ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ನಲಿವಿನ ನಾಲಗೆ (ಪ್ರಬಂಧ ಸಂಕಲನ) ನಲಿವಿನ ನಾಲಗೆ ಪುಸ್ತಕದ ಹೆಸರು:ನಲಿವಿನ ನಾಲಗೆ(ಪ್ರಬಂಧ ಸಂಕಲನ)ಲೇಖಕರ ಹೆಸರು:ಸುಮಾವೀಣಾಪುಟಗಳ ಸಂಖ್ಯೆ:128–ಬೆಲೆ-120ರೂಪ್ರಕಾಶಕರ ಹೆಸರು:ಪರಶಿವಪ್ಪ,ಸ್ನೇಹ ಬುಕ್ ಹೌಸ್, ಬೆಂಗಳೂರುಪುಸ್ತಕ ದೊರೆಯುವ ಸ್ಥಳ:www.mybookadda.netಅಂಚೆಯಲ್ಲಿಪುಸ್ತಕ ತರಿಸಿಕೊಳ್ಳಲು ಹಣ ಹಾಕಬೇಕಾದ ಬ್ಯಾಂಕ್ ಖಾತೆ ವಿವರ;Ac No3211142353,IFSC code SBIN0011259

ಪುಸ್ತಕ ಪರಿಚಯ Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ಮೌನ ಮಂದಾರ ಮೌನ ಮಂದಾರ ಕರ್ತೃ_ ವಾಣಿಮಹೇಶ್ಪ್ರಕಾಶಕರು_ ಜ್ಞಾನಮುದ್ರ ಪ್ರಕಾಶನಲಿಂಗರಾಜು ಬಿ.ಎಲ್.ಹೊಳಲುಮಂಡ್ಯ_571402 ಪುಸ್ತಕದಬೆಲೆ-85ರೂಪಾಯಿ ಸ್ವ ವಿಳಾಸ_ವಾಣಿಮಹೇಶ್w/oಮಹೇಶ್ ಹೆಚ್. ಆರ್.ನಂ. ಎ.ಆರ್.613 ಮೊದಲನೇ ಮುಖ್ಯ ರಸ್ತೆ ನಾಲ್ಕನೇ ಅಡ್ಡ ರಸ್ತೆ ಸಾಲಗಾಮೆ ಗೇಟ್ ಸರಸ್ವತಿ ಪುರಂ ಹಾಸನ_573201 PH: 7975353693 ಬ್ಯಾಂಕ್ ಖಾತೆ ನಂ_37614898049IFSC_SBIN0040956 ಇದು ಸಾಧನೆಯ ಸಂಗಮದ ಅನವರತ. ಬೇಕಾದ್ದವು ಭಾವನೆಯಾಗಿ , ಸೋತು ನಿಂತ ನೆನಪುಗಳು ಮೌನ ಮಂದಾರವಾಗಿದೆ. ಕವಯತ್ರಿ ವಾಣಿಮಹೇಶ್ ಅವರ ಬರಹಗಳನ್ನು ಅಧ್ಯಯನ ಮಾಡಿದಾಗ ಸರಳ ಅಕ್ಷರಗಳಿಂದ ಜನನಾಡಿಗೆ ಸರಾಗವಾಗಿ ಹಂಚುವುದರ ಮೂಲಕ ಹೊಸ ಅನುಭವವೂ ಆಯ್ತು. ಹೇಗೆಂದರೆ ಸರಳ ಅನ್ನುವುದನ್ನು ಸರಿಸಿ ಆಳವಾಗಿ ಹೋದಂತೆ ಹಲವಾರು ಕವಲೊಡೆಯಲು ಶುರುವಾಯಿತು. ನಾ ಕಂಡೆ ಆ ಮನವ , ಮಿಡಿವ ಹೂವಂತೆ , ನಾ ಕಂಡೆ ಆ ಮನವ ಆಳದ ಕಡಲಂತೆ. ನಲಿವ ಸ್ಪರ್ಷದಿಂದ ಹೊಸ ಅನುಭವ ಯಾನದಲ್ಲಿ ಮುಳುಗಿ ಹೋದೆ. ಸಾಹಿತ್ಯ ಜಗತ್ತನ್ನು ಸರಳವಾಗಿ ಪರಿಚಯಿಸುವ ಮೂಲಕ ಹೊಸ ಸಂಶೋಧನೆ ಮಾಡಿದ್ದಾರೆ. ಆಳವಾಗಿ ಮುಳುಗಿ ನೋಡಿದಾಗ ಸರಳ ಭಾವನೆಯಲ್ಲೂ ಸಾವಿರ ಸಾರ ತುಂಬಿದ ಅನುಭವ ಸಂದೇಶ ಉಕ್ಕಿ ಬಂತು. ಅವರ ಕವನಗಳಿಂದ ಕಣ್ತುಂಬಿ ಬಂದದ್ದಂತೂ ನಿಜ. ಬದುಕಿನ ತ್ಯಾಗ ವೈರಾಗ್ಯ ಮರೆಯಲು ಮನಸ್ಸು ಮೂಕ ಪ್ರಶ್ನೆಯಾದಾಗ ಮಿಡಿದ ಹೂವೇ ಮೌನ ಮಂದಾರ. ಓದುಗರಿಗೆ ಉತ್ತಮ ಅಭಿರುಚಿಕರವಾಗಿದೆ ಎಂದು ಮನದಾಳದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ——————————————————–

ಪುಸ್ತಕ ಪರಿಚಯ Read Post »

