್ಣುಮಕ್ಕಳು ಮಹಾಕಾವ್ಯಗಳನ್ನು ಓದಿ, ಅಭ್ಯಾಸ ಮಾಡಿ ತಿಳಿಯುವುದಾದರೂ ಏನಿತ್ತು ಹೇಳಿ? ಬರಿಯ ಶಂಕೆ, ಅಪಮಾನ, ಸೇಡಿನ ಕಿಡಿ, ಮತ್ಸರ, ಶಪಥ, ತಿರಸ್ಕಾರ, ಅಪಮಾನ, ಅಗಲುವಿಕೆ, ಯುದ್ಧ, ಸಾವು, ನೋವು ಇತ್ಯಾದಿ, ಇತ್ಯಾದಿ, ಇತ್ಯಾದಿ…     ಇಂತಹವನ್ನು ಓದುವ ಬದಲು ಮನೆವಾರ್ತೆಗಳೇ ಮುಖ್ಯ ಎಂದುಕೊಂಡು ಓದಿನತ್ತ ನಮ್ಮ ಹೆಣ್ಣುಮಕ್ಕಳು ಮುಖ ತಿರುಗಿಸಿರಲಿಕ್ಕೂ ಸಾಕು.       ಮನೆ ಕೆಲಸ ಎಂದರೆ ಬರೀ ಅಡುಗೆ, ತೊಳಿ- ಬಳಿ ಅಲ್ಲ. ಅಡುಗೆಗೆ ಪೂರಕ ಸಾಮಾಗ್ರಿಗಳು ಇವೆಯೇ ಎಂದು ನೋಡಿಕೊಂಡು ಅವನ್ನು ಸಿದ್ಧಮಾಡಿಕೊಳ್ಳಬೇಕು. ಏನೇನು ಮಾಡಬೇಕು, ಮಳೆಗಾಲಕ್ಕೆ, ಬೇಸಿಗೆಗೆ, ಚಳಿಗೆ ಹೀಗೆ ಹವಮಾನಕ್ಕೆ ಅನುಕೂಲಕರ ಸಿದ್ಧತೆಯಾಗಿರಬೇಕು. ಹಬ್ಬ ಹರಿದಿನ ಶುಭಕಾರ್ಯ ಇತರೆ ಸಮಾರಂಭಗಳಿಗೆ ತಯಾರಿ ಮಾಡಬೇಕು. ಮಕ್ಕಳು – ಹಿರಿಯರು ಹೊರಗೆ ದುಡಿಯಲು ಹೋಗುವವರ ದೇಖರೇಖಿ ನೋಡಬೇಕು. ಬಂಧು ಬಳಗ, ಅತಿಥಿ ಅಭ್ಯಾಗತರ ಯೋಗಕ್ಷೇಮ ವಿಚಾರಿಸಿಕೊಳ್ಳಬೇಕು. ಮನೆವಾರ್ತೆ ಒಂದೇ ಎರಡೇ…!    ಇವೇ ಇಷ್ಟೆಲ್ಲಾ ಇರುವಾಗ ಪುರಾಣ- ಕಾವ್ಯ ಓದಿಕೊಂಡು ಕೂರಲಿಕ್ಕಾಗುತ್ತಿತ್ತೇ? ಅದೇನು ಹೊಟ್ಟೆ ತುಂಬಿಸುತ್ತದೆಯೇ? ನೆತ್ತಿ ಕಾಯುತ್ತದೆಯೇ? ಹಾಗಾಗಿ ಕಲಿಯಲು ನಮ್ಮ ಹೆಣ್ಣು ಮಕ್ಕಳೂ ಅಸಡ್ಡೆ ಮಾಡಿರಬಹುದು ಬಿಡಿ.       ಇಲ್ಲಾ ಏನಿದೆ ಇದರೊಳಗೆ ಎಂದು ಗುರುಗಳ ಗರಡಿಗೆ ಕಲಿಯಲು ಹೋದವರಿಗೆ ಹೆಣ್ಣುಗಳನ್ನು ಕಾವ್ಯದೊಳಗೆ ಇನ್ನಿಲ್ಲದಂತೆ ಅಬಲೆಯರೂ, ಹೊಟ್ಟೆಕಿಚ್ಚಿನವರೂ, ಯುದ್ಧ ಕಾರಣರೂ, ತಂದು ಹಾಕುವವರೂ, ಕಲಹ ಪ್ರಿಯರೂ ಹೀಗೆ ಚಿತ್ರಿಸಿರುವುದನ್ನು ಕಂಡು ಕೋಪಗೊಂಡು ಇದೇಕೆ ಹೀಗೆ..?! ಎಂದು ಮಾತಿನ ಚಕಮಕಿಯಾಗಿ ವಾದವಿವಾದ ತಾರಕಕ್ಕೆ ಹಚ್ಚಿಕೊಂಡಿರಬಹುದು.      ಹಾಗಾಗಿ ಇದೆಲ್ಲಾ ಬೇಡಬಿಡು, ಚೆನ್ನಾದ ವಿಚಾರಗಳು ಕಲಿಯುವ ಸಂದರ್ಭ ಬಂದಾಗಲೇ ನಾವು ಓದುವ ಬಗ್ಗೆ ಚಿಂತಿಸೋಣ ಎಂದು ನಮ್ಮ ಹೆಣ್ಣುಮಕ್ಕಳು ವಿಚಾರ ಮಾಡಿರಬೇಕು.   ಹಾಗಾಗಿಯೇ ಆಧುನಿಕ ವಿದ್ಯಾಭ್ಯಾಸ ಕ್ರಮ ಜಾರಿಗೆ ಬಂದು ಕಲೆ, ವಿಜ್ಞಾನ, ವಾಣಿಜ್ಯ ವಿಚಾರಗಳು ಓದುವ ರೂಢಿ ಬೆಳೆದು ಬಂದ ಮೇಲೆಯೇ ನಮ್ಮ ಹೆಣ್ಣುಮಕ್ಕಳು ಓದಿನಲ್ಲಿ ಮೇಲುಗೈ ಸಾಧಿಸಿರುವುದು…  ಇದು ನನ್ನ ಒಂದು ವಿಚಾರವಷ್ಟೇ… ಸತ್ಯಕ್ಕೆ ಹಲವು ಮಗ್ಗಲುಗಳಿವೆ. – —

ಹೆಣ್ಣುಮಕ್ಕಳ ಓದು Read Post »

ಇತರೆ, ಜೀವನ

ಬದುಕು ಕಠೋರ

ಅನುಭವ ನಾಗರಾಜ ಮಸೂತಿ ಇವತ್ತು ಬದುಕು ಬಹಳ ಕಠೋರ ಅನಿಸ್ತು. ನಾವೆಲ್ಲ ಮನೆ ಮುಂದಿನ ಗೇಟ್ ಕೂಡ ದಾಟದ ಹಾಗೆ ಮನೆಯಲ್ಲಿಯೇ ಕೂತಿವಿ. ಹಳ್ಳಿ ಹೆಣ್ಣು ಮಗಳು ಮೊಸರು ಮಾರ್ತಾ ಮನೆ ಬಾಗ್ಲಿಗೆ ಬಂದ್ಲು. ನಮವ್ವಗ ಒಂದು ಒಳ್ಳೆ ಅಭ್ಯಾಸ ಏನಂದ್ರ ಯಾರೇ ಬರ್ಲಿ ಕರದ ಕುಂಡರ್ಸಿ ನೀರ ಕೊಟ್ಟ ಮಾತಾಡ್ಸುದು. ವ್ಯಾಪಾರ ಎರಡನೆ ಮಾತು. ಇದು ನಮ್ಮ ಮನೆ ಮಂದಿಗೆ ಹಿರೆರಿಂದ ಬಂದ ಬಳುವಳಿ. ಇರ್ಲಿ ಹಾಂ ಮೊಸರ ಮಾರಕ ಬಂದಾಕಿ ಮಸರು ಕೊಟ್ಲ ರೊಕ್ಕಾನು ತಗೊಂಡು ಕಥೆ ಹೇಳಾಕ ಸುರು ಮಾಡಿದ್ಲ. ಬಾಗಲಕೋಟಿ ಹತ್ರ ಪಕ್ಕದ ಹಳ್ಳಿ ಆಕೆದು . ಕಾಯಿಪಲ್ಯ, ಮೊಸರ, ಹಾಲ ಮಾರೊರು ಎಂಟತ್ತ ಮಂದಿ ಸೇರಿ ಟಾಟಾ ಎಸಿ ಗಾಡಿ ಬಾಡಗಿ ಮಾತಡ್ಕೊಂದ ಬಂದಾರ. ಇಲ್ಲಿ ನವನಗರದಾಗ ಎಲ್ಲೀ ವ್ಯಾಪರಕ್ಕ ಬಿಡವಲ್ಲರು.  ಕೊರೊನಾ ಬಂದೈತಿ ಅಂತ ಹೇಳಿ ಪೋಲಿಸರ ಮುಂಜ ಮುಂಜಾನೆ ಲಾಠಿ ಏಟ್ ಕೊಡಾಕ ಸುರು ಮಾಡ್ಯರಬೆ ಎವ್ವ, ಬುಟ್ಯಾಗಿನ ಕಾಯಿಪಲ್ಯ ಚೆಲ್ಲಾಕತ್ತಾರ, ಗಡಿಗ್ಯಾಗಿನ ಮಸೂರ ಚೆಲ್ಲಿದ್ರ. ಒಬ್ಬ ಗನಮಾಗ ಬಂದ ಕೇಳಿದ ಬೆಣ್ಣಿ ಇತ್ತಬೆ ಅರ್ಧ ಕಿಲೋ ಕೊಟ್ಟ್ಯಾ ಪೋಲಿಸ್ ಬಂದ್ರ ಹಂಗ ಓಡಿ ಹೋದನಬೇ. ರೊಕ್ಕಾನು ಕೊಡ್ಲಿಲ್ಲ, ಡಬ್ಬಿನ ಒಯ್ದಾಬೇ. ಎಡ್ನೂರು ಮುನ್ನೂರ ರೂಪಾಯಿಬೇ ಎವ್ವಾ, ಏನ್ ಮಾಡಬೇಕ ನೋಡ. ಅವ್ವಗ ತಡ್ಯಾಕಾಗಲಿಲ್ಲ ಬೈದ್ಲು ಮನಸು ಹಗರು ಮಾಡ್ಕೊಂಡಳು. ಮೊಸರ ಮಾರಾಕಿಗಿ ಸಮಾಧಾನ ಮಾಡಿದ್ಲ. ಎವ್ವ ಈ ಗಲಾಟ್ಯಾಗ ಯಾಕ್ ಬರ್ತಿ ಸುಮ್ಮನ ಮನ್ಯಾಗ್ ಇರ್ಬಾರ್ದ ಅಂದ್ಲ್. ಎಷ್ಟೇ ಆಗಲಿ ಹಳೆ ಮನುಷ್ಯಾರ ಒಬ್ಬರ ಕಷ್ಟ ತಮ್ಮ ಕಷ್ಟ ಅನ್ನುವಷ್ಟರ ಮಟ್ಟಿಗೆ ಅವರ ಪ್ರತಿಕ್ರಿಯೆ ಇರುತ್ತ. ಅಷ್ಟಕ್ಕ ಸುಮ್ಮನಾಗಲಾರದ ಮೊಸರ ಮಾರೊ ಹಳ್ಳಿ ಹೆಣ್ಣು ಮಗಳು ಒಳ್ಳೆಯದಷ್ಟ ಗೊತ್ತ , ಯಾರಾರ ಏನರ ಅಂದ್ರ ಜಗಳ ಮಾಡ್ತಾರ, ಆದರ ಕೆಟ್ಟದ ಬಯಸಾಂಗಿಲ್ಲ. ನಾವು ಮನ್ಯಾಗ ಕುಂತರ ಜನ ಎಲ್ಲಾ ಏನ್ ತಿನಬೇಕಬೇ ಎವ್ವ , ಬೆಳದಿದ್ನ ಕೆಡಿಸಿ ಏನ ಮಾಡುದೈತಿ ಅಲ್ಲನ ಬೇ? ಏನ ಒಂದೀಟು ತ್ರಾಸ್ ಆದಿತ್ತ ಬಂದ ಹೋಗಾಕ ಅಂದ ಬುಟ್ಟಿ ತೆಲಿ ಮ್ಯಾಲಿ ಹೊತ್ತ ಹೊಂಟ್ಲ. ಅವ್ವ ಹೌದು ನೀ ಕರೆಕ್ಟ್ ಅದಿಯವ, ಕಲ್ತವಕ ಬುದ್ಧಿ ಕಡಿಮೆ ಆಗ ಕತ್ತೈತಿ ಏನ್ ಮಾಡುದವ, ಹುಷಾರ್ ಹೋಗವ ಅಂತ ಹೇಳಿ ಕಳಿಸಿದ್ಲ. ಬದುಕು ಕಠೋರ ನಮ್ಮಂತವರಿಗೆ, ಏನು ಅರಿಯದ ಮುಗ್ಧರಿಗೆ ಅಷ್ಟೇ ಸರಳ. *************

ಬದುಕು ಕಠೋರ Read Post »

ಇತರೆ, ಲಹರಿ

ನಾನು ನಾನೇ…..

ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ ಎಲ್ಲರೂ ಮರಳಬೇಕು ಅವನ ಹತ್ರ… ಈ ಜೀವನ ಎಂಬ ನಾಟಕ/ ಚಲನಚಿತ್ರದಲ್ಲಿ ನಾವು ಹುಟ್ಟಿನಿಂದ  ಹಲವಾರು ಪಾತ್ರಗಳನ್ನು ನಿಭಾಯಿಸುತ್ತಲೇ ಇರುತ್ತೇವೆ. ಅದು ನಮ್ಮ ಇಷ್ಟದ್ದಾಗಲಿ ಇಷ್ಟವಿಲ್ಲದ್ದಾಗಲಿ ನಾವು ನಿರ್ವಹಿಸಲೇ ಬೇಕು. ನಾನು ಹುಟ್ಟಿದಾಗ ಒಂದೇ ಬಾರಿಗೆ ಮಗಳು ,ಮೊಮ್ಮಗಳು ತಂಗಿ ಎಂಬ ಮೂರು ಪಾತ್ರಗಳನ್ನು ಒಟ್ಟಿಗೆ ನಿಭಾಯಿಸಿದ್ದೆ. ಮುಂದೆ ನಾಲ್ಕೈದು ವರ್ಷ ಕಳೆದಾಗ ಅಮ್ಮನ ಮಮತೆ ಕಂಡು ನನಗೂ ಅಮ್ಮನ ಪಾತ್ರ ನಿರ್ವಹಿಸುವ ಆಸೆ. ಆಗ ನನಗೆ ಮಗುವಾಗಿದ್ದು ನನ್ನ ಬಳಿ ಇದ್ದ ಒಂದು ಬೊಂಬೆ.ಅದನ್ನೇ ಮಗುವೆಂದು ತಿಳಿದು ಅಮ್ಮನಾಗಿಬಿಟ್ಟಿದ್ದೆ. ಮುಂದೆ ಮುಂಬೈನಲ್ಲಿದ್ದ ನನ್ನ ಅಕ್ಕ ಊರಿಗೆ ಬಂದಾಗ ಅವಳು ಕೇಳಿದ ,ಓದಿದ ಸಿಂಡ್ರೆಲ್ಲಾ, ಸ್ನೋವೈಟ್  ಕತೆ ಕೇಳಿದಾಗ ಅದರಲ್ಲಿದ್ದ ರಾಜಕುಮಾರಿಯೂ ನಾನೇ ಆಗಿಬಿಟ್ಟಿದ್ದೆ… ಮುಂದೆ ಶಾಲೆಗೆ ಹೋದಾಗ ನಮ್ಮನ್ನು ಪ್ರೀತಿಯಿಂದ ನೋಡಿಕೊಂಡ ಶಿಕ್ಷಕಿಯನ್ನು ಕಂಡಾಗ ನನಗೂ ಶಿಕ್ಷಕಿಯಾಗಬೇಕು  ಎಂಬ ಆಸೆ. ಅದನ್ನು ನೆರವೇರಿಸಿಬಿಟ್ಟಿದ್ದ ಆ ಸೂತ್ರಧಾರ. ಮುಂದೆ ಬಂಧು ಬಳಗದ ಹೊರತಾಗಿ ಸ್ನೇಹಿತೆ ಎಂಬ ಪಾತ್ರ ನನಗಿಷ್ಟವಾಗಿತ್ತು.ಅದನ್ನು ಎಲ್ಲ ಕಡೆಗಳಲ್ಲೂ  ನಿರ್ವಹಿಸಿದೆ ಮುಂದಿನದು ಪತ್ನಿ,ಸೊಸೆ,ಅಮ್ಮನ ಪಾತ್ರ ಗಳು ನನ್ನ ಹೆಗಲೇರಿಬಿಟ್ಟವು..ಇದು ತುಸು ತ್ರಾಸಾದಯಕ ಪಾತ್ರಗಳು. ಯಾವುದೇ ರಿಹರ್ಸಲ್(ಪೂರ್ವತಯಾರಿ) ಗಳಿಲ್ಲದೆ ಮಾಡಬೇಕಾದ ಪಾತ್ರಗಳು.. ಕಷ್ಟವೋ ಸುಖವೊ ಸಧ್ಯಕ್ಕೆ ಅವನ್ನು ಕೂಡ ನಿರ್ವಹಿಸಿರುವೆ.. ಇನ್ನು ಸಧ್ಯ ಎರಡು ಪಾತ್ರಗಳು ಬಾಕಿ ಇವೆ..ಅತ್ತೆ ಹಾಗೂ ಅಜ್ಜಿಯ ಪಾತ್ರ ಆ ಸೂತ್ರದಾರನ ದಾರ ಎಷ್ಟು ಉದ್ದ ಇದೆಯೋ ಗೊತ್ತಿಲ್ಲ. ಅದನ್ನು ನನ್ನಿಂದ ಆಡಿಸುವ ಇಚ್ಛೆ ಅವನಿಗಿದೆಯೋ.. ನನ್ನಿಂದ ಅದು ನಿರ್ವಹಿಸಲು ಸಾಧ್ಯವಿದೆಯೋ ನನಗೆ ತಿಳಿದಿಲ್ಲ… ಒಟ್ಟಾರೆ ನಾನು ನಾನಾಗಿಯೇ…ನಾನೇ ಪಾತ್ರವಾಗಿ ಇದುವರೆಗೆ ನಟಿಸಿರುವೆ… ಕೆಲವೊಂದು ಕಡೆ ಪೋಷಕ ನಟಿ,ಕೆಲವೊಂದು ಕಡೆ ನಾಯಕ ನಟಿ,ಇನ್ನೂ ಕೆಲವು ಕಡೆ ಖಳನಾಯಕಿಯಾಗಿಯೂ ನಟಿಸುವ ಸಂದರ್ಭ ಬಂದಿರುತ್ತದೆ. ಈ ಜೀವನ ಎಂಬ ನಾಟಕದಲ್ಲಿ ನಾವು ನಿರ್ದೇಶಕರಾಗಲು ಖಂಡಿತಾ ಸಾಧ್ಯವಿಲ್ಲ ಕೊನೆಯದಾಗಿ ನಾವು ನೋಡುವ ಚಲನಚಿತ್ರಗಳ ನಟರಿಗೆ ಇಷ್ಟು ಪಾತ್ರಗಳಲ್ಲಿ ನಿಮಗೆ ಇಷ್ಟವಾದ ಪಾತ್ರ ಯಾವುದು ಅಂತ ಕೇಳ್ತಾರಲ್ಲ ಹಾಗೆಯೇ ನನಗೇನಾದರೂ ಕೇಳಿದರೆ ನನ್ನ ಉತ್ತರ ಸ್ನೇಹಿತೆಯ ಪಾತ್ರ *****

ನಾನು ನಾನೇ….. Read Post »

ಅನುವಾದ

ಮೂಗುತಿ ಸುಂದರಿ

ಅನುವಾದಿತ ಕವಿತೆ ಕನ್ನಡ ಮೂಲ:ಸ್ಮಿತಾ ಅಮೃತರಾಜ್.ಸಂಪಾಜೆ. ಇಂಗ್ಲೀಷಿಗೆ: ಸಮತಾ ಆರ್ ಮೂಗುತಿ ಎಂದರೆಮೂಗು ಮುರಿಯುತ್ತಿದ್ದವಳುಪರಮಾಶ್ಚರ್ಯವೆಂಬಂತೆ ಇತ್ತೀಚೆಗೆಮೂಗು ಚುಚ್ಚಿಸಿಕೊಂಡಳು.ಕಣ್ಣರಳಿಸಿದ್ದಕ್ಕೆ, ಬದುಕು ಶುರುವಾಗುವುದೇನಡು ಹರಯದಲ್ಲಿ ಕಣೇ ಅಂತಹಗುರವಾಗಿ ನಕ್ಕಿದ್ದಳು. ಮೊನ್ನೆ ಮೊನ್ನೆ ನಡುರಾತ್ರಿಯಲ್ಲಿಫೋನಾಯಿಸಿ ಮೂಗು ವಿಪರೀತ ನೋವುತಡೆಯೋಕಾಗಲ್ವೇ ಅಂತ ಕಣ್ಣೀರಾಗಿದ್ದಕ್ಕೆ.. ಯಾಕೆ ತ್ರಾಸ ತೆಗೆದುಬಿಡು ಎಂದಿದ್ದೆಕಲೆ ಉಳಿಯಬಾರದಲ್ಲವಲ್ಲ ಕನಲಿದ್ದಳು. ಮೊನ್ನೆ ಬಸ್ಸಿನಲ್ಲಿ ಸಿಕ್ಕವಳುಮೂಗುತಿಯಲ್ಲಿ ಚೆಂದಕ್ಕೆ ಕಂಡಿದ್ದಳುನಾನೂ ಚುಚ್ಚಿಸಿಕೊಳ್ಳಲಾ…?ಮೂಗು ಸವರಿಕೊಂಡೆ. ಎದೆಯೊಳಗೊಂದು ಚುಚ್ಚುವ ನೋವಿದ್ದರೆಮೂಗು ಚುಚ್ಚಿಸಿಕೋ…ಎಂದಿನಂತೆ ನಕ್ಕಳು.ಈಗ ಮೂಗಿನ ಕಡೆಗೇ ನನ್ನ ಗಮನಸ್ವಗತಕ್ಕೆಂಬಂತೆ ನುಡಿದಳು. Nosepin of a beauty. “A nose pin ! Oh ! no,never”She always used to sneer.But amused all with one. Question in my eyes,And a reply came,“Blossoms of mid life”Said her smile. At a midnight,“This pain,who will bear?”Her voice drenched in tearsWoke me up for an answer. “Why to bear?take it out”My yawn replied.“Will the scar heal?”She burst aloud. Someday in a busMet the beauty shining her nose.“Shall I too….”asked my noseWith the touching fingers. ” If your heart is aching,With a pricking thorn,Then get a nosepin”As usual she said smiling. “All that keeps me awake nowIs my nose pin”Said she as a monologue. **********************

