ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ ಅವಳು…ನಗಬಾರದೆಂದಳು… ಒಂದೆರಡು ವರುಷಗಳ ಹಿಂದೆಇವರು ಅವರನ್ನುಕೊಂದಿ ದ್ದರು..ಸಾವಿಗೆ ಸಂಭ್ರಮಿಸಬಾರದು.. ದಫನ ವಾಗಿರಬಹುದೇ..ನಾ ಕೇಳಿದ ಪ್ರಶ್ನೆ..ಹೌದು. ಈಗ ಮುಗಿದಿರಬಹುದೆನುವಉತ್ತರ.. ಇವರು-ಅವರುಇಬ್ಬರೂ ಊರಿನವರು ..ಅದೇನೋ ಜಗಳ ತಾರಕಕ್ಕೇರಿದಾಗಇರಿತದಿಂದ ಅವರುಪರಲೋಕ ತಲುಪಿದ್ದರು..ಇಂದು ಇವರ ಸರದಿ.. ಮೆಲ್ಲನೆ ಮಸೀದಿಯತ್ತ ಹೆಜ್ಜೆ ಹಾಕಿದೆ..ಪಕ್ಕದಲೇ ಖಬರಸ್ಥಾನ.ಗುಂಪು ಕಟ್ಟಿ ನಡೆದ ಇವರುಒಬ್ಬಂಟಿ ಮಲಗಿದ್ದರು..ಹೊತ್ತೊಯ್ದವರು ಮಣ್ಣು ಮಾಡಿಮರಳಿದ್ದರು.. ಬಡ-ಸಿರಿವಂತ ರೆಲ್ಲರೂಮಲಗುವ ತಾಣವಿದು..ಇವರೀಗ ಒಬ್ಬಂಟಿ..ಸುಮ್ಮನೇ ಪಕ್ಕದಲಿ ಯಾರು ಮಲಗಿರುವುದೆಂದುಕುತೂಹಲದಿ ನೋಡಿದೆ… ಹೌದು..ಪಕ್ಕದಲಿ ಅವರ ಹೆಸರು ಕೆತ್ತಿದ ಕಲ್ಲುನಗುವಂತೆ ಕಾಣಿಸಿತು..ಅಂದಿನ ಶತ್ರುಗಳು ಇಂದುಅಕ್ಕ-ಪಕ್ಕದಲಿ ಮಲಗಿದ್ದರು ..!!! *****************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ, ಕಲಬುರ್ಗಿ, ಗೌರಿ ಕೊಂದ ನಾಡಿನಲ್ಲಿ??ಬರೆವ ಕೈಗಳ,ನಿಜದ ಮಾತಿಗೆ ಬೀಗ ಜಡಿದ ಮೇಲೆ ??ಕೊಲೆಯಾಗಿದೆ ಅಭಿವ್ಯಕ್ತಿ! ಗೊತ್ತಾ ನಿನಗೆ ??ಅಮಾಸ, ಠೊಣ್ಣಿಯರ ಹಸಿವು ಹಿಂಗಿಲ್ಲಸಾಕವ್ವ ಬದುಕಿನ ಜಂಜಾಟ ನಿಂತಿಲ್ಲ; ಹರಕು ಸೀರೆ ,ಮುರಿದ ಮನೆ ಕಟ್ಟಲಾಗಿಲ್ಲಐತ ಪೀಂಚಲು ಬದುಕ ಕಟ್ಟಲು ಅಲೆದಾಡುತ್ತಿದ್ದಾರೆಚೋಮುನ ಭೂಮಿ ಹೊಂದುವ ಕನಸು ಕನಸಾಗಿಯೇ ಇದೆ…ನಾಡದೊರೆಯ ಕಣ್ಣು ಬದಲಾಗಿಲ್ಲ ಹೀಗಿರುವಾಗ…ನನಗೆ ನಾಚಿಕೆಯಾಗುತ್ತದೆಮಳೆ ನದಿ ಕಾಡು ಬೆಟ್ಟ ಕಡಲು ದಂಡೆ ಕಾಮನಬಿಲ್ಲನ ಬಗ್ಗೆ ಕವಿತೆ ಬರೆದದ್ದಕ್ಕೆ… ಇನ್ನು ಬರೆಯದಿರಲಾರೆ ಮನುಷ್ಯರ ಸಂಚುಗಳ ಬಗ್ಗೆಆತ್ಮವಂಚನೆಗಳ ಬಗ್ಗೆಹಸಿದವರ ಬಗ್ಗೆಬರೆಯದೇ ಇರಲಾರೆ ಹಾಗೆ ಬರೆಯದೇ ನಾಮೌನಿಯಾದರೆ ; ಅಕ್ಷರಗಳ ಯಜಮಾನಿಕೆಗೆ ಒತ್ತೆ ಇಡದೆಅಕ್ಷರಗಳ ಜೊತೆ ಬದುಕುತ್ತೇನೆ‌ಇಲ್ಲವೇ …… *****************************

ಕಾವ್ಯಯಾನ Read Post »

