ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಮುಖಾಮುಖಿ

ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ

ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ  ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್‌ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ ಶಾಖೆಯಲ್ಲಿ ಅವರು ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಲೆಗಳನ್ನು ಕೆತ್ತಿ ಕಲೆ ಅರಳಿಸುವ ಅವರು ಈವರೆಗೆ ರೂಪಿಸಿದ ಶಿಲ್ಪಗಳನ್ನು ೨೦೧೮ರಲ್ಲಿ ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನವನ್ನು ಹೈದರಾಬಾದ್‌ನಲ್ಲಿ ಏರ್ಪಡಿಸಿದ್ದರು. ಜವಾಹರಲಾಲ್ ನೆಹರು ಆರ್ಕಿಟೆಕ್ಚರ್ ಆಂಡ್ ಫೈನ್ ಆರ್ಟ ಯುನಿವರ್ಸಿಟಿಯಲ್ಲಿ ಅವರ ಶಿಲ್ಪಕಲಾ ಪ್ರದರ್ಶನ ನಡೆದಿದೆ. ೨೦೦೭, ೨೦೦೮,೨೦೦೯,೨೦೧೦ ರಲ್ಲಿ ಕ್ರಮವಾಗಿ ಕೇರಳ, ಚೆನ್ನೆöÊ, ವಿಜಾಪುರ, ಧಾರವಾಡ,  ಹಾಗೂ ೨೦೧೧ರಲ್ಲಿ ಬೆಂಗಳೂರು, ಕುಂದಾಪುರದಲ್ಲಿ ಅವರ ಶಿಲ್ಪಕಲಾ ಕೃತಿಗಳ ಪ್ರದರ್ಶನ ನಡೆದಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ೧೯೯೯ ರಿಂದ ೨೦೧೭ರವರೆಗೆ ೨೬ ಕಡೆ ಅವರ ಶಿಲ್ಪಗಳ ಪ್ರದರ್ಶನಗಳು ನಡೆದಿವೆ. ೨೦೦೯ ರಿಂದ ೨೦೧೩ರವರೆಗೆ ಅವರು ರಾಜ್ಯದ ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿ ಸಹ ಡಾ. ಮಹಾಂತೇಶ್ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಹಾಗೂ ದೇಶದ ವಿವಿದೆಡೆ ೨೨ ಕಲಾ ಶಿಬಿರಗಳಲ್ಲಿ ಅವರು ಭಾಗವಹಿಸಿ ಶಿಲ್ಪಗಳನ್ನು ರೂಪಿಸಿದ್ದಾರೆ. ಅವರ ಅತ್ಯುತ್ತಮ ಶಿಲ್ಪಗಳನ್ನು ಕಾರವಾರದ ರಾಕ್ ಗಾರ್ಡನ್ ಸೇರಿದಂತೆ ಹಂಪಿ ಕನ್ನಡ ವಿವಿಯಲ್ಲಿ, ಪಂಜಾಬದ ಪಟಿಯಾಲಾ ಕಲಾಗ್ರಾಮದಲ್ಲಿ, ಇಳಕಲ್ ಚಿತ್ರಕಲಾ ವಿದ್ಯಾಲಯ, ಬಾಗಲಕೋಟೆ ಜಿಲ್ಲಾ ಆಡಳಿತ ಭವನ, ಮಧ್ಯಪ್ರದೇಶದ ಖುಜರಾಹೋ ಶಿಲ್ಪಗ್ರಾಮದಲ್ಲಿ, ಬೆಂಗಳೂರು ಕಲಾ ಗ್ರಾಮದಲ್ಲಿ ,ದಾವಣಗೆರೆ ಕುವೆಂಪು ವಿವಿ ಆವರಣದಲ್ಲಿ, ಕುಪ್ಪಳ್ಳಿಯಲ್ಲಿ, ಬಳ್ಳಾರಿಯಲ್ಲಿ , ಸತ್ತೂರು ಮಠದಲ್ಲಿ, ಹೂವಿನಹಡಗಲಿ ರಂಗಭಾರತಿಯಲ್ಲಿ ಕಾಣಬಹುದಾಗಿದೆ. ………………………………………………………………………….. ನಾಗರಾಜ ಹರಪನಹಳ್ಳಿ : ಬಣ್ಣಗಳ ಜೊತೆ ,ಶಿಲೆಗಳ ಜೊತೆ ಕುಂಚ ಮತ್ತು ಉಳಿಯ ಜೊತೆ ಕಳೆದ ರೋಚಕ ಕ್ಷಣ ಯಾವುದು ? ನೆನಪಲ್ಲಿ ಉಳಿದ ಒಂದು ಪ್ರಸಂಗ ಕುರಿತು ವಿವರಿಸಿ ….  ಮಹಾಂತೇಶ್ ಪಲದಿನ್ನಿ : ವಿದ್ಯಾರ್ಥಿಗಳ ಜೊತೆಗೆ ನಿಸರ್ಗ ಚಿತ್ರ ಬಿಡಿಸಲು ಹೋದಾಗ ಅವರ ಜೊತೆ ಸೇರಿ ಒಂದು ವರ್ಣಚಿತ್ರ ಬಿಡಿಸಿರುವುದು ಸ್ಮರಣೀಯ ಕ್ಷಣ.  ಪ್ರಶ್ನೆ : ಕಲೆ ಅಥವಾ ಚಿತ್ರ, ಹುಟ್ಟುವ ಕ್ಷಣ ಯಾವುದು ? *ಉತ್ತರ :* ಕಲೆ ಯಾವ ಕ್ಷಣದಲ್ಲಿಯಾದರು ಹುಟ್ಟಬಹುದು ಕಲೆಗೆ ನಿರ್ದಿಷ್ಟತೆ ಇಲ್ಲ.  ಪ್ರಶ್ನೆ :  ನಿಮ್ಮ ಶಿಲ್ಪಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು ? ಪದೇ ಪದೇ ಕಾಡುವ ವಿಷಯ ಯಾವುದು ? ಉತ್ತರ : ಬಾದಾಮಿಯಲ್ಲಿರುವ ಏಕಶಿಲಾ ಬೆಟ್ಟದಲ್ಲಿ ನಿರ್ಮಾಣವಾಗಿರುವ ಗುಹಾಂತರ ಶಿಲ್ಪಗಳು, ಅದರ ವಸ್ತು ವಿನ್ಯಾಸಗಳು, ಕಥಾನಕ ಶಿಲ್ಪಗಳು, ಸಾಲಭಂಜಿಕೆ ಶಿಲ್ಪಗಳು, ನನಗೆ ಹೆಚ್ಚು ಇಷ್ಟವಾಗಿವೆ. ಲಜ್ಜಾಗೌರಿ ಶಿಲ್ಪಗಳು ನನಗೆ ಬಹಳ ಕಾಡುವ ವಿಷಯ.  ಪ್ರಶ್ನೆ :  ನಿಮ್ಮ ಶಿಲ್ಪಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ ? ಉತ್ತರ : ನಮ್ಮ ಸುತ್ತಲಿನ ಪರಿಸರವು ಕಾರಣವಾಗುತ್ತದೆ. ನಾವು ಕಳೆದ ಬಾಲ್ಯದ ನೆನಪುಗಳು ನಮಗೆ ಅರಿಯದೆ ಶಿಲ್ಪಗಳನ್ನು ರಚಿಸುವಾಗ ಅದರಲ್ಲಿ ಮೂಡುತ್ತದೆ. ಹಾಗೂ ಕೆಲವು ನಮ್ಮಲ್ಲಿರುವಂತಹ ಹೇಳಿಕೊಳ್ಳಲಾಗದ ವಿಷಯವನ್ನು ಶಿಲ್ಪಗಳ ಮೂಲಕ ತೋರಿಸುವುದು. ನಮ್ಮ ಜೀವನದಲ್ಲಿ ನಡೆದಂತಹ ಘಟನೆಗಳನ್ನು ಸಹ ಯಾವುದೇ ಮಾಧ್ಯಮದ ಮೂಲಕ ಅದನ್ನು ತೋರ್ಪಡಿಸಲು ಇಲ್ಲಿ ಅವಕಾಶವಿರುತ್ತದೆ.  ಪ್ರಶ್ನೆ :  ಪ್ರೀತಿಯ ಅಭಿವ್ಯಕ್ತಿ ನಿಮ್ಮ ಶಿಲ್ಪಗಳಲ್ಲಿ ಹೆಚ್ಚು …ಅಲ್ವಾ ? ಉತ್ತರ : ಅಭಿವ್ಯಕ್ತಿ ಎಂಬ ಪದವನ್ನು ಸರಳವಾಗಿ ವಿವರಿಸುವುದಾದರೆ, ನಮ್ಮ ಭಾವನೆಗಳನ್ನು ದೃಶ್ಯದ ಮೂಲಕ ಹೊರಹಾಕುವುದು. ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕೆ ಅಭಿವ್ಯಕ್ತಿ ಎಂಬ ಸಾಧನದ ಮೂಲಕ ಚಿತ್ರ, ಶಿಲ್ಪದ ಮೂಲಕವೂ ವ್ಯಕ್ತಪಡಿಸಬಹುದು. ಈ ಎಲ್ಲ ದಾರಿಗಳ ಮೂಲಕ ಪ್ರಕಟಪಡಿಸುವುದೇ ಅಭಿವ್ಯಕ್ತಿ ಅನ್ನಿಸಿಕೊಳ್ಳುತ್ತದೆ. ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ.  ಪ್ರಶ್ನೆ :  ಮಿಥುನ ಶಿಲ್ಪ ಗಳನ್ನು ಆಧುನಿಕ ಕಲಾ ಶೈಲಿಯಲ್ಲಿ ಹೆಚ್ಚು  ರೂಪಿಸಿದ್ದೀರಿ… ಹೇಗೆ ಇದರ ಪ್ರಭಾವ ಆಯಿತು. ಏನು ಉದ್ದೇಶ ? ಉತ್ತರ : ಮಿಥುನ ಶಿಲ್ಪಗಳು ಕ್ರಿ.