ಕಾವ್ಯಯಾನ

ಕಾವ್ಯಯಾನ

ಮಾಲತಿ ಶಶಿದರ್ ಒಂದು ಪ್ರೇಮಕವಿತೆ ಒಲವೆಕಗ್ಗತ್ತಲಲ್ಲಿ ಹೊಳೆವ ಬಂಧಕ್ಕಾಗಿ ಹಾತೊರೆದಿರುವೆಕಡಲಾದ ನಿನ್ನ ಒಂದು ಹನಿಯಾಗಿ ಸೇರಿರುವೆ ನಿನ್ನ ಚಲುವಿಗೆ ಪುರಾವೆಯಾಗಬಲ್ಲೆನೇ ನಾನು..ನಮ್ಮಿಬ್ಬರ ಮಿಲನ ಕಂಡು ಮಣ್ಣು, ಮಳೆ ಹನಿ ನಾಚದೆನು ನಿನ್ನೊಲವ ಸ್ಫೂರ್ತಿಯಲಿ ಆಗಸದಲ್ಲಿ ತೇಲಿಹೆನು,ಹೆಗಲ ಮೇಲೆ ಒರಗುವಾಸೆ ದಾಟಿ ಬಳಿಗೆ ಬಂದಿಹೆನು ನನ್ನೊಳಗೆ ಅವಿತಿರುವ ನೀನೊಂದು ಸುಂದರ ಗುಟ್ಟುಏಕಾಂತದಲ್ಲೂ ನಿನ್ನದೇ ಪರಿಮಳ, ನಿನ್ನದೇ ನೆನಪು.. ಬೇಸಿಗೆ ಆಗಸ ವಸಂತವಾಗಿದೇದೂರದ ಕಾಡು ನಿನ್ನೆಸರ ಕೂಗಿದೆ.. ಅಣುವಿನ ವಿದಳನದಂತೆ ನಮ್ಮ ಬಂಧ ದಿನೇ ದಿನೇ ಸಿಡಿದಿದೆಬೆರಳುಗಳ ಹೊಸ ಭಾಷೆಯ ಈ ಪಾಪಿ ಹೃದಯ ಅರಿವುದೆ? ಇದೊಂದು ಜನ್ಮ ಸಾಕೆ ಹುಡುಗ ನಿನ್ನ ಸೇರಿ ಬಾಳಲು..ಒಂದೇ ಒಂದು ಹೃದಯ ಸಾಕೆ ನಿನ್ನ ಪ್ರೀತಿ ಮಾಡಲು.. ***********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನೂತನ ಅವರ ಹೊಸ ಕವಿತೆ ನೂತನ ದೋಶೆಟ್ಟಿ ಸಾಲುಗಟ್ಟಿದ ವಾಹನಗಳ ಸಂದಿನಲ್ಲಿಚಟಚಟನೆ ಜಿಗಿಯುವ ಪುಟ್ಟ ಕಾಲುಗಳುದೇಹವಿಡೀ ಲೋಹದ ಗೋಲದೊಳಗೆ ತೂರಿಕೈಕಾಲು ಬಿಡಿಬಿಡಿಯಾಗಿ ಹೊರಬರುವ ಆಟ ಮಿಂಚುವ ಕಣ್ಣುಗಳ ಸುತ್ತ ಕಪ್ಪು ಕಾಡಿಗೆಸೆರೆ ಹಿಡಿಯುವ ದಾಹಮಿರಮಿರನೆ ಹೊಳೆವ ಕದಪುಗಳುಬಾಲ್ಯವನ್ನು ನುಂಗಿ ಉಬ್ಬಿ ಗರಿಗರಿಯಾಗುತ್ತಿರುವವು ಒಡ್ಡಿದ ಕೈಮೇಲೆ ಬೀಳುವ ಕನಸ ಕಾಸುಗಳುಸಂಜೆಗತ್ತಲಲ್ಲಿ ಕರಗುವುದ ತಿಳಿದೂಸುಡುಬಿಸಿಲಲಿ ಮೈ ಮಣಿಸುವ ಕಸುವುಸೊಂಟಕ್ಕೆ ಬಿಗಿದ ದಾವಣಿಯುಸಡಿಲವಾಗುವುದಕ್ಕೆ ಪೂರ್ವಹಾದಿಬದಿಯ ದೊಂಬರಾಟದಲ್ಲಿ ತಯಾರಿ ಬಡಿಯುವವನ ತಮಟೆ ತಾಳಕ್ಕೆಬಾಗಿ ಬಳುಕುವ ನೋಡುಕಣ್ಸನ್ನೆ, ಕೈಸನ್ನೆ, ಬಾಯ್ಸನ್ನೆಗಳ ಪಾಠಉಣ್ಣುವ ಅನ್ನದಲಿ ಸುಖ ನೀಡಿದ ಘಾಟು ಕೆಂಪು ದೀಪ ಹತ್ತುತ್ತಲೇ ನಿಲ್ಲುವ ವಾಹನಗಳಗಾಜನ್ನು ಬಗೆವ ಕಣ್ಣುಗಳುಕ್ಷಣಕ್ಷಣದ ಬದುಕ ಹುಡುಕುವವು ಇಂತೆಷ್ಟೋ ಭಾಗ್ಯಲಕ್ಷ್ಮಿಯರುರಸ್ತೆಯಂಚಲಿ ದಿನಗಳ ಸವೆಸಿಟಾರ್ಪಾಲು ಗೂಡುಗಳಲೋಫುಟ್ ಪಾತುಗಳಲೋ ರಾತ್ರಿಗಳ ಮಾರಿ ಕಂತೆ ಕಂತೆ ನೋಟುಗಳ ನುಂಗುವಕಡತಗಳ ಶಪಿಸುವರುಕಣ್ಣ ಮಿಂಚನ್ನು ಎದೆಯಲ್ಲಿ ಉಳಿಸಿ ಹೋಗುವರುನಿಟ್ಟುಸಿರು ದಾಟಿ ಸಾಗುವರುಗಣತಿಯಲ್ಲೂ ಹೆಸರಿಲ್ಲದಾಗುವರು ***************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಆಸೆ ಪೂಜಾ ನಾಯಕ್ ಝಗಝಗಿಸುವಾ ಆಸೆನಳನಳಿಸುವಾ ಆಸೆಮೊಮ್ಮೊದಲ ವಸಂತ ಋತು,ಕೋಗಿಲೆಗೆ ಕಂಠದ ಮಾಧುರ್ಯವ ಹೊರಹೊಮ್ಮಿಸುವ ಆಸೆ.ಕವಿಗೆ ಕಾವ್ಯದಾ ರಚನೆಯಮೇಲಾಸೆಕಲಾಕಾರನಿಗೆ ಚಿತ್ರ ಬಿಡಿಸುವ ಆಸೆಶಿಲ್ಪಿಗೆ ಮೂರ್ತಿಯ ಕೆತ್ತುವುದರಲ್ಲಾಸೆನಟರಾಜನಿಗೆ ತನ್ನ ನೃತ್ಯದಾಮೇಲಾಸೆಪ್ರೇಮಿಗೆ ಪ್ರೇಯಸಿಯೊಡಗೂಡಿ ನಲಿಯುವಾ ಆಸೆ ಮಾಗಿಯ ಚಳಿಯು ಇನಿಯನಿಗೆ ಆದರೆ,ಚಂದ್ರನ ಬೆಳದಿಂಗಳು ಗೆಳತಿಗೆಹತ್ತಾರು ಬಣ್ಣದಾ ಕನಸಿನಾ ಲೋಕದೊಳು ಚಿಟ್ಟೆಯ ಹಾಗೆ ನಲಿ-ನಲಿದು,ಏಕಾಂತದಲಿ ಕುಳಿತಾಗ ಕವಿತೆಯ ಬರೆದು, ಎಲ್ಲರೊಡಗೂಡಿ ಹಾಡುವ ಆಸೆ ಎನಗೆ.ಆಸೆ ಎಂಬುದು ಬಿಡಲಿಲ್ಲ ಗೌತಮ ಬುದ್ಧನನೇಅವನಿಗೂ ಕೂಡ ಇತ್ತೊಂದು ಆಸೆ,ಆಸೆಯ ಬಿಡಬೇಕು ಎನ್ನುವ ಮಹದಾಸೆ.ಆಸೆ ಎಂಬುದು ಎಲ್ಲರಾ ಬದುಕಿನ ಬಿಡಿಸಲಾಗದ ಬಂಧಮಿತಿ ಮೀರದೇ ಇದ್ದರೆ ಬೆಲೆ ಉಂಟು ಆಸೆಗೂ ಕಂದಾ. **************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ತಿರುಗಾಟ ಭಾಗ್ಯ ಸಿ ಏಕೆ ತಿರುಗುವೆ ಅತ್ತಿಂದಿತ್ತಅತ್ತ ಪ್ರಳಯ ಇತ್ತ ಕೋಲಾಹಲತಿನ್ನುವ ಕೂಳಿಗೂ ಪರದಾಟ ಅಲ್ಲಿತುಸುವೆ ಹೆಚ್ಚಾಗಿ ಕಿತ್ತಾಡುತ್ತಿರುವರಿಲ್ಲಿ ಮೌಲ್ಯಾಧಾರಿತ ಸಮಸ್ಯೆಗಳು ಸಾಕಷ್ಟಿವೆಕ್ಲಿಷ್ಟತೆಗಳು ಜೇಡರ ಬಲೆಯಂತಾಗಿವೆಹೊರಾಡಬೇಕಿದೆ ಒಳಗಿನ ಶತ್ರುವಿನೊಂದಿಗೆಸಮಾಜ ಸ್ವಾಸ್ಯ ಕಾಪಾಡುವ ಗುರಿಯೊಂದಿಗೆ ಮಣ್ಣು, ಗಾಳಿ, ಬೆಳಕು ನೀರಿನ ಮಿಶ್ರಣಹೋದರೆ ಹೋಯಿತು ಬೆಲೆ ಇಲ್ಲಆತ್ಮ ಸತ್ಯವದು ಹೊಲಸು ಮಾಡಿಕೊಳ್ಳಬೇಡಿಲೆಕ್ಕ ತೀರಿಸಲೇ ಬೇಕು ಮರೆಯಬೇಡಿ ಏಕೆ ತಿರುಗುವೆ ಅತ್ತಿಂದಿತ್ತತಿರುಗಾಟ ಪರಿಹಾರವಲ್ಲಎಣೆ ಬಲೆಯನು ಬಿಗಿಯಾಗಿಬೀಳಲಿ ಮಿಕ ತಲೆಕೆಳಗಾಗಿ *****************************************