ಕಥಾಗುಚ್ಛ

ಕಥಾಯಾನ

‘ಬಾಳ ಬಣ್ಣ’  ವಸುಂಧರಾ ಕದಲೂರು       ಕುಸುಮಳಿಗೆ ವಿವಾಹದ ಏಳು ವರ್ಷದ ಅನಂತರ ಹುಟ್ಟಿದವನೇ ‘ಅಮರಕಿಶೋರ’. ಕುಸುಮಾಳದ್ದು ಮೂವತ್ತರ ಹರಯದಲ್ಲಾದ ವಿವಾಹ.    ತಡವಾದ ವಿವಾಹ ಜೊತೆಗೆ ತಡವಾಗಿಯೇ ಮಗು ಹುಟ್ಟಿದ್ದು. ಈ ಕಾರಣಕ್ಕೋ ಏನೋ ಮಗುವನ್ನು ಐದು ವರ್ಷ ಆಗೋವರೆಗೂ ನೆಲಕ್ಕೆ ಬಿಟ್ಟರೆಎಲ್ಲಿ ನವೆದು ಹೋಗುವುದೋ ಎಂದುಕೊಂಡು ಕೆಳಕ್ಕೆ ಬಿಡದೇ ಕಂಕುಳಲ್ಲಿಟ್ಟುಕೊಂಡು ಸಾಕಿದಳು. ಕಣ್ಣನ್ನು ರೆಪ್ಪೆಗಳು ಹೇಗೆ ಮುಚ್ಚಟೆಯಿಂದ ರಕ್ಷಿಸುತ್ತವೆಯೋ ಹಾಗೆ ಮಗನನ್ನು ನೋಡಿಕೊಳ್ಳುತ್ತಿದ್ದಳು.         ಮಗುವಿಗೆ ಹಸಿವಾಗಿ ಅದು ‘ಆ…’ ಎಂದು ಬಾಯ್ಬಿಡುವ ಮೊದಲೇ ತುಪ್ಪದಲ್ಲೇ ಅನ್ನ ಕಲಸಿ ಬಾಯಿಗಿಟ್ಟು ತಿನಿಸುತ್ತಿದ್ದಳು. ಯಾವುದಾದರೂ ಆಟದ ಸಾಮಾನು ಬೇಕೆನ್ನುತ್ತಾ ಕೈಚಾಚುವ ಮೊದಲೇ ಕೊಂಡು ಅದನ್ನವನ ಕೈಗಿತ್ತು ಸಂಭ್ರಮಿಸುತ್ತಿದ್ದಳು. ಆಕೆಯ ಪ್ರೀತಿಯಲ್ಲಿ  ಶ್ರೀಮಂತಿಕೆಯ ಅದ್ದೂರಿತನ ಇಲ್ಲದಿದ್ದರೂ, ಭಾವ ತೀವ್ರತೆಯ ಆಡಂಬರಕ್ಕೇನೂ ಕೊರತೆಯಿರಲಿಲ್ಲ. ಅವಳ ವಾರಿಗೆಯಲ್ಲೇ ಹೆತ್ತವರು ತಮ್ಮ ಮಕ್ಕಳನ್ನು ಎರಡು- ಎರಡೂವರೆ ವರ್ಷಕ್ಕೇ ಮಾಂಟೆಸ್ಸರಿಗೆ ಸೇರಿಸಿದರೆ, ಈಕೆ ಮಾತ್ರ ‘ಮನೆಯೇ ಮೊದಲ ಪಾಠಶಾಲೆ’ ಎಂದು ನಂಬಿ, ‘ಅಆಇಈ’, ‘ಎಬಿಸಿಡಿ’, ‘1234’ ಗಳ ಜೊತೆಗೆ ನರ್ಸರಿ ರೈಮ್ಸ್, ದೇವರ ನಾಮ, ಶ್ಲೋಕಗಳನ್ನು ಅಮರನಿಗೆ ಕಲಿಸುತ್ತಾ, ಅವನ ತೊದಲು ಬಾಯಿಂದ ಮತ್ತೆಮತ್ತೆ ಅದನ್ನು ಹೇಳಿಸಿ, ಮುದ್ದು ಮುದ್ದು ಉಚ್ಚಾರಣೆಗಳನು ಕೇಳಿ, ಮಗನೊಡನೆ ತಾನೂ ಮತ್ತೊಂದು ಮಗುವಾಗಿ ಆಡುತ್ತಾ ಖುಷಿಪಡುತ್ತಾ ದಿನದೂಡುತ್ತಿದ್ದಳು.    ಅಮ್ಮ ಹೇಳಿಕೊಡುವ ಪಾಠಗಳನ್ನು ಕಲಿಯುವುದರಲ್ಲಿ      ಚುರುಕಾಗಿದ್ದ ಅಮರನು, ಬಣ್ಣಗಳನ್ನು ಗುರುತಿಸಲು ಮಾತ್ರ ಪರದಾಡುತ್ತಿದ್ದ. ಅವನ ಈ ಸಮಸ್ಯೆ ಅರಿವಿಗೆ ಬಂದದ್ದೂ ಸಹ, ಕುಸುಮಾಳು ಅವನಿಗೆ ಕಲರ್ಸ್ಗಳ ಕುರಿತು ಪಾಠ ಮಾಡುವಾಗ. ಕಾಮನ ಬಿಲ್ಲಿನ ಬಣ್ಣಗಳ ಚಾರ್ಟನ್ನು ಗುರುತಿಸುವಾಗ ಅಮರ ಪದೇಪದೇ ವಿಫಲನಾಗುತ್ತಿದ್ದ. ಹಸಿರು, ಕೆಂಪು, ಹಸಿರು, ಹಳದಿ ಹೀಗೆ ಕೆಲವು ಛಾಯೆಯ ಬಣ್ಣಗಳನ್ನು ಗುರುತಿಸಲು ಕಷ್ಟಪಡುತ್ತಿದ್ದ. ಪದೇ ಪದೇ ತಿದ್ದಿ ಹೇಳಿಕೊಟ್ಟರೂ ಈ ಕೆಲವು ಬಣ್ಣಗಳನ್ನು ಪ್ರತ್ಯೇಕವಾಗಿ ಗುರುತಿಸಲು ಅಸಮರ್ಥನಾಗುತ್ತಿದ್ದ.    ಅಮರನು ಪದೇ ಪದೇ ತನ್ನನ್ನು ರೇಗಿಸಲು ಬೇಕೆಂದೇ ಹೀಗೆ ತುಂಟಾಟ ಮಾಡುತ್ತಿರಬಹುದಾ..? ಎಂದು ಆರಂಭದಲ್ಲಿ ನಿರ್ಲಕ್ಷಿಸಿದ್ದ ಕುಸುಮಾ, ಅದು ಆಟವಲ್ಲ, ಆತನ ಸಮಸ್ಯೆ ಎಂದು ತಿಳಿದು ಚಿಂತೆಗೆ ಒಳಗಾದಳು.  ಸಮಸ್ಯೆ ಸ್ವರೂಪ ತಿಳಿಯುತ್ತಿದ್ದಂತೇ ನೇತ್ರತಜ್ಞರ ಬಳಿ ಮಗುವನ್ನು ಕರೆದುಕೊಂಡು ಹೋದಳು.    ಮಗುವಿನ ಕಣ್ಣುಗಳನ್ನು ಅತ್ಯಾಧುನಿಕ ಉಪಕರಣಗಳ ಮೂಲಕ ಪರೀಕ್ಷಿಸಿದ ನೇತ್ರತಜ್ಞರು ‘ನೋಡಿ ಕುಸುಮ, ನಿಮ್ಮ ಮಗು ಅಮರನಿಗೆ ‘ಬಣ್ಣಗುರುಡು’ತನ ಅಂದರೆ colour blindness ಇದೆ’ ಎಂದು ಸ್ಪಷ್ಟಪಡಿಸಿದರು. ವಿಷಯ ತಿಳಿದು ಆಘಾತಕ್ಕೊಳಗಾದ ಕುಸುಮಾ ತನ್ನ ಮುದ್ದು ಮಗುವಿನ ಬದುಕು ಹೀಗೆ ಬಣ್ಣಗೆಟ್ಟಿತೇ ಎಂದು ಶೋಕಿಸಿದಳು.       ಮನೋವ್ಯಥೆಯಿಂದ ದುಃಖಿಸುತ್ತಿದ್ದ ಕುಸುಮಾಳನ್ನು ಸಂತೈಸಿದ ವೈದ್ಯರು, ಆಕೆಗೆ ‘ಬಣ್ಣಗುರುಡುತನ’ದ ಬಗ್ಗೆ ಕೂಲಂಕಷವಾಗಿ ವಿವರಿಸಿ, ‘’ಕೆಲವರಿಗೆ ಇಂತಹ ಕೆಲವು ಅಪರೂಪದ ಅನುವಂಶೀಯ ಕಾಯಿಲೆಗಳು ಬರುತ್ತವೆ. ಹಾಗೆ ಬರುವುದು ಯಾರದ್ದೋ ಅಪರಾಧದಿಂದಲ್ಲ. ನೀವು ಯಾವ ರೀತಿಯಲ್ಲೂ ಅಧೀರರಾಗಬೇಡಿ’’ ಎಂದು ಧೈರ್ಯ ತುಂಬಿದರು. ಜೊತೆಗೆ ಒಂದಷ್ಟು ಸಲಹೆ ನೀಡಿ ಮನೆಗೆ ಕಳುಹಿಸಿಕೊಟ್ಟರು.     ಆಸ್ಪತ್ರೆಯಿಂದ ಮನೆಗೆ ಮರಳಿದ ಕುಸುಮಾಳಿಗೆ, ಸಮಾಧಾನವೇ ಆಗಲಿಲ್ಲ. ಮಕ್ಕಳಿಲ್ಲದೇ ಹಲವು ವರ್ಷ ಬಣ್ಣಗೆಟ್ಟಿದ್ದ ತನ್ನ ಬದುಕಿಗೆ ಉಲ್ಲಾಸದ ಹೊಸಬೆಳಕನ್ನು ತಂದುಕೊಟ್ಟ ತನ್ನ ಮುದ್ದುಕಂದನ ಬದುಕು ಹೀಗೆ ವರ್ಣಹೀನವಾಯಿತಲ್ಲಾ… ಎಂದು ರೋಧಿಸಿದಳು.      ವೈದ್ಯರ ಸಲಹೆಯಂತೆ, ನಾಕಾರು ದಿನಗಳಾದ ಮೇಲೆ ಅಮರನಿಗೆಂದು ವಿಶೇಷವಾಗಿ ಆರ್ಡರ್ಮಾಡಿಸಿದ್ದ ಹೊಸ ಕನ್ನಡಕ ತರಲು ಹೋದಾಗ, “ಡಾಕ್ಟರ್ ‘ಡೇ ವಿಸಿಟಿಂಗ್’ ಮೇಲೆ ಆಸ್ಪತ್ರೆ ರೌಂಡ್ಸ್ ಗೆ ಹೋಗಿದ್ದಾರೆ. ಪ್ಲೀಸ್ ವೇಯ್ಟ್ ಮಾಡಿ” ಎಂದು ರಿಸೆಪ್ಷನಿಸ್ಟ್ ಹುಡುಗಿ ತಿಳಿಸಿದಳು. ಡಾಕ್ಟರ್ ಬರುವುದು ತಡವೆಂದು ತಿಳಿದ ಮೇಲೆ ಕುಸುಮಾ ವೇಯಿಟಿಂಗ್ ರೂಮಿನಲ್ಲಿ ಹೋಗಿ ಕುಳಿತಳು.              ಪದೇ ಪದೇ ಮಗನ ಪರಿಸ್ಥಿತಿಯ ಬಗ್ಗೆಯೇ ಯೋಚಿಸುತ್ತಾ ಒತ್ತಿ ಬರುತ್ತಿದ್ದ ದುಃಖಕ್ಕೆ ಬಿಕ್ಕಳಿಸುತ್ತಾ ಬಾಯಿಗೆ ಕರವಸ್ತ್ರ ಅಡ್ಡ ಹಿಡಿದುಕೊಂಡು ತಲೆತಗ್ಗಿಸಿ ಕುಳಿತಿದ್ದಳು. ವೇಯ್ಟಿಂಗ್ ರೂಮಿನಲ್ಲಿ ಇವಳಂತೆೇ ಡಾಕ್ಟರರನ್ನು ಕಾಣಲು ಬಂದಿದ್ದ ಹಲವರಿದ್ದರು.   ಸಣ್ಣವಯಸ್ಸಿನವರಾಗಿದ್ದ ಒಂದು ದಂಪತಿ ಜೋಡಿಯು,  ಕುಸುಮಾ ದುಃಖಿಸುವುದನ್ನು ನೋಡಿ ಹತ್ತಿರಬಂದು “ಅಳುತ್ತಿರುವುದು ಏಕೆ ?”ಎಂದು ಸಾಧಾನವಾಗಿ ಕಾರಣ ವಿಚಾರಿಸಿದರು. ಅವರ ಸಂತೈಸುವಿಕೆಯ ದನಿಯ ಮಾಂತ್ರಿಕ ಶಕ್ತಿಗೆ ಸಮಾಧಾನಗೊಂಡ ಕುಸುಮಾ ಬಿಕ್ಕಳಿಸುತ್ತಲೇ ತನ್ನ ದುಃಖದ ಕಾರಣ ತಿಳಿಸಿದಳು. ಆ ದಂಪತಿಗಳು ಆಕೆಯನ್ನು ಸಮಾಧಾನಿಸುತ್ತಾ, ‘’ನೋಡಿ, ಹೀಗೆ ಹೇಳುತ್ತಿದ್ದೇವೆಂದು ತಪ್ಪು ತಿಳಿಯಬೇಡಿ. ನಾವು ನಿಮಗಿಂತ ಸಣ್ಣವರೇ ಇರಬಹುದು. ಆದರೆ, ಬರೀ ಶೋಕಿಸುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಮಾತ್ರ ಹೇಳಬಲ್ಲೆವು. ಸುಮ್ಮನೆ ಯೋಚಿಸುತ್ತಾ ಬೇಸರಪಡುತ್ತಾ ಕುಳಿತುಕೊಳ್ಳಬೇಡಿ. ವಿಜ್ಞಾನ ಮುಂದುವರೆದಿದೆ. ಹಲವು ಸಾಧನ- ಸಾಧ್ಯತೆಗಳಿವೆ. ನೀವು ಹೊಸ ಹುರುಪಿನಿಂದ ನಿಮ್ಮ ಮಗುವಿನ ಕನಸುಗಳಿಗೆ ಬಣ್ಣ ತುಂಬಿರಿ. ಮಗುವಿನ ಭವಿಷ್ಯವನ್ನು ವರ್ಣಹೀನ ಮಾಡಬೇಡಿ. ನಿಮ್ಮದೇನು ಅಂತಹ ದೊಡ್ಡ ಸಮಸ್ಯೆಯೇ ಅಲ್ಲ” ಎಂದು ನಿಧಾನವಾಗಿ ಸಂತೈಸಿ ತಮ್ಮ ಕುರ್ಚಿ ಬಳಿ ಮರಳಿ ಹೋದರು.    ‘’ನನ್ನದೇನು ದೊಡ್ಡ ಸಮಸ್ಯೆಯಲ್ಲವಾ..?! ನನ್ನ ದುಃಖ, ಹೊಟ್ಟೆ ಸಂಕಟ ಇವರಿಗೆ ಹೇಗೆ ತಿಳಿಯಬೇಕು? ಇವರ ಬಳಿ ನಾನು ಏಕಾದರು ನನ್ನ ಮಗನ ಸಮಸ್ಯೆ ಹೇಳಿಕೊಂಡೆನೋ..?!’’ ಎಂದುಕೊಂಡು ಕುಸುಮ ತನ್ನ ನೋವಿನ ಜೊತೆಗೆ ಈಗ ಕೋಪ ಅಸಮಾಧಾನಗಳನ್ನೂ ಹೊಂದಿದವಳಾಗಿ ಕುದಿಯತೊಡಗಿದಳು.    ಅವರು ಹೋಗಿ ಕುಳಿತ ಸ್ವಲ್ಪ ಹೊತ್ತಿನಲ್ಲೇ ಅವರ ಪಕ್ಕದ ಕುರ್ಚಿಯ ಬಳಿಯಲ್ಲಿ ಇರಿಸಲಾಗಿದ್ದ ಪ್ರಾಮ್ನಲ್ಲಿ ನಿದ್ರಿಸುತ್ತಿದ್ದ ಮಗುವೊಂದು ಎದ್ದು ಕಿಟಾರನೆ ಕಿರುಚಿ ರೋಧಿಸತೊಡಗಿತು. ಕುಸುಮಾಳ ಗಮನ ಆ ಮಗುವಿನತ್ತ ಹರಿಯಿತು. ಕ್ಷಣದ ಹಿಂದೆ ಯಾರನ್ನು ‘ತನ್ನ ಸಂಕಟ ಅರಿಯಲಾಗದವರು’ ಎಂದು ಮನಸ್ಸಿನಲ್ಲೇ ಜರಿದುಕೊಂಡಳೋ ಅದು ಅವರ ಮಗುವಾಗಿತ್ತು .       ದಂಪತಿಗಳು ಆ ಮಗುವನ್ನು ನಿಧಾನವಾಗಿ ಪ್ರಾಮ್ನಿಂದ ಮೇಲೆತ್ತಿಕೊಂಡು, ಬಹಳ ನಾಜೂಕಾಗಿ ಅದರ ಬಟ್ಟೆ ಸರಿಪಡಿಸುತ್ತಾ ಮೆಲ್ಲನೆ ದನಿಯಲ್ಲಿ ಸಂತೈಸಲು ತೊಡಗಿದರು. ಮಗುವಿನ ಮುಖ ತನ್ನತ್ತ ತಿರುಗುತ್ತಲೇ ಅದನ್ನು ಕಂಡ ಕುಸುಮ ಗರಬಡಿದಂತೆ ಸ್ಥಬ್ಧಳಾದಳು!        ‘ಅಮರನಿಗೆ ಕೆಲವೊಂದು ಬಣ್ಣ ಗುರುತಿಸಲು ತಿಳಿಯದಿದ್ದರೇನಂತೆ, ಕಡೇಪಕ್ಷ ಈ ಜಗತ್ತನ್ನಾದರೂ ಕಾಣುತ್ತಾನಲ್ಲಾ. ಈ ಅಮ್ಮನ ಮುಖವನ್ನಾದರೂ ನೋಡಿ ನಲಿಯುತ್ತಾನವನು. ಅವನಿಗೆ ಬಣ್ಣಗಳ ಬಗ್ಗೆ ತಿಳಿಯದಿದ್ದರೇನಂತೆ, ನನಗೆ ಅವನೇ ಕಾಮನಬಿಲ್ಲು. ನನ್ನ ಬಾಳಿಗೆ ಅವನೇ ಬಣ್ಣದೋಕುಳಿ, ಬಾಣಬಣ್ಣ’ ಎಂದು ತನ್ನ ಮನವನ್ನು ಸಂತೈಸಿಕೊಂಡಳು ಕುಸುಮ.    ಇನ್ನೂ ಅಳುತ್ತಲೇ ಇದ್ದ ಮಗುವನ್ನು ಸಂತೈಸಲು ಮನಸ್ಸಾಗಿ, ಕುಸುಮ ಅಮರನಿಗೆಂದು ಕೊಂಡಿದ್ದ ದೊಡ್ಡ ಕ್ಯಾಡ್ಬರೀಸ್ ಚಾಕ್ಲೇಟ್ ಅನ್ನು ಪರ್ಸಿನಿಂದ ತೆಗೆದು, ಅಳುತ್ತಿದ್ದ ಮಗುವಿನ ಬಳಿಗೆ ನಡೆದಳು. ಸ್ನೇಹದ ನಗೆ ಸೂಸುತ್ತಿದ್ದ ಆ ಮಗುವಿನ ಅಪ್ಪಅಮ್ಮನ ಕಣ್ಣುಗಳು ಕುಸುಮಾಳತ್ತ ತಿರುಗಿದಾಗ ಅಪಾರ ವಿಶ್ವಾಸದಲ್ಲಿ ಹೊಳೆಯುತ್ತಿದ್ದವು. ಆದರೆ, ಕಣ್ಣುಗಳಿರಬೇಕಾದ ಜಾಗದಲ್ಲಿ ಕೇವಲ ಎರಡು ಕುಳಿಗಳನ್ನು ಹೊಂದಿದ್ದ ಮಗುವನ್ನು ಅವರು ಎದೆಗವಚಿಕೊಂಡ ರೀತಿಯನ್ನು ಕಂಡಾಗ ಕುಸುಮಳಿಗೆ ‘ಎಲ್ಲಾ ತಾಯ್ತಂದೆಯರಿಗೂ ಅವರ ಮಗುವೇ ಅವರವರ ಬಾಳ ಬಣ್ಣ-  ಬಾಳ ಬೆಳಕು’ ಎಂಬ ಸತ್ಯ ಅರ್ಥವಾಗಿತ್ತು. ****************************