ಶ.೨ ನೇ ಶತಮಾನದಷ್ಟು ಪ್ರಾಚೀನವಾದುದು. ಕೆಲವು ಶಿಲ್ಪಗಳು ದೇವಾಲಯದ ಗೋಪುರದ ಮೇಲೆ, ದೇವಾಲಯದ ಭಿತ್ತಿಯ ಮೇಲೆ ರಚಿಸಲಾಗಿದೆ. ಅವುಗಳ ಹಿಂದಿನ ಆಶಯ ಬೇರೆ.  ಹಿಂದಿನ ಕಾಲದಲ್ಲಿ ಲೈಂಗಿಕತೆ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಉದ್ದೇಶವಾಗಿತ್ತು. ನಾನು ರಚಿಸಿದ ಶಿಲ್ಪಗಳಲ್ಲಿ ಮಿಥುನ ಶಿಲ್ಪಗಳನ್ನು ಪ್ರಸ್ತುತ ಸನ್ನಿವೇಶ ನಡೆದಿರುವ ಘಟನೆ ಮತ್ತು ಲೈಂಗಿಕ ಕಿರುಕುಳ, ಸಮಾಜಕ್ಕೆ ಒಳಿತಾಗುವ ದೃಶ್ಯವನ್ನು ನನ್ನ ಶಿಲ್ಪಗಳಲ್ಲಿ ಕಾಣಬಹುದು.  ಪ್ರಶ್ನೆ :  ನಾಡಿನ ದೇವಾಲಯದಲ್ಲಿನ ಶೃಂಗಾರ ಮತ್ತು ಮಿಥುನ ಶಿಲ್ಪಗಳ ಪ್ರಭಾವ ನಿಮ್ಮ ಮೇಲಿದೆಯೇ? ಉತ್ತರ : ದೇವಾಲಯದಲ್ಲಿರುವ ಕಥಾನಕ, ದೇವತಾ ಶಿಲ್ಪಗಳು, ಮಿಥುನ ಶಿಲ್ಪಗಳು, ಮತ್ತು ಆ ಕಾಲದಲ್ಲಿ ರಚಿತವಾದ ಶಿಲ್ಪಶಾಸ್ತ್ರಗಳು ಗ್ರಂಥಗಳು ದೇವಾಲಯಗಳ ನಿರ್ಮಾಣ ಇವೆಲ್ಲ ಪ್ರಭಾವ ನನ್ನ ಕೃತಿಗಳ ಮೇಲಾಗಿದೆ.  ಪ್ರಶ್ನೆ :  ಕಲಾ ಪ್ರಕಾರದಲ್ಲಿ ಯಾವ ಮಾಧ್ಯಮ ನಿಮಗೆ ಇಷ್ಟ? ಉತ್ತರ : ಶಿಲಾ ಮಾಧ್ಯಮ  ಪ್ರಶ್ನೆ :  ಬದಾಮಿ , ಪಟ್ಟದಕಲ್ಲು ಶಿಲಾ ಬಾಲಕಿಯರಿಗೂ, ಹಳೇಬೀಡು, ಬೇಲೂರು ಶಿಲಾ ಬಾಲಕಿಯರಲ್ಲಿ ಯಾರು ಚೆಂದ? ಆ ಶಿಲ್ಪಗಳ ವಿಶೇಷತೆ ಏನು ? ಉತ್ತರ : ಚೆಂದ ಪ್ರಶ್ನೆಯ ಬರುವುದಿಲ್ಲ ಆಯಾ ಕಾಲಘಟ್ಟದಲ್ಲಿ ಪ್ರಚಲಿತದಲ್ಲಿರುವ ಕೆಲವು ಉಡುಗೆ ತೊಡುಗೆಗಳನ್ನು ಧರಿಸಿರುತ್ತಾರೆ. ಬಾದಾಮಿ ಚಾಲುಕ್ಯ ಶಿಲ್ಪಗಳಲ್ಲಿ ಉದ್ದ ನೀಳವಾಗಿ ವಸ್ತ್ರವಿನ್ಯಾಸಗಳು,  ಅಂದಿನ ಕಾಲದಲ್ಲಿ ಪ್ರಚಲಿತವಿದ್ದ ವೇಷಭೂಷಣಗಳು ಇಲ್ಲಿ ರಚನೆಯಾಗಿವೆ. ವಿವಿಧ ಭಾವನಾತ್ಮಕ ಸಂಬAಧವನ್ನು ಹೊಂದಿರುವ ಜೋಡಿ ಶಿಲ್ಪ, ಕೆಲವು ಸಂದರ್ಭಗಳಲ್ಲಿ ಒಂದು ಹೊಸ ರೀತಿಯ ಶಿಲ್ಪಗಳು ಇಂದಿಗೂ ನಾವು ಕಾಣುತ್ತೇವೆ. ಬೇಲೂರಿನ ಶಿಲ್ಪಗಳು ಪ್ರತ್ಯೇಕವಾದ ಶಿಲೆಯನ್ನು ಬಳಸಿ ರಚಿಸಿದ ಶಿಲ್ಪಗಳನ್ನು ತಂದು ಜೋಡಿಸಲಾಗಿದೆ. ಆದರೆ ಬಾದಾಮಿಯಲ್ಲಿ ಏಕಶಿಲಾ ಬೆಟ್ಟದಲ್ಲಿ ಅಖಂಡ ಶಿಲೆಯಲ್ಲಿ ಕೆತ್ತಿರುವುದು ವಿಶೇಷವಾಗಿದೆ. ಅಲ್ಲದೆ ಕಠಿಣವಾದ ಮರಳು ಶಿಲೆಯನ್ನು ಇಲ್ಲಿ ಶಿಲ್ಪಕ್ಕೆ ಬಳಸಿರುವುದು ಮಹತ್ವದ್ದು. ಇದು ಶಿಲ್ಪಕಾರನ ನೈಪುಣ್ಯ, ಕಠಿಣ ಪರಿಶ್ರಮ, ವಿಷಯ ಹಾಗೂ ಮಾಧ್ಯಮದ ಬಗ್ಗೆ ಇರುವ ತಿಳುವಳಿಕೆಯನ್ನು ಪ್ರತಿಬಿಂಬಿಸುತ್ತದೆ.  ಪ್ರಶ್ನೆ :  ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಉತ್ತರ : ಪ್ರಸ್ತುತ ರಾಜಕೀಯ ಜಾತಿಯಿಂದ ತುಂಬಾ ಹದಗೆಟ್ಟಿದೆ. ಕಲಾವಿದರಿಗೆ ಇಂದಿನ ಪರಿಸ್ಥಿತಿಯಲ್ಲಿ ಬೆಲೆ ಇಲ್ಲದಂತಾಗಿದೆ. ತಮ್ಮ ಸ್ವಾರ್ಥಕ್ಕಾಗಿ ಕಲಾವಿದರನ್ನು ಬಲಿಪಶು ಮಾಡುತ್ತಿದ್ದಾರೆ. ರಾಜಕೀಯ ಅನ್ನೋದೆ ಇರಬಾರದು ನನ್ನ ಪ್ರಕಾರ  ಪ್ರಶ್ನೆ :  ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ಉತ್ತರ : ಧರ್ಮ, ದೇವರು ಅಂದರೆ ಯಾವುದು ನಂಬಿಕೆ ಅನ್ನುವುದೆ ದೇವರು ನನ್ನ ಪ್ರಕಾರ. ಧರ್ಮವು ಮಾನವ ಸಮಾಜವನ್ನು ಸಂರಕ್ಷಿಸುವ ಒಂದು ಪ್ರಮುಖ ಸಾಧನವಾಗಿದೆ. ಧರ್ಮೋ ರಕ್ಷತಿ ರಕ್ಷತಃ ಅಂದರೆ ಧರ್ಮವನ್ನು ರಕ್ಷಿಸುವವರನ್ನು ಧರ್ಮವು ರಕ್ಷಿಸುತ್ತದೆ. ಧರ್ಮನಾಶವಾದಲ್ಲಿ ಜನಾಂಗವೇ ನಾಶವಾಗುವುದು. ಒಳ್ಳೆಯ ರೀತಿಯಲ್ಲಿ ಬದುಕುವುದೆ ಧರ್ಮ. ದಯಯೇ ಧರ್ಮದ ಮೂಲ. ದೇವನೊಬ್ಬ ನಾಮ ಹಲವು.  ಪ್ರಶ್ನೆ : ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಉತ್ತರ : ಪ್ರಸ್ತುತ ಸಾಂಸ್ಕೃತಿಕ ವಾತಾವರಣ,  ಅಕಾಡೆಮಿಗಳಲ್ಲಿಯೂ ಕೂಡ ರಾಜಕೀಯದಿಂದ ಹೊರತಾಗಿಲ್ಲ.  ಇತ್ತೀಚಿನ ದಿನಗಳಲ್ಲಿ ಯಾವುದೇ ಕಾರ್ಯಗಳಲ್ಲಿ ರಾಜಕೀಯ ಮುಖ್ಯ ಪಾತ್ರ ವಹಿಸುತ್ತಿದೆ.  ಪ್ರಶ್ನೆ :  ಚಿತ್ರ , ಕಲಾ ಲೋಕ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಉತ್ತರ : ಪ್ರಸ್ತುತ ಇತ್ತೀಚಿನ ದಿನಗಳಲ್ಲಿ ಕಲಾ ಲೋಕದಲ್ಲಿಯೂ ಕೂಡ ರಾಜಕೀಯ ಮಧ್ಯಸ್ಥಿಕೆ ವಹಿಸುತ್ತಿದೆ. ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ. ನಿಜವಾದ ಕಲಾವಿದರನ್ನು ಗುರುತಿಸುವುದು ಕಷ್ಟವಾಗಿದೆ.  ಪ್ರಶ್ನೆ :  ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಉತ್ತರ : ಮನುಜ ಜನ್ಮವು ಒಂದೆ ಎಂದು ತಿಳಿದುಕೊಂಡು ಧರ್ಮ ದಿಂದ ನಡೆಯಬೇಕು.  ಪ್ರಶ್ನೆ : ಕನ್ನಡ ಹಾಗೂ ಆಂಗ್ಲ ಭಾಷೆಯ ಕಲಾಪ್ರಕಾರದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕಲಾವಿದ ಯಾರು ? ಉತ್ತರ : ಕರ್ನಾಟಕದ ಶಿಲ್ಪಿ. ದೇವಲಕುಂದ ವಾದಿರಾಜ ಹಾಗೂ ಪಾಶ್ಚಿಮಾತ್ಯ ಕಲಾವಿದ  ಹೆನ್ರಿ ಮೋರ್. ********************** ************************************* ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ Read Post »