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕಸಂಗಾತಿ

ಹೋಗಿ ಬಾ ಮಗಳೆ. ಹೋಗಿ ಬಾ ಮಗಳೇ ಲೇಖಕರು: ಡಾ||ವಿರೂಪಾಕ್ಷ ದೇವರಮನೆಪ್ರಕಾಶಕರು: ಸಾವಣ್ಣ ಎಂಟರ್ಪ್ರೈಸಸ್ಪುಸ್ತಕದ ಬೆಲೆ: ೧೫೦.೦೦ರೂ ಡಾ||ವಿರೂಪಾಕ್ಷ ದೇವರಮನೆಯವರಿಂದ ರಚಿತವಾದ “ಹೋಗಿ ಬಾ ಮಗಳೇ” ಜವಾಬ್ದಾರಿಯುತ ಅಪ್ಪನೊಬ್ಬ ತನ್ನ ಮಗಳಿಗೆ ವೈವಾಹಿಕ ಜೀವನದ ಅನೇಕ ಆಗು ಹೋಗುಗಳ ಬಗ್ಗೆ ಹಿತವಾಗಿ ಮುಖಾಮುಖಿ ಮಾತನಾಡಿದಂತೆ ತೋರುವ ಪುಸ್ತಕ ರೂಪದ ಕೈಗನ್ನಡಿ. ಮದುವೆ ಎನ್ನುವ ಮೂರಕ್ಷರಗಳೊಂದಿಗೆ ಆರಂಭವಾಗುವ ಎರಡು ವಿಭಿನ್ನ ಕುಟುಂಬಗಳ ನಡುವಿನ ಸೇತುವೆ. ಯಾವುದೇ ಮದುವೆಯ ಸಂದರ್ಭದಲ್ಲಿ ಎರಡೂ ಕಡೆ ಕೊಂಚವಾದರೂ ತಕರಾರಿಲ್ಲದೇ ಕಾರ್ಯಕ್ರಮ ನೆರವೇರದು. ಮದುವೆ ಗಂಡು ಹೆಣ್ಣಿನ ನಡುವೆ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಆತಂಕದ ವಿಷಯವೇ. ಸಂಭ್ರಮದ ಜೊತೆಗೆ ಭವಿಷ್ಯದ ಕಾತರವು ಬೆರೆತಿರುತ್ತದೆ. ಪ್ರಸ್ತುತ ಪುಸ್ತಕದ ಲೇಖಕರು ತಮ್ಮ ಬಳಿ ಬರುವ ಬಹಳಷ್ಟು ಪಾತ್ರಗಳ ಮೂಲಕ ಜೀವನದ ವಿವಿಧ ಮಜಲುಗಳಲ್ಲಿ ಎದುರಾಗಬಹುದಾದ ಘಟನೆಗಳ ಸವಿಸ್ತಾರ ವಿವರಣೆ ಹಾಗೂ ಸೂಕ್ತ ಪರಿಹಾರವನ್ನು ನೀಡಿದ್ದಾರೆ. ಹೆಣ್ಣಾಗಿ ನಾನೂ ಕೂಡಾ ಮತ್ತೊಂದು ಮನೆಗೆ ಬಂದವಳು ಹಾಗೂ ಅಲ್ಲಿನ ಪರಿಸರಕ್ಕೆ ಹೊಂದಿಕೊಳ್ಳಲು ಸಾಕಷ್ಟು ಪರದಾಡಿದವಳು. ಅಪ್ಪ -ಅಮ್ಮನ ಮನೆಗೆ ವಿಭಿನ್ನವಾದ ವಾತಾವರಣ , ಒಂದು ರೀತಿಯ ಅಳುಕು . ಸಾಮಾನ್ಯವಾಗಿ ಎಲ್ಲಾ ಹೆಣ್ಣು ಮಕ್ಕಳಿಗೂ ಇದೇ ರೀತಿ. ಸೊಸೆ ಗಂಡನ ಮನೆಯಲ್ಲಿ  ಮದುವೆಯ ಮೊದಲಿನಿಂದಲೂ ಸೊಸೆಯೇ ಆಗಿರುತ್ತಾಳೆ. ಆದರೆ ಅಳಿಯನೆಂದರೆ ಹೆಂಡತಿಯ ಮನೆಯಲ್ಲಿ ವಿಶೇಷ ಗೌರವ, ಆದರಾತಿಥ್ಯ. ಬೇರೊಂದು ಮನೆಗೆ ಹೊಂದಿಕೊಳ್ಳುವಾಗ ಸಾಕಷ್ಟು ಸಮಸ್ಯೆಗಳಿರುತ್ತವೆ. ಆದರೆ ಯಾರೂ ಸಮಯದ ಅವಕಾಶವೇ ಕೊಡುವುದಿಲ್ಲ.  ಲೇಖಕರು ಈಗಿನ ಸಮಾಜದಲ್ಲಿ ಮುರಿದುಬೀಳುವ ಅನೇಕ ವಿವಾಹ ಹಾಗೂ ಅವುಗಳ ತೊಳಲಾಟಗಳ ಮೂಲಕ ಮದುವೆ ಎಂದರೆ ಸಮಸ್ಯೆಯಲ್ಲ,‌ ಅದನ್ನು ನಿಭಾಯಿಸಲು ಒಂದಷ್ಟು ತಯಾರಿ ಮಾಡಿಸುವುದು ಹೆತ್ತವರಿಗೂ, ಗಂಡಿನ ಕಡೆಯವರಿಗೂ ಸೇರಿರುತ್ತದೆ. ಲೇಖಕರು ತಮ್ಮ ಈ ಪುಸ್ತಕ ರೂಪದ ದಾರಿದೀಪವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ೨೫ ಘಟಕಗಳು ಇದರಲ್ಲಿ ಸೇರಿದ್ದು , ನಮ್ಮನ್ನು ಓದಿಸಿಕೊಂಡು ಹೋಗುವ ಮಾರ್ಗದಲ್ಲಿ ಸ್ವ ಅನುಭವಗಳು , ಬೇಸರಿಕೆಗಳು, ಸಂಕಟಗಳು ಇಣುಕುತ್ತವೆ. ಮದುವೆಯ ವಯಸ್ಸಿನ ಕನಸಿನಿಂದ ಹಿಡಿದು ಮಕ್ಕಳ ಜವಾಬ್ದಾರಿ, ಮನೆಯವರೊಂದಿಗೆ ಹೊಂದಾಣಿಕೆ ಹೀಗೆ ಎಲ್ಲವನ್ನೂ ಸಾದೃಶ್ಯಗೊಳಿಸಿದ್ದಾರೆ. ಪತಿ ಹಾಗೂ ಪತ್ನಿ ಯಾರೂ ಹೆಚ್ಚು ಕಡಿಮೆ ಎಂಬ ತರ್ಕ ಕ್ಕೆ ಹೋಗಲೇಬಾರದೆಂಬ ಕಿವಿಮಾತು, ದಂಪತಿಗಳ ನಡುವೆ ಅನ್ಯರ ಪ್ರವೇಶ ಎಂದಿಗೂ ನಿಷಿದ್ಧ , ಅಪಾರ್ಥ ತರುವ ಮೌನಗಳಿಗಿಂತ ಅರ್ಥ ವಿರದ ಜಗಳಗಳೇ ವಾಸಿ, ಕ್ಷಮಿಸುವ ಮರೆಯುವ ಗುಣಗಳನ್ನು ಹೊಂದುವ ಜೀವನದಲ್ಲಿ ಅಳವಡಿಸಿಕೊಂಡು ನೆಮ್ಮದಿಯ ಬದುಕು ಕಟ್ಟಲು ಅಪ್ಪನಂಥ ಗೆಳೆಯನಿಂದ ಸಲಹೆ ಈ ಪುಸ್ತಕ ಎನಿಸಿತು. ಇಂಥ ಘಟನೆಗಳು ಸಾಮಾನ್ಯವಾಗಿ ಎನಿಸಿದರೂ ನಮಗೆ ಕಲಿಯುವ ಪಾಠ ಇದರಲ್ಲಿ ಅಡಗಿದೆ. ಅವಳಿಗೆ… ಅವನಿಗಿರದ ಪ್ರಾಕೃತಿಕ ಸವಾಲುಗಳು! ಅವನಿಗೆ .. ಅವಳಿಗಿರದ ಜವಾಬ್ದಾರಿಗಳು! ಎಂಥಾ ಅದ್ಭುತ ಅಲ್ಲವೇ  ಡಾಕ್ಟರ್ ಅವರ ಈ ನುಡಿಗಳು. ಹೆಣ್ಣು ಹಾಗೂ ಗಂಡು ವಿಭಿನ್ನ ದೈಹಿಕ, ಮಾನಸಿಕ ಕ್ಷಮತೆಯನ್ನು ಪಡೆದವರು. ಅವಳಿರಲಿ, ಅವನಿರಲಿ ಇಬ್ಬರೂ ಒಂದೇ ಆದರೂ ಭಿನ್ನ. ಆರೋಪಗಳ ಸರಮಾಲೆಯ ಮತ್ತೊಬ್ಬರಿಗೆ ಹಾಕುವ ಮುನ್ನ ಸ್ವ ವಿಮರ್ಶೆಗೆ ಅವಕಾಶ ನೀಡುತ್ತದೆ. ಈ ನಿಟ್ಟಿನಲ್ಲಿ ಮನವ ತಟ್ಟಿದ ಪುಸ್ತಕ. ಥ್ಯಾಂಕ್ಯೂ ಡಾಕ್ಟರ್. ****************************************** ಸರಿತಾ ಮಧು

