ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

ಗುರ್ ಮೆಹರ್ ಅಂತರಂಗ ಕನ್ನಡ ಮೂಲ: ಶೋಭಾ ಹೀರೆಕೈ ಇಂಗ್ಲೀಷಿಗೆ: ಸಮತಾ ಆರ್ ಗುರ್ ಮೆಹರ್ ಅಂತರಂಗ ಅವರಿವರ ಬಂದೂಕ ತುದಿಯಲ್ಲಿಹೂವಿನ ಮೊನಚಿತ್ತೇ?ಇಲ್ಲವಲ್ಲಮತ್ತೇಯುದ್ಧವನ್ನು ಯುದ್ಧವಲ್ಲದೆಇನ್ನೇನನ್ನಲಿ? ಯಾವ ಕಣಿವೆ ಬದುಕಿಸುವುದುನಾ ಕಳಕೊಂಡವಾತ್ಸಲ್ಯವನ್ನು ?ಯಾವ ಕುರ್ಚಿಯ ಬಳಿಕೇಳಲಿ ನ್ಯಾಯ? ಬೇಕೇ?ನಮ್ಮ ಬಿಸಿ ರಕ್ತಕೂಕೊಳಚೆಯ ಗಬ್ಬುಕಪ್ಪು -ಕೇಸರಿಗಳ ಜಿದ್ದಾ ಜಿದ್ದು ಬಣ್ಣದ ಮೇಲೂ ರಾಡಿಯಎರಚುತಿರುವವರಾರೋ?ಈಚೆಗಿರುವುದೇ ಅಚೆಆಚೆಗಿರುವುದೇ ಈಚೆಈಚೆ ಅಚೆಗಳಾಚೆಅದೇ ಮಣ್ಣು ,ಅದೇ ನೀರುಅದೇ ಗಂಧ, ಅದೇ ಗಾಳಿರಕ್ತ ಬೇರೆಯೇ ‌ಮತ್ತೆ? ಬೇಕೆ ಯುದ್ಧ?ನನ್ನಂಥ ತಬ್ಬಲಿಗಳ ಕೇಳಿ ಹೇಳು ಅಶೋಕ‘ಕಳಿಂಗ’ ನಿನ್ನ ಕಾಡಿದಂತೆ‘ಕಾರ್ಗಿಲ್ ‘ ನನ್ನ ಕಾಡುತ್ತಯುದ್ಧವನ್ನು ಯುದ್ಧವೆನ್ನದೆ ಇನ್ನೇನನ್ನಲಿ? —– (ಗುರ್ ಮೆಹರ್: ಕಾರ್ಗಿಲ್ ಯುದ್ಧದಲ್ಲಿ ತಂದೆಯನ್ನು ಕಳೆದುಕೊಂಡು ಅನಾಥಳಾದ ಮಗಳು) Quest of Gur Mehr.. Did the tips of theirs and our gunsHave the sharpness of a petal?No..never.. Then what else can I callA war other than a war? Which valley will reviveThe affection that I lostWhich chair shall I approach for just? Do we need the stench of the sewageFight of the black and saffronTo taint our fresh warm blood? Who is throwing slime on even the coloursWhatever is here, it’s also there,Whatever is there it’s also here, Beyond here and thereSoil, water,odour and air, are all same,Then how can the blood be different? Need a war?Ask orphans like me. Tell me AshokaJust like Kalinga haunted youWill the Kargil haunt me.. What else can I call a warOther than a War… ***********************************************

ಅನುವಾದ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ತೆರವುಗೊಳಿಸಿದ್ದು ಡಾ.ಗೋವಿಂದಹೆಗಡೆ ಆ ವಿಶಾಲ ಮೂಲೆ ನಿವೇಶನವನ್ನುತೆರವುಗೊಳಿಸಲಾಯಿತುತ್ರಿಭುಜದಂತಿರುವ ಸೈಟು. ಎರಡು ಕಡೆರಸ್ತೆ. ವಿಶಾಲ ಹಳೆಯ ಮನೆಒತ್ತಾಗಿ ಬೆಳೆದ ಹಲವು ಗಿಡ ಬಳ್ಳಿಹೂವು ಚಿಗುರು ಮೊದಲುಮಲ್ಲಿಗೆ ಹಂಬು ನಂದಿಬಟ್ಟಲುಗುಲಾಬಿ ದಾಸವಾಳ ಕ್ರೋಟನ್‌ಗಳಿಗೆಮುಕ್ತಿ ಸಿಕ್ಕಿದ್ದು. ಮರುದಿನ ಮನೆ ಬಿದ್ದುಗುಪ್ಪೆ ಮಣ್ಣು, ಸೊಟ್ಟ ತಂತಿಗಳಅಸ್ಥಿಪಂಜರ. ನಾಲ್ಕು ದಿನ ಕಳೆದಾಗ ಹಸಿರೇ ಮೈಯಾಗಿದ್ದಮಾವು ಮಾಯ. ಹಬ್ಬದ ಈ ದಿನಗಳಲ್ಲಿಪುಕ್ಕಟೆ ಸೊಪ್ಪು ಸಿಕ್ಕ ಸಂಭ್ರಮದ ನೆರೆ.