ಕಥಾಯಾನ Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ ಅನಂತಾವಕಾಶಈ ಕಲ್ಲು ಪರಮಾಣು ಒಳದೇವರ ಕಣ್ಣುಈ ಸ್ಥಾವರ ಈ ಜಂಗಮ ಪ್ರಾಣ ವಿಹಂಗಮಈ ವಾತ ನಿರ್ವಾತ ಆತ್ಮನೇ ಆತ್ಮೀಯಈ ಅಂಡ ಬ್ರಹ್ಮಾಂಡ ಉಸಿರಾಡುವ ಕಾಯ ಕಾವ್ಯದೊಳಗೆ ಜೀವರಸವಿದೆ.ರಸದ ಸೆಲೆಯಿದೆ.ಕುದಿಸಮಯವನ್ನೂ ತಣಿಸುವ ಪ್ರೀತಿಯಿದೆ.ಕಲ್ಲ ಮೊಟ್ಟೆಯನ್ನೂ ಕಾವು ಕೊಟ್ಟು ಮರಿ ಮಾಡುವ ಸೃಷ್ಟಿ ತಂತುವಿನ ತರಂಗವಿದೆ.ಕವಿಯ ಕಣ್ಣೊಳಗೆ ಮೂಡಿದ ಪ್ರತೀ ವಸ್ತುವಿನ ಬಿಂಬ ಜೀವಾತ್ಮವಾಗಿ ಕಾವ್ಯದೇಹ ತೊಟ್ಟು ಹೊರ ಬರುತ್ತೆ.ಸ್ಪಂದನೆ ಮತ್ತು ಪ್ರತಿಸ್ಪಂದನೆ ಕಲ್ಲಿನೊಳಗಿನ ಪರಮಾಣು ಕೂಡಾ ಮಾಡುತ್ತೆ.ನೋಟದ ವ್ಯಾಪ್ತಿಗೆ ಸಿಕ್ಕಿದ ಅಷ್ಟನ್ನೂ ಕವಿಯ ಪ್ರಜ್ಞೆ ಬಾಚಿ ಎದೆಗಿಳಿಸುತ್ತೆ.ಮನುಷ್ಯ ಜಗತ್ತಿನ ನೋವು ನಲಿವು, ಶೋಷಣೆಗಳು, ಕಪ್ಪು ಬಿಳುಪು, ಹೆಣ್ಣು ಗಂಡು, ಬೇಧಭಾವಗಳು ಕವಿಗೂ ಕಾಣಿಸುತ್ತೆ, ಇತರರಿಗೂ ಕಾಣಿಸುತ್ತೆ. ಆದರೆ ದಿನಾಲೂ ಬೆಳಗ್ಗೆ ಕೂಗುವ, ಈ ದಿನ ಹಾಜರು ಹಾಕದ ಕೋಗಿಲೆ,ಚಿಟ್ಟೆಯ ರೆಕ್ಕೆಯಲ್ಲಿರುವ ಚುಕ್ಕಿಗಳ ಡಿಸೈನ್,ರಸ್ತೆಯಗಲಿಸಲು ಕಡಿದ ಮರದ ಕಾಂಡದಿಂದ ಜಿನುಗುವ ಕಣ್ಣೀರು,ನೀರ ಹರಿವು ನಿಂತು ಏದುಸಿರು ಬಿಡುತ್ತಿರುವ ನದೀ ಪಾತ್ರ,ಎಂಡೋಸಲ್ಫಾನ್ ಸ್ಪ್ರೇ ಯಿಂದ ಸತ್ತು ಬೀಳುವ ಜೇನು ನೊಣ,ಕಾರಿನ ಹೊಗೆ, ಗಗನ ಚುಚ್ಚುವ ಕಟ್ಟಡ,ಎಲ್ಲವೂ ಕವಿ ಹೃದಯಕ್ಕೆ ತುಂಬಾ ಚುಚ್ಚುತ್ತೆ. ಪರಿಸರದ ಪರಿವರ್ತನೆಗಳು, ಪರಿಸರದ ಮೇಲೆ ಮನುಷ್ಯನ ಯಾಂತ್ರಿಕ ಮನೋಭಾವದ ಅತ್ಯಾಚಾರ, ಮತ್ತು ಅದರಿಂದಾಗಿ, ಪರಿಸರದಲ್ಲಿ ನಢೆಯುತ್ತಿರುವ ಅಸಮತೋಲನ, ಅತಿವೃಷ್ಟಿ,,ಅನಾವೃಷ್ಟಿ ಕವಿಯನ್ನು ದರ್ಶಿಸಿ, ದರ್ಶನವಾಗಿ ಇಳಿದು ಬಂದಾಗ ಕವಿತೆ ಒಳಗೊಳಗೇ ಅಳುತ್ತೆ. ಅಂತಹ ಒಂದು ಎದೆತಟ್ಟುವ ಕವಿತೆ, ಚಂದಕಚರ್ಲ ರಮೇಶ್ ಬಾಬು ಅವರು ಪುಟಕ್ಕಿಳಿಸಿದ್ದಾರೆ. ಈ ಕವಿತೆಯಲ್ಲಿ, ಕೋಗಿಲೆ, ಮನುಷ್ಯನಲ್ಲಿ ಕ್ಷಮೆ ಕೇಳುತ್ತೆ. ಕೋಗಿಲೆಯ ಮಾತುಗಳು ಹೀಗಿವೆ. ಕ್ಷಮೆ ಇರಲಿ ವಸಂತವನದವಸ್ತುಪ್ರದರ್ಶನಕ್ಕೆನಿಮಗೆಲ್ಲ ಸ್ವಾಗತನನ್ನ ಹೆಸರು ಕೋಗಿಲೆನಾನು ವಸಂತನಆಗಮನಸೂಚಿನಾನು ಹೊರಡಿಸುವ ಇನಿದನಿವಸಂತನು ಕಾಲಿಟ್ಟ ಗುರುತು ಒಂದಾನೊಂದು ಕಾಲದಲ್ಲಿನನಗೆ ಎಲ್ಲೆಂದರಲ್ಲಿಮಾವಿನ ಚಿಗುರು ಸಿಗುತ್ತಿತ್ತುಅದು ಮೆದ್ದು ನಾನುನನ್ನ ಇನಿದನಿ ಹೊರಡಿಸುತ್ತಿದ್ದೆಈಗ ಹುಡುಕುವುದರಲ್ಲೇ ಸಾಕಾಗಿದೆದನಿ ಹೊರಡದಿದ್ದಲ್ಲಿ ಕ್ಷಮಿಸಿ ಹೀಗೆ ಬನ್ನಿಇಲ್ಲಿ ಒಂದು ಸಮಯದಲ್ಲಿನಿಸರ್ಗದ ಮಡಿಲಾದದಟ್ಟ ಕಾಡೊಂದಿತ್ತುಗಿಡಮರ ಹೂವು ಹಣ್ಣುಗಳಿಂದನಮ್ಮೆಲ್ಲರ ತಂಗುದಾಣವಾಗಿತ್ತುಈಗ ಇದು ಬರೀ ಅವಶೇಷ ಭೂಮಿಇಲ್ಲಿಗೆ ವಸಂತನ ಆಗಮನದಸುಳಿವು ಸಿಗುವುದಿಲ್ಲಕುರುಹೂ ಕಾಣುವುದಿಲ್ಲಆದಕಾರಣ ಏನೂ ಕಾಣದಿದ್ದರೆಕ್ಷಮೆ ಇರಲಿ ಹೀಗೆ ಬನ್ನಿಕೆಲವಾರು ದಶಕಗಳ ಹಿಂದೆ ಇಲ್ಲಿವನಜೀವಿಗಳ ಸಂಭ್ರಮವಿತ್ತುಪಶು ಪಕ್ಷಿಗಳ ಜಾತ್ರೆಯಿತ್ತುಹಸಿರುವನ ಸಿರಿಯ ನಡುವೆಅವುಗಳ ಜೀವನವೂ ಹಸಿರಾಗಿತ್ತುಈಗ ಇದು ಬರೇ ಬೀಡುಗುಡ್ಡ ದಿನ್ನೆಗಳ ನಾಡು ನನ್ನ ಬಿಕ್ಕಳಿಕೆಗಳನ್ನುತಡೆದು ತಡೆದುದನಿಯ ಒತ್ತಿ ಹಿಡಿದುಈಗ ಹೊರಡುವುದೇ ಕಷ್ಟವಾಗಿದೆನಿಮ್ಮೊಟ್ಟಿಗೆ ಬರಲೂ ಆಗದಾಗಿದೆ ವಸಂತನ ಆಗಮನದಕಾತರ ತೋರುವ ನಿಮಗೆನಿರಾಶೆ ಮಾಡುತ್ತಿದ್ದಕ್ಕೆಕ್ಷಮೆ ಇರಲಿನೀವು ಮುಂದುವರೆಸಿಎಲ್ಲಾದರೂ ವನಸಿರಿನಳನಳಿಸಿದ್ದು ಕಂಡುಬಂದರೇನನಗೆ ತಿಳಿಸಿ ಮತ್ತೆ ನನ್ನ ದನಿಗೊಂದುನವ ಜೀವನ ಬಂದೀತುವನ ಜೀವನದ ಸವಿ ತಂದೀತುಹೋಗಿಬನ್ನಿ ನಮಸ್ಕಾರ *** *** *** ಕೋಗಿಲೆಯ ಸ್ವಗತ ಈ ಕವಿತೆ. ವಸಂತವನದ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಪ್ರೇಕ್ಷಕರಿಗೆ ತೋರಿಸುವ ಕೆಲಸ ಕೋಗಿಲೆಯದ್ದು. ವಸಂತ ಎಂದರೆ ಪ್ರಕೃತಿ ನಳನಳಿಸಿ, ಹೂ ಅರಳಿಸಿದ ಹಸಿರು ಲಂಗ ತೊಟ್ಟು ಇನಿಯನಿಗಾಗಿ ಕಾದು ಪ್ರೇಮಿಸಿ,ಕಾಮಿಸಿ, ನಲಿದು ಗರ್ಭವತಿಯಾಗುವ ಕಾಲ. ಸೃಷ್ಟಿ ಕ್ರಿಯೆ ಔನ್ನತ್ಯವನ್ನು ಮುಟ್ಟುವ, ಕಲಾತ್ಮಕವಾಗುವ, ಜೀವರಾಶಿಗಳು ಸಂಭ್ರಮಿಸುವ ಕಾಲ. ಮಾವಿನ ಮರ ಹೂ ಬಿಡುತ್ತೆ,ಕೆಲವೆಡೆ ಚಿನ್ನದ ತಳಿರಾಗಿ ಮೆದು ಮೆದುವಾದ ಎಲೆ ಚಿಗುರಿ, ಕೋಗಿಲೆಗೆ ಹಬ್ಬವೋ ಹಬ್ಬ! ಇಂತಹ ಜೀವೋತ್ಸವವನ್ನು, ಕವಿ ವಸಂತವನದ ‘ ವಸ್ತುಪ್ರದರ್ಶನ’ ಅಂತ ಹೆಸರಿಟ್ಟು ಕರೆಯುವಾಗಲೇ ಜೀವರಾಶಿಗಳು ಹೆಣವಾಗಿ ಮಸಣ ಹುಡುಕುವುದರ ಚಿತ್ರಣದ ಅರಿವಾಗುತ್ತೆ. ವಸ್ತು ಪ್ರದರ್ಶನ, ಮಾನವ,ತನ್ನ ಸಾಧನೆಯನ್ನು ಪ್ರದರ್ಶಿಸುವ ಕಾರ್ಯಕ್ರಮ. ಮಾನವ ನಿರ್ಮಿತ ಎಂದರೆ ಅದು ನಿರ್ಜೀವ ವಸ್ತುವೇ. ‘ವಸಂತವನದ ವಸ್ತುಪ್ರದರ್ಶನ’ ಎಂಬ ಈ ಸಾಲಿನ ಮೊದಲ ಪದ ಜೀವತತ್ವ,ಎರಡನೆಯ ಪದ ನಿರ್ಜೀವ ತತ್ವ. ಈ ಕವಿತೆ ಅಷ್ಟೂ ದ್ವಂದ್ವಗಳನ್ನು, ಜೀವದಿಂದ ನಿರ್ಜೀವತ್ವದತ್ತ ನಡೆದ ದಾರಿಯನ್ನು ಎರಡೇ ಪದದಲ್ಲಿ ಸೆರೆಹಿಡಿಯಿತಲ್ಲಾ. ಇದು ಕವಿಸಮಯ. “ನನ್ನ ಹೆಸರು ಕೋಗಿಲೆನಾನು ವಸಂತನಆಗಮನಸೂಚಿನಾನು ಹೊರಡಿಸುವ ಇನಿದನಿವಸಂತನು ಕಾಲಿಟ್ಟ ಗುರುತು” ಕೋಗಿಲೆಯ ಸೆಲ್ಫ್ ಇಂಟ್ರೊಡಕ್ಷನ್ ನಲ್ಲಿ, ಗತವೈಭವದ ನೆನಪಿನ ಸುಖವಿದೆ. ಕವಿತೆ ಹಾಗೆ ಆರಂಭವಾಗುತ್ತೆ. ಕೋಗಿಲೆಯ ಸ್ವರ ವಸಂತಾಗಮನಕ್ಕೆ ರೂಪಕವೂ ಆಗಿದೆ. “ಒಂದಾನೊಂದು ಕಾಲದಲ್ಲಿನನಗೆ ಎಲ್ಲೆಂದರಲ್ಲಿಮಾವಿನ ಚಿಗುರು ಸಿಗುತ್ತಿತ್ತುಅದು ಮೆದ್ದು ನಾನುನನ್ನ ಇನಿದನಿ ಹೊರಡಿಸುತ್ತಿದ್ದೆಈಗ ಹುಡುಕುವುದರಲ್ಲೇ ಸಾಕಾಗಿದೆದನಿ ಹೊರಡದಿದ್ದಲ್ಲಿ ಕ್ಷಮಿಸಿ” ವಸಂತನ ಆಗಮನ ಸೂಚಿ, ಕೋಗಿಲೆಯ ಕೊರಳ ಕುಹೂ. ಮೇಲಿನ ಸಾಲಿನಲ್ಲಿ, ಹೇಳುವಂತೆ, ಕೋಗಿಲೆಗೆ ಇತ್ತೀಚೆಗೆ ಮಾವಿನ ತಳಿರು ಸಿಗುತ್ತಿಲ್ಲ. ಹುಡುಕಿ ಸಾಕಾಗಿದೆ. ತಳಿರು ಮೆದ್ದರೇ ಕೋಗಿಲೆಗೆ ಸ್ವರ. ತಳಿರು ತಿನ್ನದೆ ಸ್ವರ ಹೊರಡಲ್ಲ ಕೋಗಿಲೆಗೆ.ವಸಂತಾಗಮನದ ಮಾರ್ಗ ಸೂಚಿ ಕೂಗಿಲ್ಲ ಎಂದರೆ, ವಸಂತಾಗಮನವೇ ಆಗುತ್ತಿಲ್ಲ. ಮನುಷ್ಯನಿಗೆ ಅದರ ಪರಿವೆಯೂ ಇಲ್ಲ! ಆತ ಸ್ಪಂದನಾರಹಿತ ಸ್ವಾರ್ಥಿ ಜೀವ.