ಕಾವ್ಯಯಾನ

ಒಲವಿನ ಪಹರೆ

ಕವಿತೆ ರೇಶ್ಮಾಗುಳೇದಗುಡ್ಡಾಕರ್ ಅರಳುತ್ತಿದೆ ಹೃದಯದಹೂ ಬನ ನಿನ್ನನೆನೆನಾದಕ್ಷಣ ….. ಎಣಿಸಲಾಗದ ಕನಸುಗಳದಿಬ್ಬಣ ಹೊರಟಿದೆಮನದೂರಿನ ಹೆದ್ದಾರಿಯಲಿನೆನಪಿನ ಬಿಡಿ ಹೂಗಳಸ್ವಾಗತದೊಂದಿಗೆ …. ನಿನ್ನ ಎದೆಯ ಗೂಡಿನಲ್ಲಿಬಚ್ಚಿಟ್ಟ ನನ್ನ ಚಹರೆಯಪಟವ ಮತ್ತೆ ನೋಡುವಾಸೆಈ ಸಂಜೆಯ ತಂಪು ಕಂಪಿನಸುಸಮಯದಲ್ಲಿ ….. ಬಯಕೆಯ ಕುಡಿನೋಟವೊಂದುಸದ್ದಿಲ್ಲದೆ ನಿನ್ನ ಬಳಿಸಾರಿದೆಸ್ವೀಕರಿಸಿ ಒಪ್ಪಿಗೆಯ ಮುದ್ರೆಯಾರವಾನಿಸುವೆಯಾ ನಿನ್ನ ಬೊಗಸೆಕಂಗಳ ಬೆಳಕಿನಲ್ಲಿ…‌‌‌‌.. ***********

ಒಲವಿನ ಪಹರೆ Read Post »