ಪುಸ್ತಕಸಂಗಾತಿ Read Post »

ಇತರೆ, ಲಹರಿ

ಕಾಡುವ ವಿಚಾರ…

ಕಾಡುವ ವಿಚಾರ… ವಸುಂಧರಾ ಕದಲೂರು               ಆ ದಿನ ನಿಜಕ್ಕೂ ಬಹಳ ಕಳವಳಪಟ್ಟಿದ್ದೆ. ಏನು ಮಾಡಿದರೂ ನನಗೆ ನಂಬಿಕೆ ಮೂಡುತ್ತಿರಲಿಲ್ಲ. ಏಕೋ ಎದೆಯಾಳದಲಿ ತೀವ್ರ ನೋವಾಗುತ್ತಿರುವ ಅನುಭವ. ಆ ಕ್ಷಣಕ್ಕೆ ಆಶಾಭಂಗದ ಅರ್ಥವೂ, ದಿಗ್ಭ್ರಮೆ ಎಂಬುದರ ಪರಿಚಯವೂ ಆಗಿಹೋಯಿತು. ಎಳೆ ಮನದ ಭಿತ್ತಿಯಲಿ  ಉದಿಸಿದ ದುಃಖ ಹಸಿ ನೆಲದಲ್ಲಿ ಬೇರೂರಿದ ಬೀಜದಂತಾಯ್ತು.       ಹೌದು, ಮೊದಲ ಬಾರಿಗೆ ಪ್ರೀತಿಯ ‘ಗಾಂಧಿ’ ಅವರ ಸಾವು ಹೇಗಾಯಿತೆಂದು ತಿಳಿದಾಗ ನನಗಾದ ಅನುಭವವೇ ಈ ಮೇಲಿನದ್ದು. ‘ಮಹಾತ್ಮ ಗಾಂಧೀಜೀ’ ಅಂತಹವರನ್ನೂ ಹೇಗೆ ಕೊಲ್ಲುವುದಕ್ಕೆ ಸಾಧ್ಯ? ಅದೂ ನಾವು ಭಾರತದವರೇ!ಬೆಚ್ಚಿ ಬಿದ್ದಿದ್ದೆ.       ದಿನಗಳು ಉರುಳುರುಳಿ ಸಾವಕಾಶದ ಪರದೆ ಸರಿದು ಅಗೋಚರ ಸಟೆಗಳೂ, ಉಳಿದ ಹಲವು ಸತ್ಯಗಳೂ ದೃಗ್ಗೋಚರವಾಗುತ್ತಾ ಆಗುತ್ತಾ ನನ್ನನ್ನು ಕಂಗೆಡಿಸಿದವು. ಸಮಾಧಾನ ಪಡೆಯುವ ಹಂಬಲಕೆ ಯಾರೂ ದಾರಿ ತೋರುತ್ತಿಲ್ಲ. ಹತಾಶೆ ಗೊಂದಲದ ಗೊಂಡಾರಣ್ಯ ಹೊಕ್ಕು ಸಿಕ್ಕ ಸಿಕ್ಕ ಸಿಕ್ಕುಗಳನು ಬಿಡಿಸುತ್ತಾ ಮತ್ತೆ ಹೆಣೆಯುತ್ತಾ ಅಬ್ಬೇಪಾರಿಯಾಗಿ ನಿಂತ ಭಾವ ನನ್ನದಾಗಿತ್ತು.      ಗಾಂಧಿ ಮಾತ್ರವೇ ಅಲ್ಲ, ಕೃಷ್ಣ(?), ಕ್ರಿಸ್ತ, ಬಸವಣ್ಣ…..!! ಏಕೆ ಈ ಜಗತ್ತು ನ್ಯಾಯಪರವಾಗಿರುವುದಿಲ್ಲ? ಬೆಳಕನ್ನು ಕಾಣಬಯಸದೇ ಕತ್ತಲಿನಲ್ಲಿ  ಕಡಲ ದಡದ ಬಂಡೆಗೆ ಅದೆಷ್ಟು ನಿರಂತರದ ಅಲೆಗಳ ಬಡಿದಂತೆ. ಕಣ್ಣ ಮುಂದೆಯೇ ಒಂದು ಸೊಗಸಾದ ಚಿತ್ರವನು ತಿರುಚಿ ಮುರುಟಿ ತಿಪ್ಪೆಗೆಸೆದಂತೆ. ಆಗ ತಿಳಿದ ಸತ್ಯಗಳೂ… ಆಮೇಲಿನ ದೊಂದಿ ಹಚ್ಚಿ ಕಾಣಿಸುವ ಸುಳ್ಳುಗಳೂ… ಈಗಲೂ ನನ್ನನ್ನು ಕಾಡುತ್ತಲೇ ಇವೆ. ಇದಾವುದರ ಗೊಡವೆಗೆ ಹೋಗದೇ ನಿರಾಳದಲ್ಲಿ ಸಮಾಧಿ ಆಗಿಹೋದ ನನ್ನ ಹಿರೀಕರು ನೆನಪಾಗುತ್ತಾರೆ. ಎಂಥಾ ನೆಮ್ಮದಿಯ ಬದುಕು ಅವರದ್ದಿತ್ತೆಂದು ಯಾವಾಗಲೂ ಅನಿಸುತ್ತದೆ. ಆದರೆ, ಬೆಳಕ ಕಿಡಿ ಕಂಡ ಮೇಲೂ ಅದಕ್ಕೆ ಬೆನ್ನು ತಿರುಗಿಸಿ ಪಾತಾಳದ ಆಳದಲಿ ಬದುಕುವುದು ನನಗೆ ಸಾಧ್ಯವಾದೀತೆ!?            ಸತ್ಯವು ತಿಳಿಯಲಾರದೆಂದಲ್ಲ, ತಿಳಿಯಾಗಲಾರದ ರಾಡಿಯಲ್ಲೇ ಈಗ ಬದುಕುತ್ತಿರುವಾಗ ಕನಸು ಹುಟ್ಟದ  ಕತ್ತಲಲ್ಲಿ ಸೊಗಸಾದ ನಿದ್ರೆಗಳನು ಕಾಣುವುದು ಹೇಗೆ?  ಅಪಾರ ನೆಮ್ಮದಿಯ ರಾತ್ರಿಗಳನ್ನು ಕಂಡಿದ್ದ ಪೂರ್ವಿಕರು  ಹೆಚ್ಚು ಒಳ್ಳೆಯ ಅಭಿರುಚಿ ಇದ್ದವರೆಂದೂ, ಸುಖಿಗಳೆಂದೂ, ಸಿರಿವಂತರೆಂದೂ ನಾನು ಗಟ್ಟಿಯಾಗಿ ನಂಬುತ್ತೇನೆ.       ನನ್ನನ್ನು ಕಾಡುವ ಇತಿಹಾಸಗಳು ನನ್ನ ಕನಸಿಗೂ ಕನ್ನ ಹಾಕುತ್ತಿವೆ. ಹಾಗಾದರೆ ಇತಿಹಾಸ ಓದಲೇ ಬಾರದೆ?  ಅಥವಾ ಓದಬಾರದ ಚರಿತ್ರೆಗಳೂ ಇವೆಯೇ?! ಗೊತ್ತಿಲ್ಲ. ಏಕೆಂದರೆ ಗಾಂಧಿ, ಬಸವಣ್ಣ ಅಂತಹವರ ಸಾವು ಹಾಗೂ ಅದರ ಕಾರಣಗಳು ಆಗ ನಾನು ಪಾಠ ಓದುವ ಹುಡುಗಿಯಾಗಿದ್ದಾಗ ಅಪಾರ ವೇದನೆಯೊಡನೆ ದಿಗ್ಭ್ರಮೆ ತಂದಿದ್ದರೆ, ಈಗ ಈ ನೆಲದ ಮೇಲೆ ಜವಾಬ್ದಾರಿಯುಳ್ಳ ಪ್ರಜೆಯಾಗಿ ಬದುಕಬೇಕೆಂದು ನಿಶ್ಚಯಿಸಿರುವಾಗ, ಇಲ್ಲಿ ಕಂಡುಬರುತ್ತಿರುವ ಹಲವು ಸಾಮಾಜಿಕ ಸನ್ನಿವೇಶಗಳ ಹಿನ್ನೆಲೆಯಲ್ಲಿ ಹೆಚ್ಚು ಕಾಡುತ್ತಿವೆ. ***********************************