ಆತನಿಗೆ ವಸ್ತು ಪ್ರದರ್ಶನ ನಡೆದರೆ ಸಾಕು ತಾನೇ. ಮುಂದುವರೆದು ಕೋಗಿಲೆ ಅಳುತ್ತೆ. ಬಿಕ್ಕಿ ಬಿಕ್ಕಿ ಅಳುತ್ತೆ. “ನನ್ನ ಬಿಕ್ಕಳಿಕೆಗಳನ್ನುತಡೆದು ತಡೆದುದನಿಯ ಒತ್ತಿ ಹಿಡಿದುಈಗ ಹೊರಡುವುದೇ ಕಷ್ಟವಾಗಿದೆನಿಮ್ಮೊಟ್ಟಿಗೆ ಬರಲೂ ಆಗದಾಗಿದೆ” ವಸ್ತುಪ್ರದರ್ಶನ ತೋರಿಸಲು ಕೋಗಿಲೆಗೆ ಮಾತು ಹೊರಡುತ್ತಿಲ್ಲ. ಅದು ಬಿಕ್ಕುತ್ತಿದೆ. ಬಿಕ್ಕಿ ಬಿಕ್ಕಿ ಅಳುವ ನಡುವೆ ಮಾತುಗಳು ತುಂಡು ತುಂಡಾಗಿ ನೋವಿನಲ್ಲಿ ಅದ್ದಿ ಅರ್ಧ ಪದಗಳಾಗಿ, ಉಳಿದರ್ಧ ಎಂಜಲಿನ ಜತೆ ಗಂಟಲು ಸೇರಿ ಮಾತಾಡಲಾಗಲ್ಲ. ದನಿಯ ಒತ್ತಿ ಹಿಡಿದು,ಅಳು ಕಟ್ಟಿ ಹೊರಡುತ್ತಿಲ್ಲ. “ಎಲ್ಲಾದರೂ ವನಸಿರಿನಳನಳಿಸಿದ್ದು ಕಂಡುಬಂದರೇನನಗೆ ತಿಳಿಸಿ ಮತ್ತೆ ನನ್ನ ದನಿಗೊಂದುನವ ಜೀವನ ಬಂದೀತುವನ ಜೀವನದ ಸವಿ ತಂದೀತುಹೋಗಿಬನ್ನಿ ನಮಸ್ಕಾರ” ಕೋಗಿಲೆ, ಪ್ರೇಕ್ಷಕನಿಗೆ, ವಿನಂತಿಸುತ್ತೆ. ಎಲ್ಲಾದರೂ ವನಸಿರಿ ನಳನಳಿಸಿದ್ದು ಕಂಡರೆ ತಿಳಿಸಿ, ಮತ್ತೆ ನನ್ನ ದನಿಗೊಂದು ನವಜೀವನ ಬಂದೀತು, ಅಂತ.‌ ಹೋಗಿ ಬನ್ನಿ ನಮಸ್ಕಾರ ಎಂದು ಕೋಗಿಲೆ ಪ್ರೇಕ್ಷಕನಿಗೆ ಹೇಳುವಾಗ ನಮಸ್ಕಾರದೊಳಗೆ,ಮನುಷ್ಯಜಗತ್ತಿನತ್ತ ತಿರಸ್ಕಾರ ಭಾವನೆಯಿದೆಯೇ?. ಇಷ್ಟೊಂದು ನಿರಾಶೆಯಲ್ಲೂ ‘ನವ ಜೀವನ ಬಂದೀತು’ ಎಂಬ ಆಶಾಭಾವದೊಂದಿಗೆ ಕೋಗಿಲೆಯ ಕವಿತೆ ಮುಗಿಯುತ್ತೆ. ಕವಿತೆಯ ಶೀರ್ಷಿಕೆ ವಿಡಂಬನಾತ್ಮಕ. ಮನುಷ್ಯ ಕೋಗಿಲೆಯಲ್ಲಿ ಕ್ಷಮೆ ಕೇಳಬೇಕಿತ್ತು. ಆದರೆ ಮನುಷ್ಯನ ಸ್ವಕೇಂದ್ರಿತ ಮನಸ್ಸು ಸ್ಪಂದನೆಯನ್ನೇ ಮರೆತು ಒಣವಾದಾಗ, ಕೋಗಿಲೆಯೇ ಕ್ಷಮೆ ಕೇಳುವಂತಾಗಿದೆ. ಆದರೆ ಕವಿಯ ಪ್ರಜ್ಞೆ ಹೊಸತೊಂದು ಅನುಭವಕ್ಕೆ ತೆಗೆದುಕೊಂಡಾಗ, ಅದೇ ಕೋಗಿಲೆಯ ಕವಿತೆ ಹೇಗೆ ಬದಲಾಗುತ್ತೆ ಅಂತ ನೋಡಿ!.ಕರೋನಾ ಲಾಕ್ ಡೌನ್ ಆದಾಗ, ಮನುಷ್ಯನ ಇಂಟರ್ಫಿಯರೆನ್ಸ್ ಇಲ್ಲದೇ, ವನಪುಷ್ಪಗಳು ನಳನಳಿಸಿದಾಗ ಕೋಗಿಲೆಯ ಕನಸು ನನಸಾಗುತ್ತೆ. ರಮೇಶ್ ಬಾಬು ಅವರ ಕರೋನ ಸಮಯದ ಕೋಗಿಲೆಯ ಉಲ್ಲಾಸದ ಮಾತುಗಳು ಹೀಗಿವೆ. ತಳಿರು ಮೆದ್ದ ಕೋಗಿಲೆ ಪ್ರತಿವರ್ಷದಂತೆಯುಗಾದಿಯಂದುವಸಂತನ ಆಗಮನಸೂಚ್ಯವಾಗಿಸಾಂಕೇತಿಕವಾಗಿದನಿ ಹೊರಡಿಸಲುಕೊರಳು ಸರಿಪಡಿಸಿಕೊಂಡ ಕೋಗಿಲೆಎಂದಿನಂತೆ ಕೆಲ ಕ್ಷಣಕ್ಕೆಮಾತ್ರ ಎಂದು ತಯಾರಿಅದೇನಾಶ್ಚರ್ಯತನ್ನ ಉಸಿರು ಕಟ್ಟಲಿಲ್ಲದನಿ ಗೊಗ್ಗರಾಗಲಿಲ್ಲಸರಾಗವಾಗಿ ಹೊರಟ ಇಂಚರಉಬ್ಬಸ ಕಳೆದ ನಿಸರ್ಗಹರಡಿದ ರಂಗಸ್ಥಳದಿನವಿಡೀ ಮನತುಂಬಿಸಾಗಿತು ಗಾನಕೊರೋನಾದ ಖಬರಿಲ್ಲಆಡಳಿತದ ಅರಿವಿಲ್ಲಕಾಲುಷ್ಯ ಕಾಣದ್ದೇ ಮಾನದಂಡಅಂದಿನಿಂದ ಇಂದಿಗೂಚುಮುಚುಮು ವೇಳೆಆರಂಭವಾದರೆ ಕಚೇರಿಗೂಡು ಸೇರುವ ಹೊತ್ತಿಗೂ ಮುಗಿಯದುಮತ್ತೆಂದು ಸಿಕ್ಕೀತೋಎನ್ನುವ ಹಾಗೆಕತ್ತುಚಾಚಿಸ್ವರದೌತಣ ನೀಡುತ್ತಿದೆತಳಿರು ಮೆದ್ದ ಕೋಗಿಲೆ ! ** *** **** ಈ ಸಾಲುಗಳನ್ನು ನೋಡಿ! “ವಸಂತನ ಆಗಮನಸೂಚ್ಯವಾಗಿಸಾಂಕೇತಿಕವಾಗಿದನಿ ಹೊರಡಿಸಲುಕೊರಳು ಸರಿಪಡಿಸಿಕೊಂಡ ಕೋಗಿಲೆಎಂದಿನಂತೆ ಕೆಲ ಕ್ಷಣಕ್ಕೆಮಾತ್ರ ಎಂದು ತಯಾರಿಅದೇನಾಶ್ಚರ್ಯತನ್ನ ಉಸಿರು ಕಟ್ಟಲಿಲ್ಲದನಿ ಗೊಗ್ಗರಾಗಲಿಲ್ಲಸರಾಗವಾಗಿ ಹೊರಟ ಇಂಚರಉಬ್ಬಸ ಕಳೆದ ನಿಸರ್ಗ “ ಬಹುಷಃ ಕೋಗಿಲೆಯಷ್ಟೇ ನಿಮಗೂ ಖುಶಿಯಾಗಿರಬೇಕು!‘ತನ್ನ ಉಸಿರು ಕಟ್ಟಲಿಲ್ಲ ದನಿ ಗೊಗ್ಗರಾಗಲಿಲ್ಲ’ ಅಂತ ಕೋಗಿಲೆ ಮನುಷ್ಯಾಕ್ರಮಣದಿಂದ ಕಳೆದ ಕೊರಳು ಮರುಪಡೆದ ಸಂತಸ ವ್ಯಕ್ತಪಡಿಸುತ್ತದೆ. ಇಲ್ಲಿ ಕೋಗಿಲೆ, ವಸಂತನಿಗೆ ರೂಪಕ. ವಸಂತ ಪ್ರಕೃತಿಗೆ ಪ್ರತಿಮೆ. ಹಾಗೆ ಕೋಗಿಲೆಗೆ ಸ್ವರ ಬಂದಿದೆ ಎಂದರೆ ಪ್ರಾಕೃತಿಕ ಸಮತೋಲನ ವಾಪಸ್ಸಾಗಿದೆ ಅಂತ. ಉಬ್ಬಸ ಕಳೆದ ನಿಸರ್ಗ ಅನ್ನುವಾಗ, ಇದೇ ಧ್ವನಿ. ಸಾಧಾರಣವಾಗಿ ವಾತಾವರಣ ಕಲುಷಿತಗೊಂಡಾಗ ಉಬ್ಬಸ. ವಾತಾವರಣ ನಿರ್ಮಲವಾದಾಗ,ಪ್ರಕೃತಿಯ ಉಬ್ಬಸ ಕಳೆದಿದೆ. “ಚುಮುಚುಮು ವೇಳೆಆರಂಭವಾದರೆ ಕಚೇರಿಗೂಡು ಸೇರುವ ಹೊತ್ತಿಗೂ ಮುಗಿಯದುಮತ್ತೆಂದು ಸಿಕ್ಕೀತೋಎನ್ನುವ ಹಾಗೆಕತ್ತುಚಾಚಿಸ್ವರದೌತಣ ನೀಡುತ್ತಿದೆತಳಿರು ಮೆದ್ದ ಕೋಗಿಲೆ !” ಎಡೆಬಿಡದೆ ಸಂಭ್ರಮದಿಂದ ತಳಿರುಮೆದ್ದ ಕೋಗಿಲೆ ಸ್ವರದೌತಣ ಕೊಡುತ್ತೆ. ನೀವೆಲ್ಲಾ ಗಮನಿಸಿರಬಹುದು, ಕೊರೊನಾ ಲಾಕ್ ಡೌನ್ ನಲ್ಲಿ, ಮನುಷ್ಯ ಬಂದಿಯಾದಾಗ, ನಿಸರ್ಗಕ್ಕೆ ಸ್ವಾತಂತ್ರ್ಯ ದಿನದ ಸಂಭ್ರಮ. ಯಾಕೆ ಹೀಗೆ?. ಮನುಷ್ಯ ತಾನು ಮತ್ತು ಪ್ರಕೃತಿಯ ನಡುವೆ ಗೋಡೆ ಕಟ್ಟಿ, ಉಳಿದೆಲ್ಲಾ ಜೀವಸಂಕುಲಗಳನ್ನು ನಿಕೃಷ್ಟವಾಗಿ ನೋಡಿ, ಇಟ್ಟಿಗೆ ಪಟ್ಟಣ ಕಟ್ಟಿದ. ಆ ಪಟ್ಟಣ, ಪಶ್ಚಿಮ ಘಟ್ಟದ ಸಾಲುಗಳಲ್ಲಿ ನಡೆಯುತ್ತಿರುವ ಗುಡ್ಡಕುಸಿತದಡಿಯಲ್ಲಿ ಭೂಗರ್ಭದಲ್ಲಿ ಪಳೆಯುಳಿಕೆಯಾಗುತ್ತಿದೆ . ಕೊರೊನಾದಂತಹ ಕಣ್ಣಿಗೆ ಕಾಣಿಸದ ವೈರಾಣು ದಾಳಿಗೆ ಸಿಕ್ಕಿ ಸ್ತಬ್ಧವಾಗಿದೆ. ಭಾರತೀಯ ಜೀವನಶೈಲಿ ಹೀಗಿತ್ತೇ?. ಈಶಾವಾಸ್ಯಮಿದಂ ಸರ್ವಂ ಯತ್ಕಿಂಚ ಜಗತ್ಯಾಂ ಜಗತ್ |ತೇನ ತ್ಯಕ್ತೇನ ಭುಂಜೀಥಾ ಮಾ ಗೃಧಃ ಕಸ್ಯಸ್ವಿದ್ಧನಮ್ || (ಈ ಜಗತ್ತಿನಲ್ಲಿ ಚಲನಾತ್ಮಕವಾದದ್ದು ಏನೇನಿದೆಯೋ ಅವೆಲ್ಲವೂ ಈಶನಿಂದ ಆವೃತವಾದದ್ದು. ಅದನ್ನು ಯಾವತ್ತೂ ನಿನ್ನದಾಗಿಸಿಕೊಳ್ಳಲು ಪ್ರಯತ್ನಿಸಬೇಡ. ಯಾವ ಸಂಪತ್ತನ್ನೂ ಬಯಸಬೇಡ) ಜಗತ್ತಿನ ಕಣ ಕಣದಲ್ಲಿ, ಜೀವವಿರಲಿ ನಿರ್ಜೀವ ವಸ್ತುವಾಗಿರಲಿ,ಎಲ್ಲದರಲ್ಲೂ ಈಶನನ್ನು ಕಾಣುವ ಆ ಮೂಲಕ ನಮ್ಮನ್ನೇ ಕಾಣುವ ದರ್ಶನ ನಮ್ಮದು.ನಮಗೆ ಸ್ವಾತಂತ್ರ್ಯ ಹೇಗೆ ಇಷ್ಟವೋ, ಹಾಗೆಯೇ ಉಳಿದ ಜೀವಜಾಲದ ಸ್ವಾತಂತ್ರ್ಯವನ್ನು ಗೌರವಿಸಿ ಸಹಬಾಳ್ವೆ , ಉಸಿರಿನಷ್ಟೇ ಸಹಜವಾಗಲಿ. ******************************** ಲೇಖಕರ ಬಗ್ಗೆ: ಹುಟ್ಟಿದ್ದು, ಗಡಿನಾಡ ಜಿಲ್ಲೆ,ಕೇರಳದ ಕಾಸರಗೋಡು ಜಿಲ್ಲೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, “ಮೆಟೀರಿಯಲ್ಸ್ ಸೈನ್ಸ್” ನಲ್ಲಿ ಸ್ನಾತಕೋತ್ತರ ಪದವಿ, ಐ.ಐ.ಟಿ. ಮದರಾಸು, ವಿನಿಂದ ಭೌತಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದು, ಕಳೆದ ಎರಡು ದಶಕದಲ್ಲಿ, ಡಿ.ಆರ್.ಡಿ.ಒ. ಹೈದರಾಬಾದ್ ನಲ್ಲಿ, ವಿಜ್ಞಾನಿಯಾಗಿ ವೃತ್ತಿ. ಸಾಹಿತ್ಯ, ಓದು ಬರಹ, ಹಾಗೂ ಸಂಗೀತ ಹೃದಯಕ್ಕೆ,ಹತ್ತಿರ