ಇತರೆ, ಜೀವನ

ಆಚರಣೆಗಳಲ್ಲಿನ ತಾರತಮ್ಯ

ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು. ಪೂಜೆಯ ಆಚರಣೆಗಳು ನಮ್ಮ ಮನಸ್ಸಿಗೆ ಸಮಾಧಾನವಾಗಿದ್ದರಷ್ಷೆ ಸಾಲದು ,ಆ ಆಚರಣೆಗಳು ಮತ್ತೊಬ್ಬರ ಮನಸ್ಸಿಗೆ ನೊವನ್ನುಂಟು ಮಾಡಬಾರದು. ನಿರಾಕಾರನನ್ನು ಒಂದೊಂದು ರೂಪ ಕೊಟ್ಟು ಬಟ್ಟೆ ತೊಡಿಸಿ ಅಲಂಕರಿಸಿ ಒಂದೊಂದು ಹೆಸರು ಕೊಟ್ಟು ಪೂಜಿಸುವರಿಗೆ , ದೇವರನ್ನು ತಾವೆ ಸೃಷ್ಟಿಸುತ್ತಿದ್ದೆವೆ ಎಂಬ ಅರಿವಾಗದೆ..! ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕ  ,ಈಗ ಬರುತ್ತಿರುವ ವರಮಹಾಲಕ್ಷಿ ಹಬ್ಬವೂ ಅದಕ್ಕೊಂದು ಉದಾಹರಣೆ.ಲಕ್ಷ್ಮಿ ಎಂದರೆ ಅಡಂಬರದ ಪ್ರತಿಕ , ಭಾರಿ ಸೀರೆ ಉಡಿಸಿ ಒಡವೆ ವಸ್ತ್ರ ಗಳ ಧಾರಣೆ ಮಾಡಿ , ಹೂವಿನ ಮಂಟಪದಲ್ಲಿವಿರಾಜಮಾನಳಾಗಿಸಿ ,ಸುತ್ತಲೂ ದೀಪಗಳ ಅಲಂಕಾರ  ,ತಹರೆವಾರಿ ಅಡುಗೆಗಳ ನೈವೇದ್ಯ ,ವೆರೈಟಿ ತಿಂಡಿಗಳನ್ನು ಮೂರ್ತಿಯ ಮುಂದಿಟ್ಟು ತೃಪ್ತಿ ಪಡಿಸಿ (ಬೇರೆಯವರಿಗೂ ಕರೆದು ತೋರಿಸಿ ) ಅಥವಾ ಪಟ್ಟುಕೊಂಡು ಪೂಜೆಯ ಕಾರ್ಯ ಕೈಗೊಳ್ಳುತ್ತಾರೆ. ಆದರೆ ಅರಸಿನ ಕುಂಕುಮಕ್ಕೆ ಕೇವಲ ಮುತೈದೆಯರನ್ನೂ ಮಾತ್ರ ಕರೆಯಬೇಕು ಎನ್ನುವ ನಿಯಮ ಎಷ್ಟು ಸಮಂಜಸ..,! ಕೇವಲ ಗಂಡನ ಇರುವಿಕೆಯಿಂದಲೆ ಅವಳ ಮೌಲ್ಯ ಅರಿಯುವ ಈ ಸಮಾಜದಲ್ಲಿ  ಹೆಣ್ಣಿಗೆ ತನ್ನದೆಯಾದ ಸ್ವಂತ ಅಸ್ತಿತ್ವ ವೆ ಇಲ್ಲವೆ. ಮದುವೆಯಾದ ಮೇಲೆ ಅವಳು ಗಂಡನಿಂದ ಮುತೈದೆ ಪಟ್ಟ ಪಡೆದುಕೊಳ್ಳುತ್ತಾಳೆ .ಅವನು ಅಳಿದ ಮೇಲೆ ಆ ಪಟ್ಟ ಅವಳಿಂದ ಕಿತ್ತುಕೊಳ್ಳಲ್ಪಡುತ್ತದೆ.ಸಮಾಜವು ಕೂಡ ಅವಳು ಮುತೈದೆಯಾಗಿದ್ದರೆ ಮಾತ್ರ ಅವಳಿಗೆ ಶುಭ ಕಾರ್ಯ ಗಳಲ್ಲಿ ಪ್ರಾಮುಖ್ಯತೆ. ಎಷ್ಟೋ ಮಠಗಳಲ್ಲಿ ಮುತೈದೆಯರ ಕುಂಭಮೇಳ ಮತ್ತು ಮುತೈದೆಯರ ಉಡಿತುಂಬುವ ಕಾರ್ಯ ಕ್ರಮ ಆಯೋಜಿಸುತ್ತವೆ ,ಇಂತಹ ಆಚರಣೆಗಳ ಉದ್ದೇಶ ವೇನು..? ಸಮಾಜದಲ್ಲಿನ ಮೌಡ್ಯಗಳನ್ನು ತೊಲಗಿಸುವ ಪ್ರಯತ್ನ ಮಾಡಬೇಕಾದ ಮಠಗಳೆ ಇಂತಹ ಮೌಡ್ಯಕ್ಕೆ ಒತ್ತು ಕೊಟ್ಟರೆ ,ಬೇಲಿಯೆ ಎದ್ದು ಹೋಲ ಮೈದಂತೆ ಅಲ್ಲವೆ..! ಪೂಜೆಯ ಹೆಸರಿನಲ್ಲಿ ಮುತೈದೆಯರನ್ನು ಮಾತ್ರ ಕರೆದು ಅವರಿಗೆ ಉಡಿ ತುಂಬಿ ಭಾರಿ ಭೋಜನ ಉಣಬಡಿಸಿ (ಮುತೈದೆಯರ ಉಟದ ತಯ್ಯಾರಿ ವಿಧವೆಯರು ಮಾಡಬಹುದು ಆದರೆ  ಅವರು ಬಡಿಸುವದು ಮಾತ್ರ ನಿಷಿದ್ದ ) ತಮ್ಮ ಮುತೈದೆತನ ಧೀರ್ಘ ವಾಗಲೆಂದು ಬೇಡಿಕೊಳ್ಳುತ್ತಾರೆ ,ಇದೊಂದು ಆಶಾದಾಯಕ ಆಚರಣೆ ಆಗಿರಬಹುದು ಅವರವರ ಭಾವದಲ್ಲಿ.ಆದರೆ ಗಂಡನನ್ನು ಕಳೆದುಕೊಂಡ ಸ್ತ್ರೀಯು ತನ್ನನ್ನು ಇಂತಹ ಆಚರಣೆಗಳಿಂದ ದೂರವಿಟ್ಟಿರುವದನ್ನು ಹೇಗೆ ಸಹಿಸಿಯಾಳು. ಒಂದು ಮೂರ್ತಿಗೆ ಅಲಂಕಾರಮಾಡಿ ನೋಡಿ ಸಂತೋಷ ಪಡುವ ನಾವು , ಜೀವಂತವಾಗಿರುವ ಒಂದು ಜೀವ ಈ ಪೂಜೆಯ ಒಂದು ಭಾಗವಾಗಲಾರದೆ ದೂರದಲ್ಲಿ ನಿಂತು ಮೂಕವಾಗಿ ರೋಧಿಸುವ ತಲ್ಲಣದ ಅರಿವು ನಮಗಾಗದೆ..! ಮುತೈದೆಯರಿಗೆ ಮಾತ್ರ ಪ್ರಾಶಸ್ತ್ಯ ಕೊಟ್ಟು ತನ್ನನ್ನು ಕಡೆಗಾಣಿಸುವದರಿಂದ ಅವಳು ಮಾನಸಿಕವಾಗಿ ಕುಗ್ಗತ್ತಾಳೆ ,ಖಿನ್ನಳಾಗುತ್ತಾಳೆ ,ಅವಳ ಇಂತಹ ಸ್ಥಿತಿಗೆ ಈ ರೀತಿಯ ತಾರತಮ್ಯ ದ ಆಚರಣೆಗಳು ಪರೋಕ್ಷವಾಗಿ ಕಾರಣವಾಗುತ್ತವೆ. ಗಂಡನನ್ನು ಕಳೆದುಕೊಂಡ ಹೆಣ್ಣಿಗೆ ಸ್ಥೈರ್ಯ ತುಂಬಿ ಅವಳಲ್ಲಿ ಜೀವನ್ಮುಖಿ ಹುಮ್ಮಸ್ಸು ತುಂಬುವತ್ತ ನಮ್ಮ ಪ್ರಯತ್ನ ವಾಗಬೇಕು.ಅದು ಬಿಟ್ಟು ವಿಧವೆಯರನ್ನೂ ಕಡೆಗಾಣಿಸಿ ಮುತೈದೆಯರನ್ನೂ ವೈಭವಿಕರಿಸುವದು ಯಾವ ನ್ಯಾಯ..! ಯಾವ ದೇವರು ಈ ತಾರತಮ್ಯ ಸೃಷ್ಟಿಸಿದ್ದು..! ದೇವರೆನಾದರೂ ಮಾತಾಡುವಂತಿದ್ದರೆ ಇಂತಹ ಆಚರಣೆಗಳನ್ನು ಅವನು ಖಂಡಿತ ಖಂಡಿಸುತಿದ್ದನೆನೋ.. ನಡೆಸಿಕೊಂಡು ಬಂದ ಪೂಜೆ ಆಚರಣೆಗಳು ಕೆಲವರ ಬದುಕಿನ ಭಾಗವೆ ಆಗಿರುತ್ತವೆ. ಅವನ್ನು ಅಲ್ಲಗಳೆಯಲು ಅವರ ಮನಸ್ಥಿತಿ ಒಪ್ಪದು.ಆದರೆ ಈಗ ಎಲ್ಲರೂ ವಿದ್ಯಾವಂತರು ,ಹಿಂದಿನಿಂದ ಆಚರಿಸಿಕೊಂಡು ಬಂದ ಸ್ಂಪ್ರದಾಯ ಮುಂದುವರೆಸಿಕೊಂಡು ಹೋಗಬೇಕು ಎಂಬ ನಿಯಮವೇನಾದರು ಇದೆಯೆ…! ಆಚರಣೆಗಳಲ್ಲಿನ ಒಳಿತು ಕೆಡಕುಗಳನ್ನರಿತು ಮತ್ತೊಬ್ಬರ ಮನಸ್ಸಿಗೆ ನೋವಾಗದಂತೆ ,ಅಡಂಬರವಿಲ್ಲದೆ ತೋರಿಕೆಯಿಲ್ಲದೆ ,ಪೂಜೆಮಾಡಬಹುದಲ್ಲವೆ. ನಮ್ಮೊಳಗಿನ ನಿರಾಕಾರನು ಅದೆ ಬಯಸುವನು. ***********************************   .