ಕಾಡುವ ವಿಚಾರ… Read Post »

ಅಂಕಣ ಸಂಗಾತಿ, ದಿಕ್ಸೂಚಿ

ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ ಸಾಮಾನ್ಯವಾಗಿ ನಾವು ಮಾಮೂಲಿ ಕೆಲಸಗಳನ್ನು ಮಾಮೂಲಿ ರೀತಿಯಲ್ಲಿ ಮಾಡಿ ಅತ್ಯದ್ಭುತ ಫಲಿತಾಂಶ ಬಯಸುತ್ತೇವೆ. ನಾವು ಮಾಡುತ್ತಿರುವ ಕೆಲಸವನ್ನು ಎಂದಿನಂತೆ ಮಾಡುವ ರೀತಿಯಲ್ಲಿಯೇ ಮುಂದುವರೆಸಿದರೆ ಹಿಂದೆ ಬಂದ ಫಲಿತಾಂಶವೇ ಬರುವುದು ಸಹಜ. ಕೆಲವರು ನಾವು ಮಾಡುತ್ತಿರುವ ಕೆಲಸವನ್ನೇ ಮಾಡಿ ನೋಡ ನೋಡುತ್ತಿದ್ದಂತೆ ಗೆಲುವು  ಪಡೆಯುತ್ತಾರೆ. ಎಲ್ಲರ ನೆದರಿನಲ್ಲಿಯೂ ಮಿಂಚುತ್ತಾರೆ.ತಾವೂ ಹಿಗ್ಗಿ ಹಲಸಿನಕಾಯಿಯಾಗುತ್ತಾರೆ.  ಅದನ್ನು ನಾವು ಬೆರಗುಗಣ್ಣುಗಳಿಂದ ನೋಡುತ್ತಲೇ ಇದ್ದು ಬಿಡುತ್ತೇವೆ. ಅವರು ಅದೃಷ್ಟವಂತರು ಎಂಬ ಹಣೆಪಟ್ಟಿ ಕಟ್ಟುತ್ತೇವೆ. “ಮನುಷ್ಯನು ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ ಅದೇ ಆತನ ಅದೃಷ್ಟವನ್ನು ನಿರ್ಣಯಿಸುತ್ತದೆ.” ಎನ್ನುವ ಎಚ್ ಡಿ ಥೋರೇ ಅವರ ಮಾತನ್ನು ಕಿವಿಗೆ ಹಾಕಿಕೊಳ್ಳದೇ  ನಾವು ತುಂಬಾ ದುರದೃಷ್ಟವಂತರು ಎಂದು ಕರಬುತ್ತೇವೆ.. ನಿಜ ಸಂಗತಿ ಎಂದರೆ “ಜಯಶಾಲಿಗಳು ವಿಭಿನ್ನ ಕೆಲಸಗಳನ್ನೇನೂ ಮಾಡುವುದಿಲ್ಲ; ಅವರು ಕೆಲಸ ಮಾಡುವ ರೀತಿ ವಿಭಿನ್ನವಾಗಿರುತ್ತದಷ್ಟೆ.”ಮಾಡುವ ಕಾರ್ಯಗಳ ಬಗೆಗೆ ಹಳೆಯದರ ಆಧಾರದ ಮೇಲೆ ವಿಭಿನ್ನವಾಗಿ ವಿಚಾರ ಮಾಡಿ ಹೊಸ ರೀತಿಯಲ್ಲಿ ನಿರ್ವಹಿಸುವುದೇ ಸೃಜನಶೀಲತೆ ಎಂದು ಕರೆಸಿಕೊಳ್ಳುತ್ತದೆ. ಹಳೆಯ ಪದ್ದತಿಗಳನ್ನು ನಂಬಿಕೊಂಡು ಅದಕ್ಕೆ ಜೋತು ಬಿದ್ದು ಪಡೆದ ಜ್ಞಾನವನ್ನು ಅರಿವಾಗಿಸಿಕೊಳ್ಳದೇ ಅಜ್ಜ ನೆಟ್ಟ ಆಲದ ಮರಕ್ಕೆ ಜೋತು ಬೀಳುವ ರೀತಿಯಲ್ಲಿ ಮುನ್ನಡೆಯುತ್ತಿರುವುದರಿಂದ ಹೀಗಾಗುತ್ತಿದೆ. ಈ ಮನಸ್ಥಿತಿಯಿಂದ ನಾವಿಂದು ಹೊರಬರಲೇಬೇಕಿದೆ. ಇಂಥ ಮನೋಭಾವವನ್ನು  ಕಂಡು ಕಾಳಿದಾಸ “ಹಳೆಯದು ಎಂದ ಮಾತ್ರಕ್ಕೆ ಎಲ್ಲವೂ ಒಳ್ಳೆಯದಲ್ಲ.” ಎಂದು ಹೇಳಿ ಹಳೆಯದರ ಪರಿಮಿತಿಯೆಡೆಗೆ ನಮ್ಮ ಗಮನ ಸೆಳೆದಿದ್ದಾನೆ. ಇತಿಹಾಸದ ಪುಟಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿ ತಮ್ಮ ಹೆಸರು ದಾಖಲಿಸಿಕೊಂಡ ಅಲ್ಬರ್ಟ್ ಐನಸ್ಟೀನ್, ಸಿ ವಿ ರಾಮನ್ ಥಾಮಸ್ ಅಲ್ವಾ ಎಡಿಸನ್, ಸರ್ ಎಮ್ ವಿಶ್ವೇಶ್ವರಯ್ಯನವರಂಥವರ ಯಶಸ್ಸಿಗೆ ಸೃಜನಶೀಲತೆಯು ಬಹುಮುಖ್ಯ ಪಾತ್ರ ವಹಿಸಿದೆ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸೃಜನಶೀಲತೆ ಎಂದರೆ. . . . .? “ಮಾಡುವ ಕೆಲಸ ಕಾರ್ಯಗಳನ್ನು ಸಾಮಾನ್ಯವಾಗಿ ಯೋಚಿಸದೇ ವಿಭಿನ್ನ ದೃಷ್ಟಿಕೋನದಿಂದ ಆಲೋಚಿಸಿ ಹೊಸ ಸಂಶೋಧನೆಗಳಿಗೆ ಆವಿಷ್ಕಾರಗಳಿಗೆ ಮುನ್ನುಡಿ ಬರೆಯಲು ಸಹಕರಿಸುವ ಅಂಶವೇ ಸೃಜನಶೀಲತೆ ಎಂದು ಸೃಜನಶೀಲತೆಯು ನಮ್ಮನ್ನು ಇತರರಿಂದ  ವಿಭಿನ್ನ ಎಂದು ತೋರಿಸುತ್ತದೆ. ಜಗತ್ತಿನಲ್ಲಿ ಕುತೂಹಲಕಾರಿ ವಿಸ್ಮಯಕಾರಿ ಸಂಗತಿಗಳೆಡೆಗೆ ಕಣ್ಣರಳಿಸಿ ನೋಡುತ್ತ ಈ ಸತ್ಯ ಸಂಗತಿಗಳ ಬೆನ್ನು ಹತ್ತಿ ತಿಳಿದುಕೊಳ್ಳುವ ಹಂಬಲವನ್ನು ಮನದಲ್ಲಿ ತುಂಬಿಕೊಂಡು ನಾವೂ ಅಂಥ ಚಕಿತಗೊಳಿಸುವ ¸ಸಂಗತಿಗಳನ್ನು ಇದ್ದುದರಲ್ಲಿಯ ನ್ಯೂನತೆಗಳನ್ನು ತಿದ್ದಿ ಉತ್ತಮ ಪಡಿಸುವುದು ಹೇಗೆ ಎಂದು ನಿರಂತರವಾಗಿ ಯೋಚಿಸಿ ಊಹಿಸಿ ಕಲ್ಪನೆಗಳನ್ನು ಕಟ್ಟಿಕೊಂಡು ಆ ಕಲ್ಪನೆಗಳನ್ನು ನನಸಾಗಿಸುವುದೇ ಸೃಜನಶೀಲತೆ.ಹೊಸತನಕ್ಕೆ  ತುಡಿಯುವ ಮನ ಸಹಜವಾಗಿ ಸೃಜನಶೀಲತೆಯತ್ತ ವಾಲುತ್ತದೆ. ಇಂಥವರನ್ನು ಸೃಜನಶೀಲ ಮನಸ್ಸುಳ್ಳವರು ಎಂದು ಗುರುತಿಸಿ ಗೌರವಿಸುತ್ತೇವೆ. ನೀವೂ ಸೃಜನಶೀಲರಾಗಬೇಕೇ? ಹಾಗಾದರೆ ಈ ಅಂಶಗಳನ್ನು ನಿಮ್ಮದಾಗಿಸಿಕೊಳ್ಳಿ ಪ್ರಶ್ನಿಸುವುದನ್ನು ರೂಢಿಸಿಕೊಳ್ಳಿ ಯಾರೋ ಏನೋ ಹೇಳಿದರು ಎಂದು ಸುಮ್ಮನೆ ನಂಬಿ ಬಿಡಬೇಡಿ. ಪ್ರಶ್ನಿಸಿಕೊಳ್ಳಿ ಅದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಿ. ಉತ್ತರ ನಿಮಗೆ ಸಮಾಧಾನ ನೀಡುವವರೆಗೆ ಪ್ರಯತ್ನ ಮುಂದುವರೆಯಲಿ. ಕುತೂಹಲವಿರಲಿ ಮೂಲತಃ ಸೃಜನಶೀಲತೆ ನಿಂತಿರುವುದೇ ಕುತೂಹಲ ಪ್ರವೃತ್ತಿಯ ಮೇಲೆ. ಯಾವುದೇ ಸಂದರ್ಭ ಸನ್ನಿವೇಶ ಪ್ರಸಂಗಗಳಲ್ಲಿಯ ಅನುಭವಗಳನ್ನು ಕುತೂಹಲ ದೃಷ್ಟಿಯಲ್ಲಿಯೇ ನೋಡುವುದು. ಕುತೂಹಲಭರಿತರಾಗಿಯೇ ಆಸ್ವಾದಿಸುವುದನ್ನು ಮೈಗೂಡಿಸಿಕೊಳ್ಳಿ. ಸ್ವಂತಿಕೆಯ ಹಂಬಲವಿರಲಿ ಮತ್ತೊಬ್ಬರ ವಿಚಾರಗಳನ್ನು ಅಂಧಾನುಕರಣೆಯಂತೆ ಒಪ್ಪದಿರಿ. ಪರಾಮರ್ಶಿಸಿ ಸ್ವತಂತ್ರವಾದ ನಿಲುವುಗಳನ್ನು ತಳೆಯಿರಿ. ಈ ಪ್ರಕ್ರಿಯೆ ನಡೆಯುತ್ತಿರುವಾಗ ಮಾನಸಿಕ ಸಂಘರ್ಷ ನಡೆಯುತ್ತದೆ. ನೀವು ತೆಗೆದುಕೊಂಡ ಸ್ವತಂತ್ರ ನಿರ್ಧಾರಗಳಿಗೆ ಪ್ರಬಲವಾದ ಸಮರ್ಥನೆಗಳಿರಲಿ.