ಅವರಿವರ ತೋರಣ, ಮಂಟಪಗಳಲ್ಲಿ ಖುಷಿಸಿರಬಹುದೇಮಾವಿನ ಚಿಗುರು,ಬಾಡುವ ಮುನ್ನ ಇಂದುಅಂಚುಗಳಲ್ಲಿ ಕಾವಲಿಗೆ ಎಂಬಂತೆನಿಂತಿದ್ದ ಹತ್ತಾರುತೆಂಗಿನ ಮರಗಳು ನೆಲ ಕಂಡವುಅಳತೆ ಮಾಡಿ ಸಮವಾದ ತುಂಡು-ಗಳಾಗಿ ಅವನ್ನು ಕತ್ತರಿಸಲಾಗಿತ್ತು ಹೀಗೆ ಇಂಚಿಂಚೂ ತುಂಬಿದ್ದೆಲ್ಲಖಾಲಿಯಾದ ಅಲ್ಲಿ ಈಗ ಉಳಿದದ್ದು-ಗೇಟಿನ ಒಂದೇ ರೆಕ್ಕೆಒಳಗೆ ಅಷ್ಟು ದೂರದಲ್ಲಿಒಂಟಿ ನಿಂತ, ಗಿಡವಿಲ್ಲದ ಬೋಳು ತುಳಸೀಕಟ್ಟೆ *****************************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಮಾಸಂ ಎದೆಯ ಗೂಡಲಿ ಅವಿತಿರು ಕಾಣದಂತೆ ಯಾರಿಗೂಸಣ್ಣದನಿಲಿ ಹಾಡುತಿರು ಕೇಳಿಸದಂತೆ ಯಾರಿಗೂ ಒಪ್ಪಿದ ಮನಗಳ ಆಳವನು ಇವರಾರು ಅರಿಯರುಕಣ್ಣ ಸನ್ನೆಯಲಿ ಕರೆಯದಿರು ಎಂದಿನಂತೆ ಯಾರಿಗೂ ಲೋಕವು ಹುಚ್ಚನೆಂದು ಕೂಗಿದರೂ ಕೊರಗದಿರುಬೆಸುಗೆಯಲಿ ಹೆದರದಿರು ಬೆಪ್ಪನಂತೆ ಯಾರಿಗೂ ಇಂದು ಇರುವಿಕೆಯನು ತೋರಬೇಕಾಗಿದೆ ಜಗಕೆಬಂಧನದಲಿ ನೀ ಬೆಳಗುತಿರು ಸುಡದಂತೆ ಯಾರಿಗೂ ಬಳಲದಿರು ಪ್ರೇಮವಿರದ ಬಿರುಸಿನ ಗಡಸು ನುಡಿಗಳಿಗೆತಾಯಿ ಮಡಿಲಲಿ ಒರಗಿರು ಬೇಸರಿಸದಂತೆ ಯಾರಿಗೂ *****************

ಗಝಲ್ Read Post »

ಅನುವಾದ

ಅನುವಾದ ಸಂಗಾತಿ

ಶಾಪಗ್ರಸ್ಥ ಶಿಲೆ ಕನ್ನಡದ ಮೂಲ : ಸ್ವಾಮಿ ಪೊನ್ನಾಚಿ ಇಂಗ್ಲೀಷ್ಗೆ ಅನುವಾದ : ಮಾಲತಿ ಶಶಿಧರ್ ಶಾಪಗ್ರಸ್ಥ ಶಿಲೆ ಈ ಹೂವು ಪರಿಮಳ ಸ್ಪರ್ಶ ಕನಸು ಬೆಳದಿಂಗಳುಯಾವುದೂ ಬೇಡನನ್ನ ಪಾಡಿಗೆ ನನ್ನ ಬಿಟ್ಟುಬಿಡುಈ ಚಿಗುರು ವಸಂತ ತಲೆದೂಗುವವರೆಗೂತಲೆ ಮರೆಸಿಕೊಳ್ಳುತ್ತೇನೆ ನೀನೇನೋ ಮರೆತಂತೆ ನಾಟಕವಾಡಿದೆನಟನೆ ಬರದ ನಾನೇನು ಮಾಡಲಿನಿನ್ನ ಹೆಜ್ಜೆ ಗುರುತನ್ನು ಎಣಿಸಿಕೊಂಡುಬಂದ ತಪ್ಪಿಗೆನನಗೀಗ ದಿಕ್ಕು ತಪ್ಪಿದೆಹಿಂತಿರುಗುವ ದಾರಿಯನ್ನಾದರೂ ಒಮ್ಮೆ ತೋರು ಒಮ್ಮೆಗೆ ನೀನು ಮರಣದಂಡನೆಯತೀರ್ಪು ನೀಡಬೇಕಿತ್ತುಆಜೀವ ಶಿಕ್ಷೆ ಅನುಭವಿಸುವ ತ್ರಾಣಈಗ ನನ್ನಲ್ಲಿಲ್ಲ ಈ ವಸಂತದಲ್ಲಿ ಪ್ರೇಮಿಗಳು ಪರಸ್ಪರಪ್ರೇಮ ನಿವೇದನೆ ಮಾಡಿಕೊಳ್ಳುತ್ತಿದ್ದರೆಶಾಪಗ್ರಸ್ಥ ಶಿಲೆಯಂತೆ ಕುಳಿತಿದ್ದೇನೆಎಂದಾದರೊಂದು ದಿನನಿನ್ನ ಪಾದಸ್ಪರ್ಶವಾಗಬಹುದೆಂದು —————– A statue of curse This flower, fragrance, proximity,dream, moonshineI dont need any of theseLeave me aloneLet me abscond till thespring nod its head You pretended like you have forgottenWhat shall i do without knowing the pretenceI have got