ಆಚರಣೆಗಳಲ್ಲಿನ ತಾರತಮ್ಯ Read Post »

ಕಾವ್ಯಯಾನ

ಮಾನವೀಯತೆ ಮಾತನಾಡಲಿ

ಕವಿತೆ ಪ್ಯಾರಿ ಸುತ ಮುಂದೊಂದು ದಿನ ನಾವಿಬ್ಬರು ಹೀಗೆ ಸತ್ತುಬಿಡೋಣಅಲ್ಲಿಗೆ ಬರುವವರು ಹೂವಿನ ಹಾರ,ಕನಿಕರದ ಮಾತುಗಳು,ಕೆಲವಂದಿಷ್ಟು ಬಿಡಿಬಿಡಿ ಹೊಗಳಿಕೆಗಳು,ಅಲ್ಲೊಂದಿಲ್ಲೊಂದು ತೆಗಳಿಕೆಗಳು,ತಂದು ಅಳುವ ಮುನ್ನಇಲ್ಲವೇ ;ಸಪ್ಪಳ ಮಾಡುವ ಕಣ್ಣೀರು ಅಳುವೆಂಬಪದವಾಗಿ ಸತ್ತ ಕಿವಿಯನ್ನುಸೇರೋ ಮುನ್ನಹಾಗೆ ಮಣ್ಣು ಸೇರಿಬಿಡೋಣಅಲ್ಲಿ ನಾವಿಬ್ಬರು ತಬ್ಬಿಕೊಂಡು ಒಬ್ಬರ ಮುಖವಇನ್ನೊಬ್ಬರುಹೊಂದಿಸಿಕೊಂಡು ಬೆತ್ತಲಾಗಿ ಮಲಗೋಣ ಅಲ್ಲಿ ಉಸಿರಾಡುವ,ಹೆಸರು ಮಾಡುವ ,ಸಮಸ್ಯೆಗಳೇ ಸವಾಲಾಗುವ ಯಾವ ಪ್ರಮೇಯವೇ ಇಲ್ಲವಂತೆಹೆಚ್ಚುಕಡಿಮೆ,ಬಡವ ಧನಿಕ,ಮುಟ್ಟಿಸಿಕೊಳ್ಳದವಎಲ್ಲರೂ ಹೀಗೆ ಸಮಾನವಾಗಿ ಮಲಗಿ ಸುಖಿಸುತ್ತಿದ್ದಾರೆ.ಲಾಭ-ನಷ್ಟ ,ದುಃಖ-ದುಮ್ಮಾನ ಎಲ್ಲವೂ ಕೆಲಸಕ್ಕೆ ಬಾರದವುಗಳಲ್ಲಿತೇವಳುವ,ತೇಲುವ ದುಡಿಯುವ,ಹೊಡೆಯುವಅದೆಷ್ಟು ಜೀವಗಳು ಸುಮ್ಮನೆ ಮಲಗಿಕೊಂಡಿವೆ ಅಂತರ, ಜನ್ಮಾಂತರ ಎಲ್ಲವೂ ಇಲ್ಲಿಗೆ ಸಾಕು ಮಾಡಿಬಿಡೋಣಮಾತುಗಳಿಗೆ ಬಿಗಿಯಾದ ಕೊಂಡೆಯೊಂದನ್ನು ಬಿಗಿದುಅಲ್ಲಿಯೇ ನಿಲ್ಲಿಸಿಬಿಡೋಣಪ್ರೀತಿಯು ಮಾತನಾಡಲಿ,ಅದಕ್ಕೆ ಯಾವ ಸಣ್ಣ ಬಿಂದುಗಳನ್ನು ಕೊಟ್ಟು ನಿಲ್ಲಸದಿರೋಣಬೆನ್ನು ಹಿಂದೆ ಅವಿತು ಕುಳಿತ, ತನ್ನತಾನು ಮರೆತಮಾನವೀಯತೆಯೂ ಮೊದಲು ಬಂದು ನಿಲ್ಲಲಿಅದಕ್ಕೊಂದಿಷ್ಟು ಪದಗಳಾದರೂ ದಕ್ಕಲಿ ಮುಂದೊಂದು ದಿನ ನಾವಿಬ್ಬರು ಹೀಗೆ ಸಾಯುವ ಕಲ್ಪನೆತಟ್ಟನೆ ಕಣ್ಣುಮುಂದೆ ತಂದು ನಿಲ್ಲಿಸಿದೊಡನೆಮತ್ತಷ್ಟು ಪ್ರೀತಿ ನಮ್ಮಿಬ್ಬರಲ್ಲಿ ಗಟ್ಟಿಗೊಳ್ಳಬಹುದು ***************

ಮಾನವೀಯತೆ ಮಾತನಾಡಲಿ Read Post »

ಕಾವ್ಯಯಾನ

ಕುರ್ಚಿಗಳು ಅಂಗಿ ತೊಟ್ಟು..

ಕವಿತೆ ನೂತನ ದೋಶೆಟ್ಟಿ ಈ ಅಂಗಿಯ ದರ ಸಾವಿರದ ಐದು ನೂರುಕೇಳಿ ನೀನು ಕಣ್ಣರಳಿಸುತ್ತಿಬೆಲೆಯಿಂದೇನಾಗಬೇಕುತೊಟ್ಟವನು ನೀನಲ್ಲವೇ?ಕುರ್ಚಿಯ ಲೆಕ್ಕಾಚಾರ ಅದಲ್ಲ.ನಿನ್ನ ಓಡಾಟದ ಚುರುಕುಮುಟ್ಟಿರುತ್ತದೆ ಆ ಅಂಗಿಗೆಹಕ್ಕನ್ನು ಕೊಡಲಾರೆನಡೆ ನಿಧಾನವಿರಲಿಕುರ್ಚಿಯ ಡೊಳ್ಳು ಹೊಟ್ಟೆ ಕನಲುತ್ತದೆ.ನಿನ್ನದೋ ಯೋಗನಡೆದೀರ್ಘ ಉಸಿರೆಳೆದುತುಂಬಿಕೊಂಡ ಕಸರನ್ನುಹೊರಹಾಕುತ್ತ ನಿಶ್ವಾಸದಲಿಹಗುರವಾಗುವುದ ಕಲಿತಿದ್ದಿ.ಕುರ್ಚಿಗೆ ಧಗೆ ಹತ್ತಿದೆ.ಕುಂತಲ್ಲಿ ಇರುವ ಕುರ್ಚಿಯಬತ್ತಳಿಕೆಯ ತುಂಬಹಸಿರು ಶರಾದ ಬಾಣಗಳುನಿನ್ನೆಡೆಗೆ ತೂರಿ ಬಿಡಲುಕುರ್ಚಿಯೀಗ ಪಣ ತೊಟ್ಟಿದೆ.ಮತ್ತೀಗ ಉಚ್ಛ್ವಾಸದಲಿಎದೆಯ ಹುರಿ ಮಾಡುತ್ತಿನಾಟುವುದು ಅಲ್ಲಿಗೇ ತಾನೇ?ಜಯದ ಬೆನ್ನು ಹತ್ತಿದರೆಅಪಜಯದ ಭಯಕುರ್ಚಿಗೇನು ಗೊತ್ತು ನಿನಗೆ ಸೋಲಿಲ್ಲ.ತಳವೂರಿ ನಿಂತು ಜಯದ ಅಹಂಕಾರತನ್ನ ಸೋಲಿನ ಭಯಕುರ್ಚಿಯ ಉರುಟು ಮೈ ತುಂಬಹೊಳಪ ಲೇಪನಬಿಂಬ ಕಾಣಿಸುವಷ್ಟು ನೀನು ದೂರವಾಗುತ್ತಿನಿನಗೆ ಹತ್ತಿರವಾಗುತ್ತಿನಿನ್ನ ಸಾಂತ್ವನಕ್ಕೆಕುರ್ಚಿ ಗುಡುಗುತ್ತದೆ. ನೀನು ಬಾಗಬೇಕು, ಬೀಗುವುದಲ್ಲನಿನ್ನ ಜಾಗ ಅಲ್ಲಿನೆಲದ ಹಾಸಿರುವಲ್ಲಿ ನಿನಗೋ ಜಾಗದ ಗರಜಿಲ್ಲನಿನ್ನದು ಬಾನವಿಸ್ತಾರದ ಹಾದಿಪಚ್ಚೆ, ಪೈರುಗಳ ದಾರಿಜಲಪಾತದ ನಡೆಕಾಡತೊರೆಯ ನಿರುಮ್ಮಳತೆ ಕುರ್ಚಿಗಳೇ ಅಂಗಿ ತೊಟ್ಟುಎತ್ತರದ ಪೀಠದಲ್ಲಿರಿನಡೆದಷ್ಟೂ ಇರುವ ದಾರಿ ನನಗಿರಲಿಹಸಿರ ಕೈಯಾಡಿಸುತ್ತಹೂವ ಆಘ್ರಾಣಿಸುತ್ತಬದುಕ ಆಸ್ವಾದಿಸುತ್ತೇನೆನಿಮ್ಮ ಚೌಕಾಸಿನನಗೆ ಒಗ್ಗುವುದಿಲ್ಲ. **********