ಮೂಗುತಿ ಸುಂದರಿ Read Post »

ಕಾವ್ಯಯಾನ

ನಡುಗಡ್ಡೆಯ ಹುಡುಗಿ

ಕವಿತೆ ಎಂ.ಜಿ .ತಿಲೋತ್ತಮೆ ನಾನು ಹರವಿನ ಜಲವ ಈಜಿ,ದಾಟಿಆ ದಡವ ಸೇರುವ ಬಯಕೆಕೋಟೆಯೊಳಗೊಂದು ಕೋಟೆಕಟ್ಟಿಕೊಂಡು ಕರೆದರೂ ನೀನು ಕೇಳುತ್ತಿಲ್ಲಸೇರಲಾಗುತ್ತಿಲ್ಲ… ದಿನಕ್ಕೆ ದೃಷ್ಟಿ ತಗುಲುವಅನಂತ ಕಣ್ಣು ,ಹುಚ್ಚು ಮನಸ್ಸುಗಳಲ್ಲಿನನ್ನದು ಒಂದುಅವಳ ಮೈಸಿರಿ,ಸೊಬುಗು ವರ್ಣನೆಗೆಸುತ್ತ ಹರಿಯುವ ಉದಕಕ್ಕೂ ಎಟಕದು ಈ ದಡಕ್ಕೂ ಆ ದಡಕ್ಕೂ ಅಂತರಅಳತೆಯಮಾಪನದಲ್ಲಿ ಅಗಮ್ಯಈ ಮನಕ್ಕೂ ಆ ಮನಕ್ಕೂ ಅಂತರವಿಲ್ಲಹಾಲಿನೊಳಗೆ ಸೇರಿಕೊಂಡ ಜೇನಂತೆಅಷ್ಟೇ ಹತ್ತಿರ ಇರಬಹುದು ಯಾವ ದಾರಿ ಹಿಡಿದು ಬರಲಿದಿನ ನಿತ್ಯ ಅರಳುವ ಪ್ರೀತಿಗೆಕಟ್ಟೆ ಕಟ್ಟಿದ್ದರೆ ಜೀವ ಹೇಗೆ ಉಳಿಯುವುದು ನೀನು ನಾನಾಗಿ ನಾನು ನೀನೇ ಎಂದುಹೀಗೆ ಬರೆದಿಟ್ಟ ಪ್ರೀತಿ ಭಾಷೆಯ ನುಡಿಗಳಹಾಳೆಗಳು ತೂರಿ ಬಿಟ್ಟರೆ ಓಡೋಡಿ ಬರುವೆಯಾ? ವಿನಾಕಾರಣ ಕಾಯಿಸಿ,ಬೇಯಿಸಿ,ನಿಂದಿಸಿಕೊನೆಗೆ ಸೋಲಬೇಕೆನ್ನುವ ಹಟಬೇಕೆಮೊದಲ ಬೇಟೆಗೆ ಒಪ್ಪಬಹುದಲ್ಲವೇ ಮತ್ತೆ ಅದನ್ನೇ ಹೇಳುವೆಎಷ್ಟು ದೂರ ನಿನ್ನ ನನ್ನ ನಡುವೆಮಧ್ಯ ಮುಳುಗಿಸುವವಿರೋಧ ಭಾವ ವಿಲ್ಲವಾದರೆಅಂತದೇನು ಭಿನ್ನತೆ ಇಲ್ಲ ***************

ನಡುಗಡ್ಡೆಯ ಹುಡುಗಿ Read Post »