misdirected for thesake of counting your footprintsShow me the path to come back you could’vegiven the gallows at onceNow I dont have power tosustain the life-sentence In this spring am sitting like astatue of cursewaiting to touch your feetWhen the lovers are makingthe petition of love with each other.. *********************

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ನದಿಯೊಳಗಿನ ಹರಿವು ಕನ್ನಡ ಮೂಲ: ಗೀತಾ ಡಿ.ಸಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಇರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಸದಾ..ತನ್ನೊಳಗಿನಪಸೆಯಾರದಂತೆಬೆಚ್ಚಗಿನಒರತೆಬತ್ತದಂತೆತನ್ನಪಾತ್ರದರಿವುಹರಿವಿನಜೀವಂತಸೆಲೆಯನುಸಂಯಮದಿಕಾಯ್ದುಕೊಳ್ಳುತ್ತದೆದಿವ್ಯಮೌನದಧ್ಯಾನದಲಿಸದಾ..ಅಂದುಕೊಳ್ಳುತ್ತಾರೆಜನಇಲ್ಲಸಲ್ಲದ್ದನ್ನು..ಬತ್ತಿದಂತಿರುವನದಿಯಕಂಡುಮರುಕಪಡುತ್ತಾರೆ.ಕರುಣೆಯುಕ್ಕಿಸಿಲೊಚಗುಡುತ್ತಾರೆ.ಉಕ್ಕಿಹರಿವಂತೆಸುಖಾಸುಮ್ಮನೆಪ್ರಾರ್ಥಿಸುತ್ತಾರೆ!ಮೊರೆಯದುನದಿಮೊಳೆಯದುಬೀಜಅದರಷ್ಟಕ್ಕೆಅದು..ಇಲ್ಲ. ಇಲ್ಲ..ನದಿತಾನಾಗಿಯೇಎಂದೂಬತ್ತುವುದಿಲ್ಲ.ಕಾಯುತ್ತದೆಜೀವಚೈತನ್ಯದರಸವುಕ್ಕುವಗಳಿಗೆಗಳಿಗಾಗಿ..ಇದ್ದಕ್ಕಿದ್ದಂತೆಮೋಡಗಟ್ಟಿಹನಿಯುದುರಿದ್ದೇತಡಭೋರ್ಗರೆಯುತ್ತದೆ.ಸಂಭ್ರಮಿಸುತ್ತದೆಸೋಂಕುವಗಾಳಿಗೆರವಿಕಿರಣದತೆಕ್ಕೆಯೊಳಗಿನಬೆಚ್ಚಗಿನಭಾವಕ್ಕೆಮೊಳೆವಬೀಜದರಿವಿಗೆಉದುರಿದಹನಿಮಣ್ಣಿಗೆಬಿದ್ದಬೀಜಕಾಯ್ದಿಟ್ಟನೀರತೇವಮುಪ್ಪುರಿಗೊಂಡುಮೊಳೆವಜೀವತನ್ನೊಳಗೇಸಕಲವನುಕಾಯ್ದುಪೊರೆವಜೀವಜಲಧುಮ್ಮಿಕ್ಕಿಹರಿಯುತ್ತದೆ..ತಡೆಯಿಲ್ಲದೆಹರಿವರಭಸಕ್ಕೆಉರುಳುರುಳಿಕೊಚ್ಚಿಹೋಗುತ್ತವೆಪ್ರಾರ್ಥನೆಗೂಉಳಿಯದಗುಡಿಗೋಪುರಗಳು..ಉಕ್ಕುಕ್ಕಿಹರಿವನದಿ.. ಭಯ, ವಿಸ್ಮಯದನಡುವೆಯೂಆಡಿಕೊಳ್ಳುತ್ತಾರೆಅರಿವಿರದಜನ..ಸುಮ್ಮನಿರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಜೀವಂತಹರಿಯುತ್ತಾತನ್ನೊಳಗನ್ನುಬೆಚ್ಚಗೆಕಾಯ್ದುಕೊಳ್ಳುತ್ತಾಸದಾ…————- The flow of the river River is beingAs it isBy itselfAlways.Never allows todry up its inner wetnessAnd warm wellspringWith patiencedefendsthyselfthe flow and lifespringIn the meditation of devine silenceAlwaysBut they thinkAbsurd…the people!By looking at itsDrynessFeel pityMurmer atwith mercyful sightPrays for itsQuick outflowNever the riverRoars..Never