ಕುರ್ಚಿಗಳು ಅಂಗಿ ತೊಟ್ಟು.. Read Post »

ಕಾವ್ಯಯಾನ

ಆಹ್ಲಾದಕರ ಭಾವನೆಯಲಿ ನಾವು

ಕವಿತೆ ರಾಘವೇಂದ್ರ ದೇಶಪಾಂಡೆ ಗುನುಗುತಿದೆ ಹೆಸರೊಂದು ಹೃದಯ ಶಹನಾಯಿಯೊಳಗೆಬೆಸೆದಾಗಿದೆ ಆ ಹೆಸರಲ್ಲಿ ನನ್ನ ಬಾಳಉಸಿರುರೂಪಿಸಿಹನು ಭಗವಂತ ಪ್ರೀತಿ ಭರಿತ ಸಂಬಂಧವನುಒಳಗೊಂಡಿದೆ ನಮ್ಮೀ ಸಂಬಂಧವುಸೃಷ್ಟಿಕರ್ತನ ಫಲದೊಳಗೆ… ಹೇಳಿಕೊಳ್ಳಲಾಗದ ಏಕಾಂಗಿತನವಿದೆ ಪ್ರೀತಿ ತಿರುವಿನಲಿಒಂಟಿಯಾಗುವೆ…ಕೆಲವೊಮ್ಮೆ ನಾನು ಒಂಟಿತನದಲಿಇಚ್ಛೆಪಟ್ಟಿರುವನೊ ಕರ್ತೃ ಹೀಗೆಯೇ ಇರಬೇಕೆಂದುಆಗುವುದೊಮ್ಮೆ ನಿರ್ಜನ…ಮತ್ತೊಮ್ಮೆ ಸ್ವರ್ಗಲೋಕಆಳವಾದ ಪ್ರೀತಿ ಇದೆಯೆನೋ… ದುಖಃದಲಿ ದುಖಿಃಯಾಗಿರುವೆ ಸುಖಃದಲಿ ಸುಖಿಃನೀಗಿಸಿಕೊಂಡಿರುವೆ ಸಂತಸದ ಹಸಿವನು ನಿನ್ನ ಹಸನ್ಮುಖತೆಯಲಿಎದೆಬಡಿತ ನಿಲ್ಲುವುದು ವ್ಯಾಕುಲತೆಯಲಿ ನೀನಿರುವಾಗಹಂಚಿಕೊಳ್ಳುವ ಪ್ರಣಯಾಮೃತವನು ಜುಮ್ಮೆನ್ನುವ ಮಿಂಚಿನಲಿದಾಂಪತ್ಯ ದೀವಿಗೆಯ ಬೆಳಕಿನಲಿ… ಸುವರ್ಣ ಲೇಖನಗಳಾಗಿವೆ ಚೈತನ್ಯಭರಿತ ಹೆಜ್ಜೆಗಳುಕಥೆಯಾಗಿರುವೆವು ಬದುಕೆಂಬ ಲೇಖನದ ಹೊಳಪಿನಲಿವಿರಹಿಸೋಣ ಭರವಸೆಯ ಭಾವಲೋಕದಲಿಸಾಗೋಣ ಒಲವಿನ ಅಲೆಯಲಿ ನಾಳೆಂಬ ನಿರೀಕ್ಷೆಯಲಿಚುಂಬಿಸೋಣ ಆಗಸವ ಸ್ವಚ್ಛಂದದಿ ಹಾರಾಡುವ ಹಕ್ಕಿಗಳಾಗಿ ಹೆಸರೊಂದು ಕೊರೆದಾಗಿದೆ ಹೃದಯಾಂತರಾಳದಲಿತಳುಕುಹಾಕಿಕೊಂಡಿದೆ ಮೈ ಮನಸುಗಳಲಿ ನನ್ನ ಹೆಸರುಸೃಷ್ಟಿಯಾಗಿದೆ ಸಂಬಂಧವೊಂದು ಅದ್ಭುತ ಪರಿಕಲ್ಪನೆಯಲಿಜೊತೆಯಾಗಿರೋಣ ಜೀವಂತಿಕೆಯ ಕಾಲಚಕ್ರದೊಳಗೆಸಾಧಿಸಿ ತೋರಿಸೋಣ ಹೌದೆನ್ನುವ ಹಾಗೆ… **************

ಆಹ್ಲಾದಕರ ಭಾವನೆಯಲಿ ನಾವು Read Post »

ಕಾವ್ಯಯಾನ

ಕರುಣಾಮಯಿ

ಕವಿತೆ ಪೂಜಾ ನಾರಾಯಣ ನಾಯಕ ಆಸುಪಾಸಿನ ಬೇಲಿಯಲಿದ್ದಕಾಷ್ಟದ ತುಂಡಾಯ್ದುಕಲಬೆರಕೆ ಅಕ್ಕಿಯಲಿ ಬೆರೆತಿರುವ ಕಲ್ಲಾಯ್ದುಹೊಲದಲ್ಲಿ ಬೆಳೆದ ಕಾಯಿಪಲ್ಲೆಯ ಕೊಯ್ದುಹೊತ್ತಿಗೆ ಸರಿಯಾಗಿ ಕೈತುತ್ತು ಉಣಿಸಿದವಳುಕರುಣಾಮಯಿ ನನ್ನಮ್ಮ… ಕಡು ಬಡತನದ ಸಂಕಟದಲ್ಲೂಆಶಾ-ಭರವಸೆಯ ನುಡಿಯಾಡಿಸಾವಿರ ಕಷ್ಟ – ಕಾರ್ಪಣ್ಯಗಳ ನಡುವೆತಾನೊಬ್ಬಳೇ ಹೋರಾಡಿಹರಿದಿರುವ ಹರುಕು ಅಂಗಿಯ ತುಂಡಿಗೂಮೊಂಡಾದ ಸೂಜಿಗೂಮಧುರವಾದ ಬಾಂಧವ್ಯ ಬೆಸೆದವಳುಕರುಣಾಮಯಿ ನನ್ನಮ್ಮ.. ನಾ ಸೋತು ಕೂತಾಗಕರುಳಬಳ್ಳಿಯ ಅಳಲು ತಾ ಮನದಲ್ಲೆ ಅರಿತುನನ್ನಲ್ಲಿ ಕೂಡ ಛಲದ ಬೀಜವನು ಬಿತ್ತಿನನ್ನ ಸಾವಿರ ಕನಸುಗಳನ್ನುನನಸು ಮಾಡಲು ಹೊರಟು ನಿಂತವಳುಕರುಣಾಮಯಿ ನನ್ನಮ್ಮ.. ಕೂಡಿಟ್ಟ ಕಾಸಿನಲಿಶಾಲೆಗೆ ಪೀಜು ತುಂಬಿತನ್ನ ಹರುಕು ಸೀರೆಯ ಲೆಕ್ಕಿಸದೆನನಗೊಂದು ಹೊಸ ಅಂಗಿಯ ಕೊಡಿಸಿದೊಡ್ಡ ಅಧಿಕಾರಿಯ ಸ್ಥಾನದಲಿತಾ ಕೂಸ ನೋಡಬೇಕೆಂದುಆಸೆಯಿಂದ ಕಾಯುತ್ತ ಕುಳಿತವಳುಕರುಣಾಮಯಿ ನನ್ನಮ್ಮ…. ತನ್ನ ಜೀವದ ಕೊನೆಯ ಉಸಿರಿನ ತನಕತನ್ನ ಮಗುವಿನ ಸುಖಕ್ಕಾಗಿ, ಉದ್ಧಾರಕ್ಕಾಗಿ ದುಡಿಯುವಆ ತಾಯಿಯ ಪ್ರೀತಿಗೆ ಎಣೆ ಎಂಬುದಿಹುದೇನು?….ಅವಳ ಋಣ ತೀರಿಸಲು ಸಾಧ್ಯವಿಹುದೇನು?…ಅವಳ ಸ್ಥಾನವನ್ನು ಬೇರೆಯವರು ತುಂಬಲು ಅರ್ಹರೇನು?…ಅವಳಿಲ್ಲದ ಒಂದು ಕ್ಷಣ ಈ ಭೂವಿಯು ಬರೀ ಶೂನ್ಯವಲ್ಲವೇನು?…. ******