ಅವು ವಾಸ್ತವಿಕತೆಯಿಂದ ಕೂಡಿರಲಿ. ಕಲ್ಪನಾಶಕ್ತಿ ಪುಟಿಗೊಳಿಸಿ ಊಹಿಸುವ ಸಾಮರ್ಥ್ಯವೇ ಕಲ್ಪನಾಶಕ್ತಿ. ಅಗಾಧವಾದ ಕಲ್ಪನಾಶಕ್ತಿಯನ್ನು ಪುಟಿಗೊಳಿಸಿ ಸಾಧಿಸಬೇಕೆನ್ನುವ ಕ್ಷೇತ್ರದಲ್ಲಿ ಪೂರ್ವ ನಿರ್ಧರಿತ ಪರಿಕಲ್ಪನೆಗಳನ್ನು ಬಳಸಬೇಕೆಂದರೆ ಕಲ್ಪನಾಶಕ್ತಿ ಅತ್ಯಗತ್ಯ. ಕಲ್ಪನಾಶಕ್ತಿಯನ್ನು ವೃದ್ಧಿಸಿಕೊಂಡಷ್ಟು ವಿಷಯ ವಿಸ್ತರಿಸುವ ವಿಷ್ಲೇಶಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ. ಸಣ್ಣ ಸಂಗತಿಯನ್ನೂ ವಿಭಿನ್ನ ಆಯಾಮದಿಂದ ನೋಡಿ ಅದಕ್ಕೆ ಹೊಸ ರೂಪವನ್ನು ನೀಡಲು ಸಾಧ್ಯವಾಗುವುದು. ಪ್ರಯೋಗಶೀಲತೆ ಇರಲಿ ಪ್ರಯೋಗಶೀಲತೆಯನ್ನು ಸೃಜನಶೀಲತೆಯ ತಾಯಿ ಎಂದು ಕರೆಯಬಹುದು. ಕೇಳಿದ ತಿಳಿದ ವಿಷಯಗಳ ಬಗ್ಗೆ ಗೋಚರ ಇಲ್ಲವೇ ಅಗೋಚರ ರೀತಿಯಲ್ಲಿ ಪ್ರಯೋಗಶೀಲತೆ ನಿರಂತರವಾಗಿ ನಡೆಸಿ. ಇದು ಅಪರೋಕ್ಷವಾಗಿ ನಿಮ್ಮಲ್ಲಿ ಸಾಹಸ ಪ್ರವೃತ್ತಿಗೆ ಬೇಕಾದ ಅಸಾಧಾರಣ ಧೈರ್ಯವನ್ನು ತುಂಬುತ್ತದೆ. ಸವಾಲುಗಳನ್ನು ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ. ಚಿಂತನೆಯ ರೀತಿ ಬದಲಿಸಿ ಹೇಳಿದ್ದನ್ನು ಕೇಳಿದ್ದನ್ನು ಓದಿದ್ದನ್ನು ಬರೆದಿದ್ದನ್ನು ಏಕಮುಖೀ ರೀತಿಯಲ್ಲಿ ಯೋಚಿಸಿ ಒಪ್ಪಿಕೊಂಡು ಬಿಡದೇ ಯಾವುದೇ ಒಂದು ವಿಷಯದ ಬಗ್ಗೆ ವಿವಿಧ ಆಯಾಮಗಳಲ್ಲಿ ಚಿಂತಿಸಿದರೆ ಒಂದೇ ಕಾರ್ಯವನ್ನು ವಿವಿಧ ರೀತಿಯಲ್ಲಿ ಮಾಡಲು ಹಲವಾರು ಸಾಧ್ಯತೆಗಳು ಸಿಗುತ್ತವೆ. ಹೀಗೇ ನಿಮ್ಮ ಏಕ ಮುಖಿ ಚಿಂತನೆಯನ್ನು ಬಹುಮುಖಿ ಚಿಂತನಾ  ವಲಯಕ್ಕೆ ವಿಸ್ತರಿಸಿಕೊಳ್ಳಿ. ಹೊಸತನದ ಜೊತೆಗೆ ಮುಕ್ತತೆ ಇರಲಿ ಸೃಜನಶೀಲತೆಯು ಹೊಸತನದ ವಿನ್ಯಾಸದಲ್ಲಿಯೇ ಅಡಗಿದೆ. ನೊಡುವ ನೋಟದಲ್ಲಿ, ಕಾರ್ಯ ನಿರ್ವಹಣೆಯಲ್ಲಿ,ಚಿಂತನೆಯಲ್ಲಿ ವರ್ತನೆಯಲ್ಲಿ ಒಟ್ಟಿನಲ್ಲಿ ಪ್ರತಿಯೊಂದರಲ್ಲಿ ಹೊಸತನವೇ ಮಿಂಚುತಿರಲಿ. ಪೂರ್ವಾಗ್ರಹಪೀಡಿತರಾಗಿ ಯಾವುದೇ ಒಂದು ನಿರ್ಧಿಷ್ಟ ವಿಚಾರಗಳಿಗೆ ಕಟ್ಟಿ ಹಾಕಿಕೊಳ್ಳಬೇಡಿ. ಎಲ್ಲವನ್ನೂ ಮುಕ್ತ ಮನಸ್ಸಿನಿಂದ ಸ್ವಾಗತಿಸಿ. ಸಾಧಕ ಬಾಧಕಗಳನ್ನು ಗಮನದಲ್ಲಿರಿಸಿ ಕಾರ್ಯೋನ್ಮುಖರಾಗುವುದು ಉಚಿತ. ಉತ್ಸಾಹ ಚಿಮ್ಮುತಲಿರಲಿ ಉತ್ಸಾಹ ಹೊಸತನದ ಹೊಸ್ತಿಲಲ್ಲಿ ವಿವಿಧ ರೀತಿಯ ನೂತನ ವಿಚಾರಗಳಿಗೆ ನಾಂದಿ ಹಾಡುತ್ತದೆ. ಪ್ರತಿ ಬಾರಿ ಹೊಸತನಕ್ಕೆ ತುಡಿಯುವದರ ಜೊತೆಗೆ ಹಳೆಯದರಲ್ಲಿ ಅತ್ಯುತ್ತಮವಾದುದನ್ನು ಹೆಕ್ಕಿ ತೆಗೆಯಬೇಕು.ಅದನ್ನೇ ಬುನಾದಿಯನ್ನಾಗಿಸಿಕೊಂಡರೆ ಅವಿಷ್ಕಾರ ಪ್ರವೃತ್ತಿಯು ನಿಮ್ಮದಾಗುತ್ತದೆ. ಅವಿಷ್ಕಾರ ಪ್ರವೃತ್ತಿಯು ನಿಮ್ಮನ್ನು ಗೆಲುವಿನ ಶಿಖರದ ತುತ್ತ ತುದಿಯ ಮೇಲೆ ನಿಲ್ಲುವಂತೆ ಮಾಡುತ್ತದೆ. ಪ್ರೇರೇಪಿಸಿಕೊಳ್ಳಿ ಸೃಜನಶೀಲತೆಗೆ ಎಲ್ಲಡೆಯೂ ಮಣೆ ಮನ್ನಣೆ ಹೊಗಳಿಕೆ ಇದ್ದೇ ಇದೆ. ಇದರಿಂದ ಬಹಿರಂಗ ಪ್ರೇರಣೆ ದೊರೆಯುವುದು ಖಚಿತ.  ಕೇವಲ ಬಹಿರಂಗ ಪ್ರೇರಣೆಯೊಂದೇ ಸಾಲದು. ಈ ಬಹಿರಂಗ ಪ್ರೇರಣೆ ಅಂತಃಪ್ರೇರಣೆಯಾಗಿ ಪರಿವರ್ತನೆಯಾಗಬೇಕು. ನಿಮ್ಮನ್ನು ಪ್ರೇರೇಪಿಸಿಕೊಂಡಾಗ ಮಾತ್ರ ಸೃಜನಶೀಲತೆ ಹೊರೆ ಹೊಮ್ಮುವುದು. ಸೃಜನಶೀಲತೆಯು ಎಲ್ಲರಿಗೂ ಎಟಕುವಂಥದ್ದು..ಏಕೆಂದರೆ  ಇದು ಮಾನವ ಸಹಜವಾದ ಗುಣ. ದಿನ ನಿತ್ಯದ ಬದುಕಿನಲ್ಲಿ ಜೀವನೋತ್ಸಾಹವನ್ನು ತುಂಬಿಕೊಂಡು ಸುತ್ತಮುತ್ತಲಿರುವ ಸಂಗತಿಗಳೆಡೆಗೆ ಆಸಕ್ತಿ ಯ ಕಂಗಳಿಂದ ನೋಡುವುದನ್ನು ರೂಢಿಸಿಕೊಂಡರೆ ಸೋಲಲ್ಲೂ ಸಂಭ್ರಮಿಸುವ ಗಳಿಗೆ ಸನ್ನಿಹಿತವಾಗುವುದು. ಸೋಲನ್ನು ಗೆಲುವಾಗಿ ಪರಿವರ್ತಿಸುವ ಗುಣ ಸೃಜನಶೀಲತೆಗಿದೆ. ಬದುಕಿನ ಎಲ್ಲ ಹಂತದ ಕಾರ್ಯಗಳ ಗೆಲುವಿಗೂ ಸೃಜನಶೀಲತೆ ಬೇಕೇ ಬೇಕು. ಸೃಜನಶೀಲತೆಯು ವಿವೇಕವನ್ನು ಹೆಚ್ಚಿಸುವುದು.ಎಂಥ ಕ್ಲಿಷ್ಟಕರ ಸನ್ನಿವೇಶಗಳಲ್ಲೂ ಸಹನೆ ಕಳೆದುಕೊಳ್ಳದೇ ಪರಿಹಾರ ಕಂಡುಕೊಳ್ಳುವ ಪಕ್ವತೆ ನೀಡುವ ಶಕ್ತಿ,ನಮ್ಮ ಎಲ್ಲ ಶಕ್ತಿಗಳನ್ನು ಸಮರ್ಥವಾಗಿ ಉಪಯೋಗಿಸಿ ಸರ್ವತೋಮುಖ ವ್ಯಕ್ತಿತ್ವ ನೀಡುವ ಶಕ್ತಿ ಸೃಜನಶೀಲತೆಗೆ ಮಾತ್ರ ಇದೆ. ನೀವು ಯಶಸ್ಸು ಗಳಿಸಬೇಕೆಂದರೆ ನೀವು ನೂತನ ದಾರಿಗಳನ್ನು ಆರಿಸಬೇಕು.ಈಗಾಗಲೇ ಒಪ್ಪಿರುವ ನಡೆದಾಡಿರುವ ದಾರಿಗಳನ್ನು ಹೊರತುಪಡಿಸಿ ಸೃಜನಶೀಲತೆಯು ವಿಶ್ವದಾದ್ಯಂತ ಬಂದೂಕಿನ ಗುಂಡುಗಳಿಗಿಂತ ಹೆಚ್ಚು ಶಬ್ದ ಮಾಡುತ್ತ ಸಾಗುತ್ತದೆ ಎನ್ನುವುದು ನೆನಪಿರಲಿ. ಹಾಗಾದರೆ ತಡವೇಕೆ ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ. *********************** ಲೇಖಕರ ಬಗ್ಗೆ ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

Read Post »

ಅಂಕಣ ಸಂಗಾತಿ, ಮುಖಾಮುಖಿ

ಮಕ್ಕಳು ಮತ್ತು ನಿಸರ್ಗ ನನ್ನನ್ನು ಮತ್ತೆ ಮತ್ತೆ ಹಿಡಿದಿಡುತ್ತವೆ ತಮ್ಮಣ್ಣ ಬೀಗಾರ ಮಕ್ಕಳ ಸಾಹಿತಿ ತಮ್ಮಣ್ಣ ಅವರ ಕುರಿತು… ತಮ್ಮಣ್ಣ ಬೀಗಾರ ಅವರು ಯಲ್ಲಾಪುರದ ಬೀಗಾರದವರು.‌1959 ನವ್ಹೆಂಬರ್ 22 ರಂದು ಜನಿಸಿದರು. ಸ್ನಾತಕೋತ್ತರ ಪದವೀಧರ , ಸಿದ್ದಾಪುರದ ಬಿದ್ರಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕಳೆದ 37 ವರ್ಷಗಳಿಂದ ಮಕ್ಕಳ ಜೊತೆ ಮಕ್ಕಳಾಗಿದ್ದರು. ಮಕ್ಕಳ ಸಾಹಿತ್ಯದ ಬಗ್ಗೆ ಬರೆಯುವವರು ವಿರಾಳತೀ ವಿರಳ. ಅದರೆ ತಮ್ಮಣ್ಣ ಮಕ್ಕಳ ಸಾಹಿತ್ಯವನ್ನು ತಮ್ಮ ಅಭಿವ್ಯಕ್ತಿಯಾಗಿ ಆಯ್ಕೆ ಮಾಡಿಕೊಂಡರು.‌ಚಿತ್ರ ಕಲೆ ಸಹ ಇವರ ಮತ್ತೊಂದು ಅಭಿವ್ಯಕ್ತಿ ಮಾಧ್ಯಮ‌.‌ತಮ್ಮ ಪಾಡಿಗೆ ತಾವು ಇದ್ದು ಬಿಡುವವರು. ಗುಬ್ಬಚ್ಚಿ ಗೂಡು,ಚಿಂವ್ ಚಿಂವ್, ಜೀಕ್ ಜೀಕ್, ಪುಟಾಣಿ ಪುಡಿಕೆ, ಮಲ್ನಾಡೆ ಮತಾಡು ಇವರ ಕವನ ಸಂಕಲನ ಗಳು ,‌ಅಮ್ಮನ ಚಿತ್ರ ,ಪುಟ್ಟನ‌ ಕೋಳಿ ಮುಂತಾದವು ಮಕ್ಕಳಾ ಕಥಾ ಸಂಕಲನಗಳು. ಬಾವಲಿ ಗುಹೆ ಮಕ್ಕಳ ಕಾದಂಬರಿ.ಹಸಿರೂರು ಹುಡುಗ ಕೃತಿಗೆ ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮಲ್ನಾಡೆ ಮಾತಾಡು ಕೃತಿಗೆ ವಸುದೇವ ಭೂಪಾಲಂ‌ ದತ್ತಿ ಪ್ರಶಸ್ತಿ ಸಿಕ್ಕಿದೆ. ಉತ್ತಮ ರಾಜ್ಯ ಶಿಕ್ಷಕ, ರಾಷ್ಟ್ರ ಶಿಕ್ಷಕರ ಪ್ರಶಸ್ತಿ ಸಹ ಇವರಿಗೆ ಸಂದಿವೆ.‌ಪ್ರಜಾವಾಣಿ ಶಿಶು ಕಾವ್ಯಪ್ರಶಸ್ತಿ ಸಹ ಪಡೆದಿದ್ದಾರೆ. ಸಂಗಾತಿ ಕನ್ನಡ ವೆಬ್ ಗಾಗಿ ಮಕ್ಕಳ ಸಾಹಿತಿತಮ್ಮಣ್ಣ ಬೀಗಾರ ಅವರು ನಾಗರಾಜ ಹರನಹಳ್ಳಿ ಅವರ ಜೊತೆ ಈ ಸಲ ಮುಖಾಮುಖಿಯಾಗಿ ದ್ದಾರೆ…………………… ಕತೆ ಕವಿತೆಗಳನ್ನು ಯಾಕೆ ಬರೆಯುತ್ತೀರಿ? ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಅವನುಕಂಡುಕೊಂಡ ಅನುಭವ, ಸತ್ಯ, ಸಂಕಷ್ಟಗಳನ್ನೆಲ್ಲಾ ಕರಗಿಸಿಕೊಂಡಿರುತ್ತಾನೆ. ಅಂತಹುಗಳನ್ನೆಲ್ಲ ತನ್ನ ಆಸಕ್ತಿ, ಅವಕಾಶ, ಸಾಧ್ಯತೆಗಳ ಮೇಲೆ ಅಭಿವ್ಯಕ್ತಿ ಪಡಿಸಲು ಪ್ರಯತ್ನಿಸುತ್ತಾನೆ. ಅದರಿಂದಾಗಿಯೇ ಕಲೆಗಳೆಲ್ಲ ಹುಟ್ಟಿಕೊಂಡಿದ್ದು ಅನಿಸುತ್ತದೆ. ನಾನು ನನ್ನಂತಹ ಅನೇಕರು ಕತೆ, ಕವಿತೆಗಳನ್ನು ಅಭಿವ್ಯಕ್ತಿಯ ಮಾಧ್ಯಮವಾಗಿ ಕಂಡುಕೊಂಡಿದ್ದಾರೆ. ಅದೇ ರೀತಿ ನಾನು ಕೂಡಾ ನನ್ನಲ್ಲಿ ಕರಗಿರುವ ಸಂವೇದನೆಗಳನ್ನ ಅಭಿವ್ಯಕ್ತಿ ಪಡಿಸಲು ಕತೆ ಕವಿತೆಗಳನ್ನು ಬರೆಯುತ್ತೇನೆ ಅಂದುಕೊಂಡಿದ್ದೇನೆ. ಇಲ್ಲಿ ನನ್ನಿಂದ ಸಮಾಜದ ಒಳಿತಿನ ವಿಸ್ತಾರಕ್ಕೆ ಒಂದಿಷ್ಟು ಸಹಾಯ ಆಗಬೇಕು ಹಾಗೂ ಸಮಾಜದ ಪ್ರೀತಿ ನನಗೆ ಸಿಗಬೇಕು ಎಂಬ ಆಸೆಯೂ ಮೈಗೂಡಿದೆ ಎಂದು ಹೇಳಬಹುದು. ನಾನು ವ್ಯಂಗ್ಯಚಿತ್ರ ಹಾಗೂ ಇತರ ಕಲೆಗಳನ್ನೂ ಅಭಿವ್ಯಕ್ತಿಯ ಮಾಧ್ಯಮವಾಗಿ ಬಳಸಿದ್ದೇನೆ ಅನ್ನುವ ಖುಷಿಯೂ ಸೇರಿದೆ. ಮಕ್ಕಳ ಸಾಹಿತ್ಯ ಕೃಷಿಗೆ ಒಲವು ಹೇಗೆ ಬಂತು, ಅಂತಹ ನಡೆಗೆ ಕಾರಣವೇನು? ನಾನು ಪ್ರಾಥಮಿಕ ಶಾಲಾ ಶಿಕ್ಷಕನಾಗಿ ಪ್ರೀತಿಯಿಂದ ವೃತ್ತಿ ನಿರ್ವಹಿಸಿದವನು. ಶಿಕ್ಷಕನಾದವನಿಗೆ ಮಕ್ಕಳೊಡನೆಯ ಸಂಬಂಧ ಮತ್ತು ಆಪ್ತತೆ ಹೆಚ್ಚು. ಮಕ್ಕಳಿಗೆ ಕತೆ, ಕವಿತೆ ಕೇಳುವುದು, ಹೇಳುವುದು, ಚಿತ್ರ ಬರೆಯುವುದು ಎಲ್ಲ ತುಂಬಾ ಇಷ್ಟ. ಮಕ್ಕಳಿಗೆ ಕಥೆ ಹೇಳುತ್ತ ಜೊತೆಗೆ ನನ್ನದೇ ರಚನೆಯ ಕಥೆ ಹೇಳಲು ಪ್ರಾರಂಭಿಸಿದೆ. ಮಕ್ಕಳಿಗಾಗಿ ಚಿತ್ರ ಬರೆಯುತ್ತ ಕಲೆಯನ್ನೂ ಬೆಳೆಸಿಕೊಂಡೆ. ಹೀಗೆ ಕಥೆ ಕವನಗಳನ್ನು ಮಕ್ಕಳಿಗಾಗಿ ಬರೆಯುತ್ತ… ಅವುಗಳಿಗೆ ಅವರ ಖುಷಿಯ ಪ್ರತಿಕ್ರಿಯೆ ಕಾಣುತ್ತ ನಾನು ಮಕ್ಕಳ ಜಗತ್ತಿನಲ್ಲಿಯೇ ಇನ್ನಿಲ್ಲದ ಪ್ರೀತಿಯಿಂದ ತೊಡಗಿಕೊಂಡೆ. ಪ್ರಸ್ತುತ ಮಕ್ಕಳಿಗಾಗಿ ಇಪ್ಪತ್ತೆರಡು ಕೃತಿ ಪ್ರಕಟಿಸಿರುವ ನಾನು ಮಕ್ಕಳ ಖುಷಿ ಹಿಗ್ಗಿಸುವ, ಹೃದಯ ವಿಸ್ತರಿಸುವ ಪ್ರಯತ್ನದಲ್ಲಿ ಸದಾ ತೊಡಗಿಕೊಂಡಿದ್ದೇನೆ. ಶಿಕ್ಷಕ ವೃತ್ತಿ ಮತ್ತು ಮಕ್ಕಳ ಒಡನಾಟ ನಿಮ್ಮಲ್ಲಿ ಮಗುತನವನ್ನು ಪೋಷಿಸಿತೆ? ನಿಜ. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆಯುವುದು ಪ್ರೀತಿಯ ಧ್ಯಾನದಿಂದ ಸಿದ್ಧಿಸುವಂತಹದ್ದು. ಮಕ್ಕಳ ಸಾಹಿತ್ಯವೆನ್ನುವುದು ‘ಪ್ರಭುದ್ಧತೆಯ ಮೇಲೆ ಮುಗ್ಧತೆಯ ಸವಾರಿ’ ಎಂದು ಎಚ್. ಎಸ್. ವಿ. ಹೇಳಿದ್ದಾರೆ. ಮಗುತನವನ್ನು ನಮ್ಮಲ್ಲಿ ಪೋಷಿಸುವುದು ಮಕ್ಕಳ ಮೇಲಿನ ಪ್ರೀತಿಯೇ, ಅವರ ಒಡನಾಟವೇ. ಈಗ ನನಗೆ ಅರವತ್ತಾಗಿದ್ದರೂ ಮಕ್ಕಳಿಗಾಗಿ ಬರೆಯುತ್ತ… ಅವರೊಂದಿಗೆ ತಾದಾತ್ಮ್ಯ ಹೊಂದುವುದು, ಮಗುತನದ ಖುಷಿ ಅನುಭವಿಸುವುದು ಸಾಧ್ಯವಾಗಿದೆ. ಅದಕ್ಕೆ ವೃತ್ತಿ, ಮಕ್ಕಳ ಒಡನಾಟ ಪ್ರೀತಿಗಳೇ ಕಾರಣ. ಮಕ್ಕಳ ಮೇಲಿನ ಅಕ್ಷರ ಪ್ರಯೋಗದ ಸಾಧ್ಯತೆಗಳನ್ನು ನೀವು ಶಾಲಾ ಕೋಣೆಯಲ್ಲಿ ಮಾಡಿದಾಗ ವಿಶೇಷ ಅನುಭವ ಆಗಿದ್ದುಂಟೆ?    ನಾನು ಯಾವಾಗಲೂ ಮಕ್ಕಳು ಖುಷಿ ಖುಷಿಯಾಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತ ಅವರು ತಾನಾಗಿ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದು ಹಂಬಲಿಸಿದವನು. ಅದಕ್ಕಾಗಿ ಶಾಲೆಯಲ್ಲಿ ಅಂತಹ ಪರಿಸರ ಹಾಗೂ ಆಪ್ತತೆಯನ್ನು ಮೂಡಿಸುವುದು ಬಹು ಮುಖ್ಯವಾಗುತ್ತದೆ. ಮಕ್ಕಳಿಗಾಗಿ ಕಥೆ ಹೇಳುವುದು, ಅವರಿಂದಲೇ ಕಥೆ ಕವನ ಬರೆಯಿಸಿ ಹೊತ್ತಿಗೆ ತಯಾರಿಸುವುದು, ಚಿತ್ರ ಬರೆಯಿಸುವುದು, ಕಲಾಕೃತಿಗಳ ತಯಾರಿ, ನಾಟಕ ಹಾಗೂ ಇತರ ಸಾಂಸ್ಕೃತಿಕ ಚಟುವಟಿಕೆ, ಎಲೆ ಕಲೆ, ಹಸಿರು ಶಾಲೆ, ಶೈಕ್ಷಣಿಕ ಉತ್ಸವ, ಕಲಾ ಪ್ರದರ್ಶನ ಹೀಗೆ ನನ್ನ ವೃತ್ತಿ ಉದ್ದಕ್ಕೂ ಮಾಡಿದ್ದೇನೆ. ಇದಕ್ಕೆ ಶಾಲಾ ಪರಿಸರವಷ್ಟೇ ಅಲ್ಲಕದೆ ಸಮಾಜದ ಎಲ್ಲ ಸ್ಥರದಿಂದಲೂ ಪ್ರೋತ್ಸಾಹ ಸಿಕ್ಕಿದ್ದು ಖುಷಿ ಉಂಟುಮಾಡುತ್ತದೆ. ಸರಕಾರಿ ಶಾಲೆ ಒಂದು ಮಾದರಿ ಶಾಲೆಯಾಗಿ ರೂಪುಗೊಂಡಿದ್ದು ಹೆಮ್ಮೆ. ಕಥೆ ಅಥವಾ ಕವಿತೆ ಹುಟ್ಟುವ ಸಮಯ ಯಾವುದು? ಕಥೆ ಕವಿತೆಗಳು ಹುಟ್ಟುವ ಸಮಯ ಯಾವುದು ಎಂದು ನಿರ್ಧಿಷ್ಟವಾಗಿ ಹೇಳಲಾಗದು. ನಾವು ನಮ್ಮ ಸುತ್ತಮುತ್ತಲಿನ ಆಗುಹೋಗುಗಳಿಗೆ ಸ್ಪಂದಿಸುತ್ತ ಅವುಗಳನ್ನು ನಾವು ಕಂಡುಕೊಂಡ ಸತ್ಯದ ಆಧಾರದ ಮೇಲೆ ಕರಗಿಸಿ ಕೊಂಡಿರುತ್ತೇವೆ. ಇಂತಹ ಕರಗಿರುವ ಸಂಗತಿಗಳೇ ಕಥೆ ಕವಿತೆಗಳಾಗಿ ಯಾವಾಗ ಬೇಕಾದರೂ ಹೊರ ಬರಬಹುದು. ಆದರೆ ಕಥೆ ಕವಿತೆಗಳನ್ನು ಬರೆಯುವವನ ಸಂವೇದನೆ, ಅಧ್ಯಯನ, ಪ್ರೀತಿ, ಆಸಕ್ತಿಗಳೆಲ್ಲ ಅವು ರೂಪುಗೊಳ್ಳುವಲ್ಲಿ ಮಹತ್ವ ಪಡೆದಿರುತ್ತವೆ.  ನಿಮ್ಮ ಕಥೆಗಳ ವಸ್ತು ವ್ಯಾಪ್ತಿ ಯಾವುದು, ಪದೇ ಪದೇ ಕಾಡುವ ವಿಷಯಗಳಾವವು?  ನಾನು ಮಕ್ಕಳ ಜಗತ್ತಿನವನು. ಮಕ್ಕಳು ಮತ್ತು ನಿಸರ್ಗ ನನ್ನ ಸಾಹಿತ್ಯದಲ್ಲಿ ನಿರಂತರವಾಗಿ ವಸ್ತುಗಳಾಗಿವೆ. ಮಕ್ಕಳ ಆಟ, ಖುಷಿ, ಸಿಟ್ಟು, ಸಂಕಟ ಎಲ್ಲವೂ ಅವರ ಸುತ್ತಲಿನ ಮನೆ, ಶಾಲೆ, ಹಸಿರಿನ ಪರಿಸರ ಮುಂತಾವುಗಳೊಡಗೂಡಿ ಕಾಣಿಸಿಕೊಂಡಿವೆ. ಮಕ್ಕಳು ಮತ್ತು ನಿಸರ್ಗ ನನ್ನನ್ನು ಮತ್ತೆ ಮತ್ತೆ ಹಿಡಿದಿಡುತ್ತವೆ. ನೀವು ಬರೆದ ಕಥೆ ಕವಿತೆಗಳಲ್ಲಿ ನಿಮ್ಮ ಬಾಲ್ಯ, ಹರಯ ಇಣುಕಿದೆಯೇ?   ದಟ್ಟ ಅರಣ್ಯದಿಂದ ಕೂಡಿದ ಯಾವುದೇ ಆಧುನಿಕ ಸೌಲಭ್ಯ ಇಲ್ಲದ ಹಳ್ಳಿಯಲ್ಲಿ ನನ್ನ ಬಾಲ್ಯ ಕಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರದವನು ನಾನು. ಇಲ್ಲಿನ ಕಾಡು, ನೀರು, ಗುಡ್ಡ, ಬೆಟ್ಟ, ಆಗಿನ ಮಕ್ಕಳ ಸ್ವಾತಂತ್ರ್ಯ, ಆಟ, ಸಾಹಸಗಳೆಲ್ಲ ವಸ್ತುವಾಗಿ ನನ್ನ ಪುಸ್ತಕಗಳಲ್ಲಿ ಕಾಣಿಸಿ ಕೊಂಡಿವೆ. ನಂತರದ ವೃತ್ತಿ ಬದುಕಿನ ಉದ್ದಕ್ಕೂ ಪಡೆದ ಅನುಭವಗಳೂ ಸೇರಿವೆ. ನನ್ನ ‘ಹಸಿರೂರಿನ ಹುಡುಗ’ ಪುಸ್ತಕದಲ್ಲಿ ಬಾಲ್ಯದ ಕಥೆಗಳನ್ನು ಮೊಗೆದು ಇಟ್ಟಿದ್ದೇನೆ. ಎಲ್ಲ ಪುಸ್ತಕಗಳಲ್ಲೂ ಬಾಲ್ಯ ರೂಪಾಂತರದ ಮೂಲಕ ಇಣುಕುತ್ತಲೇ ಇರುತ್ತದೆ. ಪ್ರತಿಯೊಬ್ಬ ಲೇಖಕರಿಗೂ ಅವರ ಸಾಹಿತ್ಯದಲ್ಲಿ ಬಾಲ್ಯ ಹಾಗೂ ಅವರ ಪರಿಸರ ಪ್ರಭಾವಿಸುತ್ತಲೇ ಇರುತ್ತದೆ ಎಂದು ನನಗೆ ಅನಿಸುತ್ತದೆ.  ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು?  ನಾನು ಮಕ್ಕಳ ಮೇಲೆ ಬಹಳ ವಿಶ್ವಾಸ ಇಡುತ್ತೇನೆ. ಮಕ್ಕಳ ಹೃದಯ, ಮನಸ್ಸುಗಳು ವಿಸ್ತಾರ ಆಗುವುದರಿಂದ ಒಳ್ಳೆಯ ಸಮಾಜ ಮತ್ತು ಆಡಳಿತ ವ್ಯವಸ್ತೆಯ ನಿರ್ಮಾಣ ಆಗುತ್ತದೆ. ರಾಜಕೀಯ ಸೇರಿದಂತೆ ಎಲ್ಲರಿಗೂ ತಮ್ಮ ನಡೆಯ ಕುರಿತಾಗಿ ಮುಕ್ತ ಆತ್ಮಾವಲೋಕನ ಇರಬೇಕು. ನಮ್ಮ ನಾಯಕರ ನಡೆಗಳು ಸಮಾಜದ ಮೇಲೆ ಬಹುಬೇಗ ಪರಿಣಾಮ ಬೀರುತ್ತವೆ… ಇದರಿಂದಾಗುವ ಒಳಿತು ಮತ್ತು ಸಂಕಟಗಳ ಅರಿವು ಎಲ್ಲರಿಗೆ ಇರುವುದು ಅಗತ್ಯ. ಧರ್ಮ, ದೇವರು ವಿಷಯದಲ್ಲಿ ನಿಮ್ಮ ನಿಲುವೇನು? ನಮ್ಮ ವೃತ್ತಿಯಲ್ಲಿ ಪ್ರೀತಿಯಿಂದ ತೊಡಗಿಕೊಳ್ಳುತ್ತ, ಎಲ್ಲರನ್ನೂ ಗೌರವದಿಂದ ಕಾಣುತ್ತ ಪ್ರೀತಿ, ಸ್ನೇಹದ ಭಾವಗಳನ್ನು ವಿಸ್ತಾರ ಗೊಳಿಸುತ್ತ ಬದುಕುವುದೇ ದೇವರು ಪೂಜೆ ,ಧರ್ಮ ಎಲ್ಲವೂ ಆಗುತ್ತದೆ ಎಂದುಕೊಂಡಿದ್ದೇನೆ.  ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನಿಸುತ್ತದೆ?  ಮೊದಲಿನಂತಹ ಸಾಂಸ್ಕøತಿಕ ವಾತಾವರಣ ಇಲ್ಲ ಎಂದು ಹೇಳುತ್ತೇವೆ. ಆದರೂ ನಮ್ಮ ಸಮಾಜದಲ್ಲಿ ಸಾಂಸ್ಕøತಿಕ ಚಿಂತನೆ, ಚಟುವಟಿಕೆಗಳು ನಡೆಯುತ್ತಲೇ ಇವೆ. ಅದು ಹೆಚ್ಚಬೇಕು.  ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ.   ಮೊದಲಿನಿಂದಲೂ ನನ್ನಷ್ಟಕ್ಕೆ ನಾನು ಬರೆಯುತ್ತಾ ಬಂದಿದ್ದೇನೆ. ನನಗೆ ಆರ್.ವಿ. ಭಂಡಾರಿ. ಆರ್.ಪಿ.ಹೆಗಡೆ, ಸನದಿ, ವಿಷ್ಣು ನಾಯ್ಕ, ಆನಂದ ಪಾಟೀಲ ಮುಂತಾದ ಅನೇಕ ಹಿರಿಯ ಸಾಹಿತಿಗಳು ಮಾರ್ಗದರ್ಶನ, ಪ್ರೋತ್ಸಾಹ ನೀಡಿದ್ದಾರೆ. ರಾಜ್ಯಾದ್ಯಂತ ನನ್ನ ಪುಸ್ತಕ ಓದುವ ಪ್ರೀತಿಯ ಬಳಗ ಬೆಳೆದಿದೆ. ರಾಜಕೀಯದ ಕುರಿತು ನಾನು ಯೋಚಿಸಿಲ್ಲ .  ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸ್ಸು ಏನು ಹೇಳುತ್ತಿದೆ?  ನಮ್ಮ ದೇಶದ ಸಾಹಿತ್ಯ, ಸಾಂಸ್ಕೃತಿಕ ಹಿರಿಮೆ ಇದೆ. ಪ್ರಜಾ ಪ್ರಭುತ್ವ ವ್ಯವಸ್ಥೆ ಸಂವಿಧಾನ ನೀಡಿದೆ. ವಿಜ್ಞಾನ, ತಂತ್ರಜ್ಞಾನ ಒಟ್ಟಾರೆ ಅಭಿವೃದ್ಧಿಗಳಲ್ಲಿ ಪ್ರಗತಿ ಇದೆ. ಇದನ್ನೆಲ್ಲಾ ಬಳಸಿಕೊಂಡು ಪ್ರೀತಿ ,ಸ್ನೇಹದ ಅಡಿಯಲ್ಲಿ ನಡೆಯಬೇಕು ಎಂದುಕೊಳ್ಳುತ್ತೇನೆ.  ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು?  ಮಕ್ಕಳಿಗಾಗಿ ಹೆಚ್ಚು ಬರೆಯುತ್ತೇನಾದ್ದರಿಂದ ಮಕ್ಕಳ ಸಾಹಿತ್ಯದ ಕುರಿತೇ ಹೇಳುವುದಾದರೆ… ಮಕ್ಕಳಿಗೆ ಇಷ್ಟ ಆಗುವ ಹಾಗೂ ಅವರಿಗೆ ಒಳಿತಾಗುವ  ಪುಸ್ತಕಗಳು ಹೆಚ್ಚು ಹೆಚ್ಚು ಬರಬೇಕು. ಈಗ ಹೊಸ ಕಾಲದ ಹೊಸ ವಸ್ತು ಸಂವೇದನೆಗಳ ಪುಸ್ತಕಗಳು ಕನ್ನಡ ಮಕ್ಕಳ ಸಾಹಿತ್ಯದಲ್ಲಿ ಬರುತ್ತಿವೆ. ಅದನ್ನು ಆಕರ್ಷಕವಾಗಿ ಪ್ರಕಟಿಸುವ ಪ್ರಕಾಶಕರು ಬೇಕು ಹಾಗೂ ಮಕ್ಕಳಿಗೆ ತಲುಪುವಂತಾಗಬೇಕು. ಮಕ್ಕಳು ಓದಿಗೆ ತೆರೆದುಕೊಂಡರೆ ಸಮಾಜದ ಒಳಿತಿನ ನಡೆ ಬಲಗೊಳ್ಳುತ್ತದೆ. ನಿಮ್ಮ ನಿಚ್ಚಿನ ಸಾಹಿತಿಗಳಾರು? ತೇಜಸ್ವಿಯವರ ಪರಿಸರ ಪ್ರೀತಿಯ ಪುಸ್ತಕಗಳು ನನಗೆ ತುಂಬಾ ಆಪ್ತ. ಇಂಗ್ಲೀಷ ಓದು ಕಡಿಮೆ. ರಸ್ಕಿನ ಬಾಂಡ್ ಇಂಗ್ಲೀಷಿನಲ್ಲಿ ಮಕ್ಕಳಿಗಾಗಿ ಬರೆಯುತ್ತಾರೆ. ಅವರದೂ ಪರಿಸರದ ಮಧ್ಯ ಅರಳಿದ ಕಥೆಗಳೇ ಆಗಿವೆ. ಅವರ ಕಥೆಗಳನ್ನೂ ಓದಿದ್ದೇನೆ. ಈಗ ಚದುರಂಗರ ‘ವೈಶಾಖ’ ಓದುತ್ತಿದ್ದೇನೆ.  ಹೆಚ್ಚು ಸಂತೋಷದ ಕ್ಷಣ ಯಾವುದು? ಮಕ್ಕಳ ಖುಷಿ ಹೆಚ್ಚಿಸುವ ಕೆಲಸದಲ್ಲಿ ತೊಡಗುವುದು. ನಿಮ್ಮ ನೆಚ್ಚನ ತಾಣ ಯಾವುದು? ನಮ್ಮ ಜಿಲ್ಲೆಯ ಎಲ್ಲ ಹಸಿರು ತಾಣಗಳು. ……………. ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

Read Post »

You cannot copy content of this page

Scroll to Top