the seedSproutsas by themselfNo..no..River never everBecomes dry by itself.Awaits for themoments of delightfulLifespirits.When the cloudedMass comes togetherand starts to drizzle,It roars vigorously.Rejoices itself tothe blasts of windthe warm embrace ofSunraysconsciouness of germinating seedfallen waterdropssown seedsReserved dampnessComes togetherSprouts the life.Having all withinThe protective and caringThe lifespringOutflows vigorouslyRushing riverflows fastwithout pauserolls out, all temple domeswashawayeven the prayers chantscan’t save them Still they talkFoolishlyThese people…amid the fear and wonder!River keepsItself mumas it isalwaysKeeps itself alivePreserves its innerWarmthAnd flows alwaysby itself.******************************

ಅನುವಾದ ಸಂಗಾತಿ Read Post »

ಹೊಸ ದನಿ-ಹೊಸ ಬನಿ

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ ರಜನೀಶ್, ಬುದ್ಧ, ಜಿಡ್ಡು ಕೃಷ್ಣಮೂರ್ತಿ, ಯೂಜಿ ಮುಂತಾದವರು ಪ್ರಚಾರಕ್ಕೆ ಬಂದರು. ಇವರೆಲ್ಲ ಹೇಳಿದ್ದನ್ನು ಕತೆಗಳಲ್ಲೂ ಕವನಗಳಲ್ಲೂ ಲೇಖನಗಳಲ್ಲೂ ತಂದು ಕೊನೆಗೆ ಆ ಹೆಸರುಗಳನ್ನು ಕೇಳಿದರೆ ಕಿರಿಕಿರಿಯಾಗುವಂತೆ ಮಾಡುವಲ್ಲಿ ನಮ್ಮ ಲೇಖಕರೂ ಸಾಹಿತಿಗಳೂ ಯಶಸ್ವಿಯಾದರು.ಈಗಲೂ ಕೆಲವರು ಲೋಹಿಯಾವಾದವನ್ನು ಮತ್ತೆ ಕೆಲವರು ಅಂಬೇಡ್ಕರರನ್ನೂ ಕೆಲವರು ಗಾಂಧಿಯನ್ನೂ ಹೀಗೇ ಬಳಸುತ್ತ, ಬೆದಕುತ್ತ ತಮ್ಮ ಬರವಣಿಗೆಗೆ ಬಳಸುತ್ತ ಆ ಅಂಥವರ ಹೆಸರನ್ನೇ ಮತ್ತೆ ಮತ್ತೆ ಹೇಳುತ್ತ ನಿಜಕ್ಕೂ ಬೆನ್ನೆಲುಬಾಗಿಟ್ಟುಕೊಳ್ಳಬೇಕಿದ್ದ ಆ ಹಿರೀಕರ ಆದರ್ಶಗಳು ಕನಸುಗಳೂ ಮರೆಯಾಗಿ ಕೇವಲ ಹೆಸರೇ ಮೆರೆಯತೊಡಗಿದ್ದನ್ನೂ ನಾವು ಬಲ್ಲೆವು. ಈ  ಇಂಥ ಕಾರಣಕ್ಕೇ  ಅಂಥ ಸಾಹಿತಿಗಳೂ ಅವರು ಬರೆದ ಸಾಹಿತ್ಯವೂ ಶಾಶ್ವತವಾಗಿ ನಿಲ್ಲಲಿಲ್ಲ. ಬರಿಯ ಸಿದ್ಧಾಂತಗಳನ್ನು ನಂಬಿದ ಸಾಹಿತ್ಯಕೃತಿಗಳು ಕಣ್ಮರೆಯಾಗುವುದು ಸಹಜ ಮತ್ತು ಸ್ವಾಭಾವಿಕ. ಇಂಥದೇ ಪ್ರಯೋಗಗಳು ನವೋದಯದ ಕಾಲದಲ್ಲೂ ನಡೆದದ್ದಕ್ಕೆ ಪುರಾವೆಗಳಿವೆ. ನವ್ಯದಲ್ಲಂತೂ ಪದ್ಯ ಎಂದರೆ ಪ್ರಾಸದ ಹಂಗಿಲ್ಲದ, ಅಲಂಕಾರದ ಕಷ್ಟ ಬೇಕಿಲ್ಲದ ಗದ್ಯದ ಗಟ್ಟಿ ಸಾಲು ಎಂಬ ಹುಂಬ ವ್ಯಾಖ್ಯೆಯನ್ನು ಯಾರೋ ಕೆಲವರು ಹೇಳಿದ್ದನ್ನೇ ನಂಬಿ ಗದ್ಯದ ಸಾಲನ್ನು ತುಂಡು ತುಂಡಾಗಿಸಿ ಬೇಕಾದಂತೆ ತಿರುಚಿದ ಉದಾಹರಣೆಗಳೂ ಇವೆ. ಈ ಇಂಥದೇ ಕಳೆಯನ್ನು ಬಂಡಾಯದ ಅದ್ಭುತ ಬೆಳೆಯಲ್ಲೂ, ದಲಿತ ಧ್ವನಿಯ ಸ್ಪಷ್ಟತೆಯ ನಡುವೆ ರೂಕ್ಷತೆಯನ್ನೂ ಕಂಡಿದ್ದೇವೆ. ಇದು ಕಾಲದಿಂದ ಕಾಲಕ್ಕೆ ಕವಿತೆಯ ರೀತಿ ಬದಲಾಗುವುದರ ಮತ್ತು ಕಾವ್ಯದ ರಸಗ್ರಹಣದ ಸ್ವರೂಪದ ಬದಲಾವಣೆ. ಸದ್ಯದ ಕಾವ್ಯದ ಹರಿಯುವಿಕೆಯಲ್ಲಿ ತೀವ್ರತೆ ಇದೆಯೇ? ಬದುಕನ್ನು ಸಾಹಿತ್ಯ ಬಿಂಬಿಸುತ್ತದೆ ಎನ್ನುವ ವ್ಯಾಖ್ಯೆಯ ಪುನರ್ಮನನ ಹೇಗೆ ಸಾಧ್ಯವಿದೆ? ಎನ್ನುವ ಪ್ರಶ್ನೆಗಳನ್ನು ಇಟ್ಟುಕೊಂಡಿರುವ ಈ ಅಂಕಣದ ಮೂಲ ಉದ್ದೇಶವೇ ವರ್ತಮಾನದ ಕಾವ್ಯ ಕ್ರಿಯೆಯ ಸಂಕೀರ್ಣತೆಗಳನ್ನು ಸಾಮಾನ್ಯ ಓದುಗನ ದೃಷ್ಟಿಯಿಂದ ನೋಡುವುದಾಗಿದೆ. ಬರಿಯ ಹೇಳಿಕೆಗಳು ಕಾವ್ಯವಾಗುವುದಿಲ್ಲ ಮತ್ತು ಕನಿಷ್ಠ ರೂಪಕವೊಂದನ್ನು ಟಂಕಿಸದ ಯಾರೂ ಕವಿಯಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ಕನ್ನಡದ ಮನಸ್ಸುಗಳು ಈಗಾಗಲೇ ಸ್ಪಷ್ಟಪಡಿಸಿವೆ. ರಸಗ್ರಹಣದ ಮೂಲ ಉದ್ದೇಶವೇ ತನಗಿರುವ ಅರಿವನ್ನು ಪರಿಷ್ಕೃತಗೊಳಿಸಿ ತಾಜಾ ಪ್ರತಿಮೆಗಳ ಮೂಲಕ ಹೇಳುವ ಪ್ರಯತ್ನ. ಫೇಸ್ಬುಕ್ ಎಂಬ ಸಾಮಾಜಿಕ ಮಾಧ್ಯಮದ ಮೂಲಕವೆ ತಮ್ಮ ಕವಿತೆಗಳನ್ನು ಪ್ರಕಟಿಸುತ್ತಿರುವ ಹಲವರು ನಮ್ಮ ನಡುವೆ ಇದ್ದಾರೆ. ಬಹಳ ವರ್ಷಗಳಿಂದ ಕವಿತೆಯನ್ನು ಬರೆಯುವ ಅಭ್ಯಾಸವಿದ್ದವರೂ ಪತ್ರಿಕೆಗಳಲ್ಲಿ ಅವನ್ನು ಪ್ರಕಟಿಸುವ “ಜಾಣ್ಮೆ” ಮತ್ತು “ಕಲೆ”ಗಳ ಅರಿವು ಇಲ್ಲದೆ ಡೈರಿಗಳ ಪುಟಗಳಲ್ಲೇ ತಮ್ಮ ಕವಿತೆಯನ್ನು ಅಡಗಿಸಿ ಇಟ್ಟುಕೊಂಡಿದ್ದವರು ಫೇಸ್ಬುಕ್ಕಿನಲ್ಲಿ ಪ್ರಕಟಿಸಿ “ಭಾರ” ಕಳೆದುಕೊಳ್ಳುತ್ತಿದ್ದಾರೆ. ಅಂಥ ಹಲವರ ರಚನೆಗಳು ನಿಜಕ್ಕೂ ಚೆನ್ನಾಗಿರುತ್ತವೆ. ಆದರೆ ಫೇಸ್ಬುಕ್ ಪುಟಗಳು ಕ್ಷಣಕ್ಷಣಕ್ಕೂ ಹೊಸ ಹೊಸ ಬರಹ, ಫೋಟೋ, ಕವಿತೆ, ಸ್ಟೇಟಸ್ಸುಗಳ ಮೆರವಣಿಗೆ ಆಗಿರುವುದರಿಂದ ನಿಜಕ್ಕೂ ಅದ್ಭುತ ಎಂದೆನಿಸುವ ಸಾಲುಗಳು ಕೂಡ ಭರಪೂರ ಪೇಜುಗಳ ನಡುವೆ ಮಾಯವಾಗುವುದೂ ಸಹಜ. ಶ್ರೀ ಎನ್.ಡಿ.ರಾಮಸ್ವಾಮಿ ಮೇಲೆ ಹೇಳಿದ ಆ ಅಂಥ ಹಲವರ ಪೈಕಿ ಒಬ್ಬರು. ವೃತ್ತಿಯಿಂದ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕರಾಗಿರುವುದರಿಂದ ಸಹಜವಾಗಿ ಛಾಸರಿನಿಂದ ಶೇಕ್ಸ್ ಪಿಯರನವರೆಗೆ, ಡಾಂಟೆಯಿಂದ ಆಫ್ರಿಕದ ಕಪ್ಪು ಹಾಡಿನವರೆಗೂ ಅವರ ಓದು ತೆರೆದೇ ಇರುತ್ತದೆ. ಆದರೆ ಎಲ್ಲ ಉಪನ್ಯಾಸಕರೂ ಕವಿಗಳಾಗುವುದಿಲ್ಲ. ಕವಿತೆಯನ್ನು ಪಾಠ ಮಾಡುವಾಗ ಮಾತ್ರ ಕವಿತೆಯನ್ನು ಬ್ರೌಸು ಮಾಡುವ ಶಿಕ್ಷಕರೂ ಇದ್ದಾರೆ. ಆದರೆ ಎನ್.ಡಿ.