ಅನುವಾದ

ಒಂದು ಖಾಲಿ ಜಾಗ

ಅನುವಾದಿತ ಕವಿತೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ An empty space Each and every one might be owed an empty space.at the backyard? or frontyard?or else a room, inside the homeor may be at some unseen placestotally as being personal. Everyone atleast once a whiledefinitely think about this empty spacewhat would be sown,let it be a lady finger? or to spread over ivy gourdor to grow paddy crop?or else if it is quite spaciousto keep it for saleby constructing a building?as according to their capacity and neccessity In an utter helplessnessthis empty space won’t point outthat he is the owner,all the time it moves on from hand to hand.and this bussiness brisk in auction. If it is a building,can stay for long without breathingtime to.time all the sown, grownoften change underthe cycle of life, death, and rebirth So ashow easily these empty spaces become vacantas being filled.Always stand swayingon the scale of sale and purchase. I, observing for long timehere is an invisible empty spaceremained so long as itself,only the exquisite perfume thatthe shapeless wind carriessauntering across. A quiet sensationseen, unseen and never be aquiredthat is only fillingthe space inside.Still it is remained hollow and unoccupied If you are eager thenTouch it with eyes wide openWho knows..that empty space might also be yours… Translated into English–Nagarekha Gaonkar ಒಂದು ಖಾಲಿ ಜಾಗ ಎಲ್ಲರ ಬಳಿಯೂ ಎಲ್ಲರೊಳಗೂಇರಬಹುದು ಒಂದೊಂದು ಖಾಲಿ ಜಾಗ. ಹಿತ್ತಲಿನಲ್ಲಿಯೋ? ಮುಂದಣ ಆಂಗಳದಲ್ಲಿಯೋ?ಒಳಕೋಣೆಯೊಳಗೋ? ಅಥವಾ ಯಾವುದೋಅದೃಶ್ಯ ಎಡೆಯಲ್ಲಿ ತೀರಾ ಖಾಸಗಿಯಾಗಿ. ಒಂದೊಮ್ಮೆ ಎಲ್ಲರೂ ಈ ಖಾಲಿ ಜಾಗದಕುರಿತು ಯೋಚಿಸಿಯೇ ಇರುತ್ತಾರೆ. ಬೆಂಡೆ ಬಿತ್ತುವುದಾ? ತೊಂಡೆ ಹಬ್ಬಿಸುವುದಾ?ಭತ್ತ ಬೆಳೆಯುವುದಾ?ತುಸು ಹೆಚ್ಚೇ ಇದ್ದರೆ ಕಟ್ಟಡ ಕಟ್ಟಿಸಿಬಿಕರಿಗಿಡುವುದಾ?ಅವರವರ ಅನುಕೂಲಕ್ಕೆ ತಕ್ಕ ಹಾಗೆಅಗತ್ಯಕ್ಕೆ ತಕ್ಕ ಹಾಗೆ. ಇವರೇ ವಾರಸುದಾರರು ಅಂತಬೆಟ್ಟು ಮಾಡಿ ತೋರಿಸಲಾಗದ ಅಸಹಾಯಕತೆಯಲ್ಲಿಖಾಲಿ ಜಾಗವೊಂದು ಅವರಿವರ ಕೈಗೂಸಾಗುತ್ತಲೇಸಾಗುತ್ತದೆ.ವ್ಯಾಪಾರ _ ವಹಿವಾಟು ಭರದಲ್ಲಿ ಕುದುರುತ್ತದೆ. ಕಟ್ಟಡವಾದರೆ ಉಸಿರಾಡದೆಯೂಹಲವು ಕಾಲ ಹಾಗೇ ಉಳಿದುಕೊಂಡು ಬಿಡುತ್ತದೆ.ಬಿತ್ತಿದ್ದು ಬೆಳೆದದ್ದು ಕಾಲಕಾಲಕ್ಕೆಹುಟ್ಟಿ,ಸತ್ತು,ಮರುಹುಟ್ಟು ಪಡೆದುಬದಲಾಗುತ್ತಲೇ ಇರುತ್ತದೆ. ಹಾಗೇ..ಎಷ್ಟು ಸುಲಭದಲ್ಲಿ ಈ ಖಾಲಿ ಜಾಗಗಳುತುಂಬಿಕೊಳ್ಳುತ್ತಲೇ ಬರಿದಾಗುತ್ತವೆ.ಕ್ರಯ_ ವಿಕ್ರಯಗಳ ತಕ್ಕಡಿಯೊಳಗೆತೂಗಿಸಿಕೊಂಡೇ ನಿಲ್ಲುತ್ತವೆ. ಬಹುಕಾಲದಿಂದ ನೋಡುತ್ತಲೇ ಇರುವೆಇಲ್ಲೊಂದು ಅಗೋಚರ ಖಾಲಿ ಸ್ಥಳಹಾಗೇ ಉಳಿದುಕೊಂಡು ಬಿಟ್ಟಿದೆ.ನಿರಾಕಾರ ಗಾಳಿ ಹೊತ್ತು ತರುವ ಅಪರೂಪದಪರಿಮಳವಷ್ಟೇ ಅಲ್ಲಿ ಸುಳಿದಾಡುತ್ತದೆ. ಒಂದು ನಿಶ್ಯಬ್ಧ ಮಿಡುಕಾಟಕಂಡದ್ದೂ ಕಾಣದ್ದೂ ಎಂದಿಗೂ ದೊರಕದ್ದು ಮಾತ್ರಆ ಖಾಲಿಯೊಳಗೆ ತುಂಬಿಕೊಳ್ಳುತ್ತಲೇ ಇದೆ.ಆದರೂ ಆ ಖಾಲಿ ಖಾಲಿಯಾಗಿಯೇ ಉಳಿದಿದೆ. ಕುತೂಹಲವಿದ್ದರೆ,ಒಮ್ಮೆ ಮುಟ್ಟಿಕಣ್ಬಿಟ್ಟು ನೋಡಿಕೊಳ್ಳಿ.ಆ ಒಂದು ಖಾಲಿ ಜಾಗ ಬಹುಶಃನಿಮ್ಮದೇ ಇರಬಹುದೇನೋ..? ********

ಒಂದು ಖಾಲಿ ಜಾಗ Read Post »