ಕರುಣಾಮಯಿ Read Post »

ಕಾವ್ಯಯಾನ

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ

ಕವಿತೆ ವಿದ್ಯಾ ಕುಂದರಗಿ ನಿರ್ಬಂಧಗಳ ಜಡಿದು ಬಂಧಿಸಲಾಗಿದೆ ಇಲ್ಲಿರೆಕ್ಕೆ ಬಡಿದು ಬಾನಿಗೆ ಹಾರಬೇಕಿದೆ ನನಗೆ ಕಣ್ಕಟ್ಟಿದ ಖುರಪುಟಕೆ ಒಂದೇ ಗುರಿಯುದೆಸೆದೆಸೆಗೆ ಕಣ್ಣಗಲಿಸಿ ನೋಡಬೇಕಿದೆ ನನಗೆ ಗೊರಕೆಯ ಸದ್ದಿಗೆ ಗೋಡೆಯಾಗುತ್ತಿದೆ ಪಟಲಗಾಳಿಪಟವಾಗಿ ಆಕಾಶ ಚುಂಬಿಸಬೇಕಿದೆ ನನಗೆ ರಾತ್ರಿಕನಸು, ಭಾವಗಳಿಗೆ ಕೊಡಲಾಗದ ಕಾವುಸಂಜೆ ಮುಂಜಾವಿಗೆ ಚಿಂವ್‌ಗುಟ್ಟಬೇಕಿದೆ ನನಗೆ ಚಿವುಟಿ ಚಿಮ್ಮಿದರೂ ಟಿಸಿಲೊಡೆಯುವ ಪಸೆಹಬ್ಬಿ ಆಕಾಶದೆತ್ತರಕೆ ಕೈ ಚಾಚಬೇಕಿದೆ ನನಗೆ ‘ಸಖಿ’ ನಿಸ್ಸಂಗವಾಗಿ ಕಳೆದ ಮಾಸಗಳೇಷ್ಟೋಒಮ್ಮೆ ಚಿತ್ತಪೌರ್ಣಿಮೆ ಆಗಬೇಕಿದೆ ನನಗೆ *******************

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ Read Post »

ಇತರೆ

ಗಝಲ ಧರ್ಮ..