ಆರ್ ಅಪವಾದ. ಇನ್ನೇನು ಮೂರು ವರ್ಷಗಳಷ್ಟೇ ನಿವೃತ್ತಿಗೆ ಬಾಕಿ ಇರುವ ಅವರು ಅದೆಷ್ಟು ವರ್ಷಗಳಿಂದ ಪದ್ಯದ ಮೊರೆ ಹೋಗಿದ್ದರೋ ಏನೋ ಫೇಸ್ಬುಕ್ಕಿನಲ್ಲಿ ನಿತ್ಯವೂ ಅವರ ಪದ್ಯ ಪ್ರಕಟ ಆಗುತ್ತಲೇ ಇರುತ್ತದೆ. ಮೊನ್ನೆ ಫೇಸ್ಬುಕ್ ಪುಟದಲ್ಲಷ್ಟೇ ಬರೆಯುವ ಮತ್ತೊಬ್ಬ ಅನುವಾದಕರು ಇವರ ಪದ್ಯವನ್ನು ತೆಲುಗು ಭಾಷೆಗೆ ಅನುವಾದಿಸಿದ್ದರು ಎಂದರೆ ಇವರ ಪದ್ಯಗಳ ಝಳ ಕಡಿಮೆಯದೇನೂ ಅಲ್ಲ. ಸಾಹಿತ್ಯದಲ್ಲಿ ಆಸಕ್ತಿ ಇರುವ ಇಂಗ್ಲಿಷ್ ಉಪನ್ಯಾಸಕರಿಗೆ ಇರುವ ಮತ್ತೊಂದು ಲಾಭವೆಂದರೆ ಅವರು ಕನ್ನಡದ ಮಹತ್ವದ ಲೇಖಕರನ್ನು ಸುಲಭವಾಗಿ ಒಳಗೊಳ್ಳುವ ಸೌಲಭ್ಯ. ಏಕೆಂದರೆ ಹೈಸ್ಕೂಲ್ ಮತ್ತು ಪಿಯು ಕಾಲೇಜುಗಳು ಬಹುತೇಕ ಒಟ್ಟಿಗೇ ಇರುವುದರಿಂದ ಭಾಷಾ ಶಿಕ್ಷಕರುಗಳ ಮಾತಿನ ನಡುವೆ text ಬಗ್ಗೆ ಮಾತು ಸಹಜವೇ ಆಗಿರುವುದರಿಂದ ಗ್ರಹಿಕೆ ಸೂಕ್ಷ್ಮತೆ ಇದ್ದವರು ಗೆದ್ದಿರುತ್ತಾರೆ. ಎನ್.ಡಿ.ಆರ್ ಪದ್ಯಗಳ ಮೂಲ ಪುರಾತನ ನವ್ಯದ ಶಾಲೆ. ಪ್ರತಿಮೆಗಳೂ ರೂಪಕಗಳೂ ಇಲ್ಲದ ಬರಿಯ ಕನಸುಗಳು ಅವರ ಪದ್ಯಗಳಲ್ಲಿ ವಿರಳಾತಿ ವಿರಳ. ಏನನ್ನು ಹೇಳುವುದಕ್ಕೂ ಪ್ರತಿಮೆ ಮತ್ತು ರೂಪಕಗಳ ಮೊರೆ ಹೋಗುವ ಅವರ ಕವಿತೆಗಳಿಗೆ ಒಮ್ಮೊಮ್ಮೆ ಈ ಭಾರವೇ ಜಾಸ್ತಿಯಾಗಿ ಮೂಲದಲ್ಲಿ ಅವರೇನು ಹೇಳ ಹೊರಟಿದ್ದರೋ ಆ ಅಂಶವೇ ಮರೆಯಾಗುವುದೂ ಉಂಟು. ಉದಾಹರಣೆಗೆ; ಅಕ್ಷಿ ನಕ್ಷತ್ರವಾದದ್ದು ಏಕೆ? ಎದೆಯೊಳಗೆ ಪುಟ್ಟ ಕಾರಂಜಿ ಶಬ್ದ,ಶಬ್ದಕ್ಕೂ ಪುಳಕ ಜೀವ ಸೆಲೆ ಕಡಲಾಗಿ,! ಇಲ್ಲಿ ಶಬ್ದಾಡಂಬರದ ನಡುವೆ ಅಕ್ಷಿ ಅಂದರೆ “ಕಣ್ಣು” ಪುಳಕ ಹುಟ್ಟಿಸುವ ಜೀವಸೆಲೆಯಾಗಿದೆ ಎನ್ನುವುದನ್ನು ಹೇಳುತ್ತಲೇ, “ಮೀಟುತ್ತಿದೆ ಕನಸುಗಳ ಉಡವನ್ನ” ಅನ್ನುವಾಗ ಈ ಪದ್ಯ ಮತ್ತೆಲ್ಲಿಗೋ ತುಯ್ಯುತ್ತಿದೆ ಅಂತ ಭಾವಿಸಿದರೆ, “ಆಕಾಶದ ನಕ್ಷತ್ರಗಳೂ ನಕ್ಕು ವಿಷಾದದ ಅಮಲಲಿ” ಎಂದು ಮುಕ್ತಾಯ ಆಗುವಾಗ ಈ ಕವಿತೆ ಹೇಳಿದ್ದಾದರೂ ಏನನ್ನು ಎನ್ನುವ ಗೊಂದಲ ಸಹಜ. “ಇಲ್ಲಿ ಜೇನಿದೆ,ಹಾಲಿದೆ,ಹಣ್ಣಿದೆ ಅದು ಇದೆ ಇದು ಇದೆ ಎಲ್ಲ ಇದೆ” ಎಂದು ಆರಂಭವಾಗುವ ಪದ್ಯ ಈ ನೆಲದ ಘಮವನ್ನೋ ಅಥವ ಭಾಷೆಯ ಬೆಡಗನ್ನೋ ಹೊಗಳುತ್ತಿದೆ ಅಂದುಕೊಂಡರೆ ” ಏಕಲವ್ಯ ಜಗದೇಕ ವೀರನಾಗಿದ್ದು ಇಳಿದ ಹೊಳೆಯ ದಂಡೆಯಾಚೆಯೂ ಈಜಿದ್ದು!” ಎಂದು ರೂಪುಗೊಂಡರೆ ಮತ್ತೊಂದು ಜಿಗಿತಕ್ಕೆ ತುಯ್ದು “ಲಕ್ಷ್ಮಣ ಹಣ್ಣ ಬಿಟ್ಟು ಓಡಿದ್ದು ಕೋದಂಡ ಹಣ್ಣ ಜತಯೇ ಓಡಿದ್ದು” ಎಂದು ಹೇಳುತ್ತ ಕಡೆಗೆ ಪದ್ಯ “ಮುಗಿಲ ಅಟ್ಟದಲ್ಲೇ ಇರಲಿ ಕೈ ಚಾಚಿದರಷ್ಟೇ ಹಣ್ಣು!” ಎಂದು ಕೊನೆ ಮುಟ್ಟಿದಾಗ ಓಹ್ ಈ ಕವಿ ಹೆಣ್ಣನ್ನು ಕುರಿತು ಹೇಳಲು ಏನೆಲ್ಲ ಪದ ಭಂಡಾರವನ್ನೇ ಸೂರೆಗೊಂಡರಲ್ಲ ಎನ್ನಿಸುತ್ತದೆ. ರಾಮಾಯಣ, ಭಾರತದ ಪಾತ್ರಗಳೆಲ್ಲ ಕಣ್ಣ ಮುಂದೆ ಸರಿದು ಹೋಗುತ್ತವೆ, ಸವೆದ ದಾರಿಯ ಕುರುಹಾಗುತ್ತವೆ “ಬುದ್ಧ ಗುರುವಿನ ಕಣ್ಣಿಗೆ ಧೂಳು ಬಿದ್ದು ಧಾರಾಕಾರ ಕಣ್ಣೀರು ನೋವು,ನವೆ” ಎಂದು ಸುರುವಾಗುವ ಕವಿತೆ ಬುದ್ಧನೂ ಅನುಭವಿಸಿದ ಸಾಮಾನ್ಯ ನೋವನ್ನು ತೆರೆದಿಡುತ್ತಲೇ ” ಓಡಿದ,ಓಡಿದ ಧೂಳುಗಳು