ಅಂಕಣ ಸಂಗಾತಿ, ದಿಕ್ಸೂಚಿ

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ  ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು.  ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ ಕ್ಷಣಗಳು ಉಳಿದಿದ್ದವು. ಅಷ್ಟರಲ್ಲಿ ಇಬ್ಬರಲ್ಲಿ ಒಬ್ಬ ಸರಸರನೆ ಮರ ಹತ್ತಿ ಮರದ ಕೊಂಬೆಯ ಮೇಲೆ ಕುಳಿತು ಬಿಟ್ಟ. ಆದರೆ ಇನ್ನೊಬ್ಬನಿಗೆ ಮರ ಹತ್ತಲು ಬರದು. ಮತ್ತೊಬ್ಬರು ಸಹಾಯ ಸಿಕ್ಕಿದ್ದರೆ ಹತ್ತಿರುತ್ತಿದ್ದನೇನೋ! ಆದರೆ ಅವನ ಗೆಳೆಯ ಅದಾಗಲೇ ಮರದ ತುದಿಯನ್ನೇರಿ ಬಿಟ್ಟಿದ್ದರಿಂದ ಇವನೀಗ ನೆಲದಲ್ಲಿ ಒಬ್ಬಂಟಿಯಾಗಿದ್ದ. ಕರಡಿ ಇನ್ನೇನು ಹತ್ತಿರವೇ ಬಂತು. ಏನು ಮಾಡಬೇಕೆಂದು ಯೋಚಿಸುತ್ತಿರುವಾಗಲೇ ಒಂದು ಉಪಾಯ ಹೊಳೆದಂತಾಯ್ತು.  ಕರಡಿ ಸಮೀಪಕ್ಕೆ ಬಂತು ಎನ್ನುವಷ್ಟರಲ್ಲಿ ನೆಲದ ಮೇಲೆ ಸತ್ತಂತೆ ಮಲಗಿ ಬಿಟ್ಟ. ಕರಡಿ ತೀರಾ ಹತ್ತಿರಕ್ಕೆ ಬಂತು. ಯುವಕನನ್ನು ಮೂಸಿತು. ಸಾವು ಎದೆಯ ಮೇಲೆ ನಿಂತಿರುವಾಗ ಯಾರಿಗಾದರೂ ಉಸಿರು ಬಂದೀತೆ? ಯುವಕನಿಗೆ ಭಯದಲ್ಲಿ ಉಸಿರೇ ನಿಂತು ಹೋದಂತಾಗಿತ್ತು! ಕರಡಿ ಆತನು ಸತ್ತಿರುವನೆಂದು ತಿಳಿದು ತನ್ನ ಪಾಡಿಗೆ ತಾನು ಮುಂದೆ ಸಾಗಿತು. ಕರಡಿ ಕಣ್ಮರೆಯಾಗುವವರೆಗೂ ಮರದ ಮೇಲೆ ಕುಳಿತಿದ್ದ ಯುವಕ ಇನ್ನೇನು ಅಪಾಯವಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡು ಕೆಳಗಿಳಿದ. ಸತ್ತಂತೆ ನಟಿಸಿ ಮಲಗಿದ್ದವನೂ ಅಬ್ಬಾ! ಅಂತೂ ಇಂತೂ ಬಚಾವಾದೆ ಎಂದು ಎದ್ದು ಕೂತ. ಮರದಿಂದ ಇಳಿದ ಯುವಕ ‘ಏನು ಹೇಳಿತು ಗೆಳೆಯ, ಕರಡಿ ನಿನ್ನ ಕಿವಿಯಲ್ಲಿ? ಎಂದು ನಗುತ್ತ ಕೇಳಿದ. ಸತ್ತಂತೆ ಮಲಗಿದ್ದ ಯುವಕ ಉತ್ತರಿಸಿದ ‘ಅಪಾಯದ ಸಮಯದಲ್ಲಿ ಕೈ ಬಿಟ್ಟು ಹೋಗುವವರನ್ನು ಎಂದೂ ನಂಬಬೇಡ ಎಂದು ಹೇಳಿತು. ಅಪಾಯವೆಂದರೆ. . . . .?      ದೈನಂದಿನ ಬದುಕಿಗೆ ಅಕಸ್ಮಾತ್ತಾಗಿ ಭೇಟಿ ಕೊಡುವಂಥ ಆಗಂತುಕನೇ ಅಪಾಯ. ಆಂತರಿಕ ಅಗ್ನಿಯನ್ನು ಉದ್ದೀಪನಗೊಳಿಸುತ್ತದೆ. ನಮ್ಮೊಳಗಿನ ಅತ್ಯುನ್ನತವಾದುದನ್ನು ಅತ್ಯುತ್ತಮವಾದುದನ್ನು ಹೊರಗೆಳೆಯಲು ಪ್ರೇರೇಪಿಸುತ್ತದೆ. ಬಹುತೇಕರು ಅಪಾಯವನ್ನು ಅಪಾಯಕಾರಿ ಎಂದು ದೂರ ಸರಿಯುತ್ತಾರೆ ಹೊರತು ಅದು ಹೊತ್ತು ತಂದ ಅವಕಾಶಗಳ ಮೂಟೆಗಳನ್ನು ತೆರೆದು ನೋಡುವುದೇ ಇಲ್ಲ. ಸಣ್ಣ ಪುಟ್ಟ ಅಪಾಯಗಳಿಗೂ ಹೆದರಿ ಜೀವನ ಪ್ರೀತಿ ಕಳೆದುಕೊಳ್ಳುವವರು ಅಪಾಯಗಳ ಮಡಿಲಲ್ಲಿ ಬಿದ್ದು ಗಗನಚುಂಬಿ ಹಿಮ ಪರ‍್ವತಗಳ ನೆತ್ತಿಯ ಮೇಲೆ ನಿಂತವರನ್ನು, ಉದ್ದುದ್ದ ಸಾಗರಗಳನ್ನು ಈಸಿ  ಗೆದ್ದವರನ್ನು ಹಗ್ಗದ ಮೇಲೆ ನಡೆಯುವವರನ್ನು ನೋಡಿ ಕಲಿಯಬೇಕು. ಅಪಾಯಗಳು ಮನುಷ್ಯನಿಗೆ ಹೇಳಿ ಕೇಳಿ ಬರುವುದಿಲ್ಲ. ಅಪಾಯದ ಸ್ಥಿತಿಯಲ್ಲಿ ಯಾರಾದರೂ ನಮ್ಮನ್ನು ಬಚಾವು ಮಾಡುತ್ತಾರೆಂದು ನಂಬಿಕೊಂಡು ಕುಳಿತುಕೊಳ್ಳುವುದು ತರವಲ್ಲ. ಸಮಯ ನಿರ‍್ವಹಣೆಯಂತೆ ಅಪಾಯ ನಿರ‍್ವಹಣೆಯೂ ಒಂದು ಕಲಿಯಬೇಕಾದ ಕಲೆ. ಅಪಾಯ ಎದುರಿಸುವ ಬಗೆ ಹೇಗೆ ಎನ್ನುವುದನ್ನು ನೋಡೋಣ ಬನ್ನಿ. ಮೇಲಿನ ಕಥೆಯ ಸಂದೇಶವನ್ನು ಮಾನವರೆಲ್ಲ ಬಯಸುವುದು ಸಹಜ. ಆಪತ್ತಿನಲ್ಲಿ ಉದ್ದೇಶಪೂರ‍್ವಕವಾಗಿ ನಮ್ಮನ್ನು ಕೈ ಬಿಟ್ಟು ಹೋಗುವವರನ್ನು ನಾವು ನಂಬಲೇ ಬಾರದು. ಆದರೆ ಆ ಸಮಯದಲ್ಲಿ ಏನು ಮಾಡಬೇಕೆಂದು ಹೊಳೆಯದೇ ಹಾಗೆ ನಡೆದುಕೊಂಡಿದ್ದರೆ ಅಂಥವರನ್ನು ಕ್ಷಮಿಸುವುದು ಒಳಿತು. ‘ಕ್ಷಮಾ ಗುಣದ ಬಗ್ಗೆ ಖಂಡಿತ ಕಡಿಮೆ ಎಣಿಕೆ ಬೇಡ.’ ಯಾವುದೇ ಕೆಟ್ಟ ಕಾರ‍್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳದು. ಎಂಬುದನ್ನು ನೆನಪಿನಲ್ಲಿಡಬೇಕು. ಗೊಂದಲದ ಗೂಡಾದ ಮನಸ್ಸಿಗೆ ಎಲ್ಲವೂ ವಿಪರೀತಾರ‍್ಥಗಳೇ! ಸಮಯ ಸನ್ನಿವೇಶವನ್ನು ಅರ‍್ಥೈಸಿಕೊಂಡು ಆಪತ್ಕಾಲದಲ್ಲಿ ನಮ್ಮೊಂದಿಗಿದ್ದವರು ನಡೆದುಕೊಳ್ಳುವ ರೀತಿಯನ್ನು ಪರಿಶೀಲಿಸಿ ದೂರ ಸರಿಯುವುದೋ ಇಲ್ಲ ಸಂಬಂಧವನ್ನು ಮುಂದುವರೆಸಿಕೊಂಡು ಹೋಗಬೇಕೋ ಎನ್ನುವುದನ್ನು ನಿರ‍್ಧರಿಸುವುದು ಉಚಿತ ಮನಸ್ಥಿತಿ.  ಹಾಗೆ ನೋಡಿದರೆ ಅಪಾಯದ ಸ್ಥಿತಿಯಲ್ಲಿ ನಮ್ಮ ಮನಸ್ಥಿತಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ನಮಗೆ ಘಟಿಸುವ ಅನೇಕ ವಿಷಯಗಳು ಮತ್ತು ಅವು ನಮಗೆ ಎಂಥ ಫಲಗಳನ್ನು ನೀಡುತ್ತವೆ ಎಂಬುದು ನಮ್ಮ ಮನಸ್ಥಿತಿಯ ಮೇಲೆ ಆಧಾರ ಪಡುತ್ತದೆ. ಭಯಗೊಂಡರೆ ಏನು ಮಾಡಬೇಕೆಂದು ತಲೆಗೆ ತೋಚುವುದೇ ಇಲ್ಲ. ಹೀಗಾಗಿ ‘ಧೈರ‍್ಯದಿಂದ ಇದ್ದರೆ  ಅರ‍್ಧ ಅಪಾಯವನ್ನು ಗೆದ್ದಂತೆ.’ಆಶಾವಾದಿ ಭಾವ ಶಕ್ತಿಯನ್ನು ತುಂಬುತ್ತದೆ. ಪ್ರಯತ್ನವೆನ್ನುವುದು ಎಲ್ಲದಕ್ಕೂ ಮೂಲ ಕೇಂದ್ರ ಬಿಂದು. ಅಪಾಯದಲ್ಲಿ ಪ್ರಯತ್ನ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವೆನ್ನುವುದು ಕೇವಲ ಪಠ್ಯ ಬೋಧನೆಯಲ್ಲ. ಆಗಾಗ ಎದುರಾಗುವ ಅಪಾಯಗಳನ್ನು ಎದುರಿಸಲು ಸಿದ್ಧರಾಗುವುದನ್ನು ಕಲಿಸುವುದೂ ಆಗಿದೆ. ವಿದ್ಯಾರ‍್ಥಿ ದೆಸೆಯಲ್ಲಿ ಅಪಾಯದ ಅಡಿಪಾಯ ಅಲ್ಲಾಡಿಸುವ ಬಗೆ ತಿಳಿದುಕೊಳ್ಳಬೇಕು. ಅನುಭವದ ತಿಳುವಳಿಕೆ ನಾವು ಯಾವುದೇ ಕ್ಷೇತ್ರದಲ್ಲಿರಲಿ ಅಪಾಯ ನಿರ‍್ವಹಣೆಯನ್ನು ಕಲಿಯದ ಹೊರತು ಆ ಕ್ಷೇತ್ರದಲ್ಲಿಯ ವ್ಯಕ್ತಿ ಮತ್ತು ವಸ್ತುಗಳ ಮೌಲ್ಯವನ್ನು ನಿಖರವಾಗಿ ಅಳೆಯದ ಹೊರತು ಕ್ಷೇಮಕರ ಎಂದು ಹೇಳಲಾಗದು. ಅಪಾಯದ ಬಗೆಗಿನ ನಮ್ಮ ಹಿಂದಿನ ಅನುಭವಗಳು ಒಳ್ಳೆಯ ನಿರ‍್ಧಾರಗಳಿಗೆ ದಾರಿ ಮಾಡುವುದಾದರೆ ಸರಿಯಾದ ದಾರಿಯಲ್ಲಿ ನಡೆಯಲು ಸಾಧ್ಯವಾಗುತ್ತದೆ. ‘ನಾವು ಒಂದು ಅನುಭವದ ತಿಳುವಳಿಕೆಯನ್ನು ಬಿಟ್ಟರೆ ಮಿಕ್ಕೆಲ್ಲದ್ದರಿಂದ ಹೊರ ಬರುವ ಜಾಗರೂಕತೆಯನ್ನು ವಹಿಸಬೇಕು. ಅಲ್ಲಿಗೇ ನಿಲ್ಲಿಸಬೇಕು. ಇಲ್ಲದಿದ್ದರೆ ನಾವು ಬಿಸಿ ಒಲೆಯ ಬಾಣಲೆಯ ಮೇಲೆ ಕುಳಿತ ಬೆಕ್ಕಂತಾಗುತ್ತೇವೆ. ಅದು ಮತ್ತೆ ಬಿಸಿ ಒಲೆಯ ಬಾಣಲೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಇದು ಒಳ್ಳೆಯದೇ, ಆದರೆ ಅದು ತಂಪಾದ ಒಲೆಯ ಮೇಲೂ ಕುಳಿತುಕೊಳ್ಳುವುದಿಲ್ಲ ಎಂದಿದ್ದಾನೆ ಮಾರ‍್ಕ್ ಟ್ವೇನ್. ಧನಾತ್ಮಕ ಆಲೋಚನೆ ಅಪಾಯದ ಸ್ಥಿತಿಯಲ್ಲಿ ಕೈ ಬಿಟ್ಟು ಹೋಗುವವರನ್ನು ಕುರಿತು ನಕಾರಾತ್ಮಕವಾಗಿ ಯೋಚಿಸತೊಡಗಿದರೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅವರ ಉಳಿದೆಲ್ಲ ಉತ್ತಮ ಗುಣಗಳು ಗೌಣವೆನಿಸುತ್ತವೆ. ಅವರಿಂದ ದೂರವಾಗಬೇಕೆಂಬ ಭಾವನೆಯೂ ಬಲವಾಗುತ್ತದೆ.ಕೈ ಬಿಟ್ಟವರು ಸ್ವಯಂ ರಕ್ಷಣೆ ಮಾಡಲು ಕಲಿಸಿದರು ಎಂದುಕೊಂಡರೆ ಜೀವನಕ್ಕೊಂದು ಹೊಸ ಪಾಠ ಸಿಕ್ಕಂತಾಗುತ್ತದಲ್ಲವೇ? ಇಂಥವರು ನಮಗೆ ಭಿನ್ನ ದಾರಿಯಲ್ಲಿ ನಡೆಯುವುದನ್ನು ಕಲಿಸುತ್ತಾರೆ ಎಂದುಕೊಳ್ಳಬಹುದಲ್ಲವೇ? ಈ ಆಲೋಚನೆ ರೀತಿ ಪರಸ್ಪರ ವಿರುದ್ಧ ದಿಕ್ಕಿನಲ್ಲಿದೆ ಎನಿಸುತ್ತದೆ ಅಲ್ಲವೇ? ಈ ಅಂಶ ಅವರು ಜೀವ ಪರರಾಗಿಲ್ಲವೆನ್ನುವುದಕ್ಕಿಂತ ನಾವೆಷ್ಟು ಸಂಬಂಧ ಪರತೆಯನ್ನು ಹೊಂದಿದ್ದೇವೆ ಎಂಬುದನ್ನು ನಮಗೆ ಮನಗಾಣಿಸುತ್ತದೆ. ಅಷ್ಟಕ್ಕೂ ಇಂಥವರು ನಮಗಾಗಿ ಅಪಾಯವನ್ನು ತಂದೊಡ್ಡುವುದಿಲ್ಲ ಎಂಬುದು ದೊಡ್ಡ ನಿರುಮ್ಮಳ ವಿಷಯ. ಅಪಾಯವನ್ನು ಎದುರಿಸುವ ಸಂಧರ‍್ಭದಲ್ಲಿ ಹೇಗೆ ವರ‍್ತಿಸುವುದು ಗೊತ್ತಿಲ್ಲ ಅಷ್ಟೇ.ಆಪತ್ತು ನಿರ‍್ವಹಣೆಯಲ್ಲಿರುವ ಕೊರತೆಗಾಗಿ ಸಂಬಂಧವನ್ನು ಕಳೆದುಕೊಳ್ಳುವುದು ಮೂರ‍್ಖತನ. ಆದ್ದರಿಂದ ಧನಾತ್ಮಕವಾಗಿ ಆಲೋಚಿಸಬೇಕು. ವಿವೇಚನೆ ಅಪಾಯಗಳಿಂದ ಸಾಕಷ್ಟು ಕಲಿಯುತ್ತೇವೆ. ಅವು ಜೀವನದ ಪಾಠಗಳೇ ಸರಿ.ಅಪಾಯಗಳು ಆತ್ಮಶೋಧನೆಗೆ ವಿಶ್ಲೇಷಣೆಗೆ ಹಚ್ಚುತ್ತವೆ.ಅಪಾಯಗಳು ಯಾವಾಗಲೋ ಬರುತ್ತವೆ ಆಗ ಏನಾದರೊಂದು ಮಾಡಿದರಾಯಿತು ಎಂಬ ನಿರ‍್ಲಕ್ಷ್ಯವು ಸಲ್ಲದು. ಬದುಕು ಆತ್ಮಶೋಧನೆ, ವೈಯಕ್ತಿಕ ಬೆಳವಣಿಗೆ ಮತ್ತು ಜೀವನ ಪರ‍್ಯಂತದ ಕಲಿಕೆಯ ಒಂದು ಪಥವಾಗಿದೆ. ಅಪಾಯಗಳು ಜೀವನದ ಅವಿಭಾಜ್ಯ ಅಂಗಗಳು ಎಂಬ ವಿಷಯ ತಿಳಿಯುವುದು ಸಮಾಧಾನಕರ ಸಂಗತಿ. ಹಾಗಾದಾಗ ಅಪಾಯಗಳನ್ನು ವಿವೇಚನೆಯ ರೀತಿಯಿಂದ ನೋಡುವುದನ್ನು ಕಲಿಯಬಹುದು. ಅನೇಕರು ಅಪಾಯದಲ್ಲಿ ಗೆಲುವಿನ ಹಂತ ಮುಟ್ಟುವ ಸಂಧರ‍್ಭದಲ್ಲಿಯೇ ಕೈ ಚೆಲ್ಲಿ ಬಿಡುತ್ತಾರೆ. ಇದರಿಂದ ಆಂತರಿಕ ಬಲ ಅಪಾರ ದೃಢಶಕ್ತಿಗೆ ನಷ್ಟವುಂಟಾಗುತ್ತದೆ.  ಭಿನ್ನಧಾರೆ ಹಾಗೆ ನೋಡಿದರೆ ಆ ದೇವರು ಪ್ರತಿ ಜೀವಿಗೂ ಅಪಾಯ ನಿರ‍್ವಹಿಸುವ ಕಲೆಯನ್ನು ದಯಪಾಲಿಸಿದ್ದಾನೆ. ಅತಿ ಚಿಕ್ಕದೆನಿಸುವ ಇರುವೆಗೆ ನೋವಾಗಿಸಿದರೆ ನಮ್ಮನ್ನು ಕಚ್ಚುತ್ತದೆ. ಊಸರವಳ್ಳಿ ತನ್ನ ಬೇಟೆಯಾಡುವ ಪ್ರಾಣಿಗಳಿಂದ ಬಚಾವಾಗಲು ಬಣ್ಣ ಬದಲಿಸುತ್ತದೆ. ಹೀಗೆ ಎಲ್ಲ ಜೀವಿಗಳಿಗೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ುರ‍್ತು ಅನಿವಾರ‍್ಯತೆ ಇರುತ್ತದೆ. ಅಪಾಯದಲ್ಲಿರುವಾಗ ಇತರರು ನಮ್ಮನ್ನು ಉಳಿಸುವರೆಂದು ತಿಳಿದರೆ ನಾವು ಅವರ ತೆಕ್ಕೆಗೆ ಬೀಳುತ್ತೇವೆ.ಬೇರೆ ಪ್ರಯತ್ನಗಳತ್ತ ಗಮನ ಹರಿಸುವುದು ಕಡಿಮೆ. ಭಿನ್ನಧಾರೆಯತ್ತ ಹೊರಳುವುದು ಜೀವನ ಪ್ರೀತಿಗೆ ತೆರುವ ಬೆಲೆ ಎನ್ನಬಹುದು. ಇದೆಲ್ಲ ಕೇವಲ ಗೆಳೆತನಕ್ಕೆ ಮಾತ್ರ ಸೀಮಿತವಾದದ್ದು ಎನ್ನುವಂತಿಲ್ಲ. ಆಪತ್ತಿನಲ್ಲಿ ಸಹಕರಿಸಲಿಲ್ಲವೆಂದು ಆಪ್ತಬಾಂಧವರಲ್ಲಿ ಮುನಿಸಿಕೊಳ್ಳುತ್ತೇವೆ. ನಿಜವಾದ ಅವರ ಸ್ಥಿತಿಯನ್ನು ಅರಿಯದೇ ನಮ್ಮ ಮೂಗಿಗೆ ನಾವು ಯೊಚಿಸಿ ಆ ಸಂಬಂಧವನ್ನು ಕಾಟು ಒಗೆಯುತ್ತೇವೆ. ಆತ್ಮೀಯರಲ್ಲಿ ಹಿತೈಷಿಗಳಲ್ಲೂ ಇಂಥ ವಿಷಯಗಳು ಮುನ್ನೆಲೆಗೆ ಬರುವುದುಂಟು. ಅನಗತ್ಯ ಪ್ರಾಮುಖ್ಯತೆಯನ್ನು ಪಡೆಯುವುದುಂಟು. ಆದರೆ ಕಾಲ ಒಂದು ದಿನ ಎಲ್ಲವನ್ನೂ ಹಿಂದಕ್ಕೆ ತಳ್ಳುತ್ತದೆ. ಆಗ ಅಪಾಯ ನಿರ‍್ವಹಣೆ ಗೊತ್ತಿಲ್ಲದವರು ಪ್ರಪಾತಕ್ಕೆ ಬೀಳುತ್ತಾರೆ.  ಕೊನೆ ಹನಿ ಗೆಳೆಯರು ಹಿತೈಷಿಗಳು ಅಪಾಯದ ಸ್ಥಿತಿಯಲ್ಲಿ ಕೈ ಹಿಡಿಯಬೇಕೆಂದು ಬಯಸುವುದು ಸಹಜಗುಣ. ಆದರೆ ಒಂದೊಂದು ಸಂಧರ‍್ಭದಲ್ಲಿ ನಾವು ಬಯಸಿದಂತೆ ನಮಗೆ ಇರಲಾಗುತ್ತದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಬೇಕಾಗುತ್ತದೆ. ಮಧುರ ಬಾಂಧವ್ಯಗಳ ತಾಳವನ್ನು ತಪ್ಪಿಸುವ ಘಟನೆಗಳನ್ನು ನಿಂದಿಸುವ ರೀತಿಯಲ್ಲಿ ತೆಗೆದುಕೊಳ್ಳದೇ, ನಮ್ಮ ಶಕ್ತಿಯನ್ನು ಗುರುತಿಸಿಕೊಳ್ಳಲು ಸಹಕರಿಸಿದವರೆಂದು ತಿಳಿದು ವಂದಿಸುವ ರೀತಿಯಲ್ಲಿ ನಡೆದುಕೊಳ್ಳುವುದು ಸೂಕ್ತ. ಇದೆಲ್ಲ ನಮ್ಮ ದೃಷ್ಟಿ ಸಂಬಂಧಿಯಾದುದು. ಮನುಷ್ಯನ ಅನೇಕಾನೇಕ ಅಪೇಕ್ಷಿತ ಗುಣಗಳಲ್ಲಿ ಅಪಾಯ ಕಾಲದಲ್ಲಿ ಆಗಬೇಕು ಎನ್ನುವುದೂ ಒಂದು.ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬೀಜವೊಂದು ಸಂಪೂರ‍್ಣವಾಗಿ ಯಾವಾಗ ತನ್ನನ್ನು ಮಣ್ಣಲ್ಲಿ ಕಳೆದುಕೊಳ್ಳುತ್ತದೆಯೋ ಆಗ ಮಾತ್ರ ಅದು ಚಿಗುರೊಡೆದು ಮರವಾಗಿ ಬೆಳೆಯುವುದು. ಅಂತೆಯೇ ನಾವು ಮಾನವೀಯ ತುಡಿತಗಳಿಗೆ ಬೆಲೆ ಕೊಡಬೇಕು.ಗೊತ್ತಿಲ್ಲದೇ ಮಾಡಿದ ತಪ್ಪುಗಳನ್ನು ಕ್ಷಮಿಸಬೇಕು. ವಿಸ್ತಾರ ಚಿಂತನೆಗೆ ಹೊಸ ರೂಪ ಹೊಸ ಭಾಷ್ಯ ಬರೆಯಬೇಕು. ಹೊಸ ಅರ‍್ಥ ಬಿಟ್ಟು ಕೊಡುವ ಜೀವನದ ಹಲವಾರು ಘಟನೆಗಳ ಮೂಲಕ ಮನಸ್ಸಿಗೆ ಕನ್ನಡಿ ಹಿಡಿಯುವ ಕೆಲಸ ನಡೆದರೆ ಅಪಾಯದ ಮಡಿಲನ್ನು ಬಿಟ್ಟು ಸುಂದರ ಜೀವನದ ತೆಕ್ಕೆಯಲ್ಲಿ ನಾವಿರಲು ಸಾಧ್ಯ. ********************** ಲೇಖಕರ ಬಗ್ಗೆ ಎರಡು ಮಾತು ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

Read Post »

You cannot copy content of this page

Scroll to Top