ಗಝಲ ಗಳಲ್ಲಿ ಬಳಸುವ ಪಾರಂಪರಿಕ ಪಾರಿಭಾಷಿಕ ಪದಗಳು ಹಾಗೂ ಅವುಗಳ ಅರ್ಥ ಗಝಲ…. ಒಂದೇ ಪದ ಬಳಕೆಯ ಸಮ ಅಂತ್ಯವುಳ್ಳ ರದೀಫ್ ಮತ್ತು ಅನುಪ್ರಾಸ ದಿಂದ ಕೂಡಿದ ಕ಼ವಾಫಿ಼ ಯುಳ್ಳ ಒಂದೇ ವಜ಼್ನ ಅಥವಾ ಬಹರ್ ನಲ್ಲಿ ಬರೆದ ಅಶಾಅರ(ಶೇರ್ ನ ಬಹುವಚನ)ಗಳ ಸಮೂಹ. ಶಾಯಿರ್/ಸುಖನವರ…ಕವಿಶಾಯಿರಿ…. ಕಾವ್ಯಗಜ಼ಲ ಗೋ…ಗಝಲ್ ಗಾರಗಜ಼ಲ್ ಗೋಯೀ… ಗಝಲ್ ಬರೆಯುವ ಕ್ರಮ ಶೇರ… ಸಮಾನ ರದೀಪ್ ಮತ್ತು ವಿಭಿನ್ನ ಕ಼ವಾಫಿ಼ಯಿಂದ ಒಂದೇ ವಜ಼್ನ ಅಥವಾ ಬಹರ್ ಬಳಸಿ ಬರೆದ ದ್ವಿಪದಿಗಳು… ಅಶಆರ್….ಶೇರ್ ನ ಬಹುವಚನ ಫ಼ರ್ದ್… ಒಂದು ಶೇರ್ ಮಿಸ್ರಾ…. ಶೇರ್ ನ ಪ್ರತಿ ಸಾಲನ್ನು ಮಿಸ್ರಾ ಅನ್ನುತ್ತಾರೆ ಪ್ರತಿ ಶೇರ್ ಎರಡು ಮಿಸ್ರಾಗಳಿಂದ ಕೂಡಿರುತ್ತದೆ. ಮಿಸ್ರಾ-ಎ-ಊಲಾ….ಶೇರ ನ ಮೊದಲ ಸಾಲು..ಊಲಾ ಇದರ ಶಬ್ದಶಃ ಅರ್ಥ ಮೊದಲು ಮಿಸ್ರಾ-ಎ-ಸಾನಿ….ಶೇರ ನ ಎರಡನೆ ಸಾಲು.ಸಾನಿ ಇದರ ಶಬ್ದಶಃ ಅರ್ಥ ಎರಡನೆಯದು ಮಿಸರೈನ್… ಮಿಸ್ರಾದ ಬಹುವಚನರದೀಫ್… ಅನುಪ್ರಾಸವುಳ್ಳ ಮತ್ಲಾದ ಎರಡು ಮಿಸ್ರಾ(ಸಾಲು)ಗಳ ಕೊನೆಗೆ ಬರುವ ಹಾಗೂ ಗಝಲ್ ನ ಅನ್ಯ ಶೇರ ಗಳಲ್ಲಿ ಬರುವ ಸಮನಾಂತ ಪದ. ಇದು ಪೂರ್ತಿ ಗಝಲ್ ನಲ್ಲಿ ಪದ ಬದಲಾಗುವದಿಲ್ಲ… ಕಾಫಿಯಾ… ರದೀಫ್ ನ ಹಿಂದೆ ಬರುವ ಅಂತ್ಯಪ್ರಾಸ ವುಳ್ಳ ಪ್ರತಿ ಶೇರ್ ನ ಮಿಸ್ರಾ-ಏ-ಸಾನಿಯಲ್ಲಿ ಬರುವ ಬದಲಾಗುವ ಅಂತ್ಯಪ್ರಾಸವುಳ್ಳ ಪದ. ಒಟ್ಟಾರೆ ಒಂದು ಶೇರ್ ನ ಆಕರ್ಷಣೆ ಕಾಫಿಯಾ. ಇದರ ಸುಂದರ ಹೆಣಿಗೆ ಗಝಲ ನ್ನು ಪ್ರಭಾವಶಾಲಿಯನ್ನಾಗಿಸುತ್ತದೆ.ಇದು ಗಝಲ್ ನ ಬೆನ್ನೆಲುಬು. ಮತ್ಲಾ… ಗಝಲ ನ ಮೊದಲ ಎರಡು ಮಿಸ್ರಾಗಳು (ಸಾಲು).ಎರಡೂ ಸಾಲು ಕಾಫಿಯಾ ರದೀಫ್ ದಿಂದ ಕೂಡಿರುತ್ತವೆ. ಹುಸ್ನ -ಏ -ಮತ್ಲಾ… ಗಝಲ ನಲ್ಲಿ ಮತ್ಲಾದ ನಂತರ ಇನ್ನೊಂದು ಮತ್ಲಾ ಇದ್ದರೆ… ಅಂದರೆ ಒಂದು ಗಝಲ್ ಎರಡು ಮತ್ಲಾ ಗಳಿಂದ ಕೂಡಿದ್ದರೆ… ಆ ಎರಡನೆಯ ಮತ್ಲಾ ವನ್ನು ಹುಸ್ನ -ಏ -ಮತ್ಲಾ ಅನ್ನುತ್ತಾರೆ. ತಕಲ್ಲುಸ್…. ಕಾವ್ಯನಾಮ… ಅಂಕಿತನಾಮ. ಮಕ್ತಾ… ಗಝಲ ನ ಕೊನೆಯ ಶೇರ. ಇಲ್ಲಿ ಗಝಲ ಗಾರ ತನ್ನ ತಕಲ್ಲುಸ್ ಅನ್ನು ಮೊದಲ ಸಾಲು ಅಥವಾ ಕೊನೆಯ ಸಾಲಿನಲ್ಲಿ ಬಳಸಬಹುದಾಗಿದೆ. ಇದು ಒಂದು ಸುಂದರ ಶಾಬ್ದಿಕ ಅರ್ಥ ಬರುವಂತೆ ಬಳಸುವದು ಆತನ ಪ್ರತಿಭೆಯ ಅನಾವರಣ. ರಬ್ತ… ಅಂತಃಸಂಬಂಧಲಾಮ… ಲಘುಗಾಫ…. ಗುರುವಜ಼್ನ… ಮಾತ್ರೆಗಳ ಕ್ರಮರುಕ್ನ…. ಗಣ ಗಜಲ್ ನಾನು ಈ ನೆಲದ ಹಂಗು ಹರಿದುಕೊಂಡು ಹೋಗುತ್ತೇನೆ ಒಂದು ದಿನನೀನೂ ಇಲ್ಲಿ ಇರುವುದಿಲ್ಲ ಬಂಧದ ಎಳೆ ಕಳಚಿಕೊಂಡು ಹೊರಡುತ್ತೇನೆ ಒಂದು ದಿನ ಇರುವವರೆಗೂ ಅಷ್ಟಮದಗಳಿಂದ ಮೆರೆದಾಡಿ ನನ್ನತನವನ್ನು ಮರೆತಿದ್ದೇನೆನನ್ನದೆನ್ನುವ ಈ ಎಲ್ಲವನ್ನೂ ಇಲ್ಲಿಯೇ ಬಿಟ್ಟು ನಡೆಯುತ್ತೇನೆ ಒಂದು ದಿನ ತುತ್ತು ಅನ್ನಕ್ಕಾಗಿ ಹೈರಾಣಾಗುವವರ ಹೊಟ್ಟೆಯ ಮೇಲೆ ಹೊಡೆದಿದ್ದೇನೆಶಾಶ್ವತವಲ್ಲದ ಈ ಬದುಕಿಗಾಗಿ ಹೊಡೆದಾಡಿ ಬರಿಗೈಯಲ್ಲಿ ಸಾಗುತ್ತೇನೆ ಒಂದು ದಿನ ಬೇಕು ಬೇಕು ಎನ್ನುವ ದುರಾಸೆಯಲ್ಲಿ ಮಾನವ ಪ್ರೀತಿಯನ್ನು ಮರೆತಿದ್ದೇನೆಇಲ್ಲಿ ಸ್ವರ್ಗ ನಿರ್ಮಿಸಲಾಗದೆ ಗೋಡೆಗಳನ್ನು ಕಟ್ಟಿಕೊಂಡು ಪಯಣಿಸುತ್ತೇನೆ ಒಂದು ದಿನ ರಾಜ ಮಹಾರಾಜ ಸಂತ ಫಕೀರ್ ಯಾರೂ ಇಲ್ಲಿ ಉಳಿಯಲಿಕ್ಕಾಗಲಿಲ್ಲಸಾವಿನಲ್ಲೂ ಸಾರ್ಥಕತೆ ಪಡೆಯದೆ ಅರುಣಾ ಮಣ್ಣಲ್ಲಿ ಮಣ್ಣಾಗಿ ಬಿಡುತ್ತೇನೆ ಒಂದು ದಿನ…. ಅರುಣಾ ನರೇಂದ್ರ ಅವರ ಗಝಲ್ ಉದಾಹರಣೆಗೆ ನಾನು ಈ ನೆಲದ ಹಂಗು ಹರಿದುಕೊಂಡು ಹೋಗುತ್ತೇನೆ ಒಂದು ದಿನ…..ಇದು ಮಿಸ್ರಾ ಹಾಗೂ ಮಿಸ್ರಾ-ಏ-ಊಲಾ ನೀನೂ ಇಲ್ಲಿ ಇರುವುದಿಲ್ಲ ಬಂಧದ ಎಳೆ ಕಳಚಿಕೊಂಡು ಹೊರಡುತ್ತೇನೆ ಒಂದು ದಿನ…ಇದು ಎರಡನೆಯ ಮಿಸ್ರಾಮಿಸ್ರಾ-ಏ-ಸಾನಿ… ಗಝಲ್ ನ ಈ ಎರಡೂ ಮಿಸ್ರಾಗಳು ಸೇರಿ ಶೇರ ಆದವು ಗಝಲ ನ ಮೊದಲ ಶೇರ ನ್ನು ಮತ್ಲಾ ಅಂತ ಕರೆಯುತ್ತೇವೆಐದು ಅಶಅರ ಗಳುಳ್ಳ ಗಝಲ್ ಇದು… ರದೀಫ್… ಒಂದು ದಿನಕಾಫಿಯಾ…. ಹೋಗುತ್ತೇನೆ, ಹೊರಡುತ್ತೇನೆ, ನಡೆಯುತ್ತೇನೆ,ಸಾಗುತ್ತೇನೆ,ಪಯಣಿಸುತ್ತೇನೆ,ಮಣ್ಣಾಗಿಬಿಡುತ್ತೇನೆ. ತಖಲ್ಲುಸ್… ಅರುಣಾ ಮಕ್ತಾ… ರಾಜ ಮಹರಾಜ ಸಂತ ಫಕೀರ್ ಯಾರೂ ಇಲ್ಲಿ ಉಳಿಯಲಿಕ್ಕಾಗಲಿಲ್ಲ…ಸಾವಿನಲ್ಲೂ ಸಾರ್ಥಕತೆ ಪಡೆಯದೆ ಅರುಣಾ ಮಣ್ಣಲ್ಲಿ ಮಣ್ಣಾಗಿ ಬಿಡುತ್ತೇನೆ ಒಂದು ದಿನ…********************** ಮೆಹಬೂಬ್ ಬೀ

ಗಝಲ ಧರ್ಮ.. Read Post »

ಕಾವ್ಯಯಾನ

ಆಯ್ಕೆ

ಕವಿತೆ ಮಾಲತಿಹೆಗಡೆ ಹೆತ್ತವರ ಹುಟ್ಟೂರವ್ಯಾಮೋಹ ಬಿಟ್ಟವರು..ಕತ್ತರಿಸಿ ನೆಟ್ಟ ಗಿಡದಂಥವರುನಗರವಾಸಿಗಳಿಗೊಲಿದವರುಹೋದೆಡೆಯೆಲ್ಲ ಚಿಗುರುವಹಟದಲ್ಲಿ ಬೇರು ಬೆಳೆಸಿಕೊಂಡವರಲ್ಲವೇ ನಾವು ? ಅಂಗೈ ಗೆರೆ ಮಾಸುವಷ್ಟುಪಾತ್ರೆ ಬಟ್ಟೆ ಉಜ್ಜಿ ಉಜ್ಜಿಮುಂಬಾಗಿಲು ತೊಳೆದುರಂಗೋಲಿಯಿಕ್ಕಿಕಟ್ಟಡವನ್ನುಮನೆಯಾಗಿಸಿಯೂತವರು ಮನೆ ಯಾವೂರು?ಗಂಡನ ಮನಿ ಯಾವೂರು?ಪ್ರಶ್ನೆ ಎದುರಿಸುತ್ತಅಡುಗೆಮನೆ ಸಾಮ್ರಾಜ್ಯದಲಿಹೊಗೆಯಾಡುವ ಮನಕ್ಕೆತಣ್ಣೀರೆರೆಚಿ ಹೂನಗೆ ಬೀರುವವರಲ್ಲವೇನಾವು? ತೊಟ್ಟಿಲು ತೂಗಿ,ಹೆಮ್ಮೆಯಲಿ ಬೀಗಿವಿರಮಿಸಲೂ ಬಿಡುವಿರದೇಸಂಸಾರ ಸಾವರಿಸಿಹೀಗೆಯೇ ಸಾಗುವುದುಹಣೆಬರಹ ಎನ್ನುತ್ತಬದುಕುವ‌ ನಗರವಾಸಿ ನಾರಿಯರಲ್ಲವೇ ನಾವು? *************

ಆಯ್ಕೆ Read Post »

You cannot copy content of this page

Scroll to Top