ಬಿಡದೆ ಹಿಂಬಾಲಿಸಿದ್ದು ಕಣ್ಣ ಮುಚ್ಚಿ ಓಡಿದ!” ಎಂದು ಹೇಳುವಾಗ ಕಣ್ಣಿಗೆ ಬಿದ್ದದ್ದು  ಧೂಳಲ್ಲ,  ಬದುಕಿನ ಸತ್ಯಗಳು ಎಂದು ಗೊತ್ತಾಗುತ್ತದೆ. ಮುಂದುವರೆದಂತೆ,  “ಈಗ ಬುದ್ದನ ಕಣ್ಣು ಸ್ಪಷ್ಟ, ಎಲ್ಲವೂ ನಿಖರವಾಗಿ ಕಂಡು ಬೆರಗು!” ಎನ್ನುವಾಗ ಬುದ್ಧನ ಜ್ಞಾನೋದಯವನ್ನು ಬೆರಗಿನಿಂದ ಕಂಡಿರಿಸಿದ ಕವಿತೆ ಆಗಿ ಮಾರ್ಪಾಡಾಗುತ್ತದೆ. ಶಬ್ದಗಳು ಚಿನ್ನದ ಅದಿರಾದಾಗ ಬದುಕ ಹೊಲ ಬಂಗಾರವಾಗಿತ್ತ ಶಬ್ದಗಳು ಪ್ರೀತಿಯ ಮೊಗ್ಗಾದಾಗ ಬದುಕು ಮಲ್ಲಿಗೆ ತೋಟವಾಗಿತ್ತ! ಎಂದೂ ಹೇಳಬಲ್ಲ ಈ ಕವಿಯ ಬಳಿ ಶಬ್ದ ಭಂಡಾರದ ಸಂದೂಕ ಇದ್ದೇ ಇದೆ ಈ ಕವಿ ಬದುಕಿನ ನಶ್ವರತೆಯನ್ನು ಕೂಡ ಬಿಡುಬೀಸಾಗಿ ಹೇಳಬಲ್ಲರೆಂಬುದಕ್ಕೆ ನೋಡಿ; “ಸಂತೆಯಲಿ ಮೀನು ಮಾರುವ ಸೊಪ್ಪು,ಸದೆ ಮಾರುವ ಜಾಗದಲಿ ಮಾತುಗಳದೇ ಕಾರುಬಾರು ಗಟ್ಟಿಯಾಗಿ,ಕರ್ಕಶವಾಗಿ ಕಂಚಿನ ಕಂಠದಲಿ ಕೂಗಾಟ!” ಯೆಸ್, ಮುಂದಕ್ಕೆ ಇಣುಕಿದರೆ, “ಮೌನಕ್ಕೆ ಜಳಕ ಮಾಡಿಸಿ ಹೊಸ ಅಂಗಿ ತೊಡಿಸಿ ಕಥೆ,ಕವನ,ಹೇಳುತ್ತಾ ಹೋದರೆ ಸಿಡಿ ಮಿಡಿ ಗೊಂಡು ಉಗಿಯುತ್ತಿತ್ತು!” ಎಂದು ಕುತೂಹಲ ಹುಟ್ಟಿಸುತ್ತಾರೆ. ಆದರೆ ಪದ್ಯ ಕೊನೆಯಾಗುವುದು ಹೀಗೆ; “ಮೌನದ ಗೆಳೆತನ ದುಬಾರಿ ಖಿನ್ನತೆ, ಸಿಡುಕು, ಕೋಪ,ಕುದಿತ,ಮಿದಿತದ ಹೊಂಡವಾದದ್ದು!”. ಈಗ ಹೇಳಿ, ಈ ಪದ್ಯ ಬದುಕಿನ ನಶ್ವರತೆಯನ್ನು ಹೇಳುತ್ತಿದೆಯೋ ಅಥವ ಶಬ್ದದ ಆಡಂಬರದಲ್ಲಿ ಮೌನದ ಮಹತ್ತನ್ನು ಹುಡುಕುವ ಯತ್ನ ಮಾಡುತ್ತಿದೆಯೋ? ಈ ಪರಿಗೆ ಒಯ್ಯವ ಪದ್ಯಕ್ಕೆ ಆಗಾಗ ಲಿಫ್ಟ್ ಕೊಡುವುದರಲ್ಲಿ ಇವರು ಸಿದ್ದ ಹಸ್ತರೇ! “ಈ ಕನ್ನಡಿಯಲಿ ಅದೆಷ್ಟು ಮುಖ ಯುಧಿಷ್ಟರನೂ  ನಿಂತಿದ್ದ ಕಿಮ್ ಮಹಾಶಯನೂ ನಿಂತಿದ್ದ ರಂಗದಲಿ ವೇಷ ಕಟ್ಟಿ”. ಎಂದು ಆರಂಭಗೊಂಡ ಪದ್ಯ ದಾಟುತ್ತ ದಾಟುತ್ತ “ಇವನೂ ಬಿಳಿ ಬಟ್ಟೆಯಲಿ ಚಿತ್ರ ಬಿಡಿಸಿದ್ದು ನೆತ್ತರ ಬಣ್ಣದಲಿ” ಎಂದು ಮತ್ತೊಂದು ಲಿಫ್ಟ್ ಪಡೆದಾಗ ಗೊಂದಲ. ಪದ್ಯ ಹೆಚ್ಚಿಸಿದ ಗೊಂದಲದಲ್ಲಿ ” ಇವನು ಶಿಶುಪಾಲನ ಕೊನೆ ತಮ್ಮ ನಂದನನಿಗೂ ಬೆಂಕಿ ಇಟ್ಟೇ ತೀರುವೆನೆಂದ!” ಎಂದು ಕೊನೆಯಾಗುವಾಗ ಈ ಕವಿ ಕಾಣಿಸಿದ ಬೆಳಕ ಝಳಕ್ಕೆ ಕಣ್ಣು ಕುಕ್ಕುವ ಶಕ್ತಿ ಇದ್ದೇ ಇದೆ ಎನ್ನುವುದಕ್ಕೆ ಸಾಕ್ಷಿ. ಆದರೆ ಪುರಾಣ ಪ್ರತಿಮೆಗಳ ಮೂಲಕವೇ ಏನೆಲ್ಲವನ್ನೂ ಕಟ್ಟುವ ಈ ಕವಿಯ ರಚನೆಗಳು ಆಧುನಿಕ ಮನಸ್ಥಿತಿಯ ಮತ್ತು ಪುರಾಣ ಪ್ರತಿಮೆಗಳ ಮೂಲ ಆಶಯವೇ ತಿಳಿಯದವರಿಗೆ ಗೊಂದಲ ಮತ್ತು ಶಬ್ದಾಡಂಬರದ ಹಾಗೆ ಕಂಡರೆ ತಪ್ಪೇನಲ್ಲ. “ತಳ ಇರದ ದೋಣಿಯಲಿ ಮಹಾ ಯಾನ ಆಸೆ ಎಂಬು ಹುಟ್ಟು ಒಂದರಗಳಿಗೆಯೂ ಬಿಡದೆ” ಈ ಸಾಲುಗಳು ಹುಟ್ಟಿಸುವ ತಳಮಳಗಳ ಲೆಕ್ಕ ಸುಲಭಕ್ಕೆ ಸಿಕ್ಕದ್ದು. ಮುಂದುವರೆದಂತೆ ” ಯುದ್ದದ ದಿರಸು ಕವಚ,ಕತ್ತಿ ತಿವಿದಲ್ಲದೇ ಮುಂದೆ ಹಾದಿ,ಹೆಜ್ಜೆ!” ಎಂದು