Read Post »

ಇತರೆ, ಮಕ್ಕಳ ವಿಭಾಗ

ಮಕ್ಕಳ ಕವಿತೆ

ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು ಮಳೆಯ ಬೆರೆತುಆನೆಯು ತಿಂದಿಲ್ವಆನೆಗು ಇರುವೆಗು ಭೇದವೆ ಇಲ್ಲಬೆಲ್ಲ ಕದ್ದಿಲ್ವ? ಪುಟ್ಟಿಯ ಮಾತು ಸಿಡಿಯೋ ಅರಳುತಲೆಯು ಕೆಟ್ಟಿಲ್ವ!!ಅಮ್ಮ ಅಪ್ಪ ಅಜ್ಜಿ ಅಜ್ಜಬಿದ್ದು ನಕ್ಕಿಲ್ವ? ******************************

ಮಕ್ಕಳ ಕವಿತೆ Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು ಟು ಹೊಸ್ಪೇಟ್ ಎಂದೇ ನನಗೆ ಪರಿಚಯವಾದವರು. ಮೃದು ಮಾತಿನ ಅಷ್ಟೇ ನಾಚಿಕೆ ಸ್ವಭಾವದ ಹುಡುಗ. ಯಾವಾಗ ಎದುರಿಗೆ ಸಿಕ್ಕರೂ ಒಂದು ನಗೆಯ ಹೊರತಾಗಿ ಬೇರೆ ಮಾತು ಆಡಲು ಬರುವುದೇ ಇಲ್ಲವೇನೋ ಎಂಬಷ್ಟು ಮೌನಿ. ಅವರ ಚುಟುಕುಗಳ ಸಂಕಲನ ಬೆಳದಿಂಗಳು ಓದಿದಾಗ ಅವರ ಮೌನಕ್ಕೊಂದು ಅರ್ಥ ದೊರಕಿತು ನನಗೆ. ಹೇಳಬೇಕಾದುದ್ದನ್ನೆಲ್ಲ ಚುಟುಕಾಗಿ ಮೂರು ನಾಲ್ಕು ಸಾಲುಗಳಲ್ಲಿ ಹೇಳಿ ನಿರುಮ್ಮಳವಾಗಿ ಬಿಡುವ ಗುರುವಿಗೆ ಬಹುಶಃ ಮಾತು ಮಣಭಾರ ಎನ್ನಿಸಿರಬಹುದು.. ಹೀಗಾಗಿಯೇ ಮೌನ ಸಾಮ್ರಾಜ್ಯದ ಚಕ್ರವರ್ತಿ ಅವರು. ಇಷ್ಟಾಗಿಯೂ ನಾನು ಕಂಡAತೆ ಸ್ನೇಹಿತರನ್ನು ತುಂಬಾ ನಂಬುವ ಸ್ವಭಾದ ಗುರು  ಪ್ರೀತಿಸುವವರನ್ನು ನಂಬುತ್ತೇನೆ. ದ್ವೇಷಿಸುವವರನ್ನು  ಪ್ರೀತಿಸುತ್ತೇನೆ ಹೋಗುವ ದಾರಿಯಲ್ಲಿ ನನ್ನೆದೆಯ ಹೂವುಗಳು ನೀವು ಎಂದು ಬರೆದರೆ ಅದರಲ್ಲಿ ಅಚ್ಚರಿಯೇನಿದೆ?  ಪ್ರೀತಿಸುವವರನ್ನು ನಂಬುವುದು ಸಹಜ. ಎಲ್ಲರೂ ತಮ್ಮನ್ನು ಪ್ರೀತಿಸುವವರನ್ನು ನಂಬಿಯೇ ನಂಬುತ್ತಾರೆ. ಅದೇನೂ ವಿಶೇಷವಲ್ಲ.  ಆದರೆ ದ್ವೇಷಿಸುವವರನ್ನು ಪ್ರೀತಿಸುವುದು ಮಾತ್ರ ಬಹುದೊಡ್ಡ ವಿಷಯ. ಹಾಗೆ ದ್ವೇಷಿಸುವವರನ್ನೂ ಪ್ರೀತಿಸುವುದು ಸಾಧಾರಣ ಜನರಿಗೆ ದಕ್ಕುವ ಮಾತಲ್ಲ. ಹೀಗಾಗಿಯೇ ಈ ಪ್ರೀತಿಸುವವರನ್ನು ಹಾಗೂ ದ್ವೇಷಿಸುವವರನ್ನು ತಾನು ಹೋಗುವ ದಾರಿಯಲ್ಲಿ  ಸಿಗುವ ತನ್ನೆದೆಯ ಹೂವುಗಳು ಎನ್ನುತ್ತಾರೆ. ಬದುಕು ತೀರಾ ಚಿಕ್ಕದು. ದ್ವೇಷಿಸುವವರನ್ನು ತಿರುಗಿ ನಾವೂ ದ್ವೇಷಿಸುತ್ತಲೇ ಹೋದರೆ ಇಡೀ ಜೀವನಪೂರ್ತಿ ದ್ವೇಷಿಸುತ್ತಲೇ ಇರಬೇಕಾಗುತ್ತದೆ. ಪ್ರತಿ ಮಾತಿಗೂ ಒಂದು ಎದುರುತ್ತರ ಕೊಡುತ್ತಲೇ ಹೋದರೆ ಮಾತು ಮುಗಿಯುವುದಾದರೂ ಯಾವಾಗ? ಹೀಗಾಗಿಯೇ ದ್ವೇಷಿಸುವವರನ್ನು ಪ್ರೀತಿಸಿಬಿಟ್ಟರೆ ನಾವು ನಿರುಮ್ಮಳವಾಗಿರಬಹುದು. ಕಿuಚಿಟiಣಥಿ oಜಿ meಡಿಛಿಥಿ is ಣತಿiಛಿe bಟesseಜ  ಎಂದು ಶೇಕ್ಸ್ಫೀಯರ್ ಹೇಳುತ್ತಾನೆ. ದ್ವೇಷಕ್ಕೆ ಪ್ರತಿಯಾಗಿ ದ್ವೇಷಿಸಿದರೆ ನಮ್ಮ ನಿರಾಳ ಮನಸ್ಥಿತಿಯನ್ನು ನಾವೇ ನಾಶಮಾಡಿಕೊಂಡAತೆ. ಹೀಗಾಗಿಯೇ ಜಗದ ಎಲ್ಲ ನೋವಿಗೂ ಪ್ರೀತಿಯೊಂದೇ ಔಷಧ. ಜಗದ ಎಲ್ಲ ದ್ವೇಷಕ್ಕೂ ಪ್ರೀತಿಯೇ ಮುಲಾಮು. ಕವಿಯ ಮಾನವೀಯತೆಯ ಪರಿಚಯವಾಗಲು ಈ ಎರಡು ಸಾಲು ಸಾಕು.            ನಾನು ಕಡಲೂರಿನವಳು. ಜಗದ ಸೃಷ್ಟಿ ಕಡಲಲ್ಲಿಯೇ ಆದದ್ದು ಎಂದು ಬಲವಾಗಿ ನಂಬಿದವು. ಜಗದ ಅಂತ್ಯವೂ ಕಡಲಿಂದಲೇ ಆಗುತ್ತದೆ ಎಂದೂ ಮತ್ತೆ ಮತ್ತೆ ಹೇಳುತ್ತಿರುವವಳು. ಕಡಲ ಉಪ್ಪು ನೀರು ನಮಗೆ ಅಮೃತಕ್ಕೆ ಸಮಾನ. ನಾನು ಚಿಕ್ಕವಳಿರುವಾಗಲೆಲ್ಲ ಹೊಟ್ಟೆ ಕೆಟ್ಟರೆ, ತಲೆ ನೋವು ಬಂದರೆ ಉಪ್ಪು ನೀರು ಕುಡಿಸುತ್ತಿದ್ದರು. ಒಂದೋ ವಾಂತಿಯಾಗಿ ಎಲ್ಲವೂ ಹೊಟ್ಟೆಯಿಂದ ಹೊರಹೋಗಬೇಕು, ಅಥವಾ ಉಪ್ಪುನೀರು ಎಲ್ಲವನ್ನೂ ಜೀರ್ಣಿಸಬೇಕು. ಹೀಗಾಗಿ ಎಷ್ಟೋ ಸಲ ನನ್ನ ಮಕ್ಕಳು ಚಿಕ್ಕವರಿರುವಾಗಲೂ ಉಪ್ಪುನೀರಿನ ಔಷಧವೇ ನನ್ನನ್ನು ಸಂಕಟದಿAದ ಪಾರು ಮಾಡಿದ್ದು.    ನಾಲ್ಕು ತಿಂಗಳಿನ ಪುಟ್ಟ ಮಗುವನ್ನು ಕೈಲಿಟ್ಟುಕೊಂಡು ಊರಲ್ಲೇ ಗಂಜಿ ಉಂಡುಕೊAಡು ಸುಖವಾಗಿ ಶಾಲೆಗೆ ಹೋಗಿ ಬರಬಹುದಾದ ಅವಕಾಶವನ್ನು ಬಿಟ್ಟುಕೊಟ್ಟು, ಅನುದಾನಿತ ಶಾಲೆ ಬೇಡ ನನಗೆ ಎನ್ನುತ್ತ ಮನೆಯವರೆಲ್ಲ ಅಸಮಧಾನಕ್ಕೆ ಕಾರಣವಾಗಿ ಬೆಳ್ತಂಗಡಿಯ ಗೊಂಡಾರಣ್ಯವಾದ ಕೊಯ್ಯೂರಿಗೆ ಸರಕಾರಿ ನೌಕರಿ ಮಾಡುತ್ತೇನೆ ಎಂದು ಹೊರಟಿದ್ದೆ. ಏನೂ ಅರಿಯದ ಬೊಮ್ಮಟೆಯಂತಹ ಮಗು ಮಧ್ಯರಾತ್ರಿ ಎದ್ದು ಅತ್ತಾಗಲೆಲ್ಲ ನನಗೆ ತಳಮಳ. ನಾನೇ ಮದುವೆ ಆಗುವವರೆಗೂ ಅಮ್ಮನ ಹೊಟ್ಟೆಗೆ ಕೈಯ್ಯಿಟ್ಟು ಮಲುಗುತ್ತಿದ್ದವಳು. ಈಗ ಈ ಮಗುವನ್ನು ಸಂಭಾಳಿಸುವ ಅಮ್ಮನಾಗಿದ್ದೆ. ಆಗೆಲ್ಲ ನನಗೆ ನೆನಪಾಗುತ್ತಿದ್ದುದು ಒಂದೇ. ನೀರು ಬೆಚ್ಚಗೆ ಮಾಡಿ ಒಂದು ಚಿಟಿಕೆ ಉಪ್ಪು ಹಾಕಿ ಕದಡಿ ಚಮಚದಲ್ಲಿ ನಾಲ್ಕಾರು ಹನಿ ಕುಡಿಸುತ್ತಿದ್ದೆ. ಸ್ವಲ್ಪ ಸಮಯದ ನಂತರ ಮಗು ಅಳುವುದನ್ನು ನಿಲ್ಲಿಸಿ ಮಲಗಿದರೆ ನನಗೆ ಏನೋ ದೊಡ್ಡ ಮಹತ್ಸಾಧನೆ ಮಾಡಿದ ಸಮಾಧಾನ. ರುಚಿ ನೀಡುವ ಉಪ್ಪಿನಲ್ಲಿ ಸಕಲ ಜೀವರಾಶಿಗಳ ಕಣ್ಣೀರಿದೆ ಆದರೆ ಇಲ್ಲಿ ಗುರು ಉಪ್ಪಿಗೆ ಬೇರೆಯದ್ದೇ ಅರ್ಥ ನೀಡಿದ್ದಾರೆ. ಉಪ್ಪುಪ್ಪಿನ ಕಣ್ಣೀರಿಗೆ ಹೋಲಿಸಿದ್ದಾರೆ. ಬದುಕಿನ ವಿವಿಧ ಅರ್ಥಗಳನ್ನು ಹಿಡಿದಿಡುವುದೇ ನಿಜವಾದ ಕವಿಯ ಸಾಧನೆ. ನಮಗೆಲ್ಲ ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ ಎಂದೆನಿಸಿದರೆ ಗುರು ಉಪ್ಪನ್ನು ಕಣ್ಣೀರಿಗೆ ಸಮೀಕರಿಸಿ ಹೊಸತೇ ಆದ ಆಯಾಮವನ್ನು ನೀಡಿದ್ದಾರೆ.    ಯಶಸ್ಸು ಸುಲಭವಾಗಿ ದಕ್ಕುವಂತಹುದ್ದಲ್ಲ. ಒಂದು ಗುರಿಯನ್ನು ತಲುಪಲು ವಹಿಸಬೇಕಾದ ಶ್ರಮಕ್ಕೆ ಯಾವ ಬೆಲೆಯೂ ಇಲ್ಲ. ಯಶಸ್ಸಿಗೆ ಹತ್ತಾರು ದಾರಿಗಳಿರುವುದಿಲ್ಲ. ಬೇಗ ಹೋಗಿ ಯಶಸ್ಸನ್ನು ಪಡೆಯಲು ಯಾವ ಒಳದಾರಿಯೂ ಇರುವುದಿಲ್ಲ. ಇರುವುದು ಒಂದೇ ದಾರಿ. ಅದು ಸತತ ಪರಿಶ್ರಮ. ಏರುವ ಎತ್ತರಕ್ಕೆ ಒಂದೇ ದಾರಿ ಬೀಳಲು ನೂರು ದಾರಿ ಆದರೆ ಯಶಸ್ಸಿನ ಶಿಖರವನ್ನು ಹತ್ತಿದರೂ ಅದರಿಂದ ಕೆಳಗೆ ಬೀಳಲು ಬೇಕಷ್ಟು ದಾರಿಗಳಿರುತ್ತವೆ. ನಮ್ಮದೇ ವ್ಯಸನಗಳು ನಮ್ಮನ್ನು ದಾರಿ ತಪ್ಪಿಸಿ ಯಶಸ್ಸಿನ ಶಿಖರದಿಂದ ಒಮ್ಮೆಲೆ ಕೆಳಗೆ ಬೀಳಿಸಬಲ್ಲದು. ನಮ್ಮ ಒಂದು ತಪ್ಪು ಹೆಜ್ಜೆಯೂ ನಮ್ಮನ್ನು ಪ್ರಪಾತದ ಕಡೆ ತಳ್ಳುವ ಚಕ್ರವಾಗಿರಬಹುದು.  ಆದರೂ ಈ ಜಗತ್ತು ಪ್ರೇಮಮಯ. ಪ್ರೇಮವೊಂದಿದ್ದರೆ ಸಾಕು, ಜಗತ್ತಿನ ನೂರಾರು ಸಂಕಷ್ಟಗಳನ್ನು ಸುಲಭವಾಗಿ ಜಯಿಸಬಹುದು. ಪ್ರೇಯಸಿಯ ಒಂದು ನಗು ಇಡೀ ಜಗತ್ತನ್ನೇ ಗೆಲ್ಲುವ ಪ್ರೇರಕ ಶಕ್ತಿಯಾಗಬಲ್ಲದು. ನಿನ್ನ ನಗು ಕಂಡ ಕ್ಷಣ ಕಡಲಿನ ಮುತ್ತುಗಳೆಲ್ಲ ಹೂವಾಗಿ ಅರಳಿದವು ಎನ್ನುವ ಕವಿಯಲ್ಲಿನ ತಾಜಾ ಭಾವನೆಗಳು ನಮ್ಮನ್ನು ಜೀವನ್ಮುಖಿಯಾಗಿಸುವುದರಲ್ಲಿ ಸಂಶಯವೇ ಇಲ್ಲ.  