ಆಕ್ಷೇಪಿಸುವ ಈ ಕವಿ ನಿಜಕ್ಕೂ ಏನನ್ನು ಹೇಳಲು ಹವಣಿಸುತ್ತಿದ್ದಾರೆ ಎನ್ನುವುದೇ ಕುತೂಹಲಕ್ಕೆ ದಾರಿ ಮಾಡುತ್ತದೆ. ಇನ್ನೂ ಏನೆಲ್ಲವನ್ನೂ ಹೇಳುತ್ತ ಈ ಕವಿಯ ಕವಿತೆಗಳನ್ನು ಡಿಸೆಕ್ಟ್ ಮಾಡುತ್ತ ಹೋಗಬಹುದು. ಆದರೆ ಪುರಾಣ ಪ್ರತಿಮೆಗಳ ಭಾರದಲ್ಲಿ ಇವರ ನಿಜದ ಆಶಯಗಳೇ ಸುಸ್ತು ಪಡುತ್ತಿವೆ ಎನ್ನುವದಂತೂ ನಿಜ. “ಇಲ್ಲಿ ಗಂಗೆಯಿದೆ ಗಾಂಗೇಯನ ಶರಶಯ್ಯೆ ಇದೆ ಅರ್ಜುನ ದಾಹಕ್ಕೆ ತಳಾ ತಳ ಸೀಳಿ ಗಂಗೆ ತರಬೇಕು!” ಎಂಬ ಭರವಸೆಯ ಕ್ಷೀಣ ದನಿಯೂ ಇವರಿಗೆ ದಕ್ಕಿರುವುದರಿಂದಲೇ ಇವರು ಪದ್ಯ ಪೋಸ್ಟ್ ಮಾಡುತ್ತಿದ್ದಂತೆಯೇ ಬೀಳುವ ಲೈಕುಗಳು ಈ ಕವಿಯು ಮತ್ತಷ್ಟು ಮಗದಷ್ಟು ಪುರಾಣ ಪ್ರತಿಮೆಗಳನ್ನು ಉಜ್ಜುಜ್ಜಿ ಹೊಳಪು ಪೇರಿಸುವಂತೆ ಮಾಡಿವೆ. ಶ್ರೀ ಎನ್. ಡಿ. ರಾಮಸ್ವಾಮಿ ಯಾವತ್ತೋ ತಮ್ಮ ಸಂಕಲನ ತರಬಹುದಿತ್ತು. ಪ್ರತಿಮೆ ರೂಪಕಗಳ ಅರಿವೇ ಇಲ್ಲದ ಸ್ವ ಮರುಕಗಳನ್ನೇ ಕಾವ್ಯವೆಂದು ಬಿತ್ತುತ್ತಿರುವರ ನಡುವೆ ಎನ್ ಡಿ ಆರ್ ಪುರಾಣದ ಪಾತ್ರಗಳ ಮೂಲಕವೇ ಬದುಕನ್ನು ಅರಿಯುವ ರೀತಿಯಿಂದ ಬಹು ಭಿನ್ನಾವಾಗಿ ಕಾಣುತ್ತಾರೆ ಮತ್ತು ವಿಭಿನ್ನವಾಗಿಯೇ ಉಳಿಯುತ್ತಾರೆ ಅವರ ೧೫ ಪದ್ಯಗಳನ್ನು ಒಟ್ಟು ಮಾಡಿ ಇಲ್ಲಿ ಪೋಣಿಸಿದ್ದೇನೆ. ಸುಮ್ಮನೇ ಕಣ್ಣಾಡಿಸುತ್ತ ಹೋದಂತೆ ಮತ್ತೆಲ್ಲಿಗೋ ಮತ್ಯಾವುದೋ ಪರಿಜಿಗೆ ಒಯ್ಯುವ ಈ ಪದ್ಯಗಳ ಝಳ ನಿಮಗೂ ಮುಟ್ಟಲಿ. ಎನ್.ಡಿ.ಆರ್. ಕವಿತೆಗಳು 1. ಅಕ್ಷಿ ನಕ್ಷತ್ರವಾದದ್ದು ಏಕೆ? ಎದೆಯೊಳಗೆ ಪುಟ್ಟ ಕಾರಂಜಿ  ಶಬ್ದ,ಶಬ್ದಕ್ಕೂ ಪುಳಕ ಜೀವ ಸೆಲೆ ಕಡಲಾಗಿ,!  ಹರಿಯುತ್ತಿದೆ ಝರಿ ಜುಳು,ಜುಳು ನಿನಾದವೆಲ್ಲ ಅಲೌಕಿಕದ ಹುನ್ನಾರವೆ? ಮೀಟುತ್ತಿದೆ ಕನಸುಗಳ ಉಡವನ್ನ!  ತಳ ಕಂಡ ಬದುಕ ಸೆಲೆ ಉನ್ಮತ್ತ,ಉನ್ಮೀಲನದ ಗಾಳಿಪಟ ಇಲ್ಲಿಲ್ಲ ಭಾವಗಳ ಹಕ್ಕಿ  ಪರಿಧಿಯ ಸೀಳಿ !  ಹಂಚಿ ಕೊಂಡ ಕನಸುಗಳು ಆಯಾತ ನಿರ್ಯಾತವಾಗುತ್ತಿವೆ ಈ ಸೇತುವೆಗೆ  ಬದುಕ ಎರಡೂ ಹೊಳೆ ಕಾಯುತ್ತಲೇ!  ಆಕಾಶದ ನಕ್ಷತ್ರಗಳೂ ನಕ್ಕು ವಿಷಾದದ ಅಮಲಲಿ ಈ ಸೇತುವೆ ಎಂದಿಗಾದರೂ ಒಮ್ಮೆ ದಕ್ಕಿದರೆ? 2. ಇಲ್ಲಿ ಜೇನಿದೆ,ಹಾಲಿದೆ,ಹಣ್ಣಿದೆ ಅದು ಇದೆ ಇದು ಇದೆ ಎಲ್ಲ ಇದೆ ಹೂವು,ಹಾಸಿಗೆ,ಚಂದ್ರ,ಚಂದನ ನಗು,ಉತ್ಸಾಹ ,ಹುರುಪು,ಕನಸು ಹೊಳೆಯಂತೆ ಕಾದಿದೆ ! ಇಳಿಯ ಬೇಕು ಕನಸುಗಳ ಹೊಳೆಗೆ ಜಿಗಿ,ಜಿಗಿದು ಬಾಚಲು ಬೇಕು ಹಣ್ಣ ಗೊಂಚಲಿನ ಪರಿ ಹರಡಿದ್ದು ಬೇಕಾದ ಮಾಗಿದ ಹಣ್ಣೇ ಕಿತ್ತು! ಏಕಲವ್ಯ ಜಗದೇಕ ವೀರನಾಗಿದ್ದು ಇಳಿದ ಹೊಳೆಯ ದಂಡೆಯಾಚೆಯೂ ಈಜಿದ್ದು! ಬಾಚಿದ್ದು ಯಾವನೂ ಮುಟ್ಟದ ಹಣ್ಣು! ಸುಧಾಮ ಯಾವ

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು Read Post »

You cannot copy content of this page

Scroll to Top