ಈ ಪ್ರೇಮದ ಪರಿಯನ್ನೊಮ್ಮೆ ಗಮನಿಸಿ. ಯಾರೋ ನಡೆದ ದಾರಿಯಲ್ಲಿ ನಾ ನಡೆಯುತ್ತಿದ್ದೆ ಸುಮ್ಮನೆ ಒಮ್ಮೆ ದಾರಿ ಬದಲಿಸಿದೆ! ನೀ ಸಿಕ್ಕೆ ಬದುಕು ದಕ್ಕಿತು ಒಂದು ಪ್ರೇಮ ಬದುಕನ್ನು ನಮ್ಮ ತೆಕ್ಕೆಗೆ ನೀಡಬಲ್ಲದು ಎನ್ನುವುದಕ್ಕೆ ಸಾಕ್ಷಿಯಾಗಿರುವ ಈ ಸಾಲುಗಳನ್ನು ನೋಡಿ. ಸರಳವಾದ ಕೆಲವೇ ಶಬ್ಧಗಳಲ್ಲಿ ಈ ಭಾವ ನಮ್ಮನ್ನು ಇಡೀ ಜಗತ್ತಿನ ಪ್ರೇಮದ ರಹದಾರಿಯಲ್ಲಿ ನಿಲ್ಲಿಸುತ್ತದೆ. ಪಡೆದದ್ದು ಇಷ್ಟೇ ಅತ್ತ ನೀನು, ಇತ್ತ ನಾನು ದಡವಾಗಿ ಪ್ರೀತಿಯ ನದಿ ಎಂದೂ ಬತ್ತುವುದಿಲ್ಲ ಹೀಗಾಗಿ ಪ್ರೀತಿಯಲ್ಲಿ ಏನು ಪಡೆದೆ ಎಂದರೆ ಎಂದೂ ಬತ್ತದ ಪ್ರೀತಿಯನ್ನು ಪಡೆಯುವುದು ಮಾತ್ರ ಪ್ರೇಮದ ಕೊನೆಯ ಗುರಿಯಾಗಿರುತ್ತದೆ. ಪ್ರೇಮನದಿಯ ಎರಡು ದಡಗಳಲ್ಲಿ ಪ್ರೇಮಿಗಳಿಬ್ಬರೂ ನಿಂತುಕೊAಡರೆ ಆ ನದಿ ಎಂದಿಗೂ ಬತ್ತಬಾರದು. ಅಂತಹ ಪ್ರೇಮವನ್ನು ಪಡೆದರೆ ಜೀವನ ಸಾರ್ಥಕ ಎನ್ನುವ ಭಾವ ಕವಿಯಲ್ಲಿದೆ. ಅದಕ್ಕೆಂದೇ ಕವಿ ಬೆಳದಿಂಗಳು ಸೋತಿದೆ ಅವಳ ಹೆಸರಿಗೆ ಆ ಹೆಸರಲ್ಲಿ ನನ್ನ ಬದುಕಿನ ಉಸಿರಿದೆ ಎನ್ನುತ್ತಾರೆ. ಪ್ರೇಮದ ಸಾಫಲ್ಯವೇ ಹಾಗೆ. ಪ್ರೇಮಿಯ ಹೆಸರನ್ನು ಜಪಿಸುತ್ತ ಅದನ್ನೇ ಉಸಿರಾಡುವುದರಲ್ಲಿಯೇ ಬದುಕಿನ ಔನತ್ಯವನ್ನು ಕಾಣುವುದು ಪ್ರತಿ ಪ್ರೇಮಿಯ ಆಶಯವಾಗಿರುತ್ತದೆ. ಹೀಗೆಂದೇ ಪ್ರೇಮದಲ್ಲಿ ಬಿದ್ದ ಕಾಲೇಜು ವಿದ್ಯಾರ್ಥಿಗಳ ನೋಟ್‌ಬುಕ್‌ನ ಕೊನೆಯ ಹಾಳೆಯನ್ನು ಗಮನಿಸಿ. ಅಲ್ಲಿ ಕೇವಲ ಪ್ರೇಮಿಯ ಹೆಸರನ್ನೇ ಸಾವಿರ ಸಲ ಬರೆದಿರುತ್ತಾರೆ. ಕವಿ ಕೂಡ ತನ್ನವಳ ಹೆಸರಿಗೆ ಬೆಳದಿಂಗಳೂ ಸೋಲುತ್ತದೆ ಎನ್ನುತ್ತಾರೆ. ಕವಿಗೂ ವಿರಹ ಕಾಡುತ್ತದೆ. ವಿರಹವಿಲ್ಲದ ಪ್ರೇಮ ಈ ಜಗದಲ್ಲಿ ಇದ್ದೀತೆ? ಪ್ರತಿ ಪ್ರೇಮಕ್ಕೂ ವಿರಹ ಕಾಡಿದರೆ ಮಾತ್ರ ಆ ಪ್ರೇಮಕ್ಕೊಂದು ಅಧಿಕೃತತೆ ದಕ್ಕಿದ ಹಾಗೆ. ಪ್ರತಿ ಪ್ರೇಮದಲ್ಲಿಯೂ ಒಂದು ಮುನಿಸಿರುತ್ತದೆ, ಜಗಳವಿರುತ್ತದೆ. ಕೊನೆಗೆ ಪ್ರೇಮಿ ಕೈಕೊಟ್ಟು ಹೋದಳೆಂದು ಪರಿತಪಿಸುವ ಉಪಖ್ಯಾನವಿರುತ್ತದೆ. ಪ್ರೀತಿಯೊಂದಿಗೆ ಸ್ನೇಹ ಮಾಡಿಕೊಂಡವಳು ಮೊದಲೇ ಮೋಸದ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು ತಿಳಿಯಲಿಲ್ಲ ಎನ್ನುತ್ತ ವಿರಹದ ಮಾತನಾಡುತ್ತಾರೆ. ಬದುಕಿನ ಬಣ್ಣಗಳನ್ನು ಹಂಚಿಕೊAಡವಳು. ಬದುಕಿನಲ್ಲಿರುವ ಕಾಮನಬಿಲ್ಲನ್ನು ಬಣ್ಣಗಳನ್ನು ತನಗಾಗಿ ತಂದವಳು ಬಣ್ಣಗಳ ಜೊತೆಗೆ ಬಣ್ಣ ಬದಲಿಸಿದಳು ಎಂದು ವಿಷಾದ ಪಡುತ್ತಾರೆ. ಬಣ್ಣಗಳ ಜೊತೆಗೆ ಆಟವಾಡುವುದನ್ನು ಕಲಿಸಿದವಳು ಬಣ್ಣ ಬದಲಿಸಿ ಹೋದಳು ಆದರೂ ಮೋಸ ಮಾಡಿ ಹೋದವಳ ಬಗ್ಗೆ ಬೇಸರವಿಲ್ಲ. ಅವಳ ಮೇಲಿನ ಪ್ರೇಮ ಕಿಂಚಿತ್ತೂ ಕಡಿಮೆಯಾಗುವುದಿಲ್ಲ. ಪ್ರೇಮವೆಂದರೆ ನಂಬಿಕೆ ಎಂದು ಮೊದಲೇ ಹೇಳಿದವರು ಈಗ ನಂಬಿಕೆಯನ್ನು ಕೊಂದವಳ ಬಗೆಗೂ ಮತ್ತದೇ ನಂಬಿಕೆ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ನಂಬಿಕೆಯನ್ನು ಕೊಂದವಳ ಜೊತೆಗೆ ನAಬಿಕೆಯಿAದ ಬದುಕಿರುವ ಹೆಮ್ಮೆ ನನ್ನದಾಗಲಿ ಎನ್ನುತ್ತ ನಂಬಿಕೆಯನ್ನು ತಾನು ಕಳೆದುಕೊಳ್ಳದ ನಿಶ್ಚಯ ಮಾಡುತ್ತಾರೆ. ಪ್ರೀತಿಗಿಂತ ಮೊದಲೇ ಮೋಸವನ್ನೂ ತನ್ನೊಂದಿಗೆ ತಂದಿದ್ದಾಳೆAದು ಆರೋಪಿಸುವ ಕವಿಗೆ ಆಕೆ ತನ್ನನ್ನು ಬಿಟ್ಟು ಹೋದರೆ ಏನು ಮಾಡುವುದೆಂಬ ಭಯವಿದೆ. ಆಕೆಯನ್ನು ಕಳೆದುಕೊಳ್ಳಲಂತೂ ಸಾಧ್ಯವಿಲ್ಲ. ಹೊರಟು ಹೋದಳು ನನ್ನಲ್ಲಿರುವ ಬೆಳಕನ್ನು ಕೊಂದು ಅವಳ ನೆರಳೇ ದಾರಿ ತೋರಿಸುತ್ತಿದೆ ಕತ್ತಲೆಯಲ್ಲಿ ಎನ್ನುತ್ತ ಅವಳ ನೆನಪು, ನೆರಳು ಜೀವನದ ಕತ್ತಲಿನಲ್ಲೂ ದಾರಿ ತೋರುವ ಬೆಳಕಾಗುವ ಕುರಿತು ತುಂಬು ನಂಬಿಕೆಯ ಮಾತನಾಡುತ್ತಾರೆ. ಒಟ್ಟಿನಲ್ಲಿ ಬದುಕು ಅವಳ ಅವಳೊಂದ ಸಾಗಬೇಕೆನ್ನುವುದು ಕವಿ ಆಶಯ.                    ಎಲ್ಲವನ್ನೂ ಅಥೆಂಟಿಕ್ ಆಗಿ ಹೇಳುವ ಕವಿ ಸಾವಿನ ಬಗ್ಗೆ ಮಾತನಾಡದಿದ್ದರೆ ನಡೆದೀತು ಹೇಗೆ? ಹೀಗಾಗಿ ಬದುಕಿನ ನಶ್ವರತೆಯನ್ನು ಕತ್ತಲೆಗೆ ಹೋಲಿಸುತ್ತಾರೆ. ಕತ್ತಲೆಯ ಬದುಕು, ಬೆಳಕಿನ ಸಾವಿನ ರೂಪಕ ಇಲ್ಲ ಆಧ್ಯಾತ್ಮದ ಕೊನೆಯ ಹಂತವನ್ನು ನೆನಪಿಸುತ್ತದೆ. ನಾನು ಕತ್ತಲೆಯಲ್ಲಿ ಬದುಕಿದರೂ ಸಾವು ಬೆಳಕಿನಲ್ಲಿ ಬರಲಿ ವ್ಯಾವಹಾರಿಕ ಜಗತ್ತನ್ನು ತೊರೆದು ಅಲೌಕಿಕ ಜಗತ್ತನ್ನು ಸಾಮಕೇತಿಕವಾಗಿ ಪ್ರತಿನಿಧಿಸುವ ಕತ್ತಲಿನ ಬದುಕು ಮತ್ತು ಬೆಳಕಿನ ಸಾವು ಸಾವಿರಾರು ವರ್ಷಗಳ ಜ್ಞಾನವನ್ನು ಕೇವಲ ನಾಲ್ಕೇ ಸಾಲಿನಲ್ಲಿ ಕಣ್ಣೆದುರು ತೆರೆದಿಡುವ ಅದ್ಭುತ ಇದು. ಅಷ್ಟಾದರೂ ನಾವು ಎಷ್ಟೊಂದು ಸಾವನ್ನು ನೋಡುತ್ತೇವೆ. ಕಣ್ಣೆದುರಿಗೇ ಅದೆಷ್ಟೋ ಜನ ಪತಪತನೆ ಉದುರಿ ಬೀಳುತ್ತಿರುವ ಕಾಲಘಟ್ಟ ಇದು. ಸಾವಿನ ಲೆಕ್ಕಾಚಾರವನ್ನು ಬೆರಳೆಣಿಕೆಯಲ್ಲಿ ಮುಗಿಸಿ, ಸಾವಿರಗಟ್ಟಲೆ ಲೆಕ್ಕದಲ್ಲಿ ಎಣಿಸುತ್ತಿರುವ ಈ ಕೊರೋನಾ ಕಾಲದಲ್ಲಿ ಯಮ ಕೂಡ ಸಾವಿಗೆ ಕಣ್ಣೀರು ಹಾಕುತ್ತಿದ್ದಾನೆಯೇ? ಗೊತ್ತಿಲ್ಲ. ಆದರೆ ಪ್ರತಿ ಸಾವಿನ ಎದುರು ಯಮ ಅತ್ತಿದ್ದು ಯಾರ ಕಣ್ಣಿಗೂ ಕಾಣಿಸಲಿಲ್ಲ ಎನ್ನುವ ಕವಿಯ ಕಲ್ಪನೆ ಅದ್ಭುತವಾಗಿದೆ. ಇದ್ದರೂ ಇರಬಹುದು ಬಿಡಿ. ದಿನವೊಂದಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ, ಕೆಲವೊಂದು ದಿನ ಲಕ್ಷದ ಎಣಿಕೆಯಲ್ಲಿ ಸಾವಿನ ಲೆಕ್ಕಾಚಾರ ಕಂಡಿದೆ ಈ ಜಗತ್ತು. ಜನರ ಮರಣದ ಪ್ರಮಾಣ ಆ ಯಮನಿಗೂ ದಿಗಿಲು ಹುಟ್ಟಿಸಿರಬಹುದು. ಆದರೆ ಸಾವಿಗೊಂದು ಗೌರವ ಕೊಡುತ್ತಿದ್ದೇವೆಯೇ? ಅದೂ ಇಲ್ಲ. ಕೊರೋನಾದಿಂದಾಗಿ ಸಾವುಗಳೆಲ್ಲ ಕೇವಲ ಬೀದಿ ಬದಿಯ ಹೆಣಗಳಷ್ಟೇ ಆಗಿಹೋಗುತ್ತಿರುವ ಈ ದುರಂತದ ಸಮಯದಲ್ಲಿ ಸಾವನ್ನು ಕುರಿತು ಮಾತನಾಡುವುದೇ ಅಪರಾಧ ಎನ್ನಿಸಿಬಿಡುತ್ತದೆ. ಸಾವಿನ ಮಾತು ಬಿಡಿ. ಬದುಕಿರುವವರನ್ನೇ ಮುಟ್ಟಿಸಿಕೊಳ್ಳಲು ನಾವು ಹಿಂದೇಟು ಹಾಕುತ್ತಿದ್ದೇವೆ. ಪರಸ್ಪರರನ್ನು ಭೇಟಿಯಾಗಲು ಅದೆಷ್ಟು ಮುಜುಗರ ಈಗ. ಅನಾವಶ್ಯಕವಾಗಿ ನಾವೀಗ ಯಾರೊಂದಿಗೂ ಮಾತನಾಡಲಾರೆವು. ಪಕ್ಕದ ಮನೆಯವರೊಂದಿಗೆ ಹರಟೆ ಹೊಡೆಯಲಾರೆವು. ಯಾಕೆಂದರೆ ಯಾರಿಗೆ ಗೊತ್ತು, ಅವರ ಮನೆಯ ಯಾವ ಸದಸ್ಯ ಹೊರಹೋಗಿ ಕೊರೋನಾ ಅಂಟಿಸಿಕೊAಡು ಬಂದಿದ್ದಾನೆಯೋ ಎಂಬ ಭಯ. ಇದರ ನಡುವೆ ಸಾವಿರಗಟ್ಟಲೆ ಹೆಣ ಸಂಪಾದಿಸುವ ಸಾವು ಮಾತ್ರ ಥೇಟ್ ರ‍್ಯಾದಿ ಕಳೆದುಕೊಂಡ ಭಿಕಾರಿ. ಅದೆಷ್ಟೋ ಕೋಟಿಗಳ ಒಡೆಯನಾದ ಮುಂಬೈನ ಒಬ್ಬ ಕೊರೋನಾದಿಂದ ಸತ್ತ ನಂತರ ಅವನ ಹೆಣವನ್ನು ಮನೆಯ ಗೇಟಿನ ಎದುರು ಬಿಸಾಡಿ ಹೋಗಿದ್ದಂತಹ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವಾಗ ಈ ಸಾವು ಅದೆಷ್ಟು ಭೀಕರ ಎನ್ನಿಸಿಬಿಟ್ಟಿದ್ದಂತೂ ಸುಳ್ಳಲ್ಲ. ಹೀಗಾಗಿ ಈ ಸಂದರ್ಭದಲ್ಲಿ ನಾನು ಹೋದಮೇಲೆ ಇನ್ನೂ ಇರಬೇಕಿತ್ತು ಎನ್ನುವ ನಿಮ್ಮ ನಂಬಿಕೆಯೇ ಸಾರ್ಥಕ ಬದುಕಿನ ಕವಿತೆ ನಾವು ಸತ್ತ ನಂತರ ನಮ್ಮನ್ನು ಕ್ಷಣಮಾತ್ರವಾದರೂ ನೆನಪಿಸಿಕೊಂಡು ಇನ್ನೂ ಇರಬೇಕಿತ್ತು ಎಂದು ಯಾರಾದರೂ ಮನಃಪೂರ್ವಕವಾಗಿ ಅಂದುಕೊAಡರೆ ಅದೇ ದೊಡ್ಡ ಶೃದ್ಧಾಂಜಲಿ. ಇದರ ಹೊರತಾಗಿ ಮಾಡುವ ಯಾವ ಧಾರ್ಮಿಕ ಶ್ರಾದ್ಧ, ತಿಥಿಗಳೂ ನನ್ನನ್ನು ಈ ಇಹಲೋಕದಿಂದ ಮುಕ್ತಗೊಳಿಸಲಾರದು.    ಕವಿತೆ ಬರೆಯುವುದು ಎಂದರೆ ಮರ‍್ನಾಲ್ಕು ಪುಟದ ಗದ್ಯ ಕವನ ಬರೆಯುವ ನನ್ನಂಥವರಿಗೆ ನಾಲ್ಕೇ ಸಾಲಿನಲ್ಲಿ ಹೇಳಬೇಕಾದುದ್ದನ್ನೆಲ್ಲ ಓದುಗರೆದೆಗೆ ದಾಟಿಸುವುದು ಒಂದು ಅಚ್ಚರಿಯ ವಿಷಯವೇ ಸರಿ.

Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ ಅನುಗುಣವಾಗಿ ತೆರೆದುಕೊಳ್ಳುವ ಒಂದೊಂದು ಬಾಗಿಲಿಗೂ ಅದರದೇ ಆದ ಪುಟ್ಟ ಹೃದಯವೊಂದು ಇರಬಹುದು; ಆ ಹೃದಯದ ಬಡಿತಗಳೆಲ್ಲವೂ ಮನೆಯೊಳಗಿನ ಮೌನವನ್ನೋ, ಅಂಗಡಿಗಳ ವ್ಯವಹಾರವನ್ನೋ, ಸಿನೆಮಾ ಹಾಲ್ ನ ಕತ್ತಲೆಯನ್ನೋ, ರಸ್ತೆಯೊಂದರ ವಾಹನಗಳ ವೇಗವನ್ನೋ ತಮ್ಮದಾಗಿಸಿಕೊಳ್ಳುತ್ತ ಏರಿಳಿಯುತ್ತಿರಬಹುದು. ಹೀಗೆ ಎಲ್ಲ ಪ್ರಾಪಂಚಿಕ ನೋಟ-ಅನುಭವಗಳನ್ನು ತಮ್ಮದಾಗಿಸಿಕೊಳ್ಳುವ ಬಾಗಿಲುಗಳಿಗೆ ಒಮ್ಮೊಮ್ಮೆ ಕೃಷ್ಣ-ರಾಧೆಯರ, ಶಿವ-ಪಾರ್ವತಿಯರ ಹೃದಯಗಳೂ ಅಂಟಿಕೊಂಡು ಈ ಬಾಗಿಲು ಎನ್ನುವ ವಿಸ್ಮಯದ ಜಗತ್ತು ವಿಸ್ತರವಾಗುತ್ತ ಹೋಗುತ್ತದೆ. ಅವರವರ ಕಲ್ಪನೆಗಳಿಗನುಸಾರವಾಗಿ ತೆರೆದುಕೊಳ್ಳುವ ಆ ಜಗತ್ತಿನಲ್ಲಿ ವೆಲ್ ಕಮ್ ಎಂದು ಸ್ವಾಗತಿಸುವ ಡೋರ್ ಮ್ಯಾಟ್ ನಿಂದ ಹಿಡಿದು ನೀಳವಾದ ಬಳ್ಳಿಯ ನೇಯ್ಗೆಗಳ ಫ್ಲೋರ್ ಕುಷನ್ ಗಳವರೆಗೂ ಹೊಸಹೊಸ ಸ್ಪರ್ಶಗಳು ನಿಲುಕುತ್ತವೆ; ಚುಕ್ಕಿಯಿಟ್ಟು ಎಳೆದ ರಂಗೋಲಿಯ ಸಾಲುಗಳ ಮಧ್ಯೆ ಹುಟ್ಟಿದ ಹೂವೊಂದು ಡಿಸೈನರ್ ಬ್ಲೌಸ್ ಗಳನ್ನು ಅಲಂಕರಿಸುತ್ತದೆ; ತೋರಣದೊಂದಿಗೆ ತೂಗುವ ಮಲ್ಲಿಗೆ ಮಾಲೆಯ ಗಂಧ ಗಾಳಿ ಹರಿದಲ್ಲೆಲ್ಲ ಹರಿದು ಹೃದಯಗಳನ್ನು ಅರಳಿಸುತ್ತದೆ.           ಈ ಹೃದಯಗಳಿಗೂ ಬಾಗಿಲುಗಳಿಗೂ ಒಂದು ರೀತಿಯ ವಿಶಿಷ್ಟವಾದ ಸಂಬಂಧವಿರುವಂತೆ ಭಾಸವಾಗುತ್ತದೆ. ಈ ಸಂಬಂಧವನ್ನು ಮನುಷ್ಯ ಸಹಜವಾದ ರಾಗ-ದ್ವೇಷಗಳನ್ನೊಳಗೊಂಡ ಎಲ್ಲ ಭಾವನೆಗಳೂ ಒಂದಿಲ್ಲೊಂದು ರೂಪದಲ್ಲಿ ಸಲಹುತ್ತಿರುತ್ತವೆ. ಸಂಜೆಯ ಸಮಯದಲ್ಲೊಮ್ಮೆ ಬಾಲ್ಯವನ್ನು ಸುಂದರವಾಗಿ ರೂಪಿಸಿದ ಪ್ರೈಮರಿಯ ಅಥವಾ ಹೈಸ್ಕೂಲಿನ ಅಂಗಳದಲ್ಲಿ ಹೋಗಿ ನಿಂತರೆ ಮುಚ್ಚಿದ ಬಾಗಿಲುಗಳ ಹಿಂದಿರುವ ಅದೆಷ್ಟೋ ಬಗೆಬಗೆಯ ಭಾವನೆಗಳು ಹೃದಯವನ್ನು ತಾಕುತ್ತವೆ. ಮನೆಯಿಂದ ಶಾಲೆಯವರೆಗಿನ ದೂರವನ್ನು ಇದ್ದೂ ಇಲ್ಲದಂತಾಗಿಸಿದ ಗೆಳತಿಯರ ಗುಂಪು, ಪೇಪರಿನಲ್ಲಿ ಸುತ್ತಿ ಕಂಪಾಸು ಬಾಕ್ಸಿನಲ್ಲಿ ಭದ್ರವಾಗಿಟ್ಟಿದ್ದ ಎರಡೇ ಎರಡು ಪೆಪ್ಪರಮೆಂಟುಗಳನ್ನು ಶರ್ಟಿನ ಮಧ್ಯದಲ್ಲಿಟ್ಟು ಎಂಜಲು ತಾಗದಂತೆ ಚೂರು ಮಾಡಿ ಎಲ್ಲರಿಗೂ ಹಂಚುತ್ತಿದ್ದ ಎರಡನೇ ಕ್ಲಾಸಿನ ಹುಡುಗ, ಮಾರ್ಕ್ಸ್ ಕಾರ್ಡುಗಳಿಂದ ಹಿಡಿದು ಶಾಲೆಯ ಜಾತಕವನ್ನೆಲ್ಲ ಬಚ್ಚಿಟ್ಟುಕೊಂಡಿರುತ್ತಿದ್ದ ದೊಡ್ಡದೊಡ್ಡ ಕೀಗೊಂಚಲುಗಳ ಕಬ್ಬಿಣದ ಕಪಾಟು, ತೆರೆದ ಕಿಟಕಿಯ ಬಾಗಿಲುಗಳಿಂದ ನುಸುಳಿ ನೋಟ್ ಬುಕ್ ನ ಪುಟಗಳನ್ನು ನೆನೆಸುತ್ತಿದ್ದ ಮಳೆಹನಿಗಳು, ಹೀಗೆ ಮುಚ್ಚಿದ ಬಾಗಿಲಾಚೆಗಿನ ನೆನಪುಗಳೆಲ್ಲವೂ ವಿಧವಿಧದ ಭಾವನೆಗಳನ್ನು ಹೊತ್ತು ಅಂಗಳಕ್ಕಿಳಿಯುತ್ತವೆ. ಆ ಎಲ್ಲ ಭಾವನೆಗಳನ್ನು ಹೊತ್ತ ಹೃದಯ ಭಾರವಾಗುವುದು ಅಥವಾ ಹೃದಯದ ಭಾರವನ್ನೆಲ್ಲ ಅಂಗಳದಲ್ಲಿಳಿಸಿ ಹಗುರವಾಗುವುದು ಅವರವರ ಗ್ರಹಿಕೆಗಳನ್ನು ಅವಲಂಬಿಸಿರುವಂಥದ್ದು.           ಈ ಗ್ರಹಿಕೆ ಎನ್ನುವುದು ಕೆಲವೊಮ್ಮೆ ಯಾವ ತರ್ಕಕ್ಕೂ ನಿಲುಕದೆ ತನ್ನ ಪಾಡಿಗೆ ತಾನು ವಿಹರಿಸುತ್ತ, ಮನಸ್ಸಿಗೆ ತೋಚಿದಂತೆ ನಡೆದುಕೊಳ್ಳುತ್ತದೆ. ದೇವರ ಕುರಿತಾಗಿ ಒಬ್ಬೊಬ್ಬರ ಗ್ರಹಿಕೆಯೂ ಒಂದೊಂದು ತೆರನಾದದ್ದು. ಭಕ್ತಿರಸವನ್ನೇ ಗ್ರಹಿಕೆಯ ಅಂತಸ್ಸಾರವನ್ನಾಗಿಸಿಕೊಂಡ ಭಕ್ತನೊಬ್ಬ ತನ್ನ ದೈನಂದಿನ ಚಟುವಟಿಕೆಗಳೆಲ್ಲವನ್ನೂ ಬೇಸರವಿಲ್ಲದೆ ದೇವರಿಗೆ ಅರ್ಪಿಸಬಹುದು; ತನ್ನೆಲ್ಲ ಗ್ರಹಿಕೆಗಳ ಮೇಲೆ ನಿಯಂತ್ರಣ ಸಾಧಿಸಿದವನಿಗೆ ದೇವರ ಪರಿಕಲ್ಪನೆ ಕೇವಲ ನೆಮ್ಮದಿಯ ವಿಷಯವಾಗಿರಬಹುದು; ನಾಸ್ತಿಕನಿಗೆ ದೇವರು ಎನ್ನುವುದೊಂದು ಮೂರ್ಖತನದ ಆಲೋಚನೆಯೆನ್ನಿಸಬಹುದು. ಆದರೆ ದೇವಸ್ಥಾನದ ಗರ್ಭಗುಡಿಯ ಮುಚ್ಚಿದ ಬಾಗಿಲುಗಳ ಎದುರು ನಿಂತು ಬಾಗಿಲುಗಳು ತೆರೆಯುವ ಸಮಯಕ್ಕಾಗಿ ಕಾದುನಿಂತಾಗ, ವಿಚಿತ್ರವಾದ ಭಯ-ಭಕ್ತಿಗಳೆರಡೂ ಕೂಡಿದ ಭಾವನೆಯೊಂದು ಎಲ್ಲರನ್ನೂ ಆವರಿಸಿಕೊಳ್ಳುತ್ತದೆ. ಹಾಗೆ ಕಾದುನಿಂತ ಸಮೂಹದಲ್ಲಿ ಹೊಸದಾಗಿ ಮದುವೆಯಾದ ಜೋಡಿಯೊಂದು ನಸುನಾಚಿ ನಿಂತಿರುತ್ತದೆ; ಹರಕೆ ಹೊತ್ತು ಮಗುವನ್ನು ಪಡೆದ ತಾಯಿಯೊಬ್ಬಳು ಮಗುವಿನೊಂದಿಗೆ ಕೈ ಜೋಡಿಸಿ ನಿಂತಿರುತ್ತಾಳೆ; ವಾಸಿಯಾಗದ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ತನ್ನ ಔಷಧಿಗಳ ಕೈಚೀಲದೊಂದಿಗೆ ಕಳವಳದಲ್ಲಿಯೇ ಕಾಯುತ್ತಿರುತ್ತಾನೆ; ನಾಸ್ತಿಕನಾದ ಪತ್ರಿಕಾ ವರದಿಗಾರನೊಬ್ಬ ದೇವಸ್ಥಾನದ ಬಗ್ಗೆ ವರದಿಯೊಂದನ್ನು ಬರೆಯಲು ದೇವರ ಮುಖದರ್ಶನಕ್ಕಾಗಿ ಅದೇ ಸಾಲಿನಲ್ಲಿ ನಿಂತಿರುತ್ತಾನೆ. ಎಲ್ಲ ನಿರೀಕ್ಷೆಗಳ ಏಕೈಕ ಉತ್ತರವೆನ್ನುವಂತೆ ತೆರೆದುಕೊಳ್ಳುವ ಬಾಗಿಲುಗಳು ಎಲ್ಲರಿಗೂ ಅವರವರಿಗೆ ಬೇಕಾದ ಸಮಾಧಾನವನ್ನು ಒದಗಿಸುತ್ತವೆ. ಮುಚ್ಚಿದ ಬಾಗಿಲುಗಳ ಹಿಂದೆ ಇದ್ದ ದೇವರು ಮುಂಭಾಗದಲ್ಲಿ ಕಾಯುತ್ತಿದ್ದವರೊಂದಿಗೆ ಮುಖಾಮುಖಿಯಾಗಿ ಎಲ್ಲರ ಮನಸ್ಸಿನ ತಲ್ಲಣಗಳನ್ನೂ ತನ್ನದಾಗಿಸಿಕೊಳ್ಳುತ್ತಾನೆ.           ಹೀಗೆ ಎಲ್ಲರ ತಲ್ಲಣಗಳನ್ನು ತಣಿಸುವ, ಕಳವಳಗಳನ್ನು ಕಡಿಮೆ ಮಾಡುವ, ಸಮಾಧಾನದ ಸಾಧನಗಳಾಗುವ ಬಾಗಿಲುಗಳು ತಮ್ಮ ಹೃದಯದ ಭಾರವನ್ನೆಂದೂ ಇನ್ನೊಬ್ಬರಿಗೆ ವರ್ಗಾಯಿಸುವುದಿಲ್ಲ. ಗಾಳಿಯೊಂದಿಗೆ ಬಾಗಿಲವರೆಗೂ ತಲುಪುವ ಮಳೆಯ ನೀರು ಒಳಗಿಳಿಯದಂತೆ ತನ್ನೆಲ್ಲ ಶಕ್ತಿಯನ್ನೂ ಬಳಸಿ ತಡೆಹಿಡಿಯುವ ಬಾಗಿಲು ಮನೆಯೊಳಗಿನ ಜೀವಗಳನ್ನು ಬೆಚ್ಚಗಿಡುತ್ತದೆ; ಕೊರೆವ ಚಳಿಯನ್ನು, ಬೇಸಿಗೆಯ ಸೆಕೆಯನ್ನು ತನ್ನದಾಗಿಸಿಕೊಂಡು ತನ್ನನ್ನು ನಂಬಿದವರ ನಂಬಿಕೆಯನ್ನು ಕಾಪಾಡುತ್ತ ದೇವನೊಬ್ಬನ ಇರುವಿಕೆಯ ಸಾಕ್ಷಾತ್ಕಾರವನ್ನು ಗಟ್ಟಿಗೊಳಿಸುತ್ತದೆ. ನಂಬಿಕೆಯ ಪರಿಕಲ್ಪನೆಯೂ ಬಾಗಿಲುಗಳೊಂದಿಗೆ ತನ್ನದೇ ಆದ ಸಂಬಂಧವನ್ನು ಬೆಳಸಿಕೊಂಡಿದೆ. ರಾತ್ರಿಯಾಯಿತೆಂದು ಕದ ಮುಚ್ಚುವ ಪ್ರತಿ ಮನಸ್ಸಿನಲ್ಲಿಯೂ ಬೆಳಗು ಮೂಡಿ ಬಾಗಿಲು ತೆರೆಯುತ್ತದೆ ಎನ್ನುವ ನಂಬಿಕೆ ಕೆಲಸ ಮಾಡಿದರೆ, ನಗರದ ಬಾಡಿಗೆ ಮನೆಯಲ್ಲಿನ ಗೃಹಿಣಿಯೊಬ್ಬಳು ಗಂಡನನ್ನು ಕೆಲಸಕ್ಕೆ ಕಳುಹಿಸಿ ಬಾಗಿಲು ಮುಚ್ಚಿ ಸಂಜೆ ಆತ ಮನೆಗೆ ಬರುವ ನಂಬಿಕೆಯಲ್ಲಿಯೇ ತರಕಾರಿ ಹೆಚ್ಚುತ್ತಾಳೆ; ಮಗುವನ್ನು ಹತ್ತಿಸಿಕೊಂಡ ಸ್ಕೂಲ್ ವ್ಯಾನಿನ ಬಾಗಿಲಿನೊಂದಿಗೆ ಮಗುವಿನ ಭವಿಷ್ಯದ ನಂಬಿಕೆಯೊಂದು ಚಲಿಸಿದರೆ, ದಿನಸಿಯಂಗಡಿಯ ಬಾಗಿಲು ತೆರೆವ ಹುಡುಗನೊಬ್ಬ ಗಿರಾಕಿಗಳನ್ನು ನಂಬಿಕೊಂಡು ಅಗರಬತ್ತಿಯನ್ನು ಹಚ್ಚುತ್ತಾನೆ; ಮಲ್ಟಿಪ್ಲೆಕ್ಸ್ ನ ಎಸಿ ಥಿಯೇಟರಿನ ಬಾಗಿಲುಗಳು ಯಾರೋ ಸಮುದ್ರದಂಚಿಗೆ ಕೂತು ಬರೆದ ಕಥೆಯನ್ನು ನಂಬಿಕೊಂಡರೆ, ಬಂಗಾರದಂಗಡಿಯ ಬಾಗಿಲುಗಳು ಇನ್ಯಾರದೋ ಮದುವೆಯನ್ನು ನಂಬಿಕೊಂಡು ತೆರೆದುಕೊಳ್ಳುತ್ತವೆ. ಹೀಗೆ ನೇರ ಸಂಬಂಧವೂ ಇಲ್ಲದ, ಪರಿಚಯವೂ ಇಲ್ಲದ ಅದೆಷ್ಟೋ ನಂಬಿಕೆಗಳನ್ನು ಬಾಗಿಲುಗಳು ಅರಿವಿಲ್ಲದೆಯೇ ಸಲಹುತ್ತಿರುತ್ತವೆ.           ಸಂಬಂಧಗಳನ್ನು ಬಾಗಿಲುಗಳು ಪೊರೆಯುವ ರೀತಿಯೂ ವಿಶಿಷ್ಟವಾದದ್ದು. ಹೆರಿಗೆ ಆಸ್ಪತ್ರೆಯ ಮುಚ್ಚಿದ ಬಾಗಿಲುಗಳು ತೆರೆಯುತ್ತಿದ್ದಂತೆಯೇ, ಮಗುವಿನ ಅಳುವೊಂದು ಅಪ್ಪ-ಮಗುವಿನ ಸಂಬಂಧವನ್ನು ಹುಟ್ಟುಹಾಕುತ್ತದೆ. ಹಾಗೆ ಹುಟ್ಟಿದ ಸಂಬಂಧ ಮನೆಯ ಬಾಗಿಲನ್ನು ಹಾದು, ಶಾಲೆಯ ಬಾಗಿಲನ್ನು ತಲುಪಿ, ಕಾಲೇಜು-ಯೂನಿವರ್ಸಿಟಿಗಳ ಕದ ತಟ್ಟಿ, ಹೊಸಹೊಸ ಸಂಬಂಧಗಳೊಂದಿಗೆ ಬೆಸೆದುಕೊಳ್ಳುತ್ತ ಹೊಸತನವನ್ನು ಕಂಡುಕೊಳ್ಳುತ್ತದೆ. ಅಳುತ್ತಲೇ ಮಗಳನ್ನು ಗಂಡನ ಮನೆಯ ಬಾಗಿಲಿಗೆ ಕಳುಹಿಸಿಕೊಡುವ ಅಪ್ಪ, ನಗುನಗುತ್ತ ಸೊಸೆಯನ್ನು ತೆರೆದ ಬಾಗಿಲಿನಿಂದ ಸ್ವಾಗತಿಸುತ್ತಾನೆ. ಹೀಗೆ ಹೆರಿಗೆ ಆಸ್ಪತ್ರೆಯ ಬಾಗಿಲಿನಿಂದ ಹೊರಬಂದ ಮಗುವಿನ ಅಳು ಸಂತೋಷವನ್ನು ಹಂಚಿ, ಬೆಳವಣಿಗೆ-ಬದಲಾವಣೆಗಳನ್ನು ತನ್ನದಾಗಿಸಿಕೊಳ್ಳುತ್ತ, ಸಂಬಂಧಗಳಿಗೊಂದು ಹೊಸ ಸ್ವರೂಪವನ್ನು ಒದಗಿಸುತ್ತದೆ. ಆಫೀಸಿನ ಕೊಟೇಷನ್, ಪ್ರೊಜೆಕ್ಟ್ ಗಳ ಗೌಪ್ಯತೆಯನ್ನು ಕಾಪಾಡಲು ತಾವಾಗಿಯೇ ಮುಚ್ಚಿಕೊಳ್ಳುವ ಬಾಗಿಲುಗಳ ಆಚೀಚೆ ಅಕ್ಕ-ತಮ್ಮಂದಿರು, ಜೀವದ ಗೆಳತಿಯರು, ಸಿಗರೇಟಿಗೆ ಜೊತೆಯಾಗುವ ಸ್ನೇಹಿತರು ವಯಸ್ಸು ಮರೆತು ಒಂದಾಗುತ್ತಾರೆ; ಲಿವ್ ಇನ್ ಸಂಬಂಧಗಳು, ದಾಂಪತ್ಯಗಳು, ಭಗ್ನಪ್ರೇಮಗಳು ಎಲ್ಲವುಗಳಿಗೂ ಬಾಗಿಲುಗಳು ತೆರೆದ ಹೃದಯದಿಂದ ಸ್ಪಂದಿಸುತ್ತವೆ. ರೆಸ್ಟ್ ರೂಮಿನ ಮುಚ್ಚಿದ ಬಾಗಿಲುಗಳ ಹಿಂದೆ ಉದ್ದನೆಯ ಕನ್ನಡಿಯ ಮುಂದೆ ಲಿಪ್ ಸ್ಟಿಕ್ ಸರಿಮಾಡಿಕೊಳ್ಳುತ್ತ ನಿಂತ ಹುಡುಗಿಯೊಬ್ಬಳು ವೀಕೆಂಡ್ ಪಾರ್ಟಿಯ ಬಗ್ಗೆ ಯೋಚಿಸಿದರೆ, ಕ್ಯಾಂಟೀನಿನ ಅಡುಗೆಮನೆಯ ಬಾಗಿಲಿನ ಹಿಂದೆ ಮಸಾಲೆದೋಸೆ ರೆಡಿಯಾಗುತ್ತಿರುತ್ತದೆ. ಶಿಫ್ಟ್ ಮುಗಿದು ಫ್ಲೋರಿನ ಲೈಟುಗಳೆಲ್ಲ ತಾವಾಗಿಯೇ ಆರಿಹೋದ ಮೇಲೂ ಬಾಗಿಲುಗಳು ಮಾತ್ರ ಡ್ರಾದಲ್ಲಿನ ಡಾಕ್ಯುಮೆಂಟುಗಳನ್ನು, ಮೀಟಿಂಗ್ ರೂಮಿನ ಮಾತುಕತೆಗಳನ್ನು ಜತನದಿಂದ ಕಾಪಾಡುತ್ತ ಮುಂದಿನ ಪಾಳಿಗಾಗಿ ಕಾಯುತ್ತಿರುತ್ತವೆ. ಆಚೀಚೆ ಸರಿದಾಡುವ ಶಾಪಿಂಗ್ ಮಾಲ್ ನ ಗಾಜಿನ ಬಾಗಿಲುಗಳ ಹಿಂದೆ ಅತ್ತರಿನ ಬಾಟಲಿಯೊಂದು ಗಿಫ್ಟಾಗಿ ಸಂಬಂಧಗಳನ್ನು ಸಲಹಿದರೆ, ಬ್ರ್ಯಾಂಡೆಡ್ ಚಪ್ಪಲಿಯೊಂದು ಪಾದಗಳ ಯೋಗಕ್ಷೇಮ ವಿಚಾರಿಸಿಕೊಳ್ಳುತ್ತದೆ; ವಿದೇಶದ ಕನಸು ಹೊತ್ತ ಕಾರ್ಪೊರೇಟ್ ಉದ್ಯೋಗಿಯೊಬ್ಬ ಟ್ರಾವೆಲ್ ಬ್ಯಾಗ್ ಖರೀದಿಸಿದರೆ, ನಿವೃತ್ತ ಪ್ರಾಧ್ಯಾಪಕರೊಬ್ಬರು ಪುಸ್ತಕದಂಗಡಿಯ ಬಾಗಿಲನ್ನು ತಲುಪುತ್ತಾರೆ. ಹೀಗೆ ಹೊಸ ಸಂಬಂಧಗಳಿಗೆ ತೆರೆದುಕೊಳ್ಳುತ್ತ, ಮುಗಿದುಹೋದ ಸಂಬಂಧಗಳ ನೆನಪುಗಳನ್ನು ನವೀಕರಿಸುತ್ತ, ಅಗತ್ಯಬಿದ್ದಾಗ ಗುಟ್ಟುಗಳನ್ನು ಕಾಪಾಡುತ್ತ, ತಮ್ಮ ಕರ್ತವ್ಯಗಳನ್ನೆಲ್ಲ ಚಾಚೂತಪ್ಪದೆ ನಿರ್ವಹಿಸುವ ಬಾಗಿಲುಗಳ ಆಚೀಚೆ ಬದುಕುಗಳು ನಿರಾಯಾಸವಾಗಿ ಕಾಲು ಚಾಚುತ್ತವೆ. ******************* ಲೇಖಕರ ಬಗ್ಗೆ ಎರಡು ಮಾತು: ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಭಾಗೆಪಲ್ಲಿ ಕೃಷ್ಣಮೂರ್ತಿ ನೀ ದರ್ಷನಕೆ ಸಿಗದೆ ಕಾಡಿ ಕಾಡಿ ನೋಯಿಸುವೆನಿನ್ನ ಭಾವ ಚಿತ್ರವ ನೀಡದೆ ಕಾಡಿ ನೋಯಿಸುವೆ ನಮ್ಮ ಅಗಲಿಕೆ ಇಷ್ಟು ಧೀರ್ಘ ಕಾಲ ಆಗಿರುವಾಗಕನಸಲೂ ಅಪ್ಪಲು ಸಿಗದೆ ಹಿಂಸಿಸಿ ನೋಯಿಸುವೆ ನಮ್ಮ ಪ್ರೀತಿಯ ವಿಷಯ ಎಷ್ಟು ಗೋಪ್ಯ ವೆನೆನನ್ನ ಅಂತಿಮ ಕ್ಷಣವೂ ಅರಿಯದೆ ಬಹಳ ನೋಯಿಸುವೆ ಬೇರ್ಪಡಿಕೆಯಲಿ ನಮ್ಮ ಪ್ರೀತಿ ಇಷ್ಟು ಗಾಢವಾಗಿರೆಸೇರ್ಪಡಿಕಯ ಊಹೆ ಇದ್ದೂ ಹೀಗೇಕೆ ನೋಯಿಸುವೆ ಯಾವುದಾದರೂ ಬಹನೇ ಹುಡುಕಿ ಭೇಟಿಯಾಗು ಬಾಸುಮ್ಮನೆ ಹೆದರಿ ನೀನೂ ನೊಂದು ನನ್ನನೂ ನೋಯಿಸುವೆ ಕಾಲಕೂಡಿ ಬರಬೇಕೆಂದು ಕಾರಣ ಹೇಳುತ ‘ಮಂಕೇ ‘ಕೈಲಿರುವ ಅದ್ಭುತ ಕ್ಷಣ ಕಳೆದು ವೃಥಾ ನೋಯಿಸುವೆ. *************************

ಗಝಲ್ Read Post »

ಕಾವ್ಯಯಾನ

ಗಮ್ಯದಾಚೆ

ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ ನಾರಿನ ಬೇರು ಅರೆಯುತ್ತಅರೆಮುಚ್ಚಿದ ಕಣ್ಣೆವೆಆಳದ ಹೊಳಪಿನೊಂದಿಗೆಮಾತಿಗಿಳಿಯುತ್ತಾಳೆತುಟಿ ಲಘು ಕಂಪಿಸುತ್ತವೆಅವಳ ಮೈಮಾಟಕ್ಕೆಚಿರ ಯೌವನಕ್ಕೆಮಿಂಚುಹುಳುಗಳ ಮಾಲೆ-ಯೇ ಕಾಣ್ಕೆಯಾಗುತ್ತದೆ. ಸಂಜೆಸೂರ್ಯನ ಬೆವರೊರೆಸಿಮನೆಗೆ ಹೆಜ್ಜೆಹಾಕುವ ನನ್ನಕಂಡು ಅವಳ ಕಾಲ್ಗೆಜ್ಜೆನಸು ಬಿರಿಯುತ್ತವೆಗುಡಾರದೊಳಗಿಂದ ತುಸುಬಾಗಿದ ಅವಳ ಸ್ಪರ್ಶಕ್ಕೆದಿನವೂ ಹಾತೊರೆಯುತ್ತೇನೆಗುನುಗಿಕೊಳ್ಳುವ ಹಾಡೆಂಬನೀರವಕ್ಕೆ ಪದವಾಗುತ್ತೇನೆ‘ಲಾಟೀನು ಬೆಳಗುವುದೇಕೆಇವಳೇ ಇಲ್ಲವೇ ‘ ಎಂದುಫಕ್ಕನೆ ತಿರುಗುವಾಗೊಮ್ಮೆಗುಡುಗುಡಿಯ ಸೇದಿನಿರುಮ್ಮಳ ಹೀರುತ್ತಾಳೆಒದ್ದೆಮಳೆಯಾದ ನಾನುಛತ್ರಿ ಕೊಡವುತ್ತ ಕೈಚಾಚಿದರೆ ತುಸುವೇನಕ್ಕುಬಿಡುತ್ತಾಳೆ.ಡೇರೆಯೊಳಗಿನ ಮಿಶ್ರಘಮಕ್ಕೆ ಸೋತು ಅವಳಅಲೆ ಅಲೆ ಸೆರಗ ಚುಂಗನ್ನು ಸೋಕಿ ಬೆರಳುಹಿಂತೆಗೆಯುತ್ತೇನೆ …ನಿಡಿದು ಉಸಿರಬಿಸಿಗೆ ಬೆಚ್ಚುತ್ತ ! ದಿನವೊಂದು ಬರುತ್ತದೆಹಿಡಿ ಗಂಟು ಇಟ್ಟಿದ್ದೇನೆಹೂವಿನಾಚೆಕಣಿವೆಯಾಚೆಅವಳ ಜೊತೆಪಯಣಿಸಿಯೇತೀರುತ್ತೇನೆ ! *********************************************************** ಚಿತ್ರಕೃಪೆ:ವಿಜಯಶ್ರೀ ಹಾಲಾಡಿ

ಗಮ್ಯದಾಚೆ Read Post »

You cannot